Cabinet Expansion: ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ – Kannada News | K.N. Rajanna Criticises Karnataka Cabinet Over Lack of Womens Representation, Recalls Historical Leadership Changes

ಬೆಂಗಳೂರು, ಆಗಸ್ಟ್ 04: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆಗಳ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಇತಿಹಾಸ ಗಮನಿಸಿದರೆ, ಐದು ವರ್ಷದ ಅವಧಿಯಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸಿದಾಗಲೆಲ್ಲಾ ಮುಂದಿನ ಚುನಾವಣೆಯಲ್ಲಿ ಆ ಪಕ್ಷ ನೆಲಕಚ್ಚಿದೆ.

ಹಿಂದೆ ವೀರೇಂದ್ರ ಪಾಟೀಲ್, ಬಂಗಾರಪ್ಪ ಹಾಗೂ ಬಿಜೆಪಿಯ ಯಡಿಯೂರಪ್ಪ ಅವರ ಬದಲಾವಣೆ ವೇಳೆ ಇದು ಸಾಬೀತಾಗಿದೆ ಎಂದು ನೆನಪಿಸಿದರು. ಇದೇ ವೇಳೆ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದಕ್ಕೂ ಅಸಮಾಧಾನ ವ್ಯಕ್ತಪಡಿಸಿದ ಅವರು, ಮಹಿಳೆಯರಿಗೆ ಅವಕಾಶ ನೀಡದೇ ಸಂಪುಟ ರಚಿಸುವುದು ಸರಿಯಾದ ಕಾಂಪೋಸಿಷನ್ ಅಲ್ಲ ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *