All posts by nagaraj11081993

‘ಧುರಂಧರ್ 3’ ತೆರೆಗೆ ತರೋಕೆ ಪ್ಲ್ಯಾನ್; ಘೋಷಣೆ ಯಾವಾಗ? – Kannada News | Dhurandhar 3 Confirmed? Ranveer Singh Sequel Teased by Jio Studios

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಮತ್ತು ‘ಧುರಂಧರ್ 2: ದಿ ರಿವೇಂಜ್’ ಚಿತ್ರಗಳು ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಯಶಸ್ಸು ಗಳಿಸಿವೆ. ‘ಧುರಂಧರ್ 2’ ಅಬ್ಬರ ಇನ್ನೂ ಮುಂದುವರಿದಿದೆ. ಹೀಗಿರುವಾಗಲೇ ಈ ಫ್ರಾಂಚೈಸಿಯಿಂದ ಮತ್ತೊಂದು ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಈ ಹಿಂದೆ ‘ಧುರಂಧರ್ 2’ ಬಂದಾಗ ಈ ಕಥೆ ಇಲ್ಲಿಗೆ ಮುಗಿಯಿತು ಎಂದೇ ಭಾವಿಸಲಾಗಿತ್ತು. ಆದರೆ, ಈಗ ಚಿತ್ರತಂಡ ನೀಡಿರುವ ಸುಳಿವು ಅಭಿಮಾನಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ.

ಜಿಯೋ ಸ್ಟುಡಿಯೋಸ್‌ನ ಸಹ-ನಿರ್ಮಾಪಕಿ ಜ್ಯೋತಿ ದೇಶಪಾಂಡೆ ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ‘ಧುರಂಧರ್ 3’ ಬರುವ ಬಗ್ಗೆ ಮಹತ್ವದ ಸುಳಿವು ನೀಡಿದ್ದಾರೆ. ‘ಧುರಂಧರ್ ಸರಣಿ ಇಲ್ಲಿಗೆ ಮುಗಿದಿಲ್ಲ. ಈ ವರ್ಷದ ಅಂತ್ಯದ ವೇಳೆಗೆ ನಾವು ಪ್ರೇಕ್ಷಕರಿಗೆ ಒಂದು ದೊಡ್ಡ ಸರ್ಪ್ರೈಸ್ ನೀಡಲಿದ್ದೇವೆ. ಸದ್ಯಕ್ಕೆ ನಾವು ಏನನ್ನೋ ಸಿದ್ಧಪಡಿಸುತ್ತಿದ್ದೇವೆ’ ಎಂದು ಹೇಳುವ ಮೂಲಕ ಮೂರನೇ ಭಾಗದ ಸುಳಿವು ನೀಡಿದ್ದಾರೆ.

ಈ ಹೇಳಿಕೆಯ ಬೆನ್ನಲ್ಲೇ ರಣವೀರ್ ಸಿಂಗ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸುತ್ತಿದ್ದಾರೆ. ‘ಧುರಂಧರ್ 3’ ಶೀಘ್ರದಲ್ಲೇ ಸೆಟ್ಟೇರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಹೊಸ ಸ್ಪೈ ಕಥೆ ಮೂಲಕ ನಿರ್ದೇಶಕರು ಬರುತ್ತಾರಾ  ಎನ್ನುವ ಪ್ರಶ್ನೆಯೂ ಇದೆ.

ಗೊಂದಲ ಮೂಡಿಸಿದ ರಾಕೇಶ್ ಬೇಡಿ ಹೇಳಿಕೆ

ಒಂದೆಡೆ ನಿರ್ಮಾಪಕರು ಹೊಸ ಸರ್ಪ್ರೈಸ್ ಎಂದಿದ್ದರೆ, ಮತ್ತೊಂದೆಡೆ ಇದೇ ಚಿತ್ರದಲ್ಲಿ ಜಮೀಲ್ ಜಮಾಲಿ ಪಾತ್ರ ಮಾಡಿದ್ದ ಹಿರಿಯ ನಟ ರಾಕೇಶ್ ಬೇಡಿ ಅವರು ಮಾತ್ರ ಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ. ‘ಮೂರನೇ ಭಾಗ ಬರಲಿದೆ ಎಂದು ನನಗೆ ಅನ್ನಿಸುತ್ತಿಲ್ಲ. ಧುರಂಧರ್ ಒಂದು ದೊಡ್ಡ ಫ್ರಾಂಚೈಸಿ, ಅದನ್ನು ಬೇರೆ ನಟರೊಂದಿಗೆ ಯಾವಾಗ ಬೇಕಾದರೂ ಮಾಡಬಹುದು. ಆದರೆ ಈ ಕಥೆ ಮುಗಿದಿದೆ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಧುರಂಧರ್ 2’ ವಿವಾದ ಸುಖಾಂತ್ಯ; ಆದಿತ್ಯ ಧರ್ ಬಳಿ ಕ್ಷಮೆ ಕೇಳಿದ ಸಂತೋಷ್ ಕುಮಾರ್ 

ಇದೇ ವೇಳೆ ಚಿತ್ರದ ನಿರ್ದೇಶಕ ಆದಿತ್ಯ ಧರ್ ಅವರ ಪತ್ನಿ ಹಾಗೂ ನಟಿ ಯಾಮಿ ಗೌತಮ್ ಅವರು ತಮ್ಮ ಪತಿಯ ಬಗ್ಗೆ ಮಾತನಾಡಿದ್ದಾರೆ. ‘ಸಿನಿಮಾ ಇಷ್ಟೊಂದು ದೊಡ್ಡ ಯಶಸ್ಸು ಕಂಡರೂ ನಿರ್ದೇಶk ಆದಿತ್ಯ  ಸ್ವಲ್ಪವೂ ಬದಲಾಗಿಲ್ಲ. ಸೋಲು-ಗೆಲುವು ಎರಡನ್ನೂ ಅವರು ಸಮಾನವಾಗಿ ಸ್ವೀಕರಿಸುತ್ತಾರೆ. ಅವರು ಅತ್ಯಂತ ವಿನಮ್ರ ವ್ಯಕ್ತಿ. ಒಳ್ಳೆ ಕೆಲಸ ಮಾಡುವವರಿಗೆ ದೇವರಿಂದ ಒಳ್ಳೆ ಪ್ರತಿಫಲ ಸಿಗುತ್ತದೆ ಎಂಬುದಕ್ಕೆ ಅವರ ಯಶಸ್ಸೇ ಸಾಕ್ಷಿ’ ಎಂದು ಯಾಮಿ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: ಸ್ಫೋಟಕ ಬ್ಯಾಟಿಂಗ್​ಗೆ ಬ್ರೇಕ್ ಹಾಕಿದವರು: ಈ ಬಾರಿ ಅತಿ ಹೆಚ್ಚು ಡಾಟ್ ಬಾಲ್ ಹಾಕಿದ್ದು ಇವರೇ ನೋಡಿ – Kannada News | IPL 2026 See who bowled the most dot balls in this year’s IPL

ಬೆಂಗಳೂರು (ಮೇ. 08): ಐಪಿಎಲ್ 2026 (Indian Premier League) ಸೀಸನ್ ಬ್ಯಾಟ್ಸ್‌ಮನ್‌ಗಳ ಸ್ಫೋಟಕ ಆಟದಿಂದ ಕೂಡಿದೆ. ಈ ಸೀಸನ್‌ನಲ್ಲಿ 265 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುವುದರಿಂದ ಹಿಡಿದು ಕೇವಲ 36 ಎಸೆತಗಳಲ್ಲಿ ಶತಕಗಳನ್ನು ಗಳಿಸಿರುವಂತಹ ಬ್ಯಾಟರ್​ಗಳನ್ನು ನಾವು ನೋಡುತ್ತಿದ್ದೇವೆ. ವಿಶೇಷವಾಗಿ ಬ್ಯಾಟ್ಸ್‌ಮನ್‌ಗಳಾದ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ ಮತ್ತು ಕ್ಲಾಸೆನ್ ಬೌಲರ್‌ಗಳನ್ನು ಕಾಡುತ್ತಿದ್ದಾರೆ. ಆದರೆ, ಇಂತಹ ಕಠಿಣ ಸಂದರ್ಭಗಳಲ್ಲಿಯೂ ಸಹ, ಕೆಲವು ಬೌಲರ್‌ಗಳು ಬಿಗಿಯಾಗಿ ಬೌಲಿಂಗ್ ಮಾಡುತ್ತಿದ್ದಾರೆ ಮತ್ತು ಡಾಟ್ ಬಾಲ್‌ಗಳಿಂದ ಬ್ಯಾಟ್ಸ್‌ಮನ್‌ಗಳನ್ನು ನಿರ್ಬಂಧಿಸುತ್ತಿದ್ದಾರೆ. ಇಲ್ಲಿಯವರೆಗೆ ಆಡಿದ 49 ಪಂದ್ಯಗಳ ಅಂಕಿಅಂಶಗಳ ಪ್ರಕಾರ ಹೆಚ್ಚು ಡಾಟ್ ಬಾಲ್‌ಗಳನ್ನು ಬೌಲ್ ಮಾಡಿದ ಟಾಪ್-5 ಬೌಲರ್‌ಗಳು ಯಾರು ನೋಡೋಣ.

ಮೊಹಮ್ಮದ್ ಸಿರಾಜ್

ಪ್ರಸ್ತುತ ಗುಜರಾತ್ ಟೈಟಾನ್ಸ್ ಪರ ಆಡುತ್ತಿರುವ ಮೊಹಮ್ಮದ್ ಸಿರಾಜ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ ಸಿರಾಜ್ 37 ಓವರ್‌ಗಳನ್ನು (222 ಎಸೆತಗಳು) ಬೌಲಿಂಗ್ ಮಾಡಿದ್ದಾರೆ. ಈ ಪೈಕಿ 109 ಎಸೆತಗಳು ಡಾಟ್ ಬಾಲ್‌ಗಳಾಗಿವೆ. ಅಂದರೆ ಬ್ಯಾಟ್ಸ್‌ಮನ್‌ಗಳು ಅರ್ಧದಷ್ಟು ಎಸೆತಗಳಿಗೆ ಯಾವುದೇ ರನ್ ಗಳಿಸಲು ಸಾಧ್ಯವಾಗಿಲ್ಲ. ಸಿರಾಜ್ ಇಲ್ಲಿಯವರೆಗೆ 11 ವಿಕೆಟ್‌ಗಳನ್ನು ಪಡೆಯುವ ಮೂಲಕ ತಮ್ಮ ತಂಡಕ್ಕೆ ಪ್ರಮುಖ ಆಟಗಾರರಾಗಿದ್ದಾರೆ.

ಜೋಫ್ರಾ ಆರ್ಚರ್

ರಾಜಸ್ಥಾನ್ ರಾಯಲ್ಸ್ ಪರ ಇಂಗ್ಲೆಂಡ್‌ನ ವೇಗಿ ಜೋಫ್ರಾ ಆರ್ಚರ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಅವರು ಕೂಡ 10 ಪಂದ್ಯಗಳಲ್ಲಿ 37 ಓವರ್‌ಗಳಲ್ಲಿ 107 ಡಾಟ್ ಬಾಲ್‌ಗಳನ್ನು ಎಸೆದು ಎರಡನೇ ಸ್ಥಾನದಲ್ಲಿದ್ದಾರೆ. ಇವರ ವೇಗವು ಬ್ಯಾಟ್ಸ್‌ಮನ್‌ಗಳಿಗೆ ನಡುಕ ಹುಟ್ಟಿಸುತ್ತಿದೆ. ಆರ್ಚರ್ ಈಗಾಗಲೇ 15 ವಿಕೆಟ್‌ಗಳನ್ನು ಪಡೆದಿದ್ದಾರೆ ಮತ್ತು ಪರ್ಪಲ್ ಕ್ಯಾಪ್‌ಗಾಗಿ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ.

ಕಗಿಸೊ ರಬಾಡ

ದಕ್ಷಿಣ ಆಫ್ರಿಕಾದ ವೇಗಿ ಕಗಿಸೊ ರಬಾಡ ಗುಜರಾತ್ ಟೈಟಾನ್ಸ್ ತಂಡದ ಬೌಲಿಂಗ್ ವಿಭಾಗದ ಬೆನ್ನೆಲುಬಾಗಿದ್ದಾರೆ. ಇದುವರೆಗೆ 10 ಪಂದ್ಯಗಳಲ್ಲಿ 39 ಓವರ್‌ಗಳನ್ನು ಬೌಲ್ ಮಾಡಿರುವ ರಬಾಡ, 105 ಡಾಟ್ ಬಾಲ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. 100 ಕ್ಕೂ ಹೆಚ್ಚು ಡಾಟ್ ಬಾಲ್‌ಗಳನ್ನು ಬೌಲ್ ಮಾಡಿದ ಮೂವರು ಬೌಲರ್‌ಗಳಲ್ಲಿ ಇವರು ಒಬ್ಬರು. ರಬಾಡ ಇದುವರೆಗೆ 16 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

LSG vs RCB: ಕೃನಾಲ್ ಎಸೆದ ಬೌನ್ಸರ್​ಗೆ ತಾಳ್ಮೆ ಕಳೆದುಕೊಂಡ ಪೂರನ್: ಮೈದಾನದಲ್ಲಿ ನಡೆಯಿತು ಜಟಾಪಟಿ

ಮೊಹಮ್ಮದ್ ಶಮಿ

ಈ ಋತುವಿನಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ಕಷ್ಟಗಳನ್ನು ಎದುರಿಸುತ್ತಿದ್ದರೂ, ಶಮಿ ತಮ್ಮ ತೀಕ್ಷ್ಣ ಬೌಲಿಂಗ್‌ನಿಂದ ಪ್ರಭಾವಶಾಲಿಯಾಗಿದ್ದಾರೆ. ಇಲ್ಲಿಯವರೆಗೆ ಕೇವಲ 9 ಪಂದ್ಯಗಳನ್ನು ಆಡಿರುವ ಶಮಿ, 35 ಓವರ್‌ಗಳಲ್ಲಿ 95 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ. ಕಡಿಮೆ ಪಂದ್ಯಗಳನ್ನು ಆಡಿದ್ದರೂ ಅವರು ಟಾಪ್ -4 ರಲ್ಲಿರುವುದು ಶಮಿ ಅವರ ಕೌಶಲ್ಯಕ್ಕೆ ಸಾಕ್ಷಿಯಾಗಿದೆ. ಅವರು ಇಲ್ಲಿಯವರೆಗೆ 8 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಅಂಶುಲ್ ಕಾಂಬೋಜ್

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಆಟಗಾರ ಅನ್ಶುಲ್ ಕಾಂಬೋಜ್ ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಅವರು 10 ಪಂದ್ಯಗಳಲ್ಲಿ 35.4 ಓವರ್‌ಗಳಲ್ಲಿ 94 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ. ಕುತೂಹಲಕಾರಿಯಾಗಿ, ಈ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಭುವನೇಶ್ವರ್ ಕುಮಾರ್ (17) ಅವರೊಂದಿಗೆ ಅನ್ಶುಲ್ ಜಂಟಿಯಾಗಿ ಅಗ್ರಸ್ಥಾನದಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Source link

ಟಿಸಿಎಸ್ ಮತಾಂತರ ಪ್ರಕರಣ: ಪ್ರಮುಖ ಆರೋಪಿ ನಿದಾ ಖಾನ್ ಕೊನೆಗೂ ಅರೆಸ್ಟ್ – Kannada News | Nashik TCS Conversion Case: Key Accused Nida Khan Arrested in Maharashtra; SIT Deepens Probe into Harassment Allegations

ಮುಂಬೈ, ಮೇ 7: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್​ನ (TCS) ಮಹಾರಾಷ್ಟ್ರದ ನಾಸಿಕ್‌ ಘಟಕದಲ್ಲಿ ನಡೆದಿದೆ ಎನ್ನಲಾದ ಮತಾಂತರ ಮತ್ತು ಕಿರುಕುಳ ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್ ಅನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದು, ನಿದಾ ಖಾನ್ ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದಳು. ಇದೀಗ ಆಕೆಯನ್ನು ಛತ್ರಪತಿ ಸಂಭಾಜಿನಗರದಲ್ಲಿ ಜಂಟಿ ಕಾರ್ಯಾಚರಣೆಯ ಮೂಲಕ ಬಂಧಿಸಲಾಗಿದೆ.

ಮುಖ್ಯಾಂಶಗಳು

  • ನಾಸಿಕ್ ಟಿಸಿಎಸ್ ಘಟಕದಲ್ಲಿ ಬಲವಂತದ ಧಾರ್ಮಿಕ ಮತಾಂತರಕ್ಕೆ ಯತ್ನಿಸಿದ ಆರೋಪ.
  • ತಲೆಮರೆಸಿಕೊಂಡಿದ್ದ ನಿದಾ ಖಾನ್ ಛತ್ರಪತಿ ಸಂಭಾಜಿನಗರದ ಫ್ಲಾಟ್‌ನಲ್ಲಿ ಪತ್ತೆ.
  • ಗರ್ಭಿಣಿ ಎಂಬ ಕಾರಣ ನೀಡಿ ನಿರೀಕ್ಷಣಾ ಜಾಮೀನು ಕೋರಿದ್ದರೂ ನ್ಯಾಯಾಲಯದಿಂದ ನಿರಾಕರಣೆ.

ನಾಸಿಕ್ ಎಸ್‌ಐಟಿ (SIT), ಛತ್ರಪತಿ ಸಂಭಾಜಿನಗರ ಪೊಲೀಸ್ ಕಮಿಷನರೇಟ್ ಮತ್ತು ಅಪರಾಧ ವಿಭಾಗದ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ. ನಿದಾ ಖಾನ್ ಕಳೆದ ನಾಲ್ಕು ದಿನಗಳಿಂದ ಛತ್ರಪತಿ ಸಂಭಾಜಿನಗರದ ನಾರೇಗಾಂವ್ ಪ್ರದೇಶದ ಕೈಸರ್ ಕಾಲೋನಿಯಲ್ಲಿರುವ ಫ್ಲಾಟ್‌ನಲ್ಲಿ ತನ್ನ ಪೋಷಕರು, ಸಹೋದರ ಮತ್ತು ಚಿಕ್ಕಮ್ಮನೊಂದಿಗೆ ತಂಗಿದ್ದಳು. ಪೊಲೀಸರು ಈ ಫ್ಲಾಟ್ ಮೇಲೆ ಎರಡು ದಿನಗಳಿಂದ ನಿಗಾ ಇಟ್ಟಿದ್ದರು. ಬಂಧನದ ನಂತರ ಆಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ನಾಸಿಕ್‌ಗೆ ಕರೆದೊಯ್ಯಲಾಗಿದೆ.

ತಾನು ಎರಡು ತಿಂಗಳ ಗರ್ಭಿಣಿ ಎಂದು ಹೇಳಿಕೊಂಡಿದ್ದ ನಿದಾ ಖಾನ್, ಬಂಧನದಿಂದ ರಕ್ಷಣೆ ಕೋರಿ ನಾಸಿಕ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಳು. ಆದರೆ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ನ್ಯಾಯಾಲಯವು ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತ್ತು.

ಟಿಸಿಎಸ್ ಕಂಪನಿಯಿಂದ ಅಮಾನತು

ನಿದಾ ಖಾನ್ 2021 ರ ಡಿಸೆಂಬರ್​ನಲ್ಲಿ ‘ಪ್ರೊಸೆಸ್ ಅಸೋಸಿಯೇಟ್’ ಆಗಿ ಕಂಪನಿಗೆ ಸೇರಿದ್ದರು. ಪ್ರಕರಣ ದಾಖಲಾದ ಬೆನ್ನಲ್ಲೇ ಏಪ್ರಿಲ್ 9 ರಂದು ಕಂಪನಿಯು ಆಕೆಯನ್ನು ಅಮಾನತುಗೊಳಿಸಿದೆ. ಆಂತರಿಕ ವ್ಯವಸ್ಥೆ ಮತ್ತು ನೆಟ್‌ವರ್ಕ್‌ಗೆ ಆಕೆಯ ಪ್ರವೇಶವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ವಿಶೇಷವೆಂದರೆ, ವಿವಾದ ಸಾರ್ವಜನಿಕವಾಗುವ ಮೂರು ತಿಂಗಳ ಮೊದಲು ಆಕೆಯನ್ನು ನಾಸಿಕ್‌ನಿಂದ ಮುಂಬೈನ ಮಲಾಡ್ ಮತ್ತು ಹಿರಾನಂದಾನಿ ಕಚೇರಿಗಳಿಗೆ ವರ್ಗಾಯಿಸಲಾಗಿತ್ತು ಎಂದು ವರದಿಯಾಗಿದೆ.

ಟಿಸಿಎಸ್ ಮತಾಂತರ ಮತ್ತು ಕಿರುಕುಳ ಪ್ರಕರಣ ಹಿನ್ನೆಲೆ

ಈ ಇಡೀ ವಿವಾದವು ನಾಸಿಕ್ ಟಿಸಿಎಸ್ ಶಾಖೆಯ ಮಹಿಳಾ ಉದ್ಯೋಗಿಯೊಬ್ಬರು ನೀಡಿದ ದೂರಿನಿಂದ ಬೆಳಕಿಗೆ ಬಂದಿತು. ಸಹೋದ್ಯೋಗಿ ದಾನಿಶ್ ಶೇಖ್ ಮದುವೆಯ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿದ್ದ ಎಂದು ಮಹಿಳೆ ಆರೋಪಿಸಿದ್ದರು. ಆದರೆ ದಾನಿಶ್ ಈಗಾಗಲೇ ವಿವಾಹಿತನಾಗಿದ್ದ ಎಂಬ ಅಂಶವನ್ನು ಮುಚ್ಚಿಡಲಾಗಿತ್ತು. ಆರೋಪಿ ನಿದಾ ಖಾನ್ ಈ ದಾನಿಶ್ ಶೇಖ್‌ನ ಸಹೋದರಿಯಾಗಿದ್ದು, ದೂರುದಾರ ಮಹಿಳೆಯ ಧರ್ಮದ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿ, ಮತಾಂತರವಾಗುವಂತೆ ಒತ್ತಡ ಹೇರಿದ್ದರು ಎನ್ನಲಾಗಿದೆ.

ಪೊಲೀಸ್ ತನಿಖೆ ತೀವ್ರಗೊಂಡಂತೆ, ಇನ್ನೂ ಏಳು ಮಹಿಳಾ ಉದ್ಯೋಗಿಗಳು ಮುಂದೆ ಬಂದು ಹಿರಿಯ ಸಹೋದ್ಯೋಗಿಗಳು ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ಕಿರುಕುಳದ ಬಗ್ಗೆ ಮಾನವ ಸಂಪನ್ಮೂಲ ಇಲಾಖೆಗೆ (HR) ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಂತ್ರಸ್ತೆಯರು ತಿಳಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್‌ಆರ್ ಮುಖ್ಯಸ್ಥೆ ಸೇರಿದಂತೆ ಒಟ್ಟು ಏಳು ಜನರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಟಿಸಿಎಸ್ ಮತಾಂತರ ಪ್ರಕರಣ: ತಾನು ಗರ್ಭಿಣಿ ಎಂದು ನ್ಯಾಯಾಲಯದ ಮೊರೆ ಹೋದ ಆರೋಪಿ ನಿದಾ ಖಾನ್

ಈ ನಡುವೆ ಟಿಸಿಎಸ್ ಸಂಸ್ಥೆಯು ಎಕ್ಸ್ (X) ಮೂಲಕ ಸ್ಪಷ್ಟನೆ ನೀಡಿ, ನಿದಾ ಖಾನ್ ಎಚ್‌ಆರ್ ಮ್ಯಾನೇಜರ್ ಆಗಿರಲಿಲ್ಲ ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಆಕೆಯ ಪಾತ್ರವಿರಲಿಲ್ಲ ಎಂದು ತಿಳಿಸಿತ್ತು. ಅಲ್ಲದೆ, ಈ ವಿಷಯದ ಬಗ್ಗೆ ಕಂಪನಿಯ ಆಂತರಿಕ ವಿಭಾಗಕ್ಕೆ ಯಾವುದೇ ದೂರುಗಳು ಬಂದಿರಲಿಲ್ಲ ಎಂದು ಸ್ಪಷ್ಟಪಡಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?

ಚಂದನ್ ಕುಮಾರ್ ಹಾಗೂ ಕವಿತಾ ಗೌಡ ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ‘ಎರಡನೇ ಪತ್ನಿ ಬೇಕು ಅಂತಾದ್ರೆ ನಗಬೇಕು’ ಎಂದು ಬರೆದಿರುವ ಚೀಟಿಯನ್ನು ಕವಿತಾ ಅವರು ಚಂದನ್​ಗೆ ನೀಡುತ್ತಾರೆ. ಆಗ ನಗುವ ಚಂದನ್, ‘ಒಂದನ್ನೇ ತಡೆದುಕೊಳ್ಳೋಕೆ ಆಗ್ತಿಲ್ಲ’ ಎಂದಿದ್ದಾರೆ. ‘ಅವರು ನಕ್ಕಿದ್ದಾರೆ, ಅವರಿಗೆ ಎರಡನೇ ಪತ್ನಿ ಬೇಕು ಎಂಬ ಆಸೆ ಇದೆ. ಆದರೆ, ಕವಿತಾ ಮೇಲೆ ಅವರಿಗೆ ಭಯವೂ ಇದೆ’ ಎಂದು ಕೆಲವರು ನಗೆ ಚಟಾಕಿ ಹಾರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

TV9 Kannada News Live: ಕೊಡಗಿನಲ್ಲಿ ತಪ್ಪಿದ ಭೀಕರ ಬಸ್ ದುರಂತ; ತಮಿಳುನಾಡಿನಲ್ಲಿ ವಿಜಯ್ ‘ಪವರ್’ ಆಟ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Kodagu Bus Driver Dies of Heart Attack; Vijay’s TVK Eyes TN Power; Peenya Industries Crisis

ಬೆಂಗಳೂರು, ಮೇ 08: ಮಡಿಕೇರಿ ತಾಲೂಕಿನ ತಾಳತ್ ಮನೆ ಬಳಿ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ದುರ್ಘಟನೆ ಸಂಭವಿಸಿದೆ. ಬಸ್ ಚಲಾಯಿಸುತ್ತಿದ್ದ ವೇಳೆ ಖಾಸಗಿ ಬಸ್ ಚಾಲಕನಿಗೆ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ದಿಣ್ಣೆಗೆ ಗುದ್ದಿದರೂ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ 107 ಸ್ಥಾನಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ಶಾಸಕರ ಬೆಂಬಲಕ್ಕಾಗಿ ತೀವ್ರ ಕಸರತ್ತು ನಡೆಯುತ್ತಿದೆ. ಅದರ ಜೊತೆಗೆ ಜಾಗತಿಕ ಯುದ್ಧದ ಬಿಸಿ ಬೆಂಗಳೂರಿನ ಸಣ್ಣ ಕೈಗಾರಿಕೆಗಳಿಗೂ ತಟ್ಟಿದ್ದು, ಯುನಿಟ್​ಗಳು ಮುಚ್ಚುವ ಹಂತಕ್ಕೆ ತಲುಪಿವೆ.

ಮುಖ್ಯಾಂಶಗಳು

  • ಮಡಿಕೇರಿ ತಾಳತ್‌ಮನೆ ಬಳಿ ಚಾಲಕನಿಗೆ ಹೃದಯಾಘಾತವಾಗಿ ಸಾವು, ಕೂದಲೆಳೆ ಅಂತರದಲ್ಲಿ ಪಾರಾದ ಬಸ್ ಪ್ರಯಾಣಿಕರು.
  • ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಕೇವಲ ಆರು ಶಾಸಕರ ಬೆಂಬಲದ ನಿರೀಕ್ಷೆಯಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ.
  • ಜಾಗತಿಕ ಯುದ್ಧದ ಬಿಕ್ಕಟ್ಟು ಮತ್ತು ಇಂಧನ ಬೆಲೆ ಏರಿಕೆಯಿಂದ ಪೀಣ್ಯದ ಸಾವಿರಾರು ಕೈಗಾರಿಕೆಗಳು ಮುಚ್ಚುವ ಭೀತಿಯಲ್ಲಿವೆ.

ಚಾಲಕನಿಗೆ ಹೃದಯಾಘಾತ, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮಡಿಕೇರಿ ತಾಲೂಕಿನ ತಾಳತ್ ಮನೆ ಬಳಿ ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ‘ಪೂರ್ಣಿಮಾ ಟ್ರಾವೆಲ್ಸ್’ ಬಸ್ ಚಲಿಸುತ್ತಿದ್ದಾಗ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ದಿಣ್ಣೆಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲರೂ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಾಲನೆ ವೇಳೆಯೇ ಚಾಲಕ ಸಾವನ್ನಪ್ಪಿದ್ದರೂ, ಬಸ್ ದೊಡ್ಡ ಪ್ರಪಾತಕ್ಕೆ ಬೀಳದೆ ದಿಣ್ಣೆಗೆ ಗುದ್ದಿದ್ದರಿಂದ ಭೀಕರ ದುರಂತವೊಂದು ತಪ್ಪಿದಂತಾಗಿದೆ.

ಇದನ್ನೂ ಓದಿ ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!

ಮ್ಯಾಜಿಕ್ ನಂಬರ್ ಬೆನ್ನತ್ತಿದ ದಳಪತಿ ವಿಜಯ್

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷ 107 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸರ್ಕಾರ ರಚಿಸಲು 118 ಶಾಸಕರ ಬೆಂಬಲ ಬೇಕಾಗಿದ್ದು, ವಿಜಯ್ ಪ್ರಸ್ತುತ 112 ಶಾಸಕರ (ಟಿವಿಕೆ 107 + ಕಾಂಗ್ರೆಸ್ 5) ಬೆಂಬಲ ಹೊಂದಿದ್ದಾರೆ. ಬಾಕಿ ಇರುವ 6 ಶಾಸಕರ ಬೆಂಬಲಕ್ಕಾಗಿ ತೀವ್ರ ಕಸರತ್ತು ನಡೆಯುತ್ತಿದೆ. ಇದರ ನಡುವೆ ಎಐಎಡಿಎಂಕೆಯ 28 ಶಾಸಕರನ್ನು ಪುದುಚೇರಿ ರೆಸಾರ್ಟ್‌ಗೆ ಶಿಫ್ಟ್ ಮಾಡಲಾಗಿದ್ದು, ವಿಜಯ್‌ಗೆ ಬೆಂಬಲ ನೀಡುವ ಬಗ್ಗೆ ಪಳನಿಸ್ವಾಮಿ ಮೇಲೆ ಒತ್ತಡ ಹೆಚ್ಚಿದೆ. ಅತ್ತ ನಿರ್ಗಮಿತ ಸಿಎಂ ಎಂ.ಕೆ. ಸ್ಟಾಲಿನ್, ವಿಜಯ್ ಸರ್ಕಾರ ರಚಿಸಲಿ ನಾವು ಆರು ತಿಂಗಳು ತೊಂದರೆ ಕೊಡುವುದಿಲ್ಲ ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಪೀಣ್ಯ ಕೈಗಾರಿಕಾ ವಲಯಕ್ಕೆ ಇಂಧನ ಬಿಸಿ: ಮುಚ್ಚುವ ಭೀತಿಯಲ್ಲಿ ಉದ್ಯಮಗಳು

ಜಾಗತಿಕ ಯುದ್ಧದ ಬಿಕ್ಕಟ್ಟು ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದ ಮೇಲೆ ಭೀಕರ ಪರಿಣಾಮ ಬೀರಿದೆ. ಸರ್ಕಾರಿ ವಾಣಿಜ್ಯ ಸಿಲಿಂಡರ್ ಪೂರೈಕೆ ಸ್ಥಗಿತಗೊಂಡಿರುವುದರಿಂದ ಕೈಗಾರಿಕೆಗಳು ಸಂಪೂರ್ಣವಾಗಿ ಖಾಸಗಿ ಏಜೆನ್ಸಿಗಳ ಮೇಲೆ ಅವಲಂಬಿತವಾಗಿವೆ. ಖಾಸಗಿಯಲ್ಲಿ ಸಿಲಿಂಡರ್ ಬೆಲೆ ಎರಡು ಪಟ್ಟು ಹೆಚ್ಚಾಗಿರುವುದು ಉತ್ಪಾದನಾ ವೆಚ್ಚವನ್ನು ಏರಿಕೆ ಮಾಡಿದೆ. ಇದರಿಂದಾಗಿ ಸಾವಿರಕ್ಕೂ ಅಧಿಕ ಸಣ್ಣ ಕೈಗಾರಿಕೆಗಳು ಮತ್ತು ಕಟ್ಟಿಂಗ್ ಯೂನಿಟ್‌ಗಳು ಮುಚ್ಚುವ ಸ್ಥಿತಿಗೆ ತಲುಪಿವೆ. ಉತ್ಪಾದನಾ ವೆಚ್ಚ ಭರಿಸಲಾಗದೆ ಕೈಗಾರಿಕಾ ಮಾಲೀಕರು ಕಂಗಾಲಾಗಿದ್ದು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಇಂಧನ ಪೂರೈಕೆ ಸರಿಪಡಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:43 am, Fri, 8 May 26

Source link

ಇನ್ಮುಂದೆ ಒಂದೇ ಕರೆಯಲ್ಲಿ ಸಿಗುತ್ತೆ ಪೊಲೀಸ್-ಆರೋಗ್ಯ-ಅಗ್ನಿಶಾಮಕ ಸೇವೆ; ರಾಜ್ಯದಲ್ಲಿ ಹೈಟೆಕ್ ‘ಹೆಲ್ತ್ ಎಮರ್ಜೆನ್ಸಿ ಸೆಂಟರ್’ ಲೋಕಾರ್ಪಣೆ! – Kannada News | Karnataka Launches 24/7 Health Emergency Operation Centre (HEOC) for Rapid Relief

ರಾಜ್ಯದಲ್ಲಿ ಹೈಟೆಕ್ ‘ಹೆಲ್ತ್ ಎಮರ್ಜೆನ್ಸಿ ಸೆಂಟರ್’ ಲೋಕಾರ್ಪಣೆ

ಬೆಂಗಳೂರು, ಮೇ 08: ಜನರಿಗೆ ತುರ್ತು ಸಂದರ್ಭಗಳಲ್ಲಿ ಆರೋಗ್ಯ ಸೇವೆ ಪಡೆಯಲು ಸುಲಭ ದಾರಿ ಸಿಕ್ಕಿದ್ದು, ಆರೋಗ್ಯ ಇಲಾಖೆಯು ಅತ್ಯಾಧುನಿಕ ತಂತ್ರಜ್ಞಾನದಡಿ ‘ಹೆಲ್ತ್ ಎಮರ್ಜೆನ್ಸಿ ಆಪರೇಷನ್ ಸೆಂಟರ್’ (HEOC) ಆರಂಭಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಈ ನೂತನ ಕೇಂದ್ರಕ್ಕೆ ಚಾಲನೆ ನೀಡಿದ್ದಾರೆ. ಈ ಕೇಂದ್ರವು ಕೇವಲ ಒಂದು ಸಹಾಯವಾಣಿಯಾಗಿರದೆ, ವಿವಿಧ ಇಲಾಖೆಗಳ ಸಮನ್ವಯದ ಕೊಂಡಿಯಾಗಿ ಕಾರ್ಯನಿರ್ವಹಿಸಲಿದೆ.

ಮುಖ್ಯಾಂಶಗಳು

  • ತುರ್ತು ಸೇವೆಗಳಿಗಾಗಿ ರಾಜ್ಯದಲ್ಲಿ ಅತ್ಯಾಧುನಿಕ ಹೆಲ್ತ್ ಎಮರ್ಜೆನ್ಸಿ ಆಪರೇಷನ್ ಸೆಂಟರ್ ಆರಂಭ.
  •  ಆರೋಗ್ಯ, ಪೊಲೀಸ್ ಮತ್ತು ಅಗ್ನಿಶಾಮಕ ಸೇವೆಗಳು ಇನ್ಮುಂದೆ ಒಂದೇ ಸೂರಿನಡಿ ಲಭ್ಯ.
  • ಈ ಕೇಂದ್ರವು ದಿನದ ಇಪ್ಪತ್ನಾಲ್ಕು ಗಂಟೆಯೂ ಸಾರ್ವಜನಿಕರ ತುರ್ತು ಸೇವೆಗೆ ಲಭ್ಯವಿರುತ್ತದೆ.

ಏನಿದರ ವಿಶೇಷತೆ?

ಈ ಕೇಂದ್ರವು WHO ಮಾರ್ಗದರ್ಶನದಂತೆ ಮತ್ತು ‘ಪ್ರಧಾನಮಂತ್ರಿ ಆಯುಷ್ಮಾನ್ ಭಾರತ ಆರೋಗ್ಯ ಮೂಲಸೌಕರ್ಯ ಮಿಷನ್’ ಅಡಿಯಲ್ಲಿ ಸ್ಥಾಪಿತವಾಗಿದೆ. ಇಲ್ಲಿ ಕೇವಲ ಆರೋಗ್ಯ ಇಲಾಖೆಯಷ್ಟೇ ಅಲ್ಲದೆ, ತುರ್ತು ಸಂದರ್ಭಗಳಲ್ಲಿ ಕಂದಾಯ, ವಿಪತ್ತು ನಿರ್ವಹಣಾ ಪ್ರಾಧಿಕಾರ, ಪೊಲೀಸ್ ಮತ್ತು ಅಗ್ನಿಶಾಮಕ ದಳದಂತಹ ಪ್ರಮುಖ ಸೇವೆಗಳು ಒಂದೇ ಸೂರಿನಡಿ ಸಿಗಲಿವೆ.

ಈ ಕೇಂದ್ರವು ದಿನದ 24 ಗಂಟೆಯೂ ಸಕ್ರಿಯವಾಗಿದ್ದು, ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಕೇಂದ್ರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುತ್ತದೆ. ಸಾಂಕ್ರಾಮಿಕ ರೋಗಗಳ ಉಲ್ಬಣ, ಬೆಂಕಿ ಅವಘಡ ಅಥವಾ ಪ್ರಕೃತಿ ವಿಕೋಪದಂತಹ ಕ್ಲಿಷ್ಟಕರ ಪರಿಸ್ಥಿತಿಗಳಲ್ಲಿ ತಕ್ಷಣ ಮಾಹಿತಿ ವಿನಿಮಯ ಮಾಡಿ, ಸ್ಥಳೀಯ ಮಟ್ಟದಲ್ಲಿ ಸೂಕ್ತ ನಿರ್ದೇಶನ ನೀಡಲು ಇದು ಸಹಕಾರಿಯಾಗಿದೆ. ಹಲವಾರು ಸಹಾಯವಾಣಿಗಳಿಗೆ ಕರೆ ಮಾಡಿ ಕಾಯುವ ಬದಲು, ಈಗ ಒಂದೇ ಕೇಂದ್ರದ ಮೂಲಕ ಎಲ್ಲಾ ತುರ್ತು ಸೇವೆಗಳನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ ಪೀಣ್ಯ ಕೈಗಾರಿಕೆಗಳಿಗೆ ಯುದ್ಧದ ಬಿಸಿ: ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ, ಸಾವಿರಾರು ಕಾರ್ಮಿಕರಿಗೆ ಕೆಲಸ ಕಳೆದುಕೊಳ್ಳುವ ಭೀತಿ

ಆರೋಗ್ಯ ಸಚಿವ ಏನಂದ್ರು?

ಈ ವೇಳೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೊವಿಡ್ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ನಿರ್ವಹಣೆ ಕೊರತೆ ಇತ್ತು. ಮುಂದೆ ಈ ರೀತಿಯ ಪರಿಸ್ಥಿತಿ ಬಂದಾಗ ಸ್ಪಷ್ಟ ನಿರ್ವಹಣೆಗೆ ಸರಿಯಾದ ವ್ಯವಸ್ಥೆ ಬೇಕು. WHO ಮತ್ತು ವಿಶ್ವ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ಆಗಿದೆ. ದೇಶದ ಎಲ್ಲಾ ಕಡೆ ಈ ಕಾರ್ಯಕ್ರಮ ನಡೆಯುತ್ತಿದೆ. ನಮ್ಮ ರಾಜ್ಯದಲ್ಲಿ ಇದನ್ನು ಸ್ಥಾಪನೆ ಮಾಡಿದ್ದೇವೆ. ಆಧುನಿಕ ತಂತ್ರಜ್ಞಾನ ಬಳಕೆ ಮಾಡಿ ಈ ಕೇಂದ್ರ ನಿರ್ಮಾಣ ಮಾಡಿದ್ದೇವೆ.ಇಲಾಖೆ ಅಧಿಕಾರಿಗಳು ಇತರೆ ಅಧಿಕಾರಿಗಳು ಎಲ್ಲರು ಸಹ ಕನೆಕ್ಟ್ ಮಾಡೋಕೆ ಸಹಾಯಕವಾಗಲಿದೆ. ಆ್ಯಂಬುಲೆನ್ಸ್ ಕೂಡ ಇದರ ಜೊತೆ ಸಹಯೋಗದಲ್ಲಿ ಇರುತ್ತದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು: ಅಪಘಾತದ ನಾಟಕವಾಡಿ ಒಂಟಿ ಮಹಿಳೆಯ ಕೊಲೆ, ಹಣಕ್ಕಾಗಿ ಸಂಚು ರೂಪಿಸಿದ್ದ ಐವರ ಬಂಧನ – Kannada News | Bengaluru Crime: Five Arrested for Murdering Woman by Staging Fake Accident for Robbery in Mahalakshmi Layout

ಪ್ರಾತಿನಿಧಿಕ ಚಿತ್ರImage Credit source: TV9 Network

ಬೆಂಗಳೂರು, ಮೇ 8: ಬೆಂಗಳೂರಿನಲ್ಲಿ (Bengaluru) ಹಣದ ಆಸೆಗಾಗಿ ಒಂಟಿ ಮಹಿಳೆಯೊಬ್ಬರನ್ನು ಉದ್ದೇಶಪೂರ್ವಕವಾಗಿ ಅಪಘಾತಕ್ಕೀಡು ಮಾಡಿ ಕೊಲೆ ಮಾಡಿರುವ ಸಿನಿಮೀಯ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ನಡೆದ ಈ ಘಟನೆಯನ್ನು ಆರಂಭದಲ್ಲಿ ಕೇವಲ ‘ಅಪಘಾತ’ ಎಂದು ಬಿಂಬಿಸಲಾಗಿತ್ತು. ಆದರೆ ಮಹಾಲಕ್ಷ್ಮಿ ಲೇಔಟ್ ಪೊಲೀಸರ ಚುರುಕಿನ ತನಿಖೆಯಿಂದಾಗಿ ಇದು ಸುಲಿಗೆಗಾಗಿ ನಡೆದ ವ್ಯವಸ್ಥಿತ ಕೊಲೆ ಎಂಬುದು ಸಾಬೀತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾಕೇಶ್, ಮಂಜುನಾಥ್, ಚೇತನ್, ಪ್ರದೀಪ್ ಮತ್ತು ಯೋಹಾನ್ ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮುಖ್ಯಾಂಶಗಳು

  • ಆರೋಪಿ ಚೇತನ್ ಮೃತ ಮಹಿಳೆಯ ಬಳಿ ಸಾಲ ಪಡೆದಿದ್ದ ಹಾಗೂ ಆಕೆಯ ಬಳಿ ಹೆಚ್ಚಿನ ಹಣವಿದೆ ಎಂಬ ಮಾಹಿತಿ ಹೊಂದಿದ್ದ.
  • ಅಪಘಾತವೆಸಗಿದವರೇ ರಕ್ಷಕರಂತೆ ನಟಿಸಿ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿ, ಮನೆಯ ಕೀ ಕಳವು ಮಾಡಿದ್ದರು.
  • ಪೊಲೀಸರಿಗೆ ದೂರು ನೀಡುವ ಮೂಲಕ ಕಾನೂನಿನ ಕಣ್ಣಿಗೆ ಮಣ್ಣೆರಚಲು ಪ್ರಯತ್ನಿಸಿದ್ದ ಆರೋಪಿಗಳು.

ಸಿನಿಮೀಯ ರೀತಿಯ ಸ್ಕೆಚ್

ಆರೋಪಿ ಚೇತನ್ ಎಂಬಾತ ವಿಜಯಲಕ್ಷ್ಮಿ ಎಂಬುವರ ಪರಿಚಯ ಹೊಂದಿದ್ದ ಹಾಗೂ ಅವರ ಬಳಿ ಸಾಲ ಪಡೆದಿದ್ದ. ಆಕೆಯ ಬಳಿ ಹೆಚ್ಚಿನ ಹಣ ಮತ್ತು ಚಿನ್ನಾಭರಣ ಇದೆ ಎಂದು ತಿಳಿದಿದ್ದ ಚೇತನ್, ಸ್ನೇಹಿತರೊಂದಿಗೆ ಸೇರಿ ಕಳ್ಳತನಕ್ಕೆ ಸಂಚು ರೂಪಿಸಿದ್ದ. ಪ್ಲಾನ್‌ನಂತೆ ಏಪ್ರಿಲ್ 21ರಂದು ವಿಜಯಲಕ್ಷ್ಮಿ ಅವರು ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ರಾಕೇಶ್ ಎಂಬಾತ ಬೈಕ್‌ನಿಂದ ಜೋರಾಗಿ ಡಿಕ್ಕಿ ಹೊಡೆದಿದ್ದಾನೆ. ಕೂಡಲೇ ಅಲ್ಲಿಗೆ ಆಟೋದಲ್ಲಿ ಬಂದ ಇತರ ಆರೋಪಿಗಳು ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸುವ ನಾಟಕವಾಡಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ, ಮನೆಯಲ್ಲಿ ಕಳ್ಳತನ!

ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸುವ ಸೋಗಿನಲ್ಲಿ ಮಂಜುನಾಥ್ ಎಂಬ ಆರೋಪಿ ಆಕೆಯ ಪರ್ಸ್‌ನಲ್ಲಿದ್ದ ಮನೆ ಕೀಲಿಯನ್ನು ಕಳವು ಮಾಡಿದ್ದ. ನೇರವಾಗಿ ವಿಜಯಲಕ್ಷ್ಮಿ ಅವರ ಮನೆಗೆ ತೆರಳಿ ಕಳ್ಳತನಕ್ಕೆ ಯತ್ನಿಸಿದ್ದಾಗ, ಅಕ್ಕಪಕ್ಕದ ಮನೆಯವರು ಪ್ರಶ್ನಿಸಿದ್ದಾರೆ. ಈ ವೇಳೆ ಆಧಾರ್ ಕಾರ್ಡ್ ಬೇಕೆಂದು ಸುಳ್ಳು ಹೇಳಿ ಅಲ್ಲಿಂದ ಪರಾರಿಯಾಗಿದ್ದ. ಇತ್ತ ರಾಕೇಶ್ ಎಂಬ ಆರೋಪಿ ಸಂಚಾರ ಪೊಲೀಸ್ ಠಾಣೆಗೆ ತೆರಳಿ, ‘ಪರಿಚಯಸ್ಥ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ನಾನೇ ಅವರನ್ನು ಕಾಪಾಡಿ ಆಸ್ಪತ್ರೆಗೆ ಸೇರಿಸಿದ್ದೇನೆ’ ಎಂದು ಸುಳ್ಳು ದೂರು ನೀಡಿದ್ದ.

ಪೊಲೀಸ್ ತನಿಖೆಯಲ್ಲಿ ಅಸಲಿ ಸತ್ಯ ಬಯಲು

ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆಕೆಯ ಮನೆಯಲ್ಲಿ ಕಳ್ಳತನಕ್ಕೆ ಯತ್ನ ನಡೆದಿರುವ ಬಗ್ಗೆ ಮನೆ ಮಾಲೀಕರು ದೂರು ನೀಡಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಅಸಲಿ ಕೃತ್ಯ ಬಯಲಾಗಿದೆ. ದುರದೃಷ್ಟವಶಾತ್, ಚಿಕಿತ್ಸೆ ಫಲಿಸದೆ ವಿಜಯಲಕ್ಷ್ಮಿ ಅವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಆನ್ ಲೈನ್ ಗೇಮಿಂಗ್ ಕಂಪನಿ ಮೇಲೆ ಬೆಂಗಳೂರು ಇಡಿ ಅಧಿಕಾರಿಗಳಿಂದ ದಾಳಿ, ಕೋಟ್ಯಾಂತರ ಮೌಲ್ಯದ ಆಸ್ತಿ ವಶಕ್ಕೆ

ಪ್ರಕರಣದ ಮತ್ತೊಂದು ಟ್ವಿಸ್ಟ್ ಎಂದರೆ, ಬಂಧಿತ ಆರೋಪಿಗಳ ಪೈಕಿ ಮಂಜುನಾಥ್ ಎಂಬಾತ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಸದ್ಯ ಪೊಲೀಸರು ಕೊಲೆ ಮತ್ತು ಸುಲಿಗೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಯನತಾರಾ-ವಿಘ್ನೇಶ್ ಒಂದು ದಿನದ ಖರ್ಚು ಎಷ್ಟು ಲಕ್ಷ? – Kannada News | Nayanthara and Vignesh Shivan’s Lavish Life: Daily Expenses Revealed

ದಕ್ಷಿಣ ಭಾರತದ ಲೇಡಿ ಸೂಪರ್‌ಸ್ಟಾರ್ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿ ಸದಾ ಸುದ್ದಿಯಲ್ಲಿರುತ್ತಾರೆ. ಸಿನಿಮಾದಷ್ಟೇ ಐಷಾರಾಮಿ ಜೀವನಕ್ಕೂ ಹೆಸರಾದ ಈ ದಂಪತಿಗಳ ದಿನದ ಖರ್ಚು ಎಷ್ಟಿರಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿ ಯಾವಾಗಲೂ ಇರುತ್ತದೆ. ಇತ್ತೀಚಿನ ಸಂದರ್ಶನವೊಂದರಲ್ಲಿ ವಿಘ್ನೇಶ್ ಶಿವನ್ ತಮ್ಮ ಜೀವನಶೈಲಿಯ ವೆಚ್ಚದ ಬಗ್ಗೆ ಆಸಕ್ತಿದಾಯಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ನಯನತಾರಾ ಕುಟುಂಬದ ದಿನದ ಖರ್ಚು ಎಷ್ಟು ಎಂಬ ಪ್ರಶ್ನೆಗೆ ವಿಘ್ನೇಶ್ ಶಿವನ್ ನೇರವಾಗಿ ಉತ್ತರಿಸದಿದ್ದರೂ, ಒಂದು ಅಂದಾಜು ಅಂಕಿಅಂಶದ ಮೂಲಕ ಅದರ ಸುಳಿವು ನೀಡಿದ್ದಾರೆ. ‘ಒಬ್ಬ ವ್ಯಕ್ತಿಯ ಬಳಿ 350 ಕೋಟಿ ರೂಪಾಯಿ ಹಣವಿದ್ದರೆ, ಅದಕ್ಕೆ ವಾರ್ಷಿಕವಾಗಿ ಸುಮಾರು 21 ರಿಂದ 24 ಕೋಟಿ ರೂಪಾಯಿ ಬಡ್ಡಿ ಬರುತ್ತದೆ. ಅಂದರೆ ತಿಂಗಳಿಗೆ ಸರಾಸರಿ 2 ಕೋಟಿ ರೂಪಾಯಿ ಅಥವಾ ದಿನಕ್ಕೆ ಅಂದಾಜು 6 ಲಕ್ಷ ರೂಪಾಯಿ ಬಡ್ಡಿಯಾಗುತ್ತದೆ. ಇಷ್ಟು ಮೊತ್ತವಿದ್ದರೆ ಒಂದು ಕುಟುಂಬವು ಅತ್ಯಂತ ಸಂತೋಷದಿಂದ ಮತ್ತು ವೈಭವದಿಂದ ಬದುಕಲು ಸಾಧ್ಯ’ ಎಂದು ಅವರು ವಿವರಿಸಿದ್ದಾರೆ. ಅವರ ಈ ಮಾತಿನಿಂದ ನಯನತಾರಾ ಕುಟುಂಬದ ದೈನಂದಿನ ಜೀವನಕ್ಕೆ ಸರಿಸುಮಾರು 6 ಲಕ್ಷ ರೂಪಾಯಿ ಬೇಕಾಗುತ್ತದೆಯೇ ಎಂಬ ಪ್ರಶ್ನೆ ಮೂಡಿದೆ.

ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿರುವ ನಯನತಾರಾ ಅವರ ಒಟ್ಟು ಆಸ್ತಿ ಮೌಲ್ಯ ಸುಮಾರು 200 ಕೋಟಿ ರೂಪಾಯಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ದಕ್ಷಿಣದ ಕೆಲವೇ ನಟಿಯರ ಬಳಿ ಇರುವಂತೆ ನಯನತಾರಾ ಸ್ವಂತ ಖಾಸಗಿ ವಿಮಾನವನ್ನು ಹೊಂದಿದ್ದಾರೆ ಎನ್ನಲಾಗಿದೆ. ಚೆನ್ನೈನಲ್ಲಿ ಸುಮಾರು 100 ಕೋಟಿ ರೂಪಾಯಿ ಮೌಲ್ಯದ 4 BHK ಅಪಾರ್ಟ್‌ಮೆಂಟ್ ಮತ್ತು ಹೈದರಾಬಾದ್ ಸೇರಿದಂತೆ ಹಲವು ಕಡೆ ಬಂಗಲೆಗಳನ್ನು ಹೊಂದಿದ್ದಾರೆ. ನಟನೆಯ ಜೊತೆಗೆ ‘ದಿ ಲಿಪ್ ಬಾಮ್ ಕಂಪನಿ’ ಎಂಬ ಸೌಂದರ್ಯವರ್ಧಕ ಬ್ರಾಂಡ್ ಮತ್ತು ಚಾಯ್ ವಾಲಾ ಉದ್ಯಮದಲ್ಲಿ ಅವರು ಹೂಡಿಕೆ ಮಾಡಿದ್ದಾರೆ.

ಜೂನ್ 2022ರಲ್ಲಿ ವಿವಾಹವಾದ ಈ ಜೋಡಿ, ಅದೇ ವರ್ಷ ಬಾಡಿಗೆ ತಾಯ್ತನದ (Surrogacy) ಮೂಲಕ ‘ಉಯಿರ್’ ಮತ್ತು ‘ಉಲಗ್’ ಎಂಬ ಅವಳಿ ಪುತ್ರರನ್ನು ಸ್ವಾಗತಿಸಿದರು. ಸಿನಿಮಾದ ವಿಷಯಕ್ಕೆ ಬಂದರೆ, ಶಾರುಖ್ ಖಾನ್ ಅವರ ‘ಜವಾನ್’ ಮೂಲಕ ಬಾಲಿವುಡ್‌ಗೆ ಭರ್ಜರಿಯಾಗಿ ಎಂಟ್ರಿ ಕೊಟ್ಟರು.

ಇದನ್ನೂ ಓದಿ: ವಿವಾಹಕ್ಕೂ ಮೊದಲು ನಯನತಾರಾ-ವಿಘ್ನೇಶ್ ಮಧ್ಯೆ ಆಗಿತ್ತು ಒಪ್ಪಂದ; ಇನ್ನೂ ಇದೆ ಆ ಡೀಲ್

ಕೇವಲ ನಟನೆಯಿಂದ ಮಾತ್ರವಲ್ಲದೆ, ತಮ್ಮ ಶಿಸ್ತು ಮತ್ತು ವ್ಯವಹಾರ ಜ್ಞಾನದಿಂದ ನಯನತಾರಾ ಭಾರತದ ಅತ್ಯಂತ ಶ್ರೀಮಂತ ನಟಿಯರ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:13 am, Fri, 8 May 26

Source link

LSG vs RCB: ಕೃನಾಲ್ ಎಸೆದ ಬೌನ್ಸರ್​ಗೆ ತಾಳ್ಮೆ ಕಳೆದುಕೊಂಡ ಪೂರನ್: ಮೈದಾನದಲ್ಲಿ ನಡೆಯಿತು ಜಟಾಪಟಿ – Kannada News | Nicholas Pooran lost patience with Krunal Pandya’s bouncer in LSG vs RCB IPL 2026 Match

ಬೆಂಗಳೂರು (ಮೇ. 08): 2026 ರ ಐಪಿಎಲ್​ನಲ್ಲಿ ಗುರುವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಆರ್‌ಸಿಬಿಯನ್ನು (Royal Challengers Bengaluru) ಕೊನೆಯ ಓವರ್​ನಲ್ಲಿ ಸೋಲಿಸಿ ರೋಚಕ ಜಯ ಸಾಧಿಸಿತು. ಲಕ್ನೋ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿತ್ತು. ಗೆದ್ದರೆ ತನ್ನ ಪ್ಲೇಆಫ್ ಸ್ಥಾನವನ್ನು ಉಳಿಸಿಕೊಳ್ಳುವ ಅವಕಾಶ ಅತ್ತ ಆರ್​​ಸಿಬಿಗೂ ಗೆಲುವು ಅವಶ್ಯಕವಿತ್ತು. ಹೀಗಾಗಿ ಉಭಯ ಆಟಗಾರರು ಮೈದಾನದಲ್ಲಿ ಹೋರಾಡುತ್ತಿದ್ದರು. ಈ ಬಿಸಿ ವಾತಾವರಣದ ಮಧ್ಯೆ ಆರ್‌ಸಿಬಿಯ ಕೃನಾಲ್ ಪಾಂಡ್ಯ ಮತ್ತು ಲಕ್ನೋದ ನಿಕೋಲಸ್ ಪೂರನ್ ನಡುವೆ ಜಗಳ ಕೂಡ ನಡೆಯಿತು.

ಪಾಂಡ್ಯ ಮತ್ತು ಪೂರನ್ ನಡುವಿನ ಸಂಘರ್ಷ

ಈ ಘಟನೆಯು ಕೃನಾಲ್ ಪಾಂಡ್ಯ, ಅರ್ಶಿನ್ ಕುಲಕರ್ಣಿ ಅವರನ್ನು ಔಟ್ ಮಾಡಿದ ಬಳಿಕ ಹಾಗೂ ನಿಕೋಲಸ್ ಪೂರನ್ ಕ್ರೀಸ್​ಗೆ ಬಂದಾಗ ಸಂಭವಿಸಿತು. ಮೂರನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಬಂದ ನಿಕೋಲಸ್ ಪೂರನ್ ಅವರನ್ನು ಕೃನಾಲ್ ತೀಕ್ಷ್ಣವಾದ ಬೌನ್ಸರ್ ಮೂಲಕ ಸ್ವಾಗತಿಸಿದರು. ಗಂಟೆಗೆ ಸುಮಾರು 119 ಕಿ.ಮೀ ವೇಗದಲ್ಲಿ ಬಂದ ಚೆಂಡು ಪೂರನ್ ಅವರನ್ನು ಭಯ ಹುಟ್ಟಿಸಿತು.

ಮುಂದಿನ ಎಸೆತದಲ್ಲಿಯೇ ಕೃನಾಲ್ ಮತ್ತೊಂದು ಬೌನ್ಸರ್ ಎಸೆದರು, ಇದರಿಂದ ಪೂರನ್ ರನ್ ಗಳಿಸಿದರು. ರನ್ ಪೂರ್ಣಗೊಳಿಸಿದ ನಂತರ, ಪೂರನ್ ಕೃನಾಲ್ ಬಳಿ ಬಂದು ಏನೋ ಹೇಳುತ್ತಿದ್ದಂತೆ ಪರಿಸ್ಥಿತಿ ಉದ್ವಿಗ್ನವಾಯಿತು. ಇಬ್ಬರೂ ಎದುರೆದುರಾಗಿ ಕೆಲ ಸೆಕೆಂಡ್ ನಿಂತರು. ಆದಾಗ್ಯೂ, ಈ ಬಿಸಿಯ ವಾತಾರವಣ ಹೆಚ್ಚು ಕಾಲ ಉಳಿಯಲಿಲ್ಲ, ತಜ್ಷಣವೇ ಇಬ್ಬರೂ ಆಟಗಾರರು ಆಟಕ್ಕೆ ಮರಳಿದರು. ಈ ವಿಡಿಯೋ ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಪ್ಲೇಆಫ್ ರೇಸ್‌ಗೆ ಇನ್ನೂ ಅವಕಾಶ

ಆರ್​ಸಿಬಿ ವಿರುದ್ಧದ ಈ ಗೆಲುವು ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸಿದೆ. ಆರು ಪಂದ್ಯಗಳ ಸೋಲಿನ ಸರಣಿಯನ್ನು ಮುರಿದು, ಲಕ್ನೋ ತಮ್ಮ ಸತತ ಮೂರನೇ ಗೆಲುವು ದಾಖಲಿಸಿದೆ. ಆದಾಗ್ಯೂ, ಅವರ ಹಾದಿಯು ಅಷ್ಟೊಂದು ಸುಲಭವಾಗಿಲ್ಲ. ಎಲ್​ಎಸ್​ಜಿ ತಂಡವು ತಮ್ಮ ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲುವುದು ಮಾತ್ರವಲ್ಲದೆ, ಇತರ ತಂಡಗಳ ಫಲಿತಾಂಶಗಳನ್ನು ಸಹ ಅವಲಂಬಿಸಬೇಕಾಗುತ್ತದೆ. ಈ ಗೆಲುವು ಖಂಡಿತವಾಗಿಯೂ ತಂಡದ ಮನೋಸ್ಥೈರ್ಯವನ್ನು ಹೆಚ್ಚಿಸಿದೆ. ಪಂತ್ ಪಡೆ ಈಗ ಉಳಿದ ಪಂದ್ಯಗಳನ್ನು ಮಾಡು ಇಲ್ಲವೇ ಮಡಿ ಎಂಬ ಮನೋಭಾವದಿಂದ ಎದುರುಸಬೇಕಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Source link

ಅರ್ಷದೀಪ್ ಸುತ್ತ ಸುತ್ತುವ ಈ ಸುಂದರಿ ಯಾರು? ಈ ನಟಿಗೆ ಇದೆ ಬೇಡಿಕೆ – Kannada News | Arshdeep Singh and Samreen Kaur Dating: IPL Star and Punjabi Actress Spark Romance Rumors

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ವೇಗಿ ಮತ್ತು ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ಪರ ಮಿಂಚುತ್ತಿರುವ ಅರ್ಷದೀಪ್ ಸಿಂಗ್ ಸದ್ಯ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅವರು ಸುದ್ದಿಯಲ್ಲಿರುವುದು ತಮ್ಮ ಮಾರಕ ಬೌಲಿಂಗ್‌ನಿಂದಲ್ಲ, ಬದಲಾಗಿ ತಮ್ಮ ವೈಯಕ್ತಿಕ ಜೀವನದಿಂದ. ಹೌದು, ಅರ್ಷದೀಪ್ ಸಿಂಗ್ ಅವರು ಖ್ಯಾತ ಪಂಜಾಬಿ ನಟಿ ಸಮ್ರೀನ್ ಕೌರ್ ಅವರೊಂದಿಗೆ ಪ್ರೇಮಪಾಶದಲ್ಲಿ ಸಿಲುಕಿದ್ದಾರೆ ಎಂಬ ಸುದ್ದಿ ಕ್ರಿಕೆಟ್ ವಲಯದಲ್ಲಿ ಸಖತ್ ಸದ್ದು ಮಾಡುತ್ತಿದೆ.

ವಿಮಾನ ನಿಲ್ದಾಣದಲ್ಲಿ ಕೈ ಕೈ ಹಿಡಿದು ಪ್ರತ್ಯಕ್ಷ

ಇತ್ತೀಚೆಗೆ ಅಂದರೆ ಏಪ್ರಿಲ್ 22, 2026 ರಂದು ಪಂಜಾಬ್ ಕಿಂಗ್ಸ್ ತಂಡವು ಪಂದ್ಯಕ್ಕಾಗಿ ದೆಹಲಿಗೆ ಆಗಮಿಸಿದಾಗ, ಎಲ್ಲರ ಕಣ್ಣು ಅರ್ಷದೀಪ್ ಸಿಂಗ್ ಅವರ ಮೇಲಿತ್ತು. ಇದಕ್ಕೆ ಕಾರಣ, ಅವರು ವಿಮಾನ ನಿಲ್ದಾಣದಿಂದ ಹೊರಬರುವಾಗ ಒಬ್ಬ ಸುಂದರ ಯುವತಿಯ ಕೈ ಹಿಡಿದು ತಂಡದ ಬಸ್ಸಿನತ್ತ ಹೆಜ್ಜೆ ಹಾಕುತ್ತಿದ್ದರು. ಆ ಯುವತಿ ಬೇರೆ ಯಾರೂ ಅಲ್ಲ, ಪಂಜಾಬಿ ಚಿತ್ರರಂಗದ ಉದಯೋನ್ಮುಖ ತಾರೆ ಸಮ್ರೀನ್ ಕೌರ್. ಅಂದಿನಿಂದ ಅಭಿಮಾನಿಗಳು ಈ ಜೋಡಿಯ ಬಗ್ಗೆ ಹೆಚ್ಚಿನ ಮಾಹಿತಿ ಹುಡುಕಲಾರಂಭಿಸಿದ್ದಾರೆ.

ಯಾರು ಈ ಸಮ್ರೀನ್ ಕೌರ್?

26 ವರ್ಷದ ಸಮ್ರೀನ್ ಕೌರ್ ಮೂಲತಃ ಜಮ್ಮು ಮತ್ತು ಕಾಶ್ಮೀರದವರು. ಪ್ರಸ್ತುತ ಮುಂಬೈನಲ್ಲಿ ನೆಲೆಸಿರುವ ಇವರು ವೃತ್ತಿಯಿಂದ ನಟಿ ಮತ್ತು ಮಾಡೆಲ್. ಅರ್ಷದೀಪ್‌ಗಿಂತ ಒಂದು ವರ್ಷ ಚಿಕ್ಕವರಾಗಿರುವ ಸಮ್ರೀನ್, ತಮ್ಮ ವೃತ್ತಿಜೀವನವನ್ನು ಸೌಂದರ್ಯ ಸ್ಪರ್ಧೆಗಳ ಮೂಲಕ ಆರಂಭಿಸಿದ್ದರು. 2018ರಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಪ್ರತಿಷ್ಠಿತ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಪ್ರತಿನಿಧಿಸಿದ ಖ್ಯಾತಿ ಇವರದ್ದು.

ಸಿನಿಮಾ ಪ್ರಯಾಣ ಮತ್ತು ಸಾಧನೆ:

ಸಮ್ರೀನ್ ಕೌರ್ ಈಗಾಗಲೇ ಬಾಲಿವುಡ್ ಮತ್ತು ಪಂಜಾಬಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ರಣವೀರ್ ಸಿಂಗ್ ಅಭಿನಯದ ’83’ ಸಿನಿಮಾದಲ್ಲಿ ಅಮ್ಮಿ ವಿರ್ಕ್ ಅವರ ನಿಶ್ಚಿತಾರ್ಥದ ಹುಡುಗಿಯ ಪಾತ್ರದಲ್ಲಿ ಸಮ್ರೀನ್ ಮಿಂಚಿದ್ದರು. ಅಲ್ಲದೆ, ಪಂಜಾಬಿ ಸೂಪರ್ ಸ್ಟಾರ್ ದಿಲ್ಜಿತ್ ದೋಸಾಂಜ್ ಅವರ ‘ಸದಾರ್ ಜಿ 2’ ಚಿತ್ರದಲ್ಲೂ ಇವರು ನಟಿಸಿದ್ದಾರೆ. ಕೇವಲ ಸಿನಿಮಾಗಳಷ್ಟೇ ಅಲ್ಲದೆ, ಬಾದ್‌ಶಾ ಮತ್ತು ಗುರು ರಾಂಧವಾ ಅವರಂತಹ ಖ್ಯಾತ ಗಾಯಕರ ಆಲ್ಬಂ ಹಾಡುಗಳಲ್ಲೂ ಸಮ್ರೀನ್ ಕಾಣಿಸಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್‌ನಲ್ಲಿ ಇವರಿಗೆ ಬರೊಬ್ಬರಿ 4.5 ಮಿಲಿಯನ್ ಫಾಲೋವರ್ಸ್ ಇದ್ದಾರೆ.

ಇದನ್ನೂ ಓದಿ: ತಂಡದಿಂದ ದೂರ; ಈ ಐಪಿಎಲ್‌ನಲ್ಲಿ ಧೋನಿ ಆಡುವುದು ಅನುಮಾನ?

ಪ್ರೇಮ ಪಕ್ಷಿಗಳ ಡೇಟಿಂಗ್:

ಅರ್ಷದೀಪ್ ಅವರು ಐಪಿಎಲ್ ಆಡುವ ಹೆಚ್ಚಿನ ನಗರಗಳಿಗೆ ಸಮ್ರೀನ್ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ವೇಳೆ ಸಮ್ರೀನ್ ಗ್ಯಾಲರಿಯಲ್ಲಿ ಕುಳಿತು ಅರ್ಷದೀಪ್ ಅವರನ್ನು ಹುರಿದುಂಬಿಸುತ್ತಿದ್ದ ಫೋಟೋಗಳು ವೈರಲ್ ಆಗಿವೆ. ಅಷ್ಟೇ ಅಲ್ಲದೆ, ಇವರಿಬ್ಬರೂ ಚಂಡೀಗಢ ವಿಮಾನ ನಿಲ್ದಾಣ ಮತ್ತು ಗುರುದ್ವಾರಕ್ಕೂ ಒಟ್ಟಿಗೆ ಭೇಟಿ ನೀಡಿದ್ದು, ಇವರ ನಡುವಿನ ಸ್ನೇಹ ಪ್ರೀತಿಯಾಗಿ ಬದಲಾಗಿರುವುದು ಬಹುತೇಕ ಖಚಿತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link