All posts by nagaraj11081993

ನಾನು ಅಷ್ಟೊಂದು ಹೆದರಿದ್ದೆ… ಕೈಲ್ ಜೇಮಿಸನ್ ಬಹಿರಂಗ ಹೇಳಿಕೆ – Kannada News | Kyle Jamieson Shaken by 15 Year Old Vaibhav Sooryavanshi

ವಯಸ್ಸು ಜಸ್ಟ್​ ನಂಬರ್ ಅಷ್ಟೇ… ಎಂಬುದನ್ನು ವೈಭವ್ ಸೂರ್ಯವಂಶಿ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಐಪಿಎಲ್ ಇತಿಹಾಸದ ಅತ್ಯಂತ ಕಿರಿಯ ಆಟಗಾರನ ಆಕ್ರಮಣಕಾರಿ ಆಟಕ್ಕೆ ಬೆಚ್ಚಿಬಿದ್ದಿರುವ ಕೈಲ್ ಜೇಮಿಸನ್, ವೈಭವ್‌ರನ್ನು ನೋಡಿ ತಾನು ಭಯಭೀತನಾಗಿದ್ದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಕುತೂಹಲಕಾರಿ ವಿಷಯ ಎಂದರೆ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ವೈಭವ್ ಸೂರ್ಯವಂಶಿಯ ವಿಕೆಟ್ ಅನ್ನು ಜೇಮಿಸನ್ ಅವರೇ ಪಡೆದಿದ್ದರು. ಇದೀಗ ವಿಕೆಟ್ ಪಡೆದಿದ್ದಕ್ಕಿಂತ ಹೆಚ್ಚಾಗಿ, ವೈಭವ್ ಸೂರ್ಯವಂಶಿ ಬಗ್ಗೆ ನೀಡಿದ ಹೇಳಿಕೆ ಈಗ ಎಲ್ಲೆಡೆ ವೈರಲ್ ಆಗಿದೆ.

ಮೇ 1, 2026 ರಂದು ನಡೆದ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿದ್ದ ವೈಭವ್ ಸೂರ್ಯವಂಶಿ, ಜೇಮಿಸನ್ ಎಸೆದ ಮೊದಲ ಎಸೆತವನ್ನೇ ಬೌಂಡರಿಗಟ್ಟುವ ಮೂಲಕ ತಮ್ಮ ಬ್ಯಾಟಿಂಗ್ ಪರಾಕ್ರಮ ಮೆರೆದಿದ್ದರು. ಆದಾಗ್ಯೂ, ಮರು ಎಸೆತದಲ್ಲೇ ಜೇಮಿಸನ್ ಒಂದು ಅದ್ಭುತ ಯಾರ್ಕರ್ ಮೂಲಕ ವೈಭವ್ ಅವರ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ವಿಕೆಟ್ ಪಡೆದ ಖುಷಿಯಲ್ಲಿ ಜೇಮಿಸನ್ ಅತ್ಯಂತ ಆಕ್ರಮಣಕಾರಿಯಾಗಿ ಸಂಭ್ರಮಿಸಿದ್ದರು. ಕೇವಲ 15 ವರ್ಷದ ಬಾಲಕನ ಎದುರು ಇಷ್ಟೊಂದು ಅಗ್ರೆಸಿವ್ ಆಗಿ ವರ್ತಿಸಿದ್ದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶಗಳು ವ್ಯಕ್ತವಾಗಿದ್ದವು. ಈ ಆಕ್ರೋಶದ ನಡುವೆ ಇದೀಗ ಜೇಮಿಸನ್ ನೀಡಿರುವ ಹೇಳಿಕೆ ಇದೀಗ ಎಲ್ಲರ ಗಮನ ಸೆಳೆದಿದೆ.

 “ನಾನು ಅಷ್ಟೊಂದು ಹೆದರಿದ್ದೆ…”

ಪಂದ್ಯದ ನಂತರ ಮಾತನಾಡಿದ ಕೈಲ್ ಜೇಮಿಸನ್, ತಾನು ಅಷ್ಟೊಂದು ಆಕ್ರಮಣಕಾರಿಯಾಗಿ ಸಂಭ್ರಮಿಸಲು ಕಾರಣವೇನು ಎಂಬುದನ್ನು ಬಹಿರಂಗಪಡಿಸಿದ್ದಾರೆ. “ನನ್ನ ಜೀವನದಲ್ಲಿ ನಾನು ಎಂದಿಗೂ ಒಬ್ಬ 15 ವರ್ಷದ ಬಾಲಕನಿಗೆ ಈ ಮಟ್ಟಿಗೆ ಹೆದರಿರಲಿಲ್ಲ. ಆತ ಅಷ್ಟು ಭಯಾನಕ ಬ್ಯಾಟಿಂಗ್ ಮಾಡುತ್ತಾನೆ,” ಎಂದು ಜೇಮಿಸನ್ ಮುಕ್ತವಾಗಿ ಒಪ್ಪಿಕೊಂಡಿದ್ದಾರೆ.

ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್ ಶೈಲಿ ಮತ್ತು ಅವರು ಬೌಲರ್‌ಗಳ ಮೇಲೆ ಹೇರುವ ಒತ್ತಡವು ತನ್ನನ್ನು ಆ ಮಟ್ಟಿಗೆ ಆತಂಕಕ್ಕೀಡು ಮಾಡಿತ್ತು ಎಂದು ಅವರು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ್ದರೂ ನಾನು 15 ವರ್ಷದ ಹುಡುಗನಿಗೆ ಚೆಂಡೆಸೆಯಲು ಹೆದರಿದ್ದೇನೆ. ನನ್ನ ಜೀವನದಲ್ಲೇ ಒಬ್ಬ ಬಾಲಕನಿಗೆ ನಾನು ಎಂದಿಗೂ ಈ ಮಟ್ಟಿಗೆ ನಾನು ಹೆದರಿರಲಿಲ್ಲ ಎಂದು ಕೈಲ್ ಜೇಮಿಸನ್, ವೈಭವ್ ಸೂರ್ಯವಂಶಿಯ ಬ್ಯಾಟಿಂಗ್ ಪರಾಕ್ರಮವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ರಣರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್

ವೈಭವ್ ಸೂರ್ಯವಂಶಿ ಈಗಾಗಲೇ ವಿಶ್ವದ ಪ್ರಮುಖ ವೇಗಿಗಳಾದ ಜಸ್​ಪ್ರೀತ್ ಬುಮ್ರಾ, ಜೋಶ್ ಹೇಝಲ್​ವುಡ್, ಕಗಿಸೊ ರಬಾಡ, ಭುವನೇಶ್ವರ್ ಕುಮಾರ್ ಅವರ ಬೆಂಡೆತ್ತಿದ್ದಾರೆ. ಇದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಬೇಗನೆ ವಿಕೆಟ್ ಒಪ್ಪಿಸಿದ್ದ ಕಾರಣಕ್ಕೆ ಮಿಚೆಲ್ ಸ್ಟಾರ್ಕ್​ ಹಾಗೂ ಕೈಲ್ ಜೇಮಿಸನ್ ಯುವ ದಾಂಡಿಗನ ಪರಾಕ್ರಮದಿಂದ ಪಾರಾಗಿದ್ದಾರೆ. ಇದಾಗ್ಯೂ ವೈಭವ್​ಗೆ ಚೆಂಡೆಸೆಯಲು ಬೌಲರ್​ಗಳು ಎಷ್ಟು ಭಯ ಪಡುತ್ತಿದ್ದಾರೆ ಎಂಬುದಕ್ಕೆ ಕೈಲ್ ಜೇಮಿಸನ್ ನೀಡಿರುವ ಹೇಳಿಕೆಯೇ ಸಾಕ್ಷಿ.

Source link

ರಣರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್ – Kannada News | Islamabad United vs Hyderabad Kingsmen Match Highlights

ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಹೈದರಾಬಾದ್​ ಕಿಂಗ್ಸ್​ಮೆನ್ ತಂಡ ಫೈನಲ್​​ಗೇರಿದೆ. ಅದು ಕೂಡ ಕೇವಲ 2 ರನ್​ಗಳ ರೋಚಕ ಜಯದೊಂದಿಗೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಹೈದರಾಬಾದ್ ಕಿಂಗ್ಸ್​ಮೆನ್ ಹಾಗೂ ಇಸ್ಲಾಮಾಬಾದ್ ಯುನೈಟೆಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ಕಿಂಗ್ಸ್​​ಮೆನ್ ತಂಡವು 20 ಓವರ್​​ಗಳಲ್ಲಿ 186 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಇಸ್ಲಾಮಾಬಾದ್ ಯುನೈಟೆಡ್ ತಂಡಕ್ಕೆ ಕೊನೆಯ ಓವರ್​ನಲ್ಲಿ ಗೆಲ್ಲಲು ಕೇವಲ 6 ರನ್​ಗಳ ಅವಶ್ಯಕತೆಯಿತ್ತು. ಅದರಂತೆ ಅಂತಿಮ ಓವರ್​ನಲ್ಲಿ ದಾಳಿಗಿಳಿದ ಹುನೈನ್ ಶಾ ಮಾರಕ ದಾಳಿಯೊಂದಿಗೆ ಇಡೀ ಪಂದ್ಯದ ಚಿತ್ರಣ ಬದಲಿಸಿ ಬಿಟ್ಟರು..

ಮೊದಲ ಮೂರು ಎಸೆತಗಳಲ್ಲಿ ಕೇವಲ ಹುನೈನ್ ಶಾ ಕೇವಲ ಒಂದು ರನ್ ಮಾತ್ರ ಬಿಟ್ಟುಕೊಟ್ಟರು. ಅಲ್ಲದೆ ನಾಲ್ಕನೇ ಎಸೆತದಲ್ಲಿ ಫಯೀಮ್ ಅಶ್ರಫ್ ವಿಕೆಟ್ ಕಬಳಿಸಿದರು. ಇನ್ನು 5ನೇ ಮತ್ತು 6ನೇ ಎಸೆತಗಳಲ್ಲಿ ನೀಡಿದ್ದು ಕೇವಲ 2 ರನ್​ ಮಾತ್ರ. ಈ ಮೂಲಕ ಕೊನೆಯ ಓವರ್​ನಲ್ಲಿ ಕೇವಲ 2 ರನ್​ಗಳ ರೋಚಕ ಜಯ ತಂದುಕೊಡುವ ಮೂಲಕ ಹೈದರಾಬಾದ್ ಕಿಂಗ್ಸ್​ಮೆನ್ ತಂಡವನ್ನು ಫೈನಲ್​ಗೇರಿಸಿದ್ದಾರೆ.

ಅದರಂತೆ ಫೈನಲ್ ಪಂದ್ಯವು ಮೇ 3 ರಂದು ನಡೆಯಲಿದ್ದು, ಅಂತಿಮ ಹಣಾಹಣಿಯಲ್ಲಿ ಬಾಬರ್ ಆಝಂ ನೇತೃತ್ವದ ಪೇಶಾವರ್ ಝಲ್ಮಿ ಹಾಗೂ ಮಾರ್ನಸ್ ಲಾಬುಶೇನ್ ಮುಂದಾಳತ್ವದ ಹೈದರಾಬಾದ್ ಕಿಂಗ್ಸ್​ಮೆನ್ ತಂಡಗಳು ಮುಖಾಮುಖಿಯಾಗಲಿದೆ.

 

Source link

ಪತಿಗೆ ವಿಚ್ಛೇದನ ನೀಡಿದ ಬಾಲಿವುಡ್ ನಟಿ; ಅಧಿಕೃತ ಘೋಷಣೆ – Kannada News | Evelyn Sharma Announces Divorce from Tuhaan Bhindi: YJHD Actress Separates

‘ಯೇ ಜವಾನಿ ಹೇ ದಿವಾನಿ’ ಸಿನಿಮಾದಲ್ಲಿ ನಟಿಸಿ ಜನಪ್ರಿಯತೆ ಪಡೆದವರು ಎವೆಲಿನ್ ಶರ್ಮಾ. ಅವರು ಈಗ ಒಂದು ಶಾಕಿಂಗ್ ಘೋಷಣೆ ಮಾಡಿದ್ದಾರೆ. ಅವರ ಪತಿ ತುಶಾನ್ ಭಿಂಡಿ ತಮ್ಮ ಐದು ವರ್ಷಗಳ ವೈವಾಹಿಕ ಜೀವನಕ್ಕೆ ಅಧಿಕೃತವಾಗಿ ವಿದಾಯ ಹೇಳಿದ್ದಾರೆ. ಕಳೆದ ಕೆಲವು ಸಮಯದಿಂದ ಇವರ ಸಂಬಂಧದ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ಈಗ ಸ್ವತಃ ಎವೆಲಿನ್ ಶರ್ಮಾ ಅವರೇ ವಿಚ್ಛೇದನದ ಬಗ್ಗೆ ಮಾಹಿತಿ ನೀಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ತಮ್ಮ ವಿಚ್ಛೇದನದ ಬಗ್ಗೆ ಮಾತನಾಡಿದ ಎವೆಲಿನ್, ಈ ನಿರ್ಧಾರವು ಪರಸ್ಪರ ಸಮ್ಮತಿಯಿಂದ ಕೂಡಿದೆ ಎಂದು ತಿಳಿಸಿದ್ದಾರೆ. ‘ನಾವು ಬೇರೆ ಹಾದಿಯಲ್ಲಿ ಸಾಗಲು ನಿರ್ಧರಿಸಿದ್ದೇವೆ, ಆದರೆ ನಮ್ಮ ಮಕ್ಕಳನ್ನು ಒಟ್ಟಾಗಿ ಬೆಳೆಸುವತ್ತ ನಾವಿಬ್ಬರೂ ಗಮನಹರಿಸಿದ್ದೇವೆ’ ಎಂದು ಅವರು ಹೇಳಿದ್ದಾರೆ. ಈ ಹೊಸ ಅಧ್ಯಾಯವನ್ನು ಆಜೀವ ಗೆಳೆತನ ಮತ್ತು ಪೋಷಕರ ಜವಾಬ್ದಾರಿಯ ಮೇಲೆ ನಿರ್ಮಿಸುತ್ತಿದ್ದೇವೆ ಎಂದು ತಿಳಿಸಿದ ಅವರು, ತಮ್ಮ ಖಾಸಗಿತನವನ್ನು ಗೌರವಿಸಬೇಕೆಂದು ಮನವಿ ಮಾಡಿದ್ದಾರೆ.

2012ರಲ್ಲಿ ‘ಫ್ರಮ್ ಸಿಡ್ನಿ ವಿತ್ ಲವ್’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ ಎವೆಲಿನ್, ‘ಯೇ ಜವಾನಿ ಹೈ ದೀವಾನಿ’ ಚಿತ್ರದ ಮೂಲಕ ಹೆಚ್ಚು ಜನಪ್ರಿಯತೆ ಗಳಿಸಿದರು.
ಬಾಲಿವುಡ್ ಮಾತ್ರವಲ್ಲದೆ ಪಂಜಾಬಿ, ಇಂಗ್ಲಿಷ್ ಮತ್ತು ತೆಲುಗು ಸಿನಿಮಾಗಳಲ್ಲೂ ಅವರು ಅಭಿನಯಿಸಿದ್ದಾರೆ 2019ರಲ್ಲಿ ತೆರೆಕಂಡ ‘ಸಾಹೋ’ ಚಿತ್ರದ ನಂತರ ಅವರು ಸಿನಿಮಾ ರಂಗದಿಂದ ಕೊಂಚ ದೂರ ಉಳಿದಿದ್ದಾರೆ.

ಇದನ್ನೂ ಓದಿ: ನಟಿಸುವಾಗ ಇಂಥದ್ದೇ ಮಾತಿಗೆ ಅಳಬೇಕು ಎಂದರೆ ಹಾಗೆಯೇ ಮಾಡುತ್ತಾರೆ ರಣಬೀರ್

2019ರಲ್ಲಿ ಈ ಜೋಡಿ ಪರಸ್ಪರ ನಿಶ್ಚಿತಾರ್ಥ ಮಾಡಿಕೊಂಡಿತ್ತು ಮತ್ತು 2021ರಲ್ಲಿ ವಿವಾಹ ಆಗಿತ್ತು. ಇವರಿಗೆ ಒಬ್ಬ ಮಗ ಮತ್ತು ಒಬ್ಬಳು ಮಗಳಿದ್ದು, ಪ್ರಸ್ತುತ ಎವೆಲಿನ್ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನೆಲೆಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಅವರು ತಮ್ಮ ಮಕ್ಕಳ ಅಪ್‌ಡೇಟ್‌ಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಿಡಿಎಗೆ ಸೇರಿದ 160 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ ಯತ್ನ: ಐವರ ವಿರುದ್ಧ ಎಫ್‌ಐಆರ್ ದಾಖಲು – Kannada News | Bengaluru Crime: FIR Registered Against Five for Grabbing BDA Land Worth Rs 160 Crore Using Fake Documents

ಬಿಡಿಎಗೆ ಸೇರಿದ 160 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ ಯತ್ನImage Credit source: tv9

ಬೆಂಗಳೂರು, ಮೇ 2: ಬೆಂಗಳೂರಿನಲ್ಲಿ (Bengaluru) 160 ಕೋಟಿ ರೂ. ಮೌಲ್ಯದ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಜಮೀನನ್ನು ನಕಲಿ ದಾಖಲೆಗಳ ಮೂಲಕ ಅಕ್ರಮವಾಗಿ ಕಬಳಿಕೆ ಮಾಡಲು ಯತ್ನಿಸಿದ ಪ್ರಕರಣವು ಬೆಳಕಿಗೆ ಬಂದಿದೆ. ಬೆಂಗಳೂರು ದಕ್ಷಿಣದ ಕೊತ್ತನೂರಿನಲ್ಲಿರುವ ಬಿಡಿಎ ಆಸ್ತಿ ಕಬಳಿಕೆ ಆರೋಪ ಸಂಬಂಧ ಲಕ್ಷ್ಮೀನಾರಾಯಣ, ಮಾರುತಿ ಕುಮಾರ್ ಸೇರಿದಂತೆ ಐವರ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (FIR) ದಾಖಲಾಗಿದೆ.

ಬಿಡಿಎ ಆಸ್ತಿ ಕಬಳಿಕೆ ಯತ್ನ ಪ್ರಕರಣದ ಹಿನ್ನೆಲೆ

ಡಿವೈಎಸ್‌ಪಿ ಹನುಮಂತರಾಯ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣವನ್ನು ದಾಖಲಿಸಲಾಗಿದ್ದು, ಸರ್ಕಾರಿ ಜಾಗವನ್ನು ನಕಲಿ ದಾಖಲೆಗಳ ಮೂಲಕ ಗುಳುಂ ಮಾಡಲು ಯತ್ನಿಸಿದ ಭೂಗಳ್ಳರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈ 160 ಕೋಟಿ ರೂ. ಮೌಲ್ಯದ ಜಾಗವು ಸರ್ವೆ ನಂಬರ್ 177/1 ಮತ್ತು 176/1 ರಲ್ಲಿ ಬರುವ 10 ಗುಂಟೆ ಆಸ್ತಿಯಾಗಿದೆ. ಬಿಡಿಎ ಈ ಆಸ್ತಿಯನ್ನು 1994ರ ಅಕ್ಟೋಬರ್‌ನಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿ ಸ್ವಾಧೀನಪಡಿಸಿಕೊಂಡಿತ್ತು. 1995ರ ಡಿಸೆಂಬರ್‌ನಲ್ಲಿ ಇದಕ್ಕೆ ಸಂಬಂಧಿಸಿದ ತೀರ್ಪು ಅನುಮೋದನೆಗೊಂಡಿತ್ತು ಮತ್ತು 1999ರಲ್ಲಿ ಇದನ್ನು ಅಭಿಯಂತರ ವಿಭಾಗಕ್ಕೆ ಹಸ್ತಾಂತರಿಸಲಾಗಿತ್ತು.

ನಕಲಿ ದಾಖಲೆ ಸೃಷ್ಟಿಸಿ ಕೃತ್ಯ


ಈ ಜಮೀನು ಬಿಡಿಎಗೆ ಸೇರಿದ್ದೆಂದು ಕರ್ನಾಟಕ ಹೈಕೋರ್ಟ್ ಸಹ ಆದೇಶ ನೀಡಿತ್ತು. ಅಷ್ಟೇ ಅಲ್ಲದೆ, 1996ರಲ್ಲಿ ವಾರಸುದಾರರಾದ ಮಾರಿಯಮ್ಮ ಅವರಿಗೆ ಬಿಡಿಎ ಕಡೆಯಿಂದ ಪರಿಹಾರವನ್ನೂ ನೀಡಲಾಗಿತ್ತು. ಆದರೂ, ಆರೋಪಿಗಳು ನಕಲಿ ಜಿಪಿಎ ದಾಖಲೆಗಳನ್ನು ಸೃಷ್ಟಿಸಿ ಈ ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಕಬಳಿಸಲು ಯತ್ನಿಸಿದ್ದಾರೆ. ಇತ್ತೀಚೆಗೆ ಹರ್ಷವರ್ಧನ್ ಎಂಬುವರು ಬಿಡಿಎ ಆಯುಕ್ತರಿಗೆ ಈ ಬಗ್ಗೆ ದೂರು ನೀಡಿದ್ದರು. ಡಿವೈಎಸ್‌ಪಿ ಹನುಮಂತರಾಯ ಅವರು ಈ ದೂರಿನ ತನಿಖೆ ನಡೆಸಿ, ನಕಲಿ ದಾಖಲೆಗಳ ಸೃಷ್ಟಿ ನಡೆದಿರುವುದನ್ನು ಖಚಿತಪಡಿಸಿಕೊಂಡ ನಂತರ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ

ಪ್ರತ್ಯೇಕ ಸರ್ವೆ ನಂಬರ್‌ಗಳ ಕಾರಣದಿಂದ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸದ್ಯ ಐವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:35 pm, Sat, 2 May 26

Source link

ಪೆಟ್ರೋಲ್, ಡಿಸೇಲೆ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ವಾಹನ ಸವಾರರು – Kannada News | Bengaluru Fuel Price Hike Fear: Petrol, Diesel and LPG Costs Set to Rise

ಬೆಂಗಳೂರು, ಮೇ 02: ವಾಣಿಜ್ಯ ಸಿಲಿಂಡರ್ ಮತ್ತು ಎಲ್‌ಪಿಜಿ ಅನಿಲದ ಬೆಲೆ ಏರಿಕೆಯ ನಂತರ, ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಯು ವಾಹನ ಸವಾರರು ಮತ್ತು ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 102.96 ರೂಪಾಯಿ ಇದೆ. ಮುಂಬರುವ ನಾಲ್ಕರಿಂದ ಐದು ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು 5 ರಿಂದ 6 ರೂಪಾಯಿವರೆಗೆ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪಂಚರಾಜ್ಯಗಳ ಚುನಾವಣೆಗಳು ಮುಗಿದ ನಂತರ ಈ ದರ ಏರಿಕೆ ಆಗುವ ಸೂಚನೆಗಳು ಕಂಡುಬರುತ್ತಿವೆ. ಈಗಾಗಲೇ ಗ್ಯಾಸ್ ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮ ಮತ್ತು ಆಟೋ ಚಾಲಕರು ಸಮಸ್ಯೆ ಎದುರಿಸುತ್ತಿದ್ದಾರೆ. ಇಂಧನ ಬೆಲೆ ಏರಿಕೆಯು ಸಾರ್ವಜನಿಕರ ಮೇಲೆ ಇನ್ನಷ್ಟು ಆರ್ಥಿಕ ಹೊರೆ ಹೇರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಕ್ಕಳ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಯಲ್ಲೇ ಕಳ್ಳತನ ಮಾಡಿದ ಅತ್ತೆ – Kannada News | Woman Steals 16 Lakh worth Gold from Son in Law’s House in Belagavi to Repay Marriage Loan

ಬೆಳಗಾವಿ, ಮೇ 02: ಪುತ್ರಿಯರ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಗೆ ಅತ್ತೆ ಕನ್ನಹಾಕಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಳಿಯ ಮತ್ತು ಮಗಳು ಮನೆಯಲ್ಲಿ ಇಲ್ಲದಾಗ ಸಂಬಂಧಿ ಶಿವ ಎಂಬವನ ಜೊತೆ ಸೇರಿಕೊಂಡು ಬೆಳಗಾವಿಯ ಪಿರಣವಾಡಿ ನಿವಾಸಿ ಉಜ್ವಲಾ ಕಮ್ಮಾರ ಎಂಬಾಕೆ ಕಳ್ಳತನ ನಡೆಸಿದ್ದು, ಆರೋಪಿಗಳ ಬಂಧನವಾಗಿದೆ. 16 ಲಕ್ಷ ಮೌಲ್ಯದ 110ಗ್ರಾಂ ಚಿನ್ನದ ಆಭರಣವನ್ನು ಆರೋಪಿಗಳು ಎಗರಿಸಿದ್ದರು. ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ಅತ್ತೆಯನ್ನು ಅಳಿಯ ವಿಚಾರಿಸಿದ್ದ . ಆದರೆ ತನಗೆ ಏನೂ ಗೊತ್ತಿಲ್ಲ ಎಂದು ಅಳಿಯನ ಬಳಿ ಅತ್ತೆ ಡ್ರಾಮಾ ಮಾಡಿದ್ದಳು. ಬಳಿಕ ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣೆಗೆ ಅಳಿಯ ದೂರು ನೀಡಿದ್ದು, ಪೊಲೀಸರು ತೀವ್ರ ವಿಚಾರಣೆ ಮಾಡಿದಾಗ ಕಳ್ಳತನ ಮಾಡಿದ್ದಾಗಿ ಅತ್ತೆಯೇ ತಪ್ಪೊಪ್ಪಿಕೊಂಡಿದ್ದಾಳೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ – Kannada News | Bowring Hospital Wall Collapse: Two BBMP Officials Suspended Following Tragic Death of Seven in Bengaluru

ಬೆಂಗಳೂರು, ಮೇ 2: ಬೆಂಗಳೂರಿನಲ್ಲಿ ಏಪ್ರಿಲ್ 29 ರಂದು ಸುರಿದ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ದುರಂತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದರು. ಶಿವಾಜಿನಗರ ವಿಭಾಗದ ಕಾರ್ಯಪಾಲಕ ಅಭಿಯಂತರ ಮೊಹಮ್ಮದ್ ಜಾವೇದ್ ಮತ್ತು ವಸಂತನಗರ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ರುದ್ರಮುನಿ ಅಮಾನತಾಗಿದ್ದಾರೆ. ಕರ್ತವ್ಯ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಮುಖ್ಯ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಘಟನೆಯ ಕುರಿತು ತನಿಖೆಗೂ ಆದೇಶಿಸಲಾಗಿತ್ತು.

ಮಳೆಯಿಂದ ರಕ್ಷಣೆ ಪಡೆಯಲು ಗೋಡೆಯ ಪಕ್ಕದಲ್ಲಿ ನಿಂತಿದ್ದವರ ಮೇಲೆ ಕಾಂಪೌಂಡ್ ಕುಸಿದು ಬಿದ್ದಿತ್ತು. ಕಾಂಪೌಂಡ್ ಬದಿಯಲ್ಲಿ ಹಾಕಿದ್ದ ಮಣ್ಣಿನ ಒತ್ತಡ ತಡೆಯಲಾಗದೆ ಗೋಡೆ ಕುಸಿದಿತ್ತು ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದೆ.

ವರದಿ: ಲಕ್ಷ್ಮೀ ನರಸಿಂಹ, ಟಿವಿ9

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಈ ತಿಂಗಳು ಈ ರಾಶಿಯವರು ಮಹಾತ್ಮರ ಅಥವಾ ದೊಡ್ಡವರ ವಿರೋಧವನ್ನು ಎದುರಿಸಬೇಕಾದೀತು

ಮಕರ ರಾಶಿಗೆ ಉತ್ತರಾಷಾಢ, ಶ್ರವಣ, ಧನಿಷ್ಠಾ ನಕ್ಷತ್ರಗಳು ಇರಲಿದ್ದು ಶ್ರವಣಾ ನಕ್ಷತ್ರಕ್ಕೆ ವಿಶೇಷ ಪರಿಣಾಮ ಬೀರಲಿದೆ. ಮೇ 2026ರಲ್ಲಿ ಮಕರ ರಾಶಿಯವರ ಗೋಚಾರ ಫಲ ಹಾಗೂ ಗ್ರಹಗತಿಗಳ ಪ್ರಭಾವದ ಹೀಗಿರಲಿದೆ.

​ಗ್ರಹಗಳ ಸಂಚಾರ:

ಮಕರ ರಾಶಿಯವರಿಗೆ ಈ ತಿಂಗಳು ಗ್ರಹಗತಿಗಳು ಸವಾಲು ಮತ್ತು ಅವಕಾಶಗಳೆರಡನ್ನೂ ನೀಡುತ್ತಿವೆ. ​ಗುರುವು ನಿಮ್ಮ ರಾಶಿಯಿಂದ ಆರನೇ ಮನೆಯಲ್ಲಿರುವುದು ಅಷ್ಟೊಂದು ಶುಭಕರವಲ್ಲ. ಶತ್ರುಗಳ ಕಾಟ ಅಥವಾ ಸಾಲದ ಸುಳಿ ಕಂಡುಬರಬಹುದು.

  • ​ರವಿ ದಶೆ: ನಾಲ್ಕನೇ ಮನೆಯಲ್ಲಿ ರವಿ ಇರುವುದು ಸುಖಸ್ಥಾನಕ್ಕೆ ಕಿರಿಕಿರಿ ಉಂಟುಮಾಡಬಹುದು.
  • ಶುಕ್ರ ದಶೆ: ಐದನೇ ಮನೆಯಲ್ಲಿ ಶುಕ್ರ ಇರುವುದು ಅತ್ಯಂತ ಶುಭ. ಇದು ಪ್ರೇಮ, ಕಲೆ ಮತ್ತು ಸಂತಾನ ಸುಖಕ್ಕೆ ಪೂರಕ.
  • ​ಶನಿ, ಕುಜ, ಬುಧ ದಶೆ: ಮೂರನೇ ಮನೆಯಲ್ಲಿ ಈ ಮೂರು ಗ್ರಹಗಳ ಸಂಯೋಗವು ನಿಮ್ಮ ಶೌರ್ಯ ಮತ್ತು ಧೈರ್ಯವನ್ನು ಹೆಚ್ಚಿಸುತ್ತದೆ.

​ಗ್ರಹಗಳ ಪ್ರಭಾವ:

​ಪರಿಶ್ರಮ ಮತ್ತು ಅಧಿಕಾರ :

ನಿಮ್ಮ ರಾಶ್ಯಾಧಿಪತಿ ಶನಿ ಮೂರನೇ ಮನೆಯಲ್ಲಿ ಬಲಿಷ್ಠನಾಗಿರುವುದರಿಂದ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಕಚೇರಿಯಲ್ಲಿ ಅಥವಾ ಸಮಾಜದಲ್ಲಿ ನಿಮ್ಮ ಅಧಿಕಾರ ವ್ಯಾಪ್ತಿ ಹೆಚ್ಚಾಗಲಿದೆ. ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಇದು ಸಕಾಲ. ಎದುರಾಳಿಗಳು ನಿಮ್ಮ ಮುಂದೆ ಮಂಡಿಯೂರುವರು.

​ಕೃಷಿ ಮತ್ತು ಭೂಮಿ:

​ಕೃಷಿಕರಿಗೆ ಈ ತಿಂಗಳು ಲಾಭದಾಯಕವಾಗಿದೆ. ಮೂರನೇ ಮನೆಯಲ್ಲಿರುವ ಕುಜ ಮತ್ತು ಶನಿ ಭೂಮಿಗೆ ಸಂಬಂಧಿಸಿದ ಹಳೆಯ ವಿವಾದಗಳನ್ನು ಬಗೆಹರಿಸುತ್ತಾರೆ. ತೋಟಗಾರಿಕಾ ಬೆಳೆಗಳನ್ನು ವಿಶೇಷವಾಗಿ ದೀರ್ಘಾವಧಿ ಬೆಳೆಗಳನ್ನು ಬೆಳೆಯಲು ಭೂಮಿ ಸಿದ್ಧಪಡಿಸಿಕೊಳ್ಳಬಹುದು. ಆದರೂ, ಶನಿಯ ಪ್ರಭಾವದಿಂದ ಅತಿಯಾದ ದೈಹಿಕ ಶ್ರಮ ಇರಲಿದೆ.

​ಪ್ರೇಮ ಮತ್ತು ವಿವಾಹ:

ಶುಕ್ರನು 5ನೇ ಮನೆಯಲ್ಲಿ ಉಚ್ಛ್ರಾಯ ಸ್ಥಿತಿಯಲ್ಲಿ ಇರುವುದರಿಂದ ಪ್ರೇಮ ಸಂಬಂಧಗಳು ಗಟ್ಟಿಯಾಗುತ್ತವೆ. ಯಾರನ್ನಾದರೂ ಪ್ರೀತಿಸುತ್ತಿದ್ದರೆ ಅದನ್ನು ಮನೆಯವರಿಗೆ ತಿಳಿಸಲು ಇದು ಸುಸಮಯ. ವಿವಾಹ ಸಂಬಂಧಗಳು ಅಂತಿಮವಾಗಬಹುದು. ಸಣ್ಣಪುಟ್ಟ ವಿಹಾರ ಪ್ರವಾಸಗಳು ಮನಸ್ಸಿಗೆ ಮುದ ನೀಡುತ್ತವೆ.

​ಸ್ವ-ಉದ್ಯೋಗ ಮತ್ತು ವ್ಯಾಪಾರ:

​ವ್ಯಾಪಾರದಲ್ಲಿ ಈ ತಿಂಗಳು ವೇಗ ಕಂಡುಬರುತ್ತದೆ. ವಿಶೇಷವಾಗಿ ತಾಂತ್ರಿಕ ಕ್ಷೇತ್ರ, ಕಬ್ಬಿಣ ಅಥವಾ ಸಿವಿಲ್ ಕೆಲಸಗಳಲ್ಲಿ ತೊಡಗಿರುವವರಿಗೆ ಉತ್ತಮ ಆದಾಯವಿದೆ. ಸ್ವ-ಉದ್ಯೋಗಿಗಳಿಗೆ ಹೊಸ ಆರ್ಡರ್‌ಗಳು ಕೈ ಸೇರುತ್ತವೆ. ಆದರೆ, ಆರನೇ ಮನೆಯ ಗುರುವಿನ ಕಾರಣದಿಂದ ಹಣಕಾಸಿನ ವಹಿವಾಟಿನಲ್ಲಿ ಎಚ್ಚರಿಕೆ ಇರಲಿ. ಯಾರನ್ನೂ ಅತಿಯಾಗಿ ನಂಬಬೇಡಿ.

​ಹವ್ಯಾಸ ಮತ್ತು ಕಲೆ:

​ಕಲಾವಿದರಿಗೆ ಇದು ಸುವರ್ಣ ಕಾಲ. ಪಂಚಮ ಸ್ಥಾನದ ಶುಕ್ರ ನಿಮ್ಮ ಸೃಜನಶೀಲತೆಯನ್ನು ಉತ್ತುಂಗಕ್ಕೆ ಕೊಂಡೊಯ್ಯುತ್ತಾನೆ. ಹೊಸ ಹವ್ಯಾಸಗಳನ್ನು ಬೆಳೆಸಿಕೊಳ್ಳಲು ಅಥವಾ ಪ್ರದರ್ಶನ ನೀಡಲು ಇದು ಯಶಸ್ವಿ ತಿಂಗಳು.

​ಹೂಡಿಕೆ:

ಹೂಡಿಕೆಯ ವಿಷಯದಲ್ಲಿ ಮಿಶ್ರ ಫಲವಿದೆ. ಸ್ಥಿರ ಆಸ್ತಿಯ ಮೇಲೆ ಹೂಡಿಕೆ ಮಾಡಲು ರವಿ ಮತ್ತು ಶನಿಯ ಪ್ರಭಾವ ಪೂರಕವಾಗಿದೆ. ಆದರೆ, ಷೇರು ಮಾರುಕಟ್ಟೆಯಲ್ಲಿ ಹೂಡುವ ಮುನ್ನ ಎಚ್ಚರವಿರಲಿ. 6ನೇ ಮನೆಯಲ್ಲಿರುವ ಗುರುವು ಅನಗತ್ಯ ಸಾಲ ಮಾಡದಂತೆ ಎಚ್ಚರಿಸುತ್ತಾನೆ. ಜೀ​ರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು, ಆಹಾರ ಕ್ರಮದ ಮೇಲೆ ನಿಗಾ ಇರಲಿ.

ಪ್ರತಿದಿನ ವಿಷ್ಣು ಸಹಸ್ರನಾಮ ಪಠಿಸಿ. ಗುರುವಾರದಂದು ದಾನ‌ ಮಾಡಿ. ಶನಿವಾರದಂದು ಅನ್ನದಾನ ಮಾಡುವುದು ನಿಮ್ಮ ಕೆಲಸಗಳಲ್ಲಿರುವ ಅಡೆತಡೆಗಳನ್ನು ನಿವಾರಿಸುತ್ತದೆ.

– ಲೋಹಿತ ಹೆಬ್ಬಾರ್

Source link

ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತ ಗಂಡ ನೇಣಿಗೆ ಶರಣು, ವರದಕ್ಷಿಣೆ ಆಸೆಗೆ ಗೃಹಿಣಿ ಬದುಕು ಅಂತ್ಯ: ರಾಜ್ಯದಲ್ಲಿ ಕೌಟುಂಬಿಕ ಕಲಹಕ್ಕೆ ಇಬ್ಬರು ಬಲಿ! – Kannada News | Double self harm Shock: Man Ends Life Over Wife’s affair in Dandeli; Dowry Death in Bengaluru

ಪರಪುರುಷನೊಂದಿಗಿರುವ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿದ ಪತ್ನಿ! ನೊಂದ ಪತಿ ಸಾವಿಗೆ ಶರಣು

ದಾಂಡೇಲಿ/ಬೆಂಗಳೂರು: ರಾಜ್ಯದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೌಟುಂಬಿಕ ಕಲಹ ಹಾಗೂ ಕಿರುಕುಳಕ್ಕೆ ಇಬ್ಬರು ಬಲಿಯಾಗಿದ್ದಾರೆ. ಉತ್ತರ ಕನ್ನಡ (Uttara Kannada) ಜಿಲ್ಲೆಯ ದಾಂಡೇಲಿಯಲ್ಲಿ ಪತ್ನಿಯ ಅನೈತಿಕ ಸಂಬಂಧ (Affair) ಹಾಗೂ ಮಾನಸಿಕ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಇತ್ತ ರಾಜಧಾನಿ ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬರು ನೇಣಿಗೆ ಶರಣಾಗಿದ್ದಾರೆ.

ಪತ್ನಿಯ ಟಾರ್ಚರ್‌ಗೆ ಮಲೇಷ್ಯಾ ಉದ್ಯೋಗಿ ಸಾವು

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರದಲ್ಲಿ ರಾಘವೇಂದ್ರ ವಾಡಕರ ಎಂಬುವವರು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಮಲೇಷ್ಯಾದಲ್ಲಿ ಕೆಲಸ ಮಾಡುತ್ತಿದ್ದ ರಾಘವೇಂದ್ರ, ಒಂದು ವಾರದ ಹಿಂದಷ್ಟೇ ದಾಂಡೇಲಿಗೆ ಮರಳಿದ್ದರು. ಅವರು ಮರಳುತ್ತಿದ್ದಂತೆಯೇ ಪತ್ನಿ ಮೇಘಾ ಇಬ್ಬರು ಮಕ್ಕಳೊಂದಿಗೆ ಧಾರವಾಡದ ತವರು ಮನೆಗೆ ತೆರಳಿದ್ದರು.

ರಾಘವೇಂದ್ರ ಒಟ್ಟಿಗೆ ಸಂಸಾರ ಮಾಡೋಣ ಬಾ ಎಂದು ಕರೆದರೂ ಪತ್ನಿ ನಿರಾಕರಿಸಿದ್ದಳು. ನಿನ್ನ ಜೊತೆ ಸಂಸಾರ ಮಾಡಲು ಇಷ್ಟವಿಲ್ಲ, ಸತ್ತು ಹೋಗು ಎಂದು ಹೇಳಿದ್ದಲ್ಲದೆ, ಬೇರೊಬ್ಬ ಪುರುಷನ ಜೊತೆಗಿನ ಫೋಟೋಗಳನ್ನು ಸ್ಟೇಟಸ್ ಹಾಕಿಕೊಂಡು ಪತಿಗೆ ಮಾನಸಿಕ ಹಿಂಸೆ ನೀಡುತ್ತಿದ್ದಳು ಎನ್ನಲಾಗಿದೆ. ತನ್ನ ಅನೈತಿಕ ಸಂಬಂಧದ ಬಗ್ಗೆ ಗಂಡನ ಬಳಿ ಬಹಿರಂಗವಾಗಿ ಹೇಳಿಕೊಂಡಿದ್ದ ಮೇಘಾ, ರಾಘವೇಂದ್ರ ಕೈ ಕೊಯ್ದುಕೊಂಡು ಫೋಟೋ ಕಳುಹಿಸಿದಾಗಲೂ ನೀನು ಸತ್ತರೂ ನನಗೆ ತೊಂದರೆಯಿಲ್ಲ ಎಂದು ಕ್ರೂರವಾಗಿ ಪ್ರತಿಕ್ರಿಯಿಸಿದ್ದಳು. ಈ ಎಲ್ಲಾ ಅವಮಾನ ಮತ್ತು ಕಿರುಕುಳದ ಬಗ್ಗೆ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿ ರಾಘವೇಂದ್ರ ಸಾವನ್ನಪ್ಪಿದ್ದಾರೆ. ದಾಂಡೇಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ

ಬೆಂಗಳೂರಿನ ಹುಳಿಮಾವಿನ ಹಳೆಯ ಪೋಸ್ಟ್ ಆಫೀಸ್ ಬಳಿ ವಂದನಾ (23) ಎಂಬುವವರು ಪತಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ವಿಕ್ರಂ ಶೇಷ ಎಂಬುವವರ ಜೊತೆ ಇವರ ವಿವಾಹವಾಗಿತ್ತು. ಈ ದಂಪತಿಗೆ ಮೂರು ತಿಂಗಳ ಮಗುವಿದೆ. ಮದುವೆಯ ಸಮಯದಲ್ಲಿ 4 ಲಕ್ಷ ರೂಪಾಯಿ ಖರ್ಚು ಮಾಡಿ ಬೈಕ್ ಹಾಗೂ ಚಿನ್ನಾಭರಣಗಳನ್ನು ನೀಡಿದ್ದರೂ, ಪತಿ ಹಾಗೂ ಕುಟುಂಬಸ್ಥರು ಪದೇ ಪದೇ ಹೆಚ್ಚಿನ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು ಎಂದು ವಂದನಾ ಪೋಷಕರು ಆರೋಪಿಸಿದ್ದಾರೆ.

ಇದನ್ನೂ ಓದಿ ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಎಸ್ಕೇಪ್: ಮಕ್ಕಳಿಬ್ಬರನ್ನು ಸಾಯಿಸಿ ತಾನೂ ನೇಣಿಗೆ ಶರಣಾದ ಪತಿ!

ಹಲವು ಬಾರಿ ರಾಜಿ ಸಂಧಾನ ಮಾಡಿದ್ದರೂ ಆರೋಪಿಗಳು ಬುದ್ಧಿ ಕಲಿತಿರಲಿಲ್ಲ. ಇದೀಗ ಗಂಡನ ಮನೆಯವರೇ ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೋಷಕರು ದೂರು ನೀಡಿದ್ದು, ಪತಿ ವಿಕ್ರಂ ಶೇಷ, ಮಾವ ಶ್ರೀನಿವಾಸ್ ಮತ್ತು ಮೈದುನ ವಿನಿಷ್ ವಿರುದ್ಧ ಹುಳಿಮಾವು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸುಪ್ರೀಂಕೋರ್ಟ್​​ನಲ್ಲೂ ಟಿಎಂಸಿಗೆ ಹಿನ್ನಡೆ: ಚುನಾವಣಾ ಆಯೋಗದ ನಡೆ ಪ್ರಶ್ನಿಸಿದ್ದ ಅರ್ಜಿ ವಜಾ – Kannada News | Supreme Court Dismisses TMC’s Plea Against Election Commission Over West Bengal Vote Counting Staff

ಸುಪ್ರೀಂಕೋರ್ಟ್​​ನಲ್ಲೂ ಟಿಎಂಸಿಗೆ ಹಿನ್ನಡೆ

ನವದೆಹಲಿ, ಮೇ 01: ಪಶ್ಚಿಮ ಬಂಗಾಳದ ಮತ ಎಣಿಕೆಗೆ ಕೇಂದ್ರ ಸರ್ಕಾರದ ಸಿಬ್ಬಂದಿಯನ್ನು ಮಾತ್ರ ಬಳಸಿಕೊಳ್ಳಬೇಕೆಂಬ ಚುನಾವಣಾ ಆಯೋಗದ ಆದೇಶದ ವಿರುದ್ಧ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ (ಟಿಎಂಸಿ) ಸಲ್ಲಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆ ಮೂಲಕ ನ್ಯಾಯಾಲಯದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಹಿನ್ನಡೆಯಾಗಿದೆ. ಈ ಮೊದಲು ಕಲ್ಕತ್ತಾ ಹೈಕೋರ್ಟ್ ಕೂಡ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಟಿಎಂಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಮತ ಎಣಿಕೆಯ ಸಂದರ್ಭದಲ್ಲಿ ಪಕ್ಷಗಳ ಪ್ರತಿನಿಧಿಗಳು ಹಾಜರಿರುತ್ತಾರೆ ಮತ್ತು ಚುನಾವಣಾ ಆಯೋಗದ ಸರ್ಕ್ಯುಲರ್ ನಿಯಮಗಳಿಗೆ ವಿರುದ್ಧವಾಗಿಲ್ಲ ಎಂದು ಪೀಠ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದೆ. ಟಿಎಂಸಿ ಪರ ವಾದಿಸಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಮೀನಾಕ್ಷಿ ಅರೋರ, ಏಪ್ರಿಲ್ 13ರ ಸರ್ಕ್ಯುಲರ್ ಬಗ್ಗೆ ಏಪ್ರಿಲ್ 29ರವರೆಗೆ ಮಾಹಿತಿ ಸಿಗಲಿಲ್ಲ ಎನ್ನುವ ಮೂಲಕ ಆಯೋಗದ ನಿರ್ಧಾರವನ್ನು ಪ್ರಶ್ನಿಸಿದ್ದರು. ಆದರೆ ಚುನಾವಣಾ ಆಯೋಗ ಪರ ವಾದಿಸಿದ ಹಿರಿಯ ವಕೀಲ ಡಿ.ಎಸ್. ನಾಯ್ಡು, ಮತ ಎಣಿಕೆ ಪ್ರಕ್ರಿಯೆಯ ಮೇಲಿನ ಸಂಪೂರ್ಣ ನಿಯಂತ್ರಣ ರಾಜ್ಯ ಸರ್ಕಾರದ ಅಧಿಕಾರಿಯಾಗಿರುವ ರಿಟರ್ನಿಂಗ್ ಅಧಿಕಾರಿ ಕೈಯಲ್ಲೇ ಇರುತ್ತದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ

ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಬಾಗ್ಚಿ ಅವರಿದ್ದ ಪೀಠ, ಕೌಂಟಿಂಗ್ ಅಧಿಕಾರಿ ಕೇಂದ್ರ ಸರ್ಕಾರದ ಪ್ರತಿನಿಧಿ ಎಂದು ಹೇಳುವುದರಿಂದ ವಿಶೇಷ ವ್ಯತ್ಯಾಸವಿಲ್ಲ. ಇಂತಹ ನಿರ್ಧಾರಗಳು ಚುನಾವಣಾ ಆಯೋಗದ ವ್ಯಾಪ್ತಿಗೆ ಸೇರುತ್ತವೆ. ಜೊತೆಗೆ, ಪಕ್ಷಗಳಿಂದ ನೇಮಕಗೊಂಡ ಕೌಂಟಿಂಗ್ ಏಜೆಂಟ್‌ಗಳು, ಮೈಕ್ರೋ ಅಬ್ಸರ್ವರ್‌ಗಳು ಸೇರಿದಂತೆ ಹಲವಾರು ಮೇಲ್ವಿಚಾರಣಾ ವ್ಯವಸ್ಥೆಗಳು ಈಗಾಗಲೇ ಇವೆ ಎಂಬುದನ್ನು ಉಲ್ಲೇಖಿಸಿ ಟಿಎಂಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:43 am, Sat, 2 May 26

Source link