All posts by nagaraj11081993

ಹಾಸನದಲ್ಲಿ ಜೀತ ಪದ್ಧತಿ ಇನ್ನೂ ಜೀವಂತ: ಪೊಲೀಸರಿಂದ 18 ಕಾರ್ಮಿಕರ ರಕ್ಷಣೆ – Kannada News | Hassan Police Rescue 18 Bonded Labourers from Exploitative Farm

ಹಾಸನ, ಫೆಬ್ರವರಿ 26: ರಾಜ್ಯದಲ್ಲಿ ಇನ್ನೂ ಅನಿಷ್ಟ ಜೀತ ಪದ್ಧತಿ ಜೀವಂತವಾಗಿದೆ ಎಂಬುದಕ್ಕೆ ಹಾಸನದಲ್ಲಿ ನಡೆದ ಘಟನೆಯೊಂದು ಸಾಕ್ಷಿಯಾಗಿದೆ. ಹಳೇಬೀಡು ಹೋಬಳಿಯ ಚಟ್ನಹಳ್ಳಿ ಗ್ರಾಮದಲ್ಲಿ ಕೂಡಿಹಾಕಲಾಗಿದ್ದ 18ಕ್ಕೂ ಹೆಚ್ಚು ಕಾರ್ಮಿಕರನ್ನು ಪೊಲೀಸರು ರಕ್ಷಿಸಿದ್ದಾರೆ. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಶುಂಠಿ ಕೆಲಸಕ್ಕೆಂದು ಕರೆತರಲಾಗಿದ್ದ ಈ ಕಾರ್ಮಿಕರನ್ನು, ಮಾಲೀಕ ನಾಗರಾಜ್ ಎಂಬಾತ ಕೂಡಿಹಾಕಿ ದುಡಿಸಿಕೊಳ್ಳುತ್ತಿದ್ದ. ಇವರಿಗೆ ಯಾವುದೇ ಹಣ ನೀಡದೆ, ಕೆಲಸ ಮುಗಿದ ನಂತರ ಒಂದೇ ಜಾಗದಲ್ಲಿ ಲಾಕ್ ಮಾಡಲಾಗುತ್ತಿತ್ತು. ಹೊರಗಡೆ ಹೋಗಲು ಯಾವುದೇ ಅವಕಾಶವಿರಲಿಲ್ಲ ಎನ್ನಲಾಗಿದೆ. ಪೊಲೀಸರು ದಾಳಿ ನಡೆಸಿದಾಗ, ಆರೋಪಿ ನಾಗರಾಜ್ ಸ್ಥಳದಿಂದ ತಪ್ಪಿಸಿಕೊಂಡಿದ್ದಾನೆ. ಆತನ ಪತ್ತೆಗಾಗಿ ಬಲೆ ಬೀಸಲಾಗಿದ್ದು, ರಕ್ಷಿಸಲ್ಪಟ್ಟ ಕಾರ್ಮಿಕರು ತಾವು ಅನುಭವಿಸಿದ ಕಷ್ಟಗಳನ್ನು ಬಿಚ್ಚಿಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ತೆಲುಗು ಸಂಪ್ರದಾಯದಂತೆ ಮದುವೆಯಾದ ರಶ್ಮಿಕಾ-ವಿಜಯ್ ದೇವರಕೊಂಡ – Kannada News | Rashmika Mandanna and Vijay Deverakonda marriage, both are husband and wife now

ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಅವರ ವಿವಾಹ ಅದ್ಧೂರಿಯಾಗಿ ನೆರವೇರಿದೆ. ರಾಜಸ್ಥಾನದ ಉದಯಪುರದ ಐಶಾರಾಮಿ ರೆಸಾರ್ಟ್​​ನಲ್ಲಿ ಈ ಜೋಡಿ ಇಂದು (ಫೆಬ್ರವರಿ 26) ಬೆಳಿಗ್ಗೆ ಶುಭ ಮುಹೂರ್ತದಲ್ಲಿ ತೆಲುಗು ಸಂಪ್ರದಾಯದಂತೆ ಮದುವೆ ಆಗಿದ್ದಾರೆ. ಎರಡೂ ಕುಟುಂಬದ ಸದಸ್ಯರು, ಹಿರಿಯರು ಮತ್ತು ಆಪ್ತೇಷ್ಟರ ಸಮ್ಮುಖದಲ್ಲಿ ವಿಜಯ್ ದೇವರಕೊಂಡ, ರಶ್ಮಿಕಾ ಅವರಿಗೆ ತಾಳಿ ಕಟ್ಟುವ ಮೂಲಕ ಇಬ್ಬರೂ ಸತಿ-ಪತಿಗಳಾಗಿದ್ದಾರೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರುಗಳು ಕಳೆದ ಕೆಲ ವರ್ಷಗಳಿಂದಳೂ ಪರಸ್ಪರ ಪ್ರೀತಿಸುತ್ತಿದ್ದಿದ್ದು ಗುಟ್ಟೇನೂ ಆಗಿರಲಿಲ್ಲ. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು, ಇದೀಗ ತಮ್ಮ ಪ್ರೀತಿಯನ್ನು ದಾಂಪತ್ಯವನ್ನಾಗಿ ಬದಲಾಯಿಸಿಕೊಂಡಿದ್ದಾರೆ.

ಉದಯಪುರದಲ್ಲಿ ಕಳೆದ ಕೆಲ ದಿನಗಳಿಂದಲೂ ಮದುವೆ ಕಾರ್ಯಗಳು ನಡೆಯುತ್ತಲೇ ಇದ್ದವು. ನಿನ್ನೆ ಹಳದಿ ಮತ್ತು ಸಂಗೀತ್ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಎರಡು ದಿನಗಳ ಹಿಂದೆ ತೆಲಂಗಾಣದಿಂದ ಪುರೋಹಿತರ ತಂಡವೊಂದು ಇವರ ಮದುವೆ ಕಾರ್ಯಕ್ರಮಕ್ಕೆಂದು ಉದಯಪುರಕ್ಕೆ ಬಂದಿತ್ತು. ಪುರೋಹಿತರುಗಳು ತೆಲುಗು ಸಂಪ್ರದಾಯದಂತೆ ಈ ಜೋಡಿಯ ಮದುವೆ ಮಾಡಿಸಿದ್ದಾರೆ.

ಇದನ್ನೂ ಓದಿ:ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಗೆ ತೆರಳಿದ ಆಶಿಕಾ ರಂಗನಾಥ್

ಇದೇ ದಿನ ಸಂಜೆ ವೇಳೆಗೆ ಕೊಡವ ಸಂಪ್ರದಾಯದಂತೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಮತ್ತೊಮ್ಮೆ ನಡೆಯಲಿದೆ. ಇಬ್ಬರೂ ಸಹ ಭಿನ್ನ ಭಿನ್ನ ಸಂಪ್ರದಾಯಕ್ಕೆ ಸೇರಿದ ಕುಟುಂಬದವರಾಗಿರುವ ಕಾರಣ ಎರಡೂ ಕುಟುಂಬಗಳ ಸಂಪ್ರದಾಯ, ಆಚರಣೆಗೆ ಚ್ಯುತಿ ಬಾರದಂತೆ ಎರಡು ಭಿನ್ನ ರೀತಿಯಲ್ಲಿ ಈ ಜೋಡಿಯ ವಿವಾಹ ನಡೆಯುತ್ತಿದೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಈಗ ಅಧಿಕೃತವಾಗಿ ಸತಿ-ಪತಿಗಳಾಗಿದ್ದಾರೆ. ಇಬ್ಬರೂ ಮದುವೆ ನಡೆದಿದೆಯಾದರೂ ಮದುವೆಯ ಅಧಿಕೃತ ಫೋಟೊವನ್ನು ಇನ್ನೂ ಈ ಜೋಡಿ ಹಂಚಿಕೊಂಡಿಲ್ಲ.

ರಶ್ಮಿಕಾ ಮತ್ತು ವಿಜಯ್ ಅವರು ಮದುವೆಗೆ ಕೇವಲ ಆಪ್ತೇಷ್ಟರಿಗಷ್ಟೆ ಆಹ್ವಾನ ನೀಡಿದ್ದು, ಮಾರ್ಚ್ 04 ರಂದು ಬಲು ಅದ್ಧೂರಿಯಾಗಿ ಆರತಕ್ಷತೆ ಹಮ್ಮಿಕೊಂಡಿದ್ದು, ಹೈದರಾಬಾದ್​​ನ ತಾಜ್ ಕೃಷ್ಣನಲ್ಲಿ ವಿವಾಹ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಆ ಕಾರ್ಯಕ್ರಮದಲ್ಲಿ ಎಲ್ಲ ಚಿತ್ರರಂಗದ ಗಣ್ಯರು, ಆಂಧ್ರ, ತೆಲಂಗಾಣ ರಾಜ್ಯಗಳ ರಾಜಕೀಯ ಮುಖಂಡರುಗಳು ಹಾಗೂ ಕೆಲವು ಕೇಂದ್ರ ಸಚಿವರು, ಸಂಸದರು ಸಹ ಭಾಗಿ ಆಗಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Video: ಎತ್ತಿನ ಕಾಲು ಒತ್ತಿ ಸೇವೆ ಮಾಡಿದ ಮುದ್ದು ಮಕ್ಕಳು, ವೈರಲ್‌ ಆಯ್ತು ದೃಶ್ಯ – Kannada News | The adorable children who served by pressing the ox’s leg

ಪುಟಾಣಿಗಳು (little kids) ಏನು ಮಾಡಿದ್ರೂ ಕೂಡ ಚಂದನೇ. ಮುದ್ದು ಮಕ್ಕಳು ಮನೆಯ ಸಾಕು ಪ್ರಾಣಿಗಳ ಜತೆಗೆ ತುಂಟಾಟ ಆಡುವುದನ್ನು ನೋಡುವಾಗ ಖುಷಿಯೆನಿಸುತ್ತದೆ. ತನ್ನಮೇಲೆ  ಪ್ರೀತಿ ಕಾಳಜಿ ತೋರುವ ಮುದ್ದು ಮನಸ್ಸಿನ ಮಕ್ಕಳಿಗೆ ಕಾವಲಾಗಿ ನಿಲ್ಲುತ್ತವೆ. ಈ ದೃಶ್ಯ ನೋಡಿದರಂತೂ ಮುಗ್ಧ ಮನಸ್ಸುಗಳ ಶುದ್ಧ ಪ್ರೀತಿಗೆ ನೀವು ಕರಗುವುದು ಖಂಡಿತ. ಪುಟಾಣಿಗಳಿಬ್ಬರೂ ಎತ್ತಿನ ಕಾಲು ಒತ್ತಿ ಸೇವೆ ಮಾಡುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು ಮುದ್ದು ಮಕ್ಕಳು ಮೂಕ ಪ್ರಾಣಿಗಳ ಮೇಲೆ ಪ್ರೀತಿ ತೋರುವ ರೀತಿಯನ್ನು ಮೆಚ್ಚಿಕೊಂಡಿದ್ದಾರೆ.

Hallikar2022 ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಗಳಿಬ್ಬರೂ ಎತ್ತಿನ ಪಕ್ಕದಲ್ಲಿ ಕುಳಿತಿಕೊಂಡಿದ್ದು, ಎತ್ತಿನ ಕಾಲುಗಳನ್ನು ಒತ್ತಿ ಸೇವೆ ಮಾಡುತ್ತಿರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಶಾಲೆ ಬಿಟ್ಟೊಡನೆ ಪುಸ್ತಕವನ್ನು ಚರಂಡಿಗೆ ಎಸೆದು ಹೋದ ಪುಟಾಣಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಈ ಸನ್ನಿವೇಶ ನೋಡಿ ನನ್ನ ಕಣ್ಣಂಚಲಿ ನೀರು ತುಂಬಿ ಬಂದವು. ಎಂತ ನಿಷ್ಕಲ್ಮಶವಾದ ಪ್ರೀತಿ. ಈ ಮುಗ್ಧ ಮಕ್ಕಳು ಮತ್ತೆ ಬಸವಣ್ಣನ ಪ್ರೀತಿ ಬಾಂಧವ್ಯಗಳು ಹೇಳಲು ಎರಡು ಪದಗಳು ಸಾಲದು. ಈ ಸನ್ನಿವೇಶದ ಕ್ಷಣಗಳಿಗೆ ನಾನು ಎಂದೆಂದಿಗೂ ಚಿರಋಣಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಬಸವನ ಸೇವೆ ಮಾಡಿದ ಮುದ್ದು ಪುಟಾಣಿಗಳಿಗೆ ನನ್ನ ನಮಸ್ಕಾರಗಳು ಎಂದಿದ್ದಾರೆ. ಮತ್ತೊಬ್ಬರು, ಆಹಾ ಎಷ್ಟು ಸೊಗಸಾಗಿದೆ ಈ ದೃಶ್ಯ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:32 am, Thu, 26 February 26

Source link

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಎನ್​ಐಎ ತನಿಖೆಗೆ ಶ್ರೀರಾಮುಲು ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್​​ ಶಾಗೆ ಪತ್ರ – Kannada News | Bagalkote Stone Pelting: Sriramulu Urges NIA Probe for Shivaji Jayanti Incident

ಬಾಗಲಕೋಟೆ, ಫೆ.26: ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆದಿರುವ ಘಟನೆಯ ಬಗ್ಗೆ ಅಕ್ರೋಶದ ವ್ಯಕ್ತಪಡಿಸಿರುವ ಮಾಜಿ ಸಚಿವ ಹಾಗೂ ಸಂಸದ ಬಿ. ಶ್ರೀರಾಮುಲು, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕಳೆದ ಫೆಬ್ರವರಿ 19 ರಂದು ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಸಾಗುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಮೆರವಣಿಗೆಯ ಮೇಲೆ ಚಪ್ಪಲಿ ಎಸೆಯುವ ಮೂಲಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದು ಕೇವಲ ಸ್ಥಳೀಯ ಕಿಡಿಗೇಡಿತನವಲ್ಲ, ಇದರ ಹಿಂದೆ ದೊಡ್ಡ ಸಂಚು ಇರುವ ಸಾಧ್ಯತೆ ಇದೆ. ಹೀಗಾಗಿ ಸತ್ಯಾಸತ್ಯತೆ ಹೊರಬರಲು ಎನ್​ಐಎ ತನಿಖೆ ಅಗತ್ಯ ಎಂದು ಅವರು ಹೇಳಿದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಘಟನೆಗಳು ಸೇರಿದಂತೆ ರಾಜ್ಯದಲ್ಲಿ ಹಿಂದೂ ಸಂಘಟನೆಗಳ ಮೆರವಣಿಗೆ ಮೇಲೆ ನಡೆಯುತ್ತಿರುವ ದಾಳಿಗಳ ಮಾದರಿಯಲ್ಲೇ ಈ ಘಟನೆಯೂ ನಡೆದಿದೆ. ಇಂತಹ ಕೃತ್ಯಗಳು ಮರುಕಳಿಸದಂತೆ ಕಠಿಣ ಕ್ರಮಕ್ಕೆ ಶ್ರೀರಾಮುಲು ಒತ್ತಾಯಿಸಿದ್ದಾರೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದ್ದು, ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ. ಇನ್ನು ಇದಕ್ಕೂ ಮುನ್ನ ಕೆಲ ಮುಸ್ಲಿಂ ಯುವಕರು ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಾಕಾರಿ ವಿಡಿಯೋ ಹರಿಬಿಟ್ಟಿದ್ದು, ವಿವಾದಕ್ಕೆ ಗುರಿಯಾಗಿದೆ. ‘15 ನಿಮಿಷ ಪೊಲೀಸರು ಸುಮ್ಮನಿರಲಿ, ಇಸ್ಲಾಂ ಪವರ್ ತೋರಿಸುತ್ತೇವೆ’ ಎಂಬ ಅರ್ಥದ ಹೇಳಿಕೆಯನ್ನು ಪೋಸ್ಟ್‌ನಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ: ಬಾಗಲಕೋಟೆ: ಕಲ್ಲು ತೂರಾಟದ ಕಾವು ಆರುವ ಮುನ್ನವೇ ಜಾಲತಾಣದಲ್ಲಿ ಮುಸ್ಲಿಂ ಯುವಕರಿಂದ ವಿವಾದಾತ್ಮಕ ಪೋಸ್ಟ್

ಕಲ್ಲು ತೂರಾಟ ಖಂಡಿಸಿ ಇಂದು ‘ಬೃಹತ್ ಪ್ರತಿಭಟನೆ’ – ನಗರದಾದ್ಯಂತ ಬಿಗಿ ಭದ್ರತೆ:

ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ಪಂಕಾ ಮಸೀದಿ ಬಳಿ ನಡೆದ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆತ ಪ್ರಕರಣ ಈಗ ಜಿಲ್ಲೆಯಲ್ಲಿ ಕಿಚ್ಚು ಹಚ್ಚಿದೆ. ಈ ಘಟನೆಯನ್ನು ಖಂಡಿಸಿ ಇಂದು ಹಿಂದೂಪರ ಸಂಘಟನೆಗಳು ಬಾಗಲಕೋಟೆ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿವೆ. ಜಿಲ್ಲೆಯ ವಿವಿಧ ಭಾಗಗಳಿಂದ ಸುಮಾರು 3,000 ರಿಂದ 4,000 ಹಿಂದೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈ ಪ್ರತಿಭಟನೆ ಮೂಲಕ ಪಂಕಾ ಮಸೀದಿ ಅಧ್ಯಕ್ಷ ಮತ್ತು ಕಮಿಟಿ ಸದಸ್ಯರ ತಕ್ಷಣದ ಬಂಧನ ಮಾಡಬೇಕು ಎಂಬ ಬೇಡಿಕೆಯನ್ನು ಇಡಲಾಗುವುದು. ಹಾಗೂ ಕಲ್ಲು ಮತ್ತು ಚಪ್ಪಲಿ ಎಸೆದ ಕಿಡಿಗೇಡಿಗಳ ಮೇಲೆ ಗೂಂಡಾ ಕಾಯ್ದೆ ಜಾರಿ ಮಾಡಬೇಕು. ತಪ್ಪಿತಸ್ಥರನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆಗ್ರಹ ಮಾಡಲಾಗುವುದು ಎಂದು ಹೇಳಲಾಗಿದೆ. ಇನ್ನು ಈ ಪ್ರತಿಭಟನೆ ಇಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿದ್ದು, ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಸ್‌ಪಿ ಸಿದ್ದಾರ್ಥ ಗೋಯೆಲ್ ನೇತೃತ್ವದಲ್ಲಿ ಭದ್ರತೆ ಕಲ್ಪಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬ್ರೇಕ್ ಫೇಲ್​ ಆಗಿ ರಸ್ತೆಯಲ್ಲಿ ಅಡ್ಡಾದಿಡ್ಡಿ ನುಗ್ಗಿದ ಲಾರಿ: ಸಿಕ್ಕ ಸಿಕ್ಕ ವಾಹನಕ್ಕೆಲ್ಲ ಡಿಕ್ಕಿ – Kannada News | Brake Fail Lorry Hits Multiple Vehicles in Bagaluru, North Bengaluru

ದೇವನಹಳ್ಳಿ, ಫೆಬ್ರವರಿ 26: ಬ್ರೇಕ್​​ ಫೇಲ್​​ ಆದ ಪರಿಣಾಮ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ನುಗ್ಗಿದ ಲಾರಿಯೊಂದು ಸಿಕ್ಕಿ ಸಿಕ್ಕ ವಾಹನಗಳಿಗೆ ಗುದ್ದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬಾಗಲೂರಿನಲ್ಲಿ ನಡೆದಿದೆ. ಎದುರು ಬರುತ್ತಿದ್ದ ಕಾರುಗಳು, ದ್ವಿಚಕ್ರ ವಾಹನಗಳು ಸೇರಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಲಾರಿ ನಿಂತಿದ್ದು, ಘಟನೆಯ ದೃಶ್ಯ ಕಾರೊಂದರ ಡ್ಯಾಶ್​​ ಕ್ಯಾಮರಾದಲ್ಲಿ ಸೆರೆಯಾಗಿದೆ. ಲಾರಿ‌ ನುಗ್ಗಿದ ರಭಸಕ್ಕೆ ಎರಡು ಕಾರುಗಳು, 3 ಬೈಕ್​ಗಳು ಜಖಂ ಆಗಿದ್ದು, ವಾಹನಗಳಲ್ಲಿದ್ದ ಎಲ್ಲರೂ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಏರ್​ಪೋರ್ಟ್​ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಲೋಡ್ ತುಂಬಿಕೊಂಡು ಬರುತ್ತಿದ್ದಾಗ ಏಕಾಏಕಿ ಲಾರಿಯ ಬ್ರೇಕ್ ಫೇಲ್​ ಆಗಿದೆ ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಬಗ್ಗೆ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪಿಂಕ್ ಲೈನ್ ಮೆಟ್ರೋ: ಕೋತ್ತನೂರು ಡಿಪೋಗೆ ಮೂರನೇ ರೈಲು ಸೆಟ್ ಆಗಮನ – Kannada News | Pink Line Metro Progress: Testing Begins as Third BEML Train Set Joins Fleet

ಬೆಂಗಳೂರಿನ ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿ ಮಹತ್ವದ ಪ್ರಗತಿ ಕಂಡುಬಂದಿದೆ. ಬಿಇಎಂಎಲ್ ಸಂಸ್ಥೆಯು ತಯಾರಿಸಿರುವ ಮೂರನೇ ಡ್ರೈವರ್​ಲೆಸ್​ ರೈಲು ಸೆಟ್ ಯಶಸ್ವಿಯಾಗಿ ಕೋತ್ತನೂರು ಡಿಪೋವನ್ನು ತಲುಪಿದೆ. ಈ ರೈಲು ಬೋಗಿಗಳು ಪಿಂಕ್ ಲೈನ್ ಯೋಜನೆಯ ಕಾರ್ಯಗತಿಯನ್ನು ಮತ್ತಷ್ಟು ವೇಗಗೊಳಿಸಲಿವೆ. ಈಗಾಗಲೇ ಪಿಂಕ್ ಲೈನ್​ಗೆ ಎರಡು ಡ್ರೈವರ್​ಲೆಸ್​ ರೈಲುಗಳು ಬಂದಿದ್ದು, ಅವುಗಳಲ್ಲಿ ಮೊದಲನೆಯ ರೈಲು ಸೆಟ್‌ನ ಪರೀಕ್ಷಾರ್ಥ ಸಂಚಾರ ಈಗಾಗಲೇ ಆರಂಭವಾಗಿದೆ. ಇದು ಕಾರ್ಯಾಚರಣೆಯ ಸನ್ನದ್ಧತೆಯನ್ನು ಪರಿಶೀಲಿಸುವಲ್ಲಿ ಒಂದು ಪ್ರಮುಖ ಹಂತವಾಗಿದೆ. ಪಿಂಕ್ ಲೈನ್ ಮೆಟ್ರೋ ಮಾರ್ಗವು ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ 21.25 ಕಿಲೋಮೀಟರ್ ದೂರವನ್ನು ಸಂಪರ್ಕಿಸುತ್ತದೆ. ಈ ಮಾರ್ಗದಲ್ಲಿ ಒಟ್ಟು 18 ಮೆಟ್ರೋ ನಿಲ್ದಾಣಗಳು ಬರಲಿದ್ದು, ಇದರಲ್ಲಿ 12 ನಿಲ್ದಾಣಗಳು ಭೂಗತವಾಗಿ ಮತ್ತು 6 ನಿಲ್ದಾಣಗಳು ಎಲಿವೇಟೆಡ್ ಆಗಿರುತ್ತವೆ. ಮೂರನೇ ರೈಲು ಸೆಟ್‌ನ ಆಗಮನವು ಪಿಂಕ್ ಲೈನ್ ಮೆಟ್ರೋ ಯೋಜನೆಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ, ಇದರಿಂದ ನಗರದ ಸಾರ್ವಜನಿಕ ಸಾರಿಗೆಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ಇದನ್ನು ಇಲ್ಲಿಗೆ ಬಿಡುವುದಿಲ್ಲ, ಎನ್​ಸಿಇಆರ್​ಟಿಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ – Kannada News | Supreme Court Slams NCERT Over Judiciary Corruption Chapter: Seeks Accountability

ನವದೆಹಲಿ, ಫೆಬ್ರವರಿ 26: ಎಂಟನೇ ತರಗತಿಯ ವಿದ್ಯಾರ್ಥಿಗಳ ಎನ್‌ಸಿಇಆರ್‌ಟಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಎಂಬ ಅಧ್ಯಾಯನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್(Supreme Court), ಗುರುವಾರ ಉತ್ತರದಾಯಿತ್ವವನ್ನು ಕೋರಿದೆ. ನಾವು ಆಳವಾದ ತನಿಖೆ ನಡೆಸಲು ಬಯಸುತ್ತೇವೆ. ಯಾರು ಹೊಣೆಗಾರರು ಎಂಬುದನ್ನು ನಾವು ಕಂಡುಹಿಡಿಯಬೇಕು ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದೆ.

32 ಪುಸ್ತಕಗಳು ಮಾರುಕಟ್ಟೆಗೆ ಬಂದಿವೆ ಆದರೆ ಈಗ ಅವುಗಳನ್ನು ಹಿಂಪಡೆಯಲಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದಾರೆ.ಅವರು ಗುಂಡು ಹಾರಿಸಿದರು ಇಂದು ನ್ಯಾಯಾಂಗ ರಕ್ತಸಿಕ್ತವಾಗಿದೆ ಇದನ್ನು ಇಲ್ಲಿಯೇ ಬಿಡಲು ಸಾಧ್ಯವಿಲ್ಲ ಇದು ಪಿತೂರಿಯಂತೆ ಕಾಣುತ್ತಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಾರೆ.

ನಿನ್ನೆಯಷ್ಟೇ ಎನ್‌ಸಿಇಆರ್‌ಟಿಯ 8 ನೇ ತರಗತಿಯ ಪಠ್ಯದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಅಧ್ಯಾಯದ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ತೀವ್ರ ಕಳವಳ ವ್ಯಕ್ತಪಡಿಸಿತ್ತು. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಸ್ವಯಂಪ್ರೇರಿತ ಕ್ರಮ ಕೈಗೊಳ್ಳಬಹುದು ಎಂದು ಹೇಳಿದ್ದಾರೆ, ನ್ಯಾಯಾಂಗಕ್ಕೆ ಕಳಂಕ ತರಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಮತ್ತಷ್ಟು ಓದಿ: ನ್ಯಾಯಾಂಗಕ್ಕೆ ಕಳಂಕ ತರಲು ಬಿಡುವುದಿಲ್ಲ: ಶಾಲಾ ಪಠ್ಯದಲ್ಲಿ ನ್ಯಾಯಾಂಗ ಭ್ರಷ್ಟಾಚಾರ ಅಧ್ಯಾಯ ಕುರಿತು ಸುಪ್ರೀಂ ಗರಂ

ಎಲ್ಲಾ ಹೈಕೋರ್ಟ್ ನ್ಯಾಯಮೂರ್ತಿಗಳು ಅಸಮಾಧಾನಗೊಂಡಿದ್ದಾರೆ. ನಾನು ಈ ವಿಷಯವನ್ನು ವೈಯಕ್ತಿಕವಾಗಿ ಪರಿಶೀಲಿಸುತ್ತೇನೆ. ಸಂಸ್ಥೆಯನ್ನು ಕೆಣಕಲು ನಾನು ಯಾರಿಗೂ ಅವಕಾಶ ನೀಡುವುದಿಲ್ಲ. ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದರು.
ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ ಎಂಬ ಅಧ್ಯಾಯದಲ್ಲಿ ಹೊಸ ಪುಸ್ತಕವು ನ್ಯಾಯಾಲಯಗಳು ಎದುರಿಸುತ್ತಿರುವ ಸವಾಲುಗಳನ್ನು ವಿವರಿಸುತ್ತದೆ. ನ್ಯಾಯಾಂಗದ ವಿವಿಧ ಹಂತಗಳಲ್ಲಿ ಭ್ರಷ್ಟಾಚಾರವು ಪ್ರಚಲಿತವಾಗಿದೆ ಎಂದು ಅದು ಸ್ಪಷ್ಟವಾಗಿ ಹೇಳುತ್ತದೆ.

ನ್ಯಾಯಾಧೀಶರ ಕೊರತೆ, ಕಾನೂನು ಪ್ರಕ್ರಿಯೆಯ ಸಂಕೀರ್ಣತೆಗಳು ಮತ್ತು ನ್ಯಾಯಾಲಯಗಳಲ್ಲಿ ಸರಿಯಾದ ಮೂಲಸೌಕರ್ಯಗಳ ಕೊರತೆಯಂತಹ ಹಲವಾರು ಕಾರಣಗಳನ್ನು ಉಲ್ಲೇಖಿಸಿ, ನ್ಯಾಯಾಲಯಗಳಲ್ಲಿ ಪ್ರಕರಣಗಳು ಬಾಕಿ ಇರುವುದನ್ನು ಪುಸ್ತಕವು ಎತ್ತಿ ತೋರಿಸುತ್ತದೆ.

ಹೊಸ ಪುಸ್ತಕವು ದೇಶದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಅಂದಾಜು ಅಂಕಿಅಂಶಗಳನ್ನು ಸಹ ಒದಗಿಸುತ್ತದೆ. ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ಸುಮಾರು 81,000 ಪ್ರಕರಣಗಳು ಬಾಕಿ ಉಳಿದಿವೆ. ಏತನ್ಮಧ್ಯೆ, ಭಾರತದ ಹೈಕೋರ್ಟ್‌ಗಳಲ್ಲಿ ಸುಮಾರು 6,240,000 ಪ್ರಕರಣಗಳು ಬಾಕಿ ಉಳಿದಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 12:02 pm, Thu, 26 February 26

Source link

ಖಾಲಿ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರದ ಮುಂದಿರುವ ಸವಾಲುಗಳೇನು? ಇಲ್ಲಿದೆ ಮಾಹಿತಿ – Kannada News | Karnataka Job Recruitment: Government Faces Hurdles in Filling 2.84 Lakh Vacant Posts

ಖಾಲಿ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರದ ಮುಂದಿವೆ ಹಲವು ಸವಾಲುImage Credit source: Google

ಬೆಂಗಳೂರು, ಫೆಬ್ರವರಿ 26: ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಬೃಹತ್​​ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇಮಕಾತಿ ಪ್ರಕ್ರಿಯೆಗಳನ್ನು ಹಂತ ಹಂತವಾಗಿ ಶೀಘ್ರ ನಡೆಸುವ ಭರವಸೆ ಕೊಟ್ಟಿದ್ದಾರೆ. ಕಾಂಗ್ರೆಸ್​​ ನೇತೃತ್ವದ ಸರ್ಕಾರದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕಳೆದ 2.5 ವರ್ಷಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ವಿವಿಧ ಇಲಾಖೆಗಳಲ್ಲಿ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಲೇ ಹುದ್ದೆಗಳು ಖಾಲಿಯಾಗಿವೆ ಎಂದು ಅವರು ಆರೋಪಿಸಿದ್ದರು. ಅವರ ಈ ಹೇಳಿಕೆ ರಾಜಕೀಯ ಕಚ್ಚಾಟಕ್ಕೂ ಕಾರಣವಾಗಿತ್ತು. ಅಸಲಿಗೆ ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸರ್ಕಾರದ ಮುಂದೀಗ ಸಾಲು ಸವಾಲುಗಳಿವೆ.

ಸರ್ಕಾರದ ಮುಂದಿರುವ ಸವಾಲುಗಳೇನು?

43 ಇಲಾಖೆಗಳಲ್ಲಿ ಸುಮಾರು 2.84 ಲಕ್ಷಕ್ಕೂ ಹೆಚ್ಚು ಹುದ್ದೆ ಖಾಲಿ ಇದ್ದರೆ, ನಿಗಮ ಮತ್ತು ಮಂಡಳಿಗಳನ್ನು ಸೇರಿಸಿದರೆ ಇವುಗಳ ಸಂಖ್ಯೆ 4 ಲಕ್ಷಕ್ಕೂ ಹೆಚ್ಚು. ಆದರೆ ಇವುಗಳ ಭರ್ತಿಗೆ ಅನೇಕ ತೊಡಕುಗಳು ಸರ್ಕಾರಕ್ಕೆ ಇವೆ. ಪರಿಶಿಷ್ಟ ಜಾತಿ ಆಂತರಿಕ ಮೀಸಲಾತಿ ನೀಡುವ ವಿಚಾರದ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಒಳ ಮೀಸಲಾತಿ ಬಿಲ್ ಪಾಸ್ ಮಾಡಿದ್ರೂ ರಾಜ್ಯಪಾಲರಿಂದ ಒಪ್ಪಿಗೆ ಸಿಕ್ಕಿಲ್ಲ. ಕೆಲ ಅಂಶಗಳ ಕುರಿತು ಸ್ಪಷ್ಟನೆ ಕೋರಿ ಅವರು ವಾಪಸ್ ಕಳುಹಿಸಿದ್ದಾರೆ. ಇದರಿಂದ ಒಳ ಮೀಸಲಾತಿ ಇತ್ಯರ್ಥವಾಗದೆ ನೇಮಕಾತಿ ಮಾಡುವುದು ಸವಾಲಾಗಾಗಿದೆ. PSI ಹಗರಣದಂತಹ ದೊಡ್ಡ ಅಕ್ರಮ ವ್ಯವಸ್ಥೆ ಮೇಲಿನ ನಂಬಿಕೆ ಕುಗ್ಗಿಸಿರುವ ಜೊತೆಗೆ ಗ್ಯಾರಂಟಿ ಯೋಜನೆ ಅನುಷ್ಠಾನದ ನಡುವೆ ನೇಮಕಾತಿಯಿಂದ ಉಂಟಾಗುವ ವೇತನದ ಹೊರೆ ಭರಿಸುವ ತಲೆಬಿಸಿಯೂ ಎದುರಾಗಲಿದೆ. ಕೊವಿಡ್​ನಿಂದ ನೇಮಕಾತಿ ವಿಳಂಬ ಕಾರಣ ವಯೋಮಿತಿ‌ ಮೀರಿರುವ ಕಾರಣ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿಯನ್ನ ಸರ್ಕಾರ ಸಡಿಲಿಕೆ ಮಾಡಿದ್ದರೂ ನೇಮಕಾತಿ ವಿಚಾರದಲ್ಲಿನ ಸಮಸ್ಯೆಗಳು ಬಗೆಹರಿದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ ಸಿದ್ದರಾಮಯ್ಯ

ಹೋರಾಟ ನಡೆಸಿದವರಿಗೆ ಶಾಕ್​​?

ಪೊಲೀಸರ ಅನುಮತಿ ನಿರಾಕರಣೆ ನಡುವೆಯೂ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಹಿನ್ನೆಲೆ ವಿದ್ಯಾರ್ಥಿ ಸಂಘಟನೆ ಮುಖಂಡರ ಮೇಲೆ ಕೇಸು ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರೊಟೆಸ್ಟ್​​ ಹಿನ್ನೆಲೆ ಧಾರವಾಡದ ಜುಬಿಲಿ ವೃತ್ತದಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಸಾರ್ವಜನಿಕರಿಗೆ ತೊಂದರೆಯಾಗಿದೆ. ಅಲ್ಲದೆ ಪ್ರತಿಭಟನಾ ಮೆರವಣಿಗೆ ವೇಳೆ ಕೆಲ ಅಹಿತಕರ ಘಟನೆಗಳು ನಡೆದಿವೆ. ಕೆಲ ಯುವಕರು ಪೊಲೀಸರ ಜೊತೆಗೂ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದ್ದು, ಹೀಗಾಗಿ ಸಂಘಟನೆ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲು ಸಿದ್ಧತೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ವೀರ ಕಂಬಳ’ ಸಿನಿಮಾನಲ್ಲಿ ವೀರೇಂದ್ರ ಹೆಗ್ಗಡೆ ನಟನೆ: ಬೆದರಿಕೆ ಕರೆಗಳು ಬಂದಿದ್ದವು ಎಂದ ನಿರ್ದೇಶಕ ಬಾಬು – Kannada News | Director said he got threat calls because Veerendra Heggade acted in his movie

ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ‘ವೀರ ಕಂಬಳ’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಈ ಸಿನಿಮಾ ಕಂಬಳ ಕ್ರೀಡೆಯ ಕುರಿತಾದ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ಆದಿತ್ಯ ಸೇರಿದಂತೆ ಹಲವರು ನಟಿಸಿದ್ದಾರೆ. ಸಿನಿಮಾನಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಹ ನಟಿಸಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ ರಾಜೇಂದ್ರ ಸಿಂಗ್ ಬಾಬು, ‘ಕ್ಲೈಮ್ಯಾಕ್ಸ್​​ನಲ್ಲಿ ಸಂದೇಶ ನೀಡುವ ಪಾತ್ರವೊಂದು ಬೇಕಾಗಿತ್ತು, ಆ ಪಾತ್ರ ಬಹಳ ಘನವಾದ ಪಾತ್ರ ಆಗಿರಬೇಕಿತ್ತು, ನನಗೆ ಹೆಗ್ಗಡೆ ಅವರು ಚಿಕ್ಕದ್ದಿನಿಂದ ಪರಿಚಯ, ಒಟ್ಟಿಗೆ ಕ್ರಿಕೆಟ್ ಆಡಿದ್ದೆವು, ಹಾಗಾಗಿ ನಾನು ಕೇಳಿದೆ ಅವರೂ ಸಹ ಒಪ್ಪಿಕೊಂಡರು. ಆದರೆ ಕೆಲ ತಿಂಗಳ ಹಿಂದೆ ಕೆಲವರು ಕರೆ ಮಾಡಿ, ಹೆಗ್ಗಡೆ ಅವರು ನಟಿಸಿರುವ ಸೀನ್ ಅನ್ನು ತೆಗೆದು ಹಾಕಬೇಕು ಎಂದು ಬೆದರಿಕೆ ಹಾಕಿದರು. ಆದರೆ ನಾನು ಯಾವುದಕ್ಕೂ ಮಣಿಯಲಿಲ್ಲ’ ಎಂದಿದ್ದಾರೆ. ರಾಜೇಂದ್ರ ಸಿಂಗ್ ಬಾಬು ಹೇಳಿರುವುದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 11:44 am, Thu, 26 February 26

Source link

ಬರೋಬ್ಬರಿ 584 ರನ್​ಗಳಿಸಿದ ಜಮ್ಮು-ಕಾಶ್ಮೀರ: ಕರ್ನಾಟಕದ ಗೆಲುವಿಗೆ ಇದೊಂದೇ ದಾರಿ – Kannada News | Jammu and Kashmir Hammered 584 Runs Against Karnataka in The Ranji Final

ಹುಬ್ಬಳ್ಳಿಯ ಕೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಜಮ್ಮು-ಕಾಶ್ಮೀರ ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 584 ರನ್​ಗಳಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಜಮ್ಮು-ಕಾಶ್ಮೀರ ಪರ ಆರಂಭಿಕನಾಗಿ ಕಣಕ್ಕಿಳಿದ ಯಾವರ್ ಹಸನ್ 88 ರನ್ ಬಾರಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭಂ ಪುಂಡಿರ್ 121 ರನ್​ ಗಳಿಸಿದ್ದರು.

ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಾಯಕ ಪರಸ್ ಡೋಗ್ರಾ 70 ರನ್​ಗಳ ಇನಿಂಗ್ಸ್ ಆಡಿದರು. ಮತ್ತೊಂದೆಡೆ ಅಬ್ದುಲ್ ಸಮದ್ 61 ರನ್​ಗಳ ಕೊಡುಗೆ ನೀಡಿದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಕನ್ಹಯ್ಯಾ 70 ರನ್ ಬಾರಿಸಿದರೆ, ಸಾಹಿಲ್ ಲೋಟ್ರಾ 78 ರನ್​ಗಳ ಇನಿಂಗ್ಸ್ ಆಡಿದರು.

ಈ ಮೂಲಕ ಜಮ್ಮು-ಕಾಶ್ಮೀರ ತಂಡವು ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 584 ರನ್​ಗಳಿಸಿ ಆಲೌಟ್ ಆಗಿದೆ. ಕರ್ನಾಟಕ ಪರ ಉತ್ತಮ ದಾಳಿ ಸಂಘಟಿಸಿದ ಪ್ರಸಿದ್ಧ್ ಕೃಷ್ಣ 34.1 ಓವರ್​ಗಳಲ್ಲಿ 98 ರನ್​ ನೀಡಿ 5 ವಿಕೆಟ್ ಕಬಳಿಸಿದ್ದಾರೆ.

ಕರ್ನಾಟಕದ ಗೆಲುವಿಗೆ ಇದೊಂದೇ ದಾರಿ:

ಜಮ್ಮು-ಕಾಶ್ಮೀರದ ಇನಿಂಗ್ಸ್ ಮುಕ್ತಾಯದ ಬೆನ್ನಲ್ಲೇ ಕರ್ನಾಟಕ ತಂಡ ಮೊದಲ ಇನಿಂಗ್ಸ್ ಶುರು ಮಾಡಿದ್ದಾರೆ. ಇದೀಗ ಮೂರನೇ ದಿನದಾಟ ನಡೆಯುತ್ತಿರುವುದರಿಂದ ಪ್ರಥಮ ಇನಿಂಗ್ಸ್ ಕರ್ನಾಟಕ ತಂಡಕ್ಕೆ ನಿರ್ಣಾಯಕ. ಏಕೆಂದರೆ ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದರೆ ಮಾತ್ರ ಈ ಪಂದ್ಯದಲ್ಲಿ ಕರ್ನಾಟಕ ತಂಡಕ್ಕೆ ಗೆಲುವು ದಕ್ಕಬಹುದು.

ಅದಕ್ಕೂ ಮುನ್ನ ಕರ್ನಾಟಕ ತಂಡವು ಆಲೌಟ್ ಆದರೆ ಈ ಪಂದ್ಯವನ್ನು ಜಮ್ಮು-ಕಾಶ್ಮೀರ ಡ್ರಾನಲ್ಲಿ ಅಂತ್ಯಗೊಳಿಸಲಿದೆ. ಏಕೆಂದರೆ ರಣಜಿ ಟೂರ್ನಿಯ ಫೈನಲ್ ಪಂದ್ಯವು ಡ್ರಾನಲ್ಲಿ ಅಂತ್ಯವಾದರೆ ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ ತಂಡವನ್ನು ಚಾಂಪಿಯನ್ ಎಂದು ಘೋಷಿಸಲಾಗುತ್ತದೆ.

ಹೀಗಾಗಿ ಕರ್ನಾಟಕ ತಂಡವು ಮೂರನೇ ಮತ್ತು ನಾಲ್ಕನೇ ದಿನದಾಟಗಳಲ್ಲಿ ಬ್ಯಾಟಿಂಗ್ ಕಾಯ್ದುಕೊಳ್ಳುವ ಮೂಲಕ ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಲೇಬೇಕು. ಏಕೆಂದರೆ ಮೂರನೇ ದಿನದಾಟದಲ್ಲಿ ಮೊದಲ ಇನಿಂಗ್ಸ್ ಶುರುವಾಗಿರುವ ಕಾರಣ ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಳ್ಳುವ ಸಾಧ್ಯತೆ ಹೆಚ್ಚು.

ಹೀಗಾಗಿ ಕರ್ನಾಟಕ ತಂಡವು ಇನ್ನೆರಡು ದಿನದಾಟಗಳ ಕಾಲ ಬ್ಯಾಟಿಂಗ್ ಮುಂದುವರೆಸುವ ಮೂಲಕ 585 ರನ್​ಗಳಿಸುವುದು ಅನಿವಾರ್ಯ. ಈ ಮೂಲಕ ಪಂದ್ಯವನ್ನು ಡ್ರಾಗೊಳಿಸಿ ಮೊದಲ ಇನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಚಾಂಪಿಯನ್ ಪಟ್ಟಕ್ಕೇರಬಹುದು. ಇಲ್ಲದಿದ್ದರೆ ಜಮ್ಮು-ಕಾಶ್ಮೀರ ತಂಡವು ಶತಾಯಗತಾಯ ಈ ಮ್ಯಾಚ್​ ಅನ್ನು ಡ್ರಾನಲ್ಲಿ ಅಂತ್ಯಗೊಳಿಸಲು ಪ್ರಯತ್ನಿಸಲಿದೆ.

ಜಮ್ಮು ಮತ್ತು ಕಾಶ್ಮೀರ ಪ್ಲೇಯಿಂಗ್ XI: ಕಮ್ರಾನ್ ಇಕ್ಬಾಲ್, ಯಾವರ್ ಹಸನ್, ಶುಭಂ ಪುಂಡೀರ್, ಪರಸ್ ಡೋಗ್ರಾ (ನಾಯಕ), ಅಬ್ದುಲ್ ಸಮದ್, ಕನ್ಹಯ್ಯಾ ವಾಧವನ್ (ವಿಕೆಟ್ ಕೀಪರ್), ಅಬಿದ್ ಮುಷ್ತಾಕ್, ಆಖಿಬ್ ನಬಿ ದಾರ್, ಯುದ್ವೀರ್ ಸಿಂಗ್ ಚರಕ್, ಸಾಹಿಲ್ ಲೋತ್ರಾ, ಸುನೀಲ್ ಕುಮಾರ್.

ಇದನ್ನೂ ಓದಿ: ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಬ್ರಿಯಾನ್ ಬೆನ್ನೆಟ್

ಕರ್ನಾಟಕ ಪ್ಲೇಯಿಂಗ್ XI: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ದೇವದತ್ ಪಡಿಕ್ಕಲ್ (ನಾಯಕ), ಕರುಣ್ ನಾಯರ್, ಸ್ಮರಣ್ ರವಿಚಂದ್ರನ್, ಶ್ರೇಯಸ್ ಗೋಪಾಲ್, ಕೃತಿಕ್ ಕೃಷ್ಣ (ವಿಕೆಟ್ ಕೀಪರ್), ವಿದ್ಯಾಧರ್ ಪಾಟೀಲ್, ವಿಜಯ್ ಕುಮಾರ್ ವೈಶಾಕ್, ಶಿಖರ್ ಶೆಟ್ಟಿ, ಪ್ರಸಿದ್ಧ್ ಕೃಷ್ಣ.

Source link