All posts by nagaraj11081993

ಕೃಷ್ಣನಗರ: ಸರ್ಕಾರಿ ಆಸ್ಪತ್ರೆಯಿಂದ ನವಜಾತ ಶಿಶು ನಾಪತ್ತೆ, ಮಹಿಳೆ ಹೊಟ್ಟೆಯಲ್ಲಿ ಮಗುವೇ ಇರಲಿಲ್ಲ ಎಂದ ವೈದ್ಯರು – Kannada News | Newborn Goes Missing from Government Hospital in Krishnanagar

ಕೃಷ್ಣನಗರ, ಜನವರಿ 30: ಸರ್ಕಾರಿ ಆಸ್ಪತ್ರೆ(Hospital)ಯಿಂದ ನವಜಾತ ಶಿಶು ಕಾಣೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ನಡೆದಿದೆ. ರೋಗಿಯ ಕುಟುಂಬವು ಆಸ್ಪತ್ರೆಯ ಬಾಗಿಲು ಮುಚ್ಚಿ ಪ್ರತಿಭಟಿಸಿತು. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆರಿಗೆಯೂ ನಡೆದಿತ್ತು. ಆದರೆ ಮಗು ಮಾತ್ರ ಎಲ್ಲಿಗೆ ಹೋಗಿತು ಎಂಬುದೇ ಯಕ್ಷಪ್ರಶ್ನೆಯಾಗಿ ಉಳಿದಿದೆ.

ಆದರೆ ಮಗುವನ್ನು ಮಾತ್ರ ಆಸ್ಪತ್ರೆ ವೈದ್ಯರು ಕೊಡಲೇ ಇಲ್ಲ, ಅದರ ಬದಲು ಆಕೆಯ ಹೊಟ್ಟೆಯಲ್ಲಿ ಮಗುವೇ ಇರಲಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಮತ್ತೊಂದೆಡೆ, ಕೊನೆಯ ಅಲ್ಟ್ರಾ-ಸೋನೋಗ್ರಫಿಯಲ್ಲಿ 2 ಕೆಜಿ 400 ಗ್ರಾಂ ತೂಕದ ಮಗು ಇದೆ ಎಂದು ವರದಿಯಾಗಿದೆ ಎಂದು ಆಶಾ ಕಾರ್ಯಕರ್ತೆ ಹೇಳಿದ್ದಾರೆ. ಆದರೆ ಮಗು ಎಲ್ಲಿಯೂ ಸಿಗದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಈ ಘಟನೆಯಿಂದ ಆಸ್ಪತ್ರೆಯಲ್ಲಿ ಹೆಚ್ಚಿನ ಉದ್ವಿಗ್ನತೆ ಉಂಟಾಗಿದೆ. ಈ ವಿಷಯದ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮುಖ್ಯ ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ. ಈ ಘಟನೆಯ ಬಗ್ಗೆ ಕುಟುಂಬ ಸದಸ್ಯರು ಪೊಲೀಸ್ ಠಾಣೆಗೆ ಲಿಖಿತ ದೂರು ದಾಖಲಿಸಿದ್ದಾರೆ.ನಾಡಿಯಾದ ಕೃಷ್ಣನಗರ ಸದರ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ನಬದ್ವೀಪ್‌ನ ಇಪ್ಪತ್ತರ ಹರೆಯದ ಮಂಪಿ ಖಾತುನ್ ಎಂಬ ಗರ್ಭಿಣಿ ಮಹಿಳೆಯನ್ನು ಹೆರಿಗೆಗಾಗಿ ಕೃಷ್ಣನಗರ ಸದರ್ ಆಸ್ಪತ್ರೆಗೆ ಕರೆತರಲಾಗಿತ್ತು ಎಂದು ಆರೋಪಿಸಲಾಗಿದೆ.

ಮತ್ತಷ್ಟು ಓದಿ: ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ, ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಅಲ್ಲಿ ಹಲವಾರು ಗಂಟೆಗಳ ಕಾಲ ದಾಖಲಾಗಿದ್ದ ನಂತರ, ಅವರನ್ನು ಹೆರಿಗೆ ಟೇಬಲ್‌ಗೆ ಕರೆದೊಯ್ಯಲಾಯಿತು. ನಂತರ ಅವರಿಗೆ ಹೆರಿಗೆ ಮಾಡಲಾಯಿತು ಎಂದು ಕುಟುಂಬದವರು ಹೇಳಿಕೊಂಡಿದ್ದಾರೆ. ರೋಗಿಯ ಕುಟುಂಬವು ಆಸ್ಪತ್ರೆಗೆ ಹಿಂತಿರುಗಿದಾಗ ಅವರಿಗೆ ಒಳಗೆ ಹೋಗಲು ಅವಕಾಶ ನೀಡಲಿಲ್ಲ ಎಂದು ಹೇಳುತ್ತದೆ. ಗರ್ಭಧಾರಣೆಯಿಂದ ಆಕೆಯ ದೈಹಿಕ ಪರೀಕ್ಷೆಯ ಎಲ್ಲಾ ದಾಖಲೆಗಳು ಅವರ ಬಳಿ ಇವೆ.

ಆಶಾ ಕಾರ್ಯಕರ್ತೆ ರೋಜಿನಾ ಬೀಬಿ ಶೇಖ್ಮ ಮಾತನಾಡಿ, ಮಹಿಳೆಗೆ ಮೋಸ ಮಾಡಲಾಗಿದೆ. ಅವಳು ಗರ್ಭಿಣಿಯಾಗಿದ್ದಾಗಿನಿಂದ ನಾನು ಅವಳನ್ನು ನೋಡುತ್ತಿದ್ದೇನೆ. ಜನವರಿ 21 ರಂದು ಅವಳಿಗೆ USG ಮಾಡಲಾಗಿತ್ತು ಮತ್ತು ಮಗು ಇತ್ತು ಎಂದರು. ಅವರು ನನ್ನನ್ನು ಮಲಗಿಸಿದ್ದರು, ನಂತರ ಹೆರಿಗೆ ಮಾಡಲಾಗಿದೆ ಎಂದು ನಾನು ಭಾವಿಸಿದ್ದೆ ಆದರೆ, ನನ್ನ ಹೊಟ್ಟೆಯಲ್ಲಿ ಮಗುವೇ ಇರಲಿಲ್ಲ ಎಂದು ವೈದ್ಯರು ಹೇಳಿದ್ದಾರೆಂದು ಮಹಿಳೆ ಬೇಸರ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಸಲಾರ್ 2’ ಸಿನಿಮಾ ನಿಂತೇ ಹೋಯ್ತೆ? ಪ್ರಭಾಸ್-ನೀಲ್ ಮಾಡಿರುವ ಚರ್ಚೆ ಏನು? – Kannada News | Did Prabhas starrer Salaar 2 movie halted what is the new update

ಬಾಹುಬಲಿ 2’ (Bahubali 2) ಸಿನಿಮಾದ ಬಳಿಕ ಸತತ ಸೋಲುಗಳಿಂದ ಕಂಗೆಟ್ಟಿದ್ದ ಪ್ರಭಾಸ್ ಅನ್ನು ಗೆಲುವಿನ ಹಳಿಗೆ ಮರಳಿ ತಂದಿದ್ದು ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾ. ನೀಲ್ ಅವರೇ ನಿರ್ದೇಶಿಸಿದ್ದ ಕನ್ನಡದ ‘ಉಗ್ರಂ’ ಸಿನಿಮಾದ ಕತೆಯನ್ನೇ ಒಳಗೊಂಡ ಆದರೆ ಪ್ರಭಾಸ್​​ ಸ್ಟಾರ್​​ಡಮ್​​ಗೆ ತಕ್ಕಂತೆ ಅದ್ಧೂರಿತನದಿಂದ ನಿರ್ಮಿಸಿದ್ದ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಯಶಸ್ಸು ಕಂಡಿತ್ತು. ‘ಸಲಾರ್ 2’ ಸಹ ಬರಲಿದೆ ಎಂದು ‘ಸಲಾರ್’ ಸಿನಿಮಾದ ಅಂತ್ಯದಲ್ಲಿ ಘೋಷಿಸಲಾಗಿತ್ತು. ಆದರೆ ‘ಸಲಾರ್’ ಬಿಡುಗಡೆ ಆಗಿ ಮೂರು ವರ್ಷಗಳಾಗುತ್ತಾ ಬಂದಿದ್ದರೂ ‘ಸಲಾರ್ 2’ ಸಿನಿಮಾದ ಚಿತ್ರೀಕರಣ ಇನ್ನೂ ಶುರುವಾಗಿಲ್ಲ. ಹಾಗಿದ್ದರೆ ‘ಸಲಾರ್ 2’ ನಿಂತು ಹೋಯ್ತಾ? ಇಲ್ಲಿದೆ ಅಪ್​ಡೇಟ್.

ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಅವರು ‘ಸಲಾರ್ 2’ ಸಿನಿಮಾದ ಬಗ್ಗೆ ಚರ್ಚೆ ಮಾಡಿದ್ದು, ಈಗಾಗಲೇ ನೀಲ್ ರೆಡಿ ಮಾಡಿಕೊಂಡಿರುವ ‘ಸಲಾರ್ 2’ ಸಿನಿಮಾದ ಕತೆಯನ್ನು ಸಂಪೂರ್ಣವಾಗಿ ಬದಲಾವಣೆ ಮಾಡಲು ನಿರ್ಧರಿಸಲಾಗಿದೆಯಂತೆ. ಹೀಗೆಂದು ಸಿನಿಮಾಕ್ಕೆ ಸಂಬಂಧಿಸಿದ ಒಬ್ಬರೇ ಹೇಳಿರುವುದಾಗಿ ಪಿಂಕ್​ವಿಲ್ಲಾ ವರದಿ ಮಾಡಿದೆ. ಪ್ರಭಾಸ್ ಅವರ ಇತ್ತೀಚೆಗಿನ ಸಿನಿಮಾಗಳು ಯಶಸ್ಸು ಗಳಿಸದ ಕಾರಣ, ‘ಸಲಾರ್ 2’ ಸಿನಿಮಾದ ಕತೆ, ಪ್ರೆಸೆಂಟೇಷನ್ ಅನ್ನು ಸಂಪೂರ್ಣವಾಗಿ ಬದಲಾಯಿಸುವ ನಿರ್ಧಾರವನ್ನು ನೀಲ್ ಮಾಡಿದ್ದು, ಇದಕ್ಕೆ ಪ್ರಭಾಸ್ ಅವರ ಸಲಹೆಯೇ ಕಾರಣ ಎನ್ನಲಾಗುತ್ತಿದೆ.

‘ಸಲಾರ್’ ಸಿನಿಮಾ ಬಿಡುಗಡೆ ಆದಾಗ ಇದ್ದ ಪ್ರೇಕ್ಷಕರ ಮನಸ್ಥಿತಿಗೂ ಈಗಿನ ಮನಸ್ಥಿತಿಗೂ ಅಜಗಜಾಂತರ ವ್ಯತ್ಯಾಸವಿದೆ. ಹಾಗಾಗಿ ಈಗಿನ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಸಿನಿಮಾ ಮಾಡುವ ಬಗ್ಗೆ ನೀಲ್ ಹಾಗೂ ಪ್ರಭಾಸ್ ಚರ್ಚಿಸಿದ್ದಾರೆ. ಇದೇ ಕಾರಣಕ್ಕೆ ಸಿನಿಮಾದ ಕತೆ, ಟೋನ್, ನಿರೂಪಣೆ ಇನ್ನೂ ಹಲವು ವಿಷಯಗಳನ್ನು ಬದಲಾವಣೆ ಮಾಡಿ, ಚಿತ್ರೀಕರಣಕ್ಕೆ ಹೋಗುವ ನಿರ್ಧಾರ ಮಾಡಲಾಗಿದೆಯಂತೆ.

ಇದನ್ನೂ ಓದಿ:‘ರಾಜಾಸಾಬ್’ ಸೋಲಿನ ಬಳಿಕ ಬಜೆಟ್ ಉಳಿಸಲು ಹೊಸ ಪ್ಲ್ಯಾನ್ ರೂಪಿಸಿದ ಪ್ರಭಾಸ್

‘ಸಲಾರ್’ ಸಿನಿಮಾಕ್ಕೆ ಹೊಂಬಾಳೆ ಫಿಲಮ್ಸ್ ಬಂಡವಾಳ ಹೂಡಿತ್ತು. ಪ್ರಭಾಸ್ ಜೊತೆಗೆ ಹೊಂಬಾಳೆ ಫಿಲಮ್ಸ್ ಮೂರು ಸಿನಿಮಾಗಳ ಒಪ್ಪಂದ ಮಾಡಿಕೊಂಡಿದ್ದು, ‘ಸಲಾರ್ 2’ ಸಹ ಅದರಲ್ಲಿ ಒಂದಾಗಿದೆ. ಆದರೆ ಪ್ರಭಾಸ್ ಮತ್ತು ನೀಲ್ ಇಬ್ಬರೂ ಬೇರೆ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಆಗಿ ಇರುವುದರಿಂದ ‘ಸಲಾರ್ 2’ ಸಿನಿಮಾ ತಡವಾಗುತ್ತಲೇ ಬರುತ್ತಿದೆ. ಈ ಹಿಂದೆ ಪ್ರಭಾಸ್ ಮತ್ತು ನೀಲ್ ನಡುವೆ ಮನಸ್ತಾಪ ಉಂಟಾಗಿದೆ ಎಂಬ ಸುದ್ದಿಯೂ ಹರಿದಾಡಿತ್ತು. ಆದರೆ ಪ್ರಭಾಸ್​​ರ ಹೊಸ ಸಿನಿಮಾ ಮುಹೂರ್ತಕ್ಕೆ ನೀಲ್ ಅತಿಥಿಯಾಗಿ ಹಾಜರಾಗಿ ಆ ಸುದ್ದಿಗಳಿಗೆಲ್ಲ ತೆರೆ ಎಳೆದರು.

ಇದೀಗ ಪ್ರಭಾಸ್ ರಘು ಹನುಪುಡಿ ನಿರ್ದೇಶನದ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಫೆಬ್ರವರಿ ತಿಂಗಳಲ್ಲಿ ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣ ಶುರು ಮಾಡಲಿದ್ದಾರೆ. ಅದಾದ ಬಳಿಕ ‘ಕಲ್ಕಿ 2898 ಎಡಿ’ ಸಿನಿಮಾದ ಸೀಕ್ವೆಲ್​​ನಲ್ಲಿ ನಟಿಸಲಿದ್ದಾರೆ. ಅದಾದ ಬಳಿಕವಷ್ಟೆ ‘ಸಲಾರ್ 2’ ಪ್ರಾರಂಭ ಆಗಲಿದೆ. ಇನ್ನು ನೀಲ್ ಪ್ರಸ್ತುತ ಜೂ ಎನ್​​ಟಿಆರ್ ನಟಿಸುತ್ತಿರುವ ‘ಡ್ರ್ಯಾಗನ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಅದರ ಬಳಿಕ ಅವರು ಅಲ್ಲು ಅರ್ಜುನ್ ಅಥವಾ ರಾಮ್ ಚರಣ್ ಅವರಿಗಾಗಿ ಸಿನಿಮಾ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಜೆಟ್​ನಲ್ಲಿ ವಿತ್ತೀಯ ಶಿಸ್ತು ಕಾಯ್ದುಕೊಂಡು ಬಂಡವಾಳ ವೆಚ್ಚ ಹೆಚ್ಚಿಸಬಹುದು: ಜೆಎಂ ಫೈನಾನ್ಷಿಯಲ್ ನಿರೀಕ್ಷೆ – Kannada News | Capex growth along with fiscal discipline, Brokerage firm JM Financial expects from 2026 Budget

ನವದೆಹಲಿ, ಜನವರಿ 30: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಫೆಬ್ರುವರಿ 1ರಂದು ಪ್ರಸ್ತುತಪಡಿಸುತ್ತಿರುವ ಬಜೆಟ್ 2026-27 ಬಗ್ಗೆ ನಿರೀಕ್ಷೆಗಳು ಹಲವಿವೆ. ಮಾರುಕಟ್ಟೆಯ ಮೇಲೆ ಪ್ರಭಾವ ಬೀರುವ ಹೂಡಿಕೆದಾರರು ಈ ಬಜೆಟ್​ನಿಂದ ಏನು ನಿರೀಕ್ಷಿಸುತ್ತಾರೆ? ಆರ್ಥಿಕ ಬೆಳವಣಿಗೆಗೆ ನೀರೆರೆದು ಪೋಷಿಸಲು ಸರ್ಕಾರ ಯಾವ ಪ್ಲಾನ್ ಮಾಡಿದೆ? ವಿತ್ತೀಯ ಶಿಸ್ತು ಕಾಯ್ದುಕೊಳ್ಳುತ್ತಲೇ ಬಂಡವಾಳ ವೆಚ್ಚ ಹೆಚ್ಚಿಸಲು ಏನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದು ಹೂಡಿಕೆದಾರರಿಗೆ ಇರುವ ಕುತೂಹಲ ಮತ್ತು ನಿರೀಕ್ಷೆ.

ಕಳೆದ ಬಜೆಟ್​ನಲ್ಲಿ ಸರ್ಕಾರವು ಬಂಡವಾಳ ವೆಚ್ಚಕ್ಕಿಂತ ಅನುಭೋಗಕ್ಕೆ ಪ್ರಾಶಸ್ತ್ಯ ಕೊಟ್ಟಂತಿತ್ತು. ಆದಾಯ ತೆರಿಗೆ ಮತ್ತು ಜಿಎಸ್​ಟಿ ದರಗಳನ್ನು ಇಳಿಸುವ ಮೂಲಕ ಅನುಭೋಗ ಹೆಚ್ಚಿಸಲು ಕ್ರಮ ತೆಗೆದುಕೊಂಡಿತ್ತು. ಅದರ ಫಲವೆಂಬಂತೆ ಗ್ರಾಮೀಣ ಪ್ರದೇಶಗಳಲ್ಲಿ ಅನುಭೋಗ ಹೆಚ್ಚಿದೆ. ಬ್ರೋಕರೇಜ್ ಸಂಸ್ಥೆಯಾದ ಜೆಎಂ ಫೈನಾನ್ಷಿಯಲ್ ಈ ಅಂಶವನ್ನು ಗಮನಿಸಿದೆ. ಹಾಗೆಯೇ, ನಗರ ಭಾಗಗಳಲ್ಲಿ ಅನುಭೋಗ ದುರ್ಬಲವಾಗಿರುವ ಸಂಗತಿಯನ್ನೂ ಅದು ಎತ್ತಿ ತೋರಿಸಿದೆ.

ಇದನ್ನೂ ಓದಿ: ಕೇಂದ್ರದ ಬಜೆಟ್​ನಲ್ಲಿ ರಾಜ್ಯಕ್ಕೆ ಈ ಬಾರಿ ಏನೆಲ್ಲಾ ಸಿಗಬಹುದು? ಉದ್ದವಿದೆ ನಿರೀಕ್ಷೆಗಳ ಪಟ್ಟಿ!

ನಗರ ಭಾಗದಲ್ಲಿ ಅನುಭೋಗ ಹೆಚ್ಚುವುದು ಬಹಳ ಮುಖ್ಯ. ಇಲ್ಲಿ ಅನುಭೋಗ ಆರಕ್ಕೇರದ, ಮೂರಕ್ಕಿಳಿಯದ ಸ್ಥಿತಿಯಲ್ಲಿರುವುದರಿಂದ ಉತ್ಪಾದಕರು ತಮ್ಮ ಘಟಕ ವಿಸ್ತರಿಸಲು ಸಾಧ್ಯವಾಗುತ್ತಿಲ್ಲ. ಬೇಡಿಕೆಗೆ ಅನುಗುಣವಾಗಿ ಉತ್ಪಾದನೆಯೂ ಏರಿಳಿತ ಆಗುತ್ತದೆ. ಆರ್​ಬಿಐ ದತ್ತಾಂಶದ ಪ್ರಕಾರ ಭಾರತದ ಉತ್ಪಾದಕ ಸಂಸ್ಥೆಗಳಲ್ಲಿ ಈಗಿರುವ ಉತ್ಪಾದನಾ ಸಾಮರ್ಥ್ಯದಲ್ಲಿ ಶೇ. 75ಕ್ಕಿಂತ ಕಡಿಮೆ ಬಳಕೆ ಆಗುತ್ತಿದೆ.

ಆರ್​ಬಿಐನ ಈ ಡಾಟಾವನ್ನು ಉಲ್ಲೇಖಿಸಿರುವ ಜೆಎಂ ಫೈನಾನ್ಷಿಯಲ್, ಈ ಬಾರಿಯ ಬಜೆಟ್​ನಲ್ಲಿ ಸರ್ಕಾರವು ಅನುಭೋಗ ಹಾಗೂ ಬಂಡವಾಳ ವೆಚ್ಚದಲ್ಲಿ ಸಮತೋಲನ ತರಲು ಯತ್ನಿಸಬಹುದು ಎಂದು ಅಪೇಕ್ಷಿಸಿದೆ.

ಇದನ್ನೂ ಓದಿ: ಕೇಂದ್ರ ಬಜೆಟ್ 2026: ಹೊಸ ಟ್ಯಾಕ್ಸ್ ರೆಜಿಮ್​ನಲ್ಲಿ ಇನ್ನಷ್ಟು ಡಿಡಕ್ಷನ್ ಕೊಟ್ಟು, ಹಳೆಯ ಟ್ಯಾಕ್ಸ್ ಸಿಸ್ಟಂ ನಿಲ್ಲಿಸಲಾಗುತ್ತಾ?

ರೆವಿನ್ಯೂ ಎಕ್ಸ್​ಪೆಂಡಿಚರ್ ಅಥವಾ ಆದಾಯ ವೆಚ್ಚದಂದ ಅನುಭೋಗವು ಅಲ್ಪಾವಧಿಗೆ ಏರಿಕೆ ಆಗುತ್ತದೆ. ಇದಕ್ಕೆ ವ್ಯತಿರಿಕ್ತವಾಗಿ ಕ್ಯಾಪಿಟಲ್ ಎಕ್ಸ್​ಪೆಂಡಿಚರ್ ಅಥವಾ ಬಂಡವಾಳ ವೆಚ್ಚದಿಂದ ಜಿಡಿಪಿಗೆ ಮೂರು ಪಟ್ಟು ಪುಷ್ಟಿ ಕೊಡುತ್ತದೆ. ಸರ್ಕಾರವು ಕ್ರಮೇಣವಾಗಿ ಬಂಡವಾಳ ವೆಚ್ಚವನ್ನು ಜಿಡಿಪಿಯ ಶೇ. 3ರಷ್ಟು ಮಟ್ಟಕ್ಕೆ ಏರಿಸಬಹುದು ಎಂದು ಜೆಎಂ ಫೈನಾನ್ಷಿಯಲ್ ನಿರೀಕ್ಷಿಸುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Video: ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು – Kannada News | Two Paragliders Rescued After Mid Air Collision in Tehri

ಡೆಹ್ರಾಡೂನ್, ಜನವರಿ 30: ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಇಬ್ಬರು ಪ್ಯಾರಾಗ್ಲೈಡರ್‌ಗಳು ಗಾಳಿಯಲ್ಲಿ ಡಿಕ್ಕಿ ಹೊಡೆದು ನದಿಗೆ ಬಿದ್ದಿರುವ ಘಟನೆ ನಡೆದಿದೆ. ಯಾವುದೇ ದೊಡ್ಡ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡವು ತಕ್ಷಣ ಸ್ಥಳಕ್ಕೆ ತಲುಪಿ ಪ್ಯಾರಾಗ್ಲೈಡಿಂಗ್ ಪೈಲಟ್‌ಗಳನ್ನು ರಕ್ಷಿಸಿದೆ. ಮೂರು ದಿನಗಳ ಆಕ್ರೋ ಫೆಸ್ಟಿವಲ್ ಮತ್ತು ಎಸ್‌ಐವಿ ಚಾಂಪಿಯನ್‌ಶಿಪ್ ಟೆಹ್ರಿ 2026 ರ ಸಂದರ್ಭದಲ್ಲಿ ಪ್ಯಾರಾಗ್ಲೈಡರ್‌ಗಳು ನಿಯಂತ್ರಣ ಕಳೆದುಕೊಂಡಾಗ ಈ ಘಟನೆ ಸಂಭವಿಸಿದೆ.

ಕಳೆದ ವರ್ಷ ಜನವರಿಯಲ್ಲಿ ಇದೇ ರೀತಿಯ ಘಟನೆ ನಡೆದಿತ್ತು, ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಇಳಿಯುವಾಗ ಪ್ಯಾರಾಚೂಟ್‌ಗಳು ಸಿಕ್ಕಿಹಾಕಿಕೊಂಡಿದ್ದರಿಂದ ಇಬ್ಬರು ನೌಕಾ ಪೈಲಟ್‌ಗಳು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದರು. ಪೂರ್ವ ನೌಕಾ ಕಮಾಂಡ್‌ನ ಕಾರ್ಯಾಚರಣೆ ಪ್ರದರ್ಶನ ಪೂರ್ವಾಭ್ಯಾಸದ ಸಮಯದಲ್ಲಿ ರಾಮ ಕೃಷ್ಣ ಬೀಚ್‌ನಲ್ಲಿ ಕಾರ್ಯಾಚರಣೆ ಪ್ರದರ್ಶನದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಅಧಿಕಾರಿಗಳು ಸಮುದ್ರಕ್ಕೆ ಬಿದ್ದಿದ್ದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಮೂರು ಮದುವೆಯಾಗಿ ಲಕ್ಷಾಂತರ ರೂ. ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ! ಹೇಳಿದ್ದೇನು ನೋಡಿ – Kannada News | Woman Marries Three Men, Cheats Lakhs: Second Husband Reveals Details in Doddaballapura

ದೇವನಹಳ್ಳಿ, ಜನವರಿ 30: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅಣಬೆ ಗ್ರಾಮದ ಸುಧಾರಾಣಿ ಎಂಬ ಮಹಿಳೆ, ಪ್ರೀತಿಸುವ ನಾಟಕವಾಡಿ ಮದುವೆಯಾಗಿ ಮೂವರನ್ನು ವಂಚಿಸಿರುವುದು ಬಯಲಾಗಿದೆ. ಆಕೆ ಪ್ರೀತಿಸಿ ಮದುವೆಯಾಗಿ ಲಕ್ಷಾಂತರ ರೂಪಾಯಿ ವಂಚಿಸಿದ್ದಾಳೆ ಎಂದು ಆರೋಪಿಸಲಾಗಿದ್ದು, ಇದೀಗ ಆಕೆಯ ಮೋಸದಾಟದ ಬಗ್ಗೆ ಎರಡನೇ ಗಂಡ ಮಾಧ್ಯಮದ ಎದುರು ಮಾಹಿತಿ ಬಿಚ್ಚಿಟ್ಟಿದ್ದಾರೆ.

ಮೊದಲ ಪತಿ ತೀರಿಕೊಂಡಿದ್ದಾರೆ ಎಂದು ಸುಳ್ಳು ಹೇಳಿ ಸುಧಾರಾಣಿ ತನ್ನನ್ನು ಮದುವೆಯಾಗಿದ್ದಾರೆ. ಮದುವೆಯ ನಂತರ ಸುಮಾರು 25 ಲಕ್ಷ ರೂಪಾಯಿಗಳಷ್ಟು ಹಣವನ್ನು ತೆಗೆದುಕೊಂಡಿದ್ದಾಳೆ. ನಂತರ, ಸುಧಾರಾಣಿಗೆ ಮೊದಲ ಪತಿ ಹೀರೇಗೌಡ ಬದುಕಿರುವ ವಿಚಾರ ಗೊತ್ತಾಯಿತು ಎಂದು ಯುವಕ ತಿಳಿಸಿದ್ದಾರೆ. ಸುಧಾರಾಣಿ ಹೈದರಾಬಾದ್​ಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ, ಬೆಂಗಳೂರಿನಲ್ಲಿ ಶಿವಗೌಡ ಎಂಬುವವರನ್ನು ಮೂರನೇ ಮದುವೆಯಾಗಿರುವುದೂ ನಂತರ ಗೊತ್ತಾಯಿತು ಎಂದಿರುವ ಯುವಕ, ಪೊಲೀಸರಿಗೆ ದೂರು ನೀಡಿದ್ದಾರೆ.

ವಿವರಗಳಿಗೆ ಓದಿ: ದೊಡ್ಡಬಳ್ಳಾಪುರದಲ್ಲೊಬ್ಬಳು ಖತರ್ನಾಕ್ ಮಹಿಳೆ: 3 ಮದುವೆಯಾಗಿ ಲಕ್ಷಾಂತರ ರೂ. ಲೂಟಿ, ಠಾಣೆ ಮೆಟ್ಟಿಲೇರಿದ ಗಂಡಂದಿರು!

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ! – Kannada News | Lokayukta Arrest Inspector Caught Red Handed Taking Rs 4 Lakh Bribe From Builder In Bengaluru

ಬೆಂಗಳೂರು, ಜನವರಿ 30: ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಕೇಸ್‌ನಲ್ಲಿ ಸಿಕ್ಕಿಸುವುದಾಗಿ ಬೆದರಿಸಿ ಇನ್ಸ್‌ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ. ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಇದರಲ್ಲಿ 1 ಲಕ್ಷ ರೂಪಾಯಿ ಈಗಾಗಲೇ ಪಡೆದುಕೊಂಡಿದ್ದ ಇನ್ಸ್‌ಪೆಕ್ಟರ್, ಉಳಿದ 4 ಲಕ್ಷ ರೂಪಾಯಿ ಸ್ವೀಕರಿಸುವಾಗ ಟ್ರ್ಯಾಪ್ ಆಗಿದ್ದಾರೆ. ಧನರಾಜ್ ಎಂಬುವವರು ನೀಡಿದ ದೂರಿನನ್ವಯ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇನ್ಸ್‌ಪೆಕ್ಟರ್ ಗೋವಿಂದರಾಜು ವಿರುದ್ಧ ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ – Kannada News | Bilaspur: E Rickshaw Driver Thrown Onto Car Bonnet After Collision

ರಾಂಪುರ, ಜನವರಿ 30: ಜೀಪ್ ಚಾಲಕನೊಬ್ಬ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಬಾನೆಟ್ ಮೇಲೆ ಚಾಲಕನನ್ನು ಹೊತ್ತೊಯ್ದಿರುವ ಘಟನೆ ರಾಂಪುರದ ಬಿಲಾಸ್ಪುರದ ಹೆದ್ದಾರಿಯಲ್ಲಿ ನಡೆದಿದೆ. ರಾಂಪುರದ ಬಿಲಾಸ್ಪುರದ ಹೆದ್ದಾರಿಯಲ್ಲಿ ಜೀಪ್ ಚಾಲಕನೊಬ್ಬ ಎದುರಿನಿಂದ ಬರುತ್ತಿದ್ದ ಇ-ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾಗಿ ಚಾಲಕ ಶಬ್ಬು ಗಾಯಗೊಂಡಿದ್ದು, ಅವರ ಮೂಗಿನಿಂದ ರಕ್ತಸ್ರಾವ ಆಗುತ್ತಿತ್ತು.

ಡಿಕ್ಕಿಯ ನಂತರ, ಜೀಪ್ ಚಾಲಕ ಮನ್ಪ್ರೀತ್ ಎಂದು ಗುರುತಿಸಲ್ಪಟ್ಟಿದ್ದು, ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದ, ಆದರೆ ಗಾಯಗೊಂಡ ಚಾಲಕ ಅವನನ್ನು ತಡೆಯಲು ವಾಹನದ ಮುಂದೆ ನಿಂತಿದ್ದರು. ಜೀಪ್ ಚಾಲಕ ನಿಲ್ಲಿಸದೆ ಶಬ್ಬುನನ್ನು ಬಾನೆಟ್ ಮೇಲೆ ಎಳೆದುಕೊಂಡು ಹೋಗಿದ್ದ. ಹಲವಾರು ಪ್ರತ್ಯಕ್ಷದರ್ಶಿಗಳು ಈ ಘಟನೆಯನ್ನು ತಮ್ಮ ಫೋನ್‌ಗಳಲ್ಲಿ ಸೆರೆಹಿಡಿದಿದ್ದು, ಈ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬಜೆಟ್ 2026: ಬ್ಯಾಂಕಿಂಗ್​ನಿಂದ ಹಿಡಿದು ರೈತರವರೆಗೆ ವಿವಿಧ ಕ್ಷೇತ್ರಗಳ ನಿರೀಕ್ಷೆಗಳಿವು

Source link

Optical Illusion: ಈ ಒಗಟಿನ ಚಿತ್ರದಲ್ಲಿರುವ ಹಲ್ಲಿಯನ್ನು ಹುಡುಕಿದ್ರೆ ನೀವೇ ಜಾಣರು – Kannada News | Optical illusion: If your eyes are sharp, find the lizard in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media

ಆಪ್ಟಿಕಲ್ ಇಲ್ಯೂಷನ್ (optical illusion) ಚಿತ್ರಗಳು ದೃಷ್ಟಿ ಸಾಮರ್ಥ್ಯ ಹಾಗೂ ಮೆದುಳನ್ನು ಚುರುಕುಗೊಳಿಸುತ್ತವೆ. ಸೋಶಿಯಲ್ ಮೀಡಿಯಾದಲ್ಲಿ ಇಂತಹ ಸಾಕಷ್ಟು ವೈರಲ್ ಆಗುತ್ತಿರುತ್ತವೆ. ಕೆಲವರು ಈ ಚಿತ್ರಗಳನ್ನು ಬಿಡಿಸಿ ತಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳುತ್ತಾರೆ. ಇದೀಗ ನಿಮ್ಮ ದೃಷ್ಟಿ ಸಾಮರ್ಥ್ಯವನ್ನು ಪರೀಕ್ಷಿಸುವ ಸಮಯ. ಈ ಚಿತ್ರದಲ್ಲಿ ಹಲ್ಲಿ  (lizard) ಎಲ್ಲಿದೆ ಎಂದು ನೀವು ಕಂಡು ಹಿಡಿಯಬೇಕು. ನೀವು ಈ ಒಗಟನ್ನು ಬಿಡಿಸಲು ಸಾಧ್ಯವಾದರೆ ನಿಜ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸಲೀಸಾಗಿ ನಿಭಾಯಿಸುತ್ತೀರಿ ಎಂದರ್ಥ. ಆದರೆ ಈ ಒಗಟನ್ನು ಹದಿನೈದು ಸೆಕೆಂಡುಗಳೊಳಗೆ ಬಿಡಿಸಲು ಸಾಧ್ಯವಾಗುತ್ತದೆಯೇ ಎಂದು ನೋಡಿ.

ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು?

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಸಹಜವಾಗಿ ಕಾಣಿಸುತ್ತದೆ. ಇದರಲ್ಲಿರುವ ಗುಪ್ತ ವಸ್ತುಗಳು ಅಷ್ಟು ಸುಲಭವಾಗಿ ಒಗಟು ಬಿಡಿಸುವವರ ಕಣ್ಣಿಗೆ ಬೀಳುವುದಿಲ್ಲ. ಈ ಇಲ್ಯೂಷನ್ ಚಿತ್ರದಲ್ಲಿ ನೀವು ಮನೆಯ ಹೊರಾಂಗಣ ನೋಟವನ್ನು ಕಾಣಬಹುದು. ಹೂ ಕುಂಡಗಳು, ಮರಗಳಿವೆ. ಇದೆಲ್ಲದರ ನಡುವೆ ಹಲ್ಲಿಯೊಂದು ಅಡಗಿ ಕುಳಿತಿದೆ. ಆದರೆ ನಿಮಗೆ ಈ ಜೀವಿಯನ್ನು ಕಂಡು ಹಿಡಿಯುವುದು ಕಷ್ಟವಾಗಬಹುದು. ಈ ಸವಾಲನ್ನು ನೀವು ಸ್ವೀಕರಿಸಿ.

ಇದನ್ನೂ ಓದಿ: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ನಿಷ್ಠಾವಂತ ಪ್ರಾಣಿ ಶ್ವಾನವನ್ನು ಕಂಡು ಹಿಡಿಯಬಲ್ಲಿರಾ

ಹಲ್ಲಿಯನ್ನು ಗುರುತಿಸಲು ಸಾಧ್ಯವಾಯಿತೇ?

ಅನುಭವಿ ಆಟಗಾರರಿಗೂ ಈ ಇಲ್ಯೂಷನ್ ಚಿತ್ರವನ್ನು ಬಿಡಿಸಲಾಗುವುದಿಲ್ಲ. ಈ ಮೇಲಿನ ಚಿತ್ರದಲ್ಲಿ ಮರೆಮಾಡಲಾಗಿರುವ ಹಲ್ಲಿಯನ್ನು ಗುರುತಿಸಲು ಸಾಧ್ಯವಾಗಿಲ್ಲವೇ. ಆದರೆ ಹಲ್ಲಿ ಎಲ್ಲಿದೆ ಎಂದು ನಾವು ನಿಮಗೆ ಹೇಳುತ್ತೇವೆ. ಈ ಚಿತ್ರದಲ್ಲಿ ಹಲ್ಲಿಯನ್ನು ಗುರುತಿಸಿದ್ದು, ನೀವು ಗಮನಿಸಿದ್ದೀರಿ ಎಂದು ಭಾವಿಸುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ – Kannada News | Fresh CCTV Footage Shows Stray Dog Attack in Gurugram’s Vijay Vihar

ಗುರುಗ್ರಾಮ, ಜನವರಿ 30: ಗುರುಗ್ರಾಮದ ವಿಜಯ್ ವಿಹಾರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಅಲ್ಲಿ ಓಡಾಡುವವರ ಮೇಲೆ ನಾಯಿಗಳು ದಾಳಿ ನಡೆಸುತ್ತಿದ್ದು, ವಿಡಿಯೋ ವೈರಲ್ ಆಗಿದೆ. ಗುರುಗ್ರಾಮದ ವಿಜಯ್ ವಿಹಾರ್ ಸೆಕ್ಷನ್ 30ರಲ್ಲಿ ನಾಯಿಗಳು ಜನರ ಮೇಲೆ ದಾಳಿ ನಡೆಸುತ್ತಿವೆ. ಮನೆಯಿಂದ ಹೊರ ಬರಲು ಜನರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಾದಚಾರಿ ಮಾರ್ಗಗಳಲ್ಲಿ ಈ ಬೀದಿ ನಾಯಿಗಳಿಗೆ ಆಹಾರ ನೀಡುವವರ ಮೇಲೆ ಆಕ್ರೋಶ ವ್ಯಕ್ತವಾಗಿದೆ.

Source link