All posts by nagaraj11081993

ಎಐ, ಡೀಪ್​ಫೇಕ್ ಸ್ಟಾರ್ಟಪ್​ಗಳ ಸಿಇಒಗಳೊಂದಿಗೆ ಪ್ರಧಾನಿ ಮೋದಿ ಸಭೆ; ಓಪನ್​ಎಐ, ಆಂಥ್ರೋಪಿ ಸಿಇಒಗಳ ವೈಮನಸ್ಸು ಬಹಿರಂಗ? – Kannada News | PM Modi holds roundtable meeting with chiefs of Indian AI startups during AI Impact Summit

ನವದೆಹಲಿ, ಫೆಬ್ರುವರಿ 20: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾರತ್ ಮಂಟಪಂ ಬಳಿಯ ಸೇವಾ ತೀರ್ಥದಲ್ಲಿ ಉದಯೋನ್ಮುಖ ಎಐ ಮತ್ತು ಡೀಪ್​ಟೆಕ್ ಸ್ಟಾರ್ಟಪ್​ಗಳ ಸಂಸ್ಥಾಪಕರು ಮತ್ತು ಸಿಇಒಗಳೊಂದಿಗೆ ದುಂಡುಮೇಜಿನ ಸಭೆ ನಡೆಸಿದರು. ಪ್ರಮುಖ ಸೆಕ್ಟರ್​ಗಳಲ್ಲಿ ದೊಡ್ಡಮಟ್ಟದ ಸವಾಲುಗಳಿಗೆ ಪರಿಹಾರ ಹುಡುಕುತ್ತಿರುವ ಸ್ಟಾರ್ಟಪ್​ಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದವು. ಒಟ್ಟು 16 ಸ್ಟಾರ್ಟಪ್​ಗಳ ಸಿಇಒಗಳು ಪಾಲ್ಗೊಂಡಿದ್ದರು. ಸೈಬರ್ ಸೆಕ್ಯೂರಿಟಿ, ಎಥಿಕಲ್ ಎಐ, ಬಾಹ್ಯಾಕಾಶ, ಸಾಮಾಜಿಕ ಸಬಲೀಕರಣ ಇತ್ಯಾದಿ ಕ್ಷೇತ್ರಗಳಲ್ಲಿ ವಿವಿಧ ಎಐ ಪರಿಹಾರಗಳನ್ನು ಒದಗಿಸಲು ನಿರತವಾಗಿರುವ ಕಂಪನಿಗಳಿವು.

ಪ್ರಧಾನಿ ನರೇಂದ್ರ ಮೋದಿ ಅವರೂ ಕೂಡ ಈ ಸ್ಟಾರ್ಟಪ್​ಗಳ ಕಾರ್ಯವನ್ನು ಶ್ಲಾಘಿಸಿದರು. ಕೃಷಿ ಕ್ಷೇತ್ರದಲ್ಲಿ ಬೆಳೆ ಉತ್ಪನ್ನತೆ, ರಸಗೊಬ್ಬರ ಬಳಕೆಯನ್ನು ಪರಿವೀಕ್ಷಿಸುವುದು ಸೇರಿದಂತೆ ವಿವಿಧ ಕಾರ್ಯಗಳಿಗೆ ಎಐ ಅನ್ನು ಸರಿಯಾಗಿ ಬಳಸುವುದು ಹೇಗೆ ಎಂಬುದನ್ನು ಸಿಇಒಗಳ ಜೊತೆ ಪಿಎಂ ಚರ್ಚಿಸಿದರು. ಮಾತೃಭಾಷೆಯಲ್ಲಿ ಉನ್ನತ ಶಿಕ್ಷಣ ಹೊಂದಲು ಸಾಧ್ಯವಾಗುವಂತೆ ಎಐ ಟೂಲ್​ಗಳನ್ನು ಅಭಿವೃದ್ಧಿಪಡಿಸುವಂತೆಯೂ ಪ್ರಧಾನಿಗಳು ಕರೆ ನೀಡಿದರು.

ಇದನ್ನೂ ಓದಿ: ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ಏಪ್ರಿಲ್​ನಿಂದ ಚಾಲನೆ ಸಾಧ್ಯತೆ; ಓಮನ್, ಬ್ರಿಟನ್ ಒಪ್ಪಂದಗಳೂ ಏಪ್ರಿಲ್​ನಲ್ಲೇ?

ಎಬ್ರಿಡ್ಜ್, ಅದಾಲತ್ ಎಐ, ಬ್ರೈನ್​ಸೈಟ್​ಎಐ, ಕ್ರೆಡೋ ಎಐ, ಎಕಾ ಕೇರ್, ಗ್ಲೀನ್, ಇನ್ನೋಗಲ್, ಇನ್​ವಿಡಿಯೋ, ಮಿಕೋ, ಆರಿಜಿನ್, ಪ್ರೋಫೇಜ್, ರೇಸೆನ್, ರುಬ್ರಿಕ್, ಸ್ಯಾಟ್​ಶೂರ್, ಸೂಪರ್​ನೋವಾ, ಸೈಫಾ ಎಐ ಕಂಪನಿಗಳ ಸಿಇಒಗಳು ಮತ್ತು ಸಂಸ್ಥಾಪಕರು ಪಿಎಂ ಜೊತೆಗಿನ ದುಂಡುಮೇಜಿನ ಸಭೆಯಲ್ಲಿ ಭಾಗವಹಿಸಿದ್ದರು.

ಜಾಗತಿಕ ಎಐ ದೈತ್ಯರ ಮಧ್ಯೆ ಶೀತಲ ಸಮರ

ಎಐ ಇಂಪ್ಯಾಕ್ಟ್ ಸಮಿಟ್​ನಲ್ಲಿ ಹಿಂದಿನ ದಿನ (ಗುರುವಾರ) ಗಮನ ಸೆಳೆದ ಮತ್ತೊಂದು ಸಂಗತಿ ಎಂದರೆ ಅದು ಓಪನ್​ಎಐ ಮತ್ತು ಆಂಥ್ರೋಪಿಕ್ ಕಂಪನಿಗಳ ಸಿಇಒಗಳ ವೈಮನಸ್ಸಿಗೆ ಸಾಕ್ಷ್ಯ ಸಿಕ್ಕಿದ್ದು. ಜಾಗತಿಕ ಎಐ ದಿಗ್ಗಜರು ಪಿಎಂ ಮೋದಿ ಜೊತೆ ವೇದಿಕೆ ಹಂಚಿಕೊಂಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆಯಿತು. ಪ್ರಧಾನಿ ಮೋದಿ ಜೊತೆ ವೇದಿಕೆಯಲ್ಲಿ ಹತ್ತಾರು ಸಿಇಗಳು ನಿಂತಿದ್ದರು. ಮೋದಿ ಅಕ್ಕಪಕ್ಕದಲ್ಲಿ ಸುಂದರ್ ಪಿಚೈ ಮತ್ತು ಸ್ಯಾಮ್ ಆಲ್ಟ್​ಮ್ಯಾನ್ ಇದ್ದರು. ಅವರಿಬ್ಬರ ಆ ಎರಡು ಬದಿಗಳಲ್ಲಿ ಇತರರಿದ್ದರು. ಮೋದಿ ಅವರು ಒಗ್ಗಟ್ಟಿನ ಮಂತ್ರದಲ್ಲಿ ಪಿಚೈ ಮತ್ತು ಸ್ಯಾಮ್ ಅವರ ಕೈಗಳಲ್ಲಿ ಹಿಡಿದೆತ್ತಿದರು. ಎಲ್ಲರೂ ಕೂಡ ಪರಸ್ಪರ ಕೈ ಹಿಡಿದು ಮೇಲೆತ್ತಿದರು.

ಇದನ್ನೂ ಓದಿ: ಜಗತ್ತಿನ ಮುಂದೆ ಬೆತ್ತಲಾದ ಕಾಂಗ್ರೆಸ್; ಎಐ ಸಮಿಟ್​ನಲ್ಲಿ ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಹಲವರ ಅಸಮಾಧಾನ

ಈ ವೇಳೆ, ಸ್ಯಾಮ್ ಆಲ್ಟ್​ಮ್ಯಾನ್ ಅವರು ತಮ್ಮ ಎಡಬದಿಯಲ್ಲಿ ಇದ್ದ ಆಂಥ್ರೋಪಿಕ್ ಸಿಇಒ ಡೇರಿಯೋ ಅಮೋಡೇ ಅವರ ಕೈಹಿಡಿಯಲು ಹಿಂದೇಟು ಹಾಕಿದರು. ಪರಸ್ಪರ ಕೈ ಹಿಡಿಯದೇ ಅವರಿಬ್ಬರೂ ತಮ್ಮ ಕೈ ಮೇಲೆತ್ತಿದರು. ಪಿಎಂ ಮೋದಿ ಅಚಾನಕ್ಕಾಗಿ ಕೈಹಿಡಿದಿದ್ದರಿಂದ ತನಗೆ ಏನು ಮಾಡಬೇಕೆಂದು ತೋಚಲಿಲ್ಲ ಎಂದು ಓಪನ್ ಎಐ ಸಿಇಒ ಸ್ಯಾಮ್ ಆಲ್ಟ್​ಮ್ಯಾನ್ ತಮ್ಮ ವರ್ತನೆಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಓಪನ್​ಎಐನಲ್ಲಿ ವೈಸ್​ಪ್ರೆಸಿಡೆಂಟ್​ಗಳಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಗಳೇ ಸೇರಿ ಆಂಥ್ರೋಪಿಕ್ ಕಂಪನಿಯನ್ನು ಸ್ಥಾಪಿಸಿದ್ದಾರೆ. ಓಪನ್​ಎಐನ ನೀತಿಗಳನ್ನು ಆಂಥ್ರೋಪಿಕ್ ವಿರೋಧಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು – Kannada News | Mahesh Babu visited Bengaluru to see his AMB Cinemas that started in city

ಟಾಲಿವುಡ್ ಸೂಪರ್‌ ಸ್ಟಾರ್ ಮಹೇಶ್ ಬಾಬು (Mahesh Babu) ಇಂದು (ಫೆಬ್ರವರಿ 20, 2026) ಬೆಂಗಳೂರಿಗೆ ನೀಡಿದ್ದರು. ತಮ್ಮ ಒಡೆತನದ ನೂತನ ಮಲ್ಟಿಪ್ಲೆಕ್ಸ್ ‘ಎಎಂಬಿ ಸಿನಿಮಾಸ್ ಕಪಾಲಿ’ ಗೆ ಅವರು ಭೇಟಿ ನೀಡಿದ್ದು, ನೆಚ್ಚಿನ ನಟನನ್ನು ನೋಡಲು ಗಾಂಧಿನಗರದ ಚಿತ್ರಮಂದಿರದ ಮುಂದೆ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. ದಕ್ಷಿಣ ಭಾರತದ ಮೊದಲ ‘ಡಾಲ್ಬಿ ಸಿನಿಮಾ’ ತಂತ್ರಜ್ಞಾನವನ್ನು ಹೊಂದಿರುವ ಈ ಚಿತ್ರಮಂದಿರದ ಕಾರ್ಯವೈಖರಿ ಮತ್ತು ಗುಣಮಟ್ಟವನ್ನು ಪರಿಶೀಲಿಸಲು ಮಹೇಶ್ ಬಾಬು ಇಂದು ಖುದ್ದಾಗಿ ಆಗಮಿಸಿದ್ದರು. ವಿಮಾನ ನಿಲ್ದಾಣದಿಂದ ನೇರವಾಗಿ ಮಲ್ಟಿಪ್ಲೆಕ್ಸ್‌ಗೆ ಆಗಮಿಸಿದ ಅವರನ್ನು ನೋಡಲು ಕಿಕ್ಕಿರಿದು ಸೇರಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಧನುಷ್ ಬಗ್ಗೆ ಮೊದಲ ಬಾರಿ ಅಸಲಿ ವಿಷಯ ಬಾಯಿಬಿಟ್ಟ ಮೃಣಾಲ್ ಠಾಕೂರ್ – Kannada News | Mrunal Thakur reveals why Dhanush attended Son of Sardaar 2 premiere show

ನಟಿ ಮೃಣಾಲ್ ಠಾಕೂರ್ ಅವರು ನಟ ಧನುಷ್ (Dhanush) ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಗಾಸಿಪ್ ಹಬ್ಬಿತ್ತು. ಅಷ್ಟೇ ಅಲ್ಲದೇ, ಈ ವರ್ಷ ಪ್ರೇಮಿಗಳ ದಿನದಂದು ಅವರಿಬ್ಬರು ಮದುವೆ ಆಗುತ್ತಾರೆ ಎಂಬ ವದಂತಿ ಕೂಡ ಕೇಳಿಬಂದಿತ್ತು. ಆದರೆ ಅದು ನಿಜವಾಗಲಿಲ್ಲ. ಇದರಿಂದಾಗಿ ಇಲ್ಲಸಲ್ಲದ ಗಾಸಿಪ್ ಹಬ್ಬಿಸುವವರ ಬಾಯಿಗೆ ಬೀಗ ಬಿದ್ದಂತೆ ಆಗಿದೆ. ಈಗ ಇದೇ ಮೊದಲ ಬಾರಿಗೆ ಮೃಣಾಲ್ ಠಾಕೂರ್ (Mrunal Thakur) ಅವರು ಧನುಷ್ ವಿಚಾರಕ್ಕೆ ಸಂಬಂಧಿಸಿದ ಒಂದು ಪ್ರಮುಖ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಗಾಸಿಪ್ ಶುರುವಾಗಲು ಕಾರಣವಾದ ಆ ಘಟನೆಯನ್ನು ಅವರೀಗ ನೆನಪಿಸಿಕೊಂಡಿದ್ದಾರೆ.

ಕಳೆದ ವರ್ಷ ಮೃಣಾಲ್ ಠಾಕೂರ್ ನಟನೆಯ ‘ಸನ್ ಆಫ್ ಸರ್ದಾರ್ 2’ ಸಿನಿಮಾ ಬಿಡುಗಡೆ ಆಯಿತು. ಆ ಸಿನಿಮಾದ ಪ್ರೀಮಿಯರ್ ಶೋಗೆ ಧನುಷ್ ಅವರು ಆಗಮಿಸಿದ್ದರು. ಆ ಚಿತ್ರಕ್ಕೂ ಧನುಷ್ ಅವರಿಗೂ ಯಾವುದೇ ಸಂಬಂಧ ಇಲ್ಲ. ಹಾಗಿದ್ದರೂ ಕೂಡ ಅವರು ಹಾಜರಿ ಹಾಕಿದ್ದು ನೋಡಿ ಎಲ್ಲರಿಗೂ ಅಚ್ಚರಿ ಆಗಿತ್ತು. ಅಲ್ಲಿಂದಲೇ ಗಾಸಿಪ್ ಆರಂಭ ಆಗಿತ್ತು.

ಅಷ್ಟಕ್ಕೂ ಧನುಷ್ ಅವರು ‘ಸನ್ ಆಫ್ ಸರ್ದಾರ್ 2’ ಸಿನಿಮಾದ ಪ್ರೀಮಿಯರ್ ಪ್ರದರ್ಶನಕ್ಕೆ ಬಂದಿದ್ದು ಯಾಕೆ ಎಂಬುದನ್ನು ಈಗ ಮೃಣಾಲ್ ಠಾಕೂರ್ ಅವರು ವಿವರಿಸಿದ್ದಾರೆ. ತಾವು ಧನುಷ್ ಅವರ ದೊಡ್ಡ ಅಭಿಮಾನಿ ಎಂದು ಮೃಣಾಲ್ ಠಾಕೂರ್ ಹೇಳಿದ್ದಾರೆ. ‘ಸನ್ ಆಫ್ ಸರ್ದಾರ್ 2’ ಪ್ರೀಮಿಯರ್ ಪ್ರದರ್ಶನಕ್ಕೆ ತಾವೇ ಆಹ್ವಾನಿಸಿದ್ದು ಎಂದು ಕೂಡ ತಿಳಿಸಿದ್ದಾರೆ.

‘ಧನುಷ್ ಅವರು ತೇರೆ ಇಷ್ಕ್ ಮೇ ಸಿನಿಮಾದ ಶೂಟಿಂಗ್​​ ಮಾಡುತ್ತಿದ್ದಾಗ ನಾನು ಹೋಗಿ ಅವರ ಬಳಿ ಮನವಿ ಮಾಡಿಕೊಂಡೆ. ಸರ್ ನೀವು ಸನ್ ಆಫ್ ಸರ್ದಾರ್ 2 ಚಿತ್ರದ ಪ್ರೀಮಿಯರ್ ಶೋಗೆ ಬರಬಹುದಾ ಅಂತ ಹೇಳಿದೆ. ಅವರು ಬರುತ್ತಾರೆ ಎಂಬುದು ನನಗೆ ತಿಳಿದಿರಲಿಲ್ಲ. ಅವರು ಬಂದೇಬಿಟ್ಟರು. ನನಗೆ ಬಹಳ ಸಂತೋಷ ಆಯಿತು. ಒಂದು ದಿನ ಅವರ ಜೊತೆ ಕೆಲಸ ಮಾಡಬೇಕು ಅಂತ ನಾನು ಬಯಸುತ್ತೇನೆ’ ಎಂದಿದ್ದಾರೆ ಮೃಣಾಲ್ ಠಾಕೂರ್.

ಇದನ್ನೂ ಓದಿ: ಧನುಷ್, ಮೃಣಾಲ್ ಠಾಕೂರ್ ನಡುವೆ ವಯಸ್ಸಿನ ಅಂತರ ಎಷ್ಟು?

ಧನುಷ್ ನಟನೆಯ ಸಿನಿಮಾಗಳನ್ನು ನೋಡಿ ಮೃಣಾಲ್ ಠಾಕೂರ್ ಅವರು ಫಿದಾ ಆಗಿದ್ದಾರೆ. ರಾಯನ್, ಮಾರಿ, ರಾಂಜಾನಾ, ಕ್ಯಾಪ್ಟನ್ ಮಿಲ್ಲರ್ ಸಿನಿಮಾಗಳನ್ನು ನೋಡಿ ಅವರಿಗೆ ತಾವು ಫ್ಯಾನ್ ಆಗಿರುವುದಾಗಿ ಮೃಣಾಲ್ ತಿಳಿಸಿದ್ದಾರೆ. ‘ಅರುಸನ್ ಸಿನಿಮಾವನ್ನು ನಾನು ಎಷ್ಟು ಬಾರಿ ಬೇಕಾದರೂ ನೋಡುತ್ತೇನೆ’ ಎಂದಿದ್ದಾರೆ ಮೃಣಾಲ್ ಠಾಕೂರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಿಷಬ್ ಶೆಟ್ಟಿಗಾಗಿ ಪ್ರಭಾಸ್ ಸಿನಿಮಾ ಕೈಬಿಟ್ಟರೆ ಯುವ ನಿರ್ದೇಶಕ – Kannada News | Prabhas and Prashanth Varma combination movie halted

ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು ಮಾತ್ರವಲ್ಲದೆ ಫ್ಲಾಪ್ ಸಹ ಆಗಿದೆ. ಇದಾದ ಬಳಿಕ ಪ್ರಭಾಸ್ ಎದುರು ಒಳ್ಳೆಯ ಸಿನಿಮಾಗಳ ಲೈನ್ ಅಪ್ ಇದೆ. ‘ಫೌಜಿ’, ‘ಸ್ಪಿರಿಟ್’ ‘ಕಲ್ಕಿ 2’ ಮತ್ತು ‘ಸಲಾರ್ 2’ ಸಿನಿಮಾಗಳಲ್ಲಿ ಪ್ರಭಾಸ್ ನಟಿಸಲಿದ್ದಾರೆ. ಇವುಗಳ ಜೊತೆಗೆ ಒಂದು ಪೌರಾಣಿಕ ಕತೆ ಆಧರಿತ ಸೂಪರ್ ಹೀರೋ ಸಿನಿಮಾನಲ್ಲಿ ಪ್ರಭಾಸ್ ನಟಿಸಬೇಕಿತ್ತು. ಆದರೆ ಆ ಸಿನಿಮಾ ನಿಂತು ಹೋಗಿದೆ. ಅದಕ್ಕೆ ಪರೋಕ್ಷ ಕಾರಣ ರಿಷಬ್ ಶೆಟ್ಟಿ ಎನ್ನಲಾಗುತ್ತಿದೆ. ಅದು ಹೇಗೆ?

‘ಹನು ಮ್ಯಾನ್’ ಸಿನಿಮಾ ಮೂಲಕ ದೊಡ್ಡ ಹಿಟ್ ಕೊಟ್ಟಿರುವ ಪ್ರಭಾಸ್ ಅವರಿಗಾಗಿ ಸಿನಿಮಾ ಒಂದನ್ನು ನಿರ್ದೇಶಿಸಬೇಕಿತ್ತು. ಆ ಸಿನಿಮಾಕ್ಕೆ ‘ಬಕ‘ ಎಂದು ಹೆಸರು ಸಹ ಇಡಲಾಗಿತ್ತು. ಆದರೆ ಈಗ ಸಿನಿಮಾ ಸ್ಥಗಿತಗೊಂಡಿದೆ ಎಂಬ ಸುದ್ದಿ ಟಾಲಿವುಡ್​​ನಲ್ಲಿ ಹರಿದಾಡುತ್ತಿದೆ. ಪ್ರಶಾಂತ್ ಪ್ರಸ್ತುತ ಟಾಲಿವುಡ್​​ನ ಹಾಟ್ ನಿರ್ದೇಶಕರಲ್ಲಿ ಒಬ್ಬರಾಗಿದ್ದು, ಅವರು ಪ್ರಭಾಸ್ ಅಂಥಹಾ ಸೂಪರ್ ಸ್ಟಾರ್ ಜೊತೆಗೆ ಸೂಪರ್ ಹೀರೋ ಮಾದರಿಯ ಸಿನಿಮಾ ಮಾಡುವುದನ್ನು ನೋಡಲು ಅಭಿಮಾನಿಗಳು ಕಾತರರಾಗಿದ್ದರು ಆದರೆ ಸಿನಿಮಾ ನಿಂತು ಹೋಗಿರುವುದು ಪ್ರಭಾಸ್ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

‘ಬಕ’ ಸಿನಿಮಾ ನಿಂತು ಹೋದ ಬಗ್ಗೆ ಕೆಲವು ಭಿನ್ನ-ಭಿನ್ನ ರೀತಿಯ ಸುದ್ದಿಗಳು ಟಾಲಿವುಡ್​​ನಲ್ಲಿ ಹರಿದಾಡುತ್ತಿವೆ. ‘ಬಕ’ ಚಿತ್ರದ ಟೆಸ್ಟ್ ಶೂಟ್ ಇತ್ತೀಚೆಗೆ ನಡೆದಿದ್ದು, ಆದರೆ, ಸಿನಿಮಾದಲ್ಲಿನ ತಮ್ಮ ಲುಕ್ ಮತ್ತು ಒಟ್ಟಾರೆ ಸಿನಿಮಾದ ಲುಕ್ ಆಂಡ್ ಫೀಲ್ ಪ್ರಭಾಸ್ ಅವರಿಗೆ ಅತೃಪ್ತಿ ಉಂಟಾಗಿದೆ ಎನ್ನಲಾಗಿದೆ. ಈ ಕಾರಣದಿಂದಾಗಿ ಅವರು ಯೋಜನೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಮತ್ತೊಂದು ಕಾರಣವೆಂದರೆ ಪ್ರಶಾಂತ್ ವರ್ಮಾ ಇದೀಗ ರಿಷಬ್ ಶೆಟ್ಟಿ ಜೊತೆಗೆ ‘ಜೈ ಹನುಮಾನ್’ ಸಿನಿಮಾ ಪ್ರಾರಂಭ ಮಾಡುತ್ತಿದ್ದು, ಆ ಸಿನಿಮಾದ ಮೇಲೆ ಹೆಚ್ಚು ಗಮನ ಹರಿಸಬೇಕಿರುವ ಕಾರಣ ಅವರೇ ‘ಬಕ’ ಸಿನಿಮಾ ಪ್ರಾಜೆಕ್ಟ್ ಅನ್ನು ಕೈಬಿಟ್ಟಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ದಿ ರಾಜಾ ಸಾಬ್: ಚಿತ್ರಮಂದಿರದಲ್ಲಿ ಪ್ರಭಾಸ್ ಸಿನಿಮಾ ಫ್ಲಾಪ್, ಒಟಿಟಿಯಲ್ಲಿ ಸೂಪರ್ ಹಿಟ್

ಪ್ರಶಾಂತ್ ವರ್ಮ ಅವರು ಪೌರಾಣಿಕ ಪಾತ್ರಗಳನ್ನು ಆಧರಿಸಿ ಕೆಲವು ಕತೆಗಳನ್ನು ರೆಡಿ ಮಾಡಿಕೊಂಡಿದ್ದು ಅವುಗಳನ್ನು ಸಿನಿಮಾ ಮಾಡಲು ಯೋಜನೆ ಹಾಕಿಕೊಂಡಿದ್ದರು. ಆದರೆ ಅವರ ಈ ಯೋಜನೆಗೆ ಒಂದರ ಮೇಲೊಂದು ಪೆಟ್ಟು ಬೀಳುತ್ತಲೇ ಇದೆ. ಈ ಹಿಂದೆ ಬಾಲಿವುಡ್ ನಟ ರಣವೀರ್ ಸಿಂಗ್ ಅವರೊಂದಿಗೆ ಮಾಡಬೇಕಿದ್ದ ‘ರಾಕ್ಷಸ’ ಚಿತ್ರವು ಸೃಜನಶೀಲ ಭಿನ್ನಾಭಿಪ್ರಾಯಗಳಿಂದಾಗಿ ರದ್ದಾಗಿತ್ತು. ಇದಾದ ನಂತರ ನಂದಮೂರಿ ಬಾಲಕೃಷ್ಣ ಪುತ್ರ ಮೋಕ್ಷಜ್ಞ ಅವರ ಪದಾರ್ಪಣೆ ಚಿತ್ರದ ಬಗ್ಗೆಯೂ ಗೊಂದಲಗಳು ಏರ್ಪಟ್ಟಿದ್ದವು. ಈಗ ಪ್ರಭಾಸ್ ಅವರಂತಹ ಪ್ಯಾನ್-ಇಂಡಿಯಾ ಸ್ಟಾರ್ ಚಿತ್ರದಿಂದ ಹೊರಬಂದಿರುವುದು ಪ್ರಶಾಂತ್ ವರ್ಮ ಅವರ ವೃತ್ತಿಜೀವನಕ್ಕೆ ಸವಾಲಾಗಿ ಪರಿಣಮಿಸಿದೆ.

‘ಬಕ’ ಸಿನಿಮಾನಲ್ಲಿ ಪ್ರಭಾಸ್ ಅವರು ‘ಬಕಾಸುರ’ನ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂಬ ಸುದ್ದಿ ಇತ್ತು. ಪ್ರಶಾಂತ್ ವರ್ಮ ಅವರ ಕಲ್ಪನೆಯ ಪೌರಾಣಿಕ ಮತ್ತು ಆಧುನಿಕ ಸ್ಪರ್ಶದ ಈ ಕಥೆಯ ಮೇಲೆ ಅಭಿಮಾನಿಗಳು ಬಹಳ ನಂಬಿಕೆ ಇಟ್ಟಿದ್ದರು. ಆದರೆ ‘ಹನು-ಮಾನ್’ ನಿರ್ಮಾಪಕರ ಜೊತೆಗಿನ ಬಜೆಟ್ ಕಿರಿಕ್ ಮತ್ತು ಸರಣಿ ಪ್ರಾಜೆಕ್ಟ್‌ಗಳು ಕೈತಪ್ಪುತ್ತಿರುವುದು ಚಿತ್ರರಂಗದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮುಂಬೈ ಬೀದಿಗಳಲ್ಲಿ ಯಶ್ ಮುಖ ಮುಚ್ಚಿಕೊಂಡು ಓಡಾಡಿದ್ದಕ್ಕೆ ‘ಟಾಕ್ಸಿಕ್ ಟೀಸರ್​​ನಲ್ಲಿ ಸಿಕ್ತು ಉತ್ತರ – Kannada News | Yash’s ‘Toxic’ Teaser: New Looks and Mask Mystery Solved for Fans

‘ಟಾಕ್ಸಿಕ್’ ಸಿನಿಮಾ ಟೀಸರ್ ರಿಲೀಸ್ ಆಗಿ ಸೆನ್ಸೇಷನ್ ಸೃಷ್ಟಿಸಿದೆ. ಯಶ್ (Yash) ಅಭಿಮಾನಿಗಳು ಟೀಸರ್​​ನ ಬಹುವಾಗಿ ಇಷ್ಟಪಟ್ಟಿದ್ದಾರೆ. ಯಶ್ ಅವರು ವಿವಿಧ ಗೆಟಪ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗಮನ ಸೆಳೆದಿದೆ. ಇದರಲ್ಲಿ ಯಶ್ ಅವರು ಯಂಗ್ ಲುಕ್​​ನಲ್ಲಿ ಕಾಣಿಸಿಕೊಂಡ ಲುಕ್ ಕೂಡ ಗಮನ ಸೆಳೆದಿದೆ. ಯಶ್ ಅವರು ಈ ಮೊದಲು ಮುಖವನ್ನು ಮುಚ್ಚಿಕೊಂಡು ಓಡಾಡಿದ್ದರು. ಅದು ಏಕೆ ಎಂಬ ಪ್ರಶ್ನೆ ಮೂಡಿತ್ತು. ಟಾಕ್ಸಿಕ್ ಟೀಸರ್ ಮೂಲಕ ಅದಕ್ಕೆ ಉತ್ತರ ಸಿಕ್ಕಂತೆ ಆಗಿದೆ.

ಕೆಲ ವಾರಗಳ ಹಿಂದೆ ಯಶ್ ಮುಂಬೈ ಬೀದಿಗಳಲ್ಲಿ ಕಾಣಿಸಿಕೊಂಡಿದ್ದರು. ಆಗ ಅವರು ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡಿದ್ದರು. ಈ ವಿಡಿಯೋ ಗಮನ ಸೆಳೆಯಿತು. ಯಶ್ ಅವರು ಯಾವಾಗಲೂ ಹೀಗೆ ಕಾಣಿಸಿಕೊಂಡವರಲ್ಲ. ಅವರು ಈ ರೀತಿ ಮಾಡಿದ್ದೇಕೆ ಎಂಬ ಪ್ರಶ್ನೆ ಮೂಡಿತ್ತು. ಅವರು ಗಡ್ಡ ಹಾಗೂ ಕೂದಲಿಗೆ ಕತ್ತರಿ ಹಾಕಿರಬಹುದು ಎಂಬುದು ಅನೇಕರ ಊಹೆ ಆಗಿತ್ತು. ಆ ಊಹೆ ನಿಜವಾಗಿದೆ.

ಯಶ್ ಅವರು ಯಂಗ್ ವರ್ಷನ್ ಅಲ್ಲಿ ಕಾಣಿಸಿಕೊಳ್ಳುವ ಉದ್ದೇಶದಿಂದ ಗಡ್ಡ ಹಾಗೂ ತಲೆಕೂದಲು ಕತ್ತರಿಸಿದ್ದರು ಎಂಬುದು ಟೀಸರ್ ನೋಡಿದ ಬಳಿಕ ಪಕ್ಕಾ ಆಗಿದೆ. ಒಂದಷ್ಟು ಎಡಿಟ್​​ಗಳನ್ನು ಮಾಡಿ ಟೀಸರ್​​ನಲ್ಲಿ ಮತ್ತಷ್ಟು ಯಂಗ್ ಆಗಿ ಕಾಣುವಂತೆ ಮಾಡಲಾಗಿದೆ. ಇದು ಗಮನ ಸೆಳೆದಿದೆ.

ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಈ ಟೆಕ್ನಿಕ್​​ನ ಫಾಲೋ ಮಾಡುತ್ತಾರೆ. ಮುಂದಿನ ಸಿನಿಮಾದ ಲುಕ್ ರಿವೀಲ್ ಆಗಬಾರದು ಎಂಬ ಕಾರಣಕ್ಕೆ ಈ ರೀತಿಯಲ್ಲಿ ಮುಖಕ್ಕೆ ಬಟ್ಟೆ ಧರಿಸಿ ಓಡಾಡುತ್ತಾರೆ. ಯಶ್ ಕೂಡ ಇದೇ ತಂತ್ರ ಬಳಸಿದ್ದಾರೆ. ಯಶ್ ಅವರು ಸದ್ಯ ಯಾವ ಲುಕ್​​ನಲ್ಲಿ ಇದ್ದಾರೆ ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

ಇದನ್ನೂ ಓದಿ: ‘ವಿಂಟೇಜ್ ಯಶ್ ಈಸ್ ಬ್ಯಾಕ್’; ‘ಟಾಕ್ಸಿಕ್ ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

‘ಟಾಕ್ಸಿಕ್’ ಚಿತ್ರವನ್ನು ಗೀತು ಮೋಹನ್​ದಾಸ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಕೆವಿಎನ್ ನಿರ್ಮಾಣ ಸಂಸ್ಥೆ ಬಂಡವಾಳ ಹೂಡುತ್ತಾ ಇದೆ. ಯಶ್ ಕೂಡ ಚಿತ್ರದ ನಿರ್ಮಾಪಕ. ಈ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಶಿ ಮೊದಲಾದವರು ನಟಿಸಿದ್ದಾರೆ. ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪೊಲೀಸಪ್ಪನ ಕಾಟಕ್ಕೆ ವಿಧವೆ ಮಹಿಳೆ ಆತ್ಮಹತ್ಯೆ: ವಾಟ್ಸಾಪ್​​ನಲ್ಲಿದ್ದ ಡೆತ್​ನೋಟ್​​​ನಲ್ಲಿ ಏನಿದೆ? – Kannada News | Shivamogga: Widow commits suicide after being harassed by police; Death note found in WhatsApp

ಮೃತ ಸ್ವಾತಿ, ಪೊಲೀಸ್​ Image Credit source: tv9 kannada

ಶಿವಮೊಗ್ಗ, ಫೆಬ್ರವರಿ 20: ಪೊಲೀಸಪ್ಪನ (Police) ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್​​ನಲ್ಲಿ ಡೆತ್ ನೋಟ್​ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಸ್ವಾತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತೀರ್ಥಹಳ್ಳಿ ಪೊಲೀಸ್​ ಸ್ಟೇಷನ್​ನಲ್ಲಿ ಕರ್ತವ್ಯ ನಿರ್ವಹಿಸುವ ಮೋಹನ್​ ಹೆಸರು ಡೆತ್ ನೋಟ್​ನಲ್ಲಿ ಉಲ್ಲೇಖಿಸಲಾಗಿದೆ. ಇನ್ನು ತಂದೆ ಮತ್ತು ತಾಯಿ ಸಾವಿನಿಂದ ಹೆಣ್ಣು ಮಕ್ಕಳ್ಳಿಬ್ಬರು ಅನಾಥವಾಗಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಮೃತಳ ಹೆತ್ತವರು ಟಾರ್ಚರ್ ಕೊಟ್ಟ ಪೋಲಿಸ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ನಡೆದಿದ್ದೇನು?

ಸ್ವಾತಿಗೆ ಮದುವೆ ಆಗಿ 7 ವರ್ಷವಾಗಿತ್ತು. ಒಂದು ವಾರದ ಹಿಂದಷ್ಟೇ ಪತಿ ಜಗದೀಶ್ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಪೊಲೀಸ್ ಮೋಹನ್,​ ಸ್ವಾತಿಗೆ ಫೇಸ್​ಬುಕ್​ನಲ್ಲಿ ಮೆಸೇಜ್ ಮಾಡಿದ್ದ. ಆತನ ಅಕೌಂಟ್​ ಅನ್ನು ಸ್ವಾತಿ ಬ್ಲಾಕ್ ಮಾಡಿದ್ದರು. ಇದಕ್ಕೆ ಕೋಪಗೊಂಡ ಪೋಲಿಸ್ ಬೇರೆ ಅಕೌಂಟ್​ ನಿಂದ ಸ್ವಾತಿ ಬಗ್ಗೆ ಅಪಪ್ರಚಾರ ಮಾಡಿದ್ದ. ಬಳಿಕ ಈತನ ಕಾಟ ತಾಳಲಾರದೆ ಸ್ವಾತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ್ಯೂ ಟೌನ್​​ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಡೆತ್ ನೋಟ್​ನಲ್ಲಿ ಏನಿದೆ?

ಸ್ವಾರಿ ಅಮ್ಮ. ನನ್ನ ಬಗ್ಗೆ ಇಲ್ಲದೆ ಇರುವುದು ಎಲ್ಲಾ ಕೆಟದಾಗಿ ಜನಗಳ ಹತ್ತಿರ ಮೋಹನ್​ ಹೇಳಿದ್ದಾರೆ. ನನಗೆ ತಡಿಯುವುದಕ್ಕೆ ಆಗುತ್ತಿಲ್ಲ. ನನ್ನ ಗಂಡ ಸತ್ತಿದು ಫುಲ್ ಡ್ರಿಂಕ್ಸ್ ಮಾಡಿ. ಈ ಮೋಹನ್ ಎನ್ನುವ ಪೊಲೀಸ್ ನನ್ನ ಬಗ್ಗೆ ಕೆಟದಾಗಿ ಜನಗಳ ಹತ್ತಿರ ಏನೇನೋ ಹೇಳಿರುವುದು ನನಗೆ ಈಗ ಬೆಳಿಗ್ಗೆ ವಿಷಯ ಗೊತಾಯ್ತು. ಅವನನ್ನು ಮಾತ್ರ ಸಮ್ಮನೇ ಬಿಡಬೇಡಿ ಎಂದಿದ್ದಾರೆ.

ಇದನ್ನೂ ಓದಿ: ಗಂಡ ಫಾರಿನ್ ಟ್ರಿಪ್ ಕಳಿಸದಿದ್ದಕ್ಕೆ ದುಡುಕಿನ ನಿರ್ಧಾರ ಕೈಗೊಂಡ ಹೆಂಡ್ತಿ: ಆಗಿದ್ದೇನು?

ಅವರು ಯಾರು ಅಂತಾನೆ ನಂಗೆ ಗೊತ್ತಿಲ್ಲ. ಫೇಸ್​ಬುಕ್​ನಲ್ಲಿ ಮೆಸೇಜ್​​ ಮಾಡಿದ್ದರು. ನಾನು ಬ್ಲಾಕ್ ಮಾಡಿದೆ. ಅದೇ ಸಿಟ್ಟಿಗೆ ಏನೇನೋ ಹೇಳಿದ್ದಾರೆ. ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ. ದಯವಿಟ್ಟು ಸ್ವಾರಿ ಅಮ್ಮ ಎಂದು ಸ್ವಾತಿ ಡೆತ್ ನೋಟ್ ಬರೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗಂಡ ಫಾರಿನ್ ಟ್ರಿಪ್ ಕಳಿಸದಿದ್ದಕ್ಕೆ ದುಡುಕಿನ ನಿರ್ಧಾರ ಕೈಗೊಂಡ ಹೆಂಡ್ತಿ: ಆಗಿದ್ದೇನು? – Kannada News | Woman Commits Suicide By Hanging Herself In Mysuru For Husband denied foreign Trip

ಮೈಸೂರು (ಫೆಬ್ರವರಿ.20): ಪ್ರವಾಸದ ವಿಚಾರಕ್ಕೆ ಗಂಡ ಹೆಂಡ್ತಿ ನಡುವೆ ಗಲಾಟೆಯಾಗಿದ್ದು, ಬಳಿಕ ಪತ್ನಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನ (Mysuru) ಸರಸ್ವತಿಪುರಂನಲ್ಲಿ ನಡೆದಿದೆ. ಪ್ರವಾಸಕ್ಕೆ ತೆರಳಲು ಪತಿ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದು 46 ವರ್ಷದ ಸಂಧ್ಯಾ ಎಂಬುವವರು ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಆದರೆ, ಈ ಸಾವಿನ ಸುತ್ತ ಇದೀಗ ಕುಟುಂಬದ ಸದಸ್ಯರ ನಡುವೆಯೇ ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ಹೀಗಾಗಿ ಗೃಹಿಣಿ ಸಂಧ್ಯಾ ಆತ್ಮಹತ್ಯೆ ಪ್ರಕರಣವು ಇದೀಗ ತೀವ್ರ ತಿರುವು ಪಡೆದುಕೊಂಡಿದೆ.

ಕಳೆದ ಬುಧವಾರ ಸಂಜೆ ಪ್ರವಾಸಕ್ಕೆ (ಫಾರಿನ್ ಟ್ರಿಪ್) ಹೋಗುವ ವಿಚಾರವಾಗಿ ದಂಪತಿ ನಡುವೆ ಗಲಾಟೆಯಾಗಿತ್ತು ಎನ್ನಲಾಗಿದೆ. ಗಲಾಟೆಯ ನಂತರ ರಂಗನಾಥ್ ಮನೆಯಿಂದ ಹೊರಹೋಗಿದ್ದ ಸಮಯದಲ್ಲಿ ಸಂಧ್ಯಾ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.

ಇದನನ್ನೂ ನೋಡಿ: ಮಾನಸಿಕ ಒತ್ತಡ, ಆತಂಕ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?

ಮೂಲತಃ ಬೆಂಗಳೂರಿನವರಾದ ಸಂಧ್ಯಾ ಅವರು 25 ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ರಂಗನಾಥ್ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ ಸೃಷ್ಟಿ ಎಂಬ ಪುತ್ರಿ ಹಾಗೂ ಕೌಶಿಕ್ ಎಂಬ ಪುತ್ರನಿದ್ದಾನೆ. ಸೃಷ್ಟಿ ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದರೆ, ಕೌಶಿಕ್ ತಂದೆ-ತಾಯಿಯೊಂದಿಗೆ ಮೈಸೂರಿನಲ್ಲಿ ನೆಲೆಸಿದ್ದಾನೆ.

ತಾಯಿಯನ್ನು ಅನುಮಾನದಿಂದ ನೋಡುತ್ತಿದ್ದರು

ನನ್ನ ತಾಯಿ ಸಂಧ್ಯಾಳ ಸಾವು ಕೇವಲ ಆತ್ಮಹತ್ಯೆಯಲ್ಲ, ಇದೊಂದು ಕೊಲೆ ಎಂದು ಮೃತ ಸಂಧ್ಯಾ ಅವರ ಪುತ್ರಿ ಸೃಷ್ಟಿ ಗಂಭೀರ ಆರೋಪ ಮಾಡಿದ್ದಾರೆ. ‘ನನ್ನ ತಂದೆ ಮತ್ತು ಸಹೋದರ ಸೇರಿಕೊಂಡು ತಾಯಿಗೆ ಕಿರುಕುಳ ನೀಡುತ್ತಿದ್ದರು. ತಂದೆ ಯಾವಾಗಲೂ ತಾಯಿಯನ್ನು ಅನುಮಾನದಿಂದ ನೋಡುತ್ತಿದ್ದರು ಹಾಗೂ ಹಣದ ವಿಷಯಕ್ಕೆ ಗಲಾಟೆ ಮಾಡುತ್ತಿದ್ದರು. ತಂದೆ ಜೊತೆ ಸೇರಿಕೊಂಡು ನನ್ನ ಸಹೋದರ ಕೆಟ್ಟ ಬುದ್ಧಿ ಕಲಿತ್ತಿದ್ದಾನೆ. ತಂದೆ ಹಾಗೂ ನನ್ನ ಸಹೋದರ ಪ್ರತಿನಿತ್ಯ ದುಡ್ಡು ದುಡ್ಡು ಎನ್ನುತ್ತಾರೆ.  ನನ್ನ ತಾಯಿಯ ಸಾವಿಗೆ ಇವರಿಬ್ಬರೇ ಕಾರಣ, ಅವರಿಗೆ ಕಠಿಣ ಶಿಕ್ಷೆಯಾಗಬೇಕು. ನನ್ನ ತಾಯಿಯ ಅಂತ್ಯಸಂಸ್ಕಾರವನ್ನು ಇವರು ಮಾಡಬಾರದು. ಬದಲಿಗೆ ನನ್ನ ಮಾವ ಮಾಡಬೇಕು’ ಎಂದು ಸೃಷ್ಟಿ ಆಕ್ರೋಶ ಹೊರಹಾಕಿದ್ದಾರೆ.

ತಾಯಿ ಆತ್ಮಹತ್ಯೆಗೆ ಮಗ ಹೇಳಿದ್ದೇನು?

ಇನ್ನೊಂದೆಡೆ, ಮೃತ ಸಂಧ್ಯಾ ಅವರ 17 ವರ್ಷದ ಮಗ ಕೌಶಿಕ್ ತನ್ನ ತಂದೆಯ ಪರವಾಗಿ ಹೇಳಿಕೆ ನೀಡಿದ್ದಾನೆ. ನಮ್ಮ ಕುಟುಂಬದಲ್ಲಿ ಯಾವುದೇ ಜಗಳವಿರಲಿಲ್ಲ. ತಾಯಿ ಪ್ರವಾಸಕ್ಕೆ ಹೋಗುತ್ತೇನೆ ಎಂದಾಗ, ನನಗೆ ಪರೀಕ್ಷೆ ಇರುವ ಕಾರಣ ತಂದೆ ಈಗ ಬೇಡ’ ಎಂದಿದ್ದರು. ಇಷ್ಟಕ್ಕೇ ಮನನೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಮ್ಮ ಸಾವಿಗೆ ಶರಣಾಗಿದ್ದನ ನಂತರ ಶವವನ್ನು ನಾನೇ ಮೊದಲು ನೋಡಿದ್ದೇನೆ. ನಂತರ ಅಪ್ಪ ಬಂದು ನೋಡಿದ್ದಾರೆ. ಆದರೆ, ಅಕ್ಕ ವಿದೇಶದಲ್ಲಿದ್ದುಕೊಂಡು ಅಪ್ಪನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾಳೆ ಎಂದು ಕೌಶಿಕ್ ಹೇಳಿದ್ದಾನೆ.

ಪತಿ ರಂಗನಾಥ್ ಸ್ಪಷ್ಟನೆ

ಇನ್ನು ಪತ್ನಿ ಸಂಧ್ಯಾ ಸಾವಿನ ಬಗ್ಗೆ ಪತಿ ರಂಗನಾಥ್ ಪ್ರತಿಕ್ರಿಯಿಸಿದ್ದು, ನಾನು ನನ್ನ ಪತ್ನಿಯನ್ನು ತುಂಬಾ ಪ್ರೀತಿಸುತ್ತಿದ್ದೆ. ಅವಳ ಹೆಸರಿಗೇ 90% ಆಸ್ತಿ ಮಾಡಿದ್ದೇನೆ. ಈ ಹಿಂದೆ ಡೆನ್ಮಾರ್ಕ್ ಸೇರಿದಂತೆ ಹಲವು ದೇಶಗಳಿಗೆ ಅವಳನ್ನು ನಾನೇ ಪ್ರವಾಸಕ್ಕೆ ಕಳುಹಿಸಿಕೊಟ್ಟಿದ್ದೆ. ಈ ಬಾರಿ ಮಗನ ಎಕ್ಸಾಮ್ ಇದೆ ಎಂಬ ಕಾರಣಕ್ಕೆ ಬೇಡ ಎಂದಿದ್ದೆ. ಫೋನಿನಲ್ಲಿ ಯಾರೋ ಮಾತನಾಡುತ್ತಾರೆ ಎಂಬ ವಿಷಯಕ್ಕೆ ಹಿಂದೆ ಒಮ್ಮೆ ಗಲಾಟೆಯಾಗಿದ್ದು ನಿಜ. ಆದರೆ, ನಾನು ಅವಳನ್ನು ಕೊಂದಿಲ್ಲಎಂದಿದ್ದಾರೆ.

ಸದ್ಯ ಮೃತ ಸಂಧ್ಯಾ ಅವರ ಸಹೋದರ ಗುರುಮೂರ್ತಿ ಅವರು ನೀಡಿದ ದೂರಿನ ಮೇರೆಗೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Join Indian Navy: ಭಾರತೀಯ ನೌಕಾಪಡೆಯಲ್ಲಿ 260 ಸಬ್ ಲೆಫ್ಟಿನೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಯಾವುದೇ ಲಿಖಿತ ಪರೀಕ್ಷೆಯಿಲ್ಲ – Kannada News | Join Indian Navy as Sub Lieutenant: SSC Officer Vacancies, Merit Based Selection

ಭಾರತೀಯ ನೌಕಾಪಡೆಯಲ್ಲಿ (Indian Navy) ಅಧಿಕಾರಿಯಾಗಿ ವೃತ್ತಿಜೀವನವನ್ನು ಆರಂಭಿಸಲು ಬಯಸುವವರಿಗೆ ಇದೊಂದು ಸುವರ್ಣಾವಕಾಶ. ಶಾರ್ಟ್ ಸರ್ವಿಸ್ ಕಮಿಷನ್ (SSC) ಅಡಿಯಲ್ಲಿ ಒಟ್ಟು 260 ಸಬ್ ಲೆಫ್ಟಿನೆಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಬಿದ್ದಿದೆ. ಈ ನೇಮಕಾತಿಯ ವಿಶೇಷತೆಯೆಂದರೆ, ಇಲ್ಲಿ ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ಕೇವಲ ಶೈಕ್ಷಣಿಕ ಮೆರಿಟ್ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ನಡೆಯಲಿದೆ.

ನೇಮಕಾತಿಯ ಪ್ರಮುಖ ವಿವರಗಳು:

ಭಾರತೀಯ ನೌಕಾಪಡೆಯು ಕಾರ್ಯನಿರ್ವಾಹಕ (Executive), ತಾಂತ್ರಿಕ (Technical) ಮತ್ತು ಶಿಕ್ಷಣ ಶಾಖೆಗಳಲ್ಲಿ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ಕೇರಳದ ಎಜಿಮಲದಲ್ಲಿರುವ ಭಾರತೀಯ ನೌಕಾ ಅಕಾಡೆಮಿಯಲ್ಲಿ 22 ವಾರಗಳ ಕಠಿಣ ತರಬೇತಿಯನ್ನು ಪಡೆಯಲಿದ್ದಾರೆ.

ಹುದ್ದೆಗಳ ವಿವರ ಮತ್ತು ಅರ್ಹತೆ:

  • ಕಾರ್ಯನಿರ್ವಾಹಕ ಶಾಖೆ (Executive Branch): ಸಾಮಾನ್ಯ ಸೇವೆ (76), ಪೈಲಟ್ (25), ಏರ್ ಟ್ರಾಫಿಕ್ ಕಂಟ್ರೋಲರ್ (18) ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹುದ್ದೆಗಳಿವೆ. ಇದಕ್ಕೆ ಸಂಬಂಧಿತ ಬಿ.ಇ/ಬಿ.ಟೆಕ್ ಪದವಿಯಲ್ಲಿ ಕನಿಷ್ಠ ಶೇ.60 ಅಂಕಗಳನ್ನು ಹೊಂದಿರಬೇಕು.
  • ತಾಂತ್ರಿಕ ಶಾಖೆ (Technical Branch): ಎಂಜಿನಿಯರಿಂಗ್ (42) ಮತ್ತು ಎಲೆಕ್ಟ್ರಿಕಲ್ (38) ವಿಭಾಗಗಳಲ್ಲಿ ಅವಕಾಶವಿದ್ದು, ಜಲಾಂತರ್ಗಾಮಿ ತಂತ್ರಜ್ಞಾನದಲ್ಲೂ (Submarine) ವಿಶೇಷ ಹುದ್ದೆಗಳಿವೆ.
  • ಶಿಕ್ಷಣ ಮತ್ತು ಲಾಜಿಸ್ಟಿಕ್ಸ್: ಎಂ.ಎಸ್ಸಿ, ಎಂ.ಬಿ.ಎ, ಎಂ.ಸಿ.ಎ ಅಥವಾ ಬಿ.ಕಾಂ ಜೊತೆಗೆ ಲಾಜಿಸ್ಟಿಕ್ಸ್ ಡಿಪ್ಲೊಮಾ ಮಾಡಿದವರಿಗೂ ಇಲ್ಲಿ ಅವಕಾಶ ಕಲ್ಪಿಸಲಾಗಿದೆ.

ವೇತನ ಮತ್ತು ಸೌಲಭ್ಯಗಳು:

ನೌಕಾಪಡೆಯಲ್ಲಿ ಅಧಿಕಾರಿ ಹುದ್ದೆಯು ಕೇವಲ ಉದ್ಯೋಗವಲ್ಲ, ಅದೊಂದು ಅತ್ಯಂತ ಗೌರವಾನ್ವಿತ ಜೀವನಶೈಲಿ. ಲೆವೆಲ್-10 ಶ್ರೇಣಿಯ ಅಡಿಯಲ್ಲಿ ಅಭ್ಯರ್ಥಿಗಳು ನೇಮಕಗೊಳ್ಳಲಿದ್ದು, ಆರಂಭಿಕ ಮೂಲ ವೇತನವೇ ರೂ. 56,100 ಇರಲಿದೆ. ಇದಕ್ಕೆ ತುಟ್ಟಿಭತ್ಯೆ (DA), ಮನೆ ಬಾಡಿಗೆ ಭತ್ಯೆ (HRA) ಮತ್ತು ಇತರ ಮಿಲಿಟರಿ ಸೌಲಭ್ಯಗಳನ್ನು ಸೇರಿಸಿದರೆ ಮಾಸಿಕ ಅಂದಾಜು ರೂ. 1.25 ಲಕ್ಷ ವೇತನ ದೊರೆಯುವ ಸಾಧ್ಯತೆಯಿದೆ.

ಇದನ್ನೂ ಓದಿ: ಕರ್ನಾಟಕದ ಹಾಲು ಒಕ್ಕೂಟದಲ್ಲಿ 194 ಹುದ್ದೆಗಳಿಗೆ ನೇಮಕಾತಿ; 10ರಿಂದ ಪದವೀಧರರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಆಯ್ಕೆ ಪ್ರಕ್ರಿಯೆ ಹೇಗೆ?

  • ಮೆರಿಟ್ ಪಟ್ಟಿ: ಪದವಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. (NCC ‘C’ ಪ್ರಮಾಣಪತ್ರ ಹೊಂದಿರುವವರಿಗೆ ಶೇ.5 ಅಂಕಗಳ ವಿನಾಯಿತಿ ಇರುತ್ತದೆ).
  • SSB ಸಂದರ್ಶನ: ಶಾರ್ಟ್‌ಲಿಸ್ಟ್ ಆದವರಿಗೆ ಬೆಂಗಳೂರು, ಭೋಪಾಲ್, ವಿಶಾಖಪಟ್ಟಣಂ ಅಥವಾ ಕೋಲ್ಕತ್ತಾದಲ್ಲಿ ಸೇವಾ ಆಯ್ಕೆ ಮಂಡಳಿ (SSB) ವತಿಯಿಂದ ಸಂದರ್ಶನ ನಡೆಯಲಿದೆ.
  • ವೈದ್ಯಕೀಯ ಪರೀಕ್ಷೆ: ಸಂದರ್ಶನದಲ್ಲಿ ಉತ್ತೀರ್ಣರಾದವರಿಗೆ ಅಂತಿಮವಾಗಿ ದೈಹಿಕ ಮತ್ತು ವೈದ್ಯಕೀಯ ತಪಾಸಣೆ ನಡೆಸಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಮುಖ ಮಾಹಿತಿ:

  • ವಯೋಮಿತಿ: ಅಭ್ಯರ್ಥಿಗಳು ಜನವರಿ 02, 2000 ಮತ್ತು ಜುಲೈ 01, 2007 ರ ನಡುವೆ ಜನಿಸಿರಬೇಕು.
  • ಅಂತಿಮ ದಿನಾಂಕ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 24 ಫೆಬ್ರವರಿ 2026 ಕೊನೆಯ ದಿನವಾಗಿದೆ.
  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್: www.joinindiannavy.gov.in

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಂಗಿಯ ಕನಸಿಗೆ ರೆಕ್ಕೆ ಪುಕ್ಕ ಕಟ್ಟಿದ್ದು ಅಣ್ಣಂದಿರು: ಚಪ್ಪಲಿ ಹೊಲಿಯುವವರ ತಂಗಿ ಪದ್ಮಾವತಿ ಈಗ ಸಿವಿಲ್ ಜಡ್ಜ್​​​ – Kannada News | Kannada Medium Barrier Broken: Dandeli’s Padmavathi Becomes Civil Judge

ದಾಂಡೇಲಿ, ಫೆ.20: ಬಡತನವು ಸಾಧನೆಗೆ ಅಡ್ಡಿಯಲ್ಲ, ಬದಲಾಗಿ ಅದು ಛಲವನ್ನು ಹೆಚ್ಚು ಮಾಡುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ದಾಂಡೇಲಿಯ ಯುವತಿ ಪದ್ಮಾವತಿ ನಾಗಣ್ಣ ಮಾದಿಗ ಅವರು ಸಿವಿಲ್ ನ್ಯಾಯಾಧೀಶರಾಗಿ (Civil Judge) ಆಯ್ಕೆಯಾಗುವ ಮೂಲಕ ಇಡೀ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಆದರೆ ಈ ಸಾಧನೆಯ ಹಿಂದೆ ಅವರಿಗಿಂತ ಹೆಚ್ಚಾಗಿ ಶ್ರಮಿಸಿದ್ದು ಅವರ ಅಣ್ಣಂದಿರು. ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಅವರನ್ನು ಬೇಗ ಮದುವೆ ಮಾಡಿಕೊಡುವ ಎಂಬ ಯೋಚನೆಯಲ್ಲಿರುವ ಈ ಕಾಲದಲ್ಲಿ ನಮ್ಮ ಮನೆಯ ಮಗಳು ಸಾಧನೆ ಮಾಡಿ ಒಳ್ಳೆಯ ಸ್ಥಾನವನ್ನು ಪಡೆಯಬೇಕು ಎಂಬ ಆಸೆಯನ್ನು ಇಟ್ಟುಕೊಂಡಿದ್ದರು. ತಮ್ಮ ತಂಗಿಗಾಗಿ ಇಡೀ ಜೀವನನ್ನೇ ಮುಡಪಾಗಿಟ್ಟಿದ್ದಾರೆ. ತಂಗಿಯ ಕನಸಿಗೆ ರೆಕ್ಕೆ ಪುಕ್ಕ ಕಟ್ಟಿದ್ದೇ ಈ ಅಣ್ಣಂದಿರು.

ಪದ್ಮಾವತಿ ಅವರ ಕುಟುಂಬದ ಹಿನ್ನೆಲೆ ಅತ್ಯಂತ ಸಾಮಾನ್ಯವಾದುದು. ತಂದೆ ನಾಗಣ್ಣ ಅವರು ನಿಧನರಾದ ಮೇಲೆ ಕುಟುಂಬದ ಜವಾಬ್ದಾರಿ ಅಣ್ಣಂದಿರ ಹೆಗಲ ಮೇಲೆ ಬಿತ್ತು. ಮನೆಯಲ್ಲಿ ಸರಿಯಾದ ಆರ್ಥಿಕ ವ್ಯವಸ್ಥೆ ಇಲ್ಲದಿದ್ದರೂ, ತಂಗಿಯ ಓದಿಗೆ ತೊಂದರೆಯಾಗಬಾರದೆಂದು ಅಣ್ಣಂದಿರು ರಸ್ತೆ ಬದಿಯಲ್ಲಿ ಕುಳಿತು ಚಪ್ಪಲಿ ಹೊಲಿಯುವ ಕಾಯಕ ಮಾಡುತ್ತಾ ಆಕೆಯನ್ನು ಓದಿಸಿದರು.

ಪದ್ಮಾವತಿ ಅವರು ಆರಂಭದಿಂದಲೂ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ಪಡೆದವರು. ಇಂಗ್ಲಿಷ್ ಭಾಷೆಯ ಮೇಲೆ ಹಿಡಿತ ಸಾಧಿಸುವುದು ಕಷ್ಟ ಎಂಬ ಸವಾಲನ್ನು ಮೆಟ್ಟಿ ನಿಂತ ಅವರು, ಕಾನೂನು ಪದವಿ (Law) ಪಡೆದು ನಂತರ ನ್ಯಾಯಾಂಗ ಪರೀಕ್ಷೆಗೆ ಸಿದ್ಧತೆ ನಡೆಸಿದರು. ಮೊದಲ ಪ್ರಯತ್ನದಲ್ಲೇ ಯಶಸ್ಸು ಕಂಡು ಇಂದು ಅವರು ನ್ಯಾಯಪೀಠದ ಮೇಲೆ ಕುಳಿತು ನ್ಯಾಯ ನೀಡುವ ಸ್ಥಾನಕ್ಕೆ ಏರಿದ್ದಾರೆ. ಅಣ್ಣಂದಿರ ಬೆವರಿನ ಬೆಲೆಯನ್ನು ಅರಿತಿದ್ದ ಪದ್ಮಾವತಿ, ಹಗಲು-ರಾತ್ರಿ ಕಷ್ಟಪಟ್ಟು ಓದಿ ಮೊದಲ ಪ್ರಯತ್ನದಲ್ಲೇ ನ್ಯಾಯಾಧೀಶರಾಗಿ ಆಯ್ಕೆಯಾದರು.

ಇದನ್ನೂ ಓದಿ: ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?

ಉತ್ತರ ಕನ್ನಡ ಜಿಲ್ಲೆಯಿಂದ ನ್ಯಾಯಾಧೀಶರಾಗಿ ಆಯ್ಕೆಯಾದ ಮಾದಿಗ ಸಮುದಾಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಕೂಡ ಪಾತ್ರರಾಗಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಓದಿದರೆ ಏನು ಸಾಧಿಸಲು ಸಾಧ್ಯವಿಲ್ಲ ಎನ್ನುವವರಿಗೆ ಇವರ ಸಾಧನೆಯೇ ದೊಡ್ಡ ಉತ್ತರವಾಗಿದ್ದಾರೆ. ನಾವು ಪಟ್ಟ ಕಷ್ಟಕ್ಕೆ ಇಂದು ಪ್ರತಿಫಲ ಸಿಕ್ಕಿದೆ. ನಮ್ಮ ತಂಗಿ ಸಮಾಜಕ್ಕೆ ನ್ಯಾಯ ನೀಡುವ ಕೆಲಸ ಮಾಡುತ್ತಾಳೆ ಎಂಬ ನಂಬಿಕೆ ನಮಗಿದೆ ಎಂದು ಹೆಮ್ಮೆಯ ಮಾತುಗಳನ್ನು ಅಣ್ಣಂದಿರು ಮಾತನಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:35 pm, Fri, 20 February 26

Source link

Gold Treasure Fraud: ಸಣ್ಣಬಸಪ್ಪ ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ – Kannada News | Lakkundi Gold Treasure Fraud: Muslim Moulvi video viral

ಗದಗ, (ಫೆಬ್ರವರಿ 20): ಇತಿಹಾಸ ಪ್ರಸಿದ್ಧ ಲಕ್ಕುಂಡಿಯಲ್ಲಿ ಇತ್ತೀಚೆಗೆ ನಿಧಿಸಿಕ್ಕ ಬೆನ್ನಲ್ಲೇ, ದೇಶ ಹಾಗೂ ವಿದೇಶದ ಗಮನ ಸೆಳೆದಿದೆ. ಇದಕ್ಕೂ ಮೊದಲೇ ಮುಸ್ಲಿಂ ಮೌಲ್ವಿಯೋರ್ವ ನಿಧಿ (Lakkundi Gold Treasure Fraud)ಹುಡುಕಿಕೊಡುವುದಾಗಿ ಮೋಸ ಮಾಡಿರುವುದು ಈಗ ಬೆಳಕಿಗೆ ಬಂದಿದೆ. ಸಣ್ಣಬಸಪ್ಪ ಜಮೀನಿನಲ್ಲಿ ಬಿಂದಿಗೆ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದಾನೆ. ಆ ದೃಶ್ಯ ಇದೀಗ ಬಯಲಿಗೆ ಬಂದಿದೆ. ಈ ಸಂಬಂಧ ಉತ್ತರಾಖಂಡ ರಾಜ್ಯದ ಕಾಶಿಪುರದ ಹಜರತ್ ಮೌಲ್ವಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಧಿಗಾಗಿ ಸಣ್ಣಬಸಪ್ಪ, ದೊಡ್ಡಬಸಪ್ಪ ಅವರಿಂದ ಮೌಲ್ವಿ ಲಕ್ಷಾಂತರ ಹಣ ಬೇಡಿಕೆ ಇಟ್ಟಿದ್ದ. ಆದ್ರೆ, ಹಣ ಕೊಡಲು ಒಪ್ಪದಿದ್ದಾಗ ಮೌಲ್ವಿ, ಕಾಲಿಂದ ಒದ್ದು ಎಲ್ಲವೂ ಮಣ್ಣಾಗಲಿ ಎಂದಿದ್ದ. ಸದ್ಯ ಮೌಲ್ವಿಯ ವಿಡಿಯೋ ಬಹಿರಂಗವಾಗಿದೆ.

ಇದನ್ನೂ ನೋಡಿ: ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್, ಬೇರೆ ರಾಜ್ಯದ ವ್ಯಕ್ತಿಗೆ ಲಕ್ಕುಂಡಿ ನಿಧಿ ಗೊತ್ತಾಗಿದ್ಹೇಗೆ?

Source link