Headlines

Belagavi: ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ – Kannada News | Chorla Ghat 400 Crore Robbery: Karnataka Police Seeks Maharashtra Cooperation Amidst Probe

ಬೆಳಗಾವಿ, ಜನವರಿ 25: ಕರ್ನಾಟಕ-ಗೋವಾ ಗಡಿಯಲ್ಲಿ 400 ಕೋಟಿ ರಾಬರಿ ಪ್ರಕರಣ ಸಂಬಂಧ ಬೆಳಗಾವಿ ಎಸ್ಪಿ ಕೆ. ರಾಮರಾಜನ್ ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಜ.6ರಂದು ನಾಸಿಕ್ ಜಿಲ್ಲಾ ವರಿಷ್ಠಾಧಿಕಾರಿಯಿಂದ ನಮಗೆ ಪತ್ರ ಬಂದಿದ್ದು, ಚೋರ್ಲಾ ಘಾಟ್​​ನಲ್ಲಿ ರಾಬರಿಯಾಗಿರುವ ವಿಷಯ ಅದರಲ್ಲಿ ತಿಳಿಸಲಾಗಿತ್ತು. ರಾಬರಿ ಆದ ಹಣದ ಮೊತ್ತ ನಾಲ್ಕನೂರು ಕೋಟಿ ಆಗಿರಬಹುದು ಅಂತಾ ಪತ್ರದಲ್ಲಿ ಇತ್ತು. ಈ ಕಾರಣಕ್ಕೆ ನಮ್ಮ ಖಾನಾಪುರದ ಸಬ್ ಇನ್ಸ್ಪೆಕ್ಟರ್ ಸೇರಿ ಒಂದು ತಂಡವನ್ನ ಕಳುಹಿಸಿದ್ದೇವೆ. ಎಸ್ಐಟಿ ತಂಡ ಕೂಡ ರಚನೆ ಆಗಿದೆ. ಘಟನೆ ಬಗ್ಗೆ ಯಾರು ದೂರು ನೀಡಿದರೂ ಪಡೆಯುತ್ತೇವೆ.  ಈ ಬಗ್ಗೆ ಮಹಾರಾಷ್ಟ್ರ ಪೊಲೀಸರು ತನಿಖೆ ಮಾಡುತ್ತಿದ್ದುಮ ನಾವು ಸಹಕಾರ ಕೊಡುತ್ತೇವೆ. ಚೋರ್ಲಾ ಘಾಟ್ ಮೂರು ರಾಜ್ಯಗಳ ವ್ಯಾಪ್ತಿಯಲ್ಲಿ ಬರಲಿದೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *