Category Archives: Blog

Your blog category

DC vs PBKS IPL 2026 Live Score: ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ – Kannada News | Delhi Capitals vs Punjab Kings IPL 2026 Live Cricket Score DC vs PBKS Match on 25th April latest news in Kannada

  • 25 Apr 2026 03:09 PM (IST)

    DC vs PBKS IPL 2026: ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI

    ಶ್ರೇಯಸ್ ಅಯ್ಯರ್ (ನಾಯಕ), ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ಕೂಪರ್ ಕೊನೊಲಿ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಯಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ವೈಶಾಕ್ ವಿಜಯ್​ಕುಮಾರ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.

  • 25 Apr 2026 03:08 PM (IST)

    DC vs PBKS IPL 2026: ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI

    ಕೆಎಲ್ ರಾಹುಲ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಸಮೀರ್ ರಿಜ್ವಿ, ನಿತೀಶ್ ರಾಣಾ, ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಅಕ್ಸರ್ ಪಟೇಲ್ (ನಾಯಕ), ಲುಂಗಿ ಎನ್‌ಗಿಡಿ, ಕುಲ್ದೀಪ್ ಯಾದವ್, ಟಿ ನಟರಾಜನ್, ಮುಖೇಶ್ ಕುಮಾರ್.

  • 25 Apr 2026 03:03 PM (IST)

    DC vs PBKS IPL 2026: ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ

    ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

  • Source link

    ಅತ್ತೆ ಮಗಳ ಜೊತೆ ಸರಸ, ಬೇರೊಬ್ಬಳ ಜತೆ ಸಂಸಾರ: ಇದೇನಿದು ವಿದ್ಯೆ ಕಲಿಸುವ ಗುರುವಿನ ಆಟ? – Kannada News | A Government Teacher Cheating His niece after engagement at koppal

    ಕೊಪ್ಪಳ, (ಏಪ್ರಿಲ್ 25): ವಿದ್ಯೆ ಕಲಿಸಬೇಕಾದ ಗುರುವೇ ಇಲ್ಲಿ ಕಾಮಪಿಶಾಚಿಯಾಗಿದ್ದಾನೆ. ಮದುವೆಯಾಗುವುದಾಗಿ (Marriage)  ನಂಬಿಸಿ ಸ್ವಂತ ಅತ್ತೆ ಮಗಳನ್ನೇ ಐದು ವರ್ಷಗಳಿಂದ ಪ್ರೀತಿಸಿ, ದೈಹಿಕವಾಗಿ ಬಳಸಿಕೊಂಡು ಈಗ ಕೈಕೊಟ್ಟಿದ್ದಾನೆ. ಅಲ್ಲದೇ ಮತ್ತೊಬ್ಬಳ ಜೊತೆ ಮದುವೆಯಾಗಿದ್ದಾನೆ. ಹೌದು…ಕೊಪ್ಪಳ (Koppal) ಜಿಲ್ಲೆಯ ಕನಕಗಿರಿ ತಾಲೂಕಿನ ಕನ್ನೇರಮಡುವಿನಲ್ಲಿ ಬಸವರಾಜ ಎನ್ನುವ ಸರ್ಕಾರಿ ಶಿಕ್ಷಕ, ಅತ್ತೆ ಮಗಳ ಜೊತೆ ಹಿರಿಯರ ಸಮ್ಮುಖದಲ್ಲೇ ನಿಶ್ಚಿತಾರ್ಥ (engagement) ಮಾಡಿಕೊಂಡಿದ್ದ. ಆದ್ರೆ, ಇದೀಗ ಬಸವರಾಜ ಮತ್ತೋರ್ವಳ ಜೊತೆ ಮದುವೆಯಾಗಿದ್ದು, ವಿವಾಹ ನೋಂದಣಿ ಪತ್ರವನ್ನು ಅತ್ತೆ ಮಗಳಿಗೆ ಕಳುಹಿಸಿದ್ದಾನೆ. ಇದರಿಂದ ಕಂಗಾಲದ ಯುವತಿ, ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

    ಸರಕಾರಿ ಶಿಕ್ಷಕನಾಗಿ ಸಮಾಜಕ್ಕೆ ಮಾದರಿಯಾಗಬೇಕಿದ್ದ ಬಸವರಾಜ ಹರಿಜನ್ ಎಂಬಾತ ತನ್ನ ನೈತಿಕತೆಯನ್ನೇ ಮರೆತು ವರ್ತಿಸಿದ್ದಾನೆ. ಹುಲಸನಟ್ಟಿ ಮೂಲದ ಯುವತಿ ಕರೆಮ್ಮಾ ಕೊಪ್ಪಳದ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎಸ್ಸಿ ಓದುತ್ತಿದ್ದಾಗಿನಿಂದಲೂ ಬಸವರಾಜನ ಜೊತೆ ಸಂಪರ್ಕವಿತ್ತು. ಸ್ವಂತ ಅತ್ತೆ ಮಗ ಎನ್ನುವ ಕಾರಣಕ್ಕೆ ಯುವತಿ ಆತನನ್ನು ಕುರುಡಾಗಿ ನಂಬಿದ್ದಳು. ನೌಕರಿ ಸಿಕ್ಕ ತಕ್ಷಣ ಮದುವೆಯಾಗುವುದಾಗಿ ನಂಬಿಸಿದ್ದ ಬಸವರಾಜ, ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಇಷ್ಟೇ ಅಲ್ಲದೆ, ಕನಕಗಿರಿ ತಾಲೂಕಿನ ಕನ್ನೇರಮಡುವಿನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ಕೂಡ ಮಾಡಿಕೊಂಡಿದ್ದ. ಆದರೆ, ಯಾವಾಗ ಸರಕಾರಿ ಶಿಕ್ಷಕನ ನೌಕರಿ ಭದ್ರವಾಯಿತೋ, ಆಗ ಈತನ ಬುದ್ಧಿ ಬದಲಾಗಿದೆ. ಪ್ರೀತಿಸಿದ ಅತ್ತೆ ಮಗಳನ್ನು ನಡುನೀರಲ್ಲಿ ಬಿಟ್ಟು, ರತ್ನವ್ವ ಎಂಬ ಯುವತಿಯೊಂದಿಗೆ ರಹಸ್ಯವಾಗಿ ವಿವಾಹವಾಗಿದ್ದಾನೆ.

    ಇದನ್ನೂ ಓದಿ: ನವ ವಿವಾಹಿತೆ ನಾಪತ್ತೆ ಕೇಸ್​​ಗೆ ಟ್ವಿಸ್ಟ್​: ಮುಸ್ಲಿಂ ಯುವಕನ ಜೊತೆ ಯುವತಿ ಪತ್ತೆ; ಪೊಲೀಸ್​​ ಠಾಣೆಯಲ್ಲಿ ಹೈಡ್ರಾಮಾ

    ಮೋಸ ಮಾಡಿದ್ದಷ್ಟೇ ಅಲ್ಲದೆ ಬಸವರಾಜ, ರತ್ನವ್ವಳೊಂದಿಗೆ ತಾನು ಮಾಡಿಕೊಂಡ ಮದುವೆಯ ನೋಂದಣಿ ಪತ್ರವನ್ನು ಸಂತ್ರಸ್ತ ಯುವತಿಯ ಮನೆಗೆ ಕಳುಹಿಸಿದ್ದಾನೆ. ಇದರಿಂದ ಕಂಗಾಲಾದ ಯುವತಿ ಮತ್ತು ಆಕೆಯ ಪೋಷಕರು ಈಗ ನ್ಯಾಯಕ್ಕಾಗಿ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಹಿರಿಯರ ಸಮ್ಮುಖದಲ್ಲಿ ನಿಶ್ವಯ ಮಾಡಿಕೊಂಡು ಇದೀಗ ಮತ್ತೊಂದು ಮದುವೆಯಾಗಿರುವ ಬಸವರಾಜ್ ಗೆ ತಕ್ಕ ಶಿಕ್ಷೆ ಆಗಬೇಕು ಆಗ್ರಹಿಸಿದ್ದಾರೆ. ಈ ಸಂಬಂಧ ಪೊಲೀಸರು ಸಹ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

    ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

    Source link

    ಅಮೆಜಾನ್ ಎಚ್ಚರಿಕೆ ನಡುವೆಯೂ ‘ದೃಶ್ಯಂ 3’ ಚಿತ್ರಕ್ಕೆ 100 ಕೋಟಿ ಹೂಡಿದ ಪೆನ್ ಸ್ಟುಡಿಯೋ – Kannada News | Pen Studios invest 100 crore rs on Mohanlal starrer Drishyam 3 movie

    ಮೋಹನ್​​ಲಾಲ್ (Mohanlal) ನಟನೆಯ ‘ದೃಶ್ಯಂ’ ಸಿನಿಮಾ ಸರಣಿಯ ಮೂರನೇ ಸಿನಿಮಾ ‘ದೃಶ್ಯಂ 3’ ಬಿಡುಗಡೆಗೆ ಬಹುತೇಕ ರೆಡಿಯಾಗಿದೆ. ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಸರಣಿ ಆಗಿರುವ ‘ದೃಶ್ಯಂ’ನ ಮೂರನೇ ಭಾಗವನ್ನು ಈ ಸರಣಿಯ ಕೊನೆಯ ಭಾಗ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಸಿನಿಮಾಕ್ಕೆ ಭಾರಿ ಬೇಡಿಕೆ ಇದೆ. ‘ದೃಶ್ಯಂ 2’ ಸಿನಿಮಾ ಕೋವಿಡ್ ಸಮಯದಲ್ಲಿ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಗಿತ್ತು. ಈಗ ‘ದೃಶ್ಯಂ 3’ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಬಿಡುಗಡೆಗೆ ಮೊದಲೇ ಸಿನಿಮಾಕ್ಕೆ ಕೆಲವು ಕಾನೂನು ಸಂಕಷ್ಟಗಳು ಎದುರಾಗಿವೆ. ಆದರೂ ಸಹ ಹಲವು ಹೂಡಿಕೆದಾರರು ಸಿನಿಮಾದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ.

    ಜಯಂತಿಲಾಲ್ ಗಡ ಅವರ ನೇತೃತ್ವದ ಪೆನ್ ಸ್ಟುಡಿಯೋಸ್ ನಿರ್ಮಾಣ ಸಂಸ್ಥೆಯು ಮೋಹನ್‌ಲಾಲ್ ಅವರ ‘ದೃಶ್ಯಂ 3’ ಚಿತ್ರದ ಮೇಲೆ 100 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲು ಮುಂದಾಗಿದೆ. ಈ ಹಿಂದೆ ‘ದೃಶ್ಯಂ 2’ ಚಿತ್ರವನ್ನು ನೇರವಾಗಿ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರಿಂದ ಚಿತ್ರಮಂದಿರಗಳ ಮಾಲೀಕರು ಅಸಮಾಧಾನಗೊಂಡಿದ್ದರು. ಈಗ ಮೂರನೇ ಭಾಗದ ಹಕ್ಕುಗಳ ವಿಚಾರವಾಗಿ ಅಮೆಜಾನ್ ಮತ್ತು ನಿರ್ಮಾಣ ಸಂಸ್ಥೆಯ ನಡುವೆ ಕೆಲವು ಭಿನ್ನಾಭಿಪ್ರಾಯಗಳು ಅಥವಾ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ. ಇದರ ನಡುವೆಯೂ ಸಹ ಪೆನ್ ಸ್ಟುಡಿಯೋಸ್ ಧೈರ್ಯ ತೋರಿದೆ.

    ಇದನ್ನೂ ಓದಿ;ಮೋಹನ್​​ಲಾಲ್​ ಚಿತ್ರಕ್ಕೆ ಶಾಕ್; ಕೇವಲ 3.5 ಲಕ್ಷ ಗಳಿಸಿದ ಸಿನಿಮಾ

    ಈ ಚಿತ್ರವನ್ನು ಮಲಯಾಳಂ ಮಾತ್ರವಲ್ಲದೆ, ಹಿಂದಿ ಸೇರಿದಂತೆ ಇತರ ಭಾಷೆಗಳಲ್ಲೂ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲು ಯೋಜನೆ ರೂಪಿಸಲಾಗಿದೆ. ಪೆನ್ ಸ್ಟುಡಿಯೋಸ್ ಈ ಹಿಂದೆ ‘RRR’ ನಂತಹ ದೊಡ್ಡ ಚಿತ್ರಗಳ ವಿತರಣೆಯಲ್ಲಿ ಭಾಗಿಯಾಗಿದ್ದರಿಂದ, ‘ದೃಶ್ಯಂ 3’ ಗೆ ದೊಡ್ಡ ಮಾರುಕಟ್ಟೆ ಸಿಗುವ ನಿರೀಕ್ಷೆಯಿದೆ. ‘ದೃಶ್ಯಂ 3’ ಸಿನಿಮಾದ ವಿಶ್ವದಾದ್ಯಂತ ವಿತರಣೆ ಹಕ್ಕಿಗಾಗಿಯೇ ಪೆನ್ ಸ್ಟುಡಿಯೋಸ್ 100 ಕೋಟಿ ರೂಪಾಯಿ ಹೂಡಿಕೆ ಮಾಡುತ್ತಿದೆ.

    ‘ದೃಶ್ಯಂ’ ಸರಣಿಯ ಮೊದಲೆರಡು ಸಿನಿಮಾ ನಿರ್ದೇಶಿಸಿದ್ದ ಜೀತು ಜೋಸೆಫ್ ಅವರೇ ಈ ಭಾಗವನ್ನೂ ನಿರ್ದೇಶಿಸುತ್ತಿದ್ದಾರೆ. ಆಶೀರ್ವಾದ್ ಸಿನಿಮಾಸ್ ಅಡಿಯಲ್ಲಿ ಆಂಟೋನಿ ಪೆರುಂಬವೂರ್ ಈ ಸಿನಿಮಾದ ನಿರ್ಮಾಪಕ. 2013 ರಲ್ಲಿ ಬಿಡುಗಡೆ ಆಗಿದ್ದ ಮೊದಲ ‘ದೃಶ್ಯಂ’ ಸಿನಿಮಾ ಹಲವು ದಾಖಲೆಗಳನ್ನು ಬರೆದಿತ್ತು. ಅತಿ ಹೆಚ್ಚು ಭಾಷೆಗೆ ಅಧಿಕೃತವಾಗಿ ರೀಮೇಕ್ ಆದ ಭಾರತೀಯ ಸಿನಿಮಾ ಎನಿಸಿಕೊಂಡಿತು. ‘ದೃಶ್ಯಂ 2’ ಸಿನಿಮಾ 2021 ರಲ್ಲಿ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಗಿತ್ತು. ಈಗ ‘ದೃಶ್ಯಂ 3’ ಸಿನಿಮಾ ಮೇ 21 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ‘ದೃಶ್ಯಂ 3’ ಈ ‘ದೃಶ್ಯಂ’ ಸರಣಿಯ ಕೊನೆಯ ಸಿನಿಮಾ ಎನ್ನಲಾಗುತ್ತಿದೆ.

    ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

    Source link

    ‘ಟಾಕ್ಸಿಕ್ ರಿಲೀಸ್ ಆಗುವ ಮುನ್ನ ಈ ಕೆಲಸ ಮಾಡಿ’; KVNಗೆ ಬೇಡಿಕೆ ಇಟ್ಟ ಫ್ಯಾನ್ಸ್ – Kannada News | KVN Big Budget Films Plagued by Delays and Controversy: Fans Ask For Do a Pooja

    ಕನ್ನಡದ ಹೆಮ್ಮೆಯ ನಿರ್ಮಾಣ ಸಂಸ್ಥೆ ‘ಕೆವಿಎನ್’ ಮೂರು ಬಿಗ್ ಬಜೆಟ್ ಚಿತ್ರಗಳನ್ನು ಘೋಷಣೆ ಮಾಡಿದಾಗಲೇ ಅಭಿಮಾನಿಗಳಲ್ಲಿ ಕುತೂಹಲ ಮೂಡಿತ್ತು. ಈ ಚಿತ್ರಗಳಿಗೆ ‘ಜನ ನಾಯಗನ್’, ‘ಟಾಕ್ಸಿಕ್’, ‘ಕೆಡಿ’ ಎಂದು ಟೈಟಲ್ ಕೊಡಲಾಗಿದೆ. ಜನವರಿಯಲ್ಲಿ ಒಂದು, ಮಾರ್ಚ್ ಅಲ್ಲಿ ಒಂದು ಹಾಗೂ ಏಪ್ರಿಲ್ ಅಂತ್ಯಕ್ಕೊಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಪ್ಲ್ಯಾನ್ ಎಲ್ಲವೂ ಉಲ್ಟಾ ಆಗಿದೆ. ಒಂದಾದ ಬಳಿಕ ಒಂದು ವಿಘ್ನ ಈ ಚಿತ್ರಗಳಿಗೆ ಎದುರಾಗುತ್ತಿದೆ. ಹೀಗಾಗಿ, ಅಭಿಮಾನಿಗಳು ಕೋರಿಕೆ ಒಂದನ್ನು ಇಟ್ಟಿದ್ದಾರೆ.

    ಜನವರಿ 9ರಂದು ತಮಿಳಿನ ‘ಜನ ನಾಯಗನ್’ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರವೇ ಸಿಕ್ಕಿಲ್ಲ. ಡಿಸೆಂಬರ್​​ನಲ್ಲಿಯೇ ಚಿತ್ರ ತಂಡದವರು ಸೆನ್ಸಾರ್ ಮಂಡಳಿಗೆ ಸಿನಿಮಾ ಸಲ್ಲಿಕೆ ಮಾಡಿದ್ದರು. ಇಂದು ಏಪ್ರಿಲ್ 25. ಅಂದರೆ ಒಂದು ಸಿನಿಮಾಗೆ ಐದು ತಿಂಗಳಾದರೂ ಸೆನ್ಸಾರ್ ಮಂಡಳಿಯವರು ಪ್ರಮಾಣಪತ್ರ ಕೊಟ್ಟಿಲ್ಲ ಎಂಬುದು ದುರಂತವೇ ಸರಿ. ಈ ಸಿನಿಮಾ ಬಿಡುಗಡೆ ಇನ್ನೂ ಯಾವಾಗ ಎಂದು ಘೋಷಣೆ ಆಗಿಲ್ಲ.

    ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಬೇಕಿತ್ತು. ಆದರೆ, ಇದರ ರಿಲೀಸ್ ದಿನಾಂಕ ಜೂನ್ 4ಕ್ಕೆ ಮುಂದಕ್ಕೆ ಹೋಗಿದೆ. ಇದಕ್ಕೆ ವಾರ್ ಕಾರಣವನ್ನು ತಂಡದವರು ನೀಡಿದರೂ, ಅಭಿಮಾನಿಗಳು ಸಂಪೂರ್ಣವಾಗಿ ಇದನ್ನು ಒಪ್ಪಿಕೊಳ್ಳಲು ರೆಡಿ ಇಲ್ಲ. ಇದರ ಹಿಂದೆ ಕಾಣದ ಕಾರಣ ಇರಬಹುದು ಎಂದು ಊಹಿಸಿದ್ದಾರೆ.

    ಈಗ ‘ಕೆಡಿ’ ಸಿನಿಮಾ ರಿಲೀಸ್ ಆಗುತ್ತಿದೆ. ಏಪ್ರಿಲ್ 30ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ. ಈ ಮೊದಲು ರಿಲೀಸ್ ಆದ ‘ಸರ್ಸೆ ಸರ್ಸೆ..’ ಹಾಡು ವಿವಾದ ಸೃಷ್ಟಿ ಮಾಡಿ ಅದನ್ನು ಯೂಟ್ಯೂಬ್​​ನಿಂದಲೇ ತೆಗೆಯಬೇಕಾಯಿತು. ಇತ್ತೀಚೆಗೆ ತೆರೆಗೆ ಬಂದ ಟ್ರೇಲರ್ ಕೂಡ ತೆಗೆದು, ಹೊಸ ಟ್ರೇಲರ್ ಅಪ್​ಲೋಡ್ ಮಾಡಲಾಗಿದೆ.

    ಇದನ್ನೂ ಓದಿ: ಕಾಣಿಸುತ್ತಿಲ್ಲ ‘ಕೆಡಿ’ ಸಿನಿಮಾ ಟ್ರೇಲರ್; ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಗೆ ಇನ್ನೊಂದು ವಿಘ್ನ

    ಈ ಬೆಳವಣಿಗೆ ಯಶ್ ಅಭಿಮಾನಿಗಳಿಗೆ ಆತಂಕ ಮೂಡಿಸಿದೆ. ಹೀಗಾಗಿ, ‘ಟಾಕ್ಸಿಕ್’ ರಿಲೀಸ್​ಗೂ ಮೊದಲೇ ಒಂದು ಹೋಮ-ಹವನ ಮಾಡಿಸುವಂತೆ ಅಭಿಮಾನಿಗಳು ಬೇಡಿಕೆ ಇಟ್ಟಿದ್ದಾರೆ. ಕೆವಿಎನ್​ ಅಂತಹ ದೊಡ್ಡ ಸಂಸ್ಥೆಗೆ ಹೀಗಾದರೆ ಹೇಗೆ ಎಂಬ ಪ್ರಶ್ನೆಯನ್ನು ಅನೇಕರು ಕೇಳುತ್ತಿದ್ದಾರೆ.

    ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

    Source link

    ಜನಿವಾರ ತೆಗೆಯುತ್ತೇನೆ ಎಂದರೂ ಕೇಳದೆ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ – Kannada News | Karnataka CET Controversy: Student Alleges Sacred Thread Janivara Cut and Thrown Away at Chikkaballapur Exam Centre

    ಚಿಕ್ಕಬಳ್ಳಾಪುರ, ಏಪ್ರಿಲ್ 25: ಚಿಕ್ಕಬಳ್ಳಾಪುರದ ನಾಗಾರ್ಜುನ ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿ ಸುಪ್ರೀತ್ ಕೆಆರ್ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ಕಸದ ಬುಟ್ಟಿಗೆ ಎಸೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಏಪ್ರಿಲ್ 23ರಂದು ಬೆಳಗ್ಗೆ 9:45ಕ್ಕೆ ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದ ಸುಪ್ರೀತ್, ತಪಾಸಣೆ ವೇಳೆ ಜನಿವಾರ ಧರಿಸಿರುವುದು ಪತ್ತೆಯಾಗಿತ್ತು. ‘ಜನಿವಾರವನ್ನು ನಾನೇ ತೆಗೆದು ಇಟ್ಟುಕೊಳ್ಳುತ್ತೇನೆ ಎಂದರೂ ಅಧಿಕಾರಿಗಳು ಅವಕಾಶ ನೀಡಲಿಲ್ಲ. ಬದಲಿಗೆ, ಪರೀಕ್ಷಾ ಕೇಂದ್ರದ ಸಿಬ್ಬಂದಿಯೊಬ್ಬರು ಕತ್ತರಿಯಿಂದ ಜನಿವಾರವನ್ನು ಕತ್ತರಿಸಿ ಕಸದ ಬುಟ್ಟಿಗೆ ಎಸೆದರು ಎಂದು ಸುಪ್ರೀತ್ ಆರೋಪಿಸಿದ್ದಾರೆ.

    ಈ ಘಟನೆಯಿಂದ ತೀವ್ರ ಮಾನಸಿಕ ಆಘಾತಕ್ಕೊಳಗಾದೆ. ಕೇವಲ ಎಂಟು ದಿನಗಳ ಹಿಂದೆ ಉಪನಯನ ನಡೆದಿತ್ತು. ಪರೀಕ್ಷೆ ಮುಗಿದ ನಂತರ ಕಸದ ಬುಟ್ಟಿಯಿಂದಲೇ ಜನಿವಾರವನ್ನು ಹುಡುಕಿ ತೆಗೆದುಕೊಂಡು ಹೋದೆ ಎಂದು ಸುಪ್ರೀತ್ ತಿಳಿಸಿದ್ದಾರೆ. ಸುಪ್ರೀತ್ ಜತೆ ‘ಟಿವಿ9’ ಚಿಕ್ಕಬಳ್ಳಾಪುರ ಪ್ರತಿನಿಧಿ ಭೀಮಪ್ಪ ಪಾಟೀಲ್ ನಡೆಸಿರುವ ಮಾತುಕತೆಯ ವಿಡಿಯೋ ಇಲ್ಲಿದೆ.

    ಆರೋಪ ಅಲ್ಲಗಳೆದ ಅಧಿಕಾರಿ

    ಏತನ್ಮಧ್ಯೆ ಜನಿವಾರ ಕತ್ತರಿಸಿ ಬಿಸಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರದ ಸಮವಸ್ತ್ರ ಸಂಹಿತಾಧಿಕಾರಿಯಾಗಿದ್ದ ದೊಡ್ಡ ಈರಪ್ಪ ‘ಟಿವಿ9’ಗೆ ಪ್ರತಿಕ್ರಿಯಿಸಿದ್ದು, ಆರೋಪವನ್ನು ಅಲ್ಲಗಳೆದಿದ್ದಾರೆ. ಕೇಂದ್ರದಲ್ಲಿ ಕೆ.ಇ.ಎ ನಿಯಮಾವಳಿಗಳಂತೆ ವಿದ್ಯಾರ್ಥಿಗಳ ಪರಿಶೀಲನೆ ಮಾಡಲಾಗಿದೆ. ಯಾವುದೇ ವಿದ್ಯಾರ್ಥಿಯ ಜನಿವಾರ ಕತ್ತರಿಲ್ಲ, ತೆಗೆಸಿಲ್ಲ, ಬಿಸಾಡಿಲ್ಲ. ಆದರೂ ಯಾಕೆ ಆರೋಪ ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.

    ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Source link

    ತೆಲಂಗಾಳದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕೆಸಿಆರ್‌ ಪುತ್ರಿ ಕವಿತಾ – Kannada News | KCR Daughter K Kavitha launches her own party in Telangana months after being suspended from BRS

    ಹೈದರಾಬಾದ್‌, (ಏಪ್ರಿಲ್ 25): ತೆಲಂಗಾಣದ (Telangana) ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (KCR) ಅವರ ಪುತ್ರಿ ಮತ್ತು ಮಾಜಿ ಸಂಸದೆ ಕೆ. ಕವಿತಾ(K. Kavitha) ಅವರು ಇಂದು (ಏಪ್ರಿಲ್ 25) ಹೊಸ ಪಕ್ಷ ಸ್ಥಾಪಿಸಿ ಘೋಷಣೆ ಮಾಡಿದ್ದಾರೆ. ಕವಿತಾ ಅವರು ತಮ್ಮ ಪಕ್ಷಕ್ಕೆ ತೆಲಂಗಾಣ ರಾಷ್ಟ್ರ ಸೇನಾ (TRS) ಎಂದು ಹೆಸರಿಸಿದ್ದಾರೆ. ಇದು ಈ ಹಿಂದೆ ಅವರ ತಂದೆ ಕೆಸಿಆರ್ ಅವರು ಬಳಸುತ್ತಿದ್ದ ‘ತೆಲಂಗಾಣ ರಾಷ್ಟ್ರ ಸಮಿತಿ’ ಹೆಸರನ್ನು ನೆನಪಿಸುವಂತಿದ್ದು, ತೆಲಂಗಾಣದ ಮೂಲ ಅಸ್ಮಿತೆಯನ್ನು ಮರಳಿ ಪಡೆಯುವ ಸಂಕೇತವಾಗಿ ಬಳಸಲಾಗಿದೆ. ಈ ಮೂಲಕ ತಮ್ಮನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದ ತಂದೆ ಕೆಸಿಆರ್​, ಸೋದರ ಕೆ.ಟಿ.ರಾಮಾರಾವ್​​ಗೆ ಸೆಡ್ಡು ಹೊಡೆದಿದ್ದಾರೆ.

    ದೆಹಲಿ ಅಬಕಾರಿ ನೀತಿ ಹಗರಣದ ಆರೋಪದಡಿ ಕವಿತಾ ಜೈಲು ಸೇರಿದ್ದರು. ಅಲ್ಲದೇ ಪಕ್ಷದ ವಿಚಾರದ ಬಗ್ಗೆ ತಂದೆ, ಸೋದರನ ಜೊತೆ ಕಲಹ ಉಂಟಾಗಿತ್ತು. ಕಲಹದಿಂದ ಬೇಸತ್ತು ಕವಿತಾ ಅವರು ಸೆಪ್ಟೆಂಬರ್ 2025 ರಲ್ಲಿ ಭಾರತ್ ರಾಷ್ಟ್ರ ಸಮಿತಿಯಿಂದ (BRS) ಹೊರಬಂದಿದ್ದರು. ಆಂತರಿಕ ಭಿನ್ನಮತ ಮತ್ತು ಅವರ ಸಹೋದರ ಕೆ.ಟಿ. ರಾಮರಾವ್ ಅವರೊಂದಿಗಿನ ವೈಮನಸ್ಸಿನಿಂದಾಗಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು. ನಂತರ ಅವರು ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.

    Source link

    ದಾಖಲೆಗಳ ಸರದಾರನ ಹೆಸರಿಗೆ 3 ಪ್ರಚಂಡ ದಾಖಲೆ ಸೇರ್ಪಡೆ – Kannada News | Virat Kohli’s Records and Milestones Achieved in IPL 2026

    ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಮತ್ತೆ ಮೂರು ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಸಹ 81 ರನ್​ಗಳನ್ನು ಕಲೆಹಾಕುವ ಮೂಲಕ. ಐಪಿಎಲ್​ನ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 44 ಎಸೆತಗಳಲ್ಲಿ81 ರನ್ ಬಾರಿಸಿದ್ದರು.

    Source link

    Virat Kohli: RCB ತಂಡದ ಭರ್ಜರಿ ಚೇಸಿಂಗ್​ಗೆ ಈತನೇ ಕಾರಣ! – Kannada News | IPL 2026: Virat Kohli About Devdutt Padikkal

    IPL 2026: ಐಪಿಎಲ್​ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್​ 20 ಓವರ್​ಗಳಲ್ಲಿ 205 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ 18.5 ಓವರ್​ಗಳಲ್ಲಿ 206 ರನ್​ಗಳಿಸಿ 5 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

    ಈ ಗೆಲುವಿನ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ, ಆರ್​ಸಿಬಿ ತಂಡವು ಇಷ್ಟೊಂದು ಸುಲಭವಾಗಿ ಚೇಸ್ ಮಾಡಲು ದೇವದತ್ ಪಡಿಕ್ಕಲ್ ಕಾರಣ ಎಂದು ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.

    ದೇವದತ್ ಪಡಿಕ್ಕಲ್ ಚೆಂಡನ್ನು ಎಲ್ಲೂ ಸ್ಲಾಗ್​ ಮಾಡದೇ ಕೇವಲ ಕ್ರಿಕೆಟಿಂಗ್ ಶಾಟ್‌ಗಳ ಮೂಲಕವೇ ರನ್ ಗಳಿಸುತ್ತಾರೆ. ಅವರು ಬೌಲರ್‌ಗಳಿಗೆ ಯಾವುದೇ ಅವಕಾಶ ನೀಡದೆ ಅಷ್ಟು ವೇಗವಾಗಿ ರನ್ ಗಳಿಸುವುದು ಅಪರೂಪದ ಸಂಗತಿ.

    ಕಗಿಸೊ ರಬಾಡ ಅವರ ಮೊದಲ ಎಸೆತವನ್ನೇ ಬೌಂಡರಿಗಟ್ಟಿದ ಪಡಿಕ್ಕಲ್ ಅವರ ಆತ್ಮವಿಶ್ವಾಸವು ತಂಡದ ಮೇಲಿದ್ದ ಒತ್ತಡವನ್ನು ಕಡಿಮೆ ಮಾಡಿತು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

    ದೇವದತ್ ಪಡಿಕ್ಕಲ್ ಅತ್ಯುತ್ತಮವಾಗಿ ಬ್ಯಾಟ್ ಬೀಸಿದ ಪರಿಣಾಮ ಆರ್​ಸಿಬಿ ತಂಡವು ಯಾವುದೇ ಒತ್ತಡವಿಲ್ಲದೇ 206 ರನ್​ಗಳಿಸಲು ಸಾಧ್ಯವಾಯಿತು. ಹೀಗಾಗಿ ಆರ್​ಸಿಬಿ ತಂಡದ ಚೇಸಿಂಗ್​ನ ಶ್ರೇಯಸ್ಸು ದೇವದತ್ ಪಡಿಕ್ಕಲ್​ಗೆ ಸಲ್ಲಬೇಕು ಎಂದು ವಿರಾಟ್ ಕೊಹ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

    ಬೌಲರ್​ಗಳಿಗೂ ಬಹುಪರಾಕ್:

    ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟಾನ್ಸ್ ಒಂದು ಹಂತದಲ್ಲಿ 230-235 ರನ್ ಗಳಿಸುವ ಸೂಚನೆ ನೀಡಿತ್ತು. ಆದರೆ ಆರ್​​ಸಿಬಿ ಬೌಲರ್‌ಗಳು ಕೊನೆಯ ಓವರ್‌ಗಳಲ್ಲಿ ಅದ್ಭುತವಾಗಿ ಪುಟಿದೇಳುವ ಮೂಲಕ ಅವರನ್ನು 205 ರನ್‌ಗಳಿಗೆ ನಿಯಂತ್ರಿಸಿದರು.

    ನಮ್ಮ ಬೌಲರ್‌ಗಳು 20-25 ರನ್‌ಗಳನ್ನು ಕಡಿಮೆ ಮಾಡುವಲ್ಲಿ ಯಶಸ್ವಿಯಾಗಿದ್ದು ಗೆಲುವಿಗೆ ಪ್ರಮುಖ ಕಾರಣವಾಯಿತು  ಎಂದು ಕೊಹ್ಲಿ ಬೌಲರ್‌ಗಳ ಶ್ರಮವನ್ನು ಸಹ ಶ್ಲಾಘಿಸಿದ್ದಾರೆ.

    ಕೊಹ್ಲಿ ಮತ್ತು ಪಡಿಕ್ಕಲ್ ಜುಗಲ್​ಬಂಧಿ:

    ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 81 ರನ್ (8 ಬೌಂಡರಿ, 4 ಸಿಕ್ಸರ್) ಸಿಡಿಸಿ ‘ಪಂದ್ಯ ಪುರುಷ’ ಪ್ರಶಸ್ತಿ ಭಾಜನರಾದರು. ಆದರೆ, ಕೊಹ್ಲಿ ಅವರ ಪ್ರಕಾರ ಈ ಗೆಲುವಿನ ನಿಜವಾದ ಶಕ್ತಿ ದೇವದತ್ ಪಡಿಕ್ಕಲ್ ಅವರ ಸ್ಫೋಟಕ ಬ್ಯಾಟಿಂಗ್. ಪಡಿಕ್ಕಲ್ ಕೇವಲ 27 ಎಸೆತಗಳಲ್ಲಿ 55 ರನ್ ಚಚ್ಚುವ ಮೂಲಕ ತಂಡಕ್ಕೆ ಅಗತ್ಯವಿದ್ದ ವೇಗವನ್ನು ನೀಡಿದರು. ಈ ಜೋಡಿ ಕೇವಲ 59 ಎಸೆತಗಳಲ್ಲಿ 115 ರನ್‌ಗಳ ಅಮೋಘ ಜೊತೆಯಾಟವಾಡಿ ಪಂದ್ಯವನ್ನು ಎದುರಾಳಿಗಳ ಕೈಯಿಂದ ಕಿತ್ತುಕೊಂಡಿತು.

    ಇದನ್ನೂ ಓದಿ: 1,376 ಕಿ.ಮೀ ದೂರದ ತವರು ಮೈದಾನದಲ್ಲಿ 2 ಪಂದ್ಯಗಳನ್ನಾಡಲಿದೆ RCB

    ಪರಿಣಾಮ ಆರ್​​ಸಿಬಿ ತಂಡವು 18.5 ಓವರ್​ಗಳಲ್ಲಿ 206 ರನ್​ಗಳಿಸಿ 5 ವಿಕೆಟ್​ಗಳ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ.

    Source link

    ಪ್ರಿಯಾಂಕ್ ಖರ್ಗೆ ಉಸ್ತುವಾರಿಯ ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು! ಶುದ್ಧ ನೀರಿನ ಘಟಕಗಳು ಬಂದ್ – Kannada News | Water Crisis Hits Kalaburagi DC Office: RO Plants Shut Down in Minister Priyank Kharge’s In charge District

    ಕಲಬುರಗಿ, ಏಪ್ರಿಲ್ 25: ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಉಸ್ತುವಾರಿ ಸಚಿವರಾಗಿರುವ, ಅವರ ತವರು ಜಿಲ್ಲೆಯೂ ಆಗಿರುವ ಕಲಬುರಗಿಯ ಜಿಲ್ಲಾಡಳಿತ ಭವನದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸದೆ ಬಂದ್ ಆಗಿವೆ. ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದೆ. ಜಿಲ್ಲೆಯ ‘ಶಕ್ತಿ ಕೇಂದ್ರ’ ಎಂದೇ ಕರೆಯಲ್ಪಡುವ ಈ ಕಚೇರಿಯಲ್ಲಿ ಹೊರಗಡೆ ಇರುವ ಒಂದು ಹಾಗೂ ಒಳಗಡೆ ಇರುವ ಎರಡು ಶುದ್ಧ ನೀರಿನ ಘಟಕಗಳು ಸಂಪೂರ್ಣವಾಗಿ ಕೆಟ್ಟು ಹೋಗಿವೆ. ಕಳೆದ ಎರಡು-ಮೂರು ತಿಂಗಳಿಂದ ನೀರು ಪೂರೈಕೆ ಇಲ್ಲದೆ ಸಾವಿರಾರು ಸಾರ್ವಜನಿಕರು ಮತ್ತು ಅಧಿಕಾರಿಗಳು ನೀರಿಗಾಗಿ ಪರಿತಪಿಸುತ್ತಿದ್ದಾರೆ.

    ಕಚೇರಿಗೆ ಬರುವ ಸಾರ್ವಜನಿಕರು ಮತ್ತು ಅಧಿಕಾರಿಗಳು ಮನೆಯಿಂದಲೇ ನೀರಿನ ಬಾಟಲಿಗಳನ್ನು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ತಾಪಮಾನ ಹೆಚ್ಚಿದ್ದರೂ, ಜಿಲ್ಲೆಯ ಹಳ್ಳಿಗಳಿಗೆ ಸಮರ್ಪಕ ನೀರು ಒದಗಿಸುವ ಜವಾಬ್ದಾರಿಯಿರುವ ಜಿಲ್ಲಾಡಳಿತವೇ ತನ್ನ ಆವರಣದಲ್ಲಿ ಕುಡಿಯುವ ನೀರು ಒದಗಿಸಲು ವಿಫಲವಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದರೂ, ಜಿಲ್ಲಾಡಳಿತ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

    ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Source link

    ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ – Kannada News | Chikkaballapur Student Talks about Cuts janivara During CET Exam

    ಚಿಕ್ಕಬಳ್ಳಾಪುರ, (ಏಪ್ರಿಲ್ 25): ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಹಳ ಸ್ಪಷ್ಟವಾಗಿ ವಸ್ತ್ರ, ಸಂಹಿತೆಯ ಬಗ್ಗೆ ವಿವರಿಸಿದೆ. ಆದರೂ ಸಹ ಮೊನ್ನೆ ನಡೆದ ಸಿಇಟಿ ಪರೀಕ್ಷೆ ವೇಳೆ ಅಭ್ಯರ್ಥಿಗಳ ಜನಿವಾರಕ್ಕೆ ಕತ್ತರಿ ಹಾಕಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಸಂಬಂಧ ಕೆಲವರನ್ನು ಅಮಾನತು ಸಹ ಮಾಡಲಾಗಿದೆ. ಇಂತಹ ಘಟನೆ ನಡೆದಿರುವುದು ಉದ್ದೇಶ ಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಪ್ರಕರಣದ ತನಿಖೆಗಾಗಿ ತಂಡ ರಚಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

    ಇನ್ನು ಜನಿವಾರ ಕತ್ತರಿಸಿದ ಬಗ್ಗೆ ಚಿಕ್ಕಬಳ್ಳಾಪುರದ ವಿದ್ಯಾರ್ಥಿ ಸುಪ್ರೀತ್ ಕೆ.ಆರ್. ಟಿವಿ9ಗೆ ಪ್ರತಿಕ್ರಿಯಿಸಿದ್ದು, ನಾನೆ ತೆಗೆದು ಇಟ್ಟುಕೊಳ್ಳುತ್ತೇನೆಂದು ಹೇಳಿದರೂ ಕೇಳಲಿಲ್ಲ. ಜನಿವಾರ ತೆಗೆಯುವುದಕ್ಕೂ ಅವಕಾಶ ನೀಡಲಿಲ್ಲ. ಕತ್ತರಿಯಿಂದ ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು. ಪರೀಕ್ಷೆ ಮುಗಿದ ಮೇಲೆ ಕಸದ ಬುಟ್ಟಿಯಲ್ಲಿ ಜನಿವಾರ ಹುಡುಕಾಡಿ ತಂದೆ. 8 ದಿನಗಳ ಹಿಂದೆ ಉಪನಯನವಾಗಿತ್ತು. ಜನಿವಾರ ಕಿತ್ತಾಕಿದ ಕಾರಣ ಒತ್ತಡಕ್ಕೆ ಒಳಗಾಗಿ ಪರೀಕ್ಷೆ ಸರಿಯಾಗಿ ಬರೆಯಲಿಲ್ಲ. ಪಿ.ಸಿ.ಎಂ.ಬಿ ಯಲ್ಲಿ 90 ಶೇ. ತೆಗೆದಿದ್ದೇನೆ. ನಮ್ಮ ತಂದೆ ಮೃತಪಟ್ಟು ಒಂದು ವರ್ಷ ಆಗಿದೆ. ತಾಯಿ ಆಸೆ ಹಿಡೇರಿಸಲು ಚನ್ನಾಗಿ ಅಧ್ಯಾಯನ ಮಾಡಿದ್ದೆ. ನಮಗೆ ಮೊದಲೆ ಹೇಳಿರಲಿಲ್ಲ. ನಿಯಮಾವಳಿಯಲ್ಲೂ ಜನಿವಾರ ಹಾಕಿಕೊಂಡು ಬರಬಾರದು ಅಂತ ಹೇಳಿರಲಿಲ್ಲ. ಜನಿವಾರ ಕತ್ತರಿಸಿ ಕಿತ್ತಾಕಿದ ಕಾರಣ ತುಂಬಾ ನೋವು ಆಗಿದೆ. ಮತ್ತೆ ಉಪ ನಯನ ನಡೆಸಿ ಜನಿವಾರ ಹಾಕಿಕೊಳ್ಳಬೇಕು ಎಂದು ಅಳಲು ತೋಡಿಕೊಂಡಿದ್ದಾನೆ.

    ಇದನ್ನೂ ಓದಿ: ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿ ಜನಿವಾರ ತೆಗೆಸಿದ ಆರೋಪ: ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು

    Source link