Category Archives: Blog
Your blog category
ಟಿ೨೦ ವಿಶ್ವಕಪ್ನ ಮೊದಲ ಪಂದ್ಯದಿಂದ ಆಸ್ಟ್ರೇಲಿಯಾ ಸ್ಟಾರ್ ಆಟಗಾರ ಔಟ್
ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಗಾಗಿ ಆಸ್ಟ್ರೇಲಿಯಾ ಈಗಾಗಲೇ ತಾತ್ಕಾಲಿಕ ತಂಡವನ್ನು ಘೋಷಿಸಿದೆ. ಈ ತಂಡದಲ್ಲಿ ಸ್ಥಾನ ಪಡೆದಿರುವ ಪ್ರಮುಖ ಆಟಗಾರ ಮೊದಲ ಪಂದ್ಯದಿಂದ ಹೊರಗುಳಿಯುವುದು ಖಚಿತವಾಗಿದೆ.
ಆಸ್ಟ್ರೇಲಿಯಾ ತಂಡದಲ್ಲಿರುವ ಸ್ಟಾರ್ ಆಲ್ ರೌಂಡರ್ ಪ್ಯಾಟ್ ಕಮಿನ್ಸ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಸರಣಿಯಿಂದ ಹೊರಗಿಡಲಾಗಿದೆ.
ಇದೀಗ ಫೆಬ್ರವರಿ 11ರ ವೇಳೆಗೆ ಅವರು ಸಂಪೂರ್ಣ ಫಿಟ್ ನೆಸ್ ಸಾಧಿಸುವುದಿಲ್ಲ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಖಚಿತಪಡಿಸಿದೆ. ಇದರೊಂದಿಗೆ ಆಸ್ಟ್ರೇಲಿಯಾ ತಂಡದ ಮೊದಲ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ಕಣಕ್ಕಿಳಿಯುವುದಿಲ್ಲ ಎಂಬುದು ಸಹ ಕನ್ಫರ್ಮ್ ಆಗಿದೆ.
ಆಸ್ಟ್ರೇಲಿಯಾ ತಂಡವು ಫೆಬ್ರವರಿ 11 ರಂದು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯದಲ್ಲಿ ಕಮಿನ್ಸ್ ಹೊರತುಪಡಿಸಿ ಆಸ್ಟ್ರೇಲಿಯಾ ಪಡೆಯ ಉಳಿದೆಲ್ಲಾ ಆಟಗಾರರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಟಿ20 ವಿಶ್ವಕಪ್ಗೆ ಆಸ್ಟ್ರೇಲಿಯಾ ತಂಡ (ತಾತ್ಕಾಲಿಕ): ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ಕ್ಯಾಮರೂನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್ವೆಲ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.
ಗಿಲ್ಲಿ ಗೆದ್ದ ದಿನವೇ ಮತ್ತೊಬ್ಬರಿಗೆ ಸಿಕ್ಕಿದೆ ಬಿಗ್ ಬಾಸ್ ವಿನ್ನರ್ ಟೈಟಲ್ – Kannada News | After Gilli Bigg Boss Kannada Win Divya Ganesh Wins At Tamil Bigg Boss Kannada
ಬಿಗ್ ಬಾಸ್ ಕನ್ನಡದಲ್ಲಿ (Bigg Boss Kannada) ಪೂರ್ಣಗೊಂಡಿದೆ. ಗಿಲ್ಲಿಗೆ ಗೆಲುವು ಸಿಕ್ಕಿದೆ. ಅದೇ ರೀತಿ ತಮಿಳಿನಲ್ಲೂ ಬಿಗ್ ಬಾಸ್ ಫಿನಾಲೆ ನಡೆದಿದೆ. ಬಿಗ್ ಬಾಸ್ ತಮಿಳಿನ 9 ಸೀಸನ್ ಪೂರ್ಣಗೊಂಡಿದೆ. ಈ ಶೋನಲ್ಲಿ ದಿವ್ಯಾ ಗಣೇಶ್ ಗೆದ್ದಿದ್ದಾರೆ. ಅವರು ವೈಲ್ಡ್ ಕಾರ್ಡ್ ಮೂಲಕ ಪ್ರವೇಶ ಮಾಡಿದ್ದರು ಎಂಬುದು ವಿಶೇಷ. ಅವರು ಗೆದ್ದು ಟೈಟಲ್ ತಮ್ಮದಾಗಿಸಿಕೊಂಡಿದ್ದಾರೆ.
ಬಿಗ್ ಬಾಸ್ ತಮಿಳು ಸೀಸನ್ 9 ಅಕ್ಟೋಬರ್ 5ರಂದು ಪ್ರಾರಂಭವಾಯಿತು. ಜನವರಿ 18ರಂದು ಇದು ಕೊನೆಗೊಂಡಿದೆ. ಈ ಸೀಸನ್ ಒಟ್ಟು 20 ಸ್ಪರ್ಧಿಗಳಿದ್ದರು. ಆದರೆ ಮೊದಲ 2 ವಾರಗಳಲ್ಲಿ 3 ಸ್ಪರ್ಧಿಗಳು ಎಲಿಮಿನೇಟ್ ಆದರು. ಈ ವೇಳೆ ದಿವ್ಯಾ ಗಣೇಶ್, ಅಮಿತ್, ಸಾಂಡ್ರಾ ಮತ್ತು ಪ್ರಜಿನ್ 3ನೇ ವಾರದಲ್ಲಿ ವೈಲ್ಡ್ ಕಾರ್ಡ್ ಎಂಟ್ರಿಗಳಾಗಿ ಪ್ರವೇಶಿಸಿದರು. ನಂತರ, ಒಟ್ಟು 21 ಸ್ಪರ್ಧಿಗಳೊಂದಿಗೆ ಕಾರ್ಯಕ್ರಮ ನಡೆಯಿತು.
ಗಾನಾ ವಿನೋದ್ ಸೀಸನ್ 9ರ ಪ್ರಶಸ್ತಿಯನ್ನು ಗೆಲ್ಲುವ ಅವಕಾಶ ಹೊಂದಿದ್ದರು. ಆದರೆ, ಅವರು ಕ್ಯಾಶ್ಪ್ರೈಸ್ ಪೆಟ್ಟಿಗೆ ತೆಗೆದುಕೊಂಡು ರೇಸ್ನಿಂದ ಹೊರ ಹೋದರು. ದಿವ್ಯಾ ಗಣೇಶ್ ಬಿಗ್ ಬಾಸ್ ಸೀಸನ್ 9 ಅನ್ನು ಗೆದ್ದರು ಮತ್ತು ಪ್ರಶಸ್ತಿ ವಿಜೇತರಾದರು. ಶಬರಿ ಮೊದಲ ರನ್ನರ್ ಅಪ್ ಮತ್ತು ವಿಕೆಲ್ಸ್ ವಿಕ್ರಮ್ ಎರಡನೇ ರನ್ನರ್ ಅಪ್ ಆಗಿದ್ದರು ಎಂಬುದು ಗಮನಾರ್ಹ.
ದಿವ್ಯಾ ಗಣೇಶ್ ಬಿಗ್ ಬಾಸ್ ತಮಿಳು ಸೀಸನ್ 9 ರಲ್ಲಿ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಪ್ರವೇಶಿಸಿದ್ದರು. ಅವರು ವಿಜಯ್ ಟಿವಿಯ ಪ್ರಸಿದ್ಧ ಧಾರಾವಾಹಿ ನಟಿಯರಲ್ಲಿ ಒಬ್ಬರು. ತಮಿಳಿನ ‘ಭಾಗ್ಯಲಕ್ಷ್ಮಿ’ ಧಾರಾವಾಹಿಯಲ್ಲಿ ಜೆನ್ನಿ ಪಾತ್ರದಲ್ಲಿ ನಟಿಸುವ ಮೂಲಕ ಅವರು ಬಹಳ ಪ್ರಸಿದ್ಧರಾಗಿದ್ದಾರೆ. ಅವರು ಸಿನಿಮಾದಲ್ಲಿ ಸಣ್ಣ ಪಾತ್ರಗಳಲ್ಲಿಯೂ ನಟಿಸಿದ್ದಾರೆ. ಅವರು ಹಳ್ಳಿ ನಟಿಯಾಗಿ ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು. ಬಿಗ್ ಬಾಸ್ ತಮಿಳು ಸೀಸನ್ 9 ರಲ್ಲಿ ಅವರು ಅತ್ಯಂತ ಧೈರ್ಯಶಾಲಿ ಮಹಿಳೆ ಎಂದು ಕರೆಯಲ್ಪಟ್ಟರು ಎಂಬುದು ಗಮನಾರ್ಹ.
ಇದನ್ನೂ ಓದಿ: ಬಿಗ್ ಬಾಸ್ ವಿನ್ನರ್ ಗಿಲ್ಲಿಗೆ ಹೆಚ್ಚುವರಿಯಾಗಿ ಸಿಕ್ತು 20 ಲಕ್ಷ ರೂಪಾಯಿ?
ದಿವ್ಯಾ ಬಿಗ್ ಬಾಸ್ ತಮಿಳು ಸೀಸನ್ 9 ಕಾರ್ಯಕ್ರಮಕ್ಕೆ ವೈಲ್ಡ್ಕಾರ್ಡ್ ಸ್ಪರ್ಧಿಯಾಗಿ ಪ್ರವೇಶಿಸಿದ್ದು ಗಮನಾರ್ಹ. ಅವರು ಈ ಸೀಸನ್ನಲ್ಲಿ 106 ದಿನಗಳ ಕಾಲ ಇಲ್ಲದಿದ್ದರೆ, ಅವರು ತಮ್ಮ ದಿನಗಳಲ್ಲಿ ಜನರಲ್ಲಿ ಜನಪ್ರಿಯ ವ್ಯಕ್ತಿಯಾಗುತ್ತಿದ್ದರು ಎಂಬುದು ಗಮನಾರ್ಹ. ಈ ಪರಿಸ್ಥಿತಿಯಲ್ಲಿ, ಈ ಹಿಂದೆ 7 ನೇ ಸೀಸನ್ನಲ್ಲಿ ವೈಲ್ಡ್ಕಾರ್ಡ್ ಸ್ಪರ್ಧಿಯಾಗಿ ಬಿಗ್ ಬಾಸ್ ತಮಿಳು ಕಾರ್ಯಕ್ರಮಕ್ಕೆ ಪ್ರವೇಶಿಸಿದ್ದ ಅರ್ಚನಾ ಅವರು ಗೆದ್ದಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಬಿಗ್ ಬಾಸ್ ವಿನ್ನರ್ ಗಿಲ್ಲಿಗೆ ಹೆಚ್ಚುವರಿಯಾಗಿ ಸಿಕ್ತು 20 ಲಕ್ಷ ರೂಪಾಯಿ? – Kannada News | Big Boss Kannada 12 Winner Gilli Gets Extra 20 Lakh RS From Sharavana
‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ವಿನ್ನರ್ ಗಿಲ್ಲಿಗೆ ಬಂಪರ್ ಲಾಟರಿ ಹೊಡೆದಿದೆ. ಬಿಗ್ ಬಾಸ್ ಕಡೆಯಿಂದ 50 ಲಕ್ಷ ರೂಪಾಯಿ (ತೆರಿಗೆ ಕಟ್ ಆಗಿ ಸಿಗೋದು 35 ಲಕ್ಷ ರೂಪಾಯಿ), ಮಾರುತು ಸುಜುಕಿ ವಿಕ್ಟೋರಿಸ್ ಕಾರು ಹಾಗೂ ಸುದೀಪ್ ಕಡೆಯಿಂದ 10 ಲಕ್ಷ ರೂಪಾಯಿ ಸಿಕ್ಕಿದೆ. ಈಗ ಅವರಿಗೆ ಹೆಚ್ಚುವರಿಯಾಗಿ 20 ಲಕ್ಷ ರೂಪಾಯಿ ಸಿಕ್ಕಿದೆ ಎಂಬ ಮಾತುಗಳು ಕೇಳಿ ಬಂದಿವೆ. ಆ ಬಗ್ಗೆ ಇಲ್ಲಿದೆ ವಿವರ.
ಬಿಗ್ ಬಾಸ್ ಗೆದ್ದವರಿಗೆ ಪ್ರತಿ ಬಾರಿಯೂ 50 ಲಕ್ಷ ರೂಪಾಯಿ ಸಿಗುತ್ತದೆ. ಇದರ ಜೊತೆಗೆ ಹೆಚ್ಚುವರಿಯಾಗಿ ಕೆಲವೊಮ್ಮ ಬಹುಮಾನವಾಗಿ ವಸ್ತುಗಳು ಸಿಗುತ್ತವೆ. ಈ ಬಾರಿ ಗಿಲ್ಲಿ ನಟ ಅವರಿಗೆ ಅದೃಷ್ಟ ಒಲಿದಿದೆ. ಅವರಿಗೆ ಈಗಾಗಲೇ 80 ಲಕ್ಷ ರೂಪಾಯಿ ಅಷ್ಟು(ಟ್ಯಾಕ್ಸ್ ಹೊರತುಪಡಿಸಿ) ಮೌಲ್ಯದ ವಸ್ತು/ಹಣ ಬಿಗ್ ಬಾಸ್ನಿಂದ ಸಿಕ್ಕಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ 20 ಲಕ್ಷ ರೂಪಾಯಿ ಸಿಕ್ಕಿತೇ ಎಂಬ ಪ್ರಶ್ನೆ ಮೂಡಿದೆ.
ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ 20 ಲಕ್ಷ ರೂಪಾಯಿ ವೋಚರ್ ಶರವಣ ಅವರ ‘ಸಾಯಿ ಗೋಲ್ಡ್ ಪ್ಯಾಲೇಸ್’ ಕಡೆಯಿಂದ ಸಿಕ್ಕಿತ್ತು. ಅವರೇ ಗಿಲ್ಲಿಗೆ 20 ಲಕ್ಷ ರೂಪಾಯಿ ಕೊಡೋದಾಗಿ ಘೋಷಣೆ ಮಾಡಿದ್ದರು. ‘ನಾನು ಬಿಗ್ ಬಾಸ್ಗೆ ತೆರಳುತ್ತಿದ್ದೇನೆ. ಗಿಲ್ಲಿನೇ ಗೆಲ್ಲೋದು ಅನ್ನೋದು ನನ್ನ ಅಭಿಪ್ರಾಯ. ಅವರು ಸಾಕಷ್ಟು ಮನರಂಜನೆ ನೀಡಿದ್ದಾರೆ. ಗಿಲ್ಲಿ ಗೆದ್ದರೆ ಅವರಿಗೆ 20 ಲಕ್ಷ ರೂಪಾಯಿ ಕೊಡುತ್ತೇನೆ. ಚೆಕ್ ರೆಡಿ ಇದೆ’ ಎಂದು ಶರವಣ ಅವರು ಫಿನಾಲೆಗೆ ತೆರಳುವಾಗ ಹೇಳಿದ್ದರು.
ಇದನ್ನೂ ಓದಿ: ‘ಅವರು ಹಾಗೆ ಹೇಳೋಕೆ ಸಾಧ್ಯವಿಲ್ಲ’; ಅಶ್ವಿನಿ ಗೌಡ ಬಗ್ಗೆ ಗಿಲ್ಲಿಗೆ ಎಷ್ಟು ಗೌರವ ನೋಡಿ
ವೇದಿಕೆ ಮೇಲೆ ಗಿಲ್ಲಿ ನಟ ಅವರಿಗೆ ಶರವಣ 20 ಲಕ್ಷ ರೂಪಾಯಿನ ನೀಡಿಲ್ಲ. ಗಿಲ್ಲಿಯೇ ಗೆದ್ದಿರುವುದರಿಂದ ಪ್ರತ್ಯೇಕವಾಗಿ ಈ ಮೊತ್ತವನ್ನು ಅವರು ಗಿಲ್ಲಿಗೆ ಕೊಟ್ಟಿರಬಹುದು ಎಂದು ಹೇಳಲಾಗುತ್ತಾ ಇದೆ. ಗಿಲ್ಲಿ ನಟ ಅವರು ಗೆದ್ದ ಬಳಿಕ ಹುಟ್ಟೂರಿಗೆ ತೆರಳಿದ್ದಾರೆ. ಅಲ್ಲಿ ಅದ್ದೂರಿಯಾಗಿ ಅವರಿಗೆ ಸ್ವಾಗತ ಸಿಕ್ಕಿದೆ. ಸಿಕ್ಕ ಜನಪ್ರಿಯತೆ ನೋಡಿ ಅವರಿಗೇ ಅಚ್ಚರಿ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
WPLನಲ್ಲಿ ಆಲ್ ಟೈಮ್ ದಾಖಲೆ ನಿರ್ಮಿಸಿದ RCB – Kannada News | RCB Created all times record in WPL 2026
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಸತತ 6 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ. ಅಂದರೆ WPL ನಲ್ಲಿ ಇದೇ ಮೊದಲ ಬಾರಿಗೆ ತಂಡವೊಂದು ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದುಕೊಂಡಿದೆ.
ತಮ್ಮದೇ ಯುಪಿಐ ಸ್ಕ್ಯಾನರ್ ನೀಡಿ ಹಣ ಜೇಬಿಗಿಳಿಸ್ತಾರೆ ಬಿಎಂಟಿಸಿ ಕೆಲ ಕಂಡಕ್ಟರ್ಗಳು! ನಿಗಮಕ್ಕೆ ಲಕ್ಷಾಂತರ ರೂ. ನಷ್ಟ – Kannada News | BMTC Conductors Use Personal UPI Scanners to Pocket Cash, Corporation Suffers Huge Loss
ಬೆಂಗಳೂರು, ಜನವರಿ 20: ಬಿಎಂಟಿಸಿ (BMTC) ಬಸ್ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ನಿಗಮವು ಯುಪಿಐ ಸ್ಕ್ಯಾನರ್ಗಳನ್ನು ಹಾಕಿದೆ. ಆದರೆ ಕೆಲ ಕಿಲಾಡಿ ಕಂಡಕ್ಟರ್ಗಳು ಬಿಎಂಟಿಸಿ ಬಸ್ನಲ್ಲಿರುವ ಯುಪಿಐ ಸ್ಕ್ಯಾನರ್ಗಳನ್ನು ಕಿತ್ತು, ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್ಗಳನ್ನು (UPI Scanner) ನೀಡಿ, ತಮ್ಮ ಬ್ಯಾಂಕ್ ಅಕೌಂಟ್ಗೆ ಲಕ್ಷಾಂತರ ರೂಪಾಯಿ ಹಣ ಹಾಕಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಕನ್ನಡ ಬಾರದವರಿಗೆ ತಮ್ಮ ಮೊಬೈಲ್ ಯುಪಿಐ ಸ್ಕ್ಯಾನರ್ ನೀಡಿ ಹಣ ಪೀಕಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳಿವೆ.
ತನಿಖೆಯಲ್ಲಿ ಬಯಲಾಯ್ತು ಬಿಎಂಟಿಸಿ ಬಸ್ ಕಂಡಕ್ಟರ್ಗಳ ಕಳ್ಳಾಟ
ಇದೀಗ ತನಿಖೆ ವೇಳೆ ಕೂಡ, ಕಂಡಕ್ಟರ್ಗಳ ಕಳ್ಳಾಟ ಬಯಲಾಗಿದೆ. ಪ್ರತಿಯೊಬ್ಬರ ಅಕೌಂಟ್ನಲ್ಲೂ ಸುಮಾರು 50 ಸಾವಿರಕ್ಕೂ ಹೆಚ್ಚು ಹಣ ಪ್ರಯಾಣಿಕರಿಂದ ಹಾಕಿಸಿಕೊಂಡಿರುವುದು ಬಯಲಿಗೆ ಬಂದಿದೆ.
ವಂಚನೆ ಎಸಗಲು ಉಪಯೋಗಿಸುವ ತಂತ್ರ ಇದುವೇ ನೋಡಿ!
ಶಕ್ತಿ ಯೋಜನೆಯ ಉಚಿತ ಟಿಕೆಟ್ ಮೇಲೆ ಕನ್ನಡದಲ್ಲಿ ಮಾತ್ರ ‘ಉಚಿತ ಟಿಕೆಟ್’ ಎಂದು ಪ್ರಿಂಟ್ ಮಾಡಲಾಗಿದೆ. ಇಂಗ್ಲಿಷ್ನಲ್ಲಿ‘ಫ್ರೀ ಟಿಕೆಟ್’ ಎಂದು ಪ್ರಿಂಟ್ ಮಾಡಿಲ್ಲ. ಇದನ್ನು ಬಂಡವಾಳ ಮಾಡಿಕೊಂಡು ಕನ್ನಡ ಬಾರದ ಉತ್ತರ ಭಾರತದ ಹಾಗೂ ದಕ್ಷಿಣ ಭಾರತದ ಇತರ ರಾಜ್ಯಗಳ ಜನರಿಗೆ ಶಕ್ತಿ ಯೋಜನೆಯ ಟಿಕೆಟ್ ನೀಡುವ ಕಂಡಕ್ಟರ್ಗಳು ಅವರಿಂದ ವೈಯಕ್ತಿಕ ಯುಪಿಐ ಸ್ಕ್ಯಾನರ್ಗೆ ದುಡ್ಡು ಹಾಕಿಸಿಕೊಳ್ಳುತ್ತಾರೆ.
ಈ ಕಿಲಾಡಿ ಕಂಡಕ್ಟರ್ಗಳು ಡಿಪೋದಿಂದ ಬಸ್ಗಳು ಹೊರಗೆ ಬರುತ್ತಿದ್ದಂತೆಯೇ ಬಸ್ನಲ್ಲಿರುವ ಬಿಎಂಟಿಸಿ ನಿಗಮದ ಯುಪಿಐ ಸ್ಕ್ಯಾನರ್ಗಳನ್ನು ಕಿತ್ತು ಇಟ್ಟುಕೊಳ್ಳುತ್ತಾರೆ. ಪ್ರಯಾಣಿಕರು ಯುಪಿಐ ಪೇಮೆಂಟ್ ಮಾಡಿ ಟಿಕೆಟ್ ಖರೀದಿ ಮಾಡಬೇಕು ಎಂದು ಕಂಡಕ್ಟರ್ಗಳ ಬಳಿ ಕೇಳಿದಾಗ, ತಮ್ಮ ಮೊಬೈಲ್ನಲ್ಲಿರುವಸ್ಕ್ಯಾನರ್ಗಳನ್ನು ನೀಡಿ ಪ್ರಯಾಣಿಕರಿಂದ ಸ್ವಂತ ಬ್ಯಾಂಕ್ ಖಾತೆಗೆ ಹಣ ಹಾಕಿಸಿಕೊಳ್ಳುತ್ತಿದ್ದಾರೆ.
ಈ ಬಗ್ಗೆ ಆರೋಪ ಕೇಳಿ ಬಂದ ಹಿನ್ನೆಲೆ ಬಿಎಂಟಿಸಿಯ ಸೆಕ್ಯೂರಿಟಿ ಅಧಿಕಾರಿಗಳು ತಪಾಸಣೆ ಮಾಡಿದಾಗ ಹತ್ತಕ್ಕೂ ಹೆಚ್ಚು ಕಂಡಕ್ಟರ್ಗಳು ಸಿಕ್ಕಿಹಾಕಿಕೊಂಡಿದ್ದಾರೆ. ಪ್ರತಿಯೊಬ್ಬರ ಅಕೌಂಟ್ನಲ್ಲಿ 50 ಸಾವಿರ ರೂಪಾಯಿವರೆಗೆ ಯುಪಿಐ ಮಾಡಿಸಿಕೊಂಡಿರುವುದು ಬಯಲಾಗಿದೆ. ಈಗಾಗಲೇ ಬಿಎಂಟಿಸಿ ಸೆಕ್ಯೂರಿಟಿ ಅಧಿಕಾರಿಗಳು ಈ ಮಾಹಿತಿಯನ್ನು ಬಿಎಂಟಿಸಿ ಎಂಡಿ ಶಿವಕುಮಾರ್ಗೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಬಿಎಂಟಿಸಿ ಚಾಲಕರ ಹೃದಯ ಹಿಂಡುತ್ತಿದೆಯೇ ಅಧಿಕಾರಿಗಳ ಒತ್ತಡ?
ಒಟ್ಟಿನಲ್ಲಿ ಶಕ್ತಿ ಯೋಜನೆಯ ಟಿಕೆಟ್ಗಳನ್ನು ಹೊರ ರಾಜ್ಯದವರಿಗೆ ಕೊಡುತ್ತಿರುವುದು, ನಿಗಮದ ಯುಪಿಐ ಸ್ಕ್ಯಾನರ್ಗಳನ್ನು ಕಿತ್ತು ತಮ್ಮ ಸ್ವಂತ ಯುಪಿಐ ಸ್ಕ್ಯಾನರ್ಗಳನ್ನು ನೀಡಿ ಹಣ ಹಾಕಿಸಿಕೊಳ್ಳುತ್ತಿರುವ ಕಂಡಕ್ಟರ್ಗಳ ವಿರುದ್ಧ ಬಿಎಂಟಿಸಿ ನಿಗಮ ಕಠಿಣ ಕ್ರಮ ಕೈಗೊಳ್ಳದೇ ಹೋದರೆ ಮತ್ತಷ್ಟು ಕಂಡಕ್ಟರ್ಗಳು ಈ ದಾರಿ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.
Daily Devotional: ಮನೆ ಹತ್ರ ಬೇವಿನಮರ ಇದ್ರೆ ಒಳ್ಳೆದಾ? – Kannada News | Daily Devotional: Benefits of Having a Neem Tree Near Your Home
ಬೆಂಗಳೂರು, ಜನವರಿ 20: ನಮ್ಮ ಪರಿಸರದಲ್ಲಿ ಅಥವಾ ಮನೆಗಳ ಹತ್ತಿರ ಬೇವಿನ ಮರ ಇರುವುದು ಶುಭವೋ ಅಶುಭವೋ ಎಂಬ ಪ್ರಶ್ನೆಗೆ ಅನೇಕ ಉತ್ತರಗಳಿವೆ. ಕೆಲವರು ಇದು ನಕಾರಾತ್ಮಕ ಶಕ್ತಿಗಳನ್ನು ಆಕರ್ಷಿಸಬಹುದು ಎಂದು ನಂಬಿದರೆ, ವಾಸ್ತು ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬೇವಿನ ಮರವು ಅನೇಕ ಸಕಾರಾತ್ಮಕ ಪರಿಣಾಮಗಳನ್ನು ಹೊಂದಿದೆ.
ವೈಜ್ಞಾನಿಕವಾಗಿ, ಬೇವಿನ ಮರವು ಆರೋಗ್ಯಕ್ಕೆ ಬಹಳ ಉಪಯುಕ್ತವಾಗಿದೆ. ಇದು ಉಸಿರಾಟದ ಪ್ರಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ರೋಗರುಜಿನಗಳು ಮತ್ತು ಕ್ರಿಮಿಕೀಟಗಳನ್ನು ಮನೆಯಿಂದ ದೂರವಿಡುತ್ತದೆ. ಇದರ ತೊಗಟೆ, ಹಣ್ಣು ಮತ್ತು ಎಲೆಗಳು ಆಯುರ್ವೇದದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತವೆ.
ಆಧ್ಯಾತ್ಮಿಕವಾಗಿ, ಬೇವಿನ ಮರವನ್ನು ದೇವಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ವಿವಾಹ ಸಮಸ್ಯೆಗಳು, ಮಾಟಮಂತ್ರ ಅಥವಾ ನಕಾರಾತ್ಮಕ ಶಕ್ತಿಗಳಿಂದ ಬಳಲುತ್ತಿರುವವರು ಈ ಮರಕ್ಕೆ ಅರಿಶಿಣ-ಕುಂಕುಮ ಹಚ್ಚಿ ಪೂಜಿಸುವುದರಿಂದ ಶುಭಫಲಗಳು ದೊರೆಯುತ್ತವೆ. ಶನಿ, ರಾಹು, ಕೇತು ಗ್ರಹಗಳ ದುಷ್ಪರಿಣಾಮಗಳನ್ನು ಕಡಿಮೆ ಮಾಡುವ ಶಕ್ತಿಯೂ ಇದಕ್ಕಿದೆ ಎಂದು ನಂಬಲಾಗಿದೆ. ಜೀವನದಲ್ಲಿ ಸ್ಥಿರತೆ, ಆರೋಗ್ಯ ಮತ್ತು ಮನಃಶಾಂತಿ ನೀಡಲು ಬೇವಿನ ಮರ ಸಹಾಯಕವಾಗಿದೆ. ಈಶಾನ್ಯ ಅಥವಾ ನೈಋತ್ಯ ದಿಕ್ಕಿನಲ್ಲಿ ಬೇವಿನ ಮರ ಇರುವುದು ಮಂಗಳಕರ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.
‘ಅವರು ಹಾಗೆ ಹೇಳೋಕೆ ಸಾಧ್ಯವಿಲ್ಲ’; ಅಶ್ವಿನಿ ಗೌಡ ಬಗ್ಗೆ ಗಿಲ್ಲಿಗೆ ಎಷ್ಟು ಗೌರವ ನೋಡಿ – Kannada News | Gilli’s Dignified Response to Ashwini Gowda’s Gilli Is not a Poor Man Remarks
‘ಬಿಗ್ ಬಾಸ್ ಕನ್ನ ಸೀಸನ್ 12’ರ (BBK 12) ವಿನ್ನರ್ ಗಿಲ್ಲಿ ನಟ ಅವರು ಹುಟ್ಟೂರಲ್ಲಿ ರ್ಯಾಲಿ ನಡೆಸಿದ್ದಾರೆ. ಇದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ತಮ್ಮಿಷ್ಟದ ಸ್ಪರ್ಧಿ, ಊರಿನ ಹುಡುಗ ಗೆದ್ದು ಬಂದಿದ್ದನ್ನು ನೋಡಿ ಊರಿನವರು ಖುಷಿಪಟ್ಟಿದ್ದಾರೆ. ಈಗ ಅಶ್ವಿನಿ ಗೌಡ ಅವರು ಗಿಲ್ಲಿ ಬಗ್ಗೆ ಕಿರಿಕ್ ತೆಗೆದಿದ್ದಾರೆ. ಬಿಗ್ ಬಾಸ್ ಮುಗಿದ ಬಳಿಕವೂ ಅವರು ಆರೋಪ ಮುಂದುವರಿಸಿದ್ದಾರೆ. ‘ಅಶ್ವಿನಿ ಗೌಡ ಹಾಗೆ ಹೇಳಲು ಸಾಧ್ಯವೇ ಇಲ್ಲ’ ಎಂಬುದು ಗಿಲ್ಲಿ ಮಾತು.
ಅಶ್ವಿನಿ ಗೌಡ ಅವರು ಬಿಗ್ ಬಾಸ್ ಮುಗಿಯುತ್ತಿದ್ದಂತೆ, ‘ಸರಿಯಾದ ವ್ಯಕ್ತಿಗೆ ಗೆಲುವು ಸಿಕ್ಕಿದೆ’ ಎಂದು ಹೇಳಿದ್ದರು. ಆದರೆ, ಮರುದಿನ ಅವರು ಮಾತು ಬದಲಾಯಿಸಿದ್ದಾರೆ. ಹೋದಲ್ಲಿ, ಬಂದಲ್ಲಿ ಗಿಲ್ಲಿ ಬಗ್ಗೆ ಮಾತನಾಡುತ್ತಿದ್ದಾರೆ. ‘ಬಡವರ ಮಕ್ಕಳು ಬೆಳೆಯಬೇಕು ಎಂದು ಡಾಲಿ ಧನಂಜಯ್ ಅವರು ಹೇಳಿದ್ದಾರೆ. ಅದು ನಿಜಕ್ಕೂ ಸತ್ಯ. ಬಡವರ ಮಕ್ಕಳು ಬೆಳೆಯಬೇಕು. ಆದರೆ, ಬಡವರ ಮಕ್ಕಳ ರೀತಿ ನಾಟಕ ಆಡುವವರು ಗೆದ್ದರೆ? ಅದು ಸರಿ ಅಲ್ಲ ಎಂದು ನನಗೆ ಅನಿಸುತ್ತದೆ’ ಎಂದು ಗಿಲ್ಲಿ ವಿಜಯದ ಬಗ್ಗೆ ಅಪಸ್ವರ ತೆಗೆದಿದ್ದಾರೆ.
ಈ ಬಗ್ಗೆ ಗಿಲ್ಲಿಗೆ ಪ್ರಶ್ನೆ ಮಾಡಲಾಗಿದೆ. ‘ಅಶ್ವಿನಿ ಗೌಡ ಅವರು ನಿಮ್ಮ ಬಗ್ಗೆ ಹೀಗೆಲ್ಲ ಹೇಳಿದ್ದಾರೆ. ಇದಕ್ಕೆ ಏನಂತೀರಾ’ ಎಂದು ಕೇಳಲಾಗಿದೆ. ಆಗ ಗಿಲ್ಲಿ ಅವರು, ‘ನಾವು ತೀರಾ ಬಡವರು ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಅಶ್ವಿನಿ ಅವರು ಹೊರಗೆ ಬಂದಮೇಲೆ ಹೀಗೆ ಮಾತನಾಡಿದ್ರಾ? ಅವರು ಸಾಮಾನ್ಯವಾಗಿ ಹೀಗೆಲ್ಲ ಹೇಳಲ್ಲ’ ಎಂದರು.
ಇದನ್ನೂ ಓದಿ: ಬಿಗ್ ಬಾಸ್ ಮುಗಿದರೂ ಗಿಲ್ಲಿನ ಕೆಣಕಿದ ಅಶ್ವಿನಿ ಗೌಡ; ಖಡಕ್ ತಿರುಗೇಟು ಕೊಟ್ಟ ಪಳಾರ್
ಗಿಲ್ಲಿ ಅವರ ಈ ಗುಣ ಅನೇಕರಿಗೆ ಇಷ್ಟ ಆಗಿದೆ. ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡಬೇಕು ಎಂಬುದು ಗಿಲ್ಲಿಯ ತತ್ವ. ಹೊರಗೆ ಬಂದ ಬಳಿಕವೂ ಅದನ್ನು ಅವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂಬುದು ವಿಶೇಷ. ಗಿಲ್ಲಿ ಅವರು ತಮಗೆ ಸಿಕ್ಕ ಜನಪ್ರಿಯತೆ ನೋಡಿ ಶಾಕ್ ಆಗಿದ್ದಾರೆ. ಅವರಿಗೆ ಖುಷಿ ಹಾಗೂ ಅಚ್ಚರಿ ಎರಡೂ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On – 7:00 am, Tue, 20 January 26
ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಭರದ ಸಿದ್ಧತೆ – Kannada News | CM Siddaramaiah Gears Up for Record 16th Budget Presentation, Holds Pre Budget Meetings
ಬೆಂಗಳೂರು, ಜನವರಿ 20: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ ಬಜೆಟ್ ಮಂಡನೆಗೆ ಭರದ ಸಿದ್ಧತೆ ನಡೆಸಿದ್ದಾರೆ. ಅವರು ಬಜೆಟ್ ಪೂರ್ವಭಾವಿ ಸಭೆಗಳನ್ನು ಇಂದಿನಿಂದ (ಜನವರಿ 20) ಆರಂಭಿಸಲಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ನಡೆಯಲಿರುವ ಈ ಸಭೆಗಳಲ್ಲಿ ಇಲಾಖಾವಾರು ಪರಿಶೀಲನೆ ನಡೆಯಲಿದ್ದು, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ದೀರ್ಘಾವಧಿಯ ಸಿಎಂ ಆಗಿ ಸೇವೆ ಸಲ್ಲಿಸಿದ ದಾಖಲೆ ಬರೆದಿದ್ದಾರೆ. ದೇವರಾಜ ಅರಸು ಅವರ ದಾಖಲೆಯನ್ನೂ ಮುರಿದಿದ್ದಾರೆ. ಇದರೊಂದಿಗೆ ಸತತ 16ನೇ ಬಾರಿಗೆ ಅವರು ಬಜೆಟ್ ಮಂಡಿಸಿ ದಾಖಲೆ ಬರೆಯಲು ಸಜ್ಜಾಗಿದ್ದಾರೆ.
ಒಂದೆಡೆ ಬಜೆಟ್ ಸಿದ್ಧತೆಯಲ್ಲಿರುವ ಸಿಎಂ, ಮತ್ತೊಂದೆಡೆ ಬದಾಮಿಯ ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ ಇದು ಅವರ ಮೊದಲ ದೇಗುಲ ಭೇಟಿಯಾಗಿದೆ. ಸಿಎಂಗೆ ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರವೆಂದೇ ಪರಿಗಣಿಸಲಾಗಿರುವ ಈ ದೇವಾಲಯಕ್ಕೆ ಭೇಟಿ ನೀಡಿ ಹಣೆಗೆ ಕುಂಕುಮ ಹಚ್ಚಿಕೊಂಡು, ದೇವರ ಬಳಿ ಪ್ರಾರ್ಥನೆ ಮಾಡಿದ್ದಾರೆ.
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 20ರ ದಿನಭವಿಷ್ಯ – Kannada News | Jan 20 Numerology Forecast: Birth Numbers 7, 8, 9 – What Awaits You Today?
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 20ರ ಮಂಗವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)
ಶುಭ ಕಾರ್ಯ- ಸಮಾರಂಭ ಆಯೋಜನೆಗೆ ಸಿದ್ಧತೆ ಮಾಡಿಕೊಳ್ಳಬೇಕಾಗುತ್ತದೆ. ಹಣ ಕಾಸಿನ ವಿಚಾರದಲ್ಲಿ ಇಲ್ಲಿಯ ತನಕ ಕಾಡುತ್ತಿದ್ದ ಒತ್ತಡಗಳು ಏನಾದರೂ ಇದ್ದಲ್ಲಿ ಅವು ನಿವಾರಣೆ ಮಾಡಿಕೊಳ್ಳುವ ಮಾರ್ಗ ಉಪಾಯಗಳು ಗೋಚರಿಸಲಿವೆ. ನಿಮ್ಮಂತೆಯೇ ಆಲೋಚನೆ ಮಾಡುವ ವ್ಯಕ್ತಿಗಳ ಭೇಟಿಯಿಂದ ಒಂದು ಹೊಸ ವಿಶ್ವಾಸ ಮೂಡಲಿದೆ. ವಿರಾಮದ ಸಲುವಾಗಿ ಪ್ರವಾಸ ಹೋಗಬೇಕು ಅಂದುಕೊಂಡವರಿಗೆ ಕೆಲಸ- ಜವಾಬ್ದಾರಿಗಳ ಕಾರಣಕ್ಕೆ ಸದ್ಯಕ್ಕೆ ಇದು ಸಾಧ್ಯವಿಲ್ಲ ಎಂದೆನಿಸಲಿದೆ.
ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)
ಜಿಮ್- ಯೋಗ- ಪ್ರಾಣಾಯಾಮ, ಸೈಕ್ಲಿಂಗ್ ಇಂಥ ಅಭ್ಯಾಸಗಳನ್ನು ಈಗಾಗಲೇ ಮಾಡಿಕೊಂಡವರಿಗೆ ಕೆಲ ಸಮಯ ಇದರಿಂದ ದೂರ ಇರಲೇಬೇಕಾದ ಅನಿವಾರ್ಯ ಎದುರಾಗಬಹುದು. ಮುಖ್ಯವಾಗಿ ಕೆಲ ಕಾಲ ಬೇರೆ ಪ್ರದೇಶಕ್ಕೆ ಉದ್ಯೋಗ ಅಥವಾ ವೃತ್ತಿ ನಿಮಿತ್ತವಾಗಿ ತೆರಳಬೇಕಾದ ಸೂಚನೆ ಅಥವಾ ಸುಳಿವು ದೊರೆಯಲಿದೆ. ಮೊದಲಿಗೆ ನೀವು ಅಷ್ಟೇನೂ ಉತ್ಸಾಹ ತೋರದಿದ್ದರೂ ನಂತರದಲ್ಲಿ ಒಪ್ಪಿಕೊಳ್ಳುವಂಥ ಕೆಲಸ- ಕಾರ್ಯಗಳು ಒತ್ತಡವಾಗಿ ಪರಿಣಮಿಸಲಿದೆ. ಹಾಲು- ತುಪ್ಪ ಇಂಥ ಡೇರಿ ಪದಾರ್ಥಗಳ ಸೇವಿಸುವಾಗ ಎಚ್ಚರಿಕೆಯಿರಲಿ.
ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)
ಇತರರ ವಸ್ತುಗಳನ್ನು ಅಪೇಕ್ಷಿಸುವುದೋ ಅಥವಾ ಅದನ್ನು ನಿಮಗೆ ನೀಡುವಂತೆ ಒತ್ತಾಯ ಮಾಡುವುದೋ ಯಾವ ಕಾರಣಕ್ಕೂ ಈ ದಿನ ಬೇಡ. ನಿಮಗೆ ಎಷ್ಟೇ ಆಪ್ತರು ಅಂತಾದರೂ ಸಲುಗೆ ಬೇಡ. ಇನ್ನು ನಿಮ್ಮ ಉಳಿತಾಯ- ಹೂಡಿಕೆ ಮೊತ್ತ ಎಷ್ಟಿದೆ ಎಂಬುದನ್ನು ಯಾರ ಜೊತೆಗೆ ಚರ್ಚೆ ಮಾಡುವುದಕ್ಕೆ ಹೋಗಬೇಡಿ. ಉದ್ಯೋಗ ಸ್ಥಳದಲ್ಲಿ ತಮಾಷೆಗೆ ಎಂದು ಆರಂಭಿಸಿದ ಮಾತುಕತೆ ಗಂಭೀರ ಸ್ವರೂಪ ಪಡೆದುಕೊಂಡು, ಇತರರಿಗೆ ಬೇಸರ ಉಂಟು ಮಾಡಬಹುದು. ಆದ್ದರಿಂದ ಮಿತಿಯನ್ನು ಅರಿತು ಮಾತುಗಳನ್ನು ಆಡಿ.
ಲೇಖನ- ಸ್ವಾತಿ ಎನ್.ಕೆ.
