nagaraj11081993

AI Impact Summit: ಜನಕಲ್ಯಾಣಕ್ಕೆ ಎಐ ಬಳಕೆ, ಇದು ಭಾರತಕ್ಕಿರುವ ಬದ್ಧತೆ: ಅಶ್ವಿನಿ ವೈಷ್ಣವ್ – Kannada News | AI Impact Summit, Ashwini Vaishnaw explains the agenda and message from India

ನವದೆಹಲಿ, ಫೆಬ್ರುವರಿ 16: ಎಐ ಇಂಪ್ಯಾಕ್ಟ್ ಸಮಿಟ್ 2026 (AI Impact Summit) ಇಂದಿನಿಂದ ಐದು ದಿನಗಳ ಕಾಲ ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿದೆ. ಇದು ನಾಲ್ಕನೇ ಆವೃತ್ತಿಯಾಗಿದ್ದು, ಭಾರತ ಆತಿಥ್ಯ ವಹಿಸಿರುವುದು ಇದು ಪ್ರಥಮ. ಬಹಳ ಗುರುತರವಾಗಿರುವ ಎಐ ಇಂಪ್ಯಾಕ್ಟ್ ಶೃಂಗಸಭೆ ಹಾಗೂ ಭಾರತದ ಎಐ ದೃಷ್ಟಿಕೋನ ಇತ್ಯಾದಿ ವಿಚಾರದ ಬಗ್ಗೆ ಕೇಂದ್ರ ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಸಚಿವ ಡಾ. ಅಶ್ವಿನಿ ವೈಷ್ಣವ್ ಫಿನಾನ್ಷಿಯಲ್ ಎಕ್ಸ್​ಪ್ರೆಸ್ ಪತ್ರಿಕೆ ಸಂದರ್ಶನದಲ್ಲಿ ವಿವರವಾಗಿ ಮಾತನಾಡಿದ್ದಾರೆ. ಭಾರತದ ಎಐ ಇಂಪ್ಯಾಕ್ಟ್…

Read More

Video: ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಭವಿಷ್ಯ – Kannada News | Mani Shankar Aiyar Predicts Another Term for Pinarayi Vijayan in Kerala

ತಿರುವನಂತಪುರಂ, ಫೆಬ್ರವರಿ 16: ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪಿಣರಾಯಿ ವಿಜಯನ್ ಅವರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್​ನ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಭವಿಷ್ಯ ನುಡಿದಿದ್ದಾರೆ. ಇವರ ಹೇಳಿಕೆ ಕಾಂಗ್ರೆಸ್​​ನಲ್ಲೇ ತೀವ್ರ ಕಳವಳವನ್ನು ಹುಟ್ಟುಹಾಕಿದೆ. ರಾಹುಲ್ ಗಾಂಧಿಗೆ ನಾನು ಕಾಂಗ್ರೆಸ್ ಸದಸ್ಯ ಎಂಬುದು ಮರೆತು ಹೋದಂತಿದೆ. ನಾನು ಗಾಂಧಿವಾದಿ ಹೌದು, ನೆಹರು, ರಾಜೀವ್ ಗಾಂಧಿ ಹಾದಿಯನ್ನು ಅನುಸರಿಸುತ್ತೇನೆ ಆದರೆ ರಾಹುಲ್ ಗಾಂಧಿಯನ್ನಲ್ಲ ಎಂದು ಹೇಳಿದ್ದು, ಕಾಂಗ್ರೆಸ್ ಒಳಗೆ ಈ ಹೇಳಿಕೆ ಸಂಚಲನ ಮೂಡಿಸಿದೆ. ಮೇ 2026…

Read More

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾಗಿ ಮಹಿಳೆ ಸಾವು, ಮಗ ಬದುಕಿದ್ದೇ ಪವಾಡ! – Kannada News | Bengaluru Woman Killed in Tipper–Two Wheeler Crash, Son Escapes

ಬೆಂಗಳೂರು, ಫೆಬ್ರವರಿ 16: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಅಮಲಾ(49) ಮೃತ ದುರ್ದೈವಿಯಾಗಿದ್ದು, ಆಡುಗೋಡಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಅಪಘಾತ ನಡೆದಿತ್ತು. ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಅಮಲಾ ರಸ್ತೆಗೆ ಬಿದ್ದಿದ್ದರು. ಈ ವೇಳೆ ಅವರ ದೇಹದ ಮೇಲೆ ಟಿಪ್ಪರ್​​ ಹರಿದ ಕಾರಣ ಅವರ ಎರಡೂ ಕಾಲುಗಳು ಛಿದ್ರಗೊಂಡಿದ್ದವು. ಗಾಯಾಳುವನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತಕ್ಕೆ…

Read More

ಸಹಪಾಠಿ ಜತೆ ಗಲಾಟೆ: ಮನನೊಂದು ಆತ್ಮಹತ್ಯೆಗೆ ಶರಣಾದ SSLC ವಿದ್ಯಾರ್ಥಿ – Kannada News | SSLC Student Commits Suicide By Jumping from DVS School building at chitradurga

ಚಿತ್ರದುರ್ಗ, (ಫೆಬ್ರವರಿ 16): ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ (Student) ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಭರಮಸಾಗರದ (Bharamasagara) ಡಿವಿಎಸ್ ಖಾಸಗಿ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ಮೂಲದ ಎಸ್‌ಎಲ್‌ಎಲ್‌ಸಿ ವಿದ್ಯಾರ್ಥಿ 16 ವರ್ಷದ ಕೊಟ್ರೇಶ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹಣ್ಣು ಹಂಚುವ ವಿಚಾರದಲ್ಲಿ ಸಹಪಾಠಿ ಜತೆ ಗಲಾಟೆಯಾಗಿದ್ದು, ಇದರಿಂದ ಮನನೊಂದು ಕೊಟ್ರೇಶ್ 3ನೇ ಶಾಲೆಯ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ನಿನ್ನೆ(ಫೆಬ್ರವರಿ 16) ಶಿವರಾತ್ರಿ ಹಿನ್ನೆಲೆಯಲ್ಲಿ ಪೋಷಕರು, ಕೊಟ್ರೇಶ್​​ಗೆ…

Read More

ಭಾರತದ ಈ ರೈಲು ನಿಲ್ದಾಣಗಳಿಂದ ನೇರವಾಗಿ ಫಾರಿನ್​ಗೆ ಹೋಗಬಹುದು ಗೊತ್ತೇ!

ನೇಪಾಳಕ್ಕೆ ಹೋಗುವ ರೈಲುಗಳು ಮುಖ್ಯವಾಗಿ ಜಯನಗರ ರೈಲು ನಿಲ್ದಾಣದಿಂದ ಹೊರಡುತ್ತವೆ. ಇದು ಬಿಹಾರದ ಮಧುಬನಿ ಜಿಲ್ಲೆಯ ಗಡಿ ಭಾಗದಲ್ಲಿರುವ ಪ್ರಮುಖ ನಿಲ್ದಾಣ. ಇಲ್ಲಿಂದ ನೇಪಾಳದ ಜನಕಪುರಕ್ಕೆ ನೇರ ರೈಲು ಸೇವೆ ಲಭ್ಯವಿದೆ. ಗಡಿಯಾಚೆ ನೇಪಾಳದ ನಿಲ್ದಾಣವಿದೆ. ಬಿಹಾರ–ನೇಪಾಳ ಗಡಿಯಲ್ಲಿರುವ ರಕ್ಸೌಲ್ ಜಂಕ್ಷನ್ ಕೂಡ ನೇಪಾಳ ಪ್ರವೇಶದ ಪ್ರಮುಖ ದ್ವಾರವಾಗಿ ಪರಿಗಣಿಸಲಾಗುತ್ತದೆ. ಭಾರತದ ವಿವಿಧ ಭಾಗಗಳಿಂದ ಇಲ್ಲಿಗೆ ಬರುವ ರೈಲುಗಳು ನೇಪಾಳದತ್ತ ಸಂಪರ್ಕ ಒದಗಿಸುತ್ತವೆ. ನೇಪಾಳಕ್ಕೆ ಭಾರತದಿಂದ ಮುಕ್ತ ಸಾರಿಗೆ ಸಂಪರ್ಕ ಇರುವುದರಿಂದ ರೈಲು ಸಂಪರ್ಕ ಕೂಡ ಸಾಮಾನ್ಯವಾಗಿದೆ….

Read More

ಮದುವೆಗೆ ಬಂದ ಮಹಿಳೆ ನಾಪತ್ತೆ ಕೇಸ್​​: ಪತಿ ಸ್ನೇಹಿತನ ಮನೆಯಲ್ಲಿ ಮಹಿಳೆ ಸಿಕ್ಕಿಬಿದ್ದಿದ್ದೇಗೆ? – Kannada News | Priyanka and David’s Elopement Drama Unveiled by CCTV Footage

ತುಮಕೂರು, ಫೆಬ್ರವರಿ 16: ಮದುವೆಗೆಂದು ತೆರಳಿ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಪತಿ ಸ್ನೇಹಿತನ ಮನೆಯಲ್ಲಿ ಪತ್ತೆಯಾಗಿದ್ದ ಈಕೆ ಆತನೊಂದಿಗೆ ಕುಣಿಗಲ್‌ಗೆ ಬಂದ ವಿಡಿಯೋ ಲಭ್ಯವಾಗಿದೆ. ನಾಪತ್ತೆಯಾಗಿದ್ದ ದಿನದ ರಾತ್ರಿಯೇ ಪ್ರಿಯಾಂಕಾ ಕುಣಿಗಲ್​​ಗೆ ಬಂದಿದ್ದಳು. ಗುರುವಾರ ಸಂಜೆ ನಾಲ್ಕು ಗಂಟೆಗೆ ತನ್ನ ರೂಮ್ ಬಿಟ್ಟಿದ್ದ ಡೇವಿಡ್, ಮರಳಿ ಪ್ರಿಯಾಂಕಾ ಜೊತೆ ಹಿಂದಿರುಗಿ ಬಂದಿದ್ದ. ಬೇಲೂರು ಪೊಲೀಸರು ಎಂಟ್ರಿ ಕೊಡುವವರೆಗೂ‌ ಮನೆಯಿಂದ ಈಚೆ ಬರದೇ ಪ್ರಿಯಾಂಕಾ ಒಳಗೇ ಇದ್ದಳು. ಹೀಗಾಗಿ ಆಕೆಗೆ ಹೋಟೆಲ್​​ನಿಂದ-ಊಟ ತಿಂಡಿಯನ್ನು ಡೇವಿಡ್​​…

Read More

ರಿಂಕು ಸಿಂಗ್ ಕೈಯಲ್ಲಿ ಬೌಲಿಂಗ್ ಮಾಡಿಸಿ ನಮ್ಮ ಮರ್ಯಾದೆಯನ್ನೇ ತೆಗೆದುಬಿಟ್ರು! – Kannada News | India has embarrassed us by giving bowling to Rinku Singh

ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ಮುಗಿದಿದೆ. ನಿರೀಕ್ಷೆಯಂತೆ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಆದರೆ ಅತ್ತ ಈ ಬಾರಿ ಪಾಕಿಸ್ತಾನ್ ತಂಡ ಸೋತಿರುವುದು ಬರೋಬ್ಬರಿ 61 ರನ್​ಗಳ ಅಂತರದಿಂದ. ಈ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್ ಚಾನೆಲ್​ಗಳಲ್ಲಿ ಚರ್ಚೆಗಳು ನಡೆದಿದ್ದವು. ಈ ಚರ್ಚೆಯ ನಡುವೆ ಪಾಕ್ ಚಾನೆಲ್ ಆ್ಯಂಕರ್ ನೀಡಿರುವ ಹೇಳಿಕೆಯೊಂದು ಇದೀಗ ಭಾರೀ ವೈರಲ್ ಆಗಿದೆ. ಈ ಪ್ಯಾನೆಲ್ ಚರ್ಚೆಯಲ್ಲಿ ಪಾಕಿಸ್ತಾನ್ ತಂಡದ ಮಾಜಿ ನಾಯಕ ಮೊಹಮ್ಮದ್ ಯೂಸುಫ್ ಸೇರಿದಂತೆ ಕೆಲ ಮಾಜಿ…

Read More

ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ ಹೇಗೆ? ನಾಯಕತ್ವ ಬದಲಾವಣೆ ಪ್ರಶ್ನೆಗೆ ಹೀಗ್ಯಾಕಂದ್ರು ಸಚಿವ ಮಹದೇವಪ್ಪ! – Kannada News | Leadership Change Row in Congress: HC Mahadevappa ‘Tail Wagging the Dog’ Remark Sparks Debate

ಬೆಂಗಳೂರು, ಫೆಬ್ರವರಿ 16: ಹಿರಿಯ ಸಚಿವ ಹೆಚ್​ಸಿ ಮಹದೇವಪ್ಪ ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗಳಿಗೆ ನೀಡಿದ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನಲ್ಲಿನ ನಾಯಕತ್ವ ಗೊಂದಲ ಮತ್ತು ಹೈಕಮಾಂಡ್ ಮಧ್ಯಪ್ರವೇಶದ ಅಗತ್ಯತೆಯ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, ಮಹದೇವಪ್ಪ ಅವರು ಅದಕ್ಕೆ ನೇರವಾಗಿ ಉತ್ತರಿಸದೆ ಬೀದಿನಾಯಿ ವಿಷಯವನ್ನು ಪ್ರಸ್ತಾಪಿಸಿದರು. ‘ನಾಯಕತ್ವದ ಚರ್ಚೆ ಎಲ್ಲಿದೆ? ಹೈಕೋರ್ಟ್ ಪದೇ ಪದೇ ಬೀದಿನಾಯಿಗಳನ್ನೆಲ್ಲ ಹಿಡಿದು ಒಳಗಾಕಿ ಎಂದು ಹೇಳುತ್ತಿದೆ’ ಎಂದರು. ಈ ಹೇಳಿಕೆ ವಿವಾದಕ್ಕೆ ಗುರಿಯಾಗಬಹುದು ಎಂಬುದು ಅರಿವಿಗೆ ಬರುತ್ತಿದ್ದಂತೆಯೇ ಸ್ಪಷ್ಟನೆ ನೀಡಲು…

Read More

ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ‘ವಿಶ್ವಕಪ್’ ಸೋಲಿನ ಭೀತಿ..! – Kannada News | Team India Fears Defeat Following Victory

ಭಾರತ ತಂಡವು ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಸೂಪರ್-8 ಹಂತಕ್ಕೇರಿದೆ. ಕೊಲಂಬೊದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 175 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ 18 ಓವರ್​ಗಳಲ್ಲಿ 114 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 61 ರನ್​ಗಳ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ವಿಶ್ವಕಪ್ ಸೋಲಿನ ಭೀತಿ ಎದುರಾಗಿದೆ….

Read More

ಬೆಂಗಳೂರು ಪೊಲೀಸ್ ಆಯುಕ್ತರನ್ನೂ ಬಿಡದ ಸೈಬರ್ ವಂಚಕರು: ಕಮಿಷನರ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದು ಹಣಕ್ಕೆ ಡಿಮ್ಯಾಂಡ್ – Kannada News | Cyber Fraudsters Target Bengaluru Police Commissioner: Fake Facebook Account Created to Demand Money

ಬೆಂಗಳೂರು, ಫೆಬ್ರವರಿ 16: ಬೆಂಗಳೂರು (Bangalore) ನಗರ ಪೊಲೀಸ್ ಆಯುಕ್ತರ ಹೆಸರನ್ನೇ ಬಳಸಿಕೊಂಡು ಸೈಬರ್ ವಂಚಕರು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಜನರನ್ನು ಮೋಸಗೊಳಿಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಸೀಮಂತ್ ಕುಮಾರ್ ಸಿಂಗ್ ಅವರ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ನಕಲಿ ಖಾತೆ ರಚಿಸಿ, ಗಣ್ಯರೊಂದಿಗೆ ತೆಗೆದಿರುವ ಫೋಟೋಗಳನ್ನು ಪೋಸ್ಟ್ ಮಾಡಿ ಜನರ ವಿಶ್ವಾಸ ಗಳಿಸಲು ವಂಚಕರು ಪ್ರಯತ್ನಿಸಿದ್ದಾರೆ. ಪೊಲೀಸ್ ಆಯುಕ್ತರೇ ಪೋಸ್ಟ್ ಮಾಡುತ್ತಿದ್ದಾರೆಂದು ನಂಬಿದ ಕೆಲವರು ಆ ಖಾತೆಗೆ ಪ್ರತಿಕ್ರಿಯೆ ನೀಡಿದ್ದು, ಬಳಿಕ ಖಾಸಗಿ ಸಂದೇಶಗಳ…

Read More