ಬೆಂಗಳೂರು, ಮಾರ್ಚ್ 31: ಕಳೆದ ಎರಡು ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ (Weather Forecast) ಸುರಿದಿದ್ದು, ಬಿಸಿಲ ಬೇಗೆ ಆರಿದಂತಾಗಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರ್ಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?
ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ,ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.
ಎಲ್ಲೆಲ್ಲಿ ಮಳೆ
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಕಲಬುರ್ಗಿ, ಬೀದರ್, ಗದಗ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರದಲ್ಲೂ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ.
ಬೆಂಗಳೂರು, ಮಾರ್ಚ್ 31: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಎಂಬಾತನನ್ನು ಬೆಂಗಳೂರಿನ ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ. ಯುವತಿಯೊಬ್ಬರು ಬಿಟಿಎಂ ಲೇಔಟ್ನಿಂದ ಇಂದಿರಾನಗರಕ್ಕೆ ತೆರಳಲು ರಾಪಿಡೋ ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದರು. ಪ್ರಯಾಣದ ಸಂದರ್ಭದಲ್ಲಿ, ಚಾಲಕ ಮೊಹಮ್ಮದ್ ಖಾಜಾ ದಾರಿಯುದ್ದಕ್ಕೂ ಯುವತಿಯ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ವರ್ತನೆಯಿಂದ ಅಸಮಾಧಾನಗೊಂಡ ಯುವತಿ ಇಂದಿರಾನಗರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಇಂದಿರಾನಗರ ಪೊಲೀಸರು, ರಾಪಿಡೋ ಚಾಲಕ ಮೊಹಮ್ಮದ್ ಖಾಜಾನನ್ನು ಅರೆಸ್ಟ್ ಮಾಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ರವೀಂದ್ರ ಜಡೇಜಾ ಅವರಿಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವೆ ಅವಿನಾಭಾವ ಸಂಬಂಧ ಇತ್ತು. ಜಡೇಜಾ ಎಂದರೆ ನೆನಪಾಗುತ್ತಿದ್ದುದು ಸಿಎಸ್ಕೆ. ಆದರೆ, ಸಿಎಸ್ಕೆ ತಂಡ ಸಂಜು ಸ್ಯಾಮ್ಸನ್ ಅವರನ್ನು ಖರೀದಿ ಮಾಡಲು ಜಡೇಜಾ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಬಿಟ್ಟುಕೊಟ್ಟಿತು. ಈ ವಿಷಯ ಜಡೇಜಾಗೆ ನೋವು ತರಿಸಿದ್ದಿರಬಹುದು. ಹೀಗಾಗಿ, ಸಿಎಸ್ಕೆ ವಿರುದ್ಧ ಮಾರಕ ಬೌಲಿಂಗ್ ದಾಳಿ ಮಾಡಿ, ಎರಡು ವಿಕೆಟ್ ಪಡೆದು ಅವರು ಭರ್ಜರಿ ಸೆಲೆಬ್ರೇಷನ್ ಮಾಡಿದರು. ಮೂರು ಓವರ್ ಎಸೆದ ಜಡೇಜಾ, ಎರಡು ವಿಕೆಟ್ ಕಿತ್ತು 18 ರನ್ಗಳನ್ನಷ್ಟೇ ನೀಡಿದರು.
ಗೌಹಾಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಸಿಎಸ್ಕೆ ಮುಖಾಮುಖಿ ಆದವು. ಹಿರಿಯ ಆಟಗಾರ ಎಂಎಸ್ ಧೋನಿ ಇಲ್ಲದೆ ಇರುವುದು ಸಿಎಸ್ಕೆ ತಂಡಕ್ಕೆ ದೊಡ್ಡ ಹಿನ್ನಡೆ ಆಯಿತು. ಮೊದಲು ಬ್ಯಾಟಿಂಗ್ಗೆ ಇಳಿದ ಸಿಎಸ್ಕೆ ತಂಡ ಸಾಕಷ್ಟು ಹಿನ್ನಡೆ ಅನುಭವಿಸಿತು. 14 ರನ್ಗಳಿಗೆ ಒಂದು ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಎದುರಿಸಿತು. ನಂತರ 51 ರನ್ಗಳಿಗೆ ತನ್ನ ಪ್ರಮುಖ ಐದು ವಿಕೆಟ್ಗಳನ್ನು ಸಿಎಸ್ಕೆ ಕಳೆದುಕೊಂಡಿತು.
ಜಡೇಜಾ ಅವರು ಎಂಟನೇ ಓವರ್ನಲ್ಲಿ ಬೌಲಿಂಗ್ಗೆ ಇಳಿದರು. ಹಾಕಿದ ಮೊದಲ ಓವರ್ನ ಎರಡನೇ ಬಾಲ್ನಲ್ಲಿ ಸರ್ಫರಾಜ್ ಖಾನ್ ಅವರನ್ನು ಔಟ್ ಮಾಡಿದರು. 12 ಬಾಲ್ಗೆ 17 ರನ್ ಬಾರಿಸಿ ಸರ್ಫರಾಜ್ ಪೆವಿಲಿಯನ್ ಸೇರಿದರು. ನಂತರ ಕಣಕ್ಕೆ ಇಳಿದ ಶಿವಂ ದೂಬೆ ಅವರು ಬಿರುಸಿನ ಆಟಕ್ಕೆ ಮುಂದಾದರು. ರವೀಂದ್ರ ಜಡೇಜಾ ಬೌಲಿಂಗ್ ಅಲ್ಲಿ ಸಿಕ್ಸ್ ಕೂಡ ಬಾರಿಸಿದರು.
ನಂತರ ಅದೇ ರೀತಿಯಲ್ಲಿ ದೂಬೆ ಮತ್ತೆ ಸಿಕ್ಸ್ ಹೊಡೆಯಲು ಪ್ರಯತ್ನಿಸಿದರು. ಆದರೆ, ಅದು ಕ್ಯಾಚ್ ಆಗಿ ಬದಲಾಯಿತು. ಈ ಮೂಲಕ ಒಂದೇ ಓವರ್ ಅಲ್ಲಿ ಎರಡು ವಿಕೆಟ್ ತೆಗೆದು ಜಡೇಜಾ ಮಿಂಚಿದರು. ಈ ವೇಳೆ ಜಡೇಜಾ ಭರ್ಜರಿಯಾಗಿ ಸೆಲೆಬ್ರೇಷನ್ ಕೂಡ ಮಾಡಿದರು. ಗನ್ ಪೋಸ್ ಕೊಟ್ಟು ಸೆಲೆಬ್ರೇಷನ್ ಮಾಡುವ ಮೂಲಕ ಸಿಎಸ್ಕೆ ಅಭಿಮಾನಿಗಳಿಗೆ ನೇರವಾಗಿ ನೋವನ್ನುಂಟು ಮಾಡಿದರು.
ಬೆಂಗಳೂರು, ಮಾರ್ಚ್ 31: ರಾಜಧಾನಿ ಬೆಂಗಳೂರಿನಲ್ಲಿ (Bangalore) ಹೊಸ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನವೇ ಪೋಷಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಈಗಾಗಲೇ ಶಾಲಾ ಪ್ರವೇಶದ ವಯೋಮಿತಿ ನಿಯಮದ ಗೊಂದಲದಿಂದ ಸಂಕಷ್ಟದಲ್ಲಿರುವ ಪೋಷಕರಿಗೆ, ಇದೀಗ ಖಾಸಗಿ ಶಾಲೆಗಳು ಶುಲ್ಕ ಏರಿಕೆ ಮಾಡಿ ಮತ್ತಷ್ಟು ತಲೆನೋವು ತಂದಿವೆ. ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026–27ನೇ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆಯನ್ನು ಕೆಲವು ಖಾಸಗಿ ಶಾಲೆಗಳು ಆರಂಭಿಸಿವೆ. ಇದೇ ಸಂದರ್ಭದಲ್ಲಿ ಹಲವು ಶಾಲೆಗಳು 5ರಿಂದ 15 ಶೇಕಡಾ ವರೆಗೆ ಶುಲ್ಕ ಹೆಚ್ಚಿಸಲು ಮುಂದಾಗಿವೆ ಎಂಬ ಆರೋಪ ಪೋಷಕರ ವಲಯದಲ್ಲಿ ಕೇಳಿಬರುತ್ತಿದೆ. ಇದರಿಂದ ಈಗಾಗಲೇ ಆರ್ಥಿಕ ಒತ್ತಡದಲ್ಲಿರುವ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ, ಈ ವರ್ಷ ಸರ್ಕಾರ ಶಾಲಾ ಪ್ರವೇಶಕ್ಕೆ ಕೇವಲ 60 ದಿನಗಳ ವಯೋಮಿತಿ ಸಡಿಲಿಕೆ ನೀಡಿರುವುದು ಕೂಡ ಪೋಷಕರಿಗೆ ಮತ್ತೊಂದು ಸಮಸ್ಯೆಯಾಗಿದೆ. ಕಳೆದ ವರ್ಷ ಇದ್ದಂತೆ 5.5 ವರ್ಷದ ವಯೋಮಿತಿಯನ್ನು ಮುಂದುವರಿಸಬೇಕು ಎಂದು ಹಲವರು ಒತ್ತಾಯಿಸುತ್ತಿದ್ದಾರೆ. ಇಲ್ಲವಾದರೆ ಮಕ್ಕಳನ್ನು ಮತ್ತೆ ಯುಕೆಜಿ ತರಗತಿಯನ್ನು ಪುನರಾವರ್ತನೆ ಮಾಡಿಸಬೇಕಾಗಿ ಬರುತ್ತದೆ. ಇದರಿಂದ ಲಕ್ಷಾಂತರ ರೂಪಾಯಿ ಶುಲ್ಕವನ್ನು ಮತ್ತೊಮ್ಮೆ ಕಟ್ಟಬೇಕಾದ ಪರಿಸ್ಥಿತಿ ಎದುರಾಗುತ್ತದೆ ಎಂದು ಪೋಷಕರು ಹೇಳುತ್ತಿದ್ದಾರೆ.
ಈ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆಗಳು ಶುಲ್ಕವನ್ನು ಹೆಚ್ಚಿಸಿರುವುದು ಪೋಷಕರಿಗೆ ಇನ್ನಷ್ಟು ಕಷ್ಟ ತಂದಿದೆ. ಕೆಲ ಶಾಲೆಗಳು ಕನಿಷ್ಠ 5ರಿಂದ 10 ಶೇಕಡಾ, ಕೆಲವು ಶಾಲೆಗಳು 10ರಿಂದ 15 ಶೇಕಡಾ ವರೆಗೆ ಶುಲ್ಕ ಹೆಚ್ಚಿಸಿರುವುದಾಗಿ ಪೋಷಕರು ಆರೋಪಿಸಿದ್ದಾರೆ.
ಪ್ರತಿ ವರ್ಷವೂ ಖಾಸಗಿ ಶಾಲೆಗಳು ವಿವಿಧ ಕಾರಣಗಳನ್ನು ನೀಡಿ ಶುಲ್ಕ ಹೆಚ್ಚಿಸುತ್ತಿರುವುದರಿಂದ ಪೋಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಖಾಸಗಿ ಶಾಲೆಗಳ ಶುಲ್ಕವನ್ನು ನಿಯಂತ್ರಿಸಲು ತಮಿಳುನಾಡು ಮಾದರಿಯಂತೆ ಶುಲ್ಕ ನಿಯಂತ್ರಣ ವ್ಯವಸ್ಥೆ ಜಾರಿಗೆ ತರಬೇಕು ಎಂದು ಪೋಷಕರ ಸಮನ್ವಯ ಸಮಿತಿ ಸರ್ಕಾರವನ್ನು ಒತ್ತಾಯಿಸಿದೆ.
ಒಟ್ಟಾರೆ, ಒಂದೆಡೆ ವಯೋಮಿತಿ ಗೊಂದಲ ಮತ್ತು ಮತ್ತೊಂದೆಡೆ ಖಾಸಗಿ ಶಾಲೆಗಳ ಶುಲ್ಕ ಏರಿಕೆ ಪೋಷಕರಿಗೆ ದೊಡ್ಡ ಸಂಕಷ್ಟವಾಗಿದ್ದು, ಈ ಸಮಸ್ಯೆಗೆ ಸರ್ಕಾರ ಶೀಘ್ರ ಪರಿಹಾರ ಕಂಡುಹಿಡಿಯಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಟೆಹ್ರಾನ್, ಮಾರ್ಚ್ 31: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಒಂದೆಡೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಇರಾನ್ ಜತೆ ಮಾತುಕತೆ ನಡೆಸುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನಿನ ವಿಮಾನಕ್ಕೆ ಹಾನಿಯಾಗಿದೆ. ಈ ವಿಮಾನ ದೆಹಲಿಗೆ ಹಾರಾಟ ನಡೆಸಬೇಕಿತ್ತು.
ಇರಾನ್ನ ಮಶಾದ್ ವಿಮಾನ ನಿಲ್ದಾಣದಲ್ಲಿ ಮಹಾನ್ ಏರ್ ವಿಮಾನವು ಅಮೆರಿಕದ ವೈಮಾನಿಕ ದಾಳಿಯಲ್ಲಿ ಹಾನಿಗೊಳಗಾಗಿದೆ. ವರದಿಗಳ ಪ್ರಕಾರ, ವಿಮಾನವು ಪರಿಹಾರ ಸಾಮಗ್ರಿಗಳನ್ನು ಪಡೆಯಲು ನವದೆಹಲಿಗೆ ತೆರಳುತ್ತಿತ್ತು. ಏಪ್ರಿಲ್ 1 ರಂದು ಬೆಳಗ್ಗೆ 4 ಗಂಟೆಗೆ ವಿಮಾನ ಆಗಮಿಸಬೇಕಿತ್ತು ಎಂದು ವರದಿಯಾಗಿದೆ.
ಈ ಘಟನೆಯು ದೇಶದಲ್ಲಿ ನಾಗರಿಕ ವಿಮಾನಯಾನ ಸುರಕ್ಷತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಮಹನ್ ಏರ್ ಖಾಸಗಿ ಒಡೆತನದ ಇರಾನಿನ ವಿಮಾನಯಾನ ಸಂಸ್ಥೆಯಾಗಿದ್ದು, ಇದು ಪಶ್ಚಿಮ ಏಷ್ಯಾ, ಮಧ್ಯ ಏಷ್ಯಾ, ದಕ್ಷಿಣ ಏಷ್ಯಾ, ಆಗ್ನೇಯ ಏಷ್ಯಾ ಮತ್ತು ಪೂರ್ವ ಏಷ್ಯಾದ ಹಲವಾರು ದೇಶಗಳಿಗೆ ವಿಮಾನಗಳನ್ನು ನಿರ್ವಹಿಸುತ್ತದೆ.
ಯುದ್ಧದ ಆರಂಭದಲ್ಲಿ ಇಸ್ರೇಲಿ ನಡೆಸಿದ ದಾಳಿಯಲ್ಲಿ ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ಸುಮಾರು 16-17 ಪ್ರಯಾಣಿಕ ಮತ್ತು ಸರಕು ವಿಮಾನಗಳು ನಾಶವಾಗಿತ್ತು. ಈ ವಿಮಾನಗಳು ಇರಾನಿನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ (IRGC) ಗೆ ಸೇರಿವೆ ಮತ್ತು ಭಯೋತ್ಪಾದಕರಿಗೆ ಶಸ್ತ್ರಾಸ್ತ್ರಗಳನ್ನು ಸಾಗಿಸಲು ಕುಡ್ಸ್ ಫೋರ್ಸ್ ಬಳಸುತ್ತಿತ್ತು ಎಂದು ಇಸ್ರೇಲ್ ಹೇಳಿಕೊಂಡಿದೆ.
ಉಕ್ರೇನ್ ಯುದ್ಧಕ್ಕಾಗಿ ರಷ್ಯಾಕ್ಕೆ ಶಸ್ತ್ರಾಸ್ತ್ರಗಳನ್ನು ಸಾಗಿಸಲು ಇರಾನ್ ಏರ್ ಮತ್ತು ಮಹಾನ್ ಏರ್ ನಂತಹ ವಾಣಿಜ್ಯ ವಿಮಾನಗಳನ್ನು ಬಳಸಲಾಗುತ್ತಿತ್ತು ಎಂದು ಇಸ್ರೇಲ್ ಹೇಳಿದೆ. ಭಾರತದಿಂದ ಇರಾನ್ಗೆ ಔಷಧಿಗಳು ಸೇರಿದಂತೆ 11 ಟನ್ಗಳಷ್ಟು ಮಾನವೀಯ ನೆರವನ್ನು ಸಾಗಿಸಬೇಕಿತ್ತು.
ಹಿಂದಿನ ಸಾಗಣೆಗಳಲ್ಲಿಯೂ ಭಾರತೀಯ ವಿಮಾನಗಳನ್ನು ಬಳಸಿರಲಿಲ್ಲ. ವಿಮಾನವು ದೆಹಲಿಗೆ ತೆರಳುತ್ತಿತ್ತು ಮತ್ತು ಯುದ್ಧ ಸಂತ್ರಸ್ತರಿಗೆ 11 ಟನ್ಗಳಿಗೂ ಹೆಚ್ಚು ಮಾನವೀಯ ಔಷಧಿಗಳನ್ನು ಹೊತ್ತುಕೊಂಡು ಇರಾನ್ಗೆ ಹಿಂತಿರುಗಬೇಕಿತ್ತು.
ರಿಷಬ್ ಶೆಟ್ಟಿ (Rishab Shetty) ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ರಾಜ್ ಬಿ ಶೆಟ್ಟಿ, ಹೊಂಬಾಳೆ ಫಿಲ್ಮ್ಸ್, ರುಕ್ಮಿಣಿ ವಸಂತ್ ಸೇರಿದಂತೆ ಎಲ್ಲರನ್ನೂ ಅನ್ಫಾಲೋ ಮಾಡಿದ್ದು ಚರ್ಚೆ ಆಗಿತ್ತು. ಈಗ ಅವರು ರಿಷಬ್ ಶೆಟ್ಟಿ ಫಿಲ್ಮ್ಸ್, ರಿಷಬ್ ಶೆಟ್ಟಿ ಫೌಂಡೇಷನ್ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಅವರನ್ನು ಮಾತ್ರ ಫಾಲೋ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರು ಕೆರಾಡಿಯಲ್ಲಿ ತಾವು ಮಾಡಿದ ಸಾಧನೆ ಬಗ್ಗೆ ಹೇಳಿಕೊಂಡಿದ್ದಾರೆ.
ಸಾಮಾನ್ಯವಾಗಿ ಸಿನಿಮಾ ನಿರ್ಮಾಣ ಮಾಡುವಾಗ ದೊಡ್ಡ ದೊಡ್ಡ ಫಿಲ್ಮ್ ಸಿಟಿಯಲ್ಲಿ ಸೆಟ್ ನಿರ್ಮಾಣ ಮಾಡಲಾಗುತ್ತದೆ. ಆದರೆ, ರಿಷಬ್ ಶೆಟ್ಟಿ ಅವರು ಕುಂದಾಪುರದ ಕೆರಾಡಿಯಲ್ಲೇ ‘ಕಾಂತಾರ 2’ ಚಿತ್ರದ ಸೆಟ್ ನಿರ್ಮಾಣ ಮಾಡಿದರು. ಈ ಸೆಟ್ ಅದ್ಭುತವಾಗಿತ್ತು ಎಂಬುದು ‘ಕಾಂತಾರ: ಚಾಪ್ಟರ್ 1’ ಸಿನಿಮಾ ನೋಡಿದವರಿಗೆ ಗೊತ್ತಾಗುತ್ತದೆ. ಈಗ ಇದನ್ನು ಸಿನಿಮಾ ಸಿಟಿಯಾಗಿ ಬದಲಾಯಿಸಿರೋದಾಗಿ ಹೇಳಿದ್ದಾರೆ.
‘ಕಾಂತಾರದ ಬಳಿಕ ಕುಂದಾಪುರ, ಬೈಂದೂರು ಭಾಗ ಫಿಲ್ಮ್ ಸಿಟಿಯಾಗಿ ಬದಲಾಗಿದೆ. ಈ ಭಾಗದಲ್ಲಿ ಇನ್ನಷ್ಟು ಸಿನಿಮಾ ಶೂಟ್ ಆಗುವ ನಿರೀಕ್ಷೆ ಇದೆ. ಈ ಭಾಗದ ಜನರಿಗೆ ಸಿನಿಮಾದ ಮೇಲಿನ ಗೌರವ ಹೆಚ್ಚಾಗಿದೆ’ ಎಂದು ರಿಷಬ್ ಶೆಟ್ಟಿ ಅವರು ಹೇಳಿದ್ದಾರೆ.
ಕುಂದಾಪುರ ಸೇರಿದಂತೆ ಕರಾವಳಿ ಭಾಗದಲ್ಲಿ ಅಪಾರ ಪ್ರಕೃತಿ ಸೌಂದರ್ಯವಿದೆ. ಇದನ್ನು ಕೆಲವು ಸಿನಿಮಾಗಳಲ್ಲಿ ಸೆರೆ ಹಿಡಿಯಲಾಗಿದೆ. ಆದರೆ, ಇದನ್ನು ಸಂಪೂರ್ಣವಾಗಿ ಬಳಸಿಕೊಂಡಿಲ್ಲ ಎಂಬುದು ರಿಷಬ್ ಶೆಟ್ಟಿ ಅವರ ಅಭಿಪ್ರಾಯ. ‘ಕಾಂತಾರ’ ಹಾಗೂ ‘ಕಾಂತಾರ: ಚಾಪ್ಟರ್ 1’ ಬಳಿಕ ಕರಾವಳಿಯ ಸಂಸ್ಕೃತಿ ಎಲ್ಲರಿಗೂ ತಿಳಿದಿದೆ ಎಂಬುದು ವಿಶೇಷ.
ರಿಷಬ್ ಶೆಟ್ಟಿ ಅವರು ಸದ್ಯ ‘ಜೈ ಹನುಮಾನ್’ ಸಿನಿಮಾ ಶೂಟ್ ಅಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗೆ ಹಂಪಿಯ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳು ಅಪಾರವಾದ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕಪ್ಪು ಬೆಕ್ಕು ಅಡ್ಡ ಬಂದರೆ ಏನಾಗುತ್ತೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ದೈನಂದಿನ ಜೀವನದಲ್ಲಿ ಎದುರಾಗುವ ಕೆಲವು ಘಟನೆಗಳು ಶುಭವೋ ಅಶುಭವೋ ಎಂಬ ಕುತೂಹಲ ಸಾಮಾನ್ಯ. ಅದರಲ್ಲೂ ಕಪ್ಪು ಬೆಕ್ಕು ದಾರಿಗೆ ಅಡ್ಡ ಬರುವುದು ಶುಭವೋ ಅಶುಭವೋ ಎಂಬುದು ವ್ಯಾಪಕ ಚರ್ಚೆಯ ವಿಷಯ.
ಪುರಾತನ ನಂಬಿಕೆಗಳ ಪ್ರಕಾರ, ಕಪ್ಪು ಬೆಕ್ಕು ಶನಿ, ರಾಹು ಮತ್ತು ಕೇತು ಗ್ರಹಗಳ ಪ್ರತೀಕವಾಗಿದೆ. ಕಪ್ಪು ಬಣ್ಣವನ್ನು ನಿಧಾನ, ಅಜ್ಞಾನದ ಸಂಕೇತ ಎಂದೂ ಪರಿಗಣಿಸಲಾಗುತ್ತದೆ. ಶುಭ ಕಾರ್ಯಗಳಿಗೆ ಅಥವಾ ಹೊಸ ವಾಹನ ಖರೀದಿಗೆ ಹೊರಟಾಗ ಕಪ್ಪು ಬೆಕ್ಕು ಅಡ್ಡ ಬಂದರೆ, ಅದು ಕಲಹಗಳು, ಗಲಾಟೆಗಳು, ಮನಸ್ಸಿನಲ್ಲಿ ನಕಾರಾತ್ಮಕ ಭಾವನೆಗಳು ಮತ್ತು ಕೆಲಸ ಕಾರ್ಯಗಳಲ್ಲಿ ಅಡೆತಡೆಗಳನ್ನು ಸೂಚಿಸುತ್ತದೆ ಎಂದು ನಂಬಲಾಗುತ್ತದೆ ಎಂದು ಗುರೂಜಿ ಹೇಳಿದ್ದಾರೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 31, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ತ್ರಯೋದಶಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ರವಿ ಮೀನ ರಾಶಿಯಲ್ಲಿ ಮತ್ತು ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸಲಿದ್ದಾನೆ ಎಂಬುದನ್ನು ಅವರು ವಿವರಿಸಿದ್ದಾರೆ.
ಬೆಂಗಳೂರು, ಮಾರ್ಚ್ 31: ಬೆಂಗಳೂರು (Bangalore) ನಗರದ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ (Karaga Shaktyotsava) ಕೌಂಟ್ಡೌನ್ ಆರಂಭವಾಗಿದೆ. ಇಂದು (ಮಾರ್ಚ್ 31) ತಡರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಸಂಪಂಗಿರಾಮನಗರದ ಸಂಪಂಗಿಕೆರೆ ಅಂಗಳದಲ್ಲಿರುವ ಶಕ್ತಿಪೀಠದಲ್ಲಿ ಹಸಿಕರಗ ನಡೆಯಲಿದೆ. ಬಳಿಕ ಏಪ್ರಿಲ್ 1ರ ಚೈತ್ರ ಪೂರ್ಣಿಮೆಯಂದು ಮಧ್ಯರಾತ್ರಿ ಪೇಟೆ ಕರಗ ನಡೆಯಲಿದ್ದು, ಭಕ್ತರಿಗೆ ದರ್ಶನ ದೊರೆಯಲಿದೆ. ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ನಡೆಯುವ ದ್ರೌಪದಿ ದೇವಿಯ ಕರಗ ಶಕ್ತ್ಯೋತ್ಸವವು ಬೆಂಗಳೂರಿನ ಪ್ರಮುಖ ಸಂಪ್ರದಾಯಿಕ ಉತ್ಸವಗಳಲ್ಲಿ ಒಂದಾಗಿದೆ. ಈ ಬಾರಿ ಉತ್ಸವದಲ್ಲಿ ಸುಮಾರು 10 ರಿಂದ 15 ಲಕ್ಷ ಭಕ್ತರು ಭಾಗವಹಿಸಿ ಕರಗದ ದರ್ಶನ ಪಡೆಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಎಚ್ಚರ: ಕರಗದ ಹೆಸರಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ನಡೀತಿದೆ ವಂಚನೆ
ಇದರ ನಡುವೆಯೇ, ವಿಶ್ವವಿಖ್ಯಾತ ಬೆಂಗಳೂರು ಕರಗದ ಹೆಸರಿನಲ್ಲಿ ಕೆಲ ಕಿಡಿಗೇಡಿಗಳು ಹಣ ಸಂಗ್ರಹಿಸಲು ಮುಂದಾಗಿರುವುದು ಗಮನಕ್ಕೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ 2,500 ರೂಪಾಯಿ ಹಣ ನೀಡಿದರೆ ಕರಗವನ್ನು ಸಂಪೂರ್ಣವಾಗಿ ತೋರಿಸುತ್ತೇವೆ, ಜೊತೆಗೆ ಒಂದು ಹೊತ್ತಿನ ಊಟ ಮತ್ತು ಕರಗದ ಜೊತೆ ಓಡಾಟಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಪೋಸ್ಟ್ಗಳನ್ನು ಹಾಕಲಾಗಿದೆ. ಈ ಕುರಿತು ಶ್ರೀ ಧರ್ಮರಾಯ ಸ್ವಾಮಿ ದೇವಾಲಯದ ವ್ಯವಸ್ಥಾಪನ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ದೇವಾಲಯದ ವತಿಯಿಂದ ಕರಗ ಉತ್ಸವಕ್ಕಾಗಿ ಭಕ್ತರಿಂದ ಯಾವುದೇ ರೀತಿಯ ಹಣ ವಸೂಲಿ ಮಾಡುವುದಿಲ್ಲ. ಕೆಲವರು ದುಡ್ಡು ಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿ ತಿಳಿಸಿದ್ದಾರೆ.
ಮೈಸೂರು ದಸರಾ ಮಾದರಿಯಲ್ಲಿ ದೀಪಾಲಂಕಾರ
ಇನ್ನೊಂದೆಡೆ, ಈ ಬಾರಿ ಬೆಂಗಳೂರು ಕರಗ ಶಕ್ತ್ಯೋತ್ಸವವನ್ನು ವಿಶೇಷವಾಗಿ ಆಚರಿಸಲು ಮೈಸೂರು ದಸರಾ ಮಾದರಿಯಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಕೆಂಪೇಗೌಡರು ನಿರ್ಮಿಸಿದ ಹಳೆಯ ಬೆಂಗಳೂರಿನ ಭಾಗಗಳಲ್ಲಿ ಬಣ್ಣ ಬಣ್ಣದ ದೀಪಾಲಂಕಾರಗಳು ಜಗಮಗಿಸುತ್ತಿದ್ದು, ನಗರವು ಉತ್ಸವದ ಸಂಭ್ರಮದಲ್ಲಿ ಮಿಂಚುತ್ತಿದೆ.
ಧರ್ಮರಾಯ ಸ್ವಾಮಿ ದೇವಸ್ಥಾನ
ದೇವಾಲಯದ ಒಳಾಂಗಣದ ವೆಚ್ಚವನ್ನು ಮುಜರಾಯಿ ಇಲಾಖೆ ನೋಡಿಕೊಳ್ಳುತ್ತಿದ್ದರೆ, ಉತ್ಸವದ ಇತರೆ ವೆಚ್ಚಗಳನ್ನು ಜಿಬಿಎ (GBA) ಭರಿಸುತ್ತಿದೆ ಎಂದು ತಿಳಿದುಬಂದಿದೆ. ಈ ಬಾರಿ ಉತ್ಸವವನ್ನು ಇನ್ನಷ್ಟು ಅದ್ಧೂರಿಯಾಗಿ ಆಚರಿಸಲಾಗುತ್ತಿರುವುದಕ್ಕೆ ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಕೆಲವೇ ಗಂಟೆಗಳು ಮಾತ್ರ ಬಾಕಿ ಉಳಿದಿದ್ದು, ಮೈಸೂರು ದಸರಾ ಶೈಲಿಯ ದೀಪಾಲಂಕಾರದಿಂದ ಈ ಬಾರಿ ಉತ್ಸವ ಮತ್ತಷ್ಟು ವಿಶೇಷವಾಗಲಿದೆ. ನಗರದೆಲ್ಲೆಡೆ ಬಣ್ಣ ಬಣ್ಣದ ಲೈಟಿಂಗ್ಸ್ಗಳಿಂದ ಸಿಂಗಾರಗೊಂಡಿದ್ದು, ಭಕ್ತರು ಕರಗ ದರ್ಶನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 31ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ನಿಮ್ಮ ಬಗ್ಗೆ ಗಾಸಿಪ್ ಹರಿದಾಡಲಿದೆ. ಅದರ ಮೂಲ ಯಾವುದು, ಯಾರು ಈ ರೀತಿ ವದಂತಿ ಹಬ್ಬಿಸುತ್ತಿದ್ದಾರೆ ಎಂಬುದನ್ನು ಪತ್ತೆ ಹಚ್ಚುವುದಕ್ಕೆ ಹರಸಾಹಸ ಪಡುವಂತೆ ಆಗಲಿದೆ. ಮನೆಯ ಮಟ್ಟಿಗೆ ಮಾಡೋಣ ಎಂದುಕೊಂಡಿದ್ದ ಕಾರ್ಯಕ್ರಮ ಒಂದನ್ನು ದೊಡ್ಡ ಮಟ್ಟದಲ್ಲಿ ಆಯೋಜಿಸುವುದಕ್ಕೆ ಆಲೋಚನೆ ಮಾಡಲಿದ್ದೀರಿ. ಸಂಗೀತಗಾರರಿಗೆ ದೂರದ ಊರುಗಳಿಂದ ಆಹ್ವಾನ ಬರಲಿದೆ. ನಿಮಗೆ ಆ ಸ್ಥಳಕ್ಕೆ ಪದೇಪದೇ ಹೋಗಬೇಕಾಗುವ ರೀತಿಯಲ್ಲಿ ಬಾಂಧವ್ಯ ಗಟ್ಟಿ ಆಗಲಿದೆ. ಉದ್ಯೋಗಸ್ಥರಿಗೆ ಕೆಲವು ಸಮಯದ ಮಟ್ಟಿಗೆ ಬೇರೆ ವಿಭಾಗದಲ್ಲಿಯೋ ಅಥವಾ ಬೇರೆ ಕ್ಲೈಂಟ್ ಗಾಗಿಯೋ ಕೆಲಸ ಮಾಡುವಂತೆ ಹೇಳಬಹುದು.
ಯಾರು ಏನೆಂದುಕೊಂಡರೆ ನನಗೇನು ಅನಿಸಿದ್ದನ್ನು ನೇರಾನೇರಾ ಹೇಳಿಬಿಡುತ್ತೇನೆ ಎಂಬ ಮನಸ್ಥಿತಿಯಲ್ಲಿ ಈ ದಿನ ನೀವು ಇರಲಿದ್ದೀರಿ. ನಿಮ್ಮ ಈ ಸ್ವಭಾವದಿಂದ ಕುಟುಂಬ ಸದಸ್ಯರಲ್ಲಿ ಆತಂಕ ಎದುರಾಗಲಿದೆ. ಕೆಲವರು ನಿಮಗೆ ತಿಳಿಹೇಳುವುದಕ್ಕೆ ಸಹ ಪ್ರಯತ್ನ ಮಾಡಲಿದ್ದಾರೆ. ತಾತ್ಕಾಲಿಕ ಉದ್ಯೋಗದಲ್ಲಿ ಇರುವಂಥವರಿಗೆ ಈಗ ಇರುವಂಥ ಕೆಲಸವೇ ಕಾಯಂ ಆಗುವ ಅಥವಾ ಬೇರೆಡೆ ಉದ್ಯೋಗ ಸಿಗುವ ಸಾಧ್ಯತೆ ಇದೆ. ನಿಮಗೆ ಸಂಬಂಧ ಇಲ್ಲದ ವಿಷಯ ಎಂದುಕೊಂಡು ದೂರ ಇದ್ದುಬಿಟ್ಟಿದ್ದ ಕೆಲವು ಸಂಗತಿಗಳನ್ನು ನೀವೇ ಮುಂದೆ ನಿಂತು ತುರ್ತಾಗಿ ಬಗೆಹರಿಸಬೇಕಾದ ಸನ್ನಿವೇಶ ಎದುರಾಗಲಿದೆ.
ಹೊಸ ವಿಚಾರಗಳು, ನೀವು ಈ ತನಕ ಕಂಡಿರದ ಕೆಲವು ಸನ್ನಿವೇಶಗಳನ್ನು ಕಾಣಲಿದ್ದೀರಿ. ಇವು ನಿಮ್ಮ ಬಾಳಿನಲ್ಲಿ ಹೊಸ ಬದಲಾವಣೆಗಳನ್ನು ತರಲಿವೆ. ಒಂದು ಬಗೆಯ ಸುರಕ್ಷತೆ ಭಾವ ನಿಮ್ಮಲ್ಲಿ ಮನೆ ಮಾಡಲಿದೆ. ಸ್ನೇಹಿತರ ಸಲಹೆ ನಿಮಗೆ ದೊಡ್ಡ ಮಟ್ಟದಲ್ಲಿ ಸಹಾಯಕ್ಕೆ ಬರಲಿದೆ. ದಾನ- ಧರ್ಮಕ್ಕಾಗಿ ಸ್ವಲ್ಪ ಮೊತ್ತದ ಹಣವನ್ನಾದರೂ ಖರ್ಚು ಮಾಡಲಿದ್ದೀರಿ. ಏನಾದರೂ ಒಂದು ಕಾರಣಕ್ಕೆ ಮನೆಯ ಹೊರಗಿನ ಊಟ- ತಿಂಡಿಯನ್ನೇ ಮಾಡಬೇಕಾದ ಸನ್ನಿವೇಶ ಸೃಷ್ಟಿ ಆಗಲಿದೆ. ನೀವು ಬಹಳ ಕಾಲದಿಂದ ತಿಳಿದುಕೊಳ್ಳಬೇಕು ಎಂದು ಬಯಸುತ್ತಿದ್ದ ಮಾಹಿತಿಯ ಬಗ್ಗೆ ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬರಲಿದೆ.
ಕುಟುಂಬದಲ್ಲಿ ಆಗುವಂಥ ಕೆಲವು ಬೆಳವಣಿಗೆಗಳಿಂದ ನಿಮಗೆ ನಿರಾಶೆ ಮೂಡಲಿದೆ. ಅದರಲ್ಲೂ ನೀವು ನೀಡಿದ ಸಲಹೆಗಳಿಂದ ಅನುಕೂಲ ಆಗಲಿದೆ ಎಂದು ಗೊತ್ತಾದರೂ ನಿರ್ಲಕ್ಷ್ಯ ಮಾಡುವವರಿಂದ ಬೇಸರ ಆಗಲಿದೆ. ಮಕ್ಕಳಿಗೆ ಏನು ಆಹಾರ ನೀಡುತ್ತೀರಿ ಎಂಬ ಬಗ್ಗೆ ಸಾಮಾನ್ಯ ದಿನಕ್ಕಿಂತ ಹೆಚ್ಚಿನ ಲಕ್ಷ್ಯವನ್ನು ವಹಿಸಿ. ಉದ್ಯೋಗಸ್ಥರಿಗೆ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗಲಿವೆ. ಕೆಲಸ- ಕಾರ್ಯ ಪೂರ್ಣ ಮಾಡುವುದಕ್ಕೆ ವಿಳಂಬ ಆಗಲಿದೆ. ಇಷ್ಟು ಸಮಯದೊಳಗೆ ಕೆಲಸ ಮಾಡಿಕೊಡುವುದಾಗಿ ಮಾತು ನೀಡುವ ಮುಂಚೆ ಅದು ಸಾಧ್ಯವಾ ಎಂಬ ಬಗ್ಗೆ ಆಲೋಚನೆ ಮಾಡುವುದು ಮುಖ್ಯವಾಗುತ್ತದೆ.
ಹೊಸದಾಗಿ ಕೆಲಸದ ಹುಡುಕಾಟದಲ್ಲಿ ಇರುವವರು ಉದ್ಯೋಗ ಬದಲಾವಣೆಗಾಗಿ ತೀವ್ರವಾದ ಪ್ರಯತ್ನ ಮಾಡಲು ಆರಂಭಿಸುವಿರಿ. ಸಿ.ವಿ. ಸಿದ್ಧತೆ ಮಾಡಿಕೊಳ್ಳುವುದು ಹಾಗೂ ಸೋಷಿಯಲ್ ನೆಟ್ ವರ್ಕ್ ಮೂಲಕ ಏನು ರೆಫರೆನ್ಸ್ ಪಡೆದುಕೊಳ್ಳಲು ಸಾಧ್ಯವೋ ಆ ಎಲ್ಲವನ್ನೂ ಒಂದರ ನಂತರ ಒಂದರಂತೆ ಎಂಬ ರೀತಿಯಲ್ಲಿ ತೆಗೆದುಕೊಳ್ಳುವುದು ಇಂಥವುಗಳನ್ನು ಮಾಡುವುದಕ್ಕೆ ದಿನದ ಹೆಚ್ಚಿನ ಸಮಯ ಹೋಗಲಿದೆ. ಮನೆಗೆ ಬೇಕಾದ ಕೆಲವು ಯಂತ್ರಗಳು, ಗ್ಯಾಜೆಟ್ ಗಳನ್ನು ಖರೀದಿ ಮಾಡುವುದಕ್ಕೆ ಹಣವನ್ನು ವೆಚ್ಚ ಮಾಡಲಿದ್ದೀರಿ. ಸೋದರ ಸಂಬಂಧಿಗಳು ನಿಮ್ಮ ಹಣಕಾಸು ಅಗತ್ಯಗಳನ್ನು ಪೂರೈಸುವುದಕ್ಕೆ ಮುಂದೆ ಬರಲಿದ್ದಾರೆ.
ಆನ್ ಲೈನ್ ವ್ಯವಹಾರಗಳನ್ನು ಮಾಡುವಾಗ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಎಚ್ಚರಿಕೆಯನ್ನು ವಹಿಸಬೇಕು. ಏಕೆಂದರೆ ಡಬಲ್ ಪೇಮೆಂಟ್ ಆಗಿ, ಆ ನಂತರ ಅದನ್ನು ವಾಪಸ್ ಪಡೆಯುವುದಕ್ಕೆ ಹರಸಾಹಸ ಪಡಬೇಕಾಗುತ್ತದೆ. ಉದ್ಯೋಗ ಸ್ಥಳದಲ್ಲಿ ಈ ಹಿಂದಿನ ಯಾವಾಗಿನದೋ ಪ್ರತೀಕಾರವನ್ನು ಈಗ ತೆಗೆದುಕೊಳ್ಳಲು ಅವಕಾಶ ಸಿಕ್ಕಿಬಿಡುತ್ತದೆ, ಆದರೆ ಆ ಭಾವನೆಯಿಂದ ಹೊರಬಂದು ಬಿಡುವುದರಿಂದ ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತದೆ. ಲಾರಿ ಅಥವಾ ಭಾರೀ ವಾಹನಗಳ ಚಾಲನೆ ಮಾಡುವಂಥವರಿಗೆ ಒಂದಲ್ಲ ಒಂದು ರೀತಿ ಒತ್ತಡ ಅನುಭವಕ್ಕೆ ಬರಲಿದೆ. ನೀವು ತೋರಿದ ನಿರ್ಲಕ್ಷ್ಯದಿಂದ ನಷ್ಟ ಕಾಣುವಂತಾಯಿತು ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಾರೆ.
ಬಡ್ಡಿಗೆ ಹಣ ನೀಡುವವರು, ಗಿರವಿ ಅಂಗಡಿ ನಡೆಸುತ್ತಾ ಇರುವವರು, ಸಿನಿಮಾ ಫೈನಾನ್ಷಿಯರ್ ಗಳಾಗಿ ಇರುವವರಿಗೆ ಈ ದಿನ ಆದಾಯದಲ್ಲಿ ಹೆಚ್ಚಳ ಆಗುವಂಥ ಯೋಗ ಇದೆ. ನಿಮ್ಮ ಪ್ರಭಾವ ವಿಸ್ತಾರ ಆಗುವಂಥ ಸಾಧ್ಯತೆ ಸಹ ಇದೆ. ಒಂದು ವೇಳೆ ಪಾರ್ಟನರ್ ಷಿಪ್ ನಲ್ಲಿ ವ್ಯವಹಾರ ಮಾಡುತ್ತಾ ಬಂದಿದ್ದೀರಿ ಅಂತಾದಲ್ಲಿ ಸ್ವತಂತ್ರವಾಗಿ ವ್ಯವಹಾರ ಆರಂಭಿಸುವ ನಿರ್ಧಾರಕ್ಕೆ ಬರುತ್ತೀರಿ. ನೀವು ನಿರೀಕ್ಷೆ ಕೂಡ ಮಾಡಿರದಂಥ ಹಣ ಕೈ ಸೇರಲಿದೆ. ಪ್ರತಿ ತಿಂಗಳು ಇಂತಿಷ್ಟು ಆದಾಯ ಬರುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಆಲೋಚಿಸುತ್ತಾ ಇರುವವರು ಅದಕ್ಕೆ ಬೇಕಾದ ಪ್ರಯತ್ನ ಆರಂಭ ಮಾಡುತ್ತೀರಿ.
ನಿಮ್ಮಷ್ಟಕ್ಕೆ ನೀವು ಅಂತ ಇದ್ದರೂ ಕೆಲವು ವಾದ- ವಿವಾದಗಳಿಗೆ ಕೆಲವರು ಎಳೆಯುತ್ತಾರೆ. ದೊಡ್ಡ ಗುಂಪಿನಲ್ಲಿ ಜನರು ಇರುವ ಕಡೆಗೆ ನೀವು ಹೋಗದಿರುವುದು ಉತ್ತಮ. ಇದನ್ನು ಮೀರಿಯೂ ಅಂಥ ಸ್ಥಳದಲ್ಲಿ ನೀವು ಇದ್ದೀರಿ ಅಂತಾದಲ್ಲಿ ಮೌನವಾಗಿ ಇರುವುದು ಕ್ಷೇಮ. ಸಹನೆ ಇಟ್ಟುಕೊಂಡು ಬಹಳ ಸಮಯದಿಂದ ಕಾಯುತ್ತಾ ಬಂದಿದ್ದಕ್ಕೂ ಸಾರ್ಥಕ ಎಂಬಂತೆ ಕೆಲವು ಕಾರ್ಯಗಳು ನಿಮ್ಮಂತೆಯೇ- ನಿಮಗೆ ಬೇಕಾದಂತೆಯೇ ಆಗಲಿದೆ. ನಿರ್ಧಾರಿತ ಧ್ವನಿಯಲ್ಲಿ ಹೇಳುವ ಮೂಲಕ ಕೆಲವು ವ್ಯಕ್ತಿಗಳಿಂದ ನೀವಾಗಿಯೇ ಅಂತರವನ್ನು ಕಾಯ್ದುಕೊಳ್ಳಲಿದ್ದೀರಿ.
ನಿಮ್ಮ ಮೇಲೆ ದೈವಾನುಗ್ರಹ ಇರಲಿದೆ. ಬಹಳ ಕಷ್ಟ ಆಗಬಹುದು ಎಂದುಕೊಂಡ ಕೆಲಸ- ಕಾರ್ಯ, ವ್ಯವಹಾರಗಳು ನಿರೀಕ್ಷೆಗಿಂತ ಸಲೀಸಾಗಿ ಪೂರ್ಣಗೊಳ್ಳಲಿದೆ. ಹಳೇ ವಸ್ತುಗಳ ಖರೀದಿ- ಮಾರಾಟದಲ್ಲಿ ತೊಡಗಿರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ಬ್ರ್ಯಾಂಡೆಡ್ ವಸ್ತುಗಳನ್ನು ಉಡುಗೊರೆಯಾಗಿ ಪಡೆದುಕೊಳ್ಳುವ ಯೋಗ ಇದೆ. ಈ ದಿನ ಪಾಲ್ಗೊಳ್ಳುವ ಕಾರ್ಯಕ್ರಮ ಅಥವಾ ಸಮಾರಂಭದಲ್ಲಿ ವಿವಾಹ ವಯಸ್ಕರಿಗೆ ಮನಸ್ಸಿಗೆ ಒಪ್ಪುವಂಥ ವಧು ಅಥವಾ ವರ ದೊರೆಯುವಂಥ ಯೋಗ ಇದೆ. ದೂರದ ಊರಿಂದ ಸಂಬಂಧಿಗಳು ನಿಮ್ಮ ಮನೆಗೆ ಬರಲಿದ್ದಾರೆ.