Headlines

Belagavi: ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಸ್ಟೈಲ್​​ನಲ್ಲಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ – Kannada News | Truck Driver Brutally Attacked in Belagavi Over Road Rage Incident

ಪೊಲೀಸರಿಂದ ಸ್ಥಳ ಪರಿಶೀಲನೆImage Credit source: Tv9 Kannada

ಬೆಳಗಾವಿ, ಫೆಬ್ರವರಿ 04: ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಸ್ಟೈಲ್​​ನಲ್ಲಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯ ಶಂಕರಾನಂದ ಪುತ್ಥಳಿ ಬಳಿ ನಡೆದಿದೆ. ರುಕ್ಮಿಣಿ ನಗರದ ನಿವಾಸಿ ಅಯಾಜ್ ಸವಣೂರ(36) ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಎಂಟು ಜನರಿಂದ ಮಾರಣಾಂತಿಕ ಹಲ್ಲೆ ಆರೋಪ ಕೇಳಿಬಂದಿದೆ. ಮೂಲಗಳ ಪ್ರಕಾರ ಹಿಂಡಲಗಾ ಬಳಿ ನಡೆದ ಅಪಘಾತವೇ ಘಟನೆಗೆ ಕಾರಣ ಎನ್ನಲಾಗಿದೆ. ಆ್ಯಕ್ಸಿಡೆಂಟ್ ಮಾಡಿ ಲಾರಿ ನಿಲ್ಲಿಸದೇ ಬಂದ ಕಾರಣ, ಬೆನ್ನುಹತ್ತಿ ಬಂದು ಚಾಲಕನ ಮೇಲೆ ನಡೆಸಿರುವ ಮಾಹಿತಿ ಇದೆ.

ಲಾರಿ ಚಾಲಕ ಅಯಾಜ್ ಸವಣೂರ ತೊಡೆ, ಕಿವಿ, ಬೆನ್ನು ಮತ್ತು ತಲೆ ಭಾಗಕ್ಕೆ ದುಷ್ಕರ್ಮಿಗಳು ಚಾಕುವಿನಿಂದ ಮನಬಂತೆ ಇರಿದಿದ್ದು, ಲಾರಿ ಮೇಲೂ ಕಲ್ಲು ತೂರಾಟ ನಡೆಸಿ, ಗಾಜು ಒಡೆದು ಅಟ್ಟಹಾಸ ಮೆರೆದಿದ್ದಾರೆ. ಗಂಭೀರ ಗಾಯಗೊಂಡ ಅಯಾಜ್​​ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ಘಟನಾ ಸ್ಥಳಕ್ಕೆ ಬೆಳಗಾವಿ ಪೊಲೀಸರ ತಂಡ ಮತ್ತು ಸೋಕೋ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಆಸ್ತಿಗಾಗಿ ಒಡಹುಟ್ಟಿದವನನ್ನೇ ಕೊಂದ ಪಾಪಿ; ಒಂದೂವರೆ ಎಕರೆ ಜಮೀನಿಗಾಗಿ ಹರಿದ ನೆತ್ತರು

ಕೇಸರಿ ಧ್ವಜದ ವಾಟ್ಸ್ಯಾಪ್​ ಸ್ಟೇಟಸ್ ವಿಚಾರಕ್ಕೆ ಹಲ್ಲೆ

ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಪುಟ್ಪಾಕ್ ಗ್ರಾಮದಲ್ಲಿ ಕೇಸರಿ ಧ್ವಜದ ವಾಟ್ಸ್ಯಾಪ್​ ಸ್ಟೇಟಸ್ ವಿಚಾರಕ್ಕೆ ತಾಯಿ ಮತ್ತು ಮಗನ ಮೇಲೆ ಅನ್ಯ ಕೋಮಿನವರಿಂದ ಹಲ್ಲೆ ನಡೆದಿದೆ. ಮಸೀದಿ ಮೇಲೆ ಕೇಸರಿ ಧ್ವಜ ಕಟ್ಟಿದ ರೀತಿಯಲ್ಲಿ ಸ್ಟೇಟಸ್ ಹಾಕಿದ ಆರೋಪ ಹಿನ್ನೆಲೆ ಮನೆಗೆ ಹೋಗಿ ಸ್ಟೇಟಸ್ ಹಾಕಿದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಮಗನನ್ನ ಹೊಡೆದಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ತಾಯಿ ಮೇಲೆಯೂ ಹಲ್ಲೆ ನಡೆಸಲಾಗಿದೆ. ಶಿವ ಮಾಲಾಧಾರಿಗಳ ಕಾರ್ಯಕ್ರಮಕ್ಕಾಗಿ ಕೇಸರಿ ಧ್ವಜ ಹಾಕಲಾಗಿತ್ತು. ಇದೇ ದೃಶ್ಯಗಳನ್ನು ಎಡಿಟ್ ಮಾಡಿ ಯುವಕ ಸ್ಟೇಟಸ್ ಹಾಕಿದ್ದ. ಇನ್ನು ಹಲ್ಲೆ ಖಂಡಿಸಿ ಪ್ರತಿಭಟನೆ ಪುಟ್ಪಾಕ್ ಗ್ರಾಮಸ್ಥರು ಹಾಗೂ ಶಿವಮಾಲಾಧಾರಿಗಳು ಕೈಯಲ್ಲಿ ಶಿವ ಪಾರ್ವತಿ ಹಾಗೂ ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಗುರುಮಠಕಲ್ ಠಾಣೆ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *