All posts by nagaraj11081993

‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್ – Kannada News | Vinod Prabhakar talks about his new movie Balaramana Dinagalu during teaser launch

‘ಬಲರಾಮನ ದಿನಗಳು’ (Balaramana Dinagalu) ಸಿನಿಮಾದಲ್ಲಿ ನಟ ವಿನೋದ್ ಪ್ರಭಾಕರ್ ಅವರು ಮುಖ್ಯ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ವೇದಿಕೆ ಏರಿ ಮಾತನಾಡಿದರು. ಆದಷ್ಟು ಬೇಗ ಈ ಸಿನಿಮಾವನ್ನು ಬಿಡುಗಡೆ ಮಾಡಲು ತಯಾರಿ ನಡೆದಿದೆ. ‘ಸಿನಿಮಾ ಚೆನ್ನಾಗಿ ಇದ್ದರೆ ಜನರು ಖಂಡಿತಾ ನೋಡುತ್ತಾರೆ. ಅದಕ್ಕೆ ನನ್ನ ಮಾದೇವ ಸಿನಿಮಾ ಸಾಕ್ಷಿ. ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು. ಅದೇ ರೀತಿ ಬಲರಾಮನ ದಿನಗಳು ಸಿನಿಮಾ ಕೂಡ ಹಿಟ್ ಆಗುತ್ತದೆ. ದೊಡ್ಡ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗಿದೆ. ಇಂಥ ಸಿನಿಮಾ ಮಾಡಿದ ನಿರ್ಮಾಪಕರಿಗೆ ನಾನು ಧನ್ಯವಾದ ಹೇಳುತ್ತೇನೆ. ಅವರಿಗೆ ಈ ಸಿನಿಮಾದಿಂದ ದುಪ್ಪಟ್ಟು ಹಣ ಬರುತ್ತದೆ’ ಎಂದು ವಿನೋದ್ ಪ್ರಭಾಕರ್ (Vinod Prabhakar) ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ವಿನೋದ್ ಪ್ರಭಾಕರ್ ಮಾತನಾಡಿದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: ಪಂಜಾಬ್ ಕಿಂಗ್ಸ್​ಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್​ – Kannada News | IPL 2026: PBKS vs RR Match Highlights

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 40ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಜಯ ಸಾಧಿಸಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಆರ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡಕ್ಕೆ ಪ್ರಿಯಾಂಶ್ ಆರ್ಯ ಹಾಗೂ ಪ್ರಭ್​ಸಿಮ್ರಾನ್ ಸಿಂಗ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 37 ರನ್​ ಕಲೆಹಾಕಿದ ಬಳಿಕ ಪ್ರಿಯಾಂಶ್ ಆರ್ಯ (29) ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಕೂಪರ್ ಕೊನೊಲಿ 30 ರನ್​ಗಳ ಕೊಡುಗೆ ನೀಡಿದರು.

ಮತ್ತೊಂದೆಡೆ ಪ್ರಭ್​ಸಿಮ್ರಾನ್ ಸಿಂಗ್ 59 ರನ್ ಬಾರಿಸಿದರು. ಇನ್ನು ನಾಯಕ ಶ್ರೇಯಸ್ ಅಯ್ಯರ್ 30 ರನ್​ ಗಳಿಸಿ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಬಂದ ಮಾರ್ಕಸ್ ಸ್ಟೊಯಿನಿಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ಅಂತಿಮ ಓವರ್​ಗಳಲ್ಲಿ ಅಬ್ಬರಿಸಿದ ಸ್ಟೊಯಿನಿಸ್ ಕೇವಲ 22 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 62 ರನ್ ಬಾರಿಸಿದರು. ಈ ಸಿಡಿಲಬ್ಬರದ ಅರ್ಧಶತಕದ ನೆರವಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡ 20 ಓವರ್​ಗಳಲ್ಲಿ 222 ರನ್​ ಕಲೆಹಾಕಿತು.

223 ರನ್​ಗಳ ಗುರಿ:

223 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡಕ್ಕೆ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಅಬ್ಬರ ಶುರು ಮಾಡಿದ ವೈಭವ್ 16 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 43 ರನ್​ ಚಚ್ಚಿದರು. ಈ ಹಂತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚಿತ್ತು ಹೊರ ನಡೆದರು.

ವೈಭವ್ ಔಟಾಗುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್ ಶುರು ಮಾಡಿದ ಯಶಸ್ವಿ ಜೈಸ್ವಾಲ್ 27 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 51 ರನ್ ಬಾರಿಸಿದರು. ಇದರ ನಡುವೆ ಧ್ರುವ್ ಜುರೆಲ್ 16 ರನ್​ಗಳ ಕೊಡುಗೆ ನೀಡಿದ್ದರು.

ಆ ಬಳಿಕ ಬಂದ ರಿಯಾನ್ ಪರಾಗ್ 29 ರನ್​ಗಳನ್ನು ಬಾರಿಸಿ 14ನೇ ಓವರ್​ನ ಕೊನೆಯ ಎಸೆತದಲ್ಲಿ ಕ್ಯಾಚ್ ನೀಡಿದರು. ಅದರಂತೆ ಅಂತಿಮ 6 ಓವರ್​ಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 72 ರನ್​ಗಳ ಅವಶ್ಯಕತೆಯಿತ್ತು.

ಈ ಹಂತದಲ್ಲಿ ಜೊತೆಗೂಡಿದ ಡೊನೊವನ್ ಫೆರೇರಾ ಹಾಗೂ ಶುಭಂ ದುಬೆ 18 ಎಸೆತಗಳಲ್ಲಿ 37 ರನ್ ಬಾರಿಸಿದರು. ಪರಿಣಾಮ ಕೊನೆಯ 3 ಓವರ್​ಗಳಲ್ಲಿ 35 ರನ್​ಗಳು ಬೇಕಿದ್ದವು. ಈ ವೇಳೆ 18ನೇ ಓವರ್ ಎಸೆದ ಅರ್ಷದೀಪ್ ಸಿಂಗ್ ಬರೋಬ್ಬರಿ 15 ರನ್​ಗಳು ನೀಡಿದರು. ಅದರಂತೆ ಅಂತಿಮ 12 ಎಸೆತಗಳಲ್ಲಿ 18 ರನ್​ಗಳು ಬೇಕಿದ್ದವು.

ಲಾಕಿ ಫರ್ಗುಸನ್ ಎಸೆದ 19ನೇ ಓವರ್​ನಲ್ಲಿ ಆರ್​ಆರ್​ ಬ್ಯಾಟರ್​ಗಳಾದ ಫೆರೇರಾ ಹಾಗೂ ಶುಭಂ ದುಬೆ 16 ರನ್ ಕಲೆಹಾಕಿದರು. ಅಲ್ಲದೆ ಅಂತಿಮ ಓವರ್​ನಲ್ಲಿ 2 ರನ್​ ಬೇಕಿತ್ತು. ಮಾರ್ಕೊ ಯಾನ್ಸೆನ್ ಎಸೆದ 20ನೇ ಓವರ್​ನ 2ನೇ ಎಸೆತದಲ್ಲಿ ಡೊನೊವನ್ ಫೆರೇರಾ ಸಿಕ್ಸ್ ಸಿಡಿಸುವ ಮೂಲಕ 19.2 ಓವರ್​ಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು 228 ರನ್​ ಕಲೆಹಾಕಿತು. ಈ ಮೂಲಕ ಆರ್​ಆರ್ ಪಡೆ 6 ವಿಕೆಟ್​ಗಳ ಜಯ ಸಾಧಿಸಿದೆ.

ಇದರೊಂದಿಗೆ ಈ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ರಾಜಸ್ಥಾನ್ ರಾಯಲ್ಸ್ ತನ್ನದಾಗಿಸಿಕೊಂಡಿದೆ. ಅಂದರೆ ಮೊದಲಾರ್ಧದ 7 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ಒಂದೇ ಒಂದು ಪಂದ್ಯ ಸೋತಿರಲಿಲ್ಲ. ಇದೀಗ ದ್ವಿತೀಯಾರ್ಧದ ಮೊದಲ ಮ್ಯಾಚ್​ನಲ್ಲೇ ಪಂಜಾಬ್ ಪಡೆ ಸೋತಿದೆ. ಈ ಸೋಲಿನ ಹೊರತಾಗಿಯೂ ಪಂಜಾಬ್ ಕಿಂಗ್ಸ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ದಸುನ್ ಶಾನಕ, ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್, ಬ್ರಿಜೇಶ್ ಶರ್ಮಾ, ಯಶ್ ರಾಜ್ ಪೂಂಜಾ.

ಇದನ್ನೂ ಓದಿ: ಸೋಲಿನ ನಡುವೆಯೂ RCBಯ ಕಾಲೆಳೆದ ಡೆಲ್ಲಿ ಕ್ಯಾಪಿಟಲ್ಸ್ ಫ್ಯಾನ್ಸ್​!

ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಪ್ರಭ್​ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ಶ್ರೇಯಸ್ ಅಯ್ಯರ್ (ನಾಯಕ), ಕೂಪರ್ ಕೊನೊಲಿ, ಸೂರ್ಯಾಂಶ್ ಶೆಡ್ಗೆ, ನೆಹಾಲ್ ವಧೇರಾ, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಯಾನ್ಸೆನ್, ಲಾಕಿ ಫರ್ಗುಸನ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್.

Published On – 10:57 pm, Tue, 28 April 26

Source link

ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು

ಕುಲ್ಗಾಮ್, ಏಪ್ರಿಲ್ 28: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಪ್ರದೇಶದಲ್ಲಿ ಐ-20 ಕಾರು (Car Accident) ಮೂವರು ಶಾಲಾ ಬಾಲಕಿಯರಿಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬಳು ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೂವರನ್ನು ತಕ್ಷಣ ಚಿಕಿತ್ಸೆಗಾಗಿ ಖಾಜಿಗುಂಡ್‌ನ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಒಬ್ಬಳು ಬಾಲಕಿ ಗಾಯಗಳಿಂದ ಸಾವನ್ನಪ್ಪಿದ್ದಾಳೆ. ಮೃತಳನ್ನು ಫಾತಿಮಾ ಜಾನ್ ಎಂದು ಗುರುತಿಸಲಾಗಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಈ ರಾಶಿಯವರ ಜೀವನದಲ್ಲಿ ಊಹಿಸಲಾದ ಘಟನೆಗಳು ನಡೆಯಲಿದೆ: ಈ ವಿಚಾರದಲ್ಲಿ ಎಚ್ಚರ ಇರಲಿ – Kannada News | Virgo april 2026 horoscope career success health relationship challenges

ಕನ್ಯಾ ರಾಶಿಯವರಿಗೆ 2026ರ ಏಪ್ರಿಲ್ ತಿಂಗಳಲ್ಲಿ ಗ್ರಹಗತಿಗಳ ಬದಲಾವಣೆಯಿಂದ ಏನೆಲ್ಲ ಆಗಲಿವೆ ಎನ್ನುವುದನ್ನು ನೋಡಬಹುದು. ಅದರಲ್ಲೂ ರಾಶಿಯ ಅಧಿಪತಿ ನೀಚಸ್ಥಾನದಲ್ಲಿ ದೈಹಿಕ‌ ಆರೋಗ್ಯ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಜಾಗರೂಕತೆಯಿಂದ ಇರಲೇಬೇಕಾಗುವುದು.

ಗ್ರಹಗಳ ಸ್ಥಿತಿ ಮತ್ತು ಪ್ರಭಾವ

ಶುಭ ಫಲ ನೀಡುವ ಗ್ರಹ :

ಗುರುವು ನಿಮ್ಮ ರಾಶಿಯಿಂದ ಹತ್ತನೇ ಮನೆಯಲ್ಲಿ ಅಂದರೆ ಕರ್ಮ ಸ್ಥಾನದಲ್ಲಿ ಸಂಚರಿಸುತ್ತಿದ್ದಾನೆ. ಇದು ಉದ್ಯೋಗ ಮತ್ತು ವೃತ್ತಿಜೀವನದಲ್ಲಿ ಉತ್ತಮ ಬದಲಾವಣೆಗಳನ್ನು ತರುತ್ತದೆ. ಮೇಲಧಿಕಾರಿಗಳಿಂದ ಮೆಚ್ಚುಗೆ ಮತ್ತು ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆ ಇದೆ. ಇದು ನಿಮ್ಮ ಸಾಮಾಜಿಕ ಗೌರವವನ್ನು ಹೆಚ್ಚಿಸುತ್ತದೆ.

​ಶುಕ್ರನು ತನ್ನ ಸ್ವಂತ ರಾಶಿಯಾದ ವೃಷಭದಲ್ಲಿ, ನಿಮ್ಮ ಭಾಗ್ಯ ಸ್ಥಾನದಲ್ಲಿರುವುದು ಅತ್ಯಂತ ಶುಭಕರ. ಇದು ಅದೃಷ್ಟದ ಬಾಗಿಲು ತೆರೆಯುವಂತೆ ಮಾಡುತ್ತದೆ. ದೀರ್ಘಕಾಲದ ಪ್ರಯಾಣ, ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮತ್ತು ಆರ್ಥಿಕ ಲಾಭಕ್ಕೆ ಇದು ಪೂರಕವಾಗಿದೆ. ಮಹಿಳೆಯರಿಂದ ಅಥವಾ ಸಂಗಾತಿಯಿಂದ ಲಾಭವಿರುತ್ತದೆ.

​ಮಿಶ್ರ ಫಲ ನೀಡುವ ಗ್ರಹ :

ಸೂರ್ಯನು ಎಂಟನೇ ಮನೆಯಲ್ಲಿ ಉಚ್ಚನಾಗಿದ್ದರೂ, ಇದು ಅಷ್ಟಮ ರವಿ ಎನಿಸಿಕೊಳ್ಳುತ್ತಾನೆ. ಇದರಿಂದ ಆರೋಗ್ಯದಲ್ಲಿ ಏರುಪೇರು ಅಥವಾ ಅನಗತ್ಯ ಅಲೆದಾಟ ಉಂಟಾಗಬಹುದು. ಸರ್ಕಾರಿ ಕೆಲಸಗಳಲ್ಲಿ ಅಡೆತಡೆಗಳು ಎದುರಾಗಬಹುದು. ಈ ಸಮಯದಲ್ಲಿ ಕೋಪದ ಮೇಲೆ ನಿಯಂತ್ರಣವಿರಲಿ.

​ಶನಿ, ಕುಜ ಮತ್ತು ಬುಧ ಏಳನೇ ಮನೆಯಲ್ಲಿ ಈ ಮೂರು ಗ್ರಹಗಳ ಸಂಯೋಗವು ಸ್ವಲ್ಪ ಸವಾಲಿನಿಂದ ಕೂಡಿದೆ. ​ಶನಿ ಮತ್ತು ಕುಜರು ದಾಂಪತ್ಯ ಜೀವನದಲ್ಲಿ ಅಥವಾ ಪಾಲುದಾರಿಕೆ ವ್ಯವಹಾರದಲ್ಲಿ ಘರ್ಷಣೆಗಳು ಉಂಟಾಗಬಹುದು. ಸಂಗಾತಿಯ ಆರೋಗ್ಯದ ಬಗ್ಗೆ ಗಮನಹರಿಸುವುದು ಮುಖ್ಯ.

​ನಿಮ್ಮ ರಾಶ್ಯಾಧಿಪತಿಯಾದ ಬುಧನು ಏಳನೇ ಮನೆಯಲ್ಲಿ ನೀಚಾವಸ್ಥೆಯಲ್ಲಿರುವುದರಿಂದ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಗೊಂದಲ ಉಂಟಾಗಬಹುದು. ಚರ್ಮದ ಸಮಸ್ಯೆ ಅಥವಾ ನರಗಳ ದೌರ್ಬಲ್ಯ ಕಾಡಬಹುದು.

ಗುರು ಮತ್ತು ಶುಕ್ರನ ಬಲವಿರುವುದರಿಂದ ಹಣಕಾಸಿನ ಹರಿವು ಚೆನ್ನಾಗಿರುತ್ತದೆ. ಆದರೆ, ಬುಧ ನೀಚನಾಗಿರುವುದರಿಂದ ದೊಡ್ಡ ಹೂಡಿಕೆ ಮಾಡುವ ಮುನ್ನ ಅನುಭವಸ್ಥರ ಸಲಹೆ ಪಡೆಯಿರಿ. ರವಿ ಮತ್ತು ಕುಜನ ಪ್ರಭಾವದಿಂದ ರಕ್ತದೊತ್ತಡ ಅಥವಾ ಉಷ್ಣ ಸಂಬಂಧಿ ಕಾಯಿಲೆಗಳ ಬಗ್ಗೆ ಎಚ್ಚರವಿರಲಿ.

​ಪ್ರತಿದಿನ ವಿಷ್ಣು ಸಹಸ್ರನಾಮ ಪಠಿಸುವುದು ಅಥವಾ ಕೇಳುವುದು ಬುಧನ ದೋಷವನ್ನು ಕಡಿಮೆ ಮಾಡುತ್ತದೆ. ​ಶನಿ ಮತ್ತು ಕುಜನ ಶಾಂತಿಗಾಗಿ ಶನಿವಾರದಂದು ಆಂಜನೇಯ ಸ್ವಾಮಿಯ ದರ್ಶನ ಮಾಡಿ.

ಏಪ್ರಿಲ್ ತಿಂಗಳು ನಿಮಗೆ ವೃತ್ತಿಜೀವನದಲ್ಲಿ ಯಶಸ್ಸನ್ನು ನೀಡಿದರೂ, ವೈಯಕ್ತಿಕ ಸಂಬಂಧ ಮತ್ತು ಆರೋಗ್ಯದ ವಿಷಯದಲ್ಲಿ ಹೆಚ್ಚಿನ ಸಂಯಮ ತಂದುಕೊಳ್ಳಿ.

– ಲೋಹಿತ ಹೆಬ್ಬಾರ್

Source link

ಇರಾನ್ ಯುದ್ಧದ ನಡುವೆ ತೈಲ ರಫ್ತು ಸಂಘಟನೆಯಾದ OPECನಿಂದ ಹೊರಬಂದ ಯುಎಇ – Kannada News | UAE announces to quit oil Exporting groups OPEC amid global energy crisis after Iran war

ನವದೆಹಲಿ, ಏಪ್ರಿಲ್ 28: ಜಾಗತಿಕ ತೈಲ ಬಿಕ್ಕಟ್ಟಿನ ಮಧ್ಯೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಪೆಟ್ರೋಲಿಯಂ ಪೂರೈಕೆ ಮಾಡುವ ಸಂಘಟನೆಗಳಾದ ಒಪೆಕ್ ಮತ್ತು ಒಪೆಕ್+ನಿಂದ ಯುಎಇ ಹಿಂದೆ ಸರಿದಿದೆ. ಯುಎಇಯ ಇಂಧನ ಸಚಿವ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಈ ನಿರ್ಧಾರವನ್ನು ಸ್ವತಂತ್ರವಾಗಿ ತೆಗೆದುಕೊಳ್ಳಲಾಗಿದೆ. ಸೌದಿ ಅರೇಬಿಯಾ (Saudi Arabia) ಸೇರಿದಂತೆ ಯಾವುದೇ ಇತರ ದೇಶದೊಂದಿಗೆ ನೇರ ಸಮಾಲೋಚನೆ ನಡೆಸಿಲ್ಲ. ನಾವು ನಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದೇವೆ” ಎಂದು ಹೇಳಿದ್ದಾರೆ.

ಇರಾನಿನ ಬೆದರಿಕೆಗಳು ಮತ್ತು ಹಡಗುಗಳ ಮೇಲಿನ ದಾಳಿಗಳಿಂದಾಗಿ OPEC ದೇಶಗಳು ಈಗಾಗಲೇ ಹಾರ್ಮುಜ್ ಜಲಸಂಧಿಯ ಮೂಲಕ ರಫ್ತುಗಳನ್ನು ಕಳುಹಿಸುವಲ್ಲಿ ತೊಂದರೆಗಳನ್ನು ಎದುರಿಸುತ್ತಿವೆ. ಹಾರ್ಮುಜ್ ಜಲಸಂಧಿಯು ಇರಾನ್ ಮತ್ತು ಒಮಾನ್ ನಡುವಿನ ಕಿರಿದಾದ ಚಾನಲ್ ಆಗಿದ್ದು, ವಿಶ್ವದ ಐದನೇ ಒಂದು ಭಾಗದಷ್ಟು ಕಚ್ಚಾ ತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲವನ್ನು ಈ ಮಾರ್ಗದ ಮೂಲಕ ಸಾಗಿಸಲಾಗುತ್ತದೆ. ಈಗಾಗಲೇ ಹಾರ್ಮುಜ್ ಜಲಸಂಧಿಯ ದಿಗ್ಬಂಧನವನ್ನು ಎದುರಿಸುತ್ತಿರುವ OPEC, ಯುಎಇಯ ಈ ಕ್ರಮದಿಂದ ದೊಡ್ಡ ಹಿನ್ನಡೆಯನ್ನು ಎದುರಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅಮೆರಿಕ-ಇರಾನ್ ನಡುವೆ ಶಾಂತಿ ಮಾತುಕತೆಯ ಪಾಕ್ ಪ್ರಯತ್ನ ವಿಫಲ; ಯುಎಸ್​ ನಿಯೋಗದ ಭೇಟಿಗೆ ಒಪ್ಪದ ಟೆಹ್ರಾನ್

ಯುಎಇಯ ಉತ್ಪಾದನಾ ನೀತಿ ಮತ್ತು ಅದರ ಪ್ರಸ್ತುತ ಮತ್ತು ಭವಿಷ್ಯದ ಸಾಮರ್ಥ್ಯದ ಸಮಗ್ರ ಪರಿಶೀಲನೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಮ್ಮ ರಾಷ್ಟ್ರೀಯ ಹಿತಾಸಕ್ತಿಗೆ ಕೊಡುಗೆ ನೀಡುವ ಮತ್ತು ಮಾರುಕಟ್ಟೆಯ ತಕ್ಷಣದ ಅಗತ್ಯಗಳನ್ನು ಪೂರೈಸುವ ನಮ್ಮ ಬದ್ಧತೆಯನ್ನು ಈ ನಿರ್ಧಾರ ಆಧರಿಸಿದೆ ಎಂದು ಯುಎಇ ಸರ್ಕಾರ ಹೇಳಿದೆ.

ತೈಲ ಬೆಲೆಗಳನ್ನು ಹೆಚ್ಚಿಸುವ ಮೂಲಕ ಜಗತ್ತಿನ ಉಳಿದ ಭಾಗಗಳನ್ನು ದೋಚುತ್ತಿದೆ ಎಂದು ಆರೋಪಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಒಪೆಕ್ ನಿಂದ ಯುಎಇ ಹಿಂದೆ ಸರಿದಿರುವುದು ದೊಡ್ಡ ಗೆಲುವಾಗಿದೆ. ರಷ್ಯಾ ಮತ್ತು ಸೌದಿ ಅರೇಬಿಯಾ ಪ್ರಾಬಲ್ಯ ಹೊಂದಿರುವ ಈ ಸಂಘಟನೆಯನ್ನು ದುರ್ಬಲಗೊಳಿಸಲು ಟ್ರಂಪ್ ಈಗಾಗಲೇ ಬಯಸಿದ್ದಾರೆ.

ಇದನ್ನೂ ಓದಿ: 2 ತಿಂಗಳಿಂದ ಮುಚ್ಚಿದ್ದ ಇರಾನ್​ನ ಟೆಹ್ರಾನ್ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ಆರಂಭ

OPEC ಮತ್ತು OPEC ಪ್ಲಸ್ ಅನ್ನು ತೈಲ ಉತ್ಪಾದನೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ನೀತಿಯನ್ನು ರೂಪಿಸಲು 1960ರಲ್ಲಿ ಸ್ಥಾಪಿಸಲಾಯಿತು. ಆರಂಭದಲ್ಲಿ ಈ ಸಂಸ್ಥೆಯು ಇರಾಕ್, ಇರಾನ್, ಕುವೈತ್, ಸೌದಿ ಅರೇಬಿಯಾ ಮತ್ತು ವೆನೆಜುವೆಲಾಗಳನ್ನು ಒಳಗೊಂಡಿತ್ತು. ನಂತರ, ಅದರ ಸದಸ್ಯತ್ವ ವಿಸ್ತರಿಸಿತು. ಪ್ರಸ್ತುತ, ಇದು ಸೌದಿ ಅರೇಬಿಯಾ, ಇರಾಕ್, ಇರಾನ್, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಲಿಬಿಯಾ, ಇಂಡೋನೇಷ್ಯಾ, ಕುವೈತ್, ನೈಜೀರಿಯಾ ಮತ್ತು ವೆನೆಜುವೆಲಾಗಳನ್ನು ಒಳಗೊಂಡಿದೆ.

ಈ 12 ಸದಸ್ಯರನ್ನು ಹೊರತುಪಡಿಸಿ, OPEC ಪ್ಲಸ್ ದೇಶಗಳಲ್ಲಿ ರಷ್ಯಾ, ಅಜೆರ್ಬೈಜಾನ್, ಬಹ್ರೇನ್, ಬ್ರೂನಿ, ಕಝಾಕಿಸ್ತಾನ್, ಮಲೇಷ್ಯಾ, ಮೆಕ್ಸಿಕೊ, ಓಮನ್ ಮತ್ತು ದಕ್ಷಿಣ ಸುಡಾನ್ ಸೇರಿದಂತೆ ಇನ್ನೂ 10 ದೇಶಗಳಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಆಸ್ತಿ, ಸಂತಾನ ಭಾಗ್ಯ ಎಲ್ಲವೂ ಸಿಗಲಿದೆ: ಈ ರಾಶಿಯಲ್ಲಿ ಮೂರು ಗ್ರಹಗಳ ಸಂಚಾರ – Kannada News | Leo Horoscope April 2026: Unlocking Prosperity and Overcoming Obstacles with Astrology

ಏಪ್ರಿಲ್ 2026ರಲ್ಲಿ ಸಿಂಹ ರಾಶಿಯವರಿಗೆ ಮಘಾ, ಪೂರ್ವಾಫಲ್ಗುಣೀ, ಉತ್ತರಾಫ್ಗುಣೀ 1ನೇ ಪಾದಗಳಲ್ಲಿ ಜನಿಸಿದವರಿಗೆ ಹೇಗಿರಲಿವೆ ಎಂಬುದನ್ನು ವಿಸ್ತಾರವಾಗಿ ತಿಳಿಯಬಹುದು. ರಾಶಿಯ ಅಧಿಪತಿ ಉಚ್ಚನಾದ ಕಾರಣ ವಿಶೇಷ ಅಂಶಗಳು ರಾಶಿಯವರದ್ದಾಗಲಿದೆ.

​ಶುಭ ಫಲ ನೀಡುವ ಗ್ರಹಗಳು :

ಗುರುವು ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ನಿಮಗೆ ಅತ್ಯಂತ ದೊಡ್ಡ ವರದಾನ. ಇದು “ಲಾಭ ಸ್ಥಾನವಾದ್ದರಿಂದ ನಿಮ್ಮ ಆದಾಯ ಹೆಚ್ಚಾಗಲಿದೆ. ಹಳೆಯ ಹೂಡಿಕೆಗಳಿಂದ ಲಾಭ ಸಿಗಲಿದೆ. ದೀರ್ಘಕಾಲದ ಕನಸುಗಳು ನನಸಾಗುವ ಸಮಯವಿದು. ಸಂತಾನ ಭಾಗ್ಯ ಅಥವಾ ಮಕ್ಕಳಿಂದ ಶುಭ ವಾರ್ತೆ ಕೇಳುವಿರಿ.

​ನಿಮ್ಮ ರಾಶ್ಯಾಧಿಪತಿಯಾದ ಸೂರ್ಯನು ಮೇಷದಲ್ಲಿ ಉಚ್ಚ ಸ್ಥಿತಿಯಲ್ಲಿ ಇರುವುದು ಅದ್ಭುತ ಫಲ ನೀಡುತ್ತದೆ. ಇದು ಪಿತೃಾರ್ಜಿತ ಆಸ್ತಿಯ ಲಾಭ, ತಂದೆಯ ಕಡೆಯಿಂದ ಸಹಕಾರ ಮತ್ತು ಸಮಾಜದಲ್ಲಿ ಗೌರವವನ್ನು ತಂದುಕೊಡುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದ್ದು, ಉನ್ನತ ಅಧಿಕಾರ ಪ್ರಾಪ್ತಿಯ ಯೋಗವಿದೆ.

​ಶುಕ್ರನು ವೃಷಭ ರಾಶಿಯಲ್ಲಿ ಸ್ವಕ್ಷೇತ್ರದಲ್ಲಿ ಇರುವುದರಿಂದ ವೃತ್ತಿ ಜೀವನದಲ್ಲಿ ಐಷಾರಾಮಿ ವಾತಾವರಣವಿರುತ್ತದೆ. ಕಲೆ, ಮಾಧ್ಯಮ ಅಥವಾ ವ್ಯಾಪಾರದಲ್ಲಿ ಇರುವವರಿಗೆ ದೊಡ್ಡ ಮಟ್ಟದ ಪ್ರಗತಿ ಕಂಡುಬರುತ್ತದೆ. ಕೆಲಸದ ಸ್ಥಳದಲ್ಲಿ ಸ್ತ್ರೀ ವರ್ಗದವರಿಂದ ಸಹಕಾರ ಸಿಗಲಿದೆ.

​ಅಶುಭ ಫಲ ನೀಡುವ ಗ್ರಹಗಳು

​ಸಿಂಹ ರಾಶಿಯವರಿಗೆ ಪ್ರಸ್ತುತ ಅಷ್ಟಮ ಶನಿ ದಶೆ ನಡೆಯುತ್ತಿದೆ. ಮೀನ ರಾಶಿಯಲ್ಲಿ ಶನಿಯೊಂದಿಗೆ ಕುಜ ಮತ್ತು ಬುಧ ಸೇರಿರುವುದು ಸಂಕೀರ್ಣ ಪರಿಸ್ಥಿತಿ ಸೃಷ್ಟಿಸುತ್ತದೆ.

​ವಾಹನ ಚಾಲನೆಯಲ್ಲಿ ಅತಿ ಹೆಚ್ಚು ಎಚ್ಚರಿಕೆ ಅಗತ್ಯ. ಬುಧನು ಅಷ್ಟಮದಲ್ಲಿ ಇರುವುದರಿಂದ ನಿಮ್ಮ ಮಾತು ತಪ್ಪಾಗಿ ಅರ್ಥೈಸಲ್ಪಡಬಹುದು. ರಕ್ತದೊತ್ತಡ ಅಥವಾ ಶಸ್ತ್ರಚಿಕಿತ್ಸೆಯಂತಹ ಸಾಧ್ಯತೆಗಳಿರುವುದರಿಂದ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

​ರಾಹು-ಕೇತುಗಳ ಪ್ರಭಾವ: ಇವು ನಿಮ್ಮ ಜೀವನದ ಸ್ಥಿರತೆಯಲ್ಲಿ ಸಣ್ಣಪುಟ್ಟ ಗೊಂದಲಗಳನ್ನು ಉಂಟುಮಾಡಬಹುದು, ವಿಶೇಷವಾಗಿ ಹಣಕಾಸಿನ ವ್ಯವಹಾರಗಳಲ್ಲಿ ಅಪರಿಚಿತರನ್ನು ನಂಬಲೇಬೇಡಿ.

ವೃತ್ತಿ ಮತ್ತು ಆರ್ಥಿಕತೆ:

ಗುರುವು ಲಾಭ ಸ್ಥಾನದಲ್ಲಿ ಇರುವುದರಿಂದ ಆರ್ಥಿಕ ಪರಿಸ್ಥಿತಿ ಸದೃಢವಾಗಿರುತ್ತದೆ. ಆದರೆ, ಅಷ್ಟಮದಲ್ಲಿ ಶನಿ-ಕುಜರ ಸಂಯೋಗವಿರುವುದರಿಂದ ಶತ್ರುಗಳ ಕಾಟ ಅಥವಾ ಕೆಲಸದಲ್ಲಿ ಪಿತೂರಿಗಳು ನಡೆಯಬಹುದು. ನೀವು ಮಾಡುವ ಕೆಲಸದಲ್ಲಿ ಎಷ್ಟು ನಿಷ್ಠರಾಗಿದ್ದರೂ ಸಹ ಸಣ್ಣ ತಪ್ಪುಗಳನ್ನು ದೊಡ್ಡದು ಮಾಡಿ ತೋರಿಸುವ ಸಾಧ್ಯತೆ ಇರುತ್ತದೆ. ವ್ಯಾಪಾರಸ್ಥರು ಈ ತಿಂಗಳು ಹೊಸ ಪಾಲುದಾರಿಕೆಯನ್ನು ಮಾಡಿಕೊಳ್ಳದಿದ್ದರೆ ಒಳಿತು.

​ಕುಟುಂಬ ಮತ್ತು ದಾಂಪತ್ಯ:

ಭಾಗ್ಯದಲ್ಲಿ ಸೂರ್ಯನಿರುವುದರಿಂದ ಕುಟುಂಬದ ಹಿರಿಯರ ಬೆಂಬಲ ಸದಾ ನಿಮ್ಮ ಮೇಲಿರುತ್ತದೆ. ಮನೆಯಲ್ಲಿ ಶುಭ ಕಾರ್ಯಗಳು ಜರುಗುವ ಸಾಧ್ಯತೆ ಇದೆ. ಆದರೆ, ಶನಿಯ ದೃಷ್ಟಿಯಿಂದಾಗಿ ಸಂಗಾತಿಯೊಂದಿಗೆ ಸಣ್ಣಪುಟ್ಟ ವೈಮನಸ್ಸು ಉಂಟಾಗಬಹುದು. ಪರಸ್ಪರ ಸಂಶಯ ಮಾಡುವುದನ್ನು ಬಿಟ್ಟು ತಾಳ್ಮೆಯಿಂದ ವರ್ತಿಸುವುದು ಅಗತ್ಯ.

​ಶಿಕ್ಷಣ ಮತ್ತು ಆರೋಗ್ಯ:

ವಿದ್ಯಾರ್ಥಿಗಳಿಗೆ ಈ ತಿಂಗಳು ಹೆಚ್ಚಿನ ಶ್ರಮದ ಅಗತ್ಯವಿದೆ. ಬುಧನು ಅಷ್ಟಮದಲ್ಲಿ ಇರುವುದರಿಂದ ಏಕಾಗ್ರತೆಯ ಕೊರತೆ ಕಾಡಬಹುದು. ಆರೋಗ್ಯದ ವಿಷಯದಲ್ಲಿ ಉದರ ಸಂಬಂಧಿ (ಹೊಟ್ಟೆಯ) ಸಮಸ್ಯೆ ಅಥವಾ ಮೂಳೆ ನೋವು ಕಾಣಿಸಿಕೊಳ್ಳಬಹುದು. ಮಸಾಲೆಯುಕ್ತ ಆಹಾರದಿಂದ ದೂರವಿರುವುದು ಉತ್ತಮ.

​ಈ ತಿಂಗಳ ಅಶುಭ ಫಲಗಳನ್ನು ತಗ್ಗಿಸಲು ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆ ಮಾಡಿ ಅಥವಾ ಮಂಗಳವಾರ ಸುಬ್ರಹ್ಮಣ್ಯ ಭುಜಂಗ ಪಠಿಸಿ. ಪ್ರತಿದಿನ ಬೆಳಗ್ಗೆ ಸೂರ್ಯ ನಮಸ್ಕಾರ ಮತ್ತು ಆದಿತ್ಯ ಹೃದಯ ಸ್ತೋತ್ರ ಪಠಿಸಿ.

ಸಿಂಹ ರಾಶಿಯವರಿಗೆ ಈ ತಿಂಗಳು ಬರುವ ಲಾಭವನ್ನು ಅಷ್ಟಮ ಶನಿಯಿಂದ ರಕ್ಷಿಸಿಕೊಳ್ಳುವುದು ಮುಖ್ಯ ಉದ್ದೇಶವಾಗಿರಲಿ. ಹಣಕಾಸಿನ ವಿಷಯದಲ್ಲಿ ಜಯ ಸಿಕ್ಕರೂ, ಆರೋಗ್ಯ ಮತ್ತು ಸುರಕ್ಷತೆಯ ವಿಷಯದಲ್ಲಿ ಮೈಮರೆಯಬಾರದು.

– ಲೋಹಿತ ಹೆಬ್ಬಾರ್

Published On – 10:14 pm, Tue, 28 April 26

Source link

ಕಿಡ್ನಿಗೆ ಸಂಬಂಧಪಟ್ಟ ಸಮಸ್ಯೆ ಇರುವವರು ಎಳನೀರು ಕುಡಿಯುವುದು ಸುರಕ್ಷಿತವೇ? – Kannada News | High Potassium in Coconut Water: Warning for Kidney Patients

ಎಳನೀರು (Coconut Water) ಆರೋಗ್ಯಕ್ಕೆ ಅಮೃತವಿದ್ದಂತೆ. ಇದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದ ವಿಚಾರ. ಅದರಲ್ಲಿಯೂ ಬೇಸಿಗೆಯಲ್ಲಿ ಇದಕ್ಕಿರುವ ಬೇಡಿಕೆ ಬೇರೆಯಾವುದಕ್ಕೂ ಇರುವುದಿಲ್ಲ. ಇದು ದೇಹದ ನೀರಿನ ಕೊರತೆಯನ್ನು ನೀಗಿಸುವುದಲ್ಲದೆ, ಸೋಡಿಯಂ ಮತ್ತು ಪೊಟ್ಯಾಸಿಯಂ ಸೇರಿದಂತೆ ಪ್ರಮುಖ ಖನಿಜಗಳನ್ನು ಒದಗಿಸುತ್ತದೆ. ಆದರೆ ಕೆಲವರಿಗೆ ಕಿಡ್ನಿಗೆ ಸಂಬಂಧ ಪಟ್ಟ ಸಮಸ್ಯೆ ಇರುವವರು ಸೇವನೆ ಮಾಡುವುದು ಸುರಕ್ಷಿತವೇ ಅಥವಾ ಅಲ್ಲವೇ ಎಂಬ ಅನುಮಾನವಿರುತ್ತದೆ. ಅಂತಹ ಗೊಂದಲಗಳಿಗೆ ಆರೋಗ್ಯ ತಜ್ಞರು ನೀಡಿರುವ ಸ್ಪಷ್ಟನೆ ಇಲ್ಲಿದೆ.

ತಜ್ಞರ ಪ್ರಕಾರ, ಎಳನೀರು ಸಾಮಾನ್ಯವಾಗಿ ಆರೋಗ್ಯಕರವಾಗಿದ್ದರೂ, ಕಿಡ್ನಿಗೆ ಸಂಬಂಧ ಪಟ್ಟ ಸಮಸ್ಯೆ ಇರುವ ಎಲ್ಲರಿಗೂ ಇದು ಸೂಕ್ತವಲ್ಲ. ರೋಗಿಯ ಕಿಡ್ನಿ ಸಮಸ್ಯೆಯ ಹಂತ, ಕ್ರಿಯಾಟಿನಿನ್ ಮತ್ತು ಪೊಟ್ಯಾಸಿಯಂ ಮಟ್ಟದ ಮೇಲೆ ಇದರ ಬಳಕೆ ನಿರ್ಧರಿಸಬೇಕು. ರಕ್ತದಲ್ಲಿ ಪೊಟ್ಯಾಸಿಯಂ ಪ್ರಮಾಣ ಹೆಚ್ಚಿರುವ ಕಿಡ್ನಿ ರೋಗಿಗಳು ಎಳನೀರು ಕುಡಿಯುವುದನ್ನು ತಪ್ಪಿಸಬೇಕು. ಇದರಿಂದ ಪೊಟ್ಯಾಸಿಯಂ ಇನ್ನಷ್ಟು ಹೆಚ್ಚಾಗಿ, ದೇಹದಲ್ಲಿ ಅಪಾಯಕಾರಿ ಸ್ಥಿತಿ ಉಂಟಾಗಬಹುದು. ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಿರುವವರು ಕೂಡ ಇದನ್ನು ಸೇವಿಸುವ ಮೊದಲು ವೈದ್ಯರ ಸಲಹೆ ಪಡೆಯುವುದು ಅಗತ್ಯ.

ಯಾವಾಗ ಸುರಕ್ಷಿತ?

ಕಿಡ್ನಿ ಸಮಸ್ಯೆ ಗಂಭೀರವಾಗಿರದವರು ಮತ್ತು ಅವರ ಪೊಟ್ಯಾಸಿಯಂ ಹಾಗೂ ಕ್ರಿಯಾಟಿನಿನ್ ಮಟ್ಟಗಳು ಸಾಮಾನ್ಯವಾಗಿದ್ದರೆ, ಎಳನೀರು ಕುಡಿಯುವುದು ಪ್ರಯೋಜನಕಾರಿ. ಇದು ದೇಹವನ್ನು ಹೈಡ್ರೇಟ್ ಮಾಡುತ್ತದೆ ಮತ್ತು ಅಗತ್ಯ ಖನಿಜಗಳನ್ನು ಪೂರೈಸುತ್ತದೆ.

ಇದನ್ನೂ ಓದಿ: ಯಾವ ಕಾರಣಕ್ಕೂ ಈ ಆರೋಗ್ಯ ಸಮಸ್ಯೆ ಇರುವವರು ಎಳನೀರು ಕುಡಿಯಬಾರದು, ಅಧ್ಯಯನದಿಂದ ಆಘಾತಕಾರಿ ವರದಿ

ಕಿಡ್ನಿ ಆರೋಗ್ಯಕ್ಕೆ ಸಲಹೆಗಳು:

  • ದಿನಕ್ಕೆ 7– 8 ಗ್ಲಾಸ್ ನೀರು ಕುಡಿಯಿರಿ
  • ಉಪ್ಪಿನ ಸೇವನೆಯನ್ನು ನಿಯಂತ್ರಿಸಿ
  • ಫಾಸ್ಟ್ ಫುಡ್ ಸೇವನೆ ಮಾಡುವುದನ್ನು ತಪ್ಪಿಸಿ
  • ನಿಯಮಿತವಾಗಿ ವ್ಯಾಯಾಮ ಮಾಡಿ

ಒಟ್ಟಿನಲ್ಲಿ, ಕಿಡ್ನಿ ರೋಗಿಗಳು ತಮ್ಮ ಸ್ಥಿತಿಗೆ ಅನುಗುಣವಾಗಿ ವೈದ್ಯರ ಸಲಹೆಯೊಂದಿಗೆ ಮಾತ್ರ ಎಳನೀರನ್ನು ಕುಡಿಯುವುದು ಸುರಕ್ಷಿತ.

Source link

ರಾಯಚೂರು ಶೈಕ್ಷಣಿಕ ಕ್ರಾಂತಿ: SSLC ಫಲಿತಾಂಶದಲ್ಲಿ 32 ರಿಂದ 21ನೇ ಸ್ಥಾನಕ್ಕೆ ಜಿಗಿತ – Kannada News | SSLC Excellence: Raichur District Jumps Ranks, Felicitation for State Toppers

ರಾಯಚೂರು, ಏ.28: ಜಿಲ್ಲೆಯು ಇತ್ತೀಚೆಗೆ ಪ್ರಕಟವಾದ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಜಿಲ್ಲೆಯು ಹಿಂದಿನ 32ನೇ ಸ್ಥಾನದಿಂದ 21ನೇ ಸ್ಥಾನಕ್ಕೆ ಏರಿರುವುದು ಐತಿಹಾಸಿಕ ಮೈಲಿಗಲ್ಲು ಎಂದು ಪರಿಗಣಿಸಲಾಗಿದೆ. ಈ ಶೈಕ್ಷಣಿಕ ಸಾಧನೆಗಾಗಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸುಖದೇವ್ ಸೇರಿದಂತೆ ಐವರು ಉನ್ನತ ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತವು ಸನ್ಮಾನಿಸಿತು. ವಿದ್ಯಾರ್ಥಿಗಳು ತಮ್ಮ ಯಶಸ್ಸಿಗೆ ಪೋಷಕರು, ಶಿಕ್ಷಕರು ಮತ್ತು ಸಂಸ್ಥೆಗಳ ಬೆಂಬಲವನ್ನು ಶ್ಲಾಘಿಸಿದ್ದಾರೆ. ಎಂಡಿಆರ್ಎಸ್ ಅಡವಿಭಾವಿಯ ಪ್ರವೀಣ್ ಮತ್ತು ಬಿವಿಆರ್ ಶಾಲೆಯ ಸುಖದೇವ್ ಸೇರಿದಂತೆ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಯಾಣದಲ್ಲಿ ಕಠಿಣ ಪರಿಶ್ರಮ ಮತ್ತು ಪರಿಕಲ್ಪನಾ ತಿಳುವಳಿಕೆಯ ಮಹತ್ವವನ್ನು ಒತ್ತಿ ಹೇಳಿದರು. ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬರು ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೂ ಸಂಸ್ಥೆಗಳ ಬೆಂಬಲದ ಬಗ್ಗೆ ಭರವಸೆ ನೀಡಿದರು. ಜಿಲ್ಲಾಧಿಕಾರಿಗಳ ನಿರಂತರ ಪ್ರಯತ್ನ ಮತ್ತು ಅಧಿಕಾರಿಗಳ ಮೇಲಿನ ಒತ್ತಡದಿಂದ ಈ ಫಲಿತಾಂಶ ಸಾಧ್ಯವಾಗಿದೆ ಎಂದು ವಿದ್ಯಾರ್ಥಿಗಳು ಅಭಿಪ್ರಾಯಪಟ್ಟರು. ಇದು ರಾಯಚೂರಿನ ಶೈಕ್ಷಣಿಕ ಭವಿಷ್ಯಕ್ಕೆ ಪ್ರೇರಣೆಯಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಶಿ-ಪುಣೆ ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ – Kannada News | PM Modi Flagged Off New Amrit Bharat Trains Connecting Uttar Pradesh And Maharashtra

ನವದೆಹಲಿ, ಏಪ್ರಿಲ್ 28: ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ನಡುವಿನ ರೈಲು ಸಂಪರ್ಕಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು 2 ಹೊಸ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ವಾರಾಣಸಿಯಿಂದ ಪುಣೆ (ಹಡಪ್ಸರ್) ಮತ್ತು ಅಯೋಧ್ಯೆಯಿಂದ ಮುಂಬೈ (ಲೋಕಮಾನ್ಯ ತಿಲಕ್ ಟರ್ಮಿನಸ್) ರೈಲುಗಳು ಸಂಚರಿಸಲಿವೆ. ಉತ್ತರ ಪ್ರದೇಶದಲ್ಲಿ ವಾರಾಣಸಿ ಮತ್ತು ಅಯೋಧ್ಯೆ ಪ್ರಮುಖ ಆಧ್ಯಾತ್ಮಿಕ ತಾಣಗಳಾಗಿರುವುದರಿಂದ ವಾರ್ಷಿಕವಾಗಿ ಲಕ್ಷಾಂತರ ಭಕ್ತರನ್ನು ಆಕರ್ಷಿಸುವುದರಿಂದ ಮತ್ತು ಮುಂಬೈ ಮತ್ತು ಪುಣೆಯಂತಹ ಮಹಾನಗರಗಳಿಗೆ ರೈಲು ಸಂಪರ್ಕವು ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಬಲರಾಮನದ ದಿನಗಳು’ ಸಿನಿಮಾದಲ್ಲಿ ‘ಆ ದಿನಗಳು’ ಛಾಯೆ: ಟೀಸರ್ ಹೇಗಿದೆ ನೋಡಿ.. – Kannada News | Vinod Prabhakar starrer Balaramana Dinagalu Kannada movie teaser launch

ನಟ ವಿನೋದ್ ಪ್ರಭಾಕರ್ (Vinod Prabhakar) ಅವರು ‘ಬಲರಾಮನ ದಿನಗಳು’ ಸಿನಿಮಾದಲ್ಲಿ ನಟಿಸಿದ್ದು, ಈ ಚಿತ್ರದ ಬಗ್ಗೆ ಅವರ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಸಿನಿಮಾ ಹೇಗಿರಲಿದೆ ಎಂಬುದು ಈಗ ಟೀಸರ್ ಮೂಲಕ ಗೊತ್ತಾಗಿದೆ. ಈ ಮೊದಲು 2 ಹಾಡುಗಳ ಮೂಲಕ ಸುದ್ದಿಯಾಗಿದ್ದ ಈ ಚಿತ್ರತಂಡ ಈಗ ಟೀಸರ್ ಬಿಡುಗಡೆ ಮಾಡಿದೆ. 80ರ ದಶಕದ ಬೆಂಗಳೂರಿನ ಭೂತಕ ಲೋಕವನ್ನು ‘ಬಲರಾಮನ ದಿನಗಳು’ (Balaramana Dinagalu) ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ಕೆ.ಎಂ. ಚೈತನ್ಯ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಆ್ಯಕ್ಷನ್ ಸಿನಿಮಾಗಳ ಮೂಲಕ ಹೆಸರಾದವರು ವಿನೋದ್ ಪ್ರಭಾಕರ್. ಆದರೂ ಅವರು ಒಂದೇ ಬಗೆಯ ಪಾತ್ರಕ್ಕೆ ಸೀಮಿತವಾಗಿಲ್ಲ. ‘ಬಲರಾಮನ ದಿನಗಳು’ ಸಿನಿಮಾದಲ್ಲಿ ಅವರ ಪಾತ್ರ ಬೇರೆ ರೀತಿ ಇದೆ. ಟೀಸರ್ ನೋಡಿದ ಬಳಿಕ ಅದು ಸ್ಪಷ್ಟವಾಗಿದೆ. ಸಿನಿಮಾದ ನಿರ್ಮಾಪಕಿ ಪದ್ಮಾವತಿ ಅವರೇ ಟೀಸರ್ ಬಿಡುಗಡೆ ಮಾಡಿದರು. ಸಿನಿಮಾ ನಿರ್ಮಾಣಕ್ಕೆ ಕುಟುಂಬದವರು ನೀಡಿದ ಸಹಕಾರಕ್ಕೆ ಅವರು ಧನ್ಯವಾದ ತಿಳಿಸಿದರು. ಈ ಚಿತ್ರದಲ್ಲಿ ಅವರೊಂದು ಪಾತ್ರವನ್ನೂ ಮಾಡಿದ್ದಾರೆ.

‘ಬಲರಾಮನ ದಿನಗಳು’ ಟೀಸರ್:

‘ಮಾದೇವ’ ಸಿನಿಮಾದ ಬಳಿಕ ವಿನೋದ್ ಪ್ರಭಾಕರ್ ಅವರು ‘ಬಲರಾಮನ ದಿನಗಳು’ ಚಿತ್ರದಲ್ಲಿ ನಟಿಸಿದ್ದಾರೆ. ‘ಮಾದೇವ’ ಚಿತ್ರಕ್ಕಿಂತಲೂ ದೊಡ್ಡ ಯಶಸ್ಸು ಈ ಸಿನಿಮಾಗೆ ಸಿಗಲಿದೆ ಎಂಬ ಭರವಸೆ ಅವರಿಗೆ ಇದೆ. ವಿನೋದ್ ಪ್ರಭಾಕರ್ ಜೊತೆ ಆಶಿಷ್ ವಿದ್ಯಾರ್ಥಿ, ಅತುಲ್ ಕುಲಕರ್ಣಿ, ರಮೇಶ್ ಇಂದಿರಾ, ಶರತ್ ಲೋಹಿತಾಶ್ವ, ವಿನಯ್ ಗೌಡ, ರಜತ್, ಡ್ರ್ಯಾಗನ್ ಮಂಜು, ಪ್ರತಾಪ್ ನಾರಾಯಣ್, ಅಶ್ವಿನ್ ಹಾಸನ್ ಮಂತಾದ ಕಲಾವಿದರು ನಟಿಸಿದ್ದಾರೆ. ಪ್ರಿಯಾ ಆನಂದ್ ಅವರು ಈ ಚಿತ್ರಕ್ಕೆ ನಾಯಕಿ.

‘ಆ ದಿನಗಳು’ ಖ್ಯಾತಿಯ ಕೆ.ಎಂ. ಚೈತನ್ಯ ಅವರು ‘ಬಲರಾಮನ ದಿನಗಳು’ ಚಿತ್ರಕ್ಕೆ ನಿರ್ದೇಶನ ಮಾಡಿರುವುದರಿಂದ ಟೀಸರ್​ನಲ್ಲಿ ಆ ಫ್ಲೇವರ್ ಕಾಣಿಸಿದೆ. ತಮ್ಮೊಂದಿಗೆ ಕೈ ಜೋಡಿಸಿದ ಸಹಾಯಕ ನಿರ್ದೇಶಕರ ತಂಡವನ್ನು ಅವರು ವೇದಿಕೆಗೆ ಕರೆದು ಪರಿಚಯ ಮಾಡಿಸಿದರು. ಹಾಡುಗಳನ್ನು ಬರೆದ ಕವಿರಾಜ್, ನಾಗಾರ್ಜುನ ಶರ್ಮ, ಪ್ರಮೋದ್ ಮರವಂತೆ ಕೂಡ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ವಿನೋದ್ ಪ್ರಭಾಕರ್ ನಟನೆಯ ‘ಬಲರಾಮನ ದಿನಗಳು’ಗೆ ಗೃಹ ಸಚಿವರ ಶುಭಾಶಯ

‘18 ವರ್ಷಗಳ ಹಿಂದೆ ‘ಆ ದಿನಗಳು’ ಸಿನಿಮಾ ಮಾಡಿದ್ದೆ. ಆ ಚಿತ್ರದ ರೀತಿಯೇ ಈ ಸಿನಿಮಾ ಮೂಡಿಬರಬೇಕು ಎಂಬ ಆಶಯ ನಿರ್ಮಾಪಕರಿಗೆ ಇತ್ತು. ಆಶಿಷ್ ವಿದ್ಯಾರ್ಥಿ, ಅತುಲ್ ಕುಲಕರ್ಣಿ ಈ ಸಿನಿಮಾದಲ್ಲಿ ಇರಲೇಬೇಕು ಅಂತ ಒತ್ತಾಯಿಸಿದ್ದೇ ನಿರ್ಮಾಪಕರು. ಅವರಿಂದಾಗಿ ಈ ಸಿನಿಮಾ ಉತ್ತಮವಾಗಿ ಮೂಡಿಬಂದಿದೆ’ ಎಂದು ಕೆ.ಎಂ. ಚೈತನ್ಯ ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link