All posts by nagaraj11081993

ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್! – Kannada News | Goripalya Indira Canteen Turns into Hub of Illegal Activities: Residents Allege Neglect by Authorities in Bengaluru

ಬೆಂಗಳೂರು, ಫೆಬ್ರವರಿ 21: ಬೆಂಗಳೂರಿನ ಗೋರಿಪಾಳ್ಯದಲ್ಲಿರುವ ಇಂದಿರಾ ಕ್ಯಾಂಟೀನ್ ನಿರ್ವಹಣೆಯ ಕೊರತೆಯಿಂದ ಪಾಳು ಬಿದ್ದಿದೆ. ಬಡವರ ಅಕ್ಷಯ ಪಾತ್ರೆ ಎಂದೇ ಕರೆಯಲ್ಪಡುತ್ತಿದ್ದ ಈ ಕ್ಯಾಂಟೀನ್ ಪ್ರಸ್ತುತ ದಯನೀಯ ಸ್ಥಿತಿಯಲ್ಲಿದೆ. ಕಳೆದ ಎರಡು-ಮೂರು ತಿಂಗಳಿಂದ ಕ್ಯಾಂಟೀನ್ ಮುಚ್ಚಲ್ಪಟ್ಟಿದೆ. ಸ್ಥಳೀಯರ ಪ್ರಕಾರ, ಕ್ಯಾಂಟೀನ್ ಆವರಣವನ್ನು ಈಗ ಗಾಂಜಾ ಮತ್ತು ಇತರೆ ಅನೈತಿಕ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ. ಸದ್ಯ ಸ್ಥಳೀಯರು ಆಕ್ರೋಶಗೊಂಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಧ್ವನಿ ಎತ್ತಿದ್ದಾರೆ. ಹಿಂದೆ ಬಡವರು ಇಲ್ಲಿ ನೆಮ್ಮದಿಯಿಂದ ಊಟ ಮಾಡುತ್ತಿದ್ದರು. ಆದರೆ ಈಗ ಕ್ಯಾಂಟೀನ್ ಸುತ್ತಮುತ್ತ ಕಸ ಮತ್ತು ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಅಧಿಕಾರಿಗಳು, ಕಾರ್ಪೊರೇಟರ್‌ಗಳು ಈ ಬಗ್ಗೆ ಗಮನಹರಿಸಿ, ಕ್ಯಾಂಟೀನ್ ಅನ್ನು ಸ್ವಚ್ಛಗೊಳಿಸಿ, ಪುನಃ ತೆರೆಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ವರದಿ: ಅರುಣ್​ ಕುಮಾರ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತುಂಗಾ ನದಿ ತೀರದಲ್ಲಿ ವಿದೇಶಿಗರ ಪಾರ್ಟಿ! ರೆಸಾರ್ಟ್ ಮಾಲೀಕರ ಮೇಲೆ ಬಿತ್ತು ಕೇಸ್ – Kannada News | Koppal: Unauthorized Foreigner Party at Tungabhadra River Bank, Police Act

ತುಂಗಾ ನದಿ ತೀರದಲ್ಲಿ ವಿದೇಶಿಗರ ಪಾರ್ಟಿ! ರೆಸಾರ್ಟ್ ಮಾಲೀಕರ ಮೇಲೆ ಬಿತ್ತು ಕೇಸ್

ಕೊಪ್ಪಳ, ಫೆಬ್ರವರಿ 21: ಜಿಲ್ಲೆಯಲ್ಲಿ ವಿದೇಶಿಗರ ಅನಧಿಕೃತ ಪಾರ್ಟಿಗಳು ನಿಲ್ಲದಿರುವುದು ಮತ್ತೆ ಬೆಳಕಿಗೆ ಬಂದಿದೆ. ಗಂಗಾವತಿ (Gangavathi) ಸಮೀಪದ ತುಂಗಭದ್ರಾ ನದಿ ತೀರದಲ್ಲಿ ಫೆಬ್ರವರಿ 16ರಂದು ಯಾವುದೇ ಅನುಮತಿ ಪಡೆಯದೆ ಭರ್ಜರಿ ಪಾರ್ಟಿ ಆಯೋಜಿಸಲಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿದೇಶಿಗರ ವೀಡಿಯೋ ನೋಡಿದ್ದ ಪೊಲೀಸರು ಸಂಬಂಧಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವೈರಲ್ ವೀಡಿಯೋ ನೋಡಿ ಕೇಸ್ ದಾಖಲು

ಈ ಕಾರ್ಯಕ್ರಮವು ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ವೇಳೆ ಡಿಜೆ ಸದ್ದಿಗೆ ವಿದೇಶಿಗರು ನದಿ ತೀರದಲ್ಲೇ ಕುಣಿದು ಕುಪ್ಪಳಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿತು. ಈ ಹಿನ್ನೆಲೆ  ‘ದಿ ಹಂಪಿ ಕೆಫೆ’ ರೆಸಾರ್ಟ್ ಮಾಲೀಕರಾದ ಪಿಯೂಷ್ ಹಾಗೂ ವ್ಯವಸ್ಥಾಪಕರ ವಿರುದ್ಧವೂ ಅನುಮತಿ ಇಲ್ಲದೆ ಪಾರ್ಟಿ ಆಯೋಜಿಸಿದ ಆರೋಪದಡಿ ಪ್ರಕರಣ ದಾಖಲಾಗಿತ್ತು.

ವೈರಲ್ ಆದ ಪಾರ್ಟಿ ವೀಡಿಯೋ ಇಲ್ಲಿದೆ

ಇದನ್ನೂ ಓದಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಟ್ಟು ನಿಂತ ಸ್ಕ್ಯಾನಿಂಗ್ ಮಶಿನ್! ರೋಗಿಗಳ ಪರದಾಟ

ತೆರೆದ ಜಾಗದಲ್ಲಿ ಕಾರ್ಯಕ್ರಮ ನಡೆಸಿ ನಿಯಮ ಉಲ್ಲಂಘಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕೆಪಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ನೋಟಿಸ್ ಜಾರಿಗೊಳಿಸಲಾಗಿದೆ. ಈ ಕುರಿತು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ ಹೇಳಿಕೆ ನೀಡಿದ್ದು, ಕಾರ್ಯಕ್ರಮಕ್ಕೆ ಯಾರು ಯಾರು ಹಾಜರಾಗಿದ್ದರು ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದಿದ್ದಾರೆ. ರೆಸಾರ್ಟ್‌ನಲ್ಲಿ ನಿಯಮಬಾಹಿರ ಚಟುವಟಿಕೆಗಳ ಪರಿಶೀಲನೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಜಿಲ್ಲಾಡಳಿತವೂ ಟಾಸ್ಕ್ ಫೋರ್ಸ್ ರಚಿಸಿದೆ. ದೂರು ದಾಖಲಾಗುತ್ತಿದ್ದರೂ ಅನಧಿಕೃತ ಪಾರ್ಟಿಗಳು ಮರುಕಳಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸೂಪರ್-8 ಪಂದ್ಯಗಳ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ? – Kannada News | T20 World Cup 2026: What will happen if Super 8 match is cancelled

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಗಿದಿದೆ. ಮೊದಲ ಸುತ್ತಿನಲ್ಲಿ ಕಣಕ್ಕಿಳಿದ 20 ತಂಡಗಳಲ್ಲಿ 8 ಟೀಮ್​ಗಳು ಸೂಪರ್-8 ಸುತ್ತಿಗೆ ಪ್ರವೇಶಿಸಿದೆ. ಈ ಎಂಟು ತಂಡಗಳನ್ನು 2 ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಅದರಂತೆ ದ್ವಿತೀಯ ಸುತ್ತಿನಲ್ಲಿ ಗ್ರೂಪ್​ಗಳಲ್ಲಿರುವ ತಂಡಗಳ ನಡುವೆ ಸೆಣಸಾಟ ನಡೆಯಲಿದೆ.

ಸೂಪರ್-8 ಗುಂಪುಗಳು:

  • ಗ್ರೂಪ್ 1: ಭಾರತ, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ.
  • ಗ್ರೂಪ್ 2: ಇಂಗ್ಲೆಂಡ್, ನ್ಯೂಝಿಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ.

ಇಲ್ಲಿ ಭಾರತ ತಂಡವು ಗ್ರೂಪ್-1 ರಲ್ಲಿರುವ ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ ತಂಡಗಳನ್ನು ಎದುರಿಸಲಿದೆ. ಇದೇ ಮಾದರಿಯಲ್ಲಿ ಗ್ರೂಪ್-2 ನಲ್ಲಿರುವ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ.

ಅದರಂತೆ ದ್ವಿತೀಯ ಸುತ್ತಿನಲ್ಲಿ ಒಂದು ತಂಡವು ಒಟ್ಟು 3 ಪಂದ್ಯಗಳನ್ನಾಡಲಿದೆ. ಈ ಪಂದ್ಯಗಳಲ್ಲಿ ಗೆದ್ದು ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ 4 ಟೀಮ್​ಗಳು ಸೆಮಿಫೈನಲ್​ಗೇರಲಿದೆ.

ಒಂದು ವೇಳೆ  ಪಂದ್ಯಗಳಿಗೆ ಮಳೆ ಅಡಚಣೆ ಉಂಟು ಮಾಡಿದರೆ ಫಲಿತಾಂಶ ನಿರ್ಧರಿಸುವುದು ಹೇಗೆ? ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಈ ಕೆಳಗಿನಂತಿದೆ..

  • ಮೀಸಲು ದಿನ ಇಲ್ಲ: ಸೂಪರ್ 8 ಹಂತದ ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇರುವುದಿಲ್ಲ. ಮೀಸಲು ದಿನಗಳು ಕೇವಲ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಿಗೆ ಮಾತ್ರ ಅನ್ವಯಿಸುತ್ತವೆ.
  • ಒಂದೊಂದು ಅಂಕ: ಟಿ20 ವಿಶ್ವಕಪ್‌ನ ಸೂಪರ್ 8 ಪಂದ್ಯವು ಮಳೆಯಿಂದಾಗಿ ರದ್ದಾದರೆ ಎರಡೂ ತಂಡಗಳಿಗೆ ತಲಾ ಒಂದು ಅಂಕವನ್ನು ನೀಡಲಾಗುತ್ತದೆ.
  • ಕನಿಷ್ಠ ಓವರ್‌ಗಳು: ಪಂದ್ಯದ ಫಲಿತಾಂಶ ನಿರ್ಧರಿಸಲು ಎರಡೂ ತಂಡಗಳು ಕನಿಷ್ಠ 5 ಓವರ್‌ಗಳನ್ನು ಆಡುವುದು ಕಡ್ಡಾಯ.
  • ಹೆಚ್ಚುವರಿ ಸಮಯ: ಮಳೆ ಬಂದಾಗ ಪಂದ್ಯ ನಡೆಸಲು ಅಧಿಕಾರಿಗಳಿಗೆ ನಿಗದಿತ ಸಮಯದ ನಂತರ ಹೆಚ್ಚುವರಿಯಾಗಿ 90 ನಿಮಿಷಗಳ ಕಾಲಾವಕಾಶ ಇರಲಿದೆ.
  • 30 ಎಸೆತಗಳು: ಮಳೆಯಿಂದಾಗಿ ಪಂದ್ಯವು ಸ್ಥಗಿತಗೊಂಡರೆ, ಎರಡನೇ ಬ್ಯಾಟಿಂಗ್ ಮಾಡುವ ತಂಡ (ಉದಾಹರಣೆಗೆ ಭಾರತ) ಕನಿಷ್ಠ 5 ಓವರ್‌ಗಳನ್ನು ಪೂರ್ಣಗೊಳಿಸಿದರೆ ಮಾತ್ರ DLS ವಿಧಾನದಡಿ ವಿಜೇತರನ್ನು ನಿರ್ಧರಿಸಲು ಸಾಧ್ಯವಾಗುತ್ತದೆ.
  • ಪಂದ್ಯ ರದ್ದು: ಒಂದು ವೇಳೆ ಮಳೆಯ ಕಾರಣದಿಂದ ಎರಡೂ ತಂಡಗಳು ತಲಾ 5 ಓವರ್‌ಗಳನ್ನು ಆಡಲು ಸಾಧ್ಯವಾಗದಿದ್ದರೆ ಮಾತ್ರ ಪಂದ್ಯವನ್ನು ‘ರದ್ದು’ ಎಂದು ಘೋಷಿಸಲಾಗುತ್ತದೆ.

ಇತ್ತ ಭಾರತ ತಂಡವು ತನ್ನೆಲ್ಲಾ ಪಂದ್ಯಗಳನ್ನು ಭಾರತದಲ್ಲೇ ಆಡಲಿದೆ. ಹೀಗಾಗಿ ಮಳೆ ಭೀತಿ ಇಲ್ಲ ಎಂದೇ ಹೇಳಬಹುದು. ಆದರೆ ಶ್ರೀಲಂಕಾದಲ್ಲಿ ನಡೆಯಲಿರುವ ನ್ಯೂಝಿಲೆಂಡ್, ಇಂಗ್ಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ ನಡುವಣ ಪಂದ್ಯಗಳಿಗೆ ಮಳೆ ಆತಂಕ ಎದುರಾಗಿದೆ.

ಇದನ್ನೂ ಓದಿ: ‘ಹೈದರಾಬಾದ್’ ತಂಡಕ್ಕೆ ಗ್ಲೆನ್ ಮ್ಯಾಕ್ಸ್​ವೆಲ್ ಡೈರೆಕ್ಟ್ ಎಂಟ್ರಿ

ಏಕೆಂದರೆ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಝಿಂಬಾಬ್ವೆ ಹಾಗೂ ಐರ್ಲೆಂಡ್ ನಡುವಣ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಹಾಗೆಯೇ ಕೆಲ ಪಂದ್ಯಗಳು ಮಳೆಯಿಂದಾಗಿ ವಿಳಂಬವಾಗಿತ್ತು. ಹೀಗಾಗಿ ಗ್ರೂಪ್-2 ನಲ್ಲಿರುವ ತಂಡಗಳ ಪಂದ್ಯಗಳಿಗೆ ಮಳೆ ಅಡಚಣೆ ಉಂಟು ಮಾಡುವ ಸಾಧ್ಯತೆಯಿದೆ.

Published On – 11:53 am, Sat, 21 February 26

Source link

ಅಮೆರಿಕ ಸುಪ್ರೀಂ ಕೋರ್ಟ್​ನಲ್ಲಿ ಟ್ರಂಪ್ ಸೊಕ್ಕು ಮುರಿಯಲು ಕಾರಣರಾಗಿದ್ದು ಭಾರತೀಯ ಮೂಲದ ವಕೀಲ! ಯಾರು ಗೊತ್ತೇ ಈ ನೀಲ್ ಕತ್ಯಾಲ್? – Kannada News | Who Is Neal Katyal? Indian Origin Lawyer Behind US Supreme Court Setback to Donald Trump on Tariffs

ವಾಷಿಂಗ್ಟನ್, ಫೆಬ್ರವರಿ 21: ಭಾರತವೂ ಸೇರಿದಂತೆ ವಿವಿಧ ದೇಶಗಳ ಉತ್ಪನ್ನಗಳ ಆಮದಿನ ಮೇಲೆ ಯದ್ವಾತದ್ವಾ ಸುಂಕ ವಿಧಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ (Donald Trump) ಅಲ್ಲಿನ ಸುಪ್ರೀಂ ಕೋರ್ಟ್ ತೀರ್ಪು ಭಾರೀ ಹಿನ್ನಡೆ ಉಂಟುಮಾಡಿದೆ. ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿನಿಂದ (US Supreme court) ಸದ್ಯದ ಮಟ್ಟಿಗೆ ಭಾರತಕ್ಕೂ ಪ್ರಯೋಜನವಾಗಿದೆ. ಅಂದಹಾಗೆ, ಟ್ರಂಪ್ ಸೊಕ್ಕುಮುರಿಯುವಂತಹ ತೀರ್ಪು ಬರುವುದಕ್ಕೆ ಕಾರಣರಾಗಿದ್ದು ಕೂಡ ಭಾರತೀಯ ಮೂಲದವರೇ! ಸುಪ್ರೀಂ ಕೋರ್ಟ್​​ಮಲ್ಲಿ 6-3 ಅನುಪಾತದಲ್ಲಿ ಪ್ರಕಟವಾದ ತೀರ್ಪು ಅಮೆರಿಕದ ಹಾಗೂ ಜಾಗತಿಕ ಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ತೀರ್ಪು ಬರುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಭಾರತೀಯ ಮೂಲದ ಅಮೆರಿಕನ್ ವಕೀಲ ನೀಲ್ ಕತ್ಯಾಲ್ ಎಂಬುದು ಗಮನಾರ್ಹ.

ಯಾರು ಈ ನೀಲ್ ಕತ್ಯಾಲ್?

ನೀಲ ಕತ್ಯಾಲ್ ಭಾರತೀಯ ಮೂಲದ ವ್ಯಕ್ತಿ ಹಾಗೂ ಪ್ರಸಿದ್ಧ ಅಮೆರಿಕನ್ ವಕೀಲ. ಇವರ ತಂದೆ-ತಾಯಿ ಭಾರತೀಯ ಮೂಲದವರು. ತಾಯಿ ಪ್ರತಿಭಾ ಮಕ್ಕಳ ತಜ್ಞೆಯಾಗಿದ್ದು, ತಂದೆ ಸುಂದರ್ ಎಂಜಿನಿಯರ್ ಆಗಿದ್ದರು. 1970ರ ಮಾರ್ಚ್​​ 12 ರಂದು ಷಿಕಾಗೋದಲ್ಲಿ ಜನಿಸಿದ ಕತ್ಯಾಲ್ ಕಾನೂನು ಪದವಿ ಪಡೆದಿದ್ದಾರೆ.

ಕತ್ಯಾಲ್ ಅಮೆರಿಕ ನ್ಯಾಯಾಂಗ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದ ಅನುಭವ ಹೊಂದಿದ್ದು, ಸಾಲಿಸಿಟರ್ ಜನರಲ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. 50ಕ್ಕೂ ಪ್ರಮುಖ ಹೆಚ್ಚು ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್​​ನಲ್ಲಿ ವಾದಿಸಿದ ಅನುಭವ ಹೊಂದಿದ್ದಾರೆ.

ಸದ್ಯ ಕತ್ಯಾಲ್ ಅವರು ಹೆಚ್ಚುವರಿ ಸುಂಕ ವಿಧಿಸಿದ ಪ್ರಕರಣದಲ್ಲಿ ಸಣ್ಣ ಉದ್ಯಮಿಗಳ ಪರವಾಗಿ ವಾದ ಮಂಡಿಸಿದ್ದರು. ತೀರ್ಪು ಪ್ರಕಟವಾದ ಬಳಿಕ, ನಾವು ಕೇಳಿದ್ದನ್ನೆಲ್ಲಾ ಸುಪ್ರೀಂ ಕೋರ್ಟ್ ನೀಡಿದೆ. ನಗೆ ಸಂಪೂರ್ಣ ಜಯ ದೊರಕಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಅವರಿಗೆ ಅಮೆರಿಕ ನ್ಯಾಯಾಂಗ ಇಲಾಖೆಯಿಂದ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಎಡ್ಮಂಡ್ ಜೆ. ರ್ಯಾಂಡಾಲ್ಫ್ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಲಭಿಸಿವೆ. 2017ರಲ್ಲಿ ‘ಲಿಟಿಗೇಟರ್ ಆಫ್ ದಿ ಇಯರ್’ ಪ್ರಶಸ್ತಿಗೂ ಭಾಜನರಾಗಿದ್ದರು.

ಸುಂಕ ಪ್ರಕರಣದ ವಿರುದ್ಧದ ತೀರ್ಪಿನ ಮಹತ್ವವೇನು?

ಅಧ್ಯಕ್ಷರು ಶಕ್ತಿಶಾಲಿಗಳಾಗಿರಬಹುದು, ಆದರೆ ಸಂವಿಧಾನ ಅದಕ್ಕಿಂತಲೂ ಶಕ್ತಿಶಾಲಿ. ಅಮೆರಿಕದಲ್ಲಿ ತೆರಿಗೆ ವಿಧಿಸುವ ಅಧಿಕಾರ ಕಾಂಗ್ರೆಸ್‌ಗೆ ಮಾತ್ರ ಸೀಮಿತ ಎಂಬ ಸಂದೇಶವನ್ನು ಸುಪ್ರೀಂ ಕೋರ್ಟ್ ನೀಡಿದೆ ಎಂದು ತೀರ್ಪಿನ ಮಹತ್ವವನ್ನು ಕತ್ಯಾಲ್ ವಿವರಿಸಿದ್ದಾರೆ.

ಈ ಪ್ರಕರಣ ಹಾಗೂ ತೀರ್ಪು ಯಾವುದೇ ಒಬ್ಬ ಅಧ್ಯಕ್ಷರ ಬಗ್ಗೆ ಅಲ್ಲ. ಇದು ಅಧಿಕಾರ ವಿಭಜನೆ ಮತ್ತು ಸಂವಿಧಾನಾತ್ಮಕ ಮೌಲ್ಯಗಳ ರಕ್ಷಣೆಯ ಬಗ್ಗೆ ಎಂದು ಕತ್ಯಾಲ್ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿಗೆ ಟ್ರಂಪ್ ಪ್ರತಿಕ್ರಿಯೆ ಏನು?

ತೀರ್ಪಿನ ಬಳಿಕ ಟ್ರಂಪ್ ಕೆಲವು ನ್ಯಾಯಮೂರ್ತಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ತೀರ್ಪಿನ ಪರಿಣಾಮವಾಗಿ ಅಮೆರಿಕ ಇತರೆ ರಾಷ್ಟ್ರಗಳೊಂದಿಗೆ ಈಗಾಗಲೇ ಹೊಂದಿರುವ ವ್ಯಾಪಾರ ಒಪ್ಪಂದಗಳ ಮೇಲೆ ಏನು ಪರಿಣಾಮ ಬೀಳಬಹುದು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: ಟ್ರಂಪ್ ಸೊಕ್ಕು ಮುರಿದ ಅಮೆರಿಕ ಸುಪ್ರೀಂ ಕೋರ್ಟ್: ಭಾರತದ ಉತ್ಪನ್ನಗಳ ಮೇಲಿನ ತೆರಿಗೆಯೂ ಶೇ 10ಕ್ಕೆ ಇಳಿಕೆ!

ಒಟ್ಟಿನಲ್ಲಿ, ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಭಾರತೀಯ ಮೂಲದ ವಕೀಲ ನೀಲ್ ಕತ್ಯಾಲ್ ವಹಿಸಿದ ಪಾತ್ರ ಭಾರತೀಯ ಮೂಲದ ಸಮುದಾಯಕ್ಕೆ ಹೆಮ್ಮೆಯ ವಿಷಯವಾಗಿದ್ದು, ಜಾಗತಿಕ ರಾಜಕೀಯ-ಆರ್ಥಿಕ ವಲಯದಲ್ಲಿ ಭಾರತೀಯರ ಪ್ರಭಾವ ಮತ್ತೊಮ್ಮೆ ಸಾಬೀತಾದದಂತಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Lizard Omens: ಮನೆಯಲ್ಲಿ ಪದೇ ಪದೇ ಹಲ್ಲಿ ಕಾಣಿಸಿಕೊಳ್ಳುತ್ತಿದ್ದರೆ ಏನರ್ಥ? – Kannada News | Lizard omens shubh ashubh meanings in jyotishya vastu and shakuna shastra

ವಾಸ್ತುಶಾಸ್ತ್ರ ಮತ್ತು ಶಕುನ ಶಾಸ್ತ್ರಗಳ ಪ್ರಕಾರ, ಹಲ್ಲಿ ಕೇವಲ ಗೋಡೆಯ ಮೇಲೆ ಓಡಾಡುವ ಜೀವಿಯಷ್ಟೇ ಅಲ್ಲ; ಅದು ಕೆಲವೊಮ್ಮೆ ನಮ್ಮ ಜೀವನದಲ್ಲಿ ಸಂಭವಿಸಬಹುದಾದ ಶುಭ–ಅಶುಭ ಘಟನೆಗಳ ಸಂಕೇತವೆಂದು ಪರಿಗಣಿಸಲಾಗುತ್ತದೆ. ಅದರ ಬಣ್ಣ, ನಡವಳಿಕೆ ಮತ್ತು ಅದು ಮನೆಯಲ್ಲಿ ಕಾಣಿಸಿಕೊಳ್ಳುವ ಸ್ಥಳ ಎಲ್ಲವೂ ವಿಶೇಷ ಅರ್ಥವನ್ನು ಹೊಂದಿವೆ ಎಂದು ಧಾರ್ಮಿಕ ನಂಬಿಕೆಗಳು ಹೇಳುತ್ತವೆ.

ಕಪ್ಪು ಬಣ್ಣದ ಹಲ್ಲಿ:

ಮನೆಯಲ್ಲಿ, ವಿಶೇಷವಾಗಿ ಪೂಜಾ ಕೊಠಡಿಯ ಸಮೀಪ ಕಪ್ಪು ಬಣ್ಣದ ಹಲ್ಲಿ ಕಾಣಿಸಿಕೊಂಡರೆ ಅದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಅದು ಆರ್ಥಿಕ ನಷ್ಟ, ಮನೆಯೊಳಗಿನ ಕಲಹ ಅಥವಾ ಅಸಮಾಧಾನದ ಸೂಚನೆ ನೀಡುತ್ತದೆ ಎಂದು ನಂಬಲಾಗಿದೆ. ಇದು ನಕಾರಾತ್ಮಕ ಶಕ್ತಿಯ ಪ್ರಭಾವವಿರಬಹುದು ಎಂಬ ಕಾರಣದಿಂದ, ಇಂತಹ ಸಂದರ್ಭಗಳಲ್ಲಿ ಮನೆಯಲ್ಲಿ ಶುದ್ಧತೆ ಮತ್ತು ಧಾರ್ಮಿಕ ಆಚರಣೆಗಳಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ.

ಜೋಡಿ ಹಲ್ಲಿಗಳು:

ಒಟ್ಟಿಗೆ ಎರಡು ಹಲ್ಲಿಗಳು ಕಾಣಿಸುವುದು ಸಾಮಾನ್ಯವಾದರೂ, ಅವು ಜಗಳವಾಡುತ್ತಿರುವುದು ಶಕುನ ಶಾಸ್ತ್ರದ ಪ್ರಕಾರ ಒಳ್ಳೆಯ ಲಕ್ಷಣವಲ್ಲ. ಇದು ಮನೆಯೊಳಗೆ ಆರೋಗ್ಯ ಸಂಬಂಧಿತ ಸಮಸ್ಯೆಗಳು ಅಥವಾ ಕಲಹಗಳು ಸಂಭವಿಸಬಹುದೆಂಬ ಸೂಚನೆ ನೀಡುತ್ತದೆ ಎಂದು ನಂಬುತ್ತಾರೆ. ಇಂತಹ ಸಂದರ್ಭಗಳಲ್ಲಿ ಕುಟುಂಬ ಸದಸ್ಯರು ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.

ಇದಕ್ಕೆ ವಿರುದ್ಧವಾಗಿ, ಪೂಜಾ ಕೊಠಡಿಯಲ್ಲಿ ಅಥವಾ ದೇವಸ್ಥಾನದಲ್ಲಿ ಹಲ್ಲಿ ಕಾಣಿಸಿಕೊಂಡರೆ ಅದನ್ನು ಕೆಲವರು ಶುಭವೆಂದು ಪರಿಗಣಿಸುತ್ತಾರೆ. ವಿಶೇಷವಾಗಿ ಶುಕ್ರವಾರದಂದು ಹಲ್ಲಿ ಕಾಣಿಸಿಕೊಂಡರೆ, ಅದನ್ನು ಲಕ್ಷ್ಮೀ ದೇವಿಯ ಕೃಪೆಯ ಸಂಕೇತವೆಂದು ನಂಬಲಾಗುತ್ತದೆ. ಇದು ಸಂಪತ್ತಿನ ವೃದ್ಧಿ, ಆರ್ಥಿಕ ಸ್ಥಿರತೆ ಮತ್ತು ಕುಟುಂಬದ ಯೋಗಕ್ಷೇಮವನ್ನು ಸೂಚಿಸುತ್ತದೆ ಎಂದು ಅನೇಕರು ಭಾವಿಸುತ್ತಾರೆ.

ಇದನ್ನೂ ಓದಿ: ಮನೆಯ ಹತ್ತಿರ ಪಾರಿಜಾತ ಗಿಡ ಇರುವುದು ಅಶುಭನಾ? ಜ್ಯೋತಿಷ್ಯ ಸಲಹೆ ಇಲ್ಲಿದೆ

ಹಲ್ಲಿಗಳು ಪದೇ ಪದೇ ನೆಲಕ್ಕೆ ಬೀಳುವುದನ್ನು ಸಹ ಅಶುಭವೆಂದು ಪರಿಗಣಿಸಲಾಗುತ್ತದೆ. ಇದು ಸಮೀಪಿಸುತ್ತಿರುವ ತೊಂದರೆ ಅಥವಾ ಅನಿರೀಕ್ಷಿತ ಕಷ್ಟಗಳ ಸೂಚನೆಯಾಗಿರಬಹುದು ಎಂಬ ನಂಬಿಕೆ ಇದೆ. ಅದೇ ರೀತಿ, ಹಲ್ಲಿ ವ್ಯಕ್ತಿಯ ದೇಹದ ಮೇಲೆ ಬಿದ್ದರೆ ಅದರ ಅರ್ಥ ದೇಹದ ಯಾವ ಭಾಗದ ಮೇಲೆ ಬಿದ್ದಿದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಶಕುನ ಶಾಸ್ತ್ರದ ಪ್ರಕಾರ, ಬಲ ಭುಜದ ಮೇಲೆ ಹಲ್ಲಿ ಬೀಳುವುದು ಶುಭವೆಂದು, ಆದರೆ ತಲೆಯ ಮೇಲೆ ಬೀಳುವುದು ಕಳವಳ ಅಥವಾ ಅಶಾಂತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ.

ಆದಾಗ್ಯೂ, ಇವುಗಳೆಲ್ಲವೂ ಪರಂಪರೆ ಮತ್ತು ನಂಬಿಕೆಗಳ ಭಾಗವಾಗಿವೆ ಎಂಬುದನ್ನು ಮನದಲ್ಲಿಟ್ಟುಕೊಳ್ಳಬೇಕು. ವೈಜ್ಞಾನಿಕವಾಗಿ ನೋಡಿದರೆ, ಹಲ್ಲಿಗಳು ಪ್ರಕೃತಿಯ ಒಂದು ಭಾಗವಾಗಿದ್ದು ಕೀಟಗಳನ್ನು ತಿನ್ನುವ ಮೂಲಕ ಮನೆಗೆ ಸಹಾಯಕವಾಗುತ್ತವೆ. ಆದ್ದರಿಂದ ಭಯಕ್ಕಿಂತ ಜಾಗೃತಿ ಮತ್ತು ಸ್ವಚ್ಛತೆಯನ್ನು ಪಾಲಿಸುವುದು ಕೂಡ ಮುಖ್ಯ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತದ ‘ಬಂಡವಾಳ ಬಯಲು’ ಮಾಡ್ತೇವೆ: ಶುಕ್ರಿ ಕಾನ್ರಾಡ್ – Kannada News | South Africa coach Shukri Conrad Says We Will ‘Expose’ India In Ahmedabad

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಕಣಕ್ಕಿಳಿಯಲು 8 ತಂಡಗಳು ಸಜ್ಜಾಗಿವೆ. ಈ ಸುತ್ತಿನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಲಿದೆ. ಇನ್ನು ದ್ವಿತೀಯ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಇಂಗ್ಲೆಂಡ್ ತಂಡಗಳು ಸೆಣಸಲಿದೆ. ಹಾಗೆಯೇ ನಾಳೆ (ಫೆ.22) ನಡೆಯಲಿರುವ ಮೂರನೇ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದ ಮೂಲಕ ಟೀಮ್ ಇಂಡಿಯಾದ ಬಂಡವಾಳವನ್ನು ಬಯಲು ಮಾಡುತ್ತೇವೆ ಎಂದು ಸವಾಲು ಹಾಕಿದ್ದಾರೆ ಸೌತ್ ಆಫ್ರಿಕಾ ತಂಡದ ಕೋಚ್ ಶುಕ್ರಿ ಕಾನ್ರಾಡ್.

ಸೌತ್ ಆಫ್ರಿಕಾ ತಂಡದ ಮುಂದಿನ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿರುವ ಶುಕ್ರಿ ಕಾನ್ರಾಡ್, ಭಾರತ ತಂಡವು ಮೊದಲ ಸುತ್ತಿನಲ್ಲಿ ಯಾವುದೇ ಬಲಿಷ್ಠ ತಂಡದ ವಿರುದ್ಧ ಕಣಕ್ಕಿಳಿದಿಲ್ಲ. ಇದೀಗ ಅವರು ಸೌತ್ ಆಫ್ರಿಕಾ ತಂಡವನ್ನು ಎದುರಿಸಬೇಕಿದೆ. ಹೀಗಾಗಿ ಅವರು ಹೆಚ್ಚಿನ ಒತ್ತಡಕ್ಕೆ ಒಳಗಾಗಲಿದ್ದಾರೆ ಎಂದಿದ್ದಾರೆ.

ಭಾರತವು ಹಾಲಿ ಚಾಂಪಿಯನ್ ಮತ್ತು ಆತಿಥೇಯ ರಾಷ್ಟ್ರವಾಗಿರುವುದರಿಂದ ಅವರ ಮೇಲೆ ಅಪಾರ ನಿರೀಕ್ಷೆಯಿದೆ. ಈ ಒತ್ತಡವನ್ನು ಬಳಸಿ ಭಾರತವನ್ನು “ಅಸಹಾಯಕ” ಸ್ಥಿತಿಗೆ ತಳ್ಳುವುದಾಗಿ ಕಾನ್ರಾಡ್ ಹೇಳಿದ್ದಾರೆ.

ಭಾರತದ ಕೆಲವು ಆಟಗಾರರ ಫಾರ್ಮ್ ಬಗ್ಗೆ ಕೂಡ ಪರೋಕ್ಷವಾಗಿ ಮಾತನಾಡಿದ ಅವರು, ಸತತವಾಗಿ ವೈಫಲ್ಯ ಅನುಭವಿಸುತ್ತಿರುವ ಆಟಗಾರರು ತಮ್ಮ ಸ್ಥಾನ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಇದರ ನಡುವೆ ಅಭಿಮಾನಿಗಳ ಕಡೆಯಿಂದಲೂ ಟೀಮ್ ಇಂಡಿಯಾ ಆಟಗಾರರು ಒತ್ತಡ ಎದುರಿಸುತ್ತಿದ್ದಾರೆ.

ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಲಕ್ಷಾಂತರ ಅಭಿಮಾನಿಗಳ ಎದುರು ಆಡುವುದು ಭಾರತಕ್ಕೆ ಶಕ್ತಿಯೂ ಹೌದು, ದೊಡ್ಡ ಹೊರೆಯೂ ಹೌದು. ಹೀಗಾಗಿ ಈ ಪಂದ್ಯದ ಮೂಲಕ ನಾವು ಭಾರತ ತಂಡದ ಬಂಡವಾಳ “ಬಯಲು” ಮಾಡುತ್ತೇವೆ ಶುಕ್ರಿ ಕಾನ್ರಾಡ್ ಹೇಳಿದ್ದಾರೆ.

ಸೌತ್ ಆಫ್ರಿಕಾ ತಂಡದ ಕೋಚ್​ನ ಈ ಹೇಳಿಕೆಯು ಮೈಂಡ್ ಗೇಮ್​ ಎಂಬುದು ಸ್ಪಷ್ಟ. ಏಕೆಂದರೆ ಈ ಹಿಂದೆ ಕೂಡ ಭಾರತದ ವಿರುದ್ಧದ ಟೆಸ್ಟ್ ಪಂದ್ಯದ ವೇಳೆ ಶುಕ್ರಿ ಕಾನ್ರಾಡ್ ಇದೇ ಮಾದರಿಯ ಹೇಳಿಕೆ ನೀಡಿದ್ದರು.

2025 ರಲ್ಲಿ ನಡೆದ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯ 2ನೇ ಟೆಸ್ಟ್ ಪಂದ್ಯದ ವೇಳೆ ಮಾತನಾಡಿದ ಶುಕ್ರಿ ಕಾನ್ರಾಡ್, ಟೀಮ್ ಇಂಡಿಯಾ ಆಟಗಾರರನ್ನು ನಾವು ಮಕಾಡೆ ಮಲಗಿಸುತ್ತೇವೆ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಭಾರತೀಯ ಮಾಜಿ ಕ್ರಿಕೆಟಿಗರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ಕೇವಲ 58 ​ಎಸೆತ… ಆಸ್ಟ್ರೇಲಿಯಾ ತಂಡದ ವಿಶ್ವ ದಾಖಲೆಯ ಚೇಸಿಂಗ್

ಇದೀಗ ಅಹಮದಾಬಾದ್​ನಲ್ಲಿ ಟೀಮ್ ಇಂಡಿಯಾದ ಬಂಡವಾಳ ಬಯಲು ಮಾಡುತ್ತೇವೆ ಎನ್ನುವ ಮೂಲಕ ಶುಕ್ರಿ ಕಾನ್ರಾಡ್ ಮೈಂಡ್ ಗೇಮ್ ಆರಂಭಿಸಿದ್ದಾರೆ. ಈ ಮೂಲಕ ಭಾರತ ತಂಡವನ್ನು ಸೋಲಿಸಲು ತೆರೆಮರೆಯ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

Published On – 10:57 am, Sat, 21 February 26

Source link

ಟ್ರಂಪ್ ಸೊಕ್ಕು ಮುರಿದ ಅಮೆರಿಕ ಸುಪ್ರೀಂ ಕೋರ್ಟ್: ಭಾರತದ ಉತ್ಪನ್ನಗಳ ಮೇಲಿನ ತೆರಿಗೆಯೂ ಶೇ 10ಕ್ಕೆ ಇಳಿಕೆ! – Kannada News | India Faces 10 percent US Tariff After Supreme Court Setback to Trump; What It Means for India US Trade Deal

ವಾಷಿಂಗ್ಟನ್, ಫೆಬ್ರವರಿ 21: ಭಾರತ ಸೇರದಂತೆ ಅನೇಕ ದೇಶಗಳ ಉತ್ಪನ್ನಗಳ ಮೇಲೆ ಮನಬಂದಂತೆ ಸುಂಕ ಹೆಚ್ಚಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ (Donald Trump) ಅಲ್ಲಿನ ಸುಪ್ರೀಂ ಕೋರ್ಟ್ (US Supreme Court) ಕಡಿವಾಣ ಹಾಕಿದೆ. ಪರಿಣಾಮವಾಗಿ ಟ್ರಂಪ್ ಸುಂಕ ನೀತಿಗೆ ದೊಡ್ಡ ಹಿನ್ನಡೆಯಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಭಾರತವೂ ಸೇರಿದಂತೆ ಅಮೆರಿಕದೊಂದಿಗೆ ಸುಂಕ ಒಪ್ಪಂದ ಮಾಡಿಕೊಂಡಿರುವ ದೇಶಗಳು ತಕ್ಷಣದಿಂದಲೇ ಜಾರಿಗೆ ಬರುವಂತೆ ಶೇ 10 ರ ಸಾಮಾನ್ಯ ಸುಂಕವನ್ನು ಪಾವತಿಸಬೇಕಾಗುತ್ತದೆ. ಅಲ್ಲದೆ, ಈ ತೀರ್ಪು ಭಾರತ–ಅಮೆರಿಕ ವ್ಯಾಪಾರ ಒಪ್ಪಂದದ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಅಮೆರಿಕ ಸ್ಪಷ್ಟಪಡಿಸಿದೆ.

ಶೇ 10 ರ ಸಾಮಾನ್ಯ ಸುಂಕ ಜಾರಿ

ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಆಡಳಿತ ಹೊಸ ಆದೇಶ ಹೊರಡಿಸಿದ್ದು, ಅಮೆರಿಕಕ್ಕೆ ಆಮದು ಆಗುವ ವಸ್ತುಗಳ ಮೇಲೆ ಶೇ 10 ರ ಸುಂಕ ವಿಧಿಸಿದೆ. ಈ ಹೊಸ ಸುಂಕ ಫೆಬ್ರವರಿ 24 ರಿಂದ 150 ದಿನಗಳ ಕಾಲ ಜಾರಿಯಲ್ಲಿರಲಿದೆ ಎಂದು ಶ್ವೇತ ಭವನ ಮಾಹಿತಿ ನೀಡಿದೆ. ಆದರೆ ಔಷಧಿ ಸೇರಿದಂತೆ ಕೆಲವು ವಲಯಗಳಿಗೆ ವಿನಾಯಿತಿ ಮುಂದುವರಿಯಲಿದೆ.

ಭಾರತಕ್ಕೆ ಆದ ಲಾಭವೇನು?

ಇತ್ತೀಚೆಗೆ ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ಘೋಷಿಸಿವೆ. ಅದರ ಪರಿಣಾಮವಾಗಿ, ಈ ಮೊದಲು ರಷ್ಯಾ ತೈಲ ಖರೀದಿಗೆ ಸಂಬಂಧಿಸಿದಂತೆ ಭಾರತಕ್ಕೆ ವಿಧಿಸಿದ್ದ ಶೇ 25 ಸುಂಕವನ್ನು ಅಮೆರಿಕ ರದ್ದುಪಡಿಸಿತ್ತು. ಜೊತೆಗೆ, ಪರಸ್ಪರ ಸುಂಕವನ್ನು ಶೇ 25 ರಿಂದ 18 ಕ್ಕೆ ಇಳಿಸಲಾಗಿತ್ತು. ಆದರೆ ಸುಪ್ರೀಂ ಕೋರ್ಟ್ ತೀರ್ಪಿನ ನಂತರ, ಹಿಂದಿನ ಒಪ್ಪಂದಗಳಲ್ಲಿ ಒಪ್ಪಿಕೊಂಡಿದ್ದ ಹೆಚ್ಚುವರಿ ಸುಂಕಗಳ ಬದಲಿಗೆ ಈಗ ಶೇ 10 ರ ಸಾಮಾನ್ಯ ಸುಂಕ ಅನ್ವಯವಾಗಲಿದೆ ಎಂದು ಅಮೆರಿಕ ಹೇಳಿದೆ. ಇದರಿಂದ ಭಾರತಕ್ಕೆ ತಾತ್ಕಾಲಿಕವಾಗಿ ಸ್ವಲ್ಪ ವಿನಾಯಿತಿ ದೊರೆಯುವ ಸಾಧ್ಯತೆ ಇದೆ ಎಂದು ವಾಣಿಜ್ಯ ವಲಯ ವಿಶ್ಲೇಷಿಸಿದೆ.

ಏತನ್ಮಧ್ಯೆ, ಶ್ವೇತ ಭವನದ ಒಬ್ಬರು ಹಿರಿಯ ಅಧಿಕಾರಿಯ ಪ್ರಕಾರ, ಮುಂದಿನ ದಿನಗಳಲ್ಲಿ ಪೂರ್ವ ನಿರ್ಧರಿತ ಅಥವಾ ಸೂಕ್ತವಾದ ಸುಂಕ ದರಗಳನ್ನು ಜಾರಿಗೆ ತರಲು ಆಡಳಿತ ಪ್ರಯತ್ನಿಸಲಿದೆ ಎನ್ನಲಾಗಿದೆ.

ಡೊನಾಲ್ಡ್ ಟ್ರಂಪ್ ಹೇಳಿದ್ದೇನು?

ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಮಾತನಾಡಿದ ಟ್ರಂಪ್, ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಭಾರತದೊಂದಿಗೆ ನಮ್ಮ ಸಂಬಂಧ ಉತ್ತಮವಾಗಿದೆ. ನಾವು ವ್ಯಾಪಾರ ಮುಂದುವರಿಸುತ್ತಿದ್ದೇವೆ. ಯಾವುದೂ ಬದಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಈ ಬೆಳವಣಿಗೆ ಭಾರತಕ್ಕೆ ಎರಡು ರೀತಿಯ ಪರಿಣಾಮ ಉಂಟುಮಾಡಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಒಂದು ಕಡೆ ಶೇ 25 ರ ಸುಂಕದ ಭಾರದಿಂದ ಮುಕ್ತಿ ಸಿಕ್ಕಿರುವುದು ಅನುಕೂಲಕರ. ಮತ್ತೊಂದೆಡೆ, ಶೇ 10 ಸಾಮಾನ್ಯ ಸುಂಕ ಮುಂದುವರಿದರೆ ರಫ್ತುಗಾರರಿಗೆ ಕೆಲವು ಒತ್ತಡಗಳು ಎದುರಾಗಬಹುದು. ವಿಶೇಷವಾಗಿ ಉಕ್ಕು, ಅಲ್ಯೂಮಿನಿಯಂ ಮತ್ತು ಇತರೆ ಕೈಗಾರಿಕಾ ವಲಯಗಳು ಪರಿಸ್ಥಿತಿಯ ಮೇಲೆ ವಿಶೇಷ ನಿಗಾ ವಹಿಸಬೇಕಾಗಬಹುದು ಎನ್ನಲಾಗಿದೆ.

ಇದನ್ನೂ ಓದಿ: ಮನಬಂದಂತೆ ಸುಂಕ ಹೇರಿದ ಟ್ರಂಪ್​ಗೆ ಶಾಕ್ ಕೊಟ್ಟ ಅಮೆರಿಕದ ಸುಪ್ರೀಂ ಕೋರ್ಟ್

ಒಟ್ಟಿನಲ್ಲಿ, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಆಡಳಿತದ ಹೊಸ ಸುಂಕ ನೀತಿ ಜಾರಿಯಾಗಿದ್ದರೂ, ಭಾರತ–ಅಮೆರಿಕ ವ್ಯಾಪಾರ ಒಪ್ಪಂದದಲ್ಲಿ ತಕ್ಷಣದ ಅಸ್ಥಿರತೆ ಕಾಣಿಸುತ್ತಿಲ್ಲ. ಇದು ಧನಾತ್ಮಕ ಬೆಳವಣಿಗೆ ಎಂದು ವಿಶ್ಲೇಷಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎರಡೂ ದೇಶಗಳ ನಡುವಣ ಮಾತುಕತೆ ಯಾವ ದಿಕ್ಕಿಗೆ ಸಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Saturn Line Palmistry: ಅಂಗೈಯಲ್ಲಿ ಶನಿ ರೇಖೆ ಎಲ್ಲಿದೆ? ಇದು ಜೀವನದಲ್ಲಿ ಯಾವ ರೀತಿ ಪರಿಣಾಮ ಬೀರುತ್ತದೆ? – Kannada News | Saturn Line Palmistry Secrets: Unlock Your Future, Success and Saturn’s Influence

ಜ್ಯೋತಿಷ್ಯ ಶಾಸ್ತ್ರದಲ್ಲಿ ಜಾತಕಕ್ಕೆ ಎಷ್ಟು ಪ್ರಾಮುಖ್ಯತೆ ಇದೆಯೋ, ಅದೇ ರೀತಿ ಹಸ್ತಸಾಮುದ್ರಿಕ ಶಾಸ್ತ್ರದಲ್ಲಿ ಅಂಗೈ ರೇಖೆಗಳಿಗೆ ಅಷ್ಟೇ ಮಹತ್ವವಿದೆ. ಒಬ್ಬ ವ್ಯಕ್ತಿಯ ಅಂಗೈಯಲ್ಲಿರುವ ಪ್ರತಿಯೊಂದು ರೇಖೆಯು ಅದು ಅವನ ವ್ಯಕ್ತಿತ್ವ, ವೃತ್ತಿ ಮತ್ತು ಭವಿಷ್ಯದ ರಹಸ್ಯಗಳನ್ನು ಅಡಗಿಸಿಟ್ಟುಕೊಂಡಿರುತ್ತದೆ. ಇಂದು ಹಸ್ತದಲ್ಲಿನ ಅತ್ಯಂತ ಪ್ರಭಾವಶಾಲಿ ರೇಖೆಯಾದ ‘ಶನಿ ರೇಖೆ’ (Saturn Line) ಬಗ್ಗೆ ಇಲ್ಲಿ ತಿಳಿದುಕೊಳ್ಳಿ.

ಶನಿ ರೇಖೆ ಅಂಗೈಯಲ್ಲಿ ಎಲ್ಲಿರುತ್ತದೆ?

ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ನಮ್ಮ ಮಧ್ಯದ ಬೆರಳಿನ (Middle Finger) ಕೆಳಭಾಗದಲ್ಲಿರುವ ಉಬ್ಬಿದ ಭಾಗವನ್ನು ‘ಶನಿ ಪರ್ವತ’ ಎಂದು ಕರೆಯಲಾಗುತ್ತದೆ. ಈ ಶನಿ ಪರ್ವತದತ್ತ ಸಾಗುವ ಅಥವಾ ಅಲ್ಲಿ ಮೂಡುವ ರೇಖೆಯನ್ನೇ ‘ಶನಿ ರೇಖೆ’ ಎನ್ನಲಾಗುತ್ತದೆ. ಈ ರೇಖೆಯು ನಿಮ್ಮ ಜೀವನದಲ್ಲಿ ಶನಿದೇವನ ಪ್ರಭಾವ ಎಷ್ಟಿದೆ ಎಂಬುದನ್ನು ಸೂಚಿಸುತ್ತದೆ.ಜೀವನದ ಮೇಲೆ ಶನಿ ರೇಖೆಯ ಪ್ರಭಾವಗಳುಶನಿ ಎಂದರೆ ಕೇವಲ ಕಷ್ಟಗಳಲ್ಲ, ಅದು ಶಿಸ್ತು ಮತ್ತು ಪರಿಶ್ರಮದ ಸಂಕೇತ.

ಅಂಗೈಯಲ್ಲಿ ಶನಿ ರೇಖೆಯಿದ್ದರೆ ಏನು ಫಲ?

  • ಹೋರಾಟದ ನಂತರ ಯಶಸ್ಸು: ಅಂಗೈಯಲ್ಲಿ ಶನಿ ರೇಖೆ ಇದ್ದರೆ, ಜೀವನದ ಆರಂಭಿಕ ಹಂತದಲ್ಲಿ ನೀವು ಸಾಕಷ್ಟು ಸವಾಲುಗಳನ್ನು ಎದುರಿಸಬೇಕಾಗಬಹುದು. ಆದರೆ ನೆನಪಿಡಿ, ಈ ಹೋರಾಟಗಳೇ ನಿಮಗೆ ಜೀವನದ ದೊಡ್ಡ ಪಾಠಗಳನ್ನು ಕಲಿಸುತ್ತವೆ.
  • 35ರ ನಂತರ ಸುವರ್ಣ ಕಾಲ: ಅಂಗೈಯಲ್ಲಿ ಶನಿ ರೇಖೆ ಇದ್ದರೆ ಸಾಮಾನ್ಯವಾಗಿ ಶನಿ ರೇಖೆಯ ಪ್ರಭಾವದಿಂದ ಆ ವ್ಯಕ್ತಿಯು 35 ವರ್ಷ ವಯಸ್ಸಿನ ನಂತರ ಅಪಾರ ಯಶಸ್ಸನ್ನು ಕಾಣುತ್ತಾನೆ. ಜೀವನದ ಎಲ್ಲಾ ಸುಖ-ಸಂತೋಷಗಳು ಈ ಅವಧಿಯಲ್ಲಿ ನಿಮ್ಮನ್ನು ಹುಡುಕಿಕೊಂಡು ಬರುತ್ತವೆ ಎಂದು ನಂಬಲಾಗಿದೆ.
  • ನ್ಯಾಯಯುತ ಜೀವನ: ಬಲವಾದ ಶನಿ ರೇಖೆ ಹೊಂದಿರುವವರು ಅತ್ಯಂತ ಪ್ರಾಮಾಣಿಕರು ಮತ್ತು ನ್ಯಾಯಪ್ರಿಯರಾಗಿರುತ್ತಾರೆ. ತಪ್ಪು ದಾರಿಯಲ್ಲಿ ನಡೆಯಲು ಇವರು ಯಾವಾತ್ತಿಗೂ ಇಷ್ಟಪಡುವುದಿಲ್ಲ.

ಇದನ್ನೂ ಓದಿ: ಮನೆಯ ಹತ್ತಿರ ಪಾರಿಜಾತ ಗಿಡ ಇರುವುದು ಅಶುಭನಾ? ಜ್ಯೋತಿಷ್ಯ ಸಲಹೆ ಇಲ್ಲಿದೆ

ರೇಖೆಯ ವಿನ್ಯಾಸ ಮತ್ತು ಅದರ ಅರ್ಥಗಳು:

ನಿಮ್ಮ ಅಂಗೈಯಲ್ಲಿರುವ ಶನಿ ರೇಖೆ ಯಾವ ಸ್ಥಿತಿಯಲ್ಲಿದೆ ಎಂಬುದು ಕೂಡ ಬಹಳ ಮುಖ್ಯ.

  • ಸ್ಪಷ್ಟ ಮತ್ತು ನೇರ ರೇಖೆ: ಜೀವನದಲ್ಲಿ ಅಡೆತಡೆಗಳಿಲ್ಲದ ಯಶಸ್ಸು ಮತ್ತು ಸುಖ-ಸಂತೋಷ ಪ್ರಾಪ್ತಿ.
  • ಹಸಿರು-ಗುಲಾಬಿ ಮಿಶ್ರಿತ ಬಣ್ಣದ ರೇಖೆ: ಸಮೃದ್ಧ ಕೌಟುಂಬಿಕ ಜೀವನ, ಕೆಲವರಲ್ಲಿ ಪ್ರೇಮ ವಿವಾಹದ ಯೋಗವೂ ಕಂಡುಬರುತ್ತದೆ ಎಂದು ಶಾಸ್ತ್ರಜ್ಞರು ಹೇಳುತ್ತಾರೆ.
  • ತುಂಡಾದ ಅಥವಾ ಮಾಸಿದ ರೇಖೆ: ಜೀವನದಲ್ಲಿ ಸಂಕಷ್ಟಗಳು ಹೆಚ್ಚಾಗಬಹುದು. ಆರ್ಥಿಕ ಮುಗ್ಗಟ್ಟು ಮತ್ತು ಆರೋಗ್ಯ ಸಮಸ್ಯೆಗಳು ಎದುರಾಗುವ ಸಂಭವವಿರುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:38 am, Sat, 21 February 26

Source link

ಎಟಿಎಂಗೆ ಹಾಕಬೇಕಿದ್ದ ಮೂರು ಕೋಟಿ ರೂ. ನಾಪತ್ತೆ! ಆಡಿಟ್ ವೇಳೆ ಸಿಬ್ಬಂದಿಯ ಕಳ್ಳಾಟ ಬಯಲು – Kannada News | Hassan ATM Cash Scam: Rs.3.4 Crore Misappropriated by Staff, Police File FIR

ಎಟಿಎಂಗೆ ಹಾಕಬೇಕಿದ್ದ ಮೂರು ಕೋಟಿ ರೂ. ನಾಪತ್ತೆ!

ಹಾಸನ, ಫೆಬ್ರವರಿ 21: ಜಿಲ್ಲೆಯಲ್ಲಿ ಎಟಿಎಂಗೆ ಹಣ ತುಂಬುವ ಖಾಸಗಿ ಸಂಸ್ಥೆಯಲ್ಲಿ ಭಾರೀ ಹಣ ದುರುಪಯೋಗ ಪ್ರಕರಣ ಬಯಲಾಗಿದ್ದು, ಮೂರು ಕೋಟಿಗೂ ಹೆಚ್ಚು ಹಣ ನಾಪತ್ತೆಯಾಗಿದೆ (ATM Fraud) ಎಂದು ಹೇಳಲಾಗಿದೆ. ಪೆಬ್ರವರಿ 18 ಮತ್ತು 19ರಂದು ಸಂಸ್ಥೆಯಲ್ಲಿ ನಡೆಸಿದ ಮಾಸಿಕ ಆಡಿಟ್ ವೇಳೆ ಈ ಅವ್ಯವಹಾರ ಬೆಳಕಿಗೆ ಬಂದಿದ್ದು, ಹಾಸನ ಬಡಾವಣೆ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿದ್ದ ಸಿಬ್ಬಂದಿ!

ಎಟಿಎಂಗಳಿಗೆ ಹಣ ತುಂಬುವ ಜವಾಬ್ದಾರಿಯಲ್ಲಿದ್ದ ಖಾಸಗಿ ಸಂಸ್ಥೆಯ ಸಿಬ್ಬಂದಿಗಳಾದ ನಂದೀಶ್ ಬಿ.ಎಲ್ ಹಾಗೂ ಮಧುಕುಮಾರ್ ಎಂ.ಪಿ ವಿರುದ್ಧ ಸುಮಾರು 3 ಕೋಟಿ 40 ಲಕ್ಷ 28 ಸಾವಿರ ರೂ. ಲಪಟಾಯಿಸಿದ ಆರೋಪ ಕೇಳಿಬಂದಿದೆ. 11 ಕೆನರಾ ಬ್ಯಾಂಕ್ ಎಟಿಎಂ,3 ಎಸ್ ಬಿ ಐ ಎಟಿಎಂ ಮತ್ತು 1 ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಸೇರಿ ಒಟ್ಟೂ 18 ಎಟಿಎಂಗಳಿಗೆ ಹಣ ಜಮಾ ಮಾಡಿದಂತೆ ಕೃತಕ ದಾಖಲೆ ಸೃಷ್ಟಿಸಿ, ವಾಸ್ತವವಾಗಿ ಹಣ ಜಮಾ ಮಾಡದೆ ದುರುಪಯೋಗ ಮಾಡಿಕೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಾಸನ ನಗರ ವ್ಯಾಪ್ತಿಯ ವಿವಿಧ ಎಟಿಎಂ ಗೆ ಹಣವನ್ನೇ ಹಾಕದೆ ಹಣ ಹಾಕಿರೊದಾಗಿ ರೆಸಿಪ್ಟ್ ತೆಗೆದು ವಂಚನೆ ಆರೋಪ ಹಿನ್ನೆಲೆ ಸಿಎಂಎಸ್ ಸಂಸ್ಥೆಯ ಹಾಸನ ಶಾಖೆ ವ್ಯವಸ್ಥಾಪಕ ರಾಜು ಹಾಸನ ಬಡಾವಣೆ ಠಾಣೆಯಲ್ಲಿ ದೂರು ನೀಡಿದ್ದು, ಅದರ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ ಬೆಂಗಳೂರು: ಎಟಿಎಂಗೆ ಹಾಕಲು ಕೊಟ್ಟಿದ್ದ 1 ಕೋಟಿ ರೂ.ಗೂ ಅಧಿಕ ಹಣದೊಂದಿಗೆ ಸಿಬ್ಬಂದಿಯೇ ಪರಾರಿ!

ಈ ಹಿಂದೆಯೂ ನಡೆದಿತ್ತು ಅವ್ಯವಹಾರ

ಕೆಲ ತಿಂಗಳ ಹಿಂದೆಯಷ್ಟೇ ಸುಮಾರು 7.11 ಕೋಟಿ ರೂಪಾಯಿ ದೋಚಲ್ಪಟ್ಟಿತ್ತು. ಇನ್ನೋವಾ ಕಾರಿನಲ್ಲಿ ಬಂದಿದ್ದ ಗ್ಯಾಂಗ್, ಎಟಿಎಂಗೆ ಹಣ ತುಂಬಲು ತೆರಳುತ್ತಿದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್ ಸಮೀಪ ತಡೆದು, ನಗದು ಕಸಿದು ಪರಾರಿಯಾಗಿದ್ದರು.ಇದೇ ರೀತಿಯಲ್ಲಿ, ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಟಿಎಂಗಳಿಗೆ ಜಮಾ ಮಾಡಬೇಕಿದ್ದ 1 ಕೋಟಿಗೂ ಅಧಿಕ ಹಣವನ್ನು ಕಂಪನಿ ಸಿಬ್ಬಂದಿಯೇ ದುರುಪಯೋಗ ಮಾಡಿಕೊಂಡ ಘಟನೆ ಜನವರಿಯಲ್ಲಿ ಬೆಳಕಿಗೆ ಬಂದಿತ್ತು.

ಎರಡು ತಂಡಗಳಿಗೆ ಹಂಚಿಕೆ ಮಾಡಲಾಗಿದ್ದ ನಗದುಗಳಲ್ಲಿ ಒಂದು ತಂಡವು ಸುಮಾರು 57 ಲಕ್ಷ ರೂ. ಹಾಗೂ ಮತ್ತೊಂದು ತಂಡವು 80 ಲಕ್ಷ ರೂ. ಹಣದೊಂದಿಗೆ ಪರಾರಿಯಾಗಿದ್ದರು ಎಂದು ಹೇಳಲಾಗಿತ್ತು. ಎಟಿಎಂಗಳಲ್ಲಿ ಹಣ ಜಮಾ ಆಗದಿರುವುದು ಗೊತ್ತಾದ ನಂತರ ಕಂಪನಿ ಅಧಿಕಾರಿಗಳು ಪರಿಶೀಲನೆ ನಡೆಸಿ ದೂರು ನೀಡಿದ್ದರು. ಈಗ ಮತ್ತೊಮ್ಮೆ ಇಂತದ್ದೇ ಪ್ರಕರಣ ಬಯಲಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ – Kannada News | India A enters final of ACC Women’s Asia Cup Rising Stars

ಬ್ಯಾಂಕಾಕ್​ನಲ್ಲಿ ನಡೆಯುತ್ತಿರುವ ರೈಸಿಂಗ್ ಸ್ಟಾರ್ಸ್ ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಎ ತಂಡ ಫೈನಲ್​ಗೇರಿದೆ. ಟೆರ್ಡ್‌ಥೈ ಕ್ರಿಕೆಟ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಎ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ಎ ತಂಡವು ಮೊದಲು ಬ್ಯಾಟಿಂಗ್ ಮಾಡಿದ್ದರು.

ಆದರೆ ನಾಯಕಿ ರಾಧಾ ಯಾದವ್ ಅವರ ಸ್ಪಿನ್ ಮೋಡಿಗೆ ತತ್ತರಿಸಿದ ಶ್ರೀಲಂಕಾ ಎ ತಂಡವು 19.4 ಓವರ್​ಗಳಲ್ಲಿ 118 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಟೀಮ್ ಇಂಡಿಯಾ 13.3 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಭಾರತ ಎ ತಂಡವು ಫೈನಲ್​ಗೇರಿದ್ದು, ಭಾನುವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ್ ಎ ತಂಡವನ್ನು ಎದುರಿಸಲಿದೆ.

 

Source link