ಬೆಂಗಳೂರು,/ಚಿತ್ರದುರ್ಗ (ಏಪ್ರಿಲ್ 23): ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ. ಸುಧಾಕರ್ (minister D sudhakar) ಅವರ ಸ್ಥಿತಿ ಗಂಭೀರವಾಗಿ ಎಂದು ತಿಳಿದುಬಂದಿದೆ. ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಆಪರೇಷನ್ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಅದು ಕಡಿಮೆಯಾಗದಿದ್ದರಿಂದ ಅವರನ್ನು ಕಳೆದ ಎರಡು ದಿನದ ಹಿಂದೆ ಬೆಂಗಳೂರಿನ ಕಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ, ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
