All posts by nagaraj11081993

ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್ ಕೊಟ್ಟ ತೇಜಸ್ವಿ ಸೂರ್ಯ: ಸೋಮವಾರದಿಂದ ದರ ಏರಿಕೆ ಆಗುವುದಿಲ್ಲ – Kannada News | Namma Metro Fare Hike temporary Halted: Good News for Bengaluru Commuters as Tejasvi Surya Intervenes

ಬೆಂಗಳೂರು, ಫೆಬ್ರವರಿ 07: ಸೋಮವಾರದಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಸದ್ಯ ಕೇಂದ್ರದಿಂದ ತಾತ್ಕಾಲಿಕ ಬ್ರೇಕ್ ಹಾಕಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​​​ಡೇಟ್​ ಆಗಲಿದೆ.

Source link

ಚಾಂಪಿಯನ್ ಯುವ ಭಾರತಕ್ಕೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ – Kannada News | India U19 Lifts Record 6th World Cup: BCCI Announces ₹7.5 Cr Cash Prize for Champions

ಇದಕ್ಕೂ ಮುನ್ನ ಬಿಸಿಸಿಐ ಅಂಡರ್ 19 ವಿಶ್ವಕಪ್ ಗೆದ್ದ ತಂಡಗಳಿಗೆ ನಗದು ಬಹುಮಾನ ಘೋಷಿಸಿತ್ತು. 2024 ರ ಅಂಡರ್ 19 ವಿಶ್ವಕಪ್‌ ಗೆದ್ದ ಭಾರತ ತಂಡದ ಪ್ರತಿಯೊಬ್ಬ ಆಟಗಾರನಿಗೆ ಬಿಸಿಸಿಐ ತಲಾ 30 ಲಕ್ಷ ರೂ. ಬಹುಮಾನ ನೀಡಿತ್ತು. ಅದೇ ರೀತಿ, 2025 ರ ಮಹಿಳಾ ಅಂಡರ್-19 ಟಿ20 ವಿಶ್ವಕಪ್‌ ಗೆದ್ದಿದ್ದ ವನಿತಾ ಪಡೆಗೆ ಬಿಸಿಸಿಐ 5 ಕೋಟಿ ರೂ. ಬಹುಮಾನ ನೀಡಿತ್ತು. ಅದರಂತೆ ಈ ಬಾರಿಯೂ ಸಹ ಬಿಸಿಸಿಐ ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ತರಬೇತಿ ತಂಡಕ್ಕೆ ನಗದು ಬಹುಮಾನ ಘೋಷಣೆ ಮಾಡಿದೆ.

Source link

ನಾಲಗೆ ಹರಿಬಿಟ್ಟ ನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದ ಪ್ರೇಮ್ – Kannada News | Director Prem gave complaint against Kanakapura Srinivas

ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್ (Kanakpura Srinivas) ಕೆಲ ದಿನಗಳ ಹಿಂದಷ್ಟೆ ಸಿನಿಮಾ ಸಂಬಂಧಿ ಕಾರ್ಯಕ್ರಮದಲ್ಲಿ ವೀರಾವೇಷದಿಂದ ಮಾತನಾಡಿದ್ದರು. ಚಿತ್ರರಂಗದಲ್ಲಿ ಇರುವವರೆಲ್ಲರೂ ತಮಗೆ ಮೋಸ ಮಾಡಿದ್ದಾರೆ, ತಮ್ಮನ್ನು ಹೊರತಾಗಿ ಚಿತ್ರರಂಗದಲ್ಲಿರುವವರೆಲ್ಲ ದುರುಳರು ಎಂಬ ರೀತಿ ಮಾತನಾಡಿದ್ದರು. ಪ್ರೇಮ್, ಅರ್ಜುನ್ ಜನ್ಯಾ ಇನ್ನೂ ಕೆಲವರ ಹೆಸರು ಹೇಳಿ ಕೆಲವು ಆರೋಪಗಳನ್ನು ನಿರ್ಮಾಪಕ ಕನಕಪುರ ಶ್ರೀನಿವಾಸ್ ಮಾಡಿದ್ದರು. ಇದೀಗ ನಿರ್ದೇಶಕ ಪ್ರೇಮ್ ಅವರು ತಮ್ಮ ವಿರುದ್ಧ ಆರೋಪ ಮಾಡಿರುವ ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದ್ದಾರೆ.

ಖುದ್ದಾಗಿ ಫಿಲಂ ಚೇಂಬರ್​​ಗೆ ಆಗಮಿಸಿದ ನಿರ್ದೇಶಕ ಪ್ರೇಮ್, ನೂತನ ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಅವರನ್ನು ಭೇಟಿ ಆಗಿ ಕನಕಪುರ ಶ್ರೀನಿವಾಸ್ ವಿರುದ್ಧ ಲಿಖಿತ ದೂರು ನೀಡಿದ್ದಾರೆ. ಪ್ರೇಮ್ ನೀಡಿರುವ ದೂರಿನ ವಿವರ ಇಲ್ಲಿದೆ; ‘ನಿರ್ದೇಶಕ, ನಟ, ನಿರ್ಮಾಪಕನಾದ ನಾನು ಪ್ರೇಮ್, ಆರ್. 25 ವರ್ಷಗಳಿಂದ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸುತ್ತಿದ್ದು ಇಲ್ಲಿಯವರೆಗೂ ಹಲವಾರು ನಿರ್ಮಾಪಕರ ಜೊತೆ ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಹಲವಾರು ಸದಾಭಿರುಚಿಯ ಚಿತ್ರಗಳನ್ನು ನೀಡುತ್ತಾ ಬಂದಿದ್ದೇನೆ, ಇಲ್ಲಿಯವರೆಗೂ ನನ್ನ ವೃತ್ತಿ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ಕಾರ್ಯನಿರ್ವಹಿಸುತ್ತ ಬಂದಿರುತ್ತೇನೆ. ನಿರ್ಮಾಪಕ ಆರ್. ಎಸ್ ಶ್ರೀನಿವಾಸ್ ರವರು ನನ್ನ ಬಳಿ ಬಂದು ನಿರ್ದೇಶನ ಮಾಡಿ ಕೊಡಲು ಕೇಳಿಕೊಂಡು ನನ್ನ ಬಳಿ ಬಂದು 2004 ರಲ್ಲಿ ಕೆ. ಪಿ. ಶ್ರೀಕಾಂತ್ ಎನ್ನುವವರ ಮೂಲಕ ಆರ್. ಎಸ್ ಶ್ರೀನಿವಾಸ್ ರವರು ಬಂದು ಮುಂಗಡವಾಗಿ 9 ಲಕ್ಷಗಳನ್ನು ನೀಡಿದ್ದರು ಅದರಲ್ಲಿ ಚೆಕ್ ಮೂಲಕ 5 ಲಕ್ಷ ಹಾಗೂ ನಗದು ರೂಪದಲ್ಲಿ 4 ಲಕ್ಷಗಳನ್ನು ನೀಡಿದ್ದರು. ಇದಾದನಂತರ ಅವರಿಗಾಗಿ ಸಿನಿಮಾ ಮಾಡಲು ಒಂದು ಆಫೀಸ್ ಮಾಡಿ ಒಂದು ತಂಡವನ್ನು ಕಟ್ಟಿಕೊಂಡು ಚಿತ್ರಕಥೆ ಬರೆಯಲು ಪ್ರಾರಂಭಿಸಿದೆ, ಕಥೆ ಹಾಗೂ ಚಿತ್ರ ಕಥೆ ತಯಾರಾದ ನಂತರ ಹಲವು ಬಾರಿ ಸಂಪರ್ಕಿಸಿದಾಗ ಅವರಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಸಿಗದೇ ಇದ್ದಾಗ ಒಂದು ವರ್ಷಗಳ ಕಾಲ ನನ್ನ ಹಾಗೂ ನನ್ನ ತಂಡದ ಸಮಯವನ್ನು ವ್ಯರ್ಥ ಮಾಡಿದ್ದಲ್ಲದೆ ಯಾವುದೇ ರೀತಿಯ ಹಣ ಕಾಸನ್ನು ನನ್ನ ಆಫೀಸ್ ನ ವೆಚ್ಚಕ್ಕಾಗಲಿ, ನನ್ನ ಸಹ ನಿರ್ದೇಶಕರಿಗೆ ಹಾಗೂ ತಂಡಕ್ಕಾಗಲಿ ನೀಡಲಿಲ್ಲ. ಒಂದು ವರ್ಷಗಳ ಕಾಲ ಆಫೀಸ್ ನ ಹಾಗೂ ತಂಡದ ಖರ್ಚು-ವೆಚ್ಚಗಳನ್ನು ನಾನೇ ಬರಿಸಿರುತ್ತೇನೆ, ಇದರಿಂದ ನನಗೆ ವೈಯಕ್ತಿಕವಾಗಿ 15 ರಿಂದ 20 ಲಕ್ಷ ಖರ್ಚು ಮಾಡಿದ್ದೇನೆ ಹಾಗೂ ನನಗೆ ಈ ಸಮಯದಲ್ಲಿ ಹಲವಾರು ನಿರ್ಮಾಪಕರು ನನಗೆ ನಿರ್ದೇಶಿಸಲು ಹಾಗೂ ನನಗೆ ಅವಕಾಶಗಳು ಬಂದಿದ್ದವು ನಾನು ಇವರ ಚಿತ್ರ ನಿರ್ದೇಶನ ಮಾಡಲು ಬಂದಂತಹ ಈ ಎಲ್ಲಾ ಅವಕಾಶಗಳನ್ನು ಕಳೆದುಕೊಂಡಿದ್ದಲ್ಲದೆ ಕೋಟಿಗಟ್ಟಲೆ ನಷ್ಟವನ್ನು ಅನುಭವಿಸಿದ್ದೇನೆ’ ಎಂದಿದ್ದಾರೆ.

ಇದನ್ನೂ ಓದಿ:ಕನ್ನಡ ಸ್ಟಾರ್ ನಟರ ಮೇಲೆ ಉರಿದು ಬಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್

ಸಿನಿಮಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ನಿರ್ಮಾಪಕ ಶ್ರೀನಿವಾಸ್, ಪ್ರೇಮ್ ಹಣ ಪಡೆದು ಸಿನಿಮಾ ಮಾಡಿಕೊಡದೆ ವಂಚಿಸಿದ್ದಾರೆ ಎಂಬರ್ಥದ ಮಾತುಗಳನ್ನಾಡಿದ್ದರು. ಪ್ರೇಮ್ ಜೊತೆಗೆ ಸಿನಿಮಾ ಮಾಡಿದವರೆಲ್ಲ ಹಣ ಕಳೆದುಕೊಂಡಿದ್ದಾರೆ ಆದರೆ ಪ್ರೇಮ್ ಮಾತ್ರ ಚೆನ್ನಾಗಿದ್ದಾರೆ ಎಂದಿದ್ದರು. ಇದೇ ಕಾರಣಕ್ಕೆ ಇದೀಗ ಪ್ರೇಮ್ ಅವರು ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 4:12 pm, Sat, 7 February 26

Source link

ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆ ಶಿವಕುಮಾರ್​​

ಬೆಂಗಳೂರು, ಫೆಬ್ರವರಿ 07: ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಮೆಟ್ರೋ ದರ ಏರಿಕೆ ಮಾಡಲು ಹೇಗೆ ಸಾಧ್ಯ ಎಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ವಿಚಾರವಾಗಿ ಮಾತನಾಡಿ ಡಿಸಿಎಂ ಡಿಕೆ ಶಿವಕುಮಾರ್​, ತೇಜಸ್ವಿ ಸೂರ್ಯನದ್ದು ಬರೀ ಟ್ವೀಟ್, ಸ್ಟೇಟ್​ಮೆಂಟ್ ಅಷ್ಟೇ.  ಪಾಪ. ಅವನಿಗೆ ಇನ್ನೂ ಅನುಭವವಿಲ್ಲ. ರಾಜ್ಯಕ್ಕೆ ಹಣ ತಂದಿದ್ದು ಏನಾದರೂ ಇದ್ದರೆ ಅದರ ಬಗ್ಗೆ ಮಾತಾಡಲಿ, ಬರೀ ಖಾಲಿ ಟ್ರಂಕ್ ಮಾತನಾಡುವುದು ಬೇಡವೆಂದು ವಾಗ್ದಾಳಿ ಮಾಡಿದ್ದಾರೆ.

ಈರಣ್ಣ ಬಸವ ಟಿವಿ9

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Ashwini Vaishnaw Press Meet Live: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ – Kannada News | Karnataka Railways and Budget 2026 27: Ashwini Vaishnaw’s Major Announcements

ಬೆಂಗಳೂರು, ಫೆ. 7: ಕೇಂದ್ರ ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. 2026-27ರ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಕ್ಕಿರುವ ಕೊಡುಗೆಗಳು ಮತ್ತು ರಾಜ್ಯದ ರೈಲ್ವೆ ಅಭಿವೃದ್ಧಿಯ ಬಗ್ಗೆ ಅವರು ಹಂಚಿಕೊಂಡಿದ್ದಾರೆ. ಈ ಬಗ್ಗೆ ಲೈವ್​​​ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ 2-ಹೈಟೆಕ್ ನ್ಯಾನೋಮೀಟರ್ ಚಿಪ್ ಅನಾವರಣಗೊಳಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ – Kannada News | 2 nanometre Qualcomm chip unveiled in Bengaluru Union Minister Ashwini Vaishnaw sets Semicon 2.0 roadmap

ಬೆಂಗಳೂರು, ಫೆಬ್ರವರಿ 7: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಇಂದು (ಶನಿವಾರ) ಬೆಂಗಳೂರಿನಲ್ಲಿ ಕ್ವಾಲ್ಕಾಮ್ ಟೆಕ್ನಾಲಜೀಸ್ ತಯಾರಿಸಿದ ಹೈಟೆಕ್ 2-ನ್ಯಾನೊಮೀಟರ್ ಚಿಪ್ ಅನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಮ್ಮ ದೇಶವು ಸೆಮಿಕಂಡಕ್ಟರ್ ಉತ್ಪಾದನಾ ವಿನ್ಯಾಸದಲ್ಲಿ ಪ್ರಮುಖ ಪ್ರಗತಿಯನ್ನು ಸಾಧಿಸುತ್ತಿದೆ. ಭಾರತದಲ್ಲಿ ಇದು ಹೊಸ ಉದ್ಯಮವಾಗಿ ರೂಪ ತಳೆಯುತ್ತಿದೆ” ಎಂದು ಹೇಳಿದರು. ಚಿಪ್ ವೇಫರ್ ಅನ್ನು ಕೈಯಲ್ಲಿ ಹಿಡಿದು ತೋರಿಸಿದ ಸಚಿವ ಅಶ್ವಿನಿ ವೈಷ್ಣವ್ ಅದರ ಸಾಮರ್ಥ್ಯಗಳು ಮತ್ತು ಅದರಲ್ಲಿ ಒಳಗೊಂಡಿರುವ ಉತ್ಪಾದನೆಯನ್ನು ವಿವರಿಸಿದರು.

ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್‌ನಲ್ಲಿರುವ ಕ್ವಾಲ್ಕಾಮ್‌ನ ಎಂಜಿನಿಯರಿಂಗ್ ಕೇಂದ್ರಗಳ ಪ್ರಮುಖ ಕೊಡುಗೆಗಳೊಂದಿಗೆ ಅಭಿವೃದ್ಧಿಪಡಿಸಲಾದ ಪ್ರಗತಿಯು, ಅತ್ಯಾಧುನಿಕ ಚಿಪ್ ವಿನ್ಯಾಸಕ್ಕಾಗಿ ಜಾಗತಿಕ ಕೇಂದ್ರವಾಗಿ ಗುರುತಿಸಿಕೊಳ್ಳುತ್ತಿರುವ ಭಾರತದ ಸ್ಥಾನಮಾನವನ್ನು ಬಲಪಡಿಸುತ್ತದೆ. ಇದು ಮುಂದುವರಿದ ಸೆಮಿಕಂಡಕ್ಟರ್ ನಾವೀನ್ಯತೆಯಲ್ಲಿ ಭಾರತದ ಪಾತ್ರವನ್ನು ಎತ್ತಿ ತೋರಿಸುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: ಭಾರತದ ತಂತ್ರಜ್ಞಾನ 2025: AI, ಸೆಮಿಕಂಡಕ್ಟರ್, ಸ್ವಾವಲಂಬನೆ & ಜಾಗತಿಕ ನಾಯಕತ್ವ

ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್, “ಭವಿಷ್ಯಕ್ಕಾಗಿ ಮುಂದುವರಿದ ಸೆಮಿಕಂಡಕ್ಟರ್ ತಂತ್ರಜ್ಞಾನಗಳನ್ನು ಹೇಗೆ ವಿನ್ಯಾಸಗೊಳಿಸಲಾಗುತ್ತಿದೆ ಎಂಬ ವಿಚಾರದಲ್ಲಿ ಭಾರತವು ಹೆಚ್ಚು ಕೇಂದ್ರಬಿಂದುವಾಗಿದೆ. ಈ ಅಭಿವೃದ್ಧಿಯು ದೇಶದ ವಿನ್ಯಾಸ ಪರಿಸರ ವ್ಯವಸ್ಥೆಯ ಪ್ರಬುದ್ಧತೆಗೆ ಸಾಕ್ಷಿಯಾಗಿದೆ. ಜಾಗತಿಕವಾಗಿ ಸ್ಪರ್ಧಾತ್ಮಕ ಸೆಮಿಕಂಡಕ್ಟರ್ ಉದ್ಯಮವನ್ನು ನಿರ್ಮಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿರುವ ಭಾರತಕ್ಕೆ ಇದು ಬಹಳ ಮುಖ್ಯವಾದ ಹೆಜ್ಜೆಯಾಗಿದೆ” ಎಂದು ತಿಳಿಸಿದ್ದಾರೆ.

ಹೊಸದಾಗಿ ವಿನ್ಯಾಸಗೊಳಿಸಲಾದ ವೇಫರ್ ಸುಮಾರು 20ರಿಂದ 30 ಬಿಲಿಯನ್ ಟ್ರಾನ್ಸಿಸ್ಟರ್‌ಗಳನ್ನು ಹೊಂದಿದ್ದು, ಪ್ರತಿಯೊಂದೂ ಡೈ – ವೇಫರ್‌ನಲ್ಲಿ ಒಂದು ಸಣ್ಣ ಚೌಕ ಇರುತ್ತದೆ. ಇದು ಸುಮಾರು 20 ಬಿಲಿಯನ್ ಟ್ರಾನ್ಸಿಸ್ಟರ್‌ಗಳನ್ನು ಹೊಂದಿದೆ ಎಂದು ಸಚಿವರು ವಿವರಣೆ ನೀಡಿದರು. ಈ ಚಿಪ್ ಸಿಪಿಯು (CPU) ಮತ್ತು ಜಿಪಿಯು (GPU) ಎರಡನ್ನೂ ಸಂಯೋಜಿಸುತ್ತದೆ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: Budget 2026: ಸೆಮಿಕಂಡಕ್ಟರ್ ಮಿಷನ್‌ಗೆ 40,000 ಕೋಟಿ ರೂ.; ಬಜೆಟ್ ಮಂಡನೆ ಬಳಿಕ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ

ಸೆಮಿಕಾನ್ ಮಿಷನ್ ಅಡಿಯಲ್ಲಿ ಅಭಿವೃದ್ಧಿಪಡಿಸಿದ ಭಾರತೀಯ ಸೆಮಿಕಂಡಕ್ಟರ್ ಪ್ರಯೋಗವನ್ನು ಅಶ್ವಿನಿ ವೈಷ್ಣವ್ ಶ್ಲಾಘಿಸಿದರು. ಸೆಮಿಕಾನ್ ಇಂಡಿಯಾ ಮಿಷನ್ 1.0 ಅಡಿಯಲ್ಲಿ ಸರ್ಕಾರವು ಒಂದು ದಶಕದಲ್ಲಿ 85,000 ಸೆಮಿಕಂಡಕ್ಟರ್ ವೃತ್ತಿಪರರಿಗೆ ತರಬೇತಿ ನೀಡುವ ಗುರಿಯನ್ನು ಹೊಂದಿದೆ. ಇಲ್ಲಿಯವರೆಗೆ, ಸುಮಾರು 67,000 ಸೆಮಿಕಂಡಕ್ಟರ್ ಎಂಜಿನಿಯರ್‌ಗಳಿಗೆ ತರಬೇತಿ ನೀಡಲಾಗಿದೆ ಎಂದು ಅವರು ಹೇಳಿದರು.

ಸೆಮಿಕಂಡಕ್ಟರ್ ವಿನ್ಯಾಸ ಶಿಕ್ಷಣವು ಈಗ ದೇಶಾದ್ಯಂತ 315 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಲಭ್ಯವಿದೆ. ಈ ವಿದ್ಯಾರ್ಥಿಗಳು ಚಿಪ್‌ಗಳನ್ನು ವಿನ್ಯಾಸಗೊಳಿಸುತ್ತಿದ್ದಾರೆ, ಮೊಹಾಲಿಯ ಸೆಮಿಕಂಡಕ್ಟರ್ ಪ್ರಯೋಗಾಲಯದಲ್ಲಿ ಅವುಗಳನ್ನು ಟೇಪ್ ಮಾಡುತ್ತಿದ್ದಾರೆ. ವಿಶ್ವದ ಅನೇಕ ವಿಶ್ವವಿದ್ಯಾಲಯಗಳು, ಪ್ರಪಂಚದ ಅನೇಕ ದೇಶಗಳು ಕೂಡ ಈ ರೀತಿಯ ಮಾದರಿಯನ್ನು ಹೊಂದಿಲ್ಲ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ: ಸಂಸದ ತೇಜಸ್ವಿ ಸೂರ್ಯ – Kannada News | Bengaluru Metro Fare Hike: Tejaswi Surya Accuses State Government of Financial Mismanagement

ಬೆಂಗಳೂರು, ಫೆ.7: ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರವು ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಚರ್ಚೆಯ ವಿಷಯವಾಗಿದ್ದು, ಸಂಸದ ತೇಜಸ್ವಿ ಸೂರ್ಯ ಅವರು ಈ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಸರ್ಕಾರದ ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಫೇರ್ ಫಿಕ್ಸೇಷನ್ ಸಮಿತಿಯ ಮುಂದೆ ಮೆಟ್ರೋ ದರಗಳನ್ನು ವಾರ್ಷಿಕವಾಗಿ ಪರಿಷ್ಕರಿಸುವ ತಕ್ಷಣದ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟಿದ್ದರು ಎಂದು ಅವರು ದಾಖಲೆಗಳನ್ನು ಉಲ್ಲೇಖಿಸಿ ಹೇಳಿದ್ದಾರೆ. ಇದು ರಾಜ್ಯ ಸರ್ಕಾರದ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಉದ್ದೇಶ ಹೊಂದಿತ್ತು ಎಂದು ಅವರು ತಿಳಿಸಿದ್ದಾರೆ. ದೆಹಲಿ, ಕೋಲ್ಕತ್ತಾ, ಕೊಚ್ಚಿನ್, ಹೈದರಾಬಾದ್‌ನಂತಹ ನಗರಗಳಲ್ಲಿ ವಾರ್ಷಿಕ ದರ ಪರಿಷ್ಕರಣೆ ನಿಯಮ ಇಲ್ಲದಿದ್ದರೂ, ಕರ್ನಾಟಕದ ಅಧಿಕಾರಿಗಳು ಪ್ರತಿ ವರ್ಷ ದರ ಏರಿಕೆಗೆ ಶಿಫಾರಸು ಮಾಡಿದ್ದರು. ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆಯು ಬಿಎಂಆರ್‌ಸಿಎಲ್‌ಗೆ ಈ ಕುರಿತು ಹಲವು ಬಾರಿ ಪತ್ರ ಬರೆದು ಫೇರ್ ಫಿಕ್ಸೇಷನ್ ಸಮಿತಿಯನ್ನು ಶೀಘ್ರವಾಗಿ ರಚಿಸುವಂತೆ ಒತ್ತಾಯಿಸಿದೆ ಎಂದು ಅವರು ಮಾಹಿತಿ ನೀಡಿದರು. ಇನ್ನು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವವರೆಗೂ ಬಿಎಂಆರ್‌ಸಿಎಲ್‌ಗೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಷಾಡೋ ಕ್ಯಾಶ್ ಸಪೋರ್ಟ್ ನೀಡುತ್ತಿತ್ತು ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಯಾವುದೇ ನಗದು ನಷ್ಟವಾದರೆ ಮರುಪಾವತಿಗೆ, ಸಾಲದ ಮೇಲಿನ ಬಡ್ಡಿಯನ್ನು ಪಾವತಿಸಲು ಬಡ್ಡಿ ರಹಿತ ಸಬ್-ಡೆಟ್ ಸಾಲ ಪಾವತಿಗಳನ್ನು ರಾಜ್ಯ ಸರ್ಕಾರವು ಭಾರತ ಸರ್ಕಾರ ಮತ್ತು ದೇಶೀಯ ಹಣಕಾಸು ಸಂಸ್ಥೆಗಳಿಗೆ ಮಾಡುತ್ತಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಷಾಡೋ ಕ್ಯಾಶ್ ಸಪೋರ್ಟ್ ಅನ್ನು ನಿಲ್ಲಿಸಿದೆ ಎಂದು ಅವರು ಆರೋಪಿಸಿದರು. ಇದರ ಪರಿಣಾಮವಾಗಿ, ಕಳೆದ ಮೂರು ವರ್ಷಗಳಿಂದ ಬಿಎಂಆರ್‌ಸಿಎಲ್‌ಗೆ ರಾಜ್ಯ ಸರ್ಕಾರ ನೀಡಬೇಕಾದ 400 ಕೋಟಿ ರೂಪಾಯಿಗಳು ಈಗಲೂ ಬಾಕಿ ಉಳಿದಿವೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಮೂಲದ ಉದ್ಯಮಿ ಕೇರಳದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ: ಪತ್ನಿ, ಮಕ್ಕಳು ಪಾರು – Kannada News | Kodagu Businessman Suicide: Sajeer Self Immolates in Wayanad Over 20 Lakh Debt

ಸಜೀರ್ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿImage Credit source: onmanorama

ಕೊಡಗು, ಫೆಬ್ರವರಿ 07: ಕೇರಳದ ವಯನಾಡಿನಲ್ಲಿ ಕರ್ನಾಟಕ ಮೂಲದ ಉದ್ಯಮಿ (businessman)  ಕುಟುಂಬ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ (suicide) ಯತ್ನಿಸಿರುವಂತಹ ಘಟನೆ ನಡೆದಿದೆ. ದುರಂತದಲ್ಲಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ನಿವಾಸಿ, ಉದ್ಯಮಿ ಸಜೀರ್ ಮೃತಪಟ್ಟಿದ್ದಾರೆ. ಸಜೀರ್ ಪತ್ನಿಗೆ ಗಂಭೀರ ಗಾಯವಾಗಿದ್ದು, ಕಲ್ಲಿಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ. ಮಾನಂದವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.

ನಡೆದಿದ್ದೇನು?

ಕೊಡಗು ಜಿಲ್ಲೆಯ ಉದ್ಯಮಿ ಸಜೀರ್​​​ ಕುಟ್ಟ ಗ್ರಾಮದಲ್ಲಿ ಹಲವು ವ್ಯಾಪಾರ ಮಳಿಗೆ ಹೊಂದಿದ್ದರು. ಬಾಪು ಎಂಬಾತ ಸಜೀರ್​​ಗೆ 20 ಲಕ್ಷ ರೂ. ನೀಡಬೇಕಿತ್ತು. ಸಾಲ ಪಡೆದಿದ್ದ ಬಾಪುನ ಮನೆ ಎದುರೇ ಸಜೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಆತ್ಮಹತ್ಯೆಗೂ ಮುನ್ನ ಕಾರಿನಲ್ಲೇ ಕುಳಿತು ಉದ್ಯಮಿ ಸಜೀರ್​ ವಿಡಿಯೋ ರೆಕಾರ್ಡ್ ಮಾಡಿದ್ದು, ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಬಾಪು ಕಾರಣ ಎಂದು ಹೇಳಿದ್ದಾರೆ.

ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಭಯೋತ್ಪಾದಕ ಸಾವು

ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಭಯೋತ್ಪಾದಕ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಡರಾತ್ರಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸಾಧಿಕ್​ ಪಾಷಾ(47) ಮೃತ ಶಂಕಿತ ಭಯೋತ್ಪಾದಕ. ಕಳೆದ 6 ತಿಂಗಳಿಂದ ಲೋ ಬಿಪಿ ಮತ್ತು ಹೈಶುಗರ್​ ಸೇರಿದಂತೆ ಕೆಲ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ.

ಇದನ್ನೂ ಓದಿ: ಫ್ರೀಫೈರ್​​ಗೆ ಅಡಿಕ್ಟ್ ಆಗಿದ್ದ ಅಕ್ಕನ ಮಗನನ್ನೇ ಕೊಂದಿದ್ದ ಮಾವ ಸೇರಿ ಕುಟುಂಬದ ನಾಲ್ವರು ಬಿಹಾರದಲ್ಲಿ ಆತ್ಮಹತ್ಯೆಗೆ ಶರಣು!

ಸುದ್ದಗುಂಟೆಪಾಳ್ಯ ಸ್ಫೋಟಕವಸ್ತು ಸಂಗ್ರಹ ಕೇಸ್​ನಲ್ಲಿ ಜೈಲು ಸೇರಿದ್ದ ಸಾಧಿಕ್​ ಪಾಷಾ 2020ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ. ಪ್ರಕರಣ ಸಂಬಂಧ ಸಾಧಿಕ್ ಸೇರಿ ಒಟ್ಟು 6 ಶಂಕಿತರನ್ನು ಎನ್​​ಐಎ ಬಂಧಿಸಿತ್ತು. ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಕುದುರೆ ಗಾಡಿ, ಬೈಕ್ ಡಿಕ್ಕಿ: ಸವಾರ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗೋಠೆ ಗ್ರಾಮದಲ್ಲಿ ಕುದುರೆ ಗಾಡಿ ಮತ್ತು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಂಡು ಪವಾರ್(42) ಮೃತ ದುರ್ದೈವಿ. ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Propose Day 2026 Date: ಪ್ರಪೋಸ್‌ ಡೇ ಯಾವಾಗ? ಪ್ರೇಮಿಗಳ ಈ ಮಹತ್ವದ ದಿನದ ಹಿನ್ನೆಲೆಯ ಬಗ್ಗೆ ತಿಳಿಯಿರಿ – Kannada News | Propose Day 2026: Why is Propose Day celebrated? Know the history and significance of this special day

ವ್ಯಾಲೆಂಟೈನ್ಸ್‌ ವೀಕ್‌ ಈಗಾಗಲೇ ಆರಂಭವಾಗಿದ್ದು, ಪ್ರೇಮಿಗಳ ಪಾಲಿಗೆ ಪ್ರೇಮಿಗಳ ವಾರದ ಪ್ರತಿಯೊಂದು ದಿನವೂ ತುಂಬಾ ವಿಶೇಷವಾಗಿದೆ. ಅದರಲ್ಲೂ ಪ್ರೇಮಿಗಳಿಗೆ ಪ್ರಪೋಸ್ ಡೇ (Propose Day) ಅಪಾರ ಮಹತ್ವದ್ದಾಗಿದೆ. ಇದನ್ನು ಪ್ರೀತಿಯ ಭಾವನೆಗಳನ್ನು ವ್ಯಕ್ತಪಡಿಸಲು, ಮದುವೆಯನ್ನು ಪ್ರಸ್ತಾಪಿಸಲು ಶ್ರೇಷ್ಠ ದಿನವೆಂದು ಪರಿಗಣಿಸಲಾಗಿದೆ. ಪ್ರತಿ ವರ್ಷ ಪ್ರೇಮಿಗಳ ವಾರದ ಎರಡನೇ ದಿನದಂದು ಪ್ರಪೋಸ್ ಡೇ ಯನ್ನು ಆಚರಿಸಲಾಗುತ್ತದೆ.  ಈ ದಿನದಂದು, ಜನರು ತಮ್ಮ ಪ್ರೀತಿ ಅಥವಾ ಸಂಗಾತಿಗೆ ತಮ್ಮ ಆಳವಾದ ಭಾವನೆಗಳನ್ನು ಪದಗಳಲ್ಲಿ ವ್ಯಕ್ತಪಡಿಸುತ್ತಾರೆ. ಒಟ್ಟಾರೆಯಾಗಿ ಈ ವಿಶೇಷ ದಿನವು ಹೊಸ ಪ್ರೇಮಕಥೆಗಳ ಆಶಾದಾಯಕ ಆರಂಭಕ್ಕೆ ಹೆಸರುವಾಸಿಯಾಗಿದ್ದು, ಈ ಪ್ರಪೋಸ್‌ ಡೇ ಯ ಇತಿಹಾಸ ಮತ್ತು ಮಹತ್ವವೇನು ಎಂಬುದನ್ನು ತಿಳಿಯೋಣ ಬನ್ನಿ.

ಪ್ರಪೋಸ್ ಡೇ ಯನ್ನು ಏಕೆ ಆಚರಿಸಲಾಗುತ್ತದೆ?

ಜನರು ತಮ್ಮ ಆಳವಾದ ಭಾವನೆಗಳನ್ನು ವ್ಯಕ್ತಪಡಿಸಲು ಮತ್ತು ತಮ್ಮ ನೆಚ್ಚಿನ ವ್ಯಕ್ತಿಗೆ  ಅವರನ್ನು ಪ್ರೀತಿಸುತ್ತೇನೆ ಅಥವಾ ಅವರೊಂದಿಗೆ ಜೀವಮಾನವಿಡೀ ಸಂಬಂಧವನ್ನು ಮುಂದುವರಿಸಲು ಬಯಸುತ್ತೇನೆ ಎಂದು ಹೇಳಲು ಪ್ರಪೋಸ್ ಡೇಯನ್ನು ಆಚರಿಸಲಾಗುತ್ತದೆ. ಈ ದಿನವನ್ನು ಪ್ರೀತಿ, ವಿಶ್ವಾಸ ಮತ್ತು ಹೊಸ ಸಂಬಂಧಗಳ ಆರಂಭದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಅನೇಕ ಜನರು ಈ ದಿನದಂದು ತಮ್ಮ ಪ್ರೇಮವನ್ನು ಪ್ರಸ್ತಾಪ ಮಾಡುತ್ತಾರೆ, ಪ್ರಪೋಸ್ ಮಾಡುತ್ತಾರೆ, ಆದರೆ ಅನೇಕ ದಂಪತಿಗಳು ತಮ್ಮ ಸಂಬಂಧವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸುತ್ತಾರೆ. ಈ ರೀತಿಯಾಗಿ, ಪ್ರೀತಿಯನ್ನು ವ್ಯಕ್ತಪಡಿಸಲು, ಪ್ರಾಮಾಣಿಕತೆ ಮತ್ತು ಸಂಬಂಧಗಳಲ್ಲಿ ಭಾವನಾತ್ಮಕ ಸಂಪರ್ಕವನ್ನು ಹೆಚ್ಚಿಸಲು ಪ್ರಪೋಸ್ ದಿನವನ್ನು ಆಚರಿಸಲಾಗುತ್ತದೆ.

ಪ್ರಪೋಸ್‌ ಡೇ ಹೇಗೆ ಪ್ರಾರಂಭವಾಯಿತು?

ವರ್ಷಗಳಿಂದ, ಪ್ರೇಮಿಗಳ ವಾರದ ಎರಡನೇ ದಿನದಂದು ಪ್ರಪೋಸ್ ಡೇ ಆಚರಿಸಲಾಗುತ್ತಿದೆ. ಇದು ಶತಮಾನಗಳ ಹಿಂದೆ ಹುಟ್ಟಿಕೊಂಡಿದ್ದರೂ, ಈ ಪಾಶ್ಚಿಮಾತ್ಯ ಸಂಪ್ರದಾಯವು ಭಾರತದಲ್ಲಿಯೂ ಸಾಕಷ್ಟು ಜನಪ್ರಿಯವಾಗಿದೆ. ಇತಿಹಾಸಕಾರರು ಪ್ರೇಮಿಗಳ ದಿನದ ಆಚರಣೆಯು ಮಧ್ಯಕಾಲೀನ ಯುರೋಪಿನಿಂದಲೂ ಆರಂಭವಾಗಿದೆ ಎಂದು ನಂಬುತ್ತಾರೆ. ಆ ಅವಧಿಯಲ್ಲಿ ರಾಜಕುಮಾರರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಈ ಸಮಯವನ್ನು ಹೆಚ್ಚಾಗಿ ಆರಿಸಿಕೊಳ್ಳುತ್ತಿದ್ದರು. ಕ್ರಮೇಣ, 14 ಮತ್ತು 15 ನೇ ಶತಮಾನಗಳ ಹೊತ್ತಿಗೆ, ಫೆಬ್ರವರಿ ತಿಂಗಳು ಪ್ರೀತಿ ಮತ್ತು ಸಂಬಂಧಗಳ ಆರಂಭಕ್ಕೆ ಮೀಸಲಾದ ಸಮಯವೆಂದು ಪರಿಗಣಿಸಲ್ಪಟ್ಟಿತು.

ಇನ್ನೊಂದು ಇತಿಹಾಸದ ಪ್ರಕಾರ ಆಸ್ಟ್ರಿಯಾದ ಆರ್ಚ್‌ಡ್ಯೂಕ್ ಮ್ಯಾಕ್ಸಿಮಿಲಿಯನ್ 1477 ರಲ್ಲಿ ಬರ್ಗಂಡಿಯ ಮೇರಿಗೆ ಪ್ರಪೋಸ್ ಮಾಡಿದರು ಎಂದು ಹೇಳಲಾಗುತ್ತದೆ. ಈ ವಿಶೇಷ ಕ್ಷಣವನ್ನು ಗುರುತಿಸಲು ಅವರು ಅವಳಿಗೆ ವಜ್ರದ ಉಂಗುರವನ್ನು ಉಡುಗೊರೆಯಾಗಿ ನೀಡಿದರು. ಹೀಗೆ ಮ್ಯಾಕ್ಸಿಮಿಲಿಯನ್ ಮೇರಿಗೆ ವಜ್ರದ ಉಂಗುರ ತೊಡಿಸಿ ವಿವಾಹ ಪ್ರಸ್ತಾಪ  ಮಾಡಿದ ಕಾರಣ ಪ್ರತಿ ವರ್ಷ ಫೆಬ್ರವರಿ ೮ ರಂದು ಪ್ರಪೋಸ್ ಡೇ ಆಚರಿಸಲಾಗುತ್ತದೆ. ಇದಲ್ಲದೆ, 1816೧೬ ರಲ್ಲಿ, ರಾಜಕುಮಾರಿ ಷಾರ್ಲೆಟ್ ತನ್ನ ಭಾವಿ ಪತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದು ಕೂಡ ಇದೇ ದಿನದಂದು.

ಇದನ್ನೂ ಓದಿ: ಪ್ರೇಮಿಗಳ ವಾರದ ಮೊದಲೇ ದಿನವೇ ರೋಸ್ ಡೇ; ಈ ದಿನದ ಇತಿಹಾಸ, ಮಹತ್ವವೇನು?

ಪ್ರಪೋಸ್ ದಿನವನ್ನು ಹೇಗೆ ಆಚರಿಸಲಾಗುತ್ತದೆ?

ಜನರು ತಮ್ಮದೇ ಆದ ರೀತಿಯಲ್ಲಿ ಪ್ರಪೋಸ್ ದಿನವನ್ನು ಆಚರಿಸುತ್ತಾರೆ. ಕೆಲವರು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ, ತಮ್ಮ  ಸಂಗಾತಿಯೊಂದಿಗೆ ತಮ್ಮ ಹೃದಯಪೂರ್ವಕ ಭಾವನೆಗಳನ್ನು ಹಂಚಿಕೊಳ್ಳುತ್ತಾರೆ, ಸಂಬಂಧವನ್ನು ಪ್ರಾರಂಭಿಸಲು ಅಥವಾ ಮುಂದುವರಿಸಲು ಪ್ರಸ್ತಾಪಿಸುತ್ತಾರೆ. ಇನ್ನು ಕೆಲವರು ಗುಲಾಬಿ, ಚಾಕೊಲೇಟ್, ಕಾರ್ಡ್ ಅಥವಾ ಸಣ್ಣ ಉಡುಗೊರೆಯನ್ನು ನೀಡುವ ಮೂಲಕ ಪ್ರೇಮ ಪ್ರಸ್ತಾಪವನ್ನು ಮಾಡುತ್ತಾರೆ. ಇನ್ನು ಕೆಲವರು ಸುಂದರವಾದ ಸಂದೇಶ, ಕವಿತೆ ಅಥವಾ ಕೈಬರಹದ ಪ್ರೇಮ ಪತ್ರದ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ಈ ದಿನದಂದು ಪ್ರೇಮಿಗಳು ಪರಸ್ಪರ ಬದ್ಧರಾಗಿ ತಮ್ಮ ಬಂಧವನ್ನು ಮತ್ತಷ್ಟು ಬಲಪಡಿಸುತ್ತಾರೆ.

ಪ್ರಪೋಸ್ ಡೇಯ ಮಹತ್ವವೇನು?

  • ಪ್ರಪೋಸ್‌ ಡೇ ಮನಸ್ಸಿನಲ್ಲಿರುವ ಭಾವನೆ, ಪ್ರೀತಿಯನ್ನು ವ್ಯಕ್ತಪಡಡಿಸಲಿರುವ ಒಂದು ವೇದಿಕೆಯಾಗಿದೆ.
  • ಪ್ರಪೋಸ್‌ ಡೇ ಪ್ರೇಮಪಕ್ಷಿಗಳಿಗೆ ಭಯವನ್ನೆಲ್ಲಾ ಪಕ್ಕಕ್ಕಿಟ್ಟು ಪ್ರೀತಿಯನ್ನು ವ್ಯಕ್ತಪಡಿಸಲು ಒಂದು ಧೈರ್ಯವನ್ನು ನೀಡುತ್ತದೆ.
  • ಈ ದಿನ ಸಂಗಾತಿಗಳಿಬ್ಬರ ಸಂಬಂಧಕ್ಕೆ ಹೊಸ ತಾಜಾತನ ಮತ್ತು ಬದ್ಧತೆಯನ್ನು ತರುತ್ತದೆ.
  • ಈ ದಿನವನ್ನು ಪ್ರೀತಿ, ವಿಶ್ವಾಸ ಮತ್ತು ಹೊಸ ಸಂಬಂಧಗಳ ಆರಂಭದ ಸಂಕೇತವೆಂದು ಪರಿಗಣಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link