All posts by nagaraj11081993

ವಿಜಯ್-ತ್ರಿಷಾ ಮದುವೆ ಆಗಲಿ ಎಂದು ಹಾರೈಸಿದ ಬಾಲಿವುಡ್ ನಟಿ – Kannada News | Vijay Trisha Marriage: Rakhi Sawant’s Call Amidst Divorce and Political Entry Buzz

ದಳಪತಿ ವಿಜಯ್ ಮತ್ತು ತ್ರಿಷಾ ಕೃಷ್ಣನ್ ನಡುವಿನ ಸ್ನೇಹದ ಬಗ್ಗೆ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಇಬ್ಬರೂ ಮದುವೆ ಆಗಲಿ ಎಂಬುದು ಕೆಲ ಅಭಿಮಾನಿಗಳ ಕೋರಿಕೆ. ಇದೀಗ ಈ ಚರ್ಚೆಗೆ ಬಾಲಿವುಡ್‌ನ ವಿವಾದಾತ್ಮಕ ನಟಿ ರಾಖಿ ಸಾವಂತ್ ಎಂಟ್ರಿಕೊಟ್ಟಿದ್ದಾರೆ ಎಂಬುದು ವಿಶೇಷ. ವಿಜಯ್ ಮತ್ತು ತ್ರಿಷಾ ಮದುವೆಯಾಗಬೇಕು ಎಂದು ಹೇಳುವ ಮೂಲಕ ರಾಖಿ ಸಂಚಲನ ಮೂಡಿಸಿದ್ದಾರೆ.

1. ವಿಜಯ್-ತ್ರಿಷಾ ಮದುವೆಯಾಗಲಿ ಎಂದ ರಾಖಿ ಸಾವಂತ್

2. ವಿಜಯ್ ಮತ್ತು ಸಂಗೀತ ಅವರ ಡಿವೋರ್ಸ್ ವದಂತಿಗಳ ನಡುವೆ ರಾಖಿ ಹೇಳಿಕೆ

3. ವಿಜಯ್ ಅವರ ಪಕ್ಷಕ್ಕೆ ಸೇರ್ತೀನಿ ಎಂದ ವಿವಾದಾತ್ಮಕ ನಟಿ

ಖಾಸಗಿ ಮಾಧ್ಯಮವೊಂದರ ಜೊತೆ ಮಾತನಾಡಿದ ರಾಖಿ, ‘ವಿಜಯ್ ಮತ್ತು ತ್ರಿಷಾ ಮದುವೆಯಾಗಬೇಕು ಎಂದು ನನಗೆ ಅನ್ನಿಸುತ್ತಿದೆ. ಅವರಿಬ್ಬರ ಮದುವೆ ನಡೆದರೆ ನಾನು ಖಂಡಿತವಾಗಿಯೂ ಮೆಹಂದಿ ಕಾರ್ಯಕ್ರಮಕ್ಕೆ ಹೋಗುತ್ತೇನೆ’ ಎಂದಿದ್ದಾರೆ. ಅಲ್ಲದೆ, ವಿಜಯ್ ರಾಜಕೀಯ ಯಶಸ್ಸನ್ನು ಶ್ಲಾಘಿಸಿದ ಅವರು, ‘ವಿಜಯ್ ಅವರ ಪಕ್ಷವನ್ನು ಸೇರಲು ನಾನು ಇಷ್ಟಪಡುತ್ತೇನೆ’ ಎಂದು ತಮ್ಮ ಆಸೆಯನ್ನು ಹೊರಹಾಕಿದ್ದಾರೆ.

ವಿಜಯ್ ಮತ್ತು ತ್ರಿಷಾ ಬಗ್ಗೆ ಇಷ್ಟೊಂದು ಚರ್ಚೆ ನಡೆಯಲು ಕಾರಣ ಅವರ ಆನ್-ಸ್ಕ್ರೀನ್ ಕೆಮಿಸ್ಟ್ರಿ. ‘ಗಿಲ್ಲಿ’ ಚಿತ್ರದಿಂದ ಆರಂಭವಾದ ಇವರ ಜೋಡಿ ‘ಲಿಯೋ’ ಚಿತ್ರದವರೆಗೂ ಒಟ್ಟಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದೆ. ಇನ್ನೊಂದೆಡೆ, ವಿಜಯ್ ಮತ್ತು ಅವರ ಪತ್ನಿ ಸಂಗೀತ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ವದಂತಿಗಳು ಕಳೆದ ಒಂದು ವರ್ಷದಿಂದ ಹರಿದಾಡುತ್ತಿದ್ದವು. ಅದು ನಿಜವಾಗಿದೆ. ಸಂಗೀತಾ ಅವರು ಕೋರ್ಟ್​​​ನಲ್ಲಿ ಡಿವೋರ್ಸ್​​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಇದನ್ನೂ ಓದಿ: ‘ವಿಜಯ್ ಆ ಗುಣ ನನಗೆ ಯಾವಾಗಲೂ ಇಷ್ಟ ಆಗಲ್ಲ’; ತ್ರಿಷಾ ಕೃಷ್ಣನ್

ರಾಜಕೀಯ ರಂಗದಲ್ಲಿ ತ್ರಿಷಾ ಎಂಟ್ರಿ?

ತಮಿಳುನಾಡು ಅಸೆಂಬ್ಲಿ ಚುನಾವಣೆಯಲ್ಲಿ ವಿಜಯ್ ಅವರ ‘ಟಿವಿಕೆ’ ಪಕ್ಷ ದೊಡ್ಡ ಮಟ್ಟದ ಗೆಲುವು ಸಾಧಿಸಿದ ಬೆನ್ನಲ್ಲೇ, ತ್ರಿಷಾ ಕೂಡ ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ವಿಜಯ್ ಗೆದ್ದಿರುವ ಎರಡು ಕ್ಷೇತ್ರಗಳಲ್ಲಿ ಒಂದನ್ನು ತ್ಯಜಿಸಬೇಕಿದ್ದು, ಆ ಉಪಚುನಾವಣೆಯಲ್ಲಿ ತ್ರಿಷಾ ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ! – Kannada News | Massive Crocodile Spotted in Tungabhadra River; Panic Grips Honnali’s Sasvihalli Villagers

ದಾವಣಗೆರೆ, ಮೇ 09: ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿಯ ರಾಂಪುರ ಗ್ರಾಮದ ಬಳಿ ತುಂಗಭದ್ರ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ನದಿಯ ದಡದಲ್ಲಿ ಮೊಸಳೆ ಸುತ್ತಾಡುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ನಿತ್ಯ ಸ್ನಾನ ಹಾಗೂ ಬಟ್ಟೆ ಒಗೆಯಲು ನದಿಗೆ ಬರುವ ಗ್ರಾಮಸ್ಥರು ಮತ್ತು ಜಾನುವಾರುಗಳಿಗೆ ಈಗ ಪ್ರಾಣಭಯ ಶುರುವಾಗಿದೆ. ಇದೇ ಪ್ರದೇಶದಲ್ಲಿ ಮರಳು ಗಣಿಗಾರಿಕೆಯೂ ನಡೆಯುತ್ತಿದ್ದು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಮೊಸಳೆಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಕಲ್ಕಿ 2898 ಎಡಿ’ ಸೀಕ್ವೆಲ್ ಬರೋಕೆ ದಿನಾಂಕ ಫಿಕ್ಸ್? ಅಡೆತಡೆ ದಾಟಿದ ತಂಡ – Kannada News | Kalki 2898 AD Part 2: Release Date, Cast Updates and Filming Details

ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಸಿನಿಮಾ 2024ರಲ್ಲಿ ರಿಲೀಸ್ ಆಗಿತ್ತು. ಈ ಸಿನಿಮಾ ಭರ್ಜರಿ ಯಶಸ್ಸು ಕಂಡಿತ್ತು. ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈಗ ಎಲ್ಲರ ಕಣ್ಣು ಪಾರ್ಟ್-2 ಮೇಲಿದೆ. ಆದರೆ, ಎರಡನೇ ಭಾಗದ ಚಿತ್ರೀಕರಣಕ್ಕೆ ಆರಂಭದಲ್ಲೇ ಹಲವು ಅಡೆತಡೆಗಳು ಎದುರಾಗಿದ್ದವು. ಕೊನೆಗೂ ಚಿತ್ರತಂಡ ಅದೆಲ್ಲವನ್ನೂ ದಾಟಿ ಅಖಾಡಕ್ಕೆ ಇಳಿಯಲು ಸಜ್ಜಾಗಿದೆ.

1. ‘ಕಲ್ಕಿ 2’ ತರಲು ನಡೆದಿದೆ ಪ್ಲ್ಯಾನ್

2. 2027ರ ಡಿಸೆಂಬರ್​ನಲ್ಲಿ ರಿಲೀಸ್

3. ಪ್ರಭಾಸ್, ಬಚ್ಚನ್, ಕಮಲ್ ಹಾಸನ್, ಸಾಯಿ ಪಲ್ಲವಿ ಶೂಟ್​ನಲ್ಲಿ ಭಾಗಿ

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದರು. ಅವರು ಎರಡನೇ ಭಾಗದಲ್ಲೂ ಮುಂದುವರಿಯಬೇಕಿತ್ತು. ಆದರೆ, ತಾವು ನಟಿಸೋಲ್ಲ ಎಂದು ನೇರವಾಗಿಯೇ ಹೇಳಿದರು. ಇನ್ನು ಅಮಿತಾಭ್ ಬಚ್ಚನ್ ಅವರಿಗೆ ವಯಸ್ಸಾಗಿದ್ದು, ಸಿನಿಮಾ ಶೂಟಿಂಗ್ ಮಾಡೋದು ಅವರಿಗೆ ತುಂಬಾನೇ ರಿಸ್ಕ್ ಆಗಿರಲಿದೆ. ಈ ಎಲ್ಲಾ ಸಮಸ್ಯೆಗಳಿಗೆ ಚಿತ್ರತಂಡ ಪರಿಹಾರ ಕಂಡುಕೊಂಡಿದೆ ಎನ್ನಲಾಗಿದೆ.

ವರದಿಗಳ ಪ್ರಕಾರ, ಮುಂದಿನ ವರ್ಷದ ಏಪ್ರಿಲ್ ಒಳಗೆ ಪ್ರಮುಖ ತಾರೆಯರಾದ ಪ್ರಭಾಸ್, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಹಾಗೂ ಸಾಯಿ ಪಲ್ಲವಿ (ದೀಪಿಕಾ ಬದಲಿಗೆ) ಅವರ ಭಾಗದ ಚಿತ್ರೀಕರಣ ಪೂರ್ಣಗೊಳ್ಳಲಿದೆಯಂತೆ. ನಾಗ್ ಅಶ್ವಿನ್ ನಿರ್ದೇಶನದ ಈ ಸಿನಿಮಾ ಮೊದಲ ಭಾಗಕ್ಕಿಂತಲೂ ಹೆಚ್ಚು ಅದ್ದೂರಿಯಾಗಿ ಮೂಡಿಬರಲಿದೆ.

‘ಕಲ್ಕಿ-2’ ತಂಡವು 2027ರ ಡಿಸೆಂಬರ್‌ನಲ್ಲಿ ಸಿನಿಮಾವನ್ನು ತೆರೆಗೆ ತರುವ ಗುರಿ ಹೊಂದಿದೆ. ಚಿತ್ರದಲ್ಲಿ ಹೆಚ್ಚಿನ ಗ್ರಾಫಿಕ್ಸ್ ಕೆಲಸಗಳು ಇರುವುದರಿಂದ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಹೆಚ್ಚು ಸಮಯ ನೀಡಲು ಚಿತ್ರತಂಡ ನಿರ್ಧರಿಸಿದೆ. ಸುಪ್ರೀಂ ಯಾಸ್ಕಿನ್ (ಕಮಲ್ ಹಾಸನ್) ಮತ್ತು ಭೈರವ (ಪ್ರಭಾಸ್) ನಡುವಿನ ಅಸಲಿ ಯುದ್ಧ ಈ ಭಾಗದಲ್ಲಿ ಶುರುವಾಗಲಿದೆ. ಅಶ್ವತ್ಥಾಮ (ಅಮಿತಾಭ್ ಬಚ್ಚನ್) ಮತ್ತು ಯಾಸ್ಕಿನ್ ಎದುರುಬದರು ಆಗುವ ದೃಶ್ಯಗಳು ಸಿನಿಮಾದ ಹೈಲೈಟ್ ಆಗಲಿವೆ.

ಇದನ್ನೂ ಓದಿ: ‘ಕಿಂಗ್’ ಸಿನಿಮಾ ಚಿತ್ರೀಕರಣದ ವಿಡಿಯೋ ಲೀಕ್: ಬೀಚ್‌ನಲ್ಲಿ ಶಾರುಖ್, ದೀಪಿಕಾ ರೊಮ್ಯಾನ್ಸ್

ದೀಪಿಕಾ ಬದಲಿಗೆ ಈಗಾಗಲೇ ಸಾಯಿ ಪಲ್ಲವಿ ಅವರ ಆಯ್ಕೆ ನಡೆದಿದೆ. ಪ್ರಭಾಸ್ ಅವರ ಶೂಟಿಂಗ್ ವೇಳೆ ಆ್ಯಕ್ಷನ್ ದೃಶ್ಯಗಳಿದ್ದರೆ ಅದನ್ನು ಡೂಪ್ ಮೂಲಕ ಮಾಡಲು ನಿರ್ಧರಿಸಲಾಗಿದೆ. ಈ ಮೂಲಕ ಅಮಿತಾಭ್ ಬಚ್ಚನ್ ಅವರಿಗೆ ಹೆಚ್ಚು ತೊಂದರೆ ನೀಡದಿರಲು ತಂಡ ನಿರ್ಧರಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Coconut Trees: ಶಾಸ್ತ್ರೋಕ್ತ ವಿಧಿವಿಧಾನ ಅನುಸರಿಸದೇ ತೆಂಗಿನ ಮರವನ್ನು ಕಡಿಯಬಾರದು ಯಾಕೆ? ವಾಸ್ತು ಎಚ್ಚರಿಕೆ ಇಲ್ಲಿದೆ – Kannada News | Understanding the Spiritual Significance of Coconut Trees and Their Auspicious Felling

“ವೃಕ್ಷೋ ರಕ್ಷತಿ ರಕ್ಷಿತಃ” ಎಂಬ ಪುರಾತನ ನುಡಿಯಂತೆ, ಮರಗಳನ್ನು ರಕ್ಷಿಸಿದರೆ ಅವು ನಮ್ಮನ್ನು ರಕ್ಷಿಸುತ್ತವೆ ಎಂಬ ನಂಬಿಕೆ ನಮ್ಮ ಸಂಸ್ಕೃತಿಯಲ್ಲಿದೆ. ಹಿಂದಿನ ಕಾಲದಿಂದಲೂ ಮರಗಳು ಮನುಷ್ಯನಿಗೆ ನೆರಳು, ಆಹಾರ, ಹಣ್ಣು, ಆರೋಗ್ಯ ಮತ್ತು ಆಶ್ರಯವನ್ನು ಒದಗಿಸುತ್ತಾ ಬಂದಿವೆ. ಇಂತಹ ಪೂಜನೀಯ ವೃಕ್ಷಗಳಲ್ಲಿ ತೆಂಗಿನ ಮರಕ್ಕೆ ವಿಶೇಷ ಸ್ಥಾನವಿದೆ, ಇದನ್ನು ಕಲ್ಪವೃಕ್ಷ ಎಂದು ಕರೆಯಲಾಗುತ್ತದೆ. ತೆಂಗಿನ ಮರವು ದೈವಾಂಶ, ದೈವ ಲಹರಿಗಳು ಮತ್ತು ಸಕಾರಾತ್ಮಕ ಶಕ್ತಿಗಳನ್ನು ತನ್ನಲ್ಲಿ ಅಡಗಿಸಿಕೊಂಡಿದೆ ಎಂದು ನಂಬಲಾಗುತ್ತದೆ. ಆದ್ದರಿಂದ ತೆಂಗಿನ ಮರದ ಮಹತ್ವ ಮತ್ತು ಕಡಿಯುವಾಗ ಅನುಸರಿಸಬೇಕಾದ ಶಾಸ್ತ್ರೋಕ್ತ ವಿಧಿವಿಧಾನಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಗುರೂಜಿಯವರು ಹೇಳುವಂತೆ, ತೆಂಗಿನ ಮರವನ್ನು ಕಡಿಯುವ ಅನಿವಾರ್ಯತೆ ಬಂದಾಗ ಕೆಲವು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ಮೊದಲನೆಯದಾಗಿ, ಮರ ಕಡಿಯಲು ಒಂದು ಸೂಕ್ತ ಮುಹೂರ್ತವನ್ನು ನಿಶ್ಚಯಿಸಿಕೊಳ್ಳಬೇಕು. ಮಂಗಳವಾರ, ಶುಕ್ರವಾರ, ಅಮಾವಾಸ್ಯೆ ಮತ್ತು ಹುಣ್ಣಿಮೆಯ ದಿನಗಳಲ್ಲಿ ತೆಂಗಿನ ಮರವನ್ನು ಕಡಿಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ನಿರ್ದಿಷ್ಟ ದಿನಗಳನ್ನು ಹೊರತುಪಡಿಸಿ, ಶುಭ ದಿನವನ್ನು ಆಯ್ಕೆ ಮಾಡಿಕೊಳ್ಳಬೇಕು.

ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ದಂಪತಿಗಳ ಫೋಟೋ ಇಡಬೇಡಿ; ವಾಸ್ತು ಸಲಹೆ ಇಲ್ಲಿದೆ

ಮರ ಕಡಿಯುವ ಮೊದಲು ವೃಕ್ಷ ಪ್ರಾರ್ಥನೆಯನ್ನು ಮಾಡಬೇಕು. ಮರಕ್ಕೆ ಸರಳ ಪೂಜೆ ಸಲ್ಲಿಸಿ, ಗಂಧ, ಅಕ್ಷತೆ, ಹೂವುಗಳನ್ನು ಅರ್ಪಿಸಿ, ಧೂಪ ದೀಪಗಳನ್ನು ಬೆಳಗಿಸಬೇಕು. ಈ ಸಮಯದಲ್ಲಿ ಮರಕ್ಕೆ ಕ್ಷಮಾಪಣೆಯನ್ನು ಕೇಳಬೇಕು. “ನನಗೆ ಬೇರೆ ದಾರಿ ಇಲ್ಲ, ದಯವಿಟ್ಟು ನನ್ನನ್ನು ಕ್ಷಮಿಸು. ನಿನ್ನ ಸ್ಥಾನದಲ್ಲಿ ನಾನು ಇನ್ನೊಂದು ಮರವನ್ನು ನೆಡುತ್ತೇನೆ” ಎಂದು ಪ್ರಮಾಣ ವಚನ ಅಥವಾ ವಾಗ್ದಾನವನ್ನು ಮಾಡಬೇಕು. ಈ ಮರದಲ್ಲಿರುವ ಅಗೋಚರ ಶಕ್ತಿಗಳು ಮತ್ತು ಧನಾತ್ಮಕ ಶಕ್ತಿಗಳು ತಮ್ಮನ್ನು ಕಾಪಾಡಲಿ ಎಂದು ಪ್ರಾರ್ಥಿಸಬೇಕು.

ಶಾಸ್ತ್ರಗಳ ಪ್ರಕಾರ, ಒಂದು ತೆಂಗಿನ ಮರವನ್ನು ಕಡಿಯಬೇಕಾದರೆ, ಅದಕ್ಕೆ ಸಮನಾದ ಮತ್ತೊಂದು ಚಿಕ್ಕ ಮರವನ್ನು ತಂದು, ಅದನ್ನು ಕಡಿಯುವ ಮರದ ಪಕ್ಕದಲ್ಲಿ ಇಟ್ಟು ಪೂಜಿಸಿ, ನಂತರ ಹಳೆಯ ಮರವನ್ನು ಕಡಿಯಬೇಕು. ಅಲ್ಲದೆ, ಒಬ್ಬ ವಿಪ್ರ ಅಥವಾ ಬ್ರಾಹ್ಮಣರನ್ನು ಕರೆಸಿ, ಅವರಿಗೆ ವಸ್ತ್ರದಾನ ಮಾಡಿ, ಊಟ ನೀಡಿ, ಅವರ ಕೈಯಿಂದ ಪೂಜೆ ಮಾಡಿಸಿ, ಅವರ ಸಮ್ಮುಖದಲ್ಲಿ ಮರ ಕಡಿಸಿ, ಹೊಸ ಮರವನ್ನು ನೆಡಿಸುವುದು ಉತ್ತಮ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:17 am, Sat, 9 May 26

Source link

ಚಿನ್ನ ಅಡವಿಟ್ಟ ಗ್ರಾಹಕರಿಗೆ ‘ಮಕ್ಮಲ್ ಟೋಪಿ’! ಕೋಟ್ಯಾಂತರ ರೂ. ವಂಚಿಸಿ ಜ್ಯುವೆಲರಿ ಶಾಪ್ ಮಾಲೀಕ ಪರಾರಿ – Kannada News | Bengaluru Gold Fraud: Raghavendra Jewellery Owner Tejas Gowda Cons Customers; FIR Registered

ತೇಜಸ್ ಗೌಡ ಮತ್ತು ಆತನ ಜ್ಯುವೆಲರಿ ಶಾಪ್

ಬೆಂಗಳೂರು, ಮೇ 09: ಜನರು ಕಷ್ಟ ಅಂತ ತಮ್ಮ ಬೆಲೆಬಾಳುವ ಚಿನ್ನಾಭರಣವನ್ನು (Gold Jewellery)ಅಡವಿಟ್ಟರೆ, ಇಲ್ಲೊಬ್ಬ ಜ್ಯುವೆಲರಿ ಶಾಪ್ ಮಾಲೀಕ ಜನರಿಗೇ ಪಂಗನಾಮ ಹಾಕಿದ್ದಾನೆ. ಬೆಂಗಳೂರಿನಲ್ಲಿ ಕಡಿಮೆ ಬಡ್ಡಿಯ ಆಸೆ ತೋರಿಸಿ ಗ್ರಾಹಕರಿಂದ ಚಿನ್ನ ಪಡೆದ ಆಸಾಮಿ ಈಗ ಅಂಗಡಿ ಬಾಗಿಲು ಮುಚ್ಚಿಕೊಂಡು ಪರಾರಿಯಾಗಿದ್ದಾನೆ.

ಮುಖ್ಯಾಂಶಗಳು

  • ಕಡಿಮೆ ಬಡ್ಡಿ ಆಸೆ ತೋರಿಸಿ ಗ್ರಾಹಕರಿಗೆ ಮೋಸ
  • ತನ್ನ ಶಾಪ್​ನಲ್ಲೇ ಚಿನ್ನ ಅಡವಿರಿಸಿ ಮೋಸ
  • ಶಾಪ್ ಬಂದ್ ಮಾಡಿ ವ್ಯಕ್ತಿ ಪರಾರಿ

ವಂಚನೆಯ ಜಾಲ ಹೇಗಿತ್ತು ಗೊತ್ತಾ?

ರಾಘವೇಂದ್ರ ಜ್ಯುವಲರಿ ಶಾಪ್ ಮಾಲೀಕ ತೇಜಸ್ ಗೌಡ ಅಲಿಯಾಸ್ ಮೂರ್ತಿ ಈ ಹಗರಣದ ಮುಖ್ಯ ಆರೋಪಿ. ಈತ ಒಂದು ತಂಡವನ್ನು ರಚಿಸಿಕೊಂಡು, ವಿವಿಧ ಹಣಕಾಸು ಸಂಸ್ಥೆಗಳಲ್ಲಿ ಯಾರು ಚಿನ್ನ ಅಡವಿಟ್ಟಿದ್ದಾರೆ ಎಂಬ ಮಾಹಿತಿ ಕಲೆಹಾಕುತ್ತಿದ್ದ. ನಂತರ ಅಂತಹ ಗ್ರಾಹಕರನ್ನು ಸಂಪರ್ಕಿಸಿ, ಕಡಿಮೆ ಬಡ್ಡಿಗೆ ಹೆಚ್ಚು ಸಾಲ ನೀಡುತ್ತೇನೆ ಎಂದು ಆಮಿಷ ಒಡ್ಡುತ್ತಿದ್ದ. ಗ್ರಾಹಕರು ನಂಬಿದ ತಕ್ಷಣ, ಅವರು ಅಡವಿಟ್ಟಿದ್ದ ಜಾಗಕ್ಕೆ ಹೋಗಿ ಹಣ ಪಾವತಿಸಿ ಚಿನ್ನ ಬಿಡಿಸುತ್ತಿದ್ದ. ಬಳಿಕ ಆ ಚಿನ್ನವನ್ನು ತನ್ನದೇ ರಾಘವೇಂದ್ರ ಜ್ಯುವಲರಿ ಶಾಪ್‌ನಲ್ಲಿ ಇರಿಸಿಕೊಳ್ಳುತ್ತಿದ್ದ.

ಆರೋಪಿ ಎಸ್ಕೇಪ್!

ಕಳೆದ ಒಂದು ವರ್ಷದಿಂದ ಈ ವ್ಯವಹಾರ ನಡೆಸುತ್ತಿದ್ದ ತೇಜಸ್, 50 ಪೈಸೆ ಬಡ್ಡಿಯ ಆಸೆ ತೋರಿಸಿ ನೂರಾರು ಜನರನ್ನು ವಂಚಿಸಿದ್ದಾನೆ. ಆದರೆ, ಕಳೆದ ಮೂರು ತಿಂಗಳಿಂದ ಜ್ಯುವಲರಿ ಶಾಪ್ ಕ್ಲೋಸ್ ಮಾಡಿದ್ದಾನೆ. ಅಡವಿಟ್ಟ ಚಿನ್ನ ಬಿಡಿಸಲು ಹೋದ ಗ್ರಾಹಕರಿಗೆ ಅಂಗಡಿ ಮುಚ್ಚಿರುವುದು ಕಂಡುಬಂದಿದೆ. ಈ ನಡುವೆ ಜ್ಯುವಲರಿ ಶಾಪ್ ಮುಚ್ಚಿದ ಮೇಲೆ ಹೊಸದಾಗಿ ಫೈನಾನ್ಸ್ ಕಂಪನಿಯೊಂದನ್ನು ಆರಂಭಿಸಿದ್ದ ತೇಜಸ್, ಕಳೆದ ಒಂದು ವಾರದಿಂದ ಅದಕ್ಕೂ ಬೀಗ ಜಡಿದು ನಾಪತ್ತೆಯಾಗಿದ್ದಾನೆ.

ಇದನ್ನೂ ಓದಿ ಲಂಚ ಪಡೆಯುತ್ತಿದ್ದಾಗ ರೆಡ್​ ಹ್ಯಾಂಡೆಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್​ಪೆಕ್ಟರ್!

ಲಕ್ಷಾಂತರ ರೂಪಾಯಿ ವಂಚನೆ

ಯಲಹಂಕ ಅಳ್ಳಾಳಸಂದ್ರ ನಿವಾಸಿ ಸೌಮ್ಯಲತಾ ಎಂಬಾಕೆಗೆ ಈತ ಬರೋಬ್ಬರಿ 50 ಲಕ್ಷಕ್ಕೂ ಅಧಿಕ ಮೊತ್ತದ ವಂಚನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ವಿವಿಧ ಖಾಸಗಿ ಫೈನಾನ್ಸ್ ಕಂಪನಿಗಳಲ್ಲಿ ಸೌಮ್ಯಲತಾ ಅವರು ಇಟ್ಟಿದ್ದ ಚಿನ್ನವನ್ನು ಬಿಡಿಸಿದ್ದ ತೇಜಸ್, ನಂತರ ಅದನ್ನು ತನ್ನಲ್ಲಿಯೇ ಇಟ್ಟುಕೊಂಡು ವಂಚಿಸಿದ್ದಾನೆ. ಇದರಿಂದ ಕಂಗಾಲಾದ ಸೌಮ್ಯಲತಾ ಅವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಸೌಮ್ಯಲತಾ ಅವರ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಎಫ್‌ಐಆರ್ ದಾಖಲಾಗುತ್ತಿದ್ದಂತೆಯೇ ತೇಜಸ್ ಗೌಡ ತಲೆಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಐಪಿಎಲ್ ತಂಡಗಳಿಗೆ 7 ಪುಟಗಳ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ – Kannada News | IPL 2026: BCCI Issues Strict 7 Page Security Code for Teams

ಇಂಡಿಯನ್ ಪ್ರೀಮಿಯರ್ ಲೀಗ್ (IPL) ವೇಳೆ ಆಟಗಾರರ ಸುರಕ್ಷತೆ ಮತ್ತು ಪಂದ್ಯದ ಪಾರದರ್ಶಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮಹತ್ವದ ಹೆಜ್ಜೆ ಇರಿಸಿದೆ. ಇತ್ತೀಚಿನ ದಿನಗಳಲ್ಲಿ ಕಂಡುಬಂದ ಕೆಲವು ಅಶಿಸ್ತಿನ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ, ಎಲ್ಲಾ 10 ಫ್ರಾಂಚೈಸಿಗಳಿಗೆ 7 ಪುಟಗಳ ವಿಸ್ತೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಮಾರ್ಗಸೂಚಿಯ ಪ್ರಮುಖ ಅಂಶಗಳು ಇಲ್ಲಿವೆ:

ಹನಿ ಟ್ರ್ಯಾಪ್ ಬಗ್ಗೆ ಎಚ್ಚರಿಕೆ: ಆಟಗಾರರು ಮತ್ತು ಸಿಬ್ಬಂದಿಗಳು ‘ಹನಿ ಟ್ರ್ಯಾಪ್’ ಜಾಲಕ್ಕೆ ಬೀಳದಂತೆ ಬಿಸಿಸಿಐ ಎಚ್ಚರಿಸಿದೆ. ಅಪರಿಚಿತ ವ್ಯಕ್ತಿಗಳೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಹೊರಗಡೆ ವ್ಯವಹರಿಸುವಾಗ ಹೆಚ್ಚಿನ ಜಾಗರೂಕತೆ ವಹಿಸುವಂತೆ ಸೂಚಿಸಲಾಗಿದೆ.

ಹೋಟೆಲ್ ಕೊಠಡಿಗಳಿಗೆ ನಿರ್ಬಂಧ: ತಂಡದ ವ್ಯವಸ್ಥಾಪಕರ ಪೂರ್ವಾನುಮತಿ ಇಲ್ಲದೆ ಯಾವುದೇ ಹೊರಗಿನ ವ್ಯಕ್ತಿಗಳು ಆಟಗಾರರ ಅಥವಾ ಕೋಚಿಂಗ್ ಸಿಬ್ಬಂದಿಯ ಹೋಟೆಲ್ ಕೊಠಡಿಗಳಿಗೆ ಪ್ರವೇಶಿಸುವಂತಿಲ್ಲ. ಭೇಟಿಗಾಗಿ ಹೋಟೆಲ್‌ನ ಸಾರ್ವಜನಿಕ ಸ್ಥಳಗಳನ್ನು ಮಾತ್ರ ಬಳಸಲು ಸೂಚಿಸಲಾಗಿದೆ.

ಸಂಚಾರಕ್ಕೆ ಅನುಮತಿ ಕಡ್ಡಾಯ: ಆಟಗಾರರು ಅಥವಾ ಸಿಬ್ಬಂದಿ ಹೋಟೆಲ್ ಆವರಣದಿಂದ ಹೊರಗೆ ಹೋಗಬೇಕಾದಲ್ಲಿ, ನಿಯೋಜಿತ ಭದ್ರತಾ ಸಂಪರ್ಕ ಅಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಎಲ್ಲಿಗೆ ಹೋಗುತ್ತಿದ್ದಾರೆ ಎಂಬ ಮಾಹಿತಿಯನ್ನು ನೀಡುವುದು ಕಡ್ಡಾಯ.

ಮಾನ್ಯತಾ ಕಾರ್ಡ್‌ಗಳ ಬಳಕೆ: ಸ್ಟೇಡಿಯಂ, ಹೋಟೆಲ್ ಮತ್ತು ಅಭ್ಯಾಸದ ಅವಧಿಯಲ್ಲಿ ಆಟಗಾರರು, ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವಾಗಲೂ ತಮ್ಮ ಮಾನ್ಯತಾ ಕಾರ್ಡ್‌ಗಳನ್ನು (Accreditation Cards) ಧರಿಸಿರಬೇಕು. ಇದು ಭದ್ರತಾ ತಪಾಸಣೆಯನ್ನು ಸುಗಮಗೊಳಿಸಲು ಸಹಕಾರಿ.

ಮಾಲೀಕರಿಗೆ ಡಗೌಟ್ ನಿರ್ಬಂಧ: ಪಂದ್ಯ ನಡೆಯುತ್ತಿರುವ ಸಮಯದಲ್ಲಿ ತಂಡದ ಮಾಲೀಕರು ಡಗೌಟ್‌ನಲ್ಲಿರುವ ಆಟಗಾರರು ಅಥವಾ ಮ್ಯಾನೇಜರ್‌ಗಳೊಂದಿಗೆ ಸಂವಹನ ನಡೆಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಪಂದ್ಯದ ಮೇಲೆ ಯಾವುದೇ ಬಾಹ್ಯ ಪ್ರಭಾವ ಬೀರದಂತೆ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕೃನಾಲ್ ಪಾಂಡ್ಯ ಕಾಲರ್ ಪಟ್ಟಿ ಹಿಡಿದ ನಿಕೋಲಸ್ ಪೂರನ್!

ಬಿಸಿಸಿಐ ಈ ನಿರ್ಧಾರಕ್ಕೆ ಕಾರಣವೇನು?

ಐಪಿಎಲ್‌ನಂತಹ ದೊಡ್ಡ ಮಟ್ಟದ ಟೂರ್ನಿಯಲ್ಲಿ ಭ್ರಷ್ಟಾಚಾರ ಮತ್ತು ಫಿಕ್ಸಿಂಗ್‌ನಂತಹ ಚಟುವಟಿಕೆಗಳು ನಡೆಯದಂತೆ ತಡೆಯುವುದು ಬಿಸಿಸಿಐನ ಮುಖ್ಯ ಉದ್ದೇಶವಾಗಿದೆ.

ಪ್ರಸಕ್ತ ಸೀಸನ್‌ನಲ್ಲಿ ಆಟಗಾರರು, ಸಿಬ್ಬಂದಿ ಮತ್ತು ತಂಡದ ಅಧಿಕಾರಿಗಳಿಂದ ಹಲವಾರು “ಅಕ್ರಮಗಳು” ಮತ್ತು ಭದ್ರತಾ ನಿಯಮಗಳ ಉಲ್ಲಂಘನೆ ನಡೆದಿರುವುದು ಬಿಸಿಸಿಐ ಗಮನಕ್ಕೆ ಬಂದಿದೆ.

ಇದೀಗ ಟೂರ್ನಿಯ ಘನತೆಗೆ, ಆಟಗಾರರ ಖಾಸಗಿತನಕ್ಕೆ ಮತ್ತು ಭದ್ರತೆಗೆ ಯಾವುದೇ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಈ ನಿಯಮಗಳನ್ನು ಜಾರಿಗೆ ತರಲಾಗಿದೆ. ಈ ನಿಯಮಗಳನ್ನು ಉಲ್ಲಂಘಿಸುವ ತಂಡ ಅಥವಾ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಸಿಸಿಐ ಎಚ್ಚರಿಕೆ ನೀಡಿದೆ.

Source link

KKR ಪರ ಇಂತಹದೊಂದು ಶತಕ ಯಾರೂ ಬಾರಿಸಿಲ್ಲ..! – Kannada News | Finn Allen Creates New History for KKR

ಕೊಲ್ಕತ್ತಾ ನೈಟ್ ರೈಡರ್ಸ್ ಪರ ಹೊಸ ಇತಿಹಾಸ ನಿರ್ಮಾಣವಾಗಿದೆ. ಹೊಸ ಇತಿಹಾಸ ಬರೆದಿದ್ದು ಮತ್ಯಾರೂ ಅಲ್ಲ, ಸ್ಫೋಟಕ ದಾಂಡಿಗ ಫಿನ್ ಅಲೆನ್ (Finn Allen). ಅದು ಸಹ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಂಚುರಿ ಸಿಡಿಸುವ ಮೂಲಕ. ಈ ಶತಕದೊಂದಿಗೆ ಅಲೆನ್ ಕೆಕೆಆರ್ ಪರ ಯಾರಿಂದಲೂ ಸಾಧ್ಯವಾಗದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. (PC: IPL)

Source link

ತಮಿಳುನಾಡಿನಲ್ಲಿ ಇಂದೂ ಸರ್ಕಾರ ರಚನೆ ಅನುಮಾನ; 2 ಶಾಸಕರಿರುವ ವಿಸಿಕೆ ಮೇಲೆ ನಿಂತಿದೆ ಟಿವಿಕೆ ಭವಿಷ್ಯ – Kannada News | Tamil Nadu Government Formation Crisis TVK Chief Vijay waiting for VCK support

ಚೆನ್ನೈ, ಮೇ 9: ತಮಿಳುನಾಡಿನಲ್ಲಿ ಟಿವಿಕೆ ಎಂಬ ಹೊಸ ಪಕ್ಷ ಕಟ್ಟಿ ಮೊದಲ ಚುನಾವಣೆಯಲ್ಲೇ ಬರೋಬ್ಬರಿ 108 ಸ್ಥಾನಗಳನ್ನು ಪಡೆದ ವಿಜಯ್ (Vijay) ಅವರಿಗೆ ಬಹುಮತ ಲಭಿಸದ ಹಿನ್ನೆಲೆಯಲ್ಲಿ ಎಡಪಕ್ಷಗಳ ಕೈಗೊಂಬೆಯಾಗುವಂತಾಗಿದೆ. ವಿಜಯ್ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವುದರಿಂದಾಗಿ ಟಿವಿಕೆ ಬಳಿ ಈಗಿರುವ ಸಂಖ್ಯೆ 107. ಇದರ ಜೊತೆ ಕಾಂಗ್ರೆಸ್​ನ 5, ಸಿಪಿಐನ 2, ಸಿಪಿಎಂನ 2 ಸ್ಥಾನಗಳು ಸೇರಿ ವಿಜಯ್ ಅವರಿಗೆ ಇರುವ ಸಂಖ್ಯೆ 116 ಆಗಿದೆ. ಆದರೆ, ಸರ್ಕಾರ ರಚನೆಗೆ ವಿಜಯ್​ಗೆ 118 ಸ್ಥಾನಗಳು ಬೇಕಾಗಿವೆ. ಒಂದುವೇಳೆ ವಿಸಿಕೆ ತನ್ನ ಬಳಿ ಇರುವ ಇಬ್ಬರು ಶಾಸಕರ ಬೆಂಬಲ ಘೋಷಿಸಿದರೆ ಮಾತ್ರ ವಿಜಯ್ ಮುಖ್ಯಮಂತ್ರಿಯಾಗಲು ಸಾಧ್ಯ. ಹೀಗಾಗಿ, ವಿಸಿಕೆ ಈ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳುತ್ತಿದೆ. ನಿನ್ನೆ ವಿಜಯ್​ಗೆ ಬೆಂಬಲ ಘೋಷಿಸಿದಾಗಿನಿಂದ ವಿಸಿಕೆ ಟ್ವಿಟ್ಟರ್​ ಹ್ಯಾಂಡಲ್ ಬ್ಲಾಕ್ ಆಗಿತ್ತು.

ಇದೀಗ ವಿಸಿಕೆ ಸಭೆಯನ್ನು ನಡೆಸುತ್ತಿದ್ದು, ಈ ಸಭೆಯ ಬಳಿಕ ವಿಜಯ್ ಅವರಿಗೆ ಬೆಂಬಲ ನೀಡುತ್ತದೆಯೋ ಇಲ್ಲವೋ ಎಂಬುದು ಸ್ಪಷ್ಟವಾಗಲಿದೆ. ಒಂದುವೇಳೆ ಟಿವಿಕೆಗೆ ಬೆಂಬಲ ನೀಡುವುದಾದರೂ ವಿಸಿಕೆ ತನಗೆ ಡಿಸಿಎಂ ಹುದ್ದೆ ಬೇಕೆಂದು ಬೇಡಿಕೆ ಇಡುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ, 108 ಸ್ಥಾನಗಳನ್ನು ಪಡೆದರೂ ಟಿವಿಕೆ 2 ಸ್ಥಾನಗಳನ್ನು ಪಡೆದ ಪಕ್ಷಗಳ ಮುಂದೆ ಮಂಡಿಯೂರುವಂತಾಗಿದೆ.

ಇದನ್ನೂ ಓದಿ: Vijay Swearing-In: ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

ನಿನ್ನೆ ವಿಜಯ್ ಅವರಿಗೆ ವಿಸಿಕೆ ಜೊತೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕೂಡ ಬೆಂಬಲ ಘೋಷಿಸಿದ್ದರಿಂದ ಬಹುಮತದ ಬಗ್ಗೆ ತಲೆಬಿಸಿ ಇರಲಿಲ್ಲ. ಆದರೆ, ಇದ್ದಕ್ಕಿದ್ದಂತೆ ನಿನ್ನೆ ರಾತ್ರಿ ಮುಸ್ಲಿಂ ಲೀಗ್ ತಾನು ಡಿಎಂಕೆ ನೇತೃತ್ವದ ಮೈತ್ರಿಕೂಟದ ಜೊತೆಯೇ ಇರುತ್ತೇನೆ ಎಂದು ಘೋಷಿಸುವ ಮೂಲಕ ಟಿವಿಕೆಗೆ ನೀಡಿದ್ದ ಬೆಂಬಲವನ್ನು ಹಿಂಪಡೆದಿತ್ತು. ಇತ್ತ ವಿಸಿಕೆ ಕೂಡ ಅಡ್ಡ ಗೋಡೆಯ ಮೇಲೆ ದೀಪವಿಟ್ಟಂತೆ ವರ್ತಿಸುತ್ತಿರುವುದರಿಂದಾಗಿ ತಮಿಳುನಾಡಿನಲ್ಲಿ ಇಂದು ಸರ್ಕಾರ ರಚನೆಯಾಗಲಿದೆಯಾ, ಇಲ್ಲವಾ ಎಂಬ ಪ್ರಶ್ನೆ ಇನ್ನೂ ನಿಗೂಢವಾಗಿಯೇ ಉಳಿದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:55 am, Sat, 9 May 26

Source link

Delhi Capitals: ಏಳು ಸೋಲಿನ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ತಲುಪಬಹುದೇ?: ಇಲ್ಲಿದೆ ಲೆಕ್ಕಾಚಾರ – Kannada News | DC IPL 2026 Can Delhi Capitals reach the playoffs despite seven losses?: Here’s the calculation

ಬೆಂಗಳೂರು (ಮೇ. 09): ಐಪಿಎಲ್ 2026 ರ 11 ನೇ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ಮುಂದಿನ ಹಾದಿ ತುಂಬಾ ಕಷ್ಟಕರವಾಗಿದೆ. ಶುಕ್ರವಾರ ತಮ್ಮ ತವರು ಮೈದಾನವಾದ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 8 ವಿಕೆಟ್‌ಗಳ ಹೀನಾಯ ಸೋಲನ್ನು ಅನುಭವಿಸಿತು. ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು, ಡೆಲ್ಲಿ ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 142 ರನ್‌ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.

ಕೋಲ್ಕತ್ತಾ ತಂಡಕ್ಕೆ ಗೆಲುವು

143 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ತಂಡಕ್ಕೆ ದೆಹಲಿ ತಂಡ ಆರಂಭಿಕ ಹೊಡೆತ ನೀಡಿತು, ಆದರೆ ಗೆಲುವು ಸಾಧಿಸಲು ಅವು ಸಾಕಾಗಲಿಲ್ಲ. ದೆಹಲಿಯ ಬೌಲರ್‌ಗಳು ಮೊದಲ ನಾಲ್ಕು ಓವರ್‌ಗಳಲ್ಲಿ ರಹಾನೆ (13) ಮತ್ತು ಅಂಗ್‌ಕ್ರಿಶ್ ರಘುವಂಶಿ (1) ಅವರನ್ನು ಔಟ್ ಮಾಡಿದರು, ಆದರೆ ನಂತರ, ದೆಹಲಿ ಯಾವುದೇ ಯಶಸ್ಸನ್ನು ಕಾಣಲಿಲ್ಲ. ಕೆಕೆಆರ್ ಈ ಸಣ್ಣ ಗುರಿಯನ್ನು ಸುಲಭವಾಗಿ ಬೆನ್ನಟ್ಟಿ ದೆಹಲಿ ಅಭಿಮಾನಿಗಳನ್ನು ನಿರಾಶೆಗೊಳಿಸಿತು. ಈ ಋತುವಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ನ ಏಳನೇ ಸೋಲು ಇದು, ಈ ಸೋಲಿನ ಮೂಲಕ ಅವರ ಪ್ಲೇಆಫ್ ಆಸೆ ತೂಗುಯ್ಯಾಲೆಯಲ್ಲಿದೆ.

ದೆಹಲಿ ತಂಡಕ್ಕೆ ಬೇಕು 14 ಅಂಕ

ಪಾಯಿಂಟ್ ಟೇಬಲ್ ಬಗ್ಗೆ ಹೇಳುವುದಾದರೆ, ಡೆಲ್ಲಿ ತಂಡವು ಈಗ 11 ಪಂದ್ಯಗಳಿಂದ ಕೇವಲ 8 ಅಂಕಗಳನ್ನು ಮಾತ್ರ ಹೊಂದಿದೆ. ಅಕ್ಷರ್ ಪಟೇಲ್ ನಾಯಕತ್ವದ ತಂಡವು ಲೀಗ್ ಹಂತದಲ್ಲಿ ಕೇವಲ ಮೂರು ಪಂದ್ಯಗಳನ್ನು ಮಾತ್ರ ಹೊಂದಿದೆ. ಡೆಲ್ಲಿ ತನ್ನ ಮೂರು ಪಂದ್ಯಗಳನ್ನು ಗೆದ್ದರೆ, ಅದು ಗರಿಷ್ಠ 14 ಅಂಕಗಳನ್ನು ತಲುಪಬಹುದು.

ಪ್ಲೇಆಫ್‌ಗೆ ಹೋಗುವ ಹಾದಿ ಕಷ್ಟಕರ

14 ಅಂಕಗಳು ಪ್ಲೇಆಫ್ ಸ್ಥಾನವನ್ನು ಖಾತರಿಪಡಿಸದಿದ್ದರೂ, ಡೆಲ್ಲಿ ಲೆಕ್ಕಚಾರದ ಸ್ಪರ್ಧೆಯಲ್ಲಿದೆ. ಪ್ರತಿಯೊಂದು ಪಂದ್ಯವೂ ಈಗ ತಂಡಕ್ಕೆ ಮಾಡು-ಇಲ್ಲ-ಮಡಿ ವಿಷಯವಾಗಿದೆ, ಒಂದೇ ಒಂದು ಸೋಲು ಅವರನ್ನು ಪಂದ್ಯಾವಳಿಯಿಂದ ಹೊರಬೀಳಬಹುದು.

DC vs KKR: ಪೋಸ್ಟ್ ಮ್ಯಾಚ್​ನಲ್ಲಿ ಭಾವುಕರಾದ ಅಕ್ಷರ್ ಪಟೇಲ್

ಪಂಜಾಬ್ ವಿರುದ್ಧ ಮುಂದಿನ ಪಂದ್ಯ

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಂದಿನ ಪಂದ್ಯವು ಮೇ 11, ಸೋಮವಾರದಂದು ಧರ್ಮಶಾಲಾ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯಲಿದೆ. ನಂತರ ಅವರು ಮೇ 17 ರಂದು ತಮ್ಮ ತವರಿನಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದ್ದಾರೆ. ನಂತರ ಡೆಲ್ಲಿ ತಂಡವು ಮೇ 24 ರಂದು ಈಡನ್ ಗಾರ್ಡನ್ಸ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತನ್ನ ಅಭಿಯಾನವನ್ನು ಕೊನೆಗೊಳಿಸಲಿದೆ.

ಇತರ ತಂಡಗಳ ಫಲಿತಾಂಶ

ತಂಡವು ತಮ್ಮ ಪಂದ್ಯಗಳನ್ನು ಗೆಲ್ಲುವುದು ಮಾತ್ರವಲ್ಲದೆ ಇತರ ತಂಡಗಳ ಫಲಿತಾಂಶಗಳನ್ನು ಸಹ ಅವಲಂಬಿಸಬೇಕಾಗಿರುವುದರಿಂದ ತಂಡವು ಕಠಿಣ ಸವಾಲನ್ನು ಎದುರಿಸುತ್ತಿದೆ. ಒಟ್ಟಾರೆಯಾಗಿ, ಡೆಲ್ಲಿ ಕ್ಯಾಪಿಟಲ್ಸ್‌ನ ಚೇತರಿಕೆಯ ಹಾದಿ ಈಗ ಕಿರಿದಾಗಿದೆ. ಅಕ್ಷರ್ ಪಟೇಲ್ ಸೈನ್ಯವು ಮ್ಯಾಜಿಕ್ ಪ್ರದರ್ಶಿಸಲಿ ಮತ್ತು ಉಳಿದ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ, ಇಲ್ಲದಿದ್ದರೆ 2026 ರ ಸೀಸನ್ ದೆಹಲಿಗೆ ದುಃಸ್ವಪ್ನದಂತೆ ಕೊನೆಗೊಳ್ಳಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗುಲ್ಬರ್ಗಾ ವಿವಿ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ: ಬಿಇಡಿ ಅಂಕ ಹಗರಣ ಬಯಲಿಗೆಳೆದಿದ್ದೇ ಮುಳುವಾಯ್ತು – Kannada News | Gulbarga University VC Prof. Shashikanth Receives Acid Attack Threat Over B.Ed Scam Investigation

ಪ್ರೊ. ಶಶಿಕಾಂತ್ & ಗುಲ್ಬರ್ಗಾ ವಿವಿImage Credit source: tv9

ಕಲಬುರಗಿ, ಮೇ 9: ಗುಲ್ಬರ್ಗಾ ವಿಶ್ವವಿದ್ಯಾಲಯದ (Gulbarga University) ಕುಲಪತಿ ಪ್ರೊ. ಶಶಿಕಾಂತ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಪತ್ರ ಬರೆದಿದ್ದಾನೆ. 2024ರಲ್ಲಿ ನಡೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ನಡೆದಿದ್ದ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ಕುಲಪತಿಗಳು ಪತ್ತೆಹಚ್ಚಿ ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ಈ ಬೆದರಿಕೆ ಹಾಕಲಾಗಿದೆ. ವಿಶ್ವವಿದ್ಯಾಲಯದ ಇತಿಹಾಸದಲ್ಲೇ ಕುಲಪತಿಗಳ ವಿರುದ್ಧ ಈ ಮಟ್ಟದ ಬೆದರಿಕೆ ಬಂದಿರುವುದು ಇದೇ ಮೊದಲಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಮುಖ್ಯಾಂಶಗಳು

  • 2024ರ ಬಿಇಡಿ ಮೌಲ್ಯಮಾಪನ ಅಕ್ರಮ ಪತ್ತೆಹಚ್ಚಿದ್ದ ಕುಲಪತಿ ಪ್ರೊ. ಶಶಿಕಾಂತ್.
  • ಅಂಕ ತಿದ್ದುಪಡಿ ಹಗರಣದ ಬಗ್ಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ.
  • ಮರುಮೌಲ್ಯಮಾಪನದಲ್ಲಿ ಫೇಲ್ ಆದರೆ ಮುಖಕ್ಕೆ ಆ್ಯಸಿಡ್ ಹಾಕುವುದಾಗಿ ಅನಾಮಧೇಯ ಬೆದರಿಕೆ.

ಅಕ್ರಮಕ್ಕೆ ತಡೆಯೊಡ್ಡಿದ್ದೇ ಮುಳುವಾಯಿತೇ?

ಕಳೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವುದು ವಿವಿಯ ಆಂತರಿಕ ಸಮಿತಿಯ ವರದಿಯಿಂದ ದೃಢಪಟ್ಟಿತ್ತು. ಕುಲಪತಿಗಳು ಈ ವಿಷಯವನ್ನು ತಕ್ಷಣವೇ ಸರ್ಕಾರ ಮತ್ತು ರಾಜ್ಯಪಾಲರ ಗಮನಕ್ಕೆ ತಂದಿದ್ದರು. ರಾಜ್ಯಪಾಲರ ಆದೇಶದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆಯಾಗಿದ್ದು, ಸಮಿತಿಯ ಸೂಚನೆಯ ಮೇರೆಗೆ ಸದ್ಯ ಮರುಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ. ಈ ಮರುಮೌಲ್ಯಮಾಪನದಿಂದಾಗಿ ಅಕ್ರಮವಾಗಿ ಅಂಕ ಪಡೆದವರಿಗೆ ಸಂಕಷ್ಟ ಎದುರಾಗಿದೆ.

ಬೆದರಿಕೆ ಪತ್ರದಲ್ಲೇನಿತ್ತು?

‘2 ಲಕ್ಷ ರೂಪಾಯಿ ನೀಡಿ ಬಿಇಡಿ ಪ್ರವೇಶ ಪಡೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ವಿವಿಯ ಸತ್ಯಶೋಧನಾ ಸಮಿತಿಯ ನಿರ್ಧಾರ ನಮಗೆ ಇಷ್ಟವಾಗಿಲ್ಲ. ಒಂದು ವೇಳೆ ಮರುಮೌಲ್ಯಮಾಪನದಿಂದಾಗಿ ಅಂಕಗಳು ಕಡಿಮೆಯಾದರೆ ಅಥವಾ ನಾವು ಅನುತ್ತೀರ್ಣರಾದರೆ, ನಿಮ್ಮ ಮುಖಕ್ಕೆ ಆ್ಯಸಿಡ್ ಹಾಕಿ ನರಳಿ ಬದುಕುವಂತೆ ಮಾಡುತ್ತೇವೆ’ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಹಣ ಕೊಟ್ಟವರಿಗೆ ಬೇಕಾಬಿಟ್ಟಿ ಅಂಕ: ಗುಲಬರ್ಗಾ ವಿವಿಯ ಕರ್ಮಕಾಂಡ ಬಯಲು

ಈ ಅನಾಮಧೇಯ ಪತ್ರದಿಂದ ಆತಂಕಗೊಂಡ ಕುಲಪತಿಗಳು ನ್ಯಾಯಾಲಯದ ಮೊರೆ ಹೋಗಿದ್ದು, ಈಗ ಕೋರ್ಟ್ ನಿರ್ದೇಶನದಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link