Category Archives: Blog

Your blog category

ನಿಮಗೆ ಸಾಬರಷ್ಟೇ ಓಟ್ ಹಾಕಿದ್ದಾರಾ ಸಿದ್ದರಾಮಯ್ಯ? ಬಾಗಲಕೋಟೆಯಲ್ಲಿ ಗುಡುಗಿದ ಯತ್ನಾಳ್

ನಿಮಗೆ ಸಾಬರಷ್ಟೇ ಓಟ್ ಹಾಕಿದ್ದಾರಾ ಸಿದ್ದರಾಮಯ್ಯ? ಬಾಗಲಕೋಟೆಯಲ್ಲಿ ಗುಡುಗಿದ ಯತ್ನಾಳ್

ಬಾಗಲಕೋಟೆ, ಏಪ್ರಿಲ್ 3: ಬಾಗಲಕೋಟೆಯಲ್ಲಿ ಉಪಚುನಾವಣೆಯ ಕಣ ರಂಗೇರಿದ್ದು, ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಸರಿ ಅಭ್ಯರ್ಥಿ ಪರವಾಗಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಯನ್ನು ಪ್ರಸ್ತಾಪಿಸಿದ ಅವರು, ಹಿಂದೂಗಳೆಲ್ಲರೂ ಒಂದಾಗುವಂತೆ ಕರೆ ನೀಡಿದರು. ಶಿವಾಜಿ ಮಹಾರಾಜರು ಇಲ್ಲದಿದ್ದರೆ ಸನಾತನ ಧರ್ಮದ ರಕ್ಷಣೆ ಸಾಧ್ಯವಾಗುತ್ತಿರಲಿಲ್ಲ. ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದವರ ಮೇಲೆ ಜೆಸಿಬಿ ಪ್ರಯೋಗ ಮಾಡಬೇಕು ಎಂದು ಗುಡುಗಿದರು.

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇದು ಸಾಬರ ಸರ್ಕಾರ. ಒಳಗೆ ಕೂತು ಬೆಂಕಿ ಹಚ್ಚುವ ಮುಲ್ಲಾಗಳಿಗೆ ತಿಂಗಳಿಗೆ 6 ಸಾವಿರ ಕೊಡತ್ತೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇವಲ ಒಂದು ಸಮುದಾಯದ ಪ್ರೀತ್ಯರ್ಥಕ್ಕಾಗಿ ಬಜೆಟ್‌ನಲ್ಲಿ ಸಾವಿರಾರು ಕೋಟಿ ಮೀಸಲಿಡುತ್ತಿದ್ದಾರೆ. ಹಿಂದೂ ಹೆಣ್ಣುಮಕ್ಕಳ ರಕ್ಷಣೆಗಾಗಿ ನಾವು ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಆಕ್ರೋಶ ಹೊರಹಾಕಿದರು. ಏಪ್ರಿಲ್ 9 ರಂದು ನಡೆಯುವ ಮತದಾನದಲ್ಲಿ ಪ್ರತಿಯೊಬ್ಬ ಹಿಂದೂ ಮುಂಜಾನೆ 7 ಗಂಟೆಗೆ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸುವಂತೆ ಅವರು ವಿನಂತಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬದುಕಿದ್ದರೂ ದಾಖಲೆಯಲ್ಲಿ ‘ಮೃತ’: ಅಧಿಕಾರಿಗಳ ಎಡವಟ್ಟಿಗೆ ಹಂಪಮ್ಮ ಪರದಾಟ; ಉಪ ಲೋಕಾಯುಕ್ತರು ಮಾಡಿದ್ದೇನೆ ನೋಡಿ

ಹೊಸಪೇಟೆ, ಏ,3: ಜೀವಂತವಾಗಿದ್ದರೂ ಮಹಿಳೆಯೊಬ್ಬರನ್ನು ದಾಖಲೆಗಳಲ್ಲಿ ‘ಮೃತ’ ಎಂದು ತೋರಿಸಿ, ಸರ್ಕಾರದ ಸವಲತ್ತುಗಳಿಂದ ವಂಚಿತರನ್ನಾಗಿಸಿದ ಹೊಸಪೇಟೆ ತಾಲ್ಲೂಕಿನ ಕಂದಾಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಸ್ವಯಂಪ್ರೇರಿತ (Suo Motu) ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೊಸಪೇಟೆ ತಾಲ್ಲೂಕಿನ ಧರ್ಮಸಾಗರ ಗ್ರಾಮದ ನಿವಾಸಿ ಎನ್. ಹಂಪಮ್ಮ ಅವರು ಈ ದುರಾಡಳಿತದ ಬಲಿಪಶು. ಅದೇ ಗ್ರಾಮದ ಎನ್. ತಿಮ್ಮಾರೆಡ್ಡಿ ಅವರ ಪತ್ನಿ ಹಂಪಮ್ಮ ಎಂಬುವವರು 2024 ರಲ್ಲಿ ನಿಧನರಾಗಿದ್ದರು. ಆದರೆ, ಅಧಿಕಾರಿಗಳು ಯಾವುದೇ ಪ್ರಾಥಮಿಕ ಪರಿಶೀಲನೆ ನಡೆಸದೆ, ದಾಖಲೆಗಳಲ್ಲಿ ಸಂತ್ರಸ್ತೆ ಎನ್. ಹಂಪಮ್ಮ ಅವರನ್ನೇ ಮೃತ ಎಂದು ನಮೂದಿಸಿದ್ದರು.

ತಾನು ಬದುಕಿದ್ದೇನೆ ಎಂದು ಸಾಬೀತುಪಡಿಸಲು ಹಂಪಮ್ಮ ಅವರು ಕಚೇರಿಯಿಂದ ಕಚೇರಿಗೆ ಅಲೆದಾಡಿದ್ದಾರೆ. ಆಧಾರ್ ಕಾರ್ಡ್‌ನಲ್ಲಿನ ದೋಷ ಸರಿಪಡಿಸಿ, ತಮಗೆ ಸಿಗಬೇಕಾದ ಸರ್ಕಾರಿ ಯೋಜನೆಗಳ ಲಾಭ ನೀಡುವಂತೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಕಿಂಚಿತ್ತೂ ಗಮನ ಹರಿಸಿರಲಿಲ್ಲ. ಈ ಕುರಿತು ಏಪ್ರಿಲ್ 1 ರಂದು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯನ್ನು ಗಮನಿಸಿದ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ಗದಗ: ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಅನೈತಿಕ ಸಂಬಂಧವೇ ಮುಳುವಾಯ್ತು, ಮೂವರು ಅರೆಸ್ಟ್!

ಈ ಘಟನೆಯನ್ನು ‘ದುರಾಡಳಿತ’ ಮತ್ತು ‘ಕರ್ತವ್ಯ ಲೋಪ’ ಎಂದು ಪರಿಗಣಿಸಿರುವ ಉಪ ಲೋಕಾಯುಕ್ತರು ಕೆಲವೊಂದು ನಿರ್ದೇಶನಗಳನ್ನು ನೋಡಿದ್ದಾರೆ. ಹೊಸಪೇಟೆ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಇಒ (EO) ಮತ್ತು ಬೈಲುವದ್ದಿಗೇರಿ ಗ್ರಾಮ ಪಂಚಾಯಿತಿಯ ಪಿಡಿಒ (PDO) ಅವರಿಗೆ ನೋಟಿಸ್ ನೀಡಲಾಗಿದ್ದು, ಮೇ 20, 2026 ರಂದು ಖುದ್ದಾಗಿ ಹಾಜರಾಗಿ ವಿವರಣೆ ನೀಡುವಂತೆ ಆದೇಶಿಸಲಾಗಿದೆ. ಹಂಪಮ್ಮ ಅವರ ಆಧಾರ್ ಕಾರ್ಡ್ ದೋಷಗಳನ್ನು ಕೂಡಲೇ ಸರಿಪಡಿಸಿ, ಅವರಿಗೆ ಸವಲತ್ತುಗಳು ಸಿಗುವಂತೆ ಮಾಡಲು ತಹಶೀಲ್ದಾರ್‌ಗೆ ಸೂಚಿಸಲಾಗಿದೆ. ಪ್ರಕರಣದ ಗಾಂಭೀರ್ಯತೆಯನ್ನು ಅರಿತು, ಆದೇಶದ ಪ್ರತಿಯನ್ನು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಿಗೂ ರವಾನಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾವಣನ ಪಾತ್ರ ಮಾಡಿದ ಯಶ್​ನ ಹಾಡಿ ಹೊಗಳಿದ ರಣಬೀರ್ ಕಪೂರ್

ರಾಕಿಂಗ್ ಸ್ಟಾರ್ ಯಶ್, ರಣಬೀರ್ ಕಪೂರ್, ಸನ್ನಿ ಡಿಯೋಲ್, ಸಾಯಿ ಪಲ್ಲವಿ ಸೇರಿದಂತೆ ಅನೇಕರು ‘ರಾಮಾಯಣ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಕೆಲವರು ಟೀಸರ್ ಹೊಗಳಿದರೆ ಇನ್ನೂ ಕೆಲವರು ಇದನ್ನು ಎಐ ವಿಡಿಯೋ ಎಂದು ಕರೆದಿದ್ದಾರೆ. ಹೀಗಿರುವಾಗಲೇ ರಾವಣನ ಪಾತ್ರ ಮಾಡಿದ ಯಶ್ ಅವರನ್ನು ರಣಬೀರ್ ಕಪೂರ್ ಹಾಡಿ ಹೊಗಳಿದ್ದಾರೆ.

‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರು ರಾಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್ 2ರಂದು ರಿಲೀಸ್ ಆದ ಟೀಸರ್ ಅಲ್ಲಿ ರಾಮನ ಪಾತ್ರವನ್ನೇ ಹೈಲೈಟ್ ಮಾಡಲಾಗಿದೆ. ಹನುಮ ಜಯಂತಿಯಂದು ಟೀಸರ್ ರಿಲೀಸ್ ಆಗಿದೆ. ಆದರೆ, ಹನುಮಂತನ ಪಾತ್ರವನ್ನೇ ತೋರಿಸಿಲ್ಲ. ಇದು ಚರ್ಚೆಗೆ ಕಾರಣ ಆಗಿದೆ. ಸಿನಿಮಾದಲ್ಲಿ ಯಶ್ ಮುಖ ತೋರಿಸದೇ ಇದ್ದರೂ ಅವರ ಪಾತ್ರ ಗಮನ ಸೆಳೆಯುವ ರೀತಿಯಲ್ಲಿ ಇದೆ.

‘ರಾಮಾಯಣ’ ಸಿನಿಮಾದಲ್ಲಿ ಯಶ್ ಪಾತ್ರ ಪ್ರಮುಖವಾಗಲಿದೆ. ಏಕೆಂದರೆ ಅವರು ಮಾಡುತ್ತಿರುವುದು ರಾವಣನ ಪಾತ್ರ. ಈ ಪಾತ್ರ ಹೇಗಿದೆ ಎಂಬುದರ ಝಲಕ್ ತೋರಿಸಲಾಗಿದೆ. ಆದರೆ, ಪಾತ್ರ ಸಂಪೂರ್ಣವಾಗಿ ರಿವೀಲ್ ಮಾಡಿಲ್ಲ. ಯಶ್ ಬಗ್ಗೆ ಹಾಗೂ ಅವರ ಜನಪ್ರಿಯತೆ ಬಗ್ಗೆ ರಣಬೀರ್ ಮಾತನಾಡಿದ್ದಾರೆ.

‘ಯಶ್ ಅವರು ಸಾಕಷ್ಟು ಸ್ಟಾರ್​​ಡಂ ಜೊತೆ ಬಂದಿದ್ದಾರೆ. ರಾವಣನ ಪಾತ್ರ ಮಾಡಲು ಅಷ್ಟು ಜನಪ್ರಿಯತೆ ಇರಬೇಕು. ರಾವಣನ ಬಗ್ಗೆ ಅವರಿಗೆ ಇರುವ ವ್ಯಾಖ್ಯಾನ ಬೇರೆಯದೇ ಇದೆ. ಇದನ್ನು ಪ್ರೇಕ್ಷಕರು ಎಂಜಾಯ್ ಮಾಡುತ್ತಾರೆ’ ಎಂದು ರಣಬೀರ್ ಕಪೂರ್ ಹೇಳಿದ್ದಾರೆ.

ಇದನ್ನೂ ಓದಿ: ‘ರಾಮಾಯಣ’ ಟೀಸರ್​ನಲ್ಲಿ ದೊಡ್ಡ ತಪ್ಪು; AI ಅಲ್ಲಿ ಮಾಡಿದ್ದು ಎಂದು ಕಂಡು ಹಿಡಿದ ಫ್ಯಾನ್ಸ್

ಯಶ್ ಅವರು ಇತ್ತೀಚೆಗೆ ‘ರಾಮಾಯಣ’ ಸಿನಿಮಾದ ಡಬ್ಬಿಂಗ್ ಮುಗಿಸಿಕೊಟ್ಟಿದ್ದಾರೆ. ಕನ್ನಡದ ಜೊತೆಗೆ ಅವರು ಹಿಂದಿಯಲ್ಲೂ ಡಬ್ ಮಾಡಿದರೇ ಎಂಬ ಕುತೂಹಲ ಮೂಡಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ. ನಿತೇಶ್ ತಿವಾರಿ ನಿರ್ದೇಶನದ ಈ ಸಿನಿಮಾ ಈ ವರ್ಷ ದೀಪಾವಳಿಗೆ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗ್ಯಾಸ್ ಇಲ್ಲಾ ಅಂತ ಇಂಡಕ್ಷನ್​ನಲ್ಲಿ ಅಡುಗೆ ಮಾಡುತ್ತಿದ್ದೀರಾ? ಈ ಅಂಶಗಳು ನಿಮಗೆ ಗೊತ್ತಿರಲೇ ಬೇಕು!

ಬೆಂಗಳೂರು, ಏಪ್ರಿಲ್ 03: ಇರಾನ್, ಇಸ್ರೇಲ್ ಮತ್ತು ಅಮೇರಿಕಾ ಯುದ್ಧದ ಪರಿಣಾಮವಾಗಿ ಎಲ್​ಪಿಜಿ ಸಿಲಿಂಡರ್ ಕೊರತೆ ಹೆಚ್ಚಾಗಿದೆ. ವಾಣಿಜ್ಯ ಸಿಲಿಂಡರ್​ಗಳ ಕೊರತೆ ಜೊತೆಗೆ ಗ್ರಹಬಳಕೆ ಸಿಲಿಂಡರ್​ಗಳನ್ನು ಖರೀದಿಸುವಲ್ಲಿಯೂ ಹಲವರು ಅಡಚಣೆಯನ್ನು ಎದುರಿಸುತ್ತಿದ್ದಾರೆ. ಇದೇ ಕಾರಣಕ್ಕೆ ಇಂಡಕ್ಷನ್ ಸ್ಟೌವ್‌ಗಳ (Induction Stove) ಬೇಡಿಕೆ ಏರಿಕೆಯಾಗಿದ್ದು, ಆನ್​ಲೈನ್ ಖರೀದಿ ಪ್ಲಾಟ್​ಫಾರ್ಮ್​ಗಳಲ್ಲಿ ಸ್ಟೌವ್‌ಗಳ ಮಾರಾಟ 5 ರಿಂದ 10 ಪಟ್ಟು ಹೆಚ್ಚಾಗಿದೆ. ಹೀಗಿರುವಾಗ ಹೊಸ ಇಂಡಕ್ಷನ್ ಸ್ಟವ್ ಖರೀದಿಗೂ ಮುನ್ನ ಗಮನಿಸಬೇಕಾದ ಅಂಶಗಳನ್ನು ಬೆಸ್ಕಾಂ (BESCOM) ತನ್ನ ಎಕ್ಸ್(X) ಖಾತೆಯಲ್ಲಿ ಹಂಚಿಕೊಂಡಿದೆ.

ಬೆಸ್ಕಾಂ ಹೇಳಿರುವ ಅಂಶಗಳಿವು

    • ಐಎಸ್‌ಐ ಪ್ರಮಾಣಿತ ಹಾಗೂ ಉತ್ತಮ ವಿದ್ಯುತ್ ದಕ್ಷತೆಯುಳ್ಳ (3 ಸ್ಟಾರ್ ಅಥವಾ ಹೆಚ್ಚಿನ ರೇಟಿಂಗ್) ಇಂಡಕ್ಷನ್ ಸ್ಟವ್ ಖರೀದಿಸಿ
    • ಆಟೋಮ್ಯಾಟಿಕ್ ಆಫ್ ಹಾಗೂ ಚೈಲ್ಡ್ ಲಾಕ್ ಸೌಲಭ್ಯ ಇರುವ ಇಂಡಕ್ಷನ್ ಸ್ಟವ್ ಖರೀದಿಸಿ
    • ಇಂಡಕ್ಷನ್ ಸ್ಟವ್ ಬಳಸಲು ಪ್ರತ್ಯೇಕ (15A ಅಥವಾ ಹೆಚ್ಚಿನ ಲೋಡ್) ಸಾಕೆಟ್ ಅಳವಡಿಸಿ
    • ಮನೆಯ ವೈರಿಂಗ್ ದೋಷಪೂರಿತವಾಗಿದ್ದಲ್ಲಿ ಅಥವಾ ಸಮರ್ಪಕ ಅರ್ಥಿಂಗ್ ವ್ಯವಸ್ಥೆ ಇಲ್ಲದಿದ್ದಲ್ಲಿ, ಇಂಡಕ್ಷನ್ ಸ್ಟವ್ ಬಳಸದಿರಿ
    • 3-ಪಿನ್ ಪ್ಲಗ್ ಇರುವ ಇಂಡಕ್ಷನ್ ಸ್ಟವ್‌ಗಳನ್ನೇ ಖರೀದಿಸಿ

ಉತ್ತಮ ಇಂಡಕ್ಷನ್ ಕುಕ್​ವೇರ್ ಆಯ್ಕೆ ಮಾಡುವುದು ಹೇಗೆ?

ಇಂಡಕ್ಷನ್ ಕುಕ್‌ಟಾಪ್ ಖರೀದಿಸುವಾಗ ಅದರ ಪವರ್ ರೇಟಿಂಗ್ ಬಹಳ ಮುಖ್ಯ. ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿ 1200Wರಿಂದ 2000Wವರೆಗೆ ಸಾಮರ್ಥ್ಯದ ಮಾದರಿಗಳು ಲಭ್ಯವಿದ್ದು, ಹೆಚ್ಚಿನ ವಾಟ್‌ನ ಸಾಧನಗಳು ಆಹಾರವನ್ನು ವೇಗವಾಗಿ ಬೇಯಿಸಲು ಸಹಕಾರಿ. ದಿನನಿತ್ಯ ಬಳಕೆಗೆ ಹೆಚ್ಚಿನ ಪವರ್ ಇರುವ ಕುಕ್‌ಟಾಪ್ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ.

ಇದಲ್ಲದೆ, ಹಲವಾರು ಇಂಡಕ್ಷನ್ ಸ್ಟೌವ್‌ಗಳಲ್ಲಿ ಬಾಯ್ಲಿಂಗ್, ಫ್ರೈಯಿಂಗ್, ಕರ್ರಿ, ಅಕ್ಕಿ ಹಾಗೂ ಹಾಲು ಮುಂತಾದ ಪೂರ್ವನಿಗದಿತ (preset) ಆಯ್ಕೆಗಳು ಇರುತ್ತವೆ. ಇವು ತಾಪಮಾನ ಮತ್ತು ವಿದ್ಯುತ್ ಬಳಕೆಯನ್ನು ಸ್ವಯಂಚಾಲಿತವಾಗಿ ನಿಯಂತ್ರಿಸುತ್ತವೆ.

ಸ್ಟವ್ ಖರೀದಿಸುವ ಮೊದಲು ಸುರಕ್ಷತಾ ವೈಶಿಷ್ಟ್ಯಗಳಾದ ಆಟೋ ಶಟ್‌ಆಫ್, ಓವರ್‌ಹೀಟ್ ಪ್ರೊಟೆಕ್ಷನ್, ಚೈಲ್ಡ್ ಲಾಕ್ ಮತ್ತು ಪ್ಯಾನ್ ಡಿಟೆಕ್ಷನ್ ಇರುವುದನ್ನು ಖಚಿತಪಡಿಸಿಕೊಳ್ಳುವುದು ಅಗತ್ಯ. ಇವು ಅಪಘಾತಗಳನ್ನು ತಡೆಗಟ್ಟಲು ಸಹಕಾರಿ. ವಿದ್ಯುತ್‌ ಸಂಬಂಧಿತ ಅವಘಡಗಳು ಸಂಭವಿಸಿದ್ದಲ್ಲಿ, ಕೂಡಲೇ ಬೆಸ್ಕಾಂ 24×7 ಸಹಾಯವಾಣಿ 1912 ಕ್ಕೆ ಕರೆಮಾಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ

ಜೀ ಕನ್ನಡದಲ್ಲಿ ‘ಸರಿಗಮಪ ಲಿಟ್ಲ್​ ಚಾಂಪ್ಸ್’ ಪ್ರಸಾರ ಕಾಣುವುದರಲ್ಲಿ ಇದೆ. ಈ ಶೋನಲ್ಲಿ ಟ್ಯಾಲೆಂಟ್​​ಗಿಂತ ಹೆಚ್ಚಾಗಿ ಕಷ್ಟದಲ್ಲಿರುವವರಿಗೆ ಅವಕಾಶ ಕೊಟ್ಟು ಟಿಆರ್​ಪಿ ಪಡೆದುಕೊಳ್ಳಲಾಗುತ್ತದೆ ಎಂಬ ಆರೋಪ ಇದೆ.  ಇದಕ್ಕೆ ತಿರುಗೇಟು ಕೊಡಲು ಪ್ರೋಮೋ ಒಂದನ್ನು ಮಾಡಲಾಗಿದೆ. ಈ ಪ್ರೋಮೋದಲ್ಲಿ ಎಲ್ಲರಿಗೂ ಖಡಕ್ ಆಗಿ ಉತ್ತರಿಸಲಾಗಿದೆ. ಜನರ ಕಲ್ಪನೆ ಮತ್ತು ರಿಯಾಲಿಟಿ ವಿವರಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

KKR vs SRH, IPL 2026: ಪೋಸ್ಟ್ ಮ್ಯಾಚ್​ನಲ್ಲಿ ತಂಡದ ಗೆಲುವಿಗೆ ಕಾರಣರಾದ ಯಾರನ್ನೂ ಮರೆಯದ ಇಶಾನ್ ಕಿಶನ್, ಏನು ಹೇಳಿದ್ರು ನೋಡಿ

ಬೆಂಗಳೂರು (ಏ. 03): ಗುರುವಾರ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಆರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 65 ರನ್‌ಗಳಿಂದ ಸೋಲಿಸಿತು. ಋತುವಿನ ಮೊದಲ ಗೆಲುವು ದಾಖಲಿಸಿದ ನಂತರ, ನಾಯಕ ಇಶಾನ್ ಕಿಶನ್ ತಮ್ಮ ಆಟಗಾರರನ್ನು ಹಾಡಿಹೊಗಳಿದ್ದಾರೆ. ಮುಖ್ಯವಾಗಿ ಆರಂಭಿಕ ಜೋಡಿಗಳಾದ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ನಮ್ಮ ತಂಡಕ್ಕೆ ಪಂದ್ಯವನ್ನು ತುಂಬಾ ಸುಲಭಗೊಳಿಸಿದರು ಎಂದು ಹೇಳಿದ್ದಾರೆ.

ಕೆಕೆಆರ್ ವಿರುದ್ಧದ ಗೆಲುವಿನ ಬಳಿಕ ಇಶಾನ್ ಕಿಶನ್ ಹೇಳಿದ್ದೇನು?

ಪಂದ್ಯದ ನಂತರ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಇಶಾನ್ ಕಿಶನ್, ಅವರು ಇಡೀ ತಂಡದ ಗೆಲುವಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. “ಎಲ್ಲರ ಪ್ರಯತ್ನದಿಂದ ನನಗೆ ಸಂತೋಷವಾಯಿತು. ಪಿಚ್ ಅಷ್ಟೊಂದು ಚೆನ್ನಾಗಿಲ್ಲ ಎಂದು ನಾನು ಭಾವಿಸುತ್ತೇನೆ. ಹೆಡ್ ಮತ್ತು ಅಭಿಷೇಕ್ ನಮಗೆ ಆಟವನ್ನು ಸುಲಭಗೊಳಿಸಿದರು. ಇದು ಸಂಪೂರ್ಣ ತಂಡದ ಪ್ರಯತ್ನವಾಗಿತ್ತು. ವಿಕೆಟ್ ಪಡೆಯುವುದು ನಮ್ಮ ಯೋಜನೆಯಾಗಿತ್ತು. ಹರ್ಷ್ ಆ ಚೆಂಡನ್ನು ಬೌಲ್ ಮಾಡಿದ್ದು ಅದ್ಭುತವಾಗಿತ್ತು, ಮತ್ತು ನಾವು ಆ ವಿಕೆಟ್ ಪಡೆದಿದ್ದು ಅದೃಷ್ಟವಾಗಿತ್ತು.”

“ಹರ್ಷ್ ತಮ್ಮ ದೇಶೀಯ ತಂಡಕ್ಕೂ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ನಾನು ಶಿವಾಂಗ್ ಅವರ ಕೊಡುಗೆ ಮರೆಯಲ್ಲ; ಅವರು ಅಸಾಧಾರಣವಾಗಿ ಉತ್ತಮ ಬೌಲಿಂಗ್ ಮಾಡಿದರು, ಉತ್ತಮ ಆತ್ಮವಿಶ್ವಾಸದಿಂದ ಬೌಲಿಂಗ್ ಮಾಡಿದರು. ಇಂದಿನ ಪಂದ್ಯದಲ್ಲಿ ಶಿವಾಂಗ್ ಅತ್ಯುತ್ತಮ ಕೆಲಸ ಮಾಡಿ ತಂಡಕ್ಕೆ ಸಹಕಾರ ನೀಡಿದರು” ಎಂದು ಕಿಶನ್ ಹೇಳಿದ್ದಾರೆ.

‘ನಾನು ಆಡೋದನ್ನು ಅವರು ಸಹಿಸಲ್ಲ, ನನ್ನ ಕಂಡ್ರೆ ಹೊಟ್ಟೆಕಿಚ್ಚು’; ಸಿಟ್ಟು ಹೊರಹಾಕಿದ ರಹಾನೆ

ಗೆಲುವಿನ ಹೊರತಾಗಿಯೂ, ಮುಂಬರುವ ಪಂದ್ಯಗಳಿಗೆ ತಂಡವು ತನ್ನ ಫೀಲ್ಡಿಂಗ್ ಅನ್ನು ಸುಧಾರಿಸಬೇಕಾಗಿದೆ ಎಂದು ಇಶಾನ್ ಕಿಶನ್ ಅಭಿಪ್ರಾಯಪಟ್ಟಿದ್ದಾರೆ. “ಫೀಲ್ಡಿಂಗ್ ವಿಭಾಗದಲ್ಲಿ ತಂಡವಾಗಿ ನಾವು ಕೆಲಸ ಮಾಡಬೇಕಾಗಿದೆ. 10-20 ರನ್‌ಗಳು ದೊಡ್ಡ ವ್ಯತ್ಯಾಸವನ್ನುಂಟುಮಾಡಬಹುದು” ಎಂದು ಅವರು ಹೇಳಿದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 226 ರನ್ ಗಳಿಸಿತು. ತಂಡದ ಪರವಾಗಿ ಹೆನ್ರಿಕ್ ಕ್ಲಾಸೆನ್ 52, ಅಭಿಷೇಕ್ ಶರ್ಮಾ 48 ಮತ್ತು ಟ್ರಾವಿಸ್ ಹೆಡ್ 46 ರನ್ ಗಳಿಸಿದರು, ನಿತೀಶ್ ರೆಡ್ಡಿ 24 ಎಸೆತಗಳಲ್ಲಿ 39 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ, ಕೋಲ್ಕತ್ತಾ ನೈಟ್ ರೈಡರ್ಸ್ 161 ರನ್‌ಗಳಿಗೆ ಆಲೌಟ್ ಆಯಿತು. ತಂಡದ ಪರ ಅಂಗ್ಕ್ರಿಶ್ ರಘುವಂಶಿ 52 ರನ್ ಗಳಿಸಿದರೆ, ರಿಂಕು ಸಿಂಗ್ 35 ರನ್ ಗಳಿಸಿದರು. ನಿತೀಶ್ ಕುಮಾರ್ ರೆಡ್ಡಿ 39 ರನ್ಸ್ ಮತ್ತು ಎರಡು ವಿಕೆಟ್‌ ಕಿತ್ತ ಪರಿಣಾಮ ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗದಗ: ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಅನೈತಿಕ ಸಂಬಂಧವೇ ಮುಳುವಾಯ್ತು, ಮೂವರು ಅರೆಸ್ಟ್!

ಗದಗ, ಏಪ್ರಿಲ್ 3: ಗದಗ (Gadag) ಜಿಲ್ಲೆಯ ಹುಯಿಲಗೋಳ ಗ್ರಾಮದ ಯುವಕ ಚಂದ್ರು ಕುರಿ ನಾಪತ್ತೆಯಾಗಿ, ನಂತರ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಈಗ ದೊಡ್ಡ ತಿರುವು ಸಿಕ್ಕಿದೆ. ಇದೊಂದು ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ನಡೆದ ಪಕ್ಕಾ ಪ್ಲಾನ್ಡ್ ಮರ್ಡರ್ ಎಂಬುದು ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪ್ರೇಯಸಿ ರತ್ನಾ, ಆಕೆಯ ಪತಿ ಈರಪ್ಪ ಮತ್ತು ಸಹೋದರ ಮಹಾಂತೇಶ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ

ಹುಯಿಲಗೋಳ ಗ್ರಾಮದ ಚಂದ್ರು ಕುರಿ ಮತ್ತು ಅದೇ ಗ್ರಾಮದ ರತ್ನಾ ಕುದರಿ ನಡುವೆ ಕಳೆದ ಕೆಲವು ಸಮಯದಿಂದ ಅನೈತಿಕ ಸಂಬಂಧವಿತ್ತು. ರತ್ನಾಳಿಗೆ ಶಿರಹಟ್ಟಿ ತಾಲೂಕಿನ ಹೊಳಲಾಪುರ ಗ್ರಾಮದ ಈರಪ್ಪ ಎಂಬಾತನೊಂದಿಗೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೂ ಗಂಡನ ಜೊತೆ ಸರಿಯಾಗಿ ಸಂಸಾರ ಮಾಡದ ರತ್ನಾ, ಪದೇ ಪದೇ ತವರು ಮನೆಗೆ ಬಂದು ಚಂದ್ರು ಜೊತೆಗಿನ ಸಂಬಂಧ ಮುಂದುವರಿಸಿದ್ದಳು. ಈ ವಿಷಯ ರತ್ನಾಳ ಪತಿ ಈರಪ್ಪ ಹಾಗೂ ಸಹೋದರ ಮಹಾಂತೇಶನಿಗೆ ತಿಳಿದು ಹಲವು ಬಾರಿ ಬುದ್ಧಿವಾದ ಹೇಳಿದ್ದರೂ ಇಬ್ಬರೂ ಕೇಳಿರಲಿಲ್ಲ.

ಪಕ್ಕಾ ಪ್ಲಾನ್ ಮಾಡಿ ಹತ್ಯೆ

ಚಂದ್ರು ಕುರಿಯನ್ನು ಮುಗಿಸಲು ಪ್ಲಾನ್ ಮಾಡಿದ ಪತಿ ಈರಪ್ಪ ಮತ್ತು ಸಹೋದರ ಮಹಾಂತೇಶ, ಮಾರ್ಚ್ 25ರ ಮಧ್ಯರಾತ್ರಿ ರತ್ನಾಳ ಕೈಯಿಂದಲೇ ಚಂದ್ರುಗೆ ಫೋನ್ ಮಾಡಿಸಿ ಮನೆಗೆ ಕರೆಸಿಕೊಂಡಿದ್ದಾರೆ. ಚಂದ್ರು ಬಂದಾಗ ಮನೆಯ ಶೌಚಾಲಯದಲ್ಲಿ ಅಡಗಿ ಕುಳಿತಿದ್ದ ಈರಪ್ಪ ಮತ್ತು ಮಹಾಂತೇಶ ಆತನ ಮೇಲೆರಗಿದ್ದಾರೆ. ನಂತರ ‘ನಿನ್ನ ಜೊತೆ ಮಾತನಾಡೋದಿದೆ ಬಾ’ ಎಂದು ನಿರ್ಜನ ಪ್ರದೇಶದ ಬ್ರಿಡ್ಜ್ ಬಳಿ ಕರೆದೊಯ್ದು ಮಾರಕಾಸ್ತ್ರಗಳಿಂದ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಸಾಕ್ಷ್ಯ ನಾಶಪಡಿಸಲು ಶವದ ಮೇಲೆ ಪೆಟ್ರೋಲ್ ಸುರಿದು ಸುಟ್ಟು ಹಾಕಿ ಅಲ್ಲಿಂದ ಪರಾರಿಯಾಗಿದ್ದರು.

48 ಗಂಟೆಯಲ್ಲಿ ಆರೋಪಿಗಳ ಬಂಧನ

ಮಾರ್ಚ್ 28ರಂದು ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾದಾಗ ಗದಗ ಎಸ್ಪಿ ರೋಹನ್ ಜಗದೀಶ್ ನೇತೃತ್ವದ ತಂಡ ತನಿಖೆ ಚುರುಕುಗೊಳಿಸಿತ್ತು. ಮೊದಲು ಚಂದ್ರು ಮನೆಯವರೇ ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿತ್ತಾದರೂ, ಚಂದ್ರು ಹೊಂದಿದ್ದ ಮಹಿಳೆಯರ ಸಂಪರ್ಕದ ಜಾಡನ್ನು ಹಿಡಿದು ತನಿಖೆ ನಡೆಸಿದಾಗ ರತ್ನಾ ಹಾಗೂ ಆಕೆಯ ಕುಟುಂಬದ ಕೈವಾಡವಿರುವುದು ಪತ್ತೆಯಾಯಿತು. ಧಾರವಾಡ ಜಿಲ್ಲೆಯ ಸಂಬಂಧಿಕರ ಮನೆಯಲ್ಲಿ ಅಡಗಿದ್ದ ಮೂವರು ಆರೋಪಿಗಳನ್ನು ಪೊಲೀಸರು 48 ಗಂಟೆಯೊಳಗೆ ಹೆಡೆಮುರಿ ಕಟ್ಟಿದ್ದಾರೆ.

ಇದನ್ನೂ ಓದಿ: ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ?

ಕಂಡವರ ಹೆಂಡತಿಯ ಸಹವಾಸ ಮಾಡಿದ ಯುವಕ ಹೆಣವಾದರೆ, ಇಬ್ಬರು ಮಕ್ಕಳ ತಾಯಿ ಸೇರಿದಂತೆ ಮೂವರು ಜೈಲು ಪಾಲಾಗಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Bengaluru Air Quality: ಬೆಂಗಳೂರು ಜೊತೆಗೆ ಮಂಗಳೂರಿನ ಏರ್ ಕ್ವಾಲಿಟಿಯಲ್ಲೂ ಸುಧಾರಣೆ

ಬೆಂಗಳೂರು, ಏಪ್ರಿಲ್ 03: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಬಳ್ಳಾರಿ, ಮಂಗಳೂರಿನ ವಾಯುಗುಣಮಟ್ಟವೂ  (Bengaluru Air Quality) ಹದಗೆಟ್ಟಿತ್ತು. ಆದರೆ ಇಂದು ಸ್ವಲ್ಪ ಮಟ್ಟಿಗೆ ಏರ್ ಕ್ವಾಲಿಟಿ ಸುಧಾರಿಸಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 134ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –134
  • ಮಂಗಳೂರು-122
  • ಮೈಸೂರು –111
  • ಬೆಳಗಾವಿ – 115
  • ಕಲಬುರ್ಗಿ-114
  • ಶಿವಮೊಗ್ಗ – 122
  • ಬಳ್ಳಾರಿ – 112
  • ಹುಬ್ಬಳ್ಳಿ- 116
  • ಉಡುಪಿ –118
  • ವಿಜಯಪುರ –124

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ

ರಾಜ್​ಕೋಟ್, ಏಪ್ರಿಲ್ 03: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ರಾಜ್​ಕೋಟ್ ಜಿಲ್ಲೆಯ ಕೊಟ್ಡಾ ಸಂಗನಿ ಬಳಿಯ ವೆರಾವಲ್ ಗ್ರಾಮದಲ್ಲಿ ನಡೆದಿದೆ. ವ್ಯಕ್ತಿ ಸ್ಕೂಟಿಯಲ್ಲಿ ಬಂದು ನಿಲ್ಲುತ್ತಿದ್ದಂತೆ ಎದುರಿನಿಂದ ಬಂದ ಗೂಳಿ ಏಕಾಏಕಿ ದಾಳಿ ನಡೆದಿದೆ. ಗಾಡಿಯಿಂದ ನೆಲದ ಮೇಲೆ ಆತನನ್ನು ಬೀಳಿಸಿ ತುಳಿದಿದೆ. ಆಗ ಅಲ್ಲೇ ಹತ್ತಿರದಲ್ಲಿದ್ದ ಮತ್ತೊಂದು ಗೂಳಿ ಆತನನ್ನು ಉಳಿಸಲು ಸಹಾಯ ಮಾಡಿದೆ. ಹತ್ತಿರ ಇದ್ದವರು ಹೇಗೋ ಮಾಡಿ ಆತನನ್ನು ಗೂಳಿಯಿಂದ ಕಾಪಾಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಅವರ ಸ್ಥಿತಿ ಗಂಭೀರವಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ತಗ್ಗದ ‘ಧುರಂಧರ್ 2’ ಚಿತ್ರದ ಅಬ್ಬರ; ಮುಂದಕ್ಕೆ ಹೋದ ದೊಡ್ಡ ಸಿನಿಮಾಗಳು

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್ 2’ ಚಿತ್ರವು ಮಾರ್ಚ್ 19ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಬಿರುಗಾಳಿಯನ್ನು ಸೃಷ್ಟಿಸಿದೆ.ಪ್ರೇಕ್ಷಕರು ಮೂರು ತಿಂಗಳಿನಿಂದ ಈ ರಣವೀರ್ ಸಿಂಗ್ ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿದ್ದರು. ‘ಧುರಂಧರ್’ ಚಿತ್ರದ ಮೊದಲ ಭಾಗವು ಡಿಸೆಂಬರ್ 5ರಂದು ಬಿಡುಗಡೆಯಾಯಿತು. ‘ಧುರಂಧರ್ 2’ ಘೋಷಣೆಯಾದಾಗ, ಇತರ ಎಲ್ಲಾ ನಿರ್ಮಾಪಕರು ಹಿಂದೆ ಸರಿಯಲು ನಿರ್ಧರಿಸಿದರು. ಏಪ್ರಿಲ್‌ನಲ್ಲಿ ಬಿಡುಗಡೆಯಾಗಬೇಕಿದ್ದ ಅನೇಕ ದೊಡ್ಡ ಚಿತ್ರಗಳು ಮೇ ಅಥವಾ ಜೂನ್‌ಗೆ ಮುಂದೂಡಲ್ಪಟ್ಟಿವೆ.

ಅಕ್ಷಯ್ ಕುಮಾರ್ ಅವರ ‘ಭೂತ್ ಬಾಂಗ್ಲಾ’ ಚಿತ್ರ ಮಾರ್ಚ್‌ನಲ್ಲಿ ಬಿಡುಗಡೆಯಾಗಬೇಕಿತ್ತು. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಏಪ್ರಿಲ್‌ಗೆ ಮುಂದೂಡಲಾಗಿತ್ತು. ಇತರ ಚಿತ್ರಗಳ ಜೊತೆ ಘರ್ಷಣೆ ಆಗದಂತೆ ನೋಡಿಕೊಳ್ಳಬೇಕು ಎಂಬುದು ಇದರ ಉದ್ದೇಶ. ಈ ಚಿತ್ರ ಏಪ್ರಿಲ್ 16ರಂದು ಬಿಡುಗಡೆ ಆಗಲಿದೆ.

ಸಲ್ಮಾನ್ ಖಾನ್ ಅವರ ‘ಮಾತೃಭೂಮಿ’ ಚಿತ್ರ ಏಪ್ರಿಲ್ 17 ರಂದು ಬಿಡುಗಡೆಯಾಗಬೇಕಿತ್ತು. ಈಗ ಸಿನಿಮಾ ಮೇ 15ರಂದು ಬಿಡುಗಡೆ ಆಗುವ ಸಾಧ್ಯತೆ ಇದೆ. ಇದರ ಹಿಂದಿನ ಇನ್ನೊಂದು ಕಾರಣವೆಂದರೆ, ಈ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಟ ಪ್ರಶಾಂತ್ ಅವರ ಮರಣದಿಂದಾಗಿ, ಕೆಲವು ಚಿತ್ರೀಕರಣಗಳು ಅಪೂರ್ಣವಾಗಿ ಉಳಿದಿವೆ. ಆದ್ದರಿಂದ, ಅದರ ಬಿಡುಗಡೆಯನ್ನು ಮುಂದೂಡಲಾಗುತ್ತಿದೆ.

‘ಭೂತ್ ಬಾಂಗ್ಲಾ’ ಮತ್ತು ‘ಮಾತೃಭೂಮಿ’ ಜೊತೆಗೆ, ದಕ್ಷಿಣದ ಸೂಪರ್‌ಸ್ಟಾರ್ ಮೋಹನ್ ಲಾಲ್ ಮತ್ತು ಮಮ್ಮುಟ್ಟಿ ಅಭಿನಯದ ‘ಪೇಟ್ರಿಯಾಟ್’ ಚಿತ್ರ ಏಪ್ರಿಲ್ 23 ರಂದು ಬಿಡುಗಡೆಯಾಗಬೇಕಿತ್ತು. ಈ ಚಿತ್ರದ ದಿನಾಂಕವನ್ನೂ ಮುಂದೂಡಲಾಗಿದೆ. ಈಗ ಚಿತ್ರವು ಮೇ 1 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ನಟ ಮಮ್ಮುಟ್ಟಿ ಸ್ವತಃ ಸಾಮಾಜಿಕ ಮಾಧ್ಯಮದಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ. ಇದರ ಜೊತೆಗೆ, ‘ದೃಶ್ಯಂ 3’ ಮತ್ತು ‘ಪೆದ್ದಿ’ ನಂತಹ ಚಿತ್ರಗಳ ಬಿಡುಗಡೆ ದಿನಾಂಕವನ್ನು ಸಹ ಮುಂದೂಡಲಾಗಿದೆ.

ಇದನ್ನೂ ಓದಿ: ‘ಧುರಂಧರ್ 2’ ಆರ್ಭಟಕ್ಕೆ ಬೆದರಿದ ‘ಭೂತ್ ಬಂಗ್ಲ’: ಅಕ್ಷಯ್ ಕುಮಾರ್ ಚಿತ್ರದ ಬಿಡುಗಡೆ ಮುಂದೂಡಿಕೆ

‘ಕೆಜಿಎಫ್’ ಖ್ಯಾತಿಯ ಯಶ್ ನಟಿಸಿರುವ ‘ಟಾಕ್ಸಿಕ್’ ಮಾರ್ಚ್ 19 ರಂದು ‘ಧುರಂದರ್ 2’ ಜೊತೆಗೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿತ್ತು. ಎರಡೂ ಚಿತ್ರಗಳ ನಡುವೆ ದೊಡ್ಡ ಬಾಕ್ಸ್ ಆಫೀಸ್ ಘರ್ಷಣೆ ನಡೆಯಲಿದೆ ಎಂಬ ಊಹಾಪೋಹವಿತ್ತು. ಆದರೆ ಇರಾನ್-ಇಸ್ರೇಲ್ ಯುದ್ಧದಿಂದಾಗಿ ‘ಟಾಕ್ಸಿಕ್’ ಬಿಡುಗಡೆಯನ್ನು ಅಂತಿಮವಾಗಿ ಮುಂದೂಡಲಾಯಿತು. ಈಗ, ಚಿತ್ರವು ಜೂನ್ 4, 2026 ರಂದು ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link