All posts by nagaraj11081993

Horoscope Today 13 February​: ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 13, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಏಕಾದಶಿ, ಮೂಲಾ ನಕ್ಷತ್ರ, ವಜ್ರ ಯೋಗ, ಬಾಲಕ ವರ್ಣ ಇರುತ್ತದೆ. ರಾಹುಕಾಲವು ಬೆಳಗ್ಗೆ 11:05 ರಿಂದ ಮಧ್ಯಾಹ್ನ 12:33 ರವರೆಗೆ ಇರುತ್ತದೆ. ಸಂಕಲ್ಪ ಕಾಲವು ಮಧ್ಯಾಹ್ನ 12:34 ರಿಂದ ಮಧ್ಯಾಹ್ನ 2:01 ರವರೆಗೆ ಇರುತ್ತದೆ.

ಇಂದು ಕುಂಭ ಸಂಕ್ರಮಣದ ವಿಶೇಷ ದಿನವಾಗಿದ್ದು, ಸೂರ್ಯ ಭಗವಾನ್ ಬೆಳಗಿನ ಜಾವ 4:14 ಕ್ಕೆ ಕುಂಭ ರಾಶಿಗೆ ಪ್ರವೇಶ ಮಾಡುತ್ತಾರೆ. ಇದು ಶನಿಯ ಮನೆ ಆದರೂ ಮೂಲ ತ್ರಿಕೋನದ ಮನೆಯಾಗಿದೆ. ಅಲ್ಲದೆ, ಇಂದಿನ ದಿನ ಸರ್ವತ್ರ ವಿಜಯದ ಏಕಾದಶಿಯಾಗಿದ್ದು, ಸೌಕೂರು ದುರ್ಗಾ ಪರಮೇಶ್ವರಿ ರಥೋತ್ಸವವೂ ನಡೆಯುತ್ತದೆ. ಸೂರ್ಯ ಸಂಕ್ರಮಣದ ದಿನ ಸೂರ್ಯ ಭಗವಾನರ ದರ್ಶನ, ಅಷ್ಟೋತ್ತರ, ಸ್ತೋತ್ರ, ಮಂತ್ರ, ಆದಿತ್ಯ ಹೃದಯ ಪಠಿಸುವುದು ಶ್ರೇಷ್ಠವೆಂದು ಗುರೂಜಿ ತಿಳಿಸಿದ್ದಾರೆ.

 

 

 

Source link

ಬಸ್ಸಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಬದಲಿಗೆ ಸ್ಮಾರ್ಟ್​ಕಾರ್ಡ್ – Kannada News | Karnataka cabinet Approves Smart Card for Free Bus Travel for Women, Replaces Aadhaar Requirement

ಬೆಂಗಳೂರು, ಫೆಬ್ರವರಿ 13: ಕರ್ನಾಟಕ ಸಾರಿಗೆ ಬಸ್​ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರತಿನಿತ್ಯ ಲಕ್ಷಾಂತರ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಈಗ ಆಧಾರ್ ಬದಲಿಗೆ ಶಕ್ತಿ ಯೋಜನೆಯಡಿ (Shakti Scheme) ಸ್ಮಾರ್ಟ್‌ ಕಾರ್ಡ್‌ (Smart Card) ವಿತರಣೆಗೆ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಜತೆಗೆ, ಹಲವು ಮತ್ವದ ನಿರ್ಣಯಗಳನ್ನು ಕ್ಯಾಬಿನೆಟ್​​ನಲ್ಲಿ ಕೈಗೊಳ್ಳಲಾಗಿದೆ.

ಮಹಿಳೆಯರ ಉಚಿತ ಪ್ರಯಾಣಕ್ಕೆ 4 ಸಾರಿಗೆ ನಿಗಮಗಳು ಸ್ಮಾರ್ಟ್​ಕಾರ್ಡ್ ವಿತರಿಸಲಿವೆ. ಶಕ್ತಿ ಸ್ಮಾರ್ಟ್​ಕಾರ್ಡ್ ತೋರಿಸಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದರೊಂದಿಗೆ, ಆಧಾರ್ ಕಾರ್ಡ್‌ ತೋರಿಸಿ ಉಚಿತವಾಗಿ ಪ್ರಯಾಣಿಸುವುದಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ.

ರೇಸ್​ಕೋರ್ಸ್ ಬೆಂಗಳೂರಿನಿಂದ ಕುಣಿಗಲ್​ಗೆ ಶಿಫ್ಟ್

ಬೆಂಗಳೂರಿನ ಪ್ರಸಿದ್ಧ ಸ್ಥಳಗಳಲ್ಲಿ ಒಂದಾದ ರೇಸ್ ಕೋರ್ಸ್ ಅಥವಾ ಟರ್ಫ್ ಕ್ಲಬ್​ ಸ್ಥಳಾಂತರಕ್ಕೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್‌ನ ಸ್ಟಡ್‌ ಫಾರ್ಮ್‌ಗೆ ಟರ್ಫ್ ಕ್ಲಬ್ ಶಿಫ್ಟ್ ಆಗಲಿದೆ. ಕ್ಲಬ್ ಜಾಗವನ್ನು ಹಾಗೇ ಉಳಿಸಿಕೊಳ್ಳಲು ಕ್ಯಾಬಿನೆಟ್‌ನಲ್ಲಿ ನಿರ್ಧರಿಸಲಾಗಿದೆ. ಲೀಸ್ ಅವಧಿ ಮುಕ್ತಾಯ, ಬಾಡಿಗೆಯೂ ಪರಿಷ್ಕರಣೆ ಆಗಿರಲಿಲ್ಲ. ಹೀಗಾಗಿ ಬೆಂಗಳೂರಿನಿಂದ ರೇಸ್ ಕೋರ್ಸ್ ಸ್ಥಳಾಂತರ ಮಾಡಲಿದ್ದಾರೆ.

ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಶೂ, 2 ಜೊತೆ ಸಾಕ್ಸ್

ಅಲ್ಲದೇ, ಸರ್ಕಾರಿ ಶಾಲೆಗಳಲ್ಲಿ 1-10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಒಂದು ಜೊತೆ ಶೂ, 2 ಜೊತೆ ಸಾಕ್ಸ್ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ. ವಿದ್ಯಾವಿಕಾಸ ಯೋಜನೆಯ ಅಡಿ 2026-27 ನೇ ಸಾಲಿಗೆ ಉಚಿತ ಶೂ, ಸಾಕ್ಸ್ ನೀಡಲು ನಿರ್ಧರಿಸಲಾಗಿದೆ.

ಕ್ಯಾಬಿನೆಟ್​ನಲ್ಲಿ ಕೈಗೊಂಡ ಇತರ ನಿರ್ಧಾರಗಳು

ಶಿಷ್ಟಾಚಾರ ನಿಯಮಗಳಿಗೆ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ. ಅಂದರೆ, ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ನಿಯಮ ಜಾರಿಗೆ ತರಲಾಗಿದೆ. ನ್ಯಾಯಾಲಯಗಳ ಕಟ್ಟಡ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರಕ್ಕೆ ಅನುಮೋದನೆ ನೀಡಲಾಗಿದೆ. ಬಳ್ಳಾರಿ ವಿಮ್ಸ್ ಆವರಣದಲ್ಲಿ 200 ಬೆಡ್ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸುವುದು, 1777 ಎಕರೆ ಭೂಮಿ ‘ಶಾಶ್ವತ ವಿಶೇಷ’ ಕೃಷಿವಲಯ ಎಂದು ಘೋಷಿಸಲಾಗಿದೆ. ಇದರಲ್ಲಿ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1777 ಎಕರೆ ಜಮೀನು ಶಾಶ್ವತ ವಿಶೇಷ ಕೃಷಿವಲಯ ಆಗಿರಲಿದೆ. ತಿಕೋಟಾದಲ್ಲಿ ದ್ರಾಕ್ಷಾರಸ ಶೀತಲೀಕರಣ ಘಟಕ ನಿರ್ಮಾಣಕ್ಕೆ

ಇದನ್ನೂ ಓದಿ: ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್​​​ಗೆ ದಿನಾಂಕ ನಿಗದಿ

ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿರುವ SIR ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಿದೆ. ಕೆಲವು ಕಡೆ ಯಾವ ರೀತಿಯಲ್ಲಿ ಏನ್ ಮಾಡ್ತಿದ್ದಾರೆ ಅದೆಲ್ಲದರ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಕಾನೂನು ಇಲಾಖೆ ಸಮಗ್ರವಾಗಿಯೇ ಅಧ್ಯಯನ ಮಾಡಿ ಮತ್ತೆ ಸಂಪುಟದಲ್ಲಿ ಚರ್ಚೆ ನಡೆಸುವ ಬಗ್ಗೆ ನಿರ್ಧಾರ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರ ಶತ್ರುತ್ವ ದುರಂತದಲ್ಲಿ ಕೊನೆ – Kannada News | Horoscope 13 February 2026; Dina Rashi Bhavishya Today, Checkout the details here

ಮೇಷ ರಾಶಿ:

ಕಛೇರಿಯಲ್ಲಿ ಉಂಟಾದ ಕೆಲವು ಗೊಂದಲವು ನಿಮ್ಮ ಮನಸ್ಸನ್ನು ಹಾಳು ಮಾಡುವುದು. ಕೆಲವು ಗೆಲುವಿಗಾಗಿ ಸೋಲಬೇಕಾಗುತ್ತದೆ. ಹಿತಶತ್ರುಗಳನ್ನು ಅರಿಯುವಲ್ಲಿ ನಿಮಗೆ ಸೋಲಾಗುವುದು. ಹೊಸ ಯೋಜನೆಯನ್ನು ನಿರ್ವಹಿಸುವ ಅವಕಾಶವು ಸಿಗಲಿದೆ. ನಿಮ್ಮ ನಿರ್ಧಾರವು ತೂಗುಕತ್ತಿಯಂತೆ ಇರಲಿದೆ. ವಿವಾಹಜೀವನವು ಅತ್ಯಂತ ಸುಖದಂತೆ ತೋರುವುದು. ಕೆಲವು ಅಭ್ಯಾಸವನ್ನು ನೀವು ಬಿಡಬೇಕೆಂದರೂ ಬಿಡಲಾಗದು.

ವೃಷಭ ರಾಶಿ:

ಆಪ್ತರಿಗೆ ನಿಮ್ಮ ಬದಲಾದ ನಡವಳಿಕೆಯು ಇಷ್ಟವಾಗದು. ನಿಮ್ಮ ವ್ಯವಹಾರದಲ್ಲಿ ಅನ್ಯರ ಹಸ್ತಕ್ಷೇಪವನ್ನು ಸಹಿಸಲಾರಿರಿ. ಸಮಯದ ಹೊಂದಾಣಿಕೆಯು ನಿಮಗೆ ಕಷ್ಟವಾಗುವುದು. ಬಂಧುವನ್ನೇ ಪಾಲುದಾರರನ್ನಾಗಿ ಆಯ್ಕೆ ಮಾಡಿಕೊಳ್ಳುವಿರಿ. ನಿಮ್ಮವರ ಬಗ್ಗೆ ನಿಮಗೆ ನಂಬಿಕೆ ಕಡಮೆ ಆಗುವುದು. ಹಾರಿಕೆಯ ಉತ್ತರ ನೀಡಿ ತಪ್ಪಿಸಿಕೊಳ್ಳಿ. ಶತ್ರುಗಳ ಕುತಂತ್ರವು ನಿಮಗೆ ಲಾಭವೇ ಆಗುವುದು.

ಮಿಥುನ ರಾಶಿ:

ನಿಮ್ಮ ಸ್ವಾಭಿಮಾನಕ್ಕೆ ತೊಂದರೆ ಉಂಟಾಗಬಹುದು. ನಿಮ್ಮ ಹಾಸ್ಯಪ್ರಜ್ಞೆ ಕೆಲವರಿಗೆ ಇಷ್ಟವಾಗದು. ದೇಹವು ಅಧಿಕ ಶ್ರಮದಿಂದ ಆಯಾಸಗೊಳ್ಳುವುದು. ಸಾರ್ವಜನಿಕವಾಗಿ ಗುರುತಿಸಿಕೊಳ್ಳಬೇಕು ಎನಿಸುವುದು. ಉದ್ವೇಗಕ್ಕೆ ಒಳಗಾಗುವ ಸಂದರ್ಭವು ನಿಮ್ಮನ್ನು ಕುಗ್ಗಿಸುವುದು. ಅತಿಯಾದ ಪ್ರೀತಿಯೂ ನಿಮಗೆ ಮುಳುವಾದೀತು. ಸಂಗಾತಿಯ ಮನೋಭಾವವು ನಿಮಗೆ ಇಂದು ಸರಿ ಹೊಂದದು. ಸಮಯಕ್ಕೆ ಯಾವುದನ್ನೂ ಸರಿಯಗಿ ಮಾಡಲಾಗದು.

ಕರ್ಕಾಟಕ ರಾಶಿ:

ದಾಖಲೆಗಾಗಿ ಓಡಾಟವನ್ನು ಮಾಡಬೇಕಾದೀತು. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅಗತ್ಯ. ಇಂದು ತುರ್ತಾಗಿ ಬೇಕಾಗಿರುವ ಹಣವನ್ನು ಹೊಂದಿಸಲು ನಿಮಗೆ ಕಷ್ಟವಾಗುವುದು. ಫಲಿತಾಂಶದ ಕುತೂಹಲವು ನಿಮ್ಮ ಮನಸ್ಸಿನ ವೇಗವನ್ನು ಹೆಚ್ಚಿಸುವುದು. ಮುಳುಗುವ ದೋಣಿಗೆ ಹುಲ್ಲುಕಡ್ಡಿಯೂ ಆಸರೆಯಾದೀತು. ಯಾವುದೋ ಆಲೋಚನೆಯಲ್ಲಿ ಮುಳುಗಿರುವಿರಿ. ಬಂಧುಗಳ ಭೇಟಿಯು ನಿಮಗೆ ಅಷ್ಟಾಗಿ ಇಷ್ಟವಾಗದು.

ಸಿಂಹ ರಾಶಿ:

ಇಂದು ಮಕ್ಕಳು ನಿಮಗೆ ಬೇಕಾದ ಆರ್ಥಿಕ ನೆರವನ್ನು ಕೊಡುವರು. ನಿಮ್ಮ ದುರಭ್ಯಾಸವು ಅತಿಯಾಗಲಿದೆ. ಅಪನಂಬಿಕೆಯಿಂದ ನಿಮಗೆ ತೊಂದರೆ ಆಗಬಹುದು. ವಸತಿ ಸ್ಥಾನವನ್ನು ಬದಲಿಸಬೇಕಾದೀತು. ಯಾರನ್ನೋ ನೋಡಿ ಹೊಟ್ಟಿ ಉರಿ ಮಾಡಿಕೊಳ್ಳುವುದು ಬೇಡ. ಸ್ಪರ್ಧಾತ್ಮಕ ವಿಚಾರದಲ್ಲಿ ಸೋಲುವ ಸಂಭವವಿದೆ. ಬಹಳ ದಿನಗಳ ಅನಂತರ ನ್ಯಾಯಾಲಯದಿಂದ ಸಿಕ್ಕ ಜಯವು ಸಂತಸವನ್ನು ಉಂಟುಮಾಡುವುದು.

ಕನ್ಯಾ ರಾಶಿ:

ಸಮಾಜವು ನಿಮ್ಮ ಸಾಧನೆಯನ್ನು ಗುರುತಿಸುವ ಅಪೇಕ್ಷೆ ಇರುವುದು. ನಿಮಗೆ ಗೊತ್ತಿರುವ ವಿಚಾರವನ್ನು ಇತರರ ಜೊತೆ ಹಂಚಿಕೊಳ್ಳುವಿರಿ. ನಿಮ್ಮ ಬಗ್ಗೆ ಬಂದ ಆರೋಪವನ್ನು ಜಾಣ್ಮೆಯಿಂದ ಪರಿಹಿರಿಸಿಕೊಳ್ಳುವಿರಿ. ಪರರ ತಪ್ಪುಗಳನ್ನು ಹೆಚ್ಚು ಹುಡುಕುವುದು ಬೇಡ. ಹೊಸ ವಸ್ತುವಿನ ಖರೀದಿಯಲ್ಲಿ ನಿಮಗೆ ಮೋಸ ಆಗುವ ಸಾಧ್ಯತೆ ಇದೆ. ಪ್ರೀತಿಪಾತ್ರರ ಜೊತೆ ಇಂದು ಸಲುಗೆಯಿಂದ ಇರುವಿರಿ. ಮನಸ್ಸಿಗೆ ಇಷ್ಟವಾಗದ ಕಾರ್ಯವನ್ನು ನೀವು ಮಾಡಬೇಕಾದೀತು.

ತುಲಾ ರಾಶಿ:

ಧಾರ್ಮಿಕ ಸೇವೆಯಲ್ಲಿ ನೀವು ಭಾಗಿಗಳಾಗುವಿರಿ. ಭೂಮಿಯಿಂದ ಲಾಭವನ್ನು ಪಡೆಯುವ ಯೋಜನೆಯಿರಲಿ. ಮಕ್ಕಳ ವರ್ತನೆಯು ಹಿಡಸದೇ ಇರುವುದು. ಸಾಮಾಜಿಕ ಕಾರ್ಯದಲ್ಲಿ ನೋವನ್ನು ಮರೆಯುವಿರಿ. ಆದರೂ ಏನನ್ನೂ ಹೇಳದೇ ಇರುವಿರಿ. ವಿಷಯ, ಸಮಯ ಎಲ್ಲವನ್ನೂ ನೋಡಿ ವ್ಯವಹರಿಸಿ. ದುಡುಕಿ ಯಾವುದನ್ನೂ ಮಾಡುವುದು ಬೇಡ.

ವೃಶ್ಚಿಕ ರಾಶಿ:

ಇಷ್ಟವಿಲ್ಲದ ಕಡೆ ನೀವು ಎಂದೂ ಹೋಗಲಾರಿರಿ. ನಿಮ್ಮ ಉತ್ಸಾಹದ ಕೆಲಸವು ಇನ್ನೊಬ್ಬರಿಗೆ ಮಾದರಿಯಾದೀತು. ಧಾರ್ಮಿಕ ನಂಬಿಕೆಗೆಳು ಅಂತರಂಗಕ್ಕೆ ಪುಷ್ಟಿಯನ್ನು ಕೊಡುತ್ತವೆ. ನಿಮ್ಮ ನಿರ್ಲಕ್ಷ್ಯದ ಸ್ವಭಾವದಿಂದ ಉತ್ತಮ ಅವಕಾಶಗಳನ್ನು ಕಳೆದುಕೊಳ್ಳುವಿರಿ. ಹಿಂದೆ ಕೊಟ್ಟ ಸಾಲವು ಮರಳಿ ಬರುವ ನಿರೀಕ್ಷೆಯಲ್ಲಿ ಇರುವಿರಿ. ಸುಮ್ಮನೇ ವಾದ ಮಾಡುವ ಚಪಲವನ್ನು ಬಿಟ್ಟು ಸಹಜವಾಗಿ ಎಲ್ಲರ ಜೊತೆ ಮಾತನಾಡಿ. ದೈಹಿಕ ಕಾರ್ಯದಲ್ಲಿ ತೊಡಗಿದವರಿಗೆ ಹೆಚ್ಚು ಆದಾಯವು ಇರುವುದು.

ಧನು ರಾಶಿ:

ಪ್ರತಿಕೂಲ ವಾತಾವರಣವನ್ನು ನಿಭಾಯಿಸುವ ಕಲೆಯನ್ನು ಗೊತ್ತುಮಾಡಿಕೊಳ್ಳುವಿರಿ. ಸರಿಯಾದ ಉದ್ಯೋಗಕ್ಕೆ ಅಲೆಮಾರಿಗಳಂತೆ ಅಲೆಯಬೇಕಾಗುವುದು. ತಂದೆಯ ಕೆಲವು ವ್ಯವಹಾರವು ನಿಮಗೆ ಇಷ್ಟವಾಗದೇ ಅವರ ಮೇಲೆ ಮುನಿಸಿಕೊಳ್ಳುವಿರಿ. ಮಕ್ಕಳ ಭವಿಷ್ಯಕ್ಕೆ ಹಣವನ್ನು ಕೂಡಿಡಬೇಕಾಗುವುದು. ಸಾಲ ಕೊಟ್ಟವರು ನಿಮ್ಮನ್ನು ಇಂದು ಏನೂ ಕೇಳುವುದಿಲ್ಲ. ಹಾಗಾಗಿ ನಿಶ್ಚಿಂತೆಯಿಂದ ಇದ್ದುಬಿಡುವಿರಿ. ಯಾರ ಒಳ್ಳೆಯ ಮಾತುಗಳೂ ನಿಮಗೆ ಉಪಯೋಗವಾಗದು.

ಮಕರ ರಾಶಿ:

ವೈವಾಹಿಕ ಜೀವನದಲ್ಲಿ ಏರಿಳಿತವು ಆರಂಭವಾಗಬಹದು. ಸಂಗಾತಿ ಮೇಲಿನ ಸಿಟ್ಟನ್ನು ಬೇರೆ ಕಡೆ ಹೊರಹಾಕುವಿರಿ. ಕೆಲಸದಲ್ಲಿ ಮತ್ತೆ ಮತ್ತೆ ತೊಂದರೆ ಎದುರಾದರೆ ಅದನ್ನು ಕೈ ಬಿಡುವುದು ಸೂಕ್ತ. ಮನೆಯ ಕಾರ್ಯದಲ್ಲಿ ಮಂದಗತಿ, ಆಮೇಲೆ ಮಾಡಿದರಾಯಿತು ಎಂಬ ಭಾವ ಇರಲಿದೆ. ನೆಚ್ಚಿನ ವ್ಯಕ್ತಿಗಳಿಂದ ಪ್ರಭಾವಿತರಾಗಿರುವಿರಿ. ಕುಹಕ ಮಾತುಗಳನ್ನೂ ಆಡಬಹುದು. ಸಂಗಾತಿಯು ನಿಮ್ಮ ಮಾತನ್ನು ಅಲ್ಲಗಳೆಯುವಿರಿ. ಸ್ವಪ್ರತಿಷ್ಠೆಯನ್ನು ಎಲ್ಲರೆದುರು ತೋರಿಸಿದರೆ ಅಪಮಾನ.

ಕುಂಭ ರಾಶಿ:

ಅನಿಶ್ಚಿತ ಪ್ರೇಮದಿಂದ ಕಹಿ ಅನುಭವ. ಅಪಘಾತದ ಸುದ್ದಿಯಿಂದ ನೀವು ಖಿನ್ನರಾಗುವಿರಿ. ನೀವು ಅತಿಯಾದ ಆತ್ಮವಿಶ್ವಾಸದಲ್ಲಿ ಕೆಲವೊಂದನ್ನು ಕಳೆದುಕೊಳ್ಳುವಿರಿ. ಬೇಕಾದುದನ್ನು ಪಡೆಯಲು ಮುನ್ನುಗ್ಗುವ ಮಾನಸಿಕತೆಯನ್ನು ಬೆಳೆಸಿಕೊಳ್ಳುವಿರಿ. ಇನ್ನೊಬ್ಬರು ತೋರುವ ನಿರ್ಲಕ್ಷ್ಯದಿಂದ ನೀವು ಬಹಳ ದುಃಖಿಸುವಿರಿ. ದೂರದರ್ಶಿತ್ವದಿಂದ ಆಗುವ ಲಾಭದ ಮನವರಿಕೆ ಆಗಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಬಂಧುಗಳ ಸಹಕಾರ ಇಂದು ಲಭ್ಯವಾಗುವುದು.

ಮೀನ ರಾಶಿ:

ನೀವು ಗೆಲ್ಲಲು ಸಾಕಷ್ಟು ಪ್ರಯತ್ನಗಳನ್ನು ಮಾಡಬೇಕಾಗುವುದು. ಇಂದು ನೀವಾಡುವ ಮಾತಿನ ಮೇಲೆ ನಿಮ್ಮ ಕಾರ್ಯಗಳು ನಿಂತವೆ. ಓಡಾಡಕ್ಕೆ ನಿಮಗೆ ವಾಹನದ ಅನುಕೂಲತೆಯೂ ಆಗುವುದು. ರಕ್ಷಣೆಯ ವಿಭಾಗದಲ್ಲಿ ಅಧಿಕ ಒತ್ತಡವಿರಲಿದೆ. ನೀವು ಹಣಕಾಸನ್ನು ಉಳಿಸಲು ನಾನಾಪ್ರಕಾರವಾಗಿ ಯೋಚಿಸುವಿರಿ. ಸರಳವಾಗಿರಲು ನಿಮಗೆ ಸಾಧ್ಯವಾಗುವುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಉತ್ತರಾಷಾಢ, ಯೋಗ : ವ್ಯಾಘಾತ, ಕರಣ : ಭದ್ರ, ಸೂರ್ಯೋದಯ – 06 – 50 am, ಸೂರ್ಯಾಸ್ತ – 06 – 27 pm, ಇಂದಿನ ಶುಭಾಶುಭ ಕಾಲ : ರಾಹು 11:12 – 12:39, ಯಮಗಂಡ ಕಾಲ 06:50 – 15:33, ಗುಳಿಕ ಕಾಲ 17:00 – 09:44

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 13ರ ದಿನಭವಿಷ್ಯ

ಈ ದಿನ ಮಹಾಲಕ್ಷ್ಮೀ ಅಷ್ಟಕವನ್ನು ಶ್ರವಣ ಮಾಡಿ. ದಂಪತಿ ಅಥವಾ ಪ್ರೇಮಿಗಳ ಮಧ್ಯೆ ಭಿನ್ನಾಭಿಪ್ರಾಯ ಇದ್ದಲ್ಲಿ ದೂರ ಆಗುತ್ತದೆ. ಇನ್ನು ನಿಮಗೆ ಬರಬೇಕಾದ ಹಣ ಬಾಕಿ ಉಳಿದುಹೋಗಿದ್ದಲ್ಲಿ ಅದು ವಸೂಲಿ ಮಾಡಿಕೊಳ್ಳಲಿಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮ ಈ ದಿನ ಹೊಸ ಸಾಧ್ಯತೆಗಳಿಂದ ತುಂಬಿರುತ್ತದೆ. ಉದ್ಯೋಗಸ್ಥರಿಗೆ ಹೊಸ ಯೋಜನೆಗಳಿಗೆ ಅವಕಾಶ ಸಿಗುತ್ತದೆ; ಮೇಲಧಿಕಾರಿಗಳ ಬೆಂಬಲ ದೊರೆತು ಕೆಲಸ- ಕಾರ್ಯಗಳು ಸುಗಮವಾಗಿ ಆಗಲಿವೆ. ವ್ಯಾಪಾರಸ್ಥರು ಗ್ರಾಹಕರ ನಿರೀಕ್ಷೆಗಳಿಗೆ ತಕ್ಕಂತೆ ಆರ್ಡರ್‌ ಗಳನ್ನು ಪೂರ್ತಿ ಮಾಡಿಕೊಡುತ್ತೀರಿ. ರೈತರಿಗೆ ಬೆಳೆಯ ಮಾರಾಟ ಸುಲಭವಾಗಿ ಆಗುತ್ತದೆ. ನಾಟಕ, ಇತರೆ ಬರಹ ಅಥವಾ ಕ್ರಿಯೇಟಿವ್ ಕೆಲಸಗಳಲ್ಲಿ ತೊಡಗಿರುವವರು ಹೊಸ ಚಿಂತನೆಗಳಿಂದ ಪ್ರೋತ್ಸಾಹ ಪಡೆಯುತ್ತೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಮನೆಯವರು, ಹಿರಿಯರು ನಿಮ್ಮ ಸಲಹೆ ಮತ್ತು ಸಹಕಾರದಿಂದ ಸಂತೋಷ ಪಡುತ್ತಾರೆ. ಪ್ರೀತಿಯಲ್ಲಿ ಇರುವವರಿಗೆ ಪರಸ್ಪರ ಮಾತುಕತೆಯಿಂದ ಬಾಂಧವ್ಯ ಬಲವಾಗುತ್ತದೆ. ಖರ್ಚು–ಉಳಿತಾಯ ಸಮತೋಲನ ಸಾಧಿಸುವ ಕಡೆಗೆ ಗಮನವನ್ನು ವಹಿಸಿ. ನಿಮ್ಮ ದೇಹಕ್ಕೆ ಒಗ್ಗುವ ಆಹಾರ ಮತ್ತು ಸರಿಯಾದ ಪ್ರಮಾಣದ ನಿದ್ರೆ ಮುಖ್ಯ. ದಿನಾಂತ್ಯಕ್ಕೆ ಸಾಧನೆಗಳ ಅನುಭವದಿಂದ ಮನಸ್ಸು ಹಿಗ್ಗುತ್ತದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಸಮತೋಲನದ ಆಹಾರ ಸೇವನೆಗೆ ಆದ್ಯತೆ ನೀಡಿ, ಮನೆಗೆ ತರುವಂಥ ದಿನಸಿ ಪದಾರ್ಥಗಳ ಆಯ್ಕೆಯಲ್ಲೇ ಬದಲಾವಣೆ ಮಾಡಿಕೊಳ್ಳಲಿದ್ದೀರಿ. ಶೀತ- ಕೆಮ್ಮು- ಕಫದಿಂದ ಬಳಲುತ್ತಾ ಇರುವವರು ವೈದ್ಯರನ್ನು ಭೇಟಿ ಮಾಡಿ, ಸೂಕ್ತ ಔಷಧೋಪಚಾರ ಪಡೆಯುವುದಕ್ಕೆ ಆದ್ಯತೆ ನೀಡಿ. ನಿಮಗೆ ಬರಬೇಕಾದ ಬಾಕಿ ಹಣ ವಸೂಲಿಗೆ ಈ ದಿನ ಗಟ್ಟಿಯಾಗಿ ಪ್ರಯತ್ನಿಸಿ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 13ರ ದಿನಭವಿಷ್ಯ

ಪೈರೈಟ್ ಸ್ಟೋನ್ ನಿಂದ ಸಿದ್ಧ ಮಾಡಿದಂಥ ಉಂಗುರವನ್ನು ಧರಿಸುವುದರಿಂದ ಆರ್ಥಿಕ ಒತ್ತಡದಿಂದ ಹೊರಬರುವುದಕ್ಕೆ ದಾರಿ ಗೋಚರ ಆಗುತ್ತದೆ. ಇನ್ನು ಈ ದಿನ ಮುಖ್ಯ ಕೆಲಸಕ್ಕೆ ಮನೆಯಿಂದ ಹೊರಡುವ ಮುನ್ನ ಬಿಳಿ ಬಣ್ಣದ ವಸ್ತ್ರವೊಂದನ್ನು ಜೇಬಿನಲ್ಲಿ ಇಟ್ಟುಕೊಂಡಿರಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಖರ್ಚಿನ ವಿಚಾರದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರ ಬಹಳ ಮುಖ್ಯವಾಗಿರುತ್ತದೆ. ಕುಟುಂಬದ ಪರಿಸ್ಥಿತಿ ಹಾಗೂ ನೀವು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸ್ನೇಹಿತರ ಜತೆಗೆ ಮಾತುಕತೆ ಬೇಡ. ಫ್ರೀಲ್ಯಾನ್ಸರ್ ಆಗಿ ಕಾರ್ಯ ನಿರ್ವಹಿಸುವವರಿಗೆ ಒಂದೇ ಸಮಯಕ್ಕೆ ಹಲವು ಕೆಲಸಗಳು ಏಕ ಕಾಲಕ್ಕೆ ಮಾಡಬೇಕಾದ ಒತ್ತಡ ಸೃಷ್ಟಿ ಆಗುತ್ತದೆ. ದೂರದ ಸ್ಥಳದಲ್ಲಿ ಬಿಟ್ಟು ಓದಿಸುತ್ತಿರುವ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮುಖ್ಯ ತೀರ್ಮಾನವನ್ನು ತೆಗೆದುಕೊಳ್ಳಬೇಕಾಗುತ್ತದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಪ್ರೀತಿ- ಪ್ರೇಮ, ಮದುವೆಗೆ ಸಂಬಂಧಿಸಿದಂತೆ ಭಾವನಾತ್ಮಕ ಕ್ಷಣಗಳಲ್ಲಿ ಸಮಾಧಾನದಿಂದ ನಿರ್ಧಾರ ಮಾಡುವುದು ಸವಾಲಾಗಿರುತ್ತದೆ. ಎಲ್ಲರನ್ನೂ ಮೆಚ್ಚಿಸುವ ಪ್ರಯತ್ನ ಮಾಡಿದಲ್ಲಿ ಅದರ ಅಡ್ಡ ಪರಿಣಾಮ ನಿಮ್ಮ ಮೇಲೇ ಆಗಲಿದೆ. ಜಂಕ್ ಫುಡ್ ಗಳಿಂದ ಈ ದಿನ ಸಾಧ್ಯವಾದಷ್ಟೂ ದೂರ ಇರುವುದು ಒಳ್ಳೆಯದು. ಮಾಧ್ಯಮ ಕ್ಷೇತ್ರದಲ್ಲಿ ಇರುವವರಿಗೆ ಉದ್ಯೋಗದ ಆಫರ್ ಬರಬಹುದು.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಬಾಡಿಗೆ ಮನೆಗಾಗಿ ಹುಡುಕಾಟ ನಡೆಸುತ್ತಾ ಇರುವವರು ಈ ದಿನ ಅಡ್ವಾನ್ಸ್ ಮಾಡುವಂಥ ಯೋಗ ಇದೆ. ಆದಾಯ ಹೆಚ್ಚು ಮಾಡಿಕೊಳ್ಳಲು ವಿವಿಧ ಯೋಜನೆಗಳನ್ನು ರೂಪಿಸಲಿದ್ದೀರಿ. ನಿಮ್ಮದೇ ಅಸ್ತಿಯೊಂದನ್ನು ಮಾರುವ ಆಲೋಚನೆ ಸಹ ಬರಬಹುದು. ಹೂಡಿಕೆಗೆ ಆ ಹಣದ ಬಳಕೆ ಮಾಡುವ ಚಿಂತನೆ ಇರಲಿದೆ. ಇಷ್ಟು ಸಮಯ ನಿಮ್ಮ ಜೊತೆಗೆ ಸ್ನೇಹ- ಸೌಹಾರ್ದದಿಂದ ಇರುವ ವ್ಯಕ್ತಿ ಕೆಲವು ವಿಷಯಗಳಲ್ಲಿ ತೆಗೆದುಕೊಳ್ಳುವ ನಿರ್ಧಾರ ಕಿರಿಕಿರಿ ಮಾಡಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 13ರ ದಿನಭವಿಷ್ಯ

ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆದುಕೊಳ್ಳಿ. ಸಾಧ್ಯವಿದ್ದಲ್ಲಿ ಮಾರನೇ ದಿನಕ್ಕೆ ಪಂಚಾಮೃತ ಅಭಿಷೇಕಕ್ಕೆ ಕೊಟ್ಟು ಬನ್ನಿ. ಹೊಸ ಹೊಸ ಪ್ರಾಜೆಕ್ಟ್ ಗಳು ಹುಡುಕಿಕೊಂಡು ಬರಲಿದ್ದು, ಆದಾಯಕ್ಕೆ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ದೂರ ಪ್ರಯಾಣಕ್ಕೆ ಹೊರಡಲು ಎಲ್ಲ ಸಿದ್ಧತೆ ಮಾಡಿಕೊಂಡು, ಕೊನೆ ಕ್ಷಣದಲ್ಲಿ ಅದನ್ನು ರದ್ದು ಮಾಡಬೇಕಾದ ಪರಿಸ್ಥಿತಿ ಉದ್ಭವಿಸಲಿದೆ. ಹೊಸ ಸ್ನೇಹಿತರ ಜತೆಗೆ ಸಲುಗೆ ಬೇಡ. ಪಾರಂಪರಿಕ ವೈದ್ಯ ವೃತ್ತಿ ಮಾಡಿಕೊಂಡು ಬಂದಿರುವವರು ಕೆಲವು ಸಮಯ ಬಿಡುವು ತೆಗೆದುಕೊಳ್ಳುವ ತೀರ್ಮಾನ ಮಾಡುವಂತೆ ಆಗಲಿದೆ. ಇತರರ ತಪ್ಪುಗಳು ಕಂಡುಬಂದಲ್ಲಿ ಸಿಟ್ಟಿನಿಂದ ಕೂಗಾಡುವುದು- ಕಿರುಚಾಡುವುದು ಮಾಡಬೇಡಿ. ಸಾಧ್ಯವಾದಷ್ಟೂ ಸಮಾಧಾನದಿಂದ ತಿಳಿಹೇಳಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಇಂದು ನಿಮ್ಮಲ್ಲಿ ಮೂಡುವಂಥ ಹೊಸ ಆಶಯಗಳು ಮನಸ್ಸನ್ನು ಉತ್ಸಾಹದಿಂದ ಪ್ರೇರೇಪಿಸುತ್ತವೆ. ಪೊಲೀಸರು ಅಥವಾ ಸೇನೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಇಲ್ಲಿಯ ತನಕ ಸಿಗದೇ ಇದ್ದ ಕೆಲವು ಸವಲತ್ತುಗಳು ದೊರೆಯಲಿವೆ. ಶಾಲಾ ಶಿಕ್ಷಕರು ಮಕ್ಕಳಿಗೆ ಹೊಸ ವಿಧಾನದಲ್ಲಿ ಹೇಳಿಕೊಡುವ ಮೂಲಕ ಕಲಿಕೆ ಸುಗಮಗೊಳಿಸುತ್ತೀರಿ. ಲೇಖಕರು, ಕವಿ, ನಾಟಕ ಕಲಾವಿದರು ಹೊಸ ಸೃಜನಾತ್ಮಕ ಕಾರ್ಯಗಳಿಗೆ ಗುರುಗಳ ಸಮಾನರಾದ ವ್ಯಕ್ತಿಗಳಿಂದ ಪ್ರೇರಣೆ ಪಡೆಯುತ್ತೀರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಕ್ರೀಡಾಪಟುಗಳು ಸ್ಪರ್ಧಾ ತಯಾರಿ ತೀವ್ರವಾಗಿ ಮುಂದುವರಿಸುತ್ತೀರಿ. ದಿನಸಿ ಅಂಗಡಿ, ಸಲೂನ್ ಮಾಲೀಕರು ಗ್ರಾಹಕರು ನೀಡುವ ಫೀಡ್ ಬ್ಯಾಕ್ ನಿಂದ ಸೇವಾ ವಿಧಾನದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಿದ್ದೀರಿ. ಹಣಕಾಸು ವಿಚಾರದಲ್ಲಿ ಯೋಜಿತವಾದ ಖರ್ಚು, ಉಳಿತಾಯವನ್ನು ಮಾಡುವ ಕಡೆಗೆ ಲಕ್ಷ್ಯವನ್ನು ನೀಡಿ. ಕುಟುಂಬ ಸದಸ್ಯರ ಬೆಂಬಲದಿಂದ ನಿಮ್ಮ ಮೇಲಿನ ಒತ್ತಡದಲ್ಲಿ ಬಹಳ ಕಡಿಮೆಯಾಗುತ್ತದೆ.

ಲೇಖನ- ಸ್ವಾತಿ ಎನ್.ಕೆ.

Source link

ಕೊಲೆಸ್ಟ್ರಾಲ್ ನಿಯಂತ್ರಿಸಲು ಪ್ರತಿನಿತ್ಯ ಈ ಸಲಹೆಗಳನ್ನು ಮರೆಯದೆಯೇ ಅನುಸರಿಸಿ – Kannada News | Daily Habits to Manage High Cholesterol

ಇತ್ತೀಚಿನ ದಿನಗಳಲ್ಲಿ ನಮ್ಮ ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿ ಮಾಡಿಕೊಂಡಿರುವ ಬದಲಾವಣೆ, ದೈಹಿಕ ಚಟುವಟಿಕೆಯ ಕೊರತೆ ದೇಹದಲ್ಲಿ ಕೊಲೆಸ್ಟ್ರಾಲ್ (Cholesterol) ಮಟ್ಟ ಹೆಚ್ಚಾಗುವುದಕ್ಕೆ ಕಾರಣವಾಗುತ್ತದೆ. ಕೊಲೆಸ್ಟ್ರಾಲ್ ದೇಹಕ್ಕೆ ಅಗತ್ಯವಾದ ಒಂದು ರೀತಿಯ ಕೊಬ್ಬು, ಆದರೆ ಅದು ಹೆಚ್ಚಾದರೆ ಹಾನಿಕಾರಕವಾಗಬಹುದು. ಇದರಿಂದ ವ್ಯಕ್ತಿಯಲ್ಲಿ ಆಯಾಸ, ತಲೆತಿರುಗುವಿಕೆ, ಕೈ ಮತ್ತು ಕಾಲುಗಳಲ್ಲಿ ಮರಗಟ್ಟುವಿಕೆ ಅಥವಾ ನೋವು, ಉಸಿರಾಟದ ತೊಂದರೆ ಮತ್ತು ಎದೆಯಲ್ಲಿ ಅಸಹಜ ಒತ್ತಡದಂತಹ ಸಮಸ್ಯೆಗಳು ಕಂಡುಬರಬಹುದು. ಜೊತೆಗೆ ಕಣ್ಣುಗಳ ಸುತ್ತಲಿನ ಚರ್ಮದ ಸಿಪ್ಪೆ ಸುಲಿಯುವುದು ಅಥವಾ ತೂಕ ಹೆಚ್ಚಾಗುವುದು ಸಹ ಇದರ ಲಕ್ಷಣಗಳಾಗಿರಬಹುದು. ಪರೀಕ್ಷೆ ಮಾಡಿಕೊಳ್ಳದೆಯೇ ಹೆಚ್ಚಿನವರು ಇದನ್ನು ಸಾಮಾನ್ಯ ಆಯಾಸ ಎಂದು ನಿರ್ಲಕ್ಷ್ಯ ಮಾಡಬಹುದು. ಇದಲ್ಲದೆ, ದೀರ್ಘಕಾಲದ ವರೆಗೆ ಹೆಚ್ಚಿನ ಕೊಲೆಸ್ಟ್ರಾಲ್ ಇರುವುದು ಹೃದಯ ಸಂಬಂಧಿ ಕಾಯಿಲೆ ಮತ್ತು ಪಾರ್ಶ್ವವಾಯುವಿನಂತಹ ಗಂಭೀರ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷಿಸುವುದು ಅಪಾಯಕಾರಿ. ಹಾಗಾದರೆ ಕೊಲೆಸ್ಟ್ರಾಲ್ ನಿಯಂತ್ರಿಸಲು ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡಲು ಏನು ಮಾಡಬೇಕು?

ಸಾಮಾನ್ಯವಾಗಿ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡಲು, ಮೊದಲು ಆಹಾರಕ್ರಮದ ಬಗ್ಗೆ ಗಮನ ಕೊಡಬೇಕು. ಹುರಿದ ಮತ್ತು ಕೊಬ್ಬಿನಾಂಶ ಅಧಿಕವಾಗಿರುವ ಆಹಾರ ಸೇವನೆ ಮಾಡುವುದನ್ನು ಕಡಿಮೆ ಮಾಡಿ. ತಾಜಾ ಹಣ್ಣು, ತರಕಾರಿ, ಓಟ್ಸ್, ಕಡಲೆಕಾಯಿ ಮತ್ತು ಅಗಸೆ ಬೀಜಗಳಂತಹ ಆರೋಗ್ಯಕರ ಆಹಾರವನ್ನು ಸೇವಿಸಿ. ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ವಾಕಿಂಗ್, ಯೋಗ ಅಥವಾ ಸೈಕ್ಲಿಂಗ್‌ನಂತಹ ಲಘು ವ್ಯಾಯಾಮ ಮಾಡಿ. ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಿ. ನಿಯಮಿತವಾಗಿ ತಪಾಸಣೆ ಮಾಡಿಸಿಕೊಂಡು ವೈದ್ಯರು ಸೂಚಿಸಿದಂತೆ ಔಷಧಿಗಳನ್ನು ತೆಗೆದುಕೊಳ್ಳಿ. ಒತ್ತಡ ಕಡಿಮೆ ಮಾಡಲು, ಧ್ಯಾನ ಮತ್ತು ಆಳವಾದ ಉಸಿರಾಟವನ್ನು ಅಭ್ಯಾಸ ಮಾಡಿ. ಈ ರೀತಿಯ ಸಣ್ಣ ಬದಲಾವಣೆಗಳು ಕೂಡ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹ ಸಹಾಯ ಮಾಡಬಹುದು.

ಇದನ್ನೂ ಓದಿ: ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎಂಬುದನ್ನು ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣದಿಂದ ಕಂಡುಹಿಡಿಯಬಹುದು

ಯಾರಲ್ಲಿ ಈ ಅಪಾಯ ಹೆಚ್ಚಾಗಿ ಕಂಡುಬರುತ್ತದೆ?

  • ಹೆಚ್ಚು ಎಣ್ಣೆ ಹಾಗೂ ಕೊಬ್ಬಿನಾಂಶ ಹೆಚ್ಚಿರುವ ಆಹಾರ ಸೇವಿಸುವವರು
  • ಅತಿಯಾದ ತೂಕ ಹೊಂದಿರುವವರು
  • ದೈಹಿಕ ಚಟುವಟಿಕೆ ಕಡಿಮೆ ಇರುವವರು
  • ಧೂಮಪಾನ ಮತ್ತು ಮದ್ಯಪಾನ ಮಾಡುವವರು
  • ಕುಟುಂಬದಲ್ಲಿ ಹೃದಯ ರೋಗ ಅಥವಾ ಹೆಚ್ಚಿನ ಕೊಲೆಸ್ಟ್ರಾಲ್ ಇತಿಹಾಸ ಇರುವವರು

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs NAM: ನಮೀಬಿಯಾ ವಿರುದ್ಧ 93 ರನ್​ಗಳಿಂದ ಗೆದ್ದ ಟೀಂ ಇಂಡಿಯಾ – Kannada News | T20 World Cup 2026: India Dominates Namibia by 93 Runs; Kishan and Pandya Shine

2026ರ ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ಹಾಗೂ ನಮೀಬಿಯಾ ತಂಡಗಳು ಮುಖಾಮುಖಿಯಾಗಿದ್ದವು. ಪಂದ್ಯಕ್ಕೂ ಮುನ್ನ ನಿರೀಕ್ಷಿಸಿದ ಫಲಿತಾಂಶವೇ ಪಂದ್ಯದ ಬಳಿಕವೂ ಹೊರಬಿದ್ದಿದೆ. ಈ ಪಂದ್ಯದಲ್ಲಿ ನಮೀಬಿಯಾ ತಂಡವನ್ನು 93 ರನ್​ಗಳ ಭಾರಿ ಅಂತರದಿಂದ ಮಣಿಸಿದ ಟೀಂ ಇಂಡಿಯಾ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 209 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನಮೀಬಿಯಾ ಕೇವಲ 116 ರನ್​ಗಳಿಗೆ ಆಲೌಟ್ ಆಯಿತು. ಭಾರತದ ಈ ಗೆಲುವಿನಲ್ಲಿ ಇಶಾನ್ ಕಿಶನ್ ಮತ್ತು ಹಾರ್ದಿಕ್ ಪಾಂಡ್ಯ ಪ್ರಮುಖ ಪಾತ್ರವಹಿಸಿದರು. ಇಶಾನ್ 24 ಎಸೆತಗಳಲ್ಲಿ 61 ರನ್ ಗಳಿಸಿದರೆ, ಪಾಂಡ್ಯ 28 ಎಸೆತಗಳಲ್ಲಿ 52 ರನ್ ಬಾರಿಸುವುದರ ಜೊತೆಗೆ ಎರಡು ವಿಕೆಟ್‌ಗಳನ್ನು ಸಹ ಪಡೆದರು.

ಫೆಬ್ರವರಿ 12 ರಂದು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಸ್ಫೋಟಕ ಆರಂಭವನ್ನು ನೀಡಿ, ಪವರ್‌ಪ್ಲೇನಲ್ಲಿ ತಂಡವನ್ನು 86 ರನ್‌ಗಳಿಗೆ ಕೊಂಡೊಯ್ದರು. ಇಶಾನ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, 24 ಎಸೆತಗಳಲ್ಲಿ 61 ರನ್‌ಗಳಿಸಿ ಔಟಾದರು. ಅವರ ನಂತರ ಹಾರ್ದಿಕ್ ಪಾಂಡ್ಯ 28 ಎಸೆತಗಳಲ್ಲಿ 52 ರನ್‌ಗಳ ಬಿರುಸಿನ ಆಟವಾಡಿದರು. ಆದಾಗ್ಯೂ, ಕೊನೆಯ 2 ಓವರ್‌ಗಳಲ್ಲಿ ಟೀಂ ಇಂಡಿಯಾ ಕೇವಲ 10 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿತು. ನಮೀಬಿಯಾ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಗರಿಷ್ಠ 4 ವಿಕೆಟ್‌ಗಳನ್ನು ಪಡೆದರು.

ಈ ಗುರಿ ಬೆನ್ನಟ್ಟಿದ ನಮೀಬಿಯಾ ಪವರ್‌ಪ್ಲೇನಲ್ಲಿ 57 ರನ್‌ಗಳನ್ನು ಗಳಿಸುವ ಮೂಲಕ ಸ್ಫೋಟಕ ಆರಂಭವನ್ನು ಪಡೆದುಕೊಂಡಿತು. ಆರಂಭಿಕರಾದ ಜಾನ್ ಫ್ರೈಲಿಂಕ್ ಮತ್ತು ಲಾರೆನ್ ಸ್ಟೀನ್‌ಕ್ಯಾಂಪ್ ಉತ್ತಮ ಜೊತೆಯಾಟ ಕಟ್ಟಿದರು. ಆದಾಗ್ಯೂ, ಪವರ್‌ಪ್ಲೇ ಮುಗಿದ ನಂತರ, ನಮೀಬಿಯಾದ ಇನ್ನಿಂಗ್ಸ್ ಕುಸಿಯಿತು. ವರುಣ್ ಚಕ್ರವರ್ತಿ ಸತತ ಎರಡು ಓವರ್‌ಗಳಲ್ಲಿ ಮೂರು ವಿಕೆಟ್‌ಗಳನ್ನು ಪಡೆದರು. ನಂತರ ಅಕ್ಷರ್ ಪಟೇಲ್ ಎರಡು ವಿಕೆಟ್‌ಗಳನ್ನು ಪಡೆದರು. ಹಾಗೆಯೇ ಹಾರ್ದಿಕ್ ಪಾಂಡ್ಯ 18 ನೇ ಓವರ್‌ನಲ್ಲಿ ಎರಡು ವಿಕೆಟ್‌ಗಳನ್ನು ಪಡೆದು ನಮೀಬಿಯಾದ ಸೋಲನ್ನು ಖಚಿತಪಡಿಸಿದರು.

Published On – 10:45 pm, Thu, 12 February 26

Source link

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ – Kannada News | Comedy Khiladigalu Manthana allegations on WTC Utsava organisers

ಇತ್ತೀಚೆಗೆ WTC ಉತ್ಸವ (WTC Utsava) ಎಂಬ ಹೆಸರಿನಲ್ಲಿ ಮಹಿಳೆಯರ ಕ್ರಿಕೆಟ್ ಟೂರ್ನಮೆಂಟ್ ನಡೆದಿತ್ತು. ಅದರಲ್ಲಿ ಹಲವು ನಟಿಯರು ಭಾಗಿಯಾಗಿದ್ದರು. ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಂಥನಾ ಕೂಡ ಆಟ ಆಡಿದ್ದರು. ಆ ಟೂರ್ನಿ ಮುಗಿಸಿ ಮನೆಗೆ ತೆರಳುವಾಗ ಮಂಥನಾ ಅವರ ಕಾರಿಗೆ ಅಪಘಾತ (Accident) ಆಯಿತು. ‘WTC ಉತ್ಸವ’ ಆಯೋಜಕರು ಆ ಸಂದರ್ಭದಲ್ಲಿ ಕಾಳಜಿ ತೋರಿಸಿಲ್ಲ ಎಂದು ಮಂಥನಾ (Manthana) ಆರೋಪಿಸಿದ್ದಾರೆ. ‘ಅಪಘಾತ ಆದ ಬಳಿಕ ನಾವು ಪೊಲೀಸ್ ಠಾಣೆಗೆ ಹೋಗಿದ್ದೆವು. ಆ ಸಮಯದಲ್ಲಿ ಆಯೋಜಕರು ಯಾರೂ ಕೂಡ ನಮ್ಮ ಬಗ್ಗೆ ಕಾಳಜಿ ವಹಿಸಿಲ್ಲ. ಹಣದ ಸಲುವಾಗಿ ನಾನು ಧ್ವನಿ ಎತ್ತಿಲ್ಲ. ಅವರು ಮಾನವೀಯತೆಯ ದೃಷ್ಟಿಯಿಂದಲೂ ಒಂದು ಮಾತು ವಿಚಾರಿಸಿಲ್ಲ. ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ಸುರಕ್ಷತೆ ಇಲ್ಲ ಎಂದರೆ ಇವರು ಈ ರೀತಿ ಟೂರ್ನಮೆಂಟ್ ಮಾಡಬಾರದು’ ಎಂದು ಮಂಥನಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕಪ್ಪು ಚಿರತೆಯ ಜೊತೆ ನದಿಯ ನೀರು ಕುಡಿದ ಚಿರತೆ; ಭದ್ರಾ ಹುಲಿ ಅಭಯಾರಣ್ಯದ ವಿಡಿಯೋ ವೈರಲ್ – Kannada News | Black Panther and Leopard Drinking Water together At Karnatakas Bhadra Tiger Reserve watch viral Video

ಬೆಂಗಳೂರು, ಫೆಬ್ರವರಿ 12: ಕರ್ನಾಟಕದ ಭದ್ರಾ ಹುಲಿ ಅಭಯಾರಣ್ಯದಲ್ಲಿ ಬ್ಲಾಕ್ ಪ್ಯಾಂಥರ್ (ಕಪ್ಪು ಚಿರತೆ) ಮತ್ತು ಚಿರತೆ ಒಟ್ಟಾಗಿ ಕುಳಿತು ನದಿಯಲ್ಲಿ ನೀರು ಕುಡಿಯುತ್ತಿರುವ ವಿಡಿಯೋ ಇಡೀ ದೇಶದ ಗಮನ ಸೆಳೆದಿದೆ. ಒಂದು ಕಪ್ಪು ಚಿರತೆ ಮತ್ತು ಒಂದು ಮಾಮೂಲಿ ಚಿರತೆ ಶಾಂತವಾಗಿ ಒಟ್ಟಿಗೆ ನೀರು ಕುಡಿಯುತ್ತಿರುವ ಫೋಟೋ ಹಾಗೂ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿವೆ.

ಈ ಅಪರೂಪದ ದೃಶ್ಯವನ್ನು ವನ್ಯಜೀವಿ ಛಾಯಾಗ್ರಾಹಕ ಅರವಿಂದ್ ಕಾರ್ತಿಕ್ ಸೆರೆ ಹಿಡಿದಿದ್ದಾರೆ. ಇದನ್ನು ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link