nagaraj11081993

ಗಡಿ ಜಿಲ್ಲೆ ಚಾಮರಾಜನಗರದ ರೈತರಿಗೆ ಕಾಡಾನೆ ಕಾಟ: ಬೆಳೆದ ಬೆಳೆ ಕೈಸೇರುವ ಮುನ್ನವೇ ಸರ್ವನಾಶ!

ಚಾಮರಾಜನಗರ, ಮಾರ್ಚ್​​ 30: ಮಾನವ ಕಾಡು ಪ್ರಾಣಿ ಸಂಘರ್ಷಕ್ಕೆ ಕುಖ್ಯಾತು ಪಡೆದ ಜಿಲ್ಲೆಗಳ ಪೈಕಿ ಚಾಮರಾಜನಗರದಲ್ಲಿ ಕಾಡಾನೆಗಳ ಉಪಟಳ ಮತ್ತೆ ಹೆಚ್ಚಾಗಿದೆ. ತಡರಾತ್ರಿ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿಗೆ ನುಗ್ಗಿ ಒಂಟಿ ಸಲಗ ದಾಂಧಲೆ ನಡೆಸಿದ್ದರೆ, ಮಂಚಹಳ್ಳಿ ಬಳಿ ಕಾಡಾನೆ ಹಿಂಡು ರೈತರು ಕಷ್ಟಪಟ್ಟು ಬೆಳೆದಿದ್ದ ಟೊಮ್ಯಾಟೋ ಬೆಳೆಯನ್ನು ಸರ್ವನಾಶ ಮಾಡಿವೆ. ಮಂಜುನಾಥ್ ಎಂಬುವವರ ಜಮೀನಿನಲ್ಲಿ ಕಟಾವು ಮಾಡಿ ಇಟ್ಟಿದ್ದ ಕ್ವಿಂಟಾಲ್​​ಗಟ್ಟಲೆ ಟೊಮ್ಯಾಟೋವನ್ನ ತಿಂದು ತೇಗಿ ಪರಾರಿಯಾಗಿವೆ. ಹೀಗಾಗಿ ಕತ್ತಲಾದರೆ ಸಾಕು ಮನೆಯಿಂದ ಹೊರಬರಲೂ ಈ ಭಾಗದ…

Read More

ಮುಸ್ಲಿಂ ಯುವಕನ ಮದುವೆ ಸಂಭ್ರಮದ ವೇಳೆ ದೈವಕ್ಕೆ ಅವಮಾನ? ವಿವಾದಕ್ಕೆ ಕಾರಣವಾಯ್ತು ವರನ ವೇಷ

ಮಡಿಕೇರಿ, ಮಾರ್ಚ್​​ 30: ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಮುಸ್ಲಿಂ ಯುವಕನೋರ್ವನ ವಿವಾಹದ ಹಿಂದಿನ ದಿನ ಮಧುಮಗನಿಗೆ ಎಲೆಗಳನ್ನ ಸುತ್ತಿ, ಮುಖಕ್ಕೆ ಬಣ್ಣ ಬಳಿದು ಹಾಡುತ್ತಾ ಎಂಜಾಯ್ ಮಾಡಿರೋದೀಗ ಹೊಸ ವಿವಾದ ಹುಟ್ಟುಹಾಕಿದೆ. ಇದು ದೈವ ನರ್ತನವನ್ನು ಹೋಲುತ್ತಿದ್ದು, ತುಳುನಾಡು ಮತ್ತು ಕೊಡಗಿನ ದೈವ ಸಂಸ್ಕೃತಿಗೆ ಅವಮಾನ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮೈ ತುಂಬಾ ಸೊಪ್ಪು, ಬಾಳೆಕೊನೆ, ಮುಖದ ತುಂಬ ಬಣ್ಣ ಮತ್ತು ಕೈಯಲ್ಲಿ ದೊಣ್ಣೆ ಹಿಡಿದಿರೋ ಯುವಕನ ವಿಡಿಯೋ ವೈರಲ್​​ ಆಗಿರುವ ಬೆನ್ನಲ್ಲೇ…

Read More

ಏಪ್ರಿಲ್​​ನಲ್ಲಿ ಈ ರಾಶಿಯವರ ಬದುಕು ಬಂಗಾರ: ಕುಬೇರ ಯೋಗ ನಿಮ್ಮದು

ಈ ತಿಂಗಳು ನಿಮ್ಮ ರಾಶ್ಯಾಧಿಪತಿ ಬುಧನ ಸಂಚಾರ ಮತ್ತು ಹಿಮ್ಮುಖ ಚಲನೆಯ ಗುರುವಿನ ಪ್ರಭಾವದಿಂದಾಗಿ ಜೀವನದ ವಿವಿಧ ಕ್ಷೇತ್ರಗಳಲ್ಲಿ ಮಿಶ್ರಫಲಗಳು ಕಂಡುಬರಲಿವೆ. ಏಪ್ರಿಲ್ ಮಾಸದ ಮಿಥುನ ರಾಶಿಯ ಭವಿಷ್ಯದ ಸಮಗ್ರ ನೋಟ ಇಲ್ಲಿದೆ. ಇದರ ಆಧಾರದಲ್ಲಿ ನಿಮ್ಮ ಜೀವನವನ್ನು ರೂಪಿಸಿಕೊಳ್ಳಬಹುದು ​ ​ಉದ್ಯೋಗ ಮತ್ತು ವೃತ್ತಿಜೀವನ ​ಉದ್ಯೋಗ ಕ್ಷೇತ್ರದಲ್ಲಿ ಈ ತಿಂಗಳು ನಿಮಗೆ ಶುಭ ಫಲಗಳು ಹೆಚ್ಚಾಗಿವೆ. ದಶಮ ಸ್ಥಾನದ ಮೇಲೆ ಗ್ರಹಗಳ ಶುಭ ದೃಷ್ಟಿ ಇರುವುದರಿಂದ ಕೆಲಸದ ಸ್ಥಳದಲ್ಲಿ ನಿಮ್ಮ ಪ್ರಭಾವ ಹೆಚ್ಚಲಿದೆ. ​ಹೊಸ ಜವಾಬ್ದಾರಿಗಳು…

Read More

‘ಧುರಂಧರ್ 2’ ನಟಿ ಸಾರಾ ಅರ್ಜುನ್​ಗೆ ಫ್ಯಾನ್ಸ್ ಮುತ್ತಿಗೆ: ಮಗಳಿಗೆ ಬಾಡಿಗಾರ್ಡ್ ಆದ ತಂದೆ

‘ಧುರಂಧರ್ 2’ (Dhurandhar 2) ಚಿತ್ರದ ಅಭೂತಪೂರ್ವ ಯಶಸ್ಸಿನಿಂದ ನಟಿ ಸಾರಾ ಅರ್ಜುನ್ ಅವರಿಗೆ ಖ್ಯಾತಿ ಹೆಚ್ಚಾಗಿದೆ. ಸಾರಾ ಅರ್ಜುನ್ ಅವರಿಗೆ ಕ್ರಿಕೆಟ್ ಬಗ್ಗೆಯೂ ಕ್ರೇಜ್ ಇದೆ. ಭಾನುವಾರ (ಮಾರ್ಚ್ 29) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಿಸಲು ಅವರು ಆಗಮಿಸಿದ್ದರು. ಆದರೆ, ಪಂದ್ಯ ಮುಗಿದು ಹೊರಬರುವಾಗ ಸಾರಾ ಅರ್ಜುನ್ (Sara Arjun) ಅವರು ಅಭಿಮಾನಿಗಳ ನಡುವೆ ಸಿಲುಕಿಕೊಂಡ ಘಟನೆ ನಡೆದಿದೆ. 20 ವರ್ಷ…

Read More

ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ

ಶಿವಮೊಗ್ಗ, ಮಾರ್ಚ್​ 30: ಖಾಸಗಿ ಬಸ್​​​ ಒಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳದಲ್ಲಿ ನಡೆದಿದೆ. ಬಸ್​ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ  ಗಾಯಾಳುಗಳಿಗೆ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ಬಸ್ ಹೊರಟ್ಟಿತ್ತು. ಮಾರ್ಗ ಮಧ್ಯೆ ಅವಘಡ ಸಂಭವಿಸಿದೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

ಬಿಸಿಲೋ ಬಿಸಿಲು! ಮುಂದಿನ ಒಂದು ವಾರ ಕರ್ನಾಟಕದ ಹವಾಮಾನ ಹೇಗಿರಲಿದೆ? ಮಳೆಯಾಗುವ ಜಿಲ್ಲೆಗಳು ಯಾವುವು?

ಬೆಂಗಳೂರು. ಮಾ.30: ಮುಂದಿನ ಒಂದು ವಾರ ರಾಜ್ಯದಾದ್ಯಂತ ಮಿಶ್ರ ಹವಾಮಾನ ಇರಲಿದ್ದು, ಸುಡು ಬಿಸಿಲಿನ ನಡುವೆಯೇ ವರುಣನ ಸಿಂಚನವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ, ಕರ್ನಾಟಕದಲ್ಲಿ ಮುಂದಿನ ಏಳು ದಿನಗಳ ಕಾಲ ಹವಾಮಾನದಲ್ಲಿ ಗಮನಾರ್ಹ ಬದಲಾವಣೆಗಳು ಕಂಡುಬರಲಿವೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಗರಿಷ್ಠ ತಾಪಮಾನದಲ್ಲಿ 2-3°C ಏರಿಕೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲ ಧಗೆ ಹೆಚ್ಚಿರಲಿದೆ. ಬೆಂಗಳೂರಿನ ಮುಂದಿನ 7…

Read More

ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು

ಶಿವಮೊಗ್ಗ, (ಮಾರ್ಚ್ 30): ಪ್ರೀತಿಸಿ (Love) ಕೇವಲ ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಜೋಡಿ ದುರಂತ ಸಾವು ಕಂಡಿದೆ. ಹೌದು… ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ (Road Accident) ನವ ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಲಾರಿಗೆ ಬೈಕ್​ ಡಿಕ್ಕಿಯಾಗಿದ್ದು, ಬೈಕ್ ನಲ್ಲಿ ಇದ್ದಂತಹ ದಂಪತಿಗಳಾದ ಬಾಬು (30) ಹಾಗೂ ಸಾವಿತ್ರಿ (26) ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಆರು ತಿಂಗಳ ಹಿಂದೆ ಅಷ್ಟೇ ಸಪ್ತಪದಿ ತುಳಿದ್ದರು….

Read More

ಬೇಸಿಗೆಯಲ್ಲಿ ತುಳಸಿ ಗಿಡ ಒಣಗಿ ಹೋಗದಂತೆ ನೋಡಿಕೊಳ್ಳಲು ಈ ಸಿಂಪಲ್‌ ಸಲಹೆ ಪಾಲಿಸಿ

ಮನೆಗಳಲ್ಲಿ ಬಹುಮುಖ್ಯವಾಗಿ ಇರಲೇಬೇಕಾದ ಸಸ್ಯಗಳಲ್ಲಿ ತುಳಸಿ ಗಿಡವೂ ಒಂದು.  ಧಾರ್ಮಿಕ ಮಹತ್ವ ಮತ್ತು ಔಷಧೀಯ ಗುಣಗಳಿಗೆ ಹೆಸರುವಾಸಿಯಾಗಿರುವ ಈ ತುಳಸಿ ಗಿಡ ಬಹುತೇಕ ಎಲ್ಲರ ಮನೆಯಲ್ಲೂ ಇದ್ದೇ ಇರುತ್ತದೆ. ಬೇಸಿಗೆಯ (summer) ವಿಪರೀತ ಶಾಖದ ಕಾರಣದಿಂದಾಗಿ ತುಳಸಿ ಗಿಡ ಬೇಗನೇ ಬಾಡಿ ಅಥವಾ ಒಣಗಿ ಹೋಗುವ ಕಾರಣ ಈ ಸಸ್ಯದ ಬಗ್ಗೆ ಬೇಸಿಗೆಯಲ್ಲಿ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ನಿಮ್ಮ ಮನೆಯ ತುಳಸಿ ಗಿಡ ಕೂಡ ಈ ಉರಿ ಬಿಸಿಲಿಗೆ ಒಣಗಿ ಹೋಗ್ತಿದ್ಯಾ? ಹಾಗಿದ್ರೆ ಈ ಕೆಲವೊಂದು…

Read More

2027ಕ್ಕೆ ಭಾರತದ ಮೊದಲ ಪೂರ್ಣ ಡಿಜಿಟಲ್ ಸೆನ್ಸಸ್; 2026ರ ಏಪ್ರಿಲ್ 1ರಂದು ಮೊದಲ ಹಂತದ ಸೆನ್ಸಸ್ ಆರಂಭ

ನವದೆಹಲಿ, ಮಾರ್ಚ್ 30: ಹದಿನಾರು ವರ್ಷಗಳ ನಂತರ ಭಾರತದಲ್ಲಿ ಮೊದಲ ಬಾರಿಗೆ ಸೆನ್ಸಸ್ ನಡೆಯಲಿದೆ. 2027ರ ಸೆನ್ಸಸ್​ಗೆ ಏಪ್ರಿಲ್ 1ರಂದು ಚಾಲನೆ ಸಿಗಲಿದೆ. ಇದು ಭಾರತದ ಮೊದಲ ಪೂರ್ಣ ಡಿಜಿಟಲ್ ಸೆನ್ಸಸ್ (Census 2027) ಆಗಿರಲಿದೆ. ರಿಜಿಸ್ಟ್ರಾರ್ ಜನರಲ್ ಮತ್ತು ಸೆನ್ಸಸ್ ಕಮಿಷನರ್ ಮೃತ್ಯುಂಜಯ್ ಕುಮಾರ್ ನಾರಾಯಣ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ಅವರ ಪ್ರಕಾರ ಇದು ವಿಶ್ವದಲ್ಲೇ ಅತಿದೊಡ್ಡ ಗಣತಿ ಕಾರ್ಯವಾಗಲಿದೆ. ಭಾರತದಲ್ಲಿ ಇಲ್ಲಿಯವರೆಗೆ 15 ಸೆನ್ಸಸ್​ಗಳು ನಡೆದಿವೆ. ಸ್ವಾತಂತ್ರ್ಯದ ನಂತರ 7 ಸೆನ್ಸಸ್…

Read More

ಬೆಂಗಳೂರಿನಲ್ಲಿ ವಿನಾ ಕಾರಣ ಬೈಕ್ ತಡೆದು ಹಣ ವಸೂಲಿ: ಮೂವರು ಪೊಲೀಸರು ಸಸ್ಪೆಂಡ್

ಬೆಂಗಳೂರು, (ಮಾರ್ಚ್ 30): ಸ್ಮಾರ್ಟ್‌ ಟ್ರಾಫಿಕ್‌ ನಿರ್ವಹಣಾ ವ್ಯವಸ್ಥೆ ಜಾರಿಗೆ ಕಾನೂನು ಸುವ್ಯವಸ್ಥೆ ಹಾಗೂ ಮೇಲ್ವಿಚಾರಣೆ ದೃಷ್ಟಿಯಿಂದ ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿ ಬಾಡಿ ಕ್ಯಾಮೆರಾ (body worn camera) ಬಳಸುವುದು ಕಡ್ಡಾಯವಾಗಿದೆ. ಆದ್ರೆ, ಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ ಪೊಲಿಸ್ ಠಾಣೆಯ (Bengaluru High Grounds Traffic Police Station) ಮೂವರು ಸಿಬ್ಬಂದಿ ಬಾಡಿ ಕ್ಯಾಮೆರಾ ಆಫ್ ಮಾಡಿಕೊಂಡು ವಿನಾ ಕಾರಣ ಬೈಕ್ ನಿಲ್ಲಿಸಿ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದ್ದು, ಸಂಬಂಧ ಇದೀಗ ಮೂವರು ಪೊಲೀಸ್ ಸಿಬ್ಬಂದಿಯನ್ನು…

Read More