Headlines

nagaraj11081993

2 ವರ್ಷದಿಂದ 15 ವರ್ಷದವರೆಗೆ ಕಂಡುಬರುವ ಈ ಟುರೆಟ್ ಸಿಂಡ್ರೋಮ್ ಬಗ್ಗೆ ಪೋಷಕರಿಗೆ ತಿಳಿದಿರಲೇಬೇಕು: ಡಾ. ಪ್ರಪುಲ್ಲ – Kannada News | Tourette Syndrome Symptoms in Children: Dr. Prapulla’s Guidance for Parents

ಇತ್ತೀಚಿನ ದಿನಗಳಲ್ಲಿ ಈ ಟುರೆಟ್ ಸಿಂಡ್ರೋಮ್ (Tourette Syndrome) ಬಗ್ಗೆ ಹೆಚ್ಚಿನ ಚರ್ಚೆ ನಡೆಯುತ್ತಿದೆ. ಆದರೆ ಈ ಬಗ್ಗೆ ಸರಿಯಾದ ಮಾಹಿತಿ ಇಲ್ಲದ ಕಾರಣ ವಿವಿಧ ರೀತಿಯ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಾಗಾಗಿ ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ. ಅದರಲ್ಲಿಯೂ ಪೋಷಕರು ಈ ಸಿಂಡ್ರೋಮ್ ಬಗ್ಗೆ ತಿಳಿಯುವುದು ಅತಿಮುಖ್ಯವಾಗಿದೆ. ಏಕೆಂದರೆ ಇದೊಂದು ನರಮಂಡಲಕ್ಕೆ ಸಂಬಂಧಿಸಿದ ಖಾಯಿಲೆಯಾಗಿದ್ದು, ಇದು ಹದಿಹರೆಯದವರಲ್ಲಿ ಕಂಡುಬರುತ್ತದೆ (ಸಾಮಾನ್ಯವಾಗಿ 2 ವರ್ಷದಿಂದ 15 ವರ್ಷದವರೆಗೆ). ಇದನ್ನು ತಡೆಗಟ್ಟಲು ಮತ್ತು ಇದರ…

Read More

ಬೆಂಗಳೂರು: ಗೃಹಿಣಿ ಅನುಮಾನಾಸ್ಪದ ಸಾವು, ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರ ಆರೋಪ – Kannada News | Bengaluru Crime: Housewife Vandana Found Dead in Hulimavu; Family Alleges Dowry Harassment Murder by Husband’s Family

ಬೆಂಗಳೂರು, ಮೇ 2: ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೃಹಿಣಿ ವಂದನಾ ಎಂಬವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಆಕೆ ವರದಕ್ಷಿಣ ಕಿರುಕುಳದಿಂದ ಮೃತಪಟ್ಟಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಮಗಳಿಗೆ ಪತಿಯ ಮನೆಯವರು ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ವಂದನಾ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ. ಮೂರು ವರ್ಷಗಳ ಹಿಂದೆ ವಂದನಾ ವಿಕ್ರಂಶೇಷ್ ಎಂಬವರನ್ನು ಮದುವೆಯಾಗಿದ್ದರು. ಮದುವೆಯಾದಾಗಿನಿಂದಲೂ ಪತಿಯ ಮನೆಯವರಿಂದ ವರದಕ್ಷಿಣೆ ಕಿರುಕುಳ ಎದುರಿಸುತ್ತಿದ್ದರು ಎಂದು ವಂದನಾ ಕುಟುಂಬದವರು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ರಾಜ…

Read More

‘ಸಾರಾ ಗೋವಿಂದ್ ಧಮ್ಕಿ ಹಾಕಿದ್ರು’; ಕಾನೂನು ಹೋರಾಟಕ್ಕೆ ಮುಂದಾದ ಚೇತನ್

‘ರಾಜ್​​​ಕುಮಾರ್ ಪುಣ್ಯಭೂಮಿ ವಿಷಯಕ್ಕೆ ಚೇತನ್ ಅಹಿಂಸ ಅವರು ಕೊಂಕು ತೆಗೆದಿದ್ದರು. ಈಗಾಗಲೇ ಅವರು ವಿವಾದಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳಿದ್ದಾರೆ. ಈ ವಿಷಯವಾಗಿ ಈಗ ಹೊಸ ಬೆಳವಣಿಗೆ ನಡೆದಿದೆ. ಸಾರಾ ಗೋವಿಂದು ಈಗ ಅವರು ಧಮ್ಕಿ ಹಾಕಿರುವ ಆರೋಪವನ್ನು ಚೇತನ್ ಮಾಡಿದ್ದಾರೆ. ಸಾರಾ ಗೋವಿಂದು ಹಾಗೂ ಕನ್ನಡಪರ ಹೋರಾಟಗಾರರು ನನ್ನ ಮನೆಗೆ ಮುತ್ತಿಗೆ ಹಾಕಿ ಕ್ಷಮೆ ಕೇಳುವಂತೆ ಮಾತಾಡಿದ್ರು. ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ದರು’ ಎಂದು ಚೆತನ್ ಆರೋಪಿಸಿದ್ದಾರೆ. ಹೀಗಾಗಿ ಅವರು ದೂರು ನೀಡಿದ್ದಾರೆ….

Read More

IPL 2026: ಜೇಮಿಸನ್​ಗೆ ‘ಶಿಕ್ಷಾರ್ಹ ಅಂಕ’: ಏನಿದು ‘ಡಿಮೆರಿಟ್ ಪಾಯಿಂಟ್’? – Kannada News | IPL 2026: Kyle Jamieson handed demerit point

IPL 2026: ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಹಣಾಹಣಿಯಲ್ಲಿ, ಡೆಲ್ಲಿ ತಂಡದ ವೇಗಿ ಕೈಲ್ ಜೇಮಿಸನ್ ತೋರಿದ ಅತಿಯಾದ ಆಕ್ರಮಣಕಾರಿ ವರ್ತನೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಕೇವಲ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರನ್ನು ಔಟ್ ಮಾಡಿದ ನಂತರ ಜೇಮಿಸನ್ ತೋರಿದ ಈ ಅತೀರೇಕದ ವರ್ತನೆಗೆ ಇದೀಗ ಐಪಿಎಲ್ ಆಡಳಿತ ಮಂಡಳಿಯು ಒಂದು ಡಿಮೆರಿಟ್ ಪಾಯಿಂಟ್ ನೀಡಿದೆ. ನಡೆದಿದ್ದೇನು? ಪಂದ್ಯದ ಎರಡನೇ ಓವರ್‌ನಲ್ಲಿ ಜೇಮಿಸನ್…

Read More

ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ಫೈಟ್: ಬೃಹತ್ ಪಾಲಿಕೆಗೆ ಬಿಜೆಪಿ ಪಟ್ಟು, ವಿಭಜನೆಯೇ ಲೇಸು ಎಂದ ಕಾಂಗ್ರೆಸ್ – Kannada News | Hubballi Dharwad Corporation Split vs Greater HDMC: BJP and Congress Clash Over 16th Finance Commission Grants

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆImage Credit source: tv9 ಹುಬ್ಬಳ್ಳಿ, ಮೇ 2: ಉತ್ತರ ಕರ್ನಾಟಕದ ಪ್ರಮುಖ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡ (Hubli-Dharawad) ಮಹಾನಗರ ಪಾಲಿಕೆಯ ಭವಿಷ್ಯದ ಕುರಿತು ರಾಜಕೀಯ ಸಂಘರ್ಷ ತಾರಕಕ್ಕೇರಿದೆ. ಒಂದು ಕಾಲದಲ್ಲಿ ಪಾಲಿಕೆ ವಿಭಜನೆಗೆ ಪಟ್ಟು ಹಿಡಿದಿದ್ದ ಬಿಜೆಪಿಯು ಈಗ ಹೆಚ್ಚಿನ ಅನುದಾನದ ಆಸೆಗೆ ‘ಬೃಹತ್ ಮಹಾನಗರ ಪಾಲಿಕೆ’ (Greater Hubballi-Dharwad Municipal Corporation) ರಚನೆಗೆ ಒತ್ತಾಯಿಸುತ್ತಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್ ಮಾತ್ರ ವಿಭಜನೆಯ ನಿರ್ಧಾರಕ್ಕೇ ಅಂಟಿಕೊಂಡಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ಫೈಟ್:…

Read More

IPL 2026: RCB ತಂಡದ ಮುಂದಿನ ಪಂದ್ಯಗಳ ಮಾಹಿತಿ ಇಲ್ಲಿದೆ – Kannada News | Ipl 2026 rcb next match vs lsg

ಐಪಿಎಲ್ 2026ರ ಆವೃತ್ತಿಯು ರೋಚಕ ಹಂತಕ್ಕೆ ತಲುಪಿದೆ. ಹಾಲಿ ಚಾಂಪಿಯನ್ಸ್ ಪಟ್ಟದೊಂದಿಗೆ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಈ ಸೀಸನ್‌ನಲ್ಲಿ ಏರಿಳಿತದ ಹಾದಿ ಸವಿಯುತ್ತಿದೆ. ಏಪ್ರಿಲ್ 30ರಂದು ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಅನುಭವಿಸಿದ ಸೋಲು ತಂಡಕ್ಕೆ ಸ್ವಲ್ಪ ಹಿನ್ನಡೆ ತಂದಿದ್ದರೂ, ಪ್ಲೇ-ಆಫ್​ಗೇರಲು ಮುಂದಿನ ಪಂದ್ಯಗಳು ಅತ್ಯಂತ ನಿರ್ಣಾಯಕವಾಗಿವೆ. ಅದರಲ್ಲೂ ಮುಂದಿನ ಮ್ಯಾಚ್​ನಲ್ಲಿ ಆರ್​ಸಿಬಿ ತಂಡದ ಜಯ ಸಾಧಿಸಿದರೆ ಪ್ಲೇಆಫ್​ಗೆ ಎಂಟ್ರಿ ಕೊಡುವುದು ಬಹುತೇಕ ಖಚಿತವಾಗಲಿದೆ. ಏಕೆಂದರೆ ಮುಂದಿನ ಪಂದ್ಯದ ಬಳಿಕ ಆರ್​ಸಿಬಿ 4…

Read More

ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’! – Kannada News | Rare White Deer Spotted During Safari in Ajjipura, Chamarajanagar; Video Goes Viral

ಚಾಮರಾಜನಗರ, ಮೇ 02: ಜಿಲ್ಲೆಯ ಹನೂರು ತಾಲೂಕಿನ ಅಜ್ಜಿಪುರ ಸಫಾರಿ ಕೇಂದ್ರದಲ್ಲಿ ಪ್ರವಾಸಿಗರಿಗೆ ಅತಿ ಅಪರೂಪದ ಬಿಳಿ ಜಿಂಕೆ ದರ್ಶನ ನೀಡಿದೆ. ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೊಬೈಲ್ ಕ್ಯಾಮರಾದಲ್ಲಿ ಈ ಮನಮೋಹಕ ದೃಶ್ಯ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಕಳೆದ ವಾರವಷ್ಟೇ ಇದೇ ಸಫಾರಿ ಪಾಯಿಂಟ್‌ನಲ್ಲಿ ಕಪ್ಪು ಚಿರತೆ (Black Panther) ಕಾಣಿಸಿಕೊಂಡು ಕುತೂಹಲ ಮೂಡಿಸಿತ್ತು. ಇದೀಗ 30 ಸಾವಿರದಲ್ಲೊಂದರಂತೆ ಕಾಣ ಸಿಗುವ ಹಾಲು ಬಿಳುಪಿನ ಜಿಂಕೆಯನ್ನು ಕಂಡು ಪ್ರವಾಸಿಗರು ರೋಮಾಂಚನಗೊಂಡಿದ್ದಾರೆ….

Read More

‘ಎಲ್ಲರೂ ಕಲ್ಲು ಹೊಡೆಯುತ್ತಾರೆ’; ಕಪಿಲ್ ಶರ್ಮಾ ಶೋನಲ್ಲಿ ಸಮಯ್ ರೈನಾ ನೇರ ಮಾತು – Kannada News | Samay Raina, Ranveer Allahbadia on Netflix Kapil Show After Controversy

‘ಇಂಡಿಯಾಸ್ ಗಾಟ್ ಲೇಟೆಂಟ್’ ವಿವಾದದ ಒಂದು ವರ್ಷದ ನಂತರ, ಖ್ಯಾತ ಕಾಮಿಡಿಯನ್ ಸಮಯ್ ರೈನಾ ಮತ್ತು ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಈಗ ನೆಟ್‌ಫ್ಲಿಕ್ಸ್‌ನ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ಗೆ ಒಟ್ಟಿಗೆ ವೇದಿಕೆ ಏರಿದ್ದಾರೆ. ಇಂದು (ಮೇ 2) ರಾತ್ರಿ 8 ಗಂಟೆಗೆ ಪ್ರಸಾರವಾಗಲಿರುವ ಈ ಸಂಚಿಕೆಯ ಪ್ರೋಮೋ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ಕಪಿಲ್ ಶರ್ಮಾ ಅವರು ಕಳೆದ ವರ್ಷದ ವಿವಾದದ ಕುರಿತು ರಣವೀರ್ ಅವರನ್ನು ತಮಾಷೆಯಾಗಿ ಕಾಲೆಳೆದಿದ್ದಾರೆ. ಇದು ಟೀಸರ್​​ನಲ್ಲಿ ಕಾಣಿಸಿದೆ. ಕಾರ್ಯಕ್ರಮದಲ್ಲಿ ರಣವೀರ್…

Read More

ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ!: ತುಮಕೂರಲ್ಲಿ ದಾರುಣ ಘಟನೆ – Kannada News | Tumakuru Tragedy: Woman’s Illicit Affair with Nephew Leads to Three Deaths

ಕಾವ್ಯಾ, ಮೃತ ಮೂವರು ಮತ್ತು ಹೇಮಂತ್​​Image Credit source: Tv9 Kannada ತುಮಕೂರು, ಮೇ 02: ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಕೌಟುಂಬಿಕ ಕಲಹಕ್ಕೆ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​ ಸಿಕ್ಕಿದೆ. ಚಿನ್ನ, ಹಣ ಸಮೇತ ಪತ್ನಿ ಪರಪುರುಷನ ಜೊತೆ ಓಡಿಹೋಗಿದ್ದಕ್ಕೆ ನೊಂದು ಶಿವಣ್ಣ ಎಂಬಾತ ತನ್ನಿಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಸಾಯಿಸಿ ತಾನೂ ನೇಣಿಗೆ ಶರಣಾಗಿದ್ದ. ಆದರೆ ಶಿವಣ್ಣ ಪತ್ನಿ ಕಾವ್ಯಾ ಓಡಿಹೋಗಿರುವುದು ಈತನ ಅಕ್ಕನ ಮಗ ಹೇಮಂತ್​​ ಎಂಬಾತನ…

Read More

NDMA Disaster Alert Message: ನಿಮ್ಮ ಫೋನ್‌ಗೆ ‘ಎಮರ್ಜೆನ್ಸಿ ಅಲರ್ಟ್’ ಬಂದಿದೆಯೇ? ಗಾಬರಿ ಬೇಡ, ಇದು ಕೇಂದ್ರ ಸರ್ಕಾರದ ಹೊಸ ತಂತ್ರಜ್ಞಾನದ ಪರೀಕ್ಷೆ! – Kannada News | India’s New Emergency Alert System: Cell Broadcast and SACHET Explained

ಬೆಂಗಳೂರು: ಇಂದು (ಮೇ 2) ದೇಶದ ಕೋಟ್ಯಂತರ ಮೊಬೈಲ್ ಬಳಕೆದಾರರಿಗೆ ಏಕಾಏಕಿ ‘ಎಮರ್ಜೆನ್ಸಿ ಅಲರ್ಟ್’ ಸಂದೇಶಗಳು ಬಂದಿವೆ. ಸೈಲೆಂಟ್ ಮೋಡ್‌ನಲ್ಲಿದ್ದ ಫೋನ್‌ಗಳೂ ಸಹ ಜೋರಾಗಿ ಶಬ್ದ ಮಾಡುತ್ತಾ ಕಂಪಿಸಲು (Vibrate) ಶುರುಮಾಡಿದ್ದರಿಂದ ಆತಂಕಕ್ಕೊಳಗಾಗುವುದು ಸಹಜ. ಆದರೆ, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಇದು ಕೇಂದ್ರ ಸರ್ಕಾರವು ಹೊಸದಾಗಿ ಜಾರಿಗೆ ತಂದಿರುವ ‘ಸೆಲ್ ಬ್ರಾಡ್‌ಕಾಸ್ಟ್’ (Cell Broadcast) ವ್ಯವಸ್ಥೆಯ ಅಧಿಕೃತ ಪರೀಕ್ಷೆಯಾಗಿದೆ. ಅಮಿತ್ ಶಾ ಅವರಿಂದ ಅಧಿಕೃತ ಚಾಲನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಂವಹನ ಸಚಿವ…

Read More