All posts by nagaraj11081993

Upskill Your Career: ವೃತ್ತಿಜೀವನದಲ್ಲಿ ಹೊಸ ದಿಕ್ಕು ನೀಡಬಲ್ಲ 5 ಪ್ರಮುಖ ಆನ್‌ಲೈನ್ ಕೋರ್ಸ್‌ಗಳು – Kannada News | Upskill Your Career: 5 Online Courses for Professionals to Boost Growth and Salary

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪದವಿ ಮಾತ್ರ ಸಾಕಾಗುವುದಿಲ್ಲ, ನಿರಂತರವಾಗಿ ಹೊಸ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಈಗಾಗಲೇ ಉದ್ಯೋಗದಲ್ಲಿರುವವರಿಗೆ ಕಚೇರಿ ಜವಾಬ್ದಾರಿಗಳು ಮತ್ತು ವೈಯಕ್ತಿಕ ಜೀವನದ ಮಧ್ಯೆ ಸಮತೋಲನ ಸಾಧಿಸುವುದು ಸವಾಲಾಗಿರಬಹುದು. ಇಂತಹ ಸಂದರ್ಭದಲ್ಲಿ, ಆನ್‌ಲೈನ್ ಕೋರ್ಸ್‌ಗಳು ಅತ್ಯುತ್ತಮ ಆಯ್ಕೆಯಾಗಿವೆ. ಇವುಗಳು ನಿಮ್ಮ ಪ್ರಸ್ತುತ ಉದ್ಯೋಗದಲ್ಲಿ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದಲ್ಲದೆ, ಬಡ್ತಿ ಮತ್ತು ಉತ್ತಮ ಸಂಬಳದ ಅವಕಾಶಗಳಿಗೂ ದಾರಿ ಮಾಡಿಕೊಡುತ್ತವೆ. ವೃತ್ತಿಪರರಿಗೆ ವೃತ್ತಿಜೀವನದಲ್ಲಿ ಹೊಸ ದಿಕ್ಕು ನೀಡಬಲ್ಲ ಐದು ಪ್ರಮುಖ ಕೋರ್ಸ್‌ಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.

ಕೃತಕ ಬುದ್ಧಿಮತ್ತೆ (AI) ಮತ್ತು ಯಂತ್ರ ಕಲಿಕೆ:

ಭವಿಷ್ಯದ ತಂತ್ರಜ್ಞಾನವು AI ಮತ್ತು ಯಂತ್ರ ಕಲಿಕೆ (Machine Learning) ಆಧಾರಿತವಾಗಿದೆ. ತಾಂತ್ರಿಕ ಹಿನ್ನೆಲೆಯಿರುವವರಿಗೆ ಇದು ವಿಶೇಷವಾಗಿ ಉಪಯುಕ್ತ. ಈ ಕೋರ್ಸ್‌ಗಳಲ್ಲಿ ಡೇಟಾ ಆಧಾರಿತ ನಿರ್ಧಾರಗಳಿಗಾಗಿ ಕಂಪ್ಯೂಟರ್‌ಗಳನ್ನು ಹೇಗೆ ತರಬೇತಿ ಮಾಡುವುದು ಎಂಬುದನ್ನು ಕಲಿಸಲಾಗುತ್ತದೆ. ಇದು ಸ್ವಲ್ಪ ಮುಂದುವರಿದ ಮಟ್ಟದ ಕೋರ್ಸ್ ಆದರೂ, ಇದನ್ನು ಪೂರ್ಣಗೊಳಿಸಿದವರು ಉತ್ತಮ ವೇತನ ಮತ್ತು ಹೆಚ್ಚಿನ ಅವಕಾಶಗಳನ್ನು ಪಡೆಯುವ ಸಾಧ್ಯತೆ ಇದೆ.

ಡಿಜಿಟಲ್ ಮಾರ್ಕೆಟಿಂಗ್:

ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಪ್ರಭಾವ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದೆ. SEO, ಸಾಮಾಜಿಕ ಮಾಧ್ಯಮ ಮಾರ್ಕೆಟಿಂಗ್, ಇಮೇಲ್ ಮಾರ್ಕೆಟಿಂಗ್ ಮತ್ತು ವಿಷಯ ತಂತ್ರಗಳ ಬಗ್ಗೆ ಈ ಕೋರ್ಸ್ ತರಬೇತಿ ನೀಡುತ್ತದೆ. ಸೃಜನಶೀಲತೆ ಮತ್ತು ಆನ್‌ಲೈನ್ ಬ್ರ್ಯಾಂಡಿಂಗ್‌ನಲ್ಲಿ ಆಸಕ್ತಿ ಹೊಂದಿರುವವರಿಗೆ ಇದು ಸೂಕ್ತ ಆಯ್ಕೆಯಾಗಿದೆ.

ಪ್ರಾಜೆಕ್ಟ್​​ ಮ್ಯಾನೇಜ್ಮೆಂಟ್:

ತಂಡವನ್ನು ಮುನ್ನಡೆಸಲು ಅಥವಾ ದೊಡ್ಡ ಯೋಜನೆಗಳನ್ನು ನಿರ್ವಹಿಸಲು ಬಯಸುವವರಿಗೆ ಪ್ರಾಜೆಕ್ಟ್​​ ಮ್ಯಾನೇಜ್ಮೆಂಟ್ ಕೋರ್ಸ್ ಅಗತ್ಯ. ಇದು ಸಮಯ ನಿರ್ವಹಣೆ, ಬಜೆಟ್ ಯೋಜನೆ, ಅಪಾಯ ವಿಶ್ಲೇಷಣೆ ಮತ್ತು ನಾಯಕತ್ವ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುತ್ತದೆ. ಯಾವುದೇ ಸಂಸ್ಥೆಯಲ್ಲಿ ನಿರ್ವಹಣಾ ಹುದ್ದೆಗಳಿಗೆ ಇದು ಮಹತ್ವದ ಕೌಶಲ್ಯವಾಗಿದೆ.

ಡೇಟಾ ವಿಶ್ಲೇಷಣೆ (Data Analytics):

ಇಂದು ಡೇಟಾ-ಚಾಲಿತ ನಿರ್ಧಾರಗಳ ಯುಗವಾಗಿದೆ. ಕಂಪನಿಗಳು ಡೇಟಾವನ್ನು ಅರ್ಥಮಾಡಿಕೊಂಡು ತಂತ್ರಗಳನ್ನು ರೂಪಿಸುವ ಪರಿಣಿತರನ್ನು ಹುಡುಕುತ್ತಿವೆ. ಡೇಟಾ ಅನಾಲಿಟಿಕ್ಸ್ ಕೋರ್ಸ್‌ಗಳಲ್ಲಿ Python, SQL ಮತ್ತು ಡೇಟಾ ದೃಶ್ಯೀಕರಣ ಉಪಕರಣಗಳನ್ನು ಕಲಿಸಲಾಗುತ್ತದೆ. ಗಣಿತ ಅಥವಾ ಅಂಕಿಅಂಶಗಳಲ್ಲಿ ಆಸಕ್ತಿ ಹೊಂದಿರುವವರಿಗೆ ಇದು ಉತ್ತಮ ಆಯ್ಕೆ. ಇದನ್ನು ಪೂರ್ಣಗೊಳಿಸಿದ ಬಳಿಕ ವಿವಿಧ ವಲಯಗಳಲ್ಲಿ ಡೇಟಾ ವಿಶ್ಲೇಷಕರಾಗಿ ಉದ್ಯೋಗಾವಕಾಶಗಳಿವೆ.

ಇದನ್ನೂ ಓದಿ: ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​; ನಿಮ್ಮದೇ ಜಿಲ್ಲೆಯ ಆಧಾರ್ ಕೇಂದ್ರಗಳಲ್ಲಿ ಉದ್ಯೋಗವಕಾಶ

ವ್ಯವಹಾರ ನಿರ್ವಹಣೆ ಮತ್ತು ನಾಯಕತ್ವ:

ಉನ್ನತ ಹುದ್ದೆಗಳನ್ನು ಗುರಿಯಾಗಿಟ್ಟುಕೊಂಡಿರುವವರಿಗೆ Business Management ಅಥವಾ Leadership ಕೋರ್ಸ್ ಅತ್ಯುತ್ತಮ. ಇದು ವ್ಯವಹಾರ ತಂತ್ರ, ಹಣಕಾಸು ನಿರ್ವಹಣೆ ಮತ್ತು ಪರಿಣಾಮಕಾರಿ ಜನರ ನಿರ್ವಹಣೆಯ ಕುರಿತು ತಿಳುವಳಿಕೆಯನ್ನು ನೀಡುತ್ತದೆ. ಈ ತರಬೇತಿ ನಿಮ್ಮ ದೃಷ್ಟಿಕೋನವನ್ನು ವಿಸ್ತರಿಸಿ, ಯಶಸ್ವಿ ನಾಯಕರಾಗಲು ನೆರವಾಗುತ್ತದೆ.

ಆನ್‌ಲೈನ್ ಅಧ್ಯಯನದ ಪ್ರಮುಖ ಪ್ರಯೋಜನಗಳು:

ಆನ್‌ಲೈನ್ ಕೋರ್ಸ್‌ಗಳ ದೊಡ್ಡ ಲಾಭವೆಂದರೆ ಅವುಗಳ ನಮ್ಯತೆ. ನೀವು ನಿಮ್ಮ ಅನುಕೂಲಕ್ಕೆ ತಕ್ಕಂತೆ – ರಾತ್ರಿ ಸಮಯದಲ್ಲಿ ಅಥವಾ ವಾರಾಂತ್ಯಗಳಲ್ಲಿ ಇವುಗಳನ್ನು ಕಲಿಯಬಹುದು. ಹೆಚ್ಚಿನ ಕೋರ್ಸ್‌ಗಳು ಪ್ರಮಾಣಪತ್ರಗಳೊಂದಿಗೆ ಬರುತ್ತವೆ, ಇದು ನಿಮ್ಮ ರೆಸ್ಯೂಮ್ ಅನ್ನು ಬಲಪಡಿಸುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೊಬೈಲ್​ನಲ್ಲಿ 3 ಬಾರಿ ತಲಾಖ್ ಹೇಳಿ ಹೆಂಡತಿಗೆ ಹೆದರಿಸಿದ ಗಂಡ; ಕೇರಳದ ವ್ಯಕ್ತಿ ಮೇಲೆ ಕಿರುಕುಳದ ಆರೋಪ – Kannada News | Kerala Man Booked For Pronouncing Triple Talaq Over Phone to Wife

ಕೊಚ್ಚಿ, ಫೆಬ್ರವರಿ 24: ಮೊಬೈಲ್ ಮೂಲಕ ತ್ರಿವಳಿ ತಲಾಖ್ (Triple Talaq) ಹೇಳಿ ಪತ್ನಿಯನ್ನು ಕ್ರೌರ್ಯಕ್ಕೆ ಒಳಪಡಿಸಿದ ಆರೋಪದ ಮೇಲೆ 32 ವರ್ಷದ ವ್ಯಕ್ತಿಯ ವಿರುದ್ಧ ಕೇಸ್ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 85ರ ಅಡಿಯಲ್ಲಿ ಮುವಾಟ್ಟುಪುಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಪತಿ ಅಥವಾ ಅವನ ಸಂಬಂಧಿಕರು ಮಹಿಳೆಯ ಮೇಲೆ ಕ್ರೌರ್ಯ ನಡೆಸುವುದಕ್ಕೆ ಸಂಬಂಧಿಸಿದ್ದಾಗಿದೆ.

ತಲಾಖ್ ಅನ್ನು ಅಮಾನ್ಯ ಮತ್ತು ಕಾನೂನುಬಾಹಿರವೆಂದು ಪರಿಗಣಿಸುವ ಮುಸ್ಲಿಂ ಮಹಿಳಾ (ವಿವಾಹ ಹಕ್ಕುಗಳ ರಕ್ಷಣೆ) ಕಾಯ್ದೆ, 2019ರ ಸೆಕ್ಷನ್ 3 ಮತ್ತು 4ರ ಅಡಿಯಲ್ಲಿಯೂ ಕೇಸ್ ದಾಖಲಿಸಲಾಗಿದೆ. ಇದು ತಲಾಖ್ ಅನ್ನು ಅಮಾನ್ಯ ಮತ್ತು ಕಾನೂನುಬಾಹಿರಗೊಳಿಸುತ್ತದೆ. ತಲಾಖ್ ಉಚ್ಚರಿಸುವುದಕ್ಕೆ ಶಿಕ್ಷೆಯನ್ನು ಸೂಚಿಸುತ್ತದೆ.

ಇದನ್ನೂ ಓದಿ: Video: ನನ್ಗೇ ತಲಾಖ್ ಕೊಡ್ತೀಯಾ? ಕೋರ್ಟ್​ ಆವರಣದಲ್ಲಿ ಗಂಡನಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗ ಥಳಿಸಿದ ಮುಸ್ಲಿಂ ಮಹಿಳೆ

ಆರೋಪಿಯನ್ನು ಅಲಪ್ಪುಳ ಜಿಲ್ಲೆಯ ಕಾರ್ತಿಕಪ್ಪಲ್ಲಿ ತಾಲೂಕಿನ ಮೂಲದ ಸುಹೈಲ್ ಎಂದು ಗುರುತಿಸಲಾಗಿದೆ. ಈ ದಂಪತಿ ಸೆಪ್ಟೆಂಬರ್ 18, 2016ರಂದು ಮುಸ್ಲಿಂ ಧಾರ್ಮಿಕ ಪದ್ಧತಿಗಳನ್ನು ಅನುಸರಿಸಿ ವಿವಾಹವಾಗಿದ್ದರು. ಗಂಡ ಮತ್ತು ಹೆಂಡತಿಯಾಗಿ ಒಟ್ಟಿಗೆ ವಾಸಿಸುತ್ತಿದ್ದರು. ಆದರೆ, ಅವರಿಬ್ಬರ ನಡುವೆ ಇತ್ತೀಚೆಗೆ ವೈಮಸ್ಸು ಹೆಚ್ಚಾಗಿತ್ತು.

ಮದುವೆಯ ನಂತರ, ಸುಹೈಲ್ ಹೆಚ್ಚಿನ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದ. ಕ್ರಮೇಣ ಸಮಸ್ಯೆಗಳನ್ನು ಸೃಷ್ಟಿಸಲು ಪ್ರಾರಂಭಿಸಿದ. ಆ ಮಹಿಳೆಯನ್ನು ಮುವಾಟ್ಟುಪುಳ ಪ್ರದೇಶದಲ್ಲಿ ಬೇರೆಯಾಗಿ ವಾಸಿಸುವಂತೆ ಒತ್ತಾಯಿಸಿದ. ಈ ಅವಧಿಯಲ್ಲಿ ಆಕೆ ಹಾಸ್ಟೆಲ್‌ಗಳು ಮತ್ತು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದರು.

ಇದನ್ನೂ ಓದಿ: ಕೋಲಾರ: ಮಲ ತಂದೆ ತಾಯಿಗೆ ತಲಾಖ್ ನೀಡಿದ್ದರಿಂದ ಮನನೊಂದು ಮಗ ಆತ್ಮಹತ್ಯೆ

ಮೇ 21, 2025ರಂದು ರಾತ್ರಿ 9 ಗಂಟೆ ಸುಮಾರಿಗೆ ಆರೋಪಿಯು ತನ್ನ ಹೆಂಡತಿಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದ. ಅಲ್ಲದೆ, ಆಕೆಯ ಕುಟುಂಬದ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದಾದ ನಂತರ, ತಲಾಖ್ ಎಂದು ಹೇಳಿ ಆಕೆಗೆ ವಿಚ್ಛೇದನ ನೀಡಿರುವುದಾಗಿ ಎಸ್‌ಎಂಎಸ್ ಕಳುಹಿಸಿದ್ದ ಎಂದು ಆರೋಪಿಸಲಾಗಿದೆ.

ನನ್ನ ಗಂಡ ನನ್ನ ಮೇಲೆ ನಿರಂತರವಾಗಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದಾನೆ ಎಂದು ಆಕೆ ಆರೋಪಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ 5 ಸಾವಿರ ರೂ. ದಂಡ ಫಿಕ್ಸ್!: ಕಾರಣ ಇಲ್ಲಿದೆ – Kannada News | Chhattisgarh Medaki Village Imposes Rupees 5,000 Fine for Spreading Rumours to Maintain Peace

ಬಾಲೋದ್, ಫೆಬ್ರವರಿ 24: ಛತ್ತೀಸ್‌ಗಢದ ಬಾಲೋದ್ ಜಿಲ್ಲೆಯ ಮೆಡಕಿ ಗ್ರಾಮವು ಸುಳ್ಳು ಸುದ್ದಿ ಮತ್ತು ವದಂತಿಗಳ ಹಾವಳಿಯನ್ನು ತಡೆಯಲು ಮಾದರಿ ನಿರ್ಧಾರ ಕೈಗೊಂಡಿದೆ. ಗ್ರಾಮಸಭೆಯಲ್ಲಿ ಫೆಬ್ರವರಿ 19ರಂದು ಕೈಗೊಂಡ ನಿರ್ಣಯದ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ, ಸಾಮಾಜಿಕ ಅಥವಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ವದಂತಿ ಹಬ್ಬಿಸಿದರೆ 5,000 ರೂ. ದಂಡ ವಿಧಿಸಲಾಗುತ್ತದೆ. ವೈಯಕ್ತಿಕ ಗೌರವಕ್ಕೆ ಧಕ್ಕೆ ತರುವಂತಹ ಹೇಳಿಕೆಗಳಿಗೂ ಈ ನಿಯಮ ಅನ್ವಯಿಸುತ್ತದೆ. ಈ ನಿಯಮ ಜಾರಿಗೆ ಬರಲು ಪ್ರಮುಖ ಕಾರಣವೆಂದರೆ ಸಣ್ಣಪುಟ್ಟ ವಿಚಾರಗಳಿಗೂ ಗಾಳಿಸುದ್ದಿಗಳು ಹಬ್ಬಿ ಗ್ರಾಮದಲ್ಲಿ ದೊಡ್ಡ ಜಗಳಗಳು ನಡೆಯುತ್ತಿರೋದು ಎನ್ನಲಾಗಿದೆ. ವಿಶೇಷವಾಗಿ ವಾಟ್ಸಾಪ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಗ್ರಾಮಸ್ಥರ ನಡುವೆ ವೈಷಮ್ಯ ಸೃಷ್ಟಿಸುತ್ತಿದ್ದವು. ಗ್ರಾಮದ ಹಿರಿಯರು ಮತ್ತು ಪಂಚಾಯತ್ ಸದಸ್ಯರು ಒಟ್ಟಾಗಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಈ ನಿರ್ಧಾರಕ್ಕೆ ಬಂದಿದ್ದಾರೆ. ಗ್ರಾಮದ ಪ್ರವೇಶದ್ವಾರ ಹಾಗೂ ಪ್ರಮುಖ ಸ್ಥಳಗಳಲ್ಲಿ ಈ ನಿಯಮದ ಕುರಿತು ಬೋರ್ಡ್‌ಗಳನ್ನು ಹಾಕಲಾಗಿದೆ. ವದಂತಿ ಹಬ್ಬಿಸುವವರ ಬಗ್ಗೆ ಮಾಹಿತಿ ನೀಡಿದವರಿಗೆ 501 ರೂ. ಬಹುಮಾನ ನೀಡಿ, ಅವರ ಹೆಸರನ್ನು ಗೌಪ್ಯವಾಗಿ ಇಡಲಾಗುತ್ತದೆ. ದಂಡದಿಂದ ಸಂಗ್ರಹವಾದ ಹಣವನ್ನು ಗ್ರಾಮದ ಅಭಿವೃದ್ಧಿ ಮತ್ತು ಬಡವರ ಸಹಾಯಕ್ಕೆ ಬಳಸಲಾಗುತ್ತದೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ – Kannada News | A Man denied temple entry for dalit newlywed couple In Tumakuru, video Goes Viral

ತುಮಕೂರು, (ಫೆಬ್ರವರಿ 24): ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತವರಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ದೇವರು ಬಂದಂತೆ ನಾಟಕವಾಡಿದ ಗ್ರಾಮಸ್ಥನೊಬ್ಬ ದಲಿತ ನವದಂಪತಿಗಳನ್ನು ದೇವಾಲಯದಿಂದ ಹೊರಗೆ ಕಳಿಸಿರುವ ಘಟನೆ ನಡೆದಿದೆ. ತುಮಕೂರು (Tumakuru) ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಅರಸಮ್ಮ ದೇವಾಲಯದಲ್ಲಿ ಘಟನೆ ನಡೆದಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಹೊಸದಾಗಿ ಮದುವೆಯಾಗಿದ್ದ ದಂಪತಿ ದೇವಾಲಯಕ್ಕೆ ಹೋಗಿದ್ದರು. ಈ ವೇಳೆ ದೇವಾಲಯದ ಒಳಗಿದ್ದ ವ್ಯಕ್ತಿಯೊಬ್ಬ ದಂಪತಿಗೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿಲ್ಲ. ಬಳಿಕ ದೇವರು ಬಂದಂತೆ ನಟಿಸಿ ದಲಿತ ಕುಟುಂಬವನ್ನು ಹೊರಕಳಿಸಿದ್ದಾನೆ. ದಲಿತರು ನಿಮಗೆ ಪ್ರವೇಶವಿಲ್ಲ, ಪುಣ್ಯ ಮಾಡಿಸಬೇಕು’ ಎಂದ ಗದರಿ ಹೊರಕಳಿಸಿದ್ದಾನೆ. ದೇವರು ಬಂದಂತೆ ನಟಿಸಿ ನಾಟಕವಾಡಿದ ಆರೋಪಿಯನ್ನು ನಾರಾಯಣಪ್ಪ ಎಂದು ಗುರುತಿಸಲಾಗಿದ್ದು, ಈತ ನವದಂಪತಿಗೆ ‘ನಡೀ ಆಚೆಗೆ’ ಎಂದು ಗದರಿಸಿ ಅವಮಾನ ಮಾಡಿದ್ದಾನೆ.

ಈ ಪ್ರಕರಣದಲ್ಲಿ ತಹಶೀಲ್ದಾರ್ ಮಧ್ಯೆ ಪ್ರವೇಶಿಸಿ ಬಳಿಕ ಗೋಣಿ ತುಮಕೂರು ಗ್ರಾಮದಲ್ಲಿ ಆಯೋಜಿಸಿದ್ದ ಶಾಂತಿ ಸಭೆ ಯಶಸ್ವಿಯಾಗಿದೆ. ​ಜಾತಿಯ ವಿಷಬೀಜ ಬಿಡಿ, ಬಸವಣ್ಣನವರ ತತ್ವ ಪಾಲಿಸಿ ಸೌಹಾರ್ದತೆಯಿಂದ ಇರುವಂತೆ ಗ್ರಾಮಸ್ಥರಿಗೆ ತಹಶೀಲ್ದಾರ್​​ ಸಲಹೆ ನೀಡಿದರು. ಬಳಿಕ ನವಜೋಡಿಯ ಕೈಹಿಡಿದು ದೇಗುಲದೊಳಗೆ ಕರೆದೊಯ್ದ ದೇವರ ದರ್ಶನ ಮಾಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಶಂಖನಾದವು ಕಿವಿಗೆ ಬೀಳುತ್ತಿದ್ದಂತೆ ಗೋಶಾಲೆಯತ್ತ ಓಡೋಡಿ ಬಂದ ಹಸುಗಳು – Kannada News | The cows headed for the cowshed as the conch shell sound fell into their ears.

ಪ್ರಾಣಿಗಳೇ (animals) ಗುಣದಲಿ ಮೇಲು ಎನ್ನುವ ಮಾತಿದೆ. ಹೀಗಾಗಿ ಈ ಪ್ರಾಣಿಗಳು ತನ್ನನ್ನು ಸಾಕಿದ ಮಾಲೀಕರಿಗೆ ವಿಧೇಯವಾಗಿರುತ್ತದೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ವ್ಯಕ್ತಿಯೊಬ್ಬ ಶಂಖ ಊದುತ್ತಿದ್ದಂತೆ ಗೋಶಾಲೆಗೆಯತ್ತ ಹಸು (cow) ಸೇರಿದಂತೆ ಹೋರಿಗಳು ಓಡಿ ಹೋಗಿವೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಈ ದೃಶ್ಯ ನೋಡಿ ಅಚ್ಚರಿ ವ್ಯಕ್ತ ಪಡಿಸಿದ್ದಾರೆ.

ದೀಪಕ್ (Deepak) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಹಸುಗಳು ಸೇರಿದಂತೆ ಹೋರಿಗಳು ಮೇಯುತ್ತಿವೆ. ವ್ಯಕ್ತಿಯೊಬ್ಬ ಶಂಖ ಊದುತ್ತಿದ್ದಂತೆ ಹಸು, ಹೋರಿಗಳು ಗೋಶಾಲೆಯತ್ತ ಓಡಿ ಹೋಗುತ್ತಿರುವ ದೃಶ್ಯವನ್ನು ನೀವಿಲ್ಲಿ ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕರುವನ್ನು ಕಂಡೊಡನೆ ಓಡೋಡಿ ಬಂದು ಮುದ್ದಿಸಿದ ಹಸು

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಶಂಖನಾದಕ್ಕೆ ಇರುವ ಶಕ್ತಿ ಅಂತಹದ್ದು ಎಂದರೆ, ಮತ್ತೊಬ್ಬರು, ಮತ್ತೆ ಮತ್ತೆ ನೋಡಬೇಕೆನಿಸುವ ದೃಶ್ಯ ಎಂದಿದ್ದಾರೆ. ಇನ್ನೊಬ್ಬರು, ಸೂಪರ್ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ವಿನೂತನ ರೂಲ್ಸ್ ಏಕೆ ಗೊತ್ತಾ? – Kannada News | No ‘chugli’ rule in Chhattisgarh village: Gram committee introduces Rs 5,000 fine

ಛತ್ತೀಸ್‌ಗಢದ (Chhattisgarh )ಬಾಲೋದ್ ಜಿಲ್ಲೆಯ ಮೆಡ್ಡಿ ಎಂಬ ಗ್ರಾಮದಲ್ಲಿ ವಿಶಿಷ್ಟವಾದ ಕಾನೂನನ್ನು ಇತ್ತೀಚೆಗೆ ಅನುಷ್ಠಾನ ಮಾಡಲಾಗಿದೆ. ಅದರಂತೆ ಒಂದು ವೇಳೆ ಸುಳ್ಳು ಸುದ್ದಿ ಅಥವಾ ವದಂತಿ ಹಬ್ಬಿಸುವುದು ಕಂಡುಬಂದಲ್ಲಿ ಅಂತಹವರಿಗೆ 5,000 ರೂ. ದಂಡ ವಿಧಿಸುವ ನಿಯಮ ಜಾರಿ ಮಾಡಲಾಗಿದೆ. ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವಂತಹವರಿಗೆ ದಂಡ ವಿಧಿಸುವ ಮೂಲಕ ಸುಳ್ಳು ಸುದ್ದಿಯಿಂದ ಉಂಟಾಗುವ ಘರ್ಷಣೆಗಳನ್ನು ತಡೆದು ಗ್ರಾಮದಲ್ಲಿ ಶಾಂತಿ ನೆಲೆಸುವಂತೆ ಮಾಡುವ ಪ್ರಯತ್ನ ಇದಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ವದಂತಿ ಹರಡಿ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುವಂತಿಲ್ಲ. ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮದಲ್ಲೂ ಸುಳ್ಳುಸುದ್ದಿಗಳನ್ನು ಹಬ್ಬಿಸುವುದಕ್ಕೆ ನಿಷೇಧ ವೈಯಕ್ತಿಕ ಗೌರವ, ಭಾವನೆಗೆ ಧಕ್ಕೆ ತರುವ ಹೇಳಿಕೆ ನೀಡುವುದನ್ನು ವದಂತಿ ಎಂದು ಪರಿಗಣನೆ ಮಾಡಿ 5,000 ರೂ ದಂಡ ಹಾಕಲಾಗುತ್ತದೆ. ಫೆಬ್ರವರಿ 19ಕ್ಕೆ ನಡೆದ ಗ್ರಾಮಸಭೆಯಲ್ಲಿ ‘ಚುಗ್ಲಿ’ ಅಥವಾ ಚಾಡಿ ಅಥವಾ ವದಂತಿಗೆ ನಿಷೇಧ ವಿಧಿಸುವ ಬಗ್ಗೆ ಗ್ರಾಮಸ್ಥರು ನಿರ್ಧರಿಸಿದ್ದು, ತಕ್ಷಣದಿಂದಲೇ ಅದು ಅನುಷ್ಠಾನಗೊಂಡಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ತರಕಾರಿಯಷ್ಟೇ ಅಲ್ಲ ರಾಜ್ಯದ ಜನರು ಕುಡಿಯುವ ನೀರೂ ಕಲುಷಿತ!: ಶಾಕಿಂಗ್​ ವಿಚಾರ ಬಹಿರಂಗ – Kannada News | Karnataka Water Contamination: Report Reveals Chemical and Bacterial Threat to Drinking Water

ಬೆಂಗಳೂರು, ಫೆಬ್ರವರಿ 24: ರಾಜ್ಯದ ತರಕಾರಿಗಳಲ್ಲಿ ಹೇರಳವಾಗಿ ಸೀಸ ಮತ್ತು ಕೀಟನಾಶಕಗಳ ಅಂಶಗಳು ಪತ್ತೆಯಾಗಿರುವ ವಿಚಾರ ಜನರಲ್ಲಿ ಆತಂಕ ಹುಟ್ಟಿಸಿರುವ ನಡುವೆ, ಬೇಸಿಗೆ ಆರಂಭದ ಹೊತ್ತಲ್ಲಿ ನೀರಿನ ಗುಣಮಟ್ಟ ಹದಗೆಟ್ಟ ಶಾಕಿಂಗ್ ರಿಪೋರ್ಟ್ ಹೊರಬಂದಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಗ್ರಹಿಸಲಾಗಿದ್ದ ನೀರಿನ ಮಾದರಿಯನ್ನು ಜಲಜೀವನ್ ಮಿಷನ್ ಯೋಜನೆ ಅಡಿ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಲಾಗಿದ್ದು, ಈ ವೇಳೆ ಕುಡಿಯುವ ನೀರಿನಲ್ಲಿ ರಾಸಾಯನಿಕ ಹಾಗೂ ಬ್ಯಾಕ್ಟೀರಿಯಾ ಅಂಶ ಪತ್ತೆಯಾಗಿದೆ. 2023ರಿಂದ 2026ರ ಫೆಬ್ರವರಿವರೆಗೆ ಸಂಗ್ರಹಿಸಿದ್ದ ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

ನೀರು ಕಲುಷಿತಗೊಳ್ಳುತ್ತಿರೋದೇಕೆ?

9.34 ಲಕ್ಷ ಮಾದರಿಯಲ್ಲಿ 53 ಸಾವಿರ ಮಾದರಿಗಳಲ್ಲಿ ರಾಸಾಯನಿಕ ಅಂಶಗಳು ಪತ್ತೆಯಾಗಿದ್ದರೆ, 7,696 ನೀರಿನ ಸ್ಯಾಂಪಲ್​​ಗಳಲ್ಲಿ ಬ್ಯಾಕ್ಟೀರಿಯಾ ಅಂಶಗಳು ಕಂಡುಬಂದಿವೆ. ಕೊಳಚೆ ನೀರು ಸೋರಿಕೆ, ಕೈಗಾರಿಕಾ ತ್ಯಾಜ್ಯ ಸೇರ್ಪಡೆ, ಟ್ಯಾಂಕರ್ ಗಳಲ್ಲಿ ಫಂಗಸ್ ಉತ್ಪತ್ತಿ ಮುಂತಾದವುಗಳೇ ನೀರಿನ ಗುಣಮಟ್ಟ ಕೆಡಲು ಪ್ರಮುಖ ಕಾರಣವಾಗುತ್ತಿದ್ದು, ನೈಸರ್ಗಿಕ ಜಲಸಂಪನ್ಮೂಲಗಳ ಸಂರಕ್ಷಣೆಗೆ ಪರಿಸರವಾದಿಗಳಿಂದ ಆಗ್ರಹ ಕೇಳಿಬಂದಿದೆ. ಈ ಬಗ್ಗೆ ಜಲತಜ್ಞ ಟಿ.ವಿ ರಾಮಚಂದ್ರ ಕಳವಳ ವ್ಯಕ್ತಪಡಿಸಿದ್ದು, ನಗರೀಕರಣ ಹಿನ್ನಲೆ ವಾತಾವರಣ ಕಾಂಕ್ರಿಟ್ ನಾಡಾಗಿ ಪರಿವರ್ತನೆ ಆಗುತ್ತಿದೆ. ನೈಸರ್ಗಿಕ ಜಲಸಂಪನ್ಮೂಲಗಳು ಕಲುಷಿತ ಆಗುತ್ತಿರುವುದೇ ಇದಕ್ಕೆ ಕಾರಣ. ಜಲಜೀವನ್ ಮಿಷನ್ ಅಡಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ನೀರು ಪೂರೈಕೆ ಆಗುತ್ತಿದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಜ್ಯದ ತರಕಾರಿಗಳಲ್ಲಿ ಹೇರಳವಾಗಿ ಸಿಕ್ತು ಸೀಸದ ಅಂಶ!ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ?

ಬೆಚ್ಚಿ ಬೀಳಿಸುವಂತಿದೆ ಅಂಕಿ-ಅಂಶ

ವರ್ಷ ಪರೀಕ್ಷಿಸಲಾದ ಮಾದರಿ ಸಂಖ್ಯೆ ರಾಸಾಯನಿಕ ಪತ್ತೆಯಾದ ಮಾದರಿಗಳು ಬ್ಯಾಕ್ಟೀರಿಯಾ ಪತ್ತೆಯಾದ ಮಾದರಿಗಳು
2023-24 2.98 ಲಕ್ಷ 24917 4670
2024-25 3.90 ಲಕ್ಷ 17261 2574
2025-26 2.46 ಲಕ್ಷ 10911 452

ಬಿಜೆಪಿ ಶಾಸಕ ಸುರೇಶ್​​ ಕುಮಾರ್​​ ಕಳವಳ

ಬೆಂಗಳೂರಿನ 142 ಕೆರೆಗಳ ನೀರು ಸಂಪೂರ್ಣ ಕಲುಷಿತಗೊಂಡಿದೆ ಎಂಬ ವರದಿ ಬಂದಾಗ, ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು, ಬೆಂಗಳೂರಿನ ಕೆರೆ ನೀರನ್ನು ಕುಡಿಯಲು ಹಾಗೂ ಸ್ನಾನಕ್ಕೆ ಬಳಸಿ ಎಂದು ಸರ್ಕಾರ ಹೇಳಿಲ್ಲ, ಈ ಕೆರೆಗಳು ಇರುವುದು ಅಂತರ್ಜಲ ಮಟ್ಟ ಹೆಚ್ಚಿಸಲು ಎಂದು ಅತ್ಯಂತ ಹಗುರವಾದ ಹೇಳಿಕೆ ನೀಡಿದ್ದರು. ಕೆರೆಯ ನೀರನ್ನು ನಾವು ನೇರವಾಗಿ ಲೋಟದಲ್ಲಿ ಕುಡಿಯುತ್ತಿಲ್ಲದಿರಬಹುದು. ಆದರೆ, ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿರುವ ಅದೇ ಕಲುಷಿತ ಕೆರೆಯ ನೀರು ಅಂತರ್ಜಲವನ್ನು ಸೇರಿ, ನಮ್ಮ ರೈತರ ಬೆಳೆಗಳ ಮೂಲಕ ನಿತ್ಯವೂ ನಮ್ಮ ತಟ್ಟೆಯನ್ನು ಸೇರುತ್ತಿದೆ. ನಿಮ್ಮ ಪ್ರಕಾರ ಅಂತರ್ಜಲ ಹೆಚ್ಚಿಸಲು ಬಿಟ್ಟಿರುವ ಆ ಮೋರಿ ಮತ್ತು ಕೈಗಾರಿಕಾ ತ್ಯಾಜ್ಯದ ನೀರು, ಇಂದು ಬೆಂಗಳೂರಿಗರ ಕಿಡ್ನಿ, ಮಿದುಳುಗಳನ್ನು ಹಾಳು ಮಾಡುತ್ತಿದೆ. ಸಮಸ್ಯೆಯ ಮೂಲವನ್ನು ತಡೆಯುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ಬಿಜೆಪಿ ಶಾಸಕ ಸುರೇಶ್​​ ಕುಮಾರ್​​ ಆಗ್ರಹಿಸಿದ್ದಾರೆ.

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 2:56 pm, Tue, 24 February 26

Source link

ಕೊನೆಗೂ ಆರಂಭ ಆಯ್ತು ‘ಕಲ್ಕಿ’ ಸೀಕ್ವೆಲ್; ಫೋಟೋ ಹಂಚಿಕೊಂಡ ಅಮಿತಾಭ್ – Kannada News | Kalki 2898 AD Sequel Filming Begins: Prabhas, Amitabh Bachchan Return; Sai Pallavi Joins

ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್ ಆದ ಬಳಿಕ ಸೀಕ್ವೆಲ್ ಬರಬೇಕಿದೆ. ಆದರೆ, ಚಿತ್ರಕ್ಕೆ ಸಾಕಷ್ಟು ಅಡೆತಡೆಗಳು ಎದುರಾದವು. ಈ ಸಿನಿಮಾದಿಂದ ದೀಪಿಕಾ ಪಡುಕೋಣೆ ಹೊರ ಹೋಗಿದ್ದು, ಚಿತ್ರಕ್ಕೆ ದೊಡ್ಡ ಹಿನ್ನಡೆ ಆಯಿತು. ಸಿನಿಮಾ ನಿಲ್ಲುತ್ತೆ ಎಂದು ಕೂಡ ಹೇಳಲಾಗಿತ್ತು. ಹೀಗಿರುವಾಗಲೇ ಚಿತ್ರದ ಸೀಕ್ವೆಲ್ ಬಗ್ಗೆ ಅಪ್​​ಡೇಟ್ ಸಿಕ್ಕಿದೆ. ಈ ಸಿನಿಮಾ ಅಧಿಕೃತವಾಗಿ ಆರಂಭ ಆಗಿದೆ. ಇದು ಅಭಿಮಾನಿಗಳ ಖುಷಿ ಕೊಟ್ಟಿದೆ.

‘ಕಲ್ಕಿ 2898 ಎಡಿ’ ಸಿನಿಮಾಗೆ ನಾಗ್ ಅಶ್ವಿನ್ ನಿರ್ದೇಶನ ಇದೆ. ಈ ಸಿನಿಮಾ ದೊಡ್ಡ ಬಜೆಟ್​​ನಲ್ಲಿ ರೆಡಿ ಆಯಿತು. ಈ ಸಿನಿಮಾ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ಈ ಚಿತ್ರದ ಕಥೆ ಅರ್ಧಕ್ಕೆ ನಿಂತಿದ್ದು, ಸೀಕ್ವೆಲ್ ಬರಬೇಕಿದೆ. ಮೊದಲ ಭಾಗದಲ್ಲಿ ಪ್ರಭಾಸ್, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ದೀಪಿಕಾ ಸೇರಿದಂತೆ ಅನೇಕರು ನಟಿಸಿದ್ದರು. ಸೀಕ್ವೆಲ್​​ನಲ್ಲಿ ದೀಪಿಕಾ ಜಾಗವನ್ನು ಸಾಯಿ ಪಲ್ಲವಿ ತುಂಬಿದ್ದಾರೆ ಎನ್ನಲಾಗಿದೆ.

ಈ ಚಿತ್ರದ ಶೂಟ್ ಯಾವಾಗ ಆರಂಭ ಆಗುತ್ತದೆ ಎಂಬ ಕುತೂಹಲ ಮೂಡಿತ್ತು. ಅದಕ್ಕೆ ಅಮಿತಾಭ್ ಬಚ್ಚನ್ ಕಡೆಯಿಂದ ಉತ್ತರ ಸಿಕ್ಕಿದೆ. ಕಮಲ್ ಹಾಸನ್ ಅವರನ್ನು ಭೇಟಿ ಮಾಡಿರುವ ಫೋಟೋನ ಅಮಿತಾಭ್ ಬಚ್ಚನ್ ತಮ್ಮ ಬ್ಲಾಗ್  ಅಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ‘ಕಲ್ಕಿ 2898 ಎಡಿ’ ಚಿತ್ರದ ಸೀಕ್ವೆಲ್​​ಗೆ ಶೂಟಿಂಗ್ ಶುರುವಾಗಿದೆ ಎಂಬುದನ್ನು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ‘ಅತ್ತೆ-ಮಾವ ನನ್ನ ಹೆಂಡತಿಯನ್ನು ಕಳುಹಿಸುತ್ತಿಲ್ಲ’; ಪೋಸ್ಟರ್ ಹಿಡಿದು ನಿಂತ ಅಮಿತಾಭ್ ಬಚ್ಚನ್

ಪ್ರತಿ ಭಾನುವಾರ ಅಮಿತಾಭ್ ಬಚ್ಚನ್ ಅವರು ಮನೆಯ ಬಳಿ ಅಭಿಮಾನಿಗಳನ್ನು ಭೇಟಿ ಮಾಡುತ್ತಾರೆ. ಆದರೆ, ಈ ಬಾರಿ ಅದು ಸಾಧ್ಯವಾಗಿಲ್ಲ. ಇದಕ್ಕೆ ಕಾರಣವನ್ನು ವಿವರಿಸಿದ್ದಾರೆ. ಶೂಟ್ ಕಾರಣಕ್ಕೆ ಅವರು ಹೈದರಾಬಾದ್ ಅಲ್ಲಿ ಇದ್ದಾರೆ. ಹೀಗಾಗಿ, ಅಭಿಮಾನಿಗಳ ಭೇಟಿ ಸಾಧ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ. ಅಮಿತಾಭ್ ಬಚ್ಚನ್ ಅವರಿಗೆ ಈ ವಯಸ್ಸಾಗಿದೆ. ಆದಾಗ್ಯೂ ಅಪರೂಪಕ್ಕೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಅವರು ಅಶ್ವತ್ಥಾಮ ಆಗಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭಾರತ್ ಟ್ಯಾಕ್ಸಿಗೆ 500 ರೂ ನೀಡಿದರೆ ನೀವೇ ಡ್ರೈವರ್, ನೀವೇ ಮಾಲೀಕರು; ಈ ಕಂಪನಿಯ ಬ್ಯುಸಿನೆಸ್ ಮಾಡಲ್ ಹೇಗೆ? – Kannada News | Bharat Taxi, how investment of Rs 500 from drivers can turn into profit

ನವದೆಹಲಿ, ಫೆಬ್ರುವರಿ 24: ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ನಿನ್ನೆ ಸೋಮವಾರ (ಫೆ. 23) ಭಾರತ್ ಟ್ಯಾಕ್ಸಿ (Bhara Taxi) ಸೇವೆಗೆ ಚಾಲನೆ ನೀಡಿದ್ದಾರೆ. ಅಮೂಲ್ ನೇತೃತ್ವದಲ್ಲಿ ವಿವಿಧ ಸಹಕಾರಿ ಸಂಸ್ಥೆಗಳು ಸೇರಿ ಕಟ್ಟಿರುವ ಕಂಪನಿ ಇದು. ಅಮೂಲ್​ನ ರೀತಿಯಲ್ಲೇ ಭಾರತ್ ಟ್ಯಾಕ್ಸಿಯ ಬ್ಯುಸಿನೆಸ್ ಮಾಡಲ್ ಇದೆ. ಅಮುಲ್​ನಲ್ಲಿ ಹಾಲು ಉತ್ಪಾದಕರೇ ಮಾಲೀಕರಾಗಿದ್ದಾರೆ. ಭಾರತ್ ಟ್ಯಾಕ್ಸಿಯಲ್ಲಿ ಚಾಲಕರೇ ಮಾಲೀಕರಾಗಿರುತ್ತಾರೆ.

ಏನಿದು ಭಾರತ್ ಟ್ಯಾಕ್ಸಿ?

ಓಲಾ, ಊಬರ್, ರಾಪಿಡೋ, ನಮ್ಮ ಯಾತ್ರಿ ರೀತಿಯಲ್ಲಿ ಭಾರತ್ ಟ್ಯಾಕ್ಸಿ ಒಂದು ರೇಡ್ ಹೈಲಿಂಗ್ ಪ್ಲಾಟ್​ಫಾರ್ಮ್ ಆಗಿದೆ. ಓಲಾ, ಊಬರ್, ರಾಪಿಡೋ ಕಂಪನಿಗಳು ಡ್ರೈವರ್​ಗಳಿಂದ ಪ್ರತೀ ರೇಡ್​ನಲ್ಲಿ ಶೇ. 30ರಷ್ಟು ಕಮಿಷನ್ ಪಡೆಯುತ್ತವೆ. ಆದರೆ, ಭಾರತ್ ಟ್ಯಾಕ್ಸಿಯಲ್ಲಿ ಈ ಕಮಿಷನ್ ಮಾಡಲ್ ಇರೋದಿಲ್ಲ. ರೇಡ್​ನಲ್ಲಿ ಬರುವ ಹಣವೆಲ್ಲವೂ ಚಾಲಕರಿಗೆಯೇ ಸಂದಾಯವಾಗುತ್ತದೆ.

ಇದನ್ನೂ ಓದಿ: ನಿಷ್ಕ್ರಿಯ ಇಪಿಎಫ್ ಅಕೌಂಟ್​ಗಳಲ್ಲಿರುವ ಹಣ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ?

ಹಾಗೆಯೇ, ಊಬರ್, ಓಲಾ, ರಾಪಿಡೋದಲ್ಲಿ ಚಾಲಕರಿಗೆ ಕನಿಷ್ಠ ದರ (ಮಿನಿಮಮ್ ಬೇಸ್ ರೇಟ್) ನಿಗದಿಯಾಗಿರುವುದಿಲ್ಲ. ಅಂದರೆ, ಒಂದು ರೇಡ್​ನಲ್ಲಿ ಕನಿಷ್ಠ ಖಾತ್ರಿ ದರ ಎಂಬುದು ಡ್ರೈವರ್​ಗೆ ಖಾತ್ರಿ ಇರುವುದಿಲ್ಲ. ಆದರೆ, ಭಾರತ್ ಟ್ಯಾಕ್ಸಿಯಲ್ಲಿ ಇಂಥ ಫೀಚರ್ ಅನ್ನು ಅಳವಡಿಸಲಾಗಿದೆ.

ಭಾರತ್ ಟ್ಯಾಕ್ಸಿಗೆ ಆದಾಯ ಹೇಗೆ?

ಭಾರತ್ ಟ್ಯಾಕ್ಸಿ ಪ್ಲಾಟ್​ಫಾರ್ಮ್​ಗೆ ಜೋಡಿತ ಆಗಬಯಸುವ ಚಾಲಕರು 500 ರೂ ಮೌಲ್ಯದ ಷೇರುಗಳನ್ನು ಖರೀದಿಸಬೇಕು. ಇದು ಆದಲ್ಲಿ ಭಾರತ್ ಟ್ಯಾಕ್ಸಿಯಲ್ಲಿ ಚಾಲಕರಿಗೆ ಒಂದು ಸಣ್ಣ ಪಾಲು ಸಿಗುತ್ತದೆ. ಈ ಮೂಲಕ ಅವರು ಸಹ-ಮಾಲೀಕರಾದಂತೆ.

ಭಾರತ್ ಟ್ಯಾಕ್ಸಿ ಸಂಸ್ಥೆಯು ಮುಂದೆ ಲಾಭ ಗಳಿಸುತ್ತಾ ಹೋದಂತೆ, ಲಾಭದಲ್ಲಿ ಸಿಂಹಪಾಲನ್ನು ಚಾಲಕರಿಗೇ ಮರಳಿಸಲಾಗುವುದು. ನೂರು ರೂ ಲಾಭದಲ್ಲಿ 80 ರೂ ಅನ್ನು ಚಾಲಕರಿಗೆ ಕೊಡಲಾಗುತ್ತದೆ. ಉಳಿದ ಶೇ. 20ರಷ್ಟನ್ನು ಪ್ಲಾಟ್​ಫಾರ್ಮ್ ಅಭಿವೃದ್ಧಿ ಮತ್ತಿತರ ಕಾರ್ಯಗಳಿಗೆ ಬಳಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಐಡಿಯಾ ಯಾರದು ಅನ್ನೋದು ಮುಖ್ಯ ಅಲ್ಲ, ಅದನ್ನು ಜಾರಿಗೆ ತರೋನೇ ಜಾಣ: ಚ್ಯಾಟ್​ಜಿಪಿಟಿ ರೂವಾರಿ ಸ್ಯಾಮ್ ಆಲ್ಟ್​ಮ್ಯಾನ್ ಸಲಹೆ ಕೇಳಿ

ಇಲ್ಲಿ ಲಾಭದಲ್ಲಿ ಚಾಲಕರೆಲ್ಲರಿಗೆ ಸಮಾನವಾಗಿ ಹಂಚಲಾಗುವುದಿಲ್ಲ. ಚಾಲಕರು ಅವರು ಕ್ರಮಿಸಿರುವ ದೂರಕ್ಕೆ ಅನುಗುಣವಾಗಿ ಲಾಭ ಹಂಚಿಕೆ ಆಗುತ್ತದೆ.

ಭಾರತ್ ಟ್ಯಾಕ್ಸಿ ಸದ್ಯ ದೆಹಲಿ ಎನ್​​ಸಿಆರ್ ಮತ್ತು ರಾಜಕೋಟ್ ಈ ಎರಡು ನಗರಗಳಲ್ಲಿ ಚಾಲನೆಯಲ್ಲಿದೆ. ಮುಂಬರುವ ವರ್ಷಗಳಲ್ಲಿ ಬಹುತೇಕ ಎಲ್ಲಾ ನಗರ ಹಾಗೂ ಪಟ್ಟಣಗಳಲ್ಲಿ ಇದರ ಸೇವೆ ಬರಲಿದೆ. ಕೋಟಿಗೂ ಅಧಿಕ ಚಾಲಕರನ್ನು ಈ ಸೇವೆಗೆ ಜೋಡಿಸಿಕೊಳ್ಳುವ ಗುರಿ ಇದೆ. ಹಾಗೆಯೇ, ಸಹಕಾರ ತತ್ವದಲ್ಲಿ ಆರಂಭವಾಗಿರುವ ಮೊದಲ ಟ್ಯಾಕ್ಸಿ ಕಂಪನಿ ಇದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣ; ಯುವತಿಗೆ ಲವ್​ ಮ್ಯಾರೇಜ್ ಮಾಡಿಸಿದ್ದಕ್ಕೆ ನಡೀತಾ ಹಲ್ಲೆ? – Kannada News | Mandya Bommalapura: Man Brutally Attacked for Aiding Love Marriage, Leg Crushed

ಮಂಡ್ಯ, ಫೆಬ್ರವರಿ 24:  ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಕಾಲನ್ನು ಸೈಜ್​ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿದ ಘಟನೆ ನಡೆದಿತ್ತು. ಹುಡುಗಿ ವಿಚಾರವಾಗಿಯೇ ಈ ಹಲ್ಲೆ ನಡೆದಿದೆಯೆಂದು ಹೇಳಲಾಗಿದ್ದು, ಗ್ರಾಮದ ಹುಡುಗಿಯೊಬ್ಬಳು ಪ್ರೀತಿಸಿದ ಹುಡುಗನೊಂದಿಗೆ ಮದುವೆಯಾಗಲು ಸಂತ್ರಸ್ತ ಸಹಾಯ ಮಾಡಿದ್ದ ಎಂಬ ಕಾರಣಕ್ಕೆ ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ.

ಸೇಡು ತೀರಿಸಿಕೊಂಡ್ರಾ ಯುವತಿಯ ತಂದೆ?

ಬೊಮ್ಮಲಾಪುರ ಗ್ರಾಮದ ಪ್ರಕಾಶ್ ಹಾಗೂ ಆತನ ಬಾಮೈದ ನವೀನ್ ಮೇಲೆ ಗಿರೀಶ್, ಸಂಜು, ಗಣೇಶ್, ಪುಟ್ಟರಾಜು ಹಾಗೂ ನಿಂಗಣ್ಣ ಸೇರಿಕೊಂಡು ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಲ್ಲೆ ವೇಳೆ ಆರೋಪಿಗಳು ಪ್ರಕಾಶ್ ಅವರನ್ನು ವಿವಸ್ತ್ರಗೊಳಿಸಿ, ಸೈಜ್ ಗಲ್ಲಿನಿಂದ ಕಾಲು ಜಜ್ಜಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದರು. ಈ ಹಿಂದೆ ಅದೇ ಗ್ರಾಮದ ನಿಂಗಣ್ಣ ಅವರ ಪುತ್ರಿ ನಾಪತ್ತೆಯಾಗಿದ್ದು, ಬಳಿಕ ತಾನು ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗಿದ್ದಳು. ಯುವತಿ ಓಡಿಹೋಗಲು ಹಾಗೂ ಲವ್ ಮ್ಯಾರೇಜ್ ಆಗಲು ಪ್ರಕಾಶ್ ಸಹಾಯ ಮಾಡಿದ್ದಾನೆ ಎಂಬ ಅನುಮಾನದಿಂದ ಯುವತಿಯ ತಂದೆ ನಿಂಗಣ್ಣ ಹಾಗೂ ಸಂಜು ಗುಂಪು ಪ್ರಕಾಶ್ ವಿರುದ್ಧ ಸೇಡು ತೀರಿಸಿಕೊಳ್ಳಲು ಈ ಕೃತ್ಯವನ್ನೆಸಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ ಮಂಡ್ಯದಲ್ಲೊಂದು ಅಮಾನುಷ ಕೃತ್ಯ: ಕೈಮುಗಿದು ಬೇಡಿದ್ರೂ ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಹಲ್ಲೆ

ಸಂಜು ಮನೆಗೆ ನುಗ್ಗಿ ಹೊಡೆದಿದ್ದ ಪ್ರಕಾಶ್!

ಯುವತಿಯ ಮದುವೆಗೆ ಸಹಕರಿಸಿದ ಪ್ರಕಾಶ್​ಗೆ ಆಕೆಯ ತಂದೆ ನಿಂಗಣ್ಣ ಮತ್ತು ಸಂಜು ಸೇರಿ ಹಲವರು ಫೋನ್ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಇದರಿಂಗ ಕೋಪಗೊಂಡ ಪ್ರಕಾಶ್, ನವೀನ್​ನೊಂದಿಗೆ ಸೇರಿ ಫೆಬ್ರವರಿ 21ರಂದು ಸಂಜು ಮಧ್ಯರಾತ್ರಿ ಸಂಜು ಮನೆಗೆ ನುಗ್ಗಿ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಈ ಬಗ್ಗೆ ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಕಾರಣಕ್ಕೆ ಫೆಬ್ರವರಿ 22ರಂದು ಸಂಜು ಮತ್ತು ಗಿರೀಶ್ ತಂಡ ಪ್ರಕಾಶ್ ಹಾಗೂ ನವೀನ್ ಮೇಲೆ ಪ್ರತೀಕಾರದ ದಾಳಿ ನಡೆಸಿದೆ ಎಂದು ಹೇಳಲಾಗಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಪ್ರಕರಣದ ಪ್ರಮುಖ ಆರೋಪಿ ಗಿರೀಶ್ ಅವರನ್ನು ಬಂಧಿಸಿದ್ದಾರೆ. ಇತರ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link