Headlines

nagaraj11081993

ಡೆಬಿಟ್​​ ಕಾರ್ಡ್​​ ವಂಚನೆ: ಉಡುಪಿಯ ವ್ಯಕ್ತಿಗೆ 2.12 ಲಕ್ಷ ರೂಪಾಯಿ ದೋಖಾ; ದೂರು ದಾಖಲು – Kannada News | Udupi Man Duped of 2.12 Lakh in Debit Card Fraud After Hospital Payment

ಉಡುಪಿ, ಜೂನ್​​ 17: ರಾಜ್ಯದಲ್ಲಿ ಇತ್ತೀಚೆಗೆ ಸೈಬರ್​​ ವಂಚನೆ ಪ್ರಕರಗಳ ಮೇಲಿಂದ ಮೇಲೆ ವರದಿಯಾಗುತ್ತಿದ್ದು, ಪೊಲೀಸರು ಚಾಪೆ ಕೆಳಗೆ ತೂರಿದರೆ ವಂಚಕರು ರಂಗೋಲಿ ಕೆಳಗೆ ನುಗ್ಗುವ ಕೆಲಸ ಮಾಡುತ್ತಿದ್ದಾರೆ. ಸೈಬರ್​​ ಫ್ರಾಡ್​​ಗಳೀಗ ನಾನಾ ರೂಪಗಳನ್ನು ಪಡೆದುಕೊಂಡಿದ್ದು, ಜನಸಾಮಾನ್ಯರನ್ನು ಸುಲಭವಾಗಿ ಯಾಮಾರಿಸುವ ಕೆಲಸಗಳು ನಡೆಯುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಉಡುಪಿಯಲ್ಲೊಂದು ಪ್ರಕರಣ ನಡೆದಿದೆ. ಡೆಬಿಟ್ ಕಾರ್ಡ್ ಮೂಲಕ ವಂಚನೆ ನಡೆಸಿರುವ ಖದೀಮರು ವ್ಯಕ್ತಿಯೋರ್ವರ ಖಾತೆಯಿಂದ ಬರೋಬ್ಬರಿ 2 ಲಕ್ಷ ರೂಪಾಯಿ ಹಣ ದೋಚಿದ್ದಾರೆ. ದೂರುದಾರರು ಜೂನ್ 3ರಂದು…

Read More

Video: ರಾಂಚಿಯ ಆರ್‌ಎಸ್‌ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ – Kannada News | Ranchi RSS Office Petrol Bomb Attack: Investigation Underway After Midnight Incident

ರಾಂಚಿ, ಜೂನ್ 17: ಜಾರ್ಖಂಡ್ ರಾಜಧಾನಿ ರಾಂಚಿಯ ನಿವಾರಣ್‌ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಾಂತೀಯ ಕಚೇರಿಯ ಮೇಲೆ ಮಂಗಳವಾರ ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ. ಸಕಾಲದಲ್ಲಿ ಮುನ್ನೆಚ್ಚರಿಕೆ ವಹಿಸಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ದೊಡ್ಡ ಪ್ರಮಾಣದ ಆಸ್ತಿ ಹಾನಿ ಸಂಭವಿಸಿಲ್ಲ. ಮಂಗಳವಾರ ಮಧ್ಯರಾತ್ರಿ ಸುಮಾರು 12.36 ರ ವೇಳೆಗೆ ಈ ದಾಳಿ ನಡೆದಿದೆ. ಬುಧವಾರ ಮುಂಜಾನೆ ಆರ್‌ಎಸ್‌ಎಸ್ ಸ್ವಯಂಸೇವಕರು ಪ್ರಾರ್ಥನೆಗಾಗಿ ಸಭಾಂಗಣಕ್ಕೆ ಹೋದಾಗ ಅಲ್ಲಿ ಪೆಟ್ರೋಲ್ ತುಂಬಿದ್ದ ಬಾಟಲಿಗಳು ಪತ್ತೆಯಾಗಿವೆ. ಇದರಿಂದ…

Read More

ಗೋಲು ಬಾರಿಸಿ ಕ್ಷಮೆಯಾಚಿಸಿದ ಯಾಸಿನ್ ಅಯಾರಿ..! – Kannada News | FIFA Wodld Cup 2026: Yasin Ayari Apologizes After Scoring Against Tunisia

FIFA World Cup 2026: ಫಿಫಾ ವಿಶ್ವಕಪ್‌ನಲ್ಲಿ ಸ್ವೀಡನ್ ಪರ ಮೊದಲ ಪಂದ್ಯದಲ್ಲೇ ಎರಡು ಗೋಲು ಬಾರಿಸಿ ಯಾಸಿನ್ ಅಯಾರಿ ಸಖತ್ ಸುದ್ದಿಯಾಗಿದ್ದಾರೆ. ಹೀಗೆ ಸುದ್ದಿಯಾಗಲು ಮುಖ್ಯ ಕಾರಣ 2 ಭರ್ಜರಿ ಗೋಲು ದಾಖಲಿಸಿದರೂ ಸಂಭ್ರಮಿಸದೇ ಇರುವುದು. ಬದಲಾಗಿ ಎದುರಾಳಿ ಅಭಿಮಾನಿಗಳ ಬಳಿ ಕ್ಷಮೆಯಾಚಿಸಿದ್ದಾರೆ. ಮೆಕ್ಸಿಕೋದ ಎಸ್ಟಾಡಿಯೊ ಬಿಬಿವಿಎ ಕ್ರೀಡಾಂಗಣದಲ್ಲಿ ನಡೆದ ಗ್ರೂಪ್ ‘ಎಫ್’ ಪಂದ್ಯದಲ್ಲಿ ಟ್ಯುನಿಝಿಯಾ ಮತ್ತು ಸ್ವೀಡನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನ ಆರಂಭದಿಂದಲೇ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದ ಸ್ವೀಡನ್ ತಂಡವು 5-1 ಅಂತರದಿಂದ…

Read More

ಹಸೆಮಣೆ ಏರಲಿದ್ದಾರೆ ಶರ್ಮಿಳಾ ಮಾಂಡ್ರೆ, ವರ ತಮಿಳು ಸಿನಿಮಾ ನಿರ್ಮಾಪಕ – Kannada News | Sharmila Mandre getting married to Tamil movie producer Sudhan

ಕನ್ನಡದ ಜನಪ್ರಿಯ ನಟಿ ಶರ್ಮಿಳಾ ಮಾಂಡ್ರೆ (Sharmila Mandre) ಮದುವೆ ಆಗಲಿದ್ದಾರೆ. ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ನಟಿಸಿರುವ ಶರ್ಮಿಳಾ ಮಾಂಡ್ರೆ ಇದೀಗ ತಮಿಳುನಾಡಿನ ಸೊಸೆ ಆಗಲಿದ್ದಾರೆ. ಶರ್ಮಿಳಾ ಮಾಂಡ್ರೆ ಅವರ ನಿಶ್ಚಿತಾರ್ಥ ನಿಶ್ಚಯವಾಗಿದ್ದು, ಇದೇ ತಿಂಗಳ 25ನೇ ತಾರೀಖಿನಂದು ಕುಟುಂಬಸ್ಥರ ಸಮ್ಮುಖದಲ್ಲಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ನಡೆಯಲಿದೆ. ಶರ್ಮಿಳಾ ಮಾಂಡ್ರೆ ಅವರು ತಮಿಳುನಾಡಿನ ಸೊಸೆಯಾಗಿ ಹೋಗಲಿದ್ದು, ತಮಿಳು ಚಿತ್ರರಂಗದ ನಿರ್ಮಾಪಕ ಸುಧನ್ ಸುಂಧರಮ್ ಅವರ ಕೈ ಹಿಡಿಯಲಿದ್ದಾರೆ. ಸುಧನ್ ಅವರು ಕೆಲ ವರ್ಷಗಳ ಹಿಂದೆ ಬಿಡುಗಡೆ…

Read More

Jagannath Rath Yatra 2026: ಪುರಿ ಜಗನ್ನಾಥನ ವಿಗ್ರಹಗಳು ಕೈಗಳಿಲ್ಲದೇ ಅಪೂರ್ಣವಾಗಿರಲು ಕಾರಣವೇನು ಗೊತ್ತಾ? – Kannada News | Puri Jagannath Temple: Rath Yatra 2026 Dates and Mysterious Incomplete Idols

ಪುರಿ ಜಗನ್ನಾಥನ ವಿಗ್ರಹಗಳು ಅಪೂರ್ಣImage Credit source: Pinterest ಭಾರತದ ಪವಿತ್ರ ಚಾರ್ ಧಾಮ್‌ಗಳಲ್ಲಿ ಒಂದಾದ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ವಿಶ್ವಪ್ರಸಿದ್ಧವಾಗಿದೆ. ಇಲ್ಲಿ ಸಾಕ್ಷಾತ್ ಶ್ರೀಕೃಷ್ಣನನ್ನು ಜಗನ್ನಾಥನ (ಜಗದ ಒಡೆಯ) ರೂಪದಲ್ಲಿ ಆರಾಧಿಸಲಾಗುತ್ತದೆ. ಈ ಗರ್ಭಗುಡಿಯಲ್ಲಿ ಜಗನ್ನಾಥನೊಂದಿಗೆ ಆತನ ಹಿರಿಯ ಸಹೋದರ ಬಲಭದ್ರ ಮತ್ತು ಸಹೋದರಿ ಸುಭದ್ರೆಯೂ ಒಟ್ಟಿಗೆ ಕುಳಿತು ಭಕ್ತರಿಗೆ ದರ್ಶನ ನೀಡುತ್ತಾರೆ. ಈ ಪುಣ್ಯಕ್ಷೇತ್ರದ ವಿಗ್ರಹಗಳು ನೋಡಲು ವಿಚಿತ್ರವಾಗಿ ಮತ್ತು ಅಪೂರ್ಣವಾಗಿ ಕಂಡರೂ, ಅವುಗಳ ಹಿಂದೆ ಅಪ್ರತಿಮ ಭಕ್ತಿ ಮತ್ತು ಬ್ರಹ್ಮಾಂಡದ ರಹಸ್ಯ…

Read More

ಜೂ. ಎನ್‌ಟಿಆರ್ ಕೈತಪ್ಪಿದ ದೊಡ್ಡ ಚಿತ್ರ? ತಮಿಳು ನಟ ಸೂರ್ಯನ ಎಂಟ್ರಿ – Kannada News | Nelson Dilipkumar’s Next: Is Suriya Replacing Jr. NTR After ‘Jailer 2’?

ತಮಿಳಿನ ಖ್ಯಾತ ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಸದ್ಯ ‘ಜೈಲರ್ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆಯೇ ಅವರ ಮುಂದಿನ ಬಿಗ್ ಬಜೆಟ್ ಸಿನಿಮಾದ ಕುರಿತು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಹೊಸದೊಂದು ಬಿಸಿಬಿಸಿ ಚರ್ಚೆ ಆರಂಭವಾಗಿದೆ. ನೆಲ್ಸನ್ ಅವರ ಮುಂದಿನ ಪ್ರಾಜೆಕ್ಟ್‌ಗೆ ಗ್ಲೋಬಲ್ ಸ್ಟಾರ್ ಜೂನಿಯರ್ ಎನ್‌ಟಿಆರ್ ಬದಲಿಗೆ ಕಾಲಿವುಡ್ ನಟ ಸೂರ್ಯ (Suriya) ನಾಯಕರಾಗಿ ನಟಿಸಲಿದ್ದಾರೆ ಎಂಬ ಬಲವಾದ ಸುದ್ದಿಯೊಂದು ಹರಿದಾಡುತ್ತಿದೆ. 2025ರಲ್ಲಿ ನಿರ್ಮಾಪಕ ನಾಗವಂಶಿ ಅವರು ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದಲ್ಲಿ ಹೊಸ ಚಿತ್ರವೊಂದನ್ನು ನಿರ್ಮಿಸುವುದಾಗಿ…

Read More

ಉದ್ಧವ್ ಬಣಕ್ಕೆ ‘ಬಂಡಾಯ’ ಭೀತಿ: ಲೋಕಸಭಾ ಸ್ಪೀಕರ್‌ಗೆ ಪತ್ರ ಬರೆದ ಯುಬಿಟಿ – Kannada News | Maharashtra Political Crisis: Uddhav Thackeray Writes to Speaker to Halt Rebel MPs

ಮುಂಬೈ, ಜೂನ್ 17: ಮಹಾರಾಷ್ಟ್ರ ರಾಜಕೀಯದಲ್ಲಿ ಆಂತರಿಕ ಭಿನ್ನಾಭಿಪ್ರಾಯ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (UBT) ಪಕ್ಷವು ತನ್ನ ಸಂಸದರು ಪಕ್ಷಾಂತರ ಮಾಡದಂತೆ ತಡೆಯಲು ದೆಹಲಿಯಲ್ಲಿ ದೊಡ್ಡ ರಾಜಕೀಯ ಹೆಜ್ಜೆ ಇಟ್ಟಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಶಿವಸೇನೆ (UBT) ಔಪಚಾರಿಕ ಪತ್ರ ಬರೆದಿದ್ದು, ಸಂಸತ್ತಿನಲ್ಲಿ ತಮ್ಮನ್ನು ಮಾತ್ರ ಅಧಿಕೃತ ರಾಜಕೀಯ ಪಕ್ಷವೆಂದು ಗುರುತಿಸಬೇಕೆಂದು ಕಟ್ಟುನಿಟ್ಟಿನ ಒತ್ತಾಯ ಮಾಡಿದೆ. ಸ್ಪೀಕರ್‌ಗೆ ಬರೆದ ಪತ್ರದಲ್ಲಿ ಏನಿದೆ? ಪಕ್ಷದ ಹಿರಿಯ ಸಂಸದ ಹಾಗೂ ಸಂಸದೀಯ ನಾಯಕ…

Read More

ಪ್ರವಾಸಿಗರ ಸುರಕ್ಷತೆಗೆ ಆದ್ಯತೆ: ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ; ಇಲ್ಲಿದೆ ಮಾಹಿತಿ – Kannada News | No Touching, Feeding or Bathing: New Safety Rules Issued for Karnataka Elephant Camps

ಸಾಂದರ್ಭಿಕ ಚಿತ್ರImage Credit source: captainscrown.com ಬೆಂಗಳೂರು, ಜೂನ್​​ 17: ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ನಿರ್ವಹಣಾ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗಾಗಿ ಕರ್ನಾಟಕ ಅರಣ್ಯ ಇಲಾಖೆ ಮೊದಲ ಬಾರಿಗೆ ಕರ್ನಾಟಕ ಆನೆ ಶಿಬಿರ ಸುರಕ್ಷತಾ ನಿಯಮಾವಳಿ (Karnataka Elephant Camp Safety Protocol) ಜಾರಿಗೊಳಿಸಿದೆ. ಇದರನ್ವಯ ಇನ್ನು ಮುಂದೆ ಪ್ರವಾಸಿಗರು ಆನೆಗಳನ್ನು ವೀಕ್ಷಿಸಲು ಕನಿಷ್ಠ 30 ಅಡಿ ಅಂತರ ಕಾಯ್ದುಕೊಳ್ಳಬೇಕು. ಆನೆಗಳಿಗೆ ಸ್ನಾನ ಮಾಡಿಸುವುದು, ಮುಟ್ಟುವುದು ಅಥವಾ ಆಹಾರ ನೀಡುವುದು ಸಂಪೂರ್ಣ ನಿಷೇಧವಾಗಿರಲಿದೆ….

Read More

Ashada Masa: ಆಷಾಢ ಮಾಸದಲ್ಲಿ ಚಿನ್ನದ ಬೆಲೆ ಕುಸಿಯುವುದೇಕೆ? ಈ ಸಮಯದಲ್ಲಿ ಖರೀದಿಸುವುದು ಅಶುಭವೇ? – Kannada News | Gold and Silver Prices Plummet in Aashadha: Seize the Low Price Opportunity

ಆಷಾಢ ಮಾಸದಲ್ಲಿ ಚಿನ್ನದ ಬೆಲೆImage Credit source: Pinterest ಭಾರತೀಯ ಆರ್ಥಿಕತೆ ಮತ್ತು ಸಂಸ್ಕೃತಿಯಲ್ಲಿ ಹಳದಿ ಲೋಹಕ್ಕೆ (ಚಿನ್ನ) ಯಾವಾಗಲೂ ವಿಶೇಷ ಹಾಗೂ ಪವಿತ್ರವಾದ ಸ್ಥಾನವಿದೆ. ಆದರೆ ಆಷಾಢ ಬಂತು ಅಂದ್ರೆ ಸಾಕು ಚಿನ್ನ, ಬೆಳ್ಳಿ ದರಗಳು ಸಾಮಾನ್ಯವಾಗಿ ಕಡಿಮೆ ಆಗುತ್ತದೆ.  ಆಷಾಢ ಮಾಸ ಜುಲೈ 15 ರಿಂದ ಆರಂಭವಾಗುತ್ತಿದೆ. ಸಾಮಾನ್ಯವಾಗಿ ಈ ಮಾಸದಲ್ಲಿ ಯಾವುದೇ ರೀತಿಯ ಸಾಂಪ್ರದಾಯಿಕ ಶುಭ ಸಂದರ್ಭಗಳು ಬರುವುದಿಲ್ಲ. ಮದುವೆ, ಉಪನಯನ, ಗೃಹಪ್ರವೇಶದಂತಹ ಯಾವುದೇ ದೊಡ್ಡ ಹಬ್ಬ ಹರಿದಿನಗಳು ಅಥವಾ ಮಂಗಲ ಕಾರ್ಯಗಳು…

Read More

Video: ಮಹಿಳೆ ಅಡುಗೆ ಮಾಡುತ್ತಿರುವ ಹೊತ್ತಲ್ಲೇ ಸಿಡಿದ ಪ್ರೆಶರ್ ಕುಕ್ಕರ್ – Kannada News | Pressure Cooker Blast: Viral Video Sparks Kitchen Safety Debate and ISI Mark Importance

ಶಾಜಾಪುರ, ಜೂನ್ 17: ಮಹಿಳೆ ಅಡುಗೆ ಮಾಡುತ್ತಿರುವ ಹೊತ್ತಲ್ಲೇ ಪ್ರೆಶರ್ ಕುಕ್ಕರ್(Cooker) ಸ್ಫೋಟಗೊಂಡು, ಕುಕ್ಕರ್​ನಲ್ಲಿರುವ ಪದಾರ್ಥ ಮಹಿಳೆಯ ಮೇಲೆ ಹಾರಿರುವ ವಿಡಿಯೋ ವೈರಲ್ ಆಗಿದ್ದು, ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ವಿಡಿಯೋದಲ್ಲಿ ಕಾಣಿಸುವಂತೆ ಆರಂಭದಲ್ಲಿ ಎಲ್ಲವೂ ಸಾಮಾನ್ಯವಾಗಿ ಇರುತ್ತದೆ. ಮಹಿಳೆ ಕುಕ್ಕರ್ ಪಕ್ಕದ ಮತ್ತೊಂದು ಒಲೆಯ ಮೇಲೆ ಪಾತ್ರೆಯೊಂದನ್ನು ಇಡಲು ಹೋದ ತಕ್ಷಣವೇ, ಪ್ರೆಶರ್ ಕುಕ್ಕರ್ ಭೀಕರವಾಗಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಇಡೀ ಅಡುಗೆಮನೆ ಕ್ಷಣಾರ್ಧದಲ್ಲಿ ದಟ್ಟವಾದ ಹೊಗೆಯಿಂದ ತುಂಬಿಹೋಗುತ್ತದೆ. ವಿಡಿಯೋ ನೋಡಿದಾಗ ಮಹಿಳೆಗೆ ತೀವ್ರ ಗಾಯಗಳಾಗಿರುವ…

Read More