Category Archives: Blog

Your blog category

ಭಾರತದ ಎಐ ಇಂಪ್ಯಾಕ್ಟ್ ಸಮಿಟ್​ಗೆ ಇಡೀ ಜಗತ್ತು ಆಕರ್ಷಿತವಾಗಿರುವುದು ಯಾಕೆ? ಅಂಥದ್ದೇನು ವಿಶೇಷತೆ ಇದೆ? – Kannada News | AI Impact Summit 2026, how this benefits India and the world

ನವದೆಹಲಿ, ಫೆಬ್ರುವರಿ 16: ಈ ಬಾರಿಯ ಎಐ ಇಂಪ್ಯಾಕ್ಟ್ ಸಭೆಗೆ (India AI Impact Summit) ಭಾರತ ಆತಿಥ್ಯ ವಹಿಸಿದೆ. ಇದು ನಾಲ್ಕನೇ ಎಐ ಸಭೆಯಾಗಿದೆ. 2023ರಲ್ಲಿ ಬ್ರಿಟನ್​ನಲ್ಲಿ ಮೊದಲ ಎಐ ಇಂಪ್ಯಾಕ್ಟ್ ಸಭೆ ನಡೆದಿತ್ತು. ನಂತರದ ವರ್ಷಗಳಲ್ಲಿ ದಕ್ಷಿಣ ಕೊರಿಯಾ ಮತ್ತು ಫ್ರಾನ್ಸ್ ದೇಶಗಳಲ್ಲಿ ಶೃಂಗಸಭೆಗಳು ನಡೆದಿವೆ. ಈ ಬಾರಿಯ ಎಐ ಸಮಿಟ್ ಅನ್ನು ‘ಸರ್ವಜನ ಹಿತಾಯ, ಸರ್ವಜನ ಸುಖಾಯ’ ಥೀಮ್​ನಲ್ಲಿ ರೂಪಿಸಲಾಗಿದೆ. ಅಂದರೆ, ಎಲ್ಲರಿಗೂ ಎಐ ಅಭಿವೃದ್ಧಿಫಲ ಸಿಗಲಿ ಎಂಬುದು ಭಾರತದ ಆಶಯ. ಆ ನಿಟ್ಟಿನಲ್ಲಿ ಸಮಿಟ್​ನ ಕಾರ್ಯಕ್ರಮಗಳು ನಡೆಯಲಿವೆ.

ಕೈಗಾರಿಕಾ ಕ್ರಾಂತಿ ಬಳಿಕ ಮಾನವನ ಇತಿಹಾಸದಲ್ಲಿ ಕಂಡ ಅತ್ಯಂತ ಪರಿವರ್ತನಾತ್ಮಕ ಕ್ರಾಂತಿ ಎಂದರೆ ಆರ್ಟಿಫಿಶಿಯಲ್ ಇಂಟೆಲೆಜೆನ್ಸ್ನದ್ದು ಎಂದು ಹೇಳಲಾಗುತ್ತದೆ. ಔದ್ಯಮಿಕ ಕ್ರಾಂತಿಯಿಂದ ಹೇಗೆ ಜಗತ್ತಿನ ಆರ್ಥಿಕ ಪರಿಭಾಷೆ ಬದಲಾಯಿತೋ, ಅದೇ ಪರಿಣಾಮವನ್ನು ಎಐನಿಂದ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: ಎಐ ಇಂಪ್ಯಾಕ್ಟ್ ಶೃಂಗಸಭೆ; ಭಾರತದ ಪ್ರಗತಿಗೆ ಇಗೋ ನೋಡಿ ಸಾಕ್ಷ್ಯ ಎಂದ ಪ್ರಧಾನಿ ಮೋದಿ

ಜಾಗತಿಕ ಎಐ ರೇಸ್​ನಲ್ಲಿ ಭಾರತದ ಸ್ಥಾನ ಏನು?

ಸ್ಟಾನ್ಫೋರ್ಡ್​ನ ಎಐ ವೈಬ್ರೆನ್ಸಿ ಟೂಲ್ ಪ್ರಕಾರ ಎಐನಲ್ಲಿ ಭಾರತ ಮೂರನೇ ಶ್ರೇಯಾಂಕ ಪಡೆದಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ನೈಪುಣ್ಯತೆ ಹೊಂದಿರುವ ಅತಿಹೆಚ್ಚು ಮಾನವಸಂಪನ್ಮೂಲ ಹೊಂದಿರುವ ದೇಶಗಳಲ್ಲಿ ಸಿಂಗಾಪುರ ಬಿಟ್ಟರೆ ಭಾರತವೇ ಇರುವುದು. ಎಐ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ.

ಎಐನಲ್ಲಿ ಭಾರತ ಒಂದೊಂದೇ ಹೆಜ್ಜೆಗಳನ್ನು ಇರಿಸುತ್ತಿದೆ. ಅಮೆರಿಕ ಮತ್ತು ಚೀನಾ ತೋರಿರುವ ಪ್ರಗತಿಯನ್ನು ಸರಿಗಟ್ಟಲು ಭಾರತಕ್ಕೆ ಇನ್ನೂ ಸಾಕಷ್ಟು ಸಮಯ ಬೇಕಾಗಬಹುದು ಎಂದು ಪರಿಣಿತರು ಹೇಳುತ್ತಾರೆ. ಅಮೆರಿಕವು ಚ್ಯಾಟ್​ಜಿಪಿಟಿ, ಕ್ಲಾಡ್, ಜೆಮಿನೈ ಇತ್ಯಾದಿ ಫೌಂಡೇಶನಲ್ ಮಾಡಲ್​ಗಳ ಅಭಿವೃದ್ಧಿಯಲ್ಲಿ ಮುಂದಿದೆ. ಚೀನಾ ದೇಶವು ಅಗ್ಗದ ಬೆಲೆಗೆ ಎಐ ಸಿಗುವಂತೆ ಮಾಡುತ್ತಿದೆ. ಭಾರತವು ತನ್ನದೇ ಸಾವರಿನ್ ಎಐ ಮಾಡಲ್​ಗಳನ್ನು ಬೆಳೆಸಲು ಗುರುತರವಾದ ಯೋಜನೆಗಳನ್ನು ಹಾಕಿದೆ.

ಇದನ್ನೂ ಓದಿ: ಗೂಗಲ್, ಮೈಕ್ರೋಸಾಫ್ಟ್ ಇತ್ಯಾದಿ ಟೆಕ್ ಕಂಪನಿಗಳ ಬ್ರಿಟಿಷ್ ಈಸ್ಟ್ ಇಂಡಿಯಾ ಸಂಸ್ಥೆಗೆ ಹೋಲಿಸಿದ ಶ್ರೀಧರ್ ವೆಂಬು

ಎಐ ಇಂಪ್ಯಾಕ್ಟ್ ಸಮಿಟ್​ನಲ್ಲಿ ಭಾರತಕ್ಕೇನು ಲಾಭ?

ಎಐ ವಿಚಾರದಲ್ಲಿ ಭಾರತ ಗಂಭೀರವಾಗಿರುವುದನ್ನು ಜಗತ್ತಿನ ಟೆಕ್ ನಾಯಕರು ಗಮನಿಸಲಿದ್ದಾರೆ. ಭಾರತ ಹಾಗೂ ಭಾರತೀಯ ಕಂಪನಿಗಳ ಜೊತೆ ಜಗತ್ತಿನ ಟೆಕ್ ದೈತ್ಯರು ಹೊಂದಾಣಿಕೆ ಮಾಡಿಕೊಂಡು ಎಐ ಅಭಿವೃದ್ಧಿಗೆ ಮುಂದಾಗಬಹುದು. ಈ ಸಮಿಟ್ ವೇಳೆ ಡಾಟಾ ಸೆಂಟರ್ ಹಾಗೂ ಸಂಬಂಧಿತ ಯೋಜನೆಗಳ ಘೋಷಣೆ ಆಗಬಹುದು.

ಸರ್ಕಾರಿ ಬೆಂಬಲಿತ ಎಐ ಕಂಪ್ಯೂಟ್ ಮಾಡಲ್ ಅನ್ನು ಡಿಜಿಟಲ್ ಪಬ್ಲಿಕ್ ಇನ್​ಫ್ರಾಸ್ಟ್ರಕ್ಚರ್ ಸರ್ವಿಸ್ ಆಗಿ ಇತರ ದೇಶಗಳಿಗೆ ಆಫರ್ ಮಾಡಲಾಗಬಹುದು. ಎಐ ಸ್ಟ್ಯಾಕ್ ನಿರ್ಮಿಸುವ ಭಾರತದ ಪ್ರಯತ್ನಗಳಿಗೆ ಜಾಗತಿಕ ಕಂಪನಿಗಳು ಬೆಂಬಲ ನೀಡಬಹುದು. ಭಾರತದ ಎಐ ಸ್ಟಾರ್ಟಪ್​ಗಳಿಗೆ ಜಾಗತಿಕ ಬಂಡವಾಳ ಸಿಗಲು ಸಾಧ್ಯವಾಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಕಾರ್ಮಿಕ ಸಾವು! – Kannada News | Chikkamagaluru: Coffee Worker Dies in Elephant Attack; Karnataka Conflict Escalates

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಕಾರ್ಮಿಕ ಸಾವು!

ಚಿಕ್ಕಮಗಳೂರು, ಫೆಬ್ರವರಿ 16: ಚಿಕ್ಕಮಗಳೂರು ತಾಲ್ಲೂಕಿನ ಹುಣಸೆಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 50 ವರ್ಷದ ಕಾರ್ಮಿಕ ಯಲ್ಲಪ್ಪ ಆನೆ ದಾಳಿಗೆ (elephant attack) ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ತಿರುವಳ್ಳಿ ಗ್ರಾಮದ ನಿವಾಸಿ ಯಲ್ಲಪ್ಪ, ನಾಗೇಶ್ ಗೌಡ ಅವರ ತೋಟದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದೆ.

ಬಾಳೆಹೊನ್ನೂರು ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುತ್ತಾಡುತ್ತಿದ್ದ ಕಾಡಾನೆ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ದಾಳಿ ಮಾಡಿತ್ತು.ಈ ವೇಳೆ ಸ್ಥಳದಲ್ಲೇ ಯಲ್ಲಪ್ಪ ಮೃತಪಟ್ಟಿದ್ದು, ಪ್ರಾಥಮಿಕ ಪರಿಶೀಲನೆ ಮತ್ತು ಸ್ಥಳೀಯ ಅರಣ್ಯ ಇಲಾಖೆ ಅಧಿಕಾರಿಗಳ ಪರಿಶೀಲನೆಯ ನಂತರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಘಟನೆ ನಂತರ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಕಾಡಾನೆ ಸಂಚಾರವನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದೆ.

ಇದನ್ನೂ ಓದಿ ಕರ್ನಾಟಕದ ಈ ನಾಲ್ಕು ಜಿಲ್ಲೆಗಳಲ್ಲಿ ಅತಿ ಹೆಚ್ಚು ಜನ ಸಾಯುವುದೇ ಕಾಡು ಪ್ರಾಣಿ ದಾಳಿಯಿಂದ!

ಎಲ್ಲೆಲ್ಲಿ ಕಾಡಾನೆ ದಾಳಿಯಿಂದ ಸಾವು ನೋವು?

  • ಹನುಮಂತ, ಹಾಸನ ಸಮೀಪದ ರಾಮನಾಥಪುರದಲ್ಲಿ ಖಾಸಗಿ ಕಾಫಿ ತೋಟದಲ್ಲಿ ಆನೆ ದಾಳಿಗೆ ಬಲಿಯಾಗಿ ಮೃತಪಟ್ಟರು. ಎದೆ ಮತ್ತು ಹೊಟ್ಟೆಯ ಮೇಲೆ ತೀವ್ರ ಗಾಯಗಳಾಗಿದ್ದು, ನವೆಂಬರ್ 11, 2025 ರಂದು ಘಟನೆ ನಡೆದಿದೆ.
  • ಆಗಸ್ಟ್ 12, 2025 ರಂದು ನಂಜನಗೂಡು ಮೂಲದ ಬಸವರಾಜು ಬಂಡೀಪುರ ರಸ್ತೆಯಲ್ಲಿ ಕಾಡಾನೆ ಜತೆ ಸೆಲ್ಫಿ ತೆಗೆಯಲು ಹೋಗಿ ದಾಳಿಗೆ ಒಳಗಾದರು. ಅರಣ್ಯ ಇಲಾಖೆ ನಂತರ ಪತ್ತೆ ಮಾಡಿ 25 ಸಾವಿರ ರೂ. ದಂಡ ವಿಧಿಸಿದೆ.
  • ರೈತ ಮಹೇಶ್, ಜಮೀನಿನಲ್ಲಿ ಕಾವಲು ಕಾಯುತ್ತಿದ್ದಾಗ 9 ಕಾಡಾನೆಗಳ ಹಿಂಡು ದಾಳಿಗೆ ಬಲಿಯಾಗಿದ್ದರು. ಈ ಹಿನ್ನೆಲೆ  ಫೆಬ್ರವರಿ 8, 2026 ರಂದು ಚಾಮರಾಜನಗರದ ಗ್ರಾಮಸ್ಥರಿಂದ ರಸ್ತೆ ತಡೆ ಪ್ರತಿಭಟನೆ ನಡೆದಿತ್ತು.
  • ತಮಿಳುನಾಡಿನ ಮಾಕಪಾಳ್ಯ ನಿವಾಸಿ ಶಿವಮೂರ್ತಿ, ಹನೂರು ತಾಲ್ಲೂಕಿನ ಜಲ್ಲಿಪಾಳ್ಯ ಸಮೀಪ ಕಾಡಾನೆ ದಾಳಿಗೆ ಬಲಿಯಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದರು.
  • ಜನವರಿ 13ರಂದು ಮೋಗಲಿ ಗ್ರಾಮದಲ್ಲಿ ಕಾರ್ಮಿಕ ಮಹಿಳೆ ಶೋಭಾ (40) ಕಾಫಿ ತೋಟದಲ್ಲಿ ದುರ್ಘಟನೆಗೆ ಬಲಿಯಾಗಿದ್ದಾರೆ. ಪುತ್ರಿಯರಾದ ಶೋಭ ಮತ್ತು ರಾಗಿಣಿ ಜೊತೆ ಕೆಲಸಕ್ಕೆ ತೆರಳಿದ್ದರು.
  • ಡಿಸೆಂಬರ್ 14 ರಂದು ದುನ್ನಸಂದ್ರದಲ್ಲಿ ರೈತ ದುಂಡಮಾದ (50), ಬೆಳಗಿನ ಜಾವ ಜಮೀನಿಗೆ ನೀರು ಹಾಯಿಸಲು ಹೋಗಿ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.
  • ಚಿಕ್ಕಮಗಳೂರಿನ ಕೆರೆಕಟ್ಟೆ ಗ್ರಾಮದಲ್ಲಿ ಆನೆ ತುಳಿತದ ವೇಳೆ ವಸಂತ್ (36) ಮತ್ತು ಮತ್ತೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ ಚಾಮರಾಜನಗರ: 9 ಕಾಡಾನೆಗಳ ಹಿಂಡು ದಾಳಿಗೆ ರೈತ ಬಲಿ; ರೊಚ್ಚಿಗೆದ್ದ ಗ್ರಾಮಸ್ಥರಿಂದ ಪ್ರತಿಭಟನೆ

ಕಳೆದ ನಾಲ್ಕು ವರ್ಷಗಳಲ್ಲಿ ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನಗಳ ಜಿಲ್ಲೆಗಳಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, ಸುಮಾರು 60% ರಷ್ಟು ಸಾವುಗಳು ಮಾನವ-ವನ್ಯಜೀವಿ ಸಂಘರ್ಷಣೆಯಿಂದಲೇ ಸಂಭವಿಸಿವೆ ಎಂದು ಹೇಳಲಾಗಿದೆ. ಕಳೆದ 5 ವರ್ಷಗಳಲ್ಲಿ ಕರ್ನಾಟಕದಲ್ಲಿ ಸುಮಾರು 170 ಜನರು ಆನೆ ದಾಳಿಯಿಂದ ಮೃತಪಟ್ಟಿದ್ದಾರೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಹಾಸನದಲ್ಲಿ ತಪ್ಪಿದ ಭಾರಿ ದುರಂತ: ಕೆರೆ ಪಕ್ಕದ ಮರಕ್ಕೆ ಗುದ್ದಿ ನಿಂತ ಸ್ಕೂಲ್ ​​ಬಸ್​​ – Kannada News | Seven Students Injured in Separate School Bus Accidents in Hassan and Dakshina Kannada

ಕೆರೆ ಬಳಿ ಮರಕ್ಕೆ ಗುದ್ದಿರುವ ಶಾಲಾ ಬಸ್​​Image Credit source: Tv9 Kannada

ಹಾಸನ/ಮಂಗಳೂರು, ಫೆಬ್ರವರಿ 16: ಖಾಸಗಿ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್​​ ಕೆರೆಯ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕೆರೆ ಕಡೆಗೆ ವಾಲಿನಿಂತ ಘಟನೆ ಅರಕಲಗೂಡು ತಾಲೂಕಿನ ಹಳ್ಳಿಮೈಸೂರು ಹೋಬಳಿಯ ಮುಕ್ಕನಹಳ್ಳಿ ಗ್ರಾಮದ ಬಳಿ ನಡೆದಿದೆ. ಕೂದಲೆಳೆ ಅಂತರದಲ್ಲಿ ಬಸ್​​ ಕೆರೆಗೆ ಬೀಳುವುದು ತಪ್ಪಿದ್ದು, 40 ವಿದ್ಯಾರ್ಥಿಗಳು ಈ ಶಾಲಾ ಬಸ್​​ನಲ್ಲಿದ್ದರು ಎನ್ನಲಾಗಿದೆ.

ಅಪಘಾತಕ್ಕೀಡಾಗಿರುವ ಬಸ್​​ ಶ್ರೀ ಸಿದ್ದರಾಮೇಶ್ವರ ಶಾಲೆಗೆ ಸೇರಿದ್ದಾಗಿದ್ದು, ಬೆಳಿಗ್ಗೆ ಶಾಲೆಗೆ ಮಕ್ಕಳನ್ನು ಕರೆದೊಯ್ಯುವ ವೇಳೆ ಅಪಘಡ ನಡೆದಿದೆ. ಮರಕ್ಕೆ ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆ ಬಸ್‌ನಿಂದ ವಿದ್ಯಾರ್ಥಿಗಳು ಕೆಳಗಿಳಿದ ಪರಿಣಾಮ ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳದಲ್ಲಿ ವಿದ್ಯಾರ್ಥಿಗಳ ಪೋಷಕರು ಜಮಾಯಿಸಿದ್ದು, ಘಟನೆ ಬಳಿಕ ಸ್ಕೂಲ್​​ ಬಸ್​​ಗೆ ಎಫ್‌ಸಿ ಹಾಗೂ ಇನ್ಶೂರೆನ್ಸ್ ಇಲ್ಲದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಳ್ಳಿಮೈಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ನೆಲಮಂಗಲ ಬಳಿ ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು; ಐವರು ಸಾವು

ಶಾಲಾ ಬಸ್​ಗೆ ಕ್ಯಾಂಟರ್ ಡಿಕ್ಕಿ

ಅಪಘಾತದಲ್ಲಿ ಜಖಂಗೊಂಡ ವಾಹನಗಳು

ಮಂಗಳೂರು ಹೊರವಲಯದ ಕಾಪಿಕಾಡು ಬಳಿ ಶಾಲಾ ಬಸ್​ಗೆ ಕ್ಯಾಂಟರ್ ಡಿಕ್ಕಿಯಾದ ಪರಿಣಾಮ 7 ವಿದ್ಯಾರ್ಥಿಗಳಿಗೆ ಗಾಯಗೊಂಡಿದ್ದಾರೆ. ತಲಪಾಡಿಯ ಶಾರದಾ ವಿದ್ಯಾನಿಕೇತನ ಶಾಲೆಗೆ ಸೇರಿದ ಬಸ್​ಗೆ ಗೋವಾದಿಂದ ಕೇರಳದ ಕಡೆಗೆ ಹೊರಟಿದ್ದ ಮೀನು ಸಾಗಾಟದ ಕ್ಯಾಂಟರ್ ಹಿಂದಿನಿಂದ ಡಿಕ್ಕಿ ಹೊಡೆದೆದಿದೆ. ಉಡುಪಿ ಜಿಲ್ಲೆ ಕುಂದಾಪುರ ಮೂಲದ ಕ್ಯಾಂಟರ್ ಚಾಲಕ ಸಂಜೀವ್ ನಿದ್ರೆಯ ಮಂಪರಿನಲ್ಲಿದ್ದ ಎನ್ನಲಾಗಿದ್ದು, ಗಾಯಾಳು ವಿದ್ಯಾರ್ಥಿಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 12:34 pm, Mon, 16 February 26

Source link

ಮದುವೆಗೂ ಮುನ್ನ ಮ್ಯಾಚಿಂಗ್ ಡ್ರೆಸ್ ಹಾಕಿ ಮುಂಬೈನಿಂದ ಹಾರಿದ ವಿಜಯ್-ರಶ್ಮಿಕಾ – Kannada News | Vijay Deverakonda and Rashmika Mandanna Fly from Mumbai Ahead of Wedding

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಅವರು ಫೆಬ್ರವರಿ 26ರಂದು ವಿವಾಹ ಆಗಲಿದ್ದಾರೆ ಎಂಬ ಸುದ್ದಿ ಜೋರಾಗಿದೆ. ಈ ವಿವಾಹದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ಕುತೂಹಲ ಇದೆ. ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರೂ ಆ ವಿಷಯವನ್ನು ಈ ಜೋಡಿ ಮುಚ್ಚಿಡತ್ತಾ ಬಂದಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಇವರ ಪ್ರೀತಿಗೆ ಮದುವೆ ಎಂಬ ಮುದ್ರೆ ಬೀಳಲಿದೆ. ಅದಕ್ಕೂ ಮೊದಲು ವಿಜಯ್ ಹಾಗೂ ರಶ್ಮಿಕಾ ಮಂಬೈನಿಂದ ಹಾರಿದ್ದಾರೆ.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮೊದಲು ಭೇಟಿ ಆಗಿದ್ದು ‘ಗೀತ ಗೋವಿಂದ’ ಸೆಟ್ ಅಲ್ಲಿ. ಈ ಸಿನಿಮಾ ಸೂಪರ್ ಹಿಟ್ ಆಯಿತು. ಆ ಬಳಿಕ ಇವರ ಮಧ್ಯೆ ಗೆಳೆತನ ಕೂಡ ಗಟ್ಟಿ ಆಗುತ್ತಾ ಹೋಯಿತು. ಈಗ ಜೋಡಿ ವಿವಾಹ ಆಗುತ್ತಿದ್ದಾರೆ. ಜೈಪುರದಲ್ಲಿ ಇವರ ಮದುವೆ ನಡೆಯಲಿದೆ ಎನ್ನಲಾಗಿದೆ. ಇದಕ್ಕೂ ಮೊದಲು ಈ ಜೋಡಿ ವಿದೇಶಕ್ಕೆ ತೆರಳಿದರೇ ಎಂಬ ಪ್ರಶ್ನೆ ಮೂಡಿದೆ.

ಮದುವೆಗೂ ಮೊದಲು ಒಂದಷ್ಟು ಶಾಪಿಂಗ್ ಮಾಡಬೇಕಾಗುತ್ತದೆ. ಆದರೆ, ಭಾರತದಲ್ಲಿ ಶಾಪಿಂಗ್ ಮಾಡೋದು ಅಸಾಧ್ಯ. ಅಭಿಮಾನಿಗಳು ಅವರನ್ನು ಮುತ್ತಿಕೊಳ್ಳುತ್ತಾರೆ. ಹೀಗಾಗಿ, ಇವರು ವಿದೇಶಕ್ಕೆ ತೆರಳಿದರೇ ಎನ್ನುವ ಪ್ರಶ್ನೆ ಮೂಡಿದೆ.

ಭಾನುವಾರ (ಫೆಬ್ರವರಿ 15) ರಾತ್ರಿ ಮುಂಬೈನಿಂದ ಇವರು ಮ್ಯಾಂಚಿಂಗ್ ಡ್ರೆಸ್ ಹಾಕಿ ತೆರಳಿದ್ದಾರೆ. ಹಾಗಂತ ಇವರು ಕೈ ಕೈ ಹಿಡುದು ಒಟ್ಟಿಗೆ ಸಾಗಿಲ್ಲ. ಬದಲಿಗೆ ಬೇರೆ ಬೇರೆ ಸಮಯದಲ್ಲಿ ಇವರು ತೆರಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇವರು ಒಂದಾಗಿರಬಹುದು ಎಂದು ಹೇಳಲಾಗುತ್ತಾ ಇದೆ.

ಇದನ್ನೂ ಓದಿ: ಮದುವೆಗೆ ಕೆಲವೇ ದಿನ ಬಾಕಿ ಇರುವಾಗಲೂ ಶೂಟಿಂಗ್ ನಿಲ್ಲಿಸಿಲ್ಲ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಈವರೆಗೆ ವಿವಾಹದ ವಿಷಯವನ್ನು ಅಧಿಕೃತವಾಗಿ ಒಪ್ಪಿಕೊಂಡಿಲ್ಲ. ಅವರು ಮದುವೆ ಬಗ್ಗೆ ಕೇಳಿದಾಗಲೆಲ್ಲ, ‘ಸಮಯ ಬಂದಾಗ ಹೇಳುತ್ತೇನೆ’ ಎಂದು ನುಣಚಿಕೊಂಡಿದ್ದಾರೆ. ಈಗಾಗಲೇ ಜೈಪುರದಲ್ಲಿ ಇವರ ಮದುವೆಗೆ ಸಿದ್ಧತೆ ನಡೆದಿದೆ. ಫೆಬ್ರವರಿ 26ರಂದು ಆಪ್ತರ ಸಮ್ಮುಖದಲ್ಲಿ ಈ ಮದುವೆ ನಡೆಯಲಿದೆ ಎಂದು ಹೇಳಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 12:15 pm, Mon, 16 February 26

Source link

ಜೈಪುರ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ – Kannada News | Woman Passenger Injured in Dog Bite Incident at Jaipur Airport

ಜೈಪುರ, ಫೆಬ್ರವರಿ 16: ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಆಗಮಿಸುತ್ತಿದ್ದ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ(Dog Attack) ನಡೆಸಿರುವ ಘಟನೆ ವರದಿಯಾಗಿದೆ. ಪ್ರಯಾಣಿಕರೊಬ್ಬರ ಮೇಲೆ ನಾಯಿಯೊಂದು ಹಠಾತ್ತನೆ ದಾಳಿ ನಡೆಸಿತು. ದಾಳಿಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಕಾಲಿನಲ್ಲಿ ರಕ್ತಸ್ರಾವವಾಗಲು ಶುರುವಾಗಿತ್ತು. ಈ ಘಟನೆ ವಿಮಾನ ನಿಲ್ದಾಣದಲ್ಲಿ ಹಾಜರಿದ್ದವರಲ್ಲಿ ಭಯ ಸೃಷ್ಟಿಯಾಗಿತ್ತು. ಗಾಯಗೊಂಡ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಭಾನುವಾರ ಮಧ್ಯಾಹ್ನ 2.20ರ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳಾ ಪ್ರಯಾಣಿಕರೊಬ್ಬರು ವಿಮಾನದಿಂದ ಇಳಿದು ನಂತರ ಟರ್ಮಿನಲ್ 2ರಲ್ಲಿ ಹೊರ ಬರುತ್ತಿದ್ದರು. ಗೇಟ್​ನ ಹೊರಗೆ ನಾಯಿಯೊಂದು ಇದ್ದಕ್ಕಿದ್ದಂತೆ ಅವರ ಮೇಲೆ ದಾಳಿ ಮಾಡಿತ್ತು. ದಾಳಿಯಿಂದ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ. ನೋವಿನಿಂದ ಅವರು ಕಿರುಚಿದ್ದಾರೆ.

ಈ ಘಟನೆಯಿಂದ ಇತರೆ ಪ್ರಯಾಣಿಕರು ದಿಗ್ಭ್ರಮೆಗೊಂಡರು, ಪ್ರತ್ಯಕ್ಷದರ್ಶಿಗಳ ಪ್ರಕಾರ ನೋಡ ನೋಡುತ್ತಿದ್ದಂತೆ ಘಟನೆ ನಡೆದೇ ಹೋಗಿತ್ತು. ಮಹಿಳೆಯರ ಕಿರುಚಾಟ ಕೇಳಿದ ತಕ್ಷಣ ಜನರು ಅವರ ಸಹಾಯಕ್ಕೆ ಮುಂದಾದರು, ಆಕೆಯನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದರು.

ಮತ್ತಷ್ಟು ಓದಿ: Video: ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ

ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಗಾಯಗೊಂಡಿದ್ದ ಮಹಿಳೆಯನ್ನು ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಯ ನಂತರ ಅವರನ್ನು ಬಿಡುಗಡೆ ಮಾಡಲಾಯಿತು. ಘಟನೆಯ ನಂತರ ವಿಮಾನ ನಿಲ್ದಾಣದ ಆಡಳಿತ ಕೂಡ ಜಾಗರೂಕವಾಗಿದೆ.
ಮಹಿಳೆ ಮೇಲೆ ದಾಳಿ ಮಾಡಿದ್ದ ನಾಯಿಗೆ ಈಗಾಗಲೇ ಲಸಿಕೆ ನೀಡಲಾಗಿತ್ತು ಎಂಬುದು ತಿಳಿದುಬಂದಿದೆ. ಆದ್ದರಿಂದ ಯಾವುದೇ ಆರೋಗ್ಯ ಸಮಸ್ಯೆಗಳಾಗದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಎಐ ಇಂಪ್ಯಾಕ್ಟ್ ಶೃಂಗಸಭೆ; ಭಾರತದ ಪ್ರಗತಿಗೆ ಇಗೋ ನೋಡಿ ಸಾಕ್ಷ್ಯ ಎಂದ ಪ್ರಧಾನಿ ಮೋದಿ – Kannada News | AI Impact Summit 2026, PM Narendra Modi welcomes world leaders

ನವದೆಹಲಿ, ಫೆಬ್ರುವರಿ 16: ರಾಷ್ಟ್ರ ರಾಜಧಾನಿಯ ಭಾರತ್ ಮಂಟಪಂನಲ್ಲಿ ಇವತ್ತಿನಿಂದ ಐದು ದಿನಗಳ ಕಾಲ ನಡೆಯುವ ಎಐ ಇಂಪ್ಯಾಕ್ಟ್ ಶೃಂಗಸಭೆಗೆ (AI Impact Summit 2026) ಜಾಗತಿಕ ನೇತಾರರು, ನಿಯೋಗಗಳು, ಉದ್ಯಮ ಮುಖಂಡರು ಮೊದಲಾದ ಅತಿಥಿಗಳನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಈ ಶೃಂಗಸಭೆಯ ಧ್ಯೇಯವಾಕ್ಯವಾದ ‘ಸರ್ವಜನ ಹಿತಾಯ, ಸರ್ವಜನ ಸುಖಾಯ’ ಆಶಯದಂತೆ ಈ ಎಐ ಸಭೆಯು ಸರ್ವವರಿಗೂ ಒಳಿತಾಗುವ ಪ್ರಗತಿದಾಯಕ ಭವಿಷ್ಯಕ್ಕೆ ನಾಂದಿ ಹಾಡಬಲ್ಲುದು ಎಂದು ಪ್ರಧಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಕೃತಕ ಬುದ್ಧಿಮತ್ತೆಯನ್ನು ಚರ್ಚಿಸಲು ಜಗತ್ತನ್ನು ಒಟ್ಟಿಗೆ ಸೇರಿಸುತ್ತಿದ್ದೇವೆ. ಇವತ್ತಿನಿಂದ ದೆಹಲಿಯ ಭಾರತ್ ಮಂಟಪದಲ್ಲಿ ಎಐ ಇಂಪ್ಯಾಕ್ಟ್ ಶೃಂಗಸಭೆ ಆಯೋಜನೆಯಾಗುತ್ತಿದೆ. ಜಗತ್ತಿನಾದ್ಯಂತ ವಿಶ್ವ ನಾಯಕರು, ಉದ್ಯಮದ ನೇತಾರರು, ಇನ್ನೋವೇಟರ್​ಗಳು, ನೀತಿ ರೂಪಕರು, ಸಂಶೋಧಕರು, ತಂತ್ರಜ್ಞಾನ ಆಸಕ್ತರನ್ನು ಈ ಸಮಿಟ್​ಗೆ ಸ್ವಾಗತಿಸುತ್ತೇನೆ. ಸರ್ವಜನ ಹಿತಾಯ, ಸರ್ವಜನ ಸುಖಾಯ ಎಬುದು ಈ ಸಮಾವೇಶದ ಥೀಮ್ ಆಗಿದೆ. ಮಾನವ ಕೇಂದ್ರಿತವಾದ ಪ್ರಗತಿಗೆ ಆರ್ಟಿಫಿಶಿಯಲ್ ಇಂಟೆಲಿಜಜೆನ್ಸ್ ಅನ್ನು ಬಳಸಬೇಕೆನ್ನುವ ನಮ್ಮ ಬದ್ಧತೆಯನ್ನು ಈ ಶೃಂಗಸಭೆ ಪ್ರತಿಬಿಂಬಿಸುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಗೂಗಲ್, ಮೈಕ್ರೋಸಾಫ್ಟ್ ಇತ್ಯಾದಿ ಟೆಕ್ ಕಂಪನಿಗಳ ಬ್ರಿಟಿಷ್ ಈಸ್ಟ್ ಇಂಡಿಯಾ ಸಂಸ್ಥೆಗೆ ಹೋಲಿಸಿದ ಶ್ರೀಧರ್ ವೆಂಬು

ಶಿಕ್ಷಣ, ಹೆಲ್ತ್​ಕೇರ್, ಕೃಷಿ, ಆಡಳಿತ ಮತ್ತು ಉದ್ದಿಮೆಗಾರಿಕೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಎಐನಿಂದ ಪರಿವರ್ತನೆ ಆಗುತ್ತಿದೆ. ಇನ್ನೋವೇಶನ್, ಸಹಭಾಗಿತ್ವ, ಜವಾಬ್ದಾರಿಯುತ ಬಳಕೆ ಮತ್ತಿತರ ವಿವಿಧ ಅಂಶಗಳಲ್ಲಿ ಜಾಗತಿಕ ವಿಚಾರ ವಿನಿಮಯವಾಗುವುದಕ್ಕೆ ಈ ಶೃಂಗಸಭೆ ವೇದಿಕೆ ಆಗುತ್ತಿದೆ. ಪ್ರಗತಿದಾಯಕವಾದ, ನಾವೀನ್ಯತೆಯುಳ್ಳ ಮತ್ತು ಅವಕಾಶಜನ್ಯವಾದ ಭವಿಷ್ಯವನ್ನು ರೂಪಿಸಲು ಈ ಶೃಂಗಸಭೆ ಸಹಾಯವಾಗಬಹುದೆನ್ನುವ ವಿಶ್ವಾಸ ಇದೆ ಎಂದು ಮೋದಿ ಹೇಳಿದ್ಧಾರೆ.

140 ಕೋಟಿ ಜನರಿಂದಾಗಿ ಭಾರತವು ಎಐ ಪರಿವರ್ತನೆಯಲ್ಲಿ ಮುಂಚೂಣಿಯಲ್ಲಿ ನಿಂತಿದೆ. ಡಿಜಿಟಲ್ ಪಬ್ಲಿಕ್ ಇನ್​ಫ್ರಾಸ್ಟ್ರಕ್ಚರ್​ನಿಂದ ಹಿಡಿದು ಉತ್ತಮ ಸ್ಟಾರ್ಟಪ್ ಇಕೋಸಿಸ್ಟಂ ಮತ್ತು ಅತ್ಯಾಧುನಿಕ ಸಂಶೋಧನೆಯವರೆಗೂ ಎಐನಲ್ಲಿ ನಾವು ತೋರಿರುವ ಪ್ರಗತಿಯು ನಮ್ಮ ಮಹತ್ವಾಕಾಂಕ್ಷೆ ಮತ್ತು ಜವಾಬ್ದಾರಿ ಎರಡನ್ನೂ ಪ್ರತಿಫಲಿಸುತ್ತದೆ ಎಂದೂ ಮೋದಿ ತಮ್ಮ ಸರಣಿ ಟ್ವೀಟ್​ಗಳಲ್ಲಿ ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರ ಸರಣಿ ಟ್ವೀಟ್​ಗಳು

ಇದನ್ನೂ ಓದಿ: ನಗರಗಳೇ ಅಭಿವೃದ್ಧಿ ಯಂತ್ರಗಳು; ಸರ್ಕಾರದಿಂದ 1 ಲಕ್ಷ ಕೋಟಿ ರೂ ಅರ್ಬನ್ ಚಾಲೆಂಜ್ ಫಂಡ್

ಫೆಬ್ರುವರಿ 20ರವರೆಗೂ ನಡೆಯಲಿರುವ ಈ ಶೃಂಗಸಭೆಯಲ್ಲಿ ಜಗತ್ತಿನ ಟೆಕ್ ದೈತ್ಯರು ಪಾಲ್ಗೊಳ್ಳುತ್ತಿದ್ದಾರೆ. ಸುಂದರ್ ಪಿಚೈ, ಸ್ಯಾಮ್ ಆಲ್ಟ್​ಮ್ಯಾನ್, ಡೇರಿಯೋ ಅಮೊಡೇ, ಡೆಮಿಸ್ ಹಸಾಬಿಸ್, ಬಿಲ್ ಗೇಟ್ಸ್, ಯಾನ್ ಲೇಕುನ್, ಯೊಶುವಾ ಬೆಂಗಿಯೋ, ಬ್ರಾಡ್ ಸ್ಮಿತ್ ಮೊದಲಾದವರ ಉಪಸ್ಥಿತಿ ಇರಲಿದೆ.

ಎರಡು ಲಕ್ಷಕ್ಕೂ ಅಧಿಕ ಜನರು ಈ ಕಾರ್ಯಕ್ರಮಕ್ಕೆ ನೊಂದಾಯಿಸಿಕೊಂಡಿದ್ದಾರೆ. ವಿವಿಧ ಎಐ ಆವಿಷ್ಕಾರಗಳ ಪ್ರದರ್ಶನಗಳು, ಸುಮಾರು 300 ಪೆವಿಲಿಯನ್​ಗಳು, ಲೈವ್ ಡೆಮಾನ್ಸ್​ಟ್ರೇಶನ್​ಗಳು, ಚರ್ಚೆಗಳು, ವಿಚಾರ ಮಂಡನೆ ಇತ್ಯಾದಿ ನಾನಾ ರೀತಿಯ ಕಾರ್ಯಕ್ರಮಗಳನ್ನು ಈ ಐದು ದಿನದಲ್ಲಿ ಕಾಣಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮಡಿಕೇರಿ, ದಾವಣಗೆರೆ, ಧಾರವಾಡ ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ – Kannada News | Bomb Threat Emails Target Courts in Karnataka: Madikeri, Davanagere, Dharwad Judiciary on Alert

ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠImage Credit source: tv9

ಬೆಂಗಳೂರು, ಫೆಬ್ರವರಿ 16: ಕರ್ನಾಟಕದಲ್ಲಿ (Karnataka) ನ್ಯಾಯಾಂಗ ಸಂಸ್ಥೆಗಳನ್ನೇ ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ (Bomb Threat) ಸಂದೇಶಗಳು ಬಂದಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮಡಿಕೇರಿ ನ್ಯಾಯಾಲಯ ಸಮುಚ್ಚಯಕ್ಕೆ ಅನಾಮಧೇಯ ವ್ಯಕ್ತಿ ಇ-ಮೇಲ್ ಮೂಲಕ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದು, ಪೊಲೀಸರು ತಕ್ಷಣ ಎಚ್ಚೆತ್ತುಕೊಂಡು ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಹೊರಗೆ ಕಳುಹಿಸಿದರು. ಬಳಿಕ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದರು. ಸಂದೇಶ ಕಳುಹಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಕೀಲರ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಇದೇ ರೀತಿ ದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೂ ಅಪರಿಚಿತ ವ್ಯಕ್ತಿಯಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ತಮಿಳುನಾಡು ಮೂಲದ ವ್ಯಕ್ತಿಯಿಂದ ಜಡ್ಜ್ ಅವರ ಇ-ಮೇಲ್ ಐಡಿಗೆ ಮಧ್ಯಾಹ್ನ 12.30ಕ್ಕೆ ಆರ್​ಡಿಎಕ್ಸ್ ಬಾಂಬ್ ಸ್ಫೋಟವಾಗಲಿದೆ ಎಂದು ತಿಳಿಸಲಾಗಿತ್ತು. ಮಾಹಿತಿ ತಿಳಿದ ತಕ್ಷಣ ನ್ಯಾಯಾಧೀಶರು ಮತ್ತು ಸಿಬ್ಬಂದಿ ಕೋರ್ಟ್‌ನಿಂದ ಹೊರಬಂದಿದ್ದು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸಿಬ್ಬಂದಿ ಪರಿಶೀಲನೆ ನಡೆಸಿದರು.

ಹೈಕೋರ್ಟ್ ಧಾರವಾಡ ಪೀಠಕ್ಕೆ ಮತ್ತೆ ಬಾಂಬ್ ಬೆದರಿಕೆ

ಮತ್ತೊಂದೆಡೆ, ಹೈಕೋರ್ಟ್ ಧಾರವಾಡ ಪೀಠಕ್ಕೆ ಮತ್ತೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು ಆತಂಕ ಸೃಷ್ಟಿಸಿದೆ. ಇ-ಮೇಲ್ ಮೂಲಕ ಬಂದ ಸಂದೇಶದ ಹಿನ್ನೆಲೆ ವಕೀಲರು ಕೋರ್ಟ್‌ನಿಂದ ಹೊರಬಂದಿದ್ದು, ಗರಗ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಕೈಗೊಂಡಿದ್ದಾರೆ. ಒಂದು ತಿಂಗಳ ಹಿಂದೆಯೂ ಇದೇ ರೀತಿಯ ಬೆದರಿಕೆ ಸಂದೇಶ ಬಂದಿತ್ತು.

ಇದನ್ನೂ ಓದಿ: ಇಂಡಿಗೋ ವಿಮಾನಕ್ಕೆ ಬಾಂಬ್​​ ಬೆದರಿಕೆ: ವಿಮಾನದ ಶೌಚಾಲಯದಲ್ಲಿ ಸಿಕ್ತು ಅಚ್ಚರಿಯ ಪತ್ರ

ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸ್ಥಳಗಳಿಗೆ ಸಹ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಬಹುತೇಕ ಸಂದರ್ಭಗಳಲ್ಲಿ ಹುಸಿ ಬೆದರಿಕೆಗಳಾಗಿದ್ದರೂ, ಭದ್ರತಾ ದೃಷ್ಟಿಯಿಂದ ಪೊಲೀಸರು ಗಂಭೀರವಾಗಿ ಪರಿಗಣಿಸಿ ತಪಾಸಣೆ ನಡೆಸುತ್ತಿದ್ದಾರೆ. ಈ ರೀತಿಯ ಕೃತ್ಯಗಳಿಗೆ ಕಾರಣವಾಗಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಹಾಗೂ ವಕೀಲರ ಸಂಘಗಳು ಆಗ್ರಹಿಸಿವೆ.

ವರದಿ: ಗೋಪಾಲ್ ಎಎಸ್, ನರಸಿಂಹ ಮೂರ್ತಿ ಪ್ಯಾಟಿ, ಬಸವರಾಜ್ ದೊಡ್ಮನಿ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಐ ಇಂಪ್ಯಾಕ್ಟ್ ಶೃಂಗಸಭೆ; ಭಾರತದ ಪ್ರಗತಿಗೆ ಇಗೋ ನೋಡಿ ಸಾಕ್ಷ್ಯ ಎಂದ ಪ್ರಧಾನಿ ಮೋದಿ – Kannada News | Ai impact summit 2026 pm narendra modi welcomes world leaders

ನವದೆಹಲಿ, ಫೆಬ್ರುವರಿ 16: ರಾಷ್ಟ್ರ ರಾಜಧಾನಿಯ ಭಾರತ್ ಮಂಟಪಂನಲ್ಲಿ ಇವತ್ತಿನಿಂದ ಐದು ದಿನಗಳ ಕಾಲ ನಡೆಯುವ ಎಐ ಇಂಪ್ಯಾಕ್ಟ್ ಶೃಂಗಸಭೆಗೆ (AI Impact Summit 2026) ಜಾಗತಿಕ ನೇತಾರರು, ನಿಯೋಗಗಳು, ಉದ್ಯಮ ಮುಖಂಡರು ಮೊದಲಾದ ಅತಿಥಿಗಳನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಈ ಶೃಂಗಸಭೆಯ ಧ್ಯೇಯವಾಕ್ಯವಾದ ‘ಸರ್ವಜನ ಹಿತಾಯ, ಸರ್ವಜನ ಸುಖಾಯ’ ಆಶಯದಂತೆ ಈ ಎಐ ಸಭೆಯು ಸರ್ವವರಿಗೂ ಒಳಿತಾಗುವ ಪ್ರಗತಿದಾಯಕ ಭವಿಷ್ಯಕ್ಕೆ ನಾಂದಿ ಹಾಡಬಲ್ಲುದು ಎಂದು ಪ್ರಧಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಕೃತಕ ಬುದ್ಧಿಮತ್ತೆಯನ್ನು ಚರ್ಚಿಸಲು ಜಗತ್ತನ್ನು ಒಟ್ಟಿಗೆ ಸೇರಿಸುತ್ತಿದ್ದೇವೆ. ಇವತ್ತಿನಿಂದ ದೆಹಲಿಯ ಭಾರತ್ ಮಂಟಪದಲ್ಲಿ ಎಐ ಇಂಪ್ಯಾಕ್ಟ್ ಶೃಂಗಸಭೆ ಆಯೋಜನೆಯಾಗುತ್ತಿದೆ. ಜಗತ್ತಿನಾದ್ಯಂತ ವಿಶ್ವ ನಾಯಕರು, ಉದ್ಯಮದ ನೇತಾರರು, ಇನ್ನೋವೇಟರ್​ಗಳು, ನೀತಿ ರೂಪಕರು, ಸಂಶೋಧಕರು, ತಂತ್ರಜ್ಞಾನ ಆಸಕ್ತರನ್ನು ಈ ಸಮಿಟ್​ಗೆ ಸ್ವಾಗತಿಸುತ್ತೇನೆ. ಸರ್ವಜನ ಹಿತಾಯ, ಸರ್ವಜನ ಸುಖಾಯ ಎಬುದು ಈ ಸಮಾವೇಶದ ಥೀಮ್ ಆಗಿದೆ. ಮಾನವ ಕೇಂದ್ರಿತವಾದ ಪ್ರಗತಿಗೆ ಆರ್ಟಿಫಿಶಿಯಲ್ ಇಂಟೆಲಿಜಜೆನ್ಸ್ ಅನ್ನು ಬಳಸಬೇಕೆನ್ನುವ ನಮ್ಮ ಬದ್ಧತೆಯನ್ನು ಈ ಶೃಂಗಸಭೆ ಪ್ರತಿಬಿಂಬಿಸುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಗೂಗಲ್, ಮೈಕ್ರೋಸಾಫ್ಟ್ ಇತ್ಯಾದಿ ಟೆಕ್ ಕಂಪನಿಗಳ ಬ್ರಿಟಿಷ್ ಈಸ್ಟ್ ಇಂಡಿಯಾ ಸಂಸ್ಥೆಗೆ ಹೋಲಿಸಿದ ಶ್ರೀಧರ್ ವೆಂಬು

ಶಿಕ್ಷಣ, ಹೆಲ್ತ್​ಕೇರ್, ಕೃಷಿ, ಆಡಳಿತ ಮತ್ತು ಉದ್ದಿಮೆಗಾರಿಕೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಎಐನಿಂದ ಪರಿವರ್ತನೆ ಆಗುತ್ತಿದೆ. ಇನ್ನೋವೇಶನ್, ಸಹಭಾಗಿತ್ವ, ಜವಾಬ್ದಾರಿಯುತ ಬಳಕೆ ಮತ್ತಿತರ ವಿವಿಧ ಅಂಶಗಳಲ್ಲಿ ಜಾಗತಿಕ ವಿಚಾರ ವಿನಿಮಯವಾಗುವುದಕ್ಕೆ ಈ ಶೃಂಗಸಭೆ ವೇದಿಕೆ ಆಗುತ್ತಿದೆ. ಪ್ರಗತಿದಾಯಕವಾದ, ನಾವೀನ್ಯತೆಯುಳ್ಳ ಮತ್ತು ಅವಕಾಶಜನ್ಯವಾದ ಭವಿಷ್ಯವನ್ನು ರೂಪಿಸಲು ಈ ಶೃಂಗಸಭೆ ಸಹಾಯವಾಗಬಹುದೆನ್ನುವ ವಿಶ್ವಾಸ ಇದೆ ಎಂದು ಮೋದಿ ಹೇಳಿದ್ಧಾರೆ.

140 ಕೋಟಿ ಜನರಿಂದಾಗಿ ಭಾರತವು ಎಐ ಪರಿವರ್ತನೆಯಲ್ಲಿ ಮುಂಚೂಣಿಯಲ್ಲಿ ನಿಂತಿದೆ. ಡಿಜಿಟಲ್ ಪಬ್ಲಿಕ್ ಇನ್​ಫ್ರಾಸ್ಟ್ರಕ್ಚರ್​ನಿಂದ ಹಿಡಿದು ಉತ್ತಮ ಸ್ಟಾರ್ಟಪ್ ಇಕೋಸಿಸ್ಟಂ ಮತ್ತು ಅತ್ಯಾಧುನಿಕ ಸಂಶೋಧನೆಯವರೆಗೂ ಎಐನಲ್ಲಿ ನಾವು ತೋರಿರುವ ಪ್ರಗತಿಯು ನಮ್ಮ ಮಹತ್ವಾಕಾಂಕ್ಷೆ ಮತ್ತು ಜವಾಬ್ದಾರಿ ಎರಡನ್ನೂ ಪ್ರತಿಫಲಿಸುತ್ತದೆ ಎಂದೂ ಮೋದಿ ತಮ್ಮ ಸರಣಿ ಟ್ವೀಟ್​ಗಳಲ್ಲಿ ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರ ಸರಣಿ ಟ್ವೀಟ್​ಗಳು

ಇದನ್ನೂ ಓದಿ: ನಗರಗಳೇ ಅಭಿವೃದ್ಧಿ ಯಂತ್ರಗಳು; ಸರ್ಕಾರದಿಂದ 1 ಲಕ್ಷ ಕೋಟಿ ರೂ ಅರ್ಬನ್ ಚಾಲೆಂಜ್ ಫಂಡ್

ಫೆಬ್ರುವರಿ 20ರವರೆಗೂ ನಡೆಯಲಿರುವ ಈ ಶೃಂಗಸಭೆಯಲ್ಲಿ ಜಗತ್ತಿನ ಟೆಕ್ ದೈತ್ಯರು ಪಾಲ್ಗೊಳ್ಳುತ್ತಿದ್ದಾರೆ. ಸುಂದರ್ ಪಿಚೈ, ಸ್ಯಾಮ್ ಆಲ್ಟ್​ಮ್ಯಾನ್, ಡೇರಿಯೋ ಅಮೊಡೇ, ಡೆಮಿಸ್ ಹಸಾಬಿಸ್, ಬಿಲ್ ಗೇಟ್ಸ್, ಯಾನ್ ಲೇಕುನ್, ಯೊಶುವಾ ಬೆಂಗಿಯೋ, ಬ್ರಾಡ್ ಸ್ಮಿತ್ ಮೊದಲಾದವರ ಉಪಸ್ಥಿತಿ ಇರಲಿದೆ.

ಎರಡು ಲಕ್ಷಕ್ಕೂ ಅಧಿಕ ಜನರು ಈ ಕಾರ್ಯಕ್ರಮಕ್ಕೆ ನೊಂದಾಯಿಸಿಕೊಂಡಿದ್ದಾರೆ. ವಿವಿಧ ಎಐ ಆವಿಷ್ಕಾರಗಳ ಪ್ರದರ್ಶನಗಳು, ಸುಮಾರು 300 ಪೆವಿಲಿಯನ್​ಗಳು, ಲೈವ್ ಡೆಮಾನ್ಸ್​ಟ್ರೇಶನ್​ಗಳು, ಚರ್ಚೆಗಳು, ವಿಚಾರ ಮಂಡನೆ ಇತ್ಯಾದಿ ನಾನಾ ರೀತಿಯ ಕಾರ್ಯಕ್ರಮಗಳನ್ನು ಈ ಐದು ದಿನದಲ್ಲಿ ಕಾಣಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹೂಡಿಕೆ ಬಾರದ್ದಕ್ಕೆ ಕೋಮುವಾದ ಕಾರಣ ಎಂದು ಹೇಳಿ ಪೇಚಿಗೆ ಸಿಲುಕಿದ ಪ್ರಿಯಾಂಕ್​ ಖರ್ಗೆ: ಬಿಜೆಪಿ ಕೌಂಟರ್​​ ನೋಡಿ – Kannada News | BJP Hits Back at Priyank Kharge Over Communalism Remark on Coastal and IT BT Investments

ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಬಿಜೆಪಿ ಕಿಡಿ

ಬೆಂಗಳೂರು, ಫೆಬ್ರವರಿ 16: ಕೋಮುವಾದದ ಕಾರಣ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ಖಡಕ್​​ ಕೌಂಟರ್​​ ಕೊಟ್ಟಿದೆ. ಕರಾವಳಿ ಬಗ್ಗೆ ಮಾತನಾಡುವ ಮುನ್ನ, ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿಗಳು ಕಾಲಿಟ್ಟಿಲ್ಲ ಎನ್ನುವುದರ ಕಡೆಗೆ ಗಮನ ಹರಿಸಿ ಎಂದು ಸಚಿವರಿಗೆ ತಿವಿದಿದೆ. ಗಾಂಧಿ ಭವನದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರಿಯಾಂಕ್​​, ಐಟಿ-ಬಿಟಿ ಕಂಪನಿಗಳಿಗೆ ಹೂಡಿಕೆ ಮಾಡಿ ಎಂದು ಹೇಳುತ್ತೇವೆ. ಆದರೆ ತಮ್ಮ ಕೆಲಸಗಾರರಿಗೆ ತೊಂದರೆ ಆದರೆ ಏನು ಕತೆ ಎಂಬ ಚಿಂತೆ ಅವರಿಗಿದೆ. ಎಲ್ಲಿಯವರೆಗೆ ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗಿ ಮಾತನಾಡಲ್ವೋ ಅಲ್ಲಿಯವರೆಗೂ ಸಮಾಜ ಉದ್ಧಾರ ಆಗಲ್ಲ. ಧರ್ಮದ ನಶೆ ಸೃಷ್ಟಿಸುವ ಕೆಲಸ ಮೊದಲು ನಿಲ್ಲಬೇಕು ಎಂದಿದ್ದರು. ಈ ವಿಚಾರವೀಗ ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.

‘ಕರಾವಳಿಯ ಆರ್ಥಿಕತೆಗೆ ಕಳಂಕ ಹಚ್ಚುವ ಪ್ರಯತ್ನ’

ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಕಿಡಿ ಕಾರಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಕರಾವಳಿಯ ಮಣ್ಣಿನ ಗುಣ ಮತ್ತು ಅಲ್ಲಿನ ಜನರ ಉದ್ಯಮಶೀಲತೆಯನ್ನು, ಪ್ರಗತಿಯನ್ನು, ತಮ್ಮ ಕೀಳು ರಾಜಕೀಯದ ಕಾಮಾಲೆ ಕಣ್ಣಿನಿಂದ ನೋಡದೆ ವಾಸ್ತವ ನೆಲೆಗಟ್ಟಿನಲ್ಲಿ ಸಚಿವರು ನೋಡಲಿ. ಕರಾವಳಿಗೆ ಕೋಮುವಾದದ ಹಣೆಪಟ್ಟಿ ಹಚ್ಚುವ ಅವರ ವ್ಯರ್ಥ ಪ್ರಯತ್ನ ಅವರ ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ. ಕರಾವಳಿ ಕರ್ನಾಟಕ ತನ್ನ ಸ್ವಂತ ಶಕ್ತಿಯಿಂದ, IT-BT ಸೇರಿದಂತೆ ಶಿಕ್ಷಣ, ಬ್ಯಾಂಕಿಂಗ್ ಮತ್ತು ಉದ್ಯಮ ರಂಗದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದೆ. ಅಂತಹ ನಮ್ಮ ಹೆಮ್ಮೆಯ ಕರಾವಳಿ ಜಿಲ್ಲೆಗಳ ಕುರಿತು ಅನಗತ್ಯವಾಗಿ ಬಂಡವಾಳ ಹೂಡಿಕೆದಾರರನ್ನು ಹೆದರಿಸುವ ಕೆಲಸವನ್ನು ಸ್ವತಃ ರಾಜ್ಯ ಸರ್ಕಾರದ ಐಟಿ-ಬಿಟಿ ಸಚಿವರೇ ಮಾಡುತ್ತಿರುವುದು ದುರದೃಷ್ಟಕರ. ರಾಜ್ಯದ ಹಿತ ಕಾಯಬೇಕಾದ ಸಚಿವರು, ಹೂಡಿಕೆದಾರರಲ್ಲಿ ಭೀತಿ ಹುಟ್ಟಿಸುವ ಮೂಲಕ ಕರಾವಳಿಯ ಆರ್ಥಿಕತೆಗೆ ಕಳಂಕ ಹಚ್ಚುವ ಪ್ರಯತ್ನ ಮಾಡುತ್ತಿರುವುದು ಕರಾವಳಿಯ ಜನರಿಗೆ ಮಾಡುತ್ತಿರುವ ಅವಮಾನವಷ್ಟೇ ಅಲ್ಲ, ತಮ್ಮ ಭ್ರಷ್ಟ ಕಾಂಗ್ರೆಸ್​​ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಂಸ್ಕೃತಿಯ ವ್ಯವಸ್ಥಿತ ಸಂಚು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕುರ್ಚಿ ಗುದ್ದಾಟದ ನಡುವೆ ನಾಳೆಯೇ ವಿದೇಶಕ್ಕೆ ಹಾರಲಿದ್ದಾರೆ ಸಿಎಂ ಸಿದ್ದರಾಮಯ್ಯ ಬಣದ ಕಾಂಗ್ರೆಸ್ ಶಾಸಕರು!

ಇತ್ತೀಚೆಗೆ ನಿಮ್ಮ ಘನ ಸರ್ಕಾರಕ್ಕೆ ಸಲ್ಲಿಕೆಯಾದ ಡಾ. ಗೋವಿಂದರಾವ್ ಸಮಿತಿ ವರದಿಯೇ ನಿಮ್ಮ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ. ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕು ‘ಅತೀ ಹಿಂದುಳಿದ’ ಪಟ್ಟಿಯಲ್ಲಿದ್ದರೆ, ಕರಾವಳಿಯು ತನ್ನ ಸ್ವಂತ ಶಕ್ತಿಯಿಂದ ಅಭಿವೃದ್ಧಿ ಹೊಂದಿದ ವಲಯವಾಗಿ ಗುರುತಿಸಿಕೊಂಡಿದೆ. ನಿಮ್ಮ ತವರು ಜಿಲ್ಲೆಯ ಯುವಕ ಯುವತಿಯರಿಗೆ ಶಿಕ್ಷಣ ಮತ್ತು ಉದ್ಯೋಗ ನೀಡಲು ವಿಫಲವಾಗಿರುವ ನೀವು, ಕರಾವಳಿಯ ಜನರ ಉದ್ಯಮಶೀಲತೆಯನ್ನು ಅವಮಾನಿಸುವುದು ನಿಮ್ಮ ರಾಜಕೀಯ ಅಸಮರ್ಥತೆಯನ್ನು, ಅಸಹಾಯಕತೆಯನ್ನು ಮತ್ತು ದುರಂತ ವೈಫಲ್ಯವನ್ನು ತೋರಿಸುತ್ತದೆ. ಮೊದಲು ನಿಮ್ಮ ಭಾಗದ ಅಭಿವೃದ್ಧಿಯತ್ತ ತುರ್ತು ಗಮನಹರಿಸಿ, ನಂತರ ಕರಾವಳಿಯ ಬಗ್ಗೆ ಮಾತನಾಡಿ. ಕರಾವಳಿಯ ಶಕ್ತಿ ಅಲ್ಲಿನ ಧರ್ಮ ಮತ್ತು ಕರ್ಮದ ಸಮನ್ವಯತೆ. ಸುಮ್ಮನೆ ಅದನ್ನು ಕೆಣಕುವ ಬದಲು, ನಿಮ್ಮ ಆಡಳಿತದ ಅಸಮರ್ಥತೆಯಿಂದ ರಾಜ್ಯದಿಂದ ಹೊರಹೋಗುತ್ತಿರುವ ಕಂಪನಿಗಳನ್ನು ಉಳಿಸಿಕೊಳ್ಳುವತ್ತ ಗಮನಹರಿಸಿ ಎಂದು ಕೌಂಟರ್​​ ಕೊಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಾಯ್ಕಾಟ್ ಮಾಡಿದ್ರೆ ಇಷ್ಟೊಂದು ಅವಮಾನ ಆಗ್ತಿರಲಿಲ್ಲ: ಪಾಕ್ ಕ್ರಿಕೆಟಿಗ – Kannada News | Danish Kaneria Mocks Pakistan After Defeat Against India

ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಪಾರುಪತ್ಯ ಮುಂದುವರೆಸಿದೆ. ಅದು ಕೂಡ 8ನೇ ಬಾರಿ ಗೆಲುವು ದಾಖಲಿಸುವ ಮೂಲಕ. ಕೊಲಂಬೊದಲ್ಲಿ ನಡೆದ ಟಿ20 ವಿಶ್ವಕಪ್ 2026ರ 27ನೇ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 175 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ 18 ಓವರ್​ಗಳಲ್ಲಿ ಕೇವಲ 114 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಪಾಕ್ ಪಡೆ 61 ರನ್​ಗಳ ಹೀನಾಯ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಪಾಕಿಸ್ತಾನ್ ತಂಡದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ ಟ್ವೀಟ್ ಮಾಡಿ ಬಾಯ್ಕಾಟ್ ಮಾಡಿದ್ರೆ ಸಾಕಿತ್ತು ಎಂದು ಅಣಕವಾಡಿದ್ದಾರೆ.

ಇದಕ್ಕೂ ಮುನ್ನ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭಾರತದ ವಿರುದ್ಧದ ಪಂದ್ಯವನ್ನು ಬಾಯ್ಕಾಟ್ ಮಾಡುವುದಾಗಿ ಬೆದರಿಸಿತ್ತು. ಆದರೆ ಐಸಿಸಿ ಮಧ್ಯ ಪ್ರವೇಶಿಸಿ ಪಿಸಿಬಿಯ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಅದರಂತೆ ಭಾರತದ ವಿರುದ್ಧ ಕಣಕ್ಕಿಳಿದ ಪಾಕಿಸ್ತಾನ್ ತಂಡ ಇದೀಗ ಹೀನಾಯವಾಗಿ ಸೋತಿದೆ.

ಈ ಸೋಲನ್ನು ಕೇವಲ ಒಂದೇ ವಾಕ್ಯದಲ್ಲಿ ದಾನಿಶ್ ಕನೇರಿಯಾ ವಿಮರ್ಶಿಸಿದ್ದು, “ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಪಂದ್ಯವನ್ನು ಬಹಿಷ್ಕರಿಸಿದ್ದರೆ ನಾವು ಕಡಿಮೆ ಮುಜುಗರ ಅನುಭವಿಸಬಹುದಿತ್ತು” ಎಂದಿದ್ದಾರೆ.

ಅಂದರೆ ಈ ಮ್ಯಾಚ್​ ಆಡದೇ ಇದ್ದಿದ್ದರೆ ಇಷ್ಟೊಂದು ಅವಮಾನ ಆಗುತ್ತಿರಲಿಲ್ಲ ಎಂದು ದಾನಿಶ್ ಕನೇರಿಯಾ ಪಾಕ್ ತಂಡದ ಪ್ರದರ್ಶನವನ್ನು ವ್ಯಂಗ್ಯವಾಡಿದ್ದಾರೆ.

 

 

 

Source link