ಬೆಂಗಳೂರು, ಮಾರ್ಚ್ 30: ನಗರದ ಹೋಟೆಲ್ಗಳಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕೊರತೆಯು ತೀವ್ರ ಆತಂಕ ಸೃಷ್ಟಿಸಿದೆ. ಈ ನಡುವೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ನಾಳೆ ನಗರದ ಹೋಟೆಲ್ಗಳಿಗೆ 17,500 ಹೆಚ್ಚುವರಿ ಗ್ಯಾಸ್ ಸಿಲಿಂಡರ್ಗಳನ್ನು ವಿತರಿಸಲಾಗುವುದು ಎಂದು ಘೋಷಿಸಿದ್ದಾರೆ. ಈ ಆದೇಶದ ಅನ್ವಯ, ಇಂದು ವಿತರಕರಿಗೆ ಸಿಲಿಂಡರ್ಗಳು ತಲುಪಲಿದ್ದು, ನಾಳೆಯಿಂದ ಹೋಟೆಲ್ ಮಾಲೀಕರಿಗೆ ವಿತರಣೆ ಆರಂಭವಾಗಲಿದೆ. ಈ ಪ್ರಕ್ರಿಯೆಯು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಆದರೆ ಹೋಟೆಲ್ ಮಾಲೀಕರ ಆತಂಕ ನಾಳೆಯಿಂದ ಬಗೆಹರಿಯಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ದೇಶೀಯ ಸಿಲಿಂಡರ್ಗಳ ವಿತರಣೆಯಲ್ಲೂ ವಿಳಂಬವಾಗುತ್ತಿದ್ದು, ಗ್ರಾಹಕರು ವಿನಾಕಾರಣ ಡಿಸ್ಟ್ರಿಬ್ಯೂಟರ್ಗಳ ಕಚೇರಿಗೆ ಹೋಗಬಾರದು. 25 ದಿನಗಳ ನಂತರ ಬುಕ್ ಮಾಡಿದರೆ ಸಿಲಿಂಡರ್ ಲಭ್ಯವಾಗುತ್ತದೆ ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಇದು 45 ದಿನಗಳಿಗೆ ಅನ್ವಯಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಬಾಲಿವುಡ್ ಅಂಗಳದಲ್ಲಿ ಈಗ ಎಲ್ಲಿ ನೋಡಿದರೂ ನಟ ರಣವೀರ್ ಸಿಂಗ್ (Ranveer Singh) ಅವರದ್ದೇ ಹವಾ. ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಚಿತ್ರದ ಭರ್ಜರಿ ಯಶಸ್ಸಿನಿಂದ ರಣವೀರ್ ಸಿಂಗ್ ಅವರು ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ. ಆದರೆ, ಈ ಯಶಸ್ಸಿನ ನಡುವೆಯೂ ಒಂದು ಸಣ್ಣ ಅಸಮಾಧಾನ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಅದೇನೆಂದರೆ, ಬಾಲಿವುಡ್ ಬಾದ್ಶಾ ಶಾರುಖ್ ಖಾನ್ (Shah Rukh Khan) ಅವರು ರಣವೀರ್ ಅವರ ಈ ದೊಡ್ಡ ಸಾಧನೆಯ ಬಗ್ಗೆ ಯಾಕೆ ಮೌನವಾಗಿದ್ದಾರೆ ಎಂಬುದು. ಈಗ ಆ ಎಲ್ಲಾ ಪ್ರಶ್ನೆಗಳಿಗೆ ಮತ್ತು ಅಭಿಮಾನಿಗಳ ವದಂತಿಗಳಿಗೆ ಒಂದು ಫೋಟೋ ಉತ್ತರ ನೀಡಿದೆ.
ಇತ್ತೀಚೆಗೆ ಖ್ಯಾತ ಉದ್ಯಮಿ ಮೋಹಿತ್ ಕಾಂಬೋಜ್ ಅವರ ಪುತ್ರಿ ಮಿಷ್ಕಾ ಕಾಂಬೋಜ್ ಅವರ ಅದ್ದೂರಿ ಹುಟ್ಟುಹಬ್ಬದ ಪಾರ್ಟಿ ಮುಂಬೈನಲ್ಲಿ ನಡೆಯಿತು. ಈ ಸಂಭ್ರಮಕ್ಕೆ ಸಂಜಯ್ ದತ್, ರಣವೀರ್ ಸಿಂಗ್, ಶಾರುಖ್ ಖಾನ್ ಸೇರಿದಂತೆ ಬಾಲಿವುಡ್ನ ಘಟಾನುಘಟಿಗಳು ಹಾಜರಾಗಿದ್ದರು. ಈ ಪಾರ್ಟಿಯ ಹಲವು ವಿಡಿಯೋ ಮತ್ತು ಫೋಟೋಗಳು ಈಗ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಸದ್ಯ ಇಂಟರ್ನೆಟ್ನಲ್ಲಿ ಸಖತ್ ಸದ್ದು ಮಾಡುತ್ತಿರುವುದು ಶಾರುಖ್ ಖಾನ್ ಮತ್ತು ರಣವೀರ್ ಸಿಂಗ್ ಒಟ್ಟಿಗೆ ಇರುವ ಫೋಟೋ. ಈ ಫೋಟೋದಲ್ಲಿ ಇಬ್ಬರೂ ನಟರು ನಗುಮೊಗದಿಂದ ಪೋಸ್ ನೀಡಿದ್ದು, ಅವರ ಜೊತೆಗೆ ನಟಿ ಶಿಲ್ಪಾ ಶೆಟ್ಟಿ ಕೂಡ ಕಾಣಿಸಿಕೊಂಡಿದ್ದಾರೆ. ಫೋಟೋ ನೋಡಿದ ಅಭಿಮಾನಿಗಳು, ‘ಇಬ್ಬರ ನಡುವೆ ಯಾವುದೇ ಅಸಮಾಧಾನವಿಲ್ಲ. ಕಿಂಗ್ ಖಾನ್ ಯಾವಾಗಲೂ ರಣವೀರ್ ಅವರನ್ನು ಬೆಂಬಲಿಸುತ್ತಾರೆ’ ಎಂದು ಕಾಮೆಂಟ್ ಮಾಡುತ್ತಿದ್ದಾರೆ.
‘ಧುರಂಧರ್ 2’ ಚಿತ್ರವು ಬಾಕ್ಸ್ ಆಫೀಸ್ನಲ್ಲಿ ದಾಖಲೆ ಬರೆಯುತ್ತಿದ್ದರೂ ಕೂಡ ಶಾರುಖ್ ಖಾನ್, ಸಲ್ಮಾನ್ ಖಾನ್ ಅಥವಾ ಆಮೀರ್ ಖಾನ್ ಅವರು ಬಹಿರಂಗವಾಗಿ ಚಿತ್ರದ ಬಗ್ಗೆ ಪೋಸ್ಟ್ ಮಾಡಿಲ್ಲ ಎಂದು ನೆಟ್ಟಿಗರು ಟೀಕಿಸುತ್ತಿದ್ದರು. ಅವರಿಗೆ ರಣವೀರ್ ಸಿಂಗ್ ಬಗ್ಗೆ ಏನಾದರೂ ಅಸಮಾಧಾನ ಇರಬಹುದಾ ಎಂಬ ಅನುಮಾನ ಮೂಡಿತ್ತು. ಆದರೆ, ಈ ವೈರಲ್ ಫೋಟೋದಿಂದಾಗಿ ಎಲ್ಲ ಅನುಮಾನಕ್ಕೆ ತೆರೆಬಿದ್ದಿದೆ.
‘ಧುರಂಧರ್ 2’ ಚಿತ್ರವು ವಿಶ್ವಾದ್ಯಂತ 1300 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿದೆ. ಈ ಸಿನಿಮಾ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಇದನ್ನು ಬಿಜೆಪಿ ಪರವಾದ ಪ್ರೊಪಗಾಂಡ ಸಿನಿಮಾ ಎಂದು ಟೀಕಿಸಿದ್ದಾರೆ. ಆದರೆ ರಿಷಬ್ ಶೆಟ್ಟಿ, ರಜನಿಕಾಂತ್, ಶಿವರಾಜ್ಕುಮಾರ್ ಮುಂತಾದ ಸೆಲೆಬ್ರಿಟಿಗಳು ಈ ಚಿತ್ರವನ್ನು ಹೊಗಳಿದ್ದಾರೆ.
ನವದೆಹಲಿ, ಮಾರ್ಚ್ 30: ಪ್ರಮಾಣೀಕೃತವಲ್ಲದ ಸಿಸಿಟಿವಿ ಕ್ಯಾಮರಾಗಳ ಮಾರಾಟವನ್ನು ಭಾರತ ಏಪ್ರಿಲ್ 1ರಿಂದ ನಿರ್ಬಂಧಿಸಿದೆ. ಇದರೊಂದಿಗೆ ಚೀನೀ ಮೂಲದ ಸಿಸಿ ಕ್ಯಾಮರಾಗಳಿಗೆ (Chinese origin CCTV cameras) ಭಾರತದಲ್ಲಿ ಮಾರಾಟ ಸಾಧ್ಯವಾಗದೇ ಹೋಗಬಹುದು. ಭಾರತದ ಮಾರುಕಟ್ಟೆಯಲ್ಲಿ ಉಪಸ್ಥಿತಿ ಹೊಂದಿರುವ ಹೈಕ್ವಿಶನ್ (HikVision), ಡಹುವಾ ಟೆಕ್ನಾಲಜಿ (Dahua Technology), ಟಿಪಿ ಲಿಂಕ್ (TP-Link) ಇತ್ಯಾದಿ ಚೀನೀ ಬ್ರ್ಯಾಂಡ್ ಈ ಕ್ರಮದಿಂದ ಭಾರತದ ಸ್ಥಳೀಯ ಸಿಸಿಟಿವಿ ಕ್ಯಾಮರಾ ಉದ್ಯಮಕ್ಕೆ ಪುಷ್ಟಿ ಸಿಗುವ ನಿರೀಕ್ಷೆ ಇದೆ.
ಸಿಸಿಟಿವಿ ಕ್ಯಾಮರಾದಲ್ಲಿ ಹೇಗೆ ನಿರ್ಬಂಧ?
ಸರ್ಕಾರವು ಸಿಸಿಟಿವಿ ಕ್ಯಾಮರಾ ಸಿಸ್ಟಂಗಳಿಗೆ ಹೊಸ ಸರ್ಟಿಫಿಕೇಶನ್ ನೀತಿ ರೂಪಿಸಿದೆ. ಅಂದರೆ, ಸರ್ಟಿಫೈಡ್ ಕ್ಯಾಮೆರಾಗಳಿಗೆ ಮಾತ್ರ ಮಾರುಕಟ್ಟೆಯಲ್ಲಿ ಪ್ರವೇಶ ಸಿಗುತ್ತದೆ. ಚೀನಾ ನಿರ್ಮಿತ ಚಿಪ್ಸೆಟ್ಗಳನ್ನು ಬಳಸಿ ತಯಾರಿಸಲಾಗುವ ಸಿಸಿಟಿವಿ ಸಾಧನಗಳಿಗೆ ಸರ್ಟಿಫಿಕೇಶನ್ ಸಿಗುವ ಸಾಧ್ಯತೆ ಇಲ್ಲ. ಹೀಗಾಗಿ, ಚೀನಾ ಮೂಲದ ಸಿಸಿಟಿವಿ ಕ್ಯಾಮರಾ ಮತ್ತು ಸೆಕ್ಯೂರಿಟಿ ಸಿಸ್ಟಂಗಳು ಭಾರತದಲ್ಲಿ ನಿರ್ಬಂಧಿತಗೊಳ್ಳಲಿವೆ.
ಚೀನಾ ಮಾತ್ರವೇ ಅಲ್ಲ, ಯಾವುದೇ ವಿದೇಶೀ ನಿರ್ಮಿತ ಚಿಪ್ಸೆಟ್ ಇತ್ಯಾದಿ ಬಳಸಿ ತಯಾರಾಗುವ ಸೆಕ್ಯೂರಿಟಿ ಸಿಸ್ಟಂಗಳಿಗೆ ಸರ್ಟಿಫಿಕೇಶನ್ ಸಿಗುವುದಿಲ್ಲ. ಸಿಸಿಟಿವಿ ಕ್ಯಾಮರಾಗಳು ಭದ್ರತಾ ದೃಷ್ಟಿಯಿಂದ ಬಹಳ ಮುಖ್ಯವಾದ ಸಾಧನಗಳಾಗಿವೆ. ಏರ್ಪೋರ್ಟ್, ಸರ್ಕಾರಿ ಕಚೇರಿ ಇತ್ಯಾದಿ ಬಹಳ ಸೂಕ್ಷ್ಮ ಸ್ಥಳಗಳಲ್ಲಿ ಅಳವಡಿಸುವ ಕ್ಯಾಮೆರಾಗಳು ತುಂಬಾ ಮುಖ್ಯವಾದ ದತ್ತಾಂಶವನ್ನು ಸೆರೆಹಿಡಿಯಬಲ್ಲುದು.
ಈ ಉಪಕರಣಗಳು ವಿದೇಶೀ ಮೂಲದ್ದಾಗಿದ್ದರೆ ಸೂಕ್ಷ್ಮ ಮಾಹಿತಿಯು ವಿದೇಶಗಳಿಗೆ ರವಾನೆಯಾಗುವ ಅಪಾಯ ಹೆಚ್ಚಿರುತ್ತದೆ. ಇದರಿಂದ ರಾಷ್ಟ್ರೀಯ ಭದ್ರತೆಗೆ ಬಹಳ ಅಪಾಯ ಇರುತ್ತದೆ.
ಸರ್ಕಾರ ಈ ಹಿಂದೆಯೇ ಪ್ರಮಾಣೀಕೃತ ಪರೀಕ್ಷೆ ಮತ್ತು ಗುಣಮಟ್ಟ ಪ್ರಮಾಣ ವ್ಯವಸ್ಥೆಯನ್ನು ಜಾರಿಗೆ ತಂದಿತ್ತು. ಈ ಪ್ರಮಾಣಪತ್ರ ಪಡೆಯಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಲು ಉದ್ಯಮಕ್ಕೆ ಎರಡು ವರ್ಷ ಕಾಲಾವಕಾಶ ಕೊಡಲಾಗಿತ್ತು. ಸಿಸಿಟಿವಿ ತಯಾರಕರು ಚಿಪ್ಸೆಟ್ ಇತ್ಯಾದಿ ಪ್ರಮುಖ ಬಿಡಿಭಾಗಗಳು ಯಾವ ದೇಶದಿಂದ ಬಂದಿರುವಂಥವು ಎಂಬುದನ್ನು ಬಹಿರಂಗಪಡಿಸಬೇಕು; ಪ್ರಮಾಣಿತ ಲ್ಯಾಬ್ಗಳಲ್ಲಿ ಈ ಸಾಧನಗಳ ಪರೀಕ್ಷೆಯಾಗಬೇಕು. ದೂರದಿಂದಲೇ ಇದನ್ನು ಅನಧಿಕೃತವಾಗಿ ನಿಭಾಯಿಸಲ್ಪಡುತ್ತಿಲ್ಲ ಎಂಬುದು ಪರೀಕ್ಷೆಯಲ್ಲಿ ಸಾಬೀತಾಗಬೇಕು. ಇವೇ ಮುಂತಾದ ಮಾನದಂಡಗಳು ಸಿಸಿಟಿವಿ ಉತ್ಪನ್ನಗಳಿಗೆ ಇವೆ.
ಹೊಸ ನಿಯಮಗಳ ಅಡಿಯಲ್ಲಿ ಇಲ್ಲಿಯವರೆಗೆ ಸರ್ಕಾರವು 507 ಸಿಸಿಟಿವಿ ಕ್ಯಾಮರಾ ಮಾಡಲ್ಗಳಿಗೆ ಸರ್ಟಿಫಿಕೇಶನ್ ನೀಡಿದೆ.
ಬಾಗಲಕೋಟೆ, (ಮಾರ್ಚ್ 30): ಕಾಂಗ್ರೆಸ್ನ (Congress) ಎಚ್ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Bagalkot By Election) ಇದೇ ಏಪ್ರಿಲ್ 9ರಂದು ನಡೆಯಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ನ ನಾಯಕರಿಂದ ಭರ್ಜರಿ ಮತಬೇಟೆ ನಡೆದಿದೆ. ಇನ್ನು ಇಂದಿನಿಂದ (ಮಾರ್ಚ್ 30) ಸಿಎಂ ಸಿದ್ದರಾಮಯ್ಯ ಸಹ ಪ್ರಚಾರಕ್ಕಿಳಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಭರ್ಜರಿ ಕ್ಯಾಂಪೇನ್ ನಡೆಸಿದ್ದಾರೆ. ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಶ್ರೀರಾಮುಲು ಸಹ ಪ್ರಚಾರ ನಡೆಸಿದ್ದು, ಈ ವೇಳೆ ಟಿವಿ9 ಜತೆ ಮಾತನಾಡಿದ ರಾಮುಲು, ಸಿದ್ದರಾಮಯ್ಯ ಬಾದಾಮಿ ಶಾಸಕರಾಗಿದ್ದಾಗ ಅಭಿವೃದ್ಧಿ ಮಾಡಿಲ್ಲ. ಆಗ ಕಳ್ಳ ಮತಗಳಿಂದ ನನ್ನ ವಿರುದ್ಧ ಗೆದ್ದಿದ್ದರು. ಈ ವೇಳೆ ಸಿ.ಎಂ.ಇಬ್ರಾಹಿಂ ಅವರೇ ಹೇಳಿದ್ದಾರೆ.ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ ಇದೆ. ಹೀಗಾಗಿ 5 ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ.ಸಿದ್ದರಾಮಯ್ಯ ಪ್ರಚಾರ ಮಾಡಿದರೂ ಕಾಂಗ್ರೆಸ್ ಗೆಲ್ಲುವುದಿಲ್ಲ. ಇಡೀ ಸಚಿವ ಸಂಪುಟ ಸಮೇತ ಬಂದರೂ ಬಿಜೆಪಿ ಗೆಲುವು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಪ್ಪು ಬಣ್ಣದ ಮಹೀಂದ್ರಾ ಥಾರ್ (Thar) ಎಸ್ಯುವಿಯ ಮುಂಭಾಗದ ಚಕ್ರದ ಅಡಿಯಲ್ಲಿ ಪುಟ್ಟ ಕರುವೊಂದು ಆಕಸ್ಮಿಕವಾಗಿ ಸಿಲುಕಿಕೊಂಡಿತ್ತು. ತನ್ನ ಕರು ಅಪಾಯದಲ್ಲಿರುವುದನ್ನು ಕಂಡ ತಾಯಿ ಹಸು ಗಾಬರಿಗೊಂಡು, ಕಾರಿನ ಮೇಲೆರಗಲು ಪ್ರಯತ್ನಿಸುತ್ತಿತ್ತು. ಕರುವಿನ ರಕ್ಷಣೆಗಾಗಿ ಹಸು ಕಾರನ್ನು ತನ್ನ ಕೊಂಬಿನಿಂದ ಎತ್ತಲು ಪ್ರಯತ್ನಿಸುತ್ತಿದ್ದ ದೃಶ್ಯ ವಿಡಿಯೋದಲ್ಲಿದೆ.ತಕ್ಷಣವೇ ಸ್ಥಳಕ್ಕೆ ಬಂದ ಕಾರಿನ ಮಾಲೀಕರು ಮತ್ತು ಸ್ಥಳೀಯರು ಹಸುವನ್ನು ಸಮಾಧಾನಪಡಿಸಲು ಯತ್ನಿಸಿದರು. ನಂತರ ಅತ್ಯಂತ ಎಚ್ಚರಿಕೆಯಿಂದ ಕಾರಿನ ಮುಂಭಾಗವನ್ನು ಜ್ಯಾಕ್ (Jack) ಬಳಸಿ ಮೇಲಕ್ಕೆತ್ತಿ, ಅಡಿಯಲ್ಲಿ ಸಿಲುಕಿದ್ದ ಕರುವನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಚಕ್ರದ ಅಡಿಯಿಂದ ಹೊರಬಂದ ತಕ್ಷಣ ಕರು ಓಡಿ ಹೋಗಿ ತನ್ನ ತಾಯಿಯನ್ನು ಸೇರಿಕೊಂಡಿತು. ಈ ಅಪರೂಪದ ಪುನರ್ಮಿಲನವನ್ನು ಕಂಡು ನೆರೆದಿದ್ದ ಜನರು ಹರ್ಷ ವ್ಯಕ್ತಪಡಿಸಿದರು. ಸಕಾಲದಲ್ಲಿ ಸ್ಪಂದಿಸಿ ಮೂಕಪ್ರಾಣಿಯ ಜೀವ ಉಳಿಸಿದ ಕಾರಿನ ಮಾಲೀಕನ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆಯ ಸುರಿಮಳೆಗರೆಯುತ್ತಿದ್ದಾರೆ.
ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾಗೂ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ (Hardik Pandya) ಕಾರುಗಳ ಮೇಲಿನ ಮೋಹ ಎಂತಹದ್ದು ಎಂಬುದು ಎಲ್ಲರಿಗೂ ತಿಳಿದಿರುವಂತದ್ದೇ. ಪಾಂಡ್ಯ ಗ್ಯಾರೆಜ್ನಲ್ಲಿ ಹಲವು ದುಬಾರಿ ಕಾರುಗಳ ಸಂಗ್ರಹವಿದೆ. ಇದೀಗ ಅವುಗಳ ಪಟ್ಟಿಗೆ ಮತ್ತೊಂದು ದುಬಾರಿ ಕಾರು ಸೇರ್ಪಡೆಗೊಂಡಿದೆ. ಈ ಮೂಲಕ ಹಾರ್ದಿಕ್ ಪಾಂಡ್ಯ ಕೇವಲ ಆರು ತಿಂಗಳಲ್ಲಿ ನಾಲ್ಕನೇ ಐಷಾರಾಮಿ ಕಾರನ್ನು ಖರೀದಿಸಿದಂತ್ತಾಗಿದೆ. ಈ ಬಾರಿ ಇತ್ತೀಚೆಗೆ ಬಿಡುಗಡೆಯಾದ ಕಾರನ್ನು ಖರೀದಿಸಿರುವ ಹಾರ್ದಿಕ್, ತಮ್ಮ ಗೆಳತಿ ಮಹಿಕಾ ಅವರೊಂದಿಗೆ ಕಾರಿನ ಮುಂದೆ ನಿಂತ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
ಹೊಸ ಕಾರು ಖರೀದಿಸಿದ ಹಾರ್ದಿಕ್ ಪಾಂಡ್ಯ
ಹಾರ್ದಿಕ್ ಪಾಂಡ್ಯ ಹೊಸ ಜನರೇಷನ್ನ ಮರ್ಸಿಡಿಸ್-ಬೆನ್ಜ್ ವಿ-ಕ್ಲಾಸ್ ಕಾರನ್ನು ಖರೀದಿಸಿದ್ದಾರೆ. ಈ ಮೂಲಕ ಈ ಕಾರನ್ನು ಖರೀದಿಸಿದ ಭಾರತದ ಮೊದಲ ವ್ಯಕ್ತಿ ಎನಿಸಿಕೊಂಡಿದ್ದಾರೆ. ಈ ಐಷಾರಾಮಿ MPV (ಬಹುಪಯೋಗಿ ವಾಹನ) ಕಾರಿಗೆನ ಬೆಲೆ ಸುಮಾರು ₹1.4 ಕೋಟಿ ರೂ. ಎನ್ನಲಾಗುತ್ತಿದೆ. ಆರಾಮದಾಯಕ ಕುಟುಂಬ ಪ್ರಯಾಣ ಮತ್ತು ಪ್ರೀಮಿಯಂ ಐಷಾರಾಮಿಗೆ ಹೆಸರುವಾಸಿಯಾದ ಇದು ವಿಶಾಲವಾದ ಒಳಾಂಗಣ, ಉನ್ನತ-ಮಟ್ಟದ ವೈಶಿಷ್ಟ್ಯಗಳು ಮತ್ತು ಸಾಟಿಯಿಲ್ಲದ ಸೌಕರ್ಯವನ್ನು ಹೊಂದಿದೆ.
HARDIK PANDYA GIFT 1.7 CRORE CAR TO HIS GIRLFRIEND
– Hardik Pandya gifted India’s first Mercedes-Benz V-Class to his girlfriend Mahieka sharma today, and its price is around ₹1.7 crore.pic.twitter.com/Cplo3im3iO
ಹಾರ್ದಿಕ್ ಪಾಂಡ್ಯ ಅವರ ಗ್ಯಾರೇಜ್ ಈಗಾಗಲೇ ಹಲವಾರು ದುಬಾರಿ ಕಾರುಗಳಿಂದ ತುಂಬಿದೆ. ಪಾಂಡ್ಯ ಇತ್ತೀಚೆಗೆ ಸುಮಾರು ₹4 ಕೋಟಿ ಮೌಲ್ಯದ ಲ್ಯಾಂಡ್ ರೋವರ್ ಡಿಫೆಂಡರ್ ಕಾರನ್ನು ಖರೀದಿಸಿ, ಅವರ ಮಗನಿಗೆ ಉಡುಗೊರೆಯಾಗಿ ನೀಡಿದ್ದರು. ಆ ಬಳಿಕ ಸುಮಾರು 12 ಕೋಟಿ ರೂ. ಮೌಲ್ಯದ ಫೆರಾರಿ 12-ಸಿಲಿಂಡರ್ ಕಾರನ್ನು ಪಾಂಡ್ಯ ಇತ್ತೀಚೆಗೆ ಖರೀದಿಸಿದ್ದರು. ಹಾಗೆಯೇ 4.5 ಕೋಟಿ ರೂ. ಮೌಲ್ಯದ ಲಂಬೋರ್ಘಿನಿ ಉರುಸ್ ಕಾರನ್ನು ಸಹ ಖರೀದಿಸಿದ್ದರು.
ಇನ್ನು ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿರುವ ಹಾರ್ದಿಕ್ ಪಾಂಡ್ಯ ಲೀಗ್ನಲ್ಲಿ ಗೆಲುವಿನ ಶುಭಾರಂಭ ಮಾಡಿದ್ದಾರೆ. ಮೊದಲ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಎದುರಿಸಿದ್ದ ಮುಂಬೈ, ಕೆಕೆಆರ್ ನೀಡಿದ್ದ 221 ರನ್ಗಳ ಗುರಿಯನ್ನು ಕೊನೆಯ ಓವರ್ನಲ್ಲಿ ಬೆನ್ನಟ್ಟಿ ಗೆಲುವು ಸಾಧಿಸಿತು. ಈ ಮೂಲಕ 2013 ರ ನಂತರ ಐಪಿಎಲ್ನ ಮೊದಲ ಪಂದ್ಯದಲ್ಲಿ ಗೆದ್ದ ಸಾಧನೆಯನ್ನು ಮುಂಬೈ ತಂಡ ಮಾಡಿದೆ. ಹಾಗೆಯೇ 221 ರನ್ಗಳ ಬೃಹತ್ ಮೊತ್ತ ಬೆನ್ನಟ್ಟಿದ ದಾಖಲೆ ಕೂಡ ಮುಂಬೈ ಪಾಲಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ದೆಹಲಿ, ಮಾ.30: ನಾವು ಯಾವಾಗಲೂ ನಮ್ಮ ವಯಸ್ಸು ಹೆಚ್ಚುತ್ತಿರುವುದರ ಬಗ್ಗೆ ಯೋಚಿಸುತ್ತೇವೆ ಮತ್ತು ಪ್ರತಿದಿನ ನಮ್ಮ ಆರೋಗ್ಯದ ಕಡೆ ಗಮನ ಕೊಡುತ್ತೇವೆ. ಫಿಟ್ನೆಸ್ ಟ್ರ್ಯಾಕ್ ಮಾಡುತ್ತೇವೆ, ಡಯಟ್ ಮತ್ತು ಕ್ಯಾಲೋರಿಗಳನ್ನು ಲೆಕ್ಕ ಹಾಕುತ್ತೇವೆ, ನಿದ್ರೆಯನ್ನು ಟ್ರ್ಯಾಕ್ ಮಾಡುತ್ತೇವೆ ಮತ್ತು ನಿಯಮಿತವಾಗಿ ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳುತ್ತೇವೆ. ಇವೆಲ್ಲವೂ ನಾವು ವಯಸ್ಸಾದರೂ ಆರೋಗ್ಯಕರವಾಗಿ ಮತ್ತು ಯುವಕರಂತೆ ಕಾಣಲು ನೆರವಾಗುತ್ತವೆ. ಆದರೆ, ನೀವು ಎಂದಾದರೂ ನಿಮ್ಮ ಹಲ್ಲಿನ ವಯಸ್ಸಿನ ಬಗ್ಗೆ ಯೋಚಿಸಿದ್ದೀರಾ? ನಿಮ್ಮ ದಂತ ವಯಸ್ಸು ನಿಮ್ಮ ನಿಜವಾದ ವಯಸ್ಸಿಗಿಂತ ಹೆಚ್ಚಿರಬಹುದು. ಈ ಪ್ರಮುಖ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು, ಸೆನ್ಸೋಡೈನ್ ಮತ್ತು ಟಿವಿ9 ನೆಟ್ವರ್ಕ್, ಇಂಡಿಯನ್ ಡೆಂಟಲ್ ಅಸೋಸಿಯೇಷನ್ (IDA) ಸಹಯೋಗದೊಂದಿಗೆ ನಿಮ್ಮ ದಂತ ವಯಸ್ಸು ತಿಳಿಯಿರಿ (Know Your Dental Age) ಎಂಬ ವಿಶೇಷ ಅಭಿಯಾನವನ್ನು ಪ್ರಾರಂಭಿಸಿವೆ.
ಈ ಅಭಿಯಾನಕ್ಕೆ ಚಾಲನೆ ನೀಡಲು, ಹೆಲಿಯಾನ್ ಇಂಡಿಯಾದ ಸಿಇಒ ಮತ್ತು ಏಷ್ಯಾ ಅಧ್ಯಕ್ಷರಾದ ಮಿಸ್ಟರ್ ಕೆದಾರ್ ಲೆಲೆ, ಟಿವಿ9 ನೆಟ್ವರ್ಕ್ನ ಪ್ರತಿನಿಧಿ ಎಂಜಾಸ್ ಮತ್ತು ಕೇಂದ್ರ ಸಚಿವೆ ಅನುಪ್ರಿಯ ಪಟೇಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಮಿಸ್ಟರ್ ಕೆದಾರ್ ಲೆಲೆ ಅವರು, “ಸ್ವಯಂ ಅರಿವು ಮತ್ತು ಸ್ವಯಂ ಪರೀಕ್ಷೆಯು ಆರೋಗ್ಯದ ಕಡೆಗೆ ಪ್ರಮುಖ ಹೆಜ್ಜೆ ಇಡಲು ಸಹಾಯ ಮಾಡುತ್ತದೆ” ಎಂದು ಹೇಳಿದರು. ಸಚಿವೆ ಅನುಪ್ರಿಯ ಪಟೇಲ್ ಅವರು ಈ ಅಭಿಯಾನವನ್ನು ಶ್ಲಾಘಿಸಿ, “ನಮ್ಮ ದೇಶದ ಜನರಲ್ಲಿ ಮೌಖಿಕ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಜಾಗೃತಿ ಇನ್ನು ತುಂಬಾ ಕಡಿಮೆ ಇದೆ. ಅವರಿಗೆ ಮೂಲವಾಗಿ ಏನು ಮಾಡಬೇಕು ಎಂದು ತಿಳಿದಿಲ್ಲ, ಇದು ನಮ್ಮ ಆದ್ಯತೆ ಪಟ್ಟಿಯಲ್ಲಿ ಬಹಳ ಹಿಂದಿದೆ ಎಂಬ ಅರ್ಥವನ್ನು ನೀಡುತ್ತದೆ. ಇಂತಹ ಸಂದರ್ಭದಲ್ಲಿ ನೀವು ಮಾಡುತ್ತಿರುವ ಈ ವಿಶೇಷ ಅಭಿಯಾನ ಅತ್ಯಂತ ಪ್ರಶಂಸನೀಯವಾಗಿದೆ” ಎಂದು ಹೇಳಿದ್ದಾರೆ.
ಇಲ್ಲಿದೆ ನೋಡಿ ವಿಡಿಯೋ:
ಮೌಖಿಕ ಆರೋಗ್ಯವನ್ನು ನಿರ್ಲಕ್ಷಿಸುವುದರಿಂದ ಹಲ್ಲುಗಳ ವಯಸ್ಸು ಹೆಚ್ಚಾಗಬಹುದು, ಇದನ್ನು ಡೆಂಟಲ್ ಏಜಿಂಗ್ ಎಂದು ಕರೆಯಲಾಗುತ್ತದೆ. ಸಂವೇದನಾಶೀಲತೆ, ಹಲ್ಲಿನ ಸವೆತ, ದಂತ ಕವಚ ಸಮಸ್ಯೆ, ವಸಡು ಸಮಸ್ಯೆ ಮತ್ತು ಹಲ್ಲು ಹಳದಿಯಾಗುವಿಕೆ ಇವೆಲ್ಲವೂ ಡೆಂಟಲ್ ಏಜಿಂಗ್ನ ಲಕ್ಷಣಗಳಾಗಿವೆ. ವರ್ಲ್ಡ್ ಓರಲ್ ಹೆಲ್ತ್ ಡೇ ಸಂದರ್ಭದಲ್ಲಿ ಈ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಫಿಟ್ ಆಗಿರಲು ನಾವು ಪ್ರತಿದಿನ ಸಾವಿರಾರು ಹೆಜ್ಜೆಗಳನ್ನು ಹಾಕುತ್ತೇವೆ, ಕ್ಯಾಲೋರಿಗಳನ್ನು ಲೆಕ್ಕ ಹಾಕುತ್ತೇವೆ, ನಿದ್ರೆಯನ್ನು ಟ್ರ್ಯಾಕ್ ಮಾಡುತ್ತೇವೆ. ಇದೇ ರೀತಿ ನಮ್ಮ ಹಲ್ಲುಗಳ ವಯಸ್ಸಿನ ಬಗ್ಗೆಯೂ ಗಮನ ಹರಿಸುವುದು ಅಷ್ಟೇ ಮುಖ್ಯ.
ನಿಮ್ಮ ಹಲ್ಲುಗಳ ವಯಸ್ಸನ್ನು ತಿಳಿದುಕೊಳ್ಳಲು ಮತ್ತು ಅವುಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ಪ್ರಸ್ತುತಪಡಿಸಲಾದ QR ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ನಿಮ್ಮ ಡೆಂಟಲ್ ಏಜ್ ಅನ್ನು ಪರಿಶೀಲಿಸಿಕೊಳ್ಳಬಹುದು. ನಿಮ್ಮ ಹಲ್ಲುಗಳ ವಯಸ್ಸು ನಿಮಗಿಂತ ಹೆಚ್ಚು ಹೆಚ್ಚಾಗಲು ಬಿಡಬೇಡಿ. ಹಲ್ಲು ನೋವು ಪ್ರಾರಂಭವಾಗುವ ಮೊದಲು ನೀವು ಕ್ರಮ ಕೈಗೊಳ್ಳಬೇಕು. ಮೌಖಿಕ ಆರೋಗ್ಯಕ್ಕಾಗಿ ಈ ಮೊದಲ ಹೆಜ್ಜೆಯನ್ನು ಇಟ್ಟು, ಆರೋಗ್ಯಕರ ನಗುವನ್ನು ಕಾಪಾಡಿಕೊಳ್ಳಿ.
ತುಮಕೂರು, ಮಾರ್ಚ್ 30: ಕೌಟುಂಬಿಕ ಕಲಹಕ್ಕೆ ಯುವಕನೋರ್ವ ಬಲಿಯಾಗಿರುವ ಘಟನೆ ತುಮಕೂರುನಗರದ ಬನಶಂಕರಿಯಲ್ಲಿ ನಡೆದಿದೆ. ಅಣ್ಣನಿಂದಲೇ ತಮ್ಮ ಭೀಕರವಾಗಿ ಕೊಲೆಯಾಗಿದ್ದರೆ, ತಂದೆಯೂ ಕೃತ್ಯಕ್ಕೆ ಸಾಥ್ ಕೊಟ್ಟಿದ್ದ ಎಂಬ ವಿಷಯ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ. ಸ್ಟಾಲಿನ್ (29) ಮೃತ ಯುವಕನಾಗಿದ್ದು, ಆತನ ಸಹೋದರ ನವೀನ್ ಮತ್ತು ತಂದೆ ಜಾನ್ ಪಾಲ್ ಎಂಬುವವರೇ ಆರೋಪಿಗಳಾಗಿದ್ದಾರೆ. ಮೃತ ನವೀನ್ಗೆ ವಿವಾಹ ಕೂಡ ನಿಶ್ಚಯವಾಗಿತ್ತು. ಆತ ಜೊತೆಯಾಗಿ ಬಾಳಬೇಕಿದ್ದ ಯುವತಿ ಆಡಿದ್ದ ಒಂದು ಮಾತೇ ಸ್ಟಾಲಿನ್ ಕುಟುಂಬದಲ್ಲಿ ಬೆಂಕಿಯ ಕಿಡಿ ಹೊತ್ತಿಸಿತ್ತು ಎನ್ನಲಾಗಿದೆ. ಇದೇ ತಿಂಗಳ 22ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆರೋಪಿ ಜಾನ್ ಪಾಲ್ಗೆ ಇಬ್ಬರು ಗಂಡುಮಕ್ಕಳಿದ್ದು, ಆ ಪೈಕಿ ನವೀನ್ ಮೊದಲ ಮಗನಾದರೆ ಮೃತ ಸ್ಟಾಲಿನ್ ಎರಡನೇ ಪುತ್ರ. ನವೀನ್ಗೆ ಅದಾಗಲೇ ಮದುವೆಯಾಗಿದ್ದು, ಆತನ ಹೆಂಡತಿ ತುಂಬು ಗರ್ಭಿಣಿ ಕೂಡ ಹೌದು. ಈ ನಡುವೆ ಸ್ಟಾಲಿನ್ಗೆ ಜನಿಫರ್ ಎಂಬ ಯುವತಿಯ ಜೊತೆಗೆ ಮದುವೆ ನಿಶ್ಚಯವಾಗಿತ್ತು. ವಿವಾಹ ತಯಾರಿಯ ನಡುವೆ ತಾನು ಮದುವೆಯಾಗಬೇಕಿದ್ದ ಸ್ಟಾಲಿನ್ ಮತ್ತು ಆತನ ಅತ್ತಿಗೆ ಅಂದರೆ ನವೀನ್ ಪತ್ನಿ ನಡುವೆ ಅಕ್ರಮ ಸಂಬಂಧ ಇರೋದಾಗಿ ಆಕೆ ಗಂಭೀರ ಆರೋಪ ಮಾಡಿದ್ದಳು. ಇದೇ ವಿಚಾರವಾಗಿ ಸ್ಟಾಲಿನ್ ಮನೆಯಲ್ಲಿ ಒಂದು ವಾರದಿಂದ ಗಲಾಟೆ ನಡೆಯುತ್ತಿತ್ತು. ಇದು ವಿಕೋಪಕ್ಕೆ ಹೋಗಿ ಮಾರ್ಚ್ 22ರಂದು ಅಣ್ಣ ನವೀನ್ ತಮ್ಮ ಸ್ಟಾಲಿನ್ನ ಕೊಲೆ ಮಾಡಿದ್ದ. ಬಳಿಕ ಘಟನೆಯನ್ನು ಮುಚ್ಚಿಹಾಕುವ ಪ್ರಯತ್ನವನ್ನು ನಡೆಸಲಾಗಿತ್ತು ಎಂಬುದೀಗ ಗೊತ್ತಾಗಿದೆ.
ಕಿರಿಯ ಮಗನ ಕೊಲೆ ಮಾಡಿದ್ದ ನವೀನ್ಗೆ ತಂದೆ ಜಾನ್ ಪಾಲ್ ಕೂಡ ಬೆಂಬಲ ನೀಡಿದ್ದು, ಆರೋಪಿಗಳು ಘಟನೆ ಬಗ್ಗೆ ಕಥೆ ಕಟ್ಟಿದ್ದರು. ಬೈಕ್ ನಿಲ್ಲಿಸುವಾಗ ಕುಸಿದು ಬಿದ್ದು ಕಂಬಿ ತಾಗಿ ಹೊಟ್ಟೆಗೆ ಗಾಯವಾಗಿದೆ ಎಂದು ಹೇಳಿ ಸ್ಟಾಲಿನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಐದು ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಿದ್ದಗಂಗಾ ಆಸ್ಪತ್ರೆಯಲ್ಲಿ ಸ್ಟಾಲಿನ್ ಮೃತಪಟ್ಟಿದ್ದಾರೆ. ಮೃತದೇಹ ಕುಟುಂಬಕ್ಕೆ ನೀಡುವ ಮುನ್ನ ಜಯನಗರ ಪೊಲೀಸರಿಗೆ ಆಸ್ಪತ್ರೆ ಮಾಹಿತಿ ಹಿನ್ನೆಲೆ ಪರಿಶೀಲಿಸಿದಾಗ ಚಾಕುವಿನಿಂದ ಇರಿದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ತಂದೆ ಜಾನ್ ಪಾಲ್ನ ಪೊಲೀಸರು ವಿಚಾರಣೆ ನಡೆಸಿದ್ದು, ಈತ ಆರಂಭದಲ್ಲಿ ಕತೆ ಹೇಳಿದ್ದ. ಆದರೆ ಬಳಿಕ ಅಸಲಿ ಸತ್ಯವನ್ನು ಬಿಚ್ಚಿಟ್ಟ ಹಿನ್ನೆಲೆ ಕೊಲೆ ರಹಸ್ಯ ಬಯಲಾಗಿದೆ.
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾ ಮಾರ್ಚ್ 19ರಂದೇ ತೆರೆಗೆ ಬರಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಿನಿಮಾ ವಿಳಂಬ ಆಗಿದೆ. ಈಗ ಸಿನಿಮಾ ಬಗ್ಗೆ ಕಿಯಾರಾ ಅಡ್ವಾಣಿ ಮಾತನಾಡಿದ್ದಾರೆ. ಅವರು ಸಿನಿಮಾ ಒಪ್ಪಿಕೊಂಡಿದ್ದರ ಕಾರಣವನ್ನು ವಿವರಿಸಿದ್ದಾರೆ.
‘ಟಾಕ್ಸಿಕ್’ ಸಿನಿಮಾದಲ್ಲಿ ಹಲವು ಹೀರೋಯಿನ್ಗಳು ನಟಿಸಿದ್ದಾರೆ. ನಯನತಾರಾ, ಕಿಯಾರಾ ಅಡ್ವಾಣಿ ಮೊದಲಾದವರು ಪ್ರಮುಖರು. ಈಗ ರಿಲೀಸ್ ಆಗಿರುವ ಬಹುತೇಕ ಟೀಸರ್ ಹಾಗೂ ಗ್ಲಿಂಪ್ಸ್ ಯಶ್ ಅವರನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿದೆ. ಸಿನಿಮಾ ರಿಲೀಸ್ ಪೋಸ್ಟ್ಪೋನ್ ಆಗುವುದಕ್ಕೂ ಮೊದಲು ‘ಟಾಕ್ಸಿಕ್’ ಸಿನಿಮಾದ ಸಾಂಗ್ ರಿಲೀಸ್ ಆಗಿತ್ತು. ಕಿಯಾರಾ ಹಾಗೂ ಯಶ್ ಒಟ್ಟಾಗಿ ಕಾಣಿಸಿಕೊಂಡ ಹಾಡಿನ ಲಿರಿಕಲ್ ವಿಡಿಯೋ ಇದಾಗಿತ್ತು.
ಈಗ ಕಿಯಾರಾ ತಮ್ಮ ಪಾತ್ರದ ಬಗ್ಗೆ ವಿವರಣೆ ನೀಡಿದ್ದಾರೆ. ‘ನಾನು ಈವರೆಗೆ ನೋಡಿದ ಭಿನ್ನ ಪಾತ್ರಗಳಲ್ಲಿ ನಾಡಿಯಾ ಕೂಡ ಒಂದು. ನಮ್ಮ ನಿರ್ದೇಶಕಿ ಗಿತು ಮೋಹನ್ದಾಸ್ ಪಾತ್ರವನ್ನು ಬರೆದ ರೀತಿ ಹಾಗೂ ಪಾತ್ರವನ್ನು ಕೆತ್ತಿದ ರೀತಿ ನನಗೆ ಇಷ್ಟ ಆಯಿತು. ನಾನು ಆ ಚಾಲೆಂಜ್ನ ಸ್ವೀಕರಿಸಬೇಕು ಎನಿಸಿತು. ಅವರ ಆಲೋಚನೆಯಲ್ಲಿ ನನ್ನ ಪಾತ್ರವನ್ನು ಹೇಗೆ ನಿರ್ವಹಿಸಿದ್ದೇನೆ ಎಂಬುದನ್ನು ನೀವೇ ನೋಡಿ’ ಎಂದು ಕಿಯಾರಾ ಕೋರಿದ್ದಾರೆ.
ಇತ್ತೀಚೆಗೆ ರಿಲೀಸ್ ಆದ ‘ಟಾಕ್ಸಿಕ್’ ಚಿತ್ರದ ‘ತಬಾಹಿ’ ಹಾಡು ಎಲ್ಲರ ಮೆಚ್ಚುಗೆ ಪಡೆದಿದೆ. ಈ ಹಾಡಿನ ವಿಡಿಯೋ ಕೂಡ ರಿಲೀಸ್ ಆಗಬೇಕಿತ್ತು ಎಂದು ಅಭಿಮಾನಿಗಳು ಬಯಸಿದ್ದರು. ಶೀಘ್ರವೇ ಅದನ್ನು ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇದೆ. ವಿಶಾಲ್ ಮಿಶ್ರಾ ಅವರು ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ.
ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಈ ಸಿನಿಮಾ ಜೂನ್ 4ರಂದು ರಿಲೀಸ್ ಆಗಲಿದೆ. ಮಲಯಾಳಂನ ಗೀತು ಮೋಹನ್ ದಾಸ್ ನಿರ್ದೇಶನ ಮಾಡಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.
ಮೈಸೂರು, ಮಾರ್ಚ್ 30: ಜಿಲ್ಲೆಯ ಸರಗೂರು ತಾಲೂಕಿನ ನುಗು ಜಲಾಶಯದ ಬಳಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು ಮುಖ್ಯ ರಸ್ತೆಗೆ ನುಗ್ಗಿ ಕೆಲಕಾಲ ಆತಂಕ ಸೃಷ್ಟಿಸಿವೆ. ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಓಡಿಸಲು ಮುಂದಾದ ವೇಳೆ, ಕಾಡಾನೆಗಳು ಜೀಪ್ ಮೇಲೆ ದಾಳಿ ನಡೆಸಿ ಜಖಂಗೊಳಿಸಿವೆ. ಅದೃಷ್ಟವಶಾತ್ ಜೀಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾಡಾನೆಗಳನ್ನು ಮತ್ತೆ ಕಾಡಿಗೆ ಹಿಂತಿರುಗಿಸಿದ್ದಾರೆ.