Headlines

nagaraj11081993

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಬೇಕಾದುದು ಸಮಯಕ್ಕೆ ಸಿಗದು – Kannada News | Horoscope 25 Wednesday 2026; Dina Rashi Bhavishya Today, Checkout the details here

ಮೇಷ ರಾಶಿ: ಅಪನಂಬಿಕೆಯಿಂದ ಮನಸ್ಸು ಕುಗ್ಗುವುದು. ಯಾರ ಮೇಲೂ ನಂಬಿಕೆ ಇಡುವುದು ಕಷ್ಟವಾದೀತು. ಸಂಗಾತಿಯಿಂದ ಅಧಿಕ ಸಂಪತ್ತನ್ನು ನಿರೀಕ್ಷಿಸುವಿರಿ. ತಾಯಿಯ ಪ್ರೀತಿಯು ನಿಮಗೆ ಸಿಗಲಿದೆ. ಏಕಮುಖವಾದ ನಿರ್ಧಾರದಿಂದ ಸಫಲತೆಯು ಇರದು. ಸಣ್ಣ ಸಣ್ಣ ವಿಚಾರಗಳಿಗೂ ಸಿಟ್ಟಾಗುವುದನ್ನು ಕಡಿಮೆ ಮಾಡಿ. ಯಾರಿಂದಲೂ ಏನನ್ನೂ ಪಡೆಯುವ ಮನಸ್ಸಾಗದು. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಏಕಾಂತದಲ್ಲಿ ಇರಲು ನಿಮಗೆ ಅನಿವಾರ್ಯವಾದೀತು. ವೃಷಭ ರಾಶಿ: ಇಂದು ನಿಮ್ಮ ಕೆಲವು ನಿರೀಕ್ಷೆಯು ಹುಸಿಯಾಗಬಹುದು. ಧನಸಂಪಾದನೆಯ ಚಿಂತೆ ನಿಮಗೆ ಕಾಡಲು ಆರಂಭವಾಗಲಿದೆ. ಅಪರಿಚಿತರಿಂದ ಬಾಂಧವ್ಯ ಹುಟ್ಟಿಕೊಳ್ಳಬಹುದು….

Read More

SBI Recruitment 2026: SBIನಲ್ಲಿ 116 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ನೇಮಕಾತಿ; 50 ಲಕ್ಷ ರೂ. ವೇತನ – Kannada News | SBI SCO Recruitment 2026: 116 AVP and Deputy Manager Posts Apply by March 15!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮುಂಬೈ ಮತ್ತು ಹೈದರಾಬಾದ್‌ನಲ್ಲಿರುವ ವಿವಿಧ ಶಾಖೆಗಳಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ, ಒಟ್ಟು 116 ಸಹಾಯಕ ಉಪಾಧ್ಯಕ್ಷ ಮತ್ತು ಉಪ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಫೆಬ್ರವರಿ 23 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು ಮಾರ್ಚ್ 15ರ ವರೆಗೆ ಅವಕಾಶವಿದೆ. ಹುದ್ದೆಯ ವಿವರ: ಸಹಾಯಕ ಉಪಾಧ್ಯಕ್ಷ ಹುದ್ದೆಗಳ ಸಂಖ್ಯೆ: 12 ಡೆಪ್ಯೂಟಿ ಮ್ಯಾನೇಜರ್…

Read More

IND vs AUS: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಸೋತ ಟೀಂ ಇಂಡಿಯಾ – Kannada News | Australia Women Dominate India in 1st ODI, Leads Series 1 0 | Harmanpreet, Mandhana Fifties

ಪ್ರಸ್ತುತ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಮಹಿಳಾ ತಂಡ (India Women vs Australia Women) ಈ ಮೊದಲು ನಡೆದ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡು ಪ್ರವಾಸವನ್ನು ಶುಭಾರಂಭ ಮಾಡಿತ್ತು. ಅದರಂತೆ ಉಭಯ ತಂಡಗಳ ನಡುವೆ ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಿದ್ದು, ಇಂದು ನಡೆದ ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ಆಸ್ಟ್ರೇಲಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ ಭಾರತ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಬ್ರಿಸ್ಬೇನ್‌ನಲ್ಲಿ…

Read More

ಕೌಟುಂಬಿಕ ಕಲಹಕ್ಕೆ ಯುವಕ ಬಲಿ; ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಆತ್ಮಹತ್ಯೆಗೆ ಯತ್ನ! – Kannada News | Mental Depression and Family Issues: 25 Year Old Vishal’s Suicide, Mother’s Attempt in K’taka

ಹಾರೋಹಳ್ಳಿ, ಫೆ.24 : ಕೌಟುಂಬಿಕ ಸಮಸ್ಯೆ ಹಾಗೂ ಮಾನಸಿಕ ಖಿನ್ನತೆಯಿಂದ ನೊಂದು ಯುವಕನೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ಮರಿಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮಗನ ಸಾವಿನ ಸುದ್ದಿ ತಿಳಿದು ಆತನ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮರಿಗೌಡನದೊಡ್ಡಿ ಗ್ರಾಮದ ನಿವಾಸಿ ವಿಶಾಲ್ (25) ಎಂಬುವವರು ಜಕ್ಕಸಂದ್ರ ಗ್ರಾಮದ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲವು ತಿಂಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತದ ನಂತರ ವಿಶಾಲ್ ತೀವ್ರ ಮಾನಸಿಕ…

Read More

ಮುದಾದ ಮಗುವಿಗೆ ಜನ್ಮ: ಕರುಳ ಬಳ್ಳಿ ಕಣ್ತುಂಬಿಕೊಳ್ಳುವ ಮೊದಲೇ ತಾಯಿ ದುರಂತ ಸಾವು – Kannada News | A mother dies In Hassan Hims after delivery, family alleges hospital negligence

ಹಾಸನ, (ಫೆಬ್ರವರಿ 24): ಹೆರಿಗೆ ನಂತರ ಬಾಣಂತಿ ಸಾವನ್ನಪ್ಪಿರುವ ಘಟನೆ ಹಾಸನದ (Hassan) ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಶೃತಿ ಎನ್ನುವ ಮಹಿಳೆ ಹೆರಿಗೆಗೆಂದು ಹಾಸನದ ಹಿಮ್ಸ್ ಆಸ್ಪತ್ರೆ (Hims Hospital) ದಾಖಲಾಗಿದ್ದರು. ಆದ್ರೆ, ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಶೃತಿ (30) ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಾಣಂತಿ ಶೃತಿ ಸಾವಿಗೆ ಹಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಶೃತಿ ಸಂಬಂಧಿಕರು ಹಾಗೂ ಪತಿ ಆರೋಪಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರಿಗೆ ಸರಿಯಾಗಿ ಚಿಕಿತ್ಸೆ…

Read More

ವಿಕ್ರಮ ವರ್ಷದ ಅಧಿಪತಿ ಗುರು… ಏನೆಲ್ಲ ಆಗಲಿದೆ ಈ ವರ್ಷ? – Kannada News | Raudri Samvatsara 2083: Guru’s Auspicious Reign and Impact on India’s Future

ಮಾರ್ಚ್ ೧೯ರಿಂದ ವಿಕ್ರಮ ಸಂವತ್ಸರ 2083 ಆರಂಭವಾಗಲಿಸೆ. ರೌದ್ರಿ ಅಥವಾ ರೌದ್ರ ಸಂವತ್ಸರದ ಆರಂಭ. ಈ ಕಾಲಗಣನೆಯನ್ನು ವಿಶೇಷವಾಗಿ ಉತ್ತರ ಭಾರತದಲ್ಲಿ ಅನುಸರಿಸುತ್ತಾರೆ. ದಕ್ಷಿಣ ಭಾರತದಲ್ಲಿ ಈ ಕ್ರಮ ಕಂಡುಬರುವುದಿಲ್ಲ. ಈ ಸಂವತ್ಸರದ ಆರಂಭ ಹಾಗೂ ಯುಗಾದಿಯ ಆರಂಭ ಎರಡೂ ಒಂದೇ. ಆದರೆ ವಿಕ್ರಮ ಎನ್ನುವ ರಾಜನ ಆಳ್ವಿಕೆಯ ‌ಕಾಲದಿಂದ ಇದು ಆರಂಭವಾದ‌ ಕಾರಣ ಸಂವತ್ಸರದಲ್ಲಿ ಮಾತ್ರ ವ್ಯತ್ಯಾಸ ಕಾಣಸಿಗುತ್ತದೆ. ಈ ವರ್ಷದ ರಾಜ ಗುರು ಅಂದರೆ ಬೃಹಸ್ಪತಿ. ಮಿಥುನ ಹಾಗೂ ತನ್ನ ಪರಮೋಚ್ಚ ರಾಶಿಯಾದ ಕರ್ಕಾಟಕದಲ್ಲಿ…

Read More

ತನ್ನ ದುಡ್ಡಲ್ಲೇ ಇನ್​ಫ್ಲುಯೆನ್ಸರ್​​ಗೆ ಬೇಲ್​ಪುರಿ ಕೊಡಿಸಿದ ಬೀದಿ ಬದಿ ಬಾಲಕಿ; ವಿಡಿಯೋ ವೈರಲ್ – Kannada News | Homeless child Spends Her Own Money To Buy Bhel Puri For Influencer video goes viral

ನವದೆಹಲಿ, ಫೆಬ್ರವರಿ 24: ಬೀದಿ ಬದಿಯ ಹುಡುಗಿ ಮತ್ತು ಸೋಷಿಯಲ್ ಮೀಡಿಯಾ ಇನ್​ಫ್ಲುಯೆನ್ಸರ್​ಗೆ ತನ್ನ ದುಡ್ಡಿನಲ್ಲೇ ಬೇಲ್​ಪುರಿ ಕೊಡಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ. 24 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿರುವ ವಿಡಿಯೋ ಕ್ಲಿಪ್‌ನಲ್ಲಿ ಇನ್​ಫ್ಲುಯೆನ್ಸರ್​​​ ರಿತಿಕಾ ಶರ್ಮಾ ರಸ್ತೆಬದಿಯ ಭೇಲ್ ಪುರಿ ಅಂಗಡಿಯ ಬಳಿ ನಿಂತಿರುವುದನ್ನು ಕಾಣಬಹುದು. ಆಗ ಮುಸ್ಕಾನ್ ಎಂಬ ಬಾಲಕಿ ಆಕೆಯನ್ನು ಬೇಲ್​ಪುರಿ ತಿನ್ನಲು ಬಾ ಎಂದು ಕರೆದಳು. ಅದಕ್ಕೆ ಆಕೆ ನನ್ನ ಬಳಿ ಹಣವಿಲ್ಲ ಎಂದು ಹೇಳಿದಳು….

Read More

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಗೆ ತೆರಳಿದ ಆಶಿಕಾ ರಂಗನಾಥ್ – Kannada News | Ashika Ranganath to attend Rashmika Mandanna Vijay Deverakonda Marriage

ಖ್ಯಾತ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಜೊತೆ ಅವರು ಸಪ್ತಪದಿ ತುಳಿಯಲಿದ್ದಾರೆ. ಈ ಹೈ-ಪ್ರೊಫೈಲ್ ಮದುವೆಗೆ ಯಾರೆಲ್ಲ ಬರಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಇದೆ. ಮೂಲಗಳ ಪ್ರಕಾರ ಕೇವಲ 100 ಮಂದಿಗೆ ಮಾತ್ರ ಆಹ್ವಾನ ನೀಡಲಾಗಿದೆ. ವಿಶೇಷ ಏನೆಂದರೆ, ಕನ್ನಡದ ನಟಿ ಆಶಿಕಾ ರಂಗನಾಥ್ (Ashika Ranganath) ಅವರಿಗೆ ಆಹ್ವಾನ ಬಂದಿದೆ. ಈಗಾಗಲೇ ಅವರು ಮದುವೆಗೆ ತೆರಳಿದ್ದಾರೆ. ಫೆಬ್ರವರಿ 26ರಂದು ಉದಯಪುರದಲ್ಲಿ ರಶ್ಮಿಕಾ ಮಂದಣ್ಣ…

Read More

PAK vs ENG: ಸೆಮಿಫೈನಲ್​ಗೇರಿದ ಇಂಗ್ಲೆಂಡ್; ಟೂರ್ನಿಯಿಂದ ಹೊರಬಿದ್ದ ಪಾಕಿಸ್ತಾನ – Kannada News | Pakistan Eliminated: England Enters Cricket World Cup Semi Finals with Decisive Win

ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಿನ ಸೂಪರ್ 8 ಸುತ್ತಿನ ಪಂದ್ಯವನ್ನು 2 ವಿಕೆಟ್​ಗಳಿಂದ ಗೆದ್ದುಕೊಂಡ ಇಂಗ್ಲೆಂಡ್ ಈ ಸುತ್ತಿನಲ್ಲಿ ಸತತ ಎರಡನೇ ಗೆಲುವು ದಾಖಲಿಸುವ ಮೂಲಕ ಟೂರ್ನಿಯ ಮೊದಲ ತಂಡವಾಗಿ ಸೆಮಿಫೈನಲ್ ಪ್ರವೇಶಿಸಿದೆ. ಇತ್ತ ಇಂಗ್ಲೆಂಡ್ ವಿರುದ್ಧ ಸೋತ ಪಾಕಿಸ್ತಾನ ಟೂರ್ನಿಯಿಂದ ಭಾಗಶಃ ಹೊರಬಿದ್ದಿದೆ. ಪ್ರಸ್ತುತ ಖಾತೆಯಲ್ಲಿ ಏಕೈಕ ಅಂಕ ಹೊಂದಿರುವ ಪಾಕಿಸ್ತಾನ ಸೆಮಿಫೈನಲ್​ಗೇರಬೇಕೆಂದರೆ ಪವಾಡವೇ ನಡೆಯಬೇಕಿದೆ. ಆ ಪವಾಡ ನಡೆಯುವುದು ಅಸಾಧ್ಯವಾಗಿರುವುದರಿಂದ ಪಾಕ್ ತಂಡ ಸೂಪರ್ 8 ಸುತ್ತಿನಲ್ಲೇ…

Read More

5 ವರ್ಷದಲ್ಲಿ ನಕಲಿ ತುಪ್ಪದಿಂದ ತಯಾರಿಸಿದ 20 ಕೋಟಿ ತಿರುಪತಿ ಲಡ್ಡು ವಿತರಣೆ; ಸಿಎಂ ಚಂದ್ರಬಾಬು ನಾಯ್ಡು ಮಾಹಿತಿ – Kannada News | 20 Crore Tirupati Laddus Made With Fake Ghee Over 5 Years cm Chandrababu Naidu says

ಅಮರಾವತಿ, ಫೆಬ್ರವರಿ 24: ವೈಎಸ್‌ಆರ್‌ಸಿಪಿ ಸರ್ಕಾರದ ಆಡಳಿತದ ಅವಧಿಯಲ್ಲಿ 20 ಕೋಟಿಗೂ ಹೆಚ್ಚು ತಿರುಪತಿ ಲಡ್ಡುಗಳನ್ನು (Tirupati Laddu) ಕಲಬೆರಕೆ ತುಪ್ಪದಿಂದ ತಯಾರಿಸಿ ಮಾರಾಟ ಮಾಡಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ. 2019 ಮತ್ತು 2024ರ ನಡುವೆ ತಿರುಮಲ ತಿರುಪತಿ ದೇವಸ್ಥಾನಕ್ಕೆ (ಟಿಟಿಡಿ) 59.71 ಲಕ್ಷ ಲೀಟರ್ ಕಲಬೆರಕೆ ತುಪ್ಪವನ್ನು ಪೂರೈಕೆ ಮಾಡಲಾಗಿದೆ. ಅದಕ್ಕಾಗಿ 234 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ. ತಿರುಪತಿ ಲಡ್ಡು ಕಲಬೆರಕೆ ಕುರಿತು…

Read More