Category Archives: Blog

Your blog category

ಮೈಸೂರು: ಕುಡಿತದ ಚಟಕ್ಕೆ ದಾಸನಾದ ಮಗ, ಕಾಟ ತಾಳಲಾರದೇ ಕೊಂದೇ ಬಿಟ್ಲು ಹೆತ್ತಮ್ಮ – Kannada News | Mother Kills Alcoholic Son: Chamundi Hill Tragedy Over Daily Abuse

ಮೈಸೂರು, ಏಪ್ರಿಲ್​ 25: ಮಗ ಅಂದರೆ ಹೆತ್ತ ತಾಯಿಗೆ ಪ್ರಾಣಕ್ಕಿಂತ ಮಿಗಿಲು. ಆದರೆ ಅದೇ ಮಗ ಕುಡಿತದ ಚಟಕ್ಕೆ ಬಿದ್ದು, ದಿನನಿತ್ಯ ಹೆತ್ತವಳಿಗೆ ನರಕಯಾತನೆ ನೀಡಿದರೆ ಏನಾಗಬಹುದು ಎಂಬುದಕ್ಕೆ ಮೈಸೂರಿನಲ್ಲಿ ನಡೆದ ಈ ಭೀಕರ ಘಟನೆಯೇ ಸಾಕ್ಷಿ. ಕುಡಿಯಲು ಹಣಕ್ಕಾಗಿ ಪೀಡಿಸುತ್ತಿದ್ದ ಮಗನನ್ನು ತಾಯಿಯೇ (Mother) ಕಲ್ಲಿನಿಂದ ಹೊಡೆದು ಕೊಲೆ (kill) ಮಾಡಿದ ಘಟನೆ ಸಾಂಸ್ಕೃತಿಕ ನಗರಿಯನ್ನು ಬೆಚ್ಚಿಬೀಳಿಸಿದೆ.

ಮೈಸೂರಿನ ಎನ್.ಆರ್. ಮೊಹಲ್ಲಾ ನಿವಾಸಿ ಮಂಜುಳಾ ಎಂಬುವವರ ಮಗ ರಮೇಶ (43) ಕೊಲೆಯಾದ ವ್ಯಕ್ತಿ. ಈತನನ್ನು ಕೊಲೆ ಮಾಡಿದ್ದು, ಹೆತ್ತ ತಾಯಿ ಮಂಜುಳಾ. ಬೇರೆಯವರ ಮನೆಯಲ್ಲಿ ಮಂಜುಳಾ ಕೆಲಸ ಮಾಡಿಕೊಂಡಿದ್ದರು. ಮಗ ರಮೇಶನಿಗೆ ಕುಡಿತದ ಚಟವಿತ್ತು. ಈತ ಕೆಲಸಕ್ಕೂ ಹೋಗದೆ ದಿನನಿತ್ಯ ಕುಡಿಯಲು ಹಣ ನೀಡುವಂತೆ ತಾಯಿಗೆ ಕಿರುಕುಳ ನೀಡುತ್ತಿದ್ದ.

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕೊಲೆ

ಪ್ರತಿದಿನ ಮಗ ನೀಡುತ್ತಿದ್ದ ಮಾನಸಿಕ ಮತ್ತು ದೈಹಿಕ ಹಿಂಸೆ ಮಂಜುಳಾ ಅವರಿಗೆ ಅಸಹನೀಯವಾಗಿತ್ತು. ಕೊನೆಗೆ ಈ ಹಿಂಸೆಯಿಂದ ಮುಕ್ತಿ ಪಡೆಯಲು ತಾಯಿ ಒಂದು ಭೀಕರ ಪ್ಲ್ಯಾನ್​ ಮಾಡಿದ್ದರು. ಚಾಮುಂಡಿ ಬೆಟ್ಟದ ತಪ್ಪಲಿಗೆ ಮಗನನ್ನು ಕರೆದುಕೊಂಡು ಹೋಗಿದ್ದ ಮಂಜುಳಾ, ಅಲ್ಲಿ ಮಗನ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಗಲಾಟೆ ವಿಕೋಪಕ್ಕೆ ಹೋದಾಗ, ಅಲ್ಲೇ ಇದ್ದ ಕಲ್ಲನ್ನು ಎತ್ತಿ ಮಗನ ತಲೆಗೆ ಹೊಡೆದಿದ್ದಾರೆ. ತೀವ್ರ ರಕ್ತಸ್ರಾವದಿಂದ ರಮೇಶ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪೊಲೀಸ್​ ವಿಚಾರಣೆಯಲ್ಲಿ ಸತ್ಯ ಬಾಯಿಬಿಟ್ಟ ತಾಯಿ

ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ನಜರ್‌ಬಾದ್ ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಮೊದಲು ಕೊಲೆಯ ಬಗ್ಗೆ ಚಿಕ್ಕ ಸುಳಿವು ಸಿಕ್ಕಿರಲಿಲ್ಲ. ನಂತರ ಪೊಲೀಸರು ಸಿಸಿ ಕ್ಯಾಮೆರಾ ಮೊರೆ‌ ಹೋಗಿದ್ದಾರೆ. ಈ ವೇಳೆ ತಾಯಿ, ಮಗನನ್ನು ಚಾಮುಂಡಿಬೆಟ್ಟಕ್ಕೆ ಕರೆದುಕೊಂಡು ಹೋದ ದೃಶ್ಯ ಸೆರೆಯಾಗಿತ್ತು. ಈ ನಿಟ್ಟಿನಲ್ಲಿ ತನಿಖೆ ನಡೆಸಿದ ಪೊಲೀಸರು ತಾಯಿಯ ವಿಚಾರಣೆ ಮಾಡಿದ್ದು, ಆಗ ತಾಯಿ ಸತ್ಯ ಬಾಯಿ ಬಿಟ್ಟಿದ್ದಾರೆ‌.

ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪರಲೋಕಕ್ಕೆ ಕಳುಹಿಸಿದ ಪತ್ನಿ!: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಕೊಲೆ?

ಸದ್ಯ ತಾಯಿ ಮಂಜುಳಾರನ್ನು ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದಾರೆ. ಕುಡಿತದ ಚಟ ಒಂದು ಸುಂದರ ಕುಟುಂಬವನ್ನು ಹೇಗೆ ಬೀದಿಗೆ ತರುತ್ತದೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ ಎನ್ನಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಧುರಂಧರ್’ ನಿರ್ದೇಶಕನ 20 ಕೋಟಿ ಮೌಲ್ಯದ ಮನೆಯಲ್ಲಿ ಏನೇನಿದೆ? – Kannada News | Aditya Dhar and Yami Gautham Luxurious yet simple looking house

ಧುರಂಧರ್’ (Dhurandhar) ಮತ್ತು ‘ಧುರಂಧರ್ 2’ ಸಿನಿಮಾದ ಬಳಿಕ ಆದಿತ್ಯ ಧರ್ ಭಾರತದ ಸ್ಟಾರ್ ಸಿನಿಮಾ ನಿರ್ದೇಶಕ ಎನಿಸಿಕೊಂಡಿದ್ದಾರೆ. ಈ ಎರಡೂ ಸಿನಿಮಾಗಳನ್ನು ನಿರ್ದೇಶನ ಮಾಡಿರುವುದು ಮಾತ್ರವೇ ಅಲ್ಲದೆ ನಿರ್ಮಾಣವನ್ನೂ ಮಾಡಿದ್ದಾರೆ ಆದಿತ್ಯ ಧರ್. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಈ ವರೆಗೆ ಮೂರು ಸಾವಿರ ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದು, ಆದಿತ್ಯ ಧರ್ ಬಹುಷಃ ಬಾಲಿವುಡ್​ನ ಶ್ರೀಮಂತ ನಿರ್ದೇಶಕರಲ್ಲಿ ಒಬ್ಬರಾಗಿಬಿಟ್ಟಿದ್ದಾರೆ. ಅಂದಹಾಗೆ ಆದಿತ್ಯ ಧರ್ ಮತ್ತು ಯಾಮಿ ಗೌತಮ್ ಮುಂಬೈನಲ್ಲಿ 20 ಕೋಟಿ ರೂಪಾಯಿ ಮೌಲ್ಯದ ಐಶಾರಾಮಿ ಮನೆಯಲ್ಲಿ ವಾಸವಿರುತ್ತಾರೆ. ಈ ಮನೆ ಆಧುನಿಕ ಲಕ್ಷುರಿಗಳ ಜೊತೆಗೆ ನೈಸರ್ಗಿಕ ಅಂಶಗಳನ್ನು ಸಹ ಒಳಗೊಂಡಿದೆ.

ಯಾಮಿ ಗೌತಮ್ ಹಾಗೂ ಆದಿತ್ಯ ಧರ್ 2021 ರಲ್ಲಿ ಸರಳವಾಗಿ ವಿವಾಹವಾದರು. ಅದಕ್ಕೆ ಮುನ್ನ ಆದಿತ್ಯ ಧರ್ ನಿರ್ದೇಶನದ ‘ಉರಿ’ ಸಿನಿಮಾನಲ್ಲಿ ಯಾಮಿ ನಟಿಸಿದ್ದರು. ಅಲ್ಲಿಂದಲೇ ಈ ಇಬ್ಬರ ನಡುವೆ ಪ್ರೀತಿ ಶುರುವಾಯ್ತು. ಯಾಮಿಯನ್ನು ಮದುವೆಯಾದ ಬಳಿಕ ಆದಿತ್ಯ ಅವರ ಅದೃಷ್ಟವೇ ಬದಲಾಯ್ತು. ಒಂದರ ಹಿಂದೊಂದು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ಅವರು ನೀಡಿದ್ದಾರೆ.

ಯಾಮಿ ಗೌತಮ್ ಮತ್ತು ಆದಿತ್ಯ ಧರ್ ಅವರು ಮುಂಬೈನ ಬಾಂದ್ರಾನಲ್ಲಿ ಹಲವು ಪ್ರತಿಷ್ಠಿತ ಸಿನಿಮಾ ಸೆಲೆಬ್ರಿಟಿಗಳು ವಾಸವಿರುವ ಅಪಾರ್ಟ್​​ಮೆಂಟ್​​ನಲ್ಲಿ ಫ್ಲ್ಯಾಟ್ ಅನ್ನು ಹೊಂದಿದ್ದು, ಅಲ್ಲಿಯೇ ವಾಸ ಮಾಡುತ್ತಾರೆ. ಅವರ ಮನೆಯ ಮೌಲ್ಯ ಸುಮಾರು 15 ರಿಂದ 20 ಕೋಟಿ ರೂಪಾಯಿಗಳಂತೆ. ಅವರ ಮನೆ ಸರಳವಾಗಿ, ಕಂಫರ್ಟ್ ಆಗಿ ಮತ್ತು ನೈಸರ್ಗಿಕ ಅಂಶಗಳನ್ನು ಒಳಗೊಂಡಿದೆ. ಸರಳವಾದ ಇಂಟೀರಿಯರ್ ಜೊತೆಗೆ ಹಲವು ಒಳಗಾಂಣದಲ್ಲಿ ಹಲವು ಗಿಡಗಳು, ಬಳ್ಳಿಗಳನ್ನು ಯಾಮಿ ಮತ್ತು ಆದಿತ್ಯ ಹೊಂದಿದ್ದಾರೆ.

ಮನೆಯ ಒಳಭಾಗದಲ್ಲಿ, ಬೆಳಕು-ನೆರಳಿನ ಕಾಂಬಿನೇಷನ್​​ಗಳು ಮತ್ತು ಮರದ ರೀತಿಯ ವಿನ್ಯಾಸಗಳು ಹೆಚ್ಚಿಗಿವೆ. ತಿಳಿ ಬಣ್ಣವನ್ನು ಒಳಾಂಗಣದಲ್ಲಿ ಹೆಚ್ಚು ಬಳಕೆ ಮಾಡಲಾಗಿದ್ದು, ಇದು ಶಾಂತ ಅನುಭವವನ್ನು ನೀಡುತ್ತದೆಯಂತೆ. ಬಹುತೇಕ ಒಳಾಂಗಣ ವಿನ್ಯಾಸವನ್ನು ನಟಿ ಯಾಮಿ ಗೌತಮ್ ಅವರೇ ಮಾಡಿದ್ದಾರೆ. ಆದಿತ್ಯ ಧರ್ ಅವರು ನಿಸರ್ಗ ಪ್ರೇಮಿಯಾಗಿದ್ದು, ಮನೆಯಲ್ಲಿ ಗಿಡಗಳು ಅವರದ್ದೇ ಐಡಿಯಾ ಅಂತೆ. ಆದಿತ್ಯ ಧರ್ ಮತ್ತು ಯಾಮಿ ಗೌತಮ್ ಸರಳತೆಗೆ ಹೆಚ್ಚು ಪ್ರಾಧಾನ್ಯತೆ ನೀಡುವ ಕಾರಣ, ಮನೆಯ ಒಳಾಂಗಣವನ್ನು ಸಹ ಸರಳವಾಗಿ ಮತ್ತು ಸುಂದರವಾಗಿರುವಂತೆ ವಿನ್ಯಾಸ ಮಾಡಿಸಿಕೊಂಡಿದ್ದಾರೆ.

ಆದಿತ್ಯ ಧರ್, ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳ ಯಶಸ್ಸಿನ ಬಳಿಕ ಅಶ್ವತ್ಥಾಮ ಕುರಿತಾದ ಕತೆಯನ್ನು ಸಿನಿಮಾ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ನಟಿ ಯಾಮಿ ಗೌತಮ್ ಅವರು ಪ್ರಸ್ತುತ ‘ನಯಿ ನವೇಲಿ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅವರು ‘ಧುರಂಧರ್ 2’ ಸಿನಿಮಾದ ಅತಿಥಿ ಪಾತ್ರವೊಂದರಲ್ಲಿ ನಟಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 8:40 pm, Sat, 25 April 26

Source link

ಅಮೆರಿಕ-ಇರಾನ್ ನಡುವೆ ಶಾಂತಿ ಮಾತುಕತೆಯ ಪಾಕ್ ಪ್ರಯತ್ನ ವಿಫಲ; ಯುಎಸ್​ ನಿಯೋಗದ ಭೇಟಿಗೆ ಒಪ್ಪದ ಟೆಹ್ರಾನ್ – Kannada News | Big setback for US Iran peace talks in islamabad Tehran Refuses to meet American delegation

ಇಸ್ಲಮಾಬಾದ್, ಏಪ್ರಿಲ್ 25: ಪಾಕಿಸ್ತಾನದಲ್ಲಿ ಇರಾನ್ ಮತ್ತು ಅಮೆರಿಕದ ನಡುವಿನ ಶಾಂತಿ ಮಾತುಕತೆಗಳ ಸುತ್ತಲಿನ ಪ್ರಮುಖ ಬೆಳವಣಿಗೆಯಲ್ಲಿ ಇರಾನ್ (Iran) ನಿಯೋಗವು ಅಮೆರಿಕದ ನಿಯೋಗವನ್ನು ಭೇಟಿ ಮಾಡಲು ಸಿದ್ಧವಾಗಿಲ್ಲ ಎಂದು ಇಸ್ಲಮಾಬಾದ್​ನ ಸುದ್ದಿ ಸಂಸ್ಥೆ ಹೇಳಿದೆ. ಪಾಕಿಸ್ತಾನದ (Pakistan) ಇಸ್ಲಮಾಬಾದ್‌ನಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಯನ್ನು ಪುನರುಜ್ಜೀವನಗೊಳಿಸುವ ಪ್ರಯತ್ನಗಳು ವಿಫಲವಾಗುವಂತೆ ಕಂಡುಬರುತ್ತಿದೆ. ಟೆಹ್ರಾನ್ ಇನ್ನೂ ಪಾಕಿಸ್ತಾನಕ್ಕೆ ಭೇಟಿ ನೀಡುವ ಅಮೆರಿಕದ ನಿಯೋಗವನ್ನು ಭೇಟಿ ಮಾಡಲು ಸಿದ್ಧವಾಗಿಲ್ಲ ಎಂದು ಹೇಳಿದೆ ಎನ್ನಲಾಗಿದೆ.

ಪಾಕಿಸ್ತಾನ ಮೂಲದ ಮಾಧ್ಯಮ ಸಂಸ್ಥೆ ARY ನ್ಯೂಸ್‌ನ ಅಧ್ಯಕ್ಷ ಕಮ್ರಾನ್ ಖಾನ್ ನೀಡಿರುವ ಮಾಹಿತಿ ಪ್ರಕಾರ, ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ನಿಗದಿತ ಸಭೆಯ ಸುತ್ತ ಅನಿಶ್ಚಿತತೆ ತೀವ್ರಗೊಂಡಿದೆ. ಎಕ್ಸ್​ನಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, ಎರಡನೇ ಸುತ್ತಿನ ಚರ್ಚೆಗಳ ನಿರೀಕ್ಷೆಗಳು ಮಂಕಾಗಿವೆ ಎಂದು ಮೂಲಗಳು ಬಹಿರಂಗಪಡಿಸಿವೆ. ಇಸ್ಲಮಾಬಾದ್‌ನಲ್ಲಿ ಇಂದು ಎರಡನೇ ಸುತ್ತಿನ ಯುಎಸ್-ಇರಾನ್ ಮಾತುಕತೆಗಳ ಪುನರಾರಂಭದ ನಿರೀಕ್ಷೆಗಳು ಮಸುಕಾಗುತ್ತಿವೆ. ಇರಾನ್ ಇನ್ನೂ ಅಮೆರಿಕದ ನಿಯೋಗವನ್ನು ಭೇಟಿ ಮಾಡಲು ಸಿದ್ಧವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಅಮೆರಿಕದ ಉತ್ತಮ ಸ್ನೇಹಿತ; ವಿವಾದದ ಬಳಿಕ ತೇಪೆ ಹಚ್ಚಿದ ಟ್ರಂಪ್

ಟೆಹ್ರಾನ್ ಇನ್ನೂ ವಾಷಿಂಗ್ಟನ್‌ನಿಂದ ತಡರಾತ್ರಿ ಆಗಮಿಸುವ ನಿರೀಕ್ಷೆಯಿದ್ದ ಯುಎಸ್ ನಿಯೋಗವನ್ನು ಭೇಟಿ ಮಾಡಲು ಸಿದ್ಧವಾಗಿಲ್ಲ. ಎರಡನೇ ಸುತ್ತಿನ ಮಾತುಕತೆಗಳನ್ನು ತೆರೆಯಲು ಪೂರ್ವಭಾವಿ ಷರತ್ತಾಗಿ ಅಮೆರಿಕನ್ನರು ಹಾರ್ಮುಜ್ ಜಲಸಂಧಿಯ ದಿಗ್ಬಂಧನವನ್ನು ಕೊನೆಗೊಳಿಸಬೇಕೆಂದು ಇರಾನ್ ಒತ್ತಾಯಿಸುತ್ತಲೇ ಇದೆ ಎಂದು ಪಾಕಿಸ್ತಾನ ಮೂಲದ ಸುದ್ದಿ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಇರಾನ್, ಅಮೆರಿಕ ನಡುವೆ ಬಿಲ್ಡಪ್ ಕೊಡಲು ಹೋಗಿ ಮುಖಭಂಗ ಅನುಭವಿಸಿದ ಪಾಕಿಸ್ತಾನ

ಪಾಕಿಸ್ತಾನದ ಪಿಎಂಒ ಎಕ್ಸ್‌ನಲ್ಲಿ ಇರಾನ್ ವಿದೇಶಾಂಗ ಸಚಿವರು ಮತ್ತು ಅವರ ನಿಯೋಗವು ನಿನ್ನೆ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರನ್ನು ಭೇಟಿಯಾಗುವುದನ್ನು ತೋರಿಸುವ ಒಂದು ಸಣ್ಣ ವೀಡಿಯೊವನ್ನು ಪೋಸ್ಟ್ ಮಾಡಿದೆ. ಈ ಸಭೆಯಲ್ಲಿ ಉಪ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಮುಹಮ್ಮದ್ ಇಶಾಕ್ ದಾರ್ ಮತ್ತು ಸೇನಾ ಮುಖ್ಯಸ್ಥ ಸೈಯದ್ ಅಸಿಮ್ ಮುನೀರ್ ಕೂಡ ಭಾಗವಹಿಸಿದ್ದರು. ಈ ಸಭೆಯ ಕುರಿತು ಹೆಚ್ಚಿನ ವಿವರಗಳನ್ನು ಪಾಕಿಸ್ತಾನ ಸರ್ಕಾರ ಹಂಚಿಕೊಂಡಿಲ್ಲ. ಆದರೆ, ಈ ಬಾರಿ ಯುಎಸ್-ಇರಾನ್ ನಡುವೆ ನೇರ ಮಾತುಕತೆ ಇರುವುದಿಲ್ಲ ಎಂದು ಇರಾನ್‌ನ ಉನ್ನತ ಅಧಿಕಾರಿಯೊಬ್ಬರು ದೃಢಪಡಿಸಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಟಿವಿ9 ಇಂಪ್ಯಾಕ್ಟ್: ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್ – Kannada News | Tv9 Impact: Officers Stops tungabhadra reservoir Water To factory at Koppal

ಕೊಪ್ಪಳ, (ಏಪ್ರಿಲ್ 25): ತುಂಗಭದ್ರಾ ಜಲಾಶಯದಿಂದ ಕದ್ದಮುಚ್ಚಿ ಹಲವು ಕಾರ್ಖಾನೆಗಳಿಗೆ ನೀರು ಹರಿಸಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಕುಡಿಯಲು ಕಾಲುವೆಗಳಿಗೆ ನೀರು ಬಿಡದ ಅಧಿಕಾರಿಗಳು, ಫ್ಯಾಕ್ಟರಿಗಳಿಗೆ ನೀರು ಹರಿಸುತ್ತಿದ್ದರು ಎಂಬ ದೂರುಗಳು ಕೇಳಿಬಂದಿದ್ದು, ಈ ಸಂಬಂಧ ಟಿವಿ9 ವರದಿ ಮಾಡಿತ್ತು. ಈ ವರದಿ ಬೆನ್ನಲ್ಲೇ ಇದೀಗ ಕದ್ದಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಸ್ಥಗಿತಗೊಳಿಸಲಾಗಿದೆ.

ಹೌದು…ಟಿವಿ9ನಲ್ಲಿ ವರದಿ ಬಳಿಕ ತುಂಗಭದ್ರಾ ಜಲಾಶಯದಿಂದ ಜಿಂದಾಲ್ ವಿಜಯನಗರ ಸ್ಟೀಲ್ ಲಿಮಿಟೆಡ್ ತೋರಣಗಲ್ಲು ಘಟಕ ಹಾಗೂ ಜೆಎಸ್​ಡಬ್ಲ್ಯು ಸೇರಿ ಕೆಲ ಕಾರ್ಖಾನೆಗಳಿಗೆ ಹೋಗುತ್ತಿದ್ದ ನೀರನ್ನು ಅಧಿಕಾರಿಗಳು ಬಂದ್ ಮಾಡಿದ್ದಾರೆ. ಕಾರ್ಖಾನೆಗಳು ಮೋಟರ್ ಗಳ ಮೂಲಕ ಅನಧಿಕೃತವಾಗಿ ನೀರು ತಗೆದುಕೊಳ್ಳುತ್ತಿದ್ದವು. ಈ ಸಂಬಂಧ ಕಳೆದ ಎರಡು ದಿನಗಳ ಹಿಂದೆ ಟಿವಿ9 ವಿಸ್ತ್ರತ ವರದಿ ಬಿತ್ತರಿಸಿತ್ತು. ಇದರ ಬೆನ್ನಲ್ಲೇ ನೀರಾವರಿ ಇಲಾಖೆ ಅಧಿಕಾರಿಗಳು, ಕಾರ್ಖಾನೆಗಳಿಗೆ ಹರಿಯುತ್ತಿದ್ದ ನೀರನ್ನು ಸ್ಥಗಿತಗೊಳಿಸಿದ್ದಾರೆ.

Source link

RR vs SRH: 6,6,6,6..ಮೊದಲ ಓವರ್​ನಲ್ಲೇ ಸಿಕ್ಸರ್​ಗಳ ಮಳೆ; ದಾಖಲೆ ಬರೆದ ವೈಭವ್ – Kannada News | IPL 2026: Vaibhav Suryavanshi Smashes Record Breaking 4 Sixes in 1st Over vs SRH

ಐಪಿಎಲ್ 2026 ರ 36 ನೇ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಪರಸ್ಪರ ಮುಖಾಮುಖಿಯಾಗಿದ್ದವು. ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ಪರ ವೈಭವ್ ಸೂರ್ಯವಂಶಿ ಮೊದಲ ಓವರ್​ನಲ್ಲೇ ಸಿಕ್ಸರ್​ಗಳ ಮಳೆ ಹರಿಸಿದರು. ಸನ್‌ರೈಸರ್ಸ್ ವೇಗಿ ಪ್ರಫುಲ್ ಹಿಂಗೆ ವಿರುದ್ಧ ಸತತ 4 ಸಿಕ್ಸರ್​ಗಳನ್ನು ಬಾರಿಸಿ ತನ್ನ ಹಳೆಯ ಸೇಡನ್ನು ತೀರಿಸಿಕೊಂಡರು.

ವಾಸ್ತವವಾಗಿ, ಈ ಆವೃತ್ತಿಯ 21 ನೇ ಪಂದ್ಯದಲ್ಲಿ ಇದೇ ಎರಡು ತಂಡಗಳು ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಇದೇ ಪ್ರಫುಲ್ ಹಿಂಗೆ ತಮ್ಮ ಚೊಚ್ಚಲ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ವೈಭವ್ ಸೂರ್ಯವಂಶಿಯನ್ನು ಗೋಲ್ಡನ್ ಡಕ್‌ಗೆ ಔಟ್ ಮಾಡಿದ್ದರು. ಆ ಪಂದ್ಯದಲ್ಲಿ, ಹಿಂಗೆ ಅದ್ಭುತವಾಗಿ ಬೌಲಿಂಗ್ ಮಾಡಿ 4 ವಿಕೆಟ್‌ಗಳನ್ನು ಕಬಳಿಸಿದ್ದರು. ಆದರೆ ಇಂದು 36 ನೇ ಪಂದ್ಯದಲ್ಲಿ, ಸೂರ್ಯವಂಶಿ ಆ ವಿಕೆಟ್‌ಗೆ ಸಂಪೂರ್ಣ ಸೇಡು ತೀರಿಸಿಕೊಂಡರು.

ಪ್ರಫುಲ್ ಹಿಂಗೆ ಬೌಲ್ ಮಾಡಿದ ಪಂದ್ಯದ ಮೊದಲ ಓವರ್​ನ ಮೊದಲ ಎಸೆತದಲ್ಲಿ ಯಶಸ್ವಿ ಜೈಸ್ವಾಲ್ ಸಿಂಗಲ್ ಪಡೆದರು. ಎರಡನೇ ಎಸೆತದಲ್ಲಿ ವೈಭವ್ ಸೂರ್ಯವಂಶಿ ಡಾಟ್ ಬಾಲ್ ಆಡಿದರು. ಆದರೆ ಆ ನಂತರ ಆಡಿದ ಸತತ ನಾಲ್ಕು ಎಸೆತಗಳಲ್ಲಿ ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದರು. ಹಿಂದಿನ ಪಂದ್ಯದಲ್ಲಿ ವೈಭವ್ ಅವರನ್ನು ಔಟ್ ಮಾಡುವ ಮೂಲಕ ಸುದ್ದಿ ಮಾಡಿದ್ದ ಪ್ರಫುಲ್ ಹಿಂಗೆ, ಈ ಬಾರಿ ಯುವ ಬ್ಯಾಟ್ಸ್‌ಮನ್ ವಿರುದ್ಧ ಸಾಕಷ್ಟು ದುಬಾರಿಯಾಗಿ ಪರಿಣಮಿಸಿದರು. ವೈಭವ್ ಸೂರ್ಯವಂಶಿ ಕೇವಲ ಐದು ಎಸೆತಗಳಲ್ಲಿ 24 ರನ್ ಚಚ್ಚಿದರು.

ಈ ಸ್ಫೋಟಕ ಆರಂಭದೊಂದಿಗೆ, ವೈಭವ್ ಸೂರ್ಯವಂಶಿ ಐಪಿಎಲ್‌ನಲ್ಲಿ ಪ್ರಮುಖ ದಾಖಲೆಯನ್ನು ಸಹ ಸ್ಥಾಪಿಸಿದರು. ಐಪಿಎಲ್ ಇತಿಹಾಸದಲ್ಲಿ ಒಬ್ಬ ಬ್ಯಾಟ್ಸ್‌ಮನ್ ಇನ್ನಿಂಗ್ಸ್‌ನ ಮೊದಲ ಓವರ್‌ನಲ್ಲಿ ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದ್ದು ಇದೇ ಮೊದಲು. ವೈಭವ್ ಸೂರ್ಯವಂಶಿಗಿಂತ ಮೊದಲು ಯಾವುದೇ ಬ್ಯಾಟ್ಸ್‌ಮನ್ ಈ ಸಾಧನೆ ಮಾಡಿರಲಿಲ್ಲ. ಇದಕ್ಕೂ ಮೊದಲು, 2009 ರಲ್ಲಿ, ನಮನ್ ಓಜಾ ಕೆಕೆಆರ್ ವಿರುದ್ಧದ ಮೊದಲ ಓವರ್‌ನಲ್ಲಿ ಮೂರು ಸಿಕ್ಸರ್‌ಗಳನ್ನು ಬಾರಿಸಿದ್ದು ಈವರೆಗಿನ ದಾಖಲೆಯಾಗಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

DC vs PBKS: ರಾಹುಲ್ ಹೋರಾಟ ವ್ಯರ್ಥ; ಕ್ಯಾಚ್ ಬಿಟ್ಟು ಮ್ಯಾಚ್ ಸೋತ ಡೆಲ್ಲಿ – Kannada News | Punjab Kings Create IPL History: Record Chase of 265 Runs Against Delhi Capitals

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ (DC vs PBKS) ನಡುವೆ ನಡೆದ ಐಪಿಎಲ್ 2026 (IPL 2026) ರ 35 ನೇ ಪಂದ್ಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಐಪಿಎಲ್‌ನಲ್ಲಿ ಇದುವರೆಗೆ ಯಾವ ತಂಡಕ್ಕೂ ಸಾಧ್ಯವಾಗದ ದಾಖಲೆಯೊಂದು ಪಂಜಾಬ್ ಕಿಂಗ್ಸ್ ತಂಡದ ಪಾಲಾಯಿತು. ಉಭಯ ತಂಡಗಳಿಂದ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಯೇ ಹರಿದ ಈ ಪಂದ್ಯವನ್ನು ಅಂತಿಮವಾಗಿ ಗೆದ್ದುಕೊಳ್ಳುವಲ್ಲಿ ಪಂಜಾಬ್ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ 265 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಇನ್ನು 7 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು.

ಡೆಲ್ಲಿ ಪಾಲಿಗೆ ವಿಲನ್ ಆದ ಕರುಣ್

ಈ ಮೂಲಕ ಪಂಜಾಬ್ ಐಪಿಎಲ್ ಇತಿಹಾಸದಲ್ಲಿ ಇಷ್ಟು ದೊಡ್ಡ ಮೊತ್ತವನ್ನು ಬೆನ್ನಟ್ಟಿದ ತಂಡವೆಂಬ ದಾಖಲೆ ಬರೆಯಿತು. ಈ ದಾಖಲೆಯ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಪವರ್‌ಪ್ಲೇನಲ್ಲಿಯೇ ಅರ್ಧದಷ್ಟು ಪಂದ್ಯವನ್ನು ಗೆದ್ದುಕೊಂಡಿತು. ಉಳಿದಂತೆ ಕರುಣ್ ನಾಯರ್ ಕೈಚೆಲ್ಲಿದ ಎರಡು ಸುಲಭ ಕ್ಯಾಚ್​ಗಳಿಂದ ಪಂಜಾಬ್ ಕಿಂಗ್ಸ್‌ ಗೆಲುವು ದಾಖಲಿಸಿತು. ವಾಸ್ತವವಾಗಿ ನಿರ್ಣಾಯಕ ಹಂತದಲ್ಲಿ ಕರುಣ್ ನಾಯರ್, ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಅವರ ಎರಡು ಸುಲಭ ಕ್ಯಾಚ್‌ಗಳನ್ನು ಕೈಚೆಲ್ಲಿದರು. ಈ ಜೀವದಾನಗಳ ಲಾಭ ಪಡೆದ ಅಯ್ಯರ್ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ರಾಹುಲ್ ದಾಖಲೆಯ ಶತಕ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಡೆಲ್ಲಿ ಕ್ಯಾಪಿಟಲ್ಸ್ ಕೇವಲ 28 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ಪಾಥುಮ್ ನಿಸ್ಸಂಕ 11 ರನ್‌ಗಳಿಗೆ ಔಟಾದರು. ಆ ನಂತರ, ಎರಡನೇ ವಿಕೆಟ್‌ಗೆ ಪಂಜಾಬ್ ಬರೋಬ್ಬರಿ 220 ರನ್‌ಗಳವರೆಗೆ ಕಾಯಬೇಕಾಯಿತು. ಏಕೆಂದರೆ ಕೆಎಲ್ ರಾಹುಲ್ ಮತ್ತು ನಿತೀಶ್ ರಾಣಾ ಪಂಜಾಬ್ ಕಿಂಗ್ಸ್ ಬೌಲರ್‌ಗಳ ವಿರುದ್ಧ ಅಬ್ಬರಿಸಿ ದಾಖಲೆಯ ಜೊತೆಯಾಟ ನಡೆಸಿದರು. ನಿತೀಶ್ ರಾಣಾ 44 ಎಸೆತಗಳಲ್ಲಿ 11 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ 91 ರನ್ ಗಳಿಸಿ ಔಟಾದರೆ, ಕೆಎಲ್ ರಾಹುಲ್ 67 ಎಸೆತಗಳಲ್ಲಿ 16 ಬೌಂಡರಿ ಮತ್ತು 9 ಸಿಕ್ಸರ್‌ಗಳೊಂದಿಗೆ ಅಜೇಯ 152 ರನ್ ಗಳಿಸಿದರು. ಇವರಿಬ್ಬರ ಆಟದಿಂದಾಗಿ ಡೆಲ್ಲಿ ದಾಖಲೆಯ ಮೊತ್ತ ಪೇರಿಸಿತು.

ಪಂಜಾಬ್​ಗೆ ದಾಖಲೆಯ ಜಯ

265 ರನ್‌ಗಳನ್ನು ಬೆನ್ನಟ್ಟಿದ ಪಂಜಾಬ್​ಗೆ ಪ್ರಿಯಾಂಶ್ ಆರ್ಯ ಮತ್ತು ಪ್ರಭ್‌ಸಿಮ್ರಾನ್ ಸಿಂಗ್ ಸ್ಫೋಟಕ ಆರಂಭ ಒದಗಿಸಿದರು. ಪವರ್‌ಪ್ಲೇನಲ್ಲಿಯೇ ಈ ಜೋಡಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪಂದ್ಯದಿಂದ ಹೊರಹಾಕಿದರು. ಮೊದಲ 6 ಓವರ್‌ಗಳಲ್ಲಿ ವಿಕೆಟ್ ಕಳೆದುಕೊಳ್ಳದೆ ಈ ಜೋಡಿ 116 ರನ್ ಕಲೆಹಾಕಿತು. ಐಪಿಎಲ್ ಟೂರ್ನಿಯಲ್ಲಿ ಪವರ್‌ಪ್ಲೇನಲ್ಲಿ ಇದು ಎರಡನೇ ಅತ್ಯಧಿಕ ಸ್ಕೋರ್ ಆಗಿತ್ತು. ತಂಡ 126 ರನ್‌ಗಳಾಗಿದ್ದಾಗ, ಪ್ರಿಯಾಂಶ್ ಆರ್ಯ ರೂಪದಲ್ಲಿ ಮೊದಲ ಹೊಡೆತ ಬಿದ್ದಿತು.

DC vs PBKS: ದಾಖಲೆಯ 152 ರನ್..! ಕನ್ನಡಿಗ ರಾಹುಲ್ ಅಬ್ಬರಕ್ಕೆ ಹಳೆಯ ದಾಖಲೆಗಳೆಲ್ಲ ಧ್ವಂಸ

ಪ್ರಿಯಾಂಶ್ ಆರ್ಯ 43 ರನ್‌ಗಳಿಗೆ ಔಟಾದರು. ನಂತರ ಪ್ರಭಾಂಶ್ ಸಿಂಗ್ 76 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಕೂಪರ್ ಕೊನೊಲಿ ಕೂಡ 17 ರನ್‌ಗಳಿಗೆ ಔಟಾದರೆ, ನೆಹಲ್ ವದೇರಾ ಇನ್ನಿಂಗ್ಸ್ ಕೂಡ 15 ಎಸೆತಗಳಲ್ಲಿ 25 ರನ್‌ಗಳಿಗೆ ಅಂತ್ಯವಾಯಿತು. ಈ ವಿಕೆಟ್‌ನಿಂದ ಪಂದ್ಯವು ದೆಹಲಿಯ ಪರವಾಗಿ ವಾಲಲು ಪ್ರಾರಂಭಿಸಿತು. ಆದರೆ ಕರುಣ್ ನಾಯರ್ ಶ್ರೇಯಸ್ ಅಯ್ಯರ್ ಅವರ ಎರಡು ಸುಲಭ ಕ್ಯಾಚ್‌ಗಳನ್ನು ಕೈಬಿಟ್ಟಿದ್ದು, ಪಂದ್ಯಕ್ಕೆ ತಿರುವು ನೀಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:21 pm, Sat, 25 April 26

Source link

ಈ ವಾರ ಒಟಿಟಿಗೆ ಬಂದ ಸಿನಿಮಾಗಳಿವು, ‘ಜೆರಾಕ್ಸ್’ ಮಿಸ್ ಮಾಡ್ಬೇಡಿ – Kannada News | OTT Release this week from April 20 to April 25

ನಾಗಭೂಷಣ್, ಓಂ ಪ್ರಕಾಶ್ ರಾವ್ ಇನ್ನೂ ಹಲವು ಪ್ರತಿಭಾವಂತ ಕಲಾವಿದರು ನಟಿಸಿರುವ ‘ಜೆರಾಕ್ಸ್’ ಹೆಸರಿನ ಕನ್ನಡ ವೆಬ್ ಸರಣಿ ಈ ವಾರ ಒಟಿಟಿಗೆ ಬಂದಿದೆ. ಮನುಷ್ಯರನ್ನು ಝೆರಾಕ್ಸ್ ಮಾಡುವ ಭಿನ್ನ ರೀತಿಯ ಕಾನ್ಸೆಪ್ಟ್ ಅನ್ನು ಈ ವೆಬ್ ಸರಣಿ ಒಳಗೊಂಡಿದೆ. ವೆಬ್ ಸರಣಿಯನ್ನು ಜೀ5ನಲ್ಲಿ ವೀಕ್ಷಿಸಬಹುದಾಗಿದೆ.

Source link

ಮೇ 5ರ ನಂತರ ಹೆಣ್ಣುಮಕ್ಕಳು ಭಯವಿಲ್ಲದೆ ಮಧ್ಯರಾತ್ರಿ 1 ಗಂಟೆಗೂ ಹೊರಗೆ ಓಡಾಡಬಹುದು; ಅಮಿತ್ ಶಾ ಭರವಸೆ – Kannada News | Girls can go out fearlessly in Mid night after May 5 Amit Shah slams Mamata Banerjee

ಕೊಲ್ಕತ್ತಾ, ಏಪ್ರಿಲ್ 25: ಪಶ್ಚಿಮ ಬಂಗಾಳದಲ್ಲಿ ನಡೆಯುವ 2ನೇ ಹಂತದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಜಮಾಲ್ಪುರದಲ್ಲಿ ಚುನಾವಣಾ ರ್ಯಾಲಿಯನ್ನು ನಡೆಸಿದರು. ಈ ವೇಳೆ ಮಾತನಾಡಿದ ಅವರು, “ಕಳೆದ 15 ವರ್ಷಗಳಲ್ಲಿ ಮಮತಾ ಬ್ಯಾನರ್ಜಿ ಅವರ ಆಳ್ವಿಕೆಯಲ್ಲಿ ಮಹಿಳೆಯರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಆರ್‌ಜಿ ಕರ್, ಸಂದೇಶಖಾಲಿ, ಕೊಲ್ಕತ್ತಾ ಕಾನೂನು ಕಾಲೇಜು ಮತ್ತು ದುರ್ಗಾಪುರ ಕಾಲೇಜಿನಂತಹ ಘಟನೆಗಳು ಮಹಿಳೆಯರ ವಿರುದ್ಧದ ದೌರ್ಜನ್ಯಗಳು ಎಲ್ಲೆಡೆ ನಡೆದಿವೆ ಎಂದು ಸಾಬೀತುಪಡಿಸುತ್ತಿವೆ. ಈಗ ‘ದೀದಿ’ ಮಹಿಳೆಯರು ಸಂಜೆ 7 ಗಂಟೆಯ ನಂತರ ತಮ್ಮ ಮನೆಗಳಿಂದ ಹೊರಗೆ ಹೆಜ್ಜೆ ಹಾಕಬಾರದು ಎಂದು ಹೇಳಿದ್ದಾರೆ. ಮೇ 5 ನೇ ತಾರೀಖಿನ ನಂತರ ಚಿಕ್ಕ ಹುಡುಗಿಯರಿಂದ ವಯಸ್ಸಾದ ಮಹಿಳೆಯರವರೆಗೆ ಎಲ್ಲರೂ ಮಧ್ಯರಾತ್ರಿ 1 ಗಂಟೆ ನಂತರವೂ ಭಯವಿಲ್ಲದೆ ಹೊರಗೆ ಓಡಾಡಬಹುದು. ಯಾವುದೇ ಗೂಂಡಾ ಅವಳನ್ನು ನೋಡಲು ಧೈರ್ಯ ಮಾಡುವುದಿಲ್ಲ” ಎಂದು ರ್ಯಾಲಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಅಮಿತ್ ಶಾ ಭರವಸೆ ನೀಡಿದ್ದಾರೆ.

“ಯಾವುದೇ ಬಿಜೆಪಿ ಮುಖ್ಯಮಂತ್ರಿಗಳು ಮಹಿಳೆಯರಿಗೆ ಸಂಜೆ 7 ಗಂಟೆಯ ನಂತರ ಹೊರಗೆ ಹೋಗಬೇಡಿ ಎಂದು ಹೇಳುವುದಿಲ್ಲ” ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. “ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಮಮತಾ ಬ್ಯಾನರ್ಜಿ ವಿಫಲರಾಗಿದ್ದಾರೆ. ಬಿಜೆಪಿ ಅಧಿಕಾರದಲ್ಲಿರುವ ದೇಶಾದ್ಯಂತ ಯಾವುದೇ ರಾಜ್ಯಗಳಲ್ಲಿಯೂ ಮುಖ್ಯಮಂತ್ರಿಗಳು ಸಂಜೆ 7 ಗಂಟೆಯ ನಂತರ ಮಹಿಳೆಯರು ತಮ್ಮ ಮನೆಗಳಿಂದ ಹೊರಗೆ ಹೋಗಬಾರದು ಎಂದು ಹೇಳಿಲ್ಲ. ಮಮತಾ ದೀದಿ, ನೀವು ನಾಚಿಕೆಪಡಬೇಕು. ನೀವು ಮಹಿಳಾ ಮುಖ್ಯಮಂತ್ರಿ. ಆದರೆ ನೀವು ಮಹಿಳೆಯರಿಗೆ ಸುರಕ್ಷತೆಯನ್ನು ಒದಗಿಸಲು ವಿಫಲರಾಗಿದ್ದೀರಿ. ಯಾವುದೇ ಗೂಂಡಾಗಳು ತಾಯಂದಿರು ಮತ್ತು ಸಹೋದರಿಯರನ್ನು ಕೆಟ್ಟ ಉದ್ದೇಶದಿಂದ ನೋಡಲು ಧೈರ್ಯ ಮಾಡಿದರೆ ಅವರನ್ನು ಜೈಲಿನಲ್ಲಿ ಹಾಕಲಾಗುವುದು ಎಂದು ಬಿಜೆಪಿ ಬಂಗಾಳದ ಜನರಿಗೆ ಭರವಸೆ ನೀಡುತ್ತದೆ” ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ ಪ್ರತಿಕ್ರಿಯೆ

152 ಕ್ಷೇತ್ರಗಳಲ್ಲಿ ಮತದಾನ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿ 110ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಂಗಾಳ ರಾಜ್ಯದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ, ಗೃಹ ಸಚಿವ ಅಮಿತ್ ಶಾ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ತ್ವರಿತವಾಗಿ ಜಾರಿಗೆ ತರುವುದಾಗಿ ಪ್ರತಿಜ್ಞೆ ಮಾಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿ: ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಕನಸು ನುಚ್ಚುನೂರು – Kannada News | Bengaluru BMTC bus accident: Engineering student death

ಬಿಎಂಟಿಸಿ ಬಸ್ ಅಪಘಾತImage Credit source: tv9 kannada

ಬೆಂಗಳೂರು, ಏಪ್ರಿಲ್​ 25: ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್‌ಗೆ (BMTC Bus) ಮತ್ತೊಂದು ಬಲಿಯಾಗಿದೆ (death). ನಗರದ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ಇಂದು ನಡೆದ ಭೀಕರ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಬಿಎಂಟಿಸಿ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ಶಿರೀಷಾ(21) ಮೃತ ಇಂಜಿನಿಯರಿಂಗ್‌ ವಿದ್ಯಾರ್ಥಿನಿ. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಶಿರೀಷಾ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ, ಉತ್ತರಹಳ್ಳಿ ಮುಖ್ಯರಸ್ತೆಯ ಶ್ರೀನಿವಾಸಪುರ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಒಂದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಅಂತರ ಕಡಿಮೆಯಾದ ಕಾರಣ, ಬೈಕ್‌ನ ಹ್ಯಾಂಡಲ್ ಬಸ್‌ಗೆ ತಗುಲಿದೆ. ಪರಿಣಾಮ ಶಿರೀಷಾ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ವೇಗವಾಗಿ ಬಂದ ಬಸ್ ಯುವತಿಯ ಮೇಲೆ ಹರಿದಿದ್ದು, ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಬಿಎಂಟಿಸಿ ಬಸ್ ಚಾಲಕ ವಶಕ್ಕೆ

ಅಪಘಾತದ ಬಳಿಕ ಸ್ಥಳಕ್ಕೆ ಧಾವಿಸಿದ ಕೆಂಗೇರಿ ಸಂಚಾರಿ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆರ್.ಆರ್. ಮೆಡಿಕಲ್ ಕಾಲೇಜು ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತಕ್ಕೆ ಕಾರಣವಾದ ಬಿಎಂಟಿಸಿ ಬಸ್ ಚಾಲಕ ಚಂದ್ರು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸಿದ್ದಾರೆ.

ಪ್ರತ್ಯಕ್ಷದರ್ಶಿ ಶಂಕರ್ ಪಾಟಿಲ್​ ಹೇಳಿದ್ದಿಷ್ಟು 

ಇನ್ನು ಘಟನೆ ಬಗ್ಗೆ ಪ್ರತ್ಯಕ್ಷದರ್ಶಿ ಶಂಕರ್ ಪಾಟಿಲ್​ ಎಂಬುವವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮಧ್ಯಾಹ್ನ 2:15ಕ್ಕೆ ಘಟನೆ ನಡೆದಿದೆ. ಆಕೆ ಆರ್​​ಎನ್​​ಎಸ್​ ಕಾಲೇಜು ವಿದ್ಯಾರ್ಥಿನಿ. ತಲೆ ಮೇಲೆ ಬಸ್​ನ‌ ಹಿಂದಿನ ಚಕ್ರ ಹತ್ತಿದ್ದರಿಂದ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದರು.

ಇದನ್ನೂ ಓದಿ: ನೆಲಮಂಗಲ ಬಳಿ ಭೀಕರ ಅಪಘಾತ: ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​

ಈ ರಸ್ತೆಯಲ್ಲಿ ಒಂದು ಕಡೆಯು ಹಂಪ್ಸ್ ಇಲ್ಲ. ಅತೀ ವೇಗವಾಗಿ ಬಸ್​ಗಳು ಸಂಚರಿಸುತ್ತವೆ. ಪೊಲೀಸರಿಗೆ ಹಲವು ಬಾರಿ ಹೇಳಿದರೂ ಹಂಪ್ಸ್ ಹಾಕಿಸಿಲ್ಲ. ಹೀಗಾಗಿ ತಿಂಗಳಿಗೆ ಮೂರ್ನಾಲ್ಕು ಅಪಘಾತ ಇಲ್ಲಿ ಆಗುತ್ತಲ್ಲೇ ಇರುತ್ತವೆ ಎಂದಿದ್ದಾರೆ.

ವರದಿ: ವಿಕಾಸ್, ಟಿವಿ9 ಕ್ರೈಂ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ರಾಜ್​ಕುಮಾರ್ ಅಭಿಮಾನಿಗಳ ಆಕ್ರೋಶಕ್ಕೆ ಮಣಿದ ಚೇತನ್ ಅಹಿಂಸ, ಕ್ಷಮೆ ಯಾಚನೆ – Kannada News | Chetan Ahimsa asks apology after Dr Rajkumar fans express anger

ಡಾ ರಾಜ್​ಕುಮಾರ್ (Rajkumar) ಅವರ ಸಮಾಧಿಗೆ 2.50 ಎಕರೆ ಸ್ಥಳ ನೀಡಿರುವ ಸರ್ಕಾರದ ನಿರ್ಧಾರವನ್ನು ಟೀಕೆ ಮಾಡಿ ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನಿನ್ನೆ ಹಾಕಿದ್ದ ಪೋಸ್ಟ್​​ಗೆ ರಾಜ್​ಕುಮಾರ್ ಅಭಿಮಾನಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇಂದು (ಏಪ್ರಿಲ್ 25) ಹಲವಾರು ಕಡೆ ರಾಜ್​ಕುಮಾರ್ ಅಭಿಮಾನಿಗಳು ನಟ ಚೇತನ್ ಅಹಿಂಸ ವಿರುದ್ಧ ದೂರುಗಳನ್ನು ದಾಖಲಿಸಿದ್ದರು. ಸಾರಾ ಗೋವಿಂದು ಸೇರಿದಂತೆ ಇನ್ನೂ ಕೆಲವು ಹಿರಿಯರು ಚೇತನ್ ಅಹಿಂಸ ವಿರುದ್ಧ ಕಟು ವಾಗ್ದಾಳಿ ಮಾಡಿದ್ದರ ಜೊತೆಗೆ ಚೇತನ್ ಅವರ ಗಡಿಪಾರಿಗೆ ಒತ್ತಾಯಿಸಿದ್ದರು. ಕೊನೆಗೆ ಅಣ್ಣಾವ್ರ ಅಭಿಮಾನಿಗಳ ಆಕ್ರೋಶಕ್ಕೆ ಮಣಿದು ನಟ ಚೇತನ್ ಅಹಿಂಸ ಕ್ಷಮಾಪಣೆ ಕೇಳಿದ್ದಾರೆ.

ಇಂದು ಸಂಜೆ ವೇಳೆಗೆ ಸಾರಾ ಗೋವಿಂದು, ಕರವೇ ಕಾರ್ಯಕರ್ತರು, ಇನ್ನೂ ಕೆಲವು ಕನ್ನಡ ಪರ ಸಂಘಟನೆ ಕಾರ್ಯಕರ್ತರು, ರಾಜ್​ಕುಮಾರ್ ಅಭಿಮಾನಿ ಸಂಘದ ಸದಸ್ಯರು ರಾಜ್​ಕುಮಾರ್ ಅಭಿಮಾನಿಗಳು ಚೇತನ್ ಅಹಿಂಸ ಮನೆಗೆ ಮುತ್ತಿಗೆ ಹಾಕಿದರು. ಚೇತನ್ ಅಹಿಂಸ ಮನೆ ಎದುರು ಘೋಷಣೆಗಳನ್ನು ಕೂಗಿದರು. ಕೊನೆಗೆ ಚೇತನ್ ಅಹಿಂಸ ಜೊತೆಗೆ ಹಲವು ಸಂಘಟನೆಗಳ ಮುಖಂಡರು ಮಾತನಾಡಿ, ತಮ್ಮ ಆಕ್ರೋಶ, ಅಸಾಮಾಧಾನವನ್ನು ವ್ಯಕ್ತಪಡಿಸಿದರು. ಅಭಿಮಾನಿಗಳ ಆಕ್ರೋಶಕ್ಕೆ ಮಣಿದ ಚೇತನ್ ಅಹಿಂಸ ಬೇಷರತ್ ಕ್ಷಮೆ ಕೇಳಿದ್ದಾರೆ.

‘ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ವಿಷಾಧ ವ್ಯಕ್ತಪಡಿಸುತ್ತೇನೆ, ಕ್ಷಮೆ ಯಾಚನೆಯನ್ನೂ ಮಾಡುತ್ತೇನೆ. ಯಾರ ಮನಸ್ಸನ್ನೂ ನೋಯಿಸುವುದು ನನ್ನ ಉದ್ದೇಶ ಅಲ್ಲ. ನಾನೂ ಸಹ ರಾಜ್​ಕುಮಾರ್ ಅವರ ಅಭಿಮಾನಿ. ಸಮಾಜದ ಜಾಗೃತಿ ಆಗಬೇಕು, ಒಂದು ಉತ್ತಮ ಪ್ರಜಾಪ್ರಭುತ್ವ ಕಟ್ಟಬೇಕು. ರಾಜ್​​ಕುಮಾರ್ ಅವರ ಕನಸಿನ ಚಿತ್ರರಂಗವನ್ನು ಕಟ್ಟಬೇಕು ಎಂಬುದು ನನ್ನ ಉದ್ದೇಶ ಕೂಡ’ ಎಂದಿದ್ದಾರೆ.

ನಿನ್ನೆ (ಏಪ್ರಿಲ್ 24) ಪೋಸ್ಟ್ ಹಂಚಿಕೊಂಡಿದ್ದ ನಟ ಚೇತನ್ ಅಹಿಂಸ, ‘ನಾವು ರಾಜಕುಮಾರ್ ಅವರನ್ನು ಒಬ್ಬ ಮಹಾನ್ ಕಲಾವಿದರಾಗಿ ಗೌರವಿಸುತ್ತೇವೆ. ಆದರೆ, ಬೆಂಗಳೂರು ನಗರ ಮಧ್ಯದಲ್ಲಿ 2006ರಲ್ಲಿ ಒಬ್ಬ ನಟನ “ಸಮಾಧಿ ಕಾಂಪ್ಲೆಕ್ಸ್”ಕ್ಕಾಗಿ 2.5 ಎಕರೆ ಭೂಮಿಯನ್ನು ನೀಡುವುದು ತಿಳುವಳಿಕೆಯ ನಿರ್ಧಾರವಾಗಿತ್ತೇ ಎಂಬುದನ್ನು ಪ್ರಶ್ನಿಸಬೇಕಾಗಿದೆ. 21ನೇ ಶತಮಾನದ ಭಾರತದಲ್ಲಿ ಪ್ರಮುಖ ಹೋರಾಟವೇ ಭೂಮಿ. ಸರ್ಕಾರವು ಅದನ್ನು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಾಗೂ ಸಾರ್ವಜನಿಕ ಉಪಯೋಗಕ್ಕೆ ತಕ್ಕಂತೆ ಹಂಚಬೇಕು; ಮತಗಳ ಲಾಭದ ಅವಕಾಶವಾದಿ ಉದ್ದೇಶದಿಂದ ಅಲ್ಲ’ ಎಂದಿದ್ದರು. ಅವರ ಈ ಪೋಸ್ಟ್​​ಗೆ ಭಾರಿ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ:ರಾಜ್​ಕುಮಾರ್ ಸಮಾಧಿ ಜಾಗ: ಚೇತನ್ ಪ್ರಶ್ನೆಗೆ ಅಭಿಮಾನಿಗಳ ಆಕ್ರೋಶ

ಕನ್ನಡಪರ ಸಂಘಟನೆಗಳವರು, ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿ, ‘ಕರ್ನಾಟಕ ಸಾಂಸ್ಕೃತಿಕ ರಾಯಭಾರಿಗೆ, ಕಲಾ ಚೇತನ ರಾಜ್​ಕುಮಾರ್ ಅವರಿಗೆ ಸರ್ಕಾರ ಗೌರವ ನೀಡುವ ಉದ್ದೇಶದಿಂದ ಸ್ಮಾರಕಕ್ಕಾಗಿ ಜಾಗ ನೀಡಿದೆ. ಅದನ್ನು ರಾಜ್​ಕುಮಾರ್ ಆಗಲಿ, ಅವರ ಕುಟುಂಬದವರಾಗಲಿ ಕೇಳಿ ಪಡೆದಿದ್ದಲ್ಲ. ಅಲ್ಲದೆ, ಈ ಘಟನೆಗಳು ನಡೆದು 20 ವರ್ಷಗಳಾಗಿವೆ. ಆದರೆ ಈಗ ಕೇವಲ ಪ್ರಚಾರಕ್ಕಾಗಿ ಚೇತನ್, ರಾಜ್​ಕುಮಾರ್ ಅವರ ಸ್ಮಾರಕದ ವಿಷಯ ಎತ್ತಿದ್ದಾರೆ’ ಎಂದು ಆರೋಪಿಸಿದ್ದರು.

ಚೇತನ್ ಅವರ ಗಡಿಪಾರು ಮಾಡುವ ಬಗ್ಗೆ, ಚೇತನ್ ವಿರುದ್ಧ ಶಾಂತಿ ಕದಡುವ ಯತ್ನ ಆರೋಪದಡಿಯಲ್ಲಿ ಪ್ರಕರಣ ದಾಖಲಿಸುವ ಬಗ್ಗೆ ಒತ್ತಾಯಗಳು ಕೇಳಿ ಬಂದಿದ್ದವು. ಸಾರಾ ಗೋವಿಂದು ಹಾಗು ಕೆಲವರು ಚೇತನ್ ಈ ಬಾರಿ ಅಭಿಮಾನಿಗಳಿಂದ ಒದೆ ತಿನ್ನಲಿದ್ದಾನೆ ಎಂದು ಕಟುವಾಗಿ ಬೆದರಿಕೆ ಸಹ ಹಾಕಿದ್ದರು. ಆದರೆ ಕೊನೆಗೆ ಚೇತನ್ ಕ್ಷಮೆ ಕೇಳುವ ಮೂಲಕ ಪ್ರಕರಣವನ್ನು ಅಂತ್ಯಗೊಳಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link