BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಪುಣ್ಯೇಶ್ ಬಂಧನ, ಮುಂದುವರಿದ ತನಿಖೆ – Kannada News | Egg Attack on MLA B.P. Harish: Accused Punyesh Arrested, Conspiracy Investigation Underway

ಬೆಂಗಳೂರು, ಜುಲೈ 23: ಯುವ ಕಾಂಗ್ರೆಸ್​​ ಕಾರ್ಯಕರ್ತರ ಪ್ರತಿಭಟನೆಗೆ ಕೌಂಟರ್​​ ಆಗಿ ಕಾಂಗ್ರೆಸ್​​ ಕಚೇರಿ ಬಳಿ ಬಿಜೆಪಿಗರ ಪ್ರೊಟೆಸ್ಟ್​​ ವೇಳೆ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಪುಣ್ಯೇಶ್ ಎಂಬಾತನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಶಿವಾಜಿನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು ತಡರಾತ್ರಿಯವರೆಗೂ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ, ಪುಣ್ಯೇಶ್ ಒಂದು ಬಾಕ್ಸ್‌ನಲ್ಲಿ ಮೊಟ್ಟೆಗಳನ್ನು ತಂದಿದ್ದ ಎಂದು ತಿಳಿದುಬಂದಿದೆ. ಈ ಕೃತ್ಯದಲ್ಲಿ ಪುಣ್ಯೇಶ್ ಜೊತೆ ಇನ್ನೂ ಕೆಲವರು ಭಾಗಿಯಾಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಮೊಟ್ಟೆಗಳನ್ನು ಎಲ್ಲಿಂದ ತರಲಾಯಿತು, ಮೊಟ್ಟೆ ಎಸೆಯಲು ಯಾರು ಹೇಳಿದರು, ಮತ್ತು ಪುಣ್ಯೇಶ್ ಜೊತೆಗಿದ್ದವರು ಯಾರು ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದೊಂದು ಪೂರ್ವ ನಿಯೋಜಿತ ಕೃತ್ಯ ಅಥವಾ ಷಡ್ಯಂತ್ರವೇ ಎಂಬ ಆಯಾಮದಲ್ಲೂ ತನಿಖೆ ಮುಂದುವರಿದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *