All posts by nagaraj11081993

Video: ಕೇವಲ 1,200 ರೂ. ಬಾಕಿ ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಬಾರಿಸಿದ ಅಂಗಡಿ ಓನರ್ – Kannada News | Altercation Over Dues in Bareilly Leads to Assault Case

ಬರೇಲಿ, ಏಪ್ರಿಲ್ 29: ದಿನಸಿ ಅಂಗಡಿ ಮಾಲೀಕರೊಬ್ಬರು 1,200 ರೂ. ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ ಕಂಡುಬರುವಂತೆ, ಆ ಮಹಿಳೆ ಯುವತಿಗೆ ಪದೇ ಪದೇ ಕಪಾಳಮೋಕ್ಷ ಮಾಡುತ್ತಿದ್ದರೂ, ದಿನಸಿ ಅಂಗಡಿಯ ಕೌಂಟರ್​ನಲ್ಲಿ ಕುಳಿತ ವ್ಯಕ್ತಿ ತನಗೇನೂ ಗೊತ್ತಿಲ್ಲ ಎಂಬಂತೆಯೇ ಇದ್ದರು. ಹಲ್ಲೆಗೊಳಗಾದ ಯುವತಿಯು ಪ್ರತಿರೋಧವನ್ನೂ ತೋರದೆ ಸುಮ್ಮನೆ ಹೊಡೆತಗಳನ್ನು ತಿನ್ನುತ್ತಾ ನಿಂತಿರುವುದರ ಬಗ್ಗೆಯೂ ಕೂಡ ಬೇಸರ ವ್ಯಕ್ತವಾಗಿದೆ. @gharkekalesh’ ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಸದ್ಯ ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿದೆ.ಹಣದ ಅಹಂನಿಂದ ಒಬ್ಬ ಅಸಹಾಯಕ ವ್ಯಕ್ತಿಯ ಮೇಲೆ ಇಷ್ಟೊಂದು ಕ್ರೌರ್ಯ ತೋರುವುದು ಎಷ್ಟು ಸರಿ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ: 10ಕ್ಕೂ ಹೆಚ್ಚು ವೃಕ್ಷಗಳಿಗೆ ಕೊಡಲಿಯೇಟು – Kannada News | Udupi DC Office Cuts Down 10+ Trees After Staff Electrocution Death; Environmentalists Slam District Admin

ಉಡುಪಿ, ಏಪ್ರಿಲ್​​ 29: ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿಯೇ ಹತ್ತಕ್ಕೂ ಹೆಚ್ಚು ಮರಗಳ ಮಾರಣಹೋಮ ನಡೆದಿದೆ. ಏ.24ರಂದು ಮಾವಿನ ಕಾಯಿ ಕೀಳುವಾಗ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಮೃತಪಟ್ಟಿದ್ದರು. ಮರದ ಮೇಲೆ ಹಾದು ಹೋಗಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿದ ಕಾರಣ ಪ್ರಾಣ ಬಿಟ್ಟಿದ್ದರು. ಆದರೆ ಇದೀಗ ನೆಗಡಿ ಆಯ್ತು ಎಂದು ಉಡುಪಿ ಜಿಲ್ಲಾಡಳಿತ ಮೂಗನ್ನೇ ಕತ್ತರಿಸಿಕೊಂಡಿದೆ. ವಿದ್ಯುತ್‌ ತಂತಿಯನ್ನು ಬೇರೆಡೆಗೆ ಶಿಫ್ಟ್‌ ಮಾಡುವಂತೆ ವಿವಿಧ ಸಂಘಟನೆಗಳು ಒತ್ತಾಯಿಸಿದ್ದವು. ಅದರಂತೆ ತಂತಿ ವರ್ಗಾವಣೆ ಬದಲು ಹಲವು ವರ್ಷಗಳಿಂದ ಹಣ್ಣು ನೀಡುತ್ತಿದ್ದ ಮರಗಳಿಗೇ ಕೊಡಲಿಯೇಟು ನೀಡಿರೋದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾಧಿಕಾರಿ ಕೂರುವ ಕೊಠಡಿ ಹೊರಭಾಗದಲ್ಲಿದ್ದ ಬೃಹದಾದ ಮರಗಳು ಪಕ್ಷಿಗಳಿಗೆ ಆಶ್ರಯತಾಣವೂ ಆಗಿತ್ತು. ಹೀಗಾಗಿ ಜಿಲ್ಲಾಡಳಿತದ ಕ್ರಮಕ್ಕೆ ಪರಿಸರ ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

IPL 2026: RCB ತಂಡದ ಸ್ಫೋಟಕ ದಾಂಡಿಗ ಡೌಟ್!

Source link

Viral Video: ಕಾರ್ಖಾನೆಯಲ್ಲಿ ಆಲೂಗಡ್ಡೆ ಚಿಪ್ಸ್ ತಯಾರಿಸುವುದು ಹೀಗೆಯೇ?, ಈ ವಿಡಿಯೋ ನೋಡಿದರೆ ತಿನ್ನುವುದನ್ನೇ ಮರೆತುಬಿಡುತ್ತೀರಿ! – Kannada News | Viral video of potato chips factory making in soap water video see before you eat

ಬೆಂಗಳೂರು (ಏ. 29): ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋವೊಂದು (Viral Video) ಕಳೆದ ಕೆಲವು ದಿನಗಳಿಂದ ಸಾಕಷ್ಟು ವಿವಾದಕ್ಕೆ ಕಾರಣವಾಗುತ್ತಿದೆ. ಕಾರ್ಖಾನೆಯೊಂದರಿಂದ ಬಂದ ಈ ಕ್ಲಿಪ್, ಆಲೂಗೆಡ್ಡೆ ಚಿಪ್ಸ್ ಉತ್ಪಾದನಾ ಪ್ರಕ್ರಿಯೆಯನ್ನು ಚಿತ್ರಿಸಿದ್ದು, ನೆಟಿಜನ್‌ಗಳಿಗೆ ವಾಕರಿಕೆ ಬರುವಂತೆ ಮಾಡಿದೆ. ನೈರ್ಮಲ್ಯ ಮಾನದಂಡಗಳನ್ನು ಉಲ್ಲಂಘಿಸುವ ಈ ಕೆಲವೇ ಸೆಕೆಂಡುಗಳ ವಿಡಿಯೋ ಆನ್‌ಲೈನ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಸಾಬೂನು ನೀರಿನಲ್ಲಿ ಆಲೂಗಡ್ಡೆ ಕ್ಲೀನ್, ಅಜಾಗರೂಕ ಕೆಲಸಗಾರರು

ಈ ವೈರಲ್ ವಿಡಿಯೋದಲ್ಲಿ, ಒಬ್ಬ ವ್ಯಕ್ತಿ ತನ್ನ ಒಳ ಉಡುಪುಗಳನ್ನು ಮಾತ್ರ ಧರಿಸಿ ದೊಡ್ಡ ಟ್ಯಾಂಕ್ ಒಳಗೆ ನಿಂತಿರುವುದನ್ನು ಕಾಣಬಹುದು. ಟ್ಯಾಂಕ್ ಕೊಳಕು ಸೋಪ್ ನೀರು ಮತ್ತು ಹಸಿ ಆಲೂಗಡ್ಡೆ ಚಿಪ್ಸ್‌ನಿಂದ ತುಂಬಿದೆ ಎಂದು ವರದಿಯಾಗಿದೆ. ಶಾಕಿಂಗ್ ಎಂದರೆ, ಆ ವ್ಯಕ್ತಿ ಟ್ಯಾಂಕ್ ಒಳಗೆ ನಿಂತು ಸಿಗರೇಟ್ ಸೇದುತ್ತಿರುವುದು ಮಾತ್ರವಲ್ಲದೆ, ಕ್ಯಾಮೆರಾವನ್ನು ನೋಡಿ ನಗುತ್ತಿದ್ದಾರೆ.

ಈ ಕ್ಲಿಪ್ ನೋಡಿದಾಗ, ಆಲೂಗಡ್ಡೆಯನ್ನು ಹುರಿಯುವ ಮೊದಲು ಸ್ವಚ್ಛಗೊಳಿಸುವ ಸ್ಥಳೀಯ ಚಿಪ್ ಕಾರ್ಖಾನೆಯ ದೃಶ್ಯದಂತೆ ಕಾಣುತ್ತದೆ. ಆದರೆ, ಟ್ಯಾಂಕ್‌ನಲ್ಲಿರುವ ನೀರು ತುಂಬಾ ಕೊಳಕು ಮತ್ತು ಕೆಸರುಮಯವಾಗಿದ್ದು, ಅದನ್ನು ನೋಡಿದರೆ ಜನರಿಗೆ ವಾಕರಿಕೆ ಬರುವುದು ಖಚಿತ.

ಮನೆ ಬಾಗಿಲು ಹಾಕಲು ಮರೆತು ಹೋದ ಯುವತಿ, ಪಾರ್ಸೆಲ್ ಡೆಲಿವರಿಗೆಂದು ಬಂದ ವ್ಯಕ್ತಿ ಮಾಡಿದ್ದೇನು?

@fact.flow_india ಎಂಬ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಿಂದ ಹಂಚಿಕೊಳ್ಳಲಾದ ಈ ವಿಡಿಯೋವನ್ನು ಈಗಾಗಲೇ ಸಾವಿರಾರು ಬಾರಿ ವೀಕ್ಷಿಸಲಾಗಿದೆ. ನೆಟಿಜನ್‌ಗಳು ಇದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. “ಇದನ್ನು ನೋಡಿದರೆ ನನಗೆ ವಾಂತಿ ಬರುತ್ತಿದೆ”, “ಬಹುಶಃ ಅದಕ್ಕಾಗಿಯೇ ಈ ಚಿಪ್ಸ್ ತುಂಬಾ ಖಾರವಾಗಿದೆ”, “ಹೇ, ದಯವಿಟ್ಟು ಬ್ರಾಂಡ್ ಹೆಸರನ್ನು ಸಹ ಬಹಿರಂಗಪಡಿಸಿ, ಇದರಿಂದ ಜನರು ಜಾಗೃತರಾಗಬಹುದು ಮತ್ತು ಅವುಗಳನ್ನು ಖರೀದಿಸದಿರಬಹುದು” ಎಂದು ಅನೇಕರು ಕಾಮೆಂಟ್ ಮಾಡಿದ್ದಾರೆ.

ಆಹಾರ ಸುರಕ್ಷತೆಯ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಕೋಲಾಹಲ ಉಂಟಾಗಿರುವುದು ಇದೇ ಮೊದಲಲ್ಲ. ಬೀದಿ ವ್ಯಾಪಾರಿಯೊಬ್ಬರು ತಮ್ಮ ಪ್ಯಾಂಟ್ ಕೆಳಗೆ ಕೈ ಹಾಕಿ ನಂತರ ಅದೇ ಕೊಳಕು ಕೈಯಿಂದ ಗ್ರಾಹಕರಿಗೆ ಸಮೋಸಾ ಬಡಿಸುತ್ತಿರುವುದನ್ನು ತೋರಿಸುವ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು.

ಹಕ್ಕುತ್ಯಾಗ: ಈ ಸುದ್ದಿಯು ಸಾಮಾಜಿಕ ಮಾಧ್ಯಮದ ವೈರಲ್ ಪೋಸ್ಟ್‌ಗಳು ಮತ್ತು ನೆಟಿಜನ್‌ಗಳ ಪ್ರತಿಕ್ರಿಯೆಗಳನ್ನು ಆಧರಿಸಿದೆ. ಈ ವಿಡಿಯೋದಲ್ಲಿ ಮಾಡಲಾದ ಯಾವುದೇ ಹಕ್ಕುಗಳ ಸತ್ಯಾಸತ್ಯತೆಯನ್ನು TV9 ಕನ್ನಡ ಪರಿಶೀಲಿಸುವುದಿಲ್ಲ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಟಿಟಿಡಿಗೆ ಪ್ರತಿನಿತ್ಯ 11 ಟನ್ ತುಪ್ಪ ಕಳುಹಿಸುತ್ತೇವೆ ಎಂದ ಡಿಕೆ ಸುರೇಶ್! – Kannada News | Ghee tanker for TTD: BAMUL to Supply 11 Tonnes of Nandini Ghee Daily to Tirumala Temple

ಬೆಂಗಳೂರು, ಏಪ್ರಿಲ್ 29: ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮುಲ್) ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಲಡ್ಡು ಪ್ರಸಾದಕ್ಕೆ ನಂದಿನಿ ತುಪ್ಪವನ್ನು ಪೂರೈಸುವ ಮಹತ್ವದ ಒಪ್ಪಂದವನ್ನು ಮಾಡಿಕೊಂಡಿದೆ. ಈ ಒಪ್ಪಂದದ ಅಡಿಯಲ್ಲಿ, ಬಮುಲ್ ಮುಂದಿನ ಆರು ತಿಂಗಳ ಅವಧಿಗೆ ಸುಮಾರು 2 ಲಕ್ಷ ಕೆಜಿ ತುಪ್ಪವನ್ನು ಟಿಟಿಡಿಗೆ ಸರಬರಾಜು ಮಾಡಲಿದೆ. ಪ್ರತಿದಿನ 11.5 ರಿಂದ 12 ಟನ್ ನಂದಿನಿ ತುಪ್ಪವನ್ನು ತಿರುಪತಿಗೆ ಕಳುಹಿಸಲಾಗುವುದು ಎಂದು ಡಿಕೆ ಸುರೇಶ್ ತಿಳಿಸಿದ್ದಾರೆ. ಸುಮಾರು 136 ಕೋಟಿ ರೂ. ವೆಚ್ಚದಲ್ಲಿ ತುಪ್ಪ ಪೂರೈಕೆ ಮಾಡುತ್ತೇವೆ. ನಂದಿನಿ ತುಪ್ಪವು ಗುಣಮಟ್ಟಕ್ಕೆ ಹೆಸರುವಾಸಿಯಾಗಿದ್ದು, ಗ್ರಾಹಕರ ವಿಶ್ವಾಸ ಗಳಿಸಿದೆ. ಕಲಬೆರಕೆ ತಡೆಗಟ್ಟಲು ಡಿಜಿಟಲ್ ಲಾಕ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ ಎಂದು ಸುರೇಶ್ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Puri Jagannath Temple: ಪುರಿ ಜಗನ್ನಾಥ ದೇವಾಲಯದಲ್ಲಿ ಕಟ್ಟುನಿಟ್ಟಿನ ವಸ್ತ್ರ ಸಂಹಿತೆ ಜಾರಿಗೆ ಸಿದ್ಧತೆ – Kannada News | Puri Jagannath Temple Dress Code: Odisha Govt Considers Traditional Attire Rules

ಪುರಿ ಜಗನ್ನಾಥ ದೇವಾಲಯದಲ್ಲಿ ವಸ್ತ್ರ ಸಂಹಿತೆImage Credit source: Pinterest

ದಕ್ಷಿಣ ಭಾರತದ ಹಲವು ಪ್ರಸಿದ್ಧ ದೇವಾಲಯಗಳಲ್ಲಿ ಈಗಾಗಲೇ ಕಟ್ಟುನಿಟ್ಟಾದ ವಸ್ತ್ರ ಸಂಹಿತೆ ಜಾರಿಯಲ್ಲಿದ್ದು, ಇದೀಗ ಅದೇ ಮಾದರಿಯನ್ನು ಒಡಿಶಾದ ವಿಶ್ವಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದಲ್ಲೂ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರ ಗಂಭೀರ ಆಲೋಚನೆ ನಡೆಸುತ್ತಿದೆ. ದೇವಾಲಯದ ಪಾವಿತ್ರ್ಯತೆಯನ್ನು ಕಾಪಾಡುವ ದೃಷ್ಟಿಯಿಂದ ಭಕ್ತರಿಗೆ ನಿರ್ದಿಷ್ಟ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸುವಂತೆ ಒಡಿಶಾ ರಾಜ್ಯ ಕಾನೂನು ಆಯೋಗವು ಶಿಫಾರಸು ಮಾಡಿದೆ.

ನ್ಯಾಯಮೂರ್ತಿ ಬಿಶ್ವನಾಥ್ ರಾತ್ ನೇತೃತ್ವದ ಕಾನೂನು ಆಯೋಗವು ಈ ಕುರಿತು ವರದಿಯನ್ನು ಸಿದ್ಧಪಡಿಸಿದ್ದು, ಹಿಂದೂ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ಪೂರಕವಾದ ಉಡುಪುಗಳನ್ನು ಧರಿಸಿದವರಿಗೆ ಮಾತ್ರ ದೇವಾಲಯದೊಳಗೆ ಪ್ರವೇಶ ನೀಡಬೇಕು ಎಂದು ಸಲಹೆ ನೀಡಿದೆ. ಪ್ರಮುಖವಾಗಿ ಮಹಿಳೆಯರು ಜೀನ್ಸ್, ಟಿ-ಶರ್ಟ್ ಅಥವಾ ಶರ್ಟ್ ಧರಿಸಿ ದೇವಾಲಯಕ್ಕೆ ಬರುವುದನ್ನು ನಿಷೇಧಿಸಬೇಕೆಂದು ಆಯೋಗವು ಸರ್ಕಾರಕ್ಕೆ ತಿಳಿಸಿದೆ. ಈ ಹೊಸ ನಿಯಮವನ್ನು ಜಾರಿಗೆ ತರಲು ‘ಶ್ರೀ ಜಗನ್ನಾಥ ದೇವಾಲಯ ಕಾಯ್ದೆ’ಗೆ ಅಗತ್ಯ ತಿದ್ದುಪಡಿ ತರಲು ಕೂಡ ಪ್ರಸ್ತಾಪಿಸಲಾಗಿದೆ.

ಆಯೋಗದ ಶಿಫಾರಸಿನ ಪ್ರಕಾರ, ಪುರುಷ ಭಕ್ತರು ಧೋತಿ-ಕುರ್ತಾ, ಪಂಚೆ ಅಥವಾ ಸಾಂಪ್ರದಾಯಿಕ ಪೈಜಾಮ-ಕುರ್ತಾವನ್ನು ಧರಿಸಬಹುದು. ಮಹಿಳೆಯರಿಗೆ ಸೀರೆ, ಬ್ಲೌಸ್ ಅಥವಾ ಸಲ್ವಾರ್-ಕಮೀಜ್ ಧರಿಸಲು ಸೂಚಿಸಲಾಗಿದೆ. 10 ವರ್ಷದೊಳಗಿನ ಬಾಲಕಿಯರು ಫ್ರಾಕ್ ಅಥವಾ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಲು ಅವಕಾಶ ನೀಡಲಾಗಿದೆ. ದೇವಾಲಯದ ಆಡಳಿತ ಮಂಡಳಿಯು ಈ ಹಿಂದೆಯೇ ಅರ್ಧ ಪ್ಯಾಂಟ್, ಹರಿದ ಜೀನ್ಸ್ ಮತ್ತು ಸ್ಲೀವ್‌ಲೆಸ್ ಬಟ್ಟೆಗಳನ್ನು ಧರಿಸದಂತೆ ಭಕ್ತರಲ್ಲಿ ಮನವಿ ಮಾಡಿತ್ತು. ಆದರೆ ಕಾಯ್ದೆಯಲ್ಲಿ ಸ್ಪಷ್ಟ ನಿಯಮಗಳಿಲ್ಲದ ಕಾರಣ ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಮೋದಿ ವಿಶೇಷ ಪೂಜೆ; ಸರ್ವಾರ್ಥ ಸಿದ್ಧಿ ಯೋಗದ ಮಹತ್ವವೇನು ಗೊತ್ತಾ?

ದೇವಾಲಯವು ಕೇವಲ ದರ್ಶನದ ಸ್ಥಳವಲ್ಲ, ಅದು ಆಧ್ಯಾತ್ಮಿಕ ಶಕ್ತಿಯ ಕೇಂದ್ರವಾಗಿದೆ. ಅಲ್ಲಿಗೆ ಬರುವ ಭಕ್ತರು ಶಿಸ್ತು ಮತ್ತು ಭಕ್ತಿಯಿಂದ ಕೂಡಿದ ಉಡುಪುಗಳನ್ನು ಧರಿಸುವುದರಿಂದ ದೇವಾಲಯದ ಪವಿತ್ರ ವಾತಾವರಣವು ಮತ್ತಷ್ಟು ವೃದ್ಧಿಯಾಗುತ್ತದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಒಡಿಶಾ ಸರ್ಕಾರವು ಈ ಶಿಫಾರಸುಗಳನ್ನು ಸದ್ಯ ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ಈ ಕುರಿತು ಅಧಿಕೃತ ಕಾನೂನು ರೂಪಿಸುವ ಸಾಧ್ಯತೆಯಿದೆ. ಕರ್ನಾಟಕದ ಉಡುಪಿ ಶ್ರೀಕೃಷ್ಣ ಮಠ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ದೇವಾಲಯ ಸೇರಿದಂತೆ ದೇಶದ ಹಲವು ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಈಗಾಗಲೇ ಇಂತಹ ನಿಯಮಗಳು ಜಾರಿಯಲ್ಲಿರುವುದು ಗಮನಾರ್ಹ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:24 pm, Wed, 29 April 26

Source link

ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ಡಾಕ್ಟರ್​​: ವೈದ್ಯನಿಗೆ ಬಿತ್ತು ಸಾರ್ವಜನಿಕರಿಂದ ಧರ್ಮದೇಟು – Kannada News | Mysuru Government Doctor Accused of On Duty Alcohol Consumption and Smoking

ಮೈಸೂರು, ಏಪ್ರಿಲ್​​ 29: ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸರ್ಕಾರಿ ವೈದ್ಯ ಕೆಲಸದ ಸಮಯದಲ್ಲೇ ಮದ್ಯ ಸೇವಿಸಿ ರಂಪಾಟ ನಡೆಸಿದ್ದಾರೆ.ಕುಡಿದ ಅಮಿಲಿನಲ್ಲಿ ವಾಟ್ಸ್ ಆ್ಯಪ್ ಗ್ರೂಪ್​​ನಲ್ಲಿ ಅಶ್ಲೀಲ ಮೇಸೆಜ್ ಕೂಡ ಕಳುಹಿಸಿದ್ದ ಹಿನ್ನೆಲೆ ವೈದ್ಯ ಡಾ. ಅನಿಲ್ ಕುಮಾರ್​​ಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿದ್ದಾರೆ. ಆಸ್ಪತ್ರೆ ಒಳಭಾಗದಲ್ಲೇ ಸಿಗರೇಟ್ ಸೇದುತ್ತಾ ಡಾ.ಅನಿಲ್ ಕುಮಾರ್ ಗಲಾಟೆ ಮಾಡಿದ್ದು, ಪ್ರತಿನಿತ್ಯ ವಾಟ್ಸ್ ಆ್ಯಪ್ ಗ್ರೂಪ್​​ನಲ್ಲಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗೆ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಕುಡಿದ ಅಮಿಲಿನಲ್ಲಿ ವೈದ್ಯ ರಂಪಾಟ ಮಾಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್​​ನಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಮಾ.27ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸಿಬ್ಬಂದಿ ದೂರು ಕೂಡ ನೀಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೆಂಗಳೂರಿನಲ್ಲಿ ಪೊಲೀಸರ ಮೆಗಾ ಡ್ರಗ್ ಬೇಟೆ: ಒಂದೇ ವಾರದಲ್ಲಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ – Kannada News | Bengaluru Police Mega Drug Bust: Drugs Worth Rs 50 Crore Seized in One Week; CCB and Local Police Action

ಬೆಂಗಳೂರು, ಏಪ್ರಿಲ್ 29: ಬೆಂಗಳೂರು (Bengaluru) ನಗರದಲ್ಲಿ ಡ್ರಗ್ಸ್ ಮಾಫಿಯಾದ (Drugs Mafia) ಬೆನ್ನೆಲುಬು ಮುರಿಯಲು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇವಲ ಒಂದು ವಾರದಲ್ಲಿ ಬರೋಬ್ಬರಿ 50 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಿವಿಧ ವಿಭಾಗಗಳ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಅಕ್ರಮ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಡ್ರಗ್ಸ್ ವಿರುದ್ಧ ಕಾರ್ಯಾಚರಣೆಗಳ ವಿವರ

  • ಬಾಗಲೂರು ಪೊಲೀಸರು ಸುಮಾರು 16 ಕೋಟಿ ರೂಪಾಯಿ ಮೌಲ್ಯದ ಎಲ್‌ಎಸ್‌ಡಿ (LSD) ಸ್ಟ್ರಿಪ್‌ಗಳನ್ನು ಜಪ್ತಿ ಮಾಡಿದ್ದಾರೆ.
  • ಸಿಸಿಬಿ ಪೊಲೀಸರು ನಡೆಸಿದ ದಾಳಿಯಲ್ಲಿ 17.5 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಪತ್ತೆಯಾಗಿದೆ.
  • ಆಡುಗೋಡಿ ಪೊಲೀಸರು ತಮ್ಮ ವ್ಯಾಪ್ತಿಯಲ್ಲಿ 1.5 ಕೋಟಿ ರೂಪಾಯಿ ಬೆಲೆಯ ಬ್ರೌನ್ ಶುಗರ್ ವಶಪಡಿಸಿಕೊಂಡಿದ್ದಾರೆ.
  • ಯಶವಂತಪುರ ಮತ್ತು ಜಾಲಹಳ್ಳಿ ಭಾಗಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ 6.47 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ.
  • ಚಿಕ್ಕಜಾಲ ಪೊಲೀಸರು 1.6 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಜಪ್ತಿ ಮಾಡಿದ್ದಾರೆ.

ನಗರದ ಯುವಜನತೆಯನ್ನು ಗುರಿಯಾಗಿಸಿಕೊಂಡು ಸರಬರಾಜು ಮಾಡಲಾಗುತ್ತಿದ್ದ ಈ ಬೃಹತ್ ಪ್ರಮಾಣದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯುವ ಮೂಲಕ ಪೊಲೀಸರು ಡ್ರಗ್ಸ್ ಜಾಲಕ್ಕೆ ದೊಡ್ಡ ಏಟು ನೀಡಿದ್ದಾರೆ.

(ಹೆಚ್ಚಿನ ಮಾಹಿತಿ ಅಪ್​ಡೇಟ್ ಆಗಲಿದೆ)

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಉತ್ತರ ರಾಮಾಯಣ’ದ ಕುಶ ಈಗ 1400 ಕೋಟಿ ರೂ. ಕಂಪನಿಯ ಒಡೆಯ – Kannada News | Uttar Ramayan’s Kush: Mayuresh Kshetramade’s Journey from Child Actor to 1400 Cr CEO

1980ರ ದಶಕದಲ್ಲಿ ದೂರದರ್ಶನದಲ್ಲಿ ರಮಾನಂದ ಸಾಗರ್ ಅವರ ‘ರಾಮಾಯಣ’ ಸರಣಿ ಇಡೀ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಈ ಪೌರಾಣಿಕ ಧಾರಾವಾಹಿಯ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು, ನಿರ್ಮಾಪಕರು ಕೆಲವು ವರ್ಷಗಳ ನಂತರ ‘ಉತ್ತರ ರಾಮಾಯಣ’ವನ್ನು ಪ್ರೇಕ್ಷಕರ ಮುಂದೆ ತಂದಿದ್ದರು. ಇದರಲ್ಲಿ ರೀರಾಮ ಮತ್ತು ಸೀತಾಮಾತೆಯ ಪುತ್ರರಾದ ಲವ ಮತ್ತು ಕುಶನ ಕಥೆಯನ್ನು ತೋರಿಸಲಾಗಿತ್ತು.

1988ರಲ್ಲಿ ಪ್ರಸಾರವಾದ ಈ ‘ಉತ್ತರ ರಾಮಾಯಣ’ದಲ್ಲಿ ಲವನ ಪಾತ್ರವನ್ನು ನಟ ಸ್ವಪ್ನಿಲ್ ಜೋಶಿ ನಿರ್ವಹಿಸಿದರೆ, ಕುಶನ ಪಾತ್ರವನ್ನು ಮಯೂರೇಶ್ ಕ್ಷೇತ್ರಮಾಡೆ ಮಾಡಿದ್ದರು. ಸ್ವಪ್ನಿಲ್ ಜೋಶಿ ಇಂದು ಚಿತ್ರರಂಗದ ಖ್ಯಾತ ನಟನಾಗಿ ಗುರುತಿಸಿಕೊಂಡಿದ್ದಾರೆ. ಆದರೆ ಕುಶನ ಪಾತ್ರ ಮಾಡಿದ್ದ ಮಯೂರೇಶ್ ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಅವರು ಇಂದು ಬರೋಬ್ಬರಿ 1400 ಕೋಟಿ ರೂಪಾಯಿಗಳ ಕಂಪನಿಯ ಮಾಲೀಕರಾಗಿದ್ದಾರೆ!

13ನೇ ವಯಸ್ಸಿನಲ್ಲೇ ನಟನೆಗೆ ವಿದಾಯ:

‘ಉತ್ತರ ರಾಮಾಯಣ’ದ ಮೂಲಕ ಭಾರಿ ಜನಪ್ರಿಯತೆ ಗಳಿಸಿದರೂ, ಮಯೂರೇಶ್ ತಮ್ಮ 13ನೇ ವಯಸ್ಸಿನಲ್ಲೇ ಅಭಿನಯಕ್ಕೆ ವಿದಾಯ ಹೇಳಿ ಸಂಪೂರ್ಣವಾಗಿ ಶಿಕ್ಷಣದ ಕಡೆಗೆ ಗಮನ ಹರಿಸಿದರು. ಐಎಂಡಿಬಿ (IMDb) ವರದಿಯ ಪ್ರಕಾರ, ಮಯೂರೇಶ್ ಉನ್ನತ ಶಿಕ್ಷಣಕ್ಕಾಗಿ ಅಮೆರಿಕಕ್ಕೆ ತೆರಳಿ ಅಲ್ಲಿ ಫೈನಾನ್ಸ್ ಮತ್ತು ಬ್ಯುಸಿನೆಸ್ ಶಿಕ್ಷಣವನ್ನು ಪಡೆದರು. ಮಯೂರೇಶ್ ಅವರ ಲಿಂಕ್ಡ್‌ಇನ್ ಪ್ರೊಫೈಲ್ ಪ್ರಕಾರ, ಅವರು 2003 ರಿಂದ ವಿಶ್ವ ಬ್ಯಾಂಕ್‌ನಲ್ಲಿ ಸಂಶೋಧಕರಾಗಿ ಕೆಲಸ ಮಾಡಿದರು. ಆನಂತರ ಅವರು ಕಾರ್ಪೊರೇಟ್ ಜಗತ್ತಿನಲ್ಲಿ ಸಕ್ರಿಯರಾದರು.

1400 ಕೋಟಿ ರೂಪಾಯಿ ಆದಾಯ ತಂದ ಯಶಸ್ಸು:

ಮಯೂರೇಶ್ ಅವರಿಗೆ 2016 ನೇ ವರ್ಷವು ಬಹಳ ವಿಶೇಷವಾಗಿತ್ತು. ಯಾಕೆಂದರೆ ಅದೇ ವರ್ಷ ಅವರು ‘ಕಮಿಷನ್ ಜಂಕ್ಷನ್’ (Commission Junction) ಎಂಬ ಜಾಗತಿಕ ಮಾರ್ಕೆಟಿಂಗ್ ಪ್ಲಾಟ್‌ಫಾರ್ಮ್‌ನ ಸಿಇಒ ಆಗಿ ನೇಮಕಗೊಂಡರು. ಹಲವು ವರ್ಷಗಳ ಕಠಿಣ ಪರಿಶ್ರಮದಿಂದ ಮಯೂರೇಶ್ 2022ರ ವೇಳೆಗೆ ಈ ಕಂಪನಿಯನ್ನು 1400 ಕೋಟಿ ರೂಪಾಯಿಗಳ ಆದಾಯ ಗಳಿಸುವ ಮಟ್ಟಕ್ಕೆ ಬೆಳೆಸಿದರು. ಮಯೂರೇಶ್ ಇಂದು ಒಬ್ಬ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದು, ಪ್ರಸ್ತುತ ತಮ್ಮ ಕುಟುಂಬದೊಂದಿಗೆ ನ್ಯೂಯಾರ್ಕ್‌ನಲ್ಲಿ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: ‘ರಾಮಾಯಣ’ ಜಪಾನಿಗೆ ಹೋದ ಆಸಕ್ತಿಕರ ಕತೆ ಗೊತ್ತೆ?

ರಮಾನಂದ ಸಾಗರ್ ಅವರ ‘ರಾಮಾಯಣ’ ಮತ್ತು ‘ಉತ್ತರ ರಾಮಾಯಣ’ ಧಾರಾವಾಹಿಗಳಿಗೆ ಅಂದಿನಿಂದ ಇಂದಿನವರೆಗೂ ಅಷ್ಟೇ ಜನಪ್ರಿಯತೆ ಇದೆ. ಲಾಕ್‌ಡೌನ್ ಸಮಯದಲ್ಲಿ ಈ ಧಾರಾವಾಹಿಗಳು ಮರುಪ್ರಸಾರವಾದಾಗಲೂ ಟಿಆರ್‌ಪಿ (TRP) ಯಲ್ಲಿ ಎಲ್ಲಾ ದಾಖಲೆಗಳನ್ನು ಮುರಿದಿದ್ದವು. ಆ ಸರಣಿಯಲ್ಲಿ ನಟಿಸಿದ ಕಲಾವಿದರನ್ನು ಇಂದಿಗೂ ಜನರು ದೇವರ ರೂಪದಲ್ಲಿ ಗೌರವಿಸುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ಸುಪ್ರೀಂಕೋರ್ಟ್ ಮೊರೆ ಹೋದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ದರ್ಶನ್ ಅವರು ಈಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಈ ಮೊದಲು ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಕಳೆದ ವರ್ಷ ಆಗಸ್ಟ್ 14ರಂದು ಅವರು ಮತ್ತೆ ಅರೆಸ್ಟ್ ಆದರು. ಈಗ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಡಲಾಗಿದೆ. ಈಗ ದರ್ಶನ್ ಅವರು ಜಾಮೀನು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ‘ಸಾಕ್ಷ್ಯ ವಿಚಾರಣೆ ವಿಳಂಬವಾಗುತ್ತಿದೆ’ ಎಂಬ ಕಾರಣ ನೀಡಿ ಏ.14ರಂದೇ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಮುಂದಿನ ವಾರ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link