Bidadi Township: ವಿವಾದದ ನಡುವೆಯೂ ಬಿಡದಿ ಟೌನ್​ ಶಿಪ್​​​ಗೆ​ ಅಂತಿಮ ಅಧಿಸೂಚನೆ ಪ್ರಕಟ, ರೈತರ ಮುಂದೆ 2 ಆಯ್ಕೆ – Kannada News | Karnataka government notifies Land acquisition for bidadi township, here Is More Details

ಬೆಂಗಳೂರು, (ಜೂನ್ 12): ರೈತರ (Farmers) ವಿರೋಧದ ನಡುವೆಯೂ ರಾಜ್ಯ ಸರ್ಕಾರ (Karnataka Governmnet) ಬಿಡದಿ ಟೌನ್ ಶಿಪ್‌ಗೆ (Bidadi Township) ಅಂತಿಮ ಅಧಿಸೂಚನೆ ಪ್ರಕಟಿಸಿದೆ. ರಾಜಕೀಯ ತಿಕ್ಕಾಟ, ಪ್ರತಿಭಟನೆಗಳ ನಡುವೆಯೂ ನಗರಾಭಿವೃದ್ಧಿ ಇಲಾಖೆ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಈ ಯೋಜನಾ ವ್ಯಾಪ್ತಿಯ 9 ಕಂದಾಯ ಗ್ರಾಮಗಳ ಪೈಕಿ ಪ್ರಾರಂಭಿಕವಾಗಿ 3 ಗ್ರಾಮಗಳ 519 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟ ಮಾಡಿದೆ. ಮೊದಲ ಹಂತದ ಭೂ ಸ್ವಾಧೀನ ರಾಮನಗರ ಹಾಗೂ ಹಾರೋಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ನಡೆಯಲಿದ್ದು, ಪ್ರತಿ ಎಕರೆಗೆ 2.07 ಕೋಟಿಯಿಂದ 2.50 ಕೋಟಿ ರೂಪಾಯಿವರೆಗೂ ದರ ನಿಗದಿ ಮಾಡಲಾಗಿದೆ.ಅಥವಾ ಶೇ.50ರಷ್ಟು ಅಭಿವೃದ್ಧಿ ಪಡಿಸಿರುವ ಭೂಮಿ ನೀಡಲು ಆದೇಶಿಸಲಾಗಿದೆ.

ಮುಖ್ಯಾಂಶಗಳು

  • ಬಿಡದಿ ಬಳಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರಕ್ಕೆ ಅಧಿಸೂಚನೆ
  • ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕು ವ್ಯಾಪ್ತಿಯ ಬಿಡದಿ
  • 3 ಗ್ರಾಮಗಳ ಒಟ್ಟು 519 ಎಕರೆ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ
  • ಕೆಂಪಯ್ಯನಪಾಳ್ಯದ 384 ಎಕರೆ 22 ಗುಂಟೆ, ಮಂಡಲಹಳ್ಳಿಯ 71 ಎಕರೆ 13 ಗುಂಟೆ, ವಡೇರಹಳ್ಳಿಯ 63 ಎಕರೆ 10 ಗುಂಟೆ ಭೂಸ್ವಾಧೀನ.
  • ರಾಜಕೀಯ ತಿಕ್ಕಾಟ, ಪ್ರತಿಭಟನೆಗಳ ನಡುವೆ ಗರಾಭಿವೃದ್ಧಿ ಇಲಾಖೆಯಿಂದ ಅಧಿಸೂಚನೆ
  • ಪ್ರತಿ ಎಕರೆಗೆ 2.07 ಕೋಟಿಯಿಂದ 2.50 ಕೋಟಿವರೆಗೂ ದರ ನಿಗದಿ

3 ಗ್ರಾಮಗಳ ಒಟ್ಟು 519 ಎಕರೆ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದ್ದು,ಕೆಂಪಯ್ಯನಪಾಳ್ಯದ 384 ಎಕರೆ 22 ಗುಂಟೆ, ಮಂಡಲಹಳ್ಳಿಯ 71 ಎಕರೆ 13 ಗುಂಟೆ ಹಾಗೂ ವಡೇರಹಳ್ಳಿಯ 63 ಎಕರೆ 10 ಗುಂಟೆ ಭೂಸ್ವಾಧೀನಕ್ಕೆ ನಗರಾಭಿವೃದ್ಧಿ ಇಲಾಖೆ ತನ್ನ ಅಧಿಸೂಚನೆಯಲ್ಲಿ ಪ್ರಕಟಿಸಿದೆ.

ಇದನ್ನೂ ಓದಿ: ಸ್ವಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ಕೊಟ್ಟ ಸಿಎಂ ಡಿಕೆ ಶಿವಕುಮಾರ್, ಜತೆಗೊಂದು ಕಿವಿಮಾತು

ರೈತರ ಮುಂದೆ ಎರಡು ಆಯ್ಕೆ ಇಟ್ಟ ಸರ್ಕಾರ

ಬಿಡದಿ ಟೌನ್​ ಶಿಪ್​​​ಗಾಗಿ ಭೂಸ್ವಾಧೀನಕ್ಕೆ ಪರಿಹಾರವಾಗಿ ಪ್ರತಿ ಎಕರೆ ಭೂಮಿಗೆ ಕನಿಷ್ಠ 2.07 ಕೋಟಿ ರಿಂದ 2.5 ಕೋಟಿ ರೂಪಾಯಿ ವರೆಗೆ ನೀಡುವಂತೆ ಪ್ರಸ್ತಾಪಿಸಲಾಗಿದೆ. ಮತ್ತೊಂದು ಆಯ್ಕೆಯಾಗಿ, ಶೇ.50 ರಷ್ಟು ಅಭಿವೃದ್ಧಿಪಡಿಸಿದಭೂಮಿಯನ್ನು ರೈತರಿಗೆ ಹಿಂತಿರುಗಿಸಿ ನೀಡುವ ವ್ಯವಸ್ಥೆಯನ್ನೂ ಸರ್ಕಾರ ಮಾಡಿದೆ. ಅಂದರೆ, ರೈತರು ಹಣ ಅಥವಾ ಅಭಿವೃದ್ಧಿಪಡಿಸಿದ ಭೂಮಿ ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ನೀಡಲಾಗಿದ್ದು. ಆದ್ರೆ, ರೈತರ ನಡೆ ಏನು ಎನ್ನುವುದು ಕಾದುನೋಡಬೇಕಿದೆ.

ಒಟ್ಟು 754 ರೈತರ ಭೂಮಿ ಸ್ವಾಧೀನಕ್ಕೆ ನರ್ಧಾರ

ಒಟ್ಟು 754 ರೈತರ ಭೂಮಿಯನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಿದೆ. ಈ ರೈತರಿಗೆ ತಮ್ಮ ಭೂಮಿಗೆ ಸಂಬಂಧಿಸಿದ ಎಲ್ಲಾ ಸೂಕ್ತ ದಾಖಲೆಗಳನ್ನು ಸಲ್ಲಿಸಿ, ನಿರ್ದಿಷ್ಟ ಸಮಯದಲ್ಲಿ ಪರಿಹಾರವನ್ನು ಪಡೆಯಲು ಸೂಚಿಸಲಾಗಿದೆ. ಪ್ರತಿ ಎಕರೆಗೆ ಕನಿಷ್ಠ 2.14 ಕೋಟಿರೂ ದರ ನಿಗದಿ ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ. ಅಂದರೆ, ಇದಕ್ಕಿಂತ ಕಡಿಮೆ ದರಕ್ಕೆ ಭೂಮಿ ತೆಗೆದುಕೊಳ್ಳಬಾರದು ಎಂಬ ಭರವಸೆಯನ್ನು ಸರ್ಕಾರ ನೀಡಲು ಪ್ರಯತ್ನಿಸಿದೆ.

ರೈತರ ವಿರೋಧ, ಸ್ಥಳೀಯರ ಅಸಮಾಧಾನ ಇದ್ದರೂ ನಗರಾಭಿವೃದ್ಧಿ ಇಲಾಖೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಸರ್ಕಾರದ ನಿಲುವು ಪ್ರಕಾರ, ಟೌನ್ ಶಿಪ್ ಯೋಜನೆ ಮೂಲಕ ಪ್ರದೇಶದಲ್ಲಿ ಅಭಿವೃದ್ಧಿ, ಮೂಲಸೌಕರ್ಯ, ಉದ್ಯೋಗಾವಕಾಶಗಳು ಹೆಚ್ಚುವುವು ಎಂದು ಹೇಳಲಾಗುತ್ತಿದೆ. ಆದರೆ ರೈತರಿಗೆ ತಮ್ಮ ಭೂಮಿ, ಜೀವನ, ಭವಿಷ್ಯ ಬಗ್ಗೆ ಆತಂಕ ಇದೆ.

ಕುಮಾರಸ್ವಾಮಿ ಹೇಳಿದ್ದೇನು?

ಇನ್ನು ಈ ಬಗ್ಗೆ ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ, ಸರ್ಕಾರ ಫೈನಲ್ ನೋಟಿಫಿಕೇಶನ್ ಮಾಡಿದೆ. ಆದ್ರೆ, ಕಳೆದ 470 ದಿನಗಳಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಆ ಜಾಗದಲ್ಲಿ ಯಶಸ್ವಿಯಾಗಿ ಕೃಷಿ ಕೆಲಸ ನಡೆಯುತ್ತಿದೆ.ಇವತ್ತು ಅವರನ್ನ ಒಕ್ಕಲಿಬ್ಬಿಸುವ ಕೆಲಸವನ್ನು ಸರ್ಕಾರ ಅಲ್ಲಿ ಪ್ರತಿಭಟನೆ ಮಾಡ್ಲಿಕ್ಕೆ ಹೊರಟಿರುವ ರೈತರ ಮೇಲೆ ಎಫ್ಐಆರ್ ಹಾಕುತ್ತಾರೆ. ನಾನು ಈಗಿನ ಗೃಹ ಸಚಿವರ ಹೇಳಿಕೆಯನ್ನು ಗಮನಿಸಿದ್ದೇನೆ. ಯಾವುದು ಎಫ್​​​ಐಆರ್ ಹಾಕಿಲ್ಲ ಎಂದು ಈಗಿನ ಗೃಹ ಸಚಿವರು ಹೇಳುತ್ತಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ಮಾಡುವವರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ನಡೆಸುತ್ತಿದೆ. ಇದರ ಜೊತೆಗೆ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಜನಪ್ರತಿನಿಧಿಗಳು ಕೂಡ ಸೇರ್ಕೊಂಡಿದ್ದಾರೆ. ಸರ್ಕಾರ ಯಾವುದೇ ಅಧಿಸೂಚನೆ ಹೊರಡಿಸಿದರೂ ಅದಕ್ಕೆ ರೈತರ ಒಪ್ಪಿಗೆ ಬೇಕು ಎಂದರು.

ರೈತರ ಭಾವನೆಗೆ ಬೆಲೆಕೊಟ್ಟು ಯೋಜನೆ ಸ್ಥಗಿತ ಮಾಡಿದ್ದೆ

ಯಾವುದೇ ಮೀಟಿಂಗ್ ಸಹ ಮಾಡಿಲ್ಲ. ಶೇ. 80% ಪರ್ಸೆಂಟ್ ರೈತರ ವಿರೋಧ ಇದೆ.ಸರ್ಕಾರ ನಾವು ಮಾಡಿದ್ದೇ ತೀರ್ಮಾನ ಅಂತ ದಬ್ಬಾಳಿಕೆಯಲ್ಲಿ ಹೊರಟಿದ್ದಾರೆ. ಹಲವು ಪ್ರದೇಶಗಳಲ್ಲಿ ಡ್ರೈ ಲ್ಯಾಂಡ್ ಏರಿಯಾ ಇದೆ. ಅದನ್ನ ಐಡೆಂಟಿಫೈ ಮಾಡಿ ಇವತ್ತಿನ ಸಮಸ್ಯೆಗೆ ಜಾಗಗಳನ್ನು ಹುಡುಕಿ. ಈ ಹಿಂದೆ 2006ರಲ್ಲಿ ಐದು ಟೌನ್ ಶಿಪ್ ಮಾಡಬೇಕು ಅಂತ ನಿರ್ಧಾರ ಮಾಡಿದ್ದೆ.ಅದಕ್ಕೆ ರೈತರ ವಿರೋಧ ಬಂದಿತ್ತು. ಬೆಂಗಳೂರಲ್ಲಿ ಜನ ಸಂದಣಿ ಜಾಸ್ತಿಯಾಗಿದೆ. ಅದಕ್ಕಾಗಿ ಸುತ್ತ ಮೂವತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿ ಟೌನ್ ಶಿಪ್ ಪ್ಲಾನಿಂಗ್ ಮಾಡಿದ್ದೆ. ಕಾಂಗ್ರೆಸ್ ಅವರು ಇದಕ್ಕೆ ವಿರೋಧ ಮಾಡಿದ್ರು. ಅವರ ವಿರೋಧ ಹಾಗೂ ರೈತರ ಭಾವನೆಗೆ ಬೆಲೆಕೊಟ್ಟು ಯೋಜನೆಯನ್ನು ಸ್ಥಗಿತ ಮಾಡಿದ್ದೆ ಎಂದು ಸ್ಪಷ್ಟಪಡಿಸಿದರು.

ಈಗ ಬೆಂಗಳೂರು ದಕ್ಷಿಣ ಅಂತ ಮಾಡಿ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಈಗ ಅಲ್ಲಿನ ರೈತರಿಗೆ ಇರುವಂತದ್ದು ಕಾನೂನು ಹೋರಾಟ ಮಾಡಬೇಕು ಅಂತ. ಪ್ರಿಯಾಂಕ ಖರ್ಗೆ ಅವರು ಸಹ ಹೇಳಿದ್ದಾರೆ ಕಾನೂನು ಹೋರಾಟ ಮಾಡಲಿ ಎಂದು. ಇದರಿಂದ ರೈತರ ಬಗ್ಗೆ ಎಷ್ಟು ಗೌರವ ಇದೆ ಎಂದು ಗೊತ್ತಾಗುತ್ತೆ. ದೊಡ್ಡಬಳ್ಳಾಪುರ ಭಾಗದಲ್ಲಿ ಕೂಡ ರೈತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂದು ಕಿಡಿಕಾರಿದರು.

Published On – 4:00 pm, Fri, 12 June 26

Source link

Leave a Reply

Your email address will not be published. Required fields are marked *