Headlines

nagaraj11081993

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್​ ರೇವಣ್ಣಗೆ ಮತ್ತೊಂದು ಶಾಕ್ – Kannada News | Unnatural assault Case: Bengaluru Specail Court Rejects JDS MLC Suraj Revanna application

ಬೆಂಗಳೂರು, (ಫೆಬ್ರವರಿ 17):  ಜೆಡಿಎಸ್ ಎಂಎಲ್​​​ಸಿ ಸೂರಜ್ ರೇವಣ್ಣ (Suraj Revanna) ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಮರುಪರಿಶೀಲನಾ‌ ಅರ್ಜಿಯನ್ನು ಕೋರ್ಟ್​ ವಜಾ ಮಾಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ. ಇದರಿಂದ ಸೂರಜ್ ರೇವಣ್ಣ ಮತ್ತೆ ಸಂಕಷ್ಟ ಎದುರಾಗಿದೆ. ಇದೇ ಕೇಸಿನಲ್ಲಿ ಜೈಲಿಗೆ ಹೋಗಿದ್ದ ಸೂರಜ್…

Read More

ಬೆಂಗಳೂರು ವಿಮಾನ ನಿಲ್ದಾಣದಿಂದ 60 ದಶಲಕ್ಷ ಗುಲಾಬಿ ರಫ್ತು: ಹೂವಿನ ರಫ್ತಿನಲ್ಲಿ ದಾಖಲೆ – Kannada News | Bengaluru Airport Leads India in Flower Export: KIA’s Cold Chain Ensures Fresh Roses

ಬೆಂಗಳೂರು, ಫೆ.17: ಪ್ರೇಮಿಗಳ ದಿನದ ಅಂಗವಾಗಿ ಜಾಗತಿಕವಾಗಿ ಭಾರಿ ಬೇಡಿಕೆಯನ್ನು ಪೂರೈಸುವಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ಯಶಸ್ವಿಯಾಗಿದೆ. ಈ ಬಾರಿ ದಾಖಲೆಯ 60 ದಶಲಕ್ಷಕ್ಕೂ ಹೆಚ್ಚು ಗುಲಾಬಿ ಹೂವುಗಳನ್ನು ಜಗತ್ತಿನಾದ್ಯಂತ ಸಾಗಿಸುವ ಮೂಲಕ ಬೆಂಗಳೂರು ತನ್ನ ರಫ್ತು ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಹೂವುಗಳ ಒಟ್ಟು ತೂಕದಲ್ಲಿ ಶೇ. 64 ರಷ್ಟು ಮತ್ತು ಹೂವುಗಳ ಸಂಖ್ಯೆಯಲ್ಲಿ ಶೇ. 38 ರಷ್ಟು ಬಹುದೊಡ್ಡ ಮಟ್ಟದ ಬೆಳವಣಿಗೆ ಕಂಡುಬಂದಿದೆ. ಒಟ್ಟು 2,700 ಮೆಟ್ರಿಕ್ ಟನ್‌ಗಿಂತಲೂ…

Read More

ಮಕ್ಕಳ ಮುದ್ದಾದ ಪ್ರಶ್ನೆಗೆ ಗಿಲ್ಲಿಯ ತಮಾಷೆಯ ಉತ್ತರ: ವಿಡಿಯೋ – Kannada News | Bigg Boss Kannada Winner Gilli Nata attended a school function

ಬಿಗ್​​ಬಾಸ್ (Bigg Boss) ವಿನ್ನರ್ ಆದ ಬಳಿಕ ಗಿಲ್ಲಿ ನಟ ಅವರಿಗೆ ಬಿಡುವೇ ಇಲ್ಲದಾಗಿದೆ. ರಾಜ್ಯದಾದ್ಯಂತ ಸಂಚರಿಸುತ್ತಿರುವ ಗಿಲ್ಲಿ ವಿವಿಧ ಕಾರ್ಯಕ್ರಮಗಳು, ಉತ್ಸವಗಳಿಗೆ ಅತಿಥಿಯಾಗಿ ಹಾಜರಾಗುತ್ತಿದ್ದಾರೆ. ಇತ್ತೀಚೆಗಷ್ಟೆ ಗಿಲ್ಲಿ ಶಾಲಾ ಕಾರ್ಯಕ್ರಮವೊಂದಕ್ಕೆ ಅತಿಥಿಯಾಗಿ ಸಹ ಹೋಗಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಗಿಲ್ಲಿ ನಟ ತಮ್ಮ ಮಾತುಗಳಿಂದ ನೆರೆದಿದ್ದವರನ್ನು ರಂಜಿಸಿದರು. ಇದೇ ವೇಳೆ ಕೆಲವು ಪುಟ್ಟ ಮಕ್ಕಳು ಗಿಲ್ಲಿಗೆ ಕೆಲವು ಪ್ರಶ್ನೆಗಳನ್ನು ಸಹ ಕೇಳಿದರು. ಗಿಲ್ಲಿ ಕೊಟ್ಟ ಉತ್ತರ ಏನು? ವಿಡಿಯೋ ನೋಡಿ ನೀವೇ ತಿಳಿಯಿರಿ……

Read More

ರಾಮನಗರದ ಬಿಡದಿ ಬಳಿ ಹಳಿತಪ್ಪಿದ ಗೂಡ್ಸ್​​ ರೈಲು, ತಪ್ಪಿದ ಭಾರಿ ದುರಂತ – Kannada News | Goods Train Derails Near Bidadi in Ramanagara; Bengaluru–Mysuru Train Services Affected

ರಾಮನಗರ, ಫೆಬ್ರವರಿ 17: ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬಿಡದಿ ಬಳಿ ನಡೆದಿದೆ. ವಾಹನ ಸಾಗಿಸುತ್ತಿದ್ದ ಗೂಡ್ಸ್ ರೈಲಿನ 1 ಬೋಗಿ ಹಳಿ ತಪ್ಪಿದ್ದು, ಕೆಲ ಕಿಲೋ ಮೀಟರ್‌ವರೆಗೂ ಹಳಿ ಬಿಟ್ಟು ರೈಲು ಚಲಿಸಿದೆ. ಬಿಡದಿ ರೈಲ್ವೆ ನಿಲ್ದಾಣ ದಾಟಿದ ಬಳಿಕ ಘಟನೆ ನಡೆದಿದ್ದು, ಬೆಂಗಳೂರು-ಮೈಸೂರು ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ,…

Read More

ಆಸ್ಟ್ರೇಲಿಯಾಕ್ಕೆ ಬಿಗ್​​​ ಶಾಕ್: ಸೂಪರ್ 8ಕ್ಕೆ ಏರಿದ ಜಿಂಬಾಬ್ವೆ – Kannada News | Australia OUT! T20 World Cup 2026 Super 8 Sees Zimbabwe Qualify After Rain Washout

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರಲ್ಲಿ (ICC T20 World Cup 2026) ಜಿಂಬಾಬ್ವೆ ಮತ್ತು ಐರ್ಲೆಂಡ್ ನಡುವಿನ ಪಂದ್ಯವು ಮಳೆಯಿಂದಾಗಿ ರದ್ದಾಗಿದ್ದು, ಇದೀಗ ಆಸ್ಟ್ರೇಲಿಯಾ ತಂಡವು ಟೂರ್ನಿಯಿಂದ ಹೊರಬಿದ್ದಿದೆ. ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಜಿಂಬಾಬ್ವೆ ಮತ್ತು ಐರ್ಲೆಂಡ್ ನಡುವಿನ ಪಂದ್ಯವು ಸತತ ಮಳೆಯಿಂದಾಗಿ ರದ್ದಾಗಿದೆ. ಪಂದ್ಯ ರದ್ದಾದ ಕಾರಣ ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಯಿತು. ಇದರಿಂದ ಜಿಂಬಾಬ್ವೆ ಒಟ್ಟು 5 ಅಂಕಗಳನ್ನು ಗಳಿಸಿ ‘ಬಿ’ ಗುಂಪಿನಿಂದ ಸೂಪರ್ 8 ಹಂತಕ್ಕೆ ಅರ್ಹತೆ…

Read More

ಈ ಊರಲ್ಲಿ ದೇವಿ‌ ಜಾತ್ರೆ ಮಾಡಬೇಕಂದ್ರೆ ಜನ ಐದು ದಿನ ಮನೆ ಖಾಲಿಮಾಡಬೇಕು!: ಕಾರಣ ಇಲ್ಲಿದೆ – Kannada News | Villagers Vacate Homes for 5 Days During Unique Gramadevi Fair in Kalaghatagi, Dharwad

ಮನೆಗಳಿಗೆ ಬೀಗ, ಊರಿಗೆ ಊರೇ ಖಾಲಿ ಖಾಲಿImage Credit source: Tv9 Kannada ಹುಬ್ಬಳ್ಳಿ, ಫೆಬ್ರವರಿ 17: ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ಎಲ್ಲಿ ನೋಡಿದ್ರೂ ಜನರು ಹೆಂಡತಿ ಮಕ್ಕಳನ್ನು ಕರೆದುಕೊಂಡು ಮನೆ ತೊರೆಯುತ್ತಿರುವ ದೃಶ್ಯಗಳು ಕಂಡು ಬರ್ತಿವೆ. ಅಷ್ಟಕ್ಕೂ ಊರಿಗೇನು ಯಾವುದೇ ಸಾಂಕ್ರಾಮಿಕ ರೋಗ ಲಗ್ಗೆ ಇಟ್ಟಿಲ್ಲ. ಹೀಗಿದ್ರೂ ಪಟ್ಟಣಕ್ಕೆ ಪಟ್ಟಣವೇ ಬಂದ್​​ ಆಗಿದೆ. ಇದಕ್ಕೆ ಕಾರಣ ದೇವಿಯ ಜಾತ್ರೆ. ಹೌದು, ದೇವಿ ಜಾತ್ರೆ ನಡೆಯಬೇಕಾದ್ರೆ ಐದು ದಿನ ಜನರು ಮನೆ ಖಾಲಿ ಮಾಡಬೇಕು. ಹಿಂದೂಗಳು…

Read More

ಜೂ ಎನ್​​ಟಿಆರ್​ ಹಳೆ ಸಿನಿಮಾ ಸೀಕ್ವೆಲ್​​ಗೆ ಕತೆ ರೆಡಿ, ಆದರೆ ನಟಿಸುತ್ತಾರಾ ನಟ? – Kannada News | Adhurs 2 first half story is ready will Jr NTR accepted the movie

ಜೂ ಎನ್​​ಟಿಆರ್ (Jr NTR) ಈಗ ಪ್ಯಾನ್ ಇಂಡಿಯಾ ನಟ. ಮೊದಲಿನಿಂದಲೂ ಅವರಿಗೆ ಮಾಸ್ ಇಮೇಜಿದೆ. ಈಗಲೂ ಸಹ ಅವರು ಮಾಸ್, ಕಮರ್ಶಿಯನ್ ಸಿನಿಮಾಗಳಲ್ಲಿಯೇ ನಟಿಸುತ್ತಾರೆ, ಯಾವುದೇ ಹೆಚ್ಚಿನ ಪ್ರಯೋಗಕ್ಕೆ ಒಡ್ಡಿಕೊಳ್ಳುವುದಿಲ್ಲ. ಅವರು 2010ರಲ್ಲಿ ನಟಿಸಿದ್ದ ಹಿಟ್ ಸಿನಿಮಾ ‘ಅಧುರ್ಸ್’ ತುಸು ಭಿನ್ನವಾದ ಸಿನಿಮಾ ಆಗಿತ್ತು. ಸಿನಿಮಾನಲ್ಲಿ ಅಪ್ಪಟ ಹಾಸ್ಯ ಪಾತ್ರವೊಂದರಲ್ಲಿ ಜೂ ಎನ್​​ಟಿಆರ್ ನಟಿಸಿದ್ದರು. ಈಗ ಅದೇ ಸಿನಿಮಾದ ಸೀಕ್ವೆಲ್​​ನ ಕತೆಯನ್ನು ಕತೆಗಾರ ಕೋನ ವೆಂಕಟ್ ರೆಡಿ ಮಾಡಿದ್ದಾರೆ. ಆದರೆ ಜೂ ಎನ್​​ಟಿಆರ್ ನಟಿಸುತ್ತಾರಾ ಎಂಬುದೇ…

Read More

ಗ್ಲೋಯಿಂಗ್ ಸ್ಕಿನ್‌ ನಿಮ್ಮದಾಗಲು ತಪ್ಪದೇ ಈ ಆಹಾರಗಳನ್ನು ಸೇವನೆ ಮಾಡಿ – Kannada News | What foods should be consumed to increase skin radiance?

ಪ್ರತಿಯೊಬ್ಬರೂ  ತಮ್ಮ ತ್ವಚೆಯನ್ನು ಆರೋಗ್ಯಕರ ಮತ್ತು ಕಾಂತಿಯುತವಾಗಿಡಲು (glowing skin) ಬಯಸುತ್ತಾರೆ. ಇದಕ್ಕಾಗಿ ದುಬಾರಿ ಉತ್ಪನ್ನಗಳ ಮೊರೆ ಹೋಗ್ತಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ  ಕ್ರೀಮ್‌ಗಳು, ಔಷಧಿಗಳು ಮತ್ತು ಸೌಂದರ್ಯವರ್ಧಕಗಳು ಚರ್ಮಕ್ಕೆ ತಾತ್ಕಾಲಿಕ ಹೊಳಪನ್ನು ನೀಡಬಹುದು, ಆದರೆ ಇವು ಹೆಚ್ಚು ಪರಿಣಾಮಕಾರಿಯಲ್ಲ. ಹಾಗಾಗಿ ರಾಸಾಯನಿಕ ಉತ್ಪನ್ನಗಳ ಮೇಲೆ ಹೆಚ್ಚು ಅವಲಂಬಿತರಾಗುವ ಬದಲು, ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು, ಆರೋಗ್ಯಕರ ಕೊಬ್ಬುಗಳು ಮತ್ತು ಜಲಸಂಚಯನದಿಂದ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವ ಮೂಲಕ ತ್ವಚೆಯ ಕಾಂತಿ, ಆರೋಗ್ಯ ಎರಡನ್ನೂ ಹೆಚ್ಚಿಸಬಹುದು. ತ್ವಚೆಯ ಕಾಂತಿಯನ್ನು ಹೆಚ್ಚಿಸಲು ಯಾವ ಆಹಾರಗಳನ್ನು…

Read More

ಭಾರತದಲ್ಲಿ ಬರಲಿವೆ 50ಕ್ಕೂ ಹೆಚ್ಚು ಡೀಪ್​ಟೆಕ್ ಕಂಪನಿಗಳು: ಅಶ್ವಿನಿ ವೈಷ್ಣವ್ – Kannada News | Expecting arrival of over 50 deep tech Indian companies, says Ashwini Vaishnaw at India AI Impact Summit

ನವದೆಹಲಿ, ಫೆಬ್ರುವರಿ 17: ‘ಕ್ರಿಯೇಟ್ ಇನ್ ಇಂಡಿಯಾ’ ಉಪಕ್ರಮದ ಅಡಿಯಲ್ಲಿ ಮುಂಬರುವ ವರ್ಷಗಳಲ್ಲಿ ಭಾರತದಲ್ಲಿ 50ಕ್ಕೂ ಹೆಚ್ಚು ಡೀಪ್-ಟೆಕ್ ಕಂಪನಿಗಳು ತಲೆ ಎತ್ತುವ ನಿರೀಕ್ಷೆ ಇದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಡಾ. ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದೆಹಲಿಯಲ್ಲಿ ನಿನ್ನೆಯಿಂದ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯ ಭಾಗವಾಗಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಎಐ ಆವಿಷ್ಕಾರಗಳಿಗೆ ಪೂರಕವಾಗಿ ಭಾರತದ ಸೆಮಿಕಂಡಕ್ಟರ್ ಮಿಷನ್ನ ಹಾದಿ ಸಾಗುತ್ತದೆ ಎಂದಿದ್ದಾರೆ. ಹಾಗೆಯೇ, ಮಿಷನ್​ನ ಮುಂದಿನ ಹಂತದಲ್ಲಿ ಚಿಪ್ ಡಿಸೈನ್…

Read More

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕಾರ – Kannada News | Tarique Rahman takes oath as Bangladesh New Prime Minister

ಢಾಕಾ, ಫೆಬ್ರವರಿ 17: ಬಿಎನ್​ಪಿ ನಾಯಕ ತಾರಿಕ್ ರೆಹಮಾನ್ ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ತಾರಿಕ್ ರೆಹಮಾನ್ ಎಲ್ಲಾ ಚುನಾಯಿತ ಬಿಎನ್‌ಪಿ ಸಂಸದರೊಂದಿಗೆ ಇಂದು ಢಾಕಾದ ರಾಷ್ಟ್ರೀಯ ಸಂಸತ್ ಕಟ್ಟಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಫೆಬ್ರವರಿ 12ರಂದು ನಡೆದ 13ನೇ ಸಂಸತ್ ಚುನಾವಣೆಯ ನಂತರ ಈ ಮಹತ್ವದ ಸಮಾರಂಭ ನಡೆಯಿತು. ಬಾಂಗ್ಲಾದೇಶದಲ್ಲಿ ಈ ಬಾರಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್‌ಪಿ) ಭರ್ಜರಿ ಜಯ ಸಾಧಿಸಿತ್ತು. ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ತಾರಿಕ್ ರೆಹಮಾನ್ ಮತ್ತು ಅವರ ನೂತನ…

Read More