All posts by nagaraj11081993

ಹುಬ್ಬಳ್ಳಿ: ರೈತರಿಗೆ ಭೂ ಪರಿಹಾರ ನೀಡದ ಹಿನ್ನೆಲೆ ರೈಲ್ವೆ ಇಲಾಖೆ ಕಚೇರಿ ಜಪ್ತಿ – Kannada News | Railway Department’s Deputy Chief Engineer’s Office Seized for Failing to Pay Farmers’ Compensation

ರೈಲ್ವೆ ಇಲಾಖೆ ಕಚೇರಿ ಜಪ್ತಿImage Credit source: Tv9 Kannada

ಹುಬ್ಬಳ್ಳಿ, ಫೆಬ್ರವರಿ 23: ರೈತರಿಗೆ ಭೂ ಪರಿಹಾರ ನೀಡದ ಹಿನ್ನೆಲೆ ನ್ಯಾಯಾಲಯದ ಆದೇಶದ ಅನ್ವಯ ಹುಬ್ಬಳ್ಳಿ ನಗರದಲ್ಲಿರುವ ರೈಲ್ವೆ ಇಲಾಖೆಯ ಡೆಪ್ಯೂಟಿ ಚೀಫ್​ ಎಂಜಿನಿಯರ್ ಕಚೇರಿಯಲ್ಲಿನ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ನೈರುತ್ಯ ರೈಲ್ವೆ ವಿಭಾಗಕ್ಕೆ ಸೇರಿದ ಕಚೇರಿಯಲ್ಲಿನ ಟೇಬಲ್, ಕಂಪ್ಯೂಟರ್ ಸೇರಿ ಅನೇಕ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ. 2017ರಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ರೈಲು ನಿಲ್ದಾಣಕ್ಕೆಂದು ಇಲಾಖೆ 16 ರೈತರಿಂದ ‌ 12.5 ಎಕರೆ ಭೂಮಿಯನ್ನು ನೈರುತ್ವ ರೈಲ್ವೆ ಸ್ವಾಧೀನಪಡಿಸಿಕೊಂಡಿತ್ತು. ಸ್ವಾಧಿನ ಪಡಿಸಿಕೊಳ್ಳಲಾದ ಜಾಗ ಕೃಷಿ ಜಮೀನಾಗಿದ್ದ ಹಿನ್ನೆಲೆ ಒಂದು ಎಕರೆಗೆ 18 ಲಕ್ಷ ಪರಿಹಾರ ನಿಗದಿ ಮಾಡಿ ನೀಡಲಾಗಿತ್ತು. ಆದರೆ ನೀಡಿರುವ ಪರಿಹಾರ ಕಡಿಮೆ ಆಗಿದೆ ಎಂದು ರೈತರು ಕೋರ್ಟ್​​ ಮೊರೆ ಹೋಗಿದ್ದರು.

ಭೂಸ್ವಾಧೀನ ಸಂಬಂಧ ವಿಚಾರಣೆ ನಡೆಸಿದ್ದ ಕೊಪ್ಪಳ ಜಿಲ್ಲಾ ನ್ಯಾಯಾಲಯ ಪ್ರತಿ ಚದರ್ ಅಡಿಗೆ 800 ರೂಪಾಯಿ ನಿಗದಿ ಮಾಡಿ ಮಾರ್ಚ್​​ 31, 2023ರಲ್ಲಿ ಆದೇಶ ಮಾಡಿತ್ತು. ನಂತರ ಪ್ರಕರಣವನ್ನು ಹುಬ್ಬಳ್ಳಿ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಈ ನಡುವೆ ಕೊಪ್ಪಳ ಜಿಲ್ಲಾ ನ್ಯಾಯಲಯದ ಈ ಆದೇಶದ ವಿರುದ್ಧ ಧಾರವಾಡ ಹೈಕೋರ್ಟ್ ಪೀಠಕ್ಕೆ ನೈರುತ್ಯ ರೈಲ್ವೆ ಇಲಾಖೆ ಮೇಲ್ಮನವಿ ಸಲ್ಲಿಸಿದ್ದು, ಶೇಕಡಾ 50ರಷ್ಟು ಹಣ ಪಾವತಿ ಮಾಡುವಂತೆ ನ್ಯಾಯಾಲಯ ಮಧ್ಯಂತರ ಆದೇಶ ನೀಡಿತ್ತು. ಆದರೆ ರೈಲ್ವೆ ಇಲಾಖೆ ಈ ಆದೇಶವನ್ನು ಕೂಡ ಪಾಲನೆ ಮಾಡಿರಲಿಲ್ಲ. ಹೀಗಾಗಿ ಹುಬ್ಬಳ್ಳಿ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಆದೇಶದ ಹಿನ್ನೆಲೆ ಜಪ್ತಿ ಕಾರ್ಯ ನಡೆದಿದೆ. ಒಟ್ಟು 9 ಪ್ರಕರಣಗಳಲ್ಲಿ 90 ಕೋಟಿ ರೂಪಾಯಿ ಹಣವನ್ನು ಇಲಾಖೆ ನೀಡಬೇಕಿದ್ದರೂ ಕೇವಲ 7 ಕೋಟಿಯನ್ನಷ್ಟೇ ಜಮೆ ಮಾಡಿತ್ತು ಎನ್ನಲಾಗಿದೆ.

ಇದನ್ನೂ ಓದಿ: 60 ಸಾವಿರದ ಕ್ಯಾಮರಾ ಆರ್ಡರ್​​ ಮಾಡಿದ್ದ ಉದ್ಯಮಿಗೆ ಶಾಕ್​​; ಬಾಕ್ಸ್​​ನಲ್ಲಿ ಬಂದಿದ್ದು ವಾಷಿಂಗ್​ ಪೌಡರ್​!

ಆಲಮಟ್ಟಿ ಕೃಷ್ಣಾ ಮೇಲ್ದಂಡೆ ಯೋಜನೆ (UKP) ಕಾಲುವೆ ನಿರ್ಮಾಣಕ್ಕೆ ಜಮೀನು ನೀಡಿದ್ದ ರೈತರಿಗೆ ಸೂಕ್ತ ಪರಿಹಾರ ನೀಡದ ಹಿನ್ನೆಲೆಯಲ್ಲಿ, ವಿಜಯಪುರದ 1ನೇ ಹೆಚ್ಚುವರಿ ನ್ಯಾಯಾಲಯದ ಆದೇಶದಂತೆ ಕೃಷ್ಣಾ ಭಾಗ್ಯ ಜಲ ನಿಗಮದ (KBJNL) ವ್ಯವಸ್ಥಾಪಕ ನಿರ್ದೇಶಕರ (MD) ಕಚೇರಿಯನ್ನು ಮೊನ್ನೆ ಮೊನ್ನೆಯಷ್ಟೇ ಜಪ್ತಿ ಮಾಡಲಾಗಿತ್ತು. ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ರೈತ ಮಹಾದೇವ ಲಿಗಾಡೆ ಹಾಗೂ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ಅಕ್ರುಸಾಬ ಮುಲ್ಲಾ ಸೇರಿದಂತೆ ಹಲವಾರು ರೈತರ ಜಮೀನನ್ನು ಕಾಲುವೆ ನಿರ್ಮಾಣಕ್ಕಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಆದರೆ, ವರ್ಷಗಳು ಕಳೆದರೂ ಸರ್ಕಾರ ಹಾಗೂ ಅಧಿಕಾರಿಗಳು ಸೂಕ್ತ ಪರಿಹಾರ ನೀಡಿರಲಿಲ್ಲ. ಈ ಘಟನೆ ಬೆನ್ನಲ್ಲೇ ಮತ್ತೊಂದು ಅದೇ ಮಾದರಿಯ ಪ್ರಕರಣ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ಸರ್ಕಾರದಿಂದ ಹೊಸ ಸಲಹೆ – Kannada News | Leave Iran by all available means India issues fresh advisory for indian Citizens amid US strike fears

ನವದೆಹಲಿ, ಫೆಬ್ರವರಿ 23: ಭಾರತ ಸರ್ಕಾರ ಮತ್ತೊಮ್ಮೆ ಇರಾನ್‌ನಲ್ಲಿರುವ ತನ್ನ ನಾಗರಿಕರಿಗೆ ಸಾಧ್ಯವಾದಷ್ಟು ಬೇಗ ದೇಶ ಬಿಟ್ಟು ಹೊರಡಿ ಎಂದು ಸಲಹೆ ನೀಡಿದೆ. ಫೆಬ್ರವರಿ 23ರಂದು ಬಿಡುಗಡೆ ಮಾಡಿದ ಹೊಸ ಸಲಹೆಯಲ್ಲಿ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾರತೀಯರು ಮನೆಗೆ ಮರಳಲು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಯಾವ ಸಾರಿಗೆಯನ್ನು ಬೇಕಾದರೂ ಬಳಸುವಂತೆ ಮನವಿ ಮಾಡಿದೆ. ಇರಾನ್​​ನಲ್ಲಿ (Iran) ಉದ್ವಿಗ್ನತೆ ಹೆಚ್ಚುತ್ತಿರುವುದರಿಂದ ಸಂಘರ್ಷದ ಭಯ ಹೆಚ್ಚುತ್ತಿರುವ ಕಾರಣದಿಂದ ಅಮೆರಿಕದ ಈ ಎಚ್ಚರಿಕೆ ಬಂದಿದೆ.

2026ರ ಜನವರಿ 5ರಂದು ಭಾರತ ಸರ್ಕಾರ ಹೊರಡಿಸಿದ ಸಲಹೆಯ ಮುಂದುವರಿಕೆಯಾಗಿ ಮತ್ತು ಇರಾನ್‌ನಲ್ಲಿನ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಸ್ತುತ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳು (ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು) ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವಿಧಾನಗಳ ಮೂಲಕ ಇರಾನ್‌ನಿಂದ ಹೊರಹೋಗಲು ಸೂಚಿಸಲಾಗಿದೆ.

“ಎಲ್ಲಾ ಭಾರತೀಯ ನಾಗರಿಕರು ಮತ್ತು ಪಿಐಒಗಳು ಸರಿಯಾದ ಎಚ್ಚರಿಕೆ ವಹಿಸಬೇಕು. ಪ್ರತಿಭಟನೆಗಳು ಅಥವಾ ಪ್ರದರ್ಶನಗಳ ಪ್ರದೇಶಗಳನ್ನು ತಪ್ಪಿಸಬೇಕು, ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಬೇಕು ಮತ್ತು ಯಾವುದೇ ಬೆಳವಣಿಗೆಗಳಿಗಾಗಿ ಸ್ಥಳೀಯ ಮಾಧ್ಯಮಗಳನ್ನು ಗಮನಿಸುತ್ತಿರಬೇಕು” ಎಂದು ಸಲಹೆಯಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ: ಅನಿವಾರ್ಯವಲ್ಲದಿದ್ದರೆ ಇರಾನ್​​ಗೆ ಹೋಗಬೇಡಿ; ಸರ್ಕಾರದಿಂದ ಭಾರತೀಯರಿಗೆ ಸೂಚನೆ

ವಿದ್ಯಾರ್ಥಿಗಳು, ಯಾತ್ರಿಕರು, ಉದ್ಯಮಿಗಳು ಮತ್ತು ಪ್ರವಾಸಿಗರು ಸೇರಿದಂತೆ ಇದೀಗ ಇರಾನ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳಿಗೆ ಭಾರತ ಸರ್ಕಾರದ ಈ ಸಲಹೆ ಅನ್ವಯಿಸುತ್ತದೆ. ಇರಾನ್​​ನಲ್ಲಿರುವ ಭಾರತೀಯರು ಜಾಗರೂಕರಾಗಿರಲು, ಪ್ರತಿಭಟನಾ ಪ್ರದೇಶಗಳ ಕಡೆ ಹೋಗುವುದನ್ನು ತಪ್ಪಿಸಲು ಮತ್ತು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿಕಟ ಸಂಪರ್ಕದಲ್ಲಿರಲು ಜನರಿಗೆ ಸೂಚಿಸಲಾಗಿದೆ.

ಭಾರತೀಯ ನಾಗರಿಕರು ತಮ್ಮ ಪಾಸ್‌ಪೋರ್ಟ್‌ಗಳು ಮತ್ತು ಇತರ ಪ್ರಮುಖ ಪ್ರಯಾಣದ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಲು ತಿಳಿಸಲಾಗಿದೆ. ಇನ್ನೂ ರಾಯಭಾರ ಕಚೇರಿಯಲ್ಲಿ ನೋಂದಾಯಿಸದವರು ಅಧಿಕೃತ ಆನ್‌ಲೈನ್ ಪೋರ್ಟಲ್ ಮೂಲಕ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಇದರ ಜೊತೆಗೆ ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಆದಷ್ಟು ಬೇಗ ದೇಶ ಬಿಟ್ಟು ಹೊರಡಿ; ಇರಾನ್​​ನ ಭಾರತೀಯ ಪ್ರಜೆಗಳಿಗೆ ಸೂಚನೆ, ಸಹಾಯವಾಣಿ ಸಂಖ್ಯೆ ಬಿಡುಗಡೆ

ಇರಾನ್ ಒಳಗೆ ಇಂಟರ್ನೆಟ್ ಸಮಸ್ಯೆಗಳಿದ್ದಲ್ಲಿ, ಭಾರತದ ಕುಟುಂಬಗಳು ಅವರ ಪರವಾಗಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ತಕ್ಷಣದ ಸಹಾಯಕ್ಕಾಗಿ ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಸಹ ಹಂಚಿಕೊಳ್ಳಲಾಗಿದೆ. “ಭಾರತೀಯ ರಾಯಭಾರ ಕಚೇರಿಯ ತುರ್ತು ಸಂಪರ್ಕ ಸಹಾಯವಾಣಿಗಳನ್ನು ಕೆಳಗೆ ನೀಡಲಾಗಿದೆ: ಮೊಬೈಲ್ ಸಂಖ್ಯೆಗಳು: +989128109115; +989128109109; +989128109102; +989932179359. ಇಮೇಲ್: cons.tehran@mea.gov.in” ಎಂದು ಸರ್ಕಾರ ಹೇಳಿದೆ.

ಇರಾನ್‌ನ ಕೆಲವು ಭಾಗಗಳಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಗಳು ಮತ್ತು ಪರಮಾಣು ಮಾತುಕತೆಗಳ ಕುರಿತು ಇರಾನ್ ಮತ್ತು ಅಮೆರಿಕದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಕಾರಣದಿಂದ ಈ ಸಲಹೆ ನೀಡಲಾಗಿದೆ. ಈ ವಾರದ ಕೊನೆಯಲ್ಲಿ ಜಿನೀವಾದಲ್ಲಿ ಮತ್ತೊಂದು ಸುತ್ತಿನ ಚರ್ಚೆಗಳು ನಡೆಯುವ ನಿರೀಕ್ಷೆಯಿದೆ. ಆದರೆ, ಒಪ್ಪಂದಕ್ಕೆ ಬರದಿದ್ದರೆ ಗಂಭೀರ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು ಯುದ್ಧದ ಭೀತಿ ಸೃಷ್ಟಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಧುರಂಧರ್ 2 Vs ಟಾಕ್ಸಿಕ್: 10 ಕೋಟಿ ಮಂದಿ ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ – Kannada News | Toxic and Dhurandhar 2 likely to witness combined total 10 Cr footfalls

20226ರ ಎರಡು ಬಹುನಿರೀಕ್ಷಿತ ಸಿನಿಮಾಗಳು ಒಂದೇ ದಿನ ಬಿಡುಗಡೆ ಆಗುತ್ತಿರುವುದರ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾಗಳು ಮಾರ್ಚ್ 19ರಂದು ರಿಲೀಸ್ ಆಗಲಿವೆ. ಈ ಸಿನಿಮಾಗಳ ಕ್ಲ್ಯಾಶ್ ಬಗ್ಗೆ ಬಾಕ್ಸ್ ಆಫೀಸ್ ಪಂಡಿತರು ಹಲವು ರೀತಿ ಅಭಿಪ್ರಾಯಗಳನ್ನು ನೀಡುತ್ತಿದ್ದಾರೆ. ಇಂಥ ಕ್ಲ್ಯಾಶ್ ಉತ್ತಮವಲ್ಲ ಎಂದು ಬಹುತೇಕರು ಹೇಳುತ್ತಿದ್ದಾರೆ. ಅಚ್ಚರಿ ಎಂದರೆ, ‘ಧುರಂಧರ್ 2’ ಮತ್ತು ‘ಟಾಕ್ಸಿಕ್’ (Toxic) ಒಟ್ಟು ಸೇರಿ ಬರೋಬ್ಬರಿ 10 ಕೋಟಿ ಪ್ರೇಕ್ಷಕರನ್ನು ಸೆಳೆದುಕೊಳ್ಳಲಿವೆ ಎಂದು ಅಂದಾಜಿಸಲಾಗಿದೆ.

ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಈ ಚಿತ್ರದ ಟೀಸರ್ ಧೂಳೆಬ್ಬಿಸಿದೆ. ‘ಕೆಜಿಎಫ್: ಚಾಪ್ಟರ್ 2’ ಗೆಲುವಿನ ಬಳಿಕ ಯಶ್ ನಟಿಸಿದ ಸಿನಿಮಾ ಎಂಬ ಕಾರಣಕ್ಕೆ ‘ಟಾಕ್ಸಿಕ್’ ಸಿಕ್ಕಾಪಟ್ಟೆ ಹೈಪ್ ಸೃಷ್ಟಿ ಮಾಡಿದೆ. ಈ ಸಿನಿಮಾಗೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡಿದ್ದಾರೆ. ರುಕ್ಮಿಣಿ ವಸಂತ್, ನಯನತಾರಾ ಸೇರಿದಂತೆ ಅನೇಕರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

‘ಧುರಂಧರ್ 2’ ಸಿನಿಮಾ ಕೂಡ ಸಣ್ಣದೇನಲ್ಲ. ರಣವೀರ್ ಸಿಂಗ್, ಅರ್ಜುನ್ ರಾಮ್​ಪಾಲ್, ಸಾರಾ ಅರ್ಜುನ್, ಸಂಜಯ್ ದತ್ ಮುಂತಾದವರು ನಟಿಸಿರುವ ಈ ಸಿನಿಮಾಗೆ ಆದಿತ್ಯ ಧಾರ್ ಅವರು ನಿರ್ದೇಶನ ಮಾಡಿದ್ದಾರೆ. ‘ಧುರಂಧರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿರುವುದರಿಂದ ಸೀಕ್ವೆಲ್ ಮೇಲೆ ನಿರೀಕ್ಷೆ ಜಾಸ್ತಿ ಇದೆ. ಮಾರ್ಚ್ 19ರಂದು ಈ ಸಿನಿಮಾ ಕೂಡ ಭರ್ಜರಿ ಓಪನಿಂಗ್ ಪಡೆದುಕೊಳ್ಳಲಿದೆ.

ಈ ಎರಡು ಸಿನಿಮಾಗಳ ಪೈಕಿ ಒಂದು ಚಿತ್ರದ ರಿಲೀಸ್ ದಿನಾಂಕ ಮುಂದೂಡಿಕೆ ಆದರೆ ದೊಡ್ಡ ಕ್ಲ್ಯಾಶ್ ತಪ್ಪುತ್ತದೆ. ಎರಡೂ ಸಿನಿಮಾಗಳು ಬೇರೆ ಬೇರೆ ದಿನಾಂಕಗಳಲ್ಲಿ ಬಿಡುಗಡೆ ಆದರೆ ತಲಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಸಾಮರ್ಥ್ಯ ಹೊಂದಿವೆ. ಆದರೆ ಎರಡೂ ಚಿತ್ರತಂಡಗಳು ಹಠಕ್ಕೆ ಬಿದ್ದು ಒಂದೇ ದಿನ ರಿಲೀಸ್ ಆಗುತ್ತಿವೆ.

ಇದನ್ನೂ ಓದಿ: ರವಿ ಬಸ್ರೂರು ಮಾತ್ರವಲ್ಲ: ಟಾಕ್ಸಿಕ್ ಚಿತ್ರಕ್ಕೆ 5 ಸಂಗೀತ ನಿರ್ದೇಶಕರು; ಜೀ ಮ್ಯೂಸಿಕ್ ತೆಕ್ಕೆಗೆ ಆಡಿಯೋ ಹಕ್ಕು

‘ಟಾಕ್ಸಿಕ್’ ಚಿತ್ರತಂಡದವರು ಮೊದಲು ರಿಲೀಸ್ ದಿನಾಂಕ ಅನೌನ್ಸ್ ಮಾಡಿದ್ದರು. ಮಾರ್ಚ್ 19ರಂದು ಬಿಡುಗಡೆ ಎಂದು ಖಚಿತಪಡಿಸಿದ್ದರು. ಆದರೆ ‘ಧುರಂಧರ್ 2’ ಚಿತ್ರತಂಡ ಕೂಡ ಅದೇ ದಿನಾಂಕದಲ್ಲಿ ರಿಲೀಸ್ ಮಾಡುವುದಾಗಿ ಹಠ ಹಿಡಿದಿದೆ. ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಹಲವು ಬಗೆಯ ಲೆಕ್ಕಾಚಾರಗಳು ನಡೆಯುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Luxury homes: ಐಷಾರಾಮಿ ಮನೆಗಳಲ್ಲಿ ಬೆಂಗಳೂರು, ಮುಂಬೈ ಅನ್ನು ಹಿಂದಿಕ್ಕಿದೆ ಗುರುಗ್ರಾಮ – Kannada News | Ultra Luxury homes, Gurugram pips Mumbai to become India’s largest market

ನವದೆಹಲಿ, ಫೆಬ್ರುವರಿ 23: ಹತ್ತು ಕೋಟಿ ರೂಗೂ ಅಧಿಕ ಮೌಲ್ಯದ ಅತಿ ಐಷಾರಾಮಿ ಮನೆಗಳಿಗೆ (Ultra-luxury homes) ದೇಶದಲ್ಲೇ ಅತಿದೊಡ್ಡ ಮಾರುಕಟ್ಟೆ ಎಂದರೆ ಬೆಂಗಳೂರು, ಮುಂಬೈ, ದೆಹಲಿ ಮುಂತಾದ ನಗರಗಳ ಹೆಸರು ಮೊದಲು ಎದುರಾಗುತ್ತದೆ. ಆದರೆ, 2025ರಲ್ಲಿ ಅಲ್ಟ್ರಾ ಲಕ್ಷುರಿ ಮನೆಗಳಿಗೆ ದೇಶದಲ್ಲೇ ಅತಿದೊಡ್ಡ ಮಾರುಕಟ್ಟೆ ಎನಿಸಿದ್ದು ಗುರುಗ್ರಾಮ್ ಅಂತೆ. ಇಂಡಿಯಾ ಸೋತೆಬೈಸ್ ಇಂಟರ್ನ್ಯಾಷನಲ್ ರಿಯಾಲ್ಟಿ ಹಾಗೂ ಸಿಆರ್​ಇ ಮ್ಯಾಟ್ರಿಕ್ಸ್​ನ ಇತ್ತೀಚಿನ ಹೈ ಎಂಡ್ ಲಕ್ಸುರಿ ಹೌಸಿಂಗ್ ರಿಪೋರ್ಟ್ ಪ್ರಕಾರ 10 ಕೋಟಿ ರೂಗೂ ಅಧಿಕ ಮೌಲ್ಯದ ಮನೆಗಳು ಅತಿಹೆಚ್ಚು ಸೇಲ್ ಆಗಿದ್ದು ಗುರುಗ್ರಾಮ್​ನಲ್ಲಿ.

ದೆಹಲಿ ಎಡಬದಿಯಲ್ಲಿರುವ, ಹಾಗೂ ಹರ್ಯಾಣ ರಾಜ್ಯಕ್ಕೆ ಸೇರಿದ ಗುರುಗ್ರಾಮ್​ನಲ್ಲಿ 2025ರ ಕ್ಯಾಲಂಡರ್ ವರ್ಷದಲ್ಲಿ 24,120 ಕೋಟಿ ರೂ ಮೊತ್ತದ ಅಲ್ಟ್ರಾ ಲಕ್ಷುರಿ ಮನೆಗಳು ಮಾರಾಟವಾಗಿವೆಯಂತೆ. ಇದು ದೇಶದಲ್ಲೇ ಗರಿಷ್ಠ.

ಇದನ್ನೂ ಓದಿ: ಚಿನ್ನ, ಬೆಳ್ಳಿ ಬೆಲೆಗಳು ಅತಿಯಾಗಿ ಏರಿದ್ದು ಯಾಕೆಂದು ಕಾರಣ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್

ಈ ವರದಿ ಪ್ರಕಾರ, 2025ರಲ್ಲಿ ಗುರುಗ್ರಾಮ್​ನಲ್ಲಿ ಮಾರಾಟವಾದ 10 ಕೋಟಿ ರೂಗೂ ಅಧಿಕ ಮೌಲ್ಯದ ಐಷಾರಾಮಿ ಮನೆಗಳ ಸಂಖ್ಯೆ 1,494. ಕೇವಲ ಎರಡು ವರ್ಷಗಳ ಹಿಂದೆ (2023) ಇಲ್ಲಿ ಮಾರಾಟವಾದ ಇಂಥ ಮನೆಗಳ ಸಂಖ್ಯೆ ಕೇವಲ 155. ಈಗ ಇಷ್ಟು ಸಂಖ್ಯೆಯಲ್ಲಿ ಮಾರಾಟ ಹೆಚ್ಚಳ ಆಗಿರುವುದು ಸೋಜಿಗದ ಸಂಗತಿ. ಎರಡೇ ವರ್ಷದಲ್ಲಿ ಬಹುತೇಕ ಹತ್ತು ಪಟ್ಟು ಹೆಚ್ಚು ಮನೆಗಳು ಸೇಲ್ ಆಗಿವೆ.

ಐಷಾರಾಮಿ ಮನೆಗಳು 2025ರಲ್ಲಿ ಅತಿಹೆಚ್ಚು ಮಾರಾಟ ಕಂಡ ನಗರಗಳು (10 ಕೋಟಿ ರೂಗಿಂತ ಹೆಚ್ಚು)

  1. ಗುರುಗ್ರಾಮ್: 24,120 ಕೋಟಿ ರೂ
  2. ಮುಂಬೈ: 21,902 ಕೋಟಿ ರೂ
  3. ನೋಯ್ಡಾ: 9,358 ಕೋಟಿ ರೂ
  4. ಹೈದರಾಬಾದ್: 8,140 ಕೋಟಿ ರೂ
  5. ಬೆಂಗಳೂರು: 2,319 ಕೋಟಿ ರೂ

ಇದನ್ನೂ ಓದಿ: ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ?

ಗುರುಗ್ರಾಮ್ ಕಳೆದ ಎರಡು ವರ್ಷದಲ್ಲಿ ಐಷಾರಾಮಿ ಮನೆಗಳಿಗೆ ದೊಡ್ಡ ಮಾರುಕಟ್ಟೆಯಾಗಿ ಬೆಳೆದಿರುವುದು ಹೇಗೆ? ಗುರುಗ್ರಾಮ್​ನಲ್ಲಿ ಲಕ್ಷುರಿ ಕಾರಿಡಾರ್​ಗಳು ಹೆಚ್ಚುತ್ತಿವೆ. ದ್ವಾರಕಾ ಎಕ್ಸ್​ಪ್ರೆಸ್​ವೇ, ಗಾಲ್ಫ್ ಕೋರ್ಸ್ ರೋಡ್, ಗಾಲ್ಫ್ ಕೋರ್ಸ್ ಎಕ್ಸ್​ಟೆನ್ಷನ್ ರೋಡ್ ಇತ್ಯಾದಿ ಸ್ಥಳಗಳು, ಮೂಲಸೌಕರ್ಯ ಅಭಿವೃದ್ಧಿ, ವಿವಿಧ ಪ್ರದೇಶಗಳ ನಡುವೆ ಸಂಪರ್ಕ ಹೆಚ್ಚಳ ಇತ್ಯಾದಿ ಕಾರಣಗಳಿಂದ ಶ್ರೀಮಂತರು ಗುರುಗ್ರಾಮ್​ನಲ್ಲಿ ಮನೆ ಮಾಡಿಕೊಂಡು ನೆಲಸಲು ಬಯಸುತ್ತಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಗೃಹಣಿಯರೇ… ಪಾತ್ರೆ ತೊಳೆಯುವ ಸ್ಪಾಂಜ್‌ಗಳನ್ನು ಎಷ್ಟು ಬಾರಿ ಬದಲಾಯಿಸಬೇಕು ತಿಳ್ಕೊಳ್ಳಿ – Kannada News | What happens if you use dishwashing sponge for a long time?

ಪ್ರತಿಯೊಬ್ಬರೂ ಅಡುಗೆ ಮನೆಯ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಾರೆ. ಪಾತ್ರೆ ತೊಳೆಯುವುದರಿಂದ ಹಿಡಿದು ಗ್ಯಾಸ್‌ ಸ್ಟೌವ್‌ ಕ್ಲೀನ್‌ ಮಾಡುವುದರವರೆಗೆ ಪ್ರತಿಯೊಂದರ ಸ್ವಚ್ಛತೆಯ ಬಗ್ಗೆಯೂ ಕಾಳಜಿ ವಹಿಸುತ್ತಾರೆ. ಆದ್ರೆ ಪಾತ್ರೆ ತೊಳೆಯಲು ಬಳಸುವ ಸ್ಪಾಂಜ್‌ಗಳ (sponges) ಬಗ್ಗೆ ಯಾರೂ ಸಹ ಗಮನಹರಿಸುವುದಿಲ್ಲ. ಒಂದೇ ಸ್ಪಾಂಜ್‌ ಅನ್ನು ತಿಂಗಳಾನುಗಟ್ಟಲೆ ಬಳಸುತ್ತಿರುತ್ತಾರೆ. ಈ ಒಂದು ಸಣ್ಣ ತಪ್ಪು ಸಹ ಕಾಯಿಲೆ ಹರಡಲು ಕಾರಣವಾಗಬಹುದು. ಹಾಗಿದ್ರೆ ಪಾತ್ರೆ ತೊಳೆಯಲು ಹೆಚ್ಚು ಸಮಯ ಒಂದೇ ಸ್ಪಾಂಜ್‌ ಅನ್ನು ಬಳಸುವುದರಿಂದ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತದೆ, ಸ್ಪಾಂಜ್‌, ಸ್ಕ್ರಬ್ಬರ್‌ಗಳನ್ನು ಎಷ್ಟು ದಿನಗಳಿಗೊಮ್ಮೆ ಬದಲಾಯಿಸಬೇಕು ಎಂಬುದನ್ನು ತಿಳಿಯಿರಿ.

ಪಾತ್ರೆ ತೊಳೆಯಲು ಒಂದೇ ಸ್ಪಾಂಜ್‌ ದೀರ್ಘಕಾಲ ಬಳಸುವುದು ಏಕೆ ಅಪಾಯಕಾರಿ?

ಪಾತ್ರೆ ತೊಳೆಯಲು ಬಳಸುವ ಸ್ಪಾಂಜ್‌ ಚಿಕ್ಕದಾಗಿ ಕಾಣಬಹುದು ಆದರೆ ಅದು ಬ್ಯಾಕ್ಟೀರಿಯಾಗಳಿಗೆ ಸಂತಾನೋತ್ಪತ್ತಿ ಮಾಡುವ ಸ್ಥಳವಾಗಬಹುದು. ಹೌದು ಪಾತ್ರೆ ತೊಳೆಯುವ ಸ್ಪಂಜುಗಳು ಅಥವಾ ಸ್ಕ್ರಬ್ ಬ್ರಷ್‌ಗಳು ಹೆಚ್ಚಿನ ಸಮಯ ಒದ್ದೆಯಾಗಿರುತ್ತವೆ. ಅವುಗಳನ್ನು ದಿನಕ್ಕೆ 3 ರಿಂದ ನಾಲ್ಕು ಬಾರಿ ಬಳಸುವುದರಿಂದ, ಅವು ಒಣಗಲು ಅವಕಾಶ ಸಿಗುವುದಿಲ್ಲ, ಅಲ್ಲದೆ ಸ್ಪಂಜಿನ ಸಣ್ಣ ರಂಧ್ರಗಳಲ್ಲಿ ಆಹಾರದ ಕಣಗಳು ಹಿಡಿದಿಟ್ಟುಕೊಳ್ಳುತ್ತವೆ.  ಇದು ತೇವಾಂಶ ಮತ್ತು ಕೊಳಕು ಬ್ಯಾಕ್ಟೀರಿಯಾಗಳು ಬೆಳೆಯಲು ಸೂಕ್ತವಾದ ವಾತಾವರಣವನ್ನು ಸೃಷ್ಟಿಸುತ್ತದೆ. ನಂತರದಲ್ಲಿ ಅಪಾಯಕಾರಿ ಸೂಕ್ಷ್ಮಜೀವಿಗಳು ಬೆಳೆದು ರೋಗಗಳನ್ನು ಹರಡುತ್ತವೆ. ಕೊಳಕು ಸ್ಪಾಂಜ್‌ಗಳಲ್ಲಿ ಟಾಯ್ಲೆಟ್ ಸೀಟ್ ಗಿಂತ ಹೆಚ್ಚು ಬ್ಯಾಕ್ಟೀರಿಯಾಗಳು ಇರುತ್ತವಂತೆ. ಅದಕ್ಕಾಗಿ ಆಗಾಗ್ಗೆ ಸ್ಪಾಂಜ್‌ಗಳನ್ನು ಬದಲಾಯಿಸುತ್ತಿರಬೇಕು.

ಪಾತ್ರೆ ತೊಳೆಯಲು ಒಂದೇ ಸ್ಪಂಜನ್ನು ಬಳಸಿದರೆ ಏನಾಗುತ್ತದೆ?

ಸ್ಪಾಂಜ್‌ಗಳಲ್ಲಿರುವ ಬ್ಯಾಕ್ಟೀರಿಯಾಗಳು ಪಾತ್ರೆಗಳಿಗೆ ವರ್ಗಾಯಿಸಲ್ಪಟ್ಟು, ಇದು ಅತಿಸಾರ ಮತ್ತು ವಾಂತಿ, ತೀವ್ರ ಹೊಟ್ಟೆ ನೋವು ಮತ್ತು ಕರುಳಿನ ಸೋಂಕುಗಳಿಗೆ ಕಾರಣವಾಗಬಹುದು.  ಇನ್ನೂ ಈ ಬ್ಯಾಕ್ಟೀರಿಯಾಗಳು ಕೈಗಳ ಮೂಲಕ ದೇಹವನ್ನು ಪ್ರವೇಶಿಸಬಹುದು, ಇದು ಇಡೀ ಕುಟುಂಬಕ್ಕೆ ಅನಾರೋಗ್ಯವನ್ನುಂಟುಮಾಡುತ್ತದೆ.  ಅಲ್ಲದೆ ಒಂದೇ ಸ್ಪಾಂಜ್ ಅನ್ನು ದೀರ್ಘಕಾಲದವರೆಗೆ ಬದಲಾಯಿಸದಿದ್ದರೆ, ಅದು ಶಿಲೀಂಧ್ರವನ್ನು ಬೆಳೆಸಿಕೊಳ್ಳಬಹುದು ಮತ್ತು ಇದು ವಿಚಿತ್ರ ಮತ್ತು ಕೆಟ್ಟ ವಾಸನೆಯನ್ನು ಉಂಟು ಮಾಡುತ್ತದೆ.

ಇದನ್ನೂ ಓದಿ: ಕೊಳೆಗಟ್ಟಿದ ಗ್ಯಾಸ್‌ ಸ್ಟೌವ್‌ ಬರ್ನರ್‌ ಕ್ಲೀನ್‌ ಮಾಡಲು ಸಿಂಪಲ್‌ ಟಿಪ್ಸ್‌ ಫಾಲೋ ಮಾಡಿ

ಪಾತ್ರೆ ತೊಳೆಯುವ ಸ್ಪಾಂಜ್ ಅನ್ನು ಎಷ್ಟು ದಿನಗಳಿಗೊಮ್ಮೆ ಬದಲಾಯಿಸಬೇಕು?

ತಜ್ಞರು ಹೇಳುವಂತೆ ಪಾತ್ರೆ ತೊಳೆಯುವ ಸ್ಪಾಂಜ್ ಅನ್ನು ಪ್ರತಿ 7 ರಿಂದ 10 ದಿನಗಳಿಗೊಮ್ಮೆ ಬದಲಾಯಿಸಬೇಕು. ನೀವು ಪ್ರತಿದಿನ ಬಹಳಷ್ಟು ಪಾತ್ರೆಗಳನ್ನು ತೊಳೆಯುತ್ತಿದ್ದರೆ, ಪ್ರತಿ 7 ದಿನಗಳಿಗೊಮ್ಮೆ ಅದನ್ನು ಬದಲಾಯಿಸಬೇಕು. ನೀವು ಅದನ್ನು ವಿರಳವಾಗಿ ಬಳಸಿದರೂ ಸಹ, ಅದನ್ನು 2 ವಾರಗಳಿಗಿಂತ ಹೆಚ್ಚು ಕಾಲ ಇಟ್ಟುಕೊಳ್ಳಬೇಡಿ. ಹಳೆಯ ಸ್ಪಾಂಜ್ ಸ್ವಚ್ಛವಾಗಿ ಕಂಡರೂ ಸಹ, ಅದು ಬ್ಯಾಕ್ಟೀರಿಯಾಗಳ ಆಶ್ರಯತಾಣವಾಗಿರಬಹುದು. ಆದ್ದರಿಂದ 7 ರಿಂದ 10 ದಿನಗಳಿಗೊಮ್ಮೆ ಪಾತ್ರೆ ತೊಳೆಯುವ ಸ್ಪಾಂಜ್‌ ಬದಲಾಯಿಸಿ. ಸ್ಟೀಲ್ ಅಥವಾ ಸಿಲಿಕೋನ್ ಸ್ಕ್ರಬ್ಬರ್‌ಗಳು 1-2 ತಿಂಗಳುಗಳವರೆಗೆ ಬಾಳಿಕೆ ಬರಬಹುದು. ಸ್ಕ್ರಬ್ಬರ್ ವಾಸನೆ, ಬಿರುಕುಗಳು ಅಥವಾ ಬಣ್ಣ ಬದಲಾದರೆ, ಅದನ್ನು ತಕ್ಷಣ ಬದಲಾಯಿಸಿ.

ಪಾತ್ರೆ ತೊಳೆಯುವ ಸ್ಪಾಂಜ್‌ಗಳನ್ನು ಸ್ವಚ್ಛವಾಗಿಡಲು ಸುಲಭ ಮಾರ್ಗಗಳು:

  • ಪ್ರತಿ 2-3 ದಿನಗಳಿಗೊಮ್ಮೆ ಸ್ಪಾಂಜ್ ಅನ್ನು ಬೆಚ್ಚಗಿನ ನೀರು ಮತ್ತು ವಿನೆಗರ್‌ನಲ್ಲಿ 5-10 ನಿಮಿಷಗಳ ಕಾಲ ನೆನೆಸಿಡಿ.
  • ಪ್ರತಿ ಬಾರಿ ಪಾತ್ರೆ ತೊಳೆದ ನಂತರ ಬಿಸಿ ನೀರು ಮತ್ತು ಸೋಪಿನಿಂದ ಸ್ಕ್ರಬ್ಬರ್ ಅನ್ನು ಚೆನ್ನಾಗಿ ಸ್ವಚ್ಛಗೊಳಿಸಿ. ನಂತರ ಅದನ್ನು ಚೆನ್ನಾಗಿ ಹಿಸುಕಿ ಒಣಗಲು ಬಿಡಿ.
  • ಸ್ಪಾಂಜ್ ಅನ್ನು ಚೆನ್ನಾಗಿ ತೊಳೆದು ಒಣ ಸ್ಥಳದಲ್ಲಿ ಸಂಗ್ರಹಿಸಿ. ಸಿಲಿಕೋನ್ ಬ್ರಷ್‌ಗಳು ಮತ್ತು ಸ್ಟೀಲ್ ಸ್ಕ್ರಬ್ಬರ್‌ಗಳು ಸ್ಪಾಂಜ್‌ಗಳಿಗಿಂತ ಉತ್ತಮ ಆಯ್ಕೆಗಳಾಗಿವೆ. ಇವು ಹೆಚ್ಚು ಕಾಲ ಬಾಳಿಕೆ ಬರುತ್ತವೆ ಮತ್ತು ಸ್ವಚ್ಛಗೊಳಿಸಲು ಸುಲಭ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ಮತ್ತೊಂದು ದರೋಡೆ: ಅಧಿಕಾರಿಗಳ ಸೋಗಿನಲ್ಲಿ ಬಂದು ಲಕ್ಷಾಂತರ ರೂ ಹೊತ್ತೊಯ್ದರು – Kannada News | Devanahalli Robbery: 9 Arrested for 24 Lakh Fraud Posing as Fake Anti Corruption Officials

ದೇವನಹಳ್ಳಿ ಪೊಲೀಸ್ ಠಾಣೆImage Credit source: tv9 kannada

ದೇವನಹಳ್ಳಿ, ಫೆಬ್ರವರಿ 23: ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ‌ ಅಧಿಕಾರಿಗಳ ಸೋಗಿನಲ್ಲಿ ಎಂಟ್ರಿಕೊಟ್ಟು 24 ಲಕ್ಷ ರೂ ಹಣವನ್ನ ದೋಚಿ (Robbery) ಎಸ್ಕೇಪ್ ಆಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಪ್ರಸನ್ನಹಳ್ಳಿ ರಸ್ತೆಯಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿದಂತೆ 12 ಜನರ ಪೈಕಿ 09 ಆರೋಪಿಗಳನ್ನ ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಕೃಷ್ಣಕುಮಾರ್, ವೇಣುಗೋಪಾಲ್, ಸಂಪಂಗಿ ರಾಮ, ಅಹಮದ್, ನಾರಾಯಣಸ್ವಾಮಿ, ವೆಂಕಟೇಶ, ಮುರುಗೇಶನ್, ಶಿವ, ಲತೀಪ್ ಬಂಧಿತ ಆರೋಪಿಗಳು. ಬಂಧಿತರಿಂದ ಹಣವನ್ನು ಜಪ್ತಿ ಮಾಡಲಾಗಿದೆ.

ನಡೆದಿದ್ದೇನು? 

ಶಂಕರಪ್ಪ ಎಂಬುವವರಿಗೆ ಹಣ ತ್ರಿಬಲ್ ಮಾಡಿಕೊಡುವುದಾಗಿ ಹೇಳಿ ಎ1 ಆರೋಪಿ ಕೃಷ್ಣ ಕುಮಾರ್​​​ ಫೋನ್​ ಮಾಡಿ ಕರೆಸಿಕೊಂಡಿದ್ದಾನೆ. ಅದರಂತೆ ಶಂಕರಪ್ಪ ಚಿನ್ನಾಭರಣ ಅಡವಿಟ್ಟು 24 ಲಕ್ಷ ರೂ ಹಣವನ್ನು ತಂದಿದ್ದಾರೆ. ಇತ್ತ ಮೊದಲೇ ಮಾಡಿಕೊಂಡಿದ್ದ ಪ್ಲ್ಯಾನ್​​ನಂತೆ ಖಾಸಗಿ ಕಾರಿನಲ್ಲಿ ಕೃಷ್ಣ ಕುಮಾರ್ ಸಹಚರರು ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ‌ ಹೆಸರಿನಲ್ಲಿ ಖಾಸಗಿ‌ ಕಾರ್​​ಗೆ ಬೋರ್ಡ್ ಹಾಕಿಕೊಂಡು ಅಧಿಕಾರಿಗಳ ಸೋಗಿನಲ್ಲಿ ಬಂದು 24 ಲಕ್ಷ ರೂ ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೊಂದು ದರೋಡೆ: ಫ್ಲಿಪ್‌ಕಾರ್ಟ್​​ನ ಲಕ್ಷಾಂತರ ರೂ ಮೌಲ್ಯದ ವಸ್ತುಗಳ ಕಳ್ಳತನ

ಹಣ ಎಗರಿಸಿದ ನಂತರ ಎ1 ಆರೋಪಿ ಕೃಷ್ಣಕುಮಾರ್​​ ಪೊಲೀಸ್ ಠಾಣೆಗೆ ಬಂದು ತಾನೇ ದೂರು ನೀಡಿದ್ದ. ಪೊಲೀಸರ ವಿಚಾರಣೆ ವೇಳೆ ದೂರು‌ ನೀಡಿದ್ದ ಆರೋಪಿಯೇ ದರೋಡೆಕೋರ ಎನ್ನುವುದು ಬಯಲಾಗಿದೆ. ಸದ್ಯ ದೇವನಹಳ್ಳಿ ಠಾಣೆ ಪೊಲೀಸರು 12 ಜನರಲ್ಲಿ 09 ಆರೋಪಿಗಳನ್ನ ಬಂಧಿಸಿದ್ದಾರೆ.

ಪ್ರತಿಷ್ಠಿತ ಕೆನರಾ ಬ್ಯಾಂಕ್​ನಲ್ಲಿ ಕಳ್ಳತನಕ್ಕೆ ಯತ್ನ

ಇನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಪ್ರತಿಷ್ಠಿತ ಕೆನರಾ ಬ್ಯಾಂಕ್​​ನಲ್ಲಿ ಬೆಳಗಿನ ಜಾವ 3ರ ಸುಮಾರಿಗೆ ಕಳ್ಳತನಕ್ಕೆ ಯತ್ನಿಸಿರುವಂತಹ ಘಟನೆ ನಡೆದಿದೆ. ಸೈರನ್ ಆಗುತ್ತಿದ್ದಂತೆ ಕಳ್ಳ ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ ಶೇಷಾದ್ರಿಪುರಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ದರೋಡೆ ಕೇಸ್​​ ಬೇಧಿಸಿದ ಬೆಂಗಳೂರು ಪೊಲೀಸ್​​: ಅಧಿಕಾರಿಗಳಿಗೆ 5 ಲಕ್ಷ ರೂ ಬಹುಮಾನ ಘೋಷಣೆ

ರಾತ್ರಿ ಬ್ಯಾಂಕ್ ಹಿಂಬದಿ ಇದ್ದ ಗ್ರಿಲ್ ಕಟ್ ಮಾಡಿ ಒಳ ನುಗ್ಗಿರುವ ಕಳ್ಳ, ಪೂರ್ತಿ ಬ್ಯಾಂಕ್ ಸರ್ಚ್ ಮಾಡಿದ್ದಾನೆ. ಸ್ಟ್ರಾಂಗ್ ರೂಮ್ ಹತ್ತಿರ ಹೋಗಿ ವೈರ್ ಕಟ್ ಮಾಡಿದ್ದು, ವೈರ್ ಕಟ್ ಮಾಡುತ್ತಿದಂತೆ ಸೈರನ್ ಆನ್ ಆಗಿದೆ. ಬಳಿಕ ಅಲ್ಲಿಂದ ಕಳ್ಳ ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Source link

ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ವಿಡಿಯೋ ನೋಡಿ – Kannada News | Siddaramaiah And DK Shivakumar inaugurates MGNREGA Bachao Sangram at Chikkaballapur

ಚಿಕ್ಕಬಳ್ಳಾಪುರ, (ಫೆಬ್ರವರಿ 23): ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಗಲಗುರ್ಕಿ ಬಳಿ ಕಾಂಗ್ರೆಸ್​​ನ ಮನ್​ರೇಗಾ ಬಚಾವ್​ ಆಂದೋಲನ ಸಮಾವೇಶ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ತಲೆ ಮೇಲೆ ಮಣ್ಣಿನ ಬುಟ್ಟಿ ಹೊತ್ತು ಸಮಾವೇಶಕ್ಕೆ ಚಾಲನೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ವೇದಿಕೆ ಮೇಲೆನೆ ಮಣ್ಣನ್ನು ತೋಡಿ ಪುಟ್ಟಿಗೆ ಹಾಕಿದ್ದು, ಇದನ್ನು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ತಲೆಗೆ ಟವೆಲ್ ಸುತ್ತಿಕೊಂಡು ಮಣ್ಣಿನ ಪುಟ್ಟಿ ಹೊತ್ತು ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ನೀನು ಯಾವ ಕಾರಣಕ್ಕೂ ತಾಯಿ ಆಗಬಾರದು’: ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ ಯುವಕ – Kannada News | Gurugram: Student Brutally Attacked in Live in Relationship; Warning for Urban Couples

ಗುರುಗ್ರಾಮ, ಫೆ.23: ಹೆಣ್ಣು ಮತ್ತು ಗಂಡಿನ ಸಂಬಂಧ ದೈಹಿಕ ಸಂಬಂಧದಲ್ಲಿ ಮುಗಿಯುದಾದರೆ, ಆ ಸಂಬಂಧಗಳಿಗೆ ಬೆಲೆಯೇ ಇರುವುದಿಲ್ಲ. ದೆಹಲಿ, ಬೆಂಗಳೂರುನಂತಹ ಮಹಾನಗರಗಳಲ್ಲಿ ಯುವಕ-ಯುವತಿಯರು ಮನಸ್ಸಿನ ಸಂಬಂಧಕ್ಕಿಂತ ದೈಹಿಕ ಸಂಬಂಧಕ್ಕೆ ಬೆಲೆ ನೀಡುತ್ತಾರೆ ಎಂಬುದನ್ನು ಅನೇಕ ಘಟನೆಗಳು ವಿವರಿಸಿದೆ. ಅದಕ್ಕೆ ಸಾಕ್ಷಿ ಕೂಡ ಇದೆ. ಲಿವ್ ಇನ್ ರಿಲೇಶನ್​ಶಿಪ್​​​ ಮೂಲಕ ಗೆಳತನ ಬೆಳಸಿಕೊಂಡು ದೈಹಿಕ ಸಂಪರ್ಕದ ನಂತರ ಇಬ್ಬರ ನಡುವೆಯೂ ಹೊಂದಾಣಿಕೆಯೇ ಇರುವುದಿಲ್ಲ. ಕೊನೆಗೆ ಒಬ್ಬರ ಮೇಲೆ ಇನ್ನೊಬ್ಬ ದೂರಿಕೊಂಡ ಸಂದೇಹ ಪಡುತ್ತ, ಅಂತಿಮವಾಗಿ ಕೊಲೆಯಲ್ಲಿ ಅಂತ್ಯವಾಗುತ್ತದೆ. ಇದೀಗ ಇಂತಹದೇ ಘಟನೆಯೊಂದು ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಯುವತಿಯೊಬ್ಬಳ ಮೇಲೆ ನಡೆದ ಸರಣಿ ದೌರ್ಜನ್ಯದ ಅಘಾತಕಾರಿ ಕೃತ್ಯವೊಂದು ಬೆಳಕಿಗೆ ಬಂದಿದೆ. ತನ್ನ ಲಿವ್ ಇನ್ ರಿಲೇಶನ್​ಶಿಪ್​​ನಲ್ಲಿದ್ದ ಯುವತಿಯನ್ನು ಭೀಕರ ಹಲ್ಲೆ ಹಲ್ಲೆ ಮಾಡಿದ್ದಾನೆ.

ಇದೀಗ ತ್ರಿಪುರಾ ಮೂಲದ 19 ವರ್ಷದ ಬಿ.ಎಸ್ಸಿ ವಿದ್ಯಾರ್ಥಿನಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ತ್ರಿಪುರಾ ಮೂಲದ ಸಂತ್ರಸ್ತೆ ಗುರುಗ್ರಾಮದ ಸೆಕ್ಟರ್ 69 ರ ಪಿಜಿಯೊಂದರಲ್ಲಿ ವಾಸವಿದ್ದು, ಬಯೋಟೆಕ್ನಾಲಜಿ ಅಭ್ಯಾಸ ಮಾಡುತ್ತಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ಆ್ಯಪ್ ಒಂದರ ಮೂಲಕ ದೆಹಲಿಯ ನರೇಲಾ ಮೂಲದ ಶಿವಂ ಎಂಬಾತನ ಪರಿಚಯವಾಗಿತ್ತು. ಮದುವೆಯ ಆಮಿಷವೊಡ್ಡಿದ ಶಿವಂ, ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಲ್ಲದೆ, ಗುರುಗ್ರಾಮದ ಫ್ಲಾಟ್ ಒಂದರಲ್ಲಿ ಆಕೆಯೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದನು.

ಇಬ್ಬರ ನಡುವೆ ಕೆಲವೊಂದು ವಿಚಾರವಾಗಿ ಸಂದೇಹಗಳು ಮೂಡಿದೆ. ಶಿವಂ, ಯುವತಿಯ ಮೇಲೆ ಸತತವಾಗಿ ದೈಹಿಕ ದೌರ್ಜನ್ಯ ಎಸಗುತ್ತಿದ್ದನು. ಆದರೆ ಕಳೆದ ಸೋಮವಾರ (ಫೆಬ್ರವರಿ 16) ಈ ಕ್ರೌರ್ಯ ಮಿತಿಮೀರಿತು. ಯುವತಿಯ ತಲೆಯನ್ನು ಗೋಡೆಗೆ ಜಜ್ಜಿ, ಸ್ಟೀಲ್ ಬಾಟಲಿ ಮತ್ತು ಮಣ್ಣಿನ ಮಡಕೆಯಿಂದ ಹಲ್ಲೆ ನಡೆಸಿದ್ದಾನೆ. ಯುವತಿಯ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾನೆ. ಈ ಭೀಕರ ಕೃತ್ಯದ ವಿಡಿಯೋವನ್ನೂ ಸಹ ಆರೋಪಿ ಚಿತ್ರೀಕರಿಸಿದ್ದಾನೆ. ಯುವತಿಯ ಕಾಲುಗಳಿಗೆ ಚಾಕುವಿನಿಂದ ಇರಿದು, “ಇನ್ನು ಮುಂದೆ ನೀನು ತಾಯಿಯಾಗಲು ಅಥವಾ ನಡೆಯಲು ಸಾಧ್ಯವಾಗದಂತೆ ಮಾಡುತ್ತೇನೆ” ಎಂದು ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ: ಮದುವೆ ಹಾಲ್​​​ನ ಶೌಚಾಲಯದ ಬಾಗಿಲಿನಲ್ಲಿ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ

ಎರಡು ದಿನಗಳ ಕಾಲ ಚಿತ್ರಹಿಂಸೆ ಅನುಭವಿಸಿದ ಯುವತಿ, ಫೆಬ್ರವರಿ 18 ರಂದು ಆರೋಪಿಯ ಫೋನಿನಿಂದಲೇ ತನ್ನ ತಾಯಿಗೆ ಕರೆ ಮಾಡಿ ಸ್ಥಳೀಯ ಭಾಷೆಯಲ್ಲಿ ವಿಷಯ ತಿಳಿಸಿದ್ದಾಳೆ. ಇದರಿಂದ ಆರೋಪಿಗೆ ವಿಷಯ ಅರ್ಥವಾಗಲಿಲ್ಲ. ತಕ್ಷಣವೇ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಯುವತಿಯನ್ನು ರಕ್ಷಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

​​​​​​​

Source link

ನೀಲಿ ಬಣ್ಣಕ್ಕೆ ತಿರುಗುವ ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ! – Kannada News | Think Twice Before Eating This Blue Staining Mushroom: It Can Induce Hallucinations

ಬೆಂಗಳೂರು, ಫೆಬ್ರವರಿ 23: ಲ್ಯಾನ್ಮಾವೋ ಏಷ್ಯಾಟಿಕಾ ಎಂಬ ಕುತೂಹಲಕಾರಿ ಅಣಬೆಯು ಚೀನಾದ ಯುನಾನ್ ಪ್ರಾಂತ್ಯದಲ್ಲಿ ಕಂಡುಬರುತ್ತದೆ. ಇದನ್ನು ಸರಿಯಾಗಿ ಬೇಯಿಸದೆ ಸೇವಿಸಿದರೆ ವಿಚಿತ್ರ ಭ್ರಮೆಗಳಿಗೆ ಒಳಗಾಗುವ ಸಾಧ್ಯತೆಯಿದೆ. ಈ ಅಣಬೆಯನ್ನು “ಜಿಯಾನ್ ಶೋ ಕ್ವಿಂಗ್” ಎಂದೂ ಕರೆಯುತ್ತಾರೆ. ಇದರರ್ಥ ಮುಟ್ಟಿದಾಗ ನೀಲಿ ಬಣ್ಣಕ್ಕೆ ತಿರುಗುವುದು. ಆಕ್ಸಿಡೀಕರಣ ಪ್ರಕ್ರಿಯೆಯಿಂದಾಗಿ ಕತ್ತರಿಸಿದಾಗ ಅಥವಾ ಒತ್ತಿದಾಗ ಇದು ಗಾಢ ನೀಲಿ ಬಣ್ಣಕ್ಕೆ ಇದು ತಿರುಗುತ್ತದೆ. ಲ್ಯಾನ್ಮಾವೋ ಏಷ್ಯಾಟಿಕಾ ತಿಂದವರು ತಮ್ಮ ಸುತ್ತಮುತ್ತಲಿನ ಜನರನ್ನು ಪುಟ್ಟ ಪುಟ್ಟದಾಗಿ ಕಾಣುವ “ಲಿಟಲ್ ಪೀಪಲ್ ಹ್ಯಾಲುಸಿನೇಷನ್” ಅಂದರೆ “ಆಲಿಸ್ ಇನ್ ವಂಡರ್ಲ್ಯಾಂಡ್ ಸಿಂಡ್ರೋಮ್” ನಂತಹ ಭ್ರಮೆಗಳಿಗೆ ಒಳಗಾಗುತ್ತಾರೆ. ಇದು ಸಾಮಾನ್ಯ ಮ್ಯಾಜಿಕ್ ಮಶ್ರೂಮ್‌ಗಳಲ್ಲಿರುವ ಸೈಲೋಸೈಬಿನ್ ಅಂಶವನ್ನು ಹೊಂದಿಲ್ಲ. ಇದರ ವಿಷಕಾರಿ ಅಂಶಗಳು ಮತ್ತು ಅವು ಭ್ರಮೆ ಹುಟ್ಟಿಸುವ ವಿಧಾನದ ಬಗ್ಗೆ ಸಂಶೋಧನೆಗಳು ನಡೆಯುತ್ತಿವೆ. ಯುನಾನ್‌ನಲ್ಲಿ ಇದು ರುಚಿಕರ ಅಣಬೆ ಎಂದು ಪರಿಗಣಿಸಲಾಗಿದ್ದರೂ ಇದನ್ನು ಹೆಚ್ಚಿನ ತಾಪಮಾನದಲ್ಲಿ ಚೆನ್ನಾಗಿ ಬೇಯಿಸುವುದು ಕಡ್ಡಾಯ. ಸರಿಯಾಗಿ ಬೇಯಿಸಿದಾಗ ಮಾತ್ರ ಇದರ ವಿಷಕಾರಿ ಅಂಶಗಳು ನಾಶವಾಗಿ ತಿನ್ನಲು ಯೋಗ್ಯವಾಗುತ್ತದೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕೆಂಪುಕೋಟೆಗೆ ಬಂತು ಖಲಿಸ್ತಾನಿ ಉಗ್ರರಿಂದ ಬಾಂಬ್ ಬೆದರಿಕೆ – Kannada News | Security Heightened in Delhi After Threat Call Targets Red Fort, Assembly

ನವದೆಹಲಿ, ಫೆಬ್ರವರಿ 23: ಕೆಂಪುಕೋಟೆ, ದೆಹಲಿ ಸಚಿವಾಲಯ ಹಾಗೂ ದೆಹಲಿ ವಿಧಾನಸಭೆಯಲ್ಲಿ ಬಾಂಬ್(Bomb) ಇಡುವುದಾಗಿ ಖಲಿಸ್ತಾನಿ ಉಗ್ರರು ಬೆದರಿಕೆ ಹಾಕಿದ್ದಾರೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ದೆಹಲಿ ಪೊಲೀಸರು ಕೂಡಲೇ ಪ್ರತಿಕ್ರಿಯಿಸಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಸಚಿವಾಲಯದಲ್ಲಿ ಸಂಪೂರ್ಣ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಈ ಇಮೇಲ್ ಖಲಿಸ್ತಾನಿ ಗುಂಪಿನ ಹೆಸರಿನಲ್ಲಿ ಬಂದಿದೆ ಎಂದು ವರದಿಯಾಗಿದೆ.

ಬೆದರಿಕೆಯ ಮೂಲವನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ. ಕೆಂಪು ಕೋಟೆ ಪ್ರದೇಶದ ಬಳಿ ಭಯೋತ್ಪಾದಕ ಬೆದರಿಕೆ ಇದೆ ಎಂಬ ಗುಪ್ತಚರ ವರದಿಗಳ ನಂತರ ದೆಹಲಿಯ ಅಧಿಕಾರಿಗಳು ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ದಾಳಿಯ ಭೀತಿಯ ನಡುವೆಯೂ, ಸ್ಥಳೀಯ ಪ್ರಸಿದ್ಧ ದೇವಾಲಯ ಸೇರಿದಂತೆ ಚಾಂದನಿ ಚೌಕ್‌ನಲ್ಲಿ ಭದ್ರತಾ ಪಡೆಗಳು ನಿಕಟವಾಗಿ ನಿಗಾ ವಹಿಸಿವೆ.

ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೊಯ್ಬಾ ರಾಷ್ಟ್ರ ರಾಜಧಾನಿಯಲ್ಲಿ ಐಇಡಿ ದಾಳಿ ನಡೆಸಲು ಯೋಜನೆ ರೂಪಿಸುತ್ತಿರಬಹುದು ಎಂದು ಗುಪ್ತಚರ ಮೂಲಗಳು ಸೂಚಿಸಿವೆ. ಇದಕ್ಕೆ ಪ್ರತಿಕ್ರಿಯೆಯಾಗಿ, ದೆಹಲಿಯಾದ್ಯಂತ ಪ್ರಮುಖ ಧಾರ್ಮಿಕ ಸ್ಥಳಗಳು ಮತ್ತು ಇತರ ಸೂಕ್ಷ್ಮ ಸ್ಥಳಗಳ ಸುತ್ತಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪ್ರಮುಖ ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿಕೊಂಡು ಸಂಭಾವ್ಯ ಬೆದರಿಕೆಗಳ ಬಗ್ಗೆ ಅಧಿಕಾರಿಗಳು ಜಾಗರೂಕರಾಗಿರುವುದರಿಂದ, ವಿಶೇಷವಾಗಿ ಪ್ರಮುಖ ದೇವಾಲಯಗಳು ಮತ್ತು ಜನನಿಬಿಡ ಮಾರುಕಟ್ಟೆಗಳ ಬಳಿ ಕಣ್ಗಾವಲು ತೀವ್ರಗೊಳಿಸಲಾಗಿದೆ.

ಮತ್ತಷ್ಟು ಓದಿ: ಭಯಾನಕ ವಿಡಿಯೋ: ಮನೆಯ ತಾರಸಿಯಲ್ಲಿ ಬಾಂಬ್ ಸ್ಫೋಟ, ಮಹಿಳೆಯರು ಸೇರಿ ಎಲ್ಲರ ಬಟ್ಟೆಗೂ ತಗುಲಿದ ಬೆಂಕಿ

ಸಾರ್ವಜನಿಕರು ಜಾಗರೂಕರಾಗಿರಿ ಮತ್ತು ಯಾವುದೇ ಅನುಮಾನಾಸ್ಪದ ಚಟುವಟಿಕೆಯ ಬಗ್ಗೆ ವರದಿ ಮಾಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದ್ದು, ಯಾವುದೇ ಅಹಿತಕರ ಘಟನೆಗಳನ್ನು ತಡೆಗಟ್ಟಲು ನಿರ್ಣಾಯಕ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ನವೆಂಬರ್ 10 ರ ಸಂಜೆ, ಲಾಲ್ ಕ್ವಿಲಾ ಮೆಟ್ರೋ ನಿಲ್ದಾಣದ ಬಳಿ ನಿಧಾನವಾಗಿ ಚಲಿಸುತ್ತಿದ್ದ ಹುಂಡೈ ಐ20 ಕಾರಿನಲ್ಲಿ ಪ್ರಬಲವಾದ ಸ್ಫೋಟ ಸಂಭವಿಸಿ 15 ಜನರು ಸಾವನ್ನಪ್ಪಿದ್ದರು ಮತ್ತು ಅನೇಕರು ಗಾಯಗೊಂಡಿದ್ದರು. ಈ ಸ್ಫೋಟದ ಪರಿಣಾಮವಾಗಿ ಸುತ್ತಮುತ್ತಲಿನ ಹಲವಾರು ವಾಹನಗಳು ಸುಟ್ಟುಹೋದವು, ಇದರ ಪರಿಣಾಮವಾಗಿ ವ್ಯಾಪಕ ಹಾನಿ ಸಂಭವಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link