Bengaluru Rain: ಬೆಂಗಳೂರಲ್ಲಿ ಧಾರಾಕಾರ ಮಳೆಗೆ ವಾಹನ ಸವಾರರು ಹೈರಾಣ, 7 ಜಿಲ್ಲೆಗಳಲ್ಲಿ ನಾಳೆ ಭಾರಿ ವರ್ಷಧಾರೆಯ ಮುನ್ಸೂಚನೆ – Kannada News | Bengaluru Rain: Sudden Downpour Snarls Traffic in City; IMD Issues Heavy Rain Alert for 7 Karnataka Districts

ಬೆಂಗಳೂರು, ಆಗಸ್ಟ್​​ 04: ಸಿಲಿಕಾನ್ ಸಿಟಿ ಬೆಂಗಳೂರಿಗೆ (Bengaluru) ಮಳೆರಾಯ ಸರ್ಪ್ರೈಸ್ ಎಂಟ್ರಿ ಕೊಟ್ಟಿದ್ದು, ಕೆ. ಆರ್. ಮಾರ್ಕೆಟ್, ಟೌನ್ ಹಾಲ್, ಕೆ. ಆರ್. ಸರ್ಕಲ್, ವಿಧಾನಸೌಧ, ಎಂ.ಜಿ. ರೋಡ್, ಶಾಂತಿನಗರ ಸುತ್ತಮುತ್ತ ಭಾರಿ ಮಳೆಯಾಗಿದೆ. ಕೆ.ಆರ್. ಮಾರ್ಕೆಟ್ ಸುತ್ತಮುತ್ತ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ (Traffic Jam) ಆದ ಪರಿಣಾಮ ವಾಹನ ಸವಾರರು ತೀವ್ರ ಪರದಾಡಿದ್ದು, ಟ್ರಾಫಿಕ್​​ನಲ್ಲಿ ಸಿಲುಕಿ ಆಂಬುಲೆನ್ಸ್ ಕೂಡ ಸಿಲುಕಿಕೊಂಡ ಪ್ರಸಂಗ ನಡೆದಿದೆ.

7 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲೆಗಳಲ್ಲಿ ನಾಲೆ ಧಾರಾಕಾರ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಸಾಧಾರ ಮಳೆಯ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಕೆಆರ್‌ಎಸ್, ಆಲಮಟ್ಟಿಗೆ ಬೃಹತ್‌ ಒಳಹರಿವು! ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ

ಉಡುಪಿಯಲ್ಲಿ ದಾಖಲೆಯ ಮಳೆ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಕ್ಲಾಡಿಯಲ್ಲಿ ನಿನ್ನೆ ದಾಖಲೆಯ ಅಂದರೆ ಬರೋಬ್ಬರಿಬ 189 ಮಿ.ಮೀ. ಮಳೆಯಾಗಿದೆ. ಬೆಳಗಾವಿಯ ಖಾನಾಪುರದ ಪಾರ್ವಾಡ್​​ನಲ್ಲಿ 174 ಮಿ.ಮೀ, ತೀರ್ಥಹಳ್ಳಿಯ ಆಗುಂಬೆಯಲ್ಲಿ 170 ಮಿ.ಮೀ, ಮಂಗಳೂರಿನ ಶಿರ್ಥಡಿಯಲ್ಲಿ 133.5 ಮಿ.ಮೀ ಮತ್ತು ಉತ್ತರ ಕನ್ನಡದ ಸಿದ್ದಾಪುರದ ದೊಡ್ಮನೆಯಲ್ಲಿ 124.5 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.​​

Source link

Leave a Reply

Your email address will not be published. Required fields are marked *