nagaraj11081993

ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿರುದ್ಧ ರಾಜ್​​ಕುಮಾರ್​​ ಇಳಿಸಲು ನಡೆದಿತ್ತು ಪ್ಲ್ಯಾನ್

ರಾಜ್​​​ಕುಮಾರ್ ಅವರು ಕನ್ನಡ ಚಿತ್ರರಂಗದ ಖ್ಯಾತ ಹೀರೋಗಳಲ್ಲಿ ಒಬ್ಬರಾಗಿದ್ದರು. ಅವರು ನಡೆದುಕೊಳ್ಳುತ್ತಿದ್ದ ರೀತಿ ಅನೇಕರಿಗೆ ಮಾದರಿ. ಅವರು ಎಂದಿಗೂ ರಾಜಕೀಯಕ್ಕೆ ಹೊರಳಿದವರಲ್ಲ. ಚಿತ್ರರಂಗದಲ್ಲಿಯೂ ಅವರು ರಾಜಕೀಯ ಮಾಡಿದವರಲ್ಲ ಎಂದರೂ ತಪ್ಪಾಗಲಾರದು. ಈ ಮೊದಲು ಅವರನ್ನು ರಾಜಕೀಯಕ್ಕೆ ಇಳಿಸುವ ಪ್ರಯತ್ನ ನಡೆಯಿತು. ಆದರೆ, ಅವರು ಅದಕ್ಕೆ ನೋ ಎಂದರು. ಅವರನ್ನು ಇಂದಿರಾಗಾಂಧಿ ವಿರುದ್ಧ ಇಳಿಸುವ ಪ್ರಯತ್ನವೂ ನಡೆದಿತ್ತು ಎಂದರೆ ನೀವು ನಂಬಲೇಬೇಕು. ಆ ಬಗ್ಗೆ ಇಲ್ಲಿದೆ ವಿವರ. ಸಂದರ್ಶನ ಒಂದರಲ್ಲಿ ಎಂಪಿ ಶಂಕರ್ ಅವರು ಈ ಬಗ್ಗೆ ಮಾತನಾಡಿದ್ದರು….

Read More

Video: ರೈಲ್ವೆ ಸ್ಟೇಷನ್ ಮುಂಭಾಗ ಬೈಕ್​ನಲ್ಲಿ ಬಂದು ಯುವತಿ ಕೈಯಿಂದ ಬ್ಯಾಗ್ ಕಸಿದು ಕಳ್ಳ ಪರಾರಿ

ಕೋಲ್ಕತ್ತಾ, ಮಾರ್ಚ್​ 31: ಸಾಮಾನ್ಯವಾಗಿ ರೈಲ್ವೆ ನಿಲ್ದಾಣದ ಆಸು ಪಾಸು ದಿನದ 24 ಗಂಟೆಯೂ ಜನರು ಓಡಾಡುತ್ತಲೇ ಇರುತ್ತಾರೆ. ಇಷ್ಟೆಲ್ಲಾ ಜನ ಇದ್ದರೂ ಲಗೇಜ್ ಹಿಡಿದು ಅಕ್ಕ ತಂಗಿ ರೈಲ್ವೆ ನಿಲ್ದಾಣದ ಬಳಿ ನಿಂತಿದ್ದಾಗ ಕಳ್ಳನೊಬ್ಬ ಬೈಕ್​ನಲ್ಲಿ ಬಂದು ಯುವತಿ ಕೈಯಿಂದ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದಾನೆ. ಈ ಘಟನೆ ಕೋಲ್ಕತ್ತಾದ ಶಾಲಿಮರ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಬ್ಯಾಗ್​ನಲ್ಲಿ ಅಗತ್ಯವಾದ ಡಾಕ್ಯೂಮೆಂಟ್​ಗಳಿದ್ದವು ಎಂದು ಹೇಳಿರುವ ಯುವತಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.  …

Read More

ಕರ್ನಾಟಕ ಹವಾಮಾನ ವರದಿ: ಇಂದು ಹಲವೆಡೆ ಭಾರೀ ಮಳೆ ಸಾಧ್ಯತೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

ಬೆಂಗಳೂರು, ಮಾರ್ಚ್​ 31: ಕಳೆದ ಎರಡು ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ  (Weather Forecast)  ಸುರಿದಿದ್ದು, ಬಿಸಿಲ ಬೇಗೆ ಆರಿದಂತಾಗಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರ್ಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ,…

Read More

ದಾರಿಯುದ್ಧಕ್ಕೂ ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಬೆಂಗಳೂರು, ಮಾರ್ಚ್​ 31: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಎಂಬಾತನನ್ನು ಬೆಂಗಳೂರಿನ ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ. ಯುವತಿಯೊಬ್ಬರು ಬಿಟಿಎಂ ಲೇಔಟ್‌ನಿಂದ ಇಂದಿರಾನಗರಕ್ಕೆ ತೆರಳಲು ರಾಪಿಡೋ ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದರು. ಪ್ರಯಾಣದ ಸಂದರ್ಭದಲ್ಲಿ, ಚಾಲಕ ಮೊಹಮ್ಮದ್ ಖಾಜಾ ದಾರಿಯುದ್ದಕ್ಕೂ ಯುವತಿಯ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ವರ್ತನೆಯಿಂದ ಅಸಮಾಧಾನಗೊಂಡ ಯುವತಿ ಇಂದಿರಾನಗರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಇಂದಿರಾನಗರ ಪೊಲೀಸರು,…

Read More

ಸಿಎಸ್​​ಕೆಗೆ ದುಸ್ವಪ್ನವಾದ ಜಡೇಜಾ; ವಿಕೆಟ್ ತೆಗೆದು ಗನ್ ಶಾಟ್ ಸೆಲೆಬ್ರೇಷನ್

ರವೀಂದ್ರ ಜಡೇಜಾ ಅವರಿಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವೆ ಅವಿನಾಭಾವ ಸಂಬಂಧ ಇತ್ತು. ಜಡೇಜಾ ಎಂದರೆ ನೆನಪಾಗುತ್ತಿದ್ದುದು ಸಿಎಸ್​​ಕೆ. ಆದರೆ, ಸಿಎಸ್​​ಕೆ ತಂಡ ಸಂಜು ಸ್ಯಾಮ್​​ಸನ್ ಅವರನ್ನು ಖರೀದಿ ಮಾಡಲು ಜಡೇಜಾ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಬಿಟ್ಟುಕೊಟ್ಟಿತು. ಈ ವಿಷಯ ಜಡೇಜಾಗೆ ನೋವು ತರಿಸಿದ್ದಿರಬಹುದು. ಹೀಗಾಗಿ, ಸಿಎಸ್​​ಕೆ ವಿರುದ್ಧ ಮಾರಕ ಬೌಲಿಂಗ್ ದಾಳಿ ಮಾಡಿ, ಎರಡು ವಿಕೆಟ್ ಪಡೆದು ಅವರು ಭರ್ಜರಿ ಸೆಲೆಬ್ರೇಷನ್ ಮಾಡಿದರು. ಮೂರು ಓವರ್ ಎಸೆದ ಜಡೇಜಾ, ಎರಡು ವಿಕೆಟ್ ಕಿತ್ತು…

Read More

ಪೋಷಕರಿಗೆ ಡಬಲ್ ಶಾಕ್: ವಯೋಮಿತಿ ಗೊಂದಲದ ಬೆನ್ನಲ್ಲೇ ಖಾಸಗಿ ಶಾಲೆಗಳ ಶುಲ್ಕ ಭರ್ಜರಿ ಏರಿಕೆ!

ಬೆಂಗಳೂರು, ಮಾರ್ಚ್​ 31: ರಾಜಧಾನಿ ಬೆಂಗಳೂರಿನಲ್ಲಿ (Bangalore) ಹೊಸ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನವೇ ಪೋಷಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಈಗಾಗಲೇ ಶಾಲಾ ಪ್ರವೇಶದ ವಯೋಮಿತಿ ನಿಯಮದ ಗೊಂದಲದಿಂದ ಸಂಕಷ್ಟದಲ್ಲಿರುವ ಪೋಷಕರಿಗೆ, ಇದೀಗ ಖಾಸಗಿ ಶಾಲೆಗಳು ಶುಲ್ಕ ಏರಿಕೆ ಮಾಡಿ ಮತ್ತಷ್ಟು ತಲೆನೋವು ತಂದಿವೆ. ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026–27ನೇ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆಯನ್ನು ಕೆಲವು ಖಾಸಗಿ ಶಾಲೆಗಳು ಆರಂಭಿಸಿವೆ. ಇದೇ ಸಂದರ್ಭದಲ್ಲಿ ಹಲವು ಶಾಲೆಗಳು 5ರಿಂದ 15 ಶೇಕಡಾ ವರೆಗೆ ಶುಲ್ಕ ಹೆಚ್ಚಿಸಲು ಮುಂದಾಗಿವೆ ಎಂಬ…

Read More

ಪರಿಹಾರ ಸಾಮಗ್ರಿಗಳ ಪಡೆಯಲು ಭಾರತಕ್ಕೆ ಹೋಗುತ್ತಿದ್ದ ಇರಾನ್ ವಿಮಾನದ ಮೇಲೆ ಅಮೆರಿಕ ದಾಳಿ

ಟೆಹ್ರಾನ್, ಮಾರ್ಚ್​ 31: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಒಂದೆಡೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಇರಾನ್ ಜತೆ ಮಾತುಕತೆ ನಡೆಸುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನಿನ ವಿಮಾನಕ್ಕೆ ಹಾನಿಯಾಗಿದೆ. ಈ ವಿಮಾನ ದೆಹಲಿಗೆ ಹಾರಾಟ ನಡೆಸಬೇಕಿತ್ತು. ಇರಾನ್‌ನ ಮಶಾದ್ ವಿಮಾನ ನಿಲ್ದಾಣದಲ್ಲಿ ಮಹಾನ್ ಏರ್ ವಿಮಾನವು ಅಮೆರಿಕದ ವೈಮಾನಿಕ ದಾಳಿಯಲ್ಲಿ ಹಾನಿಗೊಳಗಾಗಿದೆ. ವರದಿಗಳ ಪ್ರಕಾರ, ವಿಮಾನವು ಪರಿಹಾರ ಸಾಮಗ್ರಿಗಳನ್ನು ಪಡೆಯಲು ನವದೆಹಲಿಗೆ ತೆರಳುತ್ತಿತ್ತು. ಏಪ್ರಿಲ್ 1 ರಂದು ಬೆಳಗ್ಗೆ 4 ಗಂಟೆಗೆ…

Read More

ಕೆರಾಡಿ ಫಿಲ್ಮ್​​ಸಿಟಿ ನಿರ್ಮಿಸಿದ ರಿಷಬ್ ಶೆಟ್ಟಿ; ಸಾಧ್ಯವಾಗಿದ್ದು ಹೇಗೆ?

ರಿಷಬ್ ಶೆಟ್ಟಿ (Rishab Shetty) ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ರಾಜ್ ಬಿ ಶೆಟ್ಟಿ, ಹೊಂಬಾಳೆ ಫಿಲ್ಮ್ಸ್, ರುಕ್ಮಿಣಿ ವಸಂತ್ ಸೇರಿದಂತೆ ಎಲ್ಲರನ್ನೂ ಅನ್​​ಫಾಲೋ ಮಾಡಿದ್ದು ಚರ್ಚೆ ಆಗಿತ್ತು. ಈಗ ಅವರು ರಿಷಬ್ ಶೆಟ್ಟಿ ಫಿಲ್ಮ್ಸ್, ರಿಷಬ್ ಶೆಟ್ಟಿ ಫೌಂಡೇಷನ್ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಅವರನ್ನು ಮಾತ್ರ ಫಾಲೋ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರು ಕೆರಾಡಿಯಲ್ಲಿ ತಾವು ಮಾಡಿದ ಸಾಧನೆ ಬಗ್ಗೆ ಹೇಳಿಕೊಂಡಿದ್ದಾರೆ. ಸಾಮಾನ್ಯವಾಗಿ ಸಿನಿಮಾ ನಿರ್ಮಾಣ ಮಾಡುವಾಗ ದೊಡ್ಡ ದೊಡ್ಡ ಫಿಲ್ಮ್​ ಸಿಟಿಯಲ್ಲಿ…

Read More

Daily Devotional: ಕಪ್ಪು ಬೆಕ್ಕು ಅಡ್ಡ ಬಂದರೆ ಏನಾಗುತ್ತೆ ಗೊತ್ತಾ? ವೀಡಿಯೋ ನೋಡಿ

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕಪ್ಪು ಬೆಕ್ಕು ಅಡ್ಡ ಬಂದರೆ ಏನಾಗುತ್ತೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ದೈನಂದಿನ ಜೀವನದಲ್ಲಿ ಎದುರಾಗುವ ಕೆಲವು ಘಟನೆಗಳು ಶುಭವೋ ಅಶುಭವೋ ಎಂಬ ಕುತೂಹಲ ಸಾಮಾನ್ಯ. ಅದರಲ್ಲೂ ಕಪ್ಪು ಬೆಕ್ಕು ದಾರಿಗೆ ಅಡ್ಡ ಬರುವುದು ಶುಭವೋ ಅಶುಭವೋ ಎಂಬುದು ವ್ಯಾಪಕ ಚರ್ಚೆಯ ವಿಷಯ. ಪುರಾತನ ನಂಬಿಕೆಗಳ ಪ್ರಕಾರ, ಕಪ್ಪು ಬೆಕ್ಕು ಶನಿ, ರಾಹು ಮತ್ತು ಕೇತು ಗ್ರಹಗಳ ಪ್ರತೀಕವಾಗಿದೆ. ಕಪ್ಪು ಬಣ್ಣವನ್ನು ನಿಧಾನ, ಅಜ್ಞಾನದ ಸಂಕೇತ ಎಂದೂ ಪರಿಗಣಿಸಲಾಗುತ್ತದೆ. ಶುಭ ಕಾರ್ಯಗಳಿಗೆ…

Read More

Horoscope Today: ಇಂದು ಈ ರಾಶಿಯವರು ಇಂದು ಅತಿಯಾಗಿ ಖರ್ಚು ಮಾಡಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 31, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ತ್ರಯೋದಶಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ರವಿ ಮೀನ ರಾಶಿಯಲ್ಲಿ…

Read More