All posts by nagaraj11081993

ಟಾಟಾ ಕಡೆಯಿಂದ ವೈಭವ್ ಸೂರ್ಯವಂಶಿಗೆ ಸಿಕ್ತು ಭರ್ಜರಿ ಗಿಫ್ಟ್ – Kannada News | Tata Motors gifts Tata Curvv to Vaibhav Suryavanshi

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರಲ್ಲಿ ಅತ್ಯದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿಗೆ (Vaibhav Suryavanshi) ಟಾಟಾ ಕಾರ್ ಲಭಿಸಿದೆ. ಐಪಿಎಲ್​ನಲ್ಲಿ ಅತ್ಯುತ್ತಮ ಸ್ಟ್ರೈಕ್ ರೇಟ್​ನೊಂದಿಗೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಕರ್ವ್ ಕಾರು ಕಳೆದ ಬಾರಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಪಾಲಾಗಿತ್ತು.

Source link

‘ಟಾಕ್ಸಿಕ್’ ರನ್​​​ಟೈಮ್: ಒಂದು ಕಲ್ಲಿಗೆ ‘ಎರಡು’ ಹಕ್ಕಿ ಹೊಡೆದರೇ ಯಶ್? – Kannada News | Yash starrer Toxic Runtime leak, movie may release in sequel

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಮೂರು ವಾರಗಳಷ್ಟೆ ಬಾಕಿ ಇದೆ. ಸಿನಿಮಾದ ಪ್ರೀ ರಿಲೀಸ್ ಸೇಲ್ಸ್ ಬಹುತೇಕ ಪೂರ್ಣಗೊಂಡಿದ್ದು, ಸಿನಿಮಾದ ಪಾತ್ರಗಳ ಪೋಸ್ಟರ್, ಅದ್ಧೂರಿ ಟೀಸರ್ ಎಲ್ಲವೂ ಬಿಡುಗಡೆ ಆಗಿವೆ. ಇದೀಗ ಯಶ್ ಮತ್ತು ಇತರೆ ತಾರಾಗಣ ಪ್ರಚಾರಕ್ಕೆ ಅಖಾಡಕ್ಕೆ ಇಳಿಯಬೇಕಿದೆ. ಚಿತ್ರತಂಡ, ಸಿನಿಮಾದ ಬಗ್ಗೆ ಅಧಿಕೃತವಾಗಿ ಹೆಚ್ಚಿನ ಮಾಹಿತಿಗಳನ್ನು ಬಿಟ್ಟುಕೊಡುತ್ತಿಲ್ಲ ಇದೇ ಕಾರಣಕ್ಕೆ ಸಿನಿಮಾದ ಬಗ್ಗೆ ಹಲವು ರೀತಿಯ ಊಹಾಪೋಹಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದೀಗ ಸಿನಿಮಾದ ರನ್​​ಟೈಮ್ ಜೊತೆಗೆ ಮತ್ತೊಂದು ಸುದ್ದಿಯೂ ಸಹ ಸಖತ್ ವೈರಲ್ ಆಗುತ್ತಿದೆ.

‘ಟಾಕ್ಸಿಕ್’ ಸಿನಿಮಾ ಇನ್ನೂ ಸೆನ್ಸಾರ್ ಆಗಿಲ್ಲ. ಆದರೆ ಶೀಘ್ರವೇ ಸಿನಿಮಾ ಸೆನ್ಸಾರ್ ಆಗುವ ಸಾಧ್ಯತೆ ಇದೆ. ಏಕೆಂದರೆ ಈಗಾಗಲೇ ಸಿನಿಮಾದ ವಿರುದ್ಧ ಸೆನ್ಸಾರ್ ಮಂಡಳಿಗೆ ದೂರು ಹೋಗಿರುವುದರಿಂದ ಸಿನಿಮಾಕ್ಕೆ ಸೆನ್ಸಾರ್ ಸಮಸ್ಯೆ ಎದುರಾಗುವ ಸಾಧ್ಯತೆ ಇರುವ ಕಾರಣ, ಚಿತ್ರತಂಡವು ಯೋಜಿತ ಸಮಯಕ್ಕಿಂತಲೂ ಮುಂಚಿತವಾಗಿಯೇ ಸೆನ್ಸಾರ್​​ ಮಂಡಳಿಗೆ ಸಿನಿಮಾವನ್ನು ಕಳಿಸಲಿದೆ. ಬಹುಷಃ ಮುಂದಿನ ವಾರ ಸಿನಿಮಾಕ್ಕೆ ಸೆನ್ಸಾರ್ ಆಗುವ ಸಾಧ್ಯತೆ ಇದೆ.

ಆದರೆ ಆ ಒಳಗೆ ಸಿನಿಮಾದ ರನ್​​ಟೈಮ್ ಅಂದರೆ ಸಿನಿಮಾದ ಒಟ್ಟು ಅವಧಿ ಲೀಕ್ ಆಗಿದ್ದು, ‘ಟಾಕ್ಸಿಕ್’ ಸಿನಿಮಾದ ಒಟ್ಟು ರನ್​​ಟೈಮ್ ಕೇವಲ 2 ಗಂಟೆ 20 ನಿಮಿಷ ಎನ್ನಲಾಗುತ್ತಿದೆ. ಇದು ಕೆಲವು ಯಶ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರೆ ಇನ್ನು ಕೆಲವರಿಗೆ ಡಬಲ್ ಖುಷಿಯನ್ನು ಸಹ ತಂದಿದೆ. ಈಗೆಲ್ಲ ಸಿನಿಮಾಗಳು 3 ಗಂಟೆ ವರೆಗೆ ರನ್​​ಟೈಮ್ ಹೊಂದಿರುತ್ತವೆ, ಕೆಲ ಸಿನಿಮಾಗಳು ಮೂರು ಗಂಟೆಗೂ ಹೆಚ್ಚಿನ ರನ್​​ಟೈಮ್ ಅನ್ನು ಸಹ ಹೊಂದಿವೆ. ಆದರೆ ‘ಟಾಕ್ಸಿಕ್’ ಸಿನಿಮಾ ಬಹಳ ಕಡಿಮೆ ರನ್​​ಟೈಮ್ ಹೊಂದಿರುವುದು ಆಶ್ಚರ್ಯ ತಂದಿದೆ.

ಇದನ್ನೂ ಓದಿ:ಯಶ್ ‘ಟಿಕೆಟ್’ ಲುಕ್ ಎಐ ಎಂದವರಿಗೆ ಸಿಕ್ತು ಉತ್ತರ; ಯಶ್ ಮೇಕೋವರ್ ನೋಡಿ

‘ಟಾಕ್ಸಿಕ್’ ಸಿನಿಮಾ ಸೀಕ್ವೆಲ್​​​ನಲ್ಲಿ ಬಿಡುಗಡೆ ಆಗುತ್ತಿರುವ ಕಾರಣದಿಂದಾಗಿ ಸಿನಿಮಾದ ರನ್​​ಟೈಮ್​​ ಕಡಿಮೆ ಮಾಡಲಾಗಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ‘ಟಾಕ್ಸಿಕ್’ ಸಿನಿಮಾ ಟೀಸರ್ ಸೀಕ್ವೆಲ್​​ನ ಬಗ್ಗೆ ಸಣ್ಣ ಸುಳಿವು ನೀಡಿದೆ. ‘ಟಾಕ್ಸಿಕ್’ ಸಿನಿಮಾ ಅಪ್ಪ-ಮಗನ ಕತೆ ಆಗಿರುವ ಕಾರಣ, ಮೊದಲ ಭಾಗದಲ್ಲಿ ರಾಯನ ಇತಿಹಾಸ, ಅವರ ಸಾಹಸಗಳನ್ನು ತೋರಿಸಿ, ಕ್ಲೈಮ್ಯಾಕ್ಸ್​​ನಲ್ಲಿ ಅವನ ಮಗ ಟಿಕೆಟ್​ ಪಾತ್ರವನ್ನು ಇಂಟ್ರೊಡ್ಯೂಸ್ ಮಾಡಿಸುವ ಸಾಧ್ಯತೆ ಇದ್ದು, ಈ ಇಬ್ಬರ ನಡುವಿನ ಜಿದ್ದಾಜಿದ್ದಿನ ಕತೆಯನ್ನು ಎರಡನೇ ಭಾಗದಲ್ಲಿ ತೋರಿಸುವ ಯೋಜನೆ ಇದ್ದಂತಿದೆ.

ಇದೇ ಕಾರಣಕ್ಕೆ ‘ಟಾಕ್ಸಿಕ್’ ಸಿನಿಮಾದ ರನ್​​ಟೈಮ್ ಕಡಿಮೆ ಮಾಡಿ ಎರಡೂ ಕತೆಯನ್ನು ನಿರ್ದೇಶಕರು ಎರಡು ಭಾಗಗಳಿಗೆ ವಿಸ್ತರಿಸಿದಂತಿದ್ದಾರೆ. ಅಲ್ಲದೆ, ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್​​ಗಾಗಿ ಸುಮಾರು ಮೂರು ವರ್ಷಕ್ಕೂ ಹೆಚ್ಚು ಅವಧಿಯನ್ನು ಖರ್ಚು ಮಾಡಲಾಗಿದ್ದು, ಈ ಅವಧಿಯನ್ನು ಕೇವಲ 2:20 ನಿಮಿಷದ ಸಿನಿಮಾ ಮಾತ್ರವನ್ನೇ ಚಿತ್ರೀಕರಿಸಲಾಗಿದೆ ಎಂದರೆ ನಂಬಲು ತುಸು ಕಷ್ಟವೇ. ‘ಟಾಕ್ಸಿಕ್’ ಸಿನಿಮಾವನ್ನು ಗೀತು ಮೋಹನ್​​​ದಾಸ್ ನಿರ್ದೇಶಿಸಿದ್ದು, ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹಿಂಡು ಹಿಂಡಾಗಿ ನಾಡಿಗೆ ಲಗ್ಗೆ ಇಟ್ಟ ‘ಬೀಟಮ್ಮ’ ಗ್ಯಾಂಗ್! ಚಿಕ್ಕಮಗಳೂರು–ಬೇಲೂರು ಗಡಿ ಭಾಗದಲ್ಲಿ ಹೆಚ್ಚಾಯ್ತು ಕಾಡಾನೆಗಳ ಆತಂಕ – Kannada News | Elephant Herd Led by Beetamma Enters Chikkamagaluru from Belur: Forest Department Issues High Alert

ಹಿಂಡು ಹಿಂಡಾಗಿ ನಾಡಿಗೆ ಲಗ್ಗೆ ಇಟ್ಟ ‘ಬೀಟಮ್ಮ’ ಗ್ಯಾಂಗ್Image Credit source: tv9

ಚಿಕ್ಕಮಗಳೂರು, ಫೆಬ್ರವರಿ 26: ಹಾಸನ ಜಿಲ್ಲೆಯ ಬೇಲೂರು ಮತ್ತು ಸಕಲೇಶಪುರ ಭಾಗದಿಂದ ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಗೆ ಕಾಡಾನೆಗಳ ದೊಡ್ಡ ಗುಂಪು ಎಂಟ್ರಿ ನೀಡಿದ್ದು, ಜನರಲ್ಲಿ ಭೀತಿ ಮೂಡಿಸಿದೆ. ‘ಬೀಟಮ್ಮ’ ಮತ್ತು ‘ಭುವನೇಶ್ವರಿ’ ಗ್ಯಾಂಗ್‌ಗಳಾಗಿ ಗುರುತಿಸಲ್ಪಟ್ಟಿರುವ ಈ ಹಿಂಡುಗಳು ಬೇಲೂರು ಮಾರ್ಗವಾಗಿ ಜಿಲ್ಲೆಗೆ ಪ್ರವೇಶಿಸಿವೆ. ಭೀಮಾ ನೇತೃತ್ವದಲ್ಲಿ ಸುಮಾರು 25 ಕಾಡಾನೆಗಳ ಗುಂಪು ಚಿಕ್ಕಮಗಳೂರು ಕಡೆಗೆ ಬಂದಿದ್ದು, ಒಟ್ಟಾರೆ 45 ಕಾಡಾನೆಗಳೊಂದಿಗೆ ಬಂದಿದ್ದ ಬೀಟಮ್ಮ ಗ್ಯಾಂಗ್, ನಂತರ 20 ಕಾಡಾನೆಗಳೊಂದಿಗೆ ಬೇಲೂರು ಕಡೆಗೆ ಹಿಂತಿರುಗಿವೆಯೆಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಆದರೆ, ಮೂಡಿಗೆರೆ–ಬೇಲೂರು ಗಡಿ ಭಾಗದ ತೋಟ ಪ್ರದೇಶಗಳಲ್ಲಿ ಬೀಟಮ್ಮ ಮತ್ತು ಇನ್ನೂ 20 ಕಾಡಾನೆಗಳು ಬೀಡುಬಿಟ್ಟಿರುವುದರಿಂದ ಆತಂಕ ಮುಂದುವರಿದಿದೆ.

ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿ ವ್ಯಾಪ್ತಿಯಲ್ಲಿ 22 ಕಾಡಾನೆಗಳ ಹಿಂಡು ಸಂಚರಿಸುತ್ತಿದ್ದು, ಕಸ್ಕೆಬೈಲು ಗುಡ್ಡದಲ್ಲಿ ತಂಗಿವೆ. ಬಾರದಹಳ್ಳಿ ಗ್ರಾಮದಲ್ಲಿ ಸಲಗ ಓಡಾಟ ನಡೆಸಿದ ಘಟನೆ ಕೂಡ ದಾಖಲಾಗಿದೆ. ಇದೇ ವೇಳೆ, ಎರಡು ಕಾಡಾನೆಗಳು ಚಿಕ್ಕಮಗಳೂರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸಿರುವುದು ಜನರನ್ನು ಆತಂಕಕ್ಕೆ ಈಡುಮಾಡಿದೆ.

ಇಲ್ಲಿದೆ ಕಾಡಾನೆಗಳು ನಾಡಿಗೆ ಲಗ್ಗೆ ಇಟ್ಟ ವಿಡಿಯೋ

ಬಾರದಹಳ್ಳಿ, ಚಟ್ಟನಹಳ್ಳಿ, ಕಲ್ಲು ಗುಡ್ಡ, ವಾಟೆಗಂಡಿ, ಹುಲಿಹಂಡ್ಲು ಸೇರಿದಂತೆ ಹಲವಾರು ಗ್ರಾಮಗಳ ಸುತ್ತಮುತ್ತ ಕಾಡಾನೆಗಳ ಸಂಚಾರ ಹೆಚ್ಚಾಗಿದೆ. ಗೋಣಿಬೀಡು ವ್ಯಾಪ್ತಿಯಲ್ಲಿ ಒಟ್ಟು 33 ಕಾಡಾನೆಗಳು ಕಾಣಿಸಿಕೊಂಡಿದ್ದು, ಸ್ಥಳೀಯರು ರಾತ್ರಿ ವೇಳೆ ಹೊರಗೆ ಸಂಚರಿಸಲು ಹೆದರುತ್ತಿದ್ದಾರೆ.

ಅರಣ್ಯ ಇಲಾಖೆ ಹೈ ಅಲರ್ಟ್: ಕಾರ್ಮಿಕರಿಗೆ ಎಚ್ಚರಿಕೆ

ಅರಣ್ಯ ಇಲಾಖೆಯ ಅಧಿಕಾರಿಗಳು ಮೂಡಿಗೆರೆ ಮತ್ತು ಚಿಕ್ಕಮಗಳೂರು ವಲಯದಲ್ಲಿ ಅಲರ್ಟ್ ಘೋಷಿಸಿದ್ದು, ಕಾಫಿ ತೋಟಗಳಿಗೆ ಕೆಲಸಕ್ಕೆ ತೆರಳದಂತೆ ತಾತ್ಕಾಲಿಕ ಸೂಚನೆ ನೀಡಿದ್ದಾರೆ. ಜನರು ಎಚ್ಚರಿಕೆಯಿಂದಿರಬೇಕು, ಗುಂಪುಗಳಲ್ಲಿ ಮಾತ್ರ ಸಂಚರಿಸಬೇಕು ಹಾಗೂ ಕಾಡಾನೆಗಳು ಕಂಡುಬಂದರೆ ತಕ್ಷಣ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಕಾಫಿನಾಡಿನಲ್ಲಿ ಮರುಕಳಿಸುತ್ತಿರುವ ಕಾಡಾನೆಗಳ ಹಾವಳಿ ರೈತರು ಹಾಗೂ ತೋಟಗಾರರಿಗೆ ತಲೆನೋವಾಗಿದ್ದು, ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ.

ಇದನ್ನೂ ಓದಿ: ಕಿಲ್ಲರ್ ಕಾಡಾನೆ ಸೆರೆಯಾದರೂ ಮುಂದುವರಿದ ಆತಂಕ; ಚಿಕ್ಕಮಗಳೂರಿನ 12 ಗ್ರಾಮಗಳಿಗೆ ಗ್ರಾಮಗಳಲ್ಲಿ ನಿಷೇಧಾಜ್ಞೆ !

ಕಾಡಾನೆಗಳ ಆತಂಕ ಹೆಚ್ಚಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಒಟ್ಟು 12 ಗ್ರಾಮಗಳಲ್ಲಿ ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಏತನ್ಮಧ್ಯೆ, ಕಾಡಾನೆ ದಾಳಿಗಳಿಗೆ ಒಂದೇ ವಾರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Paras Dogra vs KV Aneesh: ಡಿಚ್ಚಿಗೆ ಇದುವೇ ಅಸಲಿ ಕಾರಣ..! – Kannada News | Why Paras Dogra headbutted Aneesh?

ಹುಬ್ಬಳ್ಳಿಯ ಕೆಎಸ್​ಸಿಎ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಆಟಗಾರರ ನಡುವೆ ಅಹಿತಕರ ಘಟನೆ ನಡೆದಿದೆ. ಕರ್ನಾಟಕ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುತ್ತಿರುವ ಜಮ್ಮು-ಕಾಶ್ಮೀರ ಪರ ನಾಯಕ ಪರಸ್ ಡೋಗ್ರ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಅದರಂತೆ 2ನೇ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಿದ್ದ ಪರಸ್ ಹಾಗೂ ಕರ್ನಾಟಕ ಆಟಗಾರ ಕೆವಿ ಅನೀಶ್ ನಡುವೆ ವಾಗ್ವಾದ ನಡೆದಿದೆ.

ಈ ವಾಗ್ವಾದವು ತಾರಕ್ಕೇರುತ್ತಿದ್ದಂತೆ ಪರಸ್ ಡೋಗ್ರಾ ಕೆವಿ ಅನೀಶ್​ ತಲೆಗೆ ಹೆಲ್ಮೆಟ್​ನಿಂದ ಡಿಚ್ಚಿ ಹೊಡೆದಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸ್ಲೆಡ್ಜಿಂಗ್ ಅಥವಾ ಮೌಖಿಕ ನಿಂದನೆ ಎಂದು ವರದಿಯಾಗಿದೆ.

ಸಿಲ್ಲಿ ಪಾಯಿಂಟ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಅನೀಶ್ ಅವರು ಡೋಗ್ರಾ ಅವರ ಬ್ಯಾಟಿಂಗ್ ಸಾಮರ್ಥ್ಯವನ್ನು ಪ್ರಶ್ನಿಸಿದ್ದರು. “ನೀವು 10,000 ರನ್ ಹೇಗೆ ಗಳಿಸಿದಿರಿ? ನಿಮಗೆ ಬ್ಯಾಟ್ ಕೂಡ ಹಿಡಿಯಲೂ ಕೂಡ ಬರುವುದಿಲ್ಲ” ಎಂಬಂತಹ ವೈಯಕ್ತಿಕ ಟೀಕೆಗಳು ಮತ್ತು ಅವಾಚ್ಯ ಶಬ್ದಗಳ ಬಳಕೆಯು ಡೋಗ್ರಾ ಅವರ ಆಕ್ರೋಶಕ್ಕೆ ಕಾರಣವಾಯಿತು.

ಈ ಸ್ಲೆಡ್ಜಿಂಗ್ ಬೆನ್ನಲ್ಲೇ ಪ್ರಸಿದ್ಧ್ ಕೃಷ್ಣ ಅವರ ಬೌಲಿಂಗ್‌ನಲ್ಲಿ ಬೌಂಡರಿ ಬಾರಿಸಿದ ಡ್ರೋಗ್ರಾ ನೇರವಾಗಿ ಅನೀಶ್ ಅವರ ಬಳಿ ಹೋಗಿ ಮಾತಿನ ಚಕಮಕಿ ನಡೆಸಿದರು. ಈ ವಾಗ್ವಾದವು ತಾರಕ್ಕೇರುತ್ತಿದ್ದಂತೆ ತಮ್ಮ ಹೆಲ್ಮೆಟ್‌ನಿಂದ ಅನೀಶ್ ಅವರ ತಲೆಗೆ ಗುದ್ದಿದ್ದಾರೆ.

ತಕ್ಷಣವೇ ಮೈದಾನದಲ್ಲಿದ್ದ ಅಂಪೈರ್‌ಗಳು ಮತ್ತು ಕರ್ನಾಟಕದ ಹಿರಿಯ ಆಟಗಾರರಾದ ಮಾಯಾಂಕ್ ಅಗರ್ವಾಲ್ ಹಾಗೂ ದೇವದತ್ ಪಡಿಕ್ಕಲ್ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಇದೀಗ ಈ ಅಶಿಸ್ತಿನ ವರ್ತನೆಗಾಗಿ ಬಿಸಿಸಿಐ  ಪರಸ್ ಡೋಗ್ರಾ ಅವರಿಗೆ ಪಂದ್ಯದ ಸಂಭಾವನೆಯ ಶೇ. 50 ರಷ್ಟು ದಂಡ ವಿಧಿಸಿದೆ. ಅಲ್ಲದೆ ಎರಡು ಡಿಮೆರಿಟ್ ಅಂಕಗಳನ್ನು ನೀಡಿದೆ.

ಇದೀಗ ರಣಜಿ ಟೂರ್ನಿ ಇತಿಹಾಸದಲ್ಲೇ 10 ಸಾವಿರಕ್ಕೂ ಅಧಿಕ ರನ್​ಗಳಿಸಿದ ಆಟಗಾರನ ಸಾಮರ್ಥ್ಯವನ್ನು ಪ್ರಶ್ನಿಸಿ ನಿಂದಿಸಿರುವ ಕೆವಿ ಅನೀಶ್ ಅವರ ನಡೆಯ ಬಗ್ಗೆಯೂ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಏಕೆಂದರೆ ರಣಜಿ ಟೂರ್ನಿ ಇತಿಹಾಸದಲ್ಲಿ 10 ಸಾವಿರಕ್ಕೂ ಅಧಿಕ ರನ್​ ಕಲೆಹಾಕಿರುವುದು ಕೇವಲ ಇಬ್ಬರು ಬ್ಯಾಟರ್​ಗಳು ಮಾತ್ರ. ಈ ಸಾಧನೆ ಮಾಡಿದ ಮೊದಲ ದಾಂಡಿಗ ವಾಸಿಂ ಜಾಫರ್ (12,038). ಇದಾದ ಬಳಿಕ ಈ ಸಾಧನೆ ಮಾಡಿದ 2ನೇ ಬ್ಯಾಟರ್ ಪರಸ್ ಡೋಗ್ರಾ.

ಇಂತಹ ಸಾಧನೆ ಮಾಡಿದ ಆಟಗಾರನನ್ನು “ನೀವು 10,000 ರನ್ ಹೇಗೆ ಗಳಿಸಿದಿರಿ? ನಿಮಗೆ ಬ್ಯಾಟ್ ಕೂಡ ಹಿಡಿಯಲೂ ಕೂಡ ಬರುವುದಿಲ್ಲ”  ಎಂದು ಅನೀಶ್ ನೇರವಾಗಿ ನಿಂದನೆ ಮಾಡಿರುವುದು ಎಷ್ಟು ಸರಿ ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ.

 

Source link

ರಘು ಅವಕಾಶವಾದಿನಾ? ಇನ್​​ಸ್ಟಾ ಅನ್​ಫಾಲೋ ಮಾಡಿದ ಹಿಂದಿನ ಕಾರಣ ಹೇಳಿದ ಗಿಲ್ಲಿ ನಟ – Kannada News | Gilli Nata Clarifies To Why Raghu unfollow On Instagram

ನಟ ರಘು ಹಾಗೂ ಗಿಲ್ಲಿ ನಟ ಅವರು ಬಿಗ್ ಬಾಸ್ ಅಲ್ಲಿ ಸಾಕಷ್ಟು ಸುದ್ದಿ ಆದವರು. ಇಬ್ಬರೂ ಕೆಲವು ದಿನ ಒಟ್ಟಿಗೆ ಇದ್ದರು. ಇನ್ನೂ ಕೆಲವು ದಿನ ಕಿತ್ತಾಡಿಕೊಳ್ಳುತ್ತಿದ್ದನ್ನು ನೋಡಬಹುದು. ರಘು ಅವರು ಎಷ್ಟೇ ದ್ವೇಷ ತೋರಿಸಿದರೂ ಗಿಲ್ಲಿ ನಟ ಪ್ರೀತಿಯನ್ನೇ ಕೊಡುತ್ತಿದ್ದರು. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಗಿಲ್ಲಿ ಹಾಗೂ ರಘು ಒಟ್ಟಾಗಿಯೇ ಇದ್ದರು. ರಘು ಅವರು ಈಗ ಗಿಲ್ಲಿಯನ್ನು ಅನ್​ಫಾಲೋ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ನಡೆದಿದ್ದು ಗೊತ್ತೇ ಇದೆ. ಈ ವಿಷಯದ ಕುರಿತಂತೆ ಗಿಲ್ಲಿ ನಟ ಅವರು ಮಾತನಾಡಿದ್ದಾರೆ.

ಗಿಲ್ಲಿ ಅವರ ಮನಸ್ಸು ಹೇಗಿದೆ ಎಂಬುದನ್ನು ಮತ್ತೆ ಬಿಡಿಸಿ ಹೇಳಬೇಕಿಲ್ಲ. ಬಿಗ್ ಬಾಸ್ ಮನೆಯ ಒಳಗೆ ಇರಲಿ ಅಥವಾ ಹೊರಗೆ ಇರಲಿ ಅವರು ಎಂದಿಗೂ ಗಿಲ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದು ಕಾಣಿಸಿಯೇ ಇಲ್ಲ. ಈಗಲೂ ಅವರು ಅದನ್ನು ಮುಂದುವರಿಸಿಕೊಂಡು ಬಂದಿದ್ದಾರೆ ಎಂದೇ ಹೇಳಬಹುದು. ಈಗ ಅನ್​​ಫಾಲೋ ಬಗ್ಗೆಯೂ ಅವರು ಜಾಗರೂಕವಾಗಿಯೇ ಮಾತನ್ನು ಆಡಿದ್ದಾರೆ.

‘ಅವರು ಏಕೆ ಅನ್​ಫಾಲೋ ಮಾಡಿದ್ರು ಅನ್ನೋದು ನಿಜಕ್ಕೂ ಗೊತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲೇ ಗೊತ್ತಾಗಿದ್ದು. ನಾನು ಸೋಶಿಯಲ್ ಮೀಡಿಯಾ ಬಳಸಲ್ಲ. ಪೋಸ್ಟ್​ ಮಾಡೋದಲ್ಲ ಮಾಡಲ್ಲ. ಅವರು ಫಾಲೋ ಮಾಡಿರ್ತಾರೆ, ನಾನು ಫಾಲೋ ಬ್ಯಾಕ್ ಮಾಡಿಲ್ಲ ಎಂದು ಅನ್​​ಫಾಲೋ ಮಾಡಿರಬಹುದು’ ಎಂದು ಗಿಲ್ಲಿ ನಟ ಹೇಳಿದ್ದಾರೆ.

ಇದನ್ನೂ ಓದಿ: ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ

ರಘು ಅವರು ಅವಕಾಶವಾದಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿದೆ. ಈ ಬಗ್ಗೆ ಗಿಲ್ಲಿ ನಟ ಮಾತನಾಡಿದ್ದಾರೆ. ‘ರಘು ಅವರು ಮಗುವಿನ ರೀತಿಯ ಮನಸ್ಸು ಹೊಂದಿರುವವರು. ಅವರು ಯಾವಾಗಲೂ ಆ ರೀತಿ ಮಾಡಿದವರಲ್ಲ. ಅವರ ದೇಹಕ್ಕೂ ವೈಕ್ತಿತ್ವಕ್ಕೂ ಸಂಬಂಧವೇ ಇಲ್ಲ’ ಎಂದು ಒಳ್ಳೆಯ ಮಾತನ್ನು ಆಡಿದರು.
ಬಿಗ್ ಬಾಸ್ ಮನೆಯಲ್ಲಿ ರಘು ಅವರು ಚಪಾತಿ ಕೊಡದೆ ಇರುವುದು ಸಾಕಷ್ಟು ಚರ್ಚೆ ಆಗಿತ್ತು. ಆ ಬಗ್ಗೆ ಹೊರಗೆ ಬಂದ ಬಳಿಕ ರಘು ಅಚ್ಚರಿ ಹೊರಹಾಕಿದ್ದನ್ನು ನೀವು ನೋಡಬಹುದು. ಅದಕ್ಕೂ ಮೊದಲು ಅವರಿಗೆ ನಾನು ಮೂರು ರೊಟ್ಟಿ ಚಪಾತಿ ಕೊಟ್ಟಿದ್ದೆ ಎಂದು ಹೇಳಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:42 am, Thu, 26 February 26

Source link

Video: ಮಹಿಳೆಯಿಂದ ಹೆಚ್ಚುವರಿ ಹಣ ಪಡೆದು ಟಿಕೆಟ್ ಕೊಡದೆ ಕಳಿಸಿದ ರೈಲ್ವೆ ಬುಕಿಂಗ್ ಸಿಬ್ಬಂದಿ – Kannada News | Woman Claims Overcharging and Denial of Ticket at Delhi Railway Counter in Anand Vihar

ನವದೆಹಲಿ, ಫೆಬ್ರವರಿ 26: ರೈಲ್ವೆ ಟಿಕೆಟ್​ ಕೌಂಟರ್​​ನಲ್ಲಿರುವ  ಸಿಬ್ಬಂದಿ​ ಮಹಿಳೆಯಿಂದ ಹೆಚ್ಚುವರಿ ಹಣ ಪಡೆದು, ಟಿಕೆಟ್ ಕೂಡ ಕೊಡದೆ ಕಳುಹಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಆನಂದ್ ವಿಹಾರ್ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬಡ ಮಹಿಳೆಯೊಬ್ಬರು ರೈಲ್ವೆ ಟಿಕೆಟ್​ಗಾಗಿ ಬುಕಿಂಗ್ ಕ್ಲರ್ಕ್​​ಗೆ ಸಾವಿರ ರೂ. ನೀಡಿದ್ದರು. ಅವರಿಗೆ ಯಾವುದೇ ಟಿಕೆಟ್ ಕೊಡದೆ, 200 ರೂ. ಅವರಿಟ್ಟುಕೊಂಡು 800 ರೂ.ವಾಪಸ್ ಕೊಟ್ಟಿದ್ದಾರೆ.

ರೈಲ್ವೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ಕೌಂಟರ್​​ನಲ್ಲಿ ಟಿಕೆಟ್ ಕೇಳಿದರೂ ಕೊಡದೆ ವಾಪಸ್ ಕಳುಹಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಆಕೆ 112ಕ್ಕೆ ಕರೆ ಮಾಡಿದರೂ ಕೂಡಲೇ ಸಹಾಯಕ್ಕೆ ಬರಲಿಲ್ಲ ಎಂದು ಆಕೆ ದೂರಿದ್ದಾರೆ. ಆಕೆ ಬಡ ಮಹಿಳೆ ಧ್ವನಿ ಎತ್ತುವುದಿಲ್ಲ ಎಂದು ಭಾವಿಸಿರಬೇಕು, ಇದು 200 ರೂ. ಪ್ರಶ್ನೆಯಲ್ಲ, ಇದು ದುರಹಂಕಾರ, ಶೋಷಣೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡಲೇ ಪರಿಶೀಲಿಸಬೇಕು, ಸಿಬ್ಬಂದಿಯನ್ನು ಅಮಾನತುಗೊಳಿಸಿ ಎಂದು ಒತ್ತಾಯಿಸಲಾಗುತ್ತಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Source link

ದ್ವಿತೀಯ ಪಿಯು ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಿಗೆ ಆತಂಕ: ಪ್ರಶ್ನೆ ಪತ್ರಿಕೆ ಬೇಕಾದರೆ ಮೆಸೇಜ್ ಮಾಡಿ ಎಂಬ ಪೋಸ್ಟ್ ವೈರಲ್! – Kannada News | Karnataka PUC Paper Leak Fear: Students and Parents Warned Against Online Scams

ಬೆಂಗಳೂರು, ಫೆ.26: ಫೆಬ್ರವರಿ 28ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು (PUC exam 2026) ಆರಂಭವಾಗಲಿವೆ. ಆದರೆ, ಪರೀಕ್ಷೆಗೆ ಕೇವಲ ಎರಡು ದಿನ ಬಾಕಿ ಇರುವಾಗ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಬಗ್ಗೆ ಪೋಸ್ಟ್ ಒಂದು ಹರಿದಾಡುತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ‘ಡಾ. ಕನ್ನಡಿಗ’ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕಿಡಿಗೇಡಿಯೊಬ್ಬ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವುದಾಗಿ ಪೋಸ್ಟ್ ಮಾಡಿದ್ದಾನೆ. “ಯಾವುದಾದರೂ ಪ್ರಶ್ನೆ ಪತ್ರಿಕೆ ಬೇಕು ಅಂದ್ರೆ ಮೆಸೇಜ್ ಮಾಡಿ. ಅಮೌಂಟ್ ಎಷ್ಟು ಅಂತ ಆಮೇಲೆ ಹೇಳ್ತಿನಿ” ಎಂದು ಈ ಕಿಡಿಗೇಡಿ ಬರೆದುಕೊಂಡಿದ್ದಾನೆ. ಇದೀಗ ಘಟನೆ ವಿದ್ಯಾರ್ಥಿಗಳಿಗೆ ಭಯ ಹುಟ್ಟಿಸಿದೆ. ಹಾಗೂ ಪರೀಕ್ಷಾ ಮಂಡಳಿಯ ಕೂಡ ಆತಂಕಕ್ಕೆ ಕಾರಣವಾಗಿದೆ.

ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ, ಕಷ್ಟಪಟ್ಟು ಓದುತ್ತಿರುವ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯಾಗಬಹುದೇ ಎಂಬ ಭಯದಲ್ಲಿದ್ದಾರೆ. ಆದರೆ, ಈ ಕಿಡಿಗೇಡಿ ಯಾವ ವಿಷಯದ ಪ್ರಶ್ನೆ ಪತ್ರಿಕೆ ಎಂಬ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಪರೀಕ್ಷೆಯ ಸಮಯದಲ್ಲಿ ಇಂತಹ ಕಿಡಿಗೇಡಿಗಳು ಹಣ ಮಾಡುವ ಉದ್ದೇಶದಿಂದ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಅಥವಾ ನಕಲಿ ಪತ್ರಿಕೆಗಳನ್ನು ನೀಡಿ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಸಾಧ್ಯತೆ ಹೆಚ್ಚು. ಇಂತಹ ಜಾಲಗಳಿಗೆ ಸಿಲುಕಿ ಹಣ ಕಳೆದುಕೊಳ್ಳಬೇಡಿ ಮತ್ತು ನಿಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಇಲಾಖೆ ಹೇಳಿದೆ.

ಇದನ್ನೂ ಓದಿ: GST ಆಫೀಸರ್ ಹೆಸರಲ್ಲಿ ಲಕ್ಷ ಲಕ್ಷ ದೋಚಿದ ಹೌಸ್ ಕೀಪಿಂಗ್ ಸಿಬ್ಬಂದಿ! ಗುಟ್ಕಾ ವ್ಯಾಪಾರಿಗೆ ಬೆದರಿಸಿ ವಂಚನೆ

ಇನ್ನು ಇಂತಹ ಅನೇಕ ಘಟನೆಗಳು ರಾಜ್ಯದಲ್ಲಿ ಕಂಡು ಬರುತ್ತಿದೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆಯುತ್ತಿದ್ದ ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಅಧಿಕಾರಿಗಳಿಗೆ ದೊಡ್ಡ ಆಘಾತ ನೀಡಿತ್ತು. ಜನವರಿ 6, 2026 ರಂದು ಗಣಿತ ಪರೀಕ್ಷೆ ನಡೆಯುತ್ತಿದ್ದಾಗ ಈ ವಿಷಯ ಬೆಳಕಿಗೆ ಬಂದಿದೆ. ಶಿವಮೊಗ್ಗದ ಕಾಲೇಜುಗಳಿಗೆ ನೀಡಲಾಗಿದ್ದ ಪ್ರಶ್ನೆ ಪತ್ರಿಕೆಯ ಪ್ರತಿಯು ಪರೀಕ್ಷೆ ಆರಂಭವಾಗುವ ಮೊದಲೇ ವಾಟ್ಸಾಪ್ ಮೂಲಕ ಹರಿದಾಡಿತ್ತು. ಶಿವಮೊಗ್ಗದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (DDPUE) ಕಾಲೇಜುಗಳಿಗೆ ಭೇಟಿ ನೀಡಿದಾಗ ಈ ವಿಚಾರ ಗೊತ್ತಾಗಿದೆ. ಶಿವಮೊಗ್ಗ ಜಿಲ್ಲೆಯ ಕೋಡ್ ಹೊಂದಿದ್ದ ಪ್ರಶ್ನೆ ಪತ್ರಿಕೆಯು ತುಮಕೂರು ಜಿಲ್ಲೆಯಲ್ಲೂ ಚಲಾವಣೆಯಲ್ಲಿರುವುದು ಕಂಡುಬಂದಿದೆ. ಹಿರಿಯ ಅಧಿಕಾರಿಗಳ ಸೂಚನೆಯ ಮೇರೆಗೆ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೊರೆಯಾಗುತ್ತಿದ್ದರೂ ಗ್ಯಾರಂಟಿ ಕೊಡುತ್ತಿದ್ದೇವೆ, ಕೊಡುತ್ತೇವೆ: ಡಿಕೆಶಿ, ಸಿದ್ದರಾಮಯ್ಯ ಮಾತಿನ ಮರ್ಮ ಏನು? – Kannada News | Are Karnataka’s Guarantee Schemes a Financial Burden? DK Shivakumar and Siddaramaiah Clarify Amid Budget Debate

ಬೆಂಗಳೂರು, ಫೆಬ್ರವರಿ 26: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯಕ್ಕೆ ಆರ್ಥಿಕ ಹೊರೆಯಾಗಿದೆ ಎಂಬುದನ್ನು ಕೊನೆಗೂ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡರೇ? ಇಬ್ಬರೂ ಆಡಿರುವ ಮಾತುಗಳು ಇದಕ್ಕೆ ಪುಷ್ಟಿ ನೀಡಿವೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದ್ದರೂ, ಅವು ಜನರಿಗೆ ಆರ್ಥಿಕ ಬಲವನ್ನು ನೀಡಿವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ‘ವರ್ಷಕ್ಕೆ 52 ಸಾವಿರ ಕೋಟಿ ರೂಪಾಯಿಗಿಂತಲೂ ಹೆಚ್ಚು ಮೊತ್ತವನ್ನು ಗ್ಯಾರಂಟಿಗಳಿಗಾಗಿ ಕೊಡಲಾಗುತ್ತಿದೆ, ಅದು ಬರ್ಡನ್ ಎಂದು ಅವರು ಹೇಳಿರಬಹುದು ಅಷ್ಟೆ. ಹಾಗಂತ ನಾವು ಗ್ಯಾರಂಟಿಗಳಿಗೆ ಅನುದಾನ ನಿಲ್ಲಿಸಿಲ್ಲ. ಗ್ಯಾರಂಟಿ ಯೋಜನೆಗಳಿಗೆ 1.20 ಲಕ್ಷ ಕೋಟಿ ರೂಪಾಯಿಗಳನ್ನು ಈಗಾಗಲೇ ಮೀಸಲಿಡಲಾಗಿದೆ ಮತ್ತು ಅಭಿವೃದ್ಧಿ ಕಾರ್ಯಗಳು ಮುಂದುವರಿಯಲಿವೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್ 2’ ಚಿತ್ರಕ್ಕೆ ‘UA’ ಸರ್ಟಿಫಿಕೇಟ್? ಇಲ್ಲಿದೆ ಅಸಲಿಯತ್ತು – Kannada News | Is Really Ravnveer Singh Dhurandhar 2 Movie Got UA Certificate here is the truth

ರಣವೀರ್ ಸಿಂಗ್ ಅವರ ‘ಧುರಂಧರ್’ ಚಿತ್ರದ ಭಾರಿ ಯಶಸ್ಸಿನ ನಂತರ, ಅವರ ಚಿತ್ರದ ಮುಂದುವರಿದ ಭಾಗದ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿದೆ. ಡಿಸೆಂಬರ್ 2025ರಲ್ಲಿ ಬಿಡುಗಡೆಯಾದ ‘ಧುರಂಧರ್’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಸಾವಿರಾರು ಕೋಟಿ ಗಳಿಸುವ ಮೂಲಕ ದಾಖಲೆ ನಿರ್ಮಿಸಿತು. ಇದರಿಂದಾಗಿ, ‘ಧುರಂಧರ್ 2’ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ. ಈ ಚಿತ್ರದ ಎರಡನೇ ಭಾಗಕ್ಕೆ ಸೆನ್ಸಾರ್ ಆಗಿದೆ ಮತ್ತು ಕೆಲವು ದೃಶ್ಯಗಳನ್ನು ಕತ್ತರಿಸಲಾಗಿದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿತ್ತು. ಈ ಸುದ್ದಿ ಅಭಿಮಾನಿಗಳಲ್ಲಿ ಗೊಂದಲ ಸೃಷ್ಟಿಸಿತ್ತು. ಆದರೆ, ಸದ್ಯದ ಮಾಹಿತಿ ಪ್ರಕಾರ, ಇದು ಫೇಕ್ ಎನ್ನಲಾಗಿದೆ.

ನಿರ್ದೇಶಕ ಆದಿತ್ಯ ಧಾರ್ ಅವರ ‘ಧುರಂಧರ್ 2’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲವಿದೆ. ಈ ಚಿತ್ರವು ಮಾರ್ಚ್ 19ರಂದು ಬಿಡುಗಡೆಯಾಗಲಿದೆ. ಇದರಿಂದಾಗಿ, ಸಾಮಾಜಿಕ ಮಾಧ್ಯಮಗಳಲ್ಲಿ ವಿವಿಧ ವದಂತಿಗಳು ಮತ್ತು ಹಕ್ಕುಗಳು ವೇಗವಾಗಿ ಹರಡುತ್ತಿವೆ. ಅದೇ ರೀತಿ, ಚಿತ್ರದ ಸೆನ್ಸಾರ್ ಪ್ರಮಾಣಪತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅನೇಕರು ಅದನ್ನು ನಂಬಿದ್ದರು. ಆದಾಗ್ಯೂ, ಈ ಪ್ರಮಾಣಪತ್ರದ ಹಿಂದಿನ ಸತ್ಯ ಬೇರೆಯೇ ಆಗಿದೆ. ವಾಸ್ತವವಾಗಿ, ‘ಧುರಂಧರ್ 2’ ಅನ್ನು ಇನ್ನೂ ಸೆನ್ಸಾರ್ ಮಂಡಳಿಗೆ ಕಳುಹಿಸಲಾಗಿಲ್ಲ.

ಚಿತ್ರದ ಕೆಲಸ ಇನ್ನೂ ಪೂರ್ಣಗೊಂಡಿಲ್ಲ. ಆದ್ದರಿಂದ, ಸೆನ್ಸಾರ್‌ಶಿಪ್ ಪ್ರಶ್ನೆಯೇ ಉದ್ಭವಿಸುವುದಿಲ್ಲ. ವೈರಲ್ ಆಗುತ್ತಿರುವ ಪ್ರಮಾಣಪತ್ರ ನಕಲಿ ಎಂದು ಸ್ಪಷ್ಟಪಡಿಸಲಾಗಿದ್ದು, ಅಭಿಮಾನಿಗಳು ಇಂತಹ ವದಂತಿಗಳನ್ನು ನಂಬಬೇಡಿ ಎಂದು ಮನವಿ ಮಾಡಲಾಗುತ್ತಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಪ್ರಮಾಣಪತ್ರ ಸುಳ್ಳು. ‘ಧುರಂಧರ್ 2’ ಚಿತ್ರಕ್ಕೆ A ಬದಲಿಗೆ UA 16+ ನೀಡಲಾಗಿದೆ ಎಂದು ಜನರು ಹೇಳಿದ್ದರು. ಮಾಧ್ಯಮ ವರದಿಗಳ ಪ್ರಕಾರ, ವೈರಲ್ ಆಗುತ್ತಿರುವ ಆನ್‌ಲೈನ್ ಪ್ರಮಾಣಪತ್ರವು ಚಿತ್ರದ ಮುಂದುವರಿದ ಭಾಗದದ್ದಲ್ಲ. ಕಳೆದ ವಾರದವರೆಗೂ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಮೊದಲ ಭಾಗ ಬಿಡುಗಡೆಯಾದಾಗ ಎ ಪ್ರಮಾಣಪತ್ರವನ್ನು ಪಡೆದಿತ್ತು, ಆದರೆ ಈಗ ಅದನ್ನು ಟಿವಿಯಲ್ಲಿ ತೋರಿಸಲು ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.

ಇದನ್ನೂ ಓದಿ: ‘ಧುರಂಧರ್ 2’ ಬಿಡುಗಡೆಗೂ ಮುನ್ನ ನಟ ರಣವೀರ್ ಸಿಂಗ್​​ಗೆ ಬೆದರಿಕೆ

ನಿಯಮಗಳ ಪ್ರಕಾರ, ಟಿವಿಯಲ್ಲಿ ಚಿತ್ರವನ್ನು ಪ್ರದರ್ಶಿಸುವಾಗ, ಕೆಲವು ದೃಶ್ಯಗಳನ್ನು ಕತ್ತರಿಸಿ, ಅಸಭ್ಯ ಪದಗಳನ್ನು ಮ್ಯೂಟ್ ಮಾಡಬೇಕಾಗುತ್ತದೆ. ಇದು ಟಿವಿ ಆವೃತ್ತಿಯನ್ನು ಮಾಡುವಾಗ ಚಿತ್ರದ ರನ್-ಟೈಮ್ ಅನ್ನು 208 ನಿಮಿಷಗಳಿಗೆ ಇಳಿಸಿತು ಮತ್ತು ಅದು UA 16+ ಪ್ರಮಾಣಪತ್ರವನ್ನು ಪಡೆದುಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

45 ಎಸೆತಗಳಲ್ಲಿ ಪಾಕಿಸ್ತಾನ್ ತಂಡದ ಸೆಮಿಫೈನಲ್ ಭವಿಷ್ಯ – Kannada News | Pakistan semi final qualification scenario

T20 World Cup 2025: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಗ್ರೂಪ್-2 ರಿಂದ ಇಂಗ್ಲೆಂಡ್ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದರೆ, ಶ್ರೀಲಂಕಾ ತಂಡವು ಎಲಿಮಿನೇಟ್ ಆಗಿದೆ. ಇದೀಗ ದ್ವಿತೀಯ ತಂಡವಾಗಿ ಸೆಮಿಫೈನಲ್​ಗೇರಲು ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಪೈಪೋಟಿಯಲ್ಲಿ ನಿರ್ಣಾಯಕ ಪಾತ್ರವಹಿಸುವುದು ಇಂಗ್ಲೆಂಡ್ ಎಂಬುದು ವಿಶೇಷ.

ಅಂದರೆ ಇಂಗ್ಲೆಂಡ್ ತಂಡವು ನ್ಯೂಝಿಲೆಂಡ್ ಅನ್ನು ಮಣಿಸಿದರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ದೊರೆಯಲಿದೆ. ಹೀಗಾಗಿ ಪಾಕ್ ತಂಡವು ಇಂಗ್ಲೆಂಡ್ ತಂಡದ ಗೆಲುವನ್ನು ಎದುರು ನೋಡಲಿದೆ.

ಒಂದು ವೇಳೆ ಇಂಗ್ಲೆಂಡ್ ತಂಡ ಗೆದ್ದರೂ ಪಾಕಿಸ್ತಾನ್ ತಂಡಕ್ಕೆ ನೇರವಾಗಿ ಸೆಮಿಫೈನಲ್​ಗೇರಲು ಅವಕಾಶ ದೊರೆಯುವುದಿಲ್ಲ. ಬದಲಾಗಿ ಶ್ರೀಲಂಕಾ ವಿರುದ್ಧ ಅಮೋಘ ಜಯ ಸಾಧಿಸಿ ನೆಟ್ ರನ್ ರೇಟ್ ಅನ್ನು ಹೆಚ್ಚಿಸಿಕೊಳ್ಳಲೇಬೇಕು. ಹಾಗಿದ್ರೆ ಪಾಕ್ ತಂಡದ ಸೆಮಿಫೈನಲ್ ಹಾದಿಯ ಲೆಕ್ಕಾಚಾರ ಹೇಗಿದೆ ಎಂದು ನೋಡುವುದಾದರೆ…

  • ನೆಟ್ ರನ್ ರೇಟ್: ಫೆಬ್ರವರಿ 27 ರಂದು ನಡೆಯುವ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ನ್ಯೂಝಿಲೆಂಡ್ ಅನ್ನು ಸೋಲಿಸಲೇಬೇಕು. ಆಗ ನ್ಯೂಜಿಲೆಂಡ್ 3 ಅಂಕಗಳಲ್ಲೇ ಉಳಿಯುತ್ತದೆ. ನಂತರ ಫೆಬ್ರವರಿ 28 ರಂದು ಪಾಕಿಸ್ತಾನವು ಶ್ರೀಲಂಕಾವನ್ನು ಸೋಲಿಸಿದರೆ, ಪಾಕಿಸ್ತಾನ್ ಕೂಡ 3 ಅಂಕಗಳನ್ನು ಪಡೆಯುತ್ತದೆ.
  • ಸವಾಲು: ನ್ಯೂಝಿಲೆಂಡ್ ತಂಡವು ಅತ್ಯುತ್ತಮ NRR (+3.050) ಹೊಂದಿದೆ. ಪಾಕಿಸ್ತಾನವು (-0.461) ಇದನ್ನು ಮೀರಿಸಲು ಸುಮಾರು 70 ರಿಂದ 80 ರನ್‌ಗಳ ಅಂತರದ ಗೆಲುವು ಸಾಧಿಸಬೇಕಾಗುತ್ತದೆ.
  • ಉದಾಹರಣೆ: ಇಂಗ್ಲೆಂಡ್ ತಂಡವು ನ್ಯೂಝಿಲೆಂಡ್ ತಂಡವನ್ನು 40 ರನ್‌ಗಳಿಂದ ಸೋಲಿಸಿದರೆ, ಪಾಕಿಸ್ತಾನವು ಶ್ರೀಲಂಕಾ ವಿರುದ್ಧ ಸುಮಾರು 30 ರನ್‌ಗಳಿಂದ ಗೆಲ್ಲಬೇಕು (ಪಾಕಿಸ್ತಾನ್ ಮೊದಲು ಬ್ಯಾಟಿಂಗ್ ಮಾಡಿ 200 ರನ್ ಗಳಿಸಿದರೆ).
  • ಅರ್ಹತೆ: ನ್ಯೂಝಿಲೆಂಡ್ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೋತು, ಪಾಕಿಸ್ತಾನವು ಶ್ರೀಲಂಕಾವನ್ನು ಭಾರಿ ಅಂತರದಿಂದ ಸೋಲಿಸಿದರೆ ಮಾತ್ರ ನೆಟ್ ರನ್ ರೇಟ್​ ಆಧಾರದಲ್ಲಿ 2ನೇ ತಂಡವಾಗಿ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ.

ಪಾಕ್ ತಂಡದ ಚೇಸಿಂಗ್ ಲೆಕ್ಕಾಚಾರ:

ಒಂದು ವೇಳೆ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಿ ನ್ಯೂಝಿಲೆಂಡ್ ತಂಡವನ್ನು ಸುಮಾರು 40 ರನ್‌ಗಳಿಂದ ಸೋಲಿಸಿದೆ ಎಂದು ಭಾವಿಸೋಣ. ಆಗ ಪಾಕಿಸ್ತಾನಕ್ಕೆ ಶ್ರೀಲಂಕಾ ವಿರುದ್ಧ ಈ ಕೆಳಗಿನ ಚೇಸಿಂಗ್ ಟಾರ್ಗೆಟ್ ಇರಲಿದೆ.

  • ಓವರ್‌ಗಳ ಲೆಕ್ಕಾಚಾರ: ಶ್ರೀಲಂಕಾ ತಂಡವು ಮೊದಲು ಬ್ಯಾಟಿಂಗ್ ಮಾಡಿ 160 ರನ್ ಗಳಿಸಿದರೆ, ಪಾಕಿಸ್ತಾನವು ಆ ಗುರಿಯನ್ನು ಸುಮಾರು 12.2 ರಿಂದ 13 ಓವರ್‌ಗಳಲ್ಲೇ ಬೆನ್ನಟ್ಟಬೇಕಾಗುತ್ತದೆ.
  • ಗುರಿಯ ಅಂತರ: ಪಾಕಿಸ್ತಾನವು ಕೇವಲ ಗೆದ್ದರೆ ಸಾಲದು, ಪಂದ್ಯದ ಒಟ್ಟು ಓವರ್‌ಗಳ ಪೈಕಿ ಕನಿಷ್ಠ 35-40% ಓವರ್‌ಗಳು ಬಾಕಿ ಇರುವಂತೆಯೇ ಗುರಿಯನ್ನು ತಲುಪಬೇಕು.
  • ಉದಾಹರಣೆ: ಶ್ರೀಲಂಕಾ ನೀಡಿದ ಗುರಿಯನ್ನು ಪಾಕಿಸ್ತಾನವು 40 ರಿಂದ 45 ಎಸೆತಗಳು ಬಾಕಿ ಇರುವಾಗಲೇ ತಲುಪಿದರೆ ಮಾತ್ರ ನ್ಯೂಝಿಲೆಂಡ್‌ನ ರನ್ ರೇಟ್ ಅನ್ನು ಹಿಂದಿಕ್ಕಲು ಸಾಧ್ಯವಾಗುತ್ತದೆ.

ಅಂದರೆ ರನ್​ಗಳ ಅಂತರದ ಗೆಲುವಿನ ಲೆಕ್ಕಾಚಾರ ನೋಡುವುದಾದರೆ ನ್ಯೂಝಿಲೆಂಡ್ ತಂಡವನ್ನು ನೆಟ್ ರನ್ ರೇಟ್​ನಲ್ಲಿ ಹಿಂದಿಕ್ಕಲು ಪಾಕಿಸ್ತಾನ್ ಕನಿಷ್ಠ 70 ರನ್​ಗಳ ಅಂತರದಿಂದ ಗೆಲ್ಲಬೇಕು. ಇನ್ನು ಓವರ್​ಗಳ ಲೆಕ್ಕಾಚಾರದಲ್ಲಿ ನೋಡುವುದಾದರೆ 12 ರಿಂದ 13 ಓವರ್​ಗಳಲ್ಲಿ 160 ರನ್​ಗಳ ಗುರಿ ಬೆನ್ನತ್ತಬೇಕು. ಅಂದರೆ ಕನಿಷ್ಠ 40 ರಿಂದ 45 ಎಸೆತಗಳು ಬಾಕಿ ಇರುವಂತೆ ಪಾಕಿಸ್ತಾನ್ ತಂಡ ಗೆದ್ದರೆ ಮಾತ್ರ ನೆಟ್​ ರನ್​ ರೇಟ್​ನಲ್ಲಿ ನ್ಯೂಝಿಲೆಂಡ್ ತಂಡವನ್ನು ಹಿಂದಿಕ್ಕಬಹುದು.

ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಇಂಗ್ಲೆಂಡ್ ತಂಡವು ನ್ಯೂಝಿಲೆಂಡ್ ಅನ್ನು ಎಷ್ಟು ದೊಡ್ಡ ಅಂತರದಿಂದ ಸೋಲಿಸುತ್ತದೆಯೋ, ಪಾಕಿಸ್ತಾನ ತಂಡಕ್ಕೆ ಚೇಸಿಂಗ್ ಮಾಡುವುದು ಅಷ್ಟು ಸುಲಭವಾಗುತ್ತದೆ. ಅಂದರೆ ನ್ಯೂಝಿಲೆಂಡ್ ತಂಡವು ಇಂಗ್ಲೆಂಡ್ ವಿರುದ್ಧ ಹೀನಾಯವಾಗಿ ಸೋತರೆ ನೆಟ್ ರನ್ ರೇಟ್ ಕುಸಿತವಾಗಲಿದೆ. ಇದರಿಂದ ಪಾಕ್ ತಂಡದ ಟಾರ್ಗೆಟ್ ಕೂಡ ಬದಲಾಗಲಿದೆ.

ಇದನ್ನೂ ಓದಿ: ಹೀಗಾದ್ರೆ ಸೌತ್ ಆಫ್ರಿಕಾ ಕೂಡ ವಿಶ್ವಕಪ್‌ನಿಂದ ಹೊರ ಬೀಳಬಹುದು!

ಪಾಕಿಸ್ತಾನ್ ಯಾವಾಗ ಹೊರಬೀಳುತ್ತದೆ?

  • ನ್ಯೂಝಿಲೆಂಡ್ ತಂಡವು ಇಂಗ್ಲೆಂಡ್ ಅನ್ನು ಸೋಲಿಸಿದರೆ ಪಾಕ್ ತಂಡ ಟೂರ್ನಿಯಿಂದ ಹೊರಬೀಳಲಿದೆ.
  • ನ್ಯೂಝಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯ ಮಳೆಯಿಂದ ರದ್ದಾದರೂ ಕೂಡ ಪಾಕಿಸ್ತಾನ್ ತಂಡ ವಿಶ್ವಕಪ್​ನಿಂದ ಹೊರಬೀಳಲಿದೆ.
  • ಶ್ರೀಲಂಕಾ ವಿರುದ್ಧ ಸೋತರೆ ಅಥವಾ ಆ ಪಂದ್ಯ ಮಳೆಯಿಂದ ರದ್ದಾದರೆ ಪಾಕ್ ತಂಡದ ವಿಶ್ವಕಪ್ ಅಭಿಯಾನ ಅಂತ್ಯವಾಗಲಿದೆ.

Source link