All posts by nagaraj11081993

‘ಜಗದ್ಧಾತ್ರೀ’ ಎಂಟ್ರಿಗೆ ಸಿದ್ಧವಾಯ್ತು ವೇದಿಕೆ; ಮುಗಿಯುತ್ತಿರುವ ಧಾರಾವಾಹಿ ಯಾವುದು? – Kannada News | Jagaddhatri Serial: Mokshitha Pai’s Grand Return on Zee Kannada; Which Show Ends?

‘ಜಗದ್ಧಾತ್ರೀ’ ಧಾರಾವಾಹಿ ಬರಲಿದೆ ಎಂಬುದನ್ನು ಜೀ ಕನ್ನಡ ವಾಹಿನಿ ಈ ಮೊದಲೇ ಘೋಷಣೆ ಮಾಡಿದ್ದು ಎಲ್ಲರಿಗೂ ಗೊತ್ತೇ ಇದೆ. ಈಗ ಧಾರಾವಾಹಿಯ ಹೊಸ ಪ್ರೋಮೋ ಒಂದು ರಿಲೀಸ್ ಆಗಿದೆ. ಇದರಲ್ಲಿ ‘ಜಗದ್ಧಾತ್ರೀ’ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಎಂಬುದನ್ನು ತೋರಿಸಲಾಗಿದೆ. ಜಗದ್ಧಾತ್ರೀ ಕೇವಲ ಮನೆ ಮಗಳಲ್ಲ, ಆಕೆ ಲೋಕವನ್ನು ಕಾಯುವವಳೂ ಹೌದು ಎಂಬುದನ್ನು ತೋರಿಸಿರಿವುದನ್ನು ನೀವು ಕಾಣಬಹುದು.

‘ಜಗದ್ಧಾತ್ರೀ’ ಧಾರಾವಾಹಿ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಮೊದಲು ಪ್ರೋಮೋ ಒಂದು ರಿಲೀಸ್ ಆಗಿತ್ತು. ಈಗ ಧಾರಾವಾಹಿಯ ಎರಡನೇ ಪ್ರೋಮೋ ರಿಲೀಸ್ ಆಗಿದೆ. ಈ ಪ್ರೋಮೋದಲ್ಲಿ ನಟಿ ಯಾರು ಎಂಬುದರ ಸೂಚನೆಯನ್ನು ಕೊಡಲಾಗಿದೆ.

‘ಜಗದ್ಧಾತ್ರೀ’ ಧಾರಾವಾಹಿಯ ಪ್ರೋಮೋದಲ್ಲಿ ಕಥಾ ನಾಯಕಿ ಮನೆಯಲ್ಲಿ ಚಹಾ ಮಾಡಿಕೊಡುತ್ತಾ ಇರುತ್ತಾಳೆ. ಆ ಸಂದರ್ಭಕ್ಕೆ ಸರಿಯಾಗಿ ಕಿಡ್ನ್ಯಾಪ್ ಆಗಿದೆ ಎಂಬ ಸುದ್ದಿ ಬರುತ್ತದೆ. ಆ ಸಮಯಕ್ಕೆ ಸರಿಯಾಗಿ ಆಕೆ ಹೊರಡುತ್ತಾಳೆ ಮತ್ತು ಹೋಗಿ ಬಾಲಕಿಯನ್ನು ರಕ್ಷಣೆ ಮಾಡುತ್ತಾಳೆ . ಈ ರೀತಿಯಲ್ಲಿ ಧಾರಾವಾಹಿ ಪ್ರೋಮೋದಲ್ಲಿ ಮೂಡಿ ಬಂದಿದೆ.

ಈ ಧಾರಾವಾಹಿಯಲ್ಲಿ ನಟಿಸೋದು ಮೋಕ್ಷಿತಾ ಪೈ ಎಂಬುದು ಬಹುತೇಕ ಸ್ಪಷ್ಟವಾಗಿದೆ. ಈಗ ರಿಲೀಸ್ ಆಗಿರುವ ಪ್ರೋಮೋ ನೋಡಿದ ಮೋಕ್ಷಿತಾ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದಾರೆ. ಅವರ ಮುಖವನ್ನು ತೋರಿಸಲು ಅಭಿಮಾನಿಗಳು ಕಾದಿದ್ದಾರೆ.

ಮೋಕ್ಷಿತಾ ಪೈ ಅವರು ಈ ಮೊದಲು ಜೀ ಕನ್ನಡದಲ್ಲಿ ‘ಪಾರು’ ಧಾರಾವಾಹಿಯಲ್ಲಿ ನಟಿಸಿದ್ದರು. ಆ ಬಳಿಕ ಕಲರ್ಸ್ ಕನ್ನಡದ ಬಿಗ್ ಬಾಸ್ ಶೋಗೆ ಆಗಮಿಸಿದರು. ಈಗ ಅವರು ಮನೆಗೆ ಮರಳುತ್ತಿದ್ದಾರೆ. ಈ ಧಾರಾವಾಹಿ ಯಾವಾಗ ಪ್ರಸಾರ ಕಾಣುತ್ತದೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ಕಳೆದ ಸೀಸನ್​ ಅಂತೆಯೇ ನಡೆದುಕೊಳ್ಳುತ್ತಿದ್ದಾರೆ ಮೋಕ್ಷಿತಾ ಪೈ 

ಯಾವ ಧಾರಾವಾಹಿ ಪೂರ್ಣಗೊಳ್ಳುತ್ತದೆ ಎಂಬ ಬಗ್ಗೆ ಚರ್ಚೆ ನಡೆದಿದೆ. ಇದಕ್ಕೂ ಉತ್ತರ ಸಿಕ್ಕಿದೆ. ‘ಅಮೃತಧಾರೆ’ ಧಾರಾವಾಹಿ ಕೊನೆಗೊಳ್ಳಬಹುದು ಎಂದು ಹೇಳಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವೈಭವ್ ಆರ್ಭಟಕ್ಕೆ ರಸೆಲ್ ರೆಕಾರ್ಡ್ ಉಡೀಸ್ – Kannada News | Vaibhav Sooryavanshi Breaks Andre Russell’s Record

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವೈಭವ್ ಸೂರ್ಯವಂಶಿ (Vaibhav Sooryavanshi) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ 6 ವರ್ಷಗಳ ಹಿಂದೆ ಆ್ಯಂಡ್ರೆ ರಸೆಲ್ (Andre Russell) ಬರೆದಿಟ್ಟಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ.

ಮುಲ್ಲನ್​ಪುರ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸ್ಫೋಟಕ ಬ್ಯಾಟಿಂಗ್​​ನೊಂದಿಗೆ ಕೇವಲ 16 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್​​ನೊಂದಿಗೆ 43 ರನ್​ ಚಚ್ಚಿದ್ದರು.

ಈ 43 ರನ್​ಗಳೊಂದಿಗೆ ವೈಭವ್ ಸೂರ್ಯವಂಶಿ ಈ ಬಾರಿಯ ಐಪಿಎಲ್​ನಲ್ಲಿ 400 ರನ್​ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಸೀಸನ್​ವೊಂದರಲ್ಲಿ ಅತೀ ವೇಗವಾಗಿ 400 ರನ್​ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ರಸೆಲ್ ಹೆಸರಿನಲ್ಲಿತ್ತು.

2019 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಡ್ ಪರ ಕಣಕ್ಕಿಳಿದಿದ್ದ ಆ್ಯಂಡ್ರೆ ರಸೆಲ್ ಕೇವಲ 188 ಎಸೆತಗಳಲ್ಲಿ 400 ರನ್​ ಕಲೆಹಾಕಿದ್ದರು. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ಸೀಸನ್​ವೊಂದರಲ್ಲಿ ಅತೀ ಕಡಿಮೆ ಎಸೆತದಲ್ಲಿ 400 ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ವೈಭವ್ ಸೂರ್ಯವಂಶಿ ಯಶಸ್ವಿಯಾಗಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿ 9 ಇನಿಂಗ್ಸ್ ಆಡಿರುವ ವೈಭವ್ ಕೇವಲ 167 ಎಸೆತಗಳಲ್ಲಿ 400 ರನ್​ ಪೂರೈಸಿದ್ದಾರೆ. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಸೀಸನ್​ವೊಂದರಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 400 ರನ್​ಗಳ ಗಡಿದಾಟಿದ ಬ್ಯಾಟರ್ ಎಂಬ ಭರ್ಜರಿ ದಾಖಲೆಯನ್ನು ವೈಭವ್ ತಮ್ಮದಾಗಿಸಿಕೊಂಡಿದ್ದಾರೆ.

Published On – 7:52 am, Wed, 29 April 26

Source link

ಮತ್ತೆ ಒಂದಾದ ‘ಧುರಂಧರ್’ ಜೋಡಿ; ಆದಿತ್ಯ ಧಾರ್ ಹೊಸ ಚಿತ್ರಕ್ಕೆ ರಣವೀರ್ ಹೀರೋ – Kannada News | Ranveer Singh and Aditya Dhar Reunite: New Blockbuster After Dhurandhar 2 Success

ಒಂದು ಹಿಟ್ ಕಾಂಬಿನೇಷನ್ ಸಿಕ್ಕರೆ ಸಾಕು ನಂತರದಲ್ಲಿ ಇದನ್ನೇ ಮುಂದುವರಿಸಿಕೊಂಡು ಹೋಗುವ ಪ್ರಯತ್ನವನ್ನು ಮಾಡಲಾಗುತ್ತದೆ. ಹೀಗೆ ಮಾಡೋದನ್ನು ಜನರು ಕೂಡ ಇಷ್ಟಪಡುತ್ತಾರೆ. ಈಗ ರಣವೀರ್ ಸಿಂಗ್ ಹಾಗೂ ನಿರ್ದೇಶಕ ಆದಿತ್ಯ ಧಾರ್ ಅವರು ಮತ್ತೊಮ್ಮೆ ಒಟ್ಟಿಗೆ ಬರಲು ರೆಡಿ ಆಗಿದ್ದಾರೆ. ಈ ಚಿತ್ರಕ್ಕೆ ಅಭಿಮಾನಿಗಳು ಕಾದಿದ್ದಾರೆ. ಹಾಗಂತ ಈ ಸಿನಿಮಾ ಈಗಲೇ ಸೆಟ್ಟೇರುವುದಿಲ್ಲ. ಇದಕ್ಕೆ ಸಾಕಷ್ಟು ಸಮಯದ ಅಗತ್ಯವಿದೆ.

ರಣವೀರ್ ಸಿಂಗ್ ಹಾಗೂ ಆದಿತ್ಯ ಧಾರ್ ಅವರು ಮೊದಲ ಬಾರಿಗೆ ಒಂದಾಗಿದ್ದು ‘ಧುರಂಧರ್’ ಸಿನಿಮಾದಲ್ಲಿ. ರಣವೀರ್ ಹಮ್ಜಾ ಅಲಿ ಮಜಾರಿ ಪಾತ್ರವನ್ನು ಸರಿಯಾಗಿ ನಿರ್ವಹಿಸಬಹುದು ಎಂಬ ನಂಬಿಕೆಯನ್ನು ಆದಿತ್ಯ ಧಾರ್ ಇಟ್ಟುಕೊಂಡಿದ್ದರು. ಅದೇ ರೀತಿಯಲ್ಲಿ ರಣವೀರ್ ಸಿಂಗ್ ಅವರು ಈ ನಂಬಿಕೆಯನ್ನು ಉಳಿಸಿಕೊಂಡರು. ಈಗ ಇಬ್ಬರೂ ಮತ್ತೊಮ್ಮೆ ಒಂದಾಗುತ್ತಿದ್ದಾರೆ.

ಆದಿತ್ಯ ಧಾರ್ ಅವರ ಮುಂದಿನ ಚಿತ್ರಕ್ಕೆ ಹೀರೋ ಯಾರು ಎಂಬ ಬಗ್ಗೆ ಚರ್ಚೆಗಳು ಈ ಮೊದಲಿನಿಂದಲೂ ನಡೆಯುತ್ತಲೇ ಇವೆ. ಇದಕ್ಕೆ ಈವರೆಗೆ ಉತ್ತರ ಸಿಕ್ಕಿಲ್ಲ. ಕೆಲವರು ಅಲ್ಲು ಅರ್ಜುನ್ ಹೆಸರು ಹೇಳಿದರೆ, ಇನ್ನೂ ಕೆಲವರು ಬೇರೆ ನಟರ ಹೆಸರನ್ನು ಹೇಳಿದ್ದಾರೆ. ಆದರೆ, ಈಗ ಸಿದ್ಧಪಡಿಸಿಕೊಂಡಿರುವ ಕಥೆಯ ಒಂದೆಳೆಗೆ ರಣವೀರ್ ಸಿಂಗ್ ಅವರೇ ಹೆಚ್ಚು ಸೂಕ್ತ ಎಂದು ಆದಿತ್ಯ ಧಾರ್ ಅವರಿಗೆ ಅನಿಸುತ್ತಿದೆ.

ಆದಿತ್ಯ ಧಾರ್ ಅವರು ‘ಧುರಂಧರ್ 2’ ಯಶಸ್ಸಿನ ಬಳಿಕ ಹೊಸ ಸಿನಿಮಾಗೆ ಕೈ ಹಾಕಿದ್ದಾರೆ. ಈ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಸಾಗುತ್ತಿವೆ.ಈ ಸಿನಿಮಾಗೆ ರಣವೀರ್ ಹೀರೋ ಆದರೆ, ವಿಲನ್ ಯಾರು ಎಂಬುದು ಇನ್ನೂ ಫೈನಲ್ ಆಗಿಲ್ಲ ಎಂದು ವರದಿ ಆಗಿದೆ. ಈ ಸಿನಿಮಾ 2027ರಲ್ಲಿ ಸೆಟ್ಟೇರುವ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಬಾಹುಬಲಿ 2’ ದಾಖಲೆ ಉಡೀಸ್: ಹೊಸ ಇತಿಹಾಸ ಬರೆಯಲು ಸಜ್ಜಾದ ‘ಧುರಂಧರ್ 2’

‘ಧುರಂಧರ್ 2’ ಸಿನಿಮಾ ಈಗಾಗಲೇ ‘ಬಾಹುಬಲಿ 2’ ಚಿತ್ರದ ದಾಖಲೆಯನ್ನು ಮುರಿದಿದೆ. ಈ ಸಿನಿಮಾ ಇಷ್ಟು ದಾಖಲೆ ಮಾಡಲು ಕಾರಣ ‘ಧುರಂಧರ್’ ಸಿನಿಮಾದ ಯಶಸ್ಸು. ಈಗ ಈ ಎರಡೂ ಚಿತ್ರದ ಯಶಸ್ಸು ಆದಿತ್ಯ ಧಾರ್ ಅವರ ಮುಂದಿನ ಸಿನಿಮಾಗಳ ಮೇಲೆ ನಿರೀಕ್ಷೆ ಹೆಚ್ಚುವಂತೆ ಮಾಡುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸುಡುವ ಬಿಸಿಲು, ಉಷ್ಣ ಅಲೆಯ ನಡುವೆಯೂ ಹಂಪಿ ಮೃಗಾಲಯದ ಪ್ರಾಣಿಗಳು ಕೂಲ್ ಕೂಲ್! ಹೇಗೆ ಗೊತ್ತಾ? – Kannada News | Hampi Zoo Animals Stay Cool Amid 40 degree celsius Heat: Sprinklers and Water Ponds Deployed to Prevent Dehydration

ಹಂಪಿ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನವನದಲ್ಲಿ ವಿರಮಿಸುತ್ತಿರುವ ಹುಲಿ

ಬಳ್ಳಾರಿ, ಏಪ್ರಿಲ್ 29: ಕರ್ನಾಟಕದಾದ್ಯಂತ ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೆಂಡದಂತಹ ಬಿಸಿಲು, ಉಷ್ಣ ಅಲೆಗೆ (Heat Wave) ಮನುಷ್ಯರೇ ತತ್ತರಿಸಿ ಹೋಗುತ್ತಿದ್ದಾರೆ. ಆದರೆ, ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನವನದಲ್ಲಿ (Atal Bihari Vajpayee Zoological Park) ಮಾತ್ರ ಪ್ರಾಣಿಗಳು ರಣರ ಬಿಸಿಲಿನಲ್ಲೂ ತಂಪಾಗಿವೆ. ಬಿಸಿಲಿನ ತಾಪ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದರೂ, ಪ್ರಾಣಿಗಳಿಗೆ ಬಿಸಿಲಿನ ಧಗೆ ತಟ್ಟದಂತೆ ಮೃಗಾಲಯದ ಸಿಬ್ಬಂದಿ ವಿಶೇಷ ವ್ಯವಸ್ಥೆ ಮಾಡಿದ್ದಾರೆ.

ಸ್ಪ್ರಿಂಕ್ಲರ್ ಮತ್ತು ನೀರಿನ ಗುಂಡಿಗಳ ಆಸರೆ

ಮೃಗಾಲಯದ ವ್ಯಾಪ್ತಿಯಲ್ಲಿ ವಾತಾವರಣವನ್ನು ತಂಪಾಗಿರಿಸಲು ಅಲ್ಲಲ್ಲಿ ಸ್ಪ್ರಿಂಕ್ಲರ್‌ಗಳನ್ನು (Sprinklers) ಅಳವಡಿಸಲಾಗಿದೆ. ಹುಲಿ, ಸಿಂಹ, ಚಿರತೆ ಮತ್ತು ಜಿರಾಫೆಗಳಂತಹ ಪ್ರಾಣಿಗಳು ಇರುವ ಕಡೆಗಳಲ್ಲಿ ಸದಾ ನೀರು ಚಿಮ್ಮುವಂತೆ ಮಾಡಲಾಗುತ್ತಿದ್ದು, ಪ್ರಾಣಿಗಳು ಇವುಗಳ ಕೆಳಗೆ ನಿಂತು ಮೈ ನೆನೆಸಿಕೊಳ್ಳುತ್ತಿವೆ. ಅಷ್ಟೇ ಅಲ್ಲದೆ, ಪ್ರಾಣಿಗಳ ಆವರಣದಲ್ಲಿರುವ ಗುಂಡಿಗಳಲ್ಲಿ ನೀರು ತುಂಬಿಸಲಾಗಿದ್ದು, ಬಿಸಿಲಿನ ತಾಪ ತಾಳಲಾರದೆ ಪ್ರಾಣಿಗಳು ಈ ನೀರಿನಲ್ಲಿ ಈಜುತ್ತಾ, ಮುಳುಗುತ್ತಾ ದಣಿವಾರಿಸಿಕೊಳ್ಳುತ್ತಿವೆ.

ಡಿಹೈಡ್ರೇಶನ್ ತಡೆಗೆ ಕ್ರಮ

ಪ್ರಾಣಿಗಳ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗಿ ಡಿಹೈಡ್ರೇಶನ್ (Dehydration) ಸಮಸ್ಯೆ ಉಂಟಾಗಬಾರದು ಎಂಬ ದೃಷ್ಟಿಯಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ನಾಯ್ಕ ತಿಳಿಸಿದ್ದಾರೆ. ಪ್ರಾಣಿಗಳು ಮರದ ನೆರಳಿನಲ್ಲಿ ವಿಶ್ರಮಿಸಲು ಪೂರಕವಾದ ವಾತಾವರಣವನ್ನೂ ನಿರ್ಮಿಸಲಾಗಿದೆ. ಈ ಬಾರಿ ಮೃಗಾಲಯಕ್ಕೆ ಹೊಸ ಅತಿಥಿಗಳಾಗಿ ಹಲವು ಪ್ರಾಣಿಗಳು ಆಗಮಿಸಿದ್ದು, ಅವುಗಳನ್ನು ನೋಡಲು ಬರುವ ಪ್ರವಾಸಿಗರು ಕೂಡ ಪ್ರಾಣಿಗಳಿಗಾಗಿ ಮಾಡಿರುವ ಈ ‘ಕೂಲ್’ ವ್ಯವಸ್ಥೆ ಕಂಡು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಉಷ್ಣ ಅಲೆಯ ಜೊತೆಗೆ ಗುಡುಗು ಸಹಿತ ಮಳೆಯ ಅಬ್ಬರ!

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿಂದು ಬಿರುಗಾಳಿಯ ಜೊತೆಗೆ ಆಲಿಕಲ್ಲು ಮಳೆಯ ಅಬ್ಬರ! – Kannada News | Karnataka Weather Forecast: Hailstorm in North and south Karnataka, Rain in Bengaluru

ರಾಜ್ಯದಲ್ಲಿಂದು ಬಿರುಗಾಳಿಯ ಜೊತೆಗೆ ಆಲಿಕಲ್ಲು ಮಳೆಯ ಅಬ್ಬರ!

ಬೆಂಗಳೂರು, ಏಪ್ರಿಲ್ 29: ಉಷ್ಣ ಅಲೆಯಿಂದ ಬೇಸತ್ತಿದ್ದ ಕರಾವಳಿಯಲ್ಲಿಂದು ಗುಡುಗು ಸಹಿತ ಮಳೆಯ (Karnataka Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರೊಂದಿಗೆ ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯ ಅಬ್ಬರ ಜೋರಾಗಿಯೇ ಇರಲಿದ್ದು, ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಇನ್ನೂ 2-3 ದಿನಗಳ ಕಾಲ ರಾಜ್ಯದಲ್ಲಿ ಆಲಿಕಲ್ಲು ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಆಲಿಕಲ್ಲು ಮಳೆಯ ಅಲರ್ಟ್​!

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕಳೆದ ಹಲವು ದಿನಗಳಿಂದ ಹೀಟ್ ವೇವ್ ಅಲರ್ಟ್​ ಇತ್ತು. ಅದರ ಜೊತೆಗೆ ಸಾಧಾರಣ ಮಳೆಯೂ ಅಲ್ಲಲ್ಲಿ ಕಂಡು ಬರುತ್ತಿತ್ತು. ಆದರೆ ಇಂದು ಬಿಸಿ ಬಿಸಿಯಾಗಿದ್ದ ಕಡಲ ನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ರಾಯಚೂರು, ಯಾದಗಿರಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದ ಗಾಳಿಯ ಜೊತೆಗೆ ಗುಡುಗು ಸಹಿತ ಆಲಿಕಲ್ಲು ಮಳೆ ರಭಸದಿಂದ ಸುರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ಎಲ್ಲೆಡೆ ಶುಷ್ಕ ಹವಾಮಾನ ಇರಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆ ಸೇರಿದಂತೆ ಉಳಿದೆಲ್ಲ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಕೋಲಾರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ವೇಗವಾದ ಗಾಳಿ 40-50 ಕಿ.ಮೀ ಬೀಸುವ ಸಾಧ್ಯತೆಯಿದೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಹಾಗೂ 30-40 ಕಿ.ಮೀ ವೇಗದ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:25 am, Wed, 29 April 26

Source link

ಬೆಂಗಳೂರಿನ 5 ನಗರ ಪಾಲಿಕೆಗಳ ಪೈಕಿ ಕೆಲವು ವಿಲೀನ? ಆರ್ಥಿಕ ಸಂಕಷ್ಟದಲ್ಲಿ ಗ್ರೇಟರ್ ಬೆಂಗಳೂರು! – Kannada News | Greater Bengaluru Authority Faces Financial Crisis: Govt Mulls Merging 5 City Corporations Due to Revenue Shortage

ಬೆಂಗಳೂರು, ಏಪ್ರಿಲ್ 29: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (BBMP) ವಿಭಜಿಸಿ, ಸರ್ಕಾರವು ಐದು ನಗರ ಪಾಲಿಕೆಗಳುಳ್ಳ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು (GBA) ಅಸ್ತಿತ್ವಕ್ಕೆ ತಂದಿತ್ತು. ಆದರೆ, ಈ ಹೊಸ ವ್ಯವಸ್ಥೆಯಲ್ಲಿ ಈಗ ಆರ್ಥಿಕ ಸಂಕಷ್ಟದ ಭೀತಿ ಎದುರಾಗಿದ್ದು, ಐದು ಪಾಲಿಕೆಗಳ ಸಂಖ್ಯೆಯನ್ನು ಕಡಿತಗೊಳಿಸಿ ಅಥವಾ ವಿಲೀನ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೆರೆಮರೆಯ ಚರ್ಚೆಗಳು ಆರಂಭವಾಗಿವೆ.

ವೇತನಕ್ಕೂ ಇಲ್ಲದ ಹಣ

ಬಿಬಿಎಂಪಿ ಇತಿಹಾಸದ ಪುಟ ಸೇರಿದ ಬಳಿಕ ಜನ್ಮತಾಳಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಡಿಯಲ್ಲಿರುವ ಐದು ನಗರ ಪಾಲಿಕೆಗಳ ಪೈಕಿ ಕೆಲವು ಪಾಲಿಕೆಗಳಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ವಿಶೇಷವಾಗಿ ಪಶ್ಚಿಮ ನಗರ ಪಾಲಿಕೆ ಸೇರಿದಂತೆ ಒಂದಷ್ಟು ಪಾಲಿಕೆಗಳಲ್ಲಿ ಸಿಬ್ಬಂದಿಯ ವೇತನ ಪಾವತಿಸಲು ಕೂಡ ಆದಾಯದ ಕೊರತೆ ಎದುರಾಗಿದೆ. ಸ್ವಂತ ಆಧಾರದ ಮೇಲೆ ಆರ್ಥಿಕ ವೆಚ್ಚ ಸರಿದೂಗಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದ್ದು, ಅನುದಾನಕ್ಕಾಗಿ ಪಾಲಿಕೆಗಳು ಈಗಲೂ ಸರ್ಕಾರವನ್ನೇ ನಂಬಿ ಕುಳಿತುಕೊಳ್ಳುವಂತಾಗಿದೆ.

ಆಯುಕ್ತರು ಮತ್ತು ವಿರೋಧ ಪಕ್ಷದ ನಿಲುವು

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಎಂ. ಮಹೇಶ್ವರ್ ರಾವ್ ಅವರ ಪ್ರಕಾರ, ಪಶ್ಚಿಮ ನಗರ ಪಾಲಿಕೆಯ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಅನುದಾನಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಪಾಲಿಕೆಗಳ ಸಂಖ್ಯೆ ಇಳಿಕೆ ಅಥವಾ ವಿಲೀನದ ಬಗ್ಗೆ ಸರ್ಕಾರವೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಮತ್ತೊಂದೆಡೆ, ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್. ರಮೇಶ್ ಅವರು, ಈ ಜಿಬಿಎ ರಚನೆಯೇ ಅವೈಜ್ಞಾನಿಕ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ, ಮೆಟ್ರೋದಲ್ಲಿ ಸಂಚಾರ ಮಾಡಲು ಒಂದೇ ಸ್ಮಾರ್ಟ್ ಕಾರ್ಡ್ ಸಾಕು! ಶೀಘ್ರದಲ್ಲೇ ಹೊಸ ವ್ಯವಸ್ಥೆ

ಅಭಿವೃದ್ಧಿಯ ಹತ್ತಾರು ಭರವಸೆಗಳೊಂದಿಗೆ ಜಾರಿಗೆ ಬಂದ ಈ ಹೊಸ ವ್ಯವಸ್ಥೆಯಲ್ಲಿ ಆದಾಯದ ಕೊರತೆ ಕಂಡುಬಂದಿರುವುದು ಸರ್ಕಾರಕ್ಕೆ ಮುಜುಗರ ಉಂಟುಮಾಡಿದೆ. ಆರ್ಥಿಕ ಸ್ಥಿತಿ ಸುಧಾರಿಸಲು ಸರ್ಕಾರ ಪಾಲಿಕೆಗಳ ವಿಲೀನಕ್ಕೆ ಮುಂದಾಗುತ್ತದೆಯೇ ಎಂದು ಕಾದು ನೋಡಬೇಕಿದೆ.

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

West Bengal Election 2026: 142 ಕ್ಷೇತ್ರಗಳು, 1448 ಅಭ್ಯರ್ಥಿಗಳು, 3.21 ಕೋಟಿ ಮತದಾರರು, ಪಶ್ಚಿಮ ಬಂಗಾಳದಲ್ಲಿ ಇಂದು ಎರಡನೇ ಹಂತದ ಮತದಾನ – Kannada News | West Bengal Election 2026: Phase 2 Voting Begins, 3.21 Crore Voters Decide Fate

ಕೋಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳ(West Bengal)ದ ಹದಿನಾರನೇ ವಿಧಾನಸಭೆ ಚುನಾವಣೆಯ ಅಬ್ಬರದ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಈಗ ಎಲ್ಲರ ಕಣ್ಣು ಇಂದಿನ ಮತದಾನದ ಮೇಲೆ ನೆಟ್ಟಿದೆ. 142 ಕ್ಷೇತ್ರಗಳಲ್ಲಿ ನಡೆಯಲಿರುವ ಈ ಅಂತಿಮ ಹಂತದ ಚುನಾವಣೆಯು ರಾಜ್ಯದ ಮುಂದಿನ ಸರ್ಕಾರ ಯಾರದ್ದು ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ.

ಪ್ರಚಾರದ ಅಂತಿಮ ದಿನದಂದು ಉತ್ತರ 24 ಪರಗಣದ ಜಗತ್‌ದಲ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ಗೆಲುವಿನ ಬಗ್ಗೆ ಅಚಲ ವಿಶ್ವಾಸ ವ್ಯಕ್ತಪಡಿಸಿದ್ದರು. ಮುಂದಿನ ತಿಂಗಳು ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ನಾನು ಖಂಡಿತ ಮತ್ತೆ ಬರುತ್ತೇನೆ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದರು.

142 ಕ್ಷೇತ್ರಗಳಿದ್ದು ಅದರಲ್ಲಿ ನಾಡಿಯಾ, ಪುರ್ಬಾ ಬರ್ಧಮಾನ್, ಹೌರಾ, ಹೂಗ್ಲಿ, ಕೋಲ್ಕತ್ತಾ ಸೇರಿ 7 ಜಿಲ್ಲೆಗಳಿವೆ. ಒಟ್ಟು 1,448 ಮಂದಿ ಕಣದಲ್ಲಿದ್ದಾರೆ. 3.21 ಕೋಟಿಗೂ ಹೆಚ್ಚು ಮತದಾರರು ಅರ್ಹರಾಗಿದ್ದಾರೆ ಅದರಲ್ಲಿ 1.64 ಕೋಟಿ ಪುರುಷರು, 1.57 ಕೋಟಿ ಮಹಿಳೆಯರು ಮತ್ತು 792 ತೃತೀಯ ಲಿಂಗಿಗಳಿದ್ದಾರೆ.

ಮತ್ತಷ್ಟು ಓದಿ:  Video: ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ

ಮೊದಲ ಹಂತದ ಚುನಾವಣೆಯಲ್ಲಿ (ಏಪ್ರಿಲ್ 23) ದಾಖಲೆಯ ಶೇ. 93.19 ರಷ್ಟು ಮತದಾನವಾಗಿದ್ದು, ಅದನ್ನು ಮೀರಿಸುವ ಉತ್ಸಾಹ ಎರಡನೇ ಹಂತದಲ್ಲಿ ಕಂಡುಬರುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಕೇಂದ್ರ ಪಡೆಗಳ 2,407 ಕಂಪನಿಗಳನ್ನು ನಿಯೋಜಿಸಲಾಗಿದೆ. ರಾಜ್ಯ ಮತ್ತು ಕೋಲ್ಕತ್ತಾ ಪೊಲೀಸರು ಕೂಡ ಬಿಗಿ ಭದ್ರತೆಯಲ್ಲಿ ಭಾಗಿಯಾಗಿದ್ದಾರೆ.

ಭ್ರಷ್ಟಾಚಾರ, ಮಹಿಳಾ ಸುರಕ್ಷತೆ ಮತ್ತು ಕೈಗಾರಿಕೆಗಳ ಕುಸಿತದ ಬಗ್ಗೆ ಮಮತಾ ಬ್ಯಾನರ್ಜಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಬಿಜೆಪಿಯ ಆಜ್ಞೆಯಂತೆ ಚುನಾವಣಾ ಆಯೋಗ ಕೆಲಸ ಮಾಡುತ್ತಿದೆ ಎಂದು ಆರೋಪಿಸಿತು. ಅಲ್ಲದೆ, ಸುಮಾರು ಒಂದು ಕೋಟಿ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದೆ. ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಆಂತರಿಕ ಒಪ್ಪಂದವಿದೆ ಎಂದು ಆರೋಪಿಸಿ ಎರಡೂ ಪಕ್ಷಗಳ ವಿರುದ್ಧ ಕಿಡಿಕಾರಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕಣ್ಣೀರು ಹಾಕುತ್ತಾ ಸುದ್ದಿಗೋಷ್ಠಿಯಿಂದಲೇ ಎದ್ದು ನಡೆದ ಡಾಲಿ ಧನಂಜಯ್ ಚಿತ್ರದ ನಟಿ – Kannada News | Payal Rajput Emotional Exit: Head Bush Actress Walks Out of Press Meet Over Personal Questions

ಸುದ್ದಿಗೋಷ್ಠಿಯಲ್ಲಿ ಎದುರಾಗುವ ಎಲ್ಲಾ ಪ್ರಶ್ನೆಗಳನ್ನು ಎದುರಿಸಲು ಸೆಲೆಬ್ರಿಟಿಗಳಿಂದ ಸಾಧ್ಯವಾಗುವುದಿಲ್ಲ. ಅದರಲ್ಲೂ ವೈಯಕ್ತಿಕ ಪ್ರಶ್ನೆ ಬಂದರೆ ಕಲಾವಿದರು ಹೆದರುತ್ತಾರೆ. ಈಗ ಡಾಲಿ ಧನಂಜಯ್ ಅವರ ‘ಹೆಡ್​ ಬುಶ್’ ಸಿನಿಮಾ ನಾಯಕಿ ಪಾಯಲ್ ರಜಪೂತ್ (Payal Rajput) ಅವರಿಗೂ ಹೀಗೆಯೇ ಆಗಿದೆ. ವೈಯಕ್ತಿಕ ಚಾಲೆಂಜ್​​ಗಳ ಬಗ್ಗೆ ಅವರಿಗೆ ಪ್ರಶ್ನೆ ಎದುರಾಯಿತು. ಈ ಬಗ್ಗೆ ಮಾತನಾಡುತ್ತಾ ಅವರು ಕಣ್ಣೀರು ಹಾಕಿದರು. ಆ ಬಳಿಕ ವೇದಿಕೆಯಿಂದಲೇ ಎದ್ದು ಹೋದರು.

2018ರ ‘ಆರ್​ಎಕ್ಸ್ 100’ ಸಿನಿಮಾ ಮೂಲಕ ಪಾಯಲ್ ರಜಪೂತ್ ಅವರು ಜನಪ್ರಿಯತೆ ಪಡೆದುಕೊಂಡರು. ಈ ಸಿನಿಮಾದಲ್ಲಿ ಅವರು ಸಾಕಷ್ಟು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು. 2022ರಲ್ಲಿ ‘ಹೆಡ್ ಬುಷ್’ ಸಿನಿಮಾದಲ್ಲಿ ನಟಿಸಿದರು. ಡಾಲಿ ಧನಂಜಯ್ ಅವರು ಈ ಚಿತ್ರಕ್ಕೆ ಹೀರೋ ಆಗಿದ್ದರು. ಈ ಸಿನಿಮಾ ಅಂದುಕೊಂಡಷ್ಟು ದೊಡ್ಡ ಯಶಸ್ಸು ಕಾಣಲಿಲ್ಲ. ಈಗ ಅವರು ತೆಲುಗು, ತಮಿಳು ಸಿನಿಮಾ ರಂಗದಲ್ಲಿ ಬ್ಯುಸಿ ಇದ್ದಾರೆ.

ಈಗ ಪಾಯಲ್ ಮುಂಬರುವ ‘ಫಸ್ಟ್ ಟೈಮ್’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಪ್ರಮೋಷನ್ ವೇಳೆ ಅವರಿಗೆ ವೃತ್ತಿ ಜೀವನದ ಏರಿಳಿತ ಹಾಗೂ ಅವರು ವೈಯಕ್ತಿಕವಾಗಿ ಅನುಭವಿಸಿದ ತೊಂದರೆ ಬಗ್ಗೆ ಕೇಳಲಾಯಿತು. ಅವರಿಗೆ ಉಂಟಾಗಿದೆ ಎನ್ನಲಾದ ಖಿನ್ನತೆ ಬಗ್ಗೆಯೂ ಪ್ರಶ್ನಿಸಲಾಯಿತು. ಇದಕ್ಕೆ ಅವರು ಭಾವನಾತ್ಮಕವಾಗಿ ಉತ್ತರಿಸಿದರು.

ಪಾಯಲ್ ರಜಪೂತ್​​ಗೆ ತಂದೆಯೇ ಎಲ್ಲವೂ ಆಗಿದ್ದರಂತೆ. ಆದರೆ, ಇತ್ತೀಚೆಗೆ ಅವರು ನಿಧನ ಹೊಂದಿದರು. ಈ ಸಮಸ್ಯೆಯಿಂದ ಹೊರ ಬರಲು ಅವರು ಯೋಗ ಮಾಡುವುದನ್ನು ಅಭ್ಯಾಸ ಮಾಡಿಕೊಂಡರು. ಆ ಬಳಿಕ ಪಾಯಲ್ ಮಾತನಾಡುತ್ತಾ ಒಮ್ಮೆ ಸಮಾಧಾನ ಮಾಡಿಕೊಂಡರು. ನಂತರ ಅವರು ಮತ್ತೆ ಅಳಲು ಆರಂಭಿಸಿದರು. ಕೊನೆಗೆ ತಡೆಯಲಾರದೆ ಸುದ್ದಿಗೋಷ್ಠಿಯಿಂದಲೇ ಹೊರ ನಡೆದರು. ಇದು ಸಾಕಷ್ಟು ಚರ್ಚೆಗೆ ಕಾರಣ ಆಯಿತು.

ಇದನ್ನೂ ಓದಿ: ‘ಹೆಡ್​ ಬುಷ್’ ನಾಯಕಿಗೆ ಸಿಗುತ್ತಾ ಯಶಸ್ಸು? ದೊಡ್ಡ ನಿರೀಕ್ಷೆಯಲ್ಲಿದ್ದಾರೆ ಪಾಯಲ್ ರಜಪೂತ್

ಈ ಬಗ್ಗೆ ಚರ್ಚೆ ನಡೆಯುತ್ತಿದೆ. ವೈಯಕ್ತಿವಾಗ ಹಾಗೂ ಕಟುವಾದ ಪ್ರಶ್ನೆಗಳನ್ನು ಕೇಳುವ ಮೊದಲು ಸ್ವಲ್ಪ ಯೋಚಿಸಬೇಕು ಎಂದು ಅನೇಕರು ತೆಲುಗು ಮಾಧ್ಯಮದವರಿಗೆ ಬುದ್ಧಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

David Miller: ಕಿಲ್ಲರ್ ಮಿಲ್ಲರ್ ವಿಶ್ವ ದಾಖಲೆ

Source link

Horoscope Today: ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 29, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ದ್ವಾದಶಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ.

ರಾಹುಕಾಲವು ಮಧ್ಯಾಹ್ನ 12:16 ರಿಂದ 1:50 ರವರೆಗೆ ಇತ್ತು. ಸರ್ವಸಿದ್ಧಿ ಸಂಕಲ್ಪ ಕಾಲವು ಬೆಳಗ್ಗೆ 10:42 ರಿಂದ ಮಧ್ಯಾಹ್ನ 12:17 ರವರೆಗೆ ಇತ್ತು. ರವಿ ಗ್ರಹವು ಮೇಷ ರಾಶಿಯಲ್ಲಿದ್ದರೆ, ಚಂದ್ರ ಗ್ರಹವು ಕನ್ಯಾ ರಾಶಿಯ ಹಸ್ತ ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾನೆ ಎಂದು ಗುರೂಜಿ ವಿವರಿಸಿದ್ದಾರೆ.

 

 

 

Source link