ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ ಇದೆ ಎಂದಿದ್ಯಾಕೆ ಶ್ರೀರಾಮುಲು?
ಬಾಗಲಕೋಟೆ, (ಮಾರ್ಚ್ 30): ಕಾಂಗ್ರೆಸ್ನ (Congress) ಎಚ್ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Bagalkot By Election) ಇದೇ ಏಪ್ರಿಲ್ 9ರಂದು ನಡೆಯಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ನ ನಾಯಕರಿಂದ ಭರ್ಜರಿ ಮತಬೇಟೆ ನಡೆದಿದೆ. ಇನ್ನು ಇಂದಿನಿಂದ (ಮಾರ್ಚ್ 30) ಸಿಎಂ ಸಿದ್ದರಾಮಯ್ಯ ಸಹ ಪ್ರಚಾರಕ್ಕಿಳಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಭರ್ಜರಿ ಕ್ಯಾಂಪೇನ್ ನಡೆಸಿದ್ದಾರೆ. ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಶ್ರೀರಾಮುಲು ಸಹ ಪ್ರಚಾರ ನಡೆಸಿದ್ದು, ಈ ವೇಳೆ…