ಡಾ. ರಾಜ್ಕುಮಾರ್ ಅಪಹರಣ ಪ್ರಕರಣ: ವೀರಪ್ಪನ್ ಸಹಚರರ ಖುಲಾಸೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್ – Kannada News | Madras High Court upholds acquittal of Veerappan associates in Dr Rajkumar abduction case
ಕನ್ನಡದ ವರನಟ ಡಾ. ರಾಜ್ಕುಮಾರ್ (Dr Rajkumar) ಅವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕಾಡುಗಳ್ಳ ವೀರಪ್ಪನ್ನ (Veerappan) ಒಂಬತ್ತು ಮಂದಿ ಸಹಚರರನ್ನು ಖುಲಾಸೆಗೊಳಿಸಿ ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಮದ್ರಾಸ್ ಹೈಕೋರ್ಟ್ ಬುಧವಾರ (ಫೆಬ್ರವರಿ 26) ವಜಾಗೊಳಿಸಿದೆ. ಇದರೊಂದಿಗೆ, 2018ರಲ್ಲಿ ಗೋಪಿಶೆಟ್ಟಿಪಾಳ್ಯದ ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪನ್ನು ಹೈಕೋರ್ಟ್ (Madras High Court) ಎತ್ತಿಹಿಡಿದಂತಾಗಿದೆ. ನ್ಯಾಯಮೂರ್ತಿಗಳಾದ ಪಿ. ವೇಲ್ಮುರುಗನ್ ಮತ್ತು ಎಂ. ಜ್ಯೋತಿರಾಮನ್ ಅವರನ್ನೊಳಗೊಂಡ ವಿಭಾಗೀಯ ಪೀಠವು…