All posts by nagaraj11081993

ಆನ್​ಲೈನ್ ಗೇಮ್ ಚಟಕ್ಕೆ ಮಾಡಿದ್ದ ಲಕ್ಷಾಂತರ ರೂ. ಸಾಲ ತೀರಿಸಲು ವೃದ್ಧೆಯ ಕೊಂದು ಚಿನ್ನಾಭರಣ ದೋಚಿದ್ದ ಯುವಕ ಅಂದರ್ – Kannada News | Youth Kills Elderly Woman to Repay Online Gaming Debt, Arrested in Davanagere District

ದಾವಣಗೆರೆ, ಫೆಬ್ರವರಿ 23: ಆನ್‌ಲೈನ್ ಗೇಮ್ ವ್ಯಸನದಿಂದ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ ಯುವಕನೊಬ್ಬ ಸಾಲ ತೀರಿಸಲು ವೃದ್ಧೆಯೊಬ್ಬರನ್ನು ಹತ್ಯೆ ಮಾಡಿ ಚಿನ್ನ ದೋಚಿದ ಪ್ರಕರಣ ದಾವಣಗೆರೆ (Davanagere) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಫೆಬ್ರವರಿ 2ರಂದು ಈ ಘಟನೆ ನಡೆದಿತ್ತು. ಗ್ರಾಮದ ಒಂಟಿ ವೃದ್ಧೆ ಕಮಲಮ್ಮ (64) ಅವರನ್ನು ಮನೆಗೆ ನುಗ್ಗಿ ಹತ್ಯೆ ಮಾಡಿ, ಸುಮಾರು 8.44 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಲಾಗಿತ್ತು. ಪ್ರಕರಣ ಸಂಬಂಧ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ನಿವಾಸಿ ಅಭಿಷೇಕ (23) ಎಂಬ ಯುವಕನನ್ನು ಬಂಧಿಸಲಾಗಿದೆ.

ಪೊಲೀಸರ ತನಿಖೆಯಲ್ಲಿ ತಿಳಿದುಬಂದಿರುವ ಪ್ರಕಾರ, ಅಭಿಷೇಕ ಆನ್‌ಲೈನ್ ಗೇಮ್ ಆಡುತ್ತಾ 20ರಿಂದ 25 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಸಾಲಗಾರರ ಒತ್ತಡದಿಂದ ಮನೆ ಬಿಟ್ಟು ಸುತ್ತಾಡುತ್ತಿದ್ದ ಆತ, ರಾತ್ರಿ ವೇಳೆ ಬಸ್ ನಿಲ್ದಾಣಗಳಲ್ಲಿ ವಾಸಿಸುತ್ತಿದ್ದ. ಇದೇ ವೇಳೆ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ದೇವರ ಹಬ್ಬ ನಡೆಯುತ್ತಿರುವುದು ತಿಳಿದು ಫೆಬ್ರವರಿ 2ರಂದು ಗ್ರಾಮಕ್ಕೆ ತೆರಳಿದ್ದ.

ಹಬ್ಬಕ್ಕೆ ಚಿನ್ನಾಭರಣ ಧರಿಸಿ ದೇವಸ್ಥಾನಕ್ಕೆ ಹೋಗಿದ್ದೇ ಮುಳುವಾಯ್ತು

ಹಬ್ಬದ ನಿಮಿತ್ತ ಚಿನ್ನಾಭರಣ ಧರಿಸಿಕೊಂಡು ದೇವಾಲಯಕ್ಕೆ ಬಂದಿದ್ದ ಕಮಲಮ್ಮ ಅವರನ್ನು ಗಮನಿಸಿದ್ದ ಆತ, ಅವರ ಮನೆ ಹಿಂಬಾಗಿಲಿನಿಂದ ಒಳನುಗ್ಗಿ ಅಡಗಿ ಕುಳಿತಿದ್ದಾನೆ. ತಡರಾತ್ರಿ ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಕಮಲಮ್ಮ ಅವರ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದ.

ಕದ್ದ ಚಿನ್ನ ಅಡವಿಟ್ಟು ಸಾಲ ಪಡೆದಿದ್ದ ಖತರ್ನಾಕ್!

ದೋಚಿದ ಚಿನ್ನವನ್ನು ಶಿಕಾರಿಪುರದ ವಿವಿಧ ಬ್ಯಾಂಕ್‌ಗಳಲ್ಲಿ ಅಡವಿಟ್ಟು ಹಣ ಪಡೆದಿದ್ದ ಆತ, ಆ ಹಣದಿಂದ ಮತ್ತೆ ಆನ್‌ಲೈನ್ ಗೇಮ್ ಆಡಲು ಆರಂಭಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯರ ಸಹಕಾರ ಮತ್ತು ಸೂಕ್ತ ಮಾಹಿತಿ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಹಾನಿಕಾರಕ ಇಂಜೆಕ್ಷನ್ ಹಾಕಿಕೊಂಡು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಈ ಕುರಿತು ದಾವಣಗೆರೆ ಎಸ್ಪಿ ಎಚ್.ಟಿ. ಶೇಖರ ಮಾಹಿತಿ ನೀಡಿದ್ದು, ಆರೋಪಿಯಿಂದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಪ್ರಕರಣದ ಕುರಿತ ತನಿಖೆ ಮುಂದುವರಿದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟೀಮ್ ಇಂಡಿಯಾ ಮುಂದಿನ ಪಂದ್ಯವನ್ನು ಎಷ್ಟು ರನ್​ಗಳ ಅಂತರದಿಂದ ಗೆಲ್ಲಬೇಕು? – Kannada News | India must achieve massive victory in this margins

ಸೌತ್ ಆಫ್ರಿಕಾ ವಿರುದ್ಧದ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದ ಸೆಮಿಫೈನಲ್ ಲೆಕ್ಕಾಚಾರಗಳು ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಭಾರತ ತಂಡವು ಹೀನಾಯವಾಗಿ ಸೋತಿರುವುದು. ಅಂದರೆ ಸೌತ್ ಆಫ್ರಿಕಾ ವಿರುದ್ಧದ 76 ರನ್​ಗಳ ಅಂತರದಿಂದ ಸೋತಿರುವ ಕಾರಣ ಟೀಮ್ ಇಂಡಿಯಾದ ನೆಟ್ ರನ್ ರೇಟ್ -3.800 ಕ್ಕೆ ಕುಸಿದಿದೆ. ಈ ನೆಗೆಟಿವ್ ನೆಟ್ ರನ್ ರೇಟ್ ಅನ್ನು ಪಾಸಿಟಿಮ್ ಮಾಡಬೇಕಿದ್ದರೆ ಭಾರತ ತಂಡವು ಮುಂದಿನ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಬೇಕು.

ಅದರಂತೆ ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಝಿಂಬಾಬ್ವೆ ವಿರುದ್ಧ ಎಷ್ಟು ರನ್​ಗಳ ಅಂತರದಿಂದ ಗೆಲ್ಲಬೇಕು ಎಂದು ನೋಡುವುದಾದರೆ…

  • ಮೊದಲು ಬ್ಯಾಟಿಂಗ್ ಲೆಕ್ಕಾಚಾರ: ಭಾರತ ತಂಡವು  200ಕ್ಕೂ ಹೆಚ್ಚು ರನ್ ಗಳಿಸಬೇಕು ಮತ್ತು ಎದುರಾಳಿ ತಂಡವನ್ನು ಕನಿಷ್ಠ 70 ರಿಂದ 80 ರನ್‌ಗಳ ಅಂತರದಿಂದ ಸೋಲಿಸಬೇಕು.
  • ಮೊದಲು ಬೌಲಿಂಗ್ ಲೆಕ್ಕಾಚಾರ: ಎದುರಾಳಿ ತಂಡವನ್ನು 130 ರಿಂದ 140 ರನ್​ಗಳ ಒಳಗೆ ಆಲೌಟ್ ಮಾಡಬೇಕು.
  • ಚೇಸಿಂಗ್ ಲೆಕ್ಕಾಚಾರ: ಎದುರಾಳಿ ತಂಡವನ್ನು 140 ರನ್​ಗೆ ಆಲೌಟ್ ಮಾಡಿದರೆ ಟೀಮ್ ಇಂಡಿಯಾ ಈ ಗುರಿಯನ್ನು 9 ರಿಂದ 10 ಓವರ್​ಗಳಲ್ಲಿ ಚೇಸ್ ಮಾಡಬೇಕು.

ಈ ಮೂರು ಲೆಕ್ಕಾಚಾರಗಳೊಂದಿಗೆ ಭಾರತ ತಂಡವು ಝಿಂಬಾಬ್ವೆ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆಯಿದೆ. ಅಲ್ಲದೆ ಈ ಮ್ಯಾಚ್​ನಲ್ಲಿ ಭರ್ಜರಿ ಜಯ ಸಾಧಿಸಿದರೆ ಟೀಮ್ ಇಂಡಿಯಾದ ನೆಟ್ ರನ್ ರೇಟ್ + ಆಗಲಿದೆ.

ಇನ್ನು ವೆಸ್ಟ್ ಇಂಡೀಸ್ ವಿರುದ್ಧ ಕೂಡ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ ತಂಡವು ತನ್ನ ನೆಟ್ ರನ್ ರೇಟ್​ ಅನ್ನು ಹೆಚ್ಚಿಸಿಕೊಳ್ಳಬಹುದು. ಈ ಮೂಲಕ 4 ಅಂಕಗಳೊಂದಿಗೆ ನೆಟ್ ರನ್ ರೇಟ್​ನಲ್ಲಿ ಇತರೆ ತಂಡಗಳನ್ನು ಹಿಂದಿಕ್ಕಿ ಸೆಮಿಫೈನಲ್​ಗೇರಬಹುದು.

ನೆಟ್ ರನ್ ರೇಟ್ ಲೆಕ್ಕಾಚಾರವಿಲ್ಲದೇ ಸೆಮಿಫೈನಲ್​ಗೇರಬಹುದೇ?

ನೆಟ್ ರನ್ ರೇಟ್ ಲೆಕ್ಕಾಚಾರವಿಲ್ಲದೇ ಭಾರತ ತಂಡ ಸೆಮಿಫೈನಲ್​ಗೆ ಪ್ರವೇಶಿಸಬಹುದು. ಆದರೆ ಇಲ್ಲಿ ಸೌತ್ ಆಫ್ರಿಕಾ ತಂಡವು ತನ್ನ ಮುಂದಿನ ಎರಡು ಮ್ಯಾಚ್​​ಗಳಲ್ಲಿ ಝಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಗೆಲ್ಲಬೇಕು.

ಹೀಗಾದಲ್ಲಿ ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಕ್ಕೆ ಸೋಲುಣಿಸಿ ಟೀಮ್ ಇಂಡಿಯಾ ನೇರವಾಗಿ ಸೆಮಿಫೈನಲ್​ಗೆ ಪ್ರವೇಶಿಸಬಹುದು.

ಇದನ್ನೂ ಓದಿ: ಇಬ್ಬರಲ್ಲಿ ಒಬ್ಬರು… ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ

ಭಾರತದ ಮುಂದಿನ ಪಂದ್ಯಗಳ ವೇಳಾಪಟ್ಟಿ:

  • ಫೆಬ್ರವರಿ 26, 2026: ಭಾರತ vs ಝಿಂಬಾಬ್ವೆ  (ಚೆನ್ನೈ)
  • ಮಾರ್ಚ್ 01, 2026: ವೆಸ್ಟ್ ಇಂಡೀಸ್ vs ಭಾರತ (ಕೋಲ್ಕತ್ತಾ)

Source link

Video: ತನಗೆ ಕಾಟ ಕೊಟ್ಟ ಕೋತಿಗೆ ಪಂಚ್ ಕೊಡ್ತಾ ಈ ಕೋತಿ ಮರಿ ‘ಪಂಚ್’? – Kannada News | Viral AI Edits Reimagine Baby Monkey Punch With a Dramatic Comeback

ಟೋಕಿಯೋ, ಫೆಬ್ರವರಿ 23: ಈ ಕೋತಿ ಮರಿ ಹುಟ್ಟಿನಿಂದಲೇ ಒಬ್ಬಂಟಿ, ಅದು ತೂಕ ಕಡಿಮೆ ಇದ್ದಿದ್ದರಿಂದ ತಾಯಿಗೂ ಅದನ್ನು ಸಾಕಲು ತಿಳಿಯದೆ ಬಿಟ್ಟು ಹೋಗಿತ್ತು. ಜಪಾನ್​ನ ಮೃಗಾಲಯದಲ್ಲಿ ಅದನ್ನು ಬಿಡಲಾಗಿತ್ತು. ಆದರೆ ಅದಕ್ಕೆ ಸ್ನೇಹಿತರು ಯಾರೂ ಇರಲಿಲ್ಲ, ಕೋತೊಯನ್ನೇ ಹೋಲುವ ಗೊಂಬೆಯನ್ನೇ ಅದು ತನ್ನ ಕುಟುಂಬವನ್ನಾಗಿ ಮಾಡಿಕೊಂಡಿತ್ತು. ಉಳಿದ ಕೋತಿಗಳೆಲ್ಲಾ ಅದರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಬಳಿಕ ಅದಕ್ಕೆ ಕೆಲವು ಕೋತಿಗಳು ಫ್ರೆಂಡ್​ಶಿಪ್ ಮಾಡಿವೆ ಎನ್ನುವ ಮಾಹಿತಿಯೂ ಇದೆ. @ Pediavenir ಎಂಬ ಎಕ್ಸ್​ ಅಕೌಂಟ್​​ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಆದರೆ ಈಗ ಹೇಳಲು ಹೊರಟಿರುವ ವಿಚಾರ ಅದಲ್ಲ, ಆ ಮರಿಗೆ ಮೊದಲು ತೊಂದರೆ ಕೊಟ್ಟಿದ್ದ ಕೋತಿ ಮೇಲೆ ಸೇಡು ತೀರಿಸಿಕೊಳ್ಳುವ ವಿಡಿಯೋ ಒಂದು ವೈರಲ್ ಆಗಿದೆ. ಆ ವಿಡಿಯೋದಲ್ಲಿ ಈ ಮರಿ ದೊಡ್ಡ ಕೋತಿಗೆ ಪಂಚ್ ಕೊಡುತ್ತಿರುವುದು, ಹಾರಿ ಒದೆಯುತ್ತಿರುವುದನ್ನು ಕಾಣಬಹುದು. ಆದರೆ ಇದು ಸತ್ಯ ಅಲ್ಲ ಇದು ಎಐ ರಚಿತ ವಿಡಿಯೋ ಆಗಿದ್ದು, ಮರಿ ಹೀಗೆ ಸೇಡು ತೀರಿಸಿಕೊಂಡರೆ ಹೇಗಿರುತ್ತೆ ಎಂಬುದಕ್ಕೆ ಈ ವಿಡಿಯೋ ಕ್ರಿಯೇಟ್ ಮಾಡಲಾಗಿದೆ. ಪಂಚ್ ಜುಲೈ 26, 2025 ರಂದು ಜನಿಸಿದ್ದು, ಕೇವಲ 500 ಗ್ರಾಂ ತೂಕವಿತ್ತು. ಮೈನಿಚಿ ಶಿಂಬುನ್ ವರದಿ ಮಾಡಿದಂತೆ, ಪಂಚ್​​ನ ತಾಯಿ ಮೊದಲ ಬಾರಿಗೆ ಗರ್ಭ ಧರಿಸಿತ್ತು, ಜನನದ ನಂತರ ಅವನನ್ನು ನೋಡಿಕೊಳ್ಳಲಿಲ್ಲ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Source link

ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ: ಸಹ ಕೈದಿಗಳ ಮೇಲೆ ಹಲ್ಲೆ – Kannada News | Biklu Shiva Murder Accused Pradeep Assaults Fellow Inmates in Parappana Agrahara Jail

ಬೆಂಗಳೂರು, ಫೆಬ್ರವರಿ 23: ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ ಪ್ರದೀಪ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ತನ್ನ ಸಹ ಕೈದಿಗಳ ಮೇಲೆ ಹಲ್ಲೆ ನಡೆಸಿದ್ದಾನೆ.  ಕೊಲೆ ಆರೋಪದಡಿ ಬಂಧಿತನಾಗಿ ಜೈಲೂಟ ಸವಿಯುತ್ತಿದ್ದರೂ ಈತ ಮತ್ತೆ ತನ್ನ ರೌಡಿಸಂ ಪ್ರದರ್ಶಿಸಿದ್ದಾನೆ ಎನ್ನಲಾಗಿದೆ. ಫೆಬ್ರವರಿ 18ರಂದು ಸುರೇಶ್ ಹಾಗೂ ಆದಿತ್ ಮಧುಕಿರಣ್ ಎಂಬುವವರ ಮೇಲೆ ಪ್ರದೀಪ್ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದ್ದು, ಸುರೇಶ್ ಮತ್ತು ಆದಿತ್ ಮಧುಕಿರಣ್ ಅವರ ಮೂಗು ಮತ್ತು ಕಪಾಳಕ್ಕೆ ಪ್ರದೀಪ್​​ ಹೊಡೆದಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನ ಸಿಬ್ಬಂದಿ ನಾನ್-ಕಾಗ್ನಿಜೆಬಲ್ ರಿಪೋರ್ಟ್ (ಎನ್‌ಸಿಆರ್) ಅನ್ನು ದಾಖಲಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಧುರಂಧರ್ 2’ ಚಿತ್ರಕ್ಕಿಂತ ‘ಟಾಕ್ಸಿಕ್’ ಚಿತ್ರಕ್ಕೆ ಸಿಕ್ತು ಹೆಚ್ಚುವರಿ 1200 ಪರದೆಗಳು? – Kannada News | Toxic vs Dhruvadhar 2: Box Office Battle Begins! Screens and Day 1 Collection Forecast

‘ಧುರಂಧರ್ 2’ vs ‘ಟಾಕ್ಸಿಕ್’ ಫೈಟ್​​ಗೆ ವೇದಿಕೆ ಸಿದ್ಧವಾಗುತ್ತಿದೆ. ಮಾರ್ಚ್ 19ರಂದು ಎರಡೂ ಸಿನಿಮಾಗಳು ಮುಖಾ ಮುಖಿ ಆಗುತ್ತಿವೆ. ಈ ಎರಡು ಸಿನಿಮಾಗಳ ಪೈಕಿ ಯಾರು ಗೆಲ್ಲುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಹೀಗಿರುವಾಗಲೇ, ‘ಟಾಕ್ಸಿಕ್’ ಸಿನಿಮಾಗೆ (Toxic Movie) ‘ಧುರಂಧರ್ 2’ ಚಿತ್ರಕ್ಕಿಂತ ಹೆಚ್ಚುವರಿಯಾಗಿ 1200 ಸ್ಕ್ರೀನ್​​ಗಳು ಸಿಗಲಿವೆ ಎಂದು ಹೇಳಲಾಗುತ್ತಾ ಇದೆ.

‘ಧುರಂಧರ್ 2’ ಸಿನಿಮಾ ಬಗ್ಗೆ ಒಂದು ವರ್ಗದ ಜನರಿಗೆ ನಿರೀಕ್ಷೆ ಇದೆ. ಈಗಾಗಲೇ ರಿಲೀಸ್ ಆಗಿರುವ ಮೊದಲ ಪಾರ್ಟ್​ ಹಲ್​ಚಲ್ ಎಬ್ಬಿಸಿರುವುದರಿಂದ ಎರಡನೇ ಪಾರ್ಟ್ ಇಷ್ಟ ಆಗಬಹುದು ಎಂದು ಹೇಳಲಾಗುತ್ತಾ ಇದೆ. ‘ಟಾಕ್ಸಿಕ್’ ಚಿತ್ರದ ಬಗ್ಗೆ ನಿರೀಕ್ಷೆ ಹುಟ್ಟಲು ಕಾರಣ ಆಗಿದ್ದು ಯಶ್. ‘ಕೆಜಿಎಫ್ 2’ ಚಿತ್ರದ ಬಳಿಕ ಅವರು ಮತ್ತೊಂದು ಹಂತಕ್ಕೆ ಹೋಗಿದ್ದಾರೆ. ಈಗ ‘ಟಾಕ್ಸಿಕ್’ ಚಿತ್ರಕ್ಕೆ ಗೀತು ಮೋಹನ್​ ದಾಸ್ ಜೊತೆ ಅವರು ಕೂಡ ಕಥೆ ಬರೆದು, ಸಿನಿಮಾ ನಿರ್ಮಾಣದಲ್ಲಿ ಅವರು ಕೈ ಜೋಡಿಸಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಡಾಮಿನೇಷನ್ ಮಾಡಲು ರೆಡಿ ಆದ ‘ಟಾಕ್ಸಿಕ್’; ದೊಡ್ಡ ಸಂಸ್ಥೆ ಪಾಲಾಯ್ತು ಹಂಚಿಕೆ ಹಕ್ಕು

ಈಗ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ‘ಟಾಕ್ಸಿಕ್’ ಚಿತ್ರಕ್ಕೆ ಭಾರತಾದ್ಯಂತ ಸುಮಾರು 5,500 ಪರದೆಗಳು ಸಿಗುವ ಸಾಧ್ಯತೆ ಇದೆ. ‘ಧುರಂಧರ್ 2’ ಚಿತ್ರಕ್ಕೆ 4,300 ಪರದೆಗಳು ಸಿಗಲಿವೆ ಎಂದು ಹೇಳಲಾಗುತ್ತಾ ಇದೆ. ಹೀಗಾದಲ್ಲಿ ಯಶ್​ ಚಿತ್ರಕ್ಕೆ ಹೆಚ್ಚಿನ ಮೈಲೇಜ್ ಸಿಗಲಿದೆ.

ಮೊದಲ ದಿನದ ಕಲೆಕ್ಷನ್ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ‘ಧುರಂಧರ್ 2’ ಸಿನಿಮಾ ಮೊದಲ ದಿನ ಭಾರತದಲ್ಲಿ 80-100 ಕೋಟಿ ರೂಪಾಯಿ ಕಲೆಕ್ಷನ್ ಮಾಡಬಹುದು ಎನ್ನಲಾಗುತ್ತಿದೆ. ‘ಟಾಕ್ಸಿಕ್’ ಸಿನಿಮಾ 260 ಕೋಟಿ ರೂಪಾಯಿಗೂ ಹೆಚ್ಚಿನ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಹಾಗಾದಲ್ಲಿ ಯಶ್ ಚಿತ್ರಕ್ಕೆ ದೊಡ್ಡ ಗೆಲುವು ಸಿಕ್ಕಂತೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 1:41 pm, Mon, 23 February 26

Source link

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ? – Kannada News | IDFC First Bank’s Rs 590 fraud case: company shares hit 20pc lower circuit, details of this scam

ನವದೆಹಲಿ, ಫೆಬ್ರುವರಿ 23: ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ (IDFC First Bank) ಚಂಡೀಗಡ ಶಾಖೆಯಲ್ಲಿ 590 ಕೋಟಿ ರೂ ವಂಚನೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಈ ಬ್ಯಾಂಕ್​ನ ಷೇರುಗಳು ತರಗೆಲೆಯಲ್ಲಿ ಉದುರುತ್ತಿವೆ. ಸೋಮವಾರ ಈ ಬ್ಯಾಂಕ್​ನ ಷೇರುಬೆಲೆ ಶೇ. 20ರ ಕೆಳಗಿನ ಮಿತಿಯಷ್ಟು ಕುಸಿದಿದೆ. ಇದರ ಷೇರುಗಳಲ್ಲಿ ಹೂಡಿಕೆ ಮಾಡಿದವರಿಗೆ ಒಂದೇ ದಿನ 14,000 ಕೋಟಿ ರೂಗೂ ಅಧಿಕ ಮೊತ್ತದ ನಷ್ಟ ಆಗಿದೆ.

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ ಈ ಪ್ರಕರಣವೇನು?

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ ಚಂಡೀಗಡ ಶಾಖೆಯ ಸಿಬ್ಬಂದಿಯಿಂದ ವಂಚನೆ ನಡೆದಿರುವ ಆರೋಪ ಇದೆ. ಹರ್ಯಾಣ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಸಂಸ್ಥೆಗಳ ಅಕೌಂಟ್​ಗಳಲ್ಲಿ ಅನಧಿಕೃತ ವಹಿವಾಟುಗಳು ನಡೆದಿರುವುದು ಬೆಳಕಿಗೆ ಬಂದಿದೆ. ಸರ್ಕಾರವು ಈ ಅಕೌಂಟ್​ಗಳನ್ನು ಮುಚ್ಚಲು ಹೋದಾಗ ಅಕೌಂಟ್ ಬ್ಯಾಲನ್ಸ್​ನಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಆಗ ಒಟ್ಟು 590 ಕೋಟಿ ರೂ ಹಣಕಾಸು ಅಕ್ರಮ ನಡೆದಿರುವುದು ಗೊತ್ತಾಗಿದೆ. ಈ ಬ್ಯಾಂಕ್​ನ ಮೂರನೇ ಕ್ವಾರ್ಟರ್​ನ ನಿವ್ವಳ ಆದಾಯವೇ 503 ಕೋಟಿ ರೂ ಇದೆ. ಅದಕ್ಕಿಂತಲೂ ಹೆಚ್ಚಿನ ಮೊತ್ತದ ಅಕ್ರಮವನ್ನು ಕೆಲ ಸಿಬ್ಬಂದಿ ಎಸಗಿದ್ದಾರೆ.

ಇದನ್ನೂ ಓದಿ: ಮಧ್ಯಂತರ ಟ್ರೇಡ್ ಡೀಲ್​ಗೆ ಮಾತುಕತೆ: ಭಾರತ ತಂಡದ ಅಮೆರಿಕ ಭೇಟಿ ಮುಂದೂಡಿಕೆ

ಸದ್ಯ ಐಡಿಎಫ್​ಸಿ ಬ್ಯಾಂಕ್​ನ ಚಂಡೀಗಡ ಬ್ರ್ಯಾಂಚ್​ನಿಂದ ಅನಧಿಕೃತವಾಗಿ ನಡೆದಿರುವ ವಹಿವಾಟುಗಳನ್ನು ಟ್ರ್ಯಾಕ್ ಮಾಡಲಾಗುತ್ತಿದೆ. ಈ ಹಣವನ್ನು ಫ್ರೀಜ್ ಮಾಡುವಂತೆ ಸಂಬಂಧಿಸಿದ ಎಲ್ಲಾ ಬ್ಯಾಂಕುಗಳಿಗೂ ಮನವಿ ಮಾಡಲಾಗಿದೆ. ಎಷ್ಟು ಸಾಧ್ಯವೋ ಎಷ್ಟು ಹಣ ರಿಕವರ್ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ. ಹರ್ಯಾಣ ಸರ್ಕಾರವು ತನ್ನ ಎಂಪ್ಯಾನಲ್ ಪಟ್ಟಿಯಿಂದ ಐಡಿಎಫ್​ಸಿ ಫಸ್ಟ್ ಬ್ಯಾಂಕ್ ಅನ್ನು ತೆಗೆದುಹಾಕಿದೆ. ತನ್ನ ಅಧೀನದ ಇಲಾಖೆಗಳು ಈ ಬ್ಯಾಂಕ್​ನಲ್ಲಿ ಹೊಂದಿರುವ ಅಕೌಂಟ್​ಗಳನ್ನು ಮುಚ್ಚುವಂತೆಯೂ ಸರ್ಕಾರ ತಿಳಿಸಿದೆ.

ಐಡಿಎಫ್​ಸಿ ಫಸ್ಟ್ ಬ್ಯಾಂಕ್ ಈ ಅಕ್ರಮದ ಬಗ್ಗೆ ತನ್ನ ಎಕ್ಸ್​ಚೇಂಜ್ ಫೈಲಿಂಗ್​ನಲ್ಲಿ ತಿಳಿಸಿದೆ. ಬ್ಯಾಂಕ್​ನ ಸಿಸ್ಟಂನಲ್ಲಿ ಯಾವುದೇ ಲೋಪ ಇಲ್ಲ. ನಿರ್ದಿಷ್ಟ ಬ್ರ್ಯಾಂಚ್​ನ ಕೆಲ ಸಿಬ್ಬಂದಿ ಹಾಗೂ ನಿರ್ದಿಷ್ಟ ಖಾತೆಗಳಿಗೆ ಮಾತ್ರವೇ ಈ ಅಕ್ರಮ ಸೀಮಿತವಾಗಿದೆ ಎಂದು ಬ್ಯಾಂಕ್ ಹೇಳಿಕೊಂಡಿದೆ. ಹಾಗೆಯೇ, ಬ್ಯಾಂಕ್ ಆಂತರಿಕ ತನಿಖೆ ನಡೆಸಿದ್ದು, ಅಕ್ರಮ ಎಸಗಿದ ಶಂಕೆಯ ಮೇಲೆ ನಾಲ್ವರು ಬ್ಯಾಂಕ್ ಅಧಿಕಾರಿಗಳನ್ನು ಅಮಾನತಿನಲ್ಲಿ ಇಡಲಾಗಿದೆ. ಬ್ಯಾಂಕ್​ನಿಂದ ಪೊಲೀಸ್ ದೂರು ಕೂಡ ಸಲ್ಲಿಕೆಯಾಗಿದೆ. ಸರ್ಕಾರಿ ಆಡಿಟಿಂಗ್​ಗೆ ಸೂಚಿಸಲಾಗಿದೆ. ಸ್ವತಂತ್ರವಾದ ಫೋರೆನ್ಸಿಕ್ ತನಿಖೆ ನಡೆಸುವಂತೆ ಕೆಪಿಎಂಜಿ ಸಂಸ್ಥೆಗೂ ತಿಳಿಸಲಾಗಿದೆ ಎಂದು ಬ್ಯಾಂಕ್ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದ ಟ್ರಂಪ್; ಅಮೆರಿಕದ ಸುಂಕ ಮತ್ತೆ ಶೇ. 15ಕ್ಕೆ ಹೆಚ್ಚಳ

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ಸರ್ಕಾರದ ಷೇರುಪಾಲು ಅಧಿಕ

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ಅತಿಹೆಚ್ಚು ಷೇರುಮಾಲಿಕತ್ವ ಹೊಂದಿರುವುದು ಸರ್ಕಾರವೇ. ಶೇ. 7.75 ಷೇರುಪಾಲು ಹೊಂದಿದೆ. 66 ಕೋಟಿಗೂ ಅಧಿಕ ಷೇರುಗಳನ್ನು ಸರ್ಕಾರ ಹೊಂದಿದೆ. ಎಲ್​ಐಸಿ, ಟಾಟಾ ಎಐಎ ಲೈಫ್ ಇನ್ಷೂರೆನ್ಸ್, ಐಸಿಐಸಿಐ ಪ್ರುಡೆನ್ಷಿಯಲ್ ಲೈಫ್ ಇನ್ಷೂರೆನ್ಸ್, ಎಚ್​ಡಿಎಫ್​ಸಿ ಲೈಫ್ ಇನ್ಷೂರೆನ್ಸ್ ಸಂಸ್ಥೆಗಳು ಗಣನೀಯ ಪ್ರಮಾಣದ ಷೇರುಪಾಲು ಹೊಂದಿವೆ. ರೀಟೇಲ್ ಹೂಡಿಕೆದಾರರ ಬಳಿ 129 ಕೋಟಿಗೂ ಅಧಿಕ ಷೇರುಗಳಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಅಧಿಕಾರ ಹಂಚಿಕೆ ಬಿಕ್ಕಟ್ಟು: ಕಾಂಗ್ರೆಸ್​ನಲ್ಲಿ ರೂಪುಗೊಳ್ಳುತ್ತಿದೆಯಾ ಮತ್ತೊಂದು ಪವರ್ ಸೆಂಟರ್! – Kannada News | Power Sharing Rift in Karnataka Congress: Is Another Power Centre Emerging Within the Party in the name of Satish Jarkiholi

ಕಾಂಗ್ರೆಸ್​ನಲ್ಲಿ ರೂಪುಗೊಳ್ಳುತ್ತಿದೆಯಾ ಮತ್ತೊಂದು ಪವರ್ ಸೆಂಟರ್!Image Credit source: tv9

ಬೆಂಗಳೂರು, ಫೆಬ್ರವರಿ 23: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಸಿಎಂ ಸಿದ್ದರಾಮಯ್ಯ ಬಣ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಜೋರಾಗಿರುವ ಸಂದರ್ಭದಲ್ಲೇ ಮತ್ತೊಂದು ಪವರ್ ಸೆಂಟರ್‌ ರೂಪುಗೊಳ್ಳುತ್ತಿದೆಯಾ ಎಂಬ ಅನುಮಾನ ಬಲವಾಗಿದೆ. ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮತ್ತೊಂದು ಪವರ್ ಸೆಂಟರ್ ರೂಪದಲ್ಲಿ ಮುನ್ನುಗ್ಗುತ್ತಿರುವ ಲಕ್ಷಣ ಕಾಣಿಸಿದೆ. ಹೈಕಮಾಂಡ್ ಮಟ್ಟದಲ್ಲೂ ಬಲ ಪ್ರದರ್ಶನ ಮಾಡಲು ಸತೀಶ್ ಜಾರಕಿಹೊಳಿ ಮುಂದಾಗಿರುವುದು ಇತ್ತೀಚಿನ ಬೆಳವಣಿಗೆಗಳಿಂದ ಸ್ಪಷ್ಟವಾಗಿದೆ.

ಅಂತಾರಾಜ್ಯ ಪ್ರವಾಸಕ್ಕೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಸಜ್ಜು

ಆಪ್ತ ಶಾಸಕರು ಹಾಗೂ ಆಪ್ತ ಡಿಸಿಸಿ ಅಧ್ಯಕ್ಷರೊಂದಿಗೆ ದೆಹಲಿಗೆ ಎರಡು ಬಾರಿ ಭೇಟಿ ನೀಡಿರುವ ಅವರು, ಬಜೆಟ್ ಅಧಿವೇಶನದ ಆಸುಪಾಸಿನಲ್ಲಿ ಮತ್ತೊಮ್ಮೆ ದೆಹಲಿಗೆ ತೆರಳಿದ್ದಾರೆ. ಇದಲ್ಲದೆ, ಮತ್ತೊಂದು ಸುತ್ತಿನ ಅಂತಾರಾಜ್ಯ ಪ್ರವಾಸಕ್ಕೂ ಬೆಂಬಲಿಗರು ಸಜ್ಜಾಗಿದ್ದಾರೆ ಎನ್ನಲಾಗಿದೆ. ಈ ಪ್ರವಾಸಗಳ ಮೂಲಕ ಪರ್ಯಾಯ ನಾಯಕತ್ವದ ಸಂದೇಶ ರವಾನಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಮಾತುಗಳು ಪಕ್ಷದ ಆಂತರಿಕ ವಲಯದಲ್ಲಿ ಕೇಳಿಬರುತ್ತಿವೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೂ ಕಣ್ಣು

ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರದಲ್ಲೂ ಸತೀಶ್ ಪ್ರಯತ್ನ ಆರಂಭಿಸಿರುವುದು ಕುತೂಹಲ ಹೆಚ್ಚಿಸಿದೆ. ಮೇ ತಿಂಗಳಲ್ಲಿ ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಲಿರುವ ಹಿನ್ನೆಲೆ, ರಾಜ್ಯ ರಾಜಕೀಯದಲ್ಲಿ ಸಹಜವಾಗಿ ಚುನಾವಣಾ ವಾತಾವರಣ ರೂಪುಗೊಳ್ಳುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಪರ್ಯಾಯ ನಾಯಕತ್ವದ ರೂಪರೇಖೆ ಸಿದ್ಧಪಡಿಸುವ ಯತ್ನವೇ ಈ ಚಟುವಟಿಕೆಗಳ ಹಿಂದೆ ಇದೆ ಎನ್ನಲಾಗುತ್ತಿದೆ.

ಇನ್ನೊಂದೆಡೆ, ನಾಯಕತ್ವ ಬದಲಾವಣೆ ಗೊಂದಲಗಳ ನಡುವೆ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆಗಳತ್ತ ಗಮನಹರಿಸಿದ್ದಾರೆ. ಸ್ವಲ್ಪ ವಿರಾಮದ ನಂತರ ಮತ್ತೆ ಮ್ಯಾರಥಾನ್‌ ಬಜೆಟ್ ಸಭೆಗಳನ್ನು ಆರಂಭಿಸಿರುವ ಅವರು, ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಆಡಳಿತ ಪಕ್ಷದ ಪರಿಶಿಷ್ಟ ಪಂಗಡ ಶಾಸಕರು ಮತ್ತು ಮುಖಂಡರು, ದಲಿತ ಸಂಘರ್ಷ ಸಮಿತಿಯ ನಾಯಕರು ಹಾಗೂ ಒಬಿಸಿ ಸಚಿವರು ಮತ್ತು ಮುಖಂಡರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ: ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಬಾಣ!

ಗೃಹ ಕಚೇರಿ ಕೃಷ್ಣದಲ್ಲಿ ನಡೆಯುತ್ತಿರುವ ಈ ಸಭೆಗಳು ಮಾರ್ಚ್ 6ರಂದು ಮಂಡಿಸಲಿರುವ ಐತಿಹಾಸಿಕ ಬಜೆಟ್‌ಗೆ ಪೂರ್ವಭಾವಿ ಸಿದ್ಧತೆ ಎಂದು ತಿಳಿದುಬಂದಿದೆ. ಪಕ್ಷದ ಒಳರಾಜಕೀಯ ಚರ್ಚೆಗಳು ಒಂದೆಡೆ ನಡೆಯುತ್ತಿದ್ದರೆ, ಆಡಳಿತ ಕಾರ್ಯಚಟುವಟಿಕೆಗಳತ್ತ ಸಿಎಂ ಗಮನ ಹರಿಸಿರುವುದು ಮತ್ತೊಂದು ರಾಜಕೀಯ ಸಂದೇಶವನ್ನೇ ನೀಡುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಫ್ ಸ್ಪಿನ್​ಗೆ ಭಾರತೀಯ ಬ್ಯಾಟರ್​ಗಳು ಆಫ್! – Kannada News | India’s Struggle Against Off Spin in T20 World Cup 2026

T20 World Cup 2026: ಟಿ20 ವಿಶ್ವಕಪ್​ನಲ್ಲಿ ಆಫ್ ಸ್ಪಿನ್ನರ್​ಗಳ ವಿರುದ್ಧ ಟೀಮ್ ಇಂಡಿಯಾದ ತಿಣುಕಾಟ ಮುಂದುವರೆದಿದೆ. ಈ ತಿಣುಕಾಟವನ್ನೇ ಇದಿಗ ಎದುರಾಳಿ ತಂಡಗಳು ಅಸ್ತ್ರವಾಗಿ ಪ್ರಯೋಗಿಸುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಸೌತ್ ಆಫ್ರಿಕಾ ವಿರುದ್ಧದ ಪಂದ್ಯ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಪರ ಮೊದಲ ಓವರ್ ಎಸೆದಿದ್ದು ಐಡೆನ್ ಮಾರ್ಕ್ರಾಮ್. ಪಾರ್ಟ್ ಟೈಮ್ ಆಫ್ ಸ್ಪಿನ್ನರ್ ಆಗಿರುವ ಮಾರ್ಕ್ರಾಮ್ ಇಶಾನ್ ಕಿಶನ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಇದಕ್ಕೂ ಮುನ್ನ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಸಲ್ಮಾನ್ ಅಲಿ ಅಘಾ ಮೊದಲ ಓವರ್ ಎಸೆದಿದ್ದರು. ಅಲ್ಲದೆ ಅಭಿಷೇಕ್ ಶರ್ಮಾ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಸಲ್ಮಾನ್ ಅಲಿ ಅಘಾ ಕೂಡ ಪಾರ್ಟ್ ಟೈಮ್ ಆಫ್ ಸ್ಪಿನ್ನರ್ ಎಂಬುದು.

ಇನ್ನು ನೆದರ್​ಲೆಂಡ್ಸ್​ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರನ್ನು ಮೊದಲ ಓವರ್​ನಲ್ಲೇ ಆರ್ಯನ್ ದತ್ ಔಟ್ ಮಾಡಿದ್ದರು. ಆರ್ಯನ್ ದತ್ ಕೂಡ ಆಫ್ ಸ್ಪಿನ್ನರ್ ಎಂಬುದು ವಿಶೇಷ.

ಆಫ್​ ಸ್ಪಿನ್​ಗೆ ಆಫ್​:

  • ಕಡಿಮೆ ರನ್ ಗತಿ: ಈ ಟೂರ್ನಿಯಲ್ಲಿ ಆಫ್-ಸ್ಪಿನ್ ವಿರುದ್ಧ ಭಾರತದ ಸರಾಸರಿ ರನ್ ಗತಿ ಕೇವಲ 6.23 ರನ್‌ ಮಾತ್ರ. ಅಂದರೆ ಆಫ್ ಸ್ಪಿನ್ನರ್​ಗಳ ಓವರ್​ನಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಕೇವಲ 6.23 ರ ಸರಾಸರಿಯಲ್ಲಿ ಮಾತ್ರ ರನ್ ಕಲೆಹಾಕಿದ್ದಾರೆ.
  • ವಿಕೆಟ್ ನಷ್ಟ: ಕಳೆದ 5 ಪಂದ್ಯಗಳಲ್ಲಿ ಭಾರತ ಕಳೆದುಕೊಂಡ 41 ವಿಕೆಟ್‌ಗಳಲ್ಲಿ 12 ವಿಕೆಟ್‌ಗಳನ್ನು ಆಫ್-ಸ್ಪಿನ್ನರ್‌ಗಳೇ ಪಡೆದಿದ್ದಾರೆ.
  • ಪಾರ್ಟ್-ಟೈಮ್ ಸ್ಪಿನ್ನರ್: ವಿಶೇಷವೆಂದರೆ, ಐಡೆನ್ ಮಾರ್ಕ್ರಾಮ್ ಮತ್ತು ಸಲ್ಮಾನ್ ಅಲಿ ಅಘಾ ಅವರಂತಹ ಪಾರ್ಟ್-ಟೈಮ್ ಬೌಲರ್‌ಗಳೇ ಭಾರತದ ಬ್ಯಾಟರ್‌ಗಳನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ.

ದಾಂಡಿಗರ ವೈಫಲ್ಯ:

  • ಎಡಗೈ ಬ್ಯಾಟರ್‌ಗಳ ಸಮಸ್ಯೆ: ಭಾರತದ ಟಾಪ್ ಆರ್ಡರ್‌ನಲ್ಲಿರುವ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ತಿಲಕ್ ವರ್ಮಾ ಅವರಂತಹ ಎಡಗೈ ಬ್ಯಾಟರ್‌ಗಳನ್ನು ಗುರಿಯಾಗಿಸಿ ಎದುರಾಳಿ ತಂಡಗಳು ಆಫ್-ಸ್ಪಿನ್ನರ್‌ಗಳನ್ನು ಬಳಸುತ್ತಿವೆ.
  • ಅಭಿಷೇಕ್ ಶರ್ಮಾ: ಆರಂಭಿಕನಾಗಿ ಕಣಕ್ಕಿಳಿಯುತ್ತಿರುವ ಆಫ್-ಸ್ಪಿನ್ ವಿರುದ್ಧ ರನ್ ಗಳಿಸಲು ಪರದಾಡುತ್ತಿದ್ದು, ಸತತ ವೈಫಲ್ಯ ಅನುಭವಿಸಿದ್ದಾರೆ.
  • ಇಶಾನ್ ಕಿಶನ್: ಸೌತ್ ಆಫ್ರಿಕಾ ವಿರುದ್ಧದ ಪಂದ್ಯದ ಮೊದಲ ಓವರ್‌ನಲ್ಲೇ ಆಫ್-ಸ್ಪಿನ್ನರ್ ಮಾರ್ಕ್ರಾಮ್‌ಗೆ ವಿಕೆಟ್ ಒಪ್ಪಿಸಿದ್ದರು.
  • ಸೂರ್ಯಕುಮಾರ್ ಯಾದವ್: ಸಾಮಾನ್ಯವಾಗಿ ವೇಗವಾಗಿ ಆಡುವ ಸೂರ್ಯ ಕೂಡ ಆಫ್-ಸ್ಪಿನ್ನರ್‌ಗಳ ವಿರುದ್ಧ 27 ಎಸೆತಗಳಲ್ಲಿ ಕೇವಲ 28 ರನ್ ಗಳಿಸಿ ತಿಣುಕಾಡಿದ್ದಾರೆ.

ಬದಲಾವಣೆ ಸಾಧ್ಯತೆ:

ಟೀಮ್ ಇಂಡಿಯಾದ ಟಾಪ್-3 ಬ್ಯಾಟರ್​ಗಳು, ಅಂದರೆ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಹಾಗೂ ತಿಲಕ್ ವರ್ಮಾ ಆಫ್ ಸ್ಪಿನ್ ಎಸೆತಗಳಲ್ಲಿ ವಿಕೆಟ್ ಒಪ್ಪಿಸುತ್ತಿದ್ದಾರೆ. ಇಲ್ಲಾ ರನ್​ಗಳಿಸಲು ಪರದಾಡುತ್ತಿದ್ದಾರೆ. ಹೀಗಾಗಿ ಝಿಂಬಾಬ್ವೆ ವಿರುದ್ಧದ ಪಂದ್ಯಕ್ಕಾಗಿ ಟಾಪ್-3 ನಲ್ಲಿ ಬದಲಾವಣೆ ಕಂಡು ಬರಲಿದೆ.

ಅಂದರೆ ಈ ಮೂವರು ಎಡಗೈ ದಾಂಡಿಗರಲ್ಲಿ ಒಬ್ಬರನ್ನು ಕೈ ಬಿಟ್ಟು ಅವರ ಬದಲಿಗೆ ಬಲಗೈ ದಾಂಡಿಗನನ್ನು ಕಣಕ್ಕಿಳಿಸಬಹುದು. ಅದರಂತೆ ಸಂಜು ಸ್ಯಾಮ್ಸನ್​ಗೆ ಅವಕಾಶ ಸಿಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಸೌತ್ ಆಫ್ರಿಕಾ ಮನಸ್ಸು ಮಾಡಿದ್ರೆ ಭಾರತ ಡೈರೆಕ್ಟ್ ಸೆಮಿಫೈನಲ್​ಗೆ!

ನಿರ್ಣಾಯಕ ಪಂದ್ಯ:

ಸೂಪರ್-8 ಸುತ್ತಿನಲ್ಲಿ ಭಾರತ ತಂಡಕ್ಕೆ ಉಳಿದಿರುವುದು ಕೇವಲ 2 ಮ್ಯಾಚ್ ಮಾತ್ರ. ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಅಂದರೆ ಭಾರತ ತಂಡವು ಸೆಮಿಫೈನಲ್​ಗೆ ಪ್ರವೇಶಿಸಬೇಕಿದ್ದರೆ ಮುಂದಿನ ಎರಡು ಮ್ಯಾಚ್​ಗಳಲ್ಲೂ ಜಯ ಸಾಧಿಸಬೇಕು. ಅದಕ್ಕೂ ಮುನ್ನ ಟೀಮ್ ಇಂಡಿಯಾ ತನ್ನ ಆಫ್ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ.

Source link

Video: ರಸ್ತೆ ಬದಿ ತಾವು ಕಸ ಎಸೆದ್ರೆ ದಂಡ ಬೀಳುತ್ತೆ ಎಂದು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ – Kannada News | CCTV Footage Shows Man Using Dog to Dispose of Trash Illegally in Italy

ಇಟಲಿ, ಫೆಬ್ರವರಿ 23: ರಸ್ತೆ ಬದಿ ತಾವು ಕಸ ಹಾಕಿದ್ರೆ ದಂಡ ಬೀಳುತ್ತೆ ಎಂದು ವ್ಯಕ್ತಿಯೊಬ್ಬ ನಾಯಿಗೆ ಕಸ ಎಸೆಯುವ ಟ್ರೈನಿಂಗ್ ನೀಡಿರುವ ಘಟನೆ ಇಟಲಿಯಲ್ಲಿ ನಡೆದಿದೆ. ಆದರೆ ವಿಪರ್ಯಾವೆಂಸದರೆ ಟ್ರೈನಿಂಗ್ ಕೊಟ್ಟಿದ್ದು, ಡಸ್ಟ್​ಬಿನ್ ಒಳಗೆ ಕಸ ಹಾಕುವುದಕ್ಕಲ್ಲ ಬದಲಾಗಿ ರಸ್ತೆ ಪಕ್ಕದಲ್ಲೇ ಎಸೆಯುವುದಕ್ಕೆ. ಕ್ಯಾಟಾನಿಯಾದಲ್ಲಿ, ಕ್ಯಾಮೆರಾ ದಂಡದಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬ ತನ್ನ ನಾಯಿಗೆ ಕಸ ಎಸೆಯಲು ತರಬೇತಿ ನೀಡಿದ್ದ. ಆ ನಾಯಿ ರಸ್ತೆಬದಿಯಲ್ಲಿ ಚೀಲವನ್ನು ಹೊತ್ತುಕೊಂಡು ಹೋಗುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು ಮತ್ತು ಅಧಿಕಾರಿಗಳು ಅಂತಿಮವಾಗಿ ಮಾಲೀಕರನ್ನು ಗುರುತಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಪ್ರಯಾಣಿಕರಿಗೆ ನಿರಾಸೆ ಮಾಡುತ್ತಾ ಬೆಂಗಳೂರು – ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್? ಪ್ರಯಾಣದ ಸಮಯದ ಬಗ್ಗೆ ಚರ್ಚೆ – Kannada News | Vande Bharat Bengaluru Goa: Experts Demand Shorter Travel and Sleeper Coaches for New Route

ಬೆಂಗಳೂರು, ಫೆ.23: ನೈಋತ್ಯ ರೈಲ್ವೆಯು ಬೆಂಗಳೂರು ಮತ್ತು ಗೋವಾದ ಮಡ್ಗಾಂವ್ (Vande Bharat Bengaluru Goa) ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಆರಂಭಿಸಲು ಸಿದ್ಧತೆ ನಡೆಸುತ್ತಿದೆ. ಆದರೆ, ಈ ರೈಲಿನ ಅಂದಾಜು ಪ್ರಯಾಣದ ಸಮಯ ಮತ್ತು ವೇಳಾಪಟ್ಟಿಯ ಬಗ್ಗೆ ಈಗ ಭಾರಿ ಚರ್ಚೆ ಶುರುವಾಗಿದೆ. ವಂದೇ ಭಾರತ್ ರೈಲು ಬೆಂಗಳೂರಿನಿಂದ ಗೋವಾ ತಲುಪಲು ಸುಮಾರು 13 ಗಂಟೆಗಳ ಸಮಯ ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಇದು ಪ್ರೀಮಿಯಂ ರೈಲಿಗೆ ಬಹಳ ದೀರ್ಘ ಸಮಯ ಎಂಬುದು ತಜ್ಞರ ಅಭಿಪ್ರಾಯ. ಜತೆಗೆ ಇದು ಪ್ರಯಾಣಿಕರಿಗೂ ತೊಂದರೆ ಆಗಲಿದೆ.

ಇನ್ನು ರೈಲ್ವೆ ತಜ್ಞ ಸಂಜೀವ್ ದ್ಯಾಮನವರ್ ಅವರ ಪ್ರಕಾರ, ಈ ರೈಲು ಹಗಲು ಹೊತ್ತಿನಲ್ಲಿ ಸಂಚರಿಸಿದರೆ ಪ್ರವಾಸಿಗರು ಇಡೀ ದಿನವನ್ನು ಪ್ರಯಾಣದಲ್ಲೇ ಕಳೆಯಬೇಕಾಗುತ್ತದೆ. ಬೆಳಿಗ್ಗೆ 4 ಗಂಟೆಗೆ ರೈಲು ಬಿಟ್ಟರೆ ಪ್ರವಾಸಿಗರಿಗೆ ತೊಂದರೆಯಾಗಲಿದೆ. ಅದರ ಬದಲು ಸಂಜೆ 6 ಅಥವಾ 7 ಗಂಟೆಗೆ ಹೊರಟು ಬೆಳಿಗ್ಗೆ 7 ಗಂಟೆಗೆ ಗೋವಾ ತಲುಪುವಂತಿದ್ದರೆ ಹೆಚ್ಚು ಅನುಕೂಲಕರ.

ವಂದೇ ಭಾರತ್ ಒಂದು ಪ್ರೀಮಿಯಂ ರೈಲಾದ್ದರಿಂದ ಇದರ ಟಿಕೆಟ್ ದರ ಎಲ್ಲರಿಗೂ ಕೈಗೆಟುಕುವಂತಿರಲಿಕ್ಕಿಲ್ಲ. ಅಲ್ಲದೆ, 12-13 ಗಂಟೆಗಳ ಕಾಲ ಕುಳಿತು ಪ್ರಯಾಣಿಸುವುದು ಕಷ್ಟಕರ. ಹೀಗಾಗಿ ಈ ಮಾರ್ಗಕ್ಕೆ ಸ್ಲೀಪರ್ ಕೋಚ್‌ಗಳಿರುವ (Sleeper Configuration) ರೈಲು ಹೆಚ್ಚು ಪ್ರಾಯೋಗಿಕ ಎಂದು ರೈಲ್ವೆ ಹೋರಾಟಗಾರ ಕೃಷ್ಣ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: “ಬೆಂಗಳೂರನ್ನು ಮತ್ತೆ ಶ್ರೇಷ್ಠ ನಗರವನ್ನಾಗಿಸೋಣ”: ಈ ಬದಲಾವಣೆಯಾದರೆ ಸಿಲಿಕಾನ್ ಸಿಟಿ ವಿಶ್ವ ದರ್ಜೆಯ ನಗರ ಆಗುವುದು ಖಂಡಿತ

ಪ್ರಯಾಣದ ಸಮಯವನ್ನು ಕನಿಷ್ಠ 11 ಗಂಟೆಯೊಳಗೆ ತರಬೇಕು ಎಂದು ರೈಲ್ವೆ ತಜ್ಞರು ಒತ್ತಾಯಿಸಿದ್ದಾರೆ. ಪ್ರಸ್ತುತ ಬೆಂಗಳೂರು-ಬೆಳಗಾವಿ ವಂದೇ ಭಾರತ್ 9 ರಿಂದ 10 ಗಂಟೆ ತೆಗೆದುಕೊಳ್ಳುತ್ತಿದ್ದು, ಅದನ್ನು ಲೊಂಡಾ ಮಾರ್ಗವಾಗಿ ಗೋವಾಕ್ಕೆ ವಿಸ್ತರಿಸುವ ಬಗ್ಗೆಯೂ ಚರ್ಚೆ ನಡೆದಿದೆ. ನೈಋತ್ಯ ರೈಲ್ವೆಯ ಈ ಪ್ರಸ್ತಾವನೆಯು ಈಗ ರೈಲ್ವೆ ಮಂಡಳಿಯ (Railway Board) ಅನುಮೋದನೆಗಾಗಿ ಕಾಯುತ್ತಿದೆ. ಸಾರ್ವಜನಿಕರ ಈ ಆಕ್ಷೇಪಣೆಗಳನ್ನು ಮಂಡಳಿಯು ಪರಿಗಣಿಸುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ.

ಬೆಂಗಳೂರಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link