All posts by nagaraj11081993

Bengaluru Air Quality: ಬೆಂಗಳೂರು, ಮಂಗಳೂರು ಸೇರಿ ಇನ್ನೂ ನಾಲ್ಕು ಜಿಲ್ಲೆಗಳ ಏರ್ ಕ್ವಾಲಿಟಿ ಕಳಪೆ – Kannada News | Bangalore Air Pollution Crisis: Bengaluru, Manglore, Mysore and Belagavi Air quality has gotten worse

ಬೆಂಗಳೂರು, ಮಂಗಳೂರು ಸೇರಿ ಇನ್ನೂ ನಾಲ್ಕು ಜಿಲ್ಲೆಗಳ ಏರ್ ಕ್ವಾಲಿಟಿ ಕಳಪೆ

ಬೆಂಗಳೂರು, ಫೆಬ್ರುವರಿ 08: ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ (Bengaluru Air Quality) ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ನೂರರ ಆಸುಪಾಸಿದ್ದ AQI  ತಾರಕಕ್ಕೆ!

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 173ಕ್ಕೆ ತಲುಪಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ. ಮೂರು ನಾಲ್ಕು ದಿನಗಳ ಹಿಂದೆ 100ರ ಆಸು ಪಾಸಿದ್ದ ಮಂಗಳೂರಿನ AQI, ಇಂದು 174ಕ್ಕೆ ತಲುಪಿದ್ದು ಆಶ್ಚರ್ಯ ಉಂಟು ಮಾಡಿದೆ.

ಜೊತೆಗೆ ಮೈಸೂರಿನ AQI 176, ಬೆಳಗಾವಿಯ AQI 178 ಆಗಿದ್ದು, ಈ ನಗರಗಳು ಬೆಂಗಳೂರನ್ನೂ ಮೀರಿಸಿವೆ. ಈ ಹದಗೆಟ್ಟ ವಾತಾವರಣ ಹೀಗೆ ಮುಂದುವರೆದರೆ ದೆಹಲಿಯಂತೆಯೇ ಆಗಬಹುದೆಂದು ತಜ್ಞರು ಎಚ್ಚರಿಸಿದ್ದಾರೆ. ಈ ಕಲುಷಿತ ಗಾಳಿಯಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –174
  • ಮಂಗಳೂರು-174
  • ಮೈಸೂರು –176
  • ಬೆಳಗಾವಿ – 178
  • ಕಲಬುರ್ಗಿ-139
  • ಶಿವಮೊಗ್ಗ – 162
  • ಬಳ್ಳಾರಿ – 168
  • ಹುಬ್ಬಳ್ಳಿ- 146
  • ಉಡುಪಿ –166
  • ವಿಜಯಪುರ –150

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕನ್ನಡ ಚಿತ್ರರಂಗಕ್ಕೆ ಮರಳಿ ಬಂದ ‘ಯಾರೇ ನೀನು ಚೆಲುವೆ’ ಹೀರೋಯಿನ್ ಸಂಗೀತಾ – Kannada News | Sangita Madhavan Nair comeback to Kannada Film Industry

ನಟಿ ಸಂಗೀತಾ ಮಾಧವನ್ (Sangita Madhavan) ಅವರು ಕನ್ನಡ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರು. ಅವರು ಕನ್ನಡ ಸಿನಿಮಾಗಳಲ್ಲಿ ನಟಿಸದೇ ಎರಡೂವರೆ ದಶಕಕ್ಕೂ ಹೆಚ್ಚು ಕಾಲ ಆಗಿದೆ. 1998ರಲ್ಲಿ ಬಿಡುಗಡೆ ಆಗಿದ್ದ ‘ಯಾರೆ ನೀನು ಚೆಲುವೆ’ (Yaare Neenu Cheluve) ಸಿನಿಮಾದಲ್ಲಿ ಸಂಗೀತಾ ಮಾಧವನ್ ಅವರು ಹೀರೋಯಿನ್ ಆಗಿ ನಟಿಸಿದ್ದರು. 2000ನೇ ಇಸವಿಯಲ್ಲಿ ರಿಲೀಸ್ ಆದ ‘ಯಾರೆ ನೀ ಅಭಿಮಾನಿ’ ಸಿನಿಮಾದಲ್ಲಿ ಕೂಡ ಅವರು ಅಭಿನಯಿಸಿದ್ದರು. ಆ ಬಳಿಕ ದೊಡ್ಡ ಗ್ಯಾಪ್ ತೆಗೆದುಕೊಂಡಿದ್ದರು.

ಈಗ ಸಂಗೀತಾ ಮಾಧವನ್ ಅವರು ಮತ್ತೆ ಕನ್ನಡ ಚಿತ್ರರಂಗದ ಕಡೆಗೆ ಮುಖ ಮಾಡಿದ್ದಾರೆ. ಆ ಬಗ್ಗೆ ಮಾಹಿತಿ ಸಿಕ್ಕಿದೆ. ಹೊಸ ತಂಡವೊಂದು ಸಂಗೀತಾ ಅವರನ್ನು ಕನ್ನಡ ಚಿತ್ರರಂಗಕ್ಕೆ ಮರಳಿ ಕರೆತಂದಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಕಿಚ್ಚ ಸುದೀಪ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡ ಕಿರಣ್ ವಿಶ್ವನಾಥ್ ಅವರ ನಿರ್ದೇಶನದ ಸಿನಿಮಾದಲ್ಲಿ ಸಂಗೀತಾ ನಟಿಸಲಿದ್ದಾರೆ.

ಕಿರಣ್ ವಿಶ್ವನಾಥ್ ಅವರು ಈ ಮೊದಲು ‘ರನ್ನ’, ‘ವಿಕ್ಟರಿ’ ಸಿನಿಮಾಗಳಿಗೆ ಸಹ-ನಿರ್ದೇಶಕನಾಗಿ ಕೆಲಸ ಮಾಡಿದ್ದರು. ಅವರು ಇದೇ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿ ಹೊಸ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಇದು ಅವರ ಚೊಚ್ಚಲ ಸಿನಿಮಾ. ಈ ಚಿತ್ರದಲ್ಲಿ ಸಂಗೀತ ಮಾಧವನ್ ಅವರು ಒಂದು ಪ್ರಮುಖ ಪಾತ್ರವನ್ನು ಮಾಡುತ್ತಿದ್ದಾರೆ.

ಈ ಸಿನಿಮಾದಲ್ಲಿ ಸಂಗೀತಾ ಅವರಿಗೆ ಭಾಗ್ಯ ಎಂಬ ಪಾತ್ರವನ್ನು ನೀಡಲಾಗಿದೆ. ನಾಯಕನ ತಾಯಿಯಾಗಿ ಅವರು ಅಭಿನಯಿಸಲಿದ್ದಾರೆ. ಇತ್ತೀಚೆಗಷ್ಟೇ ಚಿತ್ರತಂಡ ‘ಮಹಾನಟಿ’ ಖ್ಯಾತಿಯ ಪ್ರಿಯಾಂಕಾ ಆಚಾರ್ ಅವರನ್ನು ಹೀರೋಯಿನ್ ಆಗಿ ಪರಿಚಯಿಸಿತ್ತು. ಇದೀಗ ಸಂಗೀತಾ ಮಾಧವನ್ ಅವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ ಎಂಬುದನ್ನು ತಿಳಿಸಲಾಗಿದೆ.

ಇದನ್ನೂ ಓದಿ: ನಂದಿತಾ ಶ್ವೇತಾ ನಟನೆಯ ಹೊಸ ಸಿನಿಮಾ ‘ಬೆನ್ನಿ’: ಬದಲಾಯ್ತು ಗೆಟಪ್

ಅಷ್ಟಕ್ಕೂ ಸಿನಿಮಾದ ಹೆಸರೇನು? ಹಿರೋ ಯಾರು ಎಂಬಿತ್ಯಾದಿ ಮಾಹಿತಿಯನ್ನು ಚಿತ್ರತಂಡದವರು ಸದ್ಯಕ್ಕೆ ಗೌಪ್ಯವಾಗಿ ಇಟ್ಟಿದ್ದಾರೆ. ಬಹಳ ಗ್ರ್ಯಾಂಡ್ ಆಗಿ ನಾಯಕನ ಪರಿಚಯ ಮಾಡಲು ಸಿದ್ಧತೆ ನಡೆದಿದೆ. ‘ಗೌರಿ ಆರ್ಟ್ಸ್ ಬ್ಯಾನರ್’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಸಂಗೀತಾ ಅವರ ಆಗಮನದಿಂದ ಸಿನಿಮಾ ಮೇಲೆ ನಿರೀಕ್ಷೆ ಮೂಡುವಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಎಣ್ಣೆ ಏಟಲ್ಲಿ ಕ್ಯಾಬ್​​ಗೆ ಸ್ಕೂಟಿ ಗುದ್ದಿ ಯುವತಿಯರ ರಂಪಾಟ: ಸ್ಥಳೀಯರ ಜೊತೆಗೂ ಕಿರಿಕ್​​ – Kannada News | Drunk Girl Hits Cab with Scooter, Assaults Driver in Hulimavu, Bengaluru

ಬೆಂಗಳೂರು, ಫೆಬ್ರವರಿ 08: ಮದ್ಯದ ಅಮಲಿನಲ್ಲಿ ಕಾರು, ಬೈಕ್​ಗಳಿಗೆ ದ್ವಿಚಕ್ರ ವಾಹನ ಗುದ್ದಿ ಯುವತಿಯರು ಕಿರಿಕ್ ಮಾಡಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಹುಳಿಮಾವು ಬಳಿ ನಡೆದಿದೆ. ಕ್ಯಾಬ್ ಡ್ರೈವರ್ ಜೊತೆ ವಾಗ್ವಾದ ನಡೆಸಿ ಆತನ ಮೇಲೆ ಹಲ್ಲೆ ನಡೆಸಲು ಉತ್ತರ ಭಾರತೀಯ ಯುವತಿಯರು ಯತ್ನಿಸಿದ್ದು, ಪ್ರಶ್ನಿಸಿದ ಜನರ ಜೊತೆಗೂ ಯುವತಿಯರು ಅಸಭ್ಯವಾಗಿ ವರ್ತಿಸಿದ್ದಾರೆ. ಕೂಡಲೇ ಸಾರ್ವಜನಿಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳ್ಕೆ ಬಂದರೂ ಯುವತಿಯರ ಹೈಡ್ರಾಮಾ ಮಾತ್ರ ನಿಂತಿಲ್ಲ.

ಕೈಗೆ ಚೈನ್ ಸುತ್ತಿಕೊಂಡು ಹಲ್ಲೆ ಆರೋಪ

ಸ್ನೇಹಿತರ ಜೊತೆಗೆ ಖಾಸಗಿ ಹೋಟೆಲ್​ಗೆ ಬಂದಿದ್ದ ಜೆ.ಪಿ.ನಗರ ಹಾಗೂ ಕೋರಮಂಗಲದದ ಇಬ್ಬರು ಯುವತಿಯರು ವಾಪಸ್ ಹೋಗುವಾಗ ಹಿಂದಿನಿಂದ ಕ್ಯಾಬ್​ಗೆ ಸ್ಕೂಟಿ ಡಿಕ್ಕಿ ಹೊಡೆದಿದ್ದಾರೆ.  ಯುವತಿಯರನ್ನು ಕ್ಯಾಬ್ ಚಾಲಕ ಅಹ್ಮದ್ ಪ್ರಶ್ನೆ ಮಾಡಿದ್ದಕ್ಕೆ, ಆತನಿಗೆ ನಿಂದಿಸಿ ಎಸ್ಕೇಪ್ ಆಗಲು ಯತ್ನಿಸಿದ್ದ ಯುವತಿಯರನ್ನು ಸ್ಥಳೀಯರು ತಡೆದಿದ್ದಾರೆ. ಈ ವೇಳೆ ಕೈಗೆ ಚೈನ್ ಸುತ್ತಿಕೊಂಡು ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಅಸಭ್ಯ ಸನ್ನೆ ತೋರಿಸಿ ನಿಂದನೆ ನಡೆಸಿರುವ ಆರೋಪ ಕೇಳಿಬಂದಿದೆ. ಬಳಿಕ ಇಬ್ಬರು ಯುವತಿಯರನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು, ಲೀಸಾ ಮತ್ತು ಮ್ಯಾಥ್ಯೂ ಎಂಬ ಯುವತಿಯರ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಇದನ್ನೂ ಓದಿ: ಗ್ಯಾಸ್​​ ಗೀಸರ್​​ ಲೀಕ್​​ ಆಗಿ ಪತಿ ಸಾವು; ವಿಷಯ ತಿಳಿದು ಪತ್ನಿಯೂ ಆತ್ಮಹತ್ಯೆ!

‘ಕೀ ತೆಗೆಯಲು ಹೋದಾಗ ಹಲ್ಲೆ’

ಇನ್ನು ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾಬ್ ಚಾಲಕ ಅಹ್ಮದ್, ಕಸ್ಟಮರ್​​ ಪಿಕ್​​ಅಪ್​​ಗೆಂದು ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದು ಸ್ಕೂಟಿನ ಕ್ಯಾಬ್​​ಗೆ ಟಚ್​​ ಮಾಡಿದ್ದಾರೆ. ಈ ವೇಳೆ ಗಾಡಿಗೆ ಡ್ಯಾಮೇಜ್ ಆಗಿದ್ದನ್ನ ಕಟ್ಟಿಕೊಡಿ ಎಂದು ಅವರ ಬಳಿ ಕೇಳಿದ್ದೇನೆ. ಆ ಸಂದರ್ಭದಲ್ಲಿ ಅವರು ಗಾಡಿ ಸ್ಟಾರ್ಟ್ ಮಾಡಿಕೊಂಡು ಹೋಗೋಕೆ ನೋಡಿದ್ದು, ಕೂಡಲೇ ಸ್ಥಳೀಯರೆಲ್ಲ ಸೇರಿ ಅವರನ್ನ ಹಿಡಿದುಕೊಂಡಿದ್ದಾರೆ. ನಾನು ಕೀ ತೆಗೆಯಲು ಹೋದಾಗ ನನ್ನ ಮೇಲೆ ಹಲ್ಲೆ ಮಾಡಿದ್ದು, ಚೈನ್ ಸುತ್ತಿಕೊಂಡು ಮುಖ, ಕೈ, ಬೆನ್ನಿನ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳೀಯರೆಲ್ಲ ಸೇರಿ ನನಗೆ ಸಪೋರ್ಟ್​​ ಮಾಡಿದ್ದು, ಘಟನೆ ಬಗ್ಗೆ ದೂರು ನೀಡಿರೋದಾಗಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 8:02 am, Sun, 8 February 26

Source link

ಗೆದ್ದರೂ ಅಮೆರಿಕ ವಿರುದ್ಧ ಹೀನಾಯ ದಾಖಲೆ ಬರೆದ ಟೀಮ್ ಇಂಡಿಯಾ – Kannada News | Team India’s Lowest Power play Score against USA

ಅಷ್ಟೇ ಅಲ್ಲದೇ, ಅಸೋಸಿಯೇಟ್ ನೇಷನ್ ವಿರುದ್ಧ ಪವರ್ ಪ್ಲೇನಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಬ್ಯಾಟರ್ ಗಳು 4 ವಿಕೆಟ್‌ಗಳನ್ನು ಕಳೆದುಕೊಂಡಿದ್ದಾರೆ. ಅಂದರೆ ಎಲ್ಲಾ ಅರ್ಥದಲ್ಲೂ ಅಮೆರಿಕ ಬೌಲರ್‌ಗಳು ಪವರ್ ಪ್ಲೇನಲ್ಲಿ ಟೀಮ್ ಇಂಡಿಯಾವನ್ನು ಇಕ್ಕಟಿಗೆ ಸಿಲುಕಿಸಿತ್ತು ಎಂದರೆ ತಪ್ಪಾಗಲಾರದು.

Source link

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಚಳಿ, ಒಣ ಹವೆಯ ಹವಾಮಾನ – Kannada News | Bengaluru temperature: clear sky and cold weather in Bengaluru, Dry weather all over Karnataka

ಬೆಂಗಳೂರು, ಫೆಬ್ರುವರಿ 08: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ (Weather Forecast)  ವಾತಾವರಣವೇ ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಚಳಿಯ ವಾತಾವರಣ

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ನಗರದಲ್ಲಿ ಎಂದಿನಂತೆ ಚಳಿಯ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Ballari: ತೆಕ್ಕಲಕೋಟೆ ಬಳಿ ಉತ್ಖನನದ ವೇಳೆ ಸಾವಿರಾರು ವರ್ಷಗಳ ಹಿಂದಿನ ಅಸ್ಥಿಪಂಜರ ಪತ್ತೆ – Kannada News | 3,000–5,000 Year Old Human Skeleton Found in Tekkalakote, Ballari

ಬಳ್ಳಾರಿ, ಫೆಬ್ರವರಿ 08: ಜಿಲ್ಲೆಯ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ನಡೆದ ಉತ್ಖನನದ ವೇಳೆ ಸುಮಾರು 3-5 ಸಾವಿರ ವರ್ಷಗಳ ಹಿಂದಿನ ಮಾನವ ಅಸ್ಥಿಪಂಜರ ಪತ್ತೆಯಾಗಿದೆ. ಕಳೆದ ವಾರ ಉತ್ಖನನ ನಡೆಸುತ್ತಿದ್ದಾಗ ಮಾನವ ಮೂಳೆಗಳು ಕಂಡುಬಂದಿದ್ದು, ನಂತರ ಆಳವಾಗಿ ಅಗೆದಾಗ 5.5 ಅಡಿ ಉದ್ದದ ಸಂಪೂರ್ಣ ಅಸ್ಥಿಪಂಜರವು ಪತ್ತೆಯಾಗಿದೆ. ಕಲ್ಲುಗಳನ್ನು ಇರಿಸಿ ಶವ ಸಂಸ್ಕಾರ ಮಾಡಿದ ಸ್ಥಿತಿಯಲ್ಲಿ ಈ ಅಸ್ಥಿಪಂಜರ ದೊರೆತಿದೆ. ಇದು ನೂತನ ಶಿಲಾಯುಗ ಕಾಲಕ್ಕೆ ಸಂಬಂಧಪಟ್ಟಿರಬಹುದು ಎಂದು ತಜ್ಞರು ಹೇಳಿದ್ದು, ನಿಖರವಾದ ಮಾಹಿತಿ ಪಡೆಯಲು ಕಾರ್ಬನ್ ಡೇಟಿಂಗ್ ಅಧ್ಯಯನ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಯಾರನ್ನೂ ಯಾವುದನ್ನೂ ನಂಬಲಾರರು – Kannada News | Horoscope 08 February 2026; Dina Rashi Bhavishya Today, Checkout the details here

ಮೇಷ ರಾಶಿ:

ಅನಿರೀಕ್ಷಿತ ಸುದ್ದಿಯು ನಿಮ್ಮ‌ ಮನಸ್ಸಿಗೆ ಘಾಸಿಯನ್ನು ಮಾಡಬಹುದು. ‌ಇನ್ನೊಬ್ಬರನ್ನು ದೂರುತ್ತ ನಿಮ್ಮ ಕಾರ್ಯಗಳನ್ನು ಸಾಧಿಸಿಕೊಳ್ಳುವಿರಿ. ಬಡ್ತಿಯಲ್ಲಿ ಸುಧಾರಣೆ ಇರಲಿದೆ. ದಾಂಪತ್ಯ ಜೀವನವನ್ನು ಜೋಪಾನವಾಗಿ ನಡೆಸಬೇಕಾದೀತು.‌ ಮಕ್ಕಳ ಕೆಲವು ಘಟನೆಗಳು ನಿಮ್ಮನ್ನು ಭ್ರಾಂತಗೊಳಿಸಬಹುದು. ಇಂದು ದೇಹಕ್ಕೂ ಮನಸ್ಸಿಗೂ ಸ್ವಲ್ಪ ವಿಶ್ರಾಂತಿಯನ್ನು ನೀಡಿ. ಆಗಬೇಕಾಗಿರುವ ಕೆಲಸವನ್ನು ನೀವು ಪಟ್ಟಿ ಮಾಡಿ. ಸ್ತ್ರೀಯರ ಸಹವಾಸವು ಅಧಿಕವಾಗಿರುವುದು.

ವೃಷಭ ರಾಶಿ:

ಸಂಗಾತಿಯ ನಡುವಿನ ಮಾತುಕತೆಗಳು ವಿಕೋಪಕ್ಕೆ ಹೋಗಬಹುದು. ಪ್ರೀತಿಯು ಇರಬೇಕಾದ ಸ್ಥಳದಲ್ಲಿ ಸ್ವಪ್ರತಿಷ್ಠೆಯು ಕಾಣಿಸಿಕೊಳ್ಳುವುದು. ನೀವು ಅಂದುಕೊಂಡಿದ್ದು ಮಾತ್ರವೇ ಸತ್ಯವಾಗದು. ಬುದ್ಧಿವಂತಿಕೆಯಿಂದ ಎಲ್ಲವನ್ನೂ ಉತ್ತಮವಾಗಿ ಮಾಡುವಿರಿ. ಆತ್ಮೀಯರಿಂದ ನೀವು ಸಹಾಯವನ್ನು ಪಡೆಯುವಿರಿ. ಅಧಿಕ ಖರ್ಚುಗಳು ನಿಮಗೆ ಲೆಕ್ಕಕ್ಕೆ ಸಿಗದು.

ಮಿಥುನ ರಾಶಿ:

ನೀವು ಪ್ರಭಾವಿ ವ್ಯಕ್ತಿಗಳ ಸಂಪರ್ಕ ಮಾಡುವಿರಿ. ಮಿತವಾದ ಆಹಾರಸೇವನೆಯನ್ನು ಇಟ್ಟುಕೊಳ್ಳಿ. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರಬಹುದು. ಅಸ್ಪಷ್ಟ ವಿಚಾರಗಳನ್ನು ತಿಳಿದುಕೊಳ್ಳಲು ಪ್ರಯತ್ನಿಸಿ. ಯಾರ‌ ಮಾತನ್ನೋ ಕೇಳಿ ನೀವು ಸಮಸ್ಯೆಯನ್ನು ತಂದುಕೊಳ್ಳುವಿರಿ. ಹುಣ್ಣನ್ನು ಕೆರದು ಗಾಯ ಮಾಡಿಕೊಳ್ಳುವುದು. ನೀವು ಕೆಲಸಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದರೆ, ನಿಮ್ಮ ಪ್ರಯತ್ನ ಮುಂದುವರಿಯಲಿ.

ಕರ್ಕಾಟಕ ರಾಶಿ:

ಮೇಲಧಿಕಾರಿಗಳ ಬೆಂಬಲವು ನಿಮಗೆ ಸಿಕ್ಕರೂ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ನಿಮಗೆ ನಾನಾ ರೀತಿಯ ಸೌಲಭ್ಯಗಳು ಸಿಗಲಿದೆ. ಉದ್ಯೋಗದಲ್ಲಿ ನಿಮ್ಮ ಸ್ಥಾನವನ್ನು ಅನ್ಯರು ಆಕ್ರಮಿಸಿಕೊಳ್ಳಬಹುದು. ಚೋರಭೀತಿಯು ನಿಮಗೆ ಆತಂಕಪಡುವಿರಿ. ನಿಮ್ಮ ಮಾತನ್ನು ನಿಯಂತ್ರಣ ತಪ್ಪಿ ಆಡುವಿರಿ. ಖುಷಿಯ ಸಂದರ್ಭದಲ್ಲಿ ನಿಮ್ಮ ನೋವನ್ನು ಕುಟುಂಬವು ಹಂಚಿಕೊಳ್ಳಬಹುದು. ಆರೋಗ್ಯದ ವಿಚಾರದಲ್ಲಿ ನಿಮಗೆ ಸ್ವಲ್ಪ ಸಮಸ್ಯೆ ಆಗಬಹುದು.

ಸಿಂಹ ರಾಶಿ:

ಉದ್ವೇಗಕ್ಕೆ ಸಿಕ್ಕಿ ನಿಮ್ಮ ವರ್ತನೆಯಿಂದ ಎಲ್ಲರೂ ನಕ್ಕಾರು. ಉದ್ಯೋಗಸ್ಥರಿಗೆ ಪ್ರಗತಿಯ ಸಾಧ್ಯತೆಗಳಿವೆ. ಆರ್ಥಿಕವಾದ ಸಮಾನರಲ್ಲಿ ನಿಮ್ಮ ಸಖ್ಯವು ಇರಲಿದೆ. ಮಕ್ಕಳ ನಡುವಿನ ಕಲಹವನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವಿರಿ. ದಾಂಪತ್ಯದಲ್ಲಿ ಬಿರಕು ಬಂದು ಮನೆಯಿಂದ ದೂರ ಇರುವಿರಿ. ಯಾರನ್ನು ವಂಚಿಸಿದರೂ ಸಮಯವನ್ನು ವಂಚಿಸಲಾಗದು. ನಿಮ್ಮನ್ನು ಸ್ಥಾನದಿಂದ‌ ಕೆಳಗೆ ಹಾಕಲು ನೋಡಬಹುದು.

ಕನ್ಯಾ ರಾಶಿ:

ಉದ್ಯೋಗಾಕಾಂಕ್ಷಿಗಳು ಯಶಸ್ವಿಯಾಗಲು ಹೆಚ್ಚುವರಿ ಪ್ರಯತ್ನ ಬೇಕು. ಮಕ್ಕಳಿಗೆ ಮಾಡಿದ ಎಲ್ಲವ ಕರ್ತವ್ಯಗಳು ಫಲಿಸಿದ ಸಂತೋಷ ಸಿಗಲಿದೆ. ಅತಿಯಾದ ವಿಶ್ವಾಸದಿಂದ ವಂಚನೆಯಾಗಲಿದೆ. ವ್ಯಾಯಾಮದ ಮೂಲಕ ನಿಮ್ಮ ದುರ್ಬಲ ದೇಹವನ್ನು ಗಟ್ಟಿ ಮಾಡಿಕೊಳ್ಳುವಿರಿ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಸಾಧ್ಯ. ಆಸ್ತಿ ವ್ಯವಹಾರಗಳು ನಿಮಗೆ ಲಾಭವನ್ನು ನೀಡುವುದು.

ತುಲಾ ರಾಶಿ:

ನಿಮ್ಮ ಜೀವನ ಸಂಗಾತಿಯ ಬೆಂಬಲದಿಂದ ಖುಷಿಪಡುವಿರಿ. ಆರ್ಥಿಕ ದೃಷ್ಟಿಯಿಂದ ಈ ದಿನವು ಉತ್ತಮವಲ್ಲ. ನಿಮಗೆ ಸ್ನೇಹಿತರಿಂದ ಅನಾರೋಗ್ಯದ ನಿಮಿತ್ತ ಧನಸಹಾಯ ಸಿಗುವುದು. ಪ್ರಯಾಣಕ್ಕೆ ಇಂದು ಅನುಕೂಲವಲ್ಲ. ಕೆಲಸಗಳನ್ನು ಮಾಡಿಕೊಡಲು ನಿಮಗೆ ಹಣವನ್ನು ನೀಡುವರು. ಪ್ರೇಮ ವ್ಯವಹಾರಗಳಲ್ಲಿ ತೊಡಗಿರುವ ಜನರು ತಮ್ಮ ಸಂಗಾತಿಯ ಭಾವನೆಗಳನ್ನು ಬೆಂಬಲಿಸುವರು.

ವೃಶ್ಚಿಕ ರಾಶಿ:

ಬಯಕೆಯು ಪೂರ್ಣವಾಗುವ ಸಾಧ್ಯತೆ ಹೆಚ್ಚು. ಬಹಳ ದಿನಗಳ ಪ್ರಯಾಣದ ಅನಂತರ ಮನೆಯಲ್ಲಿಯೇ ಇದ್ದು ನೆಮ್ಮದಿ ಕಾಣುವಿರಿ. ಆರ್ಥಿಕ ಸಮಸ್ಯೆಗಳನ್ನು ನೀವು ಸಂಗಾತಿಯ ಹಂಚಿಕೊಳ್ಳಲು ಹಿಂಜರಿಯುವಿರಿ. ನಿಮ್ಮ ಜೀವನದ ದಿನಚರಿಯನ್ನು ವೈವಿಧ್ಯಮಯವಾಗಿ ಮಾಡಿಕೊಳ್ಳುವಿರಿ. ಆದಷ್ಟು ವಾದಗಳಿಂದ ದೂರವಿರಿ. ನಿಮ್ಮ ಕುಟುಂಬದ ಸದಸ್ಯರು ತೀರ್ಥಯಾತ್ರೆಗೆ ಹೋಗಬಹುದು. ಪ್ರಮುಖ ವ್ಯಕ್ತಿಗಳಿಗೆ ಕಿರಿಕಿರಿ ಮಾಡಬೇಡಿ.

ಧನು ರಾಶಿ:

ಇಂದು ಆಸ್ತಿ ಸಂಬಂಧಿತ ವಿಷಯಗಳಲ್ಲಿ ನೀವು ಜಾಣ್ಮೆಯಿಂದ ವ್ಯವಹರಿಸಿ, ಎದುರಿನವರನ್ನು ಇಕ್ಕಟ್ಟಿಗೆ ಸಿಲುಕಿಸುವಿರಿ. ಆಸ್ತಿಯಲ್ಲಿ ಹೂಡಿಕೆ ಮಾಡುವುದು ನಿಮಗೆ ನಿರೀಕ್ಷಿತ ಆದಾಯವನ್ನು ನೀಡುವುದಿಲ್ಲ. ತಮ್ಮ ಮೇಲಧಿಕಾರಿಗಳ ಜೊತೆ ವೈದ್ಯ ವ್ಯವಹರಿಸುವ ಜನರಿಗೆ ಉದ್ಯೋಗದಲ್ಲಿ ಬೆಳೆಯುವ ಅವಕಾಶಗಳು ಸಿಗಲಿವೆ. ಅಧಿಕಾರಿಗಳ ಜೊತೆ ವ್ಯವಹರಿಸುವಾಗ ನೀವು ಜಾಗರೂಕರಾಗಿರಬೇಕು.

ಮಕರ ರಾಶಿ:

ಇನ್ನೊಬ್ಬರ ಅವಶ್ಯಕತೆಗಳನ್ನು ನೀವು ಪೂರೈಸುವ ಹೊಣೆ ಹೊರುವಿರಿ. ಇಂದು ತಂದೆಯಿಂದ ತಪ್ಪಿನ ಕೆಲಸಕ್ಕೆ ಬೈಗುಳ ಸಿಕ್ಕೀತು. ಸೌಂದರ್ಯಕ್ಕೆ ಹೆಚ್ಚು ಮಹತ್ತ್ವ ಕೊಟ್ಟು ಅಲಂಕಾರಕ್ಕಾಗಿ ಸಮಯವಿಡುವಿರಿ. ಆಸ್ತಿಯ ಸಂರಕ್ಷಣೆಗೆ ದಾರಿಯನ್ನು ಹುಡುಕುವಿರಿ. ಇಂದು, ನಿಮ್ಮ ಒಡಹುಟ್ಟಿದವರು ಹಣಕಾಸಿನ ಸಹಾಯಕ್ಕಾಗಿ ನಿಮ್ಮನ್ನು ಸಂಪರ್ಕಿಸಬಹುದು. ನೋವುಗಳನ್ನೇ ನೆನಪಿಸಿಕೊಳ್ಳುವುದರಲ್ಲಿ ಅರ್ಥವಿರದು.

ಕುಂಭ ರಾಶಿ:

ಆರ್ಥಿಕ ಅಡೆತಡೆಗಳು ಇಂದು ಕುಟುಂಬದಲ್ಲಿ ವಿವಾದಕ್ಕೆ ಕಾರಣವಾಗುವುದು. ಎಲ್ಲರಿಂದ ದೂರಾಗುವ ಸ್ಥಿತಿಯನ್ನು ತಂದುಕೊಳ್ಳಬಹುದು. ಹಳೆಯ ವಾಹನದ ಮಾರಾಟದಿಂದ ನಿಮಗೆ ಆರ್ಥಿಕ ಲಾಭವು ಆಗುವುದು. ಧಾರ್ಮಿಕ ಆಚರಣೆಗಳಲ್ಲಿ ನಿರಾಸಕ್ತಿ, ಹಿರಿಯರಿಂದ ಉಪದೇಶ ಪ್ರಾಪ್ತಿ. ಅನಾರೋಗ್ಯ ಅತಿಯಾದರೆ ವೈದ್ಯರ ಸಲಹೆಯನ್ನು ಪಡೆಯಿರಿ.

ಮೀನ ರಾಶಿ:

ಆಕಸ್ಮಿಕವಾಗಿ ಹಣದ ವ್ಯಯವೂ ಆಗಲಿದ್ದು ಮನಸ್ಸಿಗೆ ಮತ್ತಷ್ಟು ನೋವು. ನಿಮ್ಮ ಮನಸ್ಸಿನ ಹಾಗೂ ದೈಹಿಕ ಚೈತನ್ಯವನ್ನು ಕಾಪಾಡಿಕೊಳ್ಳಲು ಕೆಲವು ಸಮಯವನ್ನು ಕ್ರೀಡೆಗೆ ಮೀಸಲಿಡುವಿರಿ. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಿತಿ ಬಂದರೆ ಕಷ್ಟವಾಗುವುದು. ಹಣಕಾಸಿನ ವಹಿವಾಟಿನ ಜೊತೆ ವ್ಯವಹರಿಸುವಾಗ ಜಾಗರೂಕತೆ ಇರಲಿ. ನಿಮ್ಮ ವಿವಾಹವು ಮುಂದೆ ಮುಂದೆ ಹೋಗುವುದಕ್ಕೆ ಮಾನಸಿಕವಾಗಿ ಕುಗ್ಗುವಿರಿ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ವಿಶಾಖಾ, ಯೋಗ : ಧೃತಿ, ಕರಣ : ಗರಜ, ಸೂರ್ಯೋದಯ – 06 – 51 am, ಸೂರ್ಯಾಸ್ತ – 06 – 25 pm, ಇಂದಿನ ಶುಭಾಶುಭ ಕಾಲ : ರಾಹು 16:59 – 18:26, ಯಮಗಂಡ ಕಾಲ 12:39 – 14:05, ಗುಳಿಕ ಕಾಲ 15:32 – 16:59

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 8ರ ದಿನಭವಿಷ್ಯ

ನಿಮ್ಮಿಂದ ಈ ದಿನ ಸಾಧ್ಯವಾದಲ್ಲಿ ಗೋ ಗ್ರಾಸವನ್ನು ನೀಡಿ. ಒಂದು ವೇಳೆ ಇದನ್ನು ನೇರವಾಗಿ ಮಾಡುವುದಕ್ಕೆ ಸಾಧ್ಯವಿಲ್ಲ ಎಂದಾದಲ್ಲಿ ಆನ್ ಲೈನ್ ಮೂಲಕವಾಗಿ ಗೋಗ್ರಾಸ ಸೇವೆಗೆ ದೇಣಿಗೆ ನೀಡಬಹುದು ಎಂದಾದಲ್ಲಿ ಹಾಗೂ ಅದು ಸಾಧ್ಯವೂ ಆದಲ್ಲಿ ನೀಡಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಪ್ರೀತಿ- ಪ್ರೇಮದಲ್ಲಿ ಅಂದುಕೊಳ್ಳದ ಕೆಲವು ಬೆಳವಣಿಗೆಗಳು ನಡೆಯಲಿವೆ. ಈ ಹಿಂದೆ ಆಗಿದ್ದ ಕೆಲವು ಘಟನೆಗಳಿಂದಾಗಿ ಯಾರದೋ ಮಾತು, ಟೀಕೆ, ಆಕ್ಷೇಪಗಳಿಗೆ ಇಡೀ ದಿನ ತಲೆ ಕೆಡಿಸಿಕೊಳ್ಳುವಂತಾಗುತ್ತದೆ. ಯಾರೇ ನಿಮ್ಮ ಕೆಲಸದ ಬಗ್ಗೆ ಆಕ್ಷೇಪ ಹೇಳಿದರೂ ಅದನ್ನು ತೋರಿಸುವಂತೆ ನಯವಾಗಿಯೇ ಕೇಳಿ. ಹಾಗೂ ಅವರು ನಿಜವಾಗಿಯೂ ತಪ್ಪುಗಳನ್ನು ತೋರಿಸಿದ್ದೇ ಆದಲ್ಲಿ ತಿದ್ದುಕೊಳ್ಳುವುದಕ್ಕೆ ಪ್ರಯತ್ನಿಸಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಯಾವುದೇ ಕಾರಣಕ್ಕೂ ಸಿಟ್ಟಿನಿಂದ ಕೂಗಾಟ- ಕಿರುಚಾಟ ಮಾಡಬೇಡಿ. ಹೀಗೆ ಮಾಡಿದಲ್ಲಿ ನಿಮ್ಮ ವರ್ಚಸ್ಸು ಶಾಶ್ವತವಾಗಿ ಪೆಟ್ಟು ತಿನ್ನುವ ಅಪಾಯಗಳಿವೆ. ವಿದೇಶಗಳಲ್ಲಿ ಉದ್ಯೋಗಲ್ಲೆ ಪ್ರಯತ್ನ ಮಾಡುತ್ತಿರುವವರಿಗೆ ಒತ್ತಡದ ಸನ್ನಿವೇಶಗಳು ಇರುತ್ತವೆ. ನೀವಾಗಿಯೇ ಆಡಿದ ಮಾತುಗಳು ಸಮಸ್ಯೆಗಳಾಗಿ ತಲೆ ಎತ್ತುವ ಸಾಧ್ಯತೆಗಳಿವೆ. ನಿಮ್ಮ ಪರವಾಗಿ ಯಾರಾದರೂ ಮಾತನಾಡುವಾಗ ನೀವು ಸುಮ್ಮನಿದ್ದು ಬಿಡಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ತಂದೆ- ತಾಯಿಯ ಆರೋಗ್ಯದಲ್ಲಿ ಏನಾದರೂ ಸಮಸ್ಯೆಗಳು ಏನಾದರೂ ಇದ್ದಲ್ಲಿ ಪರಿಣತ- ತಜ್ಞ ವೈದ್ಯರ ನೆರವು ನಿಮ್ಮ ಪಾಲಿಗೆ ದೊರೆಯಲಿದೆ. ಆತಂಕಗಳು ದೂರವಾಗುವುದಕ್ಕೆ ಹಿರಿಯರು ಸಹಕಾರ ನೀಡಲಿದ್ದಾರೆ. ನಿಮ್ಮ ಅದೃಷ್ಟವು ಈ ದಿನ ಅಚ್ಚರಿಯ ರೀತಿಯಲ್ಲಿ ಕೆಲಸ ಮಾಡುತ್ತದೆ. ಈ ಹಿಂದೆ ಯಾವಾಗಲೋ ಮಾಡಿದ ಕೆಲಸಕ್ಕೆ ಮೆಚ್ಚುಗೆ ಎಂಬಂತೆ ಅದೇ ಕೆಲಸಕ್ಕೆ ಸಂಬಂಧಿಸಿದವರು ಹುಡುಕಿಕೊಂಡು ಬಂದು, ನಿಮಗೆ ಕೆಲಸಗಳನ್ನು ಒಪ್ಪಿಸುವ ಸಾಧ್ಯತೆ ಇದೆ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 8ರ ದಿನಭವಿಷ್ಯ

ಭೂಮಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಅಡೆತಡೆ ಎದುರಾಗುತ್ತದೆ, ಅಂದುಕೊಂಡ ವೇಗದಲ್ಲಿ ವ್ಯವಹಾರ ಮುಂದುವರಿಯುತ್ತಾ ಇಲ್ಲ ಎಂದಾದಲ್ಲಿ ಕಾರ್ನೇಲಿಯನ್ ಸ್ಟೋನ್ ಉಂಗುರ ಬಳಸುವುದರಿಂದ ಅನುಕೂಲಗಳು ಆಗಲಿವೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಒಂದು ವೇಳೆ ಆಸ್ತಿ ಅಥವಾ ವಾಹನ ಮಾರಾಟಕ್ಕೆ ಇಟ್ಟಿದ್ದಲ್ಲಿ ಇವುಗಳಿಗೆ ಸಂಬಂಧಿಸಿದಂತೆ ಯಾವುದೇ ಮಾತುಕತೆಯನ್ನು ಇದೊಂದು ದಿನದ ಮಟ್ಟಿಗೆ ಮಾಡಬೇಡಿ. ನಿಮ್ಮ ಬಳಿ ಇರುವ ಹಣಕ್ಕೆ ತಕ್ಕಂತೆ ಪ್ರಾಜೆಕ್ಟ್ ವೊಂದು ಹುಡುಕಿಕೊಂಡು ಬರುವಂಥ ಸಾಧ್ಯತೆಗಳಿವೆ. ಉದಾಹರಣೆಗೆ, ಇಷ್ಟೇ ಮೊತ್ತಕ್ಕೆ ಅಪಾರ್ಟ್ ಮೆಂಟ್ ಅಥವಾ ಸೈಟು ಅಥವಾ ವಾಹನ ಹೀಗೆ ನಿಮಗೆ ದೊರೆಯುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಬಹು ಪ್ರಮಾಣದಲ್ಲಿ ನಂಬಿಕೆ ನಿಮಗೆ ಇದ್ದರೂ ಕೆಲವು ಬಾಹ್ಯ ಕಾರಣಗಳಿಂದಾಗಿ ಈ ದಿನ ನಿಮಗೆ ಯಾವುದೇ ವಿಚಾರದಲ್ಲಿ ಅಥವಾ ಕೆಲಸದಲ್ಲಿ ಪೂರ್ಣ ವಿಶ್ವಾಸ ಮೂಡದಿದ್ದರೆ ಅದನ್ನು ಮಾಡದಿರುವುದು ಕ್ಷೇಮ. ಏಕೆಂದರೆ ನಿಮ್ಮದಲ್ಲದ ತಪ್ಪಿಗೆ ದಂಡ ಕಟ್ಟುವಂಥ ಸನ್ನಿವೇಶ ಎದುರಾಗಲಿದೆ. ಎಂಥ ಅನಿವಾರ್ಯ ಸ್ಥಿತಿಯೇ ಇದ್ದರೂ ಇತರರ ವಾಹನಗಳು ಅಥವಾ ವಸ್ತುಗಳನ್ನು ಬಳಸುವುದಕ್ಕೆ ಹೋಗಬೇಡಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಯಾರು ರಾಜಕೀಯ ಕ್ಷೇತ್ರದಲ್ಲಿ ಇದ್ದಾರೋ ಅಂಥವರಿಗೆ ನಿರೀಕ್ಷೆ ಕೂಡ ಮಾಡಿರದಂಥ ಅವಕಾಶವೊಂದು ದೊರೆಯವ ಸಾಧ್ಯತೆಗಳಿವೆ. ಇದನ್ನು ನೀವು ನಂಬುವುದಕ್ಕೆ ಸಹ ಸಾಧ್ಯವಾಗುವುದಿಲ್ಲ. ಆದರೆ ಅದನ್ನು ಸದುಪಯೋಗ ಮಾಡಿಕೊಳ್ಳುವ ಬಗ್ಗೆ ಆಲೋಚಿಸಿದರೆ ಒಳ್ಳೆಯದು. ಕೋರ್ಟ್- ಕಚೇರಿ ವ್ಯಾಜ್ಯಗಳಲ್ಲಿ ಇದ್ದಲ್ಲಿ ಅದನ್ನು ಬಗೆಹರಿಸಿಕೊಳ್ಳುವುದಕ್ಕೆ ಕೆಲವರು ಸಹಾಯ ಮಾಡುವುದಾಗಿ ಹೇಳಲಿದ್ದಾರೆ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 8ರ ದಿನಭವಿಷ್ಯ

ಈ ದಿನ ನಿಮ್ಮ ಮನೆ ಹತ್ತಿರದ ಕೃಷ್ಣನ ದೇವಸ್ಥಾನಕ್ಕೆ ತೆರಳಿ, ಅಲ್ಲಿಗೆ ತುಳಸಿ ಹಾರದ ಸಮರ್ಪಣೆ ಮಾಡುವುದರಿಂದ ಇಷ್ಟು ಸಮಯ ನಿಮಗೆ ಕಾಡುತ್ತಿದ್ದ ದ್ವಂದ್ವ ದೂರವಾಗಲಿದೆ. ಇನ್ನು ಮುಖ್ಯವಾದ ವ್ಯಕ್ತಿಗಳ ಭೇಟಿಗೆ ತೆರಳುತ್ತಾ ಇದ್ದೀರಿ ಅಂತಾದಲ್ಲಿ ಮನೆಯಿಂದ ಹೊರಡುವ ಮೊದಲು ನಾಲ್ಕು ಹಸಿ ಕಡ್ಲೇಕಾಳು ಬಾಯಿಗೆ ಹಾಕಿಕೊಂಡು ಅಗೆದು, ಮುಂದುವರಿಯಿರಿ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಮನ ಮುಟ್ಟುವಂತೆ ಎಲ್ಲ ವಿಚಾರಗಳನ್ನು ಇತರರಿಗೆ ದಾಟಿಸುವುದಕ್ಕೆ ಸಫಲರಾಗಲಿದ್ದೀರಿ. ಮುಂದಾಲೋಚನೆಯಿಂದ ಲೆಕ್ಕ ಹಾಕಿಕೊಂಡು ಇಟ್ಟ ಹೆಜ್ಜೆಗಳು ಫಲ ನೀಡಲಿವೆ. ಯಾರು ಬದ್ಧತೆಯಿಂದ ನಿಮ್ಮ ಸಲಹೆ- ಸೂಚನೆಯನ್ನು ಅನುಸರಿಸಿದವರಿಗೆ ದೊಡ್ಡ ಲಾಭವಾಗುವ ಸಾಧ್ಯತೆಗಳಿವೆ. ಇತರರು ತಮ್ಮಿಂದ ಪೂರ್ತಿ ಮಾಡಲು ಸಾಧ್ಯವಿಲ್ಲ ಎಂದು ಅರ್ಧಕ್ಕೇ ನಿಲ್ಲಿಸಿದ ಕೆಲಸವೊಂದನ್ನು ಪೂರ್ತಿ ಮಾಡಬೇಕಾದ ಜವಾಬ್ದಾರಿ ನಿಮಗೆ ಬರಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಒಲ್ಲದ ಮನಸ್ಸಿನಿಂದಲೇ ಒಪ್ಪಿಕೊಂಡ ಕೆಲಸಗಳಲ್ಲಿ ದೊಡ್ಡ ಯಶಸ್ಸು ಸಿಗುವ ಎಲ್ಲ ಸಾಧ್ಯತೆಗಳಿವೆ. ಯಾರು ಉದ್ಯೋಗಕ್ಕೆ ಸಂಬಂಧಿಸಿದಂಥ ಪರೀಕ್ಷೆಗಳನ್ನು ಬರೆದಿರುತ್ತಾರೋ ಅಂಥವರಿಗೆ ಶುಭ ಸುದ್ದಿ ಕೇಳುವಂಥ ಯೋಗ ಇದೆ. ಮದುವೆಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಸಂಬಂಧಿಕರ ಮುಖಾಂತರ ರೆಫರೆನ್ಸ್ ಗಳು ಬರಬಹುದು. ಇದು ನಿಮ್ಮ ಮನಸ್ಸಿಗೆ ಒಪ್ಪುವ ಸಾಧ‌್ಯತೆಗಳು ಸಹ ಹೆಚ್ಚಿವೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಸಣ್ಣ- ಪುಟ್ಟದಾದರೂ ಮನೆ ಮಟ್ಟಿಗೆ ಕಾರ್ಯಕ್ರಮ ಆಯೋಜಿಸುವಂಥ ಸಾಧ್ಯತೆ ಇದೆ. ತಂದೆ ಅಥವಾ ತಂದೆ ಸಮಾನರಾದವರ ಆರೋಗ್ಯ ಸ್ಥಿತಿ ಸ್ವಲ್ಪ ಆತಂಕಕ್ಕೆ ಕಾರಣ ಆಗಬಹುದು. ನಿಮ್ಮೆಲ್ಲ ಪ್ರಯತ್ನವನ್ನು ಮಾಡಿದ ನಂತರದಲ್ಲಿಯೂ ಒಬ್ಬರೇ ವ್ಯಕ್ತಿ, ಒಂದೇ ವಿಷಯ, ಒಂದು ವಸ್ತು ನಿಮ್ಮನ್ನು ಈ ದಿನ ಬಹುವಾಗಿ ಕಾಡಬಹುದು. ಅದರಲ್ಲೂ ಕೊನೆ ಕ್ಷಣದಲ್ಲಿ ನಿರ್ಧಾರಗಳಲ್ಲಿ ಬಹಳ ಏರುಪೇರು ಮಾಡಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Source link