All posts by nagaraj11081993

ಜಪನೀಸ್​ ಸ್ಟುಡಿಯೋಗಳ ಜೊತೆ ದೊಡ್ಡ ಡೀಲ್​​​ಗೆ ಮುಂದಾದ ರಾಜಮೌಳಿ – Kannada News | Rajamouli’s RRR Anime: Japanese Deal While Filming Varanasi with Mahesh Babu

ನಿರ್ದೇಶಕ ರಾಜಮೌಳಿ (Rajamouli) ಅವರು ‘ವಾರಣಾಸಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ರಾಜಮೌಳಿ ಅವರು ಸದ್ದಿಲ್ಲದೆ, ಸೈಡಲ್ಲಿ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ. ಈ ವಿಷಯ ಅನೇಕರಿಗೆ ಅಚ್ಚರಿ ಮೂಡಿಸಿದೆ. ಈ ವಿಷಯವನ್ನು ಸ್ವತಃ ಅವರೇ ಖಚಿತಪಡಿಸಿದ್ದಾರೆ.

‘ವಾರಣಾಸಿ’ ಸಿನಿಮಾ 2027ರ ಏಪ್ರಿಲ್ 7ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಈಗಲೇ ಪ್ರಚಾರ ಆರಂಭಿಸಿದ್ದಾರೆ. ಇತ್ತೀಚೆಗೆ ಅವರು ಪ್ರಿಯಾಂಕಾ ಚೋಪ್ರಾ, ಮಹೇಶ್ ಬಾಬು, ಪೃಥ್ವಿರಾಜ್ ಸುಕುಮಾರನ್ ಜೊತೆ ಹಾಲಿವುಡ್ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದ ವೇಳೆ ರಾಜಮೌಳಿ ಅವರು ಈ ವಿಷಯ ಹೇಳಿದ್ದಾರೆ.

‘ಆರ್​ಆರ್​​ಆರ್​’ಸಿನಿಮಾನ ಜಪಾನ್ ಅಲ್ಲೂ ನೋಡಿದ್ದಾರೆ. ಅಲ್ಲಿಯೂ ಈ ಚಿತ್ರ ಇಷ್ಟಪಟ್ಟಿದ್ದಾರೆ. ಈ ಸಿನಿಮಾನ ಅನಿಮೇ ವರ್ಷನ್ ಅಲ್ಲಿ ಮಾಡಲು ಜಪಾನ್ ಸ್ಟುಡಿಯೋಗಳ ಜೊತೆ ಮಾತುಕತೆ ನಡೆದಿದೆ. ಆದರೆ, ಯಾವುದೂ ಫೈನಲ್ ಆಗಿಲ್ಲವಂತೆ. ಒಂದೊಮ್ಮೆ ಈ ಡೀಲ್ ಫೈನಲ್ ಆದರೆ, ಇದರ ಕೆಲಸಗಳಲ್ಲಿ ಅವರು ತೊಡಗಿಕೊಳ್ಳಬಹುದು.

‘ವಾರಣಾಸಿ’ ಸಿನಿಮಾ ಶೂಟಿಂಗ್ ಹಂತದಲ್ಲಿ ಇದೆ. ಈ ಚಿತ್ರ ರಿಲೀಸ್​​ಗೆ ಇನ್ನೂ ಒಂದು ವರ್ಷ ಇದೆ. ಈ ಸಿನಿಮಾ ಟೈಟಲ್ ರಿವೀಲ್​​ಗೆ ದೊಡ್ಡ ಮಟ್ಟದಲ್ಲಿ ಈವೆಂಟ್ ಮಾಡಲಾಗಿತ್ತು. ಕೆಲ ತಾಂತ್ರಿಕ ಸಮಸ್ಯೆ ಬಿಟ್ಟರೆ ಈ ಕಾರ್ಯಕ್ರಮ ಯಶಸ್ಸು ಕಂಡಿತ್ತು.

ಇದನ್ನೂ ಓದಿ: ಧರಣಿ ಮಾಡುತ್ತಾರಂತೆ ರಾಜಮೌಳಿ: ಎಲ್ಲಿ? ಯಾವ ಕಾರಣಕ್ಕೆ?

ರಾಜಮೌಳಿ ‘ಆರ್​​ಆರ್​​ಆರ್​’ ಚಿತ್ರದ ಅನಿಮೇ ಚಿತ್ರದ ಭಾಗ ಆಗುತ್ತಾರಾ ಎಂಬ ಕುತೂಹಲ ಮೂಡಿದೆ. ಕೆಲವು ಬದಲಾವಣೆಗಳನ್ನು ಅವರು ಮಾಡಿಕೊಳ್ಳಲು ರಾಜಮೌಳಿ ಸಹಾಯ ಮಾಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭಾರತಕ್ಕೆ ಒಂದು ರೂಲ್ಸ್, ಪಾಕಿಸ್ತಾನಕ್ಕೆ ಇನ್ನೊಂದು ರೂಲ್ಸ್​! – Kannada News | Babar Azam Relay Catch in T20 World Cup 2026

ಟಿ20 ವಿಶ್ವಕಪ್​ನ ಮೊದಲ ಪಂದ್ಯವೇ ವಿವಾದಕ್ಕೀಡಾಗಿದೆ. ವಿವಾದಕ್ಕೀಡಾಲು ಮುಖ್ಯ ಕಾರಣ ಐಸಿಸಿಯ ನಿಯಮ.ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಇತ್ತೀಚೆಗೆ ರಿಲೇ ಕ್ಯಾಚ್ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿತ್ತು. ಈ ನಿಯಮದ ಬದಲಾವಣೆ ಪಾಕಿಸ್ತಾನ್ ತಂಡಕ್ಕೆ ಅನ್ವಯಿಸುವುದಿಲ್ಲವೇ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಏಕೆಂದರೆ ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ನೆದರ್​ಲೆಂಡ್ಸ್ ವಿರುದ್ಧ ಬಾಬರ್ ಆಝಂ ಹಾಗೂ ಶಾಹೀನ್ ಶಾ ಅಫ್ರಿದಿ ಜೊತೆಗೂಡಿ ರಿಲೇ ಕ್ಯಾಚ್ ಹಿಡಿದಿದ್ದರು. ಬೌಂಡರಿ ಲೈನ್​ನಲ್ಲಿ ಅತ್ಯುತ್ತಮ ಕ್ಯಾಚ್ ಹಿಡಿದ ಬಾಬರ್ ನಿಯಂತ್ರಣ ತಪ್ಪಿ ಬೌಂಡರಿ ಗೆರೆ ದಾಟಿದ್ದರು. ಆದರೆ ಕ್ಷಣಾರ್ಧದಲ್ಲೇ ಬಾಬರ್ ಚೆಂಡನ್ನು ಶಾಹೀನ್ ಅಫ್ರಿದಿಯತ್ತ ಎಸೆದಿದ್ದರು.

ಬಾಬರ್ ಎಸೆದ ಚೆಂಡನ್ನು ಹಿಡಿಯುವಲ್ಲಿ ಶಾಹೀನ್ ಅಫ್ರಿದಿ ಯಶಸ್ವಿಯಾಗಿದ್ದರು. ಆದರೆ ಶಾಹೀನ್ ಚೆಂಡು ಹಿಡಿದಾಗ ಬಾಬರ್ ಆಝಂ ಮೈದಾನದ ಹೊರಗಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ.

ಐಸಿಸಿ ರಿಲೇ ಕ್ಯಾಚ್ ನಿಯಮ 19.5.2 ಪ್ರಕಾರ, ರಿಲೇ ಕ್ಯಾಚ್​ ಹಿಡಿದಾಗ ಬೌಂಡರಿ ಲೈನ್ ದಾಟಿದ ಫೀಲ್ಡರ್ ತನ್ನ ಸಹ ಆಟಗಾರನಿಗೆ ಚೆಂಡು ನೀಡಿದ ಬೆನ್ನಲ್ಲೇ ಮೈದಾನದ ಒಳಕ್ಕೆ ಬರಬೇಕು. ಅಂದರೆ ಬೌಂಡರಿ ಲೈನ್ ದಾಟುತ್ತಿದ್ದಂತೆ ಚೆಂಡನ್ನು ಮತ್ತೋರ್ವ ಫೀಲ್ಡರ್​ಗೆ ನೀಡಿದ್ದರೆ ಆತನು ಕ್ಯಾಚ್ ಹಿಡಿಯುವಷ್ಟರಲ್ಲಿ ಬೌಂಡರಿ ಲೈನ್ ದಾಟಿದ ಆಟಗಾರ ಮತ್ತೆ ಮೈದಾನದ ಒಳಗಿರಬೇಕು. ಅಂದರೆ ಮಾತ್ರ ಅದನ್ನು ಕ್ಯಾಚ್ ಔಟ್ ಎಂದು ಪರಿಗಣಿಸಲಾಗುತ್ತದೆ.

ಈ ನಿಯಮವು ಜೂನ್ ತಿಂಗಳಿಂದಲೇ ಜಾರಿಯಲ್ಲಿದೆ. ಹೀಗಾಗಿಯೇ ರೈಸಿಂಗ್ ಸ್ಟಾರ್ ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ್ ಎ ವಿರುದ್ಧ ಭಾರತ ಎ ತಂಡದ ಆಟಗಾರ ನೆಹಾಲ್ ವಧೇರಾ ಹಿಡಿದ ಕ್ಯಾಚ್ ಅನ್ನು ಅಮಾನ್ಯ ಎಂದು ಪರಿಗಣಿಸಲಾಗಿತ್ತು.

ಈ ಪಂದ್ಯದಲ್ಲಿ ಸುಯಶ್ ಶರ್ಮಾ ಎಸೆದ 10ನೇ ಓವರ್​ನ ಮೊದಲ ಎಸೆತವನ್ನು ಮಾಝ್ ಸದಾಖತ್ ಲಾಂಗ್ ಆಫ್​​ನತ್ತ ಬಾರಿಸಿದ್ದರು. ಆದರೆ ಬೌಂಡರಿ ಲೈನ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ನೆಹಾಲ್ ವಧೇರಾ ಅದ್ಭುತವಾಗಿ ಚೆಂಡನ್ನು ಹಿಡಿದಿದ್ದರು.

ಕ್ಯಾಚ್ ಹಿಡಿದ ಬಳಿಕ ನಿಯಂತ್ರಣ ಕಳೆದುಕೊಂಡ ವಧೇರಾ ಬೌಂಡರಿ ಲೈನ್ ದಾಟಿದರು. ಅಷ್ಟರಲ್ಲಾಗಲೇ ಸಹ ಆಟಗಾರ ನಮನ್​ ಧೀರ್​ಗೆ ವಧೇರಾ ಚೆಂಡನ್ನು ನೀಡಿದ್ದರು. ಇತ್ತ ಬೌಂಡರಿ ಲೈನ್​ ಕ್ಯಾಚ್​ನೊಂದಿಗೆ ಮಾಝ್ ಸದಾಖತ್ ಪೆವಿಲಿಯನ್​ ಕಡೆ ಹೆಜ್ಜೆ ಹಾಕಿದ್ದರು.

ಆದರೆ ಕ್ಯಾಚ್ ಪರಿಶೀಲಿಸಿದ ಮೂರನೇ ಅಂಪೈರ್ ನಾಟೌಟ್ ಎಂದಿದ್ದಾರೆ. ಇತ್ತ ನೆಹಾಲ್ ವಧೇರಾ ತನ್ನ ಕಾಲು ಬೌಂಡರಿ ಲೈನ್​ಗೆ ತಾಗಿಲ್ಲ ಎಂಬ ವಾದವನ್ನು ಫೀಲ್ಡ್ ಅಂಪೈರ್ ಮುಂದಿಟ್ಟಿದ್ದರು. ಬೌಂಡರಿ ಲೈನ್ ಚೆಕ್ಕಿಂಗ್ ವೇಳೆಯೂ ವಧೇರಾ ಅವರ ಕಾಲು ಲೈನ್​ಗೆ ತಾಗಿಲ್ಲ ಎಂಬುದು ಸ್ಪಷ್ಟವಾಗಿತ್ತು.

ಇದಾಗ್ಯೂ ಮೂರನೇ ಅಂಪೈರ್ ನಾಟೌಟ್ ಎಂದು ತೀರ್ಪು ನೀಡಿದರು. ಹೀಗಾಗಿ ಟೀಮ್ ಇಂಡಿಯಾ ಆಟಗಾರರು ಫೀಲ್ಡ್ ಅಂಪೈರ್ ಜೊತೆ ವಾಗ್ವಾದಕ್ಕಿಳಿದರು. ಈ ವೇಳೆ ಅಂಪೈರ್ ಭಾರತೀಯ ಆಟಗಾರರಿಗೆ ಹೊಸ ನಿಯಮದ ಬಗ್ಗೆ ಪಾಠ ಮಾಡಿದ್ದರು.

ಅಂದರೆ ರಿಲೇ ಕ್ಯಾಚ್​ ಹಿಡಿದಾಗ ಬೌಂಡರಿ ಲೈನ್ ದಾಟಿದ ಫೀಲ್ಡರ್ ತನ್ನ ಸಹ ಆಟಗಾರನಿಗೆ ಚೆಂಡು ನೀಡಿದ ಬೆನ್ನಲ್ಲೇ ಮೈದಾನದ ಒಳಕ್ಕೆ ಬರಬೇಕು. ಆದರೆ ನಮನ್​ಧೀರ್ ಕ್ಯಾಚ್ ಹಿಡಿಯುವಷ್ಟರಲ್ಲಿ ನೇಹಾಲ್ ವಧೇರಾ ಮೈದಾನಕ್ಕೆ ಹಿಂತಿರುಗಿರಲಿಲ್ಲ. ಹೀಗಾಗಿಯೇ ಥರ್ಡ್ ಅಂಪೈರ್ ನಾಟೌಟ್ ಎಂದು ತೀರ್ಪು ನೀಡಿದ್ದರು.

ಇದೀಗ ಇಂತಹದ್ದೇ ಕ್ಯಾಚ್ ಬಾಬರ್ ಆಝಂ ಹಾಗೂ ಶಾಹೀನ್ ಶಾ ಅಫ್ರಿದಿ ಜೊತೆಗೂಡಿ ಹಿಡಿದಿದ್ದಾರೆ. ಇಲ್ಲಿ ಶಾಹೀನ್ ಅಫ್ರಿದಿ ಕ್ಯಾಚ್ ಪೂರ್ಣಗೊಳಿಸುವ ವೇಳೆ ಬಾಬರ್ ಮೈದಾನದಲ್ಲಿ ಇರಲಿಲ್ಲ. ಇದಾಗ್ಯೂ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದಾರೆ.

ಈ ತೀರ್ಪಿನ ಬೆನ್ನಲ್ಲೇ ಭಾರತಕ್ಕೆ ಒಂದು ರೂಲ್ಸ್, ಪಾಕಿಸ್ತಾನಕ್ಕೆ ಇನ್ನೊಂದು ರೂಲ್ಸಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

Published On – 2:09 pm, Sat, 7 February 26

Source link

ಕಡ್ಲೆಪುರಿ ಮಾರುತ್ತಿದ್ದ ಕಮಲಾಕರ ಭಟ್ ಜ್ಯೊತಿಷಿ ಆಗಿದ್ಹೇಗೆ? ಬಗೆದಷ್ಟೂ ಬಯಲಾಗ್ತಿದೆ ಬಂಡವಾಳ – Kannada News | From Peanut Seller to Millionaire Astrologer: Who is Kamalakara Bhat? Secrets Surface After Murder Arrest

ಬಗೆದಷ್ಟೂ ಬಯಲಾಗ್ತಿದೆ ಕಮಲಾಕರ ಭಟ್ ಬಂಡವಾಳImage Credit source: tv9

ಕಾರವಾರ, ಫೆಬ್ರವರಿ 7: ಉತ್ತರ ಕನ್ನಡದ ಸಿದ್ದಾಪುರದಲ್ಲಿ ಇತ್ತೀಚೆಗೆ ನಡೆದ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಜ್ಯೋತಿಷಿ ಕಮಲಾಕರ ಭಟ್ (Kamalakara Bhat) ಮತ್ತು ಸುಚಿತ್ರಾ ಹಿನ್ನೆಲೆ ಬಗ್ಗೆ ಬಗೆದಷ್ಟೂ ರಹಸ್ಯಗಳು ಬಯಲಾಗುತ್ತಿವೆ. ಪ್ರಭಾವಿ ಜ್ಯೋತಿಷಿ ಕಮಲಾಕರ ಭಟ್ ಅವರ ನಿಗೂಢ ಹಿನ್ನೆಲೆ ಮತ್ತು ಸಂಪತ್ತಿನ ಬಗ್ಗೆ ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳು ಕೂಡ ಹುಟ್ಟಿಕೊಂಡಿವೆ. ಸಾಮಾನ್ಯ ವ್ಯಕ್ತಿಯಾಗಿ ವೀಳ್ಯದೆಲೆ ಮತ್ತು ಕಡ್ಲೆಪುರಿ ಮಾರಾಟ ಮಾಡುತ್ತಿದ್ದ ಕಮಲಾಕರ ಭಟ್ ಕೋಟ್ಯಧಿಪತಿ ಜ್ಯೋತಿಷಿಯಾಗಿದ್ದು ಹೇಗೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ.

ಕಮಲಾಕರ ಭಟ್ ಅವರ ಮೂಲ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ. 2005ರ ಮೊದಲು, ಅವರು ತಮ್ಮ ಊರು ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಡ್ಲೆಪುರಿ ಮತ್ತು ವೀಳ್ಯದೆಲೆಯನ್ನು ಮಾರಾಟ ಮಾಡುತ್ತಿದ್ದರು. ಆರ್ಥಿಕವಾಗಿ ಹಿಂದುಳಿದಿದ್ದ ಅವರು, ಇದ್ದಕ್ಕಿದ್ದಂತೆ 2005ರಲ್ಲಿ ಊರಿನಿಂದ ನಾಪತ್ತೆಯಾಗುತ್ತಾರೆ. ನಂತರ ಅವರು ಕೇರಳಕ್ಕೆ ತೆರಳಿ ಅಲ್ಲಿ ಜ್ಯೋತಿಷ್ಯ ಹಾಗೂ ವಶೀಕರಣ ಶಾಸ್ತ್ರವನ್ನು ಕಲಿತರೆಂದು ಹೇಳಲಾಗುತ್ತಿದೆ. ಕಲಿಕೆ ನಂತರ ಗ್ರಾಮಕ್ಕೆ ಮರಳಿ ಜ್ಯೋತಿಷ್ಯ ವೃತ್ತಿಯನ್ನು ಆರಂಭಿಸುತ್ತಾರೆ. ಆರಂಭದಲ್ಲಿ ಅಷ್ಟೇನೂ ಹೆಸರು ಮಾಡದಿದ್ದರೂ, ನಂತರ ಅವರು ಬೆಂಗಳೂರಿಗೆ ತೆರಳಿದ ಮೇಲೆ ಅವರ ಜೀವನದ ದಿಕ್ಕೇ ಬದಲಾಯಿತು.

ಟಿವಿ, ಸಾಮಾಜಿಕ ಮಾಧ್ಯಮದಿಂದ ಬದಲಾದ ಬದುಕು

ಬೆಂಗಳೂರಿನಲ್ಲಿ ಕೆಲವು ಟಿವಿ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ತಮ್ಮ ಪ್ರಚಾರವನ್ನು ಮಾಡಿಕೊಂಡ ಕಮಲಾಕರ ಭಟ್, ಅಲ್ಪಾವಧಿಯಲ್ಲೇ ಅಪಾರ ಜನಪ್ರಿಯತೆ ಗಳಿಸಿದರು. ಸುಮಾರು 10 ರಿಂದ 15 ವರ್ಷಗಳ ಅವಧಿಯಲ್ಲಿ ಅವರು ಕೋಟ್ಯಂತರ ರೂಪಾಯಿ ಸಂಪಾದಿಸಿ, ಬರಿಗೈಯಿಂದ ಕೋಟ್ಯಾಧಿಪತಿಯಾಗಿ ಬೆಳೆದರು. ಅವರ ಈ ಅಸಾಮಾನ್ಯ ಮತ್ತು ಅತಿ ವೇಗದ ಸಂಪಾದನೆಯು ಸಾರ್ವಜನಿಕರಲ್ಲಿ ಹಾಗೂ ಅವರ ಭಕ್ತರಲ್ಲಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಹಣವನ್ನು ಕೇವಲ ಜ್ಯೋತಿಷ್ಯದ ಮೂಲಕವೇ ಗಳಿಸಲಾಯಿತೇ ಅಥವಾ ಬೇರೆ ಯಾವುದೇ ಚಟುವಟಿಕೆಗಳಲ್ಲಿ ಶಾಮೀಲಾಗಿದ್ದರೇ ಎಂಬುದು ಪ್ರಮುಖ ಪ್ರಶ್ನೆಯಾಗಿದೆ.

ತಿಂಗಳಿಗೆ ಮೂರ್ನಾಲ್ಕು ಲಕ್ಷ ರೂ. ಕಚೇರಿ ನಿರ್ವಹಣೆಗೆ ಖರ್ಚು!

ಕಮಲಾಕರ ಭಟ್ ಬೆಂಗಳೂರು, ಶಿವಮೊಗ್ಗ ಮತ್ತು ಹುಬ್ಬಳ್ಳಿಯಲ್ಲಿ ತಮ್ಮ ಕಚೇರಿಗಳನ್ನು ತೆರೆದಿದ್ದರು. ಪ್ರತಿ ಕಚೇರಿಯಲ್ಲಿ 10 ರಿಂದ 15 ಜನ ಸಿಬ್ಬಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಅವರು ಕಚೇರಿ ನಡೆಸುತ್ತಿದ್ದ ಕಟ್ಟದ ಮಾಲೀಕರೂ ಮಾಹಿತಿ ನೀಡಿದ್ದಾರೆ. ತಿಂಗಳಿಗೆ ಸುಮಾರು ಮೂರರಿಂದ ನಾಲ್ಕು ಲಕ್ಷ ರೂಪಾಯಿಗಳನ್ನು ತಮ್ಮ ಕಚೇರಿ ನಿರ್ವಹಣೆ ಮತ್ತು ಸಿಬ್ಬಂದಿ ವೇತನಕ್ಕಾಗಿ ಖರ್ಚು ಮಾಡುತ್ತಿದ್ದರು ಎಂಬುದೂ ತಿಳಿದುಬಂದಿದೆ. ಇಷ್ಟು ದೊಡ್ಡ ಪ್ರಮಾಣದ ಖರ್ಚುಗಳನ್ನು ನಿಭಾಯಿಸಲು ಅವರಿಗೆ ತಿಂಗಳ ಆದಾಯ ಎಲ್ಲಿಂದ ಬರುತ್ತಿತ್ತು ಎಂಬ ಬಗ್ಗೆ ಈಗ ಚರ್ಚೆಯಾಗುತ್ತಿದೆ.

ಸಿದ್ದಾಪುರ ಮತ್ತು ಶಿವಮೊಗ್ಗ ಭಾಗದಲ್ಲಿ ಕೆಲವು ಬ್ರೋಕರ್‌ಗಳನ್ನು ನೇಮಿಸಿಕೊಂಡು, ವಶೀಕರಣ ಮತ್ತು ಜ್ಯೋತಿಷ್ಯ ಸೇವೆಗಳಿಗಾಗಿ ಗ್ರಾಹಕರನ್ನು ಕರೆತರುತ್ತಿದ್ದರು. ಇದರಿಂದ ಬ್ರೋಕರ್‌ಗಳಿಗೆ ಕಮಿಷನ್ ನೀಡಿ, ತಮ್ಮ ಪ್ರಚಾರವನ್ನು ಹೆಚ್ಚಿಸಿಕೊಂಡಿದ್ದರು.

ಇದನ್ನೂ ಓದಿ: ‘ಅವಳಿಗಾಗಿ ನಾಯಿ ತರ ಅಲೆದಾಡಿದ್ದೆ’: ಕಮಲಾಕರನ ಒಂದೊಂದೇ ರಂಗಿನಾಟ ಬಯಲು!

ಸುಚಿತ್ರಾ ಕೂಡ ಆರಂಭದಲ್ಲಿ ಬ್ರೋಕರ್ ಕೆಲಸ ಮಾಡುತ್ತಿದ್ದರು ಎಂಬುದು ತಿಳಿದುಬಂದಿದೆ. ಸುಚಿತ್ರಾ ಪತಿ ಆಕೆ ಕಮಲಾಕರ ಭಟ್ ಮಾತ್ರವಲ್ಲದೆ, ಇತರೆ ಯುವಕರೊಂದಿಗೂ ಸುಚಿತ್ರಾ ಸಂಬಂಧ ಹೊಂದಿದ್ದರು ಮತ್ತು ಅವರ ಇನ್​ಸ್ಟಾಗ್ರಾಂ ರೀಲ್‌ಗಳು ತಮಗೆ ಬೇಸರ ತಂದಿದ್ದವು ಎಂದು ಈಗಾಗಲೇ ಆರೋಪಿಸಿದ್ದಾರೆ. ಇದೀಗ ಕಮಲಾಕರ ಭಟ್ ಬಂಧನದೊಂದಿಗೆ ಅವರ ಪ್ರಭಾವ ಮತ್ತು ಸಂಪತ್ತಿನ ಮೂಲದ ಕುರಿತಾದ ರಹಸ್ಯಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳು ಹುಟ್ಟಿಕೊಂಡಿವೆ. ಈ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊಬೀಳುವ ನಿರೀಕ್ಷೆ ಇದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಕ್ಷಿಣದ ಆ ನಟ ನಟಿಯರನ್ನು ತೆರೆಮೇಲೂ ಕೀಳಾಗಿ ಕಾಣಲು ಇಷ್ಟಪಡಲ್ಲ; ಬಾಲಿವುಡ್ ನಟಿ – Kannada News | Pooja Bedi Reveals Jr NTR’s Unwavering Respect for Women: ‘Shakti’ Incident Goes Viral

ಜನಪ್ರಿಯ ಬಾಲಿವುಡ್ ನಟಿ ಪೂಜಾ ಬೇಡಿ ತೆಲುಗು ಪ್ರೇಕ್ಷಕರಿಗೂ ಪರಿಚಿತರು. ಅವರು ಈ ಹಿಂದೆ ‘ಚಿಟ್ಟೆಮ್ಮ ಮೊಗುಡು’ (1993) ಮತ್ತು ‘ಶಕ್ತಿ’ (2011) ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಬಹಳ ಸಮಯದ ನಂತರ ತೆಲುಗು ಪರದೆಗೆ ಮರಳಿದ್ದಾರೆ. ಚಂದ್ರಹಾಸ್ ನಾಯಕನಾಗಿ ನಟಿಸಿದ ‘ಬರಬಾರ್ ಪ್ರೇಮಿಸ್ತಾ’ ಚಿತ್ರದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಚಿತ್ರದ ಪ್ರಚಾರದ ಭಾಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪೂಜಾ ಬೇಡಿ, ಜೂನಿಯರ್ ಎನ್‌ಟಿಆರ್ ಬಗ್ಗೆ ಕೆಲವು ಆಸಕ್ತಿದಾಯಕ ಸಂಗತಿಗಳನ್ನು ಹಂಚಿಕೊಂಡರು.

‘ಶಕ್ತಿ’ ಚಿತ್ರದ ಚಿತ್ರೀಕರಣದ ಸಮಯದಲ್ಲಿ ನಡೆದ ಒಂದು ಘಟನೆಯನ್ನು ಪೂಜಾ ಬೇಡಿ ನೆನಪಿಸಿಕೊಂಡರು. ‘ನಾನು ‘ಶಕ್ತಿ’ ಚಿತ್ರದಲ್ಲಿ ಸೋನು ಸೂದ್ ಅವರ ಪತ್ನಿಯಾಗಿ ನಟಿಸಿದ್ದೇನೆ. ಅದರಲ್ಲಿ ನನ್ನ ಪಾತ್ರವು ನಕಾರಾತ್ಮಕ ಛಾಯೆಗಳನ್ನು ಹೊಂದಿತ್ತು. ಕಥೆಯ ಪ್ರಕಾರ, ಒಂದು ದೃಶ್ಯದಲ್ಲಿ, ನಾಯಕ ಎನ್ಟಿಆರ್ ನನ್ನೊಂದಿಗೆ ಜಗಳವಾಡಬೇಕಾಯಿತು. ಆದರೆ ಜೂನಿಯರ್ ಎನ್ಟಿಆರ್ ಆ ದೃಶ್ಯವನ್ನು ಮಾಡಲು ಒಪ್ಪಲಿಲ್ಲ. ಅವರು ನಿರಾಕರಿಸಿದರು, ನಾನು ಮಹಿಳೆಯರೊಂದಿಗೆ ಜಗಳವಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಚಿತ್ರಕ್ಕಾಗಿ ಮಹಿಳೆಯ ವಿರುದ್ಧ ಕೈ ಎತ್ತಲು ಬಯಸುವುದಿಲ್ಲ ಎಂದು ಅವರು ಹೇಳಿದ್ದು ಅವರ ಮೇಲಿನ ನನ್ನ ಗೌರವವನ್ನು ಇನ್ನಷ್ಟು ಹೆಚ್ಚಿಸಿತು’ ಎಂದು ಪೂಜಾ ಬೇಡಿ ವಿವರಿಸಿದರು. ಇಂದಿನ ಚಲನಚಿತ್ರ ಜಗತ್ತಿನಲ್ಲಿ, ಅಂತಹ ಮೌಲ್ಯಗಳನ್ನು ಅನುಸರಿಸುವ ಜನರು ಬಹಳ ಅಪರೂಪ ಎಂದು ಅವರು ಹೊಗಳಿದರು.

ಸಿನಿಮಾಗಳಲ್ಲಿ ನಾಯಕಿಯರು ಅಥವಾ ನಕಾರಾತ್ಮಕ ಪಾತ್ರಗಳನ್ನು ನಿರ್ವಹಿಸುವ ಮಹಿಳೆಯರೊಂದಿಗೆ ನಾಯಕರು ತೆರೆಮೇಲೆ ಜಗಳವಾಡುವುದು ಸಾಮಾನ್ಯ. ಆದರೆ ಎನ್‌ಟಿಆರ್ ಮೊದಲಿನಿಂದಲೂ ಮಹಿಳೆಯರಿಗೆ ನೀಡುವ ಗೌರವದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿಲ್ಲ. ತಮ್ಮ ಚಿತ್ರಗಳು ಮಹಿಳಾ ಪಾತ್ರಗಳನ್ನು ಕೀಳಾಗಿ ಕಾಣುವುದನ್ನು ಅವರು ಬಯಸುವುದಿಲ್ಲ. ಪೂಜಾ ಬೇಡಿ ಹೇಳಿದ ಈ ಮಾತುಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. “ತಾರಕ್ ಕೇವಲ ನಟನಲ್ಲ.. ಅವರು ಉತ್ತಮ ಸಂಸ್ಕೃತಿಯನ್ನು ಹೊಂದಿರುವ ವ್ಯಕ್ತಿ” ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಅಕ್ಕಿನೇನಿ ನಾಗಾರ್ಜುನ ಬಳಿ ಇದೆ ಖಾಸಗಿ ವಿಮಾನ; ಇನ್ನೂ ಯಾರೆಲ್ಲ ಇದರ ಒಡೆಯರು?

ಜೂನಿಯರ್ ಎನ್ಟಿಆರ್ ಅವರ ಸಿನಿಮಾಗಳ ವಿಷಯಕ್ಕೆ ಬಂದರೆ, ಅವರು ಕೊನೆಯ ಬಾರಿಗೆ ‘ವಾರ್ 2’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಭಾರಿ ಬಜೆಟ್ ನಲ್ಲಿ ನಿರ್ಮಿಸಲಾದ ಪ್ಯಾನ್-ಇಂಡಿಯಾ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ನಿರೀಕ್ಷಿತ ಯಶಸ್ಸನ್ನು ಗಳಿಸಲು ಸಾಧ್ಯವಾಗಲಿಲ್ಲ. ಪ್ರಸ್ತುತ, ತಾರಕ್ ಪ್ರಶಾಂತ್ ನೀಲ್ ನಿರ್ದೇಶನದ ಮುಂಬರುವ ಸಿನಿಮಾ ‘ಡ್ರ್ಯಾಗನ್’ ಮೇಲೆ ತಮ್ಮ ಸಂಪೂರ್ಣ ಗಮನ ಹರಿಸಿದ್ದಾರೆ. ಈ ಸಿನಿಮಾದ ಮೇಲೆ ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆಗಳಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಎರಡೂ ಕಾಲು ಕತ್ತರಿಸಿದ್ದ ಸಿಪಿಐಂ ಕ್ರೌರ್ಯವನ್ನು ರಾಜ್ಯಸಭೆಯಲ್ಲಿ ವಿವರಿಸಿದ್ದ ಸದಾನಂದನ್ ಮಾಸ್ಟರ್​ಗೆ ಪ್ರಧಾನಿ ಮೋದಿ ಮೆಚ್ಚುಗೆ – Kannada News | PM Modi Writes Appreciation Letter to Rajya Sabha MP C Sadanandan Master After Maiden Speech on 1994 CPIM Attack

ಸದಾನಂದನ್ ಮಾಸ್ಟರ್​, ಪ್ರಧಾನಿ ಮೋದಿImage Credit source: TV9 Network

ನವದೆಹಲಿ, ಫೆಬ್ರವರಿ 7: ರಾಜ್ಯಸಭೆಯಲ್ಲಿ (Rajya Sabha) ಚೊಚ್ಚಲ ಭಾಷಣದ ಮೂಲಕ ಗಮನ ಸೆಳೆದ ಕೇರಳದ ಬಿಜೆಪಿ ಸದಸ್ಯ ಸಿ. ಸದಾನಂದನ್ ಮಾಸ್ಟರ್ (C.Sadanandan Master) ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi), ಪತ್ರ ಬರೆದು ಅಭಿನಂದಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ 1994ರ ಜನವರಿ 25ರಂದು ಸಿಪಿಐಎಂ ಕಾರ್ಯಕರ್ತರಿಂದ ನಡೆದ ಹಲ್ಲೆ ಹಾಗೂ ಅದರಿಂದ ಕಾಲು ಕಳೆದುಕೊಂಡ ಘಟನೆ ಕುರಿತು ಮನಕಲಕುವಂತೆ ವಿವರಿಸಿದ್ದ ಸದಾನಂದನ್ ಮಾಸ್ಟರ್ ಅವರ ಧೈರ್ಯ ಮತ್ತು ನಿಲುವಿಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್​ ಪೋಸ್ಟ್ ಮಾಡಿರುವ ಸದಾನಂದನ್ ಮಾಸ್ಟರ್, ‘ರಾಜ್ಯಸಭೆಯಲ್ಲಿ ನನ್ನ ಮೊದಲ ಭಾಷಣಕ್ಕೆ ಪ್ರಧಾನಿಯಿಂದ ಬಂದ ಪ್ರಶಂಸೆ ನನ್ನ ಸೇವಾಭಾವನೆಗೆ ಮತ್ತಷ್ಟು ಬಲ ನೀಡಿದೆ’ ಎಂದು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ ಸದಾನಂದನ್ ಮಾಸ್ಟರ್ ತಮ್ಮ ಕೃತಕ ಕಾಲುಗಳನ್ನು ಸದನದ ಬೆಂಚ್ ಮೇಲೆ ಪ್ರದರ್ಶಿಸಿ, ತಾವು ಎದುರಿಸಿದ ಹಿಂಸೆ ಮತ್ತು ದಾಳಿಯ ಕುರಿತು ವಿವರಿಸಿದ್ದರು. ಪ್ರಜಾಪ್ರಭುತ್ವ ಮತ್ತು ವಾಕ್ ಸ್ವಾತಂತ್ರ್ಯದ ಮಾತುಗಳನ್ನಾಡುವ ಎಡಪಂಥೀಯರು ತಮ್ಮ ಸೈದಾಂತಿಕ ವಿರೋಧಿಗಳಿಗೆ ನೀಡಿದ ಹಿಂಸೆ ಬಗ್ಗೆ ಅವರು ಉಲ್ಲೇಖಿಸಿದ್ದು, ಕೆಲಕಾಲ ಸದನದಲ್ಲಿ ಚರ್ಚೆಗೆ ಕಾರಣವಾಗಿತ್ತು.

ಸದಾನಂದನ್ ಮಾಸ್ಟರ್ ಎಕ್ಸ್ ಸಂದೇಶ

1994ರ ಜನವರಿ 25ರಂದು ಕೇರಳದಲ್ಲಿ ಸಿಪಿಐಎಂ ಕಾರ್ಯಕರ್ತರದ್ದು ಎನ್ನಲಾದ ಗುಂಪೊಂದು ಸದಾನಂದನ್ ಮಾಸ್ಟರ್ ಮೇಲೆ ದಾಳಿ ನಡೆಸಿ, ಅವರ ಕಾಲುಗಳನ್ನು ಕತ್ತರಿಸಿ ಅಡಗಿಸಿಟ್ಟ ಘಟನೆ ದೊಡ್ಡ ಸಂಚಲನ ಮೂಡಿಸಿತ್ತು. ಅದಾದ ನಂತರವೂ ಬಿಜೆಪಿಯಲ್ಲಿ ಸಕ್ರಿಯವಾಗಿದ್ದ ಸದಾನಂದನ್ ಮಾಸ್ಟರ್ ಈಗ ರಾಜ್ಯಸಭಾ ಸದಸ್ಯರಾಗಿದ್ದಾರೆ.

ಪ್ರಶಂಸೆಯ ಪತ್ರದಲ್ಲಿ ಮೋದಿ ಹೇಳಿದ್ದೇನು?

‘ಶಾಂತಚಿತ್ತದಿಂದ ಮತ್ತು ಆತ್ಮವಿಶ್ವಾಸದಿಂದ ರಾಜ್ಯಸಭೆಯಲ್ಲಿ ನೀವು ಮಾತುಗಳನ್ನಾಡಿದ ರೀತಿ ಶ್ಲಾಘನೀಯ. ಸಂಸತ್ತಿನ ಕಾರ್ಯಚಟುವಟಿಕೆಗಳಿಗೆ ನಿಮ್ಮ ಅನುಭವ ಮತ್ತು ವಿಚಾರಗಳು ಮುಂದೆಯೂ ಮಾರ್ಗದರ್ಶನವಾಗಲಿ’ ಎಂದು ಮೋದಿ ತಮ್ಮ ಪತ್ರದಲ್ಲಿ ಸದಾನಂದನ್ ಮಾಸ್ಟರ್​ ಅವರನ್ನು ಅಭಿನಂದಿಸಿದ್ದಾರೆ. ‘ನೀವು ನಿಮ್ಮನ್ನು ಹೊಸ ಸದಸ್ಯ ಎಂದು ಹೇಳಿಕೊಂಡರೂ, ನಿಮ್ಮಲ್ಲಿ ದೀರ್ಘ ಸೇವಾ ಮನೋಭಾವ ಮತ್ತು ರಾಷ್ಟ್ರಪ್ರೇಮ ಸ್ಪಷ್ಟವಾಗಿ ಗೋಚರಿಸುತ್ತದೆ. ನಿಮ್ಮ ಮಾತುಗಳಲ್ಲಿ ನೈತಿಕ ಶಕ್ತಿ ಮತ್ತು ದೃಢ ನಿಲುವು ಕಂಡುಬಂತು ಎಂದು ಮೋದಿ ಉಲ್ಲೇಖಿಸಿದ್ದಾರೆ.

ಕೇರಳದಲ್ಲಿ ನಡೆದಿದ್ದ ದಾಳಿಯ ಕುರಿತು ಪ್ರಸ್ತಾಪಿಸಿ, ‘ನಿಮ್ಮ ಸಂಕಷ್ಟಗಳನ್ನು ಕಂಡು ದೇಶದ ಜನ ಮರುಗಿದ್ದಾರೆ, ಧೈರ್ಯ ಕಂಡು ಬೆರಗಾಗಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇಂತಹ ಘಟನೆಗಳು ನೋವು ತಂದರೂ, ನೀವು ಸಂಸತ್ತಿನಲ್ಲಿ ಹೆಮ್ಮೆಯಿಂದ ಸೇವೆ ಸಲ್ಲಿಸುತ್ತಿರುವುದು ಪ್ರೇರಣಾದಾಯಕ’ ಎಂದು ಮೋದಿ ಉಲ್ಲೇಖಿಸಿದ್ದಾರೆ. ಅಲ್ಲದೆ, ದೇಶಸೇವೆಯಲ್ಲಿ ಮುಂದುವರಿಯಲು ನಿಮಗೆ ಆರೋಗ್ಯ ಮತ್ತು ಶಕ್ತಿ ದೊರೆಯಲಿ ಎಂದು ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!: ಸತ್ಯ ತಿಳಿಯಲು ಈ ವಿಡಿಯೋ ನೋಡಿ

ಪ್ರಧಾನಿಯ ಈ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸದಾನಂದನ್ ಮಾಸ್ಟರ್, ‘ಪ್ರಧಾನಮಂತ್ರಿಯಿಂದ ಬಂದ ಈ ಅಪರೂಪದ ಪ್ರೋತ್ಸಾಹದ ಮಾತುಗಳು ಮತ್ತು ಪ್ರಶಂಸೆ ನನ್ನ ಸೇವಾ ಸಂಕಲ್ಪಕ್ಕೆ ಇನ್ನಷ್ಟು ಬಲ ನೀಡುತ್ತದೆ’ ಎಂದು ಹೇಳಿದ್ದಾರೆ. ಮೋದಿ ಜಿ ಅವರ ಪ್ರೇರಣಾದಾಯಕ ಮಾತುಗಳು ಸಾರ್ವಜನಿಕ ಜೀವನದಲ್ಲಿ ಇನ್ನಷ್ಟು ಸಮರ್ಪಣೆಯಿಂದ ಕೆಲಸ ಮಾಡಲು ಉತ್ತೇಜನ ನೀಡಲಿದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ – Kannada News | Dodmane Habba Kavya Shaiva And Gilli Nata in One stage

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳಾಗಿದ್ದ ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಬಿಗ್ ಬಾಸ್ ಬಳಿಕ ಅನೇಕ ವೇದಿಕೆ ಮೇಲೆ ಇವರು ಒಟ್ಟಾಗಿ ಕಾಣಿಸಿಕೊಂಡಿದ್ದು ಇದೆ. ಈಗ ಇವರು ಕಲರ್ಸ್ ಶೋಗಾಗಿ ಒಂದಾಗಿದ್ದಾರೆ. ಶೋ ಹೆಸರು ‘ದೊಡ್ಮನೆ ಹಬ್ಬ’. ಇದು ಒಂದೇ ದಿನ ನಡೆಯಲಿರೋ ಜಾತ್ರೆ. ಫೆಬ್ರವರಿ 14ರ ಸಂಜೆ 6 ಗಂಟೆಗೆ ಶೋ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

IND vs USA: ಪ್ರಮುಖ ವೇಗಿ ಅಲಭ್ಯ: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ – Kannada News | Jasprit Bumrah is likely to miss the first match against USA

ಟಿ20 ವಿಶ್ವಕಪ್​ ಶುರುವಾಗಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಖಾಮುಖಿಯಾಗಿದ್ದರೆ, ದ್ವಿತೀಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮತ್ತು ಸ್ಕಾಟ್ಲೆಂಡ್ ತಂಡಗಳು ಕಣಕ್ಕಿಳಿಯಲಿವೆ. ಇನ್ನು ಇಂದೇ ನಡೆಯಲಿರುವ ಮೂರನೇ ಪಂದ್ಯದಲ್ಲಿ ಯುಎಸ್ಎ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಆದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಜಸ್​ಪ್ರೀತ್ ಬುಮ್ರಾ ಜ್ವರದಿಂದ ಬಳಲುತ್ತಿದ್ದು, ಹೀಗಾಗಿ ಯುಎಸ್​ಎ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಕಂಡು ಬರುವುದು ಖಚಿತ.

ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ:

ಯುಎಸ್​ಎ ವಿರುದ್ಧದ ಪಂದ್ಯದಲ್ಲಿ ಭಾರತದ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಜಸ್​ಪ್ರೀತ್ ಬುಮ್ರಾ ಈ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದ್ದು, ಹೀಗಾಗಿ ಅವರ ಬದಲಿಗೆ ಮೊಹಮ್ಮದ್ ಸಿರಾಜ್ ಅವರನ್ನು ಕಣಕ್ಕಿಳಿಸಬಹುದು.

ಹರ್ಷಿತ್ ರಾಣಾ ಗಾಯಗೊಂಡು ವಿಶ್ವಕಪ್ ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಇದೀಗ ಸಿರಾಜ್ ಭಾರತ ತಂಡವನ್ನು ಕೂಡಿಕೊಂಡಿದ್ದಾರೆ. ಅದರಂತೆ ಬುಮ್ರಾ ಹೊರಗುಳಿದರೆ ಮೊಹಮ್ಮದ್ ಸಿರಾಜ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಗುವುದು ಖಚಿತ.

ಹಾಗೆಯೇ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್​ಗೆ ಇಂದಿನ ಮ್ಯಾಚ್​ನಲ್ಲಿ ಅವಕಾಶ ಸಿಗುವುದಿಲ್ಲ. ಬದಲಾಗಿ ಅಭಿಷೇಕ್ ಶರ್ಮಾ ಜೊತೆ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸಲಿದ್ದಾರೆ.

ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ತಿಲಕ್ ವರ್ಮಾ ಹೊರಗುಳಿದಿದ್ದ ಕಾರಣ ಇಶಾನ್ ಕಿಶನ್ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಇದೀಗ ತಿಲಕ್ ತಂಡಕ್ಕೆ ರಿಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಭರ್ಜರಿ ಫಾರ್ಮ್​ನಲ್ಲಿರುವ ಇಶಾನ್ ಕಿಶನ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸುವುದು ಖಚಿತ. ಅದರಂತೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  • ಅಭಿಷೇಕ್ ಶರ್ಮಾ
  • ಇಶಾನ್ ಕಿಶನ್
  • ತಿಲಕ್ ವರ್ಮಾ
  • ಸೂರ್ಯಕುಮಾರ್ ಯಾದವ್
  • ಹಾರ್ದಿಕ್ ಪಾಂಡ್ಯ
  • ಶಿವಂ ದುಬೆ
  • ಅಕ್ಷರ್ ಪಟೇಲ್
  • ರಿಂಕು ಸಿಂಗ್
  • ಅರ್ಷದೀಪ್ ಸಿಂಗ್
  • ಮೊಹಮ್ಮದ್ ಸಿರಾಜ್
  • ವರುಣ್ ಚಕ್ರವರ್ತಿ

ಇದನ್ನೂ ಓದಿ: ಟಿ20 ವಿಶ್ವಕಪ್​ಗೆ ಮೂವರಿಲ್ಲ… ಆಸ್ಟ್ರೇಲಿಯಾಗೆ ಆಘಾತದ ಮೇಲೆ ಆಘಾತ

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಮೊಹಮ್ಮದ್ ಸಿರಾಜ್.

Source link

ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್! – Kannada News | Bengaluru Gold Heist: Nepali Couple Escapes to Nepal After 18 Crore Robbery

ಬೆಂಗಳೂರು, ಫೆಬ್ರುವರಿ 07: ಮಾರತ್‌ಹಳ್ಳಿಯ ಯಮಲೂರಿನಲ್ಲಿರುವ ಬಿಲ್ಡರ್ ಶಿವಕುಮಾರ್ ಅವರ ನಿವಾಸದಲ್ಲಿ ಜನವರಿ 25ರಂದು ನಡೆದ 18 ಕೋಟಿ (Nepali couple robbery) ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಮಾಹಿತಿ ಬಹಿರಂಗವಾಗಿದೆ. ಕಳ್ಳತನ ಮಾಡಿದ ನೇಪಾಳಿ ಜೋಡಿ ಮಹಾರಾಷ್ಟ್ರದ ಮೂಲಕ ನೇಪಾಳಕ್ಕೆ ಪರಾರಿಯಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಈ ದರೋಡೆಯಲ್ಲಿ ಮನೆಗೆಲಸದವಳು ಕಮಲಾ ಪ್ರಮುಖ ಪಾತ್ರ ವಹಿಸಿದ್ದಳು. ದಿನೇಶ್ ಮತ್ತು ಕಮಲಾ ಸೇರಿದಂತೆ ನಾಲ್ವರ ಗ್ಯಾಂಗ್ ಈ ಕೃತ್ಯವನ್ನು ಎಸಗಿದೆ. ಕಳ್ಳರು ಮಹಾರಾಷ್ಟ್ರ ಮತ್ತು ಗೋವಾದಿಂದ ಇಬ್ಬರನ್ನು ಕರೆಸಿಕೊಂಡು ಕಳ್ಳತನಕ್ಕೆ ಪಕ್ಕಾ ಯೋಜನೆ ರೂಪಿಸಿದ್ದರು. ಕೃತ್ಯದ ನಂತರ, ಅವರು ಕೆ.ಆರ್. ಪುರಂ ರೈಲ್ವೆ ನಿಲ್ದಾಣಕ್ಕೆ ಹೋಗಿ, ನಂತರ ಯಶವಂತಪುರ ಬಸ್ ನಿಲ್ದಾಣದ ಮೂಲಕ ಪರಾರಿಯಾಗಿದ್ದಾರೆ. ಬ್ಯಾಗ್‌ಗಳಲ್ಲಿ ಚಿನ್ನಾಭರಣವನ್ನು ತುಂಬಿಕೊಂಡು ತೆರಳುವಾಗ ಯಶವಂತಪುರದಲ್ಲಿ ಅವರ ಚಲನವಲನಗಳು ಟಿವಿ9ಗೆ ಲಭ್ಯವಾಗಿದೆ.

 

Source link

ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದಕ್ಕೆ ಅಕ್ಕನ ಮಗನನ್ನೇ ಕೊಂದಿದ್ದ ಮಾವನೂ ಆತ್ಮಹತ್ಯೆಗೆ ಶರಣು! – Kannada News | Soladevanahalli Tragedy: Family’s Despair After Murder of Free Fire Addict Leads to Mass Suicide

ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದಕ್ಕೆ ಅಕ್ಕನ ಮಗನನ್ನೇ ಕೊಂದಿದ್ದ ಮಾವನೂ ಆತ್ಮಹತ್ಯೆಗೆ ಶರಣು!

ಬೆಂಗಳೂರು, ಫೆಬ್ರವರಿ 07: ನಗರದ ಸೋಲದೇವನಹಳ್ಳಿ (Bengaluru rural) ಪೊಲೀಸ್ ಠಾಣಾ ವ್ಯಾಪ್ತಿಯ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಳ್ಳುವ ಘಟನೆ ನಡೆದಿದೆ. ಕೆಲ ತಿಂಗಳ ಹಿಂದೆ ಫ್ರೀಫೈರ್ ಗೇಮ್ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗ ಅಮೋಘಕೀರ್ತಿಯನ್ನು ಕೊಲೆ ಮಾಡಿದ್ದ ಮಾವ ನಾಗಪ್ರಸಾದ್ ಸೇರಿ ನಾಲ್ವರು ಸಾವಿಗೆ ಶರಣಾಗಿದ್ದಾರೆ. ಬಾಲಕನ ಸಾವಿನ ಹಿನ್ನೆಲೆ ಮನನೊಂದಿದ್ದ ಕುಟುಂಬಸ್ಥರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಅಳಿಯನ ಕೊಂದ ಪಾಪ ತೊಳೆಯಲು ಮಾವನ ಟೆಂಪಲ್ ರನ್

ಅಮೋಘ ಕೀರ್ತಿಯನ್ನು ಕೊಂದ ಪಾಪ ಪರಿಹಾರಕ್ಕೆ ಇಡೀ ಕುಟುಂಬ ಕೆಲ ತಿಂಗಳಿಂದ ದೇವಾಲಯಗಳಿಗೆ ಭೇಟಿ ನೀಡುತ್ತಿತ್ತು ಎಂದು ತಿಳಿದು ಬಂದಿದೆ. ಇದೀಗ ಬಿಹಾರಕ್ಕೆ ಪ್ರವಾಸ ತೆರಳಿದ್ದ ನಾಗಪ್ರಸನ್ನ ಆತನ ತಾಯಿ ಸುಮಂಗಲಾ78, ಸಹೋದರಿ ಶಿಲ್ಪಾ48, ಶ್ರುತಾ 43 ಎಲ್ಲರೂ ಒಮ್ಮೆಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಶರೀರಗಳ ಬಳಿ ನಿದ್ದೆ ಮಾತ್ರೆಗಳು ಸಿಕ್ಕಿದ್ದು, ಈ ಮಾತ್ರೆಗಳ ಓವರ್ ಡೋಸ್​ನಿಂದಲೇ ಕುಟುಂಬ ಮೃತಪಟ್ಟಿದೆ ಎನ್ನಲಾಗಿದೆ.

ನಡೆದಿದ್ದೇನು?

ಬಾಲಕನ ಸಾವಿಗೂ 8 ತಿಂಗಳು ಮೊದಲಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಈ ವೇಳೆ ಮೊಬೈಲ್​ನಲ್ಲಿ ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ. ವಾರದ ಹಿಂದೆ ಹಣ ಕೊಡುವಂತೆ ಮಾವನ ಮೇಲೆ ಹಲ್ಲೆ ಕೂಡ ಮಾಡಿದ್ದ. ಇದರಿಂದ ಬೇಸತ್ತ ನಾಗಪ್ರಸಾದ್, ಬಾಲಕನ ಕತ್ತು ಸೀಳಿ ಕೊಂದಿದ್ದ. ಅಷ್ಟೇ ಅಲ್ಲದೇ ತಾನೂ ಸಹ ಕೆರೆಗೆ ಹಾರಿ ಸಾಯಲು ಮುಂದಾಗಿದ್ದ ಘಟನೆ ಆಗಸ್ಟ್ 8ರಂದು ವರದಿಯಾಗಿತ್ತು.

ಇದನ್ನೂ ಓದಿ ಫ್ರೀಫೈರ್ ಗೇಮ್​​ಗೆ ಅಡಿಕ್ಟ್! ಅಕ್ಕನ ಮಗನನ್ನೇ ಕೊಂದ ಮಾವ

ಘಟನೆಯ ಬಳಿಕ ಹಣದ ಕೊರತೆಯಿಂದ ಮೆಜೆಸ್ಟಿಕ್‌ನಲ್ಲಿ ಮೂರು ದಿನ ಕಾಲ ತಂಗಿದ್ದ ನಾಗಪ್ರಸಾದ್, ನಂತರ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಸರೆಂಡರ್ ಆಗಿದ್ದ. ಪೊಲೀಸರು ಆತನ ಮೇಲೆ ಎಫ್​ಐಆರ್ ದಾಖಲಿಸಿ ಜೈಲಿನಲ್ಲಿಟ್ಟಿದ್ದರು. ಬಳಿಕ ಆತನ ತಂಗಿ ಶಿಲ್ಪಾ ಬೇಲ್ ಮೂಲಕ ಅಣ್ಣನನ್ನು ಜೈಲಿನಿಂದ ಹೊರ ತಂದಿದ್ದಳು. ಅದರ ನಂತರ ಕುಟುಂಬ ಸಮೇತವಾಗಿ ಬಿಹಾರದ ಪ್ರವಾಸ ಕೈಗೊಂಡ ನಾಲ್ವರೂ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ವರದಿ: ಮಂಜುನಾಥ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವರ್ಷಗಳಿಂದ ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಉಗ್ರ ಚಿಕಿತ್ಸೆ ಫಲಿಸದೆ ಸಾವು! – Kannada News | Suspected Terrorist Sadiq Pasha Dies in Bengaluru Victoria Hospital

ವರ್ಷಗಳಿಂದ ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾವು!

ಬೆಂಗಳೂರು, ಫೆಬ್ರವರಿ 07: ಬೆಂಗಳೂರಿನ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ (ಫೆಬ್ರುವರಿ 06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ.

6 ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಷಾ

ಸಾಧಿಕ್ ಪಾಷಾ ಕಳೆದ ಆರು ತಿಂಗಳಿಂದ ಲೋ ಬಿಪಿ ಹಾಗೂ ಹೈ ಶುಗರ್ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಆರೋಗ್ಯದಲ್ಲಿ ತೀವ್ರ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಜೈಲು ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣ ಶುಕ್ರವಾರ ಮಧ್ಯರಾತ್ರಿ ಸಾಧಿಕ್ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ ಗೋಡೌನ್‌ನಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್; ಅಧಿಕಾರಿಗಳಿಂದ ದಾಳಿ

6 ವರ್ಷಗಳ ಹಿಂದೆ ಜೈಲು ಪಾಲಾಗಿದ್ದ ಶಂಕಿತ ಉಗ್ರ

2020ರಲ್ಲಿ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸ್ಫೋಟಕ ವಸ್ತು ಸಂಗ್ರಹ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಾಧಿಕ್ ಸೇರಿ ಒಟ್ಟು ಆರು ಶಂಕಿತರನ್ನು ಬಂಧಿಸಿತ್ತು. ಅಂದಿನಿಂದ 6 ವರ್ಷಗಳ ಕಾಲ ಪಾಷಾ ಪರಪ್ಪನ ಅಗ್ರಹಾರದಲ್ಲಿಯೇ ಬಂಧಿಯಾಗಿದ್ದ. ಇದೀಗ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಧಿಕ್ ಪಾಷಾ ಸಾವಿನ ಕುರಿತು ಜೈಲು ಹಾಗೂ ಆಸ್ಪತ್ರೆ ಅಧಿಕಾರಿಗಳು ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link