nagaraj11081993

Gold Rates: ಚಿನ್ನದ ಬೆಲೆ ಗ್ರಾಮ್​ಗೆ 75 ರೂ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 30: ಕಳೆದ ವಾರ ನಾಲ್ಕು ದಿನ ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ ಕಡಿಮೆಗೊಂಡಿದೆ. ಹತ್ತು ಗ್ರಾಮ್ ಚಿನ್ನದ ಬೆಲೆಯಲ್ಲಿ 750 ರೂಗಳಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಇನ್ನು, ಬೆಳ್ಳಿ ಬೆಲೆಯೂ ಯಥಾಸ್ಥಿತಿ ಹೊಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,35,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,47,280 ರುಪಾಯಿ ಆಗಿದೆ. 100 ಗ್ರಾಮ್…

Read More

IPL 2026: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಶುರುವಾಗಿದೆ. ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿಸಿದೆ. ಈ ಎರಡು ಅಮೋಘ ಗೆಲುವುಗಳ ಬೆನ್ನಲ್ಲೇ ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಈ ಬಾರಿಯ ಐಪಿಎಲ್​ನಲ್ಲಿ ಪ್ಲೇಆಫ್ ಪ್ರವೇಶಿಸಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ… ಕೊಲ್ಕತ್ತಾ ನೈಟ್ ರೈಡರ್ಸ್: ಕೆಕೆಆರ್ ತಂಡವು ಈ…

Read More

Video: ಗುಜರಾತ್​ನಲ್ಲಿ ದಲಿತರು, ಆದಿವಾಸಿಗಳ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ: ರಾಹುಲ್ ಗಾಂಧಿ

ಅಹಮದಾಬಾದ್, ಮಾರ್ಚ್​ 30: ಗುಜರಾತ್​ನಲ್ಲಿ ದಲಿತರು, ಆದಿವಾಸಿಗಳ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ ಎಂದು ಬಿಜೆಪಿ ಗುರಿಯಾಗಿಸಿಕೊಂಡು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ನ್ಯಾಯಕ್ಕಾಗಿ ಧ್ವನಿ ಎತ್ತುವುದಾಗಿ ಪ್ರತಿಜ್ಞೆ ಮಾಡಿದರು. ಪ್ರಸ್ತುತ ಆಡಳಿತದಲ್ಲಿ ಈ ಸಮುದಾಯಗಳ ವಿರುದ್ಧ ತಾರತಮ್ಯ ಹೆಚ್ಚುತ್ತಿದೆ ಎಂದು ಭಾನುವಾರ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇಂದಿಗೂ ಸಹ, ದಲಿತರು ಮತ್ತು ಆದಿವಾಸಿಗಳನ್ನು ಕ್ರೂರವಾಗಿ ಥಳಿಸಲಾಗುತ್ತಿರುವ ಘಟನೆಗಳು ನಡೆಯುತ್ತಲೇ ಇವೆ.ಆದಿವಾಸಿಗಳು ಬೆಸ್ಟ್ ಯೂನಿವರ್ಸಿಟಿಯಲ್ಲಿ ಓದಬೇಕು, ದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡಬೇಕು ಮತ್ತು…

Read More

ಐಪಿಎಲ್ ಸಂಭ್ರಮದ ನಡುವೆ ಕಳ್ಳರ ಕೈಚಳಕ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 50ಕ್ಕೂ ಹೆಚ್ಚು ಮೊಬೈಲ್ ಫೋನ್ ಕಳವು

ಬೆಂಗಳೂರು, ಮಾ,30: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ವೇಳೆ ಅಭಿಮಾನಿಗಳಿಗೆ ಭಾರಿ ಶಾಕ್ ಎದುರಾಗಿದೆ. ಪಂದ್ಯದ ಸಂಭ್ರಮದಲ್ಲಿದ್ದ ಪ್ರೇಕ್ಷಕರ ಮೊಬೈಲ್ ಫೋನ್‌ಗಳನ್ನು ಗುರಿಯಾಗಿಸಿಕೊಂಡು ಸಂಘಟಿತ ಕಳ್ಳರ ತಂಡವೊಂದು ದೊಡ್ಡ ಮಟ್ಟದ ಕಳ್ಳತನ ಎಸಗಿದೆ. ಈ ಬಗ್ಗೆ ಮಹಿಳೆಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ಅಂದರೆ ಎಕ್ಸ್​​​ನಲ್ಲಿ ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕ್ರೀಡಾಂಗಣದ P3 ಸ್ಟ್ಯಾಂಡ್ ಒಂದರಲ್ಲೇ ಸುಮಾರು 50 ರಿಂದ 60 ಮೊಬೈಲ್ ಫೋನ್‌ಗಳು ಕಳ್ಳತನವಾಗಿವೆ ಎಂದು…

Read More

ಧಾರಾವಾಹಿ ಶೂಟಿಂಗ್ ವೇಳೆ ಸಮುದ್ರದಲ್ಲಿ ಮುಳುಗಿ ನಟನ ಸಾವು

ಸಿನಿಮಾ ಶೂಟಿಂಗ್ ವೇಳೆ ಸಂಭವಿಸುವ ಅವಘಡಗಳು ಕೆಲ ಕಲಾವಿದರ ಬದುಕನ್ನೇ ಬದಲಿಸಿಬಿಡುತ್ತವೆ. ಈಗ ಧಾರಾವಾಹಿ (Serial) ಶೂಟಿಂಗ್ ವೇಳೆ ಸಂಭವಿಸಿದ ಅವಘಡ ಎಲ್ಲರಿಗೂ ಶಾಕ್ ತರಿಸಿದೆ. ಬೆಂಗಾಲಿ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ ಅವರು ಭಾನುವಾರ (ಮಾರ್ಚ್ 29) ನಿಧನ ಹೊಂದಿದ್ದಾರೆ. ಸಮುದ್ರದಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಇದು ಬೆಂಗಾಲಿ ಚಿತ್ರರಂಗಕ್ಕೆ ಹಾಗೂ ಅಲ್ಲಿನ ಕಿರುತೆರೆ ಲೋಕಕ್ಕೆ ಶಾಕಿಂಗ್ ಎನಿಸಿದೆ. ರಾಹುಲ್ ಅವರಿಗೆ 43 ವರ್ಷ ವಯಸ್ಸಾಗಿತ್ತು. ‘ಭೋಲೆ ಬಾಬಾ ಪರ್ ಕರೆಗಾ’ ಹೆಸರಿನ ಧಾರಾವಾಹಿ ಶೂಟಿಂಗ್…

Read More

ಭಾರಿ ಗಾತ್ರದ ಹಾವನ್ನು ನುಂಗುತ್ತಿದ್ದ ಮತ್ತೊಂದು ಹಾವು! ಉರಗ ರಕ್ಷಕರಿಂದ ರಕ್ಷಣೆ, ಮೈಜುಮ್ಮೆನ್ನಿಸುವ ವಿಡಿಯೋ ಇಲ್ಲಿದೆ ನೋಡಿ

ಕೋಲಾರ, ಮಾರ್ಚ್​ 30: ಕೋಲಾರ ಜಿಲ್ಲೆಯ ದೊಡ್ಡಹಸಾಳ ಗ್ರಾಮದ ಬಳಿ ಹಾವೊಂದು ಮತ್ತೊಂದು ಭಾರಿ ಗಾತ್ರದ ಹಾವನ್ನೇ ನುಂಗಲು ಯತ್ನಿಸಿದ ಅಪರೂಪದ ಘಟನೆ ನಡೆದಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಉರಗ ರಕ್ಷಕ ನಾಗರಾಜ್, ಅತ್ಯಂತ ಜಾಣ್ಮೆಯಿಂದ ಕಾರ್ಯಾಚರಣೆ ನಡೆಸಿದ್ದಾರೆ. ಮತ್ತೊಂದು ಹಾವಿನ ಬಾಯಿಗೆ ಆಹಾರವಾಗುತ್ತಿದ್ದ ಹಾವನ್ನು ಸುರಕ್ಷಿತವಾಗಿ ಬಿಡಿಸುವಲ್ಲಿ ನಾಗರಾಜ್ ಯಶಸ್ವಿಯಾಗಿದ್ದಾರೆ. ಉರಗ ರಕ್ಷಕನ ಈ ಸಾಹಸದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  …

Read More

Finn Allen: ತುಂಬಾ ವರ್ಷಗಳಿಂದ ಕಾಯುತ್ತಿದ್ದೆ, ಕೊನೆಗೂ ಚಾನ್ಸ್ ಸಿಕ್ತು!

ನ್ಯೂಝಿಲೆಂಡ್​ನ ಸ್ಫೋಟಕ ದಾಂಡಿಗ ಫಿನ್ ಅಲೆನ್ (Finn Allen) ಐಪಿಎಲ್​ನಲ್ಲಿ ಪಾದಾರ್ಪಣೆ ಮಾಡಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿಯುವ ಮೂಲಕ ಅಲೆನ್ ತಮ್ಮ ಬಹುಕಾಲದ ಕನಸನ್ನು ಈಡೇರಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಫಿನ್ ಅಲೆನ್, “ಈ ಕ್ಷಣಕ್ಕಾಗಿ ನಾನು ಬಹಳ ವರ್ಷಗಳಿಂದ ಕಾಯುತ್ತಿದ್ದೆ. ಕೊನೆಗೂ ವಿಶ್ವದ ಅತಿದೊಡ್ಡ ಟಿ20 ಟೂರ್ನಮೆಂಟ್‌ನಲ್ಲಿ ಆಡಲು ಅವಕಾಶ ಸಿಕ್ಕಿದೆ, ಇದು ನಿಜಕ್ಕೂ ಸಂತಸದ ಕ್ಷಣ” ಎಂದಿದ್ದಾರೆ. ಅಂದಹಾಗೆ ಫಿನ್…

Read More

Video: ಕಾರಿಂದ ವಾಟರ್ ಬಲೂನ್ ಎಸೆದ ಬಾಲಕ, ನಿಯಂತ್ರಣ ತಪ್ಪಿ ಫ್ಲೈಓವರ್ ಗೋಡೆಗೆ ಡಿಕ್ಕಿ ಹೊಡೆದ ಬೈಕ್ ಸವಾರ

ನವದೆಹಲಿ, ಮಾರ್ಚ್​ 30: ಮಕ್ಕಳನ್ನು ಎಷ್ಟೇ ಮುದ್ದಿನಿಂದ ಬೆಳೆಸಿದರೂ ಸಮಾಜದಲ್ಲಿ ಹೇಗೆ ಬದುಕಬೇಕೆಂಬುದನ್ನು ಕೂಡ ಕಲಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿ. ಬಾಲಕನೊಬ್ಬ ಕಾರಿನಿಂದ ವಾಟರ್ ಬಲೂನ್ ಎಸೆದ ಪರಿಣಾಮ ಅದು ಬೈಕ್ ಸವಾರನಿಗೆ ತಾಕಿ, ಅವರು ಆಯತಪ್ಪಿ ಫ್ಲೈಓವರ್ ಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ವಿಡಿಯೋವನ್ನು ಮೊದಲು ದಿವ್ಯಾ ಟಂಡನ್ ಅವರು ಶೇರ್ ಮಾಡಿದ್ದರು. ಬಾಲಕ ಮಾಡಿದ ಒಂದು ತಪ್ಪಿನಿಂದ ಜೀವವೇ ಹೋಗುವ ಸಾಧ್ಯತೆ ಇತ್ತು. ಮಾರ್ಚ್ 27 ರಂದು ನಡೆದ ಈ…

Read More

ಐಪಿಎಲ್ ಕ್ರೇಜ್: ಪಂದ್ಯ ಮುಗಿದ 50 ನಿಮಿಷಗಳಲ್ಲಿ ನಮ್ಮ ಮೆಟ್ರೋದಲ್ಲಿ ಬರೋಬ್ಬರಿ 22,000 ಜನ ಪ್ರಯಾಣ!

ಬೆಂಗಳೂರು, ಮಾರ್ಚ್​ 30: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ (IPL 2026) ಉದ್ಘಾಟನಾ ಪಂದ್ಯಕ್ಕೆ ಕ್ರಿಕೆಟ್ ಅಭಿಮಾನಿಗಳ ಸಾಗರವೇ ಹರಿದುಬಂದಿದ್ದು, ನಮ್ಮ ಮೆಟ್ರೋ (Namma Metro) ಕೂಡ ಸಾಕ್ಷಿಯಾಗಿದೆ. ಪಂದ್ಯದ ಹಿನ್ನೆಲೆಯಲ್ಲಿ ಮೆಟ್ರೋ ಪ್ರಯಾಣಕ್ಕೆ ನಾಗರಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಸಾಮಾನ್ಯ ದಿನಗಳಿಗಿಂತ ದ್ವಿಗುಣ ಪ್ರಮಾಣದಲ್ಲಿ ಪ್ರಯಾಣಿಕರು ಮೆಟ್ರೋ ಬಳಸಿದ್ದಾರೆ ಎಂದು ಬಿಎಂಆರ್​ಸಿಎಲ್ ಮೂಲಗಳು ತಿಳಿಸಿವೆ. ಪಂದ್ಯ ಮುಗಿದ ಕೇವಲ 50 ನಿಮಿಷಗಳ ಅವಧಿಯಲ್ಲಿ ಸುಮಾರು 22,000 ಜನರು ಕಬ್ಬನ್ ಪಾರ್ಕ್ ಮತ್ತು ಎಂಜಿ ರಸ್ತೆ ನಿಲ್ದಾಣಗಳಿಂದ…

Read More

ಮೊದಲ ಗೆಲುವನ್ನು 11 ಮಂದಿಗೆ ಅರ್ಪಿಸಿದ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡವನ್ನು ಬಗ್ಗು ಬಡಿದು ಆರ್​ಸಿಬಿ ಗೆಲುವಿನ ಖಾತೆ ತೆರೆದಿದೆ. “ಈ ಗೆಲುವನ್ನು ನಾವು ಕಳೆದುಕೊಂಡ ಆ 11 ಅಭಿಮಾನಿಗಳಿಗೆ ಅರ್ಪಿಸುತ್ತೇವೆ”  ಎಂದಿದ್ದಾರೆ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್. 2026ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದ…

Read More