All posts by nagaraj11081993

ಮಣಿರತ್ನಂ ಹೊಸ ಚಿತ್ರದಲ್ಲಿ ಸಾಯಿ ಪಲ್ಲವಿ, ವಿಜಯ್ ಸೇತುಪತಿ ಜೋಡಿ – Kannada News | Vijay Sethupathi and Sai Pallavi likely to act in Mani Ratnam new movie

ಖ್ಯಾತ ನಿರ್ದೇಶಕ ಮಣಿರತ್ನಂ (Mani Ratnam) ಅವರ ಮುಂದಿನ ಚಿತ್ರದ ಬಗ್ಗೆ ಸಿನಿರಂಗದಲ್ಲಿ ಒಂದಷ್ಟು ಚರ್ಚೆ ನಡೆಯುತ್ತಿದೆ. ‘ಥಗ್ ಲೈಫ್’ ಸಿನಿಮಾಗೆ ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದ ಬೆನ್ನಲ್ಲೇ, ಮಣಿರತ್ನಂ ಈಗ ಪ್ರೇಮಕಥೆಯೊಂದನ್ನು ತೆರೆಯ ಮೇಲೆ ತರಲು ಸಜ್ಜಾಗಿದ್ದಾರೆ. ಈ ಸಿನಿಮಾದಲ್ಲಿ ದಕ್ಷಿಣ ಭಾರತದ ಪ್ರತಿಭಾವಂತ ಕಲಾವಿದರಾದ ವಿಜಯ್ ಸೇತುಪತಿ (Vijay Sethupathi) ಮತ್ತು ಸಾಯಿ ಪಲ್ಲವಿ ಮೊದಲ ಬಾರಿಗೆ ಜೋಡಿಯಾಗಿ ನಟಿಸಲಿದ್ದಾರೆ ಎಂಬ ವರದಿಗಳು ಹೊರಬಿದ್ದಿವೆ.

ಮೂಲಗಳ ಪ್ರಕಾರ, ಮಣಿರತ್ನಂ ಈ ಕಥೆಯನ್ನು ಮೊದಲು ನಟ ಧನುಷ್ ಅವರಿಗೆ ವಿವರಿಸಿದ್ದರು. ಧನುಷ್ ಅವರಿಗೆ ಕಥೆ ಇಷ್ಟವಾಗಿದ್ದರೂ, ಸಂಭಾವನೆಯ ವಿಷಯದಲ್ಲಿ ಉಂಟಾದ ಭಿನ್ನಾಭಿಪ್ರಾಯದಿಂದಾಗಿ ಅವರು ಈ ಯೋಜನೆಯಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಆನಂತರ ಸಿಂಬು ಹಾಗೂ ಧ್ರುವ್ ವಿಕ್ರಮ್ ಅವರ ಹೆಸರುಗಳು ಕೇಳಿಬಂದರೂ, ಅಂತಿಮವಾಗಿ ವಿಜಯ್ ಸೇತುಪತಿ ಅವರನ್ನೇ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.

‘ಚೆಕ್ಕ ಚಿವಂತ ವಾನಂ’ ನಂತರ ಮಣಿರತ್ನಂ ಮತ್ತು ಸೇತುಪತಿ ಜೊತೆಯಾಗಿ ಮಾಡಲಿರುವ ಎರಡನೇ ಸಿನಿಮಾ ಇದಾಗಿದೆ. ಈ ಸಿನಿಮಾಗೆ ನಾಯಕಿಯಾಗಿ ಸಾಯಿ ಪಲ್ಲವಿ ಆಯ್ಕೆಯಾಗಿದ್ದು, ಇದು ಮಣಿರತ್ನಂ ನಿರ್ದೇಶನದಲ್ಲಿ ಅವರು ನಟಿಸುತ್ತಿರುವ ಮೊದಲ ಸಿನಿಮಾ. ಈ ಹಿಂದೆ ರುಕ್ಮಿಣಿ ವಸಂತ್ ಅವರ ಹೆಸರು ಕೇಳಿಬಂದಿತ್ತಾದರೂ, ಅಂತಿಮವಾಗಿ ಸಾಯಿ ಪಲ್ಲವಿ ಅವರು ಆಯ್ಕೆ ಆಗಿದ್ದಾರೆ.

ವಿಜಯ್ ಸೇತುಪತಿ ಮತ್ತು ಸಾಯಿ ಪಲ್ಲವಿ ಇಬ್ಬರೂ ಅದ್ಭುತ ಕಲಾವಿದರು ಎಂಬುದು ಈಗಾಗಲೇ ಸಾಬೀತಾಗಿದೆ. ಅವರಿಬ್ಬರ ಫ್ರೆಶ್ ಕಾಂಬಿನೇಷನ್ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಮೂಡಿದೆ. ಈ ಸಿನಿಮಾವನ್ನು ‘ಲೈಕಾ ಪ್ರೊಡಕ್ಷನ್ಸ್’ ಸಂಸ್ಥೆಯು ನಿರ್ಮಾಣ ಮಾಡಲಿದೆ. ಆಸ್ಕರ್ ಪ್ರಶಸ್ತಿ ವಿಜೇತ ಮ್ಯೂಸಿಕ್ ಕಂಪೋಸರ್ ಎ.ಆರ್. ರೆಹಮಾನ್ ಅವರು ಸಂಗೀತ ನೀಡಲಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ಸಿನಿಮಾನಲ್ಲಿ ನಟಿಸಲಿರುವ ಸಾಯಿ ಪಲ್ಲವಿ ಆದರೆ ಜೋಡಿ ಆಗಿ ಅಲ್ಲ

ಈ ಸಿನಿಮಾಗೆ ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆಯಿದೆ. ಸಿನಿಪ್ರೇಮಿಗಳಿಗೆ ಮಣಿರತ್ನಂ ಅವರ ದೃಶ್ಯ ವೈಭವದ ಜೊತೆಗೆ ರೆಹಮಾನ್ ಅವರ ಮೆಲೋಡಿ ಹಾಡುಗಳ ರಸದೌತಣ ಸಿಗುವುದರಲ್ಲಿ ಸಂಶಯವಿಲ್ಲ. ವಿಜಯ್ ಸೇತುಪತಿ ಮತ್ತು ಸಾಯಿ ಪಲ್ಲವಿ ಅವರ ಕೆಮಿಸ್ಟ್ರಿ ತೆರೆಯ ಮೇಲೆ ಹೇಗೆ ಮೂಡಿಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಈ ರಾಶಿಯವರಿಗೆ ಮಾರ್ಚ್ ನಲ್ಲಿ ಭೋಗಕ್ಕೆ ಹೆಚ್ಚು ಒತ್ತು ಸಿಗಲಿದೆ.. – Kannada News | Tula Rashi March 2026: Jupiter, Saturn and Venus Bring Fortune and Prosperity

2026ರ ಮೂರನೇ ಮಾರ್ಚ್ ತಿಂಗಳು ತುಲಾ ರಾಶಿಯವರಿಗೆ ಒಂದು ಪರಿವರ್ತನೆಯ ಕಾಲಘಟ್ಟವಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಚಲನೆ ಮತ್ತು ದಶೆಗಳು ಈ ಸಮಯದಲ್ಲಿ ನಿಮ್ಮ ಜೀವನದ ಮೇಲೆ ಗಾಢವಾದ ಪ್ರಭಾವ ಬೀರುತ್ತವೆ. ಈ ರಾಶಿಗೆ ಯಾವ ದಶೆಗಳು ಮತ್ತು ಗ್ರಹಗಳ ಸ್ಥಿತಿ ಉತ್ತಮ ಫಲ ನೀಡಲಿವೆ ಎಂಬ ವಿವರ ಇಲ್ಲಿದೆ.

ಈ ರಾಶಿಯವರಿಗೆ ಅದೃಷ್ಟ ತರುವ ದಶೆಗಳು ​ಮಾರ್ಚ್ ತಿಂಗಳಲ್ಲಿ ಮುಖ್ಯವಾಗಿ ಮೂರು ಪ್ರಮುಖ ಗ್ರಹಗಳ ಪ್ರಭಾವವು ತುಲಾ ರಾಶಿಯವರಿಗೆ ವರದಾನವಾಗಲಿದೆ.

ಗುರು ದಶೆ :

ಭಾಗ್ಯದ ಬಾಗಿಲು ತೆರೆಯುವುದು. ​ಮಾರ್ಚ್ ನಲ್ಲಿ ಗುರುವು ನಿಮ್ಮ ರಾಶಿಯಿಂದ ಒಂಭತ್ತನೇ ಮನೆಯಲ್ಲಿ ಸಂಚರಿಸುತ್ತಿದ್ದಾನೆ.

ಒಂಬತ್ತನೇ ಮನೆಯು ಭಾಗ್ಯ ಸ್ಥಾನವಾಗಿದ್ದು, ಈ ಸಮಯದಲ್ಲಿ ನಡೆಯುವ ಗುರು ಮಹಾದಶೆ ಅಥವಾ ಅಂತರ್ದಶೆಯು ನಿಮಗೆ ಅನಿರೀಕ್ಷಿತ ಧನಲಾಭ ಮತ್ತು ಆಧ್ಯಾತ್ಮಿಕ ಉನ್ನತಿಯನ್ನು ನೀಡುತ್ತದೆ.

ಈ ಕಾಲದಲ್ಲಿ ಉನ್ನತ ಶಿಕ್ಷಣಕ್ಕೆ ಪ್ರಯತ್ನಿಸುತ್ತಿರುವವರಿಗೆ ಮತ್ತು ವಿದೇಶ ಪ್ರವಾಸದ ಹಂಬಲ ಇರುವವರಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತವೆ. ತಂದೆಯ ಕಡೆಯಿಂದ ಆಸ್ತಿ ಲಾಭವಾಗುವ ಸಾಧ್ಯತೆ ಇದೆ.

​ಶನಿ ದಶೆ :

ಶಿಸ್ತು ಮತ್ತು ವಿಜಯವನ್ನು ಪಡೆಯಲು ಸಾಧ್ಯ. ​ತುಲಾ ರಾಶಿಗೆ ಶನಿಯು ಯೋಗಕಾರಕ ಗ್ರಹ. ಮಾರ್ಚ್ ತಿಂಗಳಲ್ಲಿ ಶನಿಯು ನಿಮ್ಮ ರಾಶಿಯಿಂದ ಆರನೇ ಮನೆಯಲ್ಲಿ ಅಂದರೆ ಮೀನ ರಾಶಿ ಇರುತ್ತಾನೆ.

ಆರನೇ ಮನೆಯಲ್ಲಿ ಶನಿಯ ಸಂಚಾರವು ಶತ್ರುಹಂತ ಯೋಗವನ್ನು ಸೃಷ್ಟಿಸುತ್ತದೆ. ನಿಮ್ಮ ಮೇಲೆ ನಡೆಯುತ್ತಿರುವ ಶನಿ ದಶೆಯು ನಿಮಗೆ ಸವಾಲುಗಳನ್ನು ಗೆಲ್ಲುವ ಶಕ್ತಿ ನೀಡುತ್ತದೆ.

​ಹಳೆಯ ಸಾಲಗಳಿಂದ ಮುಕ್ತಿ ಸಿಗಲಿದೆ ಮತ್ತು ಕಾನೂನು ಸಂಬಂಧಿತ ಸಮಸ್ಯೆಗಳಲ್ಲಿ ಜಯ ನಿಮ್ಮದಾಗಲಿದೆ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ಸಮಯವಿದು.

​ಶುಕ್ರ ದಶೆ :

ಸುಖ ಮತ್ತು ಸೌಲಭ್ಯ ನಿಮ್ಮದಾಗಲಿದೆ. ​ನಿಮ್ಮ ರಾಶ್ಯಾಧಿಪತಿಯಾದ ಶುಕ್ರನ ದಶೆಯು ಈ ತಿಂಗಳಲ್ಲಿ ವಿಶೇಷವಾಗಿ ಮಾರ್ಚ್ 24ರ ಅನಂತರ ಅತ್ಯಂತ ಶುಭವಾಗಿರಲಿದೆ.

​ಶುಕ್ರ ಮತ್ತು ಗುರುವಿನ ಸಂಯೋಗವು ಸುಖ-ಸಂತೋಷವನ್ನು ಹೆಚ್ಚಿಸುತ್ತದೆ. ಹೊಸ ವಾಹನ ಅಥವಾ ಆಭರಣ ಖರೀದಿಗೆ ಇದು ಸಕಾಲ. ಕುಟುಂಬದಲ್ಲಿ ಶುಭ ಕಾರ್ಯಗಳು ಜರುಗುವ ಸಾಧ್ಯತೆ ಇದೆ ಮತ್ತು ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚುತ್ತದೆ.

– ಲೋಹಿತ ಹೆಬ್ಬಾರ್

Source link

ನಾಳೆ ಕೊಪ್ಪಳ ಬಂದ್​​ ಹಿನ್ನೆಲೆ ಖಾಸಗಿ ಶಾಲೆಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ – Kannada News | Koppal Bandh Tomorrow Over Baldota Factory Issue; Schools Shut, University Exams Postponed

ಕಾರ್ಖಾನೆ ವಿರೋಧಿಸಿ ಈ ಹಿಂದೆ ನಡೆದ ಹೋರಾಟImage Credit source: Google

ಕೊಪ್ಪಳ, ಫೆಬ್ರವರಿ 23: ಬಲ್ಡೋಟಾ ಕಾರ್ಖಾನೆ ವಿರೋಧಿ ಹೋರಾಟಕ್ಕೆ ಒಂದು ವರ್ಷ ಪೂರೈಸಿದ ಹಿನ್ನಲೆ ಜಿಲ್ಲಾ‌ ಬಚಾವೋ ಆಂದೋಲನ‌ ಸಮಿತಿ ಮತ್ತು ಪರಿಸರ ಹಿತರಕ್ಷಣಾ ಸಮಿತಿ ವತಿಯಿಂದ ನಾಳೆ ಕೊಪ್ಪಳ‌ದಲ್ಲಿ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹೋರಾಟದ ಸಂಚಾಲಕ ಮಂಜುನಾಥ್ ಗೊಂಡಬಾಳ, ಕಳೆದ ವರ್ಷ ಫೆಬ್ರವರಿ 24ರಂದು ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ‌ ಸ್ವಾಮೀಜಿ ಬಲ್ಡೋಟಾ ಕಾರ್ಖಾನೆ ಶಾಶ್ವತ ಬಂದ್ ಮಾಡಿಸಬೇಕೆಂದು ಜಿಲ್ಲೆಯ ಜನಪ್ರತಿನಿಧಿಗಳಿಗೆ ಕರೆ ನೀಡಿದ್ದರು. ಆದರೆ ಇಲ್ಲಿಯವರೆಗೂ ಕಾರ್ಖಾನೆ ಶಾಶ್ವತವಾಗಿ ಸ್ಥಗಿತಗೊಂಡಿಲ್ಲ. ಈ ಹಿನ್ನಲೆ ಜಂಟಿ ಕ್ರಿಯಾ ಸಮಿತಿ ಬಂದ್​​ಗೆ ಕರೆ ನೀಡಿದೆ ಎಂದು ತಿಳಿಸಿದ್ದಾರೆ.

ಕಳೆದ 116 ದಿನಗಳಿಂದ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಪ್ರತಿಭಟನೆ ನಡೆಸಿಕೊಂಡುಬಂದಿದ್ದು, ನಾಳೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6ರ ವರೆರೆಗೂ ಸ್ವಯಂಪ್ರೇರಿತ ಬಂದ್​​ಗೆಗೆ ಕರೆ ನೀಡಲಾಗಿದೆ. ವಕೀಲರ ಸಂಘ ಸೇರಿ ಹಲವು ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿದ್ದು, ಖಾಸಗಿ ಶಾಲೆಗಳ ಒಕ್ಕೂಟ ಸಹ ಹೋರಾಟಗಾರರ ಬೆನ್ನಿಗೆ ನಿಂತಿದೆ. ಭಾಗ್ಯನಗರದಲ್ಲಿ ಬೆಳಿಗ್ಗೆ 7 ಗಂಟೆಗೆ ಬೈಕ್, ಆಟೋ ರ‍್ಯಾಲಿ ನಡೆಯಲಿದ್ದು, 10 ಗಂಟೆಗೆ ಗವಿ ಮಠದಿಂದ ರ‍್ಯಾಲಿ ಇರಲಿದೆ. ಗಡಿಯಾರ ಕಂಬ, ಅಶೋಕ ವೃತ್ತದ ಮೂಲಕ ನಗರಸಭೆಯ ಪ್ರತಿಭಟನಾ ಸ್ಥಳಕ್ಕೆ ತಲುಪಿ ಅದು ಅಂತ್ಯಗೊಳ್ಳಲಿದೆ. ನಗರಸಭೆ ಮುಂಭಾಗ ವೇದಿಕೆ ಕಾರ್ಯಕ್ರಮ‌ ಜರುಗಲಿದ್ದು, ಸಾಣೆಹಳ್ಳಿ, ಗದಗಿನ ತೋಂಟದಾರ್ಯ ಮಠದ ಸಿದ್ದರಾಮ ಶ್ರೀಗಳು, ಕಬೀರಾನಾನಂದ ಸ್ವಾಮೀಜಿಗಳು, ಪರಿಸರಕ್ಕಾಗಿ ನಾವು ಸಂಘಟನೆಯ ಎ. ಟಿ. ರಾಮಸ್ವಾಮಿ ಅವರು ಈ ವೇಳೆ ಉಪಸ್ಥಿತರಿರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 

ಖಾಸಗಿ ಶಾಲೆಗಳಿಗೆ ರಜೆ, ಕೊಪ್ಪಳ‌ ವಿವಿ ಪರೀಕ್ಷೆ ಮುಂದೂಡಿಕೆ

ಕೊಪ್ಪಳ ಬಂದ್​​ಗೆ ಕರೆ ನೀಡಿರುವ ಹಿನ್ನೆಲೆ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಖಾಸಗಿ ಶಾಲೆಗಳ ಒಕ್ಕೂಟ ಖಾಸಗಿ ಶಾಲೆಗಳಿಗಸ ರಜೆ ಘೋಷಿಸಿದೆ. ಕೊಪ್ಪಳ‌ ವಿಶ್ವ ವಿದ್ಯಾಲಯದ ಸ್ನಾತಕೋತ್ತರ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳನ್ನೂ ಮುಂದೂಡಿ ‌ವಿವಿ ಪರೀಕ್ಷಾಂಗ ಕುಲಸಚಿವರು ಆದೇಶಿಸಿದ್ದಾರೆ. ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಿಗದಿಯಂತೆ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 5:35 pm, Mon, 23 February 26

Source link

ಐಡಿಯಾ ಯಾರದು ಅನ್ನೋದು ಮುಖ್ಯ ಅಲ್ಲ, ಅದನ್ನು ಜಾರಿಗೆ ತರೋನೇ ಜಾಣ: ಚ್ಯಾಟ್​ಜಿಪಿಟಿ ರೂವಾರಿ ಸ್ಯಾಮ್ ಆಲ್ಟ್​ಮ್ಯಾನ್ ಸಲಹೆ ಕೇಳಿ – Kannada News | Sam Altman says, no one cares about your idea, success is on executing that

ನವದೆಹಲಿ, ಫೆಬ್ರುವರಿ 23: ಇವತ್ತು ಬೆಳೆಯುತ್ತಿರುವ ಪ್ರಪಂಚದಲ್ಲಿ ಹೊಸ ಹೊಸ ಆಲೋಚನೆಗಳು, ಬ್ಯುಸಿನೆಸ್ ಐಡಿಯಾಗಳು ಹೊರಹೊಮ್ಮುತ್ತಲೇ ಇರುತ್ತವೆ. ಯಾರಿಗೋ ಬಂದಿದ್ದ ಐಡಿಯಾವನ್ನು ಇನ್ಯಾರೋ ಸಮರ್ಪಕವಾಗಿ ಜಾರಿಗೆ ತಂದು ಯಶಸ್ವಿಯಾಗಿರುವ ಹಲವು ನಿದರ್ಶನಗಳಿವೆ. ಮೊದಲು ಐಡಿಯಾ ಹೊಂದಿದ್ದವರು ಅದನ್ನು ಜಾರಿಗೆ ತರಲು ವಿಫಲರಾಗಿರುವ ನಿದರ್ಶನಗಳೂ ಬಹಳ ಇವೆ. ಓಪನ್ ಎಐ ಸಿಇಒ ಸ್ಯಾಮ್ ಆಲ್ಟ್​ಮ್ಯಾನ್ (Sam Altman) ಈ ವಿಚಾರದ ಬಗ್ಗೆ ಕಡ್ಡಿ ತುಂಡು ಮಾಡಿದಂತೆ ಮಾತನಾಡಿದ್ದಾರೆ. ನಿಮ್ಮಲ್ಲಿ ಐಡಿಯಾ ಇದೆಯಾ ಅನ್ನೋದು ಯಾರಿಗೂ ಬೇಕಾಗಿಲ್ಲ. ಆ ಐಡಿಯಾವನ್ನು ಹೇಗೆ ಜಾರಿಗೆ ತರುತ್ತೀರಿ ಎಂಬುದು ಮುಖ್ಯ ಎಂದು ಚ್ಯಾಟ್​ಜಿಪಿಟಿ ರೂವಾರಿ ಹೇಳಿದ್ದಾರೆ.

‘ಹೊಸ ಐಡಿಯಾಗಳಿಗೆ ಜನರು ಬಹಳ ಪ್ರಾಮುಖ್ಯತೆ ಕೊಡುತ್ತಾರೆ ಎಂದು ಭಾವಿಸುವವರು ಅನೇಕರಿದ್ದಾರೆ. ಮೂಲ ಪರಿಕಲ್ಪನೆ ಯಾರದ್ದೇ ಇರಲಿ, ಅದನ್ನು ಸರಿಯಾಗಿ ಎಕ್ಸಿಕ್ಯೂಟ್ ಮಾಡುವುದು ಹೆಚ್ಚು ಮುಖ್ಯ. ನಿಮ್ಮ ಐಡಿಯಾ ಎಷ್ಟೇ ಗ್ರೇಟ್ ಆಗಿರಲಿ, ಯಾರಿಗೂ ಅದರಿಂದ ಆಗಬೇಕಾದ್ದೇನಿಲ್ಲ’ ಎಂದು ಹಳೆಯ ವಿಡಿಯೋವೊಂದರಲ್ಲಿ ಸ್ಯಾಮ್ ಆಲ್ಟ್​ಮ್ಯಾನ್ ಹೇಳುತ್ತಿರುವುದು ಕಂಡು ಬಂದಿದೆ.

ಇದನ್ನೂ ಓದಿ: ಚಿನ್ನ, ಬೆಳ್ಳಿ ಬೆಲೆಗಳು ಅತಿಯಾಗಿ ಏರಿದ್ದು ಯಾಕೆಂದು ಕಾರಣ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್

ಹೊಸ ಐಡಿಯಾ ಅನುಷ್ಠಾನಕ್ಕೆ ಏನು ಮಾಡಬೇಕು?

‘ನೀವು ಹೊಸ ಕಾನ್ಸೆಪ್ಟ್​ನ ಪೂರ್ಣ ಪ್ಲಾನ್ ಅನ್ನು ದೊಡ್ಡ ಕಂಪನಿಗೆ ನೇರವಾಗಿ ಕೊಟ್ಟು ನೋಡಿ. ಅವರು ಅದನ್ನು ಸರಿಯಾಗಿ ನಕಲು ಮಾಡುವ ಸಾಧ್ಯತೆ ಕಡಿಮೆ ಇರುತ್ತದೆ. ಯಾಕೆಂದರೆ, ಹೊಸ ಐಡಿಯಾವನ್ನು ಯಶಸ್ವಿಯಾಗಿ ಜಾರಿಗೆ ತರಲು ಗಮನ, ಛಲ ಮತ್ತು ಪ್ರಾಬ್ಲಮ್ ಸಾಲ್ವಿಂಗ್ ಚಾತುರ್ಯ ಬೇಕಾಗುತ್ತದೆ’ ಎಂದು ಸ್ಯಾಮ್ ಆಲ್ಟ್​ಮ್ಯಾನ್ ಹೇಳುತ್ತಾರೆ.

ರಹಸ್ಯವಾಗಿಡುವುದು ತಪ್ಪು

ಹೊಸ ಸ್ಟಾರ್ಟಪ್​ಗಳು ತಮ್ಮ ಬ್ಯುಸಿನೆಸ್ ಐಡಿಯಾವನ್ನು ರಹಸ್ಯವಾಗಿ ಇಡುವುದನ್ನು ಸ್ಯಾಮ್ ಆಲ್ಟ್​ಮ್ಯಾನ್ ಅಲ್ಲಗಳೆಯುತ್ತಾರೆ. ‘ಸಂಸ್ಥಾಪಕರು ತಾವು ಏನು ನಿರ್ಮಿಸುತ್ತಿದ್ದೇವೆ ಎಂಬುದನ್ನು ಮುಕ್ತವಾಗಿ ಹೇಳಿಕೊಳ್ಳಬೇಕು. ಹಾಗಾದಾಗ ಉದ್ಯೋಗಿಗಳನ್ನು ಆಕರ್ಷಿಸಬಹುದು, ಹೂಡಿಕೆದಾರರನ್ನು ಸಮಾಧಾನಗೊಳಿಸಬಹುದು, ಗ್ರಾಹಕರನ್ನು ಪಡೆಯಬಹುದು. ಮತ್ತು ಉತ್ಪನ್ನದ ಗುಣಮಟ್ಟ ಸುಧಾರಿಸಲು ಬೇಕಾದ ಸಲಹೆ ಸೂಚನೆಗಳನ್ನು ಪಡೆಯಬಹುದು’ ಎಂದು ಓಪನ್​ಎಐ ಸಿಇಒ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ?

ಕಂಪನಿಗಳು ತಮ್ಮ ಹೊಸ ಐಡಿಯಾವನ್ನು ಮುಚ್ಚಿಟ್ಟುಕೊಂಡರೆ ಪ್ರಯೋಜನವಿಲ್ಲ. ಬೇಕೆಂದರೆ, ಅದನ್ನು ಎಕ್ಸಿಕ್ಯೂಟ್ ಮಾಡುವ ಕಾರ್ಯವಿಧಾನಗಳ ವಿವರವನ್ನು ರಹಸ್ಯವಾಗಿಟ್ಟುಕೊಳ್ಳಬಹುದು ಎಂದೂ ಹೇಳಿದ ಸ್ಯಾಮ್ ಆಲ್ಟ್​ಮ್ಯಾನ್, ತಾನು ಹಿಂದೆ ಕೆಲಸ ಮಾಡುತ್ತಿದ್ದ ವೈ ಕಾಂಬಿನೇಟರ್ ಎನ್ನುವ ಹೂಡಿಕೆ ಸಂಸ್ಥೆಯಲ್ಲಿನ ಅನುಭವಗಳನ್ನು ಮೆಲುಕು ಹಾಕಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕನ್ಯಾ ರಾಶಿಗೆ ಮಾರ್ಚ್ ತಿಂಗಳಲ್ಲಿ ಈ ದಶೆಯಿಂದ ವೃತ್ತಿಯಲ್ಲಿ ಯಶಸ್ಸು, ಲಾಭ – Kannada News | March 2024 Virgo Astrology: Career Growth, Love Life and Planetary Impact

ಮಾರ್ಚ್ ತಿಂಗಳು ನಿಮಗೆ ಸವಾಲು ಮತ್ತು ಅವಕಾಶಗಳ ಸಮ್ಮಿಶ್ರವಾಗಿರುತ್ತದೆ. ನಿಮ್ಮ ರಾಶ್ಯಾಧಿಪತಿ ಬುಧನ ಚಲನೆಯು ನಿಮ್ಮ ಯೋಚನಾ ಶಕ್ತಿಯನ್ನು ಹೆಚ್ಚಿಸಿದರೆ, ಶನಿ ಮತ್ತು ರಾಹುವಿನ ಪ್ರಭಾವವು ನಿಮ್ಮನ್ನು ಸ್ವಲ್ಪ ಪರೀಕ್ಷೆಗೆ ಒಡ್ಡಬಹುದು.

​ವೃತ್ತಿ ಮತ್ತು ಉದ್ಯೋಗ

​ಶುಭ: ಬುಧನ ಅನುಗ್ರಹದಿಂದ ಕಚೇರಿಯಲ್ಲಿ ನಿಮ್ಮ ಮಾತುಗಳಿಗೆ ಮನ್ನಣೆ ಸಿಗಲಿದೆ. ಹೊಸ ಯೋಜನೆಗಳಿಗೆ ಸಹಿ ಹಾಕಲು ಇದು ಸಕಾಲ.

​ಅಶುಭ : ಶನಿಯ ದಶೆಯು ಕೆಲಸದಲ್ಲಿ ವಿಳಂಬವನ್ನು ಉಂಟುಮಾಡಬಹುದು. ಮೇಲಧಿಕಾರಿಗಳೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬರಬಹುದು. ಕಠಿಣ ಪರಿಶ್ರಮಕ್ಕೆ ತಕ್ಷಣದ ಫಲ ಸಿಗದಿದ್ದರೂ ಧೃತಿಗೆಡಬೇಡಿ. ಮಾರ್ಚ್ 15ರ ಅನಂತರ ವೃತ್ತಿಯಲ್ಲಿ ಹೊಸ ತಿರುವು ಸಿಗುವ ಸಾಧ್ಯತೆಯಿದೆ.

ಆರ್ಥಿಕ ಸ್ಥಿತಿ

​ಶುಭ: ಶುಕ್ರನ ಬಲದಿಂದ ಹಣದ ಹರಿವು ಉತ್ತಮವಾಗಿರುತ್ತದೆ. ಹಳೆಯ ಸಾಲಗಳು ತೀರುವ ಸಾಧ್ಯತೆಯಿದೆ. ಅಧಿಕ ಮೌಲ್ಯದ ವಸ್ತುಗಳ ಮೇಲೆ ಹಣ ವ್ಯಯಿಸುವಿರಿ.

​ಅಶುಭ: ಕೇತುವಿನ ಪ್ರಭಾವದಿಂದ ಅನಿರೀಕ್ಷಿತ ವೈದ್ಯಕೀಯ ಖರ್ಚುಗಳು ಬರಬಹುದು. ಷೇರು ಮಾರುಕಟ್ಟೆಯಲ್ಲಿ ದೊಡ್ಡ ಹೂಡಿಕೆ ಮಾಡುವ ಮುನ್ನ ತಜ್ಞರ ಸಲಹೆ ಪಡೆಯಿರಿ.

​ಮಿಶ್ರಫಲ: ಆದಾಯವಿದ್ದರೂ ಕೈಯಲ್ಲಿ ಹಣ ಉಳಿಯುವುದು ಕಷ್ಟವಾಗಬಹುದು.

​ಕುಟುಂಬ ಮತ್ತು ಪ್ರೇಮ ಜೀವನ

​ಶುಭ: ಗುರುವು ಧರ್ಮಸ್ಥಾನದಲ್ಲಿ ಇರುವುದರಿಂದ ಮನೆಯಲ್ಲಿ ಶುಭ ಕಾರ್ಯಗಳು ನಡೆಯುವ ಸೂಚನೆ ಇದೆ. ಸಂಗಾತಿಯಿಂದ ಸಂಪೂರ್ಣ ಬೆಂಬಲ ಸಿಗಲಿದೆ.

​ಅಶುಭ: ಮಂಗಳನ ದಶೆಯಿಂದಾಗಿ ಒರಟುತನದ ಮಾತುಗಳು ಸಂಬಂಧದಲ್ಲಿ ಬಿರುಕು ಮೂಡಿಸಬಹುದು. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

​ಆರೋಗ್ಯ

​ಅಶುಭ: ಈ ತಿಂಗಳು ನಿಮಗೆ ಜೀರ್ಣಕ್ರಿಯೆ ಸಂಬಂಧಿತ ಸಮಸ್ಯೆ ಅಥವಾ ನಿದ್ರಾಹೀನತೆ ಕಾಡಬಹುದು. ಶನಿಯ ಪ್ರಭಾವದಿಂದ ಕಾಲು ನೋವು ಅಥವಾ ಬೆನ್ನು ನೋವು ಕಾಣಿಸಿಕೊಳ್ಳಬಹುದು. ಯೋಗ ಮತ್ತು ಪ್ರಾಣಾಯಾಮ ಮಾಡುವುದರಿಂದ ಮಾನಸಿಕ ಶಾಂತಿ ಸಿಗುತ್ತದೆ.

​ಗ್ರಹ ದಶೆಗಳ ಪ್ರಭಾವ:

​ಬುಧ ದಶೆ :

ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೆಚ್ಚಿಸುತ್ತದೆ. ಈ ಸಮಯದಲ್ಲಿ ನೀವು ಮಾಡುವ ಪತ್ರವ್ಯವಹಾರಗಳು ಯಶಸ್ವಿಯಾಗುತ್ತವೆ.

​ಶನಿ ದಶೆ :

ಇದು ನಿಮ್ಮನ್ನು ಸೋಮರಿತನಕ್ಕೆ ದೂಡಬಹುದು. ಶನಿಯು ನಿಮ್ಮನ್ನು ಶಿಸ್ತುಬದ್ಧವಾಗಿರಲು ಪ್ರೇರೇಪಿಸುತ್ತಾನೆ, ಹಾಗಾಗಿ ಶಿಸ್ತು ಮೀರಿದರೆ ಸಂಕಷ್ಟ ಎದುರಾಗಬಹುದು.

​ಗುರು ದಶೆ :

ಸಮಾಜದಲ್ಲಿ ಗೌರವ ಹೆಚ್ಚಿಸಿದರೂ, ಅತಿಯಾದ ಆತ್ಮವಿಶ್ವಾಸದಿಂದ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮಾಡಬಹುದು.

ಈ ತಿಂಗಳ ಅಶುಭ ಫಲಗಳನ್ನು ತಗ್ಗಿಸಲು

​ಬುಧವಾರ ಹಸಿರು ಬಟ್ಟೆ ಧರಿಸಿ ಅಥವಾ ಹೆಸರು ಬೇಳೆಯನ್ನು ದಾನ ಮಾಡಿ. ​ಶನಿವಾರ ಶನಿ ದೇವಸ್ಥಾನದಲ್ಲಿ ಎಳ್ಳೆಣ್ಣೆ ದೀಪ ಹಚ್ಚಿ. ​ನಿತ್ಯ ವಿಷ್ಣು ಸಹಸ್ರನಾಮ ಪಾರಾಯಣ ಮಾಡುವುದು ಕನ್ಯಾ ರಾಶಿಯವರಿಗೆ ಅತ್ಯಂತ ಶ್ರೇಯ

ಲೋಹಿತ ಹೆಬ್ಬಾರ್

Source link

ಚಿನ್ನ, ಬೆಳ್ಳಿ ಬೆಲೆಗಳು ಅತಿಯಾಗಿ ಏರಿದ್ದು ಯಾಕೆಂದು ಕಾರಣ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್ – Kannada News | Finance Minister Nirmala Sitharaman reacts on gold, silver rates hike, us tariff change effect

ನವದೆಹಲಿ, ಫೆಬ್ರುವರಿ 23: ಕಳೆದ ಕೆಲ ತಿಂಗಳಲ್ಲಿ, ಅದರಲ್ಲೂ ಡಿಸೆಂಬರ್ ಮತ್ತು ಜನವರಿ ತಿಂಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ರಾಕೆಟ್​ನಂತೆ ಆಗಸಕ್ಕೆ ಚಿಮ್ಮಿದ್ದು ಜನಸಾಮಾನ್ಯರಿಗೆ ಆತಂಕ ಮೂಡಿಸಿತ್ತು. ಜಾಗತಿಕವಾಗಿ ಚಿನ್ನಕ್ಕೆ ಬಹಳ ಬೇಡಿಕೆ ಬಂದಿದ್ದರಿಂದ ಈ ಅತಿಯಾದ ಬೆಲೆ ಏರಿಕೆ ಆಗಿತ್ತು. ಚಿನ್ನ ಮತ್ತು ಬೆಳ್ಳಿಗೆ ಈ ಪರಿ ಬೇಡಿಕೆ ಬರಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಾರಣ ಬಿಚ್ಚಿಟ್ಟಿದ್ದಾರೆ. ಆರ್​ಬಿಐನ 621ನೇ ಕೇಂದ್ರೀಯ ಮಂಡಳಿ ಸಭೆ ಬಳಿಕ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಜೊತೆ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಅಮೆರಿಕದ ಟ್ಯಾರಿಫ್ ಬದಲಾವಣೆಯ ಪರಿಣಾಮಗಳು, ಚಿನ್ನದ ಆಮದು, ಹಣದುಬ್ಬರ ಇತ್ಯಾದಿ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಚಿನ್ನ ಬೆಳ್ಳಿ ಬೆಲೆ ಹೆಚ್ಚಲು ಇದು ಕಾರಣ…

ನಿರ್ಮಲಾ ಸೀತಾರಾಮನ್ ಪ್ರಕಾರ, ಜಾಗತಿಕವಾಗಿ ವಿವಿಧ ಸೆಂಟ್ರಲ್ ಬ್ಯಾಂಕುಗಳು ಚಿನ್ನ, ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಸಾಕಷ್ಟು ಪ್ರಮಾಣದಲ್ಲಿ ಖರೀದಿಸಿದ್ದರಿಂದ ಬೇಡಿಕೆ ಹೆಚ್ಚಾಗಿ ಬೆಲೆಯೂ ಯದ್ವಾತದ್ವಾ ಏರಿದೆ.

ಇದನ್ನೂ ಓದಿ: ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ?

ಭಾರತದ ಸೆಂಟ್ರಲ್ ಬ್ಯಾಂಕ್ ಆದ ಆರ್​ಬಿಐ ಕೂಡ ಚಿನ್ನದ ಖರೀದಿಯನ್ನು ನಿರಂತರವಾಗಿ ಹೆಚ್ಚಿಸುತ್ತಾ ಹೋಗಿತ್ತು. ನಿರ್ಮಲಾ ಸೀತಾರಾಮನ್ ಪ್ರಕಾರ, ಚಿನ್ನ ಮತ್ತು ಬೆಳ್ಳಿಯ ಆಮದು ಆತಂಕ ಪಡುವ ಮಟ್ಟದಲ್ಲಿ ಇಲ್ಲವಂತೆ. ಅದರ ಬಗ್ಗೆ ಆರ್​ಬಿಐ ನಿಗಾ ವಹಿಸಿದೆ ಎನ್ನುತ್ತಾರೆ ಅವರು.

ಅಮೆರಿಕದ ಟ್ಯಾರಿಫ್ ದರ ಬದಲಾವಣೆಯ ಪರಿಣಾಮ ಏನು?

ಸುಪ್ರೀಂಕೋರ್ಟ್ ತೀರ್ಪು ಪರಿಣಾಮವಾಗಿ ಅಮೆರಿಕ ಸರ್ಕಾರವು ಟ್ಯಾರಿಫ್ ಅನ್ನು ಶೇ. 10ಕ್ಕೆ ಇಳಿಸಿ, ನಂತರ ಶೇ. 15ಕ್ಕೆ ಹೆಚ್ಚಿಸಿದ ಕ್ರಮವು ಭಾರತದ ಮೇಲೆ ಏನು ಪರಿಣಾಮ ಬೀರುತ್ತದೆ? ಈ ಬಗ್ಗೆ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್, ಇತ್ತೀಚಿನ ಟ್ಯಾರಿಫ್ ಬದಲಾವಣೆಯಿಂದ ಭಾರತದ ಮೇಲೆ ಬೀರಬಹುದಾದ ಪರಿಣಾಮಗಳನ್ನು ಈಗಲೇ ಅವಲೋಕಿಸಲು ಆಗುವುದಿಲ್ಲ. ವಾಣಿಜ್ಯ ಸಚಿವಾಲಯವು ಇದರ ಬಗ್ಗೆ ನಿಗಾ ಇರಿಸಿದೆ ಎಂದಿದ್ದಾರೆ.

ಇದನ್ನೂ ಓದಿ: ಮಧ್ಯಂತರ ಟ್ರೇಡ್ ಡೀಲ್​ಗೆ ಮಾತುಕತೆ: ಭಾರತ ತಂಡದ ಅಮೆರಿಕ ಭೇಟಿ ಮುಂದೂಡಿಕೆ

‘ಭಾರತದ ಆರ್ಥಿಕತೆಯ ಮೇಲೆ ಏನು ಪರಿಣಾಮ ಆಗುತ್ತೆ ಎಂದು ಇಷ್ಟು ಬೇಗ ಪ್ರತಿಕ್ರಿಯಿಸಲು ಆಗುವುದಿಲ್ಲ. ವಾಣಿಜ್ಯ ಸಚಿವಾಲಯವು ಪರಿಸ್ಥಿತಿಯನ್ನು ಪರಾಮರ್ಶಿಸುತ್ತಿದೆ. ಮುಂದಿನ ಸಂಧಾನಗಳಿಗೆ ಅಮೆರಿಕಕ್ಕೆ ತೆರಳಿದಾಗ ನಿಯೋಗವು ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಖಾರದಪುಡಿ ಎರಚಿ ಚಿನ್ನದಂಗಡಿಗೆ ಕನ್ನ: ಸಿನಿಮಾ ಕಥೆ ಮೀರಿಸುವ ದರೋಡೆ ಸ್ಟೋರಿ – Kannada News | Tumakuru jewellery shop Robbery: Shira Police Arrest Rajasthan Gang, Recover 26 Lakh Gold in Hours

ದರೋಡೆಯಾದ ಜ್ಯುವೆಲರಿ ಶಾಪ್Image Credit source: tv9 kannada

ತುಮಕೂರು, ಫೆಬ್ರವರಿ 23: ರಾಜ್ಯದಲ್ಲಿ ದರೋಡೆ (Robbery) ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿವೆ. ಇದೀಗ ತುಮಕೂರಿನಲ್ಲೊಂದು (Tumakuru) ಜ್ಯುವೆಲರಿ ಶಾಪ್ ದರೋಡೆ ನಡೆದಿದೆ. ಆ ಮೂಲಕ ಗೃಹ ಸಚಿವರ ತವರು ಜಿಲ್ಲೆಯಲ್ಲಿ ಹೊರ ರಾಜ್ಯದ ದರೋಡೆಕೋರರು ಸದ್ದು ಮಾಡಿದ್ದಾರೆ. ಜ್ಯುವೆಲರಿ ಶಾಪ್​​ಗೆ ನುಗ್ಗಿ ಖಾರದ ಪುಡಿ ಎರಚಿ ಬರೋಬ್ಬರಿ 26 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವಂತಹ ಘಟನೆ ನಡೆದಿದೆ. ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣದೊಂದಿಗೆ ಕಾಡಿಗೆ ಪರಾರಿಯಾಗಿದ್ದ ಖತರ್ನಾಕ್​ ಗ್ಯಾಂಗ್​​​​ ಅನ್ನು ಕೆಲವೇ ಗಂಟೆಗಳಲ್ಲಿ ಶಿರಾ ಪೊಲೀಸರು ಬಂಧಿಸಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು? 

ಬಂಧಿತ ಅರವಿಂದ್, ದುಂಗರ್ ಸಿಂಗ್, ಮಹೇಂದ್ರ ಸಿಂಗ್ ಮತ್ತು ಮಧು ಸಿಂಗ್​ ಮೂಲತಃ ರಾಜಸ್ಥಾನ ಮೂಲದವರು. ಕಳೆದ ಮೂರ್ನಾಲ್ಕು ದಿನದಿಂದ ತುಮಕೂರಿನಲ್ಲಿ ಈ ಗ್ಯಾಂಗ್​ ಬಿಡುಬಿಟ್ಟಿತ್ತು. ಹೈವೇ ರಸ್ತೆಯಲ್ಲಿರುವ ಜ್ಯುವೆಲರಿ ಶಾಪ್​ಗಳೇ ಇವರ ಟಾರ್ಗೆಟ್. ಅದೇ ರೀತಿ ಶಿರಾ ತಾಲೂಕಿನ ಕಳ್ಳಂಬೆಳ್ಳದ ಬೆಂಚೆಗೇಟ್ ಬಳಿಯ ಜಗತಾಂಭ ಅಂಗಡಿ ದೋಚಲು ಹೊಂಚು ಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ದರೋಡೆ: ಅಧಿಕಾರಿಗಳ ಸೋಗಿನಲ್ಲಿ ಬಂದು ಲಕ್ಷಾಂತರ ರೂ ಹೊತ್ತೊಯ್ದರು

ಪ್ಲ್ಯಾನ್​ನಂತೆ ಬೊಲೆರೋ ಕಾರ್​ನಲ್ಲಿ ಬಂದ ಖದೀಮರು ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಜ್ಯುವೆಲರಿ ಶಾಪ್​ಗೆ ನುಗ್ಗಿ ಖಾರದ ಪುಡಿ ಎರಚಿದ್ದಾರೆ. ಬಳಿಕ ಶಟರ್ ಕ್ಲೋಸ್ ಮಾಡಿ ಅಂಗಡಿಯಲ್ಲಿದ್ದ 100 ಗ್ರಾಂ ಚಿನ್ನ, ಒಂದುವರೆ ಕೆಜಿ ಬೆಳ್ಳಿ ಸೇರಿದಂತೆ 26 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಗ್ಯಾಂಗ್​ ಈ ವೇಳೆ ಅಂಗಡಿಯಲ್ಲಿದ್ದ ಮಾಲೀಕ ದಿನೇಶ್ ಹಾಗೂ ಅವರ ಅಜ್ಜಿ ಮೇಲೆ ಹಲ್ಲೆ ಮಾಡಿ ಪರಾರಿ ಆಗಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೊಂದು ದರೋಡೆ: ಫ್ಲಿಪ್‌ಕಾರ್ಟ್​​ನ ಲಕ್ಷಾಂತರ ರೂ ಮೌಲ್ಯದ ವಸ್ತುಗಳ ಕಳ್ಳತನ

ದೂರು ಬಂದ ಕೂಡಲೇ ಅಲರ್ಟ್ ಆದ ಪೊಲೀಸರು, ಬೊಲೆರೋ ಕಾರು ಮಾಹಿತಿ ಆಧರಿಸಿ ಶಿರಾ ಡಿವೈಎಸ್ಪಿ ಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಮೊದಲಿಗೆ ಟೋಲ್ ಬಳಿ ಕಾರು ಪತ್ತೆಯಾಗಿದೆ. ಬಳಿಕ ಆರೋಪಿಗಳ ಕಾರು ಚೇಸ್ ಮಾಡಿದ ಪೊಲೀಸರು ಕೆಲವೇ ಗಂಟೆಗಳಲ್ಲಿ ಹುಯುಲು ದೊರೆ ಅರಣ್ಯ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಜೊತೆಗೆ ಕದ್ದ ಸಂಪೂರ್ಣ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಧಿಕಾರ ಹಂಚಿಕೆ ಬಿಕ್ಕಟ್ಟು ನಡುವೆ ಕರ್ನಾಟಕ ಕಾಂಗ್ರೆಸ್​ನಲ್ಲಿ ಪತ್ರ ಸ್ಫೋಟ, ಅದರಲ್ಲೇನಿದೆ? – Kannada News | Congress First Time MLAs Letter To High command For cabinet reshuffle Amide Karnataka Power Tussle

ಬೆಂಗಳೂರು, (ಫೆಬ್ರವರಿ 23): ಕಾಂಗ್ರೆಸ್​​ನಲ್ಲಿ  (Congress) ನಾಯಕತ್ವ ಬದಲಾವಣೆ ಕಿಚ್ಚು ಕಾವೇರಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣಗಳ ನಡುವೆ ತಂತ್ರ, ರಣತಂತ್ರ ಜೋರಾಗೇ ನಡೆಯುತ್ತಿವೆ. ಇದರ ಮಧ್ಯೆ ದಲಿತ ಸಿಎಂ ಕೂಗು ಕೇಳಿಬಂದಿದ್ದು, ಮೊನ್ನೇ ಅಷ್ಟೇ ದಲಿತ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಗೊಂದಲ ಪರಿಹರಿಸಿ ಮುಂದಿನ ನಾಯಕತ್ವ ನಿರ್ಧರಿಸಿ ಎನ್ನುವ ಮನವಿ ಮಾಡಿದ್ದಾರೆ. ಈ ಅಧಿಕಾರ ಹಸ್ತಾಂತರದ ರಾಜಕೀಯ ಚಟುವಟಿಕೆಗಳ ನಡುವೆ ಸಂಪುಟ ಪುನಾರಚನೆ (cabinet reshuffle) ಕೂಗು ಕೇಳಿಬಂದಿದೆ. ಮೊದಲ ಬಾರಿಗೆ ಗೆದ್ದಿರುವ ಕಾಂಗ್ರೆಸ್​​ನ 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದು, ಸಂಪುಟ ವಿಸ್ತರಣೆ ಮಾಡಿ, ನಮಗೂ ಅವಕಾಶ ಕೊಡಿ ಎಂದು ಧ್ವನಿ ಎತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಕರ್ನಾಟಕ ಪ್ರವಾದಲ್ಲಿರುವಾಗಲೇ ಸಂಪುಟ ಪುನರ್‌ ರಚನೆ ದಾಳ ಉರುಳಿಸಿದ್ದು, ಭಾರೀ ಸಂಚಲನ ಮೂಡಿಸಿದೆ.

ಶಾಸಕರು ಬರೆದಿರುವ ಪತ್ರದ ಸಾರಾಂಶ

ಕಾಂಗ್ರೆಸ್​ನಿಂದ ಮೊದಲ ಬಾರಿ 38 ಶಾಸಕರು ಆಯ್ಕೆಯಾಗಿದ್ದಾರೆ. ಈ ಮೂಲಕ ಯುವಕರ ಅವಶ್ಯಕತೆ ಇದೆ ಎಂದು ಜನ ಹೇಳಿದ್ದಾರೆ. ಮೊದಲ ಬಾರಿ ಗೆದ್ದವರಿಗೆ ಸಚಿವ ಸ್ಥಾನ ನೀಡಿ ಜನಾದೇಶಕ್ಕೆ ಮನ್ನಣೆ ನೀಡಿ. ಯುವಕರಿಗೆ ಅವಕಾಶ ನೀಡುವುದು ಈ ಕ್ಷಣದ ಬೇಡಿಕೆಯಾಗಿದೆ. ಮೊದಲ ಬಾರಿ ಗೆದ್ದಿರುವ ಐವರು ಶಾಸಕರಿಗೆ ಸಚಿವ ಸ್ಥಾನ ನೀಡಿ. ಬೇರೆ ಸರ್ಕಾರದಲ್ಲಿ ಮೊದಲ ಬಾರಿ ಶಾಸಕರು ಸಿಎಂ ಆಗಿದ್ದಾರೆ. ಹೊಸಬರಿಗೆ ಅವಕಾಶ ನೀಡಿದ್ರೆ ಮುಂದಿನ ಚುನಾವಣೆ ಗೆಲ್ಲಲು ಸಹಕಾರಿಯಾಗಲಿದೆ. ಪಕ್ಷ ನಿಷ್ಠೆ, ಸೈದ್ದಾಂತಿಕವಾಗಿ ಗಟ್ಟಿಯಾಗಿರುವವರಿಗೆ ಅವಕಾಶ ನೀಡಿ ಎಂದು ಶಾಸಕರು ಹೈಕಮಾಂಡ್​​ಗೆ ಪತ್ರ ಬರೆದಿದ್ದಾರೆ.

ಇದನ್ನು ಓದಿ: ಅಧಿಕಾರ ಹಂಚಿಕೆ ಬಿಕ್ಕಟ್ಟು: ಕಾಂಗ್ರೆಸ್​ನಲ್ಲಿ ರೂಪುಗೊಳ್ಳುತ್ತಿದೆಯಾ ಮತ್ತೊಂದು ಪವರ್ ಸೆಂಟರ್!

ಹೈಕಮಾಂಡ್​ ಗೆ ಪತ್ರ ಬರೆದ ಕೈ ಶಾಸಕರು


ಶಾಸಕರಾದ ಎ.ಎಸ್.ಪೊನ್ನಣ್ಣ, ಭೀಮಸೇನ ಚಿಮ್ಮನಕಟ್ಟಿ, ಪ್ರದೀಪ್​ ಈಶ್ವರ್, ಇಕ್ಬಾಲ್​ ಹುಸೇನ್, ಎನ್​.ಟಿ.ಶ್ರೀನಿವಾಸ, ಅಶೋಕ್ ಕುಮಾರ್ ರೈ, ಎನ್​.ಶ್ರೀನಿವಾಸ, ದರ್ಶನ್ ಧ್ರುವನಾರಾಯಣ, ಶಿವಗಂಗಾ ಬಸವರಾಜು, ವಿಶ್ವಾಸ್ ವೈದ್ಯ, ನಾರಾ ಭರತ್ ರೆಡ್ಡಿ, ಪ್ರಕಾಶ್ ಕೋಳಿವಾಡ, ಕೆ.ಎಸ್.ಆನಂದ, ಮಂಥರ್ ಗೌಡ, ಚನ್ನಾರೆಡ್ಡಿ ಪಾಟೀಲ್, ದೇವೇಂದ್ರಪ್ಪ. ಡಿ.ರವಿಶಂಕರ್, ನಯನಾ ಮೋಟಮ್ಮ, ರಾಜಾವೇಣುಗೋಪಾಲ ನಾಯಕ, ಮಹೇಂದ್ರ ತಮ್ಮಣ್ಣನವರ್, ಎ.ಸಿ.ಶ್ರೀನಿವಾಸ, ಅಶೋಕ್ ಮನಗೂಳಿ, ಪಿ.ರವಿಕುಮಾರ್, ಬಾಬಾಸಾಹೇಬ್ ಪಾಟೀಲ್ ಸೇರಿ 31 ಶಾಸಕರು ಪತ್ರ ಬರೆದಿದ್ದಾರೆ.

ಸಂಪುಟ ಪುನರ್‌ ರಚನೆಯ ದಾಳ

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಮತ್ತು ಗೊಂದಲಗಳು ಜೋರಾಗಿರುವ ಸಮಯದಲ್ಲೇ ದಲಿತ ಸಿಎಂ ಕೂಗು ಕೇಳಿಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‘ದಲಿತ ಸಿಎಂ ಕಾಂಗ್ರೆಸ್‌ನಿಂದ ಮಾತ್ರ’ ಎಂಬ ಸಂದೇಶ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಡಿಕೆ ಶಿವಕುಮಾರ್, ಸಿಎಂ ಪಟ್ಟದ ಪಟ್ಟು ಜೋರಾಗಿದ್ದರಿಂದ ಸಿದ್ದರಾಮಯ್ಯ ದಲಿತ ಸಿಎಂ ದಾಳ ಉರುಳಿಸಿದ್ರಾ ಎನ್ನುವ ಚರ್ಚೆಗಳು ಶುರುವಾಗಿವೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಈ ಎಲ್ಲಾ ಬೆಳವಣಿಗೆಗಳ ನಡುವೆ ಫಸ್ಟ್​​ ಟೈಮ್ ಶಾಸಕರ ಪತ್ರ ಕಾಂಗ್ರೆಸ್​​ನಲ್ಲಿ ಹಲ್ ಚಲ್ ಎಬ್ಬಿಸಿದ್ದು, ಇದು ಯಾವ ಸ್ವರೂಪ ಪಡೆದುಕೊಳ್ಳಲಿದೆ ಎನ್ನುವುದೇ ಕುತೂಹಲ ಮೂಡಿಸಿದೆ.

ಒಟ್ಟಿನಲ್ಲಿ ಕಾಂಗ್ರೆಸ್ ಕೋಟೆಯಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಕಾವೇರಿದ ಮಧ್ಯೆ ದಲಿತ ಸಿಎಂ, ಸಂಪುಟ ಪುನಾರಚನೆ ಕೂಗು ಜೋರಾಗಿದ್ದು, ಕರ್ನಾಟಕ ಕಾಂಗ್ರೆಸ್​​ನಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಹೀಗಾಗಿ ಈ ಎಲ್ಲಾ ವಿದ್ಯಮಾನಗಳು ಯಾವ ಹಂತಕ್ಕೆ ಹೋಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಕಾರ್ ವಾಶ್ ಮಾಡಿ ಜೀವನ ನಡೆಸುವ ವೃದ್ಧೆಗೆ ಸರ್ಪ್ರೈಸ್ ಉಡುಗೊರೆ ನೀಡಿದ ವ್ಯಕ್ತಿ – Kannada News | Man makes grandmother happy by giving her a gift while she is washing the car

ಮುಂಬೈ, ಫೆಬ್ರವರಿ 23: ಸ್ವಾಭಿಮಾನದ ಬದುಕೇ ಹಾಗೆ, ಎಷ್ಟೇ ಕಷ್ಟ ಆದ್ರೂ ದುಡಿಮೆ ತಿಂತಾರೆ ಹೊರತು ಯಾರ ಮುಂದೆಯೂ ಕೈ ಚಾಚಲ್ಲ. ಅದರಲ್ಲೂ ಇಳಿ ವಯಸ್ಸಿನ ವ್ಯಕ್ತಿಗಳು ಕಷ್ಟ ಪಟ್ಟು ದುಡಿಯುವುದನ್ನು ನೋಡಿದ್ರೆ ಕಣ್ಣಲ್ಲಿ ನೀರು ಬರುತ್ತದೆ. ಇದೀಗ ಇಲ್ಲೊಬ್ಬ ವೃದ್ಧೆಯೂ (elderly woman) ಮುಂಬೈ ರಸ್ತೆಯಲ್ಲಿ ಧೂಳು ಹಿಡಿದ ಕಾರುಗಳನ್ನು ತೊಳೆದು ಮೂರು ಹೊತ್ತಿನ ಕೂಳನ್ನು ಸಂಪಾದಿಸಿಕೊಳ್ಳುತ್ತಿದ್ದಾರೆ. ಈ ಅಜ್ಜಿಗೆ ವ್ಯಕ್ತಿಯೊಬ್ಬರು ಸರ್ಪ್ರೈಸ್ ಉಡುಗೊರೆ ನೋಡಿ ಖುಷಿ ಪಡಿಸುವ ದೃಶ್ಯವು ನೆಟ್ಟಿಗರ ಹೃದಯ ಗೆದ್ದಿದೆ.

ಹುಸೇನ್ ಮನ್ಸೂರಿ (Hussain Mansuri) ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ವೃದ್ಧೆಯೊಬ್ಬರು ಮುಂಬೈ ರಸ್ತೆಯಲ್ಲಿ ಧೂಳು ಹಿಡಿದು ನಿಂತಿರುವ ಕಾರನ್ನು ವಾಶ್ ಮಾಡುತ್ತಿರುವುದನ್ನು ಕಾಣಬಹುದು. ಇದೇ ವೇಳೆ ಅಜ್ಜಿಯ ಕಾಯಕವನ್ನು ಗಮನಿಸಿದ ಹುಸೇನ್ ಮನ್ಸೂರಿ ಎಂಬ ವ್ಯಕ್ತಿ ತಮ್ಮ ಕಾರನ್ನು ಗಲೀಜು ಮಾಡಿಕೊಂಡು ಅಜ್ಜಿಯ ಮುಂದೆ ತಂದು ನಿಂತಿದ್ದಾರೆ. ಅಜ್ಜಿಯ ಬಳಿ ಕಾರು ಸ್ವಚ್ಛಗೊಳಿಸಲು ಹೇಳಿ, ಕೊನೆಗೆ ವೃದ್ಧೆಯ ಕೈಗೆ ಹಣವನ್ನು ಇಟ್ಟಿದ್ದಾರೆ. ಅದಲ್ಲದೇ ವೃದ್ಧೆಗೆ ಸೀರೆ ಸೇರಿದಂತೆ ಉಡುಗೊರೆ ನೀಡಿ ಖುಷಿ ಪಡಿಸಿದ್ದಾರೆ. ಅಪರಿಚಿತ ವ್ಯಕ್ತಿಯೊಬ್ಬರು ಉಡುಗೊರೆ ನೀಡಿದ್ದನ್ನು ನೋಡಿ ಅಜ್ಜಿ ಭಾವುಕರಾಗಿದ್ದಾರೆ. ಇದೇ ವೇಳೆ ವ್ಯಕ್ತಿಯೂ ಅಪ್ಪಿಕೊಂಡು ಸಮಾಧಾನ ಮಾಡಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ರೈಲಿನಲ್ಲಿ ಬ್ರೇಸ್ಲೆಟ್‌ ಮಾರಿ ಸ್ವಾಭಿಮಾನದ ಬದುಕು ಕಟ್ಟಿಕೊಂಡ ಅಜ್ಜಿ, ವೈರಲ್ ಆಯ್ತು ದೃಶ್ಯ

ಈ ವಿಡಿಯೋ ಎರಡು ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಕಣ್ಣಲ್ಲಿ ನೀರು ಬಂತು ಎಂದರೆ, ಇನ್ನೊಬ್ಬರು, ಇಳಿ ವಯಸ್ಸಿನಲ್ಲಿ ದುಡಿಯುವವರು ಯುವಕರಿಗೆ ಮಾದರಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಒಳ್ಳೆಯ ಮನಸ್ಸಿನ ವ್ಯಕ್ತಿಗಳು ಕಾಣ ಸಿಗುವುದೇ ಅಪರೂಪ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:47 pm, Mon, 23 February 26

Source link

ಅಡ್ಡಪಲ್ಲಕ್ಕಿ ಉತ್ಸವ ವೇಳೆ ಗುಂಡು ಹಾರಿಸಿದ ಬಸನಗೌಡ ಪಾಟೀಲ್ ಅರೆಸ್ಟ್: ಶೋ ಕೊಡಲು ಹೋಗಿ ಲಾಕ್ – Kannada News | Koppal Police Arrests basanagouda patil for air firing during addapallakki procession in yelburga

ಕೊಪ್ಪಳ, (ಫೆಬ್ರವರಿ 23): ಜಿಲ್ಲೆಯ ಯಲಬುರ್ಗಾದಲ್ಲಿ  (Yalburga) ನಡೆದ ಅಡ್ಡಪಲ್ಲಕ್ಕಿ ಮೆರವಣಿಗೆಯ ವೇಳೆ, ಬಸನಗೌಡ ಪಾಟೀಲ್ ಗಾಳಿಯಲ್ಲಿ ಗುಂಡು (Air Fire) ಹಾರಿಸಿ ಸಂಭ್ರಮಿಸಿದ್ದರು. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ  (Social Media) ವೈರಲ್ ಆದ ಬಳಿಕ ಈ ಸಂಬಂಧ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದ್ದು, ಇದೀಗ ಸಿಂದಗಿ ಮೂಲದ ಬಸನಗೌಡ ಪಾಟೀಲ್ ಎನ್ನುವಾತನನ್ನು ಬಂಧಿಸಲಾಗಿದೆ. ಜೊತೆಗೆ ಪೊಲೀಸರು, ಪಿಸ್ತೂಲು ಹಾಗೂ ಜೀವಂತ ಬುಲೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೊಪ್ಪಳ (Koppal) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ರಾಮ್ ಎಲ್ ಅರಸಿದ್ದಿ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೊಪ್ಪಳ ಎಸ್ಪಿ ಡಾ ರಾಮ್ ಎಲ್ ಅರಸಿದ್ದಿ, ಕೊಪ್ಪಳದ‌ ಯಲಬುರ್ಗಾ ಪಟ್ಟಣದಲ್ಲಿ ಏರಫೈರ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡು ಹಾರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸೋಶಿಯಲ್‌ ಮೀಡಿಯಾ ಟೀಂ ಮಾನಿಟರಿಂಗ್ ಮಾಡುವ ವೇಳೆ ಏರಫೈರ್ ಮಾಡಿರುವ ವಿಷಯ ಗೊತ್ತಾಯಿತು.ಜನೆವರಿ 21 ರಂದು ಅಡ್ಡಪಲ್ಲಕ್ಕಿ ವೇಳೆ ಏರಪೈರ್ ಮಾಡಿರುವ ವಿಷಯ ವಾಟ್ಸಪ್ ಮೂಲಕ ಗೋತ್ತಾಯಿತು. ಈ ಸಂಬಂಧ ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದ್ದು, ಸಿಂದಗಿ ಮೂಲದ ಬಸನಗೌಡ ಪಾಟೀಲ್ ನನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ತುಂಗಾ ನದಿ ತೀರದಲ್ಲಿ ವಿದೇಶಿಗರ ಪಾರ್ಟಿ! ರೆಸಾರ್ಟ್ ಮಾಲೀಕರ ಮೇಲೆ ಬಿತ್ತು ಕೇಸ್

ವೆಪನ್ ಲೈಸನ್ಸ್ ವಿಜಯಪುರ ಜಿಲ್ಲೆಗೆ ಮಾತ್ರ ಸಮೀತವಾಗಿತ್ತು. ಎರಡು ರೌಂಡ್ ಏರಫೈರ್ ಮಾಡಿದ್ದಕ್ಕೆ ವೆಪನ್ ಸೀಜ್ ಮಾಡಲಾಗಿದೆ. ಸೋಶಿಯಲ್ ಮೋಡಿಯಾವನ್ನು ನಾವು ಸತತವಾಗಿ ಮಾನಿಟರಿಂಗ್ ಮಾಡುತ್ತಿರುತ್ತೇವೆ. ವಿಲ್ಹಿಂಗ್, ಅಕ್ರಮ‌ ಚಟುವಟಿಕೆಗಳ ಮೇಲೆ ಮಾನಿಟರಿಂಗ್ ಮಾಡುತ್ತಿರುತ್ತೇವೆ. ಸೋಷಿಯಲ್ ಮೀಡಿಯಾದಲ್ಲಿ ಈ ರೀತಿ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.

ಘಟನೆ ವಿವರ

ಕಳೆದ ಜನವರಿ 28 ರಂದು ಯಲಬುರ್ಗಾ ಪಟ್ಟಣದ ಪ್ರಸಿದ್ಧ ಶ್ರೀಧರ ಮುರಡಿ ಮಠದಿಂದ ಅಡ್ಡಪಲ್ಲಕ್ಕಿ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಭ್ರಮದ ಮೆರವಣಿಗೆಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ಮೂಲದ ಬಸನಗೌಡ ಪಾಟೀಲ್ ಎಂಬುವವರು ಪಾಲ್ಗೊಂಡಿದ್ದರು. ಮೆರವಣಿಗೆ ಸಾಗುತ್ತಿದ್ದಾಗ ಭಕ್ತಿಯ ಉತ್ತುಂಗದಲ್ಲಿ ಅಥವಾ ತನ್ನ ಗತ್ತು ಪ್ರದರ್ಶಿಸುವ ಭರದಲ್ಲಿ ಬಸನಗೌಡ, ತನ್ನ ಬಳಿಯಿದ್ದ ಪಿಸ್ತೂಲನ್ನು ತೆಗೆದು ಸಾರ್ವಜನಿಕರ ಸಮ್ಮುಖದಲ್ಲೇ ಗಾಳಿಯಲ್ಲಿ ಗುಂಡು ಹಾರಿಸಿದ್ದರು.

ಇನ್ನು ಬಸನಗೌಡ ಗುಂಡು ಹಾರಿಸುತ್ತಿದ್ದ ದೃಶ್ಯವನ್ನು ಅಲ್ಲಿದ್ದವರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಬಳಿಕ ವಿಡಿಯೋ ಸಾಮಾಜಿಕ ಜಾಲತಣಗಳಲ್ಲಿ ವರೈಲ್ ಅಗಿತ್ತು.ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರಗಳ ಬಳಕೆ ಮತ್ತು ಗಾಳಿಯಲ್ಲಿ ಗುಂಡು ಹಾರಿಸುವುದು ಕಾನೂನುಬಾಹಿರವಾಗಿರುವುದರಿಂದ, ಕೊಪ್ಪಳ ಜಿಲ್ಲಾ ಪೊಲೀಸರ ‘ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್’ ಈ ವಿಡಿಯೋವನ್ನು ಪತ್ತೆಹಚ್ಚಿ ತನಿಖೆಗೆ ಆದೇಶಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link