ಅಕ್ರಮ ಸಂಬಂಧಕ್ಕೆ ಇಬ್ಬರು ಬಲಿ: ಅತಿಥಿ ಉಪನ್ಯಾಸಕಿಯ ಕೊಂದು ಆರೋಪಿಯೂ ಆತ್ಮಹತ್ಯೆ – Kannada News | Illicit Relationship Claims Two Lives: Guest Lecturer Killed, Accused Dies in Doddaballapur
ದೇವನಹಳ್ಳಿ, ಮೇ 05: ಮದುವೆ ಆಗಲು ನಿರಾಕರಿಸಿದ ಕಾರಣಕ್ಕೆ ತನ್ನ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಭೀಕರವಾಗಿ ಕೊಲಗೈದ ಬಳಿಕ ವ್ಯಕ್ತಿಯೋರ್ವ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಜಿಂಕೆಬಚ್ಚಹಳ್ಳಿ ಗ್ರಾಮದ ಬಳಿ ನಡೆದಿದೆ. ಸರೋಜಾ (40) ಕೊಲೆಯಾದ ಮಹಿಳೆಯಾಗಿದ್ದು, ಬಳಿಕ ರೈಲಿಗೆ ತಲೆಕೊಟ್ಟು ಪ್ರಾಣಬಿಟ್ಟಿರುವ ವ್ಯಕ್ತಿಯನ್ನು ರಾಮಾಂಜಿ(45) ಎಂದು ಗುರುತಿಸಲಾಗಿದೆ. ಕೊಲೆ ಮಾಡಿ ಕಾರಿಗೆ ಬೆಂಕಿ ದೇವನಹಳ್ಳಿ ಬಳಿಯ ಖಾಸಗಿ ಕಾಲೇಜೊಂದರ ಅತಿಥಿ ಉಪನ್ಯಾಸಕಿಯಾಗಿದ್ದ ಸರೋಜಾ ಮತ್ತು ರಾಮಾಂಜಿ…