All posts by nagaraj11081993

ಬೀದಿ ಬದಿಯ ತಿಂಡಿ ತಿನ್ನುವಾಗ ಎಚ್ಚರ; ಪಾನಿಪುರಿ ತಿಂದ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು – Kannada News | Over 20 children hospitalised in Telangana after eating Pani puri food poisoning

ಹೈದರಾಬಾದ್, ಜೂನ್ 17: ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ಗಂಭೀರ ದುರಂತವೊಂದು ಬೆಳಕಿಗೆ ಬಂದಿದೆ. ತಂಗಲ್ಲಪಲ್ಲಿ ಮಂಡಲದ ಕೆಸಿಆರ್ ನಗರ ಕಾಲೋನಿಯಲ್ಲಿ ಪಾನಿಪುರಿ (Panipuri) ತಿಂದು 18 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಮಂಗಳವಾರ ಸಂಜೆ ಸ್ಥಳೀಯ ಪಾನಿಪುರಿ ವ್ಯಾನ್‌ನಲ್ಲಿ ಕೆಲವು ಮಕ್ಕಳು ಪಾನಿಪುರಿ ತಿಂದರು. ಅದನ್ನು ತಿಂದ ಸ್ವಲ್ಪ ಸಮಯದ ನಂತರ ಕೆಲವು ಮಕ್ಕಳು ಅಸ್ವಸ್ಥರಾದರು. ಅವರಲ್ಲಿ ಕೆಲವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ಇನ್ನು ಕೆಲವರು ವಾಂತಿ, ಅತಿಸಾರ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಇದರಿಂದಾಗಿ, ಕುಟುಂಬ ಸದಸ್ಯರು ಅವರನ್ನು ಚಿಕಿತ್ಸೆಗಾಗಿ ಸಿರಿಸಿಲ್ಲಾ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ದರು.

ಸ್ಥಳೀಯ ನಿವಾಸಿಗಳ ಪ್ರಕಾರ, ಮಂಗಳವಾರ ಸಂಜೆ ಕಾಲೋನಿಗೆ ಬಂದಿದ್ದ ಚಾಟ್ಸ್ ವ್ಯಾಪಾರಿಯೊಬ್ಬನ ಬಳಿ ಮಕ್ಕಳು ಹಾಗೂ ಅವರ ಕುಟುಂಬಸ್ಥರು ಪಾನಿಪುರಿ ಸೇವಿಸಿದ್ದರು. ಆದರೆ, ಇಂದು ಮುಂಜಾನೆ ವೇಳೆ ಮಕ್ಕಳಿಗೆ ತೀವ್ರ ಹೊಟ್ಟೆನೋವು, ನಿರಂತರ ವಾಂತಿ ಮತ್ತು ಭೇದಿ ಆರಂಭವಾಗಿದೆ. ಒಬ್ಬರಾದ ಮೇಲೊಬ್ಬರಂತೆ ಕಾಲೋನಿಯ ಹಲವು ಮಕ್ಕಳು ಇದೇ ರೋಗಲಕ್ಷಣಗಳಿಂದ ಬಳಲಲು ಆರಂಭಿಸಿದಾಗ ಗಾಬರಿಗೊಂಡ ಪಾಲಕರು ತಕ್ಷಣವೇ ಅವರನ್ನು ರಾಜಣ್ಣ ಸಿರ್ಸಿಲ್ಲಾ ಜಿಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ಹತ್ತಿರದ ಖಾಸಗಿ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿದ್ದಾರೆ. ಇಂದು ಸಂಜೆ ವೇಳೆಗೆ ಆಸ್ಪತ್ರೆಗೆ ದಾಖಲಾದ ಮಕ್ಕಳ ಸಂಖ್ಯೆ 20 ದಾಟಿದೆ ಎನ್ನಲಾಗಿದೆ. ಸದ್ಯ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಪಾನಿಪುರಿಯಲ್ಲಿ ಮೂಳೆ ಪತ್ತೆ; ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಿದ್ದ ಯುವತಿಗೆ ಶಾಕ್

ಈ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ತಂಗಲ್ಲಪಲ್ಲಿ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಪಾಲಕರು ಮತ್ತು ನಿವಾಸಿಗಳ ಪ್ರಾಥಮಿಕ ಹೇಳಿಕೆಗಳ ಆಧಾರದ ಮೇಲೆ ಸದ್ಯ ಪಾನಿಪುರಿ ವ್ಯಾಪಾರಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಕ್ಕಳು ಬೀದಿಬದಿಯ ಪಾನಿಪುರಿ ತಿಂದ ಬಳಿಕವೇ ಅಸ್ವಸ್ಥಗೊಂಡಿದ್ದಾರೆ ಎಂದು ಪಾಲಕರು ಆರೋಪಿಸುತ್ತಿದ್ದಾರೆ. ಸದ್ಯ ವ್ಯಾಪಾರಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಚಿಕ್ಕೋಡಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಮತ್ತೊಮ್ಮೆ ಫುಡ್ ಪಾಯ್ಸನಿಂಗ್: 12 ವಿದ್ಯಾರ್ಥಿಗಳು ಅಸ್ವಸ್ಥ

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆಹಾರ ಸುರಕ್ಷತಾ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ. ಮಕ್ಕಳು ಸೇವಿಸಿದ ಪಾನಿಪುರಿ, ಅದಕ್ಕೆ ಬಳಸಲಾದ ಮಸಾಲೆ ನೀರು ಮತ್ತು ಆಲೂಗಡ್ಡೆ ಮಿಶ್ರಣದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲು ಸಿದ್ಧತೆ ನಡೆಸಿದ್ದಾರೆ. ಕಲುಷಿತ ನೀರು ಅಥವಾ ಹಳಸಿದ ಆಹಾರ ಪದಾರ್ಥಗಳ ಬಳಕೆಯಿಂದ ಈ ಫುಡ್ ಪಾಯ್ಸನಿಂಗ್ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AFG: ದಕ್ಷಿಣ ಆಫ್ರಿಕಾದ ವಿಶ್ವ ದಾಖಲೆಯನ್ನು ಸರಿಗಟ್ಟಿದ ಟೀಂ ಇಂಡಿಯಾ – Kannada News | Team India’s Eighth 400+ ODI Score: Gill, Kishan Heroics Match South Africa’s Feat

ಇಂಗ್ಲೆಂಡ್ 7 ಬಾರಿ ಈ ಸಾಧನೆ ಮಾಡಿದ್ದರೆ, ದಕ್ಷಿಣ ಆಫ್ರಿಕಾ 8 ಬಾರಿ 400 ಕ್ಕೂ ಹೆಚ್ಚು ರನ್ ಗಳಿಸಿದೆ. ಇದೀಗ ಭಾರತ ಕೂಡ 8ನೇ ಬಾರಿಗೆ 400 ಕ್ಕೂ ಹೆಚ್ಚು ರನ್ ಕಲೆಹಾಕಿ ದಕ್ಷಿಣ ಆಫ್ರಿಕಾದ ದಾಖಲೆಯನ್ನು ಸರಿಗಟ್ಟಿದೆ. ಏಕದಿನ ಪಂದ್ಯಗಳಲ್ಲಿ ಭಾರತದ ಅತ್ಯಧಿಕ ಸ್ಕೋರ್ 5 ವಿಕೆಟ್‌ಗೆ 418 ರನ್​ಗಳಾಗಿದ್ದು, ಡಿಸೆಂಬರ್ 2011 ರಲ್ಲಿ ಇಂದೋರ್‌ನಲ್ಲಿ ನಡೆದಿದ್ದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಈ ಸ್ಕೋರ್ ಕಲೆಹಾಕಿತ್ತು.

Source link

‘ಆಲ್ಫಾ’ ಟ್ರೇಲರ್ ರಿಲೀಸ್: ಲಂಕೆ ಸುಡಲು ಬಂದ ಆಧುನಿಕ ಸೀತೆ ಆಲಿಯಾ ಭಟ್ – Kannada News | Alia Bhatt Sharvari Bobby Deol YRF Spy Universe Alpha Movie Trailer released

‘ಯಶ್ ರಾಜ್ ಫಿಲ್ಮ್ಸ್’ ನಿರ್ಮಾಣದ ಬಹುನಿರೀಕ್ಷಿತ ‘ಆಲ್ಫಾ’ (Alpha) ಚಿತ್ರದ ಭರ್ಜರಿ ಟ್ರೇಲರ್ ಬುಧವಾರ (ಜೂನ್ 17) ಬಿಡುಗಡೆಯಾಗಿದೆ. ಆಲಿಯಾ ಭಟ್ (Alia Bhatt), ಬಾಬಿ ಡಿಯೋಲ್, ಅನಿಲ್ ಕಪೂರ್ ಮತ್ತು ಶರ್ವರಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಆ್ಯಕ್ಷನ್ ಥ್ರಿಲ್ಲರ್ ಚಿತ್ರದ ಟ್ರೇಲರ್ (Alpha Movie Trailer) ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸುತ್ತಿದೆ. ಇದರೊಂದಿಗೆ ವೈಆರ್‌ಎಫ್‌ ಸ್ಪೈ ಯೂನಿವರ್ಸ್‌ನ ಪ್ರಮುಖ ಕೊಂಡಿಯಾದ ಹೃತಿಕ್ ರೋಷನ್ (ಕಬೀರ್) ಅವರ ವಿಶೇಷ ಅತಿಥಿ ಪಾತ್ರವೂ ಈ ಟ್ರೇಲರ್ ಮೂಲಕ ರಿವೀಲ್ ಆಗಿದೆ.

ಟ್ರೇಲರ್​ನಲ್ಲಿ ಆಲಿಯಾ ಭಟ್ ಅವರನ್ನು ‘ಸೀತಾ’ ಎಂಬ ಅತ್ಯಂತ ಅಪಾಯಕಾರಿ ಹುಡುಗಿಯ ಪಾತ್ರದಲ್ಲಿ ಪರಿಚಯಿಸಲಾಗಿದೆ. ಕೇವಲ ಕೊಲ್ಲುವುದಕ್ಕಾಗಿಯೇ ಬೆಳೆದಿರುವ ಸೀತಾ, ತನ್ನದೇ ಗುರು ಹಾಗೂ ಚಿತ್ರದ ಮುಖ್ಯ ವಿಲನ್ ಬಾಬಿ ಡಿಯೋಲ್ ಎದುರು ಸೆಣಸಾಡಲು ನಿಲ್ಲುತ್ತಾಳೆ. ಉಸಿರು ಬಿಗಿಹಿಡಿಯುವಂತಹ ಆ್ಯಕ್ಷನ್ ಸೀನ್‌ಗಳು, ರೇಸಿಂಗ್ ದೃಶ್ಯಗಳನ್ನು ಹೊಂದಿರುವ ‘ಆಲ್ಫಾ’ ಚಿತ್ರವು ಇಬ್ಬರು ಮಹಿಳಾ ಪಾತ್ರಗಳ ಸುತ್ತ ಸುತ್ತುವ ಪಕ್ಕಾ ಕಮರ್ಷಿಯಲ್ ಎಂಟರ್‌ಟೈನರ್ ಆಗಿರಲಿದೆ.

ಟ್ರೇಲರ್‌ನಲ್ಲಿ ಆಲಿಯಾ ಭಟ್ ಜೊತೆಗೆ ನಟಿ ಶರ್ವರಿ ಕೂಡ ಸಾಹಸ ದೃಶ್ಯಗಳಲ್ಲಿ ಅಬ್ಬರಿಸಿದ್ದಾರೆ. ಶರ್ವರಿ ಅವರ ಪಾತ್ರದ ಹಿನ್ನೆಲೆಯನ್ನು ಸಸ್ಪೆನ್ಸ್ ಆಗಿ ಇಡಲಾಗಿದ್ದರೂ, ಬಾಬಿ ಡಿಯೋಲ್‌ನನ್ನು ಮಟ್ಟಹಾಕಲು ಅವರು ಸೀತಾ ಜೊತೆ ಕೈಜೋಡಿಸುವುದು ಸ್ಪಷ್ಟವಾಗಿದೆ. ಇನ್ನು ‘ವಾರ್ 2’ ಚಿತ್ರದಲ್ಲಿ ರಾ ಮುಖ್ಯಸ್ಥ ವಿಕ್ರಾಂತ್ ಕೌಲ್ ಆಗಿ ಕಾಣಿಸಿಕೊಂಡಿದ್ದ ಅನಿಲ್ ಕಪೂರ್ ಇಲ್ಲೂ ಕಾಣಿಸಿಕೊಂಡಿದ್ದು, ಚಿತ್ರದ ರಹಸ್ಯ ‘ಆಲ್ಫಾ ಪ್ರೋಗ್ರಾಂ’ ಜೊತೆಗೆ ನಂಟು ಹೊಂದಿರುವುದು ಕುತೂಹಲ ಮೂಡಿಸಿದೆ.

‘ಆಲ್ಫಾ’ ಚಿತ್ರದ ಟ್ರೇಲರ್:

ಈ ಚಿತ್ರದ ಕಥೆ ಆಧುನಿಕವಾಗಿದ್ದರೂ, ಟ್ರೇಲರ್ ತುಂಬಾ ರಾಮಾಯಣದ ರೂಪಕಗಳನ್ನು ಬಳಸಲಾಗಿದೆ. ಆಲಿಯಾ ಭಟ್ ತನ್ನನ್ನು ತಾನು ಆಧುನಿಕ ಕಾಲದ ಸೀತೆ ಎಂದು ಬಣ್ಣಿಸಿಕೊಳ್ಳುತ್ತಾರೆ. ಲಂಕೆಯನ್ನು ಸುಡಲು ಮತ್ತು ಅಗ್ನಿಪರೀಕ್ಷೆ ಎದುರಿಸಲು ತಾವು ಸಿದ್ಧ ಎಂದು ಸಾರುತ್ತಾರೆ. ಟ್ರೇಲರ್​ನಲ್ಲಿ ಬರುವ ‘ಈ ಬಾರಿ ಸೀತೆಯೇ ಲಂಕೆ ಸುಡಲು ಬಂದಿದ್ದಾಳೆ’ ಎಂಬ ಡೈಲಾಗ್‌ ಗಮನ ಸೆಳೆದಿದೆ.

ಇದನ್ನೂ ಓದಿ: ‘ಧುರಂಧರ್’ ಬಗ್ಗೆ ಮೌನ, ಆದ್ರೆ ಆಲಿಯಾ ಸಿನಿಮಾಗೆ ಹೊಗಳಿಕೆ: ಟ್ರೋಲ್ ಆದ ಶಾರುಖ್ ಖಾನ್

ಏಕ್ ಥಾ ಟೈಗರ್, ಟೈಗರ್ ಜಿಂದಾ ಹೈ, ಟೈಗರ್ 3, ವಾರ್, ವಾರ್ 2 ಮತ್ತು ಪಠಾಣ್ ಚಿತ್ರಗಳ ನಂತರ ವೈಆರ್‌ಎಫ್ ಸ್ಪೈ ಯೂನಿವರ್ಸ್‌ನ 7ನೇ ಚಿತ್ರವಾಗಿ ‘ಆಲ್ಫಾ’ ಮೂಡಿಬರುತ್ತಿದೆ. ಉದಯ್ ಚೋಪ್ರಾ ಅವರು ಬರೆದ ಕಥೆ ಹೊಂದಿರುವ ಈ ಚಿತ್ರಕ್ಕೆ ಸೌಮಿಲ್ ಶುಕ್ಲಾ ಮತ್ತು ಶ್ರೀಧರ್ ರಾಘವನ್ ಚಿತ್ರಕಥೆ ಬರೆದಿದ್ದಾರೆ. ಹಿರಿಯ ನಿರ್ದೇಶಕ ರಾಹುಲ್ ರವೈಲ್ ಅವರ ಪುತ್ರ ಶಿವ ರವೈಲ್ ಈ ಚಿತ್ರವನ್ನು ನಿರ್ದೇಶಿಸಿದ್ದು, ಜುಲೈ 3ರಂದು ಚಿತ್ರಮಂದಿರಗಳಲ್ಲಿ ಅಬ್ಬರಿಸಲು ಸಜ್ಜಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪ್ರತಿದಿನ ಒಂದು ಗ್ಲಾಸ್ ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಯಾಗುತ್ತೆ ಗೊತ್ತಾ? – Kannada News | 5 Health Conditions That May Improve With Regular Beetroot Juice Intake

ಇತ್ತೀಚಿನ ದಿನಗಳಲ್ಲಿ ಜನರು ಆರೋಗ್ಯಕರ ಜೀವನಶೈಲಿಯತ್ತ ಹೆಜ್ಜೆಹಾಕುತ್ತಿದ್ದಾರೆ. ಆರೋಗ್ಯಕರ ಆಹಾರ ಆಯ್ಕೆ ಮಾಡುವುದು ಒಂದು ದೊಡ್ಡ ಸವಾಲಾಗಿದ್ದರೂ ಕೂಡ ನಾವು ಸೇವಿಸುವ ಆಹಾರಗಳ ಪೈಕಿ ಯಾವುದು ಆರೋಗ್ಯಕರ, ಅದನ್ನು ಯಾವ ರೀತಿ ಸೇವನೆ ಮಾಡುವುದರಿಂದ ಹೆಚ್ಚಿನ ಲಾಭ ದೊರೆಯುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ. ಇಂತಹ ಒಳ್ಳೆಯ ಆಹಾರಗಳ ಸಾಲಿನಲ್ಲಿ ಬೀಟ್‌ರೂಟ್ ಜ್ಯೂಸ್ ಕೂಡ ಒಂದು. ಇದು ಅತ್ಯುತ್ತಮ ನೈಸರ್ಗಿಕ ಪಾನೀಯವಾಗಿದೆ. ವಿಟಮಿನ್‌ಗಳು, ಖನಿಜಾಂಶಗಳು, ಆಂಟಿಆಕ್ಸಿಡೆಂಟ್‌ಗಳು ಮತ್ತು ನೈಸರ್ಗಿಕ ನೈಟ್ರೇಟ್‌ಗಳಿಂದ ಸಮೃದ್ಧವಾಗಿರುವ ಬೀಟ್‌ರೂಟ್ ಜ್ಯೂಸ್ (Beetroot Juice) ದೇಹದ ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಸಹಕಾರಿಯಾಗಿದೆ. ಹಾಗಾದರೆ ಪ್ರತಿದಿನ ಒಂದು ಗ್ಲಾಸ್ ಬೀಟ್‌ರೂಟ್ ಜ್ಯೂಸ್ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ, ಯಾವ ರೋಗಕ್ಕೆ ಇದು ಮದ್ದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿ

ಬೀಟ್‌ರೂಟ್‌ನಲ್ಲಿ ನೈಸರ್ಗಿಕ ನೈಟ್ರೇಟ್‌ಗಳು ಹೆಚ್ಚಾಗಿವೆ. ಇವು ದೇಹದಲ್ಲಿ ನೈಟ್ರಿಕ್ ಆಕ್ಸೈಡ್ ಆಗಿ ಪರಿವರ್ತನೆಗೊಂಡು ರಕ್ತನಾಳಗಳನ್ನು ಸಡಿಲಗೊಳಿಸುತ್ತವೆ. ಇದರಿಂದ ರಕ್ತಸಂಚಾರ ಸುಧಾರಿಸಿ, ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ. ಹೃದಯ ಸಂಬಂಧಿತ ಕಾಯಿಲೆಗಳ ಅಪಾಯವೂ ಕಡಿಮೆಯಾಗುತ್ತದೆ.

ಶಕ್ತಿ ಮತ್ತು ತಾಳ್ಮೆಯನ್ನು ಹೆಚ್ಚಿಸುತ್ತದೆ

ವ್ಯಾಯಾಮ ಮಾಡುವವರು ಹಾಗೂ ಕ್ರೀಡಾಪಟುಗಳಿಗೆ ಬೀಟ್‌ರೂಟ್ ಜ್ಯೂಸ್ ಅತ್ಯುತ್ತಮ ಪಾನೀಯವಾಗಿದೆ. ಇದು ಸ್ನಾಯುಗಳಿಗೆ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಿ ದೇಹದ ಸಹಿಷ್ಣುತೆಯನ್ನು ವೃದ್ಧಿಸುತ್ತದೆ. ಪರಿಣಾಮವಾಗಿ ದಣಿವು ಕಡಿಮೆಯಾಗಿ ದಿನವಿಡೀ ಚುರುಕಾಗಿರಲು ನೆರವಾಗುತ್ತದೆ.

ಯಕೃತ್ತಿನ ಆರೋಗ್ಯಕ್ಕೆ ಉತ್ತಮ

ಬೀಟ್‌ರೂಟ್‌ನಲ್ಲಿ ಇರುವ ಬೆಟಾಲೈನ್ (Betalain) ಎಂಬ ಶಕ್ತಿಶಾಲಿ ಆಂಟಿಆಕ್ಸಿಡೆಂಟ್ ಯಕೃತ್ತಿನಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದು ಲಿವರ್ ಕಾರ್ಯಕ್ಷಮತೆಯನ್ನು ಸುಧಾರಿಸಿ, ಕೊಬ್ಬಿನ ಸಂಗ್ರಹವನ್ನು ಕಡಿಮೆ ಮಾಡಲು ಸಹಕಾರಿಯಾಗುತ್ತದೆ.

ಇದನ್ನೂ ಓದಿ: ಪೇರಳೆ ಹಣ್ಣು ತಿಂದ ತಕ್ಷಣ ಅಪ್ಪಿತಪ್ಪಿಯೂ ಈ ಆಹಾರಗಳ ಸೇವನೆ ಮಾಡಬೇಡಿ!

ರಕ್ತಹೀನತೆ ಸಮಸ್ಯೆ ಕಡಿಮೆ ಮಾಡಲು ನೆರವಾಗುತ್ತದೆ

ಬೀಟ್‌ರೂಟ್‌ನಲ್ಲಿ ಕಬ್ಬಿಣಾಂಶ, ಫೋಲೇಟ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿವೆ. ಇವು ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಉತ್ತೇಜಿಸಿ, ರಕ್ತಹೀನತೆ (ಅನೀಮಿಯಾ) ಸಮಸ್ಯೆಯನ್ನು ಕಡಿಮೆ ಮಾಡಲು ನೆರವಾಗುತ್ತವೆ.

ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ

ಬೀಟ್‌ರೂಟ್ ಜ್ಯೂಸ್‌ನಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಮತ್ತು ವಿಟಮಿನ್ ಸಿ ಚರ್ಮದ ಕೋಶಗಳನ್ನು ರಕ್ಷಿಸುತ್ತವೆ. ರಕ್ತವನ್ನು ಶುದ್ಧೀಕರಿಸುವ ಮೂಲಕ ಮೊಡವೆ, ಕಲೆಗಳನ್ನು ಕಡಿಮೆ ಮಾಡಿ ಚರ್ಮಕ್ಕೆ ನೈಸರ್ಗಿಕ ಕಾಂತಿಯನ್ನು ನೀಡುತ್ತದೆ.

ಬೀಟ್‌ರೂಟ್ ಜ್ಯೂಸ್‌ಗೆ ನಿಂಬೆರಸ, ಶುಂಠಿ ಅಥವಾ ಸೇಬು ತುಂಡುಗಳನ್ನು ಸೇರಿಸಿ ಸೇವಿಸಿದರೆ ರುಚಿಯ ಜೊತೆಗೆ ಹೆಚ್ಚುವರಿ ಪೋಷಕಾಂಶಗಳೂ ದೊರೆಯುತ್ತವೆ. ಆದರೆ ಮೂತ್ರಪಿಂಡದ ಕಲ್ಲು ಸಮಸ್ಯೆ ಅಥವಾ ಮಧುಮೇಹ ಇರುವವರು ವೈದ್ಯರ ಸಲಹೆಯ ಮೇರೆಗೆ ಮಾತ್ರ ಇದನ್ನು ಸೇವಿಸುವುದು ಉತ್ತಮ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪರಮೇಶ್ವರ್ ಕಂದಾಯ ಸಚಿವರಾಗುತ್ತಿದ್ದಂತೆಯೇ ಬಹುಕಾಲದ ಬೇಡಿಕೆ ಈಡೇರಿಕೆ – Kannada News | Karnataka government promotes 232 Tahsildar Grade 2 cadre to the Tahsildar Grade 1

ಬೆಂಗಳೂರು, (ಜೂನ್ 17): ಗ್ರೇಡ್-2 ತಹಶೀಲ್ದಾರ್‌ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂಬ ಬಹುಕಾಲದ ಬೇಡಿಕೆ ಈಡೇರಿದೆ. ಒಟ್ಟು 232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ ನೀಡಲಾಗಿದೆ. ಈ ಬಗ್ಗೆ ಉಪಮುಖ್ಯಮಂತ್ರಿ, ಕಂದಾಯ ಸಚಿವರೂ ಆಗಿರುವ ಡಾ ಜಿ ಪರಮೇಶ್ವರ್ (Dr G parameshwar) ತಿಳಿಸಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಮೂಲಕ, “ಸರ್ಕಾರವು ಅರ್ಹತೆ, ಬದ್ಧತೆ ಮತ್ತು ಪ್ರಾಮಾಣಿಕತೆಯನ್ನು ಗುರುತಿಸಿ ಸದಾ ಪ್ರೋತ್ಸಾಹಿಸುತ್ತದೆ” ಎಂಬ ವಿಶ್ವಾಸವನ್ನು ನೌಕರ ವರ್ಗದಲ್ಲಿ ಮೂಡಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂಬ ನಂಬಿಕೆ ನನಗಿದೆ ಎಂದಿದ್ದಾರೆ.

ಬಲಿಷ್ಠ ಮತ್ತು ಸ್ಫೂರ್ತಿದಾಯಕ ಆಡಳಿತ ಯಂತ್ರವೇ ಪರಿಣಾಮಕಾರಿ ಆಡಳಿತದ ಬುನಾದಿ. ಕಂದಾಯ ಇಲಾಖೆಯು ಪ್ರತಿಯೊಬ್ಬ ನಾಗರಿಕರಿಗೂ ಪಾರದರ್ಶಕ, ಉತ್ತರದಾಯಿ ಹಾಗೂ ಕಾಳಜಿಯುಕ್ತ ಸೇವೆಯನ್ನು ಒದಗಿಸಬೇಕೆಂಬ ರಾಜ್ಯ ಸರ್ಕಾರದ ಸಂಕಲ್ಪದ ಭಾಗವೇ ಈ ಮಹತ್ವದ ನಿರ್ಧಾರವಾಗಿದೆ. ದೀರ್ಘಕಾಲದ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಅವರೆಲ್ಲರ ಶ್ರಮ ಮತ್ತು ಸಹಕಾರವು ಮುಂಬರುವ ದಿನಗಳಲ್ಲಿ ಇಂತಹ ಮತ್ತಷ್ಟು ನಿರ್ಧಾರಗಳನ್ನು ಕೈಗೊಳ್ಳಲು ನಮಗೆ ಸ್ಫೂರ್ತಿದಾಯಕವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೇರೆಯವರ ಖಾಸಗಿ ಚಿತ್ರ,ವಿಡಿಯೋ ಶೇರ್​ ಮಾಡಿದ್ರೆ ಕೇಸ್ ಫಿಕ್ಸ್: ಎಫ್ಐಆರ್ ಮಾರ್ಗಸೂಚಿ ಹೀಗಿದೆ

ವರ್ಷಗಳ ನಿರಂತರ ಪರಿಶ್ರಮ ಮತ್ತು ಸಮರ್ಪಣಾಭಾವದಿಂದ ಸೇವೆ ಸಲ್ಲಿಸಿ, ಬಡ್ತಿ ಪಡೆದಿರುವ ಪ್ರತಿ ಅಧಿಕಾರಿಗೂ ಅಭಿನಂದನೆಗಳು. ಈ ಬಡ್ತಿಯು ಹೆಚ್ಚಿನ ಜವಾಬ್ದಾರಿಗಳೊಂದಿಗೆ, ನಾಡಿನ ಜನತೆಗೆ ಇನ್ನಷ್ಟು ದಕ್ಷತೆ, ಕಾಳಜಿ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುವುದರ ಮೂಲಕ ಸದುಪಯೋಗಪಡಿಸಿಕೊಳ್ಳುತ್ತೀರಿ ಎಂಬ ಸಂಪೂರ್ಣ ವಿಶ್ವಾಸ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಂದಾಯ ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯ ಗಮನಕ್ಕೆ ನಾನು ತರಬಯಸುವ ಪ್ರಮುಖ ವಿಚಾರವೆಂದರೆ – ಸರ್ಕಾರವು ನಿಮ್ಮ ಸೇವಾ ಬದ್ಧತೆಯನ್ನು ಗುರುತಿಸುತ್ತದೆ, ನಿಮ್ಮ ಕಳಕಳಿಯನ್ನು ಆಲಿಸುತ್ತದೆ ಹಾಗೂ ನಿಮ್ಮ ಆಕಾಂಕ್ಷೆಗಳನ್ನು ಸಹ ಪರಿಗಣಿಸುತ್ತದೆ. ಸ್ವಯಂಸ್ಫೂರ್ತಿಯಿಂದ ಕಾರ್ಯನಿರ್ವಹಿಸುವ ಅಧಿಕಾರಿ ವರ್ಗವು ಯಾವುದೇ ಸರ್ಕಾರಕ್ಕೆ ಅತಿ ದೊಡ್ಡ ಆಸ್ತಿ. ನ್ಯಾಯಯುತವಾದ, ಸಮಾನ ಅವಕಾಶಗಳಿರುವ ಹಾಗೂ ವೃತ್ತಿ ನೈಪುಣ್ಯತೆಗೆ ಒತ್ತು ನೀಡುವ ಆಡಳಿತ ಸಂಸ್ಕೃತಿಯನ್ನು ನಿರ್ಮಿಸಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

ಕಂದಾಯ ಇಲಾಖೆಯು ಮುಂಬರುವ ದಿನಗಳಲ್ಲಿ ಮತ್ತಷ್ಟು ವೇಗ, ಪಾರದರ್ಶಕ ಮತ್ತು ಜವಾಬ್ದಾರಿಯುತವಾಗಿ ಸೇವೆ ಒದಗಿಸುವ ‘ಜನಕೇಂದ್ರಿತ’ ಸಂಸ್ಥೆಯಾಗಿ ರೂಪುಗೊಳ್ಳಲಿದೆ ಎಂಬ ಭರವಸೆಯನ್ನು ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ. ನಮ್ಮ ಅಧಿಕಾರಿ ವರ್ಗದ ಸಬಲೀಕರಣದ ಮೂಲಕ ಪ್ರತಿಯೊಬ್ಬ ನಾಗರಿಕನ ಅಗತ್ಯಗಳಿಗೂ ಸ್ಪಂದಿಸುವ ಸರ್ಕಾರದ ಕಾರ್ಯವಿಧಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುತ್ತಿದ್ದೇವೆ. ಅಧಿಕಾರಿಗಳಲ್ಲಿ ವಿಶ್ವಾಸ ಹಾಗೂ ಜನಸಾಮಾನ್ಯರಲ್ಲಿ ಭರವಸೆ ಮೂಡಿಸುವ ಅತ್ಯುತ್ತಮ ಕಂದಾಯ ಆಡಳಿತವನ್ನು ನಾವೆಲ್ಲರೂ ಒಟ್ಟಾಗಿ ನಿರ್ಮಿಸೋಣ.
ಉತ್ತರದಾಯಿ, ಪಾರದರ್ಶಕ, ಸಂವೇದನಾಶೀಲ ಮತ್ತು ಸರ್ವರಿಗೂ ಸುಲಭವಾಗಿ ಲಭ್ಯವಾಗುವ ಸೇವಾ ಮಾದರಿಯ ಮೂಲಕ ‘ನವ ಕರ್ನಾಟಕ’ವನ್ನು ಕಟ್ಟೋಣ ಎಂದು ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಒಪ್ಪಂದ ಇಷ್ಟವಾಗದಿದ್ದರೆ ಮತ್ತೆ ಬಾಂಬ್ ಹಾಕುತ್ತೇವೆ! ಇರಾನ್​ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ – Kannada News | Donald Trump says Iran peace deal not final US will go back to dropping bombs if I don’t like it

ಎವಿಯಾನ್, ಜೂನ್ 17: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಯ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಮಹತ್ವದ ಒಪ್ಪಂದ ಏರ್ಪಟ್ಟಿದೆ ಎಂಬ ಜಾಗತಿಕ ವರದಿಗಳ ಬೆನ್ನಲ್ಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತಮ್ಮ ಎಂದಿನ ಆಕ್ರಮಣಕಾರಿ ಶೈಲಿಯಲ್ಲಿ ಇರಾನ್‌ಗೆ ಕಠಿಣ ಸಂದೇಶ ರವಾನಿಸಿದ್ದಾರೆ. ಫ್ರಾನ್ಸ್‌ನ ಎವಿಯಾನ್-ಲೆ-ಬೈನ್ಸ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಮಾತನಾಡಿದ ಟ್ರಂಪ್, ಪ್ರಸ್ತುತ ಇರಾನ್ ಜೊತೆಗೆ ಆಗಿರುವುದು ಅಂತಿಮ ಒಪ್ಪಂದವಲ್ಲ ಎಂದು ಹೇಳಿದ್ದಾರೆ.

ಇರಾನ್ ಮತ್ತು ಅಮೆರಿಕ ನಡುವಿನ ಒಪ್ಪಂದದ ನಿಯಮಗಳ ಕುರಿತು ಜಿ7 ನಾಯಕರೊಂದಿಗೆ ಚರ್ಚಿಸುವಾಗ ಡೊನಾಲ್ಡ್ ಟ್ರಂಪ್ ಈ ಸ್ಫೋಟಕ ಹೇಳಿಕೆ ನೀಡಿದ್ದಾರೆ. “ಇರಾನ್ ಜೊತೆಗಿನ ಪ್ರಸ್ತುತ ಮಾತುಕತೆಗಳು ಇನ್ನು ಪ್ರಗತಿಯಲ್ಲಷ್ಟೇ ಇವೆ. ಆ ಒಪ್ಪಂದದ ಅಂತಿಮ ಅಗ್ರಿಮೆಂಟ್ ನನ್ನ ಮೇಜಿನ ಮೇಲೆ ಬಂದಾಗ, ಅದರಲ್ಲಿರುವ ಪ್ರತಿಯೊಂದು ನಿಯಮವೂ ನನಗೆ ಇಷ್ಟವಾಗಬೇಕು. ಒಂದು ವೇಳೆ ಆ ಒಪ್ಪಂದದಲ್ಲಿ ನನಗೆ ಸಣ್ಣ ಲೋಪದೋಷ ಕಂಡುಬಂದರೂ ಅಮೆರಿಕ ತಕ್ಷಣವೇ ಒಪ್ಪಂದದಿಂದ ಹಿಂದೆ ಸರಿಯಲಿದೆ. ಅಷ್ಟೇ ಅಲ್ಲ, ನಾವು ಇರಾನ್ ಮೇಲೆ ಮತ್ತೆ ಬಾಂಬ್‌ಗಳ ಮಳೆ ಸುರಿಸುವುದು ಖಚಿತ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇದನ್ನೂ ಓದಿ: ಫ್ರಾನ್ಸ್‌ನ ಜಿ7 ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ

ಕಳೆದ ಕೆಲವು ದಿನಗಳ ಹಿಂದಷ್ಟೇ ಅಮೆರಿಕ ಮತ್ತು ಇರಾನ್ ಜಂಟಿಯಾಗಿ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸುವ ನಿಟ್ಟಿನಲ್ಲಿ ಐತಿಹಾಸಿಕ ಶಾಂತಿ ಒಪ್ಪಂದದ ಚೌಕಟ್ಟಿಗೆ ಒಪ್ಪಿಗೆ ಸೂಚಿಸಿದ್ದವು. ಈ ಒಪ್ಪಂದದ ಅಡಿಯಲ್ಲಿ ಲೆಬನಾನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ದಾಳಿಗಳಿಗೂ ಬ್ರೇಕ್ ಬೀಳಲಿದೆ ಎಂದು ಇರಾನ್ ಹಾಗೂ ಪಾಕಿಸ್ತಾನ ಪ್ರತಿಪಾದಿಸಿದ್ದವು. ಇದು ಇಸ್ರೇಲ್‌ನ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು.

ಆದರೆ, ಈಗ ಟ್ರಂಪ್ ನೀಡಿರುವ ‘ಬಾಂಬ್ ದಾಳಿ’ಯ ಹೇಳಿಕೆಯು ಇರಾನ್ ಜೊತೆಗಿನ ಇಡೀ ಶಾಂತಿ ಪ್ರಕ್ರಿಯೆಯನ್ನೇ ಮತ್ತೆ ಸಂಶಯದ ಸುಳಿಗೆ ಸಿಲುಕಿಸಿದೆ. ಟ್ರಂಪ್ ಅವರ ಈ ನಿಲುವು ಇಸ್ರೇಲ್ ಅನ್ನು ಸಮಾಧಾನಪಡಿಸಲು ಮತ್ತು ಇರಾನ್ ಮೇಲೆ ರಾಜತಾಂತ್ರಿಕ ಒತ್ತಡವನ್ನು ಮುಂದುವರಿಸಲು ಹೂಡಿರುವ ತಂತ್ರ ಎಂದು ವಿಶ್ಲೇಷಕರು ಭಾವಿಸಿದ್ದಾರೆ.

ಇದನ್ನೂ ಓದಿ: ಸಿಗರೇಟ್ ಬಿಟ್ಟ ಮೆಲೋನಿ, ವಾಚ್ ಮರೆತ ಮ್ಯಾಕ್ರನ್, ಮತ್ತೆ ಮೆಲೋಡಿ ಮೋಡಿ; ಜಿ7 ಶೃಂಗಸಭೆಯ ವೈರಲ್ ಕ್ಷಣಗಳಿವು

ಜಿ7 ಶೃಂಗಸಭೆಯ ಗಂಭೀರ ರಾಜತಾಂತ್ರಿಕ ವೇದಿಕೆಯಲ್ಲಿ ಅಮೆರಿಕದ ಅಧ್ಯಕ್ಷರಿಂದ ಇಂತಹ ನೇರ ಯುದ್ಧದ ಬೆದರಿಕೆ ಬಂದಿರುವುದು ಯುರೋಪಿಯನ್ ಯೂನಿಯನ್ ಸೇರಿದಂತೆ ಇತರ ಜಾಗತಿಕ ದೊಡ್ಡಣ್ಣ ರಾಷ್ಟ್ರಗಳಲ್ಲಿ ಆತಂಕ ಮೂಡಿಸಿದೆ. ಇಂದು ಫ್ರಾನ್ಸ್​​ನಲ್ಲಿ ಜಿ7 ಶೃಂಗಸಭೆ ಮುಕ್ತಾಯಗೊಳ್ಳಲಿದ್ದು, ಇರಾನ್ ಮತ್ತು ಅಮೆರಿಕದ ನಡುವಿನ ಒಪ್ಪಂದದ ಭವಿಷ್ಯ ಏನಾಗಲಿದೆ ಎಂಬುದು ಇಡೀ ವಿಶ್ವದ ಕುತೂಹಲಕ್ಕೆ ಕಾರಣವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Karnataka Weather Forecast: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಹಲವೆಡೆ ಬಿರುಗಾಳಿ ಸಹಿತ ಮಳೆ ನಿರೀಕ್ಷೆ – Kannada News | Karnataka Weather Forecast: Light to Moderate Rain, Strong Winds Likely Across State in Next 24 Hours

ಬೆಂಗಳೂರು, ಜೂನ್​​ 17: ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕುಡಿದ ಸಾಧಾರಣ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆಯ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಮುಖ್ಯಾಂಶಗಳು

  • ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಮಳೆ ಮುನ್ಸೂಚನೆ
  • ಬೆಂಗಳೂರಿನ ಹವಾಮಾನ ಸ್ಥಿತಿ ಮತ್ತು ಬಿರುಗಾಳಿ ಎಚ್ಚರಿಕೆ
  • ಮುಂದಿನ 24 ಗಂಟೆಗಳಲ್ಲಿ ಜಿಲ್ಲಾವಾರು ಮಳೆ ನಿರೀಕ್ಷೆ

ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ

ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಕುಡಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

KSNDMC ಟ್ವೀಟ್​

ಇನ್ನು ಮೈಸೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಹಾಗೂ ಬೆಂಗಳೂರಿನ ಉಭಯ ಜಿಲ್ಲೆಗಳ (ನಗರ ಮತ್ತು ಗ್ರಾಮಾಂತರ) ಒಂದೆರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಬೆಂಗಳೂರಿನ ಹವಾಮಾನ ಹೇಗಿದೆ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ನಗರದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ನಗರದ ಒಂದೆರಡು ಪ್ರದೇಶದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನಿರ್ಮಾಪಕರಿಗೆ ಹೇಳದೆ ‘ಪೆದ್ದಿ’ ಆದಾಯ ಹಂಚಿಕೆ: ದೂರು ದಾಖಲು – Kannada News | Peddi movie Producers alleged that movie profit sharing model decision taken without his knowledge

ಬುಚ್ಚಿ ಬಾಬು ಸಾನಾ ನಿರ್ದೇಶಿಸಿ, ರಾಮ್ ಚರಣ್ (Ram Charan) ಮತ್ತು ಜಾನ್ವಿ ಕಪೂರ್ ನಟಿಸಿರುವ ‘ಪೆದ್ದಿ’ ಸಿನಿಮಾಕ್ಕೆ ಒಂದರ ಮೇಲೊಂದು ವಿವಾದಗಳು ಎದುರಾಗುತ್ತಲೇ ಇವೆ. ಮೊದಲಿಗೆ ನಟಿ ಜಾನ್ಹವಿ ಕಪೂರ್ ಅವರನ್ನು ಅತಿಯಾಗಿ ಗ್ಲಾಮರಸ್ ಆಗಿ ತೋರಿಸಿರುವ ಬಗ್ಗೆ ತೀವ್ರ ವಿವಾದ ಎದ್ದಿತ್ತು, ಬಳಿಕ ನಿರ್ದೇಶಕ ಬುಚ್ಚಿಬಾಬು ಸನಾ ಕ್ಷಮೆ ಕೋರಿ, ದೃಶ್ಯಗಳಿಗೆ ಕತ್ತರಿ ಹಾಕಿದರು. ಇದೀಗ ಖುದ್ದು, ‘ಪೆದ್ದಿ’ ಸಿನಿಮಾದ ನಿರ್ಮಾಪಕರೇ ಸಿನಿಮಾದ ವಿರುದ್ಧ ದೂರು ನೀಡಿದ್ದಾರೆ. ತಮಗೆ ಹೇಳದೆ, ಲಾಭ ಹಂಚಿಕೆ ವಿಚಾರವಾಗಿ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಆರೋಪ ಮಾಡಿದ್ದಾರೆ.

‘ಪೆದ್ದಿ’ ಸಿನಿಮಾ ವಿಶ್ವದಾದ್ಯಂತ 300 ಕೋಟಿಗೂ ಹೆಚ್ಚು ಗಳಿಕೆ ಕಂಡಿದೆ, ಸಿನಿಮಾ ಯಶಸ್ಸು ಕಂಡಿದೆ. ಆದರೆ ನಿರ್ಮಾಪಕರು ತೃಪ್ತಿಯಾಗಿಲ್ಲ. ಸಿನಿಮಾದ ನಿರ್ಮಾಪಕ ವೃದ್ಧಿ ಸಿನೆಮಾಸ್‌ನ ವೆಂಕಟ ಸತೀಶ್ ಕಿಲಾರು ಅವರು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಚಿತ್ರದ ಲಾಭ ಹಂಚಿಕೆ ಸಂಬಂಧಿಸಿದ ನಿರ್ಧಾರಗಳನ್ನು ತಮ್ಮ ಅರಿವಿಗೆ ಬಾರದೆಯೇ ತೆಗೆದುಕೊಳ್ಳಲಾಗಿದೆ ಎಂದು ಅವರು ದೂರಿದ್ದಾರೆ.

‘ಪೆದ್ದಿ’ ಸಿನಿಮಾ ಬಿಡುಗಡೆಗೂ ಮುನ್ನವೇ ತೆಲುಗು ಚಲನಚಿತ್ರ ನಿರ್ಮಾಪಕರು ಮತ್ತು ಪ್ರದರ್ಶಕರ ನಡುವೆ ಆದಾಯ ಹಂಚಿಕೆಯ ವಿಚಾರವಾಗಿ ವಿವಾದ ಉಂಟಾಗಿತ್ತು. ಪ್ರದರ್ಶಕರ ಸಂಘವು ಭವಿಷ್ಯದ ಎಲ್ಲಾ ಚಿತ್ರಗಳಿಗೆ ಶೇಕಡಾವಾರು ಹಂಚಿಕೆ ಪದ್ಧತಿಯನ್ನು ಕಡ್ಡಾಯಗೊಳಿಸಬೇಕೆಂದು ಪಟ್ಟು ಹಿಡಿದಿತ್ತು. ಪ್ರಸ್ತುತ ಜಾರಿಯಲ್ಲಿರುವ ಬಾಡಿಗೆ ಆಧಾರಿತ ಪದ್ಧತಿಯ ಬದಲಿಗೆ ಈ ಹೊಸ ಪದ್ಧತಿಯನ್ನು ಜಾರಿಗೆ ತರಬೇಕೆಂದು ಅವರು ಒತ್ತಾಯಿಸಿದ್ದರು.

ಇದನ್ನೂ ಓದಿ:ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್

ಮೇ 27ರಂದು ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿಯ (TFCC) ಪತ್ರದ ಪ್ರಕಾರ, ಮೇ 15ರಂದು ನಡೆದ ಸಭೆಯಲ್ಲಿ ಆದಾಯ ಹಂಚಿಕೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಅದರಂತೆ, ‘ಪೆದ್ದಿ’ ಚಿತ್ರದ ಬಿಡುಗಡೆಗೆ ಯಾವುದೇ ಅಡಚಣೆ ಉಂಟಾಗದಂತೆ ನೋಡಿಕೊಳ್ಳಲು ಮತ್ತು ಆಂಧ್ರಪ್ರದೇಶದಲ್ಲಿ ಟಿಕೆಟ್ ದರ ಹೆಚ್ಚಳವಾದರೆ ಶೇ. 7.5 ರಷ್ಟು ಹಂಚಿಕೆ ನೀಡಲು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈ ಸಂಬಂಧ ಜೂನ್ 13ರಂದು ವಾಣಿಜ್ಯ ಮಂಡಳಿಗೆ ಪತ್ರ ಬರೆದಿರುವ ನಿರ್ಮಾಪಕ ವೆಂಕಟ ಸತೀಶ್, ಮೇ 15ರ ಸಭೆಗೆ ತಮ್ಮನ್ನು ಆಹ್ವಾನಿಸಿರಲಿಲ್ಲ ಮತ್ತು ಯಾವುದೇ ಮಾಹಿತಿ ನೀಡಿರಲಿಲ್ಲ ಎಂದು ತಿಳಿಸಿದ್ದಾರೆ. ತಾವು ಈ ಹಿಂದೆ ಪಾಲ್ಗೊಂಡಿದ್ದ ಸಭೆಗಳಲ್ಲಿ, ತಮ್ಮ ಚಿತ್ರವನ್ನು ಈಗಾಗಲೇ ವಿತರಕರಿಗೆ ಮಾರಾಟ ಮಾಡಿರುವುದರಿಂದ, ಈ ಶೇಕಡಾವಾರು ಹಂಚಿಕೆ ಪದ್ಧತಿಯು ತಮಗೆ ಸ್ವೀಕಾರಾರ್ಹವಲ್ಲ ಎಂದು ಸ್ಪಷ್ಟಪಡಿಸಿದ್ದಾಗಿ ಹೇಳಿದ್ದಾರೆ.

ತಮ್ಮ ಭಾಗವಹಿಸುವಿಕೆ ಇಲ್ಲದೆ ಮತ್ತು ವಾಸ್ತವಿಕ ಅಂಶಗಳನ್ನು ಪರಿಗಣಿಸದೆ ಇಂತಹ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸರಿಯಲ್ಲ ಎಂದು ವೆಂಕಟ ಸತೀಶ್ ಅಭಿಪ್ರಾಯಪಟ್ಟಿದ್ದಾರೆ. ‘ವಿತರಕರು ಮತ್ತು ಪ್ರದರ್ಶಕರ ನಡುವಿನ ಒಪ್ಪಂದಗಳು ಈಗಾಗಲೇ ಅಂತಿಮಗೊಂಡಿವೆ. ಈ ಹಂತದಲ್ಲಿ ಯಾವುದೇ ಏಕಪಕ್ಷೀಯ ನಿರ್ಧಾರವು ಒಳಗೊಂಡಿರುವ ಎಲ್ಲಾ ಪಕ್ಷಗಳಿಗೆ ಗಂಭೀರ ಆರ್ಥಿಕ ಮತ್ತು ವಾಣಿಜ್ಯ ತೊಂದರೆಗಳನ್ನು ಉಂಟುಮಾಡುತ್ತದೆ’ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಅಡ್ಡ ಮತದಾನದ ಭೀತಿ: ರೆಸಾರ್ಟ್​​​ನಲ್ಲಿ ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ – Kannada News | Karnataka MLC Elections 2026: Voting Training To Congress MLAs In Resort

ರಾಮನಗರ, (ಜೂನ್ 17): ವಿಧಾನ ಪರಿಷತ್ ಚುನಾವಣೆ (MLC polls) ನಾಳೆ ಅಂದರೆ ಜೂನ್ 18ರಂದು ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ. ಪರಿಷತ್ ಕಣದಲ್ಲಿ ಏಳನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. 7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿ ಕಣಕ್ಕಿಳ ಸಿದೆ. ಕಾಂಗ್ರೆಸ್‌ನ 4 ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಏಳನೇ ಸ್ಥಾನಕ್ಕೆ ಜಟಾಪಟಿ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕಾರ್ತಿಕ್ ಹಾಗೂ ಜೆಡಿಎಸ್ ಅಭ್ಯರ್ಥಿ ನಡುವೆ ಸ್ಪರ್ಧೆ ಗೋವಿಂದ ಏರ್ಪಟ್ಟಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಅಡ್ಡ ಮತದಾನ ಆಗಬಾರದು ಹಾಗೂ ಮತ ಅಸಿಂಧುಗೊಳ್ಳದಂತೆ ಕಾಂಗ್ರೆಸ್ ಎಚ್ಚರಿಕೆ ವಹಿಸಿದ್ದು, ಈ ಸಂಬಂಧ ಡಿಕೆ ಶಿವಕುಮಾರ್ ಸಮ್ಮುಖದಲ್ಲೇ ಅಣುಕು ಮತದಾನ ಪ್ರಕ್ರಿಯೆ ನಡೆಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಈ ವಸ್ತುಗಳನ್ನು ಬೆರೆಸಿದ ನೀರಿನಲ್ಲಿ ನೆಲ ಒರೆಸುವುದರಿಂದ ಜಿರಳೆ, ಹಲ್ಲಿಗಳ ಕಾಟದಿಂದ ಮುಕ್ತಿ ಪಡೆಯಬಹುದು‌ – Kannada News | Use these simple cleaning tricks to get rid of lizards and cockroaches

ಪ್ರತಿನಿತ್ಯ ಮನೆಯನ್ನು ಸ್ವಚ್ಛಗೊಳಿಸುವುದರಿಂದ ಕೊಳಕು ಮತ್ತು ಧೂಳು ಮಾತ್ರವಲ್ಲ ಹಲ್ಲಿ, ಕೀಟಗಳು ಮನೆಯೊಳಗೆ ಪ್ರವೇಶಿಸದಂತೆ ನೋಡಿಕೊಳ್ಳಬಹುದು. ಹಲ್ಲಿಗಳು (lizards) ಮತ್ತು ಜಿರಳೆಗಳ ಕಾಟ ಬಹುತೇಕ ಹೆಚ್ಚಿನ ಮನೆಗಳಲ್ಲಿ ಇದ್ದೇ ಇರುತ್ತವೆ. ಇವುಗಳನ್ನು ಓಡಿಸಲು ಮಾರುಕಟ್ಟೆಯಲ್ಲಿ ಲಭ್ಯವಿರುವ ರಾಸಾಯನಿಕ ಉತ್ಪನ್ನಗಳನ್ನು ಹೆಚ್ಚಿನವರು ಬಳಕೆ ಮಾಡುತ್ತಾರೆ. ಈ ಉತ್ಪನ್ನಗಳು ಆರೋಗ್ಯ ಮತ್ತು ಪರಿಸರ ಎರಡಕ್ಕೂ ಹಾನಿಕಾರಕ. ಆದ್ದರಿಂದ, ಪ್ರತಿನಿತ್ಯ ನೆಲ ಒರೆಸುವಾಗ ಆ ನೀರಿಗೆ ಈ ಕೆಲವೊಂದು ವಸ್ತುಗಳನ್ನು ಬೆರೆಸಿ, ಆ ನೀರಿನಲ್ಲಿ ನೆಲವನ್ನು ಒರೆಸಿ.  ಇದು ನಿಮ್ಮ ಮನೆಯನ್ನು ಸ್ವಚ್ಛವಾಗಿಡುವುದು ಮಾತ್ರವಲ್ಲದೆ ಹಲ್ಲಿಗಳು ಮತ್ತು ಜಿರಳೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತವೆ. ಈ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಮನೆಯಿಂದ ಕೀಟಗಳನ್ನು ಓಡಿಸಲು ನೆಲ ಒರೆಸುವ ನೀರಿಗೆ ಏನು ಬೆರೆಸಬೇಕು?

ನಿಂಬೆ ರಸ: ಹಲ್ಲಿಗಳು ಮತ್ತು ಜಿರಳೆಗಳು ನಿಂಬೆಹಣ್ಣಿನಲ್ಲಿರುವ ಬಲವಾದ ಸಿಟ್ರಿಕ್ ಆಮ್ಲದ ವಾಸನೆಯನ್ನು ಇಷ್ಟಪಡುವುದಿಲ್ಲ. ಎರಡು ಚಮಚ ನಿಂಬೆ ರಸವನ್ನು ಒರೆಸುವ ನೀರಿನಲ್ಲಿ ಬೆರೆಸಿ ನೆಲವನ್ನು ಸ್ವಚ್ಛಗೊಳಿಸುವುದರಿಂದ ಮನೆಯೂ ತಾಜಾವಾಗಿರುತ್ತದೆ, ಕೀಟಗಳ ಕಾಟವೂ ಇರೋದಿಲ್ಲ.

ಪುದೀನಾ ಎಣ್ಣೆ: ಈ ಎಣ್ಣೆ ಅತ್ಯುತ್ತಮ ನೈಸರ್ಗಿಕ ಕೀಟ ನಿವಾರಕವಾಗಿದೆ. ಹಲ್ಲಿಗಳು ಮತ್ತು ಜಿರಳೆಗಳು ಇದರ ವಾಸನೆಯನ್ನು ಸಹಿಸುವುದಿಲ್ಲ. ನೆಲ ಒರೆಸುವ ನೀರಿಗೆ 8-10 ಹನಿ ಪುದೀನಾ ಎಣ್ಣೆಯನ್ನು ಸೇರಿಸಿ ನೆಲ ಒರೆಸಿ, ಇದು ಕೂಡ ಹಲ್ಲಿ, ಜಿರಳೆ, ಕೀಟಗಳನ್ನು ದೂರವಿಡಲು ಸಹಕಾರಿ.

ಕರ್ಪೂರ: ಕರ್ಪೂರದ ಪರಿಮಳವು ಕೀಟಗಳು ಮತ್ತು ಹಲ್ಲಿಗಳು ಮನೆಯೊಳಗೆ ಬರುವುದನ್ನು ತಡೆಯುತ್ತದೆ. ಅದಕ್ಕಾಗಿ ಕರ್ಪೂರ ಬೆರೆಸಿದ ನೀರಿನಲ್ಲಿ ನೆಲ ಒರೆಸಿ.

ವಿನೆಗರ್: ವಿನೆಗರ್ ಬ್ಯಾಕ್ಟೀರಿಯಾ ವಿರೋಧಿ ಮತ್ತು ನಂಜುನಿರೋಧಕ ಗುಣಗಳಿಂದ ಸಮೃದ್ಧವಾಗಿದೆ. ಜಿರಳೆಗಳು ಅದರ ಬಲವಾದ ವಾಸನೆಯನ್ನು ಇಷ್ಟಪಡುವುದಿಲ್ಲ. ಮನೆಯನ್ನು ಸ್ವಚ್ಛಗೊಳಿಸಲು ಬಳಸುವ ಮಾಪ್ ನೀರಿಗೆ ಅರ್ಧ ಕಪ್ ವಿನೆಗರ್ ಸೇರಿಸುವುದರಿಂದ ಹಲ್ಲಿಗಳು ಮತ್ತು ಜಿರಳೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

ಬೇವಿನ ಎಣ್ಣೆ:  ಬೇವಿನ ಎಣ್ಣೆ ನೈಸರ್ಗಿಕ ಕೀಟ ನಿವಾರಕವಾಗಿದೆ. ನೀರಿಗೆ ಕೆಲವು ಹನಿ ಬೇವಿನ ಎಣ್ಣೆಯನ್ನು ಸೇರಿಸಿ ಅದರಲ್ಲಿ ನೆಲವನ್ನು ಒರೆಸುವುದರಿಂದ ಜಿರಳೆಗಳು ಮತ್ತು ಇತರ ಕೀಟಗಳ ಕಾಟದಿಂದ ಮುಕ್ತಿ ಪಡೆಯಬಹುದು.

ಇದನ್ನೂ ಓದಿ: ನಿಮ್ಮನೆಯಲ್ಲೂ ನೊಣಗಳ ಕಾಟ ಹೆಚ್ಚಿದ್ಯಾ? ಇವುಗಳನ್ನು ತೊಡೆದು ಹಾಕಲು ಇಲ್ಲಿದೆ ಸುಲಭ ಪರಿಹಾರ

ನೀಲಗಿರಿ ಎಣ್ಣೆ: ನೀಲಗಿರಿ ಎಣ್ಣೆಯ ಪರಿಮಳವು ಹಲ್ಲಿಗಳು ಮತ್ತು ಜಿರಳೆಗಳಿಗೆ ಇಷ್ಟವಾಗುವುದಿಲ್ಲ. 10-12 ಹನಿಗಳನ್ನು ನೀರಿನೊಂದಿಗೆ ಬೆರೆಸಿ ಅದರಲ್ಲಿ ನೆಲವನ್ನು ಒರೆಸುವುದರಿಂದ ಮನೆ ತಾಜಾವಾಗಿರುತ್ತದೆ ಮತ್ತು ಕೀಟಗಳ ಕಾಟವೂ ಇರೋದಿಲ್ಲ.

ಅರಿಶಿನ: ಅರಿಶಿನವು ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ. ನೆಲ ಒರೆಸುವ ನೀರಿಗೆ ಸ್ವಲ್ಪ ಅರಿಶಿನವನ್ನು ಸೇರಿಸುವುದರಿಂದ ನಿಮ್ಮ ಮನೆ ಸ್ವಚ್ಛವಾಗಿರುವುದಲ್ಲದೆ ಮತ್ತು ಹಲ್ಲಿ, ಕೀಟಗಳ ಕಾಟವೂ ಇರೋದಿಲ್ಲ.

ಕಲ್ಲು ಉಪ್ಪು: ಕಲ್ಲು ಉಪ್ಪು ಹಲ್ಲಿಗಳು ಮತ್ತು ಜಿರಳೆಗಳು ಇಷ್ಟಪಡದ ಬಲವಾದ ವಾಸನೆಯನ್ನು ಹೊಂದಿರುತ್ತದೆ. ಇದು ಅವುಗಳ ವಾಸನೆಯ ಪ್ರಜ್ಞೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಅವು ಆ ಪ್ರದೇಶದಿಂದ ದೂರವಿರುವಂತೆ ಮಾಡುತ್ತದೆ. ಹಾಗಾಗಿ ನೆಲ ಒರೆಸುವ ನೀರಿಗೆ ಕಲ್ಲು ಉಪ್ಪು ಸೇರಿಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link