Headlines

nagaraj11081993

ವಿಡಿಯೋ: ರಶ್ಮಿಕಾ ಮದುವೆ ಕುರಿತ ಪ್ರಶ್ನೆಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ಹೀಗಿತ್ತು ನೋಡಿ – Kannada News | Rishab Shetty avoid question about Rashmika Mandanna’s marriage

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಮದುವೆ ಅದ್ಧೂರಿಯಾಗಿ ನಡೆಯುತ್ತಿದೆ. ಕುಟುಂಬ ಸದಸ್ಯರು, ಆಪ್ತರು ಮದುವೆಯಲ್ಲಿ ಭಾಗವಹಿಸುತ್ತಿದ್ದಾರೆ. ರಕ್ಷಿತ್ ಶೆಟ್ಟಿ ಜೊತೆಗಿನ ನಿಶ್ಚಿತಾರ್ಥ ಮುರಿದು ಬಿದ್ದ ಬಳಿಕ ರಶ್ಮಿಕಾ, ವಿಜಯ್ ದೇವರಕೊಂಡ ಅವರನ್ನು ಪ್ರೀತಿಸಿ ಇದೀಗ ವಿವಾಹ ಆಗುತ್ತಿದ್ದಾರೆ. ರಶ್ಮಿಕಾರ ಯಶಸ್ಸಿಗೆ ಕಾರಣಕರ್ತರಾದ ಶೆಟ್ಟಿ ಗ್ಯಾಂಗಿನ ಸದಸ್ಯರ್​ಯಾರನ್ನೂ ಸಹ ರಶ್ಮಿಕಾ ಮದುವೆಗೆ ಆಮಂತ್ರಿಸಿಲ್ಲ. ಇತ್ತೀಚೆಗಷ್ಟೆ ಈ ಬಗ್ಗೆ ಪ್ರಮೋದ್ ಶೆಟ್ಟಿ ಮಾತನಾಡಿ, ತಮಾಷೆ ಮಾಡಿದ್ದರು. ಇದೀಗ ನಟ ರಿಷಬ್ ಶೆಟ್ಟಿ ಮಂತ್ರಾಲಯಕ್ಕೆ ಭೇಟಿ ನೀಡಿದ್ದು,…

Read More

Vastu Tips: ಅಡುಗೆಮನೆಯಲ್ಲಿರುವ ಈ ವಸ್ತುಗಳೇ ಆರ್ಥಿಕ ನಷ್ಟ ಹಾಗೂ ಅನಾರೋಗ್ಯಕ್ಕೆ ಕಾರಣ! – Kannada News | Vastu Tips for Your Kitchen: Things to Avoid for Health and Prosperity

ಮನೆಯಲ್ಲಿ ಅತ್ಯಂತ ಪ್ರಮುಖ ಮತ್ತು ಶಕ್ತಿಶಾಲಿ ಸ್ಥಳಗಳಲ್ಲಿ ಅಡಿಗೆಮನೆ ಒಂದಾಗಿದೆ. ಅಡಿಗೆಮನೆಯು ಕೇವಲ ಅಡುಗೆಯನ್ನು ತಯಾರಿಸುವ ಸ್ಥಳವಲ್ಲ, ಇದು ನಮ್ಮ ದೇಹಕ್ಕೆ ಶಕ್ತಿ, ಒಳ್ಳೆಯ ಆಲೋಚನೆಗಳು ಮತ್ತು ನಿರ್ದಿಷ್ಟವಾಗಿ ಆರೋಗ್ಯವನ್ನು ಒದಗಿಸುವ ಕೇಂದ್ರವಾಗಿದೆ. ಆರೋಗ್ಯವಿದ್ದಾಗ ಮಾತ್ರ ನಮ್ಮ ಶ್ರೇಯಸ್ಸು, ಕೀರ್ತಿ ಮತ್ತು ಪ್ರತಿಷ್ಠೆ ಹೆಚ್ಚುತ್ತವೆ. ಆರೋಗ್ಯ ನಷ್ಟವಾದರೆ ಎಲ್ಲವೂ ಕಳೆದುಹೋಗುತ್ತದೆ ಎಂಬುದನ್ನು ಮರೆಯಬಾರದು. ಈ ಆರೋಗ್ಯವನ್ನು ಸೃಷ್ಟಿಸುವ ಶಕ್ತಿ ಅಡಿಗೆಮನೆಯಲ್ಲಿದೆ. ಹಾಗಾಗಿ ಅಡಿಗೆಮನೆಯಲ್ಲಿ ಇರಬಾರದ ವಸ್ತುಗಳು ಮತ್ತು ಸ್ಥಿತಿಗಳ ಬಗ್ಗೆ ತಿಳಿಯುವುದು ಬಹಳ ಮುಖ್ಯ ಎಂದು ಖ್ಯಾತ…

Read More

Optical Illusion: ಈ ಚಿತ್ರದಲ್ಲಿದೆ ಮನೆಯ ಮುದ್ದಿನ ಶ್ವಾನ, 7 ಸೆಕೆಂಡುಗಳಲ್ಲಿ ಕಂಡು ಹಿಡಿಯಬಲ್ಲಿರಾ – Kannada News | Optical Illusion: Can you find the hidden dog in this picture\\\

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್ ಟೀಸರ್ ಸೇರಿದಂತೆ ಒಗಟಿನ ಚಿತ್ರಗಳೇ ಹಾಗೆ, ಒಂದು ಕ್ಷಣ ನಿಮ್ಮ ಕಣ್ಣನ್ನು ಮೋಸಗೊಳಿಸುತ್ತದೆ. ಆದರೆ ನೂರಕ್ಕೆ ನೂರರಷ್ಟು ಮೆದುಳಿಗೆ ಕೆಲಸ ನೀಡುವುದರ ಜತೆಗೆ ನಿಮ್ಮನ್ನು ರಿಲ್ಯಾಕ್ಸ್ ಆಗಿಸುತ್ತದೆ. ವೈರಲ್ ಆಗಿರುವ ಚಿತ್ರದಲ್ಲಿ ಈ ಟ್ರಿಕ್ಕಿ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಲು ಸಾಧ್ಯವೇ ಎಂದು ನೋಡಿ. ಈ ಚಿತ್ರದಲ್ಲಿರುವ ಮನೆಯ ಮುದ್ದಿನ ಶ್ವಾನವನ್ನು ಹುಡುಕುವ ಸವಾಲು ನೀಡಲಾಗಿದೆ. ಏಳು ಸೆಕೆಂಡುಗಳಲ್ಲಿ ಮನೆಯ…

Read More

ಕಿಲ್ಲರ್ ಕಾಡಾನೆ ಸೆರೆಯಾದರೂ ಮುಂದುವರಿದ ಆತಂಕ; ಚಿಕ್ಕಮಗಳೂರಿನ 12 ಗ್ರಾಮಗಳಿಗೆ ಗ್ರಾಮಗಳಲ್ಲಿ ನಿಷೇಧಾಜ್ಞೆ ! – Kannada News | Chikkamagaluru Elephant Menace: Curfew in 12 Villages After Two Deaths

ಚಿಕ್ಕಮಗಳೂರಿನ 12 ಗ್ರಾಮಗಳಿಗೆ ಗ್ರಾಮಗಳಲ್ಲಿ ನಿಷೇಧಾಜ್ಞೆ ! ಚಿಕ್ಕಮಗಳೂರು, ಫೆಬ್ರವರಿ 25: ತಾಲೂಕಿನಲ್ಲಿ ಕಾಡಾನೆಗಳ ಆತಂಕ ಹೆಚ್ಚಿದ ಹಿನ್ನೆಲೆಯಲ್ಲಿ ಆಡಳಿತವು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ತಾಲೂಕಿನ (Chikkamagaluru) ಒಟ್ಟು 12 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಸಂಜೆ 4 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರ ಸಂಚಾರವನ್ನು ನಿಯಂತ್ರಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಆದೇಶ ಹೊರಡಿಸಿದ್ದು, ನಾಳೆವರೆಗೆ (ಫೆಬ್ರವರಿ 26)ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದ್ದಾರೆ. ಕಾಡಾನೆ ದಾಳಿಗೆ ಒಂದೇ ವಾರದಲ್ಲಿ ಇಬ್ಬರು ಬಲಿ ಕೆಲ ದಿನಗಳ…

Read More

ಮೋದಿ ಆಗಮನಕ್ಕೂ ಮುನ್ನವೇ ತ್ರಿವರ್ಣ ದೀಪಗಳಿಂದ ಕಂಗೊಳಿಸಿದ ಇಸ್ರೇಲ್ ಸಂಸತ್ತು, ನಾಳೆ ಮೋದಿ ಭಾಷಣ – Kannada News | Modi’s Israel Visit: Knesset Lit in Tricolour, PM to Address Parliament

ಜೆರುಸಲೇಂ, ಫೆಬ್ರವರಿ 25: ಪ್ರಧಾನಿ ನರೇಂದ್ರ  ಮೋದಿ(Narendra Modi) ಇಂದಿನಿಂದ ಎರಡು ದಿನಗಳ ಕಾಲ ಇಸ್ರೇಲ್ ಪ್ರವಾಸದಲ್ಲಿರಲಿದ್ದಾರೆ. ಮೋದಿ ಆಗಮನಕ್ಕೂ ಮುನ್ನ ಸಂಸತ್(Knesset)ನಲ್ಲಿ ತ್ರಿವರ್ಣ ದೀಪಗಳು ಕಂಗೊಳಿಸಿವೆ. ಪ್ರಧಾನಿ ಮೋದಿ ಫೆಬ್ರವರಿ 26ರಂದು ಇಸ್ರೇಲ್ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಜೆರುಸಲೇಂ ಪೋಸ್ಟ್​​ನ ಮುಖಪುಟದಲ್ಲಿ ಪ್ರಧಾನಿಯದ್ದೇ ಸುದ್ದಿ ಪ್ರಕಟವಾಗಿದೆ. ಇದಕ್ಕೂ ಮೊದಲು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ 2015 ರಲ್ಲಿ ಸಂಸತ್ತನ್ನುದ್ದೇಶಿಸಿ ಮಾತನಾಡಿದ್ದರು. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿರುವ ಸಮಯದಲ್ಲಿ ಈ ಭೇಟಿ ತುಂಬಾ ಮಹತ್ವದ್ದಾಗಿದೆ….

Read More

‘ನೀವು ಮತ್ತು ಆ ಹುಡುಗಿ ಬೇರೆ ಬೇರೆ ಮಲಗಿ’: ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಕೆ ಹಾಕಿದ ಬಸ್ ಕಂಡಕ್ಟರ್ – Kannada News | Private Bus Harassment: Bengaluru Couple’s Sleeper Berth Incident and Your Rights

ಬೆಂಗಳೂರು, ಫೆ.25: ಬಸ್ಸಿನಲ್ಲಿ ಆಗುವ ಕೆಲವೊಂದು ವಿಚಾರಗಳು ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತದೆ. ದೀರ್ಘ ಸಮಯದವರಗೆ ಪ್ರಯಾಣ ಮಾಡುವಾಗ ಬಸ್ಸಿನಲ್ಲಿ ತುಂಬಾ ಆರಾಮದಾಯಕವಾಗಿರಬೇಕು ಎನ್ನುವುದು ಅನೇಕರ ಯೋಚನೆ, ಅದಕ್ಕೆ ಎರಡು ಸೀಟ್​​, ಅಥವಾ ಸಿಂಗಲ್​​​ ಸೀಟ್​​​ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇನ್ನು ದಂಪತಿಗಳು, ಮಕ್ಕಳು ಇದ್ರೆ ಡಬಲ್​​​​, ತ್ರಿಬಲ್​​​​​ ಸೀಟ್​​ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಅನೇಕ ಕಡೆ ಹುಡುಗ-ಹುಡುಗಿ ಒಂದೇ ಸೀಟ್​​​ನಲ್ಲಿ ಜತೆಯಾಗಿ ಪ್ರಯಾಣ ಮಾಡುವುದನ್ನು ವಿರೋಧಿಸುತ್ತಾರೆ. ಇದೀಗ ಇಂತಹದೇ ಕಿರಿಕಿರಿಯನ್ನು ಬೆಂಗಳೂರಿನ…

Read More

ಟೀಮ್ ಇಂಡಿಯಾ ಪಾಲಿಗೆ ಯಾರು ಗೆಲ್ಲಬೇಕು? ಯಾರು ಸೋಲಬೇಕು? – Kannada News | Who should be win and who should be loss for Team India?

T20 World Cup 2026: ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಸ್ಥಿತಿ ಪ್ರಸ್ತುತ ನಿರ್ಣಾಯಕ ಹಂತದಲ್ಲಿದೆ. ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ ಸೋತ ನಂತರ, ಸೆಮಿಫೈನಲ್‌ಗೇರಲು ಭಾರತಕ್ಕೆ ಮುಂದಿನ ಪಂದ್ಯಗಳು ಅತ್ಯಂತ ಮುಖ್ಯವಾಗಿವೆ. ಅದರಂತೆ ಝಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಗೆಲ್ಲಲೇಬೇಕು. ಈ ಗೆಲುವುಗಳ ಹೊರತಾಗಿಯೂ ಭಾರತ ತಂಡ ನೇರವಾಗಿ ಸೆಮಿಫೈನಲ್​ಗೇರುತ್ತೆ ಎಂದೇಳಲಾಗುವುದಿಲ್ಲ. ಏಕೆಂದರೆ ಸೆಮಿಫೈನಲ್ ರೇಸ್​ನಲ್ಲಿ ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳಿವೆ. ಹೀಗಾಗಿ ಈ ಮೂರು…

Read More

ಕೊಪ್ಪಳ: ಅಲ್ಪಸಂಖ್ಯಾತ ಇಲಾಖೆ ವಸತಿ ಶಾಲೆಯ ಪಿಯು ವಿದ್ಯಾರ್ಥಿನಿ ಗರ್ಭಿಣಿ! – Kannada News | PU Student Found Pregnant at Koppal Morarji Desai Residential School; Accused Arrested, Safety Concerns Raised

ಕೊಪ್ಪಳ, ಫೆಬ್ರವರಿ 24: ಕೊಪ್ಪಳ (Koppal) ಜಿಲ್ಲೆಯ ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಪಿಯು ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗುವುದಾಗಿ ಆಮಿಷವೊಡ್ಡಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಆರೋಪಿಯು ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ. ಮದುವೆಯ ಆಮಿಷವೊಡ್ಡಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಫೆಬ್ರವರಿ…

Read More

ಮುಂಬೈನಲ್ಲಿ ಕರ್ನಾಟಕ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ಕನ್ನಡ ಪ್ರೇಮಕ್ಕೆ ಇದೇ ಸಾಕ್ಷಿ – Kannada News | Shilpa Shetty opened a Karnataka theme restaurant in Mumbai

ಶಿಲ್ಪಾ ಶೆಟ್ಟಿ (Shilpa Shetty) ಬಾಲಿವುಡ್​​ನ ಸ್ಟಾರ್ ನಟಿ ಆಗಿರುವ ಜೊತೆಗೆ ಬಲು ಯಶಸ್ವಿ ಉದ್ಯಮಿಯೂ ಸಹ ಹೌದು. ಮಂಗಳೂರು ಮೂಲದವರಾದರೂ ಸಹ ಶಿಲ್ಪಾ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿಯೇ. ಬಾಲ್ಯದಿಂದಲೂ ಮುಂಬೈನಲ್ಲೇ ಬೆಳೆದಿದ್ದರೂ ಸಹ ತಮ್ಮ ಮೂಲವಾದ ಕರ್ನಾಟಕವನ್ನು ಶಿಲ್ಪಾ ಶೆಟ್ಟಿ ಮರೆತಿಲ್ಲ. ಇತ್ತೀಚೆಗಷ್ಟೆ ಮುಂಬೈನಲ್ಲಿ ಹೋಟೆಲ್ ಒಂದನ್ನು ಶಿಲ್ಪಾ ಶೆಟ್ಟಿ ಪ್ರಾರಂಭ ಮಾಡಿದ್ದು, ಕರ್ನಾಟಕ ಥೀಮ್​​​ನ ಹೋಟೆಲ್ ಇದಾಗಿದೆ. ಮಾತ್ರವಲ್ಲದೆ ಇದಕ್ಕೆ ಇರಿಸಿರುವುದು ಸಹ ಕನ್ನಡದ ಹೆಸರನ್ನೇ. ಶಿಲ್ಪಾ ಶೆಟ್ಟಿ ಈಗಾಗಲೇ ಬಾಸ್ಟಿಯನ್ ಹೆಸರಿನಲ್ಲಿ ಮುಂಬೈನಲ್ಲಿ…

Read More

OTT Platforms Ban: ಅಶ್ಲೀಲ ಮತ್ತು ಅಸಭ್ಯ ವಿಷಯಗಳ ಪ್ರಸಾರ: ಐದು ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಕೇಂದ್ರ ನಿರ್ಬಂಧ – Kannada News | India Bans 5 OTT Platforms: Govt Cracks Down on Obscene Content, Cites IT Rules 2021

ನವದೆಹಲಿ, ಫೆಬ್ರವರಿ 25: ಅಶ್ಲೀಲ ಮತ್ತು ಆಕ್ಷೇಪಾರ್ಹ ವಿಷಯವನ್ನು ತೋರಿಸುವ ಐದು ಒಟಿಟಿ(OTT) ಪ್ಲಾಟ್‌ಫಾರ್ಮ್‌ಗಳ ವಿರುದ್ಧ ಕೇಂದ್ರ ಸರ್ಕಾರ ಪ್ರಮುಖ ಕ್ರಮ ಕೈಗೊಂಡಿದೆ. ಅಧಿಕಾರಿಗಳು ನೀಡಿರುವ ಪ್ರಕಾರ, ಕೇಂದ್ರ ಸರ್ಕಾರ ಈ ಐದು ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸಲು ಆದೇಶಗಳನ್ನು ಹೊರಡಿಸಿದೆ. ಮಾಹಿತಿಯ ಪ್ರಕಾರ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಮೂಡ್‌ಎಕ್ಸ್‌ವಿಐಪಿ, ಕೋಯಲ್ ಪ್ಲೇಪ್ರೊ, ಡಿಜಿ ಮೂವಿಪ್ಲೆಕ್ಸ್, ಫೀಲ್ ಮತ್ತು ಜುಗ್ನು ಎಂಬ ಐದು ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸಲು ಆದೇಶಗಳನ್ನು ಹೊರಡಿಸಿದೆ. ಅಧಿಕಾರಿಗಳ ಪ್ರಕಾರ, ಎಲ್ಲಾ ಕಾನೂನು ಕಾರ್ಯವಿಧಾನಗಳನ್ನು ಅನುಸರಿಸಿ…

Read More