All posts by nagaraj11081993

ಶಿವಣ್ಣನ ಎನರ್ಜಿಗೆ ತಮಿಳು ಸಿನಿಮಾ ತಂಡ ಫಿದಾ, ವಿಡಿಯೋ ನೋಡಿ – Kannada News | Shiva Rajkumar bring energy to Tamil movie set watch video

ಶಿವರಾಜ್ ಕುಮಾರ್ (Shiva Rajkumar) ಅವರ ವಯಸ್ಸಿಗೂ ಅವರ ಎನರ್ಜಿಗೂ ಸಂಬಂಧವೇ ಇಲ್ಲ. ಎಲ್ಲೇ ಹೋದರೂ ಶಿವಣ್ಣ ತಮ್ಮ ಎನರ್ಜಿಯಿಂದ ಆ ಸ್ಥಳದ ವಾತಾವರಣವನ್ನೇ ಬದಲಾಯಿಸಿಬಿಡುತ್ತಾರೆ. ಶಿವರಾಜ್ ಕುಮಾರ್ ಅವರು ಕನ್ನಡ ಮಾತ್ರವಲ್ಲದೆ ಕೆಲ ಪರ ಭಾಷೆ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಅವರು ರಾಮ್ ಚರಣ್ ಜೊತೆ ನಟಿಸಿದ ‘ಪೆದ್ದಿ’ ಸಿನಿಮಾ ರಿಲೀಸ್ ಆಗಿ ಹಿಟ್ ಆಗಿದೆ. ಇದೀಗ ಅವರು ಹೊಸದೊಂದು ತಮಿಳು ಸಿನಿಮಾನಲ್ಲಿ ನಟಿಸುತ್ತಿದ್ದು, ಅಲ್ಲಿಯೂ ಸಹ ಶಿವಣ್ಣ ತಮ್ಮ ಎನರ್ಜಿಯಿಂದ ಇಡೀ ಸೆಟ್​​ಗೆ ಹೊಸ ಕಳೆ ತಂದಿದ್ದಾರೆ.

ಶಿವರಾಜ್ ಕುಮಾರ್ ಅವರು ಇನ್ನೂ ಹೆಸರಿಡದ ಹೊಸ ತಮಿಳು ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಡ್ರಾಮಾ ಕಂಪೆನಿ ಹೆಸರಿನ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿರುವ ಮೊದಲ ಸಿನಿಮಾ ಇದಾಗಿದ್ದು, ಸಿನಿಮಾ ತಂಡ ಇತ್ತೀಚೆಗಷ್ಟೆ ಶಿವಣ್ಣನವರ ವಿಡಿಯೋ ಒಂದನ್ನು ಬಿಡುಗಡೆ ಮಾಡಿದೆ. ವಿಡಿಯೋನಲ್ಲಿ ಶಿವಣ್ಣ ತಮ್ಮ ಎಂದಿನ ಜೋಶ್​​ನಲ್ಲಿ ಸೆಟ್​​ನಲ್ಲಿ ನಗುತ್ತಾ, ಎಲ್ಲರನ್ನೂ ನಗಿಸುತ್ತಾ, ಕಾಲೆಳೆಯುತ್ತಾ, ಯುವಕರಿಗೆ ಪಾಠ ಮಾಡುತ್ತಾ ಕಂಡು ಬಂದಿದ್ದಾರೆ. ಶಿವರಾಜ್ ಕುಮಾರ್ ಅವರು ಸೆಟ್​​ನಲ್ಲಿ ತಮಿಳಿಗರೊಬ್ಬರಿಗೆ ಕನ್ನಡದ ‘ಜೊತೆಯಲಿ, ಜೊತೆಯಲಿ’ ಹಾಡು ಸಹ ಹೇಳಿಕೊಟ್ಟಿದ್ದಾರೆ.

ವಿಡಿಯೋ ನೋಡಿದರೆ ಶಿವರಾಜ್ ಕುಮಾರ್ ಅವರು ಮಧ್ಯಮ ವರ್ಗದ ವ್ಯಕ್ತಿಯೊಬ್ಬನ ಪಾತ್ರದಲ್ಲಿ ನಟಿಸಿದಂತಿದೆ. ಹೀರೋ ತಂದೆಯ ಪಾತ್ರ ಇರಬಹುದೆಂಬ ಅನುಮಾನವೂ ಮೂಡುತ್ತಿದೆ. ಆದರೆ ಶಿವಣ್ಣನ ಪಾತ್ರ ಪವರ್​​ಫುಲ್ ಆಗಿಯೂ ಇರಬಹುದೆಂಬ ಸುಳಿವು ವಿಡಿಯೋನಲ್ಲಿದೆ. ವಿಡಿಯೋನಲ್ಲಿ ತೋರಿಸಿರುವಂತೆ, ಸೆಟ್​​ನಲ್ಲಿಯೇ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರ ವಿವಾಹ ವಾರ್ಷಿಕೋತ್ಸವದ ಸೆಲೆಬ್ರೇಷನ್ ಸಹ ನಡೆದಿದೆ. ಬನಿಯನ್ನು-ಪಂಚೆ ತೊಟ್ಟುಕೊಂಡು ಶಿವಣ್ಣ ಕೇಕ್ ಕತ್ತರಿಸಿದ್ದಾರೆ.

ವಿಡಿಯೋ ಅನ್ನು 65 ಸಾವಿರಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ಕಮೆಂಟ್ ಸೆಕ್ಷನ್​​ನಲ್ಲಿ ಶಿವರಾಜ್ ಕುಮಾರ್ ಅವರ ಸರಳತೆಯನ್ನು, ಸೆಟ್​​ನಲ್ಲಿ ಅವರು ಬೆರೆಯುವ ರೀತಿ, ಅವರ ಎನರ್ಜಿ, ಜೋಶ್​ ಅನ್ನು ನೆಟ್ಟಿಗರು ಕೊಂಡಾಡಿದ್ದಾರೆ. ಶಿವರಾಜ್ ಕುಮಾರ್ ಅವರು ಎಲ್ಲಿಯೇ ಹೋದರು ಸೆಟ್​​ಗೆ ಒಂದು ಎನರ್ಜಿ ತಂದುಕೊಡುತ್ತಾರೆ. ಶಿವರಾಜ್ ಕುಮಾರ್ ಅವರಿಗೆ ಈಗ 63 ವರ್ಷ ವಯಸ್ಸು. ಆದರೆ ಈಗಲೂ ನವ ಯುವಕನಂತೆ ಹಾಡುತ್ತಾ, ಕುಣಿಯುತ್ತಾ ಇರುತ್ತಾರೆ.

ಶಿವರಾಜ್ ಕುಮಾರ್ ಅವರು ಪ್ರಸ್ತುತ ಕನ್ನಡದ ‘666 ಆಪರೇಷನ್ ಡ್ರೀಮ್ ಪ್ರಾಜೆಕ್ಟ್’ ಸಿನಿಮಾನಲ್ಲಿ ನಟಿಸುತ್ತಿದ್ದಾ. ಜೊತೆಗೆ ‘ಎ ಫಾರ್ ಆನಂದ್’ ಹೆಸರಿನ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ಬೇಲ್’ ಹೆಸರಿನ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ತಮಿಳಿನ ‘ಜೈಲರ್ 2’ ಸಿನಿಮಾನಲ್ಲಿಯೂ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಅದು ಫುಟ್‌ಬಾಲ್‌ಗೆ ಸಂಬಂಧಿಸಿದ್ದಲ್ಲ: ಕಣ್ಣೀರಿಟ್ಟ ಲಿಯೋನೆಲ್ ಮೆಸ್ಸಿ! – Kannada News | Lionel Messi was caught by broadcast visuals wiping tears

ಫಿಫಾ ವಿಶ್ವಕಪ್​ನ 19ನೇ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿ ಇತಿಹಾಸ ನಿರ್ಮಿಸಿದ ಲಿಯೋನೆಲ್ ಮೆಸ್ಸಿ (Lionel Messi) ಮೈದಾನದಲ್ಲೇ ಕಣ್ಣೀರೀಟಿದ್ದಾರೆ. ಅಲ್ಜೀರಿಯಾ ವಿರುದ್ಧದ ಈ ಪಂದ್ಯದಲ್ಲಿ ಅರ್ಜೆಂಟೀನಾ ತಂಡವನ್ನು ಮುನ್ನಡೆಸಿದ ಮೆಸ್ಸಿ 17ನೇ ನಿಮಿಷದಲ್ಲಿ ಮೊದಲ ಗೋಲು ದಾಖಲಿಸಿದ್ದರು.

ಈ ಗೋಲಿನ ಬೆನ್ನಲ್ಲೇ ಎಂದಿನ ಶೈಲಿಯಲ್ಲಿ ಸಂಭ್ರಮಾಚರಣೆ ಮುಗಿಸುತ್ತಿದ್ದಂತೆ, ವೈಯಕ್ತಿಕ ಭಾವನೆಗಳನ್ನು ತಡೆಯಲಾರದೆ ಭಾವುಕರಾದರು. ಈ ವೇಳೆ ಅವರು ತಮ್ಮ ಜೆರ್ಸಿಯಿಂದ ಕಣ್ಣೀರು ಒರೆಸಿಕೊಳ್ಳುತ್ತಿರುವ ದೃಶ್ಯಗಳು ಟಿವಿ ಲೈವ್ ಬ್ರಾಡ್‌ಕಾಸ್ಟ್‌ನ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದವು.

ಮ್ಯಾಚ್ ಬಳಿಕ ಈ ಬಗ್ಗೆ ಸ್ಪಷ್ಟನೆ ನೀಡಿದ ಲಿಯೋನೆಲ್ ಮೆಸ್ಸಿ, “ಹೌದು, ಮೊದಲ ಗೋಲು ಗಳಿಸಿದ ನಂತರ ನಾನು ಅತ್ತಿರುವುದು ನಿಜ. ಆದರೆ ಅದು ಫುಟ್‌ಬಾಲ್‌ಗೆ ಸಂಬಂಧಿಸದ ವಿಷಯ ” ಎಂದಿದ್ದಾರೆ.

“ನಾನು ಕಳೆದ ಕೆಲವು ದಿನಗಳಿಂದ ತೀವ್ರ ವೈಯಕ್ತಿಕ ಕಠಿಣ ದಿನಗಳನ್ನು ಎದುರಿಸುತ್ತಿದ್ದೇನೆ. ನನ್ನ ಇಡೀ ತಂಡ ಮತ್ತು ಸಹ ಆಟಗಾರರು ಈ ಕಷ್ಟದ ಸಮಯದಲ್ಲಿ ನನ್ನ ಬೆನ್ನಿಗೆ ನಿಂತಿದ್ದಾರೆ. ಅವರು ನನಗೆ ನಿರಂತರವಾಗಿ ಧೈರ್ಯ ತುಂಬಿದ್ದಾರೆ. ಅವರೆಲ್ಲರಿಗೂ ನಾನು ಸದಾ ಕೃತಜ್ಞನಾಗಿರುತ್ತೇನೆ” ಎಂದು ಮೆಸ್ಸಿ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ.

ಇದಾಗ್ಯೂ ಮೆಸ್ಸಿ ಕಣ್ಣೀರಿನ ಹಿಂದಿರುವ ಕಾರಣಗಳನ್ನು ಬಹಿರಂಗಪಡಿಸಿಲ್ಲ. ಅಲ್ಲದೆ ಅದು ಫುಟ್​ಬಾಲ್​ಗೆ ಸಂಬಂಧಿಸದ ವಿಷಯ ಆಗದೇ ಇರುವುದರಿಂದ, ಆ ವಿಚಾರವನ್ನು ಹಂಚಿಕೊಳ್ಳಲು ಇಚ್ಛಿಸುತ್ತಿಲ್ಲ ಎಂದು ಮೆಸ್ಸಿ ತಿಳಿಸಿದ್ದಾರೆ.

ಮೈದಾನದಲ್ಲಿ ದಾಖಲೆಗಳ ಸುರಿಮಳೆ:

ವೈಯಕ್ತಿಕ ಜೀವನದಲ್ಲಿ ಸಂಕಷ್ಟವನ್ನು ಎದುರಿಸುತ್ತಿದ್ದರೂ, ಮೈದಾನದಲ್ಲಿ ಮೆಸ್ಸಿ ಅವರ ಆಟಕ್ಕೆ ಯಾವುದೇ ಅಡ್ಡಿಯಾಗಲಿಲ್ಲ. ಇದಕ್ಕೆ ಸಾಕ್ಷಿ ಮೊದಲ ಪಂದ್ಯದಲ್ಲೇ ಮೂಡಿಬಂದ ದಾಖಲೆಗಳು.

  • ಮೊದಲ ವಿಶ್ವಕಪ್ ಹ್ಯಾಟ್ರಿಕ್: ಮೆಸ್ಸಿ ಪಂದ್ಯದ 17, 60 ಮತ್ತು 76ನೇ ನಿಮಿಷಗಳಲ್ಲಿ ಗೋಲು ಗಳಿಸುವ ಮೂಲಕ ತಮ್ಮ ಸುದೀರ್ಘ ವೃತ್ತಿಜೀವನದ ಮೊದಲ ವಿಶ್ವಕಪ್ ಹ್ಯಾಟ್ರಿಕ್ ಸಾಧನೆ ಮಾಡಿದರು.
  • ಸರ್ವಕಾಲಿಕ ದಾಖಲೆ: ಈ 3 ಗೋಲುಗಳೊಂದಿಗೆ ಮೆಸ್ಸಿ ತಮ್ಮ ಒಟ್ಟಾರೆ ವಿಶ್ವಕಪ್ ಗೋಲುಗಳ ಸಂಖ್ಯೆಯನ್ನು 16ಕ್ಕೇರಿಸಿದರು. ಈ ಮೂಲಕ ಜರ್ಮನಿಯ ಮಿರೋಸ್ಲಾವ್ ಕ್ಲೋಸ್ ಅವರ ಸರ್ವಕಾಲಿಕ ಗರಿಷ್ಠ ಗೋಲುಗಳ ದಾಖಲೆಯನ್ನು ಸಮಗಟ್ಟಿದ್ದಾರೆ.
  • ವಯಸ್ಸಿನ ದಾಖಲೆ: 38ನೇ ವಯಸ್ಸಿನಲ್ಲಿ ಹ್ಯಾಟ್ರಿಕ್ ಸಾಧನೆ ಮಾಡುವ ಮೂಲಕ ವಿಶ್ವಕಪ್ ಇತಿಹಾಸದಲ್ಲೇ ಈ ಸಾಧನೆ ಮಾಡಿದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
  • 6ನೇ ವಿಶ್ವಕಪ್: ಅಲ್ಜೀರಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಸತತ 6 ಫಿಫಾ ವಿಶ್ವಕಪ್ ಆವೃತ್ತಿಗಳಲ್ಲಿ ಆಡಿದ ವಿಶ್ವದ ಮೊದಲ ಫುಟ್‌ಬಾಲ್ ಆಟಗಾರ ಎಂಬ ದಾಖಲೆ ಬರೆದರು.

ಇದನ್ನೂ ಓದಿ: ಬಿಬಿಎಲ್​ನಲ್ಲಿ ‘ಪತ್ಯೇಕ’ವಾಗಿಯೇ ಕಣಕ್ಕಿಳಿಯಲಿವೆ ‘ಮೆಲ್ಬೋರ್ನ್’ ತಂಡಗಳು..!

ಒಟ್ಟಾರೆಯಾಗಿ, ವೈಯಕ್ತಿಕ ನೋವಿನ ನಡುವೆಯೂ ದೇಶಕ್ಕಾಗಿ ಮೈದಾನದಲ್ಲಿ ಸರ್ವಸ್ವವನ್ನೂ ಧಾರೆ ಎರೆದ ಲಿಯೋನೆಲ್ ಮೆಸ್ಸಿ, ಕೇವಲ ಒಬ್ಬ ಶ್ರೇಷ್ಠ ಆಟಗಾರ ಮಾತ್ರವಲ್ಲ, ಅಪ್ರತಿಮ ನಾಯಕ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

Source link

ಚಿತ್ರದುರ್ಗ: ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು – Kannada News | 4 Year Old Boy Vaishnav Dies From Chest Burning Sensation in Chitradurga

ಚಿತ್ರದುರ್ಗ, ಜೂನ್ 17: ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನಡೆದ ದುರ್ಘಟನೆಯೊಂದರಲ್ಲಿ ನಾಲ್ಕು ವರ್ಷದ ಬಾಲಕ ವೈಷ್ಣವ್ ಎದೆ ಉರಿ ಕಾಣಿಸಿಕೊಂಡು ಸಾವನ್ನಪ್ಪಿದ್ದಾನೆ. ವೈಷ್ಣವ್ ತನ್ನ ಪೋಷಕರಿಗೆ ಎದೆ ಭಾಗದಲ್ಲಿ ಉರಿ ಕಾಣಿಸಿಕೊಳ್ಳುತ್ತಿದೆ ಎಂದು ಹೇಳಿಕೊಂಡಿದ್ದನು. ಆರಂಭದಲ್ಲಿ ಪೋಷಕರು ಇದನ್ನು ಗ್ಯಾಸ್ಟ್ರಿಕ್ ಸಮಸ್ಯೆ ಎಂದು ಭಾವಿಸಿ, ಮನೆಮದ್ದುಗಳನ್ನು ನೀಡಿದ್ದರು. ಆದರೆ, ವೈಷ್ಣವ್ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ.

ಮಗುವಿನ ಸ್ಥಿತಿ ಗಂಭೀರವಾಗುತ್ತಿದ್ದಂತೆ, ಆತಂಕಗೊಂಡ ಪೋಷಕರು ವೈಷ್ಣವ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದರು. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ವೈಷ್ಣವ್ ಕೊನೆಯುಸಿರೆಳೆದಿದ್ದಾನೆ. ಹೆತ್ತವರ ಕಣ್ಮುಂದೆಯೇ ಪುಟ್ಟ ಬಾಲಕ ಸಾವನ್ನಪ್ಪಿರುವುದು ಕುಟುಂಬದಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

UGC NET Admit Card 2026: ಯುಜಿಸಿ ನೆಟ್ ಪರೀಕ್ಷೆಯ ಹಾಲ್ ಟಿಕೆಟ್‌ ಬಿಡುಗಡೆ; ಡೌನ್‌ಲೋಡ್ ಮಾಡುವುದು ಹೇಗೆ? – Kannada News | NTA UGC NET Admit Card June 2026: Get Your Hall Ticket and Check Exam Dates

ಯುಜಿಸಿ ನೆಟ್ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಜೂನ್ 2026 ರ ಯುಜಿಸಿ ನೆಟ್ (UGC NET) ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಪ್ರವೇಶ ಪತ್ರಗಳನ್ನು (Admit Cards) ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈಗ ತಮ್ಮ ಹಾಲ್ ಟಿಕೆಟ್‌ಗಳನ್ನು ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಜೂನ್ 22, 23, 24, 25, 29 ಮತ್ತು 30 ರಂದು ನಡೆಯಲಿರುವ ಪರೀಕ್ಷೆಗಳಿಗೆ ಈ ಪ್ರವೇಶ ಪತ್ರಗಳನ್ನು ಪ್ರಕಟಿಸಿದೆ. ದೇಶಾದ್ಯಂತ ವಿವಿಧ ಕೇಂದ್ರಗಳಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮೋಡ್‌ನಲ್ಲಿ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಪರೀಕ್ಷಾ ವೇಳಾಪಟ್ಟಿ ಮತ್ತು ಶಿಫ್ಟ್‌ಗಳ ವಿವರ:

ಯುಜಿಸಿ ನೆಟ್ ಜೂನ್ 2026 ಪರೀಕ್ಷೆಯು ಜೂನ್ 22 ರಿಂದ ಜೂನ್ 30 ರವರೆಗೆ ದೇಶಾದ್ಯಂತ ಗೊತ್ತುಪಡಿಸಿದ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪ್ರತಿದಿನ ಎರಡು ಶಿಫ್ಟ್‌ಗಳಲ್ಲಿ ಪರೀಕ್ಷೆ ಇರಲಿದೆ:

  • ಮೊದಲ ಶಿಫ್ಟ್: ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 12:00 ರವರೆಗೆ
  • ಎರಡನೇ ಶಿಫ್ಟ್: ಮಧ್ಯಾಹ್ನ 3:00 ರಿಂದ ಸಂಜೆ 6:00 ರವರೆಗೆ

ಇದನ್ನೂ ಓದಿ: ನೀಟ್ ಮರುಪರೀಕ್ಷೆ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಈ ವರ್ಷ ಮೆಡಿಕಲ್, ಡೆಂಟಲ್ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ

ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ?

ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ (Application Number) ಮತ್ತು ಇತರ ಅಗತ್ಯ ವಿವರಗಳನ್ನು ಬಳಸಿ ಲಾಗಿನ್ ಆಗುವ ಮೂಲಕ ಪ್ರವೇಶ ಪತ್ರವನ್ನು ಪಡೆಯಬಹುದು. ಅದಕ್ಕಾಗಿ ಈ ಕೆಳಗಿನ ಹಂತಗಳನ್ನು ಅನುಸರಿಸಿ:

  • ಮೊದಲು ಅಧಿಕೃತ ವೆಬ್‌ಸೈಟ್ ugcnet.nta.nic.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣಿಸುವ ‘UGC NET Admit Card 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ಅರ್ಜಿ ಸಂಖ್ಯೆ ಮತ್ತು ಇತರ ಲಾಗಿನ್ ವಿವರಗಳನ್ನು ನಮೂದಿಸಿ ‘Submit’ ಮಾಡಿ.
  • ಈಗ ನಿಮ್ಮ ಪ್ರವೇಶ ಕಾರ್ಡ್ ಪರದೆಯ ಮೇಲೆ ಕಾಣಿಸುತ್ತದೆ. ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಗಮನಿಸಿ:

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿದ ನಂತರ ಅದರಲ್ಲಿರುವ ಹೆಸರು, ಫೋಟೋ, ಪರೀಕ್ಷಾ ದಿನಾಂಕ, ಪರೀಕ್ಷಾ ಸಮಯ ಮತ್ತು ಪರೀಕ್ಷಾ ಕೇಂದ್ರದ ವಿವರಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಲು ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಪ್ರವೇಶ ಪತ್ರದ ಮುದ್ರಿತ ಪ್ರತಿ (Printout) ಮತ್ತು ಅದರೊಂದಿಗೆ ಒಂದು ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು (Valid Photo ID) ಕೊಂಡೊಯ್ಯುವುದು ಕಡ್ಡಾಯವಾಗಿದೆ. ತಪ್ಪಿದಲ್ಲಿ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಇರುವುದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ದಿ ಒಡೆಸ್ಸಿ’ ಪ್ರೀಮಿಯರ್ ಶೋಗಾಗಿ ಭಾರತಕ್ಕೆ ಬರ್ತಾರೆ ಕ್ರಿಸ್ಟೋಫರ್ ನೋಲನ್ – Kannada News | Christopher Nolan in Mumbai for ‘The Odyssey’ Premiere! India Gears for IMAX Spectacle

ಹಾಲಿವುಡ್ ಚಿತ್ರರಂಗದ ಖ್ಯಾತ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರಿಗೆ (Christopher Nolan) ಭಾರತದಲ್ಲೂ ಭಾರಿ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಪ್ರತಿ ಸಿನಿಮಾಗಳಿಗೂ ಇಲ್ಲಿ ಅದ್ಭುತ ರೆಸ್ಪಾನ್ಸ್ ಸಿಗುತ್ತವೆ ಹಾಗೂ ಗಲ್ಲಾಪೆಟ್ಟಿಗೆಯಲ್ಲೂ ಒಳ್ಳೆಯ ಕಲೆಕ್ಷನ್ ಮಾಡುತ್ತವೆ. ಇದೀಗ ಭಾರತದ ಅಭಿಮಾನಿಗಳನ್ನು ಮತ್ತಷ್ಟು ಖುಷಿಪಡಿಸಲು ನೋಲನ್ ಅವರು ಇದೇ ಮೊದಲ ಬಾರಿಗೆ ತಮ್ಮ ಸಿನಿಮಾವೊಂದರ ಪ್ರಚಾರಕ್ಕಾಗಿ ಮುಂಬೈಗೆ ಲಗ್ಗೆ ಇಡುತ್ತಿದ್ದಾರೆ.

‘ದಿ ಒಡಿಸ್ಸಿ’ ಸಿನಿಮಾನ ಕ್ರಿಸ್ಟೋಫರ್ ನೋಲನ್ ನಿರ್ದೇಶನ ಮಾಡಿದ್ದಾರೆ. ಜುಲೈ 17ರಂದು ತೆರೆಗೆ ಬರುತ್ತಿರುವ ಈ ಚಿತ್ರಕ್ಕೆ ವಿಶ್ವ ಮಟ್ಟದಲ್ಲಿ ಪ್ರಚಾರ ಮಾಡಲಾಗುತ್ತಿದೆ. ಅದರ ಭಾಗವಾಗಿ ತಂಡ ಮುಂಬೈಗೆ ಬರುತ್ತಿದೆ. ಯೂನಿವರ್ಸಲ್ ಪಿಕ್ಚರ್ಸ್ ಇಂಟರ್‌ನ್ಯಾಷನಲ್ ಸಂಸ್ಥೆಯ ಅಧಿಕೃತ ಪ್ರಕಟಣೆಯ ಪ್ರಕಾರ, ಜುಲೈ ತಿಂಗಳಿನಲ್ಲಿ ಮುಂಬೈನಲ್ಲಿ ‘ದಿ ಒಡಿಸ್ಸಿ’ ಚಿತ್ರದ ಭವ್ಯ ಪ್ರೀಮಿಯರ್ ಶೋ ಆಯೋಜಿಸಲಾಗಿದೆ.

ಈ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕ್ರಿಸ್ಟೋಫರ್ ನೋಲನ್ ಖುಷಿಯಿಂದ ಒಪ್ಪಿಕೊಂಡಿದ್ದಾರೆ. ನೋಲನ್ ಜೊತೆಗೆ ಹಾಲಿವುಡ್‌ನ ಖ್ಯಾತ ನಟರಾದ ಮ್ಯಾಟ್ ಡಮನ್, ಟಾಮ್ ಹಾಲೆಂಡ್ ಮತ್ತು ಆಸ್ಕರ್ ಪ್ರಶಸ್ತಿ ವಿಜೇತ ನಿರ್ಮಾಪಕಿ ಎಮ್ಮಾ ಥಾಮಸ್ ಕೂಡ ಮುಂಬೈಗೆ ಆಗಮಿಸುತ್ತಿದ್ದಾರೆ. ಮುಂಬೈನ ಫೀನಿಕ್ಸ್ ಪಲ್ಲಾಡಿಯಮ್‌ನಲ್ಲಿರುವ ಪಿವಿಆರ್ ಐಕಾನ್ ಐಮ್ಯಾಕ್ಸ್ ಥಿಯೇಟರ್‌ನಲ್ಲಿ ಸಿನಿಮಾ ಪ್ರದರ್ಶನ ಕಾಣಲಿದೆ. ಲಂಡನ್, ಪ್ಯಾರಿಸ್ ಮತ್ತು ನ್ಯೂಯಾರ್ಕ್‌ನಂತಹ ವಿಶ್ವದ ಪ್ರಮುಖ ನಗರಗಳ ಸಾಲಿನಲ್ಲಿ ಈಗ ಮುಂಬೈ ಕೂಡ ಸೇರ್ಪಡೆಯಾಗಿದ್ದು, ಈ ಈವೆಂಟ್ ಭಾರತದ ಸಿನಿಮಾ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಾಲಿವುಡ್ ಕಾರ್ಯಕ್ರಮವಾಗಿ ಮೂಡಿಬರಲಿದೆ.

ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಲಿರುವ ‘ದಿ ಒಡಿಸ್ಸಿ’

ನೋಲನ್ ಅವರ ಈ ಹಿಂದಿನ ‘ಓಪನ್ ಹೈಮರ್’ ಸಿನಿಮಾ ಬರೋಬ್ಬರಿ 7 ಆಸ್ಕರ್ ಪ್ರಶಸ್ತಿಗಳನ್ನು ಬಾಚಿಕೊಂಡು ಜಾಗತಿಕವಾಗಿ ಸಖತ್ ಸೌಂಡ್ ಮಾಡಿತ್ತು. ಅದರ ಬೆನ್ನಲ್ಲೇ ಬರುತ್ತಿರುವ ‘ದಿ ಒಡಿಸ್ಸಿ’ ಮೇಲೆ ಭಾರಿ ನಿರೀಕ್ಷೆಗಳಿವೆ. ಹೋಮರ್ ಅವರ ಪ್ರಸಿದ್ಧ ಇತಿಹಾಸ ಪ್ರಸಿದ್ಧ ಮಹಾಕಾವ್ಯವನ್ನು ಆಧರಿಸಿ ಈ ಸಿನಿಮಾವನ್ನು ಸಿದ್ಧಪಡಿಸಲಾಗಿದೆ. ಟ್ರಾಯ್ ನಗರದ ಪತನದ ನಂತರ ‘ಒಡಿಸ್ಸಿಯಸ್’ ಎಂಬ ನಾಯಕ ಹತ್ತು ವರ್ಷಗಳ ಕಾಲ ನಡೆಸುವ ಅಪಾಯಕಾರಿ ಸಾಹಸದ ಪ್ರಯಾಣದ ಕಥೆ ಇದರಲ್ಲಿದೆ.

ತಾಂತ್ರಿಕವಾಗಿಯೂ ಈ ಸಿನಿಮಾ ಹೊಸ ಮೈಲಿಗಲ್ಲು ಸೃಷ್ಟಿಸುತ್ತಿದೆ. ಸಂಪೂರ್ಣವಾಗಿ ಐಮ್ಯಾಕ್ಸ್ ಕ್ಯಾಮೆರಾಗಳಲ್ಲೇ ಚಿತ್ರೀಕರಣಗೊಂಡ ವಿಶ್ವದ ಮೊದಲ ಸಿನಿಮಾ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ. ಇನ್ನು ಚಿತ್ರದಲ್ಲಿ ಮ್ಯಾಟ್ ಡಮನ್, ಟಾಮ್ ಹಾಲೆಂಡ್ ಜೊತೆಗೆ ಅನ್ ಹ್ಯಾಥ್‌ವೇ, ರಾಬರ್ಟ್ ಪ್ಯಾಟಿನ್ಸನ್, ಜೆಂಡಾಯಾ ಮತ್ತು ಚಾರ್ಲಿಜ್ ಥೆರಾನ್ ಅವರಂತಹ ಸ್ಟಾರ್ ಕಲಾವಿದರು ನಟಿಸಿದ್ದಾರೆ.

ಇದನ್ನೂ ಓದಿ:  ಭಾರತದಲ್ಲಿ ಕ್ರಿಸ್ಟೋಫರ್ ನೋಲನ್ ಹೊಸ ಸಿನಿಮಾದ ಟಿಕೆಟ್ ಬೆಲೆ 3 ಸಾವಿರ ರೂಪಾಯಿಗೂ ಅಧಿಕ

ಭಾರತದಾದ್ಯಂತ ಈ ಚಿತ್ರದ ಐಮ್ಯಾಕ್ಸ್ ಸ್ಕ್ರೀನಿಂಗ್‌ಗಳ ಅಡ್ವಾನ್ಸ್ ಬುಕಿಂಗ್ ಈಗಾಗಲೇ ಆರಂಭವಾಗಿದ್ದು, ನೋಲನ್ ಅವರ ಹೊಸ ದೃಶ್ಯ ವೈಭವವನ್ನು ಕಣ್ತುಂಬಿಕೊಳ್ಳಲು ಭಾರತೀಯ ಚಿತ್ರಪ್ರೇಮಿಗಳು ಕಾತರರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಟೆಲಿಗ್ರಾಮ್ ತಾತ್ಕಾಲಿಕ ನಿಷೇಧ: ಕೇಂದ್ರದ ನಿರ್ಧಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸಂಸ್ಥೆ – Kannada News | Telegram Challenges India’s NEET UG Re Exam Ban in Delhi High Court Today

ನವದೆಹಲಿ, ಜೂನ್ 17: ಭಾರತದಲ್ಲಿ ಜೂನ್ 21ರಂದು ನಡೆಯಲಿರುವ ನೀಟ್ ಯುಜಿ (NEET-UG 2026) ಮರು ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಮ್ ಆ್ಯಪ್ ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸಕರಕಾರದ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಮ್ ದೆಹಲಿ ಹೈಕೋರ್ಟ್​ ಮೆಟ್ಟಿಲೇರಿದೆ. ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ತೇಜಸ್ ಕರಿಯಾ ನೇತೃತ್ವದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಗಿದ್ದು, ನ್ಯಾಯಾಲಯವು ಇಂದು ನಂತರದ ಅವಧಿಯಲ್ಲಿ ಪ್ರಕರಣದ ತುರ್ತು ವಿಚಾರಣೆ ನಡೆಸಲು ಒಪ್ಪಿಕೊಂಡಿದೆ.

ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ತನಿಖೆಯನ್ನು ಕೇಂದ್ರ ತನಿಖಾ ದಳ (CBI) ನಡೆಸುತ್ತಿದೆ. ಈ ಹಿಂದೆ ಪರೀಕ್ಷೆ ನಡೆಯುವ ಮುನ್ನ ಪ್ರಶ್ನೆಪತ್ರಿಕೆಗಳನ್ನು ಪಿಡಿಎಫ್ (PDF) ರೂಪದಲ್ಲಿ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್‌ಗಳ ಮೂಲಕ ಹಂಚಿಕೊಳ್ಳಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ಮುಂಬರುವ ಜೂನ್ 21ರ ಮರು ಪರೀಕ್ಷೆಯಲ್ಲೂ ಇಂತಹ ಯಾವುದೇ ಭದ್ರತಾ ಲೋಪಗಳು ಆಗಬಾರದು ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಮ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಸರ್ಕಾರದ ಈ ದಿಢೀರ್ ಕ್ರಮದ ವಿರುದ್ಧ ಟೆಲಿಗ್ರಾಮ್ ಈಗ ನ್ಯಾಯಾಲಯದಿಂದ ಪರಿಹಾರ ಕೋರಿದೆ.

ಇನ್ನೊಂದೆಡೆ, ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಕೇಂದ್ರ ಸರ್ಕಾರದ ನಿರ್ಧಾರವನ್ನು ಸಂಪೂರ್ಣವಾಗಿ ಸ್ವಾಗತಿಸಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) 2020 ರ ಸೆಕ್ಷನ್ 69A ಅಡಿಯಲ್ಲಿ ದೇಶದ ಹಿತದೃಷ್ಟಿಯಿಂದ ಅತ್ಯಂತ ಅಲ್ಪಾವಧಿಗೆ ಮಾತ್ರ ಈ ನಿರ್ಬಂಧ ಹೇರಲಾಗಿದೆ ಎಂದು ಎನ್‌ಟಿಎ ಸ್ಪಷ್ಟಪಡಿಸಿದೆ. ಲಕ್ಷಾಂತರ ಪ್ರಾಮಾಣಿಕ ವಿದ್ಯರ್ಥಿಗಳಿಗೆ ನ್ಯಾಯ ಒದಗಿಸಲು ಮತ್ತು ಪರೀಕ್ಷೆಯ ಪಾರದರ್ಶಕತೆ ಕಾಪಾಡಲು ಈ ಕ್ರಮ ಅನಿವಾರ್ಯವಾಗಿತ್ತು ಎಂದು ಸಂಸ್ಥೆ ಹೇಳಿದೆ.

ಮತ್ತಷ್ಟು ಓದಿ: Telegram Ban: ಭಾರತದಲ್ಲಿ ಟೆಲಿಗ್ರಾಮ್​ಗೆ ತಾತ್ಕಾಲಿಕ ನಿಷೇಧ: ನೀಟ್ ಮರು ಪರೀಕ್ಷೆಗೂ ಮುನ್ನ ಕೇಂದ್ರದ ಕ್ರಮ

ಇತ್ತೀಚಿನ ವಾರಗಳಲ್ಲಿ ಟೆಲಿಗ್ರಾಮ್‌ನಲ್ಲಿ ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದ ಹಲವು ಸಂಘಟಿತ ಚಾನೆಲ್‌ಗಳು ಸಕ್ರಿಯವಾಗಿದ್ದವು ಎಂದು ಎನ್‌ಟಿಎ ಮತ್ತು ಶಿಕ್ಷಣ ಸಚಿವಾಲಯ ನ್ಯಾಯಾಲಯಕ್ಕೆ ಮಾಹಿತಿ ನೀಡಿವೆ. ಈ ವಂಚಕರ ಜಾಲಗಳು ತಮ್ಮ ಚಾನೆಲ್‌ಗಳಿಗೆ ಪೇಪರ್ ಲೀಕ್ಡ್ ನೀಟ್, ರೀ-ನೀಟ್ 2026, ಖಾಸಗಿ ಮಾಫಿಯಾ ಹಾಗೂ ರೀ ನೀಟ್ ಮಾಫಿಯಾ ಎಂಬ ಹೆಸರುಗಳನ್ನು ಇಟ್ಟುಕೊಂಡು ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುತ್ತಿದ್ದವು.

ಮರು ಪರೀಕ್ಷೆಯ ಸಮಯದಲ್ಲಿ ಇಂತಹ ಚಾನೆಲ್‌ಗಳು ಸುಳ್ಳು ವದಂತಿಗಳನ್ನು ಹರಡುವುದನ್ನು ಮತ್ತು ಪರೀಕ್ಷಾ ವ್ಯವಸ್ಥೆಗೆ ಧಕ್ಕೆ ತರುವುದನ್ನು ತಡೆಯಲು ಈ ತಾತ್ಕಾಲಿಕ ನಿಷೇಧ ಅತ್ಯಂತ ಅಗತ್ಯವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ 21ರ ನೀಟ್ ಮರು ಪರೀಕ್ಷೆಯಲ್ಲಿ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಜೂನ್ 22ರವರೆಗೆ ಟೆಲಿಗ್ರಾಮ್ ಆಪ್ ಅನ್ನು ಬ್ಯಾನ್ ಮಾಡಿದೆ. ಈ ಬ್ಯಾನ್ ತೆರವುಗೊಳಿಸುವಂತೆ ಕೋರಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ಇಂದು ಈ ಬಗ್ಗೆ ವಿಚಾರಣೆ ನಡೆಸಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 12:25 pm, Wed, 17 June 26

Source link

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಬಿದ್ದು 7 ಜನ ಸತ್ತ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು! – Kannada News | Bengaluru Bowring Hospital Wall: Negligence After 7 Deaths Sparks Safety Concerns

ಬೆಂಗಳೂರು, ಜೂನ್ 17: ಸುಮಾರು ಒಂದೂವರೆ ತಿಂಗಳ ಹಿಂದೆ ಬೆಂಗಳೂರಿನ ಶಿವಾಜಿ ನಗರದ ಬೌರಿಂಗ್ ಅಥವಾ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಬಳಿ ಸಂಭವಿಸಿದ ಬೃಹತ್ ಗೋಡೆ ಕುಸಿತದಲ್ಲಿ ಏಳು ಮಂದಿ ಮೃತಪಟ್ಟಿದ್ದರು. ಈ ಭೀಕರ ದುರಂತ ಸಂಭವಿಸಿದರೂ, ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಘಟನಾ ಸ್ಥಳದಿಂದ ಕೇವಲ 100-150 ಮೀಟರ್ ಅಂತರದಲ್ಲಿ, ಬೌರಿಂಗ್ ಆಸ್ಪತ್ರೆಯ ಮತ್ತೊಂದು ಗೋಡೆಯು ಬೃಹತ್ ಬಿರುಕು ಬಿಟ್ಟು ಬೀಳುವ ಹಂತ ತಲುಪಿದೆ.

ಈ ಅಪಾಯಕಾರಿ ಪ್ರದೇಶದಲ್ಲಿ ಜನಸಾಮಾನ್ಯರು, ವಿಶೇಷವಾಗಿ ಪಾದಚಾರಿಗಳು ನಿತ್ಯ ಓಡಾಡುತ್ತಿದ್ದಾರೆ. ಆದರೆ, ಯಾವುದೇ ಬ್ಯಾರಿಕೇಡ್‌ಗಳನ್ನಾಗಲಿ ಅಥವಾ ಮುನ್ನೆಚ್ಚರಿಕೆಯನ್ನಾಗಲಿ ಅಳವಡಿಸಿಲ್ಲ. ಮಳೆಗಾಲ ಮತ್ತೆ ಸಮೀಪಿಸುತ್ತಿದ್ದು, ಈ ಗೋಡೆ ಕುಸಿದು ಮತ್ತೊಂದು ದುರಂತ ಸಂಭವಿಸುವ ಭೀತಿಯಿದೆ. ಜಿಬಿಎ ಅಧಿಕಾರಿಗಳಿಗೆ ಮತ್ತು ಬೆಂಗಳೂರು ಕೇಂದ್ರ ನಗರಪಾಲಿಕೆ ಅಧಿಕಾರಿಗಳಿಗೆ ಇಂತಹ ಅಪಾಯಕಾರಿ ಪರಿಸ್ಥಿತಿಗಳ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲದಿರುವುದು ಆಘಾತಕಾರಿಯಾಗಿದೆ. ಪಾದಚಾರಿಗಳ ಜೀವಕ್ಕೆ ಯಾವುದೇ ಗ್ಯಾರಂಟಿ ಇಲ್ಲ. ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ, ಕನಿಷ್ಠ ದುರಂತ ಸಂಭವಿಸಿದ ಪ್ರದೇಶದ ಸುತ್ತಮುತ್ತಲ ಗೋಡೆಗಳನ್ನಾದರೂ ಸುರಕ್ಷಿತಗೊಳಿಸುವ ಮೂಲಕ ಸಾರ್ವಜನಿಕರ ಜೀವಕ್ಕೆ ಭದ್ರತೆ ಒದಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ISRO Recruitment 2026: ಇಸ್ರೋದಲ್ಲಿ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲಿ ಕೆಲಸ! – Kannada News | ISRO URSC JRF Recruitment 2026: Apply Online for 17 Junior Research Fellow Posts by July 11

ಇಸ್ರೋದಲ್ಲಿ ಉದ್ಯೋಗಾವಕಾಶImage Credit source: Pinterest

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO) ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಇಸ್ರೋದ ಪ್ರಮುಖ ಕೇಂದ್ರವಾದ ಯು.ಆರ್. ರಾವ್ ಉಪಗ್ರಹ ಕೇಂದ್ರ (URSC) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ (Online) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯ ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ:

ಹುದ್ದೆಯ ವಿವರಗಳು:

  • ಸಂಸ್ಥೆಯ ಹೆಸರು: ಯು.ಆರ್. ರಾವ್ ಉಪಗ್ರಹ ಕೇಂದ್ರ (URSC) / ಇಸ್ರೋ (ISRO), ಬೆಂಗಳೂರು.
  • ಹುದ್ದೆಯ ಹೆಸರು: ಜೂನಿಯರ್ ರಿಸರ್ಚ್ ಫೆಲೋ (Junior Research Fellow – JRF)
  • ಒಟ್ಟು ಹುದ್ದೆಗಳ ಸಂಖ್ಯೆ: 17
  • ಉದ್ಯೋಗದ ಸ್ವರೂಪ: ಸಂಪೂರ್ಣವಾಗಿ ತಾತ್ಕಾಲಿಕ ಆಧಾರದ ಮೇಲೆ (Purely on Temporary Basis)

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ: ಜೂನ್ 12
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 11

ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ನೋಂದಾಯಿಸಿಕೊಳ್ಳಬೇಕು. ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ವಿವರಗಳಿಗಾಗಿ ಇಸ್ರೋದ ಅಧಿಕೃತ ವೆಬ್‌ಸೈಟ್‌ಗೆ www.isro.gov.in ಭೇಟಿ ನೀಡಬಹುದು.

ವೆಬ್‌ಸೈಟ್‌ಗೆ ಭೇಟಿ ನೀಡಿದ ಬಳಿಕ “Career” ವಿಭಾಗವನ್ನು ಕ್ಲಿಕ್ ಮಾಡುವ ಮೂಲಕ ವಿವರವಾದ ಜಾಹೀರಾತನ್ನು ವೀಕ್ಷಿಸಬಹುದು ಹಾಗೂ ಆನ್‌ಲೈನ್ ಅರ್ಜಿಯನ್ನು ಸಬ್ಮಿಟ್ ಮಾಡಬಹುದು. ಆಸಕ್ತ ಅಭ್ಯರ್ಥಿಗಳು ಜುಲೈ 11 ರ ಒಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಲು ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:15 pm, Wed, 17 June 26

Source link

ಚಾಮರಾಜನಗರದಲ್ಲೊಂದು ಹೃದಯ ವಿದ್ರಾವಕ ಘಟನೆ: ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು – Kannada News | Four Year Old Girl Dies From Grinder Electrocution in Chamarajanagar

ಚಾಮರಾಜನಗರ, ಜೂನ್​​ 17: ಗುಂಡ್ಲುಪೇಟೆ ತಾಲೂಕಿನ ಕಲಿಗೌಡನಹಳ್ಳಿಯಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯಲ್ಲಿ ಗ್ರೈಂಡರ್​ನಿಂದ ವಿದ್ಯುತ್ ಪ್ರವಹಿಸಿ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಪುಟ್ಟಮ್ಮ ಹಾಗೂ ಆನಂದ್ ದಂಪತಿಯ ಪುತ್ರಿ ಅದ್ವಿತಾ ಮೃತಪಟ್ಟ ದುರ್ದೈವಿ. ಮನೆಯಲ್ಲಿ ಆಟವಾಡುತ್ತಿದ್ದ ಅದ್ವಿತಾ ನೀರು ಕುಡಿಯಲು ಅಡುಗೆ ಮನೆಗೆ ತೆರಳಿದ್ದಳು. ಆ ಸಮಯದಲ್ಲಿ ಅಡುಗೆ ಮನೆಯಲ್ಲಿ ಆನ್ ಆಗಿದ್ದ ಗ್ರೈಂಡರ್ ಅನ್ನು ಮುಟ್ಟಿದ್ದಾಳೆ. ಗ್ರೈಂಡರ್ ಅನ್ನು ಮುಟ್ಟಿದ ತಕ್ಷಣವೇ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅದ್ವಿತಾಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಿಬಿಎಲ್​ನಲ್ಲಿ ಬೇರೆ ಬೇರೆಯಾಗಿಯೇ ಕಣಕ್ಕಿಳಿಯಲಿವೆ ‘ಮೆಲ್ಬೋರ್ನ್’ ತಂಡಗಳು..! – Kannada News | BBL 2026: Melbourne Stars, Renegades Merger Off for Upcoming Summer

ಆಸ್ಟ್ರೇಲಿಯಾದ ಪ್ರತಿಷ್ಠಿತ ಟಿ20 ಟೂರ್ನಿ ಬಿಗ್ ಬ್ಯಾಷ್ ಲೀಗ್‌ನ (BBL) ಮುಂದಿನ ಸೀಸನ್‌ನಲ್ಲಿ ಮೆಲ್ಬೋರ್ನ್ ನಗರದ ಬದ್ಧ ವೈರಿಗಳಾದ ಮೆಲ್ಬೋರ್ನ್ ಸ್ಟಾರ್ಸ್ (Melbourne Stars) ಮತ್ತು ಮೆಲ್ಬೋರ್ನ್ ರೆನೆಗೇಡ್ಸ್ (Melbourne Renegades) ತಂಡಗಳು ಪ್ರತ್ಯೇಕ ಹಾಗೂ ಸ್ವತಂತ್ರ ತಂಡಗಳಾಗಿಯೇ ಮುಂದುವರಿಯಲಿವೆ. ಈ ಎರಡು ಜನಪ್ರಿಯ ಫ್ರಾಂಚೈಸಿಗಳನ್ನು ಒಂದಾಗಿಸುವ ‘ವಿಲೀನ ಯೋಜನೆ’ಯನ್ನು ಕ್ರಿಕೆಟ್ ವಿಕ್ಟೋರಿಯಾ ಅಧಿಕೃತವಾಗಿ ಕೈಬಿಟ್ಟಿದೆ.

ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ರಾಜ್ಯ ಮಂಡಳಿಗಳ ಮುಖ್ಯಸ್ಥರ ನಡುವೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಲೀಗ್‌ನ ಖಾಸಗೀಕರಣದ ಹೈಬ್ರಿಡ್ ಮಾದರಿಗೆ ತಾತ್ವಿಕ ಒಪ್ಪಿಗೆ ಸಿಕ್ಕಿದೆ. ಆದರೆ, ಈ ನೀತಿಗಳ ಜಾರಿಗೆ ಹೆಚ್ಚಿನ ಸಮಯ ಬೇಕಾಗುವುದರಿಂದ, ಮುಂಬರುವ ಬಿಗ್ ಬ್ಯಾಷ್ ಲೀಗ್ ಟೂರ್ನಿಗಳಲ್ಲಿ ಎರಡೂ ತಂಡಗಳು ತಮ್ಮ ಹಳೆಯ ಬ್ರ್ಯಾಂಡಿಂಗ್, ಜರ್ಸಿ ಬಣ್ಣ ಹಾಗೂ ಸ್ಥಳೀಯ ಸ್ಪರ್ಧಾತ್ಮಕತೆಯೊಂದಿಗೆ ಸ್ವತಂತ್ರವಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

ದಿಢೀರ್ ತಿರುವು ಪಡೆದ ವಿಲೀನ!

ಕೇವಲ ಎರಡು ವಾರಗಳ ಹಿಂದೆ, ಕ್ರಿಕೆಟ್ ವಿಕ್ಟೋರಿಯಾ ಮಂಡಳಿಯು ಮೆಲ್ಬೋರ್ನ್ ಸ್ಟಾರ್ಸ್ ಬ್ರ್ಯಾಂಡ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಿ, ಎರಡೂ ತಂಡಗಳನ್ನು ವಿಲೀನಗೊಳಿಸುವುದಾಗಿ ಘೋಷಿಸಿತ್ತು. ಈ ಘೋಷಣೆಯೊಂದಿಗೆ ಮುಂಬರುವ ಬಿಗ್ ಬ್ಯಾಷ್ ಲೀಗ್​ನಲ್ಲಿ ಮೆಲ್ಬೋರ್ನ್ ಹೆಸರಿನಲ್ಲಿ ಒಂದು ತಂಡ ಮಾತ್ರ ಕಣಕ್ಕಿಳಿಯಲಿದೆ ಎಂದು ತಿಳಿಸಲಾಗಿತ್ತು.

ಆದರೆ ಇದೀಗ, ಬಿಬಿಎಲ್ ಖಾಸಗೀಕರಣ, ಆಡಳಿತಾತ್ಮಕ ರಚನೆ ಮತ್ತು ಆಟಗಾರರ ವೇತನದ ಕುರಿತು ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್ (ACA) ಜೊತೆಗಿನ ಮಾತುಕತೆಗಳು ಇನ್ನು ದೀರ್ಘಕಾಲದ ಪ್ರಕ್ರಿಯೆಯಾಗಿರುವುದರಿಂದ, ಈ ತರಾತುರಿಯ ನಿರ್ಧಾರವನ್ನು ಸದ್ಯಕ್ಕೆ ಕೈ ಬಿಡಲಾಗಿದೆ.

ಹೀಗಾಗಿ ಮುಂಬರುವ ಸೀಸನ್​ನಲ್ಲೂ ಮೆಲ್ಬೋರ್ನ್​ ತಂಡಗಳು ಬೇರೆ ಬೇರೆಯಾಗಿ ಕಣಕ್ಕಿಳಿಯಲಿದೆ. ಅದರಂತೆ ಬಿಗ್ ಬ್ಯಾಷ್ ಲೀಗ್​ನ 16ನೇ ಸೀಸನ್​ನಲ್ಲಿ ಮೆಲ್ಬೋರ್ನ್​ ಸ್ಟಾರ್ಸ್ ತಂಡ ಎಂದಿನಂತೆ ಹಸಿರು ಮತ್ತು ಮೆಲ್ಬೋರ್ನ್​​ ರೆನೆಗೇಡ್ಸ್ ತಂಡ ಕೆಂಪು ಜೆರ್ಸಿಯಲ್ಲಿ ಅಭಿಮಾನಿಗಳನ್ನು ರಂಜಿಸಲಿವೆ.

ಮೆಲ್ಬೋರ್ನ್​ ತಂಡಗಳ ಸ್ಟಾರ್​ ಆಟಗಾರರು:

ವಿಕ್ಟೋರಿಯಾ ಕ್ರಿಕೆಟ್ ಮಂಡಳಿಯ ಒಪ್ಪಂದದ ಪ್ರಕಾರ ಎರಡೂ ಫ್ರಾಂಚೈಸಿಗಳ ಪ್ರಮುಖ ಆಟಗಾರರು ತಮ್ಮ ಹಳೆಯ ತಂಡಗಳಲ್ಲೇ ಮುಂದುವರಿಯಲಿದ್ದಾರೆ. ಅದರಂತೆ ಮುಂಬರುವ ಸೀಸನ್​ನಲ್ಲಿ ಮೆಲ್ಬೋರ್ನ್​ ತಂಡಗಳ ಪರ ಕಣಕ್ಕಿಳಿಯಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…

  • ಮೆಲ್ಬೋರ್ನ್ ಸ್ಟಾರ್ಸ್ (ಪುರುಷ ತಂಡ): ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಹಿಲ್ಟನ್ ಕಾರ್ಟ್‌ರೈಟ್, ಸ್ಯಾಮ್ ಹಾರ್ಪರ್
  • ಮೆಲ್ಬೋರ್ನ್ ಸ್ಟಾರ್ಸ್ (ಮಹಿಳಾ ತಂಡ):ಮೆಗ್ ಲ್ಯಾನಿಂಗ್, ಅನ್ನಾಬೆಲ್ ಸದರ್ಲ್ಯಾಂಡ್, ಕಿಮ್ ಗಾರ್ತ್, ಮರಿಝಾನೆ ಕಪ್.

ಇದನ್ನೂ ಓದಿ: ಗೋಲು ಬಾರಿಸಿ ಕ್ಷಮೆಯಾಚಿಸಿದ ಯಾಸಿನ್ ಅಯಾರಿ..!

  • ಮೆಲ್ಬೋರ್ನ್ ರೆನೆಗೇಡ್ಸ್ (ಪುರುಷ ತಂಡ):ಜೇಕ್ ಫ್ರೇಸರ್-ಮೆಕ್‌ಗುರ್ಕ್, ವಿಲ್ ಸದರ್ಲ್ಯಾಂಡ್, ಜೋಶ್ ಬ್ರೌನ್, ಜೇಸನ್ ಬೆಹ್ರೆನ್‌ಡಾರ್ಫ್.
  • ಮೆಲ್ಬೋರ್ನ್ ರೆನೆಗೇಡ್ಸ್ (ಮಹಿಳಾ ತಂಡ): ಸೋಫಿ ಮೊಲಿನಕ್ಸ್, ಜಾರ್ಜಿಯಾ ವೇರ್ಹ್ಯಾಮ್, ಕರ್ಟ್ನಿ ವೆಬ್, ನಿಕೋಲ್ ಫಾಲ್ಟಮ್.

Source link