All posts by nagaraj11081993

ಉಚಿತ 5G ಅಪ್‌ಗ್ರೇಡ್ ಆಸೆಗೆ ಬಿದ್ದ ಬೆಂಗಳೂರು ವ್ಯಕ್ತಿಗೆ ಶಾಕ್: ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು! – Kannada News | Bengaluru Cyber Fraud: Man Seeking Free 5G Upgrade Duped of Rs 15 Lakh Loan

ಬೆಂಗಳೂರು, ಜೂನ್ 17: ಸ್ಮಾರ್ಟ್‌ಫೋನ್‌ನಲ್ಲಿ ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಡುವುದಾಗಿ ನಂಬಿಸಿದ ಸೈಬರ್ ವಂಚಕನೊಬ್ಬ, ಬೆಂಗಳೂರಿನ (Bengaluru) ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 15 ಲಕ್ಷ ರೂಪಾಯಿ ಇನ್‌ಸ್ಟಂಟ್ ಲೋನ್ ಮಾಡಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ವಿಕ್ಟೋರಿಯಾ ಲೇಔಟ್ ನಿವಾಸಿ, 50 ವರ್ಷದ ವ್ಯಕ್ತಿ ಈ ಜಾಲಕ್ಕೆ ಬಲಿಯಾದವರಾಗಿದ್ದಾರೆ. ಕೇವಲ 30 ನಿಮಿಷಗಳ ಅವಧಿಯಲ್ಲಿ ವಂಚಕರು ಇವರ ಬ್ಯಾಂಕ್ ಖಾತೆಯನ್ನು ಸಂಪೂರ್ಣ ಹ್ಯಾಕ್ ಮಾಡಿ ಈ ಕೃತ್ಯ ಎಸಗಿದ್ದಾರೆ.

ಮುಖ್ಯಾಂಶಗಳು

  • ಉಚಿತ 5G ಅಪ್‌ಗ್ರೇಡ್ ಆಸೆಗೆ ಬಿದ್ದು ಬೆಂಗಳೂರು ಉದ್ಯೋಗಿ ಭಾರಿ ವಂಚನೆಗೊಳಗಾಗಿದ್ದಾರೆ.
  • ಸಿಮ್ ಕಾರ್ಡ್ ಹ್ಯಾಕ್ ಮಾಡಿ 15 ಲಕ್ಷ ರೂಪಾಯಿ ಸಾಲ ಪಡೆದಿದ್ದಾರೆ.
  • ಸಾರ್ವಜನಿಕರು ಒಟಿಪಿ ಅಥವಾ ಗೌಪ್ಯ ವಿವರಗಳನ್ನು ಯಾರಿಗೂ ಹಂಚಿಕೊಳ್ಳಬಾರದು ಎಂದು ಎಚ್ಚರಿಕೆ.

4G ಯಿಂದ ಇ-ಸಿಮ್ (e-SIM) ವಂಚನೆಯ ಜಾಲ

ಜೂನ್ 13 ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಈ ವ್ಯಕ್ತಿಗೆ ಅಪರಿಚಿತ ಸಂಖ್ಯೆಯಿಂದ ಕರೆಯೊಂದು ಬಂದಿತ್ತು. ತಾನು ಪ್ರಮುಖ ಟೆಲಿಕಾಂ ಕಂಪನಿಯೊಂದರ ಕಾರ್ಯನಿರ್ವಾಹಕ ಎಂದು ಪರಿಚಯಿಸಿಕೊಂಡ ವಂಚಕ, ನಿಮ್ಮ ಮೊಬೈಲ್ ಸಿಮ್ ಅನ್ನು ಉಚಿತವಾಗಿ 5G ಗೆ ಅಪ್‌ಗ್ರೇಡ್ ಮಾಡಿಕೊಡುವುದಾಗಿ ಆಮಿಷ ಒಡ್ಡಿದ್ದ.

ಅವನ ಮಾತು ನಂಬಿದ್ದ ವ್ಯಕ್ತಿ ಆತ ಕೇಳಿದ ಇಐಡಿ (Embedded Identity Document) ಸಂಖ್ಯೆಯನ್ನು ನೀಡಿದ್ದಾರೆ. ಈ ಸಂಖ್ಯೆಯನ್ನು ಬಳಸಿಕೊಂಡು ವಂಚಕರು ವ್ಯಕ್ತಿಯ ಭೌತಿಕ ಸಿಮ್ ಅನ್ನು ತಕ್ಷಣವೇ ತಮ್ಮದೇ ಆದ ಬೇರೆ ಡಿವೈಸ್‌ನಲ್ಲಿ ‘ಇ-ಸಿಮ್’ (e-SIM) ಆಗಿ ಬದಲಾಯಿಸಿಕೊಂಡಿದ್ದಾರೆ. ಸಿಮ್ ಕಾರ್ಡ್ ವಂಚಕರ ಕೈ ಸೇರಿದ ಬೆನ್ನಲ್ಲೇ ವ್ಯಕ್ತಿಯ ಮೊಬೈಲ್ ನೆಟ್‌ವರ್ಕ್ ಕಡಿತಗೊಂಡಿದೆ.

ಕೇವಲ ಅರ್ಧ ಗಂಟೆಯಲ್ಲಿ 15 ಲಕ್ಷ ಸಾಲ!

ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿಯ ಸಂಪೂರ್ಣ ನಿಯಂತ್ರಣ ಸಾಧಿಸಿದ ಸೈಬರ್ ಅಪರಾಧಿಗಳು, ಅವರ ಬ್ಯಾಂಕಿಂಗ್ ವಿವರಗಳನ್ನು ಹ್ಯಾಕ್ ಮಾಡಿದ್ದಾರೆ. ಬಳಿಕ ವ್ಯಕ್ತಿಗೆ ತಿಳಿಯದಂತೆ ಅವರದೇ ಬ್ಯಾಂಕ್ ಖಾತೆಯ ಮೂಲಕ 15 ಲಕ್ಷ ರೂಪಾಯಿಗಳ ಇನ್‌ಸ್ಟಂಟ್ ಲೋನ್‌ಗೆ ಅರ್ಜಿ ಸಲ್ಲಿಸಿ, ಸಾಲ ಮಂಜೂರು ಮಾಡಿಸಿಕೊಂಡಿದ್ದಾರೆ.

ಮಂಜೂರಾದ 15 ಲಕ್ಷ ರೂ. ಸಾಲದ ಮೊತ್ತದಲ್ಲಿ ಸುಮಾರು 14.6 ಲಕ್ಷ ರೂ. ಖಾತೆಗೆ ಜಮೆಯಾಗಿದೆ. ವಂಚಕರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಮಧ್ಯಾಹ್ನ 3:30 ರ ವೇಳೆಗೆ ಆ ಖಾತೆಯಿಂದ 2.2 ಲಕ್ಷ ರೂಪಾಯಿಗಳನ್ನು ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ. ಅದೃಷ್ಟವಶಾತ್, ತನ್ನ ಬ್ಯಾಂಕ್ ಖಾತೆಯಲ್ಲಿ ಏನೋ ಅಕ್ರಮ ನಡೆಯುತ್ತಿದೆ ಎಂಬುದನ್ನು ತಕ್ಷಣವೇ ಅರಿತ ವ್ಯಕ್ತಿ, ತಡಮಾಡದೆ ಬ್ಯಾಂಕ್ ಮತ್ತು ಸೈಬರ್ ಕ್ರೈಮ್ ಹೆಲ್ಪ್‌ಲೈನ್‌ಗೆ ದೂರು ನೀಡಿ ಖಾತೆಯನ್ನು ಫ್ರೀಜ್ ಮಾಡಿಸಿದ್ದಾರೆ. ಹೀಗಾಗಿ ಉಳಿದ ಹಣ ವಂಚಕರ ಪಾಲಾಗುವುದು ತಪ್ಪಿದೆ.

ಜೂನ್ 15 ರಂದು ಕೇಂದ್ರ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ತೆರಳಿ ಅಧಿಕೃತ ದೂರು ದಾಖಲಿಸಿದ್ದು, ಸದ್ಯ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಭೌತಿಕ ಸಿಮ್ ಅನ್ನು ಇ-ಸಿಮ್ ಆಗಿ ಬದಲಾಯಿಸುವಾಗ ಸಾರ್ವಜನಿಕರು ಒಟಿಪಿ ಅಥವಾ ಯಾವುದೇ ಗೌಪ್ಯ ಸಂಖ್ಯೆಗಳನ್ನು ಹಂಚಿಕೊಳ್ಳಬಾರದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗ್ಯಾರಂಟಿಗಳಿಗೆ ಹಣವಿಲ್ಲದ ಕಾರಣ ಪರಿಷ್ಕರಣೆ ಹೆಸರಲ್ಲಿ ಕತ್ತರಿ: ಬಿ.ವೈ. ವಿಜಯೇಂದ್ರ ಆರೋಪ – Kannada News | Vijayendra Criticises Karnataka Government Over Guarantee Schemes and Neglect of Poor

ಬೆಂಗಳೂರು, ಜೂನ್​​ 17: ಗ್ಯಾರಂಟಿ ಯೋಜನೆಗಳ ನಿರ್ವಹಣೆಗೆ ಹಣ ಕ್ರೋಢೀಕರಣದಲ್ಲಿ ರಾಜ್ಯ ಸರ್ಕಾರಕ್ಕೆ ತೊಂದರೆಯಾಗಿದೆ. ಹೀಗಾಗಿಯೇ ಸುಧಾರಣೆ ಹೆಸರಿನಲ್ಲಿ ಬಡವರಿಗೆ ನೀಡಲಾಗುವ ಯೋಜನೆಗಳಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. 1.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ತೆರಿಗೆ ಪಾವತಿದಾರರು ಇದ್ದಾರೆ. ಅವರಿಗ್ಯಾಕೆ ಗ್ಯಾರಂಟಿ ಎಂದು ಪ್ರಶ್ನಿಸುತ್ತಿದ್ದಾರೆ. ಚುನಾವಣೆ ಸಂದರ್ಭ ಎಲ್ಲರಿಗೂ ಉಚಿತ ಎಂದು ಹೇಳಿದವರಿಗೆ ಈಗ ಇವೆಲ್ಲವೂ ನೆನಪಾಗುತ್ತಿದೆಯಾ? ಕೆಲವೆಡೆ ಅಕ್ರಮ ಆಗಿದೆ ಎಂದಾದರೆ ನಿಮ್ಮ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರುಗಳೇನು ಕತ್ತೆ ಕಾಯುತ್ತಿದ್ದರಾ? ಸರ್ಕಾರದಿಂದ ನೂರಾರು ಕೋಟಿ ಸಂಬಳ ಪಡೆದವರು ಏನು ಮಾಡುತ್ತಿದ್ದರು ಎಂದವರು ಪ್ರಶ್ನಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

Vasthu Tips: ಮನೆಯಲ್ಲಿ ನೀರಿನ ಕಾರಂಜಿ ಇಡುತ್ತಿದ್ದೀರಾ? ಹಾಗಾದ್ರೆ ಈ ದಿಕ್ಕುಗಳ ಬಗ್ಗೆ ತಿಳಿದಿರಲಿ! – Kannada News | Vastu Water Fountain Placement: Boost Home Prosperity and Peace with Feng Shui Tips

ಇತ್ತೀಚಿನ ದಿನಗಳಲ್ಲಿ ಮನೆಗಳಲ್ಲಿ ನೀರಿನ ಕಾರಂಜಿಗಳನ್ನು (Water Fountain) ಅಳವಡಿಸುವ ಪ್ರವೃತ್ತಿ ಗಣನೀಯವಾಗಿ ಹೆಚ್ಚಾಗಿದೆ. ಮಾರುಕಟ್ಟೆಯಲ್ಲಿ ವಿಭಿನ್ನ ವಿನ್ಯಾಸಗಳಲ್ಲಿ ಲಭ್ಯವಿರುವ ಈ ಸುಂದರವಾದ ನೀರಿನ ಕಾರಂಜಿಗಳು ಮನೆಯ ಸೌಂದರ್ಯವನ್ನು ಹೆಚ್ಚಿಸುವುದಲ್ಲದೆ, ವಾತಾವರಣವನ್ನು ಹೆಚ್ಚು ಶಾಂತಿಯುತ ಮತ್ತು ಆರಾಮದಾಯಕವಾಗಿಸುತ್ತವೆ. ಹರಿಯುವ ನೀರಿನ ನಿರಂತರ ಮಧುರವಾದ ಶಬ್ದವು ಮನಸ್ಸಿಗೆ ನೆಮ್ಮದಿ ನೀಡುವುದರ ಜೊತೆಗೆ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಕಾಪಾಡಿಕೊಳ್ಳಲು ನೆರವಾಗುತ್ತದೆ.

ವಾಸ್ತು ಮತ್ತು ಫೆಂಗ್ ಶೂಯಿ ಪ್ರಕಾರ, ಹರಿಯುವ ನೀರನ್ನು ಸಕಾರಾತ್ಮಕ ಶಕ್ತಿ ಮತ್ತು ಸಂಪತ್ತಿನ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದೇ ಕಾರಣಕ್ಕೆ ಜನರು ತಮ್ಮ ಮನೆಗಳಲ್ಲಿ ಕಾರಂಜಿಗಳನ್ನು ಇರಿಸಲು ಇಷ್ಟಪಡುತ್ತಾರೆ. ಆದರೆ, ಇದನ್ನು ವಾಸ್ತು ಪ್ರಕಾರ ಸರಿಯಾದ ದಿಕ್ಕಿನಲ್ಲಿ ಇಡುವುದು ಅಷ್ಟೇ ಮುಖ್ಯವಾಗಿದೆ.

ಇದನ್ನೂ ಓದಿ: ಫ್ಯಾಶನ್​​ಗಾಗಿ ವಜ್ರ ಧರಿಸುವ ಮುನ್ನ ಎಚ್ಚರ! ಈ ರಾಶಿಯವರು ವಜ್ರ ಧರಿಸಿದರೆ ಕಷ್ಟ ತಪ್ಪಿದ್ದಲ್ಲ!

ಈ ದಿಕ್ಕುಗಳು ಅತ್ಯಂತ ಶುಭ:

  • ಉತ್ತರ ದಿಕ್ಕು (ಕುಬೇರನ ಮೂಲೆ): ಮನೆಯ ಉತ್ತರ ದಿಕ್ಕಿನಲ್ಲಿ ನೀರಿನ ಕಾರಂಜಿ ಇಡುವುದು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ. ಉತ್ತರ ದಿಕ್ಕನ್ನು ಸಂಪತ್ತಿನ ದೇವನಾದ ಕುಬೇರನ ದಿಕ್ಕು ಎಂದು ಪರಿಗಣಿಸಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಕಾರಂಜಿಯನ್ನು ಇಲ್ಲಿ ಇಡುವುದರಿಂದ ಮನೆಯಲ್ಲಿ ಸಂಪತ್ತು ಮತ್ತು ಸಮೃದ್ಧಿ ಹೆಚ್ಚುತ್ತದೆ.
  • ಈಶಾನ್ಯ ದಿಕ್ಕು: ನೀರಿನ ಕಾರಂಜಿಯನ್ನು ಈಶಾನ್ಯ ದಿಕ್ಕಿನಲ್ಲಿಯೂ ಇಡಬಹುದು. ಈ ದಿಕ್ಕಿನಲ್ಲಿ ಜಲ ಕಾರಂಜಿ ಇಡುವುದರಿಂದ ಕುಟುಂಬಕ್ಕೆ ಸಂತೋಷ, ಶಾಂತಿ ಮತ್ತು ನೆಮ್ಮದಿ ದೊರೆಯುತ್ತದೆ.
  • ಪೂರ್ವ ದಿಕ್ಕು: ಒಂದು ವೇಳೆ ಉತ್ತರ ಅಥವಾ ಈಶಾನ್ಯ ದಿಕ್ಕುಗಳಲ್ಲಿ ಸೂಕ್ತವಾದ ಸ್ಥಳವಿಲ್ಲದಿದ್ದರೆ, ನೀವು ಅದನ್ನು ಪೂರ್ವ ದಿಕ್ಕಿನಲ್ಲಿಯೂ ಇಡಬಹುದು.

ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ:

ಮನೆಯ ಮುಖ್ಯ ಸಭಾಂಗಣದಲ್ಲಿ (Living Room) ಅಥವಾ ಮುಖ್ಯ ಬಾಗಿಲಿನ ಒಳಭಾಗದಲ್ಲಿ ಕಾರಂಜಿಯನ್ನು ಇಡುವುದು ಸೂಕ್ತ. ಆದರೆ, ನೀರಿನ ಕಾರಂಜಿಯಿಂದ ಹರಿಯುವ ನೀರಿನ ದಿಕ್ಕು ಯಾವಾಗಲೂ ಮನೆಯ ಒಳಭಾಗದ ಕಡೆಗೆ ಇರಬೇಕು ಎಂಬುದನ್ನು ನೆನಪಿನಲ್ಲಿಡಿ. ಇದು ಸಂಪತ್ತು ಮನೆಗೆ ಹರಿದುಬರುವುದನ್ನು ಸೂಚಿಸುತ್ತದೆ. ನೀವು ಬಯಸಿದರೆ ಇದನ್ನು ಬಾಲ್ಕನಿ ಅಥವಾ ಉದ್ಯಾನದಲ್ಲೂ ಇಡಬಹುದು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೈದರಾಬಾದ್ ರಸ್ತೆಗೆ ‘ಡೊನಾಲ್ಡ್ ಟ್ರಂಪ್’ ಹೆಸರು: ರೇವಂತ್ ರೆಡ್ಡಿ ಸರ್ಕಾರದ ನಿರ್ಧಾರಕ್ಕೆ ತೀವ್ರ ರಾಜಕೀಯ ವಿರೋಧ – Kannada News | Hyderabad Road Named After Donald Trump: Telangana Govt Move Sparks Political Row

ಹೈದರಾಬಾದ್, ಜೂನ್ 17: ಜಾಗತಿಕ ಐಟಿ ಮತ್ತು ಹೂಡಿಕೆ ಹಬ್ ಆಗಿ ಬೆಳೆಯುತ್ತಿರುವ ಹೈದರಾಬಾದ್‌ನ ರಸ್ತೆಯೊಂದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ಹೆಸರಿಡಲು ತೆಲಂಗಾಣದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಆದರೆ, ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಈ ನಿರ್ಧಾರಕ್ಕೆ ಎಡಪಕ್ಷಗಳಿಂದ ತೀವ್ರ ರಾಜಕೀಯ ವಿರೋಧ ವ್ಯಕ್ತವಾಗಿದ್ದು, ಇದು ಕಾಂಗ್ರೆಸ್‌ನ ಸದ್ಧಾಂತಿಕ ನಿಲುವನ್ನೇ ಪ್ರಶ್ನಿಸುವಂತೆ ಮಾಡಿದೆ.

ಸರ್ಕಾರದ ನಿರ್ಧಾರವೇನು? ಯೋಜನೆ ಏನು?
ಹೈದರಾಬಾದ್‌ನ ಐಟಿ ಕಾರಿಡಾರ್‌ನಲ್ಲಿರುವ ಅಮೆರಿಕನ್ ಕಾನ್ಸುಲೇಟ್‌ಗೆ (ಅಮೆರಿಕ ರಾಯಭಾರ ಕಚೇರಿ) ಸಂಪರ್ಕ ಕಲ್ಪಿಸುವ ರಸ್ತೆಗೆ ‘ಡೊನಾಲ್ಡ್ ಟ್ರಂಪ್ ಅವೆನ್ಯೂ’ ಎಂದು ಹೆಸರಿಡಲು ತೆಲಂಗಾಣ ಸರ್ಕಾರ ತೀರ್ಮಾನಿಸಿದೆ. ಜುಲೈ 4ರ ಅಮೆರಿಕದ ಸ್ವಾತಂತ್ರ್ಯ ದಿನಾಚರಣೆಗೆ ಕೆಲವು ದಿನಗಳ ಮುಂಚಿತವಾಗಿ, ಅಂದರೆ ಜೂನ್ 23 ರಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ಅವರ ಸಮ್ಮುಖದಲ್ಲಿ ಈ ರಸ್ತೆಯನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ತೆಲಂಗಾಣ ಮತ್ತು ಅಮೆರಿಕ ನಡುವಿನ ವ್ಯಾಪಾರ ಹಾಗೂ ರಾಜತಾಂತ್ರಿಕ ಸಂಬಂಧಗಳನ್ನು ಬಲಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ತೆಲಂಗಾಣ ಸರ್ಕಾರದ ಈ ಹೆಜ್ಜೆಯನ್ನು ಸಿಪಿಐ(ಎಂ) ಹಿರಿಯ ನಾಯಕಿ ಎಂ.ಎ. ಬೇಬಿ ತೀವ್ರವಾಗಿ ಖಂಡಿಸಿದ್ದಾರೆ. ವಿಯೆಟ್ನಾಂ ಯುದ್ಧದ ಸಮಯದಲ್ಲಿ ಅಮೆರಿಕದ ಸಾಮ್ರಾಜ್ಯಶಾಹಿಯನ್ನು ವಿರೋಧಿಸಿ ಭಾರತವು ಕೋಲ್ಕತ್ತಾದ ಅಮೆರಿಕ ಕಾನ್ಸುಲೇಟ್ ರಸ್ತೆಗೆ ಕಮ್ಯುನಿಸ್ಟ್ ನಾಯಕ ‘ಹೋ ಚಿ ಮಿನ್ಹ್’ ಹೆಸರಿಟ್ಟಿದ್ದ ಇತಿಹಾಸವನ್ನು ಅವರು ನೆನಪಿಸಿದ್ದಾರೆ.

ಇಂದು ಇರಾನ್ ಬಿಕ್ಕಟ್ಟು, ಗಾಜಾ ಮಾರಣಹೋಮ ಮತ್ತು ವೆನೆಜುವೆಲಾದಲ್ಲಿ ಅಮೆರಿಕದ ದೌರ್ಜನ್ಯ ಮುಂದುವರೆದಿದೆ. ಇತ್ತೀಚೆಗಷ್ಟೇ ಅಮೆರಿಕದ ದಾಳಿಗೆ ಮೂವರು ಭಾರತೀಯ ನಾವಿಕರು ಬಲಿಯಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ನಮ್ಮ ಕಾಲದ ಹಿಟ್ಲರ್‌ನಂತಿರುವ ಡೊನಾಲ್ಡ್ ಟ್ರಂಪ್ ಹೆಸರನ್ನು ರಸ್ತೆಗೆ ಇಡುತ್ತಿರುವುದು ಭಾರತದ ಸಾರ್ವಭೌಮತ್ವ ಮತ್ತು ಸ್ವಾಭಿಮಾನಕ್ಕೆ ಧಕ್ಕೆ ತರುವಂತಹದ್ದು ಎಂದು ಬೇಬಿ ಕಿಡಿಕಾರಿದ್ದಾರೆ. ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯುವಂತೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸಬೇಕು ಎಂದು ಅವರು ವಿನಂತಿಸಿದ್ದಾರೆ.

ಮತ್ತಷ್ಟು ಓದಿ: ಇಸ್ರೇಲ್ ಕೈಲಾಗದಿದ್ದರೆ ಸಿರಿಯಾ ನಿಭಾಯಿಸಲಿ; ಹೆಜ್ಬುಲ್ಲಾ ನಿಗ್ರಹಕ್ಕೆ ಟ್ರಂಪ್ ಐಡಿಯಾ

ಹೈದರಾಬಾದ್‌ನಲ್ಲಿ ಜಾಗತಿಕ ಕಂಪನಿಗಳ ಹೂಡಿಕೆ ಮಹಾಪೂರ
ಮತ್ತೊಂದೆಡೆ, ಅಮೆರಿಕ ಮತ್ತು ಜಾಗತಿಕ ಕಂಪನಿಗಳನ್ನು ಆಕರ್ಷಿಸುವಲ್ಲಿ ಹೈದರಾಬಾದ್ ಮುಂಚೂಣಿಯಲ್ಲಿದೆ. ಗೂಗಲ್, ಮೈಕ್ರೋಸಾಫ್ಟ್ ಮತ್ತು ಅಮೆಜಾನ್ ಮಾತ್ರವಲ್ಲದೆ ಇತ್ತೀಚಿನ ವರ್ಷಗಳಲ್ಲಿ ಕಾಸ್ಟ್ಕೊ, ಮೆಕ್‌ಡೊನಾಲ್ಡ್ಸ್, ವ್ಯಾನ್‌ಗಾರ್ಡ್ ಮತ್ತು ಟಿ-ಮೊಬೈಲ್‌ನಂತಹ ಫಾರ್ಚೂನ್ 500 ಕಂಪನಿಗಳು ನಗರದಲ್ಲಿ ತಮ್ಮ ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು (GCC) ಸ್ಥಾಪಿಸಿವೆ. ನಾಸ್ಕಾಂ (NASSCOM) ಸಂಸ್ಥೆಯ ‘GCC ಲ್ಯಾಂಡ್‌ಸ್ಕೇಪ್ ವರದಿ – 2026’ ಪ್ರಕಾರ, ಭಾರತದಲ್ಲಿ ಆರಂಭವಾದ ಹೊಸ ಬ್ಯಾಂಕಿಂಗ್ ಮತ್ತು ಆರ್ಥಿಕ ಸೇವಾ ಕೇಂದ್ರಗಳಲ್ಲಿ ಅರ್ಧದಷ್ಟು ಹೈದರಾಬಾದ್‌ನಲ್ಲೇ ಇವೆ.

ಇದೇ ಕಾರಣಕ್ಕೆ ಗೂಗಲ್ ಹಾಗೂ ಮೈಕ್ರೋಸಾಫ್ಟ್ ಕಂಪನಿಗಳ ಹೆಸರನ್ನೂ ಪ್ರಮುಖ ರಸ್ತೆಗಳಿಗೆ ಇಡಲು ಸರ್ಕಾರ ಆಲೋಚಿಸುತ್ತಿದೆ.

ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್ ಗಾಂಧಿ ಅವರು ರಾಷ್ಟ್ರಮಟ್ಟದಲ್ಲಿ ಅಮೆರಿಕದ ವಿದೇಶಾಂಗ ನೀತಿಗಳು ಮತ್ತು ಡೊನಾಲ್ಡ್ ಟ್ರಂಪ್ ಅವರ ನಿರ್ಧಾರಗಳನ್ನು ಬಹಿರಂಗವಾಗಿ ಟೀಕಿಸುತ್ತಿರುತ್ತಾರೆ. ಆದರೆ, ಅದೇ ಕಾಂಗ್ರೆಸ್ ಆಡಳಿತವಿರುವ ತೆಲಂಗಾಣದಲ್ಲಿ ಟ್ರಂಪ್ ಅವರಿಗೆ ರಸ್ತೆ ಹೆಸರಿಡುವ ಮೂಲಕ ಮಣೆ ಹಾಕುತ್ತಿರುವುದು ಈಗ ದೊಡ್ಡ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ – Kannada News | Why Bigg Boss Fame Hanumantha Rejected Movie Offers? Shocking Reason Revealed

ಸಾಕಷ್ಟು ಫೇಮ್ ಸಿಕ್ಕ ಹೊರತಾಗಿಯೂ ಹನುಮಂತ ಅವರು ಸಿನಿಮಾ ಮಾಡುತ್ತಿಲ್ಲ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಕಡ್ಡಿ ಮುರಿದಂತೆ ಹೇಳಿದ್ದಾರೆ. ‘ದೊಡ್ಡ ದೊಡ್ಡ ಹೀರೋಗಳ ಸಿನಿಮಾಗಳೇ ಓಡುತ್ತಿಲ್ಲ. ಹೀಗಿರುವಾಗ ನಮ್ಮ ಸಿನಿಮಾಗಳನ್ನು ಯಾರು ನೋಡುತ್ತಾರೆ? ಚೆನ್ನಾಗಿರುವ ಆಫರ್​​​ಗಳೇ ಬಂದಿದ್ದವು. ಆದರೆ, ನಾನು ಒಪ್ಪಿಕೊಂಡಿಲ್ಲ. ನನ್ನ ಬದಲು ಇನ್ಯಾರೋ ಮಾಡ್ತಾರೆ. ಅವರಿಗೂ ಚಾನ್ಸ್ ಸಿಕ್ಕಂತೆ ಆಗುತ್ತದೆ. ನಾನು ಊರಲ್ಲಿ ಇದ್ದೆ. ಮನೆ ಕಟ್ಟಿಸುತ್ತಾ ಇದ್ದೇನೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Gold Rate: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆ; 25 ರೂ ತಗ್ಗಿದ ಬಂಗಾರದ ದರ – Kannada News | Gold Price Today on 17th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 17: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆಯಾಗಿದೆ. ನಿನ್ನೆಯಂತೆ ಇವತ್ತೂ ಸ್ವಲ್ಪ ತಗ್ಗಿದೆ. ನಿನ್ನೆ ಗ್ರಾಮ್​ಗೆ 15 ರೂ ಇಳಿದಿದ್ದ ಬಂಗಾರದ ದರ (Gold Rates) ಇವತ್ತು 25 ರೂ ಕಡಿಮೆಗೊಂಡಿದೆ. ಎರಡು ದಿನದಲ್ಲಿ 40 ರೂ ಇಳಿದಂತಾಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಹೆಚ್ಚಳ ಆಗಿರುವುದು ವಿಶೇಷ. ಬೆಳ್ಳಿ ಬೆಲೆ ನಿನ್ನೆಯಂತೆ ಇವತ್ತೂ ಬದಲಾವಣೆಗೊಂಡಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,51,100 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,38,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 17ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,110 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,850 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,332 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,110 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,850 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,850 ರೂ
  • ಚೆನ್ನೈ: 14,030 ರೂ
  • ಮುಂಬೈ: 13,850 ರೂ
  • ದೆಹಲಿ: 13,865 ರೂ
  • ಕೋಲ್ಕತಾ: 13,850 ರೂ
  • ಕೇರಳ: 13,850 ರೂ
  • ಅಹ್ಮದಾಬಾದ್: 13,855 ರೂ
  • ಜೈಪುರ್: 13,865 ರೂ
  • ಲಕ್ನೋ: 13,865 ರೂ
  • ಭುವನೇಶ್ವರ್: 13,850 ರೂ

ಇದನ್ನೂ ಓದಿ: E20 ಪೆಟ್ರೋಲ್ ಹಾಕಿಸುವ ವಾಹನಗಳ ಇನ್ಷೂರೆನ್ಸ್ ಕ್ಲೇಮ್ ತಿರಸ್ಕೃತವಾಗುತ್ತದಾ? ಸರ್ಕಾರದ ಸ್ಪಷ್ಟನೆ ಇದು

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 582 ರಿಂಗಿಟ್ (13,515 ರುಪಾಯಿ)
  • ದುಬೈ: 522.25 ಡಿರಾಮ್ (13,427 ರುಪಾಯಿ)
  • ಅಮೆರಿಕ: 142.50 ಡಾಲರ್ (13,460 ರುಪಾಯಿ)
  • ಸಿಂಗಾಪುರ: 190.60 ಸಿಂಗಾಪುರ್ ಡಾಲರ್ (14,049 ರುಪಾಯಿ)
  • ಕತಾರ್: 521.50 ಕತಾರಿ ರಿಯಾಲ್ (13,530 ರೂ)
  • ಸೌದಿ ಅರೇಬಿಯಾ: 536 ಸೌದಿ ರಿಯಾಲ್ (13,493 ರುಪಾಯಿ)
  • ಓಮನ್: 55 ಒಮಾನಿ ರಿಯಾಲ್ (13,496 ರುಪಾಯಿ)
  • ಕುವೇತ್: 43.84 ಕುವೇತಿ ದಿನಾರ್ (13,493 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 265 ರೂ
  • ಚೆನ್ನೈ: 275 ರೂ
  • ಮುಂಬೈ: 265 ರೂ
  • ದೆಹಲಿ: 265 ರೂ
  • ಕೋಲ್ಕತಾ: 265 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 265 ರೂ
  • ಜೈಪುರ್: 265 ರೂ
  • ಲಕ್ನೋ: 265 ರೂ
  • ಭುವನೇಶ್ವರ್: 275 ರೂ
  • ಪುಣೆ: 265

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Video: ಸಹರಾ ಮರುಭೂಮಿಯಲ್ಲಿ ಒಂಟೆ ಮೇಲೆ ಕುಳಿತು ಝೂಮ್ ಮೀಟಿಂಗ್ ಹಾಜರಾದ ಉದ್ಯೋಗಿ – Kannada News | Man sits on camel in Sahara desert to participate in Zoom meeting

ಕೆಲವರಿಗೆ ಕೆಲಸದ ಒತ್ತಡ (Work stress) ಎಷ್ಟು ಇರುತ್ತದೆ ಅಂದ್ರೆ ವೈಯುಕ್ತಿಕ ಜೀವನವನ್ನು ಎಂಜಾಯ್ ಮಾಡಲು ಟೈಮ್ ಇಲ್ಲ. ಇನ್ನು ವರ್ಕ್ ಫ್ರಮ್ ಹೋಮ್ ಉದ್ಯೋಗಿಗಳಂತೂ ಲ್ಯಾಪ್ ಟಾಪ್ ಬಿಟ್ಟು ಕದಲಲ್ಲ. ಆದರೆ ಇಲ್ಲೊಬ್ಬ ವ್ಯಕ್ತಿಯು ಸಹರಾ ಮರುಭೂಮಿಯಲ್ಲಿ (Sahara desert) ಒಂಟೆ ಮೇಲೆ ಕುಳಿತು ಆಫೀಸಿನ ಝೂಮ್ ಮೀಟಿಂಗ್‌ಗೆ ಹಾಜರಾಗಿದ್ದಾನೆ. ಈ ವಿಡಿಯೋ ನೆಟ್ಟಿಗರ ಗಮನ ಸೆಳೆದಿದ್ದು, ಕೆಲಸದ ಮೇಲಿನ ಶ್ರದ್ಧೆ ಅಂದ್ರೆ ಇದು ಎಂದು ಕಾಮೆಂಟ್ ಮಾಡಿದ್ದಾರೆ.

ಪ್ರಣವ್‌ (Pranav) ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಅಸಾಮಾನ್ಯ ಕೆಲಸದ ಸೆಟಪ್ ಅನ್ನು ತೋರಿಸುತ್ತದೆ. ಸಹಾರಾ ಮರುಭೂಮಿಯ ಮಧ್ಯದಲ್ಲಿ ಒಂಟೆಯ ಮೇಲೆ ಸವಾರಿ ಮಾಡುತ್ತ ಉದ್ಯೋಗಿ ಝೂಮ್ ಮೀಟಿಂಗ್ ಹಾಜರಾಗಿದ್ದಾನೆ. ಈ ಕ್ಲಿಪಿಂಗ್ ನಲ್ಲಿ ವಿಶಾಲವಾದ ಸಹರಾ ಮರುಭೂಮಿಯ ದೃಶ್ಯವನ್ನು ನೀವು ನೋಡಬಹುದು. ಇಲ್ಲೊಬ್ಬ ವ್ಯಕ್ತಿ ಒಂಟೆಯ ಮೇಲೆ ವ್ಯಕ್ತಿ ಕುಳಿತುಕೊಂಡಿದ್ದಾನೆ. ಒಂಟೆ ಚಲಿಸುತ್ತಿದ್ದರೂ ಆಫೀಸಿನ ಝೂಮ್ ಮೀಟಿಂಗ್ ಭಾಗಿಯಾಗಿ ಅದರಲ್ಲೇ ಮುಳುಗಿ ಹೋಗಿದ್ದಾನೆ‌.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತುರ್ತು ಶಸ್ತ್ರ ಚಿಕಿತ್ಸೆ ಅಂದ್ರು ವಿಚಿತ್ರ ಬೇಡಿಕೆ ಇಟ್ಟ ಬಾಸ್, ಕಹಿ ಅನುಭವ ಹಂಚಿಕೊಂಡ ಉದ್ಯೋಗಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಈ ಮರುಭೂಮಿಯಲ್ಲಿ ಇಂಟರ್ನೆಟ್ ಸಂಪರ್ಕ ಹೇಗೆ ಸಿಕ್ಕಿತು ಎಂದು ಕೇಳಿದ್ದಾರೆ. ಇನ್ನೊಬ್ಬರು, ಕೆಲಸದ ಮೇಲಿನ ಶ್ರದ್ಧೆಗೆ ನನ್ನದೊಂದು ಸಲಾಂ ಎಂದು ಹೇಳಿದ್ದಾರೆ. ಮತ್ತೊಬ್ಬರು, ಇದು ರಿಮೋಟ್ ಕೆಲಸದ ಆದರ್ಶ ಆವೃತ್ತಿಯನ್ನು ಪ್ರತಿನಿಧಿಸುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪರಿಷತ್ ಚುನಾವಣೆ: ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ

ಬೆಂಗಳೂರು, ಜೂನ್​​ 17: ಪರಿಷತ್ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ನಡೆಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಜೆಡಿಎಸ್ ಪಕ್ಷ ಇಂತಹ ಯಾವುದೇ ಆಪರೇಷನ್ ನಡೆಸುತ್ತಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಅವರ ಕೈಯಲ್ಲಿದೆ. ಮ್ಯಾನ್ ಪವರ್, ಮಸಲ್ ಪವರ್, ಹಣದ ಪವರ್ ಎಲ್ಲಾ ಇಟ್ಕೊಂಡವ್ರೆ. ಅವರ ಮುಂದೆ ನಾವು ಫೈಟ್ ಮಾಡಕ್ಕಾಗುತ್ತಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಜೆಡಿಎಸ್ ತನ್ನ ಪಕ್ಷದ ಮತಗಳು ಚಲ್ಲಾಪಿಲ್ಲಿ ಆಗಬಾರದು, ಒಟ್ಟಾಗಿರಬೇಕು ಎಂಬ ಉದ್ದೇಶದಿಂದಲೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಗೆಲ್ಲುವ ಉದ್ದೇಶದಿಂದ ಕುತಂತ್ರದ ಮಾರ್ಗ ಅನುಸರಿಸುವ ಪ್ರಶ್ನೆಯೇ ಇಲ್ಲ. ನಮ್ಮ ಅಭ್ಯರ್ಥಿ ಆತ್ಮಸಾಕ್ಷಿ ಮತವನ್ನು ನೀಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಸರ್ಪ್ಲಸ್ ಮತಗಳ ಬೆಂಬಲಕ್ಕಾಗಿ ಬಿಜೆಪಿ ನಾಯಕರಿಗೆ ಮನವಿ ಮಾಡಲಾಗಿದೆ. ಇದು ನಮ್ಮ ಮತಗಳನ್ನು ಭದ್ರವಾಗಿ ಇಟ್ಟುಕೊಳ್ಳುವ ಸಲುವಾಗಿ ಮಾಡಿದ ಪ್ರಯತ್ನವಷ್ಟೇ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

‘ನರಗಳು ಬ್ಲಾಕ ಆಗಿವೆ’; ಆರೋಗ್ಯದ ಬಗ್ಗೆ ಸೋನು ನಿಗಮ್ ಆತಂಕಕಾರಿ ಮಾಹಿತಿ – Kannada News | Sonu Nigam’s Nerve Problem: Singer Faces Health Challenge, Vows to Perform

ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಅವರು ಸದ್ಯ ತೀವ್ರವಾದ ನರಗಳ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದಾಗ್ಯೂ, ಅವರು ತಾವು ಮುಂಚಿತವಾಗಿ ಒಪ್ಪಿಕೊಂಡಿರುವ ಸಂಗೀತ ಕಚೇರಿಯನ್ನು ರದ್ದುಗೊಳಿಸದೆ, ಎಂದಿನಂತೆ ವೇದಿಕೆ ಏರಲು ಸಜ್ಜಾಗಿದ್ದಾರೆ. ಮುಂಬೈನಲ್ಲಿ ನಡೆಯಲಿರುವ ಲೈವ್ ಪರ್ಫಾರ್ಮೆನ್ಸ್‌ಗೂ ಮುನ್ನ ಸೋನು ನಿಗಮ್ ಅವರು ವಿಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಆರೋಗ್ಯದ ಸ್ಥಿತಿಯ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.

ನೋವಿನ ನಡುವೆ ಚಿಕಿತ್ಸೆ: ಸೋನು ನಿಗಮ್ ಮಾತು

ತಮ್ಮ ಅನಾರೋಗ್ಯದ ಕುರಿತು ಮಾತನಾಡಿರುವ ಸೋನು ನಿಗಮ್, ‘ನನ್ನ ನರಗಳು ಬ್ಲಾಕ್ ಆಗಿವೆ. ಕಳೆದ ಒಂದು ವಾರದಿಂದ ಎಂಆರ್‌ಐ ಮತ್ತು ಸಿಟಿ (CT) ಸ್ಕ್ಯಾನ್‌ಗಳನ್ನು ಮಾಡಿಸಿಕೊಳ್ಳುತ್ತಿದ್ದೇನೆ ಹಾಗೂ ಸಾಕಷ್ಟು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ’ ಎಂದು ಹೇಳಿದ್ದಾರೆ. ಚಿಕಿತ್ಸೆಯ ಭಾಗವಾಗಿ ನಡೆಯುತ್ತಿರುವ ಫಿಸಿಯೋಥೆರಪಿ ಸೆಷನ್‌ಗಳು ಅತ್ಯಂತ ನೋವಿನಿಂದ ಕೂಡಿವೆ ಎಂದಿರುವ ಅವರು, ಸದ್ಯ ನೋವು ನಿವಾರಕ ಮಾತ್ರೆಗಳ ಸಹಾಯದಿಂದ ನೋವನ್ನು ತಡೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ‘ಕನ್ನಡದ ಹೀರೋಗಳಿಗೆ ಇದನ್ನು ಹೇಳೋ ಗಟ್ಸ್ ಇದೆಯಾ; ಸೋನು ನಿಗಮ್ ಹೀಗೆ ಹೇಳಿದ್ರಾ?

ಗಂಟಲಿನ ಮೇಲೂ ಬಿದ್ದಿದೆ ಪ್ರಭಾವ!

ನರಗಳನ್ನು ಸಡಿಲಗೊಳಿಸಲು ವೈದ್ಯರು ನೀಡಿರುವ ಹೈ-ಡೋಸ್ ಔಷಧಿಗಳಿಂದಾಗಿ ಸೋನು ನಿಗಮ್ ಅವರ ಗಂಟಲಿನ ಧ್ವನಿಯಲ್ಲೂ ಏರುಪೇರಾಗಿದೆ. ‘ಮಾತ್ರೆಗಳ ಕಾರಣದಿಂದಾಗಿ ನನ್ನ ಗಂಟಲು ಕೂಡ ಸ್ವಲ್ಪ ಭಾರವಾದಂತೆ ಅನಿಸುತ್ತಿದೆ’ ಎಂದು ಅವರು ಹೇಳಿದ್ದಾರೆ. ಸಾಮಾನ್ಯವಾಗಿ ಗಾಯಕರಿಗೆ ಲೈವ್ ಶೋ ಇರುವಾಗ ಧ್ವನಿಯಲ್ಲಿ ಸಣ್ಣ ಬದಲಾವಣೆಯಾದರೂ ಆತಂಕ ಮೂಡಿಸುತ್ತದೆ. ಆದರೆ ಸೋನು ನಿಗಮ್ ಮಾತ್ರ ಯಾವುದಕ್ಕೂ ಧೃತಿಗೆಡದೆ ಸ್ಟೇಜ್ ಹತ್ತಲು ನಿರ್ಧರಿಸಿದ್ದಾರೆ.

ಅಭಿಮಾನಿಗಳಿಂದ ಹಾರೈಕೆ:

ತುಂಬಾ ದಿನಗಳ ನಂತರ ಮುಂಬೈನಲ್ಲಿ ವೇದಿಕೆ ಏರುತ್ತಿರುವುದರಿಂದ, ಯಾವುದೇ ಕಾರಣಕ್ಕೂ ಶೋ ಕ್ಯಾನ್ಸಲ್ ಮಾಡುವುದಿಲ್ಲ ಎಂದು ಸೋನು ಸ್ಪಷ್ಟಪಡಿಸಿದ್ದಾರೆ. ಗಾಯಕರ ಈ ವೃತ್ತಿಪರತೆ ಮತ್ತು ಬದ್ಧತೆಯನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಸೋನು ನಿಗಮ್ ಅವರ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಸಾವಿರಾರು ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗುಜರಾತ್: ಭೀಕರ ರಸ್ತೆ ಅಪಘಾತ, ಲಾರಿಗೆ ಡಿಕ್ಕಿ ಹೊಡೆದ ಸ್ಲೀಪರ್ ಬಸ್, ಆರು ಪ್ರಯಾಣಿಕರು ಸಾವು – Kannada News | Deadly Highway Collision in Vadodara Leaves Six Dead and Several Injured

ವಡೋದರಾ, ಜೂನ್ 17: ಗುಜರಾತ್‌ನ ವಡೋದರಾ-ಜರೋಡ್ ಹೆದ್ದಾರಿಯಲ್ಲಿ ಇಂದು ಮುಂಜಾನೆ ಅತ್ಯಂತ ಭೀಕರ ರಸ್ತೆ ಅಪಘಾತ(Accident)ವೊಂದು ಸಂಭವಿಸಿದೆ. ಚಲಿಸುತ್ತಿದ್ದ ಟ್ರಕ್‌ಗೆ (ಲಾರಿ) ಐಷಾರಾಮಿ ಸ್ಲೀಪರ್ ಬಸ್ಸೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಂಟಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಐಷಾರಾಮಿ ಖಾಸಗಿ ಬಸ್ ರಾಜಸ್ಥಾನದ ಬನ್ಸ್ವಾರಾದಿಂದ ಗುಜರಾತ್‌ನ ಸೂರತ್ ನಗರಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ಜರೋಡ್ ಬಳಿಯ ಹೆದ್ದಾರಿಯಲ್ಲಿರುವ ಕೋಟಂಬಿ ಗ್ರಾಮದ ಹತ್ತಿರ ಬಸ್ ಬಂದಾಗ, ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಟ್ರಕ್‌ಗೆ ಜೋರಾಗಿ ಡಿಕ್ಕಿ ಹೊಡೆದಿದೆ.

ಅಪಘಾತ ಸಂಭವಿಸಿದ ಮುಂಜಾನೆ ಸಮಯದಲ್ಲಿ ಬಸ್ಸಿನಲ್ಲಿದ್ದ ಬಹುತೇಕ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದರು. ಹೀಗಾಗಿ ಯಾರಿಗೂ ತಕ್ಷಣಕ್ಕೆ ಏನು ನಡೆಯುತ್ತಿದೆ ಎಂದು ತಿಳಿಯದೇ, ಹಲವರು ಬಸ್ಸಿನ ಒಳಗೆ ಸಿಲುಕಿಕೊಂಡರು.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ: ಪ್ರತ್ಯೇಕ ದುರಂತಗಳಲ್ಲಿ ನಾಲ್ವರ ದುರ್ಮರಣ, ಮೂವರಿಗೆ ಗಾಯ

ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಜರೋಡ್ ಪೊಲೀಸರು ಮತ್ತು ಎನ್‌ಡಿಆರ್‌ಎಫ್ (NDRF) ರಕ್ಷಣಾ ತಂಡಗಳು ಗ್ಯಾಸ್ ಕಟರ್‌ಗಳೊಂದಿಗೆ ಸ್ಥಳಕ್ಕೆ ಧಾವಿಸಿದವು. ಬಸ್ಸಿನ ಶೀಟ್‌ಗಳನ್ನು ಕತ್ತರಿಸಿ ಒಳಗೆ ಸಿಲುಕಿದ್ದ ಜನರನ್ನು ಹೊರತೆಗೆಯಲಾಯಿತು.

ವಿಡಿಯೋ

ಗಾಯಗೊಂಡಿರುವ ಎಂಟಕ್ಕೂ ಹೆಚ್ಚು ಜನರನ್ನು ತಕ್ಷಣವೇ ಚಿಕಿತ್ಸೆಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸದ್ಯಕ್ಕೆ ಮೃತಪಟ್ಟವರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದ್ದು, ಚಾಲಕ ನಿದ್ದೆಗಣ್ಣಿನಲ್ಲಿದ್ದದ್ದು ಅಪಘಾತಕ್ಕೆ ಕಾರಣವೇ ಅಥವಾ ತಾಂತ್ರಿಕ ದೋಷವೇ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link