Headlines

nagaraj11081993

ಡಿಸಿ ಎದುರು ಕಣ್ಣೀರು ಹಾಕಿ ನೋವು ತೋಡಿಕೊಂಡ ಉದ್ಯೋಗಾಕಾಂಕ್ಷಿ ಮಹಿಳೆ – Kannada News | Job aspirant Woman Tears Infront of DC at Dharwad

ಧಾರವಾಡ, (ಫೆಬ್ರವರಿ 24): ಕರ್ನಾಟಕದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ (Jobs) ಭರ್ತಿಗೆ ಆಗ್ರಹಿಸಿ ಇಂದು (ಫೆಬ್ರವರಿ 24) ವಿದ್ಯಾಕಾಶಿ ಧಾರವಾಡದಲ್ಲಿ (Dharwad) ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಸಾವಿರಾರು ಯುವಕ-ಯುವತಿಯರು ಜುಬಿಲಿ ವೃತ್ತಕ್ಕೆ ದೌಡಾಯಿಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಇನ್ನು ಸ್ಥಳಕ್ಕೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಆಗಮಿಸಿ ಉದ್ಯೋಗಾಕಾಂಕ್ಷಿಗಳ ಮನವಿ ಸ್ವೀಕರಿಸಿದರು. ಈ ವೇಳೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಮುಂದೆ ಮಹಿಳಾ ಉದ್ಯೋಗಾಕಾಂಕ್ಷಿಯೊಬ್ಬರು ತಮ್ಮ ನೋವು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ. ಕರ್ನಾಟಕದ…

Read More

ದಂಪತಿ ಕೈ, ಕಾಲು ಕಟ್ಟಿ ಸಿನಿಮಾ ಮಾದರಿ ದರೋಡೆ: 4 ತಿಂಗಳ ಬಳಿಕ ಖಾಕಿ ಬಲೆಗೆ ಬಿದ್ದ ಖತರ್ನಾಕ್​​ ಗ್ಯಾಂಗ್​​ – Kannada News | Davangere Police Arrest Notorious Gang in Elderly Couple Robbery Case After Four Months

ದಾವಣಗೆರೆ, ಫೆಬ್ರವರಿ 24: ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದದ ಒಂಟಿ ಮನೆಯಲ್ಲಿದ್ದ ವೃದ್ಧ ದಂಪತಿಯ ಕೈ ಕಾಲು ಕಟ್ಟಿ, ಹಿಂಸೆ ನೀಡಿ ಮನೆಯಲ್ಲಿದ್ದ ಸುಮಾರು 8 ಲಕ್ಷ 40 ಸಾವಿರ ಮೌಲ್ಯದ ಚಿನ್ನಾಭರಣ ದೋಚಿದ್ದ ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ತಮಿಳುನಾಡಿನ ಹೊಸೂರು ಬತ್ತಪಲ್ಲಿಯ ಶಿವಕುಮಾರ್, ಸೇಲಂ ಜಿಲ್ಲೆಯ ಕೇಶವನ್, ದಿಂಡಿಗಲ್ ಜಿಲ್ಲೆಯ ಅರುಣ್ ಪ್ರಶಾಂತ್, ತಿರುವಣ್ಣಾಮಲೈನ ಅರಸು ಹಾಗೂ ನಾಮಕ್ಕಲ್ ಕಲಾದೇವಿ ಬಂಧಿತ ಆರೋಪಿಗಳು. ಬಂಧಿತರಿಂದ ಬರೋಬ್ಬರಿ 14 ಲಕ್ಷ ರೂ. ಮೌಲ್ಯದ…

Read More

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆ: ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ ಸಿದ್ದರಾಮಯ್ಯ – Kannada News | CM Responds to Job Seekers Protests: Siddaramaiah Blames BJP for Karnataka Vacancy Crisis

ಉದ್ಯೋಗಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆImage Credit source: Google ಬೆಂಗಳೂರು, ಫೆಬ್ರವರಿ 24: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ಬೆನ್ನಲ್ಲೇ,  ವಿಚಾರವನ್ನು ಗಂಭೀರವಾಗಿ ಪರಿಗಣಿಸಿರೋದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅನೇಕ ಸರ್ಕಾರಿ ಉದ್ಯೋಗಾರ್ಥಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಪ್ರತಿಯೊಂದು ಅರ್ಜಿಯ ಹಿಂದೆ ಒಂದು ಕನಸು, ಒಂದು ಕುಟುಂಬದ ಆಸೆ, ಹಲವು ವರ್ಷಗಳ ಪರಿಶ್ರಮ  ಮತ್ತು ಕರ್ನಾಟಕಕ್ಕೆ ಸೇವೆ ಸಲ್ಲಿಸುವ ಉದ್ದೇಶ ಇದೆ. ಮುಖ್ಯಮಂತ್ರಿಯಾಗಿ, ನಿಮ್ಮ…

Read More

ಮುಖ ಮೂತಿ ನೋಡದೇ ಹೊಡೆದಾಡಿಕೊಂಡ ಮಹೇಶ್ ಬಾಬು, ರಾಜಮೌಳಿ? ಸಿನಿಮಾ ಸತ್ತುಹೋಯ್ತು ಎಂದ ಆರ್​ಜಿವಿ – Kannada News | RGV reacts to AI video of SS Rajamouli and Mahesh Babu fighting

ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು (Mahesh Babu) ಅವರು ‘ವಾರಾಣಸಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದ ಅಪ್​ಡೇಟ್ ತಿಳಿಯಲು ಫ್ಯಾನ್ಸ್ ತುದಿಗಾಲಿನಲ್ಲಿ ನಿಂತಿರುತ್ತಾರೆ. ಆದರೆ ಅಂಥ ಅಭಿಮಾನಿಗಳಿಗೆ ಶಾಕ್ ಆಗುವಂತಹ ಒಂದು ವಿಡಿಯೋ ವೈರಲ್ ಆಗಿದೆ. ನಿರ್ದೇಶಕ ರಾಜಮೌಳಿ ಮತ್ತು ಮಹೇಶ್ ಬಾಬು ಅವರು ಮುಖ ಮೂತಿ ನೋಡದೇ ಹೊಡೆದಾಡಿಕೊಂಡ ದೃಶ್ಯ ಈ ವಿಡಿಯೋದಲ್ಲಿ ಇದೆ. ಆದರೆ ಇದು…

Read More

ಲಕ್ನೋ ವಿವಿ ಆವರಣದಲ್ಲಿ ನಮಾಜ್ ವರ್ಸಸ್ ಹನುಮಾನ್ ಚಾಲೀಸಾ ಹಗ್ಗಜಗ್ಗಾಟ; 13 ವಿದ್ಯಾರ್ಥಿಗಳಿಗೆ ನೋಟಿಸ್ ಜಾರಿ – Kannada News | Namaz vs Hanuman Chalisa in Lucknow University campus 13 Students Issued Notice ABVP workers Detained

ನವದೆಹಲಿ, ಫೆಬ್ರವರಿ 24: ಲಕ್ನೋ ವಿಶ್ವವಿದ್ಯಾಲಯದ ಆವರಣದೊಳಗೆ ನಮಾಜ್ ಮಾಡಿದ್ದನ್ನು ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಹನುಮಾನ್ ಚಾಲೀಸಾ (Hanuman Chalisa) ಪಠಿಸಿರುವ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಕಾರ್ಯಕರ್ತರು ಲಕ್ನೋ ವಿಶ್ವವಿದ್ಯಾಲಯದ ಕ್ಯಾಂಪಸ್‌ನೊಳಗಿನ ಐತಿಹಾಸಿಕ ಲಾಲ್ ಬರಾದಾರಿಯಲ್ಲಿ ಹನುಮಾನ್ ಚಾಲೀಸಾ ಪಠಿಸಲು ಪ್ರಯತ್ನಿಸಿದ ನಂತರ ಇಂದು ಲಕ್ನೋ ವಿಶ್ವವಿದ್ಯಾಲಯದಲ್ಲಿ ಉದ್ವಿಗ್ನತೆ ಉಂಟಾಯಿತು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ, ಹಲವಾರು…

Read More

ವಿಜಯ್ ದೇವರಕೊಂಡ-ರಶ್ಮಿಕಾ ಮದುವೆಯಲ್ಲಿ ಹಲವು ವಿಶೇಷತೆಗಳು – Kannada News | Vijay Deverakonda and Rashmika Mandanna wedding rituals details

ವಿಜಯ್ ದೇವರಕೊಂಡ (Vijay Deverakonda) ಮತ್ತು ಕನ್ನಡತಿ ರಶ್ಮಿಕಾ ಮಂದಣ್ಣ ವಿವಾಹವಾಗುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದ ಈ ಜೋಡಿ ಇದೀಗ ತಮ್ಮ ಪ್ರೀತಿಗೆ ಮದುವೆಯ ಮೊಹರು ಒತ್ತುತ್ತಿದೆ. ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ರಶ್ಮಿಕಾ ಮತ್ತು ವಿಜಯ್ ಫೆಬ್ರವರಿ 26 ರಂದು ವಿವಾಹ ಆಗಲಿದ್ದಾರೆ. ಇವರ ವಿವಾಹವು ಉದಯಪುರದ ಅತ್ಯಂತ ಖಾಸಗಿ ಮತ್ತು ಐಶಾರಾಮಿ ರೆಸಾರ್ಟ್​​ನಲ್ಲಿ ನಡೆಯುತ್ತಿದೆ. ಕೆಲ ದಿನಗಳ ಮುಂಚೆಯೇ ಈ ಜೋಡಿ ಮತ್ತು ಅವರ ಆಪ್ತರು, ಕುಟುಂಬದವರು ರೆಸಾರ್ಟ್ ತಲುಪಿದ್ದು ಮದುವೆ ಕಾರ್ಯ…

Read More

ಧಾರವಾಡದಲ್ಲಿ ಉಗ್ರ ಹೋರಾಟ ಬೆನ್ನಲ್ಲೇ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್ – Kannada News | Karnataka finance department approves appointment 24 thousand Jobs after Youths Protest in Dharwad

ಬೆಂಗಳೂರು, (ಫೆಬ್ರವರಿ 24):ಕರ್ನಾಟಕದಲ್ಲಿ (Karnataka) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ (Jobs) ಭರ್ತಿಗೆ ಆಗ್ರಹಿಸಿ ವಿದ್ಯಾಕಾಶಿ ಧಾರವಾಡದಲ್ಲಿ ಈ ಹಿಂದೆಯೂ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು. ಆದರೂ ಸರ್ಕಾರ ಯಾವುದೇ ಕ್ರಮಕೈಗೊಳ್ಳದಿದ್ದರಿಂದ ರೊಚ್ಚಿಗೆದ್ದ ಯುವಕರು ಸರ್ಕಾರದ ವಿರುದ್ಧ ಮತ್ತೆ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಯುವಕರ ಕಿಚ್ಚು ಜೋರಾಗುತ್ತಿದ್ದಂತೆಯೇ ಇತ್ತ ಕರ್ನಾಟಕ ಆರ್ಥಿಕ ಇಲಾಖೆ (Karnataka finance department ), 24 ಸಾವಿ ಹುದ್ದೆಗಳ ನೇಮಕಾತಿಗೆ ನೇಮಕಾತಿಗೆ ಮಂಜೂರಾತಿ ನೀಡಿದೆ. ಕರ್ನಾಟಕದ ವಿವಿಧ ಒಟ್ಟು 32…

Read More

ಬೆಂಗಳೂರಿನಲ್ಲಿ ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸರ ದಾಳಿ: ಷೇರು ಮಾರುಕಟ್ಟೆ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರ ಬಂಧನ! – Kannada News | Jayanagar Stock Market Fraud: High Returns Scam Call Center Busted by Cyber Police

ಬೆಂಗಳೂರು, ಫೆ.24: ಸ್ಟಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಸಾರ್ವಜನಿಕರ ಹಣಕ್ಕೆ ಕನ್ನ ಹಾಕುತ್ತಿದ್ದ ಹೈಟೆಕ್ ವಂಚಕರ ಜಾಲವನ್ನು ಕರ್ನಾಟಕ ಸೈಬರ್ ಕಮಾಂಡ್ ಪತ್ತೆಹಚ್ಚಿದೆ. ಜಯನಗರದಲ್ಲಿ ಕಾಲ್ ಸೆಂಟರ್ ರೂಪದಲ್ಲಿ (stock market scam) ಕಾರ್ಯನಿರ್ವಹಿಸುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಜಯನಗರದ 9ನೇ ಬ್ಲಾಕ್‌ನ ಅಂಜನಾದ್ರಿ ಅವೆನ್ಯೂನಲ್ಲಿರುವ ‘ಮಲ್ಟಿವೇವ್ ಬಿಸಿನೆಸ್ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್’ ಎಂಬ ಕಚೇರಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂಸ್ಥೆಯು ಹೊರರಾಜ್ಯದ…

Read More

ಉದ್ಯೋಗಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆ: ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ ಸಿದ್ದರಾಮಯ್ಯ – Kannada News | CM Responds to Job Protests: Siddaramaiah Blames BJP for Karnataka Vacancy Crisis

ಉದ್ಯೋಗಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆImage Credit source: Google ಬೆಂಗಳೂರು, ಫೆಬ್ರವರಿ 24: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ಬೆನ್ನಲ್ಲೇ,  ವಿಚಾರವನ್ನು ಗಂಭೀರವಾಗಿ ಪರಿಗಣಿಸಿರೋದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅನೇಕ ಸರ್ಕಾರಿ ಉದ್ಯೋಗಾರ್ಥಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಪ್ರತಿಯೊಂದು ಅರ್ಜಿಯ ಹಿಂದೆ ಒಂದು ಕನಸು, ಒಂದು ಕುಟುಂಬದ ಆಸೆ, ಹಲವು ವರ್ಷಗಳ ಪರಿಶ್ರಮ  ಮತ್ತು ಕರ್ನಾಟಕಕ್ಕೆ ಸೇವೆ ಸಲ್ಲಿಸುವ ಉದ್ದೇಶ ಇದೆ. ಮುಖ್ಯಮಂತ್ರಿಯಾಗಿ, ನಿಮ್ಮ…

Read More

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಹತ್ಯೆ: ಕೊಲೆಗೆ ಸ್ಫೋಟಕ ಕಾರಣ ಬಿಚ್ಚಿಟ್ಟ ಎಸ್ಪಿ – Kannada News | Shivamogga SP Nikhil Reveals Reason to SSLC Student Sanketh Murder Case

ಶಿವಮೊಗ್ಗ, (ಫೆಬ್ರವರಿ 24): ಶಿವಮೊಗ್ಗದ SSLC ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಸಹ ಪ್ರತಿಕ್ರಿಯಿಸಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ಕೇಸ್​​ ಬಗ್ಗೆ ಶಿವಮೊಗ್ಗ ಎಸ್.ಪಿ. ನಿಖಿಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಈಗಾಗಲೇ 7 ಜನ ಅಪ್ರಾಪ್ತರನ್ನು ಕೊಲೆ ಸಂಬಂಧ ಬಂಧಿಸಲಾಗಿದೆ. ಕ್ರಿಕೆಟ್ ಆಟದಲ್ಲಿ ನಡೆದಿದ್ದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಗಿರೀಶ್ ಜೊತೆ ಆರೋಪಿಗಳು ಕ್ರಿಕೆಟ್ ಆಟವಾಡಿದ್ದ ಹಿನ್ನೆಲೆಯಲ್ಲಿ ಗಲಾಟೆ ಮಾಡುತ್ತಿದ್ದರು. ಈ ವೇಳೆ ಸಂಕೇತ್…

Read More