All posts by nagaraj11081993

ದೆಹಲಿಗೆ ಬಂದಿದ್ದೇ ರಾಜಕೀಯ ಮಾಡಲು, ಎಲ್ಲ ಮಾತಾಡದೆ ಸುಮ್ನೆ ಹೋಗ್ತೀನಾ? ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಮಾತು – Kannada News | DK Shivakumar’s Explosive Statement After Meeting Congress High Command I Came to Delhi for Politics, Won’t Stay Silent

ದೆಹಲಿಯಲ್ಲಿ ಡಿಕೆ ಶಿವಕುಮಾರ್Image Credit source: tv9

ನವದೆಹಲಿ, ಫೆಬ್ರವರಿ 12: ‘ದೆಹಲಿಗೆ ಬಂದಿರುವುದೇ ರಾಜಕೀಯ ಮಾಡಲು, ಎಲ್ಲ ವಿಚಾರಗಳನ್ನು ಮಾತನಾಡದೆ ಸುಮ್ಮನೆ ವಾಪಸ್ ಹೋಗುತ್ತೇನಾ?’ ಇದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮಾಧ್ಯಮ ಪ್ರತಿನಿಧಿಗಳ ಬಳಿ ಕೇಳಿದ ಪ್ರಶ್ನೆ. ಕರ್ನಾಟಕ ಕಾಂಗ್ರೆಸ್​​​ನಲ್ಲಿ (Congress) ಅಧಿಕಾರ ಹಂಚಿಕೆ ಗುದ್ದಾಟ ತೀವ್ರಗೊಂಡಿರುವ ಸಂದರ್ಭದಲ್ಲೇ ದೆಹಲಿಯ ಜನಪಥದಲ್ಲಿರುವ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನಿವಾಸದಲ್ಲಿ ಹೈಕಮಾಂಡ್ ನಾಯಕರ ಜತೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಅವರು ಮಾತುಕತೆ ನಡೆಸಿದ್ದಾರೆ. ನಂತರ ಹೊರಬಂದು ಮಾತನಾಡಿದ ಅವರು, ಅಸ್ಸಾಂ ಚುನಾವಣೆ ವಿಚಾರವಾಗಿ ಹೈಕಮಾಂಡ್ ಜತೆ ಮಾತನಾಡಿರುವುದಾಗಿ ತಿಳಿಸಿದರು. ಅಸ್ಸಾಂನ ಕೆಲವು ನಾಯಕರೂ ಡಿಕೆಶಿ ಜತೆ ಇದ್ದರು.

ಕರ್ನಾಟಕ ರಾಜಕೀಯದ ಕುರಿತು ಏನು ಮಾತುಕತೆ ನಡೆಯಿತು ಎಂಬ ಪ್ರಶ್ನೆಗೆ, ಏನು ಮಾತನಾಡಬೇಕೋ ಅದೆಲ್ಲವನ್ನೂ ಮಾತನಾಡಿದ್ದೇನೆ. ಏನೇನು ಚರ್ಚೆ ನಡೆಯಿತು ಎಂಬುದನ್ನೆಲ್ಲ ಇಲ್ಲಿ ಹೇಳಲಾಗದು ಎಂದರು. ಇದು ಸಾಕಷ್ಟು ಕುತೂಹಲ ಮೂಡಿಸಿದೆ.

ಡಿಕೆ ಶಿವಕುಮಾರ್ ಹೇಳಿದ್ದೇನು?


ಅಸ್ಸಾಂ ಚುನಾವಣಾ ಬಗ್ಗೆ ಚರ್ಚೆ ಮಾಡಲು ಸೋನಿಯಗಾಂಧಿ ನಿವಾಸಕ್ಕೆ ಆಗಮಿಸಿದ್ದೆವು. ಅಸ್ಸಾಂನಲ್ಲಿ ವಾಪಸ್ ಕಾಂಗ್ರೆಸ್ ಸರ್ಕಾರ ಬರಲಿದೆ. ಸೋನಿಯಗಾಂಧಿ ನಿವಾಸದ ಒಳಗೆ ಏನೇನು ಮಾತನಾಡಿದೆ, ಯಾರ ಜೊತೆಗೆಲ್ಲ ಮಾತನಾಡಿದೆ ಎಂದು ಇಲ್ಲಿ ಹೇಳುವುದಿಲ್ಲ. ಇಲ್ಲಿ ಬೀದಿಯಲ್ಲಿ ನಿಂತು ಎಲ್ಲ ಮಾತನಾಡುವ ಅಗತ್ಯ ಇಲ್ಲ. ಬಂದ ಮೇಲೆ ಏನೇನನು ಮಾತನಾಡಬೇಕೋ ಅದನ್ನೆಲ್ಲ ಮಾತನಾಡಿದ್ದೀನಿ ಎಂದು ಡಿಕೆ ಶಿವಕುಮಾರ್ ಹೇಳಿದರು.

ಕಾಲವೇ ಎಲ್ಲದಕ್ಕೂ ಉತ್ತರ ಕೊಡಲಿದೆ: ಡಿಕೆಶಿ ಮಾರ್ಮಿಕ ಮಾತು

ಕಾಲವೇ ಎಲ್ಲದಕ್ಕೂ ಉತ್ತರ ಕೊಡಲಿದೆ ಎಂದು ಮಾರ್ಮಿಕವಾಗಿ ಮಾತನಾಡಿದ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ಬಳಿ ಚರ್ಚೆ ಮಾಡಿದ್ದೆನೆ ಎಂಬುದನ್ನು ನಿಖರವಾಗಿ ಹೇಳಿಲ್ಲ. ಡಿಕೆ ಶಿವಕುಮಾರ್ ಮೊದಲು ಪ್ರಿಯಾಂಕಾ ಗಾಂಧಿ ಜೊತೆ ಅಸ್ಸಾಂ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದರು. ನಂತರ ರಾಹುಲ್ ಗಾಂಧಿ ಜೊತೆ ಚರ್ಚಿಸಿದ್ದರು.

ಬುಧವಾರ ತಡರಾತ್ರಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಜತೆ ಮಾತುಕತೆ ನಡೆಸಿದ್ದರು. ಈ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಅದರ ಬೆನ್ನಲ್ಲೇ ಇದೀಗ ಅಸ್ಸಾಂ ಚುನಾವನೆ ನೆಪದಲ್ಲಿ ಹೈಕಮಾಂಡ್ ನಾಯಕರ ಜತೆ ಡಿಕೆ ಶಿವಕುಮಾರ್ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಪಕ್ಷದಲ್ಲೇ ಅಸಮಾಧಾನ: ವರದಿ ಕೇಳಿದ ಹೈಕಮಾಂಡ್

ಏತನ್ಮಧ್ಯೆ, ಸೋನಿಯಾ ಗಾಂಧಿ ಅವರು ಡಿಕೆ ಶಿವಕುಮಾರ್ ಪರ ಒಲವು ಹೊಂದಿದ್ದಾರೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ. ಆದರೆ, ಮುಖ್ಯವಾದ ಜವಾಬ್ದಾರಿಗಳನ್ನು, ನಿರ್ಧಾರಗಳನ್ನು ರಾಹುಲ್ ಗಾಂಧಿ ಅವರೇ ತೆಗೆದುಕೊಳ್ಳುತ್ತಿರುವುದರಿಂದ, ನಾಯಕತ್ವ ಬದಲಾವಣೆ ವಿಚಾರವಾಗಿ ಅವರ ಮನವೊಲಿಸುವ ಅಗತ್ಯ ಡಿಕೆ ಶಿವಕುಮಾರ್​ಗೆ ಎದುರಾಗಿದೆ. ಇದೀಗ ಆ ಪ್ರಯತ್ನಕ್ಕೆ ಅವಕಾಶ ಸಿಕ್ಕಿದ್ದು, ಅದರಲ್ಲಿ ಡಿಕೆಶಿ ಎಷ್ಟರ ಮಟ್ಟಿಗೆ ಯಶಸ್ವಿಯಾಗಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:43 am, Thu, 12 February 26

Source link

ಹಿಂದೆ ತಳ್ಳಿ ಐಸಾ.. ಇನ್ನೂ ತಳ್ಳಿ ಐಸಾ: ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್ – Kannada News | Engine Failure of KSRTC Bus in Shiggaon Raises Maintenance Concerns.

ಹಾವೇರಿ, ಫೆ.12: ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಸವಣೂರು ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಒಂದು ನಡುರಸ್ತೆಯಲ್ಲೇ ಕೆಟ್ಟು ನಿಂತು ಸಾರ್ವಜನಿಕರಿಗೆ ತೀವ್ರ ತೊಂದರೆಯುಂಟು ಮಾಡಿದೆ. ಬಸ್ಸಿನ ಇಂಜಿನ್ ಸೀಜ್ ಆಗಿರುವ ಕಾರಣ ವಾಹನವು ಚಲಿಸದೆ ರಸ್ತೆ ಮಧ್ಯದಲ್ಲೇ ನಿಂತಿದೆ. ಇದರಿಂದಾಗಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಪ್ರಯಾಣಿಕರು ಬಸ್ ಕೆಟ್ಟು ನಿಂತಿದ್ದರಿಂದ ಗಮ್ಯಸ್ಥಾನ ತಲುಪಲು ಪರದಾಡಬೇಕಾಯಿತು. ಕೆಲವರು ನಡೆದುಕೊಂಡೇ ಹೊರಟರೆ, ಇನ್ನೂ ಕೆಲವರು ಬಸ್ಸನ್ನು ತಳ್ಳುವ ಪ್ರಯತ್ನ ಮಾಡಿದರು. ಈ ಘಟನೆಯ ಸಂದರ್ಭದಲ್ಲಿ, ಕೆಎಸ್‌ಆರ್‌ಟಿಸಿ ಸಿಬ್ಬಂದಿ ಜೊತೆ ಸಾರ್ವಜನಿಕರು ಮಾತುಕತೆ ನಡೆಸಿದರು. ಬಸ್‌ನ ರಿಪೇರಿಗೆ ಹಣವಿಲ್ಲ ಎಂದು ಕೇಳಿಬಂದಿದ್ದು, ಇಂಜಿನ್ ಸೀಜ್ ಆಗಿದೆ ಎಂದು ಸಿಬ್ಬಂದಿ ಒಪ್ಪಿಕೊಂಡರು. ಇದು ಸವಣೂರು ಡಿಪೋಗೆ ಸೇರಿದ ಬಸ್ ಆಗಿದ್ದು, ಡಿಪೋದಲ್ಲಿ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಕರ್ತವ್ಯದಲ್ಲಿದ್ದ ಚಾಲಕ ಬಾಲಪ್ಪ ಮತ್ತು ನಿರ್ವಾಹಕ ಜ್ಞಾನಪ್ಪ ಅವರು ತಾವು ಹೊಸಬರು, ಮೂರು ದಿನಗಳ ಹಿಂದೆ ನೇಮಕವಾಗಿದ್ದೇವೆ ಎಂದು ತಿಳಿಸಿದರು. ತಮ್ಮ ಹೆಸರು ಫಲಕಗಳೂ ಇರಲಿಲ್ಲ ಎಂದು ಸಾರ್ವಜನಿಕರು ಪ್ರಶ್ನಿಸಿದರು. ಸರಕಾರಿ ಬಸ್‌ಗಳ ಕಳಪೆ ನಿರ್ವಹಣೆ ಮತ್ತು ಅದರಿಂದಾಗುವ ತೊಂದರೆಗಳ ಬಗ್ಗೆ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Solar Eclipse 2026: ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ವೃಷಭ ರಾಶಿಯ ಫಲಾಫಲ – Kannada News | Solar Eclipse 2026: Taurus Horoscope and Remedies by Dr. Basavaraj Guruji

ಖ್ಯಾತ ಜ್ಯೋತಿಷಿ ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ವೃಷಭ ರಾಶಿಯ ಮೇಲಿನ ಪ್ರಭಾವದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಗ್ರಹಣವು ವೃಷಭ ರಾಶಿಯವರಿಗೆ ಹತ್ತನೇ ಮನೆಯಲ್ಲಿ, ಕರ್ಮ ಸ್ಥಾನದಲ್ಲಿ ಸಂಭವಿಸಲಿದೆ. ರಾಶ್ಯಾಧಿಪತಿ ಶುಕ್ರ ಮತ್ತು ಸೂರ್ಯನ ಪಾಲ್ಗೊಳ್ಳುವಿಕೆಯಿಂದ ಮಿಶ್ರ ಫಲಿತಾಂಶಗಳು ನಿರೀಕ್ಷಿತವಾಗಿವೆ.

ಕೃತ್ತಿಕಾ, ರೋಹಿಣಿ, ಮೃಗಶಿರಾ ನಕ್ಷತ್ರದವರಿಗೆ ವೃತ್ತಿಯಲ್ಲಿ ಅನುಮಾನಗಳು ಎದುರಾಗಬಹುದು. ಆದಾಗ್ಯೂ, ತಾಳ್ಮೆ ಇಟ್ಟುಕೊಂಡರೆ ಒಳ್ಳೆಯದು. ಆರೋಗ್ಯವು ಚೆನ್ನಾಗಿರಲಿದೆ ಹಾಗೂ ಹಿರಿಯರ ಪರಿಚಯದಿಂದ ಅನುಕೂಲವಾಗಲಿದೆ. ಮಂಗಳ ಕಾರ್ಯಗಳು ಸ್ವಲ್ಪ ಮುಂದೂಡಲ್ಪಡಬಹುದು. ನಿರೀಕ್ಷಿತ ಕಾರ್ಯಗಳಲ್ಲಿ ಶುಭವಾಗಲಿದೆ. ಆಸ್ತಿ, ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಮತ್ತು ಹೋಟೆಲ್ ವ್ಯಾಪಾರದಲ್ಲಿ ಉತ್ತಮ ಲಾಭ ನಿರೀಕ್ಷಿಸಬಹುದು ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ವರ್ಷದ ಮೊದಲ ಸೂರ್ಯಗ್ರಹಣ ಮೇಷ ರಾಶಿಯವರಿಗೆ ಹೇಗಿರಲಿದೆ?

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಪ್ಪಿಗೆ ಇಲ್ಲದೆ ಪತ್ನಿಯ ಗರ್ಭಕೋಶ ತೆಗೆಸಿದ ಗಾಯಕ; ದಾಖಲಾಯ್ತು ದೂರು – Kannada News | Udit Narayan’s First Wife Alleges Uterus Removal Fraud: Shocking Accusations Emerge

ಖ್ಯಾತ ಗಾಯಕ ಉದಿತ್ ನಾರಾಯಣ್ (Udit Narayana) ಈಗ ಸುದ್ದಿಯಲ್ಲಿದ್ದಾರೆ. ಅವರು ಈ ಮೊದಲು ಕಾನ್ಸರ್ಟ್ ವೇಳೆ ಅಭಿಮಾನಿಗೆ ಕಿಸ್ ಮಾಡಿ ವಿವಾದ ಮಾಡಿಕೊಂಡಿದ್ದರು. ಈ ಬಾರಿ ಅವರು ಮೊದಲ ಪತ್ನಿಯಿಂದಲೇ ಗಂಭೀರ ಆರೋಪ ಎದುರಿಸಬೇಕಾದ ಪರಿಸ್ಥಿತಿ ಬಂದಿದೆ. ಉದಿತ್ ಹಾಗೂ ಅವರ ಇಬ್ಬರು ಸಹೋದರರು ಸೇರಿ ಮೋಸದಿಂದ ತಮ್ಮ ಗರ್ಭಕೋಶ ತೆಗೆಸಿದ್ದಾರೆ ಎಂದು ಉದಿತ್ ಮೊದಲ ಪತ್ನಿ ರಂಜನಾ ಆರೋಪಿಸಿದ್ದಾರೆ. ರಂಜನಾ ಅವರು ಬಿಹಾರದ ಸುಪೌಲ್​​ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಫೆಬ್ರವರಿ 10ರಂದು ದೂರು ದಾಖಲು ಮಾಡಿದ್ದಾರೆ. ನನ್ನ ಒಪ್ಪಿಗೆ ಇಲ್ಲದೆ ಪತಿ ಈ ಕೆಲಸ ಮಾಡಿದ್ದಾರೆ ಎಂಬುದು ಅವರ ಆರೋಪ.

ವೈದ್ಯಕೀಯ ಚಿಕಿತ್ಸೆಗೆಂದು ತೆರಳಿದಾಗ ಗರ್ಭಕೋಶ ಇಲ್ಲದ ವಿಷಯ ರಂಜನಾಗೆ ಗೊತ್ತಾಗಿದೆಯಂತೆ. 1984ರ ಡಿಸೆಂಬರ್ 7ರಂದು ಹಿಂದೂ ಪದ್ಧತಿ ಪ್ರಕಾರ ರಂಜನ್ ಹಾಗೂ ಉದಿತ್ ವಿವಾಹ ಆದರು. ಉದಿತ್ ಸಂಗೀತ ವೃತ್ತಿಯನ್ನು ಮುಂದುವರಿಸಲು 1985ರಲ್ಲಿ ಮುಂಬೈಗೆ ಸ್ಥಳಾಂತರಗೊಂಡರು. ಅಲ್ಲಿ ಅವರು ದೀಪಾ ನಾರಾಯಣ್ ಅವರನ್ನು ಮದುವೆ ಆಗಿದ್ದಾರೆ ಎಂಬ ವಿಷಯ ರಂಜನಾಗೆ ಆಗ ತಿಳಿಯಿತು. ಕೇಳಿದರೆ ಯಾವುದೋ ಒಂದು ಸಬೂಬು ಹೇಳಿ ವಿಷಯ ಮರೆಸುತ್ತಿದ್ದರಂತೆ ಉದಿತ್.

‘1996ರಲ್ಲಿ ವೈದ್ಯಕೀಯ ಚಿಕಿತ್ಸೆಯ ನೆಪದಲ್ಲಿ, ಉದಿತ್ ತನ್ನ ಸಹೋದರರಾದ ಸಂಜಯ್ ಕುಮಾರ್ ಝಾ ಮತ್ತು ಲಲಿತ್ ನಾರಾಯಣ್ ಝಾ ಜೊತೆಗೂಡಿ ದೆಹಲಿಯ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ತನ್ನ ಒಪ್ಪಿಗೆಯಿಲ್ಲದೆ ಗರ್ಭಕೋಶವನ್ನು ತೆಗೆಸಿದರು. ಆ ಸಮಯದಲ್ಲಿ ದೀಪಾ ನಾರಾಯಣ್ ಕೂಡ ಆಸ್ಪತ್ರೆಯಲ್ಲಿದ್ದರು’ ಎಂದು ರಂಜನಾ ಆರೋಪಿಸಿದ್ದಾರೆ.

ಇದನ್ನೂ ಓದಿ: ನಿಲ್ಲುತ್ತಿಲ್ಲ ಉದಿತ್ ನಾರಾಯಣ್ ಹಾವಳಿ; ಕಾನ್ಸರ್ಟ್​ ವೇಳೆ ಮತ್ತೋರ್ವ ಅಭಿಮಾನಿಯ ತುಟಿಗೆ ಚುಂಬನ

2006ರಲ್ಲಿ ಮುಂಬೈಗೆ ಭೇಟಿ ನೀಡಿದಾಗ, ಉದಿತ್ ಮತ್ತು ದೀಪಾ ಅವರಿಂದ ದೌರ್ಜನ್ಯಕ್ಕೊಳಗಾಗಿರೋದಾಗಿ ಅವರು ಹೇಳಿಕೊಂಡಿದ್ದಾರೆ. ‘ನಾನು ಅಸ್ವಸ್ಥಳಾಗಿದ್ದೇನೆ. ಹೀಗಾಗಿ, ಉದಿತ್ ಅವರ ಬೆಂಬಲದ ಅಗತ್ಯವಿದೆ’ ಎಂದು ಅವರು ಕೋರಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನೆಲಮಂಗಲದ ಬಳಿ ಆರೆಂಜ್ ತುಂಬಿದ ಲಾರಿ ಪಲ್ಟಿ: ಲಕ್ಷಾಂತರ ರೂ ಮೌಲ್ಯದ ಹಣ್ಣುಗಳು ಮಣ್ಣುಪಾಲು – Kannada News | Driver Loses Control: Orange Loaded Lorry Accident on Tumkur Bengaluru Highway

ಬೆಂಗಳೂರು, ಫೆ.12: ನೆಲಮಂಗಲ ತಾಲೂಕಿನ ಕೆಂಗಲ್ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಆರೆಂಜ್ ತುಂಬಿದ ಲಾರಿಯೊಂದು ಪಲ್ಟಿಯಾಗಿದೆ.ಈ ಲಾರಿಯೂ ಮುಂಬೈನಿಂದ ಬೆಂಗಳೂರು ನಗರಕ್ಕೆ ತೆರಳುತ್ತಿದ್ದ ಈ ಅಪಘಾತ ಸಂಭವಿಸಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಆರೆಂಜ್ ಹಣ್ಣುಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಈ ಘಟನೆಯು ರಾಷ್ಟ್ರೀಯ ಹೆದ್ದಾರಿ 48 ರ ಮೇಲೆ ನಡೆದಿದ್ದು, ಲಾರಿ ಚಾಲಕನು ವಾಹನದ ನಿಯಂತ್ರಣ ಕಳೆದುಕೊಂಡ ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ. ಲಾರಿ ಪಲ್ಟಿಯಾದ ಸ್ಥಳದಲ್ಲಿ ಭಾರೀ ಪ್ರಮಾಣದ ಆರೆಂಜ್ ಹಣ್ಣುಗಳು ರಸ್ತೆಯ ಮೇಲೆ ಚೆಲ್ಲಿದ್ದರಿಂದ, ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಯಿತು. ಇದರಿಂದಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ನಿಧಾನವಾಗಿ ಸಾಗುವಂತಾಯಿತು. ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bengaluru: ಬಿಡಿಎ ನೌಕರನಿಂದಲೇ ಅಧಿಕಾರಿಗೆ ಧಮ್ಕಿ; ವಿಡಿಯೋ ವೈರಲ್​​ – Kannada News | BDA Employee Disrupts Anti Encroachment Drive, Threatens Officer in Bengaluru

ಬೆಂಗಳೂರು, ಫೆಬ್ರವರಿ 11: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಡೆಸುತ್ತಿದ್ದ ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಬಿಡಿಎ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಅವರು ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಬಿಡಿಎ ಎಇಇ ಎಂಜಿನಿಯರ್ ಅಶೋಕ್ ಬಾಗಿ ಅವರು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾಗ, ಆಯುಕ್ತರ ಆದೇಶವನ್ನೇ ಪ್ರಶ್ನಿಸಿ ಮಂಜುನಾಥ್ ಗಲಾಟೆ ನಡೆಸಿದ್ದಾರೆ. ಘಟನೆ ಬಳಿಕ ಬಿಡಿಎ ಆಯುಕ್ತ ಮಹೇಶ್ವರ್ ರಾವ್ ಅವರು ತಕ್ಷಣವೇ ಮಂಜುನಾಥ್ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ, ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ. ಇಂತಹ ಪ್ರಕರಣಗಳು ಮರುಕಳಿಸಬಾರದು ಎಂದು ಆಯುಕ್ತರು ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ರಾಹುಲ್​ ಗಾಂಧಿ ಕೈನಲ್ಲಿ ಡಿ.ಕೆ.ಶಿವಕುಮಾರ್​ ಭವಿಷ್ಯ? ಸಿಎಂ ಗಾದಿಗೆ ಇನ್ನೊಂದೇ ಮೆಟ್ಟಿಲು? – Kannada News | Karnataka CM Tussle: D.K. Shivakumars Crucial Meeting with Rahul Gandhi

ದೆಹಲಿ, ಫೆಬ್ರವರಿ 12: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಡಿ.ಕೆ. ಶಿವಕುಮಾರ್ ಮತ್ತು ರಾಹುಲ್ ಗಾಂಧಿ ನಡುವೆ ಮಹತ್ವದ ಭೇಟಿ ನಡೆದಿದೆ. ಟಿವಿ9ಗೆ ಲಭ್ಯವಾದ ಮಾಹಿತಿಯ ಪ್ರಕಾರ, ರಾಹುಲ್ ಗಾಂಧಿ  ನಿರ್ಧಾರ ಡಿ..ಕೆ ಶಿವಕುಮಾರ್ ಅವರ ಮುಖ್ಯಮಂತ್ರಿ ಭವಿಷ್ಯಕ್ಕೆ ನಿರ್ಣಾಯಕವಾಗಿದೆ. ಸೋನಿಯಾ ಗಾಂಧಿ ಅವರು ಡಿ.ಕೆ. ಶಿವಕುಮಾರ್ ಪರವಾಗಿದ್ದಾರೆ. ಆದರೆ, ರಾಹುಲ್ ಗಾಂಧಿ ಅವರನ್ನು ಒಪ್ಪಿಸುವುದೇ ಈಗ ಡಿಕೆಶಿಗೆ ಸವಾಲಾಗಿದೆ. ಹೀಗಾಗಿ ಮುಂದಿನ 2028ರ ವಿಧಾನಸಭಾ ಚುನಾವಣೆ ಮತ್ತು 2029ರ ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ನಾಯಕತ್ವ ಬದಲಾವಣೆಯ ಅಗತ್ಯವನ್ನು ರಾಹುಲ್ ಗಾಂಧಿಗೆ ಮನವರಿಕೆ ಮಾಡಲು ಡಿ.ಕೆ. ಶಿವಕುಮಾರ್ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ರಾಹುಲ್ ಗಾಂಧಿಯ ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಬಿಜೆಪಿ ಸಂಸದರ ಆಗ್ರಹ – Kannada News | Disqualification Bid: BJP Leader Initiates Action Against Rahul Gandhi

ನವದೆಹಲಿ, ಫೆಬ್ರವರಿ 12: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ(Rahul Gandhi) ಅವರ ಸಂಸತ್ ಸದಸ್ಯತ್ವವನ್ನು  ರದ್ದುಗೊಳಿಸುವಂತೆ ಬಿಜೆಪಿ ಸಂಸದರು ಆಗ್ರಹಿಸಿದ್ದಾರೆ. ಭಾರತ-ಯುಎಸ್ ವ್ಯಾಪಾರ ಒಪ್ಪಂದ ಮತ್ತು ಕೇಂದ್ರ ಬಜೆಟ್ ಅನ್ನು ಟೀಕಿಸಿದ ಕಾಂಗ್ರೆಸ್ ಸಂಸದರ ಭಾಷಣದ ಒಂದು ದಿನದ ನಂತರ ಈ ಒತ್ತಾಯ ಕೇಳಿಬಂದಿದೆ. ರಾಹುಲ್ ಗಾಂಧಿ ಭೌಗೋಳಿಕ ರಾಜಕೀಯ ಸಂಘರ್ಷ, ಕೃತಕ ಬುದ್ಧಿಮತ್ತೆ ಮತ್ತು ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಮಾತನಾಡಿದ್ದರು. ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ನಂತರ ಅವರಿಗೆ ಮಾತನಾಡಲು ಅವಕಾಶ ನೀಡದಿದ್ದಕ್ಕಾಗಿ ವಿರೋಧ ಪಕ್ಷಗಳು ದಿನಗಟ್ಟಲೆ ಪ್ರತಿಭಟನೆ ನಡೆಸಿದ ನಡುವೆಯೇ ಅವರ ಭಾಷಣ ನಡೆಯಿತು.

ಜನವರಿ 28 ರಂದು ಪ್ರಾರಂಭವಾದ ಬಜೆಟ್ ಅಧಿವೇಶನವು 65 ದಿನಗಳಲ್ಲಿ 30 ಅಧಿವೇಶನಗಳನ್ನು ಒಳಗೊಂಡಿರುತ್ತದೆ ಮತ್ತು ಏಪ್ರಿಲ್ 2 ರಂದು ಮುಕ್ತಾಯಗೊಳ್ಳಲಿದೆ. ಫೆಬ್ರವರಿ 13ರಿಂದ ಎರಡೂ ಸದನಗಳಿಗೂ ವಿರಾಮವಿರಲಿದೆ. ಮಾರ್ಚ್​ 9ರಂದು ಮತ್ತೆ ಸಭೆ ಸೇರಲಾಗುತ್ತದೆ. ಇದರಿಂದಾಗಿ ಸ್ಥಾಯಿ ಸಮಿತಿಗಳು ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಅನುದಾನದ ಬೇಡಿಕೆಗಳನ್ನು ಪರಿಶೀಲಿಸಲು ಸಾಧ್ಯವಾಗುತ್ತದೆ.

ಅವರು ಸೊರೊಸ್ ಫೌಂಡೇಶನ್, ಫೋರ್ಡ್ ಫೌಂಡೇಶನ್, USAID ಜೊತೆ ಹೇಗೆ ತೊಡಗಿಸಿಕೊಂಡಿದ್ದಾರೆ ಮತ್ತು ಥೈಲ್ಯಾಂಡ್, ಕಾಂಬೋಡಿಯಾ, ವಿಯೆಟ್ನಾಂ ಮತ್ತು ಯುಎಸ್​​ ನಂತಹ ದೇಶಗಳಿಗೆ ಹೇಗೆ ಪ್ರಯಾಣಿಸುತ್ತಾರೆ ಮತ್ತು ಅವರು ಭಾರತ ವಿರೋಧಿ ಶಕ್ತಿಗಳೊಂದಿಗೆ ಹೇಗೆ ಸಂಬಂಧ ಹೊಂದಿದ್ದಾರೆ ಎಂಬುದನ್ನು ವಿವರಿಸುವ ಒಂದು ವಿವರ ಸಲ್ಲಿಸಿರುವುದಾಗಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿದ್ದಾರೆ.

ಮತ್ತಷ್ಟು ಓದಿ: ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಭಾರತ- ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ಅವರು ವಿವರವಾಗಿ ಚರ್ಚಿಸಿದರು. ಒಪ್ಪಂದವು ಸಂಪೂರ್ಣವಾಗಿ ಏಕಪಕ್ಷೀಯವಾಗಿದ್ದು, ಕೇಂದ್ರ ಸರ್ಕಾರ ಭಾರತವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.

ಸರ್ಕಾರವು ‘ಭಾರತ ಮಾತೆಯನ್ನು’ ಮಾರಾಟ ಮಾಡುತ್ತಿದೆ. ಭಾರತ-ಯುಎಸ್ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಏಕಪಕ್ಷೀಯ ಎಂದು ಕರೆದರು, ಇದು ರೈತರ ಹಿತಾಸಕ್ತಿಗಳಿಗೆ ಹಾನಿ ಮಾಡುತ್ತಿದೆ ಎಂದರು. ಅಮೆರಿಕದ ಕೃಷಿ ಉತ್ಪನ್ನಗಳು ಭಾರತೀಯ ಮಾರುಕಟ್ಟೆಗಳಲ್ಲಿ ಪ್ರವಾಹವನ್ನುಂಟುಮಾಡುವುದರಿಂದ ರೈತರ ಹಿತಾಸಕ್ತಿಗಳಿಗೆ ಧಕ್ಕೆಯಾಗಿದೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಭೈರತಿ ಬಸವರಾಜ್​ಗೆ ಶಾಕ್ ಮೇಲೆ ಶಾಕ್: ಸುಪ್ರೀಂ ಕೋರ್ಟ್​ನಲ್ಲೂ ನಿರೀಕ್ಷಣಾ ಜಾಮೀನು ಅರ್ಜಿ ವಜಾ – Kannada News | Supreme Court Rejects Bail Plea of BJP MLA Byrathi Basavaraj in Biklu Shiva Murder Case, Told to Seek Regular Bail

ನವದೆಹಲಿ, ಫೆಬ್ರವರಿ 12: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್​ಗೆ ಸುಪ್ರೀಂ ಕೋರ್ಟ್​ನಲ್ಲೂ ಭಾರೀ ಹಿನ್ನಡೆಯಾಗಿದೆ. ಭೈರತಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ. ಇದರಿಂದ ಭೈರತಿ ಮತ್ತಷ್ಟು ಸಂಕಷ್ಟಕ್ಕೀಡಾದಂತಾಗಿದೆ. ಭೈರತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಬುಧವಾರ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರ ಪರ ವಕೀಲ ಮುಕುಲ್ ರೊಹಟಗಿ ಸುಪ್ರೀಂ ಕೋರ್ಟ್​​ನಲ್ಲಿ ವಾದ ಮಂಡಿಸಿದರು.

ಏತನ್ಮಧ್ಯೆ, ಭೈರತಿ ಬಸವರಾಜ್ ಈಗಾಗಲೇ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ದುಬೈಗೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅದೇಗೆ ಭಾರತ ತಂಡಕ್ಕೆ 2 ಸಲ ಅವಕಾಶ? ನಮೀಬಿಯ ನಾಯಕನ ಪ್ರಶ್ನೆ – Kannada News | T20 World Cup 2026: Namibia Captain questions ICC’s advantage to India

T20 World Cup 2026: ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಐಸಿಸಿಯ ನಡೆಯನ್ನು ನಮೀಬಿಯ ತಂಡದ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಪ್ರಶ್ನಿಸಿದ್ದಾರೆ. ಈ ಪಂದ್ಯಕ್ಕೂ ಮುನ್ನ ರಾತ್ರಿ ಹೊತ್ತಲ್ಲಿ ಅಭ್ಯಾಸ ನಡೆಸಲು ಅವಕಾಶ ನಮೀಬಿಯ ತಂಡಕ್ಕೆ ಅವಕಾಶ ನೀಡಲಾಗಿಲ್ಲ. ಆದರೆ ಅತ್ತ ಭಾರತ ತಂಡಕ್ಕೆ 2 ಬಾರಿ ಫ್ಲಡ್​ ​ಲೈಟ್​ನಲ್ಲಿ ಅಭ್ಯಾಸ ನಡೆಸಲು ಅವಕಾಶ ನೀಡಿರುವುದೇ ಇದೀಗ ಚರ್ಚೆಗೆ ಗ್ರಾಸವಾಗಿದೆ.

ನಮಗೆ ಪಂದ್ಯದ ಪೂರ್ವಭಾವಿ ತಯಾರಿಗಾಗಿ ರಾತ್ರಿ ಟ್ರೈನಿಂಗ್ ಸೆಷನ್ ನೀಡಲಾಗಿಲ್ಲ. ಆದರೆ ಭಾರತ ತಂಡವು ಎರಡು ರಾತ್ರಿ ಅಭ್ಯಾಸ ನಡೆಸಿದೆ. ಐಸಿಸಿ ನಿಮಗೆ ಬೇಕಾದಂತೆ ಮಾಡಬಹುದೇ? ಇದು ಅನ್ಯಾಯ ಎಂದು ನಮೀಬಿಯ ತಂಡದ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಆಕ್ರೋಶ ಹೊರಹಾಕಿದ್ದಾರೆ.

ನಮೀಬಿಯದಲ್ಲಿ ಫ್ಲಡ್ ಲೈಟ್ ಹೊಂದಿರುವ ಪ್ರಮುಖ ಮೈದಾನಗಳಿಲ್ಲ. ಹೀಗಾಗಿ ನಮ್ಮ ತಂಡ ತವರಿನಲ್ಲಿ ಹೊನಲು ಬೆಳಕಿನ ಪಂದ್ಯವಾಡುತ್ತಿಲ್ಲ. ಇನ್ನು ನಮೀಬಿಯ ತಂಡದ ಆಟಗಾರರು ವಿದೇಶಿ ಲೀಗ್​ಗಳಲ್ಲೂ ಕಾಣಿಸಿಕೊಳ್ಳುವುದು ವಿರಳ.

ವಿದೇಶಿ ಲೀಗ್ ಆಡಿರುವ ಆಟಗಾರರು ನೇಪಾಳ ಪ್ರೀಮಿಯರ್ ಲೀಗ್ ಮತ್ತು ಇಂಟರ್​ನ್ಯಾಷನಲ್ ಟಿ20 ಲೀಗ್​ನಂತಹ  ಫ್ರಾಂಚೈಸಿ ಪಂದ್ಯಾವಳಿಗಳಲ್ಲಿ ಮಾತ್ರ ಭಾಗವಹಿಸಿದ ಅನುಭವ ಹೊಂದಿದ್ದಾರೆ. ಹೀಗಾಗಿ ನಮೀಬಿಯ ತಂಡಕ್ಕೆ ಹೊನಲು ಬೆಳಕಿನ ಪಂದ್ಯ ಹೊಸ ಅನುಭವ.

ಇದಾಗ್ಯೂ ಐಸಿಸಿ ನಮಗೆ ರಾತ್ರಿ ಅಭ್ಯಾಸ ನಡೆಸಲು ಅವಕಾಶ ನೀಡದಿರುವುದು ಅಚ್ಚರಿ. ಅದೇ ವೇಳೆ ನಮ್ಮ ಎದುರಾಳಿ ತಂಡವಾಗಿ ಟೀಮ್ ಇಂಡಿಯಾಗೆ ಎರಡು ಬಾರಿ ಅವಕಾಶ ನೀಡಲಾಗಿದೆ. ಅದರಂತೆ ಭಾರತ ತಂಡವು ದೆಹಲಿಯಲ್ಲಿ ರಾತ್ರಿ ವೇಳೆ ಅಭ್ಯಾಸ ನಡೆಸಿದ್ದಾರೆ.

ಐಸಿಸಿಯ ಈ ನಡೆಯಿಂದ ತಂಡದ ನೈತಿಕ ಸ್ಥೈರ್ಯದ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳುವುದು ದೊಡ್ಡ ಸವಾಲು. ಇದಾಗ್ಯೂ ಯುಎಸ್ಎ, ನೆದರ್​ಲೆಂಡ್ಸ್​ ಮತ್ತು ನೇಪಾಳದಂತಹ ಅಸೋಸಿಯೇಟ್ ರಾಷ್ಟ್ರಗಳ ಉತ್ಸಾಹಭರಿತ ಪ್ರದರ್ಶನದಂತೆ ನಾವು ಸಹ ಟೀಮ್ ಇಂಡಿಯಾಗೆ ಪ್ರಬಲ ಪೈಪೋಟಿ ನೀಡುವ ವಿಶ್ವಾಸವಿದೆ ಎಂದು ಗೆರ್ಹಾರ್ಡ್ ಎರಾಸ್ಮಸ್ ಹೇಳಿದ್ದಾರೆ.

ಇದನ್ನೂ ಓದಿ: IPL​ನಲ್ಲಿ ಇಲ್ಲ ಚಾನ್ಸ್​: ಪಾಕಿಸ್ತಾನ್​ ಸೂಪರ್​ ಲೀಗ್​ಗೆ 47 ವಿದೇಶಿ ಆಟಗಾರರು ಆಯ್ಕೆ

ಒಟ್ಟಿನಲ್ಲಿ ನಮೀಬಿಯ ತಂಡಕ್ಕೆ ಫ್ಲಡ್ ಲೈಟ್ ಟ್ರೈನಿಂಗ್ ಸೆಷನ್ ನೀಡದೇ, ಟೀಮ್ ಇಂಡಿಯಾಗೆ ಮಾತ್ರ 2 ಬಾರಿ ರಾತ್ರಿ ಅಭ್ಯಾಸ ನಡೆಸಲು ಅವಕಾಶ ಮಾಡಿಕೊಟ್ಟಿರುವ ಐಸಿಸಿಯ ನಡೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ಅದರಲ್ಲೂ ಕ್ರಿಕೆಟ್ ಅಂಗಳದಲ್ಲಿ ಈಗಷ್ಟೇ ಛಾಪು ಮೂಡಿಸುತ್ತಿರುವ ನಮೀಬಿಯದಂತಹ ತಂಡಕ್ಕೆ ಅಭ್ಯಾಸಕ್ಕೆ ಸಕಲ ಸೌಕರ್ಯ ಒದಗಿಸಿ ಕೊಡದೇ ತಾರತಮ್ಯ ಮರೆದಿರುವ ಐಸಿಸಿಯ ನಡೆಗೆ ಕ್ರಿಕೆಟ್ ಪ್ರೇಮಿಗಳಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

Published On – 12:33 pm, Thu, 12 February 26

Source link